Tag: BEO

  • ಲೈಂಗಿಕ ಕಿರುಕುಳ, ಕೊಲೆ ಬೆದರಿಕೆ ಸೇರಿ ಸಾಲು ಸಾಲು ಆರೋಪ – ಬೇಲೂರು ಶಿಕ್ಷಣಾಧಿಕಾರಿ ಅಮಾನತು

    ಲೈಂಗಿಕ ಕಿರುಕುಳ, ಕೊಲೆ ಬೆದರಿಕೆ ಸೇರಿ ಸಾಲು ಸಾಲು ಆರೋಪ – ಬೇಲೂರು ಶಿಕ್ಷಣಾಧಿಕಾರಿ ಅಮಾನತು

    ಹಾಸನ: ಲೈಂಗಿಕ ಕಿರುಕುಳ, ಕೊಲೆ ಬೆದರಿಕೆ ಸೇರಿದಂತೆ ಹಲವು ಆರೋಪಗಳನ್ನು ಎದುರಿಸುತ್ತಿರುವ ಬೇಲೂರು (Belur) ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ (BEO) ರಾಜೇಗೌಡ ಅವರನ್ನು ಅಮಾನತುಗೊಳಿಸಲಾಗಿದೆ.

    ರಾಜೇಗೌಡ ವಿರುದ್ಧದ ಕರ್ತವ್ಯ ಲೋಪ, ಭ್ರಷ್ಟಾಚಾರ, ಲೈಂಗಿಕ ಕಿರುಕುಳ, ಕೊಲೆ ಬೆದರಿಕೆ ಸೇರಿದಂತೆ ಹಲವು ಆರೋಪಗಳು ಮೇಲ್ನೋಟಕ್ಕೆ ಸತ್ಯಕ್ಕೆ ಹತ್ತಿರವಿದೆ. ಈ ಸಂಬಂಧ ಹಾಸನ ಡಿಡಿಪಿಐ ವರದಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಅವರು ಅಮಾನತು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಮಾತು ಬಾರದ ಮಹಿಳೆ ಬಾಯಿಗೆ ಬಟ್ಟೆ ತುರುಕಿ ವಿಕೃತಿ – ಆರೋಪಿ ಅರೆಸ್ಟ್

    ಇತ್ತೀಚೆಗೆ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸ್ಥಳೀಯ ಶಾಸಕ ಹೆಚ್.ಕೆ.ಸುರೇಶ್ ಜೊತೆಗೆ ಬಿಇಓ ರಾಜೇಗೌಡ ವಾಗ್ವಾದ ನಡೆಸಿದ್ದರು. ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರು ಹಾಕದಿದ್ದಕ್ಕೆ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ವೇಳೆ ಶಾಸಕರ ಜೊತೆ ವೇದಿಕೆಯಲ್ಲೇ ಅವರು ವಾಗ್ವಾದ ಮಾಡಿದ್ದರು. ಇದೀಗ ಇಲಾಖಾ ತನಿಖೆ ಕಾಯ್ದಿರಿಸಿ ರಾಜೇಗೌಡರನ್ನು ಅಮಾನತುಗೊಳಿಸಲಾಗಿದೆ. ಇದನ್ನೂ ಓದಿ: ಕಲಬುರಗಿ | ಬೆತ್ತಲೆ ಮಾಡಿ ಕಟ್ಟಿಗೆಯಿಂದ ಹೊಡೆದು ವ್ಯಕ್ತಿಯ ಬರ್ಬರ ಹತ್ಯೆ

  • ವರ್ಗಾವಣೆ ಮಾಡಲು 15 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದ BEO ಲೋಕಾಯುಕ್ತ ಬಲೆಗೆ

    ವರ್ಗಾವಣೆ ಮಾಡಲು 15 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದ BEO ಲೋಕಾಯುಕ್ತ ಬಲೆಗೆ

    ಚಿಕ್ಕಮಗಳೂರು: ಶಿಕ್ಷಕರೊಬ್ಬರನ್ನು (Teacher) ಬೇರೊಂದು ಶಾಲೆಗೆ (School) ವರ್ಗಾವಣೆ ಮಾಡಲು 15 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಜಿಲ್ಲೆಯ ಕಡೂರು ತಾಲೂಕಿನ ಬಿಇಒ (BEO) ಕೆ.ಎನ್.ರಾಜಣ್ಣ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

    ಕಡೂರು ತಾಲೂಕಿನ ಜಿ.ತಿಮ್ಮಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (Government School) ನಿಯೋಜನೆ ಮೇರೆಗೆ ಶಿಕ್ಷಕರಾಗಿದ್ದ ರಾಜಪ್ಪರನ್ನ ಗರ್ಜೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವರ್ಗಾವಣೆ ಮಾಡಲು ಬಿಇಒ 15 ಸಾವಿರಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮಂಗಳವಾರ ಮಧ್ಯಾಹ್ನ ಜಿ.ತಿಮ್ಮಾಪುರ ಗೇಟ್ ಬಳಿ ಹಣ ಪಡೆಯುವಾಗ ಲೋಕಾಯುಕ್ತ ಡಿವೈಎಸ್‌ಪಿ ತಿರುಮಲೇಶ್ ಹಾಗೂ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ದಾಂಡಿಯಾ ನೃತ್ಯ ಮಾಡುವಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದು ವ್ಯಕ್ತಿ ಸಾವು

    ಇಂದು ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿಯಲ್ಲಿರುವ (National Highway) ಜಿ.ತಿಮ್ಮಾಪುರ ಗೇಟ್ ಬಳಿ 15 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾನೆ. ಸಂಜೆವರೆಗೂ ವಿಚಾರಣೆ ನಡೆಸಿದ ಲೋಕಾಯುಕ್ತ ಪೊಲೀಸರು ನಂತರ ಬಿಇಒ ಕೆ.ಎನ್.ರಾಜಣ್ಣ ಅವರನ್ನ ಚಿಕ್ಕಮಗಳೂರು ನ್ಯಾಯಾಂಗ ಬಂಧನಕ್ಕೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಇದನ್ನೂ ಓದಿ: ಹಿಜಬ್ ಧರಿಸದೇ ಕ್ರೀಡೆಯಲ್ಲಿ ಪಾಲ್ಗೊಂಡಿದ್ದ ಮಹಿಳೆಗೆ ಬಂಧನದ ಭೀತಿ

    ದಾಳಿಯಲ್ಲಿ ವೃತ್ತ ನಿರೀಕ್ಷಕರಾದ ಸಚ್ಚಿನ್ ಮತ್ತು ಬಿ. ಮಲ್ಲಿಕಾರ್ಜುನ್, ಸಿಬ್ಬಂದಿ ಚೇತನ್, ಸಲೀಂ, ಲೋಕೇಶ್, ವಿಜಯಭಾಸ್ಕರ್, ಸವಿನಯ, ರವಿಚಂದ್ರ ಇದ್ದರು.

    Live Tv
    [brid partner=56869869 player=32851 video=960834 autoplay=true]

  • ಮಳೆ; ನಾಳೆ ಬೆಂಗಳೂರು ಪೂರ್ವ ಭಾಗದ ಶಾಲೆಗಳಿಗೆ ರಜೆ

    ಮಳೆ; ನಾಳೆ ಬೆಂಗಳೂರು ಪೂರ್ವ ಭಾಗದ ಶಾಲೆಗಳಿಗೆ ರಜೆ

    ಬೆಂಗಳೂರು: ಬೆಂಗಳೂರು ಪೂರ್ವ ಭಾಗದಲ್ಲಿ ಮಳೆಯ ಅವಾಂತರ ಹೆಚ್ಚಾಗಿದ್ದು, ಬುಧವಾರ (ಸೆಪ್ಟೆಂಬರ್ 7ರಂದು) ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

    ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಓ) ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮಳೆ ಹಾವಳಿ: ನಾಳೆ ಸಾಫ್ಟ್‌ವೇರ್ ಕಂಪನಿಗಳ ಜತೆ ಸಭೆ

    ಬೆಂಗಳೂರು ಪೂರ್ವ ತಾಲೂಕು ಕೆ.ಆರ್.ಪುರಂ ದಕ್ಷಿಣ ವಲಯ-4ಕ್ಕೆ ಒಳಪಡುವ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ರಜೆಯನ್ನು ಸರಿದೂಗಿಸಲು ಮುಂದಿನ ಎರಡು ಶನಿವಾರಗಳಂದು ಪೂರ್ಣ ದಿನ ತರಗತಿ ನಡೆಯಲಿದೆ ಎಂದು ಬಿಇಒ ಆದೇಶದಲ್ಲಿ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸೆಕ್ಸ್ ಬಗ್ಗೆ ಚಿಕ್ಕ ಮಕ್ಕಳಿಗೆ ಹೇಳ್ಬೇಕಿತ್ತಾ..?- ಬಿ.ಸಿ.ನಾಗೇಶ್ ಗರಂ

    ಸೆಕ್ಸ್ ಬಗ್ಗೆ ಚಿಕ್ಕ ಮಕ್ಕಳಿಗೆ ಹೇಳ್ಬೇಕಿತ್ತಾ..?- ಬಿ.ಸಿ.ನಾಗೇಶ್ ಗರಂ

    ಬೆಂಗಳೂರು: ಮಕ್ಕಳಿಗೆ ಸಾವಿನ ಬಗ್ಗೆ ಓದಿಸೋ ಅವಶ್ಯಕತೆ ಇತ್ತಾ? ಸೆಕ್ಸ್ ಬಗ್ಗೆ ಚಿಕ್ಕ ಮಕ್ಕಳಿಗೆ ಹೇಳ್ಬೇಕಿತ್ತಾ? ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರಶ್ನಿಸಿದ್ದಾರೆ.

    TEXTBOOK

    ಪಠ್ಯಪುಸ್ತಕ ವಿವಾದಕ್ಕೆ ಸಂಬಂಧಿಸಿದಂತೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿರುವ ಅವರು, ಮಕ್ಕಳಿಗೆ ಸಾವಿನ ಬಗ್ಗೆ ಓದಿಸೋ ಅವಶ್ಯಕತೆ ಇತ್ತಾ? ಸೆಕ್ಸ್ ಬಗ್ಗೆ ಚಿಕ್ಕ ಮಕ್ಕಳಿಗೆ ಹೇಳಬೇಕಿತ್ತಾ? ಇದೆಲ್ಲವನ್ನು ಬರಗೂರು ರಾಮಚಂದ್ರಪ್ಪ ಸಮಿತಿ ಮಾಡಿತ್ತು. ಒಡೆಯರ್ ಬಗ್ಗೆ ಯಾಕೆ ಪಠ್ಯ ಬಿಟ್ಟಿದ್ದರು? ಬೆಂಗಳೂರಿನಲ್ಲಿ ದೇವಸ್ಥಾನ ಇರಲಿಲ್ಲವಾ? ಯಾಕೆ ದೇವಾಲಯದ ಫೋಟೋ ಹಾಕಿಲ್ಲ? ಈಗ ಇದನ್ನ ಸರಿ ಮಾಡುವ ಕೆಲಸ ಮಾಡುತ್ತಿದ್ದೇವೆ. ಅದನ್ನೂ ವಿವಾದಕ್ಕೆ ಎಳೆಯುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರೋಹಿತ್ ಚಕ್ರತೀರ್ಥ ವಜಾ? – ಸಚಿವರ ವರದಿ ಆಧರಿಸಿ ಕ್ರಮ ಕೈಗೊಳ್ತೇನೆಂದ ಸಿಎಂ

    Text book

    ಗೊಂದಲವಿದ್ದರೆ ನಾನೇ ಪರಿಹಾರ ಮಾಡ್ತೇನೆ: ಮೊದಲು ಟಿಪ್ಪು ಅಂದ್ರು, ಅಮೇಲೆ ಭಗತ್ ಸಿಂಗ್ ಬಗ್ಗೆ ವಿವಾದ ಮಾಡಿದ್ರು, ನಂತರ ಕುವೆಂಪು ಅಂದವರೇ ಈಗ ಬಸವಣ್ಣ ಎನ್ನುತ್ತಿದ್ದಾರೆ. ಸತ್ಯ ಹೊರಗಡೆ ಬಂದಹಾಗೇ ಅವರ ನಿಲುವು ಬದಲಾವಣೆ ಮಾಡ್ತಿದ್ದಾರೆ. ಬೇಕು ಅಂತ ವಿವಾದ ಸೃಷ್ಟಿ ಮಾಡ್ತಿದ್ದಾರೆ. ಪಠ್ಯಪುಸ್ತಕದ ಬಗ್ಗೆ ಯಾರಿಗೇ ಗೊಂದಲ ಇರಲಿ. ಸ್ವಾಮೀಜಿಗಳಿಗೆ ಗೊಂದಲ ಇದ್ದರೂ ನಾನೇ ಭೇಟಿ ಮಾಡಿ ಪರಿಹಾರ ಮಾಡ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್, ಜೆಡಿಎಸ್‍ನಲ್ಲಿ ಬಹಳ ಜನ ಸ್ನೇಹಿತರಿದ್ದಾರೆ- ರಾಜಕೀಯ ದಾಳ ಉರುಳಿಸಿದ ಸಿಎಂ

    bc nagesh

    ಪರಿಷ್ಕರಣೆ ಕೆಲಸ ಈಗ ಮುಕ್ತಾಯ ಆಗಿದೆ. ಪದೇ ಪದೇ ಪರಿಷ್ಕರಣೆ ಮಾಡಲು ಆಗೋದಿಲ್ಲ. ಈಗಾಗಲೇ ಶೇ.75 ಪಠ್ಯಪುಸ್ತಕ ಮುದ್ರಣದ ಕಾರ್ಯ ಮುಗಿದಿದೆ. ಶೇ.66 ರಷ್ಟು BEO ಕಚೇರಿಗಳಿಗೆ ತಲುಪಿದೆ. ಕಲಿಕಾ ಚೇತರಿಕೆ ಮುಗಿಯೋ ಒಳಗೆ ಪಠ್ಯ ಪುಸ್ತಕ ತಲುಪಿಸುವ ಪ್ರಯತ್ನ ಮಾಡ್ತಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾಳೆಯೂ ಮಂಗಳೂರು ಕೋರ್ಟ್‌ನಲ್ಲಿ ಮಳಲಿ ವಿಚಾರಣೆ

    ಇದರಲ್ಲಿ ಬಸವಣ್ಣನವರ ಪಠ್ಯ ತೆಗೆದಿಲ್ಲ. ಆದರೆ ಬರಗೂರು ಸಮಿತಿಯಲ್ಲಿ ಏನಿತ್ತು? ಈಗ ಏನು ಸೇರ್ಪಡೆಯಾಗಿದೆ ಎಂಬುದನ್ನು ಚೆಕ್ ಮಾಡ್ತೀವಿ ಎಂದು ಸ್ಪಷ್ಟಪಡಿಸಿದ್ದಾರೆ.

  • ಹಿಜಬ್ ಧರಿಸಿ ಪರೀಕ್ಷಾ ಕೆಲಸಕ್ಕೆ ಹಾಜರಾಗಿದ್ದ ಶಿಕ್ಷಕಿಯನ್ನು ವಾಪಸ್ ಕಳುಹಿಸಿದ ಬಿಇಓ

    ಹಿಜಬ್ ಧರಿಸಿ ಪರೀಕ್ಷಾ ಕೆಲಸಕ್ಕೆ ಹಾಜರಾಗಿದ್ದ ಶಿಕ್ಷಕಿಯನ್ನು ವಾಪಸ್ ಕಳುಹಿಸಿದ ಬಿಇಓ

    ಬೆಂಗಳೂರು: ಹಿಜಬ್ ಧರಿಸಿ ಪರೀಕ್ಷಾ ಕೆಲಸಕ್ಕೆ ಹಾಜರಾಗಿದ್ದ ಶಿಕ್ಷಕಿಯನ್ನು ವಾಪಸ್ ಕಳಿಸಿರುವ ಘಟನೆ ರಾಜಾಜಿನಗರದಲ್ಲಿ ನಡೆದಿದೆ.

    ರಾಜಾಜಿನಗರದ ಶಾಲಾ ಕೇಂದ್ರದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯುತ್ತಿತ್ತು. ಹಿಜಬ್ ಧರಿಸಿ ಪರೀಕ್ಷಾ ಕೆಲಸಕ್ಕೆ ಹಾಜರಾಗಿದ್ದ ಶಿಕ್ಷಕಿಯನ್ನು ಬಿಇಓ ವಾಪಸ್ ಕಳುಹಿಸಿದ್ದಾರೆ.

    ಪಬ್ಲಿಕ್ ಟಿವಿಗೆ ಜೊತೆಗೆ ಮಾತನಾಡಿದ ಬಿಇಓ ರಮೇಶ್, ಶಿಕ್ಷಕಿಯೊಬ್ಬರು ಹಿಜಬ್ ಧರಿಸಿಕೊಂಡು ಬಂದ ಹಿನ್ನೆಲೆ ಪರೀಕ್ಷಾ ಕೆಲಸದಿಂದ ಬಿಡುಗಡೆ ಮಾಡಿ ಕಳಿಸಿಸಲಾಗಿದೆ. ಶಿಕ್ಷಕಿಯನ್ನ ಅಮಾನತು ಮಾಡಿಲ್ಲ. ಪರೀಕ್ಷಾ ಕೆಲಸದಿಂದ ಬಿಡುಗಡೆ ಮಾಡಿ ಕಳಿಸಲಾಗಿದೆ ಎಂದು ಹೇಳಿದ್ದಾರೆ.

    ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಸರ್ಕಾರ ಸಮವಸ್ತ್ರ ನಿಯಮ ಕಡ್ಡಾಯ ಮಾಡಿದೆ. ಎಕ್ಸಾಂಗೆ ಹಿಜಬ್ ನಿಷೇಧ ಮಾಡಿದೆ. ಹೈಕೋರ್ಟ್ ಆದೇಶದ ಮೇಲೆ ಹಿಜಬ್ ಸೇರಿದಂತೆ ಯಾವುದೇ ಧಾರ್ಮಿಕ ಭಾವನೆ ವಸ್ತ್ರಗಳಿಗೆ ಅವಕಾಶ ಇಲ್ಲ. ಸರ್ಕಾರಿ ಶಾಲಾ ಮಕ್ಕಳು ಸರ್ಕಾರ ನಿಗದಿ ಮಾಡಿದ ಸಮವಸ್ತ್ರ ಧರಿಸೋದು ಕಡ್ಡಾಯ ಮಾಡಿದೆ.

    ಖಾಸಗಿ ಶಾಲೆಗಳ ವಿದ್ಯಾರ್ಥಿಗಳು ಆಯಾ ಶಾಲಾ ಆಡಳಿತ ಮಂಡಳಿ ನಿಗದಿ ಪಡಿಸಿದ ಸಮವಸ್ತ್ರ ಧರಿಸಿಕೊಂಡು ಬರೋದು ಕಡ್ಡಾಯವಾಗಿದೆ. ಹಿಜಬ್ ಧರಿಸಿ ಬಂದ್ರೆ ಎಕ್ಸಾಂ ಬರೆಯಲು ಅವಕಾಶ ಇಲ್ಲ. ಇದೇ ಕಾರಣಕ್ಕೆ ಎಕ್ಸಾಂ ಗೈರಾದ್ರೆ ವಿಶೇಷ ಪರೀಕ್ಷೆಗೆ ಅವಕಾಶ ಇಲ್ಲ. ಮತ್ತೆ ಪೂರಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಾಗಿದೆ. ಆದರೆ ಕೆಲವು ವಿದ್ಯಾರ್ಥಿಗಳು ಮಾತ್ರ ಹಿಜಬ್ ತೆಗೆದು ಪರೀಕ್ಷೆಗೆ ಹಾಜರಾದರೆ ಇನ್ನು ಕೆಲವರು ಪರೀಕ್ಷಾ ಕೇಂದ್ರದಿಂದ ಮನೆಗೆ ವಾಪಸ್ ಆಗಿರುವ ಘಟನೆಗಳು ಕೇಳಿಬಂದಿದೆ.

  • ಚೆನ್ನಾಗಿ ಓದು ಎಂದು ವಿದ್ಯಾರ್ಥಿನಿ ಬೆನ್ನು ತಟ್ಟಿದ್ದಕ್ಕೆ ಬಿಇಒಗೆ ಥಳಿತ

    ಚೆನ್ನಾಗಿ ಓದು ಎಂದು ವಿದ್ಯಾರ್ಥಿನಿ ಬೆನ್ನು ತಟ್ಟಿದ್ದಕ್ಕೆ ಬಿಇಒಗೆ ಥಳಿತ

    ಗದಗ: ಚೆನ್ನಾಗಿ ಓದು ಎಂದು ಬೆನ್ನುತಟ್ಟಿ ಪ್ರೋತ್ಸಾಹಿಸಿ ಹೆಗಲ ಮೇಲೆ ಕೈಹಾಕಿದ ಬಿಇಓ ಅಧಿಕಾರಿಯನ್ನು ಪಾಲಕರು ಹಿಗ್ಗಾಮುಗ್ಗ ಥಳಿಸಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿ ನಡೆದಿದೆ.

    ಮುಂಡರಗಿ ಕ್ಷೇತ್ರ ಶಿಕ್ಷಣಾಧಿಕಾರಿ ಶಂಕರ್ ಎನ್. ಹಳ್ಳಿಗುಡಿಯವರ ಮನೆಗೆ ನುಗ್ಗಿ 6 ಜನ ಪಾಲಕರ ಗುಂಪೊಂದು ಮನಬಂದಂತೆ ಹಲ್ಲೆ ಮಾಡಿದೆ. ಮನೆ-ಮನೆಗೆ ಭೇಟಿ ಕಾರ್ಯಕ್ರಮದ ಅಂಗವಾಗಿ ಕ್ಷೇತ್ರದ ಹಳ್ಳಿಕೇರಿ ಗ್ರಾಮಕ್ಕೆ ಶಂಕರ್ ಭೇಟಿ ನೀಡಿದ್ದಾರೆ. ಆಗ ರಾತ್ರಿ ವೇಳೆ ಗ್ರಾಮದ ವಿದ್ಯಾರ್ಥಿನಿ ಮನೆಗೆ ಹೋಗಿದ್ದಾರೆ. ಮನೆಯಲ್ಲಿ ವಿದ್ಯಾರ್ಥಿನಿ ಒಬ್ಬಳೇ ಇದ್ದಾಗ ಚೆನ್ನಾಗಿ ಓದು ಎಂದು ಬೆನ್ನುತಟ್ಟಿ ಪ್ರೋತ್ಸಾಹಿಸಿ ಹೆಗಲ ಮೇಲೆ ಕೈಹಾಕಿದ್ದಾರೆ.

    ಇದನ್ನೇ ಅಪಾರ್ಥ ತಿಳಿದ ಪಾಲಕರು, ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಮೇಲೆ 6 ಜನ ಪಾಲಕರ ತಂಡ ಮುಂಡರಗಿ ಪಟ್ಟಣದ ಅವರ ಮನೆಗೆ ನುಗ್ಗಿ ಮನಬಂದಂತೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ಗಾಯಗೊಂಡಿರುವ ಕೇತ್ರ ಶಿಕ್ಷಣಾಧಿಕಾರಿ ಶಂಕರ್ ಹಳ್ಳಿಗುಡಿ ಅವರನ್ನು ಮುಂಡರಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

    ಈ ಕುರಿತು ಮುಂಡರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಶಾಸಕರ ಎದುರೇ ಶಿಕ್ಷಣಾಧಿಕಾರಿಗೆ ಚಳಿ ಬಿಡಿಸಿದ ವಿದ್ಯಾರ್ಥಿನಿ

    ಶಾಸಕರ ಎದುರೇ ಶಿಕ್ಷಣಾಧಿಕಾರಿಗೆ ಚಳಿ ಬಿಡಿಸಿದ ವಿದ್ಯಾರ್ಥಿನಿ

    -ಫೋನ್‌ನಲ್ಲೇ ಅಧಿಕಾರಿಗೆ ಫುಲ್ ಕ್ಲಾಸ್

    ರಾಯಚೂರು: ಶಿಕ್ಷಕರ ಕೊರತೆ ಹಿನ್ನೆಲೆ ಕರೆ ಮಾಡಿ ಶಾಸಕರನ್ನು ಶಾಲೆಗೆ ಕರೆಸಿ, ಅವರೆದುರೇ ಕ್ಷೇತ್ರ ಶಿಕ್ಷಣಾಧಿಕಾರಿಗೆ ಕರೆ ಮಾಡಿ ವಿದ್ಯಾರ್ಥಿನಿ ಕ್ಲಾಸ್ ತೆಗೆದುಕೊಂಡ ಘಟನೆ ರಾಯಚೂರಿನ ಸಿರವಾರ ತಾಲೂಕಿನ ಮಲ್ಲಟ ಗ್ರಾಮದಲ್ಲಿ ನಡೆದಿದೆ.

    ಮಲ್ಲಟ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಖಾಯಂ ಶಿಕ್ಷಕರಿಲ್ಲದೆ ಕಾಟಾಚಾರಕ್ಕೆ ಅತಿಥಿ ಶಿಕ್ಷಕರನ್ನ ನೇಮಿಸಿ ಶಿಕ್ಷಣ ಇಲಾಖೆ ಕೈ ತೊಳೆದುಕೊಂಡಿದೆ. ಇದರಿಂದ ಪಠ್ಯಕ್ರಮ ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ. ಶಿಕ್ಷಣಾ ಇಲಾಖೆಯ ಈ ನಿರ್ಲಕ್ಷ್ಯ ಕಂಡು ಬೇಸತ್ತ ವಿದ್ಯಾರ್ಥಿನಿ ಮೋನಿಕಾ ಶಿಕ್ಷಕರ ಕೊರತೆ ಬಗ್ಗೆ ನೇರವಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ಕರೆ ಮಾಡಿ ತಿಳಿಸಿದ್ದಾಳೆ. ಫೋನ್‌ನಲ್ಲೇ ಅಧಿಕಾರಿಯ ಚಳಿ ಬಿಡಿಸಿದ್ದಾಳೆ. ಒಂದು ದಿನದಲ್ಲಿ ಶಾಲೆಗೆ ಭೇಟಿ ನೀಡಿ ಸಮಸ್ಯೆ ಬಗೆಹರಿಸದಿದ್ದರೆ ಶಾಲೆ ಬಂದ್ ಮಾಡಿ, ಹೋರಾಟ ಮಾಡೋದಾಗಿ ಬಾಲಕಿ ಎಚ್ಚರಿಕೆ ಕೊಟ್ಟಿದ್ದಾಳೆ. ಇದನ್ನೂ ಓದಿ:ವಿದ್ಯಾರ್ಥಿನಿಗೆ ಕಾಮಪಾಠ-ಉಪನ್ಯಾಸಕನಿಗೆ ಬಿತ್ತು ಧರ್ಮದೇಟು

    ಅಷ್ಟೇ ಅಲ್ಲದೆ ಮಾನವಿ ಶಾಸಕ ರಾಜಾ ವೆಂಕಟಪ್ಪ ನಾಯಕ್ ಅವರಿಗೆ ಕರೆ ಮಾಡಿ ಶಾಲೆಗೆ ಕರೆಸಿಕೊಂಡ ವಿದ್ಯಾರ್ಥಿನಿ ಅವರನ್ನೂ ತರಾಟೆಗೆ ತಗೆದುಕೊಂಡಿದ್ದಾಳೆ. ಶಾಸಕರ ಎದುರೇ ಶಿಕ್ಷಣಾಧಿಕಾರಿಗೆ ಕರೆ ಮಾಡಿ ಎಚ್ಚರಿಸಿದ್ದಾಳೆ. ವಿದ್ಯಾರ್ಥಿನಿ ಕರೆ ಮಾಡಿ ಶಿಕ್ಷಣಾಧಿಕಾರಿಗೆ ಸಖತ್ ಕ್ಲಾಸ್ ತೆಗೆದುಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಾಲಕಿ ಧೈರ್ಯಕ್ಕೆ ನೆಟ್ಟಿಗರು ಭೇಷ್ ಎಂದಿದ್ದಾರೆ.

  • ಬಿಸಿಯೂಟದ ಸಂದರ್ಭದಲ್ಲಿ ಮಕ್ಕಳ ಮುಂದೆ ಬಿಇಓ ಬಾಡೂಟ- ಅಮಾನತು

    ಬಿಸಿಯೂಟದ ಸಂದರ್ಭದಲ್ಲಿ ಮಕ್ಕಳ ಮುಂದೆ ಬಿಇಓ ಬಾಡೂಟ- ಅಮಾನತು

    ಭುವನೇಶ್ವರ: ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ಮಧ್ಯಾಹ್ನದ ಬಿಸಿಯೂಟದ ವೇಳೆ ಮಕ್ಕಳ ಮುಂದೆಯೇ ಚಿಕನ್ ಕರ್ರಿ ತಿಂದಿದ್ದಾರೆ ಎಂದು ಆರೋಪಿಸಲಾಗಿದೆ.

    ಘಟನೆ ಒಡಿಶಾದ ಸುಂದರ್‍ಘಢ ಜಿಲ್ಲೆಯಲ್ಲಿ ನಡೆದಿದ್ದು, ಮಧ್ಯಾಹ್ನದ ಬಿಸಿಯೂಟದ ಸಂದರ್ಭದಲ್ಲಿ ಮಕ್ಕಳು ಕೇವಲ ಅನ್ನ-ಸಾಂಬರ್ ಊಟ ಮಾಡುತ್ತಿದ್ದರೆ, ಈ ಅಧಿಕಾರಿ ಚಿಕನ್ ಕರ್ರಿ ಸವಿಯುತ್ತಿದ್ದ. ಹೊರಗಿನಿಂದ ಚಿಕನ್ ತರಿಸಿ ಶಾಲಾ ಮಕ್ಕಳೊಂದಿಗೆ ತಿಂದಿದ್ದಕ್ಕೆ ಸುಂದರ್‍ಘಢ ಜಿಲ್ಲೆಯ ಜಿಲ್ಲಾಧಿಕಾರಿ ನಿಖಿಲ್ ಪವನ್ ಕಲ್ಯಾಣ್ ಅವರು ಬಿಇಒ ಬಿನಾಯ್ ಪ್ರಕಾಶ್ ಸೋಯ್ ಅವರನ್ನು ಅಮಾನತುಗೊಳಿಸಿದ್ದಾರೆ. ಮಕ್ಕಳೊಂದಿಗೆ ಚಿಕನ್ ತಿನ್ನುವ ವಿಡಿಯೋ ವೈರಲ್ ಆಗಿದ್ದು ಹೀಗಾಗಿ ಡಿಸಿ ಅಮಾನುತುಗೊಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕರ್ತವ್ಯ ಸಂದರ್ಭದಲ್ಲಿ ಅಶಿಸ್ತು, ಸಾರ್ವಜನಿಕ ಸೇವೆಯ ಸಂದರ್ಭದಲ್ಲಿ ಅನುಚಿತವಾಗಿ ವರ್ತಿಸಿದ್ದಕ್ಕೆ ತಕ್ಷಣಕ್ಕೆ ಜಾರಿಗೆ ಬರುವಂತೆ ಬಿನಾಯ್ ಪ್ರಕಾಶ್ ಸೋಯ್ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

    ದಸರಾ ರಜೆಗೂ ಮುಂಚೆ ಟಿಲಿಮಲ್ ಪ್ರಾಜೆಕ್ಟ್ ಪ್ರಾಥಮಿಕ ಶಾಲೆಯಲ್ಲಿ ಅಕ್ಟೋಬರ್ 3ರಂದು ಬಿಇಒ ಶಾಲೆಗೆ ಭೇಟಿದ್ದರು. ಆಗ ಮಧ್ಯಾಹ್ನದ ಬಿಸಿಯೂಟವನ್ನು ಪರಿಶೀಲಿಸುತ್ತಿರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಶಾಲೆಗೆ ಬಂದ ಬಿಇಒ ಅವರನ್ನು ಮುಖ್ಯ ಶಿಕ್ಷಕ ತುಪಿ ಚಂದನ್ ಕಿಸಾನ್ ಹಾಗೂ ಇತರೆ ಶಿಕ್ಷಕರು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ನಂತರ ಬಿಇಒ ಮಧ್ಯಾಹ್ನದ ಬಿಸಿಯೂಟದ ಅಡುಗೆ ಕೊಠಡಿಯನ್ನು ವೀಕ್ಷಿಸಿದ್ದಾರೆ. ಆಗ ವಿದ್ಯಾರ್ಥಿಗಳೊಂದಿಗೆ ಊಟ ಮಾಡುವುದಾಗಿ ತಿಳಿಸಿದ್ದಾರೆ.

    ಬಿಇಒ ನಮ್ಮ ಜೊತೆ ಊಟ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ಸಂತಸ ಪಟ್ಟಿದ್ದಾರೆ. ಆದರೆ ವಿದ್ಯಾರ್ಥಿಗಳಿಗೆ ಅನ್ನ ಸಾಂಬಾರ್ ನೀಡಿ ಬಿಇಒ ಹಾಗೂ ಶಿಕ್ಷಕರು ಚಿಕನ್ ಊಟ ಸವಿದಿರುವುದು ವಿಡಿಯೋದಲ್ಲಿ ಬಹಿರಂಗವಾಗಿದೆ.

    ಬಿಇಒ ಸೋಯಾ ಅವರು ಈ ಆರೋಪವನ್ನು ನಿರಾಕರಿಸಿದ್ದು, ನನಗೆ ಬಡಿಸಿದ ಕರ್ರಿ ಚಿಕನ್ ಅಲ್ಲ. ಬದಲಿಗೆ ಮಹಿಳಾ ಶಿಕ್ಷಕಿಯೊಬ್ಬರು ತಮ್ಮ ಮನೆಯಿಂದ ಮಾಡಿಕೊಂಡು ಬಂದಿದ್ದ ಸಸ್ಯಹಾರಿ ಆಹಾರ ಎಂದು ತಿಳಿಸಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದ್ದು, ಈ ಕುರಿತು ಇಲಾಖಾ ತನಿಖೆ ನಡೆಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

  • ವಿನಾಕಾರಣ ಥಳಿಸಿ ವಿದ್ಯಾರ್ಥಿಗಳಿಗೆ ಹಿಂಸೆ- ಶಿಕ್ಷಕಿಯ ವರ್ಗಾವಣೆ

    ವಿನಾಕಾರಣ ಥಳಿಸಿ ವಿದ್ಯಾರ್ಥಿಗಳಿಗೆ ಹಿಂಸೆ- ಶಿಕ್ಷಕಿಯ ವರ್ಗಾವಣೆ

    ಮೈಸೂರು: ವಿನಾಕಾರಣ ಥಳಿಸಿ ಹಿಂಸೆ ಕೊಡುತಿದ್ದ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಪೋಷಕರು ಪಟ್ಟು ಹಿಡಿದು ವರ್ಗ ಮಾಡಿಸಿದ್ದಾರೆ.

    ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹದಿನಾರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕಿ ಗೀತಾ ಗಾಯಿತ್ರಿ ವರ್ಗಗೊಂಡಿದ್ದಾರೆ. ಎರಡು ದಿನಗಳ ಹಿಂದೆ ಇಬ್ಬರು ವಿದ್ಯಾರ್ಥಿಗಳಿಗೆ ಗೀತಾಗಾಯಿತ್ರಿ ಮನಬಂದಂತೆ ಥಳಿಸಿದ್ದರು. ಈ ವಿಚಾರವಾಗಿ ಪೋಷಕರು ಶಾಲೆಗೆ ಬಂದು ಗಲಾಟೆ ಮಾಡಿ ಶಿಕ್ಷಕಿಯನ್ನ ಬೇರೆಡೆಗೆ ವರ್ಗಾಯಿಸುವಂತೆ ಪಟ್ಟು ಹಿಡಿದಿದ್ರು.

    ವರ್ಗಾವಣೆ ಮಾಡದಿದ್ದಲ್ಲಿ ಮಕ್ಕಳನ್ನ ಶಾಲೆಗೆ ಕಳುಹಿಸುವುದಿಲ್ಲವೆಂದು ಪಟ್ಟು ಹಿಡಿದಿದ್ದರು. ಹೀಗಾಗಿ ಬಿಇಓ ಶಾಲೆಗೆ ಭೇಟಿ ಕೊಟ್ಟ ವಿಚಾರಣೆ ನಡೆಸಿದ ವೇಳೆ ಗೀತಾಗಾಯಿತ್ರಿ ಹಲ್ಲೆ ಮಾಡಿದ್ದು ರುಜುವಾತಾಗಿತ್ತು. ಕೂಡಲೇ ಬಿಇಓ ರವರು ಉಪನಿರ್ದೇಶಕರಿಗೆ ಪತ್ರ ಬರೆದು ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews