Tag: Bengaluru Traffic Jam

  • ಸಾಲು ಸಾಲು ರಜೆ ಬಳಿಕ ಬೆಂಗಳೂರಿನತ್ತ ಜನ – ನೆಲಮಂಗಲ ಬೈಪಾಸ್ ಬಳಿ ಟ್ರಾಫಿಕ್ ಜಾಮ್

    ಸಾಲು ಸಾಲು ರಜೆ ಬಳಿಕ ಬೆಂಗಳೂರಿನತ್ತ ಜನ – ನೆಲಮಂಗಲ ಬೈಪಾಸ್ ಬಳಿ ಟ್ರಾಫಿಕ್ ಜಾಮ್

    – ಟ್ರಾಫಿಕ್ ಮಧ್ಯೆಯೇ ಸಿಲುಕಿದ ಆಂಬುಲೆನ್ಸ್

    ಬೆಂಗಳೂರು: ಸಾಲು ಸಾಲು ರಜೆ ಬಳಿಕ ಊರಿಗೆ ತೆರಳಿದ್ದ ಜನರು ಬೆಂಗಳೂರಿನತ್ತ ಬರುತ್ತಿದ್ದು, ಈ ಹಿನ್ನೆಲೆ ನೆಲಮಂಗಲದ ಕುಣಿಗಲ್ ಬೈಪಾಸ್ ಬಳಿ ಟ್ರಾಫಿಕ್ ಜಾಮ್ ಆಗಿದೆ.ಇದನ್ನೂ ಓದಿ: ಬ್ರೇಕ್ ಫೇಲ್ ಆಗಿ ರಸ್ತೆಬದಿ ಕಂದಕಕ್ಕೆ ನುಗ್ಗಿದ ಬಿಎಂಟಿಸಿ ಬಸ್

    ಶುಕ್ರವಾರದಿಂದ ಭಾನುವಾರದವರೆಗೆ ಮೂರು ದಿನ ಸಾಲು ಸಾಲು ರಜೆಯಿದ್ದ ಕಾರಣ ಹೆಚ್ಚಿನವರು ಊರಿಗೆ ತೆರಳಿದ್ದರು. ಇದೀಗ ರಜೆ ಮುಗಿಸಿ ಊರಿನಿಂದ ಬೆಂಗಳೂರಿನತ್ತ ಜನರು ಬರುತ್ತಿದ್ದು, ಮಂಗಳೂರು-ಬೆAಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.

    ಬೆಂಗಳೂರು ಹೊರವಲಯದ ನೆಲಮಂಗಲದ ಕುಣಿಗಲ್ ಬೈಪಾಸ್ ಬಳಿ ವಾಹನಗಳು ಸಾಲುಗಟ್ಟಿ ನಿಂತಿದ್ದು, ಮಳೆಯೇ ನಡುವೆ ದ್ವಿಚಕ್ರ ವಾಹನ ಸವಾರರು ಪರದಾಡುವಂತಾಗಿದೆ. ಮೂರು ದಿನಗಳ ರಜೆ ಮುಗಿಸಿ ಹೆಚ್ಚಿನ ಜನರು ಬೆಂಗಳೂರಿಗೆ ಮರಳುತ್ತಿರುವ ಹಿನ್ನೆಲೆ ಟ್ರಾಫಿಕ್ ಜಾಮ್ ಆಗಿದೆ. ಇದೆಲ್ಲದರ ಮಧ್ಯೆಯೇ ಆಂಬುಲೆನ್ಸ್ ಸಿಲುಕಿಕೊಂಡಿದ್ದು, ಪ್ರಯಾಣಿಕರು ಹೈರಾಣಾಗಿದ್ದಾರೆ.ಇದನ್ನೂ ಓದಿ: ನೇಣು ಬಿಗಿದ ಸ್ಥಿತಿಯಲ್ಲಿ ಪತ್ನಿ ಶವ ಪತ್ತೆ – ಪತಿ ವಿರುದ್ಧ ಕೊಲೆ ಆರೋಪ

  • Bengaluru Traffic Jam: ರಜೆ ಮುಗಿಸಿ ಬೆಂಗಳೂರಿನತ್ತ ಜನ, ಎಲ್ಲೆಲ್ಲೂ ಜಾಮ್‌ ಜಾಮ್!

    Bengaluru Traffic Jam: ರಜೆ ಮುಗಿಸಿ ಬೆಂಗಳೂರಿನತ್ತ ಜನ, ಎಲ್ಲೆಲ್ಲೂ ಜಾಮ್‌ ಜಾಮ್!

    ಬೆಂಗಳೂರು: ದೀಪಾವಳಿ ಹಬ್ಬಕ್ಕೆ (Deepavali festival) ಸಾಲು ಸಾಲು ರಜೆ ಹಿನ್ನೆಲೆ ತಮ್ಮ ಊರುಗಳಿಗೆ ತೆರಳಿದ್ದ ಜನ, ರಜೆ ಮುಗಿಸಿ ಬೆಂಗಳೂರಿಗೆ ವಾಪಸ್‌ ಆಗುತ್ತಿದ್ದಾರೆ. ಈ ಹಿನ್ನೆಲೆ ನಗರದ ವಿವಿಧೆಡೆ ಟ್ರಾಫಿಕ್‌ ಜಾಮ್‌ (Traffic Jam) ಸಮಸ್ಯೆ ಉಂಟಾಗಿದೆ.

    ಬೆಂಗಳೂರು-ತುಮಕೂರು ರಸ್ತೆ (Bengaluru Tumkur Road), ಕೆ.ಆರ್ ಪುರಂ ಮುಖ್ಯರಸ್ತೆ ಹಾಗೂ ಗೊರಗುಂಟೆಪಾಳ್ಯದಿಂದ ಗೋವರ್ಧನ್‌ ವೃತ್ತದ ವರೆಗೂ ಫುಲ್‌ ಟ್ರಾಫಿಕ್‌ ಜಾಮ್‌ ಉಂಟಾಗಿದೆ. ಭಾನುವಾರ ತಡರಾತ್ರಿಯಿಂದಲೇ ಟ್ರಾಫಿಕ್‌ ಜಾಮ್‌ ಸಮಸ್ಯೆ ಉಂಟಾಗಿದ್ದು, ಇದರಿಂದ ಅನ್ಯಜಿಲ್ಲೆಯ ಉದ್ಯೋಗಿಗಳು ಪರದಾಡುವಂತಾಗಿದೆ. ಇದನ್ನೂ ಓದಿ: Canada | ಹಿಂದೂ ದೇವಾಲಯದಲ್ಲಿ ಭಕ್ತರ ಮೇಲೆ ಖಲಿಸ್ತಾನಿ ಗುಂಪು ಅಟ್ಯಾಕ್‌ – ಜಸ್ಟಿನ್‌ ಟ್ರುಡೋ ಖಂಡನೆ

    ಮೆಟ್ರೋದತ್ತ ಮುಖ ಮಾಡಿದ ಜನ:
    ದೀಪಾವಳಿ ರಜೆ ಮುಗಿಸಿ ಬೆಂಗಳೂರಿನತ್ತ ಜನ ದಾಂಗುಡಿ ಇಡುತ್ತಿದ್ದಾರೆ. ಹೀಗಾಗಿ ತುಮಕೂರು ರಸ್ತೆಯಲ್ಲಿ ಜನರಿಗೆ ಟ್ರಾಫಿಕ್ ಜಾಮ್ ಬಿಸಿ ತಟ್ಟಿದೆ. ಟ್ರಾಫಿಕ್‌ಗೆ ಬೇಸತ್ತು ನಾಗಸಂಧ್ರ ಮೆಟ್ರೋ ನಿಲ್ದಾಣದ ಬಳಿ ಇಳಿದು ಜನ ಮೆಟ್ರೋ ಸಂಚಾರದ ಮೊರೆ ಹೋಗುತ್ತಿದ್ದಾರೆ. ಈ ಹಿನ್ನಲೆ ನಾಗಸಂಧ್ರ ಮೆಟ್ರೋ ನಿಲ್ದಾಣ ಫುಲ್ ರಶ್ ಆಗಿದೆ.

    ನಗರದ ಗೊರಗುಂಟೆಪಾಳ್ಯದ ಬಳಿಯೂ ಕಿಲೋ ಮೀಟರ್‌ಗಟ್ಟಲೇ ಟ್ರಾಫಿಕ್‌ ಜಾಮ್‌ ಉಂಟಾಗಿದೆ. ಗೊರಗುಂಟೆಪಾಳ್ಯದಿಂದ ಗೋವರ್ಧನ್‌ ವೃತ್ತದ ವರೆಗೆ ಫುಲ್‌ ಟ್ರಾಫಿಕ್‌ ಜಾಮ್‌ ಉಂಟಾಗಿದೆ. ಇದರಿಂದ ಬೆಂಗಳೂರು ನಗರ ಪ್ರವೇಶಿಸುವಷ್ಟರಲ್ಲಿ ಜನ ಹೈರಾಣಾಗುತ್ತಿದ್ದಾರೆ. ಇದನ್ನೂ ಓದಿ: ಗುರು ಆತ್ಮಹತ್ಯೆಗೆ ಅಸಲಿ ಕಾರಣ ಇನ್ನೂ ನಿಗೂಢ – ಮೊಬೈಲ್‌, ಟ್ಯಾಬ್‌ FSLಗೆ ಕಳಿಸಲು ತಯಾರಿ