Tag: bengaluru rural

  • ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಅಶೋಕ್, ಅಶ್ವಥ್ ನಾರಾಯಣ್ ಸಮರ್ಥರು – ಸಿಪಿವೈ ಅಚ್ಚರಿ ಹೇಳಿಕೆ

    ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಅಶೋಕ್, ಅಶ್ವಥ್ ನಾರಾಯಣ್ ಸಮರ್ಥರು – ಸಿಪಿವೈ ಅಚ್ಚರಿ ಹೇಳಿಕೆ

    ನವದೆಹಲಿ: ಬೆಂಗಳೂರು ಗ್ರಾಮಾಂತರ (Bengaluru Rural) ಕ್ಷೇತ್ರಕ್ಕೆ ಅಭ್ಯರ್ಥಿಗಳ ಕೊರತೆ ಇಲ್ಲ. ಪಕ್ಷದಲ್ಲಿ ಸಾಕಷ್ಟು ಪ್ರಬಲ ನಾಯಕರಿದ್ದಾರೆ ಮಾಜಿ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕೂಡ ಸ್ಪರ್ಧೆ ಮಾಡಬಹುದು ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ (CP Yogeshwara) ಹೇಳಿದ್ದಾರೆ.

    ಕ್ಷೇತ್ರದಲ್ಲಿ ನಡೆದ ಮೈತ್ರಿ ಮಾತುಕತೆ ಸಂಬಂಧ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಸಂಬಂಧ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಡಾ.ಮಂಜುನಾಥ್ (Dr. CN Manjunath) ಅವರ ಹೆಸರು ಪ್ರಸ್ತಾಪಿಸಿದ್ದೇನೆ, ಅವರನ್ನು ಒಪ್ಪಿಸುವ ಜವಬ್ದಾರಿ ನನ್ನದು ಎಂದು ಹೇಳಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಸಂಸ್ಕರಣೆ ಮಾಡಿದ ನೀರು ಮರುಬಳಕೆಗೆ ಶೀಘ್ರವೇ ಆದೇಶ: ಈಶ್ವರ್ ಖಂಡ್ರೆ

    ಈ ಚುನಾವಣೆಯನ್ನು (Elections) ಸವಾಲಾಗಿ ಸ್ವೀಕರಿಸಿದ್ದೇವೆ, ನಾನು ರಾಜ್ಯ ರಾಜಕಾರಣದಲ್ಲಿ ಇರಬೇಕು ಅಂತ ಅಂದುಕೊಂಡಿದ್ದೇನೆ. ಹೀಗಾಗೀ ನಾನು ಸ್ಪರ್ಧಿಸುವ ಆಸಕ್ತಿ ಇಲ್ಲ. ನಾನು ಮಂಜುನಾಥ್ ಹೆಸರು ಪ್ರಸ್ತಾಪಿಸಿದ್ದೇನೆ, ಕೆಲವು ನಾಯಕರು ನಾನು ಸ್ಪರ್ಧಿಸಿದರೆ ಕಠಿಣ ಪೈಪೊಟಿ ಇರಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ದೇಶದ್ರೋಹಿಗಳಿಗೂ, ಕೈ ನಾಯಕರಿಗೂ ಅಪ್ಪುಗೆಯ ನಂಟಿನ ಕಾರಣ FSL ವರದಿ ವಿಳಂಬ: ಸಿ.ಟಿ.ರವಿ

    ಮಂಜುನಾಥ್ ಅವರನ್ನು ಹೊರತುಪಿಡಿಸದರೂ ಅಶ್ವಥ್ ನಾರಾಯಣ್ ಡಿಸಿಎಂ ಆಗಿದ್ದವರು, ಉಸ್ತುವಾರಿ ಸಚಿವರಾಗಿದರು, ಆರ್.ಅಶೋಕ್ ವಿರೋಧ ಪಕ್ಷದ ನಾಯಕರು ಸ್ಪರ್ಧಿಸಲು ಸಮರ್ಥರಿದ್ದಾರೆ. ಅಂತಿಮವಾಗಿ ಪಕ್ಷದ ವರಿಷ್ಠರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೆ ಕಾದು ನೋಡಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಭ್ರೂಣಹತ್ಯೆ ಮತ್ತೆ ಬೆಳಕಿಗೆ- ನೆಲಮಂಗಲ ಖಾಸಗಿ ಆಸ್ಪತ್ರೆಯಲ್ಲಿ 74 ಗರ್ಭಪಾತ

  • ಹೆಚ್‌ಡಿಕೆಯಿಂದ ಅಮಿತ್‌ ಶಾ ಭೇಟಿ – ಡಾ. ಮಂಜುನಾಥ್‌ ಬೆಂಗಳೂರು ಗ್ರಾಮಾಂತರದ ಮೈತ್ರಿ ಅಭ್ಯರ್ಥಿ?

    ಹೆಚ್‌ಡಿಕೆಯಿಂದ ಅಮಿತ್‌ ಶಾ ಭೇಟಿ – ಡಾ. ಮಂಜುನಾಥ್‌ ಬೆಂಗಳೂರು ಗ್ರಾಮಾಂತರದ ಮೈತ್ರಿ ಅಭ್ಯರ್ಥಿ?

    ಬೆಂಗಳೂರು:  ಡಾ.ಮಂಜುನಾಥ್ ಅವರು  ಬೆಂಗಳೂರು ಗ್ರಾಮಾಂತರ (Bengaluru Rural) ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಆಗುತ್ತಾರಾ ಹೀಗೊಂದು ಪ್ರಶ್ನೆ ಎದ್ದಿದೆ.

    ಕಳೆದ ಕೆಲ ದಿನಗಳಿಂದ ಡಾ. ಮಂಜುನಾಥ್‌ (Dr.Manjunath) ಲೋಕಸಭೆಗೆ (Lok Sabha) ಇಳಿಯುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಆದರೆ ಇಲ್ಲಿಯವರೆಗೂ ಡಾ. ಮಂಜುನಾಥ್‌ ಅವರು ರಾಜಕೀಯಕ್ಕೆ ಇಳಿಯುವ ಬಗ್ಗೆ ಯಾವುದೇ ಖಚಿತ ಹೇಳಿಕೆ ನೀಡಿಲ್ಲ. ಆದರೆ ಈಗ ಮಂಜುನಾಥ್‌ ಅವರನ್ನೇ ಕಣಕ್ಕೆ ಇಳಿಸುವ ಬಗ್ಗೆ ಜೆಡಿಎಸ್‌ ಮುಂದಾಗಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ರಷ್ಯಾದ ಡೇಂಜರ್‌ ಸೇನೆಯಲ್ಲಿದ್ದಾರೆ ಕಲಬುರಗಿಯ ಮೂವರು – ನಮ್ಮನ್ನು ರಕ್ಷಿಸಿ ಎಂದ ಯುವಕರು

    ಇಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಪುತ್ರ ನಿಖಿಲ್‌ ಅವರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರನ್ನು ಭೇಟಿ ಮಾಡಿದ್ದಾರೆ. ಈ ಭೇಟಿ ವೇಳೆ ಮಂಜುನಾಥ್ ಅವರ ಸ್ಪರ್ಧೆ ಬಗ್ಗೆ ಪ್ರಸ್ತಾಪ ಇಟ್ಟಿದ್ದಾರೆ ಎಂಬ ವಿಚಾರ ಮೂಲಗಳಿಂದ ಬಂದಿದೆ.

    ನಗರ, ಗ್ರಾಮೀಣ ಕ್ಷೇತ್ರಗಳನ್ನೊಳಗೊಂಡಿರುವ ಬೆಂಗಳೂರು ಗ್ರಾಮಾಂತರದಲ್ಲಿ ಜೆಡಿಎಸ್, ಬಿಜೆಪಿ ಮತಗಳಿಕೆಯ ಲೆಕ್ಕಾಚಾರವನ್ನು ಮುಂದಿಟ್ಟ ಹೆಚ್‌ಡಿಕೆ ಮಂಜುನಾಥ್ ಸ್ಪರ್ಧೆ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮದ್ಯಪಾನ ಮಾಡದಂತೆ ಪೋಷಕರಿಂದ ಬುದ್ದಿವಾದ – ಆತ್ಮಹತ್ಯೆಗೆ ಶರಣಾದ ಪುತ್ರ

    ಮಾಜಿ ಪ್ರಧಾನಿ ದೇವೇಗೌಡರಿಂದಲೂ ಈ ಸಂಬಂಧ ಅಭಿಪ್ರಾಯ ಸಂಗ್ರಹ ನಡೆದಿತ್ತು. ಬಿಜೆಪಿ‌ ಅಭ್ಯರ್ಥಿ ಆಕಾಂಕ್ಷಿ ಯೋಗೇಶ್ವರ್ ಕೂಡ ದೊಡ್ಡ ಗೌಡರನ್ನು ಭೇಟಿಯಾಗಿ ಅಭಿಪ್ರಾಯ ಹೇಳಿದ್ದರು.

    ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ಮುಖ್ಯಸ್ಥರು ಮತ್ತು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಅಳಿಯ ಡಾ.ಮಂಜುನಾಥ್‌ ರಾಜ್ಯದಲ್ಲೇ ಪರಿಚಿತ ವ್ಯಕ್ತಿತ್ವ ಹೊಂದಿದ್ದಾರೆ. ಹಳೆ ಮೈಸೂರು ಭಾಗದಲ್ಲಿ ಮೈತ್ರಿಯ ಮತಬ್ಯಾಂಕ್‌ ಕ್ರೋಢೀಕರಣ ದೃಷ್ಟಿಯಿಂದ ಅನುಕೂಲವಾಗಲಿದೆ ಎಂಬ ಲೆಕ್ಕಾಚಾರ ನಡೆದಿದೆ.

  • ಹೆಚ್‌ಡಿಡಿಯನ್ನು ಭೇಟಿ ಮಾಡಿ ಚರ್ಚಿಸಿದ ಯೋಗೇಶ್ವರ್‌

    ಹೆಚ್‌ಡಿಡಿಯನ್ನು ಭೇಟಿ ಮಾಡಿ ಚರ್ಚಿಸಿದ ಯೋಗೇಶ್ವರ್‌

    ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರನ್ನು (HD Devegowda) ಮಾಜಿ ಶಾಸಕ ಸಿ.ಪಿ. ಯೋಗೇಶ್ವರ್ (CP Yogeshwar) ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಭಾನುವಾರ ಸಂಜೆ ಪದ್ಮನಾಭನಗರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ಮಾಡಿದ್ದಾರೆ.

    ಲೋಕಸಭಾ ಚುನಾವಣೆಗೆ ಬಿಜೆಪಿ, ಜೆಡಿಎಸ್‌ (BJP-JDS) ಮೈತ್ರಿ ಮಾಡಿಕೊಂಡಿರುವ ಕಾರಣ ಬೆಂಗಳೂರು ಗ್ರಾಮಾಂತರ (Bengaluru Rural) ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಎನ್ನುವ ಕುತೂಹಲ ಮೂಡಿದೆ. ಈ ಹಿನ್ನೆಲೆಯಲ್ಲಿ ಯೋಗೇಶ್ವರ್‌ ಭೇಟಿ ಮಹತ್ವ ಪಡೆದುಕೊಂಡಿದೆ.  ಇದನ್ನೂ ಓದಿ: ಮೋದಿ 3ನೇ ಬಾರಿ ಪ್ರಧಾನಿಯಾಗೋದನ್ನ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ – ಹೆಚ್‌ಡಿಕೆ

    ವಿಧಾನಸಭಾ ಚುನಾವಣೆಯಲ್ಲಿ ರಾಮನಗರದ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿ ಕುಮಾರಸ್ವಾಮಿ (HD Kumaraswamy) ವಿರುದ್ಧ ಯೋಗೇಶ್ವರ್‌ ಸೋತಿದ್ದರು.

    ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ 8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಕುಣಿಗಲ್‌, ರಾಜರಾಜೇಶ್ವರಿ ನಗರ, ಬೆಂಗಳೂರು ದಕ್ಷಿಣ, ಆನೇಕಲ್‌, ಮಾಗಡಿ, ರಾಮನಗರ, ಕನಕಪುರ, ಚನ್ನಪಟ್ಟಣ ಕ್ಷೇತ್ರಗಳು ವ್ಯಾಪ್ತಿಗೆ ಬರುತ್ತದೆ. 8 ಕ್ಷೇತ್ರಗಳ ಪೈಕಿ ಐದರಲ್ಲಿ ಕಾಂಗ್ರೆಸ್‌ ಇದ್ದರೆ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದಾರೆ. ಚನ್ನಪಟ್ಟಣದಲ್ಲಿ ಜೆಡಿಎಸ್‌ ಶಾಸಕ ಹೆಚ್‌ಡಿ ಕುಮಾರಸ್ವಾಮಿ ಇದ್ದಾರೆ.

    2019ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಒಟ್ಟು 28 ಕ್ಷೇತ್ರಗಳಲ್ಲಿ 25ರಲ್ಲಿ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ತಲಾ ಒಂದೊಂದು ಕ್ಷೇತ್ರಗಳನ್ನು ಗೆದ್ದಿತ್ತು. ಡಿಕೆ ಸುರೇಶ್‌ ಅವರು ರಾಜ್ಯದ ಏಕೈಕ ಕಾಂಗ್ರೆಸ್‌ ಸಂಸದರಾಗಿ ಆಯ್ಕೆಯಾಗಿದ್ದರು. ಇದನ್ನೂ ಓದಿ: 200 ಸಂಘಟನೆಗಳು, 20,000 ರೈತರಿಂದ ನಾಳೆ `ದೆಹಲಿ ಚಲೋ’ – ದೆಹಲಿ ಗಡಿ ಬಂದ್!

  • ಆನೇಕಲ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡ ಕುಸಿತ – 20ಕ್ಕೂ ಹೆಚ್ಚು ಕಾರ್ಮಿಕರು ಗಂಭೀರ

    ಆನೇಕಲ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡ ಕುಸಿತ – 20ಕ್ಕೂ ಹೆಚ್ಚು ಕಾರ್ಮಿಕರು ಗಂಭೀರ

    ಆನೇಕಲ್: ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡ (Under Construction Of School Building) ಕುಸಿದು 20ಕ್ಕೂ ಹೆಚ್ಚು ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಆನೇಕಲ್ (Anekal) ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.

    ಸೆಂಟ್ ಅಗ್ನೇಸ್ ಎಂಬ ಶಾಲಾ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಈ ವೇಳೆ ಎರಡನೇ ಅಂತಸ್ತಿನ ಕಟ್ಟಡ ಕುಸಿದು ಕಾರ್ಮಿಕರು ಗಾಯಗೊಂಡಿದ್ದಾರೆ. ಐವರು ಕಾರ್ಮಿಕರ (labours) ಸ್ಥಿತಿ ತೀರಾ ಗಂಭೀರವಾಗಿದೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಸಚಿನ್ ತೆಂಡೂಲ್ಕರ್ ಡೀಪ್‍ಫೇಕ್ ವೀಡಿಯೋ ಪ್ರಕರಣ- ಗೇಮ್ ಅಪ್ಲಿಕೇಶನ್ ವಿರುದ್ಧ ಎಫ್‍ಐಆರ್

    ಕಟ್ಟಡದ ಅವಶೇಷಗಳ ಅಡಿಯಲ್ಲಿ ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ಕಟ್ಟಡದ ಅವಶೇಷಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಸದ್ಯ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇದನ್ನೂ ಓದಿ: ಐಸಿಸ್‌ ಜೊತೆ ನಂಟು; 2014 ರಲ್ಲಿ ಬಂಧಿತನಾಗಿದ್ದ ಟೆಕ್ಕಿ ದೋಷಿ ಎಂದು ಕೋರ್ಟ್‌ ತೀರ್ಪು  

    ಗಾಯಗೊಂಡ ಕಾರ್ಮಿಕರು ಕೋಲ್ಕತ್ತಾ ಮೂಲದವರು. ಒಟ್ಟು ನೂರಕ್ಕೂ ಹೆಚ್ಚು ಮಂದಿ ಕೆಲಸ ಮಾಡುತ್ತಿದ್ದೆವು. 2ನೇ ಮಹಡಿಯಲ್ಲಿ ಸೆಂಟ್ರಿಂಗ್ ಕಾಂಕ್ರೀಟ್ ಹಾಕಲಾಗುತ್ತಿತ್ತು. ಈ ಸಮಯದಲ್ಲಿ ಭಾರ ಹೆಚ್ಚಾಗಿ ಹೆಚ್ಚಾಗಿ ಸಿಮೆಂಟ್ ಹಾಗೂ ಕಬ್ಬಿಣ ಕುಸಿದಿದೆ. ಸ್ಥಳದಲ್ಲಿದ್ದ ಕಾರ್ಮಿಕರು ಗಾಯಗೊಂಡಿದ್ದಾರೆ. ಗಾಯಗೊಂಡವರ ಪೈಕಿ 5 ಮಂದಿ ಸ್ಥತಿ ಗಂಭೀರವಾಗಿದೆ. ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಸ್ಥಳದಲ್ಲಿ ಕೆಲಸ ಮಾಡುವ ಕಾರ್ಮಿಕರೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ; ಅಯೋಧ್ಯೆಯಲ್ಲಿ ಮೂವರು ಅನುಮಾನಾಸ್ಪದ ವ್ಯಕ್ತಿಗಳ ಬಂಧನ

  • ರೋಗಿಯನ್ನು ಕರೆದೊಯ್ಯಲು ಹೋಗುತ್ತಿದ್ದ ಅಂಬುಲೆನ್ಸ್‌ ಪಲ್ಟಿ , ಚಾಲಕ ಪಾರು

    ರೋಗಿಯನ್ನು ಕರೆದೊಯ್ಯಲು ಹೋಗುತ್ತಿದ್ದ ಅಂಬುಲೆನ್ಸ್‌ ಪಲ್ಟಿ , ಚಾಲಕ ಪಾರು

    ಚಿಕ್ಕಬಳ್ಳಾಪುರ: ರೋಗಿ ಕರೆದೊಯ್ಯಲು ಹೋಗುತ್ತಿದ್ದ ಅಂಬುಲೆನ್ಸ್‌ (Ambulance) ಭೀಕರ ಅಪಘಾತಕ್ಕೀಡಾಗಿದ್ದು (Accident) ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ (Devanahalli) ತಾಲೂಕಿನ ಬೈಚಾಪುರ ಗ್ರಾಮದ ಬಳಿ ನಡೆದಿದೆ.

    ರೋಗಿಯನ್ನು ಕರೆತರಲು ಅತಿ ವೇಗವಾಗಿ ತೆರಳುತ್ತಿದ್ದ ಖಾಸಗಿ ಆಸ್ಪತ್ರೆಯ (Private Hospital) ಅಂಬುಲೆನ್ಸ್‌ ಬೈಚಾಪುರ ರಸ್ತೆಯ ಆಕಾಶ್ ಆಸ್ಪತ್ರೆ ಎದುರು ಬೈಕ್‌ಗೆ ಡಿಕ್ಕಿಯಾಗಿ ನಂತರ ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.  ಇದನ್ನೂ ಓದಿ: ರಾಮಮಂದಿರಕ್ಕಾಗಿ 30 ವರ್ಷಗಳಿಂದ ‘ಮೌನ ವ್ರತ’ – ಒಂದು ಮಾತೂ ಆಡದೇ ಇದ್ದ ಮಹಿಳೆ ಮುಖದಲ್ಲಿ ಮಂದಹಾಸ

    ಅಂಬುಲೆನ್ಸ್‌ ಗುದ್ದಿದ ವಿದ್ಯುತ್ ಕಂಬಗಳು ಮುರಿದು ಧರೆಗುರುಳಿವೆ.  ಅಂಬುಲೆನ್ಸ್ ಪಲ್ಟಿಯಾಗಿದ್ದು ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ವಿಮಾನ ನಿಲ್ದಾಣ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

     

  • ದೇವರ ಪ್ರಸಾದ ತಿಂದು ನೂರಾರು ಜನ ಅಸ್ವಸ್ಥ – ಓರ್ವ ಮಹಿಳೆ ಸಾವು

    ದೇವರ ಪ್ರಸಾದ ತಿಂದು ನೂರಾರು ಜನ ಅಸ್ವಸ್ಥ – ಓರ್ವ ಮಹಿಳೆ ಸಾವು

    ಬೆಂಗಳೂರು: ಹನುಮ ಜಯಂತಿ (Hanuma Jayanthi) ಹಿನ್ನೆಲೆ ದೇವಾಲಯಗಳಲ್ಲಿ (Temples) ಪ್ರಸಾದ (Prasadam) ಸೇವಿಸಿ ನೂರಾರು ಜನ ಅಸ್ವಸ್ಥಗೊಂಡಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ಹೊಸಕೋಟೆ (Hoskote) ನಗರದಲ್ಲಿ ನಡೆದಿದೆ.

    ಸಿದ್ದಗಂಗಮ್ಮ (65) ಸಾವನ್ನಪ್ಪಿದ ಮಹಿಳೆ. ಹನುಮ ಜಯಂತಿ ಅಂಗವಾಗಿ ಭಾನುವಾರ ಭಕ್ತರು ನಗರದ ವೆಂಕಟರಮಣಸ್ವಾಮಿ, ಊರುಬಾಗಿಲು ಆಂಜನೇಯ ಸ್ವಾಮಿ, ಕೋಟೆ ಆಂಜನೇಯ ಸ್ವಾಮಿ ದೇವಾಲಯಗಳಿಗೆ ತೆರಳಿದ್ದರು. ಅಲ್ಲಿ ಪುಳಿಯೊಗರೆ, ಪಾಯಸ ಹಾಗೂ ಲಡ್ಡನ್ನು ಪ್ರಸಾದದ ರೂಪದಲ್ಲಿ ನೆರೆದಿದ್ದ ಭಕ್ತರು ಸೇವಿಸಿದ್ದಾರೆ. ಪ್ರಸಾದ ಸೇವನೆ ಬಳಿಕ ಭಕ್ತರಿಗೆ ವಾಂತಿ ಹಾಗೂ ಭೇದಿ ಪ್ರಾರಂಭವಾಗಿದ್ದು, ನೂರಾರು ಜನ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ಭಕ್ತರನ್ನು ಹೊಸಕೋಟೆ ಖಾಸಗಿ ಆಸ್ಪತ್ರೆ, ಕೋಲಾರ ಹಾಗೂ ಬೆಂಗಳೂರಿನ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: ರಾಜ್ಯದ 8 ಮಂದಿಯಲ್ಲಿ JN.1 ವೈರಸ್‌ ಪತ್ತೆ

    ಇನ್ನು ಈ ಪ್ರಕರಣದಲ್ಲಿ ಹೊಸಕೋಟೆ ನಗರದ ಕಾವೇರಿ ನಗರ ನಿವಾಸಿ ಸಿದ್ದಗಂಗಮ್ಮ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಮಹಿಳೆ ಇಂದು ಬೆಳಗ್ಗೆ ವಾಂತಿ ಭೇದಿ ಎಂದು ಆಸ್ಪತ್ರೆಗೆ ದಾಖಲಾಗಿದ್ದು, ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ವತ್ರೆಯಲ್ಲಿ ಮೃತಪಟ್ಟಿದ್ದಾರೆ. ಘಟನೆಯಿಂದ 15ಕ್ಕೂ ಅಧಿಕ ಜನರ ಸ್ಥಿತಿ ಗಂಭೀರವಾಗಿದ್ದು, ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಗೆಳತಿ ಮೇಲೆ ಪ್ರೀತಿ; ಲಿಂಗ ಬದಲಿಸಿಕೊಂಡ್ರೂ ಮದುವೆಗೆ ಒಪ್ಪದ ಮಹಿಳಾ ಟೆಕ್ಕಿಯನ್ನ ಜೀವಂತ ಸುಟ್ಟು ಹತ್ಯೆ

    ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸಕೋಟೆಯ ಖಾಸಗಿ ಆಸ್ಪತ್ರೆಗಳಲ್ಲಿ ಮೂರು ಠಾಣಾ ವ್ಯಾಪ್ತಿಯ ಜನರು ದಾಖಲಾಗಿದ್ದಾರೆ. ಅವಲಹಳ್ಳಿ, ನಂದಗುಡಿ ಹಾಗೂ ಹೊಸಕೋಟೆ ಠಾಣಾ ವ್ಯಾಪ್ತಿಯ ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅಸ್ವಸ್ಥತೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೊಸಕೋಟೆ ಠಾಣೆ ಪೊಲೀಸರು ಸದ್ಯ ಅಸ್ವಸ್ಥಗೊಂಡವರ ಮಾಹಿತಿ ಕಲೆ ಹಾಕುತ್ತಿದ್ದಾರೆ. ಆದರೆ ತಾಲೂಕು ಆರೋಗ್ಯಾಧಿಕಾರಿಗಳಿಂದ ಪೊಲೀಸರಿಗೆ ಯಾವುದೇ ಮಾಹಿತಿ ಇಲ್ಲ. ಸದ್ಯ ಎಲ್ಲಾ ಖಾಸಗಿ ಆಸ್ಪತ್ರೆಗಳಿಂದ ಅಸ್ವಸ್ಥತೆಗೆ ಕಾರಣ ಏನು ಎಂಬ ಮಾಹಿತಿಯನ್ನು ತಾಲೂಕು ವೈದ್ಯಾಧಿಕಾರಿಗಳು ಪಡೆಯುತ್ತಿದ್ದಾರೆ. ಇದನ್ನೂ ಓದಿ: ಡ್ರಗ್ಸ್ ತೆಗೆದುಕೊಳ್ತಿದ್ದಿದ್ದಕ್ಕೆ ರಿಲೇಷನ್‍ಶಿಪ್ ಬೇಡ ಎಂದಿದ್ದೇನೆ: ಕಾರಿಯಪ್ಪ

    ಈ ಕುರಿತು ಹೊಸಕೋಟೆ ಪ್ರಭಾರ ಟಿಹೆಚ್‌ಒ ಡಾ. ಸುಮಾ ಮಾಹಿತಿ ನೀಡಿದ್ದು, ಸುಮಾರು ನಾಲ್ಕು ಖಾಸಗಿ ಆಸ್ಪತ್ರೆಗಳಲ್ಲಿ 80ಕ್ಕೂ ಹೆಚ್ಚು ಜನ ದಾಖಲಾಗಿದ್ದಾರೆ. ಎಲ್ಲಾ ಸ್ಯಾಂಪಲ್‌ಗಳನ್ನು ಲ್ಯಾಬ್‌ಗೆ ಕಳುಹಿಸಲಾಗಿದೆ. ಇದರ ಬಗ್ಗೆ ಕಾರಣ ಏನು ಎಂಬುದು ಲ್ಯಾಬ್ ವರದಿ ಬಳಿಕ ಗೊತ್ತಾಗಲಿದೆ. ನೀರಿನಿಂದ ಅಥವಾ ಕೆಲವು ದೇವಸ್ಥಾನಗಳಲ್ಲಿ ಪ್ರಸಾದ ಸೇವನೆ ಮಾಡಿರುವ ಬಗ್ಗೆ ಮಾಹಿತಿ ಬಂದಿದೆ. ಇದರ ಬಗ್ಗೆ ಪರಿಶೀಲನೆ ಆಗುತ್ತಿದೆ ಎಂದರು. ಇದನ್ನೂ ಓದಿ: ಆಕ್ಸಿಡೆಂಟ್ ಆಗಿ ಕಟ್ ಆದ ತಲೆ ಮೂರೂವರೆ ಗಂಟೆ ಶೋಧದ ಬಳಿಕ ಸಿಕ್ತು..!

    ಇನ್ನು ಸಿಲಿಕಾನ್ ಸಿಟಿ ಆಸ್ವತ್ರೆಗೆ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು (Health Department officials) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಾ. ನಾಗೇಶ್, ಶನಿವಾರ ಹಾಗೂ ಭಾನುವಾರ ಪ್ರಸಾದ ತಿಂದ ಹಿನ್ನೆಲೆ ಅಸ್ವಸ್ಥರಾಗಿರುವುದು ಪ್ರಾಥಮಿಕ ಮಾಹಿತಿಯಲ್ಲಿ ಕಂಡು ಬಂದಿದೆ. ಎಲ್ಲೆಲ್ಲಿ ಪ್ರಸಾದ ಸೇವಿಸಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದೇವೆ. ನೀರಿನಿಂದಲೂ ಆಗಿರುವ ಶಂಕೆ ವ್ಯಕ್ತವಾಗಿದೆ. ಈ ಎಲ್ಲಾ ಬಗ್ಗೆ ನಮ್ಮ ಆರೋಗ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದೇವೆ. ಈಗಾಗಲೆ 80 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿರುವವರಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಖಾಸಗಿ ಆಸ್ಪತ್ರೆಯಲ್ಲಿರುವವರ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ. ಅಗತ್ಯ ಬಿದ್ದಲ್ಲಿ ಹೆಚ್ಚಿನ ಬೆಡ್ ಹಾಗೂ ಅಂಬುಲೆನ್ಸ್‌ಗಳ ನಿಯೋಜನೆ ಮಾಡಿಕೊಂಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಯುವತಿ ಸಾವು- ಮೃತದೇಹಕ್ಕಾಗಿ ಶೋಧ

  • ಮೋರಿಯಲ್ಲಿ ಮಗುವಿನ ಮೃತದೇಹ ಪತ್ತೆ ಪ್ರಕರಣ – ಅಂತ್ಯಸಂಸ್ಕಾರಕ್ಕೆ ದಿಕ್ಕು ತೋಚದೇ ಬಿಟ್ಟುಹೋಗಿದ್ದ ಪೋಷಕರು

    ಮೋರಿಯಲ್ಲಿ ಮಗುವಿನ ಮೃತದೇಹ ಪತ್ತೆ ಪ್ರಕರಣ – ಅಂತ್ಯಸಂಸ್ಕಾರಕ್ಕೆ ದಿಕ್ಕು ತೋಚದೇ ಬಿಟ್ಟುಹೋಗಿದ್ದ ಪೋಷಕರು

    ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಬಾಶೆಟ್ಟಿಹಳ್ಳಿ ಗ್ರಾಮದ ಮೋರಿಯ ಅಂಚಿನಲ್ಲಿ ಪತ್ತೆಯಾದ ಮೃತ ಹೆಣ್ಣು ಮಗುವಿನ (Child Dead Body) ಪೋಷಕರನ್ನು ಪತ್ತೆ ಮಾಡುವಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

    ಮೃತ ಮಗು ರುಚಿಕುಮಾರಿಯ (1) ತಂದೆ-ತಾಯಿಯನ್ನು ಪ್ರವೇಶ್ ಕುಮಾರ್, ವಿಭಾಕುಮಾರಿ ಎಂದು ಗುರುತಿಸಲಾಗಿದೆ. ಇವರು ಬಿಹಾರ ಮೂಲದವರಾಗಿದ್ದು, ವೀರಾಪುರದಲ್ಲಿ ಕಳೆದ 1 ವಾರದಿಂದ ವಾಸವಿದ್ದರು. ಮಗುವಿಗೆ ಹೃದ್ರೋಗ ಸಮಸ್ಯೆ ಇದ್ದು, ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿ ಬಳಿಯ ಸತ್ಯಸಾಯಿಬಾಬಾ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಗೆ ಪ್ರಯತ್ನಿಸಿದ್ದಾರೆ. ಆದರೆ ಅಲ್ಲಿ ಚಿಕಿತ್ಸೆ ಸಾಧ್ಯವಿಲ್ಲದಾಗ ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲು ತಿಳಿಸಿದರು. ಆಗ ಮರಳಿ ವೀರಾಪುರಕ್ಕೆ ಬರುವ ವೇಳೆ ಮಗು ಸಾವಿಗೀಡಾಗಿದೆ.

    ಈ ವೇಳೆ ಮಗುವಿನ ಅಂತ್ಯಕ್ರಿಯೆ ಮಾಡುವುದರ ಬಗ್ಗೆ ದಿಕ್ಕು ತೋಚದ ತಂದೆ ಮೋರಿ ಕೆಳಗೆ ಮಗುವಿನ ಮೃತದೇಹವನ್ನು ಬಿಟ್ಟು ಹೋಗಿದ್ದರು. ಮೃತ ಮಗುವಿನ ಫೋಟೋ ಬಳಸಿ ಕೈಗಾರಿಕಾ ಪ್ರದೇಶ, ಬಾಶೆಟ್ಟಿಹಳ್ಳಿ ವ್ಯಾಪ್ತಿಯಲ್ಲಿ ಮಗುವಿನ ಪೋಷಕರನ್ನು ಪತ್ತೆಗೆ ಪೊಲೀಸರು ತೀವ್ರ ತಲಾಶ್ ನಡೆಸಿದ್ದರು. ಈ ವೇಳೆ ಆಸ್ಪತ್ರೆಯಲ್ಲಿ ಮಗುವಿನ ಬಗ್ಗೆ ಮಾಹಿತಿ ದೊರೆತಿದ್ದು, ಸಿಸಿಟಿವಿ ಕ್ಯಾಮೆರಾ ದೃಶ್ಯವನ್ನು ಆಧರಿಸಿ ಪೊಲೀಸರು ಪೋಷಕರನ್ನು ಪತ್ತೆ ಮಾಡಿದ್ದಾರೆ.

    ಬೆಂಗಳೂರು-ಹಿಂದೂಪುರ ರಾಜ್ಯ ಹೆದ್ದಾರಿಯ ಬಾಶೆಟ್ಟಿಹಳ್ಳಿ ಗ್ರಾಮದ ಅಂಚಿನಲ್ಲೇ ಇರುವ ಮೋರಿಯ ತಳದಲ್ಲಿ ಶಾಲು ಹೊದಿಸಿ ಮಲಗಿಸಿರುವ ಸ್ಥಿತಿಯಲ್ಲಿ ಒಂದೂವರೆ ವರ್ಷ ಹೆಣ್ಣು ಮಗುವಿನ ಮೃತದೇಹ ಸೋಮವಾರ ಪತ್ತೆಯಾಗಿತ್ತು. ಇದನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಶವಾಗಾರಕ್ಕೆ ಸಾಗಿಸಿ ಪೋಷಕರ ಪತ್ತೆಗೆ ಮುಂದಾಗಿದ್ದರು. ಇದನ್ನೂ ಓದಿ: ಪ್ಯಾಕಿಂಗ್ ಆಹಾರ ಉತ್ಪನ್ನಗಳಿಂದ ಜೀರ್ಣಾಂಗಕ್ಕೆ ಹಾನಿ- ಏಮ್ಸ್ ವೈದ್ಯರಿಂದ ಹೊಸ ವರದಿ

    ಕೊನೆಗೆ ಮೃತ ಮಗುವಿನ ಪೋಷಕರನ್ನು ಪತ್ತೆ ಮಾಡುವುದು ಪೊಲೀಸರಿಗೂ ದೊಡ್ಡ ಸವಾಲಾಗಿತ್ತು. ಅಲ್ಲದೆ ಮಗುವಿನ ಮೃತದೇಹ ಮಲಗಿಸಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವುದರಿಂದ ಮಗು ಮೃತಪಟ್ಟ ನಂತರವೇ ಇಲ್ಲಿ ತಂದು ಇಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದರು.

    ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ಬಿಹಾರ ಮೂಲದ ದಂಪತಿ ಮೃತ ಮಗುವಿನ ಅಂತ್ಯಸಂಸ್ಕಾರ ನಡೆಸಲು ಪ್ರಯತ್ನ ನಡೆಸಿದ್ದಾರೆ. ಅದರೆ ಒಂದು ವಾರದ ಹಿಂದಷ್ಟೇ ವೀರಾಪುರಕ್ಕೆ ಬಂದಿದ್ದ ಕಾರಣ ದಿಕ್ಕು ತೋಚದೆ ಯಾರದೋ ಮಾತು ಕೇಳಿ ಮೋರಿ ಕೆಳಗೆ ಮಗುವನ್ನು ಬಿಟ್ಟು ಹೋಗಿದ್ದರು. ಈಗ ಅವರ ಸಂಬಂಧಿಕರನ್ನೆಲ್ಲಾ ಕರೆಸಿದ್ದು, ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ, ಮಗುವಿನ ಅಂತ್ಯಕ್ರಿಯೆ ನಡೆಸಲು ವ್ಯವಸ್ಥೆ ನಾವೇ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜಮೀನು ವಿವಾವದವೇ ಕರ್ಣಿ ಸೇನಾ ಮುಖ್ಯಸ್ಥನ ಕೊಲೆಗೆ ಕಾರಣವಾಯ್ತಾ?

  • ನೀನು‌ ಎಷ್ಟು ಟ್ಯಾಕ್ಸ್  ಕಟ್ತೀಯಾ ಹೇಳು – ರೈತನ ವಿರುದ್ಧ ಸುರೇಶ್‌ ಗರಂ

    ನೀನು‌ ಎಷ್ಟು ಟ್ಯಾಕ್ಸ್ ಕಟ್ತೀಯಾ ಹೇಳು – ರೈತನ ವಿರುದ್ಧ ಸುರೇಶ್‌ ಗರಂ

    ರಾಮನಗರ: ಬರ ಪರಿಹಾರ ಕೇಳಿದ ರೈತನ (Farmer) ಮೇಲೆ ಬೆಂಗಳೂರು ಗ್ರಾಮಾಂತರ (Bengaluru Rural) ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ (DK Suresh) ಗರಂ ಆಗಿದ್ದಾರೆ.

    ಮಾಗಡಿ (Magadi) ತಾಲೂಕಿನ ಜನಸಂಪರ್ಕ ಸಭೆಯಲ್ಲಿ ಬರ (Drought) ಪರಿಹಾರದ ಕುರಿತ ಸದನದಲ್ಲಿ ಚರ್ಚೆ ಮಾಡಿ ಹೆಚ್ಚಿನ ಪರಿಹಾರ ಕೊಡಿಸಿ ಎಂದು ರೈತ ಹೇಳಿದ್ದಕ್ಕೆ ಸುರೇಶ್ ಸಿಟ್ಟಾಗಿದ್ದಾರೆ.

     

    ಸರ್ಕಾರ 5 ಕೆ.ಜಿ ಅಕ್ಕಿ ಕೊಡುತ್ತಿದೆ. ಇನ್ನುಳಿದ 5 ಕೆಜಿಗೆ ಹಣ ಕೊಡುತ್ತಿದೆ. ರೈತರ ಪಂಪ್ ಸೆಟ್‌ಗೆ ವಿದ್ಯುತ್ ಖರೀದಿ ಮಾಡುತ್ತಿದೆ. ನಾವು ಪ್ರತಿ ದಿನ ಬೆಳಗ್ಗೆ ಜೆಡಿಎಸ್‌, ಬಿಜೆಪಿಯವರ ಕೈಯಲ್ಲಿ ಬೈಸಿಕೊಳ್ಳುತ್ತಿದ್ದೇವೆ. ನೀನಿನ್ನೂ ಅದು ಕೊಡಿ, ಇದು ಕೊಡಿ ಅಂತಿದ್ದೀಯಾ. ನೀನು‌ ಎಷ್ಟು ಟ್ಯಾಕ್ಸ್ ಕಟ್ಟುತ್ತಿದ್ದೀಯ ಹೇಳು? ನೀನು ಟ್ಯಾಕ್ಸ್ ಕಟ್ಟುವುದಿಲ್ಲ ಎಂದು ಗರಂ ಆದರು.  ಇದನ್ನೂ ಓದಿ: ನ್ಯೂಯಾರ್ಕ್‌ನಲ್ಲೂ ಯೋಗಿ ಸರ್ಕಾರದ ಬುಲ್ಡೋಜರ್ ದಾಳಿ – ಕಟ್ಟಡಗಳು ಧ್ವಂಸ

    ತೆರಿಗೆ (Tax) ಕಟ್ಟದವರಿಗೆ ಯಾಕೆ ಉಚಿತ ನೀಡಬೇಕು ಎಂದು ಮೋದಿ (Narendra Modi) ಕೇಳುತ್ತಿದ್ದಾರೆ. ಮೋದಿ ಯಾರ ಹತ್ತಿರವೂ ಮಾತನಾಡುವುದಿಲ್ಲ. ಅವರು ಹೇಳಿದನ್ನು ನೀನು ಕೇಳಿಕೊಳ್ಳಬೇಕು. ನಿನಗೆ ಮೋದಿಯೇ ಸರಿ ಅಂದರೆ ನಾನು‌ ಏನು‌ ಮಾಡಲು ಆಗುತ್ತೆ? ವ್ಯವಸ್ಥೆಯನ್ನು ಅರ್ಥ ಮಾಡಿಕೊಂಡು ಬೇಡಿಕೆಯನ್ನು ಇಡಬೇಕು ಎಂದರು.

     

    ಎಲ್ಲರಿಗೂ ಆಸೆ ಇದೆ, ಏನು ಕೊಟ್ಟರೂ ಸಾಲುವುದಿಲ್ಲ. ಸರ್ಕಾರಿ ನೌಕರರಿಗೂ ಸಮಾಧಾನ ಇಲ್ಲ. ಪಂಚಾಯತ್ ಸದಸ್ಯರು, ಶಾಸಕರು ಸಮಾಧಾನವಾಗಿಲ್ಲ. ಬೆಳಗ್ಗೆ ಎದ್ದು ಯಾರು ದುಡಿಮೆ ಮಾಡುತ್ತಾನೋ ಅವನೇ ಸಮಾಧಾನವಾಗಿದ್ದಾನೆ. ಇವತ್ತಿನ‌ ಪರಿಸ್ಥಿತಿ ಬೇರೆ ದಿಕ್ಕಿನಲ್ಲಿ ಸಾಗುತ್ತಿದೆ. ನೀನು ನೆಮ್ಮದಿಯಾಗಿಲ್ಲ, ನಿನಗೆ ದಿನವೂ ಆಸೆ ಜಾಸ್ತಿ ಆಗುತ್ತಿದೆ ಎಂದು ಕಿಡಿಕಾರಿದರು.

  • ಸ್ನೇಹಿತರ ಮನೆಗೆ ಹಬ್ಬಕ್ಕೆ ಬಂದಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಸಾವು

    ಸ್ನೇಹಿತರ ಮನೆಗೆ ಹಬ್ಬಕ್ಕೆ ಬಂದಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಸಾವು

    ಆನೇಕಲ್: ಸ್ನೇಹಿತರ ಮನೆಗೆ ಹಬ್ಬಕ್ಕೆಂದು ಬಂದಿದ್ದ ವ್ಯಕ್ತಿ ರೈಲು ಹಳಿ (Track) ದಾಟುವ ಸಂದರ್ಭ ರೈಲಿಗೆ (Train) ಸಿಲುಕಿ ಸಾವನ್ನಪ್ಪಿದ ಘಟನೆ ಬೆಂಗಳೂರು (Bengaluru) ಹೊರವಲಯದ ಆನೇಕಲ್ (Anekal) ಸಮೀಪದ ಅರವಂಟಿಗೆಪುರ ರೈಲ್ವೆ ಗೇಟ್ ಬಳಿ ನಡೆದಿದೆ.

    ಚಿತ್ರದುರ್ಗ (Chitradurga) ಮೂಲದ ರಾಮು (40) ಮೃತ ವ್ಯಕ್ತಿ. ಬೊಮ್ಮಸಂದ್ರದ (Bommasandra) ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ರಾಮು ಮಂಗಳವಾರ ಸ್ನೇಹಿತರ ಜೊತೆಗೆ ಹಬ್ಬಕ್ಕೆ ಬಂದಿದ್ದರು. ರೈಲ್ವೆ ಹಳಿ ಸಮೀಪವೇ ಸಂಜೆ ಸ್ನೇಹಿತರ ಜೊತೆಗೆ ಎಣ್ಣೆ ಪಾರ್ಟಿ ಮಾಡಿದ್ದು, ಕುಡಿದ ಮತ್ತಿನಲ್ಲಿ ರೈಲ್ವೆ ಟ್ರ‍್ಯಾಕ್ ದಾಟಲು ಹೋಗಿ ಜೀವಕ್ಕೆ ಕುತ್ತು ತಂದುಕೊಂಡಿದ್ದಾರೆ. ಇದನ್ನೂ ಓದಿ: ಮಡಿಕೇರಿ ದಸರಾ ಶೋಭಯಾತ್ರೆ ವೇಳೆ ಅವಘಡ – ಇಬ್ಬರಿಗೆ ಗಾಯ

    ರೈಲು ಬರುತ್ತಿರುವುದನ್ನು ಗಮನಿಸದೇ ರಾಮು ಹಳಿ ದಾಟಲು ಯತ್ನಿಸಿದ್ದು, ಈ ವೇಳೆ ರೈಲು ಡಿಕ್ಕಿ ಹೊಡೆದು ದೇಹ ಛಿದ್ರ ಛಿದ್ರವಾಗಿದೆ. ಮೃತ ದೇಹವನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಈ ಕುರಿತು ಬೈಯಪ್ಪನಹಳ್ಳಿ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಾಜಿ ಸಿಎಂ ಹರೀಶ್ ರಾವತ್ ಇದ್ದ ಕಾರು ಡಿವೈಡರ್‌ಗೆ ಡಿಕ್ಕಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದನಗಳ ಮೈ ತೊಳೆಯಲು ಹೋದ ರೈತ ನೀರು ಪಾಲು

    ದನಗಳ ಮೈ ತೊಳೆಯಲು ಹೋದ ರೈತ ನೀರು ಪಾಲು

    ದೊಡ್ಡಬಳ್ಳಾಪುರ: ದನಗಳ ಮೈ ತೊಳೆಯಲು ನೀರಿಗಿಳಿದಿದ್ದ ರೈತನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ಒಡೇರಹಳ್ಳಿ ಸಮೀಪದ ಜಾಲಿಕಟ್ಟೆಯಲ್ಲಿ ಸಂಭವಿಸಿದೆ.

    ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ರಾಮಪುರ ಗ್ರಾಮದ ಕುಮಾರ್ (44) ಮೃತ ರೈತ. ಒಡೇರಹಳ್ಳಿ ಸಮೀಪದ ಜಾಲಿಕಟ್ಟೆಯಲ್ಲಿ ದನಗಳ ಮೈ ತೊಳೆಯಲು ನೀರಿಗಿಳಿದಿದ್ದ ವೇಳೆ ಕಾಲು ಜಾರಿ ಬಿದ್ದು ಸಾವನಪ್ಪಿದ್ದಾರೆ ಎನ್ನಲಾಗಿದೆ. ಮಂಗಳವಾರ ಮಧ್ಯಾಹ್ನ 06 ದನಗಳ ಮೈತೊಳೆಯಲು ತೆರಳಿದ್ದ ವೇಳೆ ಘಟನೆ ಸಂಭವಿಸಿದ್ದು, ದನಗಳು ಮನೆಗೆ ಹಿಂದಿರುಗಿ ಬಂದರೂ ಕುಮಾರ್ ಮನೆಗೆ ಬಾರದೇ ಇರುವುದರಿಂದ ಕುಟುಂಬಸ್ಥರು ಆತಂಕಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪ್ರಿಯತಮೆಯ ಬೆತ್ತಲೆ ಫೋಟೋ ಸ್ನೇಹಿತರೊಂದಿಗೆ ಹಂಚಿಕೊಳ್ತಿದ್ದ ವಿಕೃತ ಕಾಮಿ ಅಂದರ್

    ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಎಂ.ಆರ್.ಹರೀಶ್ ನೇತೃತ್ವದಲ್ಲಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯವರು ಸ್ಥಳಕ್ಕೆ ತೆರಳಿ ಹುಡುಕಾಟ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ಮೃತನಿಗೆ ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದು, ಮಡದಿ ಆರು ತಿಂಗಳ ಗರ್ಭಿಣಿ ಎನ್ನಲಾಗಿದೆ. ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸಿದೆ. ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ದುರಂತ- ನಾಲ್ವರು ಅಧಿಕಾರಿಗಳ ಅಮಾನತು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]