Tag: Bengaluru Rural Police

  • ಗೂಂಡಾಗಳನ್ನ ಸಾಕ್ಬೇಡಿ, ಮನೆಯಲ್ಲಿ ನಾಯಿ ಸಾಕಿ, ಒಳ್ಳೆಯವರ ಸಹವಾಸ ಮಾಡಿ – ದರ್ಶನ್‌ಗೆ ಪ್ರಥಮ್‌ ಸ್ಟ್ರೈಟ್‌ ಹಿಟ್‌

    ಗೂಂಡಾಗಳನ್ನ ಸಾಕ್ಬೇಡಿ, ಮನೆಯಲ್ಲಿ ನಾಯಿ ಸಾಕಿ, ಒಳ್ಳೆಯವರ ಸಹವಾಸ ಮಾಡಿ – ದರ್ಶನ್‌ಗೆ ಪ್ರಥಮ್‌ ಸ್ಟ್ರೈಟ್‌ ಹಿಟ್‌

    – ನಾನು ಕಂಪ್ಲೆಂಟ್‌ ಕೊಟ್ರೆ ಬೆಂಕಿ ಹೊತ್ತಿಕೊಳ್ಳುತ್ತೆ
    – 2‌,000 ಜನ ಕಾಲ್‌ ಮಾಡಿ ದೂರು ಕೊಡು ಅಂದ್ರು; ಪ್ರಥಮ್‌

    ಬೆಂಗಳೂರು: ತನಗೆ ಜೀವ ಬೆದರಿಕೆ ಒಡ್ಡಿರುವುದಾಗಿ ಆರೋಪಿಸಿದ್ದ ನಟ ಪ್ರಥಮ್‌ (Actor Pratham), ದರ್ಶನ್‌ ಅಭಿಮಾನಿಗಳ ವಿರುದ್ಧ ರೊಚ್ಚಿಗೆದ್ದಿದ್ದಾರೆ. ʻಪಬ್ಲಿಕ್‌ ಟಿವಿʼ ಜೊತೆಗೆ ಮಾತನಾಡಿರುವ ಪ್ರಥಮ್‌ ಕೊಲೆ ಆರೋಪಿ ನಟ ದರ್ಶನ್‌ ಮತ್ತವರ ಅಭಿಮಾನಿಗಳಿಗೆ (Darshan Fans) ನೇರ ಎಚ್ಚರಿಕೆ ಕೊಟ್ಟಿದ್ದಾರೆ.

    ನಮಗೂ ಅಭಿಮಾನಿಗಳಿದ್ದಾರೆ ಸರ್‌
    ದರ್ಶನ್ ಸರ್, ಒಳ್ಳೆಯವ್ರ ಸಹವಾಸ ಇಟ್ಕೊಳ್ಳಿ. ನಿಮ್ಗೆ ಪ್ರೀತಿಯಿಂದ ಹೇಳ್ತಿದಿನಿ ದರ್ಶನ್ (Darshan) ಸರ್. ನಿಮ್ ಹುಡುಗರಿಗೆ ಹೇಳಿ. ನಿಮ್ಗೆ ಫ್ಯಾನ್ಸ್ ಇರುವಂತೆ ನಮಗೂ ಇದ್ದಾರೆ ಸರ್‌, ನಾವು ಪ್ರೀತಿ ಗಳಿಸಿದ್ದೀವಿ ಸರ್. ದರ್ಶನ್ ಜೊತೆ ಇದ್ದವ್ರು ಯೋಗ್ಯರು ಇರಬೇಕು. ನಮ್ಗೆ ಸಮಸ್ಯೆ ಆದ್ರೆ ಸುಮ್ಮನೆ ಇರಲ್ಲ ಅಂತ ವಾರ್ನಿಂಗ್‌ ಕೊಟ್ಟಿದ್ದಾರೆ ಪ್ರಥಮ್‌. ಇದನ್ನೂ ಓದಿ: ಏಯ್‌.. ಗೂಂಡಾಗಿರಿ ಬಿಟ್ಟುಬಿಡಿ, ಬಾಸಿಸಂ ನಡೆಯಲ್ಲ – ದರ್ಶನ್‌ ಫ್ಯಾನ್ಸ್‌ಗೆ ಒಳ್ಳೆ ಹುಡ್ಗ ಪ್ರಥಮ್‌ ವಾರ್ನಿಂಗ್‌

    ದೇವಸ್ಥಾನದಲ್ಲಿ ಕೆಲವರು ಮಾರಾಕಾಸ್ತ್ರಗಳನ್ನ ಇಟ್ಕೊಂಡಿದ್ರು. ಅಲ್ಲಿಯೇ ರಕ್ಷಕ್ ಕೂಡ ಇದ್ರು. ಎಸ್ಪಿಗೆ ಎಲ್ಲಾ ಮಾಹಿತಿ ನೀಡಿದ್ದೇನೆ. ಅವ್ರು ತನಿಖೆ ಮಾಡ್ತಾರೆ. ಆದ್ರೆ ಪ್ರೀತಿಯಿಂದ ಹೇಳ್ತಿದಿನಿ ಸರ್. ನಮ್ಮ ತಂಟೆಗೆ ಬರೋದು ಬೇಡ. ನಿಮ್ಮ ಹುಡ್ಗುರುಗಳಿಗೆ ಹೇಳಿ ಅಂತ ದರ್ಶನ್‌ ಅಭಿಮಾನಿಗಳಿಗೆ ಹೇಳಿ ಅಂತ ವಿನಯದಿಂದಲೇ ಡಿಚ್ಚಿ ಕೊಟ್ಟಿದ್ದಾರೆ. ಇದನ್ನೂ ಓದಿ: ನಟ ಪ್ರಥಮ್‌ಗೆ ಡ್ಯಾಗರ್ ತೋರಿಸಿ ಜೀವಬೆದರಿಕೆ – ಬಾಸ್‌ ಬಗ್ಗೆ ಮಾತಾಡ್ತೀಯಾ ಅಂತ ಅವಾಜ್‌

    2,000 ಜನ ಫೋನ್‌ ಮಾಡಿ ಕಂಪ್ಲೆಂಟ್‌ ಕೊಡಿ ಅಂದ್ರು
    ಡ್ರ್ಯಾಗರ್‌ ಹಿಡಿದು ಬಂದವರು ನಮ್ಮ ಬಾಸ್‌ ಬಗ್ಗೆ ಮಾತನಾಡಬೇಡಿ ಅಂತ ಹೇಳಿದ್ದು ನಿಜ. ಎಸ್ಪಿಗೆ ಹೇಳಿದ್ದೀನಿ, ತನಿಖೆ ಮಾಡ್ತಿದ್ದಾರೆ. ನಾನು ಯಾರ ಹೆಸರನ್ನು ಹೇಳಲ್ಲ. ಜನ ಪ್ರೀತಿ ಕೊಟ್ಟಾಗ ಪ್ರೀತಿಯಿಂದ ನಡೆದುಕೊಳ್ಳಬೇಕು. ನಾನು ಯಾರ ಹೆಸರನ್ನೂ ಯಾಕೆ ಹೇಳ್ತಿಲ್ಲ ಅಂದ್ರೆ, ಅವರ ಮೇಲೆ ಗೌರವ ಇದೆ. 2,000 ಜನ ಫೋನ್‌ ಮಾಡಿ ಕಂಪ್ಲೆಂಟ್‌ ಕೊಡಿ ಅಂತ ಹೇಳಿದ್ರು. ದೂರು ಕೊಟ್ಟರೆ ಬೆಂಕಿ ಹೊತ್ತಿಕೊಳ್ಳುತ್ತೆ ಅಂತ ಹೇಳಿದ್ದಾರೆ. ಇದನ್ನೂ ಓದಿ: Exclusive | ರೇಣುಕಾಸ್ವಾಮಿ ಕೇಸ್‌ – ʻಡಿ ಬಾಸ್‌ʼ ಫ್ಯಾನ್ಸ್‌ ವಿರುದ್ಧ ನಟಿ ರಮ್ಯಾ ಕೆಂಡ

    ಎಚ್ಚೆತ್ತುಕೊಳ್ಳಿ
    ಮುಂದುವರಿದು… ಇಂತಹ ಗೂಂಡಾಗಳನ್ನ ಯಾಕೆ ಸಾಕುತ್ತೀರಾ? ಮನೆಯಲ್ಲಿ ನಾಯಿ ಸಾಕಿ, ಬೆಕ್ಕು, ಗಿಳಿ, ಪಾರಿವಾಳ ಸಾಕಿ, ಇದೆಲ್ಲ ಬೇಡ. ಕಲಾವಿದರು ಕಲಾವಿದರಾಗಿಯೇ ಇರಿ. ನಿಮ್ಮ ಹೆಸರು ದುರ್ಬಳಕೆ ಆಗ್ತಿದೆ ಅಂದಾಗ ಎಚ್ಚೆತ್ತುಕೊಳ್ಳಿ ಅಂತ ದರ್ಶನ್‌ಗೆ ನೇರ ಸಂದೇಶ ರವಾನಿಸಿದ್ದಾರೆ. ಇದನ್ನೂ ಓದಿ: ಥೈಲ್ಯಾಂಡ್‌ನಲ್ಲಿ ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ನಟ ದರ್ಶನ್ ವಾಪಸ್

    ಏನಿದು ಪ್ರಕರಣ? ದೊಡ್ಡಬಳ್ಳಾಪುರ ದೇವಸ್ಥಾನದ ಬಳಿ ಆಗಿದ್ದೇನು?
    ನಟ ಪ್ರಥಮ್‌ಗೆ ಕಿಡಿಗೇಡಿಗಳಿಂದ ಜೀವ ಬೆದರಿಕೆ ಬಂದಿದೆ ಅನ್ನೋ ಆಡೊಯೋವೊಂದು ಸ್ಫೋಟಗೊಂಡಿತ್ತು. ದೊಡ್ಡಬಳ್ಳಾಪುರ ದೇವಸ್ಥಾನಕ್ಕೆ ಹೋಗಿದ್ದ ವೇಳೆ ದುಷ್ಕರ್ಮಿಗಳ ಗುಂಪೊಂದು ಪ್ರಥಮ್‌ಗೆ ಜೀವ ಬೆದರಿಕೆ ಒಡ್ಡಿರುವುದಾಗಿ ತಿಳಿದುಬಂದಿತ್ತು. ಈ ಕುರಿತು ವ್ಯಕ್ತಿಯೊಬ್ಬರೊಂದಿಗೆ ಪ್ರಥಮ್ ಮಾತನಾಡಿರುವ ಆಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ದೊಡ್ಡಬಳ್ಳಾಪುರ ದೇವಸ್ಥಾನಕ್ಕೆ ಹೋಗಿದ್ದ ವೇಳೆ ದುಷ್ಕರ್ಮಿಗಳು ಡ್ಯಾಗ್ರರ್ ತೋರಿಸಿ ನಟನಿಗೆ ಜೀವಬೆದರಿಕೆ ಹಾಕಿದ್ದರು. ಪೂಜೆ ಮುಗಿಸಿ ಹೊರಟ ವೇಳೆ ಕಾರಿಗೆ ಅಡ್ಡಬಂದ ಕೆಲವರು ಪ್ರಥಮ್‌ನನ್ನ ಬಲವಂತವಾಗಿ ಕರೆದೊಯ್ದು, ನಮ್ ಬಾಸ್ ಬಗ್ಗೆ ಮಾತಾಡ್ತಿಯ ಅಂತ ಹಲ್ಲೆಗೆ ಯತ್ನಿಸಿ ಅವಾಚ್ಯವಾಗಿ ನಿಂದಿಸಿ ಬೆದರಿಸಿದ್ದಾರೆ. ಕೊನೆಗೆ ಅಲ್ಲಿಂದ ತಪ್ಪಿಸಿಕೊಂಡು ಬಂದ ಪ್ರಥಮ್ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿಕೆ ಬಾಬಾ ಅವರನ್ನ ಭೇಟಿಯಾಗಿ ಘಟನೆ ವಿವರಿಸಿದ್ದರು. ಬಳಿಕ ಎಸ್ಪಿ ಸಂಬಂಧಪಟ್ಟ ಠಾಣೆಗೆ ದೂರು ನೀಡುವಂತೆ ಸಲಹೆ ನೀಡಿದ್ದರು.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದ ಎಸ್ಪಿ ಸಿಕೆ ಬಾಬಾ, ನಟ ಪ್ರಥಮ್ ಮೇಲೆ ಹಲ್ಲೆಗೆ ಯತ್ನಿಸಿ, ಜೀವ ಬೆದರಿಕೆ ಆರೋಪ ಕೇಳಿಬಂದಿದೆ. ದೇವಸ್ಥಾನಕ್ಕೆ ಹೋಗಿದ್ದಾಗ ಘಟನೆ ನಡೆದಿದೆ. ಅವರನ್ನ ಈಗಾಗಲೇ ಕರೆದು ಮಾತನಾಡಿದ್ದೀನಿ. ಅವರಿಗೆ ದೂರು ಕೊಡೋಕೆ ಹೇಳಿದ್ದೀನಿ. ಇಲ್ಲಿವರೆಗೂ ಯಾವುದೇ ದೂರು ನೀಡಿಲ್ಲ. ದೂರು ಕೊಟ್ಟ ನಂತರ ತನಿಖೆ ಮಾಡಿ ಕ್ರಮ ಕೈಗೊಳ್ತಿವಿ ಎಂದು ಹೇಳಿದ್ದರು.

  • ಏಯ್‌.. ಗೂಂಡಾಗಿರಿ ಬಿಟ್ಟುಬಿಡಿ, ಬಾಸಿಸಂ ನಡೆಯಲ್ಲ – ದರ್ಶನ್‌ ಫ್ಯಾನ್ಸ್‌ಗೆ ಒಳ್ಳೆ ಹುಡ್ಗ ಪ್ರಥಮ್‌ ವಾರ್ನಿಂಗ್‌

    ಏಯ್‌.. ಗೂಂಡಾಗಿರಿ ಬಿಟ್ಟುಬಿಡಿ, ಬಾಸಿಸಂ ನಡೆಯಲ್ಲ – ದರ್ಶನ್‌ ಫ್ಯಾನ್ಸ್‌ಗೆ ಒಳ್ಳೆ ಹುಡ್ಗ ಪ್ರಥಮ್‌ ವಾರ್ನಿಂಗ್‌

    – ದರ್ಶನ್‌ ಸರ್‌ ಒಳ್ಳೆಯವರ ಸಹವಾಸ ಮಾಡಿ; ನಯವಾಗಿಯೇ ಟಾಂಗ್‌ ಕೊಟ್ಟ ನಟ

    ಬೆಂಗಳೂರು: ಗೂಂಡಾಗಿರಿ ಬಿಟ್ಟುಬಿಡಿ.. ಬಾಸಿಸಂ ನಡೆಯಲ್ಲ… ಈ ಪ್ರಥಮ್‌ನ ಯಾರಿಂದನೂ ಹೆದರಿಸೋಕೆ ಆಗಲ್ಲ ಅಂತ ನಟ ಒಳ್ಳೆ ಹುಡುಗ ಪ್ರಥಮ್‌ (Pratham) ದರ್ಶನ್‌ ಅಭಿಮಾನಿಗಳಿಗೆ (Darshan Fans) ವಾರ್ನಿಂಗ್‌ ಕೊಟ್ಟಿದ್ದಾರೆ.

    ಯೆಸ್‌. ಪ್ರಥಮ್‌ಗೆ ಕಿಡಿಗೇಡಿಗಳಿಂದ ಜೀವ ಬೆದರಿಕೆ ಬಂದಿತ್ತು. ದೊಡ್ಡಬಳ್ಳಾಪುರ (Doddaballapura) ದೇವಸ್ಥಾನಕ್ಕೆ ಹೋಗಿದ್ದ ವೇಳೆ ದುಷ್ಕರ್ಮಿಗಳ ಗುಂಪೊಂದು ಡ್ರ್ಯಾಗರ್‌ ತೋರಿಸಿ ಪ್ರಥಮ್‌ಗೆ ಜೀವ ಬೆದರಿಕೆ ಒಡ್ಡಿತ್ತು. ದರ್ಶನ್‌ ಅಭಿಮಾನಿಗಳು ಅಂತ ಹೇಳಿಕೊಂಡು ಕೆಲವರು ಬೆದರಿಕೆ ಹಾಕಿದ್ದರು ಎಂಬುದಾಗಿ ನಟ ಆರೋಪ ಮಾಡಿದ್ದರು. ಈ ಕುರಿತು ʻಪಬ್ಲಿಕ್‌ ಟಿವಿʼ ಜೊತೆಗೆ ಮಾತನಾಡಿರುವ ಪ್ರಥಮ್‌, ದರ್ಶನ್‌ ಅಭಿಮಾನಿಗಳಿಗೆ ನಯವಾಗಿಯೇ ಎಚ್ಚರಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ನಟ ಪ್ರಥಮ್‌ಗೆ ಡ್ಯಾಗರ್ ತೋರಿಸಿ ಜೀವಬೆದರಿಕೆ – ಬಾಸ್‌ ಬಗ್ಗೆ ಮಾತಾಡ್ತೀಯಾ ಅಂತ ಅವಾಜ್‌

    ಗೂಂಡಾಗಿರಿ ಬಿಟ್ಟುಬಿಡಿ.. ಬಾಸಿಸಂ ನಡೆಯಲ್ಲ.. ಪ್ರಥಮ್‌ನ ಯಾರಿಂದನೂ ಹೆದರಿಸೋಕೆ ಆಗಲ್ಲ. ಎಲ್ಲಾ ಹೆಸ್ರುಗಳು ಹೇಳಿದ್ರೆ ಇಷ್ಟೊತ್ತಿಗೆ ಏನೇನೋ ಆಗ್ತಿತ್ತು. ಬೆಂಕಿ ಹೊತ್ತಿಕೊಳ್ತಿತ್ತು. ದರ್ಶನ್ ಸರ್ ನಿಮ್ ಹುಡುಗ್ರುಗೆ ಹೇಳಿ. ಇಲ್ಲಿಯವರೆಗೆ ಪ್ರಥಮ್ ಹಾಸ್ಯ, ತುಂಟಾಟ ಮಾತ್ರ ನೋಡಿದ್ದಾರೆ. ಹಾಗೆಯೇ ನೋಡಿದ್ರೆ ಚೆಂದ. ಪ್ರೀತಿಯಿಂದ ಹೇಳ್ತಿದ್ದೀನಿ ಸರ್‌.. ನಿಮ್ಮ ಅಭಿಮಾನಿಗಳಿಗೆ ಹೇಳಿ ಅಂತ ಹೇಳಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ

    ದರ್ಶನ್‌ ಹೆಸರನ್ನ ಮಿಸ್‌ಯೂಸ್‌ ಮಾಡಿಕೊಳ್ತಿದ್ದಾರೆ
    ದರ್ಶನ್ ಹೆಸರನ್ನ ಅಭಿಮಾನಿಗಳು ಮಿಸ್ ಯೂಸ್ ಮಾಡಿಕೊಳ್ತಿದ್ದಾರೆ. ಬಾಸ್ ಇಸಂ ಕನ್ನಡದಲ್ಲಿ ನಡೆಯಲ್ಲ. ಕರ್ನಾಟಕದಲ್ಲಿ ಕನ್ನಡ ಬಾಸ್‌… ಕನ್ನಡಿಗರು ನನಗೆ ಬಾಸ್‌.. ಅವರವರ ಅಪ್ಪ-ಅಮ್ಮ ಅವರಿಗೆ ಬಾಸ್‌. ಯಾರಾದ್ರೂ ಯಾರಾದ್ರೂ ಮೀಡಿಯಾಗೆ ಏನ್ರಿ ಮೀಡಿಯಾ ಅಂದ್ರೆ… ಕಿರಿಟಕ್ಕೆ ಸಮಾನ ಅನ್ನಬೇಕು ಕಲಾವಿದರು. ಮೀಡಿಯಾದಿಂದ ಅನ್ನ ತಿಂತಿದಿವಿ ಅಂತ ದರ್ಶನ್‌ ಅಭಿಮಾನಿಗಳನ್ನ ಕುಟುಕಿದ್ದಾರೆ. ಇದನ್ನೂ ಓದಿ: Exclusive | ರೇಣುಕಾಸ್ವಾಮಿ ಕೇಸ್‌ – ʻಡಿ ಬಾಸ್‌ʼ ಫ್ಯಾನ್ಸ್‌ ವಿರುದ್ಧ ನಟಿ ರಮ್ಯಾ ಕೆಂಡ

    ದರ್ಶನ್ ಸರ್ ವಿ ಲವ್‌ ಯು ಸರ್‌, ನೀವು ಚೆನ್ನಾಗಿ ಬದುಕಿ ಎಂದರಲ್ಲದೇ ಶಿವಣ್ಣ, ಸುದೀಪ್‌ಗೆ ಒಳ್ಳೆದಾಗ್ಲಿ. ಅವ್ರು ದೊಡ್ಡ ಕಲಾವಿದರು ಎನ್ನುತ್ತಲೇ ದರ್ಶನ್‌ಗೆ ತಿವಿದಿದ್ದಾರೆ. ರಕ್ಷಕ್ ನನ್ನ ಸ್ನೇಹಿತ.. ತಮ್ಮ.. ಅವನು ಕಲಿತುಕೊಳ್ತಾನೆ. ದರ್ಶನ್‌ ಸರ್‌ ನಿಮ್ಮ ಹಡುಗ್ರುಗೆ ಸರಿಯಾಗಿ ಇರೋಕೆ ಹೇಳಿ ದರ್ಶನ್ ಸರ್. ನಮ್ಗೂ ಬದುಕು ಮುಖ್ಯ. ಪ್ರಥಮ್ ಕೋಪ ಮಾಡಿಕೊಂಡ್ರೆ… ಎಚ್ಚರಿಕೆ ಕೊಟ್ಟಿದ್ದಾರೆ.

    ಅಲ್ಲಿ ಏನಾಯ್ತು ಅಂತ ಹೇಳಿಕೆ ಕೊಟ್ರೆ ಬೇರೆ ಏನೇನೋ ಆಗುತ್ತೆ. ದರ್ಶನ್ ಸರ್ ಯೋಗ್ಯರ ಸಹವಾಸ ಮಾಡಿ. ಗೂಂಡಾಗಳನ್ನ ಸಾಕುವ ಬದಲು ಮನೆಯಲ್ಲಿ ನಾಯಿ ಸಾಕಿ, ಗಿಳಿ ಸಾಕಿ, ಪಾರಿವಾಳ ಸಾಕಿ ಅಂತ ಕುಟುಕಿದ್ದಾರೆ. ಇದನ್ನೂ ಓದಿ: ಡಾರ್ಲಿಂಗ್ ಕೃಷ್ಣ ಅಭಿನಯದ ಬ್ರ್ಯಾಟ್ ಚಿತ್ರದ ʻನಾನೇ ನೀನಂತೆʼ ಹಾಡಿಗೆ ಮೆಚ್ಚುಗೆಯ ಸುರಿಮಳೆ

    ಏನಿದು ಪ್ರಕರಣ? ದೊಡ್ಡಬಳ್ಳಾಪುರ ದೇವಸ್ಥಾನದ ಬಳಿ ಆಗಿದ್ದೇನು?
    ನಟ ಪ್ರಥಮ್‌ಗೆ ಕಿಡಿಗೇಡಿಗಳಿಂದ ಜೀವ ಬೆದರಿಕೆ ಬಂದಿದೆ ಅನ್ನೋ ಆಡೊಯೋವೊಂದು ಸ್ಫೋಟಗೊಂಡಿತ್ತು. ದೊಡ್ಡಬಳ್ಳಾಪುರ ದೇವಸ್ಥಾನಕ್ಕೆ ಹೋಗಿದ್ದ ವೇಳೆ ದುಷ್ಕರ್ಮಿಗಳ ಗುಂಪೊಂದು ಪ್ರಥಮ್‌ಗೆ ಜೀವ ಬೆದರಿಕೆ ಒಡ್ಡಿರುವುದಾಗಿ ತಿಳಿದುಬಂದಿತ್ತು. ಈ ಕುರಿತು ವ್ಯಕ್ತಿಯೊಬ್ಬರೊಂದಿಗೆ ಪ್ರಥಮ್ ಮಾತನಾಡಿರುವ ಆಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ದೊಡ್ಡಬಳ್ಳಾಪುರ ದೇವಸ್ಥಾನಕ್ಕೆ ಹೋಗಿದ್ದ ವೇಳೆ ದುಷ್ಕರ್ಮಿಗಳು ಡ್ಯಾಗ್ರರ್ ತೋರಿಸಿ ನಟನಿಗೆ ಜೀವಬೆದರಿಕೆ ಹಾಕಿದ್ದರು. ಪೂಜೆ ಮುಗಿಸಿ ಹೊರಟ ವೇಳೆ ಕಾರಿಗೆ ಅಡ್ಡಬಂದ ಕೆಲವರು ಪ್ರಥಮ್‌ನನ್ನ ಬಲವಂತವಾಗಿ ಕರೆದೊಯ್ದು, ನಮ್ ಬಾಸ್ ಬಗ್ಗೆ ಮಾತಾಡ್ತಿಯ ಅಂತ ಹಲ್ಲೆಗೆ ಯತ್ನಿಸಿ ಅವಾಚ್ಯವಾಗಿ ನಿಂದಿಸಿ ಬೆದರಿಸಿದ್ದಾರೆ. ಕೊನೆಗೆ ಅಲ್ಲಿಂದ ತಪ್ಪಿಸಿಕೊಂಡು ಬಂದ ಪ್ರಥಮ್ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿಕೆ ಬಾಬಾ ಅವರನ್ನ ಭೇಟಿಯಾಗಿ ಘಟನೆ ವಿವರಿಸಿದ್ದರು. ಬಳಿಕ ಎಸ್ಪಿ ಸಂಬಂಧಪಟ್ಟ ಠಾಣೆಗೆ ದೂರು ನೀಡುವಂತೆ ಸಲಹೆ ನೀಡಿದ್ದರು.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದ ಎಸ್ಪಿ ಸಿಕೆ ಬಾಬಾ, ನಟ ಪ್ರಥಮ್ ಮೇಲೆ ಹಲ್ಲೆಗೆ ಯತ್ನಿಸಿ, ಜೀವ ಬೆದರಿಕೆ ಆರೋಪ ಕೇಳಿಬಂದಿದೆ. ದೇವಸ್ಥಾನಕ್ಕೆ ಹೋಗಿದ್ದಾಗ ಘಟನೆ ನಡೆದಿದೆ. ಅವರನ್ನ ಈಗಾಗಲೇ ಕರೆದು ಮಾತನಾಡಿದ್ದೀನಿ. ಅವರಿಗೆ ದೂರು ಕೊಡೋಕೆ ಹೇಳಿದ್ದೀನಿ. ಇಲ್ಲಿವರೆಗೂ ಯಾವುದೇ ದೂರು ನೀಡಿಲ್ಲ. ದೂರು ಕೊಟ್ಟ ನಂತರ ತನಿಖೆ ಮಾಡಿ ಕ್ರಮ ಕೈಗೊಳ್ತಿವಿ ಎಂದು ಹೇಳಿದ್ದರು.

  • ನಟ ಪ್ರಥಮ್‌ಗೆ ಡ್ಯಾಗರ್ ತೋರಿಸಿ ಜೀವಬೆದರಿಕೆ – ಬಾಸ್‌ ಬಗ್ಗೆ ಮಾತಾಡ್ತೀಯಾ ಅಂತ ಅವಾಜ್‌

    ನಟ ಪ್ರಥಮ್‌ಗೆ ಡ್ಯಾಗರ್ ತೋರಿಸಿ ಜೀವಬೆದರಿಕೆ – ಬಾಸ್‌ ಬಗ್ಗೆ ಮಾತಾಡ್ತೀಯಾ ಅಂತ ಅವಾಜ್‌

    – ಈವರೆಗೂ ದೂರು ಕೊಡದ ನಟ

    ಬೆಂಗಳೂರು: ನಟ ಪ್ರಥಮ್‌ಗೆ ಕಿಡಿಗೇಡಿಗಳಿಂದ ಜೀವ ಬೆದರಿಕೆ ಬಂದಿದೆ. ಸಿನಿ ಚಿತ್ರೀಕರಣವೊಂದಕ್ಕೆ ತೆರಳೋದಕ್ಕೂ ಮುನ್ನ ದೊಡ್ಡಬಳ್ಳಾಪುರ ದೇವಸ್ಥಾನಕ್ಕೆ ಹೋಗಿದ್ದ ವೇಳೆ ದುಷ್ಕರ್ಮಿಗಳ ಗುಂಪೊಂದು ಪ್ರಥಮ್‌ಗೆ (Olle Hudga Pratham) ಜೀವ ಬೆದರಿಕೆ ಒಡ್ಡಿರುವುದಾಗಿ ತಿಳಿದುಬಂದಿದೆ.

    ಈ ಕುರಿತು ವ್ಯಕ್ತಿಯೊಬ್ಬರೊಂದಿಗೆ ಪ್ರಥಮ್‌ ಮಾತನಾಡಿರುವ ಆಡಿಯೋ ಕೂಡ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ದೊಡ್ಡಬಳ್ಳಾಪುರ ದೇವಸ್ಥಾನಕ್ಕೆ (Doddaballapura Temple) ಹೋಗಿದ್ದ ವೇಳೆ ದುಷ್ಕರ್ಮಿಗಳು ಡ್ಯಾಗ್ರರ್‌ ತೋರಿಸಿ ನಟನಿಗೆ ಜೀವಬೆದರಿಕೆ ಹಾಕಿದ್ದಾರೆ. ಪೂಜೆ ಮುಗಿಸಿ ಹೊರಟ ವೇಳೆ ಕಾರಿಗೆ ಅಡ್ಡಬಂದ ಕೆಲವರು ಪ್ರಥಮ್‌ನನ್ನ ಬಲವಂತವಾಗಿ ಕರೆದೊಯ್ದು, ನಮ್ ಬಾಸ್ ಬಗ್ಗೆ ಮಾತಾಡ್ತಿಯ ಅಂತ ಹಲ್ಲೆಗೆ ಯತ್ನಿಸಿ ಅವಾಚ್ಛವಾಗಿ ನಿಂದಿಸಿ ಬೆದರಿಸಿದ್ದಾರೆ. ಕೊನೆಗೆ ಅಲ್ಲಿಂದ ತಪ್ಪಿಸಿಕೊಂಡ ಬಂದ ಪ್ರಥಮ್ ಬೆಂಗಳೂರು ಗ್ರಾಮಾಂತರ ಎಸ್ಪಿ (Bengaluru Rural SP) ಸಿಕೆ ಬಾಬಾ ಅವರನ್ನ ಭೇಟಿಯಾಗಿ ಘಟನೆ ವಿವರಿಸಿದ್ದಾರೆ. ಬಳಿಕ ಎಸ್ಪಿ ಸಂಬಂಧಪಟ್ಟ ಠಾಣೆಗೆ ದೂರು ನೀಡುವಂತೆ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ 10 ವರ್ಷ ಸಿಎಂ ಆಗ್ಬಿಟ್ರೆ ತಾಯಿ ಚಾಮುಂಡಿಗಿಂತ ದೊಡ್ಡವರಾಗಿಬಿಡ್ತಾರೆ: ಪ್ರತಾಪ್‌ ಸಿಂಹ ಕಿಡಿ

    ಈವರೆಗೂ ದೂರು ಕೊಡದ ನಟ
    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಎಸ್ಪಿ ಸಿಕೆ ಬಾಬಾ, ನಟ ಪ್ರಥಮ್ ಮೇಲೆ ಹಲ್ಲೆಗೆ ಯತ್ನಿಸಿ, ಜೀವ ಬೆದರಿಕೆ ಆರೋಪ ಕೇಳಿಬಂದಿದೆ. ದೇವಸ್ಥಾನಕ್ಕೆ ಹೋಗಿದ್ದಾಗ ಘಟನೆ ನಡೆದಿದೆ. ಅವರನ್ನ ಈಗಾಗಲೇ ಕರೆದು ಮಾತನಾಡಿದ್ದೀನಿ. ಅವರಿಗೆ ದೂರು ಕೊಡೋಕೆ ಹೇಳಿದ್ದೀನಿ. ಇಲ್ಲಿವರೆಗೂ ಯಾವುದೇ ದೂರು ನೀಡಿಲ್ಲ. ದೂರು ಕೊಟ್ಟ ನಂತರ ತನಿಖೆ ಮಾಡಿ ಕ್ರಮ ಕೈಗೊಳ್ತಿವಿ ಎಂದು ಹೇಳಿದ್ದಾರೆ. ಇದನ್ನೂ ಓದಿ ಶಿವಲಿಂಗೇಗೌಡ್ರು ನಮ್ಮನೆಗೆ, ಸಿಎಂ ಮನೆಗೆ ತಿರುಗಿ 4 ಜೊತೆ ಚಪ್ಪಲಿ ಸವೆಸಿದ್ದಾರೆ: ಡಿ.ಕೆ ಶಿವಕುಮಾರ್

  • ಅಂಗಡಿ ಬಳಿ ಕುಳಿತವನ ಮೇಲೆ ಡೆಡ್ಲಿ ಅಟ್ಯಾಕ್ – ಚಿಕಿತ್ಸೆ ಫಲಿಸದೇ ಯುವಕ ಸಾವು

    ಅಂಗಡಿ ಬಳಿ ಕುಳಿತವನ ಮೇಲೆ ಡೆಡ್ಲಿ ಅಟ್ಯಾಕ್ – ಚಿಕಿತ್ಸೆ ಫಲಿಸದೇ ಯುವಕ ಸಾವು

    – ದಾಳಿಗೆ ಕಾರಣವಾಯ್ತಾ ಲವ್ ಬ್ರೇಕಪ್?

    ಆನೇಕಲ್: ಸ್ನೇಹಿತರ ಜೊತೆ ಮಾತನಾಡುತ್ತಾ ಅಂಗಡಿ ಬಳಿ ಕುಳಿತ್ತಿದ್ದ ಯುವಕನ ಮೇಲೆ ಅಪರಿಚಿತ ಗ್ಯಾಂಗೊಂದು ಹಲ್ಲೆ ಮಾಡಿದ ಪರಿಣಾಮ ಚಿಕಿತ್ಸೆ ಫಲಿಸದೇ ಯುವಕ ಮೃತಪಟ್ಟಿರುವ ಘಟನೆ ಆನೇಕಲ್‌ನಲ್ಲಿ (Anekal) ನಡೆದಿದೆ.

    ಆನೇಕಲ್ ಪಟ್ಟಣದ ವಾರ್ಡ್ 9ರ ನಿವಾಸಿ ರವಿಕುಮಾರ್ ಮೃತ ಯುವಕ. ರವಿಕುಮಾರ್ ರಾತ್ರಿ 9:30ರ ಸುಮಾರಿಗೆ ಸ್ನೇಹಿತರ ಜೊತೆ ವಿನಾಯಕ ನಗರ ಸುಂದರ್ ರಾಜ್ ಬಡಾವಣೆಯ ಅಂಗಡಿ ಬಳಿ ಕುಳಿತಿದ್ದ. ಈ ವೇಳೆ ಬೈಕ್‌ನಲ್ಲಿ ಬಂದ ಮೂವರು ದೊಣ್ಣೆಯಿಂದ ರವಿಕುಮಾರ್ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಇದನ್ನೂ ಓದಿ: ಇನ್ಸ್ಟಾದಲ್ಲಿ ಬೆಂಗಳೂರಿಗರ ಬಗ್ಗೆ ನಾಲಗೆ ಹರಿಬಿಟ್ಟ ಒಡಿಶಾ ಯುವತಿ

    ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಾಯಾಳು ರವಿಕುಮಾರ್‌ನನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ರವಿಕುಮಾರ್ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಇದನ್ನೂ ಓದಿ: Mysuru | ಸಿಡಿಮದ್ದು ಸ್ಫೋಟ – ಮಹಿಳೆಗೆ ಗಾಯ

    ಅಮೆಜಾನ್‌ನಲ್ಲಿ ಕೆಲಸ ಮಾಡುತ್ತಿದ್ದ ರವಿಕುಮಾರ್ ಯುವತಿಯೊಬ್ಬಳನ್ನು ಪ್ರೀತಿ ಮಾಡುತ್ತಿದ್ದ. ಇತ್ತೀಚೆಗೆ ಅವರಿಬ್ಬರಿಗೂ ಬ್ರೇಕಪ್ (Breakup) ಆಗಿತ್ತು. ಇದೇ ವಿಚಾರಕ್ಕೆ ರವಿಕುಮಾರ್ ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ತಮ್ಮ ಮತ್ತು ಗ್ಯಾಂಗ್ ದಾಳಿ ನಡೆಸಿ ಸೇಡು ತೀರಿಸಿಕೊಂಡಿದೆ ಎನ್ನಲಾಗಿದೆ. ಇದನ್ನೂ ಓದಿ: Bengaluru | ಬಾಗಿಲು ಮುಚ್ಚುವ ವೇಳೆ ಗನ್ ಹಿಡಿದು ಬಂದು ಚಿನ್ನದಂಗಡಿ ದರೋಡೆ

    ಈಗಾಗಲೇ ಘಟನಾ ಸ್ಥಳದಿಂದ ಎಫ್‌ಎಸ್‌ಎಲ್ ತಂಡ ಸಾಕ್ಷ್ಯಾಧಾರಗಳನ್ಮು ಸಂಗ್ರಹಿಸಿದ್ದು, ಸಿಸಿ ಕ್ಯಾಮೆರಾ ದೃಶ್ಯಗಳನ್ನು ಆಧರಿಸಿ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರ ತಂಡ ರಚನೆ ಮಾಡಲಾಗಿದೆ. ಶೀಘ್ರ ಆರೋಪಿಗಳ ಬಂಧನ ಮಾಡಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಅಡಿಷನಲ್ ಎಸ್ಪಿ ವೆಂಕಟೇಶ್ ಪ್ರಸನ್ನ ಹೇಳಿಕೆ ನೀಡಿದ್ದಾರೆ.

  • ರಾಮನಾಥಪುರ ಕೆರೆಯಲ್ಲಿ ಈಜಲು ಹೋದ ನಾಲ್ವರು ಯುವಕರು ನೀರುಪಾಲು

    ರಾಮನಾಥಪುರ ಕೆರೆಯಲ್ಲಿ ಈಜಲು ಹೋದ ನಾಲ್ವರು ಯುವಕರು ನೀರುಪಾಲು

    ಬೆಂಗಳೂರು: ನಂದಿಬೆಟ್ಟಕ್ಕೆ (Nandi Hills) ಬಂದು ಈಜಲು ಹೋಗಿದ್ದ ನಾಲ್ವರು ಯುವಕರು ನೀರುಪಾಲಾಗಿರುವ ಘಟನೆ ದೇವನಹಳ್ಳಿ ತಾಲೂಕಿನ ರಾಮನಾಥಪುರದಲ್ಲಿ ನಡೆದಿದೆ.

    ಭಾನುವಾರ ಬೆಳಗ್ಗೆ ನಂದಿಬೆಟ್ಟಕ್ಕೆ ಬಂದಿದ್ದ ನಾಲ್ವರು ಸ್ನೇಹಿತರು, ಬಿಸಿಲ ಬೇಗೆಗೆ ಕಂಗೆಟ್ಟು ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದ ಕೆರೆಗೆ ಈಜಲು (Swimming) ತೆರಳಿದ್ದರು. ಆದ್ರೆ ಶೇಖ್ ಥೈರ್ (18), ತೋಹಿದ್, ಶಾಹಿದ್, ಮತ್ತು ಫೈಜಲ್ ಖಾನ್ ನಾಲ್ವರು ಸ್ನೇಹಿತರೂ ನೀರುಪಾಲಾಗಿದ್ದಾರೆ. ಇದನ್ನೂ ಓದಿ: Manipur Violence: ಮಣಿಪುರದಲ್ಲಿ 40 ಮಂದಿ ದಂಗೆಕೋರರ ಹತ್ಯೆ – ಇಂಟರ್ನೆಟ್ ಸೇವೆ ಬಂದ್

    ಕೆರೆ ದಡದಲ್ಲಿ ಬಟ್ಟೆಗಳನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹ ಪತ್ತೆಗೆ ಶೋಧ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಮತ್ತಿಬ್ಬರ ಮೃತದೇಹ ಪತ್ತೆಗಾಗಿ ಶೋಧಕಾರ್ಯ ಮುಂದುವರಿದಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಮೋತಿ ಚೂರು ಲಾಡು ತಿನ್ನಲು ಮುಗಿಬಿದ್ದ ʻಕೈʼ ಕಾರ್ಯಕರ್ತರು