Tag: BESCOM

  • ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಾಲಕಿಯ ಬಲಗೈನ ಬೆರಳುಗಳು ಕಟ್

    ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಾಲಕಿಯ ಬಲಗೈನ ಬೆರಳುಗಳು ಕಟ್

    ಬೆಂಗಳೂರು: ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಬಾಲಕಿಯ ಬಲಗೈನ ಬೆರಳುಗಳು ಕತ್ತರಿಸಿದ ದುರ್ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ ನಡೆದಿದೆ.

    ಹೊಸಕೋಟೆ ತಾಲೂಕಿನ ಲಿಂಗಾಪುರ ಗ್ರಾಮದ ಕೌಸಲ್ಯಾ (12) ಗಂಭೀರವಾಗಿ ಗಾಯಗೊಂಡ ಬಾಲಕಿ. ಕೌಸಲ್ಯಾ ಮನೆಯ ಮೇಲೆ ಹಾದು ಹೋಗಿದ್ದ 11 ಕೆ.ವಿ ವಿದ್ಯುತ್ ಸ್ಪರ್ಶಿಸಿದ್ದಾಳೆ. ಪರಿಣಾಮ ಬಲಗೈನ ಬೆರಳುಗಳು ಕತ್ತರಿಸಿದ್ದು, ದೇಹದ ಮೇಲೆ ಶೇ.70 ರಷ್ಟು ಸುಟ್ಟ ಗಾಯವಾಗಿದೆ.

    ಗಂಭೀರವಾಗಿ ಗಾಯಗೊಂಡು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಬಾಲಕಿಯನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಹೆಚ್ಚಿನ ಅಗತ್ಯವಾಗಿದ್ದರಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

    ಬಾಲಕಿಯ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ ಬೆಸ್ಕಾಂ ಅಧಿಕಾರಿಗಳನ್ನು ಗ್ರಾಮಸ್ಥರು ತರಾಟೆ ತೆಗೆದುಕೊಂಡಿದ್ದಾರೆ.

  • ಚುನಾವಣೆ ಮುಗಿದ ಬೆನ್ನಲ್ಲೆ ವಿದ್ಯುತ್ ದರ ಏರಿಕೆ

    ಚುನಾವಣೆ ಮುಗಿದ ಬೆನ್ನಲ್ಲೆ ವಿದ್ಯುತ್ ದರ ಏರಿಕೆ

    ಬೆಂಗಳೂರು: ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆಯಾಗಿದೆ.

    ಈ ಹಿಂದೆ ವಿದ್ಯುತ್ ದರ ಏರಿಕೆ ಸಂಬಂಧ ಐದು ವಿದ್ಯುತ್ ಸರಬರಾಜು ಕಂಪನಿಗಳು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ(ಕೆಇಆರ್‌ಸಿ) ಪ್ರಸ್ತಾವನೆ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆ ಮುಗಿದ ಬಳಿಕ ಕೆಇಆರ್‌ಸಿ ಪ್ರತಿ ಯೂನಿಟ್ ವಿದ್ಯುತ್‍ಗೆ 33 ಪೈಸೆ ಹೆಚ್ಚಳ ಮಾಡಿದೆ. ಕೆಇಆರ್‌ಸಿ ಅಧ್ಯಕ್ಷ ಶಂಭುದಯಾಳ್ ಮೀನಾ ಸುದ್ದಿಗೋಷ್ಠಿ ನಡೆಸಿ ಬೆಲೆ ಏರಿಕೆಯ ನಿರ್ಧಾರವನ್ನು ಪ್ರಕಟಿಸಿದರು.

    ಪ್ರತಿ ವರ್ಷ ಏಪ್ರಿಲ್ 1 ರಿಂದ ನೂತನ ದರ ಜಾರಿಗೆ ಬರುತಿತ್ತು. ಲೋಕಸಭಾ ಚುನಾವಣೆ ಇದ್ದಿದ್ದರಿಂದ ದರ ಏರಿಕೆ ವಿಳಂಬವಾಗಿತ್ತು. ಆದರೆ ಈ ಬಾರಿ ಪರಿಷ್ಕೃತ ದರವನ್ನು ಏಪ್ರಿಲ್‍ನಿಂದಲೇ ಪೂರ್ವಾನ್ವಯವಾಗಲಿದೆ ಎಂದು ಕೆಇಆರ್‌ಸಿ ತಿಳಿಸಿದೆ.

    ಪ್ರತಿ ಯೂನಿಟ್ ಗೆ 1.20 ರೂ ಏರಿಕೆಯಾಗಿದ್ದು, ಶೇ. 17.37 ರಷ್ಟು ವಿದ್ಯುತ್ ದರ ಹೆಚ್ಚಳವಾಗಲಿದೆ. ಆದರೆ ಮೆಟ್ರೋಗೆ ಕೆಇಆರ್‌ಸಿ  ಬಂಪರ್ ಕೊಡುಗೆ ನೀಡಿದ್ದು, ಮೆಟ್ರೋಗೆ ಮಾತ್ರ ಪ್ರತಿ ಯೂನಿಟ್‍ಗೆ 5.20 ರೂಪಾಯಿ ರಿಯಾಯಿತಿ ನೀಡಿದೆ.

    ಬೆಂಗಳೂರು ವಿದ್ಯುತ್ ಗ್ರಾಹಕರಿಗೆ ಆರು ಸ್ಲ್ಯಾಬ್‍ನಲ್ಲಿ ಏರಿಕೆಯಾಗುತ್ತಿದ್ದ ವಿದ್ಯುತ್ ದರವನ್ನ ನಾಲ್ಕು ಸ್ಲ್ಯಾಬ್‍ಗೆ ಇಳಿಸಲಾಗಿದೆ. ಬೆಂಗಳೂರಿಗರಿಗೆ ಗೃಹ ಬಳಕೆ ವಿದ್ಯುತ್ ಮೇಲೆ ಪ್ರತಿ ಯೂನಿಟ್ ಗೆ 25 ಪೈಸೆ ಹೆಚ್ಚಳ ಮಾಡಲಾಗಿದೆ.

    ಬೆಸ್ಕಾಂ(ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್), ಮೆಸ್ಕಾಂ(ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್), ಚೆಸ್ಕಾಂ(ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್), ಹೆಸ್ಕಾಂ(ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್), ಜೆಸ್ಕಾಂ(ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್) ವಿದ್ಯುತ್ ದರ ಹೆಚ್ಚಳ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿತ್ತು.

    ಬೆಸ್ಕಾಂ ಪ್ರತಿ ಯೂನಿಟ್ ಗೆ 1 ರೂ. 1 ಪೈಸೆ, ಮೆಸ್ಕಾಂ 1 ರೂ. 38 ಪೈಸೆ, ಚೆಸ್ಕಾಂ 1 ರೂ., ಹೆಸ್ಕಾಂ 1 ರೂ 67 ಪೈಸೆ, ಜೆಸ್ಕಾಂ 1 ರೂ 27 ಪೈಸೆ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಕೆಇಎಆರ್‍ಸಿ ಈ ಎಲ್ಲಾ ಕಂಪನಿಗಳಿಗೂ ಪ್ರತಿ ಯೂನಿಟ್‍ಗೆ 33 ಪೈಸೆ ವಿದ್ಯುತ್ ದರ ಹೆಚ್ಚಳ ಮಾಡಿದೆ.

    ಸಿಲಿಕಾನ್ ಸಿಟಿಯಲ್ಲಿ ಆಗುತ್ತಿರುವ ವಿದ್ಯುತ್ ಅವಘಡಕ್ಕೆ ಕೆಇಆರ್‌ಸಿ ಬೆಸ್ಕಾಂ ವಿರುದ್ಧ ಗರಂ ಆಗಿದೆ. ಸೋಮವಾರ ಎಂಡಿ ಹಾಗೂ ಅಧಿಕಾರಿಗಳ ಸಭೆ ಕರೆಯಲಿದ್ದೇವೆ. ವಿದ್ಯುತ್ ಅವಘಡದ ಬಗ್ಗೆ ಸಾಕಷ್ಟು ವರದಿ ಬರುತ್ತಿದೆ. ಅಲ್ಲದೇ ಹೈಟೆನ್ಶನ್ ವೈರ್ ಮನೆಯ ಮೇಲೆ ಹಾದು ಹೋಗಬಾರದು ಅನ್ನುವ ಕಾಯ್ದೆ ಇದೆ. ಇದರ ಬಗ್ಗೆ ಅಧಿಕಾರಿಗಳ ಜೊತೆ ಸಭೆ ಮಾಡಲಿದ್ದೇವೆ. ಬೆಸ್ಕಾಂ ಸೇರಿದಂತೆ ಐದು ಎಸ್ಕಾಂಗಳಿಗೂ ಸಭೆ ಕರೆದು ಸೂಚನೆ ನೀಡಲಾಗುತ್ತೆ ಎಂದು ಕೆಇಆರ್‌ಸಿ ಅಧ್ಯಕ್ಷ ಶಂಭುದಯಾಳ್ ತಿಳಿಸಿದ್ದಾರೆ.

  • ವಿದ್ಯುತ್ ತಂತಿ ಸ್ಪರ್ಶಿಸಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಸಾವು

    ವಿದ್ಯುತ್ ತಂತಿ ಸ್ಪರ್ಶಿಸಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಸಾವು

    ಬೆಂಗಳೂರು: ಬೆಸ್ಕಾಂ ಹಾಗೂ ಪಾಲಿಕೆಯ ನಿರ್ಲಕ್ಷ್ಯಕ್ಕೆ ಸಿಲಿಕಾನ್ ಸಿಟಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

    ಲಿಖಿಲ್(14) ಮೃತ ಬಾಲಕ. ಕಳೆದ ಗುರುವಾರ ಮತ್ತಿಕೆರೆಯ ನೇತಾಜಿ ಸರ್ಕಲ್ ಬಳಿ ಈ ಘಟನೆ ನಡೆದಿತ್ತು. ವಿದ್ಯುತ್ ಸ್ಪರ್ಶದಿಂದ ಬಾಲಕನ ದೇಹ ಶೇ.40 ರಷ್ಟು ಸುಟ್ಟು ಹೋಗಿತ್ತು. ತಕ್ಷಣ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಸುಮಾರು 6 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಬಾಲಕ ಲಿಖಿಲ್ ಅಸುನೀಗಿದ್ದಾನೆ.

    ನಡೆಡಿದ್ದೇನು?
    ಮತ್ತಿಕೆರೆಯ ನಿವಾಸಿ ರಮಾದೇವಿ ಹಾಗೂ ಅಂಬರೀಶ್ ದಂಪತಿಗೆ ಲಿಖಿಲ್ ಓರ್ವ ಪುತ್ರನಾಗಿದ್ದು, 9 ನೇ ತರಗತಿ ಓದುತ್ತಿದ್ದನು. ಗುರುವಾರ ಮನೆಯ ಬಳಿ ಸ್ನೇಹಿತರೊಡನೆ ಕ್ರಿಕೆಟ್ ಆಡುವಾಗ ಕಟ್ಟಡದ ಮೊದಲ ಮಹಡಿಗೆ ಬಾಲ್ ಹೋಗಿತ್ತು. ಈ ವೇಳೆ ಅದನ್ನು ತರಲು ಹೋಗಿದ್ದ ಲಿಖಿತ್, ತಂತಿ ತುಳಿದು ಕೆಳಗೆ ಬಿದ್ದಿದ್ದನು. ತಕ್ಷಣ ಬಾಲಕನನ್ನು ಸ್ಥಳೀಯರು ಹಾಗೂ ಪೋಷಕರು ರಾಮಯ್ಯ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ.

    ಈ ಹಿಂದೆ ಬೆಸ್ಕಾಂ ನಿರ್ಲಕ್ಷ್ಯಕ್ಕೆ ಎಲ್‍ಆರ್ ಬಂಡೆಯಲ್ಲಿ ಆಟವಾಡುತ್ತಿದ್ದ ಬಾಲಕ ವಿಕ್ರಂ, ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದನು.

  • ಬಾಲಕನಿಗೆ ವಿದ್ಯುತ್ ತಂತಿ ಸ್ಪರ್ಶಿಸಿದ ಪ್ರಕರಣಕ್ಕೆ ನಾವು ಹೊಣೆಯಲ್ಲ – ಬೆಸ್ಕಾಂ

    ಬಾಲಕನಿಗೆ ವಿದ್ಯುತ್ ತಂತಿ ಸ್ಪರ್ಶಿಸಿದ ಪ್ರಕರಣಕ್ಕೆ ನಾವು ಹೊಣೆಯಲ್ಲ – ಬೆಸ್ಕಾಂ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬಾಲಕನೊಬ್ಬ ವಿದ್ಯುತ್ ತಂತಿ ಸ್ಪರ್ಶಿಸಿ ಗಂಭೀರ ಗಾಯಗೊಂಡಿರುವ ಪ್ರಕರಣಕ್ಕೆ ನಾವು ಹೊಣೆಯಲ್ಲ ಎಂದು ಬೆಸ್ಕಾಂನ ಪ್ರಧಾನ ವ್ಯವಸ್ಥಾಪಕ ಜಿ.ಕೃಷ್ಣಮೂರ್ತಿ ಪಬ್ಲಿಕ್ ಟಿವಿಗೆ ಹೇಳಿಕೆ ನೀಡಿದ್ದಾರೆ.

    ಈ ಘಟನೆಗೆ ಸ್ಥಳೀಯರು, ಮನೆ ಮಾಲೀಕರೇ ಹೊಣೆಗಾರರು ಎಂದು ಬೆಸ್ಕಾಂ ಮೇಲೆ ಮಾಡಿದ್ದ ಆರೋಪವನ್ನು ತಳ್ಳಿಹಾಕಿದ್ದಾರೆ. ಕೆಪಿಟಿಸಿಎಲ್ ನಿಯಮಗಳ ಪ್ರಕಾರ ಮನೆಗಳ ಮೇಲೆ ನಾಲ್ಕು ಮೀಟರ್ ಎತ್ತರದಲ್ಲಿ ವಿದ್ಯುತ್ ವೈರ್ ಇರಬೇಕಿತ್ತು. ಆದರೆ ಈ ಘಟನೆ ನಡೆದ ಸ್ಥಳದಲ್ಲಿದ್ದ ಕಟ್ಟಡ ಮೇಲೆ ನಾಲ್ಕು ಮೀಟರ್ ಕ್ಲಿಯರೆನ್ಸ್ ಇರಲಿಲ್ಲ. ಈ ಬಗ್ಗೆ ಕಟ್ಟಡ ಮಾಲೀಕರಿಗೆ ಈ ಹಿಂದೆ ನೋಟಿಸ್ ಕೂಡ ಕೊಟ್ಟಿದ್ದೆವು. ಆದರೆ ಮನೆ ಮಾಲೀಕರು ನಿರ್ಲಕ್ಷ್ಯ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

    ಘಟನಾ ಸ್ಥಳಕ್ಕೆ ಮೇಯರ್ ಗಂಗಾಂಬಿಕಾ ಹಾಗೂ ಉಪ-ಮೇಯರ್ ಭದ್ರೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳ ಜೊತೆ ಮೇಯರ್ ಗಂಗಾಂಭಿಕೆ ಮಾತನಾಡಿ, ಇಲ್ಲಿನ ಕಟ್ಟಡಗಳು ಹೈಟೆನ್ಷನ್ ವಯರ್ ಗೆ ಸಮೀಪವಿದೆ. 4 ಅಡಿಯಷ್ಟು ಅಂತರವಿಲ್ಲ. ಹಾಗಾಗಿ ಆ ಭಾಗದಲ್ಲಿ ಯಾರೇ ಹೋದರೂ ಕರೆಂಟ್ ಶಾಕ್ ಹೊಡಿಯುವುದು ಖಂಡಿತ. ಈ ಬಗ್ಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೊಂದಿಗೆ ಮಾತನಾಡಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

    ಏನಿದು ಪ್ರಕರಣ?
    ಮತ್ತಿಕೆರೆಯ ನೇತಾಜಿ ಸರ್ಕಲ್ ಬಳಿ ಇಂದು ಲಿಖಿತ್(14) ವಿದ್ಯುತ್ ತಂತಿ ತುಳಿದು, ಸದ್ಯ ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾನೆ. ವಿದ್ಯುತ್ ಸ್ಪರ್ಶದಿಂದ ಬಾಲಕನ ದೇಹ ಶೇ.40 ರಷ್ಟು ಸುಟ್ಟು ಹೋಗಿದ್ದು, ಬಾಲಕನ ಸ್ಥಿತಿ ಚಿಂತಾಜನಕವಾಗಿದೆ.

    ಮನೆ ಬಳಿ ಸ್ನೇಹಿತರೊಡನೆ ಲಿಖಿತ್ ಕ್ರಿಕೆಟ್ ಆಡುವಾಗ ಕಟ್ಟಡದ ಮೊದಲ ಮಹಡಿಗೆ ಬಾಲ್ ಹೋಗಿತ್ತು. ಈ ವೇಳೆ ಅದನ್ನು ತರಲು ಹೋಗಿದ್ದ ಲಿಖಿತ್ ತಂತಿ ತುಳಿದು ಕೆಳಗೆ ಬಿದ್ದಿದ್ದಾನೆ. ತಕ್ಷಣ ಬಾಲಕನನ್ನು ಸ್ಥಳೀಯರು ಹಾಗೂ ಪೋಷಕರು ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

  • ಬೆಸ್ಕಾಂ, ಪಾಲಿಕೆಯ ನಿರ್ಲಕ್ಷ್ಯ- ವಿದ್ಯುತ್ ತಂತಿ ಸ್ಪರ್ಶಿಸಿ ಮತ್ತೋರ್ವ ಬಾಲಕನ ಸ್ಥಿತಿ ಗಂಭೀರ!

    ಬೆಸ್ಕಾಂ, ಪಾಲಿಕೆಯ ನಿರ್ಲಕ್ಷ್ಯ- ವಿದ್ಯುತ್ ತಂತಿ ಸ್ಪರ್ಶಿಸಿ ಮತ್ತೋರ್ವ ಬಾಲಕನ ಸ್ಥಿತಿ ಗಂಭೀರ!

    ಬೆಂಗಳೂರು: ಬೆಸ್ಕಾಂ ಹಾಗೂ ಪಾಲಿಕೆಯ ನಿರ್ಲಕ್ಷ್ಯಕ್ಕೆ ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಅವಘಡ ನಡೆದಿದ್ದು, ವಿದ್ಯುತ್ ತಂತಿ ಸ್ಪರ್ಶಿಸಿ ಮತ್ತೋರ್ವ ಬಾಲಕ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ.

    ಮತ್ತಿಕೆರೆಯ ನೇತಾಜಿ ಸರ್ಕಲ್ ಬಳಿ ಈ ಘಟನೆ ನಡೆದಿದೆ. ಲಿಖಿತ್(14) ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾನೆ. ವಿದ್ಯುತ್ ಸ್ಪರ್ಶದಿಂದ ಬಾಲಕನ ದೇಹ ಶೇ.40 ರಷ್ಟು ಸುಟ್ಟು ಹೋಗಿದ್ದು, ಬಾಲಕನ ಸ್ಥಿತಿ ಚಿಂತಾಜನಕವಾಗಿದೆ.

    ಮನೆ ಬಳಿ ಸ್ನೇಹಿತರೊಡನೆ ಲಿಖಿತ್ ಕ್ರಿಕೆಟ್ ಆಡುವಾಗ ಕಟ್ಟಡದ ಮೊದಲ ಮಹಡಿಗೆ ಬಾಲ್ ಹೋಗಿತ್ತು. ಈ ವೇಳೆ ಅದನ್ನು ತರಲು ಹೋಗಿದ್ದ ಲಿಖಿತ್ ತಂತಿ ತುಳಿದು ಕೆಳಗೆ ಬಿದ್ದಿದ್ದಾನೆ. ತಕ್ಷಣ ಬಾಲಕನನ್ನು ಸ್ಥಳೀಯರು ಹಾಗೂ ಪೋಷಕರು ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

    ಮತ್ತಿಕೆರೆಯ ನಿವಾಸಿ ರಮಾದೇವಿ ಹಾಗೂ ಅಂಬರೀಶ್ ದಂಪತಿಗೆ ಲಿಖಿತ್ ಒಬ್ಬನೆ ಪುತ್ರನಾಗಿದ್ದು, 9 ನೇ ತರಗತಿ ಓದುತ್ತಿದ್ದನು. ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬಾಲಕ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆ ಮುಂದೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ರಸ್ತೆ ಮೇಲೆ ಕೇಬಲ್ ವಯರ್ ಜೊತೆಗೆ, ವಿದ್ಯುತ್ ತಂತಿ ಕೂಡ ನೆಲಕ್ಕೆ ಬಿದ್ದಿತ್ತು. ಇದನ್ನು ಯಾರು ಗಮನಿಸದ ಕಾರಣ ಈ ಅವಘಡ ಸಂಭವಿಸಿದೆ.

    ವಿದ್ಯುತ್ ಅವಘಡ ಸಂಭವಿಸಿದ ಜಾಗದಲ್ಲಿ 1 ಗಂಟೆಯಿಂದ ವಿದ್ಯುತ್ ಕಡಿತಗೊಂಡಿದೆ. ಅಲ್ಲದೆ ಘಟನೆಯಿಂದ ಸ್ಥಳದ ಸುತ್ತಮುತ್ತಲ 10 ಕ್ಕೂ ಹೆಚ್ಚು ಮನೆಗಳ ಮೀಟರ್ ಸುಟ್ಟುಹೋಗಿದೆ. ಬೆಸ್ಕಾಂ ನಿರ್ಲಕ್ಷ್ಯಕ್ಕೆ ಬಾಲಕ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾನ್ನಲ್ಲಾ ಎಂದು ಸಾರ್ವಜನಿಕರು ಬೆಸ್ಕಾಂ ಹಾಗೂ ಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಈ ಹಿಂದೆ ಕೂಡ ಬೆಸ್ಕಾಂ ನಿರ್ಲಕ್ಷ್ಯಕ್ಕೆ ಎಲ್‍ಆರ್ ಬಂಡೆಯಲ್ಲಿ ಆಟವಾಡುತ್ತಿದ್ದ ಬಾಲಕ ವಿಕ್ರಂ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದನು. ಈ ಘಟನೆ ಮಾಸುವ ಮುನ್ನವೇ ಏ. 26ರ ಸಂಜೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‍ನ 7ನೇ ಕ್ರಾಸ್‍ನಲ್ಲಿ 9 ವರ್ಷದ ಸಾಯಿ ಚರಣ್ ಇಂತದ್ದೇ ಘಟನೆಯೊಂದರಲ್ಲಿ ಗಂಭೀರ ಗಾಯಗೊಂಡಿದ್ದನು.

    ಸಾಯಿ ಚರಣ್ ಸಂಜೆ ಸ್ನೇಹಿತರೊಂದಿಗೆ ಬಾಲ್ ಆಟ ಆಡುತ್ತಿದ್ದನು. ಈ ವೇಳೆ ವಿದ್ಯುತ್ ಕಂಬದ ಹತ್ತಿರ ಹೋದಾಗ ಕಂಬದಿಂದ ಜೋತು ಬಿದ್ದಿದ್ದ ತಂತಿಯಿಂದ ಕರೆಂಟ್ ಶಾಕ್ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದನು.

  • ಬೆಂಗ್ಳೂರಿಗರಿಗೆ ಶಾಕ್ – ಬೇಡಿಕೆಯಷ್ಟು ನೀರು, ವಿದ್ಯುತ್ ಪೂರೈಕೆಗೆ ಬೆಸ್ಕಾಂ, ಜಲಮಂಡಳಿ ಹೈರಾಣು

    ಬೆಂಗ್ಳೂರಿಗರಿಗೆ ಶಾಕ್ – ಬೇಡಿಕೆಯಷ್ಟು ನೀರು, ವಿದ್ಯುತ್ ಪೂರೈಕೆಗೆ ಬೆಸ್ಕಾಂ, ಜಲಮಂಡಳಿ ಹೈರಾಣು

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನೀರು ಹಾಗೂ ವಿದ್ಯುತ್ ಪೂರೈಕೆಯ ಅಭಾವ ಎದುರಾಗಿದ್ದು, ಬೇಡಿಕೆಯಷ್ಟು ನೀರು, ವಿದ್ಯುತ್ ಪೂರೈಕೆ ಮಾಡಲಾಗದೇ ಬೆಸ್ಕಾಂ ಮತ್ತು ಜಲಮಂಡಳಿ ಹೈರಾಣಾಗಿವೆ ಎಂಬ ವಿಚಾರವೊಂದು ಬೆಳಕಿಗೆ ಬಂದಿದೆ.

    ಹೌದು. ಸಿಲಿಕಾನ್ ಸಿಟಿಯಲ್ಲಿ ಸರಾಸರಿ ನೀರು ಪೂರೈಕೆಯ ಮಿತಿ ಗರಿಷ್ಠ ಮಟ್ಟ ತಲುಪಿದೆ. ಜಲ ಮಂಡಳಿಯಿಂದ ನಿತ್ಯ 1390 ದಶಲಕ್ಷ ಲೀಟರ್ ನೀರಷ್ಟೇ ಪೂರೈಕೆ ಮಾಡಲು ಸಾಧ್ಯ. ಆದರೆ ಸದ್ಯ ನೀರಿನ ಬೇಡಿಕೆ ನಿತ್ಯ 1500 ರಿಂದ 1700 ದಶ ಲಕ್ಷ ಲೀಟರ್ ದಾಟಿದೆ. ಹೀಗಾಗಿ ಬೆಂಗಳೂರಿಗರ ನೀರಿನ ದಾಹ ದಿನೇ ದಿನೇ ಆತಂಕ ಮಟ್ಟದಲ್ಲಿ ಹೆಚ್ಚಾಗುತ್ತಿದೆ. ಕಾವೇರಿ 5ನೇ ಹಂತದ ಯೋಜನೆಯೂ 2026ಕ್ಕೆ ಮುಗಿಯಲಿದ್ದು, ಅಲ್ಲಿಯವರೆಗೂ ಬೆಂಗಳೂರಿಗೆ ಬೇಡಿಕೆಯಷ್ಟು ನೀರು ಪೂರೈಕೆ ಮಾಡುವುದು ಕಷ್ಟ ಸಾಧ್ಯ ಎಂದು ಜಲಮಂಡಳಿ ತಿಳಿಸಿದೆ.

    ಇತ್ತ ವಿದ್ಯುತ್ ಬಳಕೆಯೂ ಗರಿಷ್ಟ ಮಿತಿ ದಾಟಿದೆ. ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಬೇಡಿಕೆಯಲ್ಲಿ ಗಣನೀಯ ಹೆಚ್ಚಳವಾಗಿದ್ದು, ನಗರದಲ್ಲಿ ಬರೋಬ್ಬರಿ ಗರಿಷ್ಠ 6,156 ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ಏರಿಕೆಯಾಗಿದೆ. ಸದ್ಯ ನಗರದಲ್ಲಿ ಸರಾಸರಿ 5,500 ಮೆ.ವ್ಯಾ.ನಷ್ಟು ಬೇಡಿಕೆಯಿದ್ರೆ ಪೂರೈಕೆ ಸುಲಭವಾಗಿದ್ದು, ಆದರೆ ಏಕಾಏಕಿ ನಗರವಾಸಿಗಳ ವಿದ್ಯುತ್ ಬಳಕೆಯಿಂದ 600 ಮೆಗಾವ್ಯಾಟ್ ಬೇಡಿಕೆ ಹೆಚ್ಚಳವಾಗಿದೆ.

    ವಿದ್ಯುತ್ ಉಪಕರಣಗಳ ಬಳಕೆ ಪ್ರಮಾಣ ಏರಿಕೆ, ಕೈಗಾರಿಕಾ ವಿದ್ಯುತ್ ಬಳಕೆ ಹೆಚ್ಚಳ, ಕೃಷಿ ಪಂಪ್‍ಸೆಟ್ ಬಳಕೆ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಬೇಡಿಕೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ಪೈಕಿ ಬೆಂಗಳೂರು ನಗರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್ ಬಳಕೆಯಾಗುತ್ತಿದೆ.

    ರಾಜ್ಯದಲ್ಲಿ ನಿತ್ಯ ಸರಾಸರಿ ವಿದ್ಯುತ್ ಬೇಡಿಕೆ 10,500 ಮೆಗಾವ್ಯಾಟ್‍ನಿಂದ 11,500 ಮೆ.ವ್ಯಾ.ನಷ್ಟಿದೆ. ಬೆಸ್ಕಾಂ ಅಡಿಯಲ್ಲಿರುವ ಎಂಟು ಜಿಲ್ಲೆಗಳಲ್ಲಿ ನಿತ್ಯ ಸರಾಸರಿ 5,500 ಮೆ.ವ್ಯಾ ವಿದ್ಯುತ್ ಬೇಡಿಕೆ ಇದೆ. ಅಂದರೆ ರಾಜ್ಯದಲ್ಲಿ ಬಳಕೆಯಾಗುವ ವಿದ್ಯುತ್ ಪ್ರಮಾಣದಲ್ಲಿ ಸುಮಾರು ಶೇ. 45 ರಿಂದ ಶೇ.50ರಷ್ಟು ವಿದ್ಯುತ್ ಬೆಸ್ಕಾಂ ವ್ಯಾಪ್ತಿಯೊಂದರಲ್ಲೇ ಬಳಕೆಯಾಗುತ್ತಿದೆ. ಉಳಿದ ನಾಲ್ಕು ಎಸ್ಕಾಂ ವ್ಯಾಪ್ತಿಯ 22 ಜಿಲ್ಲೆಗಳಲ್ಲಿ ಶೇ.50ರಿಂದ ಶೇ. 55ರಷ್ಟು ಮಾತ್ರ ವಿದ್ಯುತ್ ಬಳಕೆಯಾಗುತ್ತಿದೆ.

  • ವಿದ್ಯುತ್ ತಂತಿ ತುಳಿದು ಬಾಲಕ ಗಂಭೀರ- ಬೆಸ್ಕಾಂ ಸಿಬ್ಬಂದಿಯನ್ನ ಸಮರ್ಥಿಸಿಕೊಂಡ ಶಾಸಕ

    ವಿದ್ಯುತ್ ತಂತಿ ತುಳಿದು ಬಾಲಕ ಗಂಭೀರ- ಬೆಸ್ಕಾಂ ಸಿಬ್ಬಂದಿಯನ್ನ ಸಮರ್ಥಿಸಿಕೊಂಡ ಶಾಸಕ

    ಬೆಂಗಳೂರು: ಮಹಾನಗರ ಪಾಲಿಕೆ ಹಾಗೂ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯುತ್ ತಂತಿ ತಗುಲಿ ಬಾಲಕ ಆಸ್ಪತ್ರೆ ಸೇರಿದ್ದ ಘಟನೆಯನ್ನ ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ ಸಮರ್ಥಿಸಿಕೊಂಡಿದ್ದಾರೆ.

    ಘಟನೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ಇದೊಂದು ಆಕಸ್ಮಿಕವಾಗಿ ನಡೆದ ಘಟನೆಯಾಗಿದೆ. ಕಂಬದಿಂದ ವೈಯರ್ ಕಟ್ಟಾಗಿ ಬಿದ್ದಿದೆ. ಬಾಲಕ ಆಟವಾಡುತ್ತಿರುವಾಗ ಬಾಲ್ ಬಿತ್ತೆಂದು ಹೆಕ್ಕಿಕೊಳ್ಳಲು ಹೋದಾಗ ದುರ್ಘಟನೆ ನಡೆದಿದೆ ಎಂದು ಹೇಳುವ ಮೂಲಕ ಬೆಸ್ಕಾಂ ಅಧಿಕಾರಿಗಳ ತಪ್ಪೇ ಇಲ್ಲವೆಂಬಂತೆ ಮಾತನಾಡಿದ್ದಾರೆ. ಹಾಗಾದರೆ ಈ ಘಟನೆಗೆ ಯಾರು ಹೊಣೆ ಎಂಬ ಪ್ರಶ್ನೆಯೊಂದು ಇದೀಗ ಜನಸಾಮಾನ್ಯರಲ್ಲಿ ಮೂಡಿದೆ.

    ಇಂದು ಶಾಸಕರು ಬಾಲಕ ಸಾಯಿಚರಣ್ ಆರೋಗ್ಯ ವಿಚಾರಿಸಲು ನಗರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ಭೇಟಿ ನೀಡಿದ್ರು. ಚಿಕಿತ್ಸೆಯ ವೆಚ್ಚವನ್ನ ಸಂಪೂರ್ಣವಾಗಿ ನಾನೇ ಭರಿಸುತ್ತೇನೆ. ಇಂತಹದ್ದೇ ಘಟನೆ ಶುಕ್ರವಾರವೂ ನಡೆದಿದೆ. ಈ ಎರಡೂ ಪ್ರಕರಣದ ಬಗ್ಗೆ ಇಂದಿನ ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ಸಿಎಂ ಕುಮಾರಸ್ಬಾಮಿ ಜೊತೆ ಮಾತನಾಡುತ್ತೇನೆ ಎಂದು ತಿಳಿಸಿದರು.

    ಘಟನೆಯೇನು?
    ಇತ್ತೀಚೆಗಷ್ಟೇ ಎಲ್‍ಆರ್ ಬಂಡೆಯಲ್ಲಿ ಆಟವಾಡುತ್ತಿದ್ದ ಬಾಲಕ ವಿಕ್ರಂ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದನು. ಈ ಘಟನೆ ಮಾಸುವ ಮುನ್ನವೇ ಶುಕ್ರವಾರ ಸಂಜೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‍ನ 7ನೇ ಕ್ರಾಸ್‍ನಲ್ಲಿ 9 ವರ್ಷದ ಸಾಯಿ ಚರಣ್ ಇಂತದ್ದೇ ಘಟನೆಯೊಂದರಲ್ಲಿ ಗಂಭೀರ ಗಾಯಗೊಂಡಿದ್ದಾನೆ.

    ಸಾಯಿ ಚರಣ್ ಸಂಜೆ ಸ್ನೇಹಿತರೊಂದಿಗೆ ಬಾಲ್ ಆಟ ಆಡುತ್ತಿದ್ದನು. ಈ ವೇಳೆ ವಿದ್ಯುತ್ ಕಂಬದ ಹತ್ತಿರ ಹೋದಾಗ ಕಂಬದಿಂದ ಜೋತು ಬಿದ್ದಿದ್ದ ವಯರ್‍ನಿಂದ ಕರೆಂಟ್ ಶಾಕ್ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದನು. ತಕ್ಷಣವೇ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, 24 ಗಂಟೆಗಳ ಕಾಲ ಏನೂ ಹೇಳುವುದಕ್ಕೂ ಆಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದರು. ಸದ್ಯ ಬಾಲಕ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.

    https://www.youtube.com/watch?v=o5p0qsTrd3U

  • ಆಟವಾಡುತ್ತಿದ್ದ ಬಾಲಕನಿಗೆ ವಿದ್ಯುತ್ ಶಾಕ್ – ಐಸಿಯುನಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ

    ಆಟವಾಡುತ್ತಿದ್ದ ಬಾಲಕನಿಗೆ ವಿದ್ಯುತ್ ಶಾಕ್ – ಐಸಿಯುನಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ

    ಬೆಂಗಳೂರು: ಇತ್ತೀಚೆಗಷ್ಟೇ ಎಲ್‍ಆರ್ ಬಂಡೆಯಲ್ಲಿ ಆಟವಾಡುತ್ತಿದ್ದ ಬಾಲಕ ವಿಕ್ರಂ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾನೆ. ಇದೀಗ ಆ ಘಟನೆ ಮಾಸುವ ಮುನ್ನವೇ ಅದೇ ರೀತಿಯ ಘಟನೆಯೊಂದು ಶುಕ್ರವಾರ ಸಂಜೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‍ನ 7ನೇ ಕ್ರಾಸ್‍ನಲ್ಲಿ ನಡೆದಿದೆ.

    9 ವರ್ಷದ ಸಾಯಿ ಚರಣ್ ಗಾಯಕ್ಕೊಳಗಾಗಿರುವ ಬಾಲಕ. ನಾಗಮ್ಮ ನಾಗಲಿಂಗೇಶ್ವರ ದೇವಾಲಯದ ಬಳಿ ಬಸವರಾಜ್ ಮತ್ತು ರೇವತಿ ದಂಪತಿಯ ಪುತ್ರ ಸಾಯಿ ಚರಣ್ ನಿನ್ನೆ ಸಂಜೆ ಸ್ನೇಹಿತರೊಂದಿಗೆ ಬಾಲ್ ಆಟ ಆಡುತ್ತಿದ್ದನು.

    ಈ ವೇಳೆ ವಿದ್ಯುತ್ ಕಂಬದ ಹತ್ತಿರ ಹೋದಾಗ ಕಂಬದಿಂದ ಜೋತು ಬಿದ್ದಿದ್ದ ವಯರ್‌ನಿಂದ ಕರೆಂಟ್ ಶಾಕ್ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣವೇ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, 24 ಗಂಟೆಗಳ ಕಾಲ ಏನೂ ಹೇಳುವುದಕ್ಕೂ ಆಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಬಾಲಕ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.

    ಬೆಸ್ಕಾಂ ಅಧಿಕಾರಿಗಳು ವಾರಕ್ಕೊಮ್ಮೆ ಕಂಬದ ವಯರ್‌ಗಳು ಕೆಳಗೆ ಬಿದ್ದಿದ್ದರೆ, ಅದನ್ನು ಮೇಲೆ ಎತ್ತಿ ಕಟ್ಟಿ ಹೋಗುತ್ತಿದ್ದಾರೆ. ಆದರೆ ಶಾಶ್ವತ ಪರಿಹಾರ ಮಾಡುತ್ತಿಲ್ಲ. ಘಟನೆ ನಡೆದ ಸ್ಥಳಕ್ಕೆ ಬಾರದ ಅಧಿಕಾರಿಗಳು ಫೋನಿನಲ್ಲಿ ಬಂದು ಪರಿಶೀಲನೆ ಮಾಡುತ್ತೇವೆ ಎಂದು ಉಡಾಫೆ ಉತ್ತರ ಕೊಟ್ಟಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಚಂಡಮಾರುತಕ್ಕೆ ನಲುಗಿದ ತಮಿಳುನಾಡಿನ ಜನತೆಗೆ ಬೆಸ್ಕಾಂ ಸಹಾಯ ಹಸ್ತ

    ಚಂಡಮಾರುತಕ್ಕೆ ನಲುಗಿದ ತಮಿಳುನಾಡಿನ ಜನತೆಗೆ ಬೆಸ್ಕಾಂ ಸಹಾಯ ಹಸ್ತ

    ಬೆಂಗಳೂರು: ಚಂಡಮಾರುತಕ್ಕೆ ನಲುಗಿದ ತಮಿಳುನಾಡಿನ ಜನತೆಗೆ ಬೆಸ್ಕಾಂ ನೌಕರರು ಸಹಾಯ ಹಸ್ತ ಚಾಚಿದ್ದಾರೆ.

    ಬೆಂಗಳೂರಿನ ಬೆಸ್ಕಾಂ ನೌಕರರು ಸ್ವಯಂ ಸೇವೆ ನೀಡಲು ಮುಂದಾಗಿದ್ದು, ಈಗಾಗಲೇ ತಮಿಳುನಾಡಿಗೆ 1,000 ಬೆಸ್ಕಾಂ ನೌಕರರು ತೆರೆಳಿದ್ದಾರೆ. ಗಜ ಚಂಡಮಾರುತದಿಂದ 1 ಲಕ್ಷಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಬಿದ್ದು ಹಾಳಾಗಿವೆ. ಅಲ್ಲದೇ ಕಂಬಗಳು ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಈ ಹಿನ್ನೆಲೆ ತಮಿಳುನಾಡಿನಿಂದ ಸಹಾಯ ಕೋರಿ ಪತ್ರ ಬಂದಿತ್ತು.

    ಪತ್ರ ಬಂದ ಹಿನ್ನೆಲೆ ರಾಜ್ಯ ಸರ್ಕಾರದ ಮೌಖಿಕ ಆದೇಶದ ಮೇರೆಗೆ ನೌಕರರು ತಮಿಳುನಾಡಿಗೆ ತೆರೆಳಿದ್ದಾರೆ. ತಮಿಳುನಾಡಿಗೆ ತೆರಳಿ ಹತ್ತು ದಿನಗಳ ಕಾಲ ಅಲ್ಲಿಯೇ ಉಳಿದು ಬೆಸ್ಕಾಂ ನೌಕರರು ಸೇವೆ ಮಾಡಲಿದ್ದಾರೆ. 10 ಕೆಎಸ್‍ಆರ್ ಟಿಸಿ ಬಸ್‍ನಲ್ಲಿ ನೌಕರರು ತೆರೆಳಿದ್ದಾರೆ. ಬೆಸ್ಕಾಂ ನೌಕರರು ಫ್ರೀಡಂ ಪಾರ್ಕ್ ನಿಂದ 10 ಕೆಎಸ್‍ಆರ್ ಟಿಸಿ ಬಸ್‍ನಲ್ಲಿ ತೆರೆಳಿದ್ದಾರೆ. ಅಲ್ಲಿ ಸ್ವಯಂಕೃತವಾಗಿ ಸೇವೆ ಸಲ್ಲಿಸಿ ವಾಪಾಸ್ಸ್ ಆಗಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದಾರಿ ಬಿಡದಿದ್ದಕ್ಕೆ ಬೆಸ್ಕಾಂ ಸಿಬ್ಬಂದಿ ಗೂಂಡಾಗಿರಿ- ಓಮ್ನಿ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿತ

    ದಾರಿ ಬಿಡದಿದ್ದಕ್ಕೆ ಬೆಸ್ಕಾಂ ಸಿಬ್ಬಂದಿ ಗೂಂಡಾಗಿರಿ- ಓಮ್ನಿ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿತ

    ಬೆಂಗಳೂರು: ದಾರಿ ಬಿಡಲಿಲ್ಲಾ ಅಂತಾ ಓಮ್ನಿ ಚಾಲಕನೊಬ್ಬನಿಗೆ ಹಿಗ್ಗಾಮುಗ್ಗಾ ಥಳಿಸಿ ಬೆಸ್ಕಾಂ ಸಿಬ್ಬಂದಿ ಗೂಂಡಾಗಿರಿ ಮೆರೆದ ಘಟನೆ ನಗರದ ವೀರಪ್ಪನರೆಡ್ಡಿ ಪಾಳ್ಯದಲ್ಲಿ ನಡೆದಿದೆ.

    ಪ್ರದೀಪ್ ಹಲ್ಲೆಗೆ ಒಳಗಾದ ಓಮ್ನಿ ಚಾಲಕ. ಪ್ರವೀಣ್ ಬೆಳ್ಳಂದೂರಿನ ಐಟಿ ಉದ್ಯೋಗಿಗಳನ್ನು ಡ್ರಾಪ್ ಮಾಡಲು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಬೆಸ್ಕಾಂ ಮೂವರು ಸಿಬ್ಬಂದಿ ಈ ಕೃತ್ಯ ಎಸಗಿದ್ದು, ಸ್ಥಳದಲ್ಲಿಯೇ ವ್ಯಕ್ತಿಯೊಬ್ಬರು ಮೊಬೈಲ್‍ನಲ್ಲಿ ದೃಶ್ಯ ಸೆರೆ ಹಿಡಿದಿದ್ದಾರೆ.

    ಬೆಳ್ಳಂದೂರು ಸ್ಟೇಷನ್‍ನಲ್ಲಿ ವಿದ್ಯುತ್ ಕಂಬದ ರಿಪೇರಿಗೆ ಬೆಸ್ಕಾಂ ಸಿಬ್ಬಂದಿ ಬಂದಿದ್ದರು. ಹೀಗೆ ಕೆಲಸ ಮುಗಿಸಿ ಮರಳುತ್ತಿದ್ದಾಗ ಮುಂದೆ ಚಲಿಸುತ್ತಿದ್ದ ಓಮ್ನಿಯವನಿಗೆ ದಾರಿ ಬಿಡುವಂತೆ ಹಾರ್ನ್ ಹಾಕಿದ್ದಾರೆ. ಪಕ್ಕದಲ್ಲಿ ದಾರಿ ಇದ್ದರೂ ಹಾರ್ನ್ ಮಾಡಿದ್ದಕ್ಕೆ, ಚಾಲಕ ಪ್ರದೀಪ್ ನೀವೇ ಪಕ್ಕದಲ್ಲಿ ಹೋಗಿ ಅಂತಾ ಹೇಳಿದ್ದಾನೆ.

    ಪ್ರದೀಪ್ ಹೇಳಿದ್ದಕ್ಕೆ ಕೋಪಗೊಂದ ಬೆಸ್ಕಾಂ ಸಿಬ್ಬಂದಿ ಓಮ್ನಿಯನ್ನು ತಡೆದು ನಿಲ್ಲಿಸಿದ್ದಾರೆ. ಬಳಿಕ ಪ್ರದೀಪ್ ಜೊತೆಗೆ ವಾಗ್ವಾದಕ್ಕೆ ಇಳಿದ ಮೂವರು, ಆತನನ್ನು ಹೊರಗೆ ಎಳೆದುಕೊಂಡು ಮನಬಂದಂತೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬೆಸ್ಕಾಂ ಸಿಬ್ಬಂದಿಯ ಕೃತ್ಯದಿಂದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://youtu.be/1qMWps-DCis