Tag: Bengaluru Violence

  • ಅಲ್ಲಾ ಎಲ್ಲವನ್ನು ಕೊಡ್ತಾನೆ, ಚಿಂತೆ ಮಾಡ್ಬೇಡಿ – ಅಖಂಡಗೆ ಧೈರ್ಯ ತುಂಬಿದ ಮೌಲ್ವಿಗಳು

    ಅಲ್ಲಾ ಎಲ್ಲವನ್ನು ಕೊಡ್ತಾನೆ, ಚಿಂತೆ ಮಾಡ್ಬೇಡಿ – ಅಖಂಡಗೆ ಧೈರ್ಯ ತುಂಬಿದ ಮೌಲ್ವಿಗಳು

    ಬೆಂಗಳೂರು: ಅಲ್ಲಾ ಎಲ್ಲವನ್ನೂ ಕೊಡ್ತಾನೆ ಯಾವುದೇ ಕಾರಣಕ್ಕೂ ಚಿಂತೆ ಮಾಡಬೇಡಿ ಎಂದು ಪುಲಿಕೇಶಿ ನಗರದ ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರಿಗೆ ಮೌಲ್ವಿಗಳು ಧೈರ್ಯ ತುಂಬಿದ್ದಾರೆ.

    ಗಲಭೆಯಿಂದ ಹೊತ್ತಿ ಉರಿದ ಶಾಸಕರ ಕಾವಲ್‌ ಭೈರಸಂದ್ರದಲ್ಲಿರುವ ಶಾಸಕರ ನಿವಾಸಕ್ಕೆ ಚಾಮರಾಜಪೇಟೆಯ ಕಾಂಗ್ರೆಸ್‌ ಶಾಸಕ ಜಮೀರ್‌ ಅಹಮದ್‌ ನೇತೃತ್ವದಲ್ಲಿ ಮೌಲ್ವಿಗಳು ಭೇಟಿ ನೀಡಿ ವೀಕ್ಷಿಸಿದರು.

    ಹೊತ್ತಿ ಉರಿದ ಮನೆಯನ್ನು ಅಖಂಡ ತೋರಿಸುವ ಸಂದರ್ಭದಲ್ಲಿ ಮೌಲ್ವಿ ಇರ್ಷಾದ್ ಅಹಮ್ಮದ್, ಅಖಂಡ ಶ್ರೀನಿವಾಸ್ ನಮಗೆ ಮನೆ ಮಗ ಇದ್ದಂತೆ. ಎಲ್ಲಾ ಮಸೀದಿಗಳು ನಿಮ್ಮ ಜೊತೆ ಇರುತ್ತದೆ. ಅಲ್ಲಾ ಎಲ್ಲವನ್ನೂ ಕೊಡುತ್ತಾನೆ. ಯಾವುದೇ ಕಾರಣಕ್ಕೂ ಚಿಂತೆ ಮಾಡಬೇಡಿ ಎಂದು ಹೇಳಿ ಧೈರ್ಯ ತುಂಬಿದರು. ಇದನ್ನೂ ಓದಿ: ‘ಬೆಂಕಿ’ ಗಲಾಟೆಯ ಸಂಚುಕೋರನಿಗೆ ಭಯೋತ್ಪಾದಕ ಸಂಘಟನೆಯ ನಂಟು?

    ಮಾಧ್ಯಮಗಳ ಜೊತೆ ಮಾತನಾಡಿದ ಜಮೀರ್‌, ಮನೆ ಕಟ್ಟಿಸಿಕೊಡುವುದಾಗಿ ಧರ್ಮಗುರುಗಳು ಹೇಳಿದ್ದಾರೆ. ಶಾಸಕರು ಒಪ್ಪಿದರೆ ನಾವು ಸ್ವಂತ ಹಣ ದಿಂದ ಮನೆ ಕಟ್ಟಿಸಿಕೊಡೊದಾಗಿ ಹೇಳಿದ್ದಾರೆ. ಯಾರೇ ಕಾನೂನನ್ನು ಕೈಗೆ ತೆಗೆದುಕೊಳ್ಳಬೇಡಿ. ಕಾನೂನಿನ ಮೇಲೆ ನಂಬಿಕೆ ಇದೆ ಎಂದು ಹೇಳಿದರು.

    ಈ ವೇಳೆ ಮಾತನಾಡಿದ ಅಖಂಡ, ಮನೆಯನ್ನು ನಾನೇ ನಿರ್ಮಿಸುತ್ತೇನೆ. ಗುರುಗಳ ಆಶೀರ್ವಾದ ಸದಾ ಇರಲಿ. ನಾವೇ ಹೋಗಿ ಮಾತನಾಡಿಕೊಂಡು ಬರಬೇಕಾಗಿತ್ತು. ಗುರುಗಳೇ ಬಂದು ಆಶೀರ್ವಾದ ಮಾಡಿದ್ದಕ್ಕೆ ಧನ್ಯವಾದಗಳು ಎಂದು ತಿಳಿಸಿದರು.

    ಈ ಮೊದಲು ಮಾಧ್ಯಮಗಳ ಜೊತೆ ಮಾತನಾಡಿದ್ದ ಅಖಂಡ ಶ್ರೀನಿವಾಸ ಮೂರ್ತಿ, ಯಾರು ಈ ಕೃತ್ಯಗಳನ್ನು ಮಾಡಿದ್ದಾರೆ ಎಂಬುದನ್ನು ಪೊಲೀಸ್ ಇಲಾಖೆ ತನಿಖೆ ಮಾಡಿ, ನ್ಯಾಯ ಒದಗಿಸಿಕೊಡಬೇಕು ಎಂದು ದೂರನ್ನು ಕೊಟ್ಟಿದ್ದೇವೆ. ಈ ಗಲಭೆಯಿಂದ ಏನೇನು ನಷ್ಟ ಆಗಿದೆ ಎಂದು ಒಂದು ಪಟ್ಟಿ ಮಾಡಿ ಮಾಡಿಕೊಡುತ್ತೇನೆ. ದೂರಿನಲ್ಲಿ ಯಾರ ಹೆಸರನ್ನು ಹೇಳಿಲ್ಲ. ತನಿಖೆಯ ವೇಳೆ ಪೊಲೀಸರು ಘಟನೆಯ ಬಗ್ಗೆ ಬಹಿರಂಗ ಪಡಿಸುತ್ತಾರೆ ಎಂದು ತಿಳಿಸಿದ್ದರು.

  • ‘ಬೆಂಕಿ’ ಗಲಾಟೆಯ ಸಂಚುಕೋರನಿಗೆ ಭಯೋತ್ಪಾದಕ ಸಂಘಟನೆಯ ನಂಟು?

    ‘ಬೆಂಕಿ’ ಗಲಾಟೆಯ ಸಂಚುಕೋರನಿಗೆ ಭಯೋತ್ಪಾದಕ ಸಂಘಟನೆಯ ನಂಟು?

    – 6 ತಿಂಗಳ ಹಿಂದೆ ಎಸ್‌ಡಿಪಿಐಗೆ ಬಂದು ಸೇರಿದ್ದ
    – ಭಯೋತ್ಪಾದಕ ಸಂಘಟನೆಗಳಿಗೆ ಸ್ಲೀಪರ್ ಸೆಲ್?

    ಬೆಂಗಳೂರು: ‘ಬೆಂಕಿ’ ಗಲಾಟೆಯ ಸಂಚುಕೋರನಿಗೆ ಭಯೋತ್ಪಾದಕ ಸಂಘಟನೆಯ ನಂಟು ಇದ್ಯಾ ಈ ಪ್ರಶ್ನೆಯನ್ನು ಇಟ್ಟುಕೊಂಡು ಬೆಂಗಳೂರು ಪೊಲೀಸರು ತನಿಖೆ ಆರಂಭಿಸಿದ್ದಾರೆ.

    ಗಲಾಭೆಯ ತನಿಖೆ ಆರಂಭಿಸಿರುವ ಪೊಲೀಸರು ಆರೋಪಿಗಳ ಮೊಬೈಲ್‌ ಕರೆ, ವಾಟ್ಸಪ್‌ ಕಾಲ್‌ಗಳನ್ನು ಪರಿಶೀಲಿಸುತ್ತಿದ್ದಾರೆ. ಈ ವೇಳೆ ಗಲಭೆಯ ಸಂಚುಕೋರ ಮುಜಾಮಿಲ್‍ ಕರೆಯಲ್ಲಿ ಸ್ಫೋಟಕ ವಿಚಾರಗಳು ಲಭ್ಯವಾಗಿದೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

    ಪಿಎಫ್‌ಐ ಸಂಘಟನೆ ಸದಸ್ಯನಾಗಿದ್ದ ಮುಜಾಮಿಲ್‌ ಪಾಷಾ 6 ತಿಂಗಳ ಹಿಂದೆ ಎಸ್‌ಡಿಪಿಐ ಸಂಘಟನೆ ಸೇರಿದ್ದ. ಬೆಂಗಳೂರು ಗಲಭೆಯ ಎ1 ಆರೋಪಿ ಆಗಿರುವ ಈತ ಭಯೋತ್ಪಾದನಾ ಸಂಘಟನೆಗಳಿಗೆ ಸ್ಲೀಪರ್‌ ಸೆಲ್‌ ಆಗಿ ಕೆಲಸ ಮಾಡುತ್ತಿದ್ದಾನಾ ಎಂಬ ಅನುಮಾನ ಮೂಡಿದೆ.

    ಪಿಎಫ್‌ಐ ಸಂಘಟನೆಯ ಕಾರ್ಯಕರ್ತರ ಜೊತೆ ಭಯೋತ್ಪಾದನಾ ಸಂಘಟನೆಗಳ ನಂಟು ಇದೆ ಎಂಬ ಆರೋಪ ಈ ಹಿಂದಿನಿಂದಲೂ ಕೇಳಿ ಬರುತ್ತಿದೆ. ಈ ನಿಟ್ಟಿನಲ್ಲಿ ಈಗ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಇದನ್ನೂ ಓದಿ: ವಿಡಿಯೋ: ನವೀನ್ ತಲೆ ತಂದವ್ರಿಗೆ 51 ಲಕ್ಷ ಕೊಡ್ತೀನಿ- ಮುಸ್ಲಿಂ ನಾಯಕ ಘೋಷಣೆ

    ಗಲಭೆಯಲ್ಲಿ ಪಾಲ್ಗೊಂಡವರಿಗೆ ಈತ ಹಣವನ್ನು ಹಂಚಿಕೆ ಮಾಡಿದ್ದಾನೆ ಎಂಬ ಆರೋಪವೂ ಇದೆ. ಹೀಗಾಗಿ ಈತನಿಗೆ ಹಣವನ್ನು ನೀಡಿದವರು ಯಾರು? ಈತನ ಖಾತೆಗೆ ಎಲ್ಲಿಂದ ಹಣ ಜಮೆ ಆಗುತ್ತಿತ್ತು? ಇಷ್ಟು ಪ್ರಮಾಣದಲ್ಲಿ ಜನರನ್ನು ಸೇರಿಸಿದ್ದು ಹೇಗೆ? ಈ ಎಲ್ಲ ಪ್ರಶ್ನೆಗಳನ್ನು ಮುಂದಿಟ್ಟುಕೊಂಡು ತನಿಖೆ ನಡೆಯುತ್ತಿದೆ.

    ಸದ್ಯ ನಡೆಯುತ್ತಿರುವ ವಿಚಾರಣೆ ವೇಳೆ ನಾನು ಧರ್ಮವನ್ನು ಪಾಲಿಸುವ ವ್ಯಕ್ತಿ ಎಂದಷ್ಟೇ ಹೇಳುತ್ತಿದ್ದಾನೆ. ಬೇರೆ ಯಾವುದೇ ಮಾಹಿತಿ ನನ್ನ ಬಳಿ ಇಲ್ಲ ಎಂಬುದಾಗಿ ಉತ್ತರಿಸುತ್ತಿದ್ದಾನೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

    ಒಂದು ವೇಳೆ ಮುಜಾಮಿಲ್‌ ಪಾಷಾನ ವಾಟ್ಸಪ್‌, ಇಮೇಲ್‌, ಮೊಬೈಲ್‌ ಕರೆಗಳ ತನಿಖೆಯ ವೇಳೆ ಹೊರ ದೇಶ ಅಥವಾ ಭಯೋತ್ಪಾದನಾ ಸಂಘಟನೆಗಳ ಜೊತೆ ಸಂಪರ್ಕದ ಶಂಕೆ ವ್ಯಕ್ತವಾದರೆ ಈ ಪ್ರಕರಣಕ್ಕೆ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಎಂಟ್ರಿ ಕೊಡಲಿದೆ. ಒಂದು ವೇಳೆ ಎನ್‌ಐಎ ಎಂಟ್ರಿ ನೀಡಿದರೆ ಈಗ ನಡೆಯುತ್ತಿರುವ ಮ್ಯಾಜಿಸ್ಟ್ರೇಟ್‌ ತನಿಖೆಯ ಸ್ವರೂಪವೇ ಬದಲಾಗಲಿದೆ. ಇದನ್ನೂ ಓದಿ: ಸರ್ಕಾರಿ ಸಂಬಳ ತಗೊಂಡು ಬೆಂಕಿ ಇಟ್ಟ ಕಿರಾತಕ- ಗಲಭೆಯ ಮಾಸ್ಟರ್ ಮೈಂಡ್ ಫೈರೋಜ್ ಖಾನ್

    ಪಾಕಿಸ್ತಾನ ಪ್ರೇರಿತ ಭಯೋತ್ಪಾದನಾ ಸಂಘಟನೆಗಳು ದೇಶದಲ್ಲಿ ದಾಳಿ ನಡೆಸಲು ಮತ್ತು ಭಯೋತ್ಪಾದಕರನ್ನು ತಯಾರಿಸಲು ಇಲ್ಲಿರುವ ವ್ಯಕ್ತಿಗಳನ್ನು ಸಂಪರ್ಕಿಸುವುದು ಹೊಸದೆನಲ್ಲ. ಬಡ ಯುವಕರಲ್ಲಿ ಮತೀಯ ಭಾವನೆಗಳನ್ನು ಬೆಳೆಸಿ ತಮ್ಮ ಕೃತ್ಯದಲ್ಲಿ ಭಾಗಿಯಾಗುವಂತೆ ಪ್ರಚೋದನೆ ನೀಡುವುದನ್ನು ಉಗ್ರ ಸಂಘಟನೆಗಳು ಮಾಡಿಕೊಂಡೇ ಬಂದಿದೆ. ಈ ಯುವಕರಿಗೆ ಹಣದ ಆಮಿಷವನ್ನು ಒಡ್ಡಿ ಉಗ್ರ ಸಂಘಟನೆಗಳಿಗೆ ಸೇರುವಂತೆ ಮಾಡುವುದು ಸ್ಲೀಪರ್‌ ಸೆಲ್‌ ಸದಸ್ಯರ ಕೆಲಸ. ಈ ವ್ಯಕ್ತಿಗಳು ಸಮಾಜ ಸುಧಾರಕರಂತೆ ಬಿಂಬಿಸುತ್ತಾ ಒಳಗಡೆ ಉಗ್ರ ಕೃತ್ಯಗಳಿಗೆ ಸಾಥ್‌ ನೀಡುತ್ತಿರುತ್ತಾರೆ.