Tag: bengaluru university

  • ಯುಜಿಸಿ ಯಿಂದ ಮಾನ್ಯತೆ ಕಳೆದುಕೊಳ್ಳುವ ಭೀತಿಯಲ್ಲಿ ಬೆಂಗಳೂರು ವಿವಿ!

    ಯುಜಿಸಿ ಯಿಂದ ಮಾನ್ಯತೆ ಕಳೆದುಕೊಳ್ಳುವ ಭೀತಿಯಲ್ಲಿ ಬೆಂಗಳೂರು ವಿವಿ!

    ಬೆಂಗಳೂರು: ಯುಜಿಸಿಯಿಂದ ಮೈಸೂರಿನ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‍ಓಯು) ಮಾನ್ಯತೆಯನ್ನು ಕಳೆದುಕೊಂಡಿದೆ. ಇಂದು ಬೆಂಗಳೂರು ವಿಶ್ವವಿದ್ಯಾಲಯ ತನ್ನ ನಿರ್ಲಕ್ಷ್ಮದಿಂದ ಯುಜಿಸಿಯಿಂದ ಮಾನ್ಯತೆ ಕಳೆದುಕೊಳ್ಳುವ ಭೀತಿಯಲ್ಲಿದೆ.

    ಬೆಂಗಳೂರು ವಿವಿ ದೂರ ಶಿಕ್ಷಣ ವಿಭಾಗ ನವೀಕರಣ ಮಾಡಿಕೊಳ್ಳಲು ಎರಡು ವರ್ಷಗಳ ಅವಧಿಯನ್ನು ತೆಗೆದುಕೊಂಡಿತ್ತು. ಆದರೆ ಅವಧಿ ಮುಕ್ತಾಯವಾಗುತ್ತಿದ್ದರು, ಕುಲಪತಿ ಮತ್ತು ಕುಲಸಚಿವರು ಇನ್ನೂ ಯಾವುದೇ ದಾಖಲಾತಿಯನ್ನು ನೀಡಿಲ್ಲ. ಈವರೆಗೂ ನವೀಕರಣಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ಯುಜಿಸಿ ಜೊತೆ ಮಾತುಕತೆ ಕೂಡ ನಡೆಸಿಲ್ಲ. ಹೀಗಾಗಿ ನಿಯಮ ಪಾಲನೆ ಮಾಡದ ಹಿನ್ನೆಲೆ ಬೆಂಗಳೂರು ವಿಶ್ವವಿದ್ಯಾಲಯದ ದೂರಶಿಕ್ಷಣ ಕೋರ್ಸ್ ಅನ್ನು ಕಳೆದುಕೊಳ್ಳುವ ಸಾಧ್ಯತೆಗಳು ಕಂಡುಬರುತ್ತಿವೆ. ಇದು ಅಧಿಕಾರಿಗಳ ನಿರ್ಲಕ್ಷ್ಮದಿಂದ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ನಾಶವಾಗುತ್ತಿದೆ.

    ಬೆಂಗಳೂರು ವಿಶ್ವವಿದ್ಯಾಲಯ ನಿಯಮ ಪಾಲನೆ ಮಾಡದೇ ಇದ್ದ ಕಾರಣಕ್ಕೆ 2012-15 ವರೆಗೆ ಯುಜಿಸಿಯ ಮಾನ್ಯತೆ ರದ್ದು ಮಾಡಲಾಗಿತ್ತು. ನಂತರ ಕುಲಪತಿಯಾಗಿದ್ದ ಪ್ರೊ.ತಿಮ್ಮೆಗೌಡರು ಯುಜಿಸಿಗೆ ಸೂಕ್ತ ದಾಖಲೆ ನೀಡಿ 2016-17, 2017-18 ನೇ ಸಾಲಿನ ಎರಡು ವರ್ಷಗಳ ಅವಧಿಗೆ ನವೀಕರಣ ಮಾಡಿಸಿಕೊಂಡರು. ಆದರೆ ಈಗ ಇದರ ಅವಧಿ ಸೆಪ್ಟೆಂಬರ್ 23 ಕ್ಕೆ ಮುಗಿಯುತ್ತಿದ್ದು, ಈವರೆಗೂ ಯುಜಿಸಿಗೆ ಅಗತ್ಯ ದಾಖಲೆಯನ್ನು ಒದಗಿಸಿ ನವೀಕರಣ ಮಾಡಿಕೊಂಡಿಲ್ಲ.

    ಈ ಬಗ್ಗೆ ದೂರ ಶಿಕ್ಷಣ ವಿಭಾಗದ ನಿರ್ದೇಶಕರು ದಾಖಲಾತಿ ಒದಗಿಸೋದನ್ನು ತಡಮಾಡಿದೆ. ಅಂತಿಮವಾಗಿ ಯುಜಿಸಿ ವಿಶ್ವವಿದ್ಯಾಲಯಕ್ಕೆ ಅರ್ಜಿ ಸಲ್ಲಿಸಲು ಒಂದು ತಿಂಗಳು ಅವಧಿಯನ್ನು ವಿಸ್ತರಿಸಿದ್ದು, ಅಷ್ಟರಲ್ಲಿ ದಾಖಲಾತಿ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ. ಹೀಗಾಗಿ ದೂರ ಶಿಕ್ಷಣದಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಜೀವನ ಅತಂತ್ರವಾಗಲಿದೆ ಎಂದು ದೂರ ಶಿಕ್ಷಣ ವಿಭಾಗದ ನಿರ್ದೇಶಕ ಷಡಾಕ್ಷರಿ ತಿಳಿಸಿದ್ದಾರೆ.

    ಸದ್ಯಕ್ಕೆ ದೂರ ಶಿಕ್ಷಣ ವಿಭಾಗದ ನಿರ್ದೇಶಕರ ಅವಧಿ ಮುಕ್ತಾಯವಾಗಿದೆ. ಆದ್ದರಿಂದ ಹೊಸ ನಿರ್ದೇಶಕರ ಹುಡುಕಾಟದಲ್ಲಿ ವಿಶ್ವವಿದ್ಯಾಲಯವಿದೆ.

     

  • ಬೆಂಗಳೂರು ವಿವಿ ಈಜುಕೊಳದಲ್ಲಿ ಪೂಲ್ ಪಾರ್ಟಿ – ವರದಿ ಮಾಡದಂತೆ ಹಣದ ಆಮಿಷ

    ಬೆಂಗಳೂರು ವಿವಿ ಈಜುಕೊಳದಲ್ಲಿ ಪೂಲ್ ಪಾರ್ಟಿ – ವರದಿ ಮಾಡದಂತೆ ಹಣದ ಆಮಿಷ

    ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ಏನಾದ್ರು ಆಯೋಜನೆ ಮಾಡುವಾಗ ಸಂಬಂಧಪಟ್ಟವರು ಲಿಖಿತ ಅನುಮತಿ ನೀಡಬೇಕು ಅಥವಾ ಯಾರಾದ್ರೂ ಹೊರಗಿನವರು ಕಾರ್ಯಕ್ರಮ ಮಾಡೋವಾಗ ಬಾಡಿಗೆ ನೀಡಬೇಕು. ಆದ್ರೆ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದಲ್ಲಿರುವ ಈಜುಕೊಳದಲ್ಲಿ ಪಾರ್ಟಿ ಮಾಡಲು ಪ್ರಾಂಶುಪಾಲರಾದ ಕೃಷ್ಣಸ್ವಾಮಿ ಯಾವುದೇ ಲಿಖಿತ ಅನುಮತಿ ನೀಡದೇ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ.

    ಈ ಬಗ್ಗೆ ಪಬ್ಲಿಕ್ ಟಿವಿಯಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಹಾಕಲಾಗಿದ್ದ ಫೋಟೋಗಳನ್ನು ಡಿಲೀಟ್ ಮಾಡಿದ್ದಾರೆ.

    ಇಂದು ಈ ಕಾರ್ಯಕ್ರಮ ಇದೆ ಅಂತ ಆಯೋಜಕರು ಮಾಧ್ಯಗಳಿಗೆ ಆಹ್ವಾನ ನೀಡಿದ್ರು. ಆದ್ರೆ ಮಾಧ್ಯಮದವರು ಅಲ್ಲಿ ಹೋದಾಗ ಅಲ್ಲಿನ ಪ್ರಾಂಶುಪಾಲರಾದ ಕೃಷ್ಣಸ್ವಾಮಿ ಗಲಿಬಿಲಿಗೆ ಒಳಗಾಗಿ, ನನಗೆ ಈ ಕಾರ್ಯಕ್ರಮದ ಬಗ್ಗೆ ಸರಿಯಾದ ಮಾಹಿತಿ ಇಲ್ಲದೇ ಅನುಮತಿ ಕೊಟ್ಟಿದ್ದೆ. ಈಗ ಕಾರ್ಯಕ್ರಮ ನಡೆಸಲ್ಲ ಎಂದು ಮಾಧ್ಯಮದವರನ್ನ ಸಾಗಹಾಕಿದ್ರು. ಹೀಗಾಗಿ ಮಾಧ್ಯಮದವರು ಹಿಂದಿರುಗಿದ್ದಾರೆ. ಆದ್ರೆ ಆ ಬಳಿಕ ಜುಲೈ 29ರಂದು ಸಂಜೆ ಅನುಮತಿ ನೀಡಿದ್ದಾರೆ. ಯಾಕೆ ಈ ರೀತಿ ನಮ್ಮನ್ನ ದೂರ ಇಟ್ರು ಅಂತ ಮಾಧ್ಯಮ ಮಂದಿ ಹುಡುಕಾಡಿದಾಗ ಅಲ್ಲಿನ ಪಾರ್ಟಿಗೆ ಕೇವಲ ಮೌಖಿಕ ಅನುಮತಿ ನೀಡಲಾಗಿದೆಯೆಂದು ತಿಳಿದುಬಂತು. ಈ ಬಗ್ಗೆ ಪಬ್ಲಿಕ್ ಟಿವಿ ವಿವಿಯ ಪ್ರಾಂಶುಪಾಲ ಕೃಷ್ಣಸ್ವಾಮಿಯರನ್ನು ಪ್ರಶ್ನಿಸಿದಾಗ, ಕಾರ್ಯಕ್ರಮ ನಿಲ್ಲಿಸುತ್ತೇವೆ ಅಂದ್ರು. ಆದ್ರೆ ಅಂದು ಕಾರ್ಯಕ್ರಮ ನಡೆದಿದೆ. ಹೇಗೆ ಅನುಮತಿ ನೀಡಿದ್ರಿ ಅಂದ್ರೆ ಮೌಖಿಕವಾಗಿಯೇ ಅನುಮತಿ ಕೊಟ್ಟೆ ಅನ್ನೋದು ಬಿಟ್ಟು ಬೇರೆ ಮಾತಾಡಲ್ಲ ಪ್ರಾಂಶುಪಾಲ ಕೃಷ್ಣಸ್ವಾಮಿ.

    ಲಿಖಿತ ಆದೇಶ ಎಲ್ಲಿ ಅಂದ್ರೆ ಯಾವುದೋ ಪ್ರಿಂಟ್ ತಂದು ತೊರಿಸ್ತಾರೆ. ಅದು ಅಲ್ಲಿಯೇ ಸಹಿ ಮಾಡಿದ್ದು. ಮೌಖಿಕ ಆದೇಶ ಅಂದ್ರಿ ಇದೆಲ್ಲಿಂದ ಬಂತು? ಅಂತ ಕೇಳಿದ್ರೆ ಮತ್ತೆ ಗಲಿಬಿಲಿಯಾಗ್ತಾರೆ. ಇನ್ನು ಈ ಬಗ್ಗೆ ರಿಜಿಸ್ಟ್ರಾರ್ ರವಿಯವರನ್ನ ಕೇಳಿದ್ರೆ ಇದಕ್ಕೂ ನನಗೂ ಸಂಬಂಧ ಇಲ್ಲ. ಕೃಷ್ಣಸ್ವಾಮಿಯನ್ನ ಕೇಳಿ ಅಂತಾರೆ. ಏನೋ ಕೊಡ್ತೀವಿ ಸುಮ್ಮನಾಗಿ ಸರ್ ಅಂತ ಹಣದ ಆಮಿಷ ಬೇರೆ ನೀಡ್ತಾರೆ ಈ ಪ್ರಿನ್ಸಿಪಾಲ್.

    ವಿವಿಯ ದೈಹಿಕ ಶಿಕ್ಷಣ ವಿಭಾಗದಲ್ಲಿ ಅಕ್ರಮ ನಡೆದಿದೆ ಅನ್ನೋದು ಮೇಲ್ನೋಟಕ್ಕೆ ಗೊತ್ತಾಗುತ್ತಿದ್ರೂ ಸಂಬಂಧಪಟ್ಟವರು ನಿರ್ಲಕ್ಷ್ಯ ತೋರುತ್ತಿದ್ದಾರೆ. ವಿಶ್ವವಿದ್ಯಾಲಯದ ಈಜುಕೊಳ ವಿದ್ಯಾರ್ಥಿಗಳಿಗೆ ಅನುಕೂಲ ಆಗಲಿ ಅಂತ ಇರೋದು. ಅದರಲ್ಲಿ ಕಾರ್ಯಕ್ರಮ ಮಾಡೋದೇ ಆದ್ರೆ ಅನುಮತಿಯ ಮೇರೆಗೆ ಆಗಬೇಕು. ಆದ್ರೆ ಈ ರೀತಿ ತಪ್ಪು ಮಾಡಿದೋರ ವಿರುದ್ಧ ಕ್ರಮ ಯಾವಾಗ ಅನ್ನೊದೇ ಪ್ರಶ್ನೆ.