Tag: Bengaluru Trekkers

  • ಉತ್ತರಾಖಂಡ ಹಿಮ ದುರಂತದ ಬಗ್ಗೆ ಸಚಿವ ಕೃಷ್ಣಬೈರೇಗೌಡ ಪ್ರತಿಕ್ರಿಯೆ

    ಉತ್ತರಾಖಂಡ ಹಿಮ ದುರಂತದ ಬಗ್ಗೆ ಸಚಿವ ಕೃಷ್ಣಬೈರೇಗೌಡ ಪ್ರತಿಕ್ರಿಯೆ

    – ಬದುಕುಳಿದ ಚಾರಣಿಗರು ದೈಹಿಕವಾಗಿ ಸ್ಥಿರವಾಗಿದ್ದಾರೆ.. ಮಾನಸಿಕವಾಗಿ ಭಯದಲ್ಲಿದ್ದಾರೆ

    ಬೆಂಗಳೂರು: ಉತ್ತರಾಖಂಡ (Uttarakhand) ಸಹಸ್ರತಾಲ್‌ ಟ್ರೆಕ್ಕಿಂಗ್‌ ವೇಳೆ ಹವಾಮಾನ ವೈಪರೀತ್ಯದಿಂದ ಅಪಾಯಕ್ಕೆ ಸಿಲುಕಿ ರಕ್ಷಿಸಲ್ಪಟ್ಟ ಕರ್ನಾಟಕದ ಚಾರಣಿಗರನ್ನು (Bengaluru Trekkers) ಬೆಂಗಳೂರಿಗೆ ಸುರಕ್ಷಿತವಾಗಿ ವಾಪಸ್‌ ಕರೆತರಲಾಯಿತು. ಈ ವೇಳೆ ಹಿಮ ದುರಂತ ಹಾಗೂ ಚಾರಣಿಗರ ರಕ್ಷಣೆ ಬಗ್ಗೆ ಸಚಿವ ಕೃಷ್ಣಬೈರೇಗೌಡ ಪ್ರತಿಕ್ರಿಯೆ ನೀಡಿದರು.

    ನಗರದಲ್ಲಿ ಮಾತನಾಡಿದ ಅವರು, ಒಟ್ಟು 22 ಜನ ಬೆಂಗಳೂರಿಗರು ಚಾರಣಕ್ಕೆ ಹೋಗಿದ್ದರು. 9 ಜನರು ಮೃತಪಟ್ಟಿದ್ದಾರೆ. ಉಳಿದವರನ್ನ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದೇವೆ. ಉತ್ತರಕಾಶಿಯಿಂದ ಡೆಹ್ರಾಡೂನ್ ಮೂಲಕ ಮೃತದೇಹಗಳನ್ನ ತರಲಾಗ್ತಿದೆ. 9 ಮೃತದೇಹಗಳನ್ನ ತರುವ ಚಾರ್ಟರ್ ಫ್ಲೈಟ್ ಸಿಗಲಿಲ್ಲ. ಹೀಗಾಗಿ ತಡ ಆಗುತ್ತಿದೆ. ಬೆಳಗಿನ ಜಾವದಿಂದ ಎರಡೆರೆಡು ಮೃತದೇಹಗಳಂತೆ ಐದು ಚಾರ್ಟರ್ ಫ್ಲೈಟ್ ಮೂಲಕ ಬರುತ್ತೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಸಾವಿನ ಕೂಪದಂತಿದ್ದ ಸಹಸ್ರತಾಲ್‌ ಹಿಮದ ಹೊದಿಕೆಯಿಂದ ಬದುಕುಳಿದವರು ಬೆಂಗಳೂರಿಗೆ ವಾಪಸ್‌

    ನಾಮತ್ತಾಲ್‌ದಿಂದ ಸಹಸ್ತ್ರತಾಲ್ ಸರೋವರಕ್ಕೆ ಬರುವ ವೇಳೆ ಹವಮಾನ ವೈಪರೀತ್ಯವಾಗಿ ಮಂಜು ಆವರಿಸಿಕೊಂಡು, ಮುಂದೆ ಸಾಗೋದಕ್ಕೂ ಆಗದೇ ಕಾಲಕ್ರಮೇಣ ಇಬ್ಬರು, ಇನ್ನಿಬ್ಬರು ಮೃತಪಟ್ಟಿದ್ದಾರೆ. ಜೂ.3 ಮಧ್ಯಾಹ್ನ ಘಟನೆ ಆಗಿದ್ದು, ಜೂ.4 ರ ರಾತ್ರಿ ನಮಗೆ ಮಾಹಿತಿ ಸಿಕ್ಕಿತು. ಭಾರತೀಯ ವಾಯುಸೇನೆಯ ವಿಮಾನ ಮೂಲಕ ರಕ್ಷಣಾ ಕಾರ್ಯ ಮಾಡಲಾಯಿತು. ಜೂ.5 ರಂದು 11 ಜನರ ರಕ್ಷಣೆ ಮಾಡಲಾಯ್ತು. ಇವತ್ತು 13 ಜನರನ್ನು ರಾಜ್ಯ ಸರ್ಕಾರ ಕರೆದುಕೊಂಡು ಬಂದಿದೆ. ಇದರ ಖರ್ಚು ವೆಚ್ಚ ಸರ್ಕಾರ ಭರಿಸುವ ಬಗ್ಗೆ ಸಿಎಂ ಸೂಚನೆ ನೀಡಿದರು ಎಂದು ತಿಳಿಸಿದರು.

    ತ್ವರಿತಗತಿಯಲ್ಲಿ ರಕ್ಷಣಾ ಕಾರ್ಯ ಆಗಿದ್ದರಿಂದ ಕೆಲವರ ಪ್ರಾಣ ಉಳಿಯಿತು. ನಮ್ಮ ರಾಜ್ಯದ ಅಧಿಕಾರಿಗಳು, ಉತ್ತರಾಖಂಡ ಅಧಿಕಾರಿಗಳು ಸಹಕಾರ ನೀಡಿದ್ದಾರೆ. ಮೃತ ಚಾರಣಿಗರ ಆತ್ಮಕ್ಕೆ ಶಾಂತಿ ಸಿಗಲಿ. ರಕ್ಷಣೆಯಾದ 13 ಜನರ ಆರೋಗ್ಯ ಸ್ಥಿರವಾಗಿದೆ. 11 ಜನ ಚಾರಣಕ್ಕೆ ಹೋಗಿದ್ದರು. ಇನ್ನಿಬ್ಬರು ಹೋಗಿರಲಿಲ್ಲ. ಇನ್ನೂ ಮಾನಸಿಕವಾಗಿ ಭಯದಲ್ಲಿದ್ದಾರೆ. ದೈಹಿಕವಾಗಿ ಸ್ಥಿರವಾಗಿದ್ದಾರೆ. ಆತಂಕದಲ್ಲಿದ್ದಾರೆ. ಚಾರಣಕಕ್ಕೆ ಹೋದ 22 ಜನ ಬೆಂಗಳೂರಿನವರೇ. ಇವರೆಲ್ಲರೂ ಹವ್ಯಾಸಿ ಚಾರಣಿಗರೇ. ಹವಾಮಾನ ವೈಪರೀತ್ಯದ ಬಗ್ಗೆ ಮುನ್ಸೂಚನೆ ಇರಲಿಲ್ಲ ಅಂತಾ ಅವರ ಹೇಳಿಕೆ. ಈ ರೀತಿಯ ಘಟನೆಗಳು ಅಪರೂಪ. ದುರಂತ ಆಗಬಾರದಿತ್ತು. ಈ ಘಟನೆ ಅನಿರೀಕ್ಷಿತ. ಈ ಟ್ರೆಕ್ಕಿಂಗ್ ರೂಟ್ ಕಠಿಣ ರೈಟ್ ಆಗಿರಲಿಲ್ಲ ಅಂತಾ ಸ್ಥಳೀಯ ಅಧಿಕಾರಿಗಳು ಹೇಳಿದರು ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಹಿಮಗಾಳಿ ಬಳಿಕ ಎಲ್ಲೆಡೆ ಕಗ್ಗತ್ತಲು, ತಿಂದಿದ್ದು ಡ್ರೈಪ್ರೂಟ್ಸ್‌ ಮಾತ್ರ!

  • ಸಾವಿನ ಕೂಪದಂತಿದ್ದ ಸಹಸ್ರತಾಲ್‌ ಹಿಮದ ಹೊದಿಕೆಯಿಂದ ಬದುಕುಳಿದವರು ಬೆಂಗಳೂರಿಗೆ ವಾಪಸ್‌

    ಸಾವಿನ ಕೂಪದಂತಿದ್ದ ಸಹಸ್ರತಾಲ್‌ ಹಿಮದ ಹೊದಿಕೆಯಿಂದ ಬದುಕುಳಿದವರು ಬೆಂಗಳೂರಿಗೆ ವಾಪಸ್‌

    ಬೆಂಗಳೂರು: ಉತ್ತರಾಖಂಡದ (Uttarakhand) ಸಹಸ್ರತಾಲ್‌ಗೆ ಚಾರಣಕ್ಕೆ ಹೋಗಿದ್ದಾಗ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 9 ಚಾರಣಿಗರು (Bengaluru Trekkers) ಸಾವಿಗೀಡಾಗಿದ್ದಾರೆ. ಇನ್ನುಳಿದ 13 ಮಂದಿಯನ್ನು ರಕ್ಷಿಸಲಾಗಿದೆ. ಎಲ್ಲರೂ ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸ್‌ ಆಗಿದ್ದಾರೆ.

    ರಕ್ಷಿಸಲ್ಪಟ್ಟ ಚಾರಣಿಗರು ಬೆಂಗಳೂರು ವಿಮಾನ ನಿಲ್ದಾಣದ (Bengaluru Airport) ಟರ್ಮಿನಲ್ 1ಗೆ ಬಂದಿಳಿದಿದ್ದಾರೆ. ಚಾರಣಿಗರು ಇಂಡಿಗೋ ಏರ್‌ಲೈನ್ಸ್‌ ವಿಮಾನದಲ್ಲಿ ಸಚಿವ ಕೃಷ್ಣಬೈರೇಗೌಡ ಜೊತೆಗೆ ಬೆಂಗಳೂರಿಗೆ ಬಂದಿಳಿದಿದ್ದಾರೆ. ಇದನ್ನೂ ಓದಿ: ಹಿಮಗಾಳಿ ಬಳಿಕ ಎಲ್ಲೆಡೆ ಕಗ್ಗತ್ತಲು, ತಿಂದಿದ್ದು ಡ್ರೈಪ್ರೂಟ್ಸ್‌ ಮಾತ್ರ!

    ಸಾವಿನ ಕೂಪದಂತಿದ್ದ ಸಹಸ್ರತಾಲ್‌ನ ಹಿಮದ ಹೊದಿಕೆಯಿಂದ ಬಚಾವಾಗಿ ಸಿಲಿಕಾನ್‌ ಸಿಟಿಗೆ ಬಂದಿಳಿದ ಚಾರಣಿಗರು ನಿಟ್ಟುಸಿರು ಬಿಟ್ಟಿದ್ದಾರೆ.

    ಏನಾಗಿತ್ತು?
    ರಾಜ್ಯದ 21 ಚಾರಣಿಗರು ಹಾಗೂ ಓರ್ವ ಗೈಡರ್‌ ಒಳಗೊಂಡ ತಂಡವು ಮೇ 28 ರಂದು ಟ್ರೆಕ್ಕಿಂಗ್‌ಗೆ ಉತ್ತಾರಖಂಡಕ್ಕೆ ಹೋಗಿತ್ತು. ಉತ್ತರಾಕಾಶಿಯಿಂದ 35 ಕಿಮೀ ದೂರದ ಅತ್ಯಂತ ಕಠಿಣ ಹಾದಿಯ ಸಹಸ್ರತಾಲ್‌ ಮಯಳಿ ಎಂಬ ಎತ್ತರದ ಪ್ರದೇಶದಲ್ಲಿ ಜೂ.4 ರಂದು ಬೆಳಗ್ಗೆ ಚಾರಣ ಆರಂಭಿಸಿದ್ದರು. ಚಾರಣದ ಗಮ್ಯಸ್ಥಾನ ತಲುಪಿ ನಂತರ ಶಿಬಿರಕ್ಕೆ ವಾಪಸ್‌ ಆಗುತ್ತಿದ್ದಾಗ ಮಧ್ಯಾಹ್ನದ ಹೊತ್ತಿಗೆ ಹಿಮಗಾಳಿಯಿಂದಾಗಿ ಚಾರಣಿಗರು ಅಪಾಯಕ್ಕೆ ಸಿಲುಕಿದರು. ಇದನ್ನೂ ಓದಿ: ಉತ್ತರಾಖಂಡ ದುರಂತ- ಬದುಕುಳಿದ ಚಾರಣಿಗರು ಇಂದು ರಾತ್ರಿ ಬೆಂಗ್ಳೂರಿಗೆ ವಾಪಸ್

    ಭೀಕರ ಹಿಮಗಾಳಿಯಿಂದಾಗಿ ಕರ್ನಾಟಕದ 9 ಚಾರಣಿಗರು ದಾರುಣ ಸಾವನ್ನಪ್ಪಿದ್ದಾರೆ. ಉಳಿದ ಚಾರಣಿಗರನ್ನು ಕಾರ್ಯಾಚರಣೆ ನಡೆಸಿ ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಕ್ಕೆ ನೆರವಾಗಲು ಕರ್ನಾಟಕದ ಸಚಿವ ಕೃಷ್ಣಬೈರೇಗೌಡ ಅವರು ಕೂಡ ಉತ್ತರಾಖಂಡಕ್ಕೆ ತೆರಳಿದ್ದರು. ಅಪಾಯದಿಂದ ಬದುಕುಳಿದ ಚಾರಣಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ವಾಪಸ್‌ ಕರೆತರಲಾಗಿದೆ.