Tag: Bengaluru Traffic

  • ನಾಳೆ ಬೆಂಗ್ಳೂರಿಗೆ ರಾಹುಲ್ ಗಾಂಧಿ – ಹಲವೆಡೆ ಸಂಚಾರ ಬಂದ್, ಟ್ರಾಫಿಕ್ ತಪ್ಪಿಸೋಕೆ ಪರ್ಯಾಯ ವ್ಯವಸ್ಥೆ

    ನಾಳೆ ಬೆಂಗ್ಳೂರಿಗೆ ರಾಹುಲ್ ಗಾಂಧಿ – ಹಲವೆಡೆ ಸಂಚಾರ ಬಂದ್, ಟ್ರಾಫಿಕ್ ತಪ್ಪಿಸೋಕೆ ಪರ್ಯಾಯ ವ್ಯವಸ್ಥೆ

    ಬೆಂಗಳೂರು: ಶುಕ್ರವಾರ (ಆ.8) ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನಾ ರ‍್ಯಾಲಿ ನಡೆಯಲಿದ್ದು, ಈ ಹಿನ್ನೆಲೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಬೆಂಗಳೂರಿಗೆ (Bengaluru) ಆಗಮಿಸುತ್ತಿದ್ದಾರೆ. ಹೀಗಾಗಿ ಬೆಂಗಳೂರಿಗರಿಗೆ ಟ್ರಾಫಿಕ್ (Bengaluru Traffic) ಬಿಸಿ ತಪ್ಪಿಸುವ ನಿಟ್ಟಿನಲ್ಲಿ ಪೊಲೀಸರು ಕೆಲವು ರಸ್ತೆಗಳಲ್ಲಿ ಸಂಚಾರ ಬಂದ್ ಮಾಡಿದ್ದು, ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ.

    ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಅವರು ಮತಗಳ್ಳತನ ಆರೋಪ ಮಾಡಿದ್ದರು. ಕೇಂದ್ರದ ಈ ಕ್ರಮ ವಿರೋಧಿಸಿ ಪ್ರತಿಭಟನಾ ರ‍್ಯಾಲಿ ನಡೆಯಲಿದ್ದು, ದಾಖಲೆ ಬಿಡುಗಡೆ ಮಾಡಲಿದ್ದಾರೆ. ಈ ಹಿನ್ನೆಲೆ ಕೆಲವೆಡೆ ಸಂಚಾರ್ ಬಂದ್ ಮಾಡಿ, ಅವುಗಳಿಗೆ ಪರ್ಯಾಯ ಮಾರ್ಗಗಳ ವ್ಯವಸ್ಥೆ ಕಲ್ಪಿಸಲಾಗಿದೆ.ಇದನ್ನೂ ಓದಿ: ಕಂತೆ ಕಂತೆ ಹಣ ಕೇಸ್ – ನ್ಯಾ.ಯಶವಂತ್ ವರ್ಮಾ ಅರ್ಜಿ ವಜಾ

    ಎಲ್ಲೆಲ್ಲಿ ಸಂಚಾರ ಬಂದ್ ಹಾಗೂ ಪರ್ಯಾಯ ಮಾರ್ಗಗಳು ಯಾವವು?
    – ಶಾಂತಲಾ ಜಂಕ್ಷನ್ ಮತ್ತು ಖೋಡ್ ಸರ್ಕಲ್‌ನಿಂದ ಆನಂದ್ ರಾವ್ ಫ್ಲೈಓವರ್, ಒಲ್ಡ್ ಜೆಡಿಎಸ್ ರಸ್ತೆ, ಶೇಷಾದ್ರಿಪುರ ರಸ್ತೆಯಲ್ಲಿ ಸಂಚಾರ ನಿರ್ಬಂಧಗೊಳಿಸಲಾಗಿದೆ. ಇವುಗಳ ಬದಲು ಲುಲು ಮಾಲ್, ರಾಜೀವ್ ಗಾಂಧಿ ಸರ್ಕಲ್, ಮಂತ್ರಿ ಮಾಲ್, ಸ್ವಸ್ತಿಕ್ ಸರ್ಕಲ್, ಶೇಷಾದ್ರಿಪುರಂ, ನೆಹರು ಸರ್ಕರ್, ರೇಸ್ ಕೋರ್ಸ್ ಫ್ಲೈಓವರ್ ಕಡೆಯಿಂದ ಪ್ರಯಾಣಿಸಬಹುದು.

    – ಮೈಸೂರು ಬ್ಯಾಂಕ್ ಕಡೆಯಿಂದ ಚಾಲುಕ್ಯ ಕಡೆಗೆ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯವಾಗಿ ಕೆಜಿ ರಸ್ತೆ, ಮೈಸೂರು ಬ್ಯಾಂಕ್ ಜಂಕ್ಷನ್, ಸಾಗರ್ ಜಂಕ್ಷನ್, ರಾಜೀವ್ ಗಾಂಧಿ ಸರ್ಕಲ್, ರೇಸ್ ಕೋರ್ಸ್ ಫ್ಲೈಓವರ್ ಮೂಲಕ ಹೋಗಬಹುದು

    – ಚಾಲುಕ್ಯದಿಂದ ಮೈಸೂರು ಬ್ಯಾಂಕ್ ಕಡೆಗೆ ಸಂಚಾರ ನಿಷೇಧಿಸಲಾಗಿದ್ದು, ಚಾಲುಕ್ಯ ಸರ್ಕಲ್, ರಾಜಭವನ ರಸ್ತೆ, ಇನ್‌ಫೆಂಟ್ರಿ ರಸ್ತೆ, ಇಂಡಿಯನ್ ಎಕ್ಸ್‌ಪ್ರೆಸ್‌ನಿಂದ ಸಂಚರಿಸಲು ಸೂಚಿಸಲಾಗಿದೆ.

    – ಕಾಳಿದಾಸ ರಸ್ತೆ, ಕನಕದಾಸ ಜಂಕ್ಷನ್‌ಕಡೆಯಿಂದ ಫ್ರೀಡಂಪಾರ್ಕ್ ಕಡೆಗೆ ಸಂಚರಿಸುವ ವಾಹನಗಳು ಕನಕದಾಸ ಜಂಕ್ಷನ್‌ನಿಂದ ಬಲ ತಿರುವು ಪಡೆದು ಸಾಗರ ಜಂಕ್ಷನ್‌ಕಡೆಗೆ ಸಂಚರಿಸಬಹುದು.

    – ಮೌರ್ಯ ಸುಬ್ಬಣ್ಣ ಜಂಕ್ಷನ್‌ನಿಂದ ಫ್ರೀಡಂಪಾರ್ಕ್‌ಗೆ ತೆರಳುವವರು ಸುಬ್ಬಣ್ಣ ಜಂಕ್ಷನ್‌ನಿಂದ ಬಲ ತಿರುವು ಆನಂದ್ ರಾವ್ ಸರ್ಕಲ್ ಕಡೆಗೆ ಸಂಚರಿಸಬಹುದು.ಇದನ್ನೂ ಓದಿ: ಮಂಡ್ಯದ ದೇವಸ್ಥಾನದಲ್ಲಿ ಕಳ್ಳತನ – ಅನ್ಯಧರ್ಮದ ಚಿಹ್ನೆ ಬರೆದು ದುಷ್ಕರ್ಮಿಗಳು ಎಸ್ಕೇಪ್

  • ಮೆಟ್ರೊಪಾಲಿಟನ್ ಸಿಟಿಗಳ ಪೈಕಿ ಬೆಂಗಳೂರಿನಲ್ಲಿ ಹೆಚ್ಚು ವಾಹನಗಳಿವೆ: ಪರಮೇಶ್ವರ್

    ಮೆಟ್ರೊಪಾಲಿಟನ್ ಸಿಟಿಗಳ ಪೈಕಿ ಬೆಂಗಳೂರಿನಲ್ಲಿ ಹೆಚ್ಚು ವಾಹನಗಳಿವೆ: ಪರಮೇಶ್ವರ್

    – ಬೆಂಗಳೂರು ಟ್ರಾಫಿಕ್ ಸಮಸ್ಯೆ ಕುರಿತು ಸುದೀರ್ಘ ಚರ್ಚೆ

    ಬೆಂಗಳೂರು: ಇಲ್ಲಿನ ಸಂಚಾರಿ ಪೊಲೀಸ್ (Bengaluru Traffic Police) ಇಲಾಖೆಯ ಕೇಂದ್ರ ಕಚೇರಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ (G Parameshwara) ಭೇಟಿ ನೀಡಿ ಸಂಚಾರಿ ವಿಭಾಗ ಮುಖ್ಯಸ್ಥ ಅನುಚೇತ್ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ವೇಳೆ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಮತ್ತು ನಿರ್ವಹಣೆ ಬಗ್ಗೆ ಮಾಹಿತಿ ಪಡೆದುಕೊಂಡರು.

    ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಬೆಂಗಳೂರು ಟ್ರಾಫಿಕ್ ಸಮಸ್ಯೆಯಲ್ಲಿ (Bengaluru Traffic Violation) ಕುಖ್ಯಾತಿ ಪಡೆದುಕೊಂಡಿದೆ. ನಮ್ಮವರು ಸಾಕಷ್ಟು ಉತ್ತಮ ಪಡಿಸುವ ಕೆಲಸ ಮಾಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: 2028ರೊಳಗೆ ಮತ್ತೆ ರಾಮನಗರ ಅಂತ ಬರುತ್ತೆ – ರಾಮನ ಹೆಸರು ತೆಗೆಯಲು ಸಾಧ್ಯವಿಲ್ಲ: ಹೆಚ್‌ಡಿಕೆ ತಿರುಗೇಟು

    ಅತಿ ಹೆಚ್ಚು ವಾಹನಗಳು ಬೆಂಗಳೂರು ನಗರದಲ್ಲಿವೆ. ಮೆಟ್ರೊಪಾಲಿಟನ್ ಸಿಟಿಗಳ ಪೈಕಿ ಬೆಂಗಳೂರಿನಲ್ಲಿ ಹೆಚ್ಚು ವಾಹನಗಳಿವೆ. ನಗರದಲ್ಲಿ 1.16 ಲಕ್ಷ ವಾಹನಗಳಿವೆ, 70% ಭಾಗ ದ್ವಿಚಕ್ರ ವಾಹನಗಳಿವೆ. ಆ ಕಾಲಕ್ಕೆ ರಸ್ತೆ ಎಷ್ಟು ಬೇಕು ಅಷ್ಟು ಮಾಡಿದ್ದರು. ಇರುವಂತ ಸೌಲಭ್ಯ ಬಳಸಿಕೊಂಡು ಮ್ಯಾನೇಜ್ ಮಾಡ್ತಿದ್ದಾರೆ. ಬಿಬಿಎಂಪಿಯವರು, ಬಿಎಂಟಿಸಿಯವರು ಇದಕ್ಕೆ ಸಾಥ್ ನೀಡಬೇಕು ಎಂದು ಮನವಿ ಮಾಡಿದರು.

    ಟ್ರಾಫಿಕ್ ಸಮಸ್ಯೆಗಳನ್ನ ಪರಿಹರಿಸುವ ಬಗ್ಗೆ ಚರ್ಚೆ ಮಾಡಿದ್ದೀವಿ. ಅಧಿಕಾರಿಗಳು ಕೆಲವು ಸಮಸ್ಯೆಗಳನ್ನ ಗಮನಕ್ಕೆ ತಂದಿದ್ದಾರೆ. ಶೀಘ್ರದಲ್ಲೇ ಬಿಬಿಎಂಪಿ, ಬಿಎಂಟಿಸಿ ಜೊತೆ ಒಟ್ಟಿದೇ ಸಭೆ ಮಾಡಬೇಕು ಅಂತ ಅಂದುಕೊಂಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: Women’s Asia Cup: ಸ್ಮೃತಿ, ರೇಣುಕಾ ಶೈನ್‌ – ಬಾಂಗ್ಲಾ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ; ಫೈನಲ್‌ ಪ್ರವೇಶಿಸಿದ ಭಾರತ!

  • ಟ್ರಾಫಿಕ್ ಫೈನ್ 50,000 ಇದ್ರೆ ಮನೆ ಬಾಗಿಲಿಗೆ ಬರಲಿದ್ದಾರೆ ಪೊಲೀಸರು ಹುಷಾರ್!

    ಟ್ರಾಫಿಕ್ ಫೈನ್ 50,000 ಇದ್ರೆ ಮನೆ ಬಾಗಿಲಿಗೆ ಬರಲಿದ್ದಾರೆ ಪೊಲೀಸರು ಹುಷಾರ್!

    ಬೆಂಗಳೂರು: ಸಂಚಾರ ನಿಯಮಗಳಿಗೂ ನಮಗೂ ಸಂಬಂಧವಿಲ್ಲ. ನಾವು ನಡೆದಿದ್ದೇ ದಾರಿ ಎಂದುಕೊಂಡು ಸಂಚರಿಸುವವರಿಗೆ ಪೊಲೀಸ್‌ ಇಲಾಖೆ ಶಾಕಿಂಗ್‌ ಸುದ್ದಿ ಕೊಟ್ಟಿದೆ. ನಿರಂತರವಾಗಿ ನಿಯಮ ಉಲ್ಲಂಘಿಸಿ 50,000 ರೂ. ವರೆಗೆ ಫೈನ್‌ ಇದ್ದರೆ, ಅಂಥವರ ಮನೆಗೆ ತೆರಳಿ ಪೊಲೀಸರು ದಂಡ ವಸೂಲಿ ಮಾಡಲಿದ್ದಾರೆ.

    ಕೆಲವರಿಗೆ ಹೆಲ್ಮೆಟ್ ಎಂದರೆ ಅಲರ್ಜಿ. ಸಿಗ್ನಲ್ ಜಂಪ್, ತ್ರಿಪಲ್ ರೈಡಿಂಗ್ ಇನ್ನೂ ನಿಂತಿಲ್ಲ. ಇಷ್ಟೆಲ್ಲಾ ನಿಯಮಗಳ ಉಲ್ಲಂಘನೆ ಮಾಡಿದವರ ಫೈನ್‌ ಲಿಸ್ಟ್‌ ಕೂಡ ದೊಡ್ಡದಿರುತ್ತದೆ. ಇನ್ಮುಂದೆ ದಂಡ ವಸೂಲಿಗಾಗಿ ಬೆಂಗಳೂರು ನಗರ ಸಂಚಾರಿ ಪೊಲೀಸರೇ ನಿಮ್ಮ ಮನೆ ಬಾಗಿಲಿಗೆ ಬರಲಿದ್ದಾರೆ. ದಂಡದ ಮೊತ್ತ 50,000 ರೂ. ದಾಟಿದರೆ ಮನೆಗೆ ತೆರಳಿ ಹಣ ಕಟ್ಟಿಸಿಕೊಳ್ಳುತ್ತಿದ್ದಾರೆ ಪೊಲೀಸರು. ಇದನ್ನೂ ಓದಿ: 3 ಗಂಟೆಯಲ್ಲಿ 300 ಕಿಮೀ ಕ್ರಮಿಸಿ 7 ದಿನದ ಮಗುವಿನ ಜೀವ ಉಳಿಸಿದ ಹೀರೋ

    ಕಳೆದ ಹತ್ತು ದಿನಗಳಿಂದ ನಗರದಲ್ಲಿ 2,681 ವಾಹನಗಳ ಮೇಲೆ 50,000 ರೂ.ಗೂ ಅಧಿಕ ದಂಡ ಇದೆ. ಈಗಾಗಲೇ ಅನೇಕ ವಾಹನ ಸವಾರರ ಮನೆಗೆ ತೆರಳಿ ದಂಡ ಕಟ್ಟಿಸಿಕೊಳ್ಳಲಾಗುತ್ತಿದೆ. ಕೆಲ ವಾಹನಗಳ ಮಾಲೀಕರು ದಂಡ ಪಾವತಿಸದೆ ಬೇರೆಯವರಿಗೆ ಮಾರಾಟ ಮಾಡಿರುವುದು ತಿಳಿದು ಬಂದಿದೆ. ಇಂಥವರಿಗೆ ಕಾಲಾವಕಾಶ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ದಂಡ ಪಾವತಿಸದೇ ಇದ್ದರೆ ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಲಾಗುತ್ತದೆ ಎಂದು ಸಂಚಾರ ವಿಭಾಗದ ಜಂಟಿ ಆಯುಕ್ತ ಎಂ.ಎನ್.ಅನುಚೇತ್ ತಿಳಿಸಿದ್ದಾರೆ.

    ಆರು ವಯಸ್ಸಿಗಿಂತ ಚಿಕ್ಕ ಮಕ್ಕಳಿಗೆ ಹೆಲ್ಮೆಟ್ ಧರಿಸುವ ಅಗತ್ಯವಿಲ್ಲ. ಆದರೆ ಶಾಲಾ ಮಕ್ಕಳು ಎಂದು ಇಬ್ಬರು, ಮೂವರನ್ನು ಕರೆದೊಯ್ಯುವುದು ಸರಿಯಲ್ಲ. ಸುರಕ್ಷಿತವೂ ಅಲ್ಲ. ಶಾಲಾ ವಾಹನಗಳ ವಿರುದ್ಧ ಕಾರ್ಯಾಚರಣೆ ಕೈಗೊಂಡಾಗಲೂ ಕ್ಷಮತೆ ಮೀರಿ ಮಕ್ಕಳನ್ನ ಕೊಂಡೊಯ್ಯುವುದು ಪತ್ತೆಯಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ಶಾಸಕ ಯತ್ನಾಳ್‌, ರಾಜ್ಯಾಧ್ಯಕ್ಷ ವಿಜಯೇಂದ್ರ ಸಮಾಗಮ!

  • ಟ್ರಾಫಿಕ್ ಸಮಸ್ಯೆ; 50 ಸಾವಿರ ಕೋಟಿ ವೆಚ್ಚದಲ್ಲಿ ಬೆಂಗ್ಳೂರಿನ 12 ಕಡೆ ಸುರಂಗ ನಿರ್ಮಾಣಕ್ಕೆ ಪ್ಲ್ಯಾನ್‌

    ಟ್ರಾಫಿಕ್ ಸಮಸ್ಯೆ; 50 ಸಾವಿರ ಕೋಟಿ ವೆಚ್ಚದಲ್ಲಿ ಬೆಂಗ್ಳೂರಿನ 12 ಕಡೆ ಸುರಂಗ ನಿರ್ಮಾಣಕ್ಕೆ ಪ್ಲ್ಯಾನ್‌

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಟ್ರಾಫಿಕ್ ಸಮಸ್ಯೆ (Bengaluru Traffic Problem) ನಿವಾರಣೆಗೆ ಸರ್ಕಾರ ಸುರಂಗ ಮಾರ್ಗದ ಮೊರೆ ಹೋಗಿದೆ. 50 ಕೋಟಿ ರೂ. ವೆಚ್ಚದಲ್ಲಿ 6 ಕಡೆ ಸುರಂಗ ಮಾರ್ಗ ಮಾಡಲು ಮುಂದಾಗಿದೆ. ಈ ಸುರಂಗ ಮಾರ್ಗ ನಿರ್ಮಾಣಕ್ಕೆ ಕನಿಷ್ಠ 5 ವರ್ಷ ಸಮಯ ಬೇಕಾಗಲಿದೆ. ಈ ನಡುವೆ ಸುರಂಗ ಮಾರ್ಗ ನಿರ್ಮಾಣದ ಹೊಣೆ BBMP ಗಾ? ಅಥವಾ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕಾ? (BDA) ಅನ್ನೋ ಪ್ರಶ್ನೆ ಎದ್ದಿದೆ.

    ಬ್ರ‍್ಯಾಂಡ್ ಬೆಂಗಳೂರು ನಿರ್ಮಾಣಕ್ಕೆ ಕಾಂಗ್ರೆಸ್ ಸರ್ಕಾರದ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ (DK Shivakumar) ಜನರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದಾರೆ. ಸಾರ್ವಜನಿಕರಿಂದ ಹಲವಾರು ಸಲಹೆಗಳು ಬರ್ತಿವೆ, ಅದರಲ್ಲಿ ಟ್ರಾಫಿಕ್ ಸಮಸ್ಯೆ ಕೂಡ ಒಂದು. ಬೆಂಗಳೂರು ನಗರದಲ್ಲಿ ಟ್ರಾಫಿಕ್ ಸಮಸ್ಯೆ ಜೋರಾಗಿದ್ದು ಕಿರಿ-ಕಿರಿಗೆ ಪೊಲೀಸರು ಹೈರಾಣಾಗಿದ್ದಾರೆ. ಹಾಗಾಗಿ ಸರ್ಕಾರ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಸುರಂಗ ಮಾರ್ಗದ (Subway Road) ಮೊರೆಹೋಗಿದೆ. 50 ಸಾವಿರ ಕೋಟಿ ವೆಚ್ಚದಲ್ಲಿ ಸುರಂಗ ರಸ್ತೆಗಳ ನಿರ್ಮಾಣಕ್ಕೆ ಪ್ಲ್ಯಾನ್ ಮಾಡುತ್ತಿದೆ. ಇದನ್ನೂ ಓದಿ: ಜಗದೀಶ್ ಆತ್ಮಹತ್ಯೆ ಯತ್ನಕ್ಕೆ ಚಲುವರಾಯಸ್ವಾಮಿ ಕಾರಣ- ಗೆಳೆಯರು, ಕುಟುಂಬಸ್ಥರು ಆಕ್ರೋಶ

    ಸುರಂಗ ರಸ್ತೆ ಮಾರ್ಗಗಳ ನಿರ್ಮಾಣ ಬಗ್ಗೆ ಬೇರೆ ದೇಶಗಳ ತಾಂತ್ರಿಕ ತಜ್ಞರಿಂದಲೂ ಸಲಹೆ ಮತ್ತು ಸುರಂಗ ನಿರ್ಮಾಣ ಸಲಹಾ ಸಂಸ್ಥೆ ಅಧಿಕಾರಿಗಳಿಂದಲೂ ಸರ್ಕಾರ ಸಲಹೆ ಪಡೆದಿದೆ. 2 ಹಂತಗಳಲ್ಲಿ ಸುರಂಗ ನಿರ್ಮಾಣ ಮಾಡಲು ಪ್ಲ್ಯಾನ್ ಮಾಡಿದ್ದು, 22 ಸಾವಿರ ಕೋಟಿ ವೆಚ್ಚದಲ್ಲಿ 50 ಕಿಮೀ ರಸ್ತೆ ನಿರ್ಮಾಣಕ್ಕೆ ಚಿಂತನೆ ನಡೆದಿದೆ. ಸುರಂಗ ಮಾರ್ಗವನ್ನ 4 ಅಥವಾ 6 ಪಥದಲ್ಲಿ ನಿರ್ಮಾಣ ಮಾಡಲು ಚಿಂತನೆ ನಡೆದಿದೆ. ಸರ್ಕಾರದ ನಿರ್ಧಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಟನಲ್ ನಿರ್ಮಾಣ ಮಾಡೋಕೆ ಹೋಗಿ ಬೆಂಗಳೂರನ್ನ ಸಮಾಧಿ ಮಾಡಬೇಡಿ. ವೈಜ್ಞಾನಿಕವಾಗಿ ಕೆಲಸ ಮಾಡಿ ಅಂತಾ ಸಲಹೆ ನೀಡಿದ್ದಾರೆ.

    ಅಂದುಕೊಂಡಂತೆ ಈ ಕೆಳಕಂಡ ಮಾರ್ಗಗಳಲ್ಲಿ ರಸ್ತೆ ನಿರ್ಮಾಣ ಮಾಡಬೇಕಿದ್ರೆ ಸುಮಾರು 5 ವರ್ಷ ಸಮಯ ತೆಗೆದುಕೊಳ್ಳಲಿದೆ. ಬೆಂಗಳೂರು ಕೇಂದ್ರದ ಸುತ್ತಲೂ ಹೊರ ವಲಯಗಳಿಗೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಸುರಂಗ ರಸ್ತೆ ನಿರ್ಮಾಣಕ್ಕೆ ಚಿಂತನೆ ಮಾಡಲಾಗ್ತಿದೆ. ಇದನ್ನೂ ಓದಿ: JDS ಪರ ಪ್ರಚಾರ ಮಾಡಿದ್ದಕ್ಕೆ ಮಗನ ವರ್ಗಾವಣೆ- ಆತ್ಮಹತ್ಯೆಗೆ ಯತ್ನಿಸಿದ ಜಗದೀಶ್ ತಂದೆ ಬೇಸರ

    ಎಲ್ಲೆಲ್ಲಿ ಬರಲಿದೆ ಸುರಂಗ ರಸ್ತೆ?

    * ಉತ್ತರದಿಂದ ದಕ್ಷಿಣ ಕಾರಿಡಾರ್ – ಒಟ್ಟು 27 ಕಿ.ಮೀ
    ಬಳ್ಳಾರಿ ರಸ್ತೆಯಿಂದ ಹೊಸೂರು ರೋಡ್
    ಯಲಹಂಕ – ಮೇಖ್ರಿ ಸರ್ಕಲ್ ಮಾರ್ಗವಾಗಿ ಕೇಂದ್ರೀಯ ರೇಷ್ಮೆಮಂಡಳಿ

    * ಪೂರ್ವದಿಂದ ಪಶ್ಚಿಮ ಕಾರಿಡಾರ್ 1 – ಒಟ್ಟು 29 ಕಿ.ಮೀ
    ಕೆ.ಆರ್ ಪುರದಿಂದ ಗೊರಗುಂಟೆ ಪಾಳ್ಯ
    ಹಳೇ ಮದ್ರಾಸ್ ರಸ್ತೆ – ಐಟಿಪಿಎಲ್ – ವರ್ತುಲ ರಸ್ತೆ
    ರಾಮಮೂರ್ತಿ ನಗರ ಕಡೆಯಿಂದ ಹೊರಗುಂಟೆ ಪಾಳ್ಯ

    * ಪೂರ್ವದಿಂದ ಪಶ್ಚಿಮ ಕಾರಿಡಾರ್ 2 – ಒಟ್ಟು 28.90 ಕಿ.ಮೀ
    ಹಳೇ ಏರ್‌ಪೋರ್ಟ್ ರಸ್ತೆಯಿಂದ ಮೈಸೂರು ರಸ್ತೆ
    ವರ್ತೂರು ಕೋಡಿಯಿಂದ ಜ್ಞಾನಭಾರತಿವರೆಗೆ

    * ಸಂಪರ್ಕ ಕಾರಿಡಾರ್ 1 – ಒಟ್ಟು 4.5 ಕಿ.ಮೀ
    ಸೇಂಟ್ ಜಾನ್ ಆಸ್ಪತ್ರೆ ಜಂಕ್ಷನ್‌ನಿಂದ ಅಗರ ವರೆಗೆ
    * ಸಂಪರ್ಕ ಕಾರಿಡಾರ್ 2 – ಒಟ್ಟು 2.8 ಕಿ.ಮೀ
    * ಸಂಪರ್ಕ ಕಾರಿಡಾರ್ 3 – ಒಟ್ಟು 6.45 ಕಿ.ಮೀ
    ವೀಲರ್ಸ್ ರಸ್ತೆ ಜಂಕ್ಷನ್‌ನಿಂದ ಹೊರವರ್ತುಲದ ಕಲ್ಯಾಣನಗರಕ್ಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Karnataka Budget 2023ː ಬೆಂಗ್ಳೂರು ಅಭಿವೃದ್ಧಿಗೆ 9,698 ಕೋಟಿ – ಪ್ರತಿ ವಾರ್ಡ್‌ನಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕ

    Karnataka Budget 2023ː ಬೆಂಗ್ಳೂರು ಅಭಿವೃದ್ಧಿಗೆ 9,698 ಕೋಟಿ – ಪ್ರತಿ ವಾರ್ಡ್‌ನಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕ

    ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ (Karnataka Budget 2023-24) ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಬೆಂಗಳೂರು ಸಮಗ್ರ ಅಭಿವೃದ್ಧಿಗೆ (Bengaluru Development) ಭರ್ಜರಿ ಉಡುಗೊರೆ ನೀಡಿದ್ದಾರೆ. ಬೆಂಗಳೂರು ಸಮಗ್ರ ಅಭಿವೃದ್ಧಿ ವಲಯಕ್ಕೆ 2023-24ನೇ ಸಾಲಿಗೆ 9,698 ಕೋಟಿ ರೂ. ಅನುದಾನ ಒದಗಿಸಿರುವುದಾಗಿ ಘೋಷಿಸಿದರು.

    ಮುಖ್ಯಾಂಶಗಳು:
    ಬೆಂಗಳೂರು (Bengaluru) ನಗರದ ಸಂಚಾರ ದಟ್ಟಣೆ ಕಡಿಮೆ ಮಾಡಲು, ಹೆಚ್ಚು ಸಂಚಾರ ದಟ್ಟಣೆ ಇರುವ ಪ್ರಮುಖ 75 ಜಂಕ್ಷನ್‌ಗಳನ್ನು 150 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಿದೆ. ಇದಕ್ಕೆ ಪೂರಕವಾಗಿ ಕೃತಕ ಬುದ್ಧಿಮತ್ತೆ (Artificial Intelligence) ಬಳಕೆಯೊಂದಿಗೆ ಟ್ರಾಫಿಕ್ ಸಿಗ್ನಲ್‌ಗಳ (Traffic Signal) ನಿರ್ವಹಣೆ ಮಾಡುವ ಮೂಲಕ `ಸೀಮ್‌ಲೆಸ್ ಸಿಗ್ನಲಿಂಗ್’ ಅನ್ನು ಅಳವಡಿಸಿಕೊಂಡು ಸಂಚಾರ ದಟ್ಟಣೆ ಕಡಿಮೆ ಮಾಡಲಾಗುವುದು.

    ಟಿನ್ ಫ್ಯಾಕ್ಟರಿ (Tin Factory) ಮೇಡಹಳ್ಳಿ ವರೆಗೆ 350 ಕೋಟಿ ರೂ. ವೆಚ್ಚದಲ್ಲಿ 5 ಕಿ.ಮೀ. ಎಲಿವೇಟೆಡ್ ರಸ್ತೆ ನಿರ್ಮಾಣ ಹಾಗೂ ಸಬ್ ಅರ್ಬನ್ ರೈಲ್ವೆ ನಿಗಮದ ರೈಲು ಜಾಲದೊಂದಿಗೆ ಸಮನ್ವಯ ಸಾಧಿಸಿ ಯಶವಂತಪುರ ರೈಲು ನಿಲ್ದಾಣದಿಂದ ಮತ್ತಿಕೆರೆ ಹಾಗೂ ಬಿಇಎಲ್ (BEL) ರಸ್ತೆಯ ವರೆಗೆ ಮೇಲ್ವೇತುವೆ ನಿರ್ಮಿಸಿ ನೇರ ಸಂಪರ್ಕ ಒದಗಿಸಲಾಗುವುದು. ಇದನ್ನೂ ಓದಿ: Karnataka Budget 2023: ರೈತರಿಗೆ ಬಂಪರ್‌ ಗಿಫ್ಟ್‌ – 5 ಲಕ್ಷದವರೆಗೆ ಬಡ್ಡಿ ರಹಿತ ಸಾಲ

    1,000 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ 120 ಕಿ.ಮೀ. ಆರ್ಟೀರಿಯಲ್ ರಸ್ತೆಯ ವೈಟ್ ಟಾಪಿಂಗ್ ಹಾಗೂ ನಗರದ 300 ಕಿಮೀ ಆರ್ಟೀರಿಯಲ್ ಹಾಗೂ ಸಬ್-ಆರ್ಟೀರಿಯಲ್ ರಸ್ತೆಗಳನ್ನು 450 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಇದನ್ನೂ ಓದಿ: Karnataka Budget 2023: ದೋಣಿಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಇಂಜಿನ್‌ ಅಳವಡಿಕೆಗೆ 50 ಸಾವಿರ ಸಹಾಯಧನ

    ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಉದ್ದದ ಸ್ಯಾಟಲೈಟ್ ಟೌನ್ ರಿಂಗ್ ರಸ್ತೆ ನಿರ್ಮಿಸಲು ಕಡಿತಗೊಳಿಸಲು 13,139 ಕೋಟಿ ರೂ. ವೆಚ್ಚದಲ್ಲಿ 288 ಕಿಮೀ ಕೇಂದ್ರ ಸರ್ಕಾರದ ಅನುಮೋದನೆ ದೊರೆತಿದೆ. ಈ ಯೋಜನೆಗೆ ಭೂಸ್ವಾಧೀನದ ಶೇ.30 ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರದ ವತಿಯಿಂದ ಭರಿಸಲು ಒಪ್ಪಿಗೆ ನೀಡಲಾಗಿದೆ.

    ಬೆಂಗಳೂರು ನಗರದಲ್ಲಿ ಉತ್ಪಾದನೆಯಾಗುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಿಸಲು ವಿವಿಧ ಕ್ರಮ ತೆಗೆದುಕೊಳ್ಳಲಾಗುವುದು. ಒಂದೇ ವಾಹನದಲ್ಲಿ ಹಸಿ ಕಸ ಹಾಗೂ ಒಣ ಕಸ ಸಂಗ್ರಹಿಸುವ ವಿನ್ಯಾಸದ ಆಟೋ ಟಿಪ್ಪರ್ ಹಾಗೂ ಕಾಂಪಾಕ್ಟರ್‌ಗಳು ಕಾರ್ಯ ನಿರ್ವಹಿಸಲಿವೆ. ಪ್ರತಿ ವಾರ್ಡ್‌ ಒಂದರಂತೆ ತ್ಯಾಜ್ಯ ಸಂಸ್ಕರಣಾ ಕೇಂದ್ರ ಸಹ ಸ್ಥಾಪಿಸಲಾಗುತ್ತದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • Aero India-2023 ಏರ್‌ಶೋಗೆ ಪ್ರಧಾನಿ ಮೋದಿ ಅದ್ಧೂರಿ ಚಾಲನೆ

    Aero India-2023 ಏರ್‌ಶೋಗೆ ಪ್ರಧಾನಿ ಮೋದಿ ಅದ್ಧೂರಿ ಚಾಲನೆ

    ಬೆಂಗಳೂರು: ಯಲಹಂಕದ ವಾಯುನೆಲೆಯಲ್ಲಿ 5 ದಿನಗಳ ಕಾಲ ನಡೆಯುವ ವಿಶ್ವದ ಗಮನ ಸೆಳೆಯುವ ಏರೋ ಇಂಡಿಯಾ-2023 (Aero India 2023) ವೈಮಾನಿಕ ಪ್ರದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅಧಿಕೃತ ಚಾಲನೆ ನೀಡಿದರು.

    ದೇಶದ 32 ದೇಶದ ರಕ್ಷಣಾ ಸಚಿವರು, 29 ರಾಷ್ಟ್ರಗಳ ವಾಯುಪಡೆಯ ಮುಖ್ಯಸ್ಥರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಸಾರಂಗ್, ಸೂರ್ಯಕಿರಣ್, ವೈಮಾನಿಕ ಪ್ರದರ್ಶನ ತಂಡ, ಸುಖೋಯ್, ರಫೆಲ್ (Rafale Jet), ತೆಜಸ್ ಸೇರಿದಂತೆ ಒಟ್ಟು 67 ವಿಮಾನಗಳಿಂದ ಸಾಹಸ ಪ್ರದರ್ಶನ ನಡೆಯಲಿದೆ. ಕಳೆದ ಬಾರಿ 44 ವಿಮಾನಗಳು ಪ್ರದರ್ಶನ ತೋರಿದ್ದವು. ಇದನ್ನೂ ಓದಿ: ವಾರದಲ್ಲಿ 4ನೇ ಕಾರ್ಯಾಚರಣೆ – ಮತ್ತೊಂದು ಹಾರುವ ವಸ್ತುವನ್ನು ಹೊಡೆದುರುಳಿಸಿದ ಅಮೆರಿಕ

    ಏರ್ ಶೋನ (Air Show) ಮೊದಲ ಮೂರು ದಿನ ವಹಿವಾಟಿಗೆ ಸೀಮಿತಗೊಳಿಸಲಾಗಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಫೆ.16, 17 ರಂದು ಮಾತ್ರ ವೈಮಾನಿಕ ಪ್ರದರ್ಶನ ನೋಡಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.

    ಇಂಡಿಯನ್ ಪೆವಿಲಿಯನ್ ವಿಶೇಷ ಹೇಗಿದೆ ಗೊತ್ತಾ?
    ಭಾರತ ನಿರ್ಮಿತ ಯುದ್ಧ ವಿಮಾನ (Fighter Jet), ಹೆಲಿಕಾಪ್ಟರ್ ಹಾಗೂ ತಂತ್ರಜ್ಞಾನಗಳ ಪ್ರದರ್ಶನಕ್ಕಾಗಿಯೇ ಪ್ರತ್ಯೇಕವಾಗಿ ಇಂಡಿಯನ್ ಪೆವಿಲಿಯನ್ ನಿರ್ಮಾಣ ಮಾಡಲಾಗಿದೆ. ಅದರಲ್ಲಿ 115 ಕಂಪನಿಗಳು, 227 ಉತ್ಪನ್ನಗಳ ಪ್ರದರ್ಶನಕ್ಕಿಡಲಾಗುತ್ತಿದೆ. 149 ಉತ್ಪನ್ನಗಳನ್ನ ಭೌತಿಕವಾಗಿಯೇ ಪ್ರದರ್ಶಿಸಲಾಗಿದೆ. ಇದನ್ನೂ ಓದಿ: ರಾಜಭವನದಲ್ಲಿ ಮೋದಿ ರಾತ್ರಿ ವಾಸ್ತವ್ಯ – 800ಕ್ಕೂ ಹೆಚ್ಚು ಪೊಲೀಸರಿಂದ ಬಿಗಿಭದ್ರತೆ

    ಏರೋ ಇಂಡಿಯಾ 2023ರ ವಿಶೇಷತೆ:
    2023ರ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ 98 ದೇಶಗಳಿಂದ 809 ಪ್ರದರ್ಶಕರು ಪಾಲ್ಗೊಂಡಿದ್ದು, 67 ವಿಮಾನಗಳನ್ನ ಪ್ರದರ್ಶಿಸಲಾಗುತ್ತಿದೆ. ಒಟ್ಟು 75 ಸಾವಿರ ಕೋಟಿ ರೂ. ಗಳ 251 ಒಪ್ಪಂದಗಳು ನಡೆಯಲಿವೆ. 32 ವಿದೇಶಿ ರಕ್ಷಣಾ ಸಚಿವರು ಹಾಗೂ ವಿವಿಧ ದೇಶಗಳ 29 ವಾಯುಪಡೆ ಮುಖ್ಯಸ್ಥರು ಭಾಗವಹಿಸಲಿದ್ದಾರೆ.

    ಏರ್ ಶೋ ಮುಖ್ಯಾಂಶಗಳೇನು?
    ಈ ಬಾರಿ ಏರ್ ಶೋನಲ್ಲಿ ಏರ್ ಬಸ್, ಬೋಯಿಂಗ್, ಡಸಾಲ್ಟ್ ಏವಿಯೇಷನ್, ಲಾಕ್ಹೀಡ್ ಮಾರ್ಟಿನ್, ಇಸ್ರೇಲ್ ಏರೋಸ್ಪೇಸ್ ಇಂಡಸ್ಟ್ರೀಸ್‌, ಬ್ರಹ್ಮೋಸ್ ಏರೋಸ್ಪೇಸ್, ಆರ್ಮಿ ಏವಿಯೇಷನ್, ಹೆಚ್.ಸಿ ರೋಬೋಟಿಕ್ಸ್, ಎಸ್‌ಎಎಬಿ, ಸಫ್ರಾನ್, ರೋಲ್ಸ್ ರಾಯ್ಸ್, ಲಾರ್ಸನ್ ಮತ್ತು ಟೂಬ್ರೊ, ಭಾರತ್ ಫೋರ್ಜ್ ಲಿಮಿಟೆಡ್, ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL), ಭಾರತ್ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್ (BEL), ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ಮತ್ತು ಬಿಇಎಂಎಲ್ ಲಿಮಿಟೆಡ್ ಪ್ರಮುಖ ಪ್ರದರ್ಶಕರು ಪಾಲ್ಗೊಂಡಿದ್ದಾರೆ.

    ಭವಿಷ್ಯದ ತಂತ್ರಜ್ಞಾನಗಳ ಪ್ರದರ್ಶನ:
    ಭವಿಷ್ಯದಲ್ಲಿ ತಂತ್ರಜ್ಞಾನದ ಮೇಲೆ ಬೆಳಕು ಚೆಲ್ಲುವ ಉದ್ದೇಶದಿಂದ ಲಘು ಯುದ್ಧ ವಿಮಾನ (LCA) -ತೇಜಸ್, HIT-40, ಡಾರ್ನಿಯರ್ ಲಘು ಯುಟಿಲಿಟಿ ಹೆಲಿಕಾಪ್ಟರ್ (LUH), ಲಘು ಯುದ್ಧ ಹೆಲಿಕಾಪ್ಟರ್ (LCH) ಮತ್ತು ಮುಂದುವರಿದ ಲಘು ಹೆಲಿಕಾಪ್ಟರ್ (ALH) ನಂತಹ ದೇಶೀಯ ವಾಯು ವೇದಿಕೆಗಳ ರಫ್ತನ್ನು ಉತ್ತೇಜಿಸುವ ಗುರಿಯನ್ನು ಏರ್ ಶೋ ಹೊಂದಿದೆ.

    ಏರ್ ಶೋ ನಲ್ಲಿ 100ಕ್ಕೂ ಅಧಿಕ ಮಿತ್ರ ರಾಷ್ಟ್ರಗಳು ಭಾಗಿಯಾಗಲಿದ್ದು, ಕಳೆದ ಎಲ್ಲಾ ವರ್ಷಗಳ ದಾಖಲೆಯನ್ನ ಈ ಬಾರಿ ಏರ್ ಶೋ ಮುರಿಯುವ ವಿಶ್ವಾಸವಿದೆ ಅಂತಾ ರಕ್ಷಣಾ ಸಚಿವರು ಹೇಳಿದ್ದಾರೆ. ಒಟ್ಟಿನಲ್ಲಿ 5 ದಿನಗಳ ಕಾಲ ಬಾನಂಗಳದಲ್ಲಿ ಲೋಹದ ಹಕ್ಕಿಗಳು ಚಮತ್ಕಾರ, ಕಮಾಲ್ ನೋಡಿ, ಪ್ರೇಕ್ಷಕರ ಮಸ್ತ್ ಎಂಜಾಯ್ ಮಾಡಬಹುದು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಇಂದಿನಿಂದ ಅದ್ಧೂರಿ Aero India 2023 ಏರ್ ಶೋ

    ಇಂದಿನಿಂದ ಅದ್ಧೂರಿ Aero India 2023 ಏರ್ ಶೋ

    ಬೆಂಗಳೂರು: ವಿಶ್ವದ ಗಮನ ಸೆಳೆಯುವ ಏರೋ ಇಂಡಿಯಾ-2023 (Aero India 2023) ಏರ್‌ಶೋ ಇಂದಿನಿಂದ (ಫೆ.13) ಆರಂಭಗೊಳ್ಳುತ್ತಿದೆ. ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ (Bengaluru Yalahanka Airfield) 5 ದಿನಗಳ ಕಾಲ ನಡೆಯುವ ವೈಮಾನಿಕ ಪ್ರದರ್ಶನಕ್ಕಿಂದು ಪ್ರಧಾನಿ ಮೋದಿ (Narendra Modi) ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.

    ವಿಶ್ವದ ಗಮನ ಸೆಳೆಯುವ 14ನೇ ಆವೃತಿಯ ಏರ್ ಶೋಗೆ (Air Show) ಕೌಂಟ್ ಡೌನ್ ಶುರುವಾಗಿದೆ. 5 ದಿನಗಳ ಕಾಲ ನಡೆಯಲಿರುವ ಏರೋ ಇಂಡಿಯಾ ಪ್ರದರ್ಶನಕ್ಕೆ ಈಗಾಗಲೇ ಯಲಹಂಕ ವಾಯನೆಲೆ ಸಜ್ಜಾಗಿದ್ದು, ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಸೇರಿ ಹಲವು ಗಣ್ಯರು ಬೆಂಗಳೂರಿಗೆ ಆಗಮಿಸಿದ್ದಾರೆ. ಏರ್ ಶೋ ಹಿನ್ನೆಲೆ ಫೆ.14ರಂದು ಬೆಳಗ್ಗೆ 7.30 ರಿಂದ ಏರ್ ಪೋರ್ಟ್ ಮೇಲ್ಸೇತುವೆ ಮೇಲೆ ವಾಹನಗಳ ಸಂಚಾರಕ್ಕೆ ನಿರ್ಭಂಧ ವಿಧಿಸಲಾಗಿದೆ. ಇದನ್ನೂ ಓದಿ: ರಾಜಭವನದಲ್ಲಿ ಮೋದಿ ರಾತ್ರಿ ವಾಸ್ತವ್ಯ – 800ಕ್ಕೂ ಹೆಚ್ಚು ಪೊಲೀಸರಿಂದ ಬಿಗಿಭದ್ರತೆ

    ಈ ಬಾರಿಯ ಏರ್ ಶೋನಲ್ಲಿ 35,000 ಚದರ ಅಡಿಗಳಲ್ಲಿ ಎಕ್ಸಿಬಿಷನ್ ಆಯೋಜನೆ ಮಾಡಲಾಗಿದ್ದು, ಸಾರ್ವಜನಿಕರಿಗೆ ಜಿಕೆವಿಕೆ ಹಾಗೂ ಜಕ್ಕೂರಿನಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಇದರೊಂದಿಗೆ ಫೆಬ್ರವರಿ 14ರಂದು ನಡೆಯುವ ಕಾರ್ಯಕ್ರಮಕ್ಕೆ 4 ಸಾವಿರ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದ್ದು, ಇಂಡಿಯಾ ಪೆವಿಲಿಯನ್ನಲ್ಲಿ 115 ಕಂಪನಿಗಳು ಭಾಗಿಯಾಗುತ್ತಿದ್ದು, 227 ಉತ್ಪನ್ನಗಳ ಪ್ರದರ್ಶನ ಇರಲಿದೆ.

    ಏರ್‌ಶೋಗೆ ಏನೇನು ಸಿದ್ಧತೆ?: 35 ಸಾವಿರ ಚದರ ಅಡಿಯಲ್ಲಿ ಎಕ್ಸಿಬಿಷನ್ ಆಯೋಜನೆ ಮಾಡಲಾಗಿದೆ. 67 ಫ್ಲೈಯಿಂಗ್‌ ಡಿಸ್‌ಪ್ಲೇ, 36 ಸ್ಟ್ಯಾಂಡಿಂಗ್‌ ಡಿಸ್‌ಪ್ಲೇ ಅಳವಡಿಕೆ ಮಾಡಲಾಗಿದೆ. 809 ಪ್ರದರ್ಶಕರು, 98 ವಿದೇಶಿ ಕಂಪನಿಗಳು ಭಾಗಿಯಾಗಿವೆ. ಫೆಬ್ರವರಿ 14 ರಂದು 32 ದೇಶಗಳ ರಕ್ಷಣಾ ಸಚಿವರು ಏರ್‌ಶೋ ನಲ್ಲಿ ಭಾಗಿಯಾಗಲಿದ್ದಾರೆ.

    ದೇಶಿಯ, ಅಂತರಾಷ್ಟ್ರೀಯ ಯುದ್ಧ ವಿಮಾನಗಳ ಸಾಹಸ ಪ್ರದರ್ಶನ ಹಾಗೂ ವಿಮಾನಯಾನ ಉದ್ಯಮಕ್ಕೆ ಉತ್ತೇಜನ ಕೊಡುವ ವಿವಿಧ ಸ್ಟಾಲ್ ಗಳು ಕೂಡ ಜನರನ್ನ ಆಕರ್ಷಿಸಲಿವೆ. ಇದನ್ನೂ ಓದಿ: ಜೆಡಿಎಸ್‍ನಲ್ಲಿ ಮುಗಿಯದ ಟಿಕೆಟ್ ಗೊಂದಲ- ಅರಸೀಕೆರೆಗೆ ಬಾಣಾವರ ಅಶೋಕ್ ಫಿಕ್ಸ್

    ಏರ್ ಶೋ ನಲ್ಲಿ 100ಕ್ಕೂ ಅಧಿಕ ಮಿತ್ರ ರಾಷ್ಟ್ರಗಳು ಭಾಗಿಯಾಗಲಿದ್ದು, ಕಳೆದ ಎಲ್ಲಾ ವರ್ಷಗಳ ದಾಖಲೆಯನ್ನ ಈ ಬಾರಿ ಏರ್ ಶೋ ಮುರಿಯುವ ವಿಶ್ವಾಸವಿದೆ ಅಂತಾ ರಕ್ಷಣಾ ಸಚಿವರು ಹೇಳಿದ್ದಾರೆ. ಒಟ್ಟಿನಲ್ಲಿ 5 ದಿನಗಳ ಕಾಲ ಬಾನಂಗಳದಲ್ಲಿ ಲೋಹದ ಹಕ್ಕಿಗಳು ಚಮತ್ಕಾರ, ಕಮಾಲ್ ನೋಡಿ, ಪ್ರೇಕ್ಷಕರ ಮಸ್ತ್ ಎಂಜಾಯ್ ಮಾಡಬಹುದು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಆಗಸ್ಟ್ 21 ರಿಂದ 90 ದಿನ ಗೂಡ್‍ಶೆಡ್ ರಸ್ತೆ ಬಂದ್

    ಆಗಸ್ಟ್ 21 ರಿಂದ 90 ದಿನ ಗೂಡ್‍ಶೆಡ್ ರಸ್ತೆ ಬಂದ್

    – ಪರ್ಯಾಯ ಮಾರ್ಗ ಹೀಗಿದೆ

    ಬೆಂಗಳೂರು: ವೈಟ್ ಟ್ಯಾಪಿಂಗ್ ಕಾಮಗಾರಿ ಹಿನ್ನೆಲೆ ಮುಂದಿನ 90 ದಿನ ಬೆಂಗಳೂರಿನ ಪ್ರಮುಖ ರಸ್ತೆ ಗೂಡ್ ಶೆಡ್ ರೋಡ್ ಬಂದ್ ಆಗುತ್ತಿದೆ. ಗೂಡ್ ಶೆಡ್ ರೋಡ್ ನಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.

    ಬಿಜಿಎಸ್ ಮೇಲ್ಸೇತುವೆಯ ಅಂಬೇಡ್ಕರ್ ಡೌನ್ ರ‍್ಯಾಂಪ್ ನಿಂದ ಡಾ.ಟಿಸಿಎಂ ರಾಯನ್ ಸರ್ಕಲ್ ವರೆಗೂ 1.5 ಕಿಮೀ ವರೆಗೂ ವೈಟ್ ಟ್ಯಾಪಿಂಗ್ ಕೆಲಸ ನಡೆಯಲಿದ್ದು, 90 ದಿನಗಳ ಕಾಲ ರಸ್ತೆ ಬಂದ್ ಆಗಲಿದೆ. ಮೈಸೂರು ರಸ್ತೆಯಿಂದ ಮೆಜೆಸ್ಟಿಕ್ ಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯಲ್ಲಿ ಲಕ್ಷಾಂತರ ವಾಹನಗಳು ಸಂಚಾರ ಮಾಡುತ್ತವೆ. ಈಗ ರಸ್ತೆ ಬಂದ್ ಆಗುತ್ತಿರೋದರಿಂದ ಪರ್ಯಾಯ ಮಾರ್ಗ ಅನುಸರಿಸಬೇಕಾಗುತ್ತದೆ.

    ಒಟ್ಟು ಎರಡು ಹಂತದಲ್ಲಿ ವೈಟ್ ಟ್ಯಾಪಿಂಗ್ ನಡೆಯಲಿದೆ. ಮೊದಲ ಹಂತದಲ್ಲಿ ಅಂಬೇಡ್ಕರ್ ಡೌನ್ ರ‍್ಯಾಂಪ್ ನಿಂದ ಬೇಲಿ ಮಠದ ರಸ್ತೆವರೆಗೆ ಮತ್ತು ಎರಡನೇ ಹಂತದ ಕಾಮಗಾರಿ ಕಾಟನ್‍ಪೇಟೆಯ ಅಡ್ಡ ರಸ್ತೆವರೆಗೆ ನಡೆಯಲಿದೆ. ಇದನ್ನೂ ಓದಿ: 1,250 ಕೋಟಿ ರೂ. ಜೊತೆ ಘನಿ ಪರಾರಿ – ಈಗ ಯುಎಇಯಲ್ಲಿ ಆಶ್ರಯ

    ಪರ್ಯಾಯ ಮಾರ್ಗ ಹೇಗೆ?
    ಮೈಸೂರು ರಸ್ತೆಯಿಂದ ಮೆಜೆಸ್ಟಿಕ್ ಕಡೆಗೆ ಸಾಗುವ ವಾಹನಗಳು ಮೈಸೂರು ರಸ್ತೆಯ ಬಾಡಿ ಬಿಲ್ಡರ್ ಜಂಕ್ಷನ್ ನಿಂದ ಸರ್ವಿಸ್ ರಸ್ತೆಯ ಮೂಲಕ ಸಿರ್ಸಿ ಜಂಕ್ಷನ್ ಬಂದು ಬಳಿಕ ಎಡ ತಿರುವು ಪಡೆದು ಬಿನ್ನಿಮಿಲ್ ಟ್ಯಾಂಕ್ ಬಂಡ್ ರಸ್ತೆಯ ಬಾಳೆಕಾಯಿ ಮಂಡಿ ಜಂಕ್ಷನ್ ಗೆ ಬಂದು ಬಿನ್ನಿ ಮಿಲ್ ಜಂಕ್ಷನ್ ನಿಂದ ಬಲ ತಿರುವು ಪಡೆದು ಟಿಸಿಎಂ ರಾಯನ್ ಸರ್ಕಲ್ ಗೆ ಬಂದು ಶಾಂತಲ ಸಿಲ್ಕ್ ರೋಡ್ ಮೂಲಕ ಮೆಜೆಸ್ಟಿಕ್ ತಲುಪಬಹುದು. ಇದನ್ನೂ ಓದಿ: ವರಮಹಾಲಕ್ಷ್ಮಿ ಹಬ್ಬಕ್ಕೆ ಶಾಪಿಂಗ್ – ಕೊರೊನಾ ನಿಯಮಗಳಿಗೆ ಕ್ಯಾರೇ ಅನ್ನುತ್ತಿಲ್ಲ ಜನ

  • ಬೆಂಗ್ಳೂರಲ್ಲಿ ಭಾರೀ ಮಳೆ- ಕೊಚ್ಚಿ ಹೋಯ್ತು ಬೈಕ್, ಕೆರೆಯಂತಾದ ರಸ್ತೆಗಳು

    ಬೆಂಗ್ಳೂರಲ್ಲಿ ಭಾರೀ ಮಳೆ- ಕೊಚ್ಚಿ ಹೋಯ್ತು ಬೈಕ್, ಕೆರೆಯಂತಾದ ರಸ್ತೆಗಳು

    – ಧರೆಗುರುಳಿದ 40ಕ್ಕೂ ಹೆಚ್ಚು ಮರ

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸ್ಫೋಟದ ನಡುವೆ ರೋಹಿಣಿ ಮಳೆಯ ಅಬ್ಬರ ಮುಂದುವರಿದಿದ್ದು, ರಾಜ್ಯದ ದಕ್ಷಿಣ ಒಳನಾಡಿನಲ್ಲಿ ವರುಣನ ಆರ್ಭಟ ಮುಂದುವರೆದಿದೆ.

    ಬೆಂಗಳೂರಿನಲ್ಲಿ ಸತತ ನಾಲ್ಕನೇ ದಿನವೂ ಸಂಜೆ ಬಿರುಗಾಳಿ ಸಹಿತ ಜೋರು ಮಳೆಯಾಗಿದೆ. ವಾಯು ಮತ್ತು ವರುಣದೇವನ ಅಬ್ಬರಕ್ಕೆ ನಗರದ ಹಲವೆಡೆ 40ಕ್ಕೂ ಹೆಚ್ಚು ಮರಗಳು ಉರುಳಿದ್ದು, ಹಲವು ವಾಹನ ಜಖಂ ಆಗಿದೆ. ಕೆಆರ್ ವೃತ್ತದಲ್ಲಿ ಚಲಿಸುವ ಕಾರಿನ ಮೇಲೆ ಮರ ಬಿದ್ದಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ. ಮಲ್ಲೇಶ್ವರಂನಲ್ಲಿ ಕಟ್ಟವೊಂದಕ್ಕೆ ಹಾನಿಯಾಗಿದ್ದು, ಕಾರೊಂದು ಸಂಪೂರ್ಣವಾಗಿ ಹಾನಿಗೊಂಡಿದೆ.

    ವರುಣನ ಅಬ್ಬರಕ್ಕೆ ಬೆಂಗಳೂರು ಥಂಡಾ ಹೊಡೆದಿದ್ದು, ಮಳೆಯಿಂದ ನಗರದ ಪ್ರಮುಖ ರಸ್ತೆಗಳು ಕೆರೆಯಂತಾಗಿ ವಾಹನ ಸವಾರರು ಪರದಾಡಿದರು. ಬಹುತೇಕ ಕಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ನೆಲಮಂಗಲದಲ್ಲಿ ಬೈಕೊಂದು ಕೊಚ್ಚಿ ಹೋಗಿದೆ. ಹೆಬ್ಬಾಳ ಬಳಿ ಲುಂಬಿಣಿ ಗಾರ್ಡನ್, ಆನಂದರಾವ್ ಸರ್ಕಲ್ ಸಂದ್ಯಾ ಲಾಡ್ಜ್, ವಿಧಾನ ಸೌಧ, ವಿದ್ಯಾರಣ್ಯಪುರ, ಕಾವೇರಿ ಜಂಕ್ಷನ್ ಸೇರಿದಂತೆ ರಾಜಾಜಿನಗರ ಬಳಿ ರಸ್ತೆಯುದ್ದಕ್ಕೂ ಮರಗಳು ರಸ್ತೆಗೆ ಉರುಳಿ ಬಿದಿದ್ದವು. ಪರಿಣಾಮ ಇಂದು ಸಂಜೆ ವೇಳೆಗೆ ಬಿಬಿಎಂಪಿ ಕಂಟ್ರೋಲ್ ರೂಂಗೆ ಸುಮಾರು 35ಕ್ಕೂ ಹೆಚ್ಚಾಗಿ ಮರ ಉರುಳಿ ಬಿದ್ದಿರುವ ಬಗ್ಗೆ ಕರೆಗಳು ಬಂದಿದೆ. ಇತ್ತ ಹಲವು ಸ್ಥಳಗಳಲ್ಲಿ ರಸ್ತೆಗುರುಳಿದ್ದ ಮರದ ಕೊಂಬೆಗಳನ್ನು ಸ್ಥಳೀಯರೇ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದರು. ಬಿಬಿಎಂಪಿ ಸಿಬ್ಬಂದಿಗಳು ಕೂಡ ಹಲವು ಭಾಗಗಳಲ್ಲಿ ರಸ್ತೆಗುರುಳಿ ಬಿದಿದ್ದ ಮರಗಳನ್ನು ತೆರವುಗೊಳಿಸಿದರು.

    ಇತ್ತ ಕೋಲಾರದಲ್ಲೂ ಬಿರುಗಾಳಿ ಸಹಿತ ಮಳೆಗೆ ಹಲವು ಮನೆಗಳು ಕುಸಿದಿದ್ದೂ, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕನುಮನಹಳ್ಳಿ ಚೆಕ್‍ಪೋಸ್ಟ್ ಗೆ ಹಾನಿಯಾಗಿದೆ. ಹತ್ತಾರು ಎಕರೆ ಬಾಳೆ ಬೆಳೆ ನೆಲಕಚ್ಚಿದೆ.