Tag: bengaluru rural

  • 8 ಸಾವಿರ ಕೋಟಿಯಲ್ಲಿ ಪ್ರಾರಂಭವಾದ ಎತ್ತಿನಹೊಳೆ ಯೋಜನೆ ಈಗ 23 ಸಾವಿರ ಕೋಟಿ ತಲುಪಿದೆ: ಹೆಚ್.ಡಿ.ಕೆ

    8 ಸಾವಿರ ಕೋಟಿಯಲ್ಲಿ ಪ್ರಾರಂಭವಾದ ಎತ್ತಿನಹೊಳೆ ಯೋಜನೆ ಈಗ 23 ಸಾವಿರ ಕೋಟಿ ತಲುಪಿದೆ: ಹೆಚ್.ಡಿ.ಕೆ

    ನೆಲಮಂಗಲ: 8 ಸಾವಿರ ಕೋಟಿಯಲ್ಲಿ ಪ್ರಾರಂಭವಾದ ಎತ್ತಿನಹೊಳೆ ಯೋಜನೆ ಈಗ 23 ಸಾವಿರ ಕೋಟಿ ತಲುಪಿದೆ ಮುಂದೆ 50 ಸಾವಿರ ಕೋಟಿ ಆದರು ಆಶ್ಚರ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

    ನೆಲಮಂಗಲ ತಾಲೂಕು ಕೆಂಗಲ್ ಗ್ರಾಮದಲ್ಲಿ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ಹಾಗೂ ಶ್ರೀ ಕೃಷ್ಣ ರುಕ್ಮಿಣಿ ಅಮ್ಮನವರ ದೇವಾಲಯದ ಜೀರ್ಣೊದ್ದರ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಭಾಗವಹಿಸಿದರು. ಈ ವೇಳೆ ಮಾತನಾಡಿದ ಅವರು, ಬಯಲು ಸೀಮೆಗೆ ಕುಡಿಯುವ ನೀರು ಸರಬರಾಜು ಮಾಡುವ ಎತ್ತಿನಹೊಳೆ ಯೋಜನೆ ಬಗ್ಗೆ ಮಾತನಾಡಿದ ಅವರು, 3 ವರ್ಷದಲ್ಲಿ ಪೂರ್ಣವಾಗ ಬೇಕಿದ್ದ ಯೋಜನೆ 12 ವರ್ಷ ಆದರು ಪೂರ್ಣವಾಗಿಲ್ಲ ಎಂದು ಬೇಸರವನ್ನ ವ್ಯಕ್ತಪಡಿಸಿದ್ದಾರೆ. 8 ಸಾವಿರ ಕೋಟಿಯಲ್ಲಿ ಪ್ರಾರಂಭವಾದ ಎತ್ತಿನಹೊಳೆ ಯೋಜನೆ ಈಗ 23 ಸಾವಿರ ಕೋಟಿ ತಲುಪಿದೆ, ಮುಂದೆ 50 ಸಾವಿರ ಕೋಟಿ ಆದರು ಆಶ್ಚರ್ಯವಿಲ್ಲ ಎಂದರು. ಇದನ್ನೂ ಓದಿ: ಬಳ್ಳಾರಿಗೆ ಗೌಪ್ಯವಾಗಿ ಎಂಟ್ರಿ ಕೊಟ್ರು ಜನಾರ್ದನ ರೆಡ್ಡಿ – ಕುಟುಂಬಸ್ಥರ ಜೊತೆ ವರಮಹಾಲಕ್ಷ್ಮಿ ಹಬ್ಬ ಆಚರಣೆ

    ಎತ್ತಿನಹೊಳೆ ಯೋಜನೆ ಪ್ರಾರಂಭವಾಗಿದ್ದು 8 ಸಾವಿರ ಕೋಟಿಯಲ್ಲಿ. ಮೊದಲಿಗೆ ದೇವರಾಯನದುರ್ಗದಲ್ಲಿ 10 ಟಿಎಂಸಿ ಸಾಮಾಥ್ರ್ಯದ ಜಲಾಶಯ ನಿರ್ಮಾಣದ ಬಗ್ಗೆ ಹೇಳಿದರು, ದೇವರಾಯನದುರ್ಗದಲ್ಲಿ ಜಲಾಶಯ ನಿರ್ಮಾಣ ಕಷ್ಟ ಸಾಧ್ಯವೆಂದು ಕೊರಟಗೆರೆ ಬಳಿಯ ಬೈರಗೊಂಡ್ಲು ಬಳಿ 5 ಟಿಎಂಸಿ ಸಾಮಾಥ್ರ್ಯದ ಜಲಾಶಯವನ್ನ ನಿರ್ಮಾಣ ಮಾಡಲಾಗುತ್ತಿದೆ ಎಂದರು. ಇದನ್ನೂ ಓದಿ: 5 ವರ್ಷ ಸ್ವತಂತ್ರ ಸರ್ಕಾರ ಬಂದ್ರೆ ದೇಶ ನೋಡುವಂತ ಕ್ರಾಂತಿಕಾರಿ ಬದಲಾವಣೆ ಆಗುತ್ತೆ: ಎಚ್.ಡಿ.

    ಈಗ 2 ಟಿಎಂಸಿ ಜಲಾಶಯಕ್ಕೆ ಇಳಿಸಿಕೊಂಡಿದ್ದಾರೆ. ಜಲಾಶಯದ ಬಳಿ ಯಾವುದೇ ಕಾಮಾಗಾರಿ ನಡೆಯದಿದ್ದರೂ ಮುಖ್ಯಮಂತ್ರಿ ಬದಲಾಗುವ ಹಿಂದಿನ ದಿನ 1500 ಕೋಟಿಗಳ ಮತ್ತೊಂದು ಯೋಜನೆಗೆ ಅಂಕಿತ ಹಾಕಲಾಗಿದೆ. ನಾನು ಮೊದಲೇ ಹೇಳಿದಂತೆ ಎತ್ತಿನಹೊಳೆ ಯೋಜನೆ ರಾಜಕಾರಣಿಗಳ ಮತ್ತು ಅಧಿಕಾರಿಗಳ ಹಣ ಲೂಟಿ ಮಾಡುವ ಯೋಜನೆಯಾಗಿದೆ. ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ನೀರು ತರುವುದ್ದಾಗಿ ಹೇಳಿ ಜನಗಳಿಗೆ ಟೋಪಿ ಹಾಕಿ ಹಣವನ್ನ ಲೂಟಿ ಮಾಡಲಾಗುತ್ತಿದೆ. 3 ವರ್ಷದಲ್ಲಿ ಪೂರ್ಣಗೊಳಿಸುವುದ್ದಾಗಿ ಹೇಳಿದರು 12 ವರ್ಷವಾದರು ಕಾಮಾಗಾರಿ ಪೂರ್ಣಗೊಳಿಸುವ ಕೆಲಸ ಮಾಡಿಲ್ಲ, 8 ಸಾವಿರದಿಂದ 23 ಸಾವಿರ ಕೋಟಿಗೆ ಹೋಗಿರುವ ಯೋಜನೆ ಮುಂದೆ 50 ಸಾವಿರ ಕೋಟಿಗೂ ಹೋದರು ಆಶ್ಚರ್ಯ ವಿಲ್ಲ ಎಂದು ಯೋಜನೆಯ ಬಗ್ಗೆ ಬೇಸರವನ್ನ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ.

  • ಮೆಕ್ಕಾ ಮಸೀದಿ, ಈದ್ಗಾ ಭೂಮಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಿಂತನೆ

    ಮೆಕ್ಕಾ ಮಸೀದಿ, ಈದ್ಗಾ ಭೂಮಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಿಂತನೆ

    ನೆಲಮಂಗಲ: ಮುಷ್ತಾಕ್ ಷಾ ಮಕಾನ್ ಮೆಕ್ಕಾ ಮಸೀದಿ ಮತ್ತು ಈದ್ಗಾಗೆ ಸುಮಾರು 53 ವರ್ಷಗಳ ಇತಿಹಾಸವಿದೆ. ಬೆಂಗಳೂರು ಹೊರವಲಯ ನೆಲಮಂಗಲ ನಗರದ ಕುಣಿಗಲ್ ಬೈಪಾಸ್ ಬಳಿಯ ಈ ಭೂಮಿಯಲ್ಲಿ ಸಮುದಾಯದ ಜನರಿಗೆ ಹಾಗೂ ಮುಂದಿನ ಪೀಳಿಗೆಗೆ ಅನುಕೂಲವಾಗುವಂತೆ ವಿವಿಧ ಯೋಜನೆ ಕನಸಿನೊಂದಿಗೆ ಮುಖಂಡರು ಚಿಂತನೆಯನ್ನ ನಡೆಸಿದ್ದಾರೆ.

    1968ರ ಫೆಬ್ರವರಿ 8 ರಂದು ಮೈಸೂರು ಸಂಸ್ಥಾನದ ಗೆಜೆಟ್‍ನಲ್ಲಿ ಪ್ರಕಟಗೊಂಡು 3 ಎಕರೆ 10 ಗುಂಟೆ ಜಮೀನನ್ನು ವಕ್ಫ್ ಬೋರ್ಡ್‍ಗೆ ನೀಡಲಾಯಿತು. ಕೆಲವರು ದುರುದ್ದೇಶದಿಂದ ಬೆಲೆ ಬಾಳುವ ಈ ಭೂಮಿಯನ್ನ ಕಬಳಿಸಲು ಮುಂದಾಗಿದ್ದರು. ಹೀಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳು ಸಂಕ್ಷಿಪ್ತವಾಗಿ ಪರಿಗಣಿಸಿ ಸಮುದಾಯದ ಜನರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲು ಈ ವೇಳೆ ಮುಖಂಡರು ಮನವಿ ಮಾಡಿದರು.

    ಮುಂದೆ ಎಲ್ಲರ ಸಹಮತದಿಂದ ಇಲ್ಲಿ ಸುಮಾರು 2 ಸಾವಿರ ಮಂದಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಮೈದಾನ ಅದರ ಸುತ್ತಮುತ್ತಲಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಟ್ಟು ಹಸಿರೀಕಣ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಮಸೀದಿಯ ಆವರಣದಲ್ಲಿ 50 ಹಾಸಿಗೆಗಳ ಆಸ್ಪತ್ರೆ, ಶಾಲೆ, ಕಲ್ಯಾಣ ಮಂಟಪ ನಿರ್ಮಿಸುವ ಯೋಜನೆಯನ್ನು ದಾನಿಗಳ ನೆರವು ಸರ್ಕಾರದ ಅನುದಾನವನ್ನು ಪಡೆದು ಜಾರಿಗೊಳಿಸಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ಮಂಗಳೂರಿನಲ್ಲಿ ನಡೀತಿರುವ ಭಯೋತ್ಪಾದಕ ಚಟುವಟಿಕೆಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ: ಅರಗ ಜ್ಞಾನೇಂದ್ರ

    ಈಗಾಗಲೇ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಯಡಿ ನೆರವು ನೀಡುವ ಆಶ್ವಾಸನೆಯನ್ನು ಮುಖ್ಯಮಂತ್ರಿಗಳು ನೀಡಿದ್ದು, ಸಮಾಜದ ಬಂಧುಗಳು ನೆರವಿನ ಹಸ್ತ ಚಾಚಿರುವುದು ನಮ್ಮ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಆನೆ ಬಲ ಬಂದಂತಾಗಿದೆ. ಈ ಅಭಿವೃದ್ಧಿ ಕಾರ್ಯಕ್ರಮದ ಬಗ್ಗೆ ಇತ್ತೀಚೆಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರನ್ನು ಭೇಟಿ ಮಾಡಿ ಚರ್ಚಿಸಲಾಗಿದೆ ಎಂದರು. ಇದನ್ನೂ ಓದಿ: ನಮ್ಮ ಪಾರ್ಟಿಗೆ ಸಿದ್ಧಾಂತವಿದೆ, ಬೇರೆಯವರಂತೆ ಮಾಡಲ್ಲ-ಸತೀಶ್ ಜಾರಕಿಹೊಳಿ

    ಈ ವೇಳೆ ಮಾಜಿ ಶಾಸಕ ಎಂ.ನಾಗರಾಜ್, ನೆಲಮಂಗಲ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಸ್.ಮಲ್ಲಯ್ಯ, ಶಾವೀಜ್ ಅಹಮದ್ ಅಧ್ಯಕ್ಷರು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ, ಸೈಯದ್ ಅಹಮದ್ ಜಿಲ್ಲಾಧ್ಯಕ್ಷರು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ, ಅಬ್ದುಲ್ ಕರೀಂ ಷರೀಪ್ ಅಧ್ಯಕ್ಷರು, ಮೊಹಮ್ಮದ್ ಸಾಧಿಕ್ ಅಹಮದ್ ಪ್ರಧಾನ ಕಾರ್ಯದರ್ಶಿ, ಸಲೀಲ್ ಉಪಾಧ್ಯಕ್ಷರು ಸೇರಿದಂತೆ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

  • ಗ್ರಾಮೀಣ ಜನರ ನೆರವಿಗೆ ನಿಂತ ಸಿದ್ದಾರ್ಥ ಆಸ್ಪತ್ರೆ

    ಗ್ರಾಮೀಣ ಜನರ ನೆರವಿಗೆ ನಿಂತ ಸಿದ್ದಾರ್ಥ ಆಸ್ಪತ್ರೆ

    ನೆಲಮಂಗಲ: ಗ್ರಾಮೀಣ ಭಾಗದ ಜನರ ಆರೋಗ್ಯದ ನೆರವಿಗೆ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಒಡೆತನದ ಸಿದ್ದಾರ್ಥ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಉನ್ನತೀಕರಿಸಿದ ವೈದ್ಯಕೀಯ ಉಪಕರಣಗಳನ್ನು ಲೋಕಾರ್ಪಣೆ ಮಾಡಲಾಯಿತು.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಟಿ ಬೇಗೂರು ಬಳಿಯ ಸಿದ್ದಾರ್ಥ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾಕ್ಟರ್ ಜಿ ಪರಮೇಶ್ವರ್ ಲೋಕಾರ್ಪಣೆ ಮಾಡಿದರು. ಈ ವೇಳೆ ಬಡ ಹಾಗೂ ಗ್ರಾಮೀಣ ಜನರ ಅನುಕೂಲಕ್ಕಾಗಿ, ಸಿಟಿ ಸ್ಕ್ಯಾನ್,Tomography. 800ma.x – Ra ಉಪಕರಣಗಳು ಇದ್ದು, ಕೊರೊನಾ ಮೂರನೇ ಅಲೆಯ ಬಗ್ಗೆ ಎಚ್ಚೆತ್ತಿರುವ ಆಡಳಿತ ಮಂಡಳಿ ಕೊರೊನಾ RTPCR ಟೆಸ್ಟ್ ದೃಢಪಡಿಸಲು ಈ ಉಪಕರಣಗಳು ಸಹಾಯವಾಗಲಿದೆ. ಇದನ್ನೂ ಓದಿ:  ಬಸ್ ನಿಲ್ದಾಣದಲ್ಲಿ ಸಿಕ್ಕ ಚೀಲದಲ್ಲಿ ಸಿಕ್ತು ನವಜಾತ ಶಿಶು

    ಕೊರೊನಾ ರೋಗಿಗಳಿಗೆ ಬೇಕಾಗಿರುವ ಬೆಡ್ ಹಾಗೂ ಆಕ್ಸಿಜನ್ ವೆಂಟಿಲೇಟರ್ ಸಮಸ್ಯೆ ನೀಗಿಸಲು ಸಿದ್ದಾರ್ಥ ಸಂಸ್ಥೆ ಮುಂದಾಗಿದೆ. 30 ಸೆಕೆಂಡ್‍ನಲ್ಲಿ ಸಿಟಿ ಸ್ಕ್ಯಾನ್ ಮೂಲಕ ಕೊರೊನಾ ಸೋಂಕು ಧೃಡಪಡಿಸಲು ಸಹಕಾರಿಯಾಗುವಂತೆ ಅತ್ಯಾಧುನಿಕ ಉಪಕರಣಗಳು ಇದ್ದು, 50 ಕಿಲೋಮೀಟರ್ ವ್ಯಾಪ್ತಿಯಲ್ಲಿ ಇರುವ ಏಕೈಕ ಆಧುನಿಕ ಉಪಕರಣ ಕೇಂದ್ರವಾಗಿ ಸಿದ್ಧಾರ್ಥ ಆಸ್ಪತ್ರೆ ಹೊರಹೊಮ್ಮಿದೆ. ಈ ಸಂದರ್ಭದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಜಿ ಪರಮೇಶ್ವರ್, ನೆಲಮಂಗಲ ಶಾಸಕ ಡಾ, ಶ್ರೀನಿವಾಸ್ ಮೂರ್ತಿ, ಸಿದ್ದಾರ್ಥ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಆಡಳಿತ ಮಂಡಳಿ ಅಧಿಕಾರಿಗಳು ಹಾಜರಿದ್ದರು.

  • ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳ ಆರೋಗ್ಯ ವೃದ್ಧಿಗೆ ಕ್ರಮ: ಡಾ.ಕೆ.ಸುಧಾಕರ್

    ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳ ಆರೋಗ್ಯ ವೃದ್ಧಿಗೆ ಕ್ರಮ: ಡಾ.ಕೆ.ಸುಧಾಕರ್

    ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳನ್ನು ಗುರುತಿಸಿದ್ದು, ಅವರ ಆರೋಗ್ಯ ವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

    ಜಿಲ್ಲೆಯಲ್ಲಿ ಕೋವಿಡ್ ಸ್ಥಿತಿಗತಿ ಪರಿಶೀಲನೆ ಸಂಬಂಧ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ತಾಂತ್ರಿಕ ಸಲಹಾ ಸಮಿತಿ ಸಲಹೆಯಂತೆ ಸಂಭವನೀಯ ಕೋವಿಡ್ ಮೂರನೇ ಅಲೆ ನಿಯಂತ್ರಣಕ್ಕೆ ಸಿದ್ಧತೆ ನಡೆದಿದೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಕಡಿಮೆ ಇದ್ದು, ಈವರೆಗೆ 148 ಪ್ರಕರಣ ಕಂಡುಬಂದಿದೆ. ಹೆಚ್ಚಿನವರನ್ನು ಕೋವಿಡ್ ಕೇರ್ ಕೇಂದ್ರಕ್ಕೆ ಸೇರಿಸಬೇಕು, ಪರೀಕ್ಷೆ ಕಡಿಮೆ ಮಾಡುವುದು ಬೇಡ ಎಂದು ಸೂಚಿಸಲಾಗಿದೆ. ಹಲವು ಮಕ್ಕಳಿಗೆ ಆರೋಗ್ಯ ತಪಾಸಣೆ ಮಾಡಿದ್ದು, ಅವರಲ್ಲಿ ಶ್ವಾಸಕೋಶದ ತೊಂದರೆ, ರಕ್ತಹೀನತೆ, ಮೂತ್ರಪಿಂಡದ ಸಮಸ್ಯೆ, ಅಪೌಷ್ಠಿಕತೆ ಕಂಡುಬಂದಿದೆ. ಹೀಗೆ ಗುರುತಿಸಿದ ಮಕ್ಕಳಿಗೆ ಅಗತ್ಯ ಚಿಕಿತ್ಸೆ ನೀಡಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

    ಇನ್ನು ಒಂದೇ ವಾರದಲ್ಲಿ ‘ಆರೋಗ್ಯ ನಂದನ’ ಕಾರ್ಯಕ್ರಮವನ್ನು ಮುಖ್ಯಮಂತ್ರಿಯವರು ಉದ್ಘಾಟಿಸಲಿದ್ದು, ರಾಜ್ಯದ ಒಂದೂವರೆ ಕೋಟಿ ಮಕ್ಕಳಿಗೆ ಆರೋಗ್ಯ ತಪಾಸಣೆ ಮಾಡಲಾಗುವುದು. ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಿಗೆ ವಿಶೇಷ ಆರೈಕೆ, ಚಿಕಿತ್ಸೆ ನೀಡಿ ಅವರನ್ನು ರಕ್ಷಿಸುವ ಕೆಲಸ ಮಾಡುತ್ತೇವೆ. ಜಿಲ್ಲೆಯಲ್ಲಿ 48% ರಷ್ಟು ಜನರಿಗೆ ಮೊದಲ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. ಹೆಚ್ಚು ಲಸಿಕೆಯನ್ನು ಇಲ್ಲಿಗೆ ಪೂರೈಕೆ ಮಾಡಿ ವೇಗ ನೀಡಲಾಗುವುದು. ಡಿಸೆಂಬರ್ ಅಂತ್ಯದೊಳಗೆ ಎಲ್ಲರಿಗೂ ಲಸಿಕೆ ನೀಡಲಾಗುವುದು ಎಂದರು. ಇದನ್ನೂ ಓದಿ: ದಶಪಥದ ರಸ್ತೆ ಇರೋದು ಮೈಸೂರಿಗಾಗಿ, ಇದಕ್ಕಾಗಿ ಹೆಚ್ಚು ಆಸಕ್ತಿವಹಿಸಿದ್ದೇನೆ: ಪ್ರತಾಪ್ ಸಿಂಹ

    ಈ ಜಿಲ್ಲೆಯಲ್ಲಿ ಹೊಸ ಜಿಲ್ಲಾಕೇಂದ್ರ ಇನ್ನೂ ಅಂತಿಮ ಆಗಿಲ್ಲ. ಮುಖ್ಯಮಂತ್ರಿಗಳೊಂದಿಗೆ ಈ ಬಗ್ಗೆ ಚರ್ಚಿಸಿ ಆದಷ್ಟು ಬೇಗ ನಿಗದಿಪಡಿಸಲಾಗುವುದು. ಹಾಗೆಯೇ ಜಿಲ್ಲಾಸ್ಪತ್ರೆಯನ್ನೂ ನಿರ್ಮಿಸಲಾಗುವುದು. ಒಂದು ಅಥವಾ ಎರಡು ತಾಯಿ ಮತ್ತು ಶಿಶು ಆಸ್ಪತ್ರೆಯನ್ನು ಇದೇ ವರ್ಷ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು. 142 ಉಪಕೇಂದ್ರಗಳನ್ನು ಆರೋಗ್ಯ ಮತ್ತು ಕ್ಷೇಮ ಕೇಂದ್ರವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಲಾಗುವುದು. ಈಗಾಗಲೇ 29 ವೈದ್ಯರನ್ನು ಜಿಲ್ಲೆಗೆ ನೀಡಲಾಗಿದೆ. ಆದ್ದರಿಂದ ಯಾವುದೇ ವೈದ್ಯರ ಕೊರತೆ ಇಲ್ಲ. ಇನ್ನಷ್ಟು ಆರೋಗ್ಯ ಮೂಲಸೌಕರ್ಯಕ್ಕೆ ಭೂಮಿ ಮೀಸಲಿಟ್ಟಿದ್ದು, ಇಲ್ಲಿ ಅಭಿವೃದ್ಧಿ ಕಾರ್ಯದ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದರು. ಇದನ್ನೂ ಓದಿ: ಲಸಿಕಾ ಆಂದೋಲನದಲ್ಲಿ ಕೈ ಜೋಡಿಸುವಂತೆ ಉದ್ದಿಮೆಗಳಿಗೆ ಸಚಿವ ಸುಧಾಕರ್ ಮನವಿ

    ಹಬ್ಬ, ಜಾತ್ರೆ, ಸಭೆ ಸಮಾರಂಭಗಳಲ್ಲಿ ಹೆಚ್ಚು ಜನ ಸೇರಬಾರದು. ಕೋವಿಡ್ ನ ಎರಡೂ ಲಸಿಕೆ ಪಡೆಯುವವರೆಗೆ ಎಚ್ಚರವಾಗಿರಬೇಕು. ಶಾಲೆ ಆರಂಭ ಸಂಬಂಧ ಮಾರ್ಗಸೂಚಿ ನೀಡಲಾಗಿದೆ. ಶಿಕ್ಷಣ ಇಲಾಖೆ ಇದನ್ನು ಆಯಾ ಜಿಲ್ಲಾಡಳಿತಕ್ಕೆ ನೀಡಿದೆ. ಮಕ್ಕಳ ಆರೋಗ್ಯ ಕಾಪಾಡುವುದರ ಜೊತೆಗೆ ಭವಿಷ್ಯ ರೂಪಿಸುವುದು ಕೂಡ ಮುಖ್ಯ. ಅದನ್ನು ಸಮರ್ಥವಾಗಿ ನಿಭಾಯಿಸಬೇಕಿದೆ. ಶಾಲಾ ಸಿಬ್ಬಂದಿಗೆ ಲಸಿಕೆಯನ್ನೂ ನೀಡಲಾಗಿದೆ. ಎಲ್ಲರ ಅಭಿಪ್ರಾಯ ಪಡೆದು ಈ ಕ್ರಮವನ್ನು ಸರ್ಕಾರ ಕೈಗೊಂಡಿದೆ ಎಂದರು. ಇದನ್ನೂ ಓದಿ: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ BMTCಯಿಂದ ಉಚಿತ ಸೇವೆ

  • ಎಎಪಿ ಮಾನಸಿಕ ಕಿರುಕುಳ ನೀಡುತ್ತಿದೆ- ಕಟ್ಟಡ ಮಾಲೀಕ ಆರೋಪ

    ಎಎಪಿ ಮಾನಸಿಕ ಕಿರುಕುಳ ನೀಡುತ್ತಿದೆ- ಕಟ್ಟಡ ಮಾಲೀಕ ಆರೋಪ

    ಆನೇಕಲ್: ಕಟ್ಟಡ ಮಾಲೀಕನೋರ್ವನಿಗೆ ಮಾನಸಿಕ ಕಿರುಕುಳ ನೀಡಿರುವ ಆರೋಪವೊಂದು ಎಎಪಿ ವಿರುದ್ಧ ಕೇಳಿಬಂದಿದೆ.

    ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದ ಕಸವನಹಳ್ಳಿಯಲ್ಲಿ ಎಎಪಿ ಮುಖಂಡರು ವಾಣಿಜ್ಯ ಮಳಿಗೆ ತೆರೆಯಲೆಂದು ಕಟ್ಟಡವನ್ನು ಬಾಡಿಗೆಗೆ ಪಡೆದು, ಅದರಲ್ಲಿ ಪಕ್ಷದ ಕಚೇರಿ ತೆರೆದಿದ್ದಲ್ಲದೆ ವಿನಾಕಾರಣ ಕಟ್ಟಡ ಮಾಲೀಕರು ಹಾಗೂ ಮಹದೇವಪುರ ಕ್ಷೇತ್ರದ ಶಾಸಕರ ಹೆಸರಿಗೆ ಕಳಂಕ ತರುವಂತಹ ಕಾರ್ಯಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ: ಎಎಪಿ ಕಚೇರಿ ಕಟ್ಟಡದ ಮಾಲೀಕರಿಗೆ ಅರವಿಂದ ಲಿಂಬಾವಳಿ ಬೆದರಿಕೆ ಆರೋಪ!

    ಇದೇ ಆಗಸ್ಟ್ 15 ರಂದು ಬೆಳ್ಳಂದೂರು ವಾರ್ಡ್‍ನ ಕಸವನಹಳ್ಳಿ ಗ್ರಾಮದ ಮುಖ್ಯ ರಸ್ತೆಯಲ್ಲಿ ವಾಣಿಜ್ಯ ಮಳಿಗೆ ತೆರೆಯಲೆಂದು ಬಾಡಿಗೆಗೆ ಪಡೆದು ಎಎಪಿ ಕಚೇರಿಯನ್ನು ತೆರೆದಿದ್ದು, ಇದನ್ನು ಕಟ್ಟಡ ಮಾಲೀಕರು ಪ್ರಶ್ನಿಸಿದ್ದಾರೆ. ಈ ವೇಳೆ ಕಟ್ಟಡ ಮಾಲೀಕರು ನಮ್ಮ ಕಟ್ಟಡದಲ್ಲಿ ರಾಜಕೀಯ ಪಕ್ಷದ ಕಚೇರಿ ತೆರೆಯಲು ಅವಕಾಶ ನೀಡುವುದಿಲ್ಲವೆಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಎಪಿಯವರು, ನಮಗೆ ಸ್ಥಳೀಯ ರಾಜಕೀಯ ಮುಖಂಡರುಗಳಿಂದ ಬೆದರಿಕೆ ಇದೆಯೆಂದು ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದನ್ನೂ ಓದಿ: ಅವಳಿ-ಜವಳಿ ಕಥೆ ಹೇಳಿ 2ನೇ ಮದುವೆಗೆ ಸಿದ್ಧನಾಗಿ ಪೊಲೀಸರ ಬಲೆಗೆ ಬಿದ್ದ

    ಅಲ್ಲದೆ ನಿನ್ನೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗೋಷ್ಠಿ ನಡೆಸಿದ ಎಎಪಿಯವರು, ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ರವರು ಕಟ್ಟಡ ಮಾಲೀಕರಿಗೆ ಬೆದರಿಕೆ ಹಾಕಿದ್ದಾರೆಂದು ಹೇಳಿದ್ದಾರೆ. ಆದರೆ ಈ ವಿಷಯಕ್ಕೂ ಶಾಸಕರಿಗೂ ಯಾವುದೇ ಸಂಬಂಧವಿಲ್ಲ. ಜೊತೆಗೆ ನಮಗೆ ಯಾವುದೇ ಬೆದರಿಕೆ ಕರೆಗಳು ಬಂದಿಲ್ಲ, ಎಎಪಿ ಕಡೆಯವರಿಂದ ನಮಗೆ ಮಾನಸಿಕ ತೊಂದರೆ ಉಂಟಾಗಿದೆ ಎಂದು ಕಟ್ಟಡ ಮಾಲೀಕರಾದ ಶ್ರೀಕಾಂತ್ ಸ್ಪಷ್ಟಪಡಿಸಿದ್ದಾರೆ.

  • ಕುಡಿದ ಮತ್ತಿನಲ್ಲಿ ವ್ಯಕ್ತಿಯ ಕೊಲೆ

    ಕುಡಿದ ಮತ್ತಿನಲ್ಲಿ ವ್ಯಕ್ತಿಯ ಕೊಲೆ

    ಬೆಂಗಳೂರು/ಆನೇಕಲ್: ನಿರ್ಮಾಣ ಹಂತದ ಕಟ್ಟಡದಲ್ಲಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಮಣಿ ಮೃತನಾಗಿದ್ದಾನೆ. ಈತ ಕಟ್ಟಡದ ಮೇಸ್ತ್ರಿ ಕೆಲಸ ಮಾಡುತ್ತಿದ್ದನು. ಪರಿಚಿತನ ಜೊತೆ ಎಣ್ಣೆ ಪಾರ್ಟಿ ಮಾಡಿರೋದು ಈ ಕೊಲೆಗೆ ಕಾರಣವಾಗಿದೆ. ಇದನ್ನೂ ಓದಿ: ಜಹಾಂಗೀರ್ ಎಂದು ಪುತ್ರನಿಗೆ ಹೆಸರಿಟ್ಟ ಕರೀನಾ

    ನಿನ್ನೆ ರಾತ್ರಿ ತನ್ನ ಪರಿಚಿತನೊಂದಿಗೆ ಎಣ್ಣೆ ಪಾರ್ಟಿ ನಡೆಸಿದ್ದು, ಈ ವೇಳೆ ಮೇಸ್ತ್ರಿ ಹಾಗೂ ಪರಿಚಿತನ ನಡುವೆ ಗಲಾಟೆ ನಡೆದಿದೆ. ಎಣ್ಣೆ ಅಮಲಿನಲ್ಲಿದ್ದ ಮೇಸ್ತ್ರಿಯ ಪರಿಚಿತ ಕೈಗೆ ಸಿಕ್ಕ ಮಾರಕಾಸ್ತ್ರದಿಂದ ಮೇಸ್ತ್ರಿಯನ್ನು ಕೊಚ್ಚಿ ಬರ್ಬರವಾಗಿ ಕೊಲೆಮಾಡಿ ಪರಾರಿಯಾಗಿದ್ದಾನೆ. ಈ ಘಟನೆ ತಡರಾತ್ರಿ ನಡೆದಿದ್ದು, ಇಂದು ಬೆಳಿಗ್ಗೆ ಗಾರೆಕೆಲಸದ ಸಿಬ್ಬಂದಿ ನೋಡಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಸ್ಥಳ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡು ಕೊಲೆಗಾರನ ಬಂಧನಕ್ಕೆ ಬಲೆ ಬೀಸಿದ್ದಾರೆ.

  • ರೋಗಿಗಳಿಗೆ ಊಟ ಕೊಟ್ಟು ಸ್ನೇಹಿತರ ದಿನಾಚರಣೆ ಆಚರಿಸಿದ ವೈದ್ಯ

    ರೋಗಿಗಳಿಗೆ ಊಟ ಕೊಟ್ಟು ಸ್ನೇಹಿತರ ದಿನಾಚರಣೆ ಆಚರಿಸಿದ ವೈದ್ಯ

    ನೆಲಮಂಗಲ: ವಿಶ್ವ ಸ್ನೇಹಿತರ ದಿನಾಚರಣೆಯ ಅಂಗವಾಗಿ ವೈದ್ಯರಾದ ಡಾಕ್ಟರ್ ದಿವಾಕರ್ ಅವರು, ಬೆಂಗಳೂರು ಹೊರವಲಯದ ನೆಲಮಂಗಲ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಊಟದ ವ್ಯವಸ್ಥೆಯನ್ನು ಆಯೋಜಿಸುವ ಮೂಲಕವಾಗಿ ವಿಭಿನ್ನವಾಗಿ ಆಚರಿಸಿದ್ದಾರೆ.

    ದೇಶದಲ್ಲಿ ಸ್ನೇಹಿತರ ದಿನಾಚರಣೆಯನ್ನು ಹಲವಾರು ರೀತಿಗಳಿಂದ ಆಚರಣೆ ಮಾಡುವ ಈ ಸಮಾಜದಲ್ಲಿ, ಡಾಕ್ಟರ್ ದಿವಾಕರ್ ವಿಭಿನ್ನವಾಗಿ ವೈದ್ಯ ಮಿತ್ರರು ಹಾಗೂ ಸಿಬ್ಬಂದಿ ವರ್ಗದವರು ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಜೊತೆಯಲ್ಲಿ ಸ್ನೇಹಿತರ ದಿನಾಚರಣೆಯನ್ನು ನೆರವೇರಿಸಿ ಕೊಂಡಿದ್ದಾರೆ.  

    ಈ ಒಂದು ಕಾರ್ಯಕ್ರಮದ ಭೋಜನವನ್ನು ಸ್ವೀಕರಿಸಿದ ವೈದ್ಯರಾದ ಡಾ.ಸೋನಿಯಾ ಮಾತನಾಡಿ ಡಾಕ್ಟರ್ ದಿವಾಕರ್ ಅವರು ತುಂಬಾ ಉತ್ತಮವಾದ ಹಾಗೂ ವಿಭಿನ್ನವಾದ ಸ್ನೇಹಿತರ ದಿನಾಚರಣೆಯನ್ನು ನಮ್ಮ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಅವರ ಜೊತೆಯಲ್ಲಿ ಹಂಚಿಕೊಳ್ಳುತ್ತಿರುವುದು ತುಂಬಾ ಸಂತೋಷವಾಗಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕ ವಲಯದಲ್ಲಿ ಉತ್ತಮ ಸೇವೆ ಸಲ್ಲಿಸಿ ಉನ್ನತ ಸ್ಥಾನಕ್ಕೆ ಏರಲಿ ಎಂದು ಹರಸಿದರು. ಇದನ್ನೂ ಓದಿ: ಮೋದಿಗೆ ಸ್ನೇಹಿತರ ದಿನಾಚರಣೆಯ ಶುಭಕೋರಿ ಕಾಲೆಳೆದ ರಾಹುಲ್

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸರ್ಕಾರಿ ಆಸ್ಪತ್ರೆಯ ಸಿಇಓ. ನರಸಿಂಹಯ್ಯ ಅವರು ಊಟದ ವ್ಯವಸ್ಥೆ ಮಾಡಿಕೊಟ್ಟಂತಹ ಡಾಕ್ಟರ್ ದಿವಾಕರ್ ಅವರ ಸ್ನೇಹ ಬಾಂಧವ್ಯ ನಮ್ಮೆಲ್ಲರ ಜೊತೆ ಸದಾಕಾಲ ಇರಲಿ. ಮುಂದಿನ ದಿನಗಳಲ್ಲಿ ಅವರು ಮಾಡುವ ಎಲ್ಲಾ ಒಳ್ಳೆಯ ಕೆಲಸಗಳಲ್ಲಿ ನಾವು ಅವರ ಜೊತೆಯಲ್ಲಿ ಇರುತ್ತೇವೆ ಹಾಗೂ ನಮ್ಮ ಸರ್ಕಾರಿ ಆಸ್ಪತ್ರೆಯ ಎಲ್ಲಾ ಸಿಬ್ಬಂದಿ ವರ್ಗ ಹಾಗೂ ರೋಗಿಗಳ ಪರವಾಗಿ ನಾನು ದಿವಾಕರ್ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು. ಸ್ನೇಹಿತ ಸಹಪಾಠಿಗಳ ಜೊತೆಗೆ ತಾವೇ ಊಟ ಬಡಿಸಿ, ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ನೇಹಿತರ ದಿನಾಚರಣೆಯನ್ನ ಅರ್ಥಪೂರ್ಣವಾಗಿ ಆಚರಿಸಿದರು.

  • ಚಿರತೆ ಸೆರೆಗೆ ಅರಣ್ಯ ಇಲಾಖೆಯಿಂದ ಬೋನ್ ಅಸ್ತ್ರ

    ಚಿರತೆ ಸೆರೆಗೆ ಅರಣ್ಯ ಇಲಾಖೆಯಿಂದ ಬೋನ್ ಅಸ್ತ್ರ

    ನೆಲಮಂಗಲ: ಅರಣ್ಯ ಪ್ರದೇಶದಲ್ಲಿ ಆಹಾರ ಸಿಗದೆ ಕಾಡು ಪ್ರಾಣಿಗಳು ಗ್ರಾಮಗಳತ್ತ ಮುಖ ಮಾಡಿವೆ. ಮನೆಗಳಿಗೆ ದಾಳಿ ಮಾಡುತ್ತಿದ್ದ ಚಿರತೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ನೆಲಮಂಗಲದ ಗ್ರಾಮಗಲ್ಲಿ ಬೋನ್‍ಗಳನ್ನು ಅಳವಡಿಸಿದೆ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶ್ರೀನಿವಾಸಪುರ ಹಾಗೂ ಬ್ಯಾಡರಹಳ್ಳಿ ಗ್ರಾಮದ ಬಳಿ ಚಿರತೆಯ ಹೆಜ್ಜೆ ಹಾಗೂ ಅದರ ಓಡಾಟವನ್ನ ಗಮನಿಸಿ ಎರಡು ಕಡೆ ಬೋನ್ ಇಡಲಾಗಿದ್ದು, ನೆಲಮಂಗಲ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಗ್ರಾಮದ ಜನರಿಗೆ ಹಾಗೂ ಜಾನುವಾರಗಳಿಗೆ ಸಮಸ್ಯೆಯಾಗದಂತೆ ಕಣ್ಗಾವಲಿಟ್ಟಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ್ಯೋತ್ಸವಕ್ಕೆ ನಾಟಕ ಅಭ್ಯಾಸ ಮಾಡುತ್ತಾ ಪ್ರಾಣ ಕಳೆದುಕೊಂಡ ಬಾಲಕ

    ಚಿರತೆಯ ಹೆಜ್ಜೆ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಭಾಗ, ಸೋಂಪುರದ ಕೆಲವು ಗ್ರಾಮ ಹಾಗೂ ತೊರೆಕೆಂಪಹಳ್ಳಿ, ಶ್ರೀನಿವಾಸಪುರ ಸೇರಿದಂತೆ ಅನೇಕ ಕಡೆಗಳಲ್ಲಿ ಚಿರತೆಗಳು ಓಡಾಟ ಮಾಡಿದ್ದು, ಹೆಜ್ಜೆಗಳ ಗುರುತಿನ ಆಧಾರದಲ್ಲಿ ಬೋನ್ ಅಳವಡಿಸಲಾಗಿದೆ. ನಗರಕ್ಕೆ ಕೇವಲ 4 ಕಿಮೀ ಸಮೀಪವೇ ಚಿರತೆ ಹೆಜ್ಜೆ ಗುರುತು ಕಂಡುಬಂದಿದ್ದು ನಗರದ ಜನರಲ್ಲಿ ಆತಂಕ ಎದುರಾಗಿದೆ. ಇದನ್ನೂ ಓದಿ: ಭಾನುವಾರದ ಬಾಡೂಟಕ್ಕೆ ಮಾಡಿ ನೋಡಿ ಪೋರ್ಕ್ ಬಿರಿಯಾನಿ

    ಅಧಿಕಾರಿಗಳ ಸಲಹೆ ಪಾಲಿಸಿ ಅರಣ್ಯ ಒತ್ತುವರಿ, ಅರಣ್ಯ ನಾಶ, ಕಲ್ಲು ಗಣಿಗಾರಿಕೆ ಸೇರಿದಂತೆ ಅನೇಕ ಮಾನವ ನಿರ್ಮಿತ ಸಮಸ್ಯೆಗಳಿಂದ ಕಾಡು ಪ್ರಾಣಿಗಳು ಹಾಗೂ ಚಿರತೆಗಳು ನಗರ ಸಮೀಪದ ಗ್ರಾಮಗಳಿಗೆ ನುಗ್ಗುತ್ತಿವೆ. ಗ್ರಾಮೀಣ ಪ್ರದೇಶದಲ್ಲಿ ಜನರು ಕತ್ತಲೆಯಾದ ನಂತರ ಓಡಾಡುವುದು ನಿಲ್ಲಿಸಬೇಕು. ಜಾನುವಾರುಗಳನ್ನು ಹೊರಭಾಗದಲ್ಲಿ ಕಟ್ಟದಿರುವುದು, ಕೊಟ್ಟಿಗೆ ಮನೆಯನ್ನು ಸಂಪೂರ್ಣ ಮುಚ್ಚುವುದು ಸೇರಿದಂತೆ ವಿವಿಧ ಮುಂಜಾಗ್ರತೆ ಕ್ರಮಗಳನ್ನು ಜನರು ವಹಿಸಬೇಕಾಗಿದೆ. ಅರಣ್ಯ ಇಲಾಖೆ ಈಗಾಗಲೇ ಚಿರತೆ ಸೆರೆಗೆ ಸಕಲ ಸಿದ್ದತೆ ಮಾಡಿಕೊಂಡಿದ್ದು ಶೀಘ್ರದಲ್ಲಿ ಚಿರತೆ ಸೆರೆ ಹಿಡಿದು, ಜನರ ಆತಂಕ ದೂರ ಮಾಡಲಾಗುವುದು ಎಂದು ವಲಯ ಅರಣ್ಯ ಅಧಿಕಾರಿ ಲಷ್ಕರ್ ತಿಳಿಸಿದ್ದಾರೆ.

  • ಖಾರದ ಪುಡಿ ಎರಚಿ ಸರ ಕದ್ದು ಕಳ್ಳ ಪರಾರಿ

    ಖಾರದ ಪುಡಿ ಎರಚಿ ಸರ ಕದ್ದು ಕಳ್ಳ ಪರಾರಿ

    ನೆಲಮಂಗಲ: ಬಿಸ್ಕತ್ ಕೇಳುವ ನೆಪದಲ್ಲಿ ಅಂಗಡಿಗೆ ಬಂದ ಕಳ್ಳ ಮಹಿಳೆ ಮೇಲೆ ಖಾರದ ಪುಡಿ ಎರಚಿ, ಸರವನ್ನ ಕ್ಷಣಾರ್ಧದಲ್ಲಿ ಕಸಿದು ನಾಪತ್ತೆಯಾಗಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.

    ನೆಲಮಂಗಲ ತಾಲೂಕಿನ ದಕ್ಷಿಣಕಾಶಿ ಶಿವಗಂಗೆಯಲ್ಲಿನ, ನಂದಿನಿ ಪಾರ್ಲರ್ ಮಾಲಿಕೆ ಮಹಿಳೆಯ ಸರ ಕದ್ದು ಕಳ್ಳ ಪರಾರಿಯಾಗಿದ್ದಾನೆ. ಸುಮಾರು 2 ಲಕ್ಷ ಬೆಲೆಬಾಳುವ 60 ಗ್ರಾಂ ತೂಕದ ಚಿನ್ನದ ಸರವಾಗಿದ್ದು, ನಂದಿನಿ ಪಾರ್ಲರ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವಸಂತ ಕುಮಾರಿ ಎಂಬ ಮಹಿಳೆಯ ಸರ ಕಳವಾಗಿದೆ. ಇನ್ನೂ ಘಟನಾ ಸ್ಥಳಕ್ಕೆ ನೆಲಮಂಗಲ ಸಿಪಿಐ ಹರೀಶ್ ಸ್ಥಳ ಭೇಟಿ ನಡೆಸಿ ತನಿಖೆ ಕೈಗಿತ್ತುಕೊಂಡಿದ್ದಾರೆ. ಇದನ್ನೂ ಓದಿ:  ಮಗಳ ಸಾವಿನ ಸುದ್ದಿ ಕೇಳಿ ತಂದೆ ಹೃದಯಾಘಾತದಿಂದ ಸಾವು

    ಈ ಸಂಬಂಧ ಡಾಬಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಶ್ರೀ ಕ್ಷೇತ್ರ ಶಿವಗಂಗೆಯಲ್ಲಿ ಪೊಲೀಸರ ಸಂಖ್ಯೆ ಹೆಚ್ಚಿಸಬೇಕು ಹಾಗೂ ಪೊಲೀಸ್ ಗಸ್ತು ಹೆಚ್ಚಾಗಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಇದನ್ನೂ ಓದಿ:  ಹೋರಿಯ ಹುಟ್ಟು ಹಬ್ಬ ಆಚರಿಸಿದ ಶಾಸಕ ರೇಣುಕಾಚಾರ್ಯ

    ಕೆಲವು ದಿನಗಳಿಂದ ಡಾಬಸ್ ಪೇಟೆ ಭಾಗದಲ್ಲಿ ಒಂದಲ್ಲಾ ಒಂದು ಕಳ್ಳತನ ಪ್ರಕರಣಗಳು ಹೆಚ್ಚಾಗಿ ನಡೆಯುತಿದ್ದು, ಜನರು ಆತಂಕದಿಂದ ಜೀವನ ನಡೆಸುವ ಪರಿ ಎದುರಾಗಿದೆ. ಇತ್ತ ಜನ ನಿಬಿಡ ಪ್ರದೇಶದಲ್ಲಿ ಇಂತಹ ಕೃತ್ಯಗಳು ನಡೆಯುತಿದ್ದು, ಪೊಲೀಸರು ಸೂಕ್ತ ಕ್ರಮ ವಹಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಇತ್ತ ಸರ ಕಳೆದುಕೊಂಡ ಮಹಿಳೆ ವಸಂತ ಕುಮಾರಿ ಡಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

  • ಕೊರೊನಾದಿಂದ ಪತ್ನಿ ಸಾವು- ಮನನೊಂದ ಪತಿ ಮಕ್ಕಳ ಜೊತೆಗೆ ಆತ್ಮಹತ್ಯೆ

    ಕೊರೊನಾದಿಂದ ಪತ್ನಿ ಸಾವು- ಮನನೊಂದ ಪತಿ ಮಕ್ಕಳ ಜೊತೆಗೆ ಆತ್ಮಹತ್ಯೆ

    ಆನೇಕಲ್: ಕೊರೊನಾದಿಂದ ಪತ್ನಿ ಸಾವನ್ನಪ್ಪಿರುವ ನೋವನ್ನು ತಡೆಯಲಾರದೆ, ಒಂದೇ ಕುಟುಂಬ ಮೂರು ಮಂದಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್‍ನಲ್ಲಿ ನಡೆದಿದೆ.

    ಅಪ್ಪ ಸತೀಶ್ ಮತ್ತು ಇಬ್ಬರು ಹೆಣ್ಣು ಮಕ್ಕಳಾದ ಕೀರ್ತಿ, ಮೋನಿಷ ಮೃತರಾಗಿದ್ದಾರೆ. ಆನೇಕಲ್ ಉಪವಿಭಾಗ ಅತ್ತಿಬೆಲೆಯ ಅಂಬೇಡ್ಕರ್ ಕಾಲೋನಿಯ ನಿವಾಸಿಗಳಾಗಿದ್ದಾರೆ. ಪತ್ನಿಯನ್ನು ಕಳೆದುಕೊಂಡ ಪತಿ ಮಾನಸಿಕವಾಗಿ ನೊಂದು ಮಕ್ಕಳೊಂದಿಗೆ ನೇಣಿಗೆ ಶರಣಾಗಿದ್ದಾರೆ.

    ಮೃತ ಸತೀಶ್ ಗಾರ್ಮೇಂಟ್ಸ್ ನಲ್ಲಿ ಕೆಲಸ ಮಾಡಿಕೊಂಡಿದ್ದು, ಇತ್ತೀಚೆಗೆ ಕೆಲಸವನ್ನು ಬಿಟ್ಟಿದ್ದನು. ಮಕ್ಕಳಾದ ಕೀರ್ತಿ ಪ್ರಥಮ ವರ್ಷದ ಬಿಎಸ್ಸಿ, ಹಾಗೂ ಮತ್ತೋರ್ವ ಪುತ್ರಿ ಮೋನಿಷ 9ನೇ ತರಗತಿ ವಿಧ್ಯಾಭ್ಯಾಸ ಮಾಡುತ್ತಿದ್ದರು ಎನ್ನಲಾಗಿದೆ. ಕಳೆದ ಒಂದು ತಿಂಗಳ ಹಿಂದೆ ಸತೀಶ್ ಪತ್ನಿ ಆಶಾ ಕೊರೊನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪಿದ್ದಾರೆ.

    ಪತ್ನಿಯನ್ನ ಕಳೆದುಕೊಂಡ ಸತೀಶ್ ಹಾಗೂ ತಾಯಿಯನ್ನು ಕಳೆದು ಕೊಂಡ ಮಕ್ಕಳು ನಿತ್ಯ ಮೃತ ಆಶಾರ ನೆನಪಿನಲ್ಲಿದ್ದರು. ಪತ್ನಿ ಕಳೆದುಕೊಂಡು ಮಾನಸಿಕವಾಗಿ ನೊಂದಿದ್ದ ಪತಿ ಸತೀಶ್ ಕಳೆದ ರಾತ್ರಿ ಮಕ್ಕಳ ಜೊತೆಗೆ ತಾನು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಜಾನೆ ಮನೆಯ ಬಾಗಿಲು ತೆರೆಯದೆ ಫೋನ್ ಕರೆಗಳನ್ನು ಸ್ವೀಕರಿಸದೆ ಇದ್ದಾಗ ಮನೆಯ ಬಳಿ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಸ್ಥಳಕ್ಕೆ ಭೇಟಿ ನೀಡಿದ ಅತ್ತಿಬೆಲೆ ಪೊಲೀಸರು ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿ ದೂರು ದಾಖಲಿಸಿಕೊಂಡಿದ್ದಾರೆ.