Tag: bengluru

  • ಸಚಿವ ಮಹೇಶ್ ರಾಜೀನಾಮೆ – ಎಲ್ಲವನ್ನೂ ಬಹಿರಂಗವಾಗಿ ಹೇಳೋಕಾಗಲ್ಲ: ಸಿಎಂ ಎಚ್‍ಡಿಕೆ

    ಸಚಿವ ಮಹೇಶ್ ರಾಜೀನಾಮೆ – ಎಲ್ಲವನ್ನೂ ಬಹಿರಂಗವಾಗಿ ಹೇಳೋಕಾಗಲ್ಲ: ಸಿಎಂ ಎಚ್‍ಡಿಕೆ

    ಬೆಂಗಳೂರು: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ರಾಜೀನಾಮೆ ಕುರಿತು ಯಾವುದೇ ಹೇಳಿಕೆಗಳನ್ನು ಬಹಿರಂಗವಾಗಿ ಹೇಳುವುದಕ್ಕೆ ಸಾಧ್ಯವಿಲ್ಲವೆಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

    ಸಚಿವರ ರಾಜೀನಾಮೆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದ ಬಿಎಸ್‍ಪಿ ಪಕ್ಷದ ಏಕೈಕ ಶಾಸಕ ಹಾಗೂ ಸಮ್ಮಿಶ್ರ ಸರ್ಕಾರದ ಸಚಿವರಾಗಿದ್ದ ಎನ್.ಮಹೇಶ್‍ರವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕೇವಲ ಪಕ್ಷದ ಸಂಘಟನೆ ದೃಷ್ಟಿಯಿಂದ ಮಾತ್ರ. ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ಸೂಚನೆಯಂತೆ ಅವರು ರಾಜೀನಾಮೆ ಕೊಟ್ಟಿರಬಹುದು ಎಂದು ಹೇಳಿದರು. ಇದನ್ನೂ ಓದಿ: ದೋಸ್ತಿ ಸರ್ಕಾರದ ಮೊದಲ ವಿಕೆಟ್ ಪತನ-ಸಚಿವ ಸ್ಥಾನಕ್ಕೆ ಎನ್. ಮಹೇಶ್ ರಾಜೀನಾಮೆ

    ಬಿಎಸ್‍ಪಿಯಲ್ಲಿ ನಡೆದ ಆಂತರಿಕ ಘಟನೆ ಬಗ್ಗೆ ಹೇಳೋಕೆ ಆಗಲ್ಲ. ಹೀಗಾಗಿ ನಾನು ಎಲ್ಲಾ ವಿಚಾರಗಳನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಪಕ್ಷ ಸಂಘಟನೆಗೆ ಸಾಧ್ಯವಾಗ್ತಿಲ್ಲ ಎಂದು ರಾಜೀನಾಮೆ ನೀಡಿರಬಹುದು. ನನ್ನ ಜತೆಯಲ್ಲಿ ಬಿಎಸ್‍ಪಿ ನಾಯಕರು ನಿರಂತರ ಸಂಪರ್ಕದಲ್ಲಿದ್ದಾರೆ. ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇನೆ. ಯಾವುದೇ ಊಹಾಪೋಹಗಳಿಗೆ ನಾನು ಉತ್ತರ ಕೊಡಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಸಚಿವ ಎನ್.ಮಹೇಶ್ ರಾಜೀನಾಮೆ ನೀಡಲು ಕಾರಣ ಏನು?

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ 6 ಮಂದಿಗೆ ಗಾಯ!

    ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ 6 ಮಂದಿಗೆ ಗಾಯ!

    ಬೆಂಗಳೂರು: ಮನೆಯಲ್ಲಿ ಗ್ಯಾಸ್ ಸಿಲಿಂಡರ್ ನಿಂದ ಅನಿಲ ಸೋರಿಕೆಯಾಗಿ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿ ನಡೆದಿದೆ.

    ಈ ಸಿಲಿಂಡರ್ ಸ್ಫೋಟದಿಂದ ಮನೆಯಲ್ಲಿದ್ದ 6 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ವಿಜಯ್ ಕುಮಾರ್, ಬಲಭೀಮ, ಕಾಶಿನಾಥ್, ರಾಜಶೇಖರ್, ಗಣೇಶ್ ಮತ್ತು ಫಾತಿಮಾ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇವರೆಲ್ಲರೂ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

    ಈ ಘಟನೆಗೆ ಅನಿಲ ಸೋರಿಕೆ ಕಾರಣವಾಗಿದ್ದು, ಇದರ ಅರಿವಿರದ ಮನೆಯವರು ಬೆಳಗ್ಗೆ ಸ್ಟವ್ ಹಚ್ಚಿದ್ದಾರೆ. ಆಗ ಸ್ಫೋಟವಾಗಿದೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿದ್ದು, ಮನೆಯ ಮುಂಬಾಗಿಲು ಛಿದ್ರವಾಗಿದೆ.

    ಘಟನೆ ನಡೆದ ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಮಗನಿಗೆ ಚಾಲೆಂಜ್, ಈಗ ಅಪ್ಪನ ಕಸರತ್ತು!

    ಮಗನಿಗೆ ಚಾಲೆಂಜ್, ಈಗ ಅಪ್ಪನ ಕಸರತ್ತು!

    ಬೆಂಗಳೂರು: ಪ್ರಧಾನಿ ಮೋದಿ ಅವರು ಮುಖ್ಯಮಂತ್ರಿ ಕುಮಾರಸ್ವಾಮಿಗೆ ಫಿಟ್ ನೆಸ್ ಚಾಲೆಂಜ್ ಹಾಕಿದ್ದರು. ಆದರೆ ಈಗ ಮಗನಿಗೆ ಚಾಲೆಂಜ್ ಹಾಕಿದ್ದರಿಂದ ಈಗ ಅಪ್ಪ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ನ ವರಿಷ್ಠ ಅಧಿಕಾರಿ ಎಚ್.ಡಿ. ದೇವೇಗೌಡರು ಕಸರತ್ತು ಮಾಡುತ್ತಿದ್ದಾರೆ.

    ಕರ್ನಾಟಕ ವಿಧಾನಸಭಾ ಚುನಾವಣೆ ಮುಗಿದು ಅಧಿಕಾರಕ್ಕೆ ಸಹ ಬಂದಾಗಿದೆ. ಈಗ ಮತ್ತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ `ಆರೋಗ್ಯ’ದ ಅಖಾಡಕ್ಕಿಳಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಕೆಲ ದಿನಗಳ ಕಾಲ ದೇವೇಗೌಡರು ಯೋಗಾಭ್ಯಾಸ ನಿಲ್ಲಿಸಿದ್ದರು. ಆದರೆ ಹೆಚ್‍ಡಿಕೆಗೆ ಮೋದಿ ಸವಾಲು ಹಾಕುತ್ತಿದ್ದಂತೆ ಮತ್ತೆ ಯೋಗಾಭ್ಯಾಸ ಶುರು ಮಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಪ್ರಧಾನಿ ಮೋದಿ ಸವಾಲಿಗೆ ಟಾಂಗ್ ನೀಡಿ ಉತ್ತರ ಕೊಟ್ಟ ಎಚ್‍ಡಿಕೆ

    ಜೂನ್ 21ರ ಯೋಗ ದಿನದಂದು ದೇವೇಗೌಡರಿಂದ ಮೆಗಾ ಯೋಗಾ ಶೋ ನಡೆಯಲಿದೆ. ಶ್ರೀಜಯ ಸರಸ್ವತಿ ಯೋಗಾ ಕೇಂದ್ರದಿಂದ ಯೋಗ ಗುರು ಕಾರ್ತಿಕ್ ಪಟೇಲ್ ರಿಂದ ದೇವೇಗೌಡರ ಯೋಗ ಶೋ ಆಯೋಜನೆಗೊಂಡಿದೆ. ಪ್ರತಿದಿನ ಬೆಳಗ್ಗೆ 7.30 ರಿಂದ 8.30ರ ತನಕ ದೇವೇಗೌಡರು ಯೋಗಾಭ್ಯಾಸ ಮಾಡುತ್ತಿದ್ದಾರೆ.

    ಏನಿದು ಫಿಟ್ ನೆಸ್ ಚಾಲೆಂಜ್:
    ಕೇಂದ್ರ ಯುವಜನ ಮತ್ತು ಮತ್ತು ಕ್ರೀಡಾ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ಅವರು ಮೇ 22ರಂದು,“ನಾನು ಫಿಟ್ ಆದ್ರೆ ದೇಶ ಫಿಟ್ (#HumFitTohIndiaFit) ನೀವು ನಿಮ್ಮ ಫಿಟ್ನೆಸ್ ಗೆ ಸಂಬಂಧಿಸಿದ ಫೋಟೋ ಮತ್ತು ವಿಡಿಯೋವನ್ನು ಶೇರ್ ಮಾಡಿ” ಎಂದು ಕೊಹ್ಲಿ, ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್, ನಟ ಹೃತಿಕ್ ರೋಷನ್ ಅವರಿಗೆ ಫಿಟ್ ನೆಸ್ ಚಾಲೆಂಜ್ ಹಾಕಿ ಟ್ವೀಟ್ ಮಾಡಿದ್ದರು.

    ವಿರಾಟ್ ಕೊಹ್ಲಿ ಸವಾಲು ಸ್ವೀಕರಿಸಿದ ನಂತರ ಅದನ್ನು ಪ್ರಧಾನಿ ಮೋದಿಯವರಿಗೆ ಸವಾಲು ಹಾಕಿದ್ದರು. ನಂತರ ಕೊಹ್ಲಿಯವರ ಸವಾಲನ್ನು ನಾನು ಸ್ವೀಕರಿಸುತ್ತೇನೆ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ ತಮ್ಮ ಫಿಟ್ನೆಸ್ ವಿಡಿಯೋವನ್ನು ಅಪ್ಲೋಡ್ ಮಾಡಿದ್ದರು. ಸವಾಲನ್ನು ಸ್ವೀಕರಿಸಿದ ಮೋದಿಯವರು ಸಿಎಂ ಕುಮಾರಸ್ವಾಮಿ ಹಾಗೂ ಅಂತರಾಷ್ಟ್ರೀಯ ಟೆಬಲ್ ಟೆನ್ನಿಸ್ ಆಟಗಾರ್ತಿ ಮಣಿಕ ಬಾತ್ರಾ ಅವರಿಗೆ ಚಾಲೆಂಜ್ ನೀಡಿದ್ದರು.

    ಮೋದಿಯವರು ತಮ್ಮ ಫಿಟ್ನೆಸ್ ವಿಡಿಯೋ ಟ್ವಿಟ್ಟರಿನಲ್ಲಿ ಅಪ್ಲೋಡ್ ಮಾಡಿದ್ದರು. ಮೋದಿ ವಿಡಿಯೋ ಹಾಕಿ ಅದ್ದಕ್ಕೆ, “ಇದು ನನ್ನ ಬೆಳಗ್ಗಿನ ವ್ಯಾಯಾಮಗಳು. ಯೋಗ ಹೊರತಾಗಿ ಪಂಚಭೂತಗಳಾದ ಪೃಥ್ವಿ, ಜಲ, ಅಗ್ನಿ, ವಾಯು ಹಾಗೂ ಆಕಾಶದಿಂದ ಪ್ರೇರಣೆಗೊಂಡು ನಾನು ಟ್ರ್ಯಾಕ್‍ಗಳ ಮೇಲೆ ನಡೆಯುತ್ತೇನೆ. ಇದರ ಜೊತೆ ನಾನು ಉಸಿರಾಟದ ವ್ಯಾಯಾಮವನ್ನು ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದರು.

    ವಿಡಿಯೋ ಅಪ್ಲೋಡ್ ಮಾಡಿದ ನಂತರ ಮೋದಿ ಅವರು ಕರ್ನಾಟಕ ಮುಖ್ಯಮಂತ್ರಿ ಶ್ರೀ ಹೆಚ್.ಡಿ ಕುಮಾರಸ್ವಾಮಿ ಹಾಗೂ ಭಾರತದ ಹೆಮ್ಮೆಯ ಅಂತರಾಷ್ಟ್ರೀಯ ಟೇಬಲ್ ಟೆನ್ನಿಸ್ ಆಟಗಾರ್ತಿ ಮಣಿಕಾ ಬಾತ್ರಾ ಅವರಿಗೆ ಈ ಚಾಲೆಂಜ್ ನೀಡಿದ್ದರು.

  • ಉತ್ತರ ಭಾರತ ಮೂಲದ ಯುವತಿಯರಿಂದ ಫ್ಲವರ್ ಡೆಕೋರೇಟರ್‌ಗೆ ಥಳಿತ

    ಉತ್ತರ ಭಾರತ ಮೂಲದ ಯುವತಿಯರಿಂದ ಫ್ಲವರ್ ಡೆಕೋರೇಟರ್‌ಗೆ ಥಳಿತ

    ಬೆಂಗಳೂರು: ಉತ್ತರ ಭಾರತ ಮೂಲದ ಯುವತಿಯರು ನಾಗರಬಾವಿ ರಿಂಗ್ ರಸ್ತೆಯಲ್ಲಿರುವ ನಮ್ಮೂರ ತಿಂಡಿ ಹೋಟೆಲ್ ಬಳಿ ರಂಪಾಟ ನಡೆಸಿದ್ದಾರೆ. ಹೋಟೆಲ್ ಬಳಿ ಇದ್ದ ಫ್ಲವರ್ ಡೆಕೋರೇಟರ್ ಅಂಗಡಿ ಮಾಲೀಕನನ್ನು ಹಿಡಿದು ಥಳಿಸಿದ್ದಾರೆ.

    ಫ್ಲವರ್ ಡೆಕೋರೇಟರ್ ಅಂಗಡಿಗೆ ನಾಲ್ವರು ಯುವತಿಯರು ಮತ್ತು ಒಬ್ಬ ಯುವಕ ವ್ಯಾಪರಕ್ಕಾಗಿ ಆಗಮಿಸಿ ಅಂಗಡಿ ಮಾಲೀಕನ ಜೊತೆ ಗಲಾಟೆಗೆ ಇಳಿದಿದ್ದಾರೆ. ಮೂವರು ಹುಡುಗಿಯರು ಫ್ಲವರ್ ಡೆಕೋರೇಟರ್ ನನ್ನ ಹಿಡಿದು ಥಳಿಸಿದ್ದಾರೆ.

    ಇದನ್ನು ಗಮನಿಸಿದ ಸ್ಥಳೀಯರು ಅಂಗಡಿ ಬಳಿ ಜಮಾಯಿಸಿದ್ದಾರೆ. ವಿಡಿಯೋ ಮಾಡಲು ಮುಂದಾದ ಜನರ ಮೇಲೂ ಹುಡುಗಿಯರು ರಂಪಾಟ ಮಾಡಿದ್ದಾರೆ. ಜನ ಸೇರುತ್ತಿದ್ದಂತೆ ಒಬ್ಬಾಕೆ ಅಲ್ಲಿಂದ ತಪ್ಪಿಸಿಕೊಂಡಿದ್ದಾಳೆ. ಸ್ಥಳೀಯರಿಂದ ಯುವತಿಯರ ವರ್ತನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

    ಯುವತಿಯರ ರಂಪಾಟದಿಂದ ರೊಚ್ಚಿಗೆದ್ದ ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಮೂವರು ಯುವತಿಯರು ಮತ್ತು ಒಬ್ಬ ಯುವಕನನ್ನು ಬಂಧಿಸಿದ್ದಾರೆ. ಅಂಗಡಿ ಮಾಲೀಕನಿಂದ ಮತ್ತು ಪ್ರತ್ಯಕ್ಷದರ್ಶಿಗಳಿಂದ ಹೇಳಿಕೆ ಪಡೆದ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

    https://www.youtube.com/watch?v=romlKVTH408

  • ಫಿಲಂಗೆ ಕರೆದುಕೊಂಡು ಹೋಗೋ ನೆಪದಲ್ಲಿ 7ನೇ ತರಗತಿ ಬಾಲಕಿಯ ಮೇಲೆ ಗ್ಯಾಂಗ್‍ರೇಪ್

    ಫಿಲಂಗೆ ಕರೆದುಕೊಂಡು ಹೋಗೋ ನೆಪದಲ್ಲಿ 7ನೇ ತರಗತಿ ಬಾಲಕಿಯ ಮೇಲೆ ಗ್ಯಾಂಗ್‍ರೇಪ್

    – ಇಬ್ಬರು ಅಪ್ರಾಪ್ತರು ಸೇರಿ ಮೂವರ ಬಂಧನ

    ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮತ್ತೆ ಕಾಮಮೃಗಗಳ ಅಟ್ಟಹಾಸ ಮುಂದುವರೆದಿದೆ. ಫಿಲಂಗೆ ಕರೆದುಕೊಂಡು ಹೋಗುವ ನೆಪದಲ್ಲಿ ಬಾಲಕಿಯ ಮೇಲೆ ಮೂವರು ಯುವಕರು ಸಾಮೂಹಿಕ ಅತ್ಯಾಚಾರವೆಸಗಿರೋ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಬಾಲಕಿ 7ನೇ ತರಗತಿ ವಿದ್ಯಾರ್ಥಿಯೆಂದು ತಿಳಿದುಬಂದಿದೆ. ಮೂವರಲ್ಲಿ ಒಬ್ಬಾತ ಬಾಲಕಿ ಕುಟುಂಬಕ್ಕೆ ಪರಿಚಯಸ್ಥನಾಗಿದ್ದ. ಅಲ್ಲದೆ ಮೂವರಲ್ಲಿ ಇಬ್ಬರು ಯುವಕರು ಅಪ್ರಾಪ್ತರೆಂದು ತಿಳಿದುಬಂದಿದೆ.

    ನಡೆದಿದ್ದೇನು?: ಮೇ 8ರಂದು ಬಾಲಕಿಯನ್ನ ಯಶವಂತಪುರಕ್ಕೆ ಫಿಲಂ ನೋಡಲು ಕರೆದುಕೊಂಡು ಬಂದಿದ್ದ ಆರೋಪಿ ರಾತ್ರಿ 8-30ರ ನಂತರ ಬಾಲಕಿಗೆ ಮತ್ತು ಬರುವ ಜ್ಯೂಸ್ ಕುಡಿಸಿ ಪೀಣ್ಯದ ಪಾಳು ಬಿದ್ದ ಮನೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ. ನಂತರ ಸ್ನೇಹಿತರಿಗೆ ಕರೆ ಮಾಡಿದ್ದು, ಅವರು ಸಹ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ರು. ಘಟನೆ ನಂತರ ಆರೋಪಿಗಳು ಸ್ಥಳದಿಂದ ಕಾಲ್ಕಿತ್ತಿದ್ರು. ರಾತ್ರಿ 10-30ರ ನಂತರ ಎಚ್ಚರಗೊಂಡ ಬಾಲಕಿ ಮನೆ ಕಡೆ ಹೊರಟಾಗ ದಾರಿಯಲ್ಲಿ ಸಿಕ್ಕ ಸ್ನೇಹಿತೆ ಬಳಿ ನಡೆದ ವಿಚಾರವನ್ನೆಲ್ಲಾ ಹೇಳಿದ್ದಾಳೆ. ನಂತರ ಬಾಲಕಿ 5 ದಿನಗಳ ಕಾಲ ಸ್ನೇಹಿತೆಯ ಮನೆಯಲ್ಲೇ ಆಶ್ರಯ ಪಡೆದಿದ್ದಳು. ಅತ್ತ ಬಾಲಕಿಯ ತಾಯಿ ಮಗಳು ನಾಪತ್ತೆಯಾಗಿರೋ ಬಗ್ಗೆ ಮಿಸ್ಸಿಂಗ್ ಕಂಪ್ಲೆಂಟ್ ನೀಡಿದ್ರು.

    5 ದಿನಗಳ ನಂತರ ಮನೆಗೆ ಹೋದ ಬಾಲಕಿ ನಡೆದ ವಿಚಾರವನ್ನೆಲ್ಲಾ ತಾಯಿಗೆ ತಿಳಿಸಿದ್ದಾಳೆ. ಬಾಲಕಿಯ ತಾಯಿ ಮಗಳನ್ನು ಠಾಣೆಗೆ ಕರೆತಂದು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೆÇಲೀಸರು ಇಬ್ಬರು ಬಾಲಾಪರಾಧಿಗಳು ಸೇರಿದಂತೆ ಮೂವರನ್ನ ಬಂಧಿಸಿದ್ದಾರೆ.

  • ರಾಜ್ಯಾದ್ಯಂತ `ರಾಜಕುಮಾರ’ನ ಹವಾ- ದಾವಣಗೆರೆಯಲ್ಲಿ ಅಪ್ಪು ಅಭಿಮಾನಿಗಳಿಗೆ ಲಾಠಿಚಾರ್ಜ್

    ರಾಜ್ಯಾದ್ಯಂತ `ರಾಜಕುಮಾರ’ನ ಹವಾ- ದಾವಣಗೆರೆಯಲ್ಲಿ ಅಪ್ಪು ಅಭಿಮಾನಿಗಳಿಗೆ ಲಾಠಿಚಾರ್ಜ್

    – ಮಧ್ಯರಾತ್ರಿಯಿಂದಲೇ ಭಾರೀ ಸಡಗರ

    ಬೆಂಗಳೂರು: ರಾಜ್ಯಾದ್ಯಂತ ಪವರ್ ಸ್ಟಾರ್ ಪುನಿತ್ ರಾಜ್‍ಕುಮಾರ್ ಅಭಿನಯದ `ರಾಜಕುಮಾರ’ ಸಿನಿಮಾದ ಹವಾ ಜೋರಾಗಿದೆ. ದಾವಣಗೆರೆ, ಬಳ್ಳಾರಿ ಶೀವಮೊಗ್ಗ ಸೇರಿದಂತೆ ಹಲವೆಡೆ ಮಧ್ಯರಾತ್ರಿಯೇ ಪ್ರದರ್ಶನ ಕಂಡಿದೆ. ದಾವಣಗೆರೆಯಲ್ಲಂತೂ ರಾಜಕುಮಾರನನ್ನು ನೋಡಲು ಸಾವಿರಾರು ಅಭಿಮಾನಿಗಳು ಮುಗಿಬಿದ್ದಿದ್ರು. ಗೀತಾಂಜಲಿ ಹಾಗೂ ಪುಷ್ಪಾಂಜಲಿ ಚಿತ್ರಮಂದಿರಗಳ ಬಳಿ ನೂರಾರು ಅಭಿಮಾನಿಗಳು ರಾತ್ರಿ 9 ಗಂಟೆಯಿಂದಲೇ ಟಿಕೆಟ್‍ಗಾಗಿ ಕ್ಯೂ ನಿಂತಿದ್ದರು. ಆದ್ರೆ, ಟಿಕೆಟ್ ಹಂಚಿಕೆ ತಡವಾದ ಕಾರಣ ಅಭಿಮಾನಿಗಳು ಟಿಕೆಟ್ ಕೌಂಟರ್‍ಗೆ ನುಗ್ಗಿ ದಾಂಧಲೆ ನಡೆಸಲು ಯತ್ನಿಸಿದ್ರು. ಈ ವೇಳೆ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ರು.

    ಕೊಪ್ಪಳದಲ್ಲಿ ಕೂಡ ಕಲ್ಲು ತೂರಾಟ ನಡೆದಿದೆ. ಗಂಗಾವತಿಯ ಪ್ರಶಾಂತ ಚಿತ್ರಮಂದಿರದಲ್ಲಿ ರಾತ್ರಿ 1 ಗಂಟೆಗೆ ಆರಂಭವಾಗಬೇಕಿದ್ದ ರಾಜಕುಮಾರ ಸಿನಿಮಾ ಶೋ ಬೆಳಗಿನ ಜಾವ 4ಕ್ಕೆ ಆರಂಭವಾಯ್ತು. ಇದ್ರಿಂದ ರೊಚ್ಚಿಗೆದ್ದ ಅಭಿಮಾನಿಗಳು ಚಿತ್ರಮಂದಿರದ ಮೇಲೆ ಕಲ್ಲುತೂರಾಟ ಮಾಡಿದ್ದಾರೆ. ಘಟನೆಯ ಚಿತ್ರ ಥಿಯೇಟರ್‍ನ ಗಾಜು ಪುಡಿಪುಡಿಯಾಗಿವೆ. ಇನ್ನು ಚಿತ್ರ ಮಂದಿರದ ಎದುರು ಅಭಿಮಾನಿಗಳು ಅಪ್ಪುಗೆ ಜೈಕಾರ ಹಾಕಿ ಹರ್ಷ ವ್ಯಕ್ತಪಡಿಸಿದರು.

    ಬಳ್ಳಾರಿಯಲ್ಲಿ ಸಿನಿಮಾಗಳು ನಸುಕಿನ ಜಾವ ತರೆಕಾಣೋದು ಮಾಮೂಲು. ಆದ್ರೆ ಪುನೀತ್ ಅಭಿಮಾನಿಗಳ ಅಬ್ಬರಕ್ಕೆ ಮಣಿದ ಶಿವ ಮತ್ತು ಗಂಗಾ ಚಿತ್ರಮಂದಿರದ ಮಾಲೀಕರು ಮಧ್ಯರಾತ್ರಿ 12ಕ್ಕೆ ಚಿತ್ರ ಪ್ರದರ್ಶನ ಮಾಡಿದ್ರು. ಸಿನಿಮಾ ನೋಡಲು ಪುನೀತ್ ಅಭಿಮಾನಿಗಳು ಮುಗಿಬಿದ್ದಿದ್ರು. ಟಿಕೇಟ್‍ಗೆ ನೂಕುನುಗ್ಗಲು ಏರ್ಪಟ್ಟಿತ್ತು. ಚಿತ್ರಮಂದಿರದ ಎದುರು ಅಪ್ಪು ಅಭಿಮಾನಿಗಳು ಕುಣಿದು ಕುಪ್ಪಳಿಸಿದ್ರು. ಒಟ್ಟಿನಲ್ಲಿ ರಾಜಕುಮಾರ್ ಚಿತ್ರದ ಬಗ್ಗೆ ಬಳ್ಳಾರಿಯಲ್ಲಿ ಪಾಸೀಟವ್ ರೆಸ್ಪಾನ್ಸ್ ಕಂಡು ಬಂತು.

    ತುಮಕೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಕೆಲವೆಡೆ ಗುರುವಾರ ರಾತ್ರಿನೇ `ರಾಜಕುಮಾರ’ನ ಮೊದಲ ಪ್ರದರ್ಶನ ನಡೆದಿದೆ. ಎರಡೂ ಕಡೆ ಅಭಿಮಾನಿಗಳ ಸಂಭ್ರಮ ಮುಗಿಲುಮುಟ್ಟಿತ್ತು.

    ಬೆಂಗಳೂರಿನ ನರ್ತಕಿ ಚಿತ್ರಮಂದಿರಲ್ಲಿ ತಡ ರಾತ್ರಿ ಹಬ್ಬದ ವಾತವಾರಣ ನಿರ್ಮಾಣವಾಗಿತ್ತು. ಇಂದು ಸಿನಿಮಾ ನೋಡೋಕೆ ಬರೋ ವಿಕ್ಷಕರಿಗೆ ಅಖಿಲ ಕರ್ನಾಟಕ ಶಿವರಾಜ್‍ಕುಮಾರ್ ಅಭಿಮಾನಿಗಳ ಸಂಘದ ಮಂದಿ ಹಬ್ಬದ ಸಿಹಿ ಊಟ ಹಾಗು ಯುಗಾದಿಯ ಹೊಳಿಗೆ ಮತ್ತು ಬೇವು ಬೆಲ್ಲವನ್ನ ಹಂಚಲಿದ್ದಾರೆ. ರಾತ್ರಿಯೇ 20 ಅಡುಗೆ ಭಟ್ಟರನ್ನ ಕರೆಸಿ ಚಿತ್ರಮಂದಿರದ ಎದುರೇ 8 ಸಾವಿರ ಹೊಳಿಗೆಯನ್ನ ಮಾಡಿಸಿದ್ದಾರೆ.

    ಇದನ್ನೂ ಓದಿ : `ರಾಜಕುಮಾರ’ ಚಿತ್ರದ ಮೇಕಿಂಗ್ ವಿಡಿಯೋ ರಿಲೀಸ್

    ಇದನ್ನೂ ಓದಿ: ಸ್ಯಾಂಡಲ್‍ವುಡ್‍ನಲ್ಲಿ ದಾಖಲೆ ಬರೆದ ಅಪ್ಪು ಡ್ಯಾನ್ಸ್ ವಿಡಿಯೋ

  • ಅಗ್ನಿ ಶ್ರೀಧರ್ ಮನೆ ಮೇಲೆ ದಾಳಿ ಹೇಗಾಯ್ತು? ಏನೇನು ಸಿಕ್ಕಿದೆ?

    ಬೆಂಗಳೂರು: ಕಾಂಗ್ರೆಸ್ ಮುಖಂಡ, ಎಪಿಎಂಸಿ ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್ ಶೂಟೌಟ್ ಪ್ರಕರಣದಲ್ಲಿ ಇವತ್ತು ಬೆಂಗಳೂರಿನ ಅಂಡರ್ ವರ್ಲ್ಡ್ ಗಢಗಢ ನಡುಗಿದೆ.

    ಈಗಾಗಲೇ ಪೊಲೀಸರ ವಶದಲ್ಲಿರುವ ಬಿಜೆಪಿ ಶಾಸಕರ ಬಲಗೈ ಬಂಟ ಸತೀಶ್ ನೀಡಿದ ಮಾಹಿತಿ ಮೇರೆಗೆ ಇವತ್ತು ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ನೇತೃತ್ವದಲ್ಲಿ ಖ್ಯಾತ ಪತ್ರಕರ್ತ ಅಗ್ನಿ ಶ್ರೀಧರ್ ಅವರ ಇಸ್ರೋ ಲೇಔಟ್ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ

    ಐವರು ಡಿಸಿಪಿಗಳ ತಂಡ ದಾಳಿ ನಡೆಸಿ ರೌಡಿ ಒಂಟೆ ರೋಹಿತ್, ಸೈಲೆಂಟ್ ಸುನೀಲ ಸೇರಿದಂತೆ ಕೆಲ ಆರೋಪಿಗಳನ್ನು ಹುಡುಕಾಡಿದೆ. ಪೊಲೀಸ್ ದಾಳಿ ವೇಳೆ ಅಗ್ನಿ ಶ್ರೀಧರ್ ಮಧ್ಯಾಹ್ನ 3.30ರ ವೇಳೆಗೆ ಲಘು ಹೃದಯಾಘಾತವಾಗಿದ್ದು ಆಂಬುಲೆನ್ಸ್‍ನಲ್ಲೇ ಕುಮಾರಸ್ವಾಮಿ ಲೇಔಟ್‍ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಚ್ಚನ್ ಸೇರಿದಂತೆ ಪೊಲೀಸರು 7 ಮಂದಿಯನ್ನು ಅರೆಸ್ಟ್ ಮಾಡಿದ್ದಾರೆ.

    ದಾಳಿ ಹೇಗಾಯ್ತು?
    ಟಾಟಾ ರಮೇಶ್ ಹಾಗೂ ಕಡಬಗೆರೆ ಶ್ರೀನಿವಾಸ್‍ಗೆ ಒಂಟೆ ರೋಹಿತ್, ಸೈಲೆಂಟ್ ಸುನೀಲ ಬೆದರಿಕೆ ಹಾಕಿದ್ದರು. ಇವರಿಬ್ಬರ ಮೊಬೈಲ್ ಟವರ್ ಲೊಕೇಶನ್ ಬೆನ್ನತ್ತಿದ್ದಾಗ ಇಬ್ಬರು ಪತ್ರಕರ್ತ ಅಗ್ನಿ ಶ್ರೀಧರ್ ಮನೆಯಲ್ಲಿದ್ದಾರೆ ಎನ್ನುವ ಶಂಕೆ ಆಧಾರದಲ್ಲಿ ದಾಳಿ ನಡೆಸಲಾಯಿತು.

    ತಕ್ಷಣ ಸರ್ಚ್ ವಾರೆಂಟ್ ಪಡೆದು ಐವರು ಡಿಸಿಪಿಗಳ ತಂಡದಿಂದ ಏಕಕಾಲಕ್ಕೆ ದಾಳಿ ನಡೆಯುತ್ತದೆ. ಸರ್ಚ್ ವಾರೆಂಟ್ ಇಲ್ಲದ ಕಾರಣ 10 ನಿಮಿಷ ಗೇಟ್ ಮುಂದೆ ಪೊಲೀಸರನ್ನು ಅಗ್ನಿ ಶ್ರೀಧರ್ ನಿಲ್ಲಿಸುತ್ತಾರೆ. ಈ ವೇಳೆ ಅಗ್ನಿ ಶ್ರೀಧರ್ ಮನೆಯಲ್ಲಿದ್ದ 10ಕ್ಕೂ ಹೆಚ್ಚು ಯುವಕರನ್ನು ಪೊಲೀಸರು ವಶಕ್ಕೆ ಪಡೆಯುತ್ತಾರೆ.

    ದಾಳಿ ವೇಳೆ ಮನೆಯಲ್ಲಿ ಲೈಸೆನ್ಸ್ ಇಲ್ಲದ ಗನ್, ಮಾರಕಾಸ್ತ್ರಗಳು ಹಾಗೂ 70 ವಿದೇಶಿ ಮದ್ಯದ ಬಾಟಲ್‍ಗಳು, ಗಾಂಜಾ ಹಾಗೂ ಚಿನ್ನಾಭರಣ ಪತ್ತೆಯಾಗಿದೆ. ಈ ಸಂಬಂಧ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕಾಯ್ದೆಯಡಿ ಅಗ್ನಿ ಶ್ರೀಧರ್ ಮೇಲೆ ಎಫ್‍ಐಆರ್ ದಾಖಲಾಗಿದೆ.

    ಅಗ್ನಿ ಶ್ರೀಧರ್ ಆಪ್ತ, ಭೂಗತಪಾತಕಿ ಚೋಟಾ ರಾಜನ್ ಸಹಚರನಾಗಿದ್ದ ಅಮಾನ್ ಅಲಿಯಾಸ್ ಸೈಯದ್ ಅಮಾನುಲ್ಲಾ ಬಚ್ಚನ್ ನನ್ನು ಪೊಲೀಸರು ಬಂಧಿಸಿದ್ದಾರೆ. ದಯಾನಂದ ಸಾಗರ್ ಆಸ್ಪತ್ರೆಯಲ್ಲಿ ಅಗ್ನಿ ಶ್ರೀಧರ್ ನೋಡಲು ಬಂದ ವೇಳೆ ರಾತ್ರಿ 8.30ರ ವೇಳೆ ಸೈಲೆಂಟ್ ಸುನೀಲನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಸೈಲೆಂಟ್ ಸುನೀಲನ ಗಾಯತ್ರಿನಗರ, ಪ್ರಕಾಶ್ ನಗರ, ಕುಮಾರಸ್ವಾಮಿ ಲೇಔಟ್‍ನ ಮನೆಗಳ ಮೇಲೆ ಪೊಲೀಸರು ಶೋಧ ನಡೆಸಿದ್ದರು.

  • ಮನೆಯಲ್ಲಿ ಪೊಲೀಸರ ಶೋಧ: ಅಗ್ನಿ ಶ್ರೀಧರ್‍ಗೆ ಲಘು ಹೃದಯಾಘಾತ

    ಬೆಂಗಳೂರು: ಬರಹಗಾರ ಅಗ್ನಿ ಶ್ರೀಧರ್‍ಗೆ ಲಘು ಹೃದಯಾಘಾತವಾಗಿದ್ದು, ಕುಮಾರಸ್ವಾಮಿ ಲೇಔಟ್‍ನಲ್ಲಿರುವ ಸಾಗರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಕಡಬಗೆರೆ ಶ್ರೀನಿವಾಸ್ ಹತ್ಯೆ ಸಂಚು ಕೇಸ್‍ನಲ್ಲಿ ರೌಡಿ ಶೀಟರ್ ರೋಹಿತ್ ಕೈವಾಡದ ಶಂಕೆ ಇರುವ ಹಿನ್ನೆಲೆಯಲ್ಲಿ ಇಸ್ರೋ ಲೇಔಟ್‍ನಲ್ಲಿರುವ ಅಗ್ನಿ ಶ್ರೀಧರ್ ಮನೆಯ ಮೇಲೆ ಮಂಗಳವಾರ ಬೆಳಗ್ಗೆ ಪೊಲೀಸರು ದಾಳಿ ನಡೆಸಿ ಶೋಧ ಆರಂಭಿಸಿದ್ದರು.

    ಬೆಳಗ್ಗೆಯಿಂದ ಪೊಲೀಸರ ವಿಚಾರಣೆ ಉತ್ತರಿಸುತ್ತಿದ್ದ ಅಗ್ನಿ ಶ್ರೀಧರ್‍ಗೆ ಮಧ್ಯಾಹ್ನ 3.30ರ ವೇಳೆಗೆ ಲಘು ಹೃದಯಾಘಾತಕ್ಕೆ ತುತ್ತಾದರು. ಕೂಡಲೇ ಅವರನ್ನು ಅಂಬುಲೆನ್ಸ್ ನಲ್ಲಿ ಸಮೀಪದಲ್ಲಿದ್ದ ಸಾಗರ್ ಆಸ್ಪತ್ರೆಗೆ ದಾಖಲಿಸಲಾಯಿತು.

    ಎಪಿಎಂಸಿ ಅಧ್ಯಕ್ಷ ಕಡಬಗೆರೆ ಸೀನ ಹತ್ಯೆಗೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಯಲಹಂಕ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಬಲಗೈ ಬಂಟ ಸತೀಶ್ ಬಂಧನವಾಗಿತ್ತು. ವಿಚಾರಣೆ ವೇಳೆ ಸತೀಶ್ ರೋಹಿತ್ ಮತ್ತು ಸೈಲೆಂಟ್ ಸುನೀಲ್ ಅಗ್ನಿ ಶ್ರೀಧರ್ ಮನೆಯಲ್ಲಿ ಇರುವುದಾಗಿ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

    ಕೋರ್ಟ್‍ನಿಂದ ಸರ್ಚ್ ವಾರೆಂಟ್ ಪಡೆದು ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್, ಡಿಸಿಪಿಗಳಾದ ಹರ್ಷ, ನಾರಾಯಣ್, ಶರಣಪ್ಪ, ಅನುಚೇತ್ ನೇತೃತ್ವದಲ್ಲಿ ಪೊಲೀಸರು ಇಂದು ಫೀಲ್ಡಿಗೆ ಇಳಿದು ಶೋಧ ಆರಂಭಿಸಿದ್ದರು.

  • ಕಡಬಗೆರೆ ಶೂಟೌಟ್ ಕೇಸ್: ಅಗ್ನಿ ಶ್ರೀಧರ್ ಮನೆಯಲ್ಲಿ ಪೊಲೀಸರ ಶೋಧ

    ಬೆಂಗಳೂರು: ಕಡಬಗೆರೆ ಶ್ರೀನಿವಾಸ್ ಹತ್ಯೆ ಸಂಚು ಕೇಸ್‍ನಲ್ಲಿ ರೌಡಿ ಶೀಟರ್ ರೋಹಿತ್ ಕೈವಾಡದ ಶಂಕೆ ಇರುವ ಹಿನ್ನೆಲೆಯಲ್ಲಿ ಬರಹಗಾರ ಅಗ್ನಿ ಶ್ರೀಧರ್ ಮನೆಯ ಮೇಲೆ ಬೆಂಗಳೂರು ಪೊಲೀಸರು ದಾಳಿ ನಡೆಸಿ ಶೋಧ ಆರಂಭಿಸಿದ್ದಾರೆ.

    ಕಡಬಗೆರೆ ಸೀನನ ಆಪ್ತ ರಮೇಶ್‍ಗೆ ರೌಡಿ ರೋಹಿತ್ ಬೆದರಿಕೆ ಹಾಕಿದ್ದ. ಶೂಟೌಟ್ ನಡೆಯುವುದಕ್ಕೂ 4 ದಿನ ಮೊದಲು ರಮೇಶ್ ಮತ್ತು ಕಡಬಗೆರೆ ಶ್ರೀನಿವಾಸ್ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ.

    ಶೂಟೌಟ್ ನಡೆದ ಬಳಿಕ ಅಗ್ನಿ ಶ್ರೀಧರ್ ಮನೆಯಲ್ಲಿ ರೋಹಿತ್ ಮತ್ತು ಸೈಲೆಂಟ್ ಸುನೀಲ್ ಅಡಗಿರಬಹುದು ಎನ್ನುವ ಶಂಕೆಯ ಆಧಾರದಲ್ಲಿ ಪೊಲೀಸರು ಕೋರ್ಟ್‍ನಿಂದ ಸಂರ್ಚ್ ವಾರೆಂಟ್ ಪಡೆದು ಕುಮಾರಸ್ವಾಮಿ ಲೇಔಟ್ ನಲ್ಲಿರುವ ಮನೆಯಲ್ಲಿ ಶೋಧ ಆರಂಭಿಸಿದ್ದಾರೆ.

    ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್, ಡಿಸಿಪಿಗಳಾದ ಹರ್ಷ, ನಾರಾಯಣ್, ಶರಣಪ್ಪ, ಅನುಚೇತ್ ನೇತೃತ್ವದಲ್ಲಿ ಪೊಲೀಸರು ಇಂದು ಫೀಲ್ಡಿಗೆ ಇಳಿದು ಶೋಧ ಆರಂಭಿಸಿದ್ದಾರೆ.

    ಶ್ರೀಧರ್ ಮನೆಯಲ್ಲಿ ಶೋಧ ಯಾಕೆ?
    ಎಪಿಎಂಸಿ ಅಧ್ಯಕ್ಷ ಕಡಬಗೆರೆ ಸೀನ ಹತ್ಯೆಗೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಯಲಹಂಕ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಬಲಗೈ ಬಂಟ ಸತೀಶ್ ಬಂಧನವಾಗಿತ್ತು. ವಿಚಾರಣೆ ವೇಳೆ ಸತೀಶ್ ರೋಹಿತ್ ಮತ್ತು ಸೈಲೆಂಟ್ ಸುನೀಲ್ ಅಗ್ನಿ ಶ್ರೀಧರ್ ಮನೆಯಲ್ಲಿ ಇರುವುದಾಗಿ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಮೂಲಗಳು ಮಾಹಿತಿ ನೀಡಿವೆ.