Tag: BGS hospital

  • ಹೆಬ್ಬಾಳ ಆಸ್ಟರ್ ಸಿಎಂಸಿ ಆಸ್ಪತ್ರೆಯಿಂದ ಬಿಜಿಎಸ್ ಆಸ್ಪತ್ರೆಗೆ ಜೀವಂತ ಹೃದಯ ರವಾನೆ

    ಹೆಬ್ಬಾಳ ಆಸ್ಟರ್ ಸಿಎಂಸಿ ಆಸ್ಪತ್ರೆಯಿಂದ ಬಿಜಿಎಸ್ ಆಸ್ಪತ್ರೆಗೆ ಜೀವಂತ ಹೃದಯ ರವಾನೆ

    ಬೆಂಗಳೂರು: ಹೆಬ್ಬಾಳದ ಆಸ್ಟರ್ ಸಿಎಂಸಿ ಆಸ್ಪತ್ರೆಯಿಂದ ಬೆಂಗಳೂರಿನ ಬಿಜಿಎಸ್ ಹೃದಯ ಕೇಂದ್ರಕ್ಕೆ ಜೀವಂತ ಹೃದಯ ಯಶಸ್ವಿಯಾಗಿ ರವಾನೆಯಾಗಿದೆ. ಹೃದಯ ಸಾಗಿಸಲು ಗ್ರೀನ್ ಕಾರಿಡರ್ ವ್ಯವಸ್ಥೆ ನಿರ್ಮಿಸಲಾಗಿತ್ತು. ಇದರಿಂದ ಸುಮಾರು 36 ಕಿ.ಮೀ ದೂರವನ್ನು 26 ನಿಮಿಷದಲ್ಲಿ ಅಂಬುಲೆನ್ಸ್ ಕ್ರಮಿಸಿದೆ.

    ಬೆಳಗ್ಗೆ 9:56ಕ್ಕೆ ಹೆಬ್ಬಾಳದ ಸಿಎಂಸಿ ಆಸ್ಪತ್ರೆಯಿಂದ ಹೊರಟ ಅಂಬುಲೆನ್ಸ್ ಮೇಖ್ರಿ ಸರ್ಕಲ್, ಸುಮ್ಮನಹಳ್ಳಿ, ಕೆಂಗೇರಿ ಮಾರ್ಗದ ಮೂಲಕ 10:28ಕ್ಕೆ ಸರಿಯಾಗಿ ಹೃದಯ ಕೇಂದ್ರ ತಲುಪಿತು ಎಂದು ಬಿಜಿಎಸ್ ಹೃದಯ ಕೇಂದ್ರದ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

    ಮೈಸೂರು ಮೂಲದ ರೋಗಿಗೆ ಲಘು ಹೃದಯಾಘಾತವಾಗಿತ್ತು. ಹೃದಯ ಕಸಿ ಮಾಡಲು ಬಿಜಿಎಸ್ ಹೃದಯ ಕೇಂದ್ರದ ವೈದ್ಯರು ನಿರ್ಧರಿಸಿದ್ದರು. ಹೀಗಾಗಿ ರೋಗಿಯ ಕುಟುಂಬಸ್ಥರ ಒಪ್ಪಿಗೆ ಮೇರೆಗೆ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಬಿಜಿಎಸ್ ಹೃದಯ ಕೇಂದ್ರದ ವೈದ್ಯರಾದ ಭಾಸ್ಕರ್ ನೇತೃತ್ವದ ತಂಡ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಿದೆ.

  • ಸಿದ್ದಗಂಗಾ ಶ್ರೀಗಳ ಆರೋಗ್ಯ ಸ್ಥಿರವಾಗಿದೆ, ಊಹಾಪೋಹಗಳಿಗೆ ಕಿವಿಗೊಡಬೇಡಿ – ಬಿಜಿಎಸ್ ವೈದ್ಯರು

    ಸಿದ್ದಗಂಗಾ ಶ್ರೀಗಳ ಆರೋಗ್ಯ ಸ್ಥಿರವಾಗಿದೆ, ಊಹಾಪೋಹಗಳಿಗೆ ಕಿವಿಗೊಡಬೇಡಿ – ಬಿಜಿಎಸ್ ವೈದ್ಯರು

    ತುಮಕೂರು: ನಡೆದಾಡುವ ದೇವರಾದ ಶ್ರೀ ಶಿವಕುಮಾರ ಸ್ವಾಮೀಜಿ ಆರೋಗ್ಯವಾಗಿದ್ದಾರೆ. ಭಕ್ತಾದಿಗಳು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಬಿಜಿಎಸ್ ವೈದ್ಯರಾದ ಡಾ.ರವೀಂದ್ರ ಹಾಗೂ ಡಾ.ವೆಂಕಟರಮಣ ಹೇಳಿದ್ದಾರೆ.

    ಶ್ರೀಗಳ ಅನಾರೋಗ್ಯ ಹಿನ್ನೆಲೆಯಲ್ಲಿ ಬಿಜಿಎಸ್ ವೈದ್ಯ ರವೀಂದ್ರ ನೇತೃತ್ವದ ತಂಡವು ಸಿದ್ದಗಂಗಾ ಮಠಕ್ಕೆ ಆಗಮಿಸಿ, ಶ್ರೀಗಳ ಆರೋಗ್ಯ ತಪಾಸಣೆ ಮಾಡಿದರು. ಬಳಿಕ ಮಾತನಾಡಿದ ವೈದ್ಯರು, ಶ್ರೀಗಳ ದೇಹದಲ್ಲಿ ಪ್ರೋಟಿನ್ ಅಂಶ ಕಡಿಮೆ ಇರುವುದರಿಂದ ತೊಂದರೆಯಾಗಿತ್ತು. ಈಗ ಚೇರಿಸಿಕೊಂಡಿದ್ದಾರೆ ಎಂದು ತಿಳಿಸಿದರು.

    ಶಿವಕುಮಾರ ಸ್ವಾಮೀಜಿಗಳು ಆಸ್ಪತ್ರೆಗೆ ದಾಖಲಿಸುವ ಅಗತ್ಯವಿಲ್ಲ. ಮಠದಲ್ಲಿ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಶ್ರೀಗಳ ಶ್ವಾಸಕೋಶದಲ್ಲಿ ತುಂಬಿಕೊಂಡಿರುವ ನೀರನ್ನು 150 ರಿಂದ 200 ಎಂಎಲ್ ನಂತೆ ಎರಡು ದಿನಕ್ಕೊಮ್ಮೆ ತೆಗೆಯಲಾಗುತ್ತಿದೆ. ಶಿವಕುಮಾರ ಸ್ವಾಮೀಜಿಗಳ ನಾಡಿ ಮಿಡಿತ (ಪಲ್ಸ್ ರೇಟ್) ಕೂಡ 75 ಇರುವುದರಿಂದ ಆತಂಕ ದೂರವಾಗಿದೆ ಎಂದು ತಿಳಿಸಿದರು.

    ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಹಾಗೂ ಎಸ್‍ಪಿ ದಿವ್ಯಾ ಗೋಪಿನಾಥ್ ಅವರು ಸಿದ್ದಗಂಗಾ ಮಠಕ್ಕೆ ಭೇಟಿ ಶ್ರೀಗಳ ಯೋಗಕ್ಷೇಮ ವಿಚಾರಿಸಿದರು. ಬಳಿಕ ಮಾತನಾಡಿದ ಡಾ.ರಾಕೇಶ್ ಕುಮಾರ್, ಶಿವಕುಕುಮಾರ ಸ್ವಾಮೀಜಿಗಳು ಕ್ಷೇಮವಾಗಿದ್ದಾರೆ. ಭಕ್ತಾದಿಗಳು ಊಹಾಪೋಹಗಳಿಗೆ ಕಿವಿಗೊಡಬಾರದು. ಶ್ವಾಸಕೋಶದಲ್ಲಿ ಕಫ ಕಾಣಿಸಿಕೊಂಡಿದ್ದರಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಿಜಿಎಸ್ ಆಸ್ಪತ್ರೆಯಿಂದ ಸಿದ್ದಗಂಗಾ ಶ್ರೀ ಡಿಸ್ಚಾರ್ಜ್ – 1 ವಾರ ಭಕ್ತರಿಗೆ ದರ್ಶನವಿಲ್ಲ

    ಬಿಜಿಎಸ್ ಆಸ್ಪತ್ರೆಯಿಂದ ಸಿದ್ದಗಂಗಾ ಶ್ರೀ ಡಿಸ್ಚಾರ್ಜ್ – 1 ವಾರ ಭಕ್ತರಿಗೆ ದರ್ಶನವಿಲ್ಲ

    ಬೆಂಗಳೂರು: ಕಳೆದ ಎರಡು ದಿನಗಳಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದ ತ್ರಿವಿಧ ದಾಸೋಹಿ ಶ್ರೀ ಸಿದ್ದಗಂಗಾ ಶ್ರೀಗಳು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ಪಿತ್ತಕೋಶ ಮತ್ತು ಪಿತ್ತನಾಳದಲ್ಲಿ ಸೋಂಕು ಉಂಟಾದ ಹಿನ್ನೆಲೆ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದೂ ಕೂಡಾ ಶ್ರೀಗಳಿಗೆ ಚಿಕಿತ್ಸೆ ನೀಡಿ ಶ್ರೀಗಳ ಆರೋಗ್ಯದಲ್ಲಿ ಹೆಚ್ಚಿನ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಅವರನ್ನು ಡಿಸ್ಚಾರ್ಜ್ ಮಾಡಿದ್ದಾರೆ.

    ಭಾನುವಾರ ಸ್ಟಂಟ್ ಅಳವಡಿಕೆ ವೇಳೆ ಶ್ರೀಗಳಿಗೆ ಅನಸ್ತೇಶಿಯ ನೀಡಲಾಗಿತ್ತು. ಇಂದು ಅದರ ರಿಪೋರ್ಟ್ ಬಂದ ಬಳಿಕ ಯಾವುದೇ ತೊಂದರೆ ಇಲ್ಲ ಎಂದು ತಿಳಿದ ಮೇಲೆ ಡಿಸ್ಚಾರ್ಜ್ ಮಾಡಿದ್ದಾರೆ. ಇಂದು ಮಧ್ಯಾಹ್ನ ತುಮಕೂರಿನ ಹಳೆ ಮಠಕ್ಕೆ ತೆರಳಿದ ಶ್ರೀಗಳು ಪರಿಚಾರಕರ ನೆರವಿನಿಂದ ನಡೆದುಕೊಂಡು ಹೋದ್ರು. ಮುಂದಿನ ಒಂದು ವಾರಗಳ ಕಾಲ ಶ್ರೀಗಳು ಹಳೆ ಮಠದಲ್ಲೇ ವಿಶ್ರಾಂತಿ ಪಡೆಯಲಿದ್ದು, ಭಕ್ತರಿಗೆ ದರ್ಶನ ಸಿಗೋದಿಲ್ಲ ಅಂತಾ ಶ್ರೀಗಳ ಉಸ್ತುವಾರಿ ವೈದ್ಯ ಡಾ.ಪರಮೇಶ್ ಮಾಹಿತಿ ನೀಡಿದ್ದಾರೆ.

    ಸದ್ಯ ಶ್ರೀಗಳ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡಿದ್ದು 4 ಮೆಟಲ್ ಹಾಗೂ 7 ಪ್ಲಾಸ್ಟಿಕ್ ಸ್ಟಂಟ್ ಗಳು ಶ್ರೀಗಳ ದೇಹದಲ್ಲಿವೆ. ಸಿದ್ದಗಂಗಾ ಆಸ್ಪತ್ರೆಯ ವೈದ್ಯರು 24 ಗಂಟೆಗಳ ಆರೈಕೆ ಮಾಡಲಿದ್ದಾರೆ ಅಂತಾ ಅವರು ಸ್ಪಷ್ಟಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದೇವರು ಇದ್ದಾನೆ ಅನ್ನೋದಕ್ಕೆ ನಡೆದಾಡುವ ದೇವರೇ ಸಾಕ್ಷಿ: ವಿ ಸೋಮಣ್ಣ

    ದೇವರು ಇದ್ದಾನೆ ಅನ್ನೋದಕ್ಕೆ ನಡೆದಾಡುವ ದೇವರೇ ಸಾಕ್ಷಿ: ವಿ ಸೋಮಣ್ಣ

    ಬೆಂಗಳೂರು: ಭಗವಂತನ ಕೃಪೆಯಿಂದಾಗಿ ನಡೆದಾಡುವ ದೇವರು ಆರೋಗ್ಯವಾಗಿದ್ದಾರೆ. ಗುರುಗಳ ಆರೋಗ್ಯದ ಬಗ್ಗೆ ನಿಗಾವಹಿಸಿ ರಾಜ್ಯ ಹಾಗೂ ದೇಶದ ಜನ ನೋಡಲು ಕಾರಣವಾದ ಆಸ್ಪತ್ರೆಯ ವೈದ್ಯರಿಗೆ ಮಾಜಿ ಸಚಿವ, ಶಾಸಕ ವಿ ಸೋಮಣ್ಣ ಧನ್ಯವಾದ ತಿಳಿಸಿದ್ದಾರೆ.

    ತುಮಕೂರು ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜಿಎಸ್ ಆಸ್ಪತ್ರೆಯ ಡಾ. ರವೀಂದ್ರ ಹಾಗೂ ವೈದ್ಯರ ತಂಡ ಯಶಸ್ವಿ ತಪಾಸಣೆ ನಡೆಸಿದ್ದಾರೆ. ಎರಡು ಸ್ಟಂಟ್ ಗಳನ್ನು ಅಳವಡಿಸಿದ್ದಾರೆ. ಸದ್ಯ ಗುರುಗಳು ಲವಲವಿಕೆಯಿಂದ ಇದ್ದಾರೆ ಅಂದ್ರು.

    ದೇವರು ಇದ್ದಾನೆ ಅನ್ನೋದಕ್ಕೆ ಶಿವಕುಮಾರ ಸ್ವಾಮೀಜಿಗಳು ಒಂದು ದೊಡ್ಡ ಉದಾಹರಣೆಯಾಗಿದ್ದಾರೆ. ಸದ್ಯ ಶ್ರೀಗಳ ಆರೋಗ್ಯದಲ್ಲಿ ಸುಧಾರಣೆ ಕಂಡಿದ್ದು, ಈ ಮೂಲಕ ಭಕ್ತರ ಕಳವಳ ಬಗೆಹರಿದಿದೆ. ಗುರುಗಳು ಮತ್ತೆ ಯಥಾಸ್ಥಿತಿಯಲ್ಲಿ ಪೂಜಾ ಕೈಂಕರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಕಾರಣರಾದ ಎಲ್ಲಾ ವೈದ್ಯರಿಗೆ ಇದೇ ಸಂದರ್ಭದಲ್ಲಿ ಧನ್ಯವಾದ ಸಮರ್ಪಿಸಿದ್ರು.

    ಇದೇ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯ ಡಾ. ರವೀಂದ್ರ ಮಾತನಾಡಿ, ಪಿತ್ತಕೋಶ ಮತ್ತು ಪಿತ್ತನಾಳದಲ್ಲಿ ಸೋಂಕು ಉಂಟಾಗಿತ್ತು. ಎಂಡೋಸ್ಕೋಪಿ ಮೂಲಕ ಹೊಸ ಎರಡು ಸ್ಟಂಟ್ ಹಾಕಿದ್ದೇವೆ. ಈಗ ಸೋಂಕು ಕಡಿಮೆಯಾಗಿದೆ. ಒಂದೂವರೆ ಗಂಟೆಯ ಈ ಕಾರ್ಯದ ವೇಳೆ ಅನಸ್ತೇಶಿಯಾದಲ್ಲಿ ಸ್ವಾಮೀಜಿ ಇದ್ರು. ಸಾಮಾನ್ಯವಾಗಿ ಇಂಥಾ ಸಂದರ್ಭಗಳಲ್ಲಿ ಪ್ರೊಸೀಜರ್ ಆದ್ಮೇಲೆ ಐಸಿಯುಗೆ ಶಿಫ್ಟ್ ಮಾಡ್ತೀವಿ. ಆದ್ರೆ ಸ್ವಾಮೀಜಿ ಆರಾಮಾಗಿದ್ದಾರೆ. ಸದ್ಯ ವಾರ್ಡಿನಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ. ಗಾಲ್ ಬ್ಲಾಡರ್ ಇನ್‍ಫೆಕ್ಷನ್ ಇದ್ದಾಗ ಕೆಲವೊಮ್ಮೆ ಮತ್ತೆ ಜ್ವರ ಬರುವ ಸಾಧ್ಯತೆ ಇರುತ್ತೆ. ಹಾಗಾಗಿ ಸ್ವಾಮೀಜಿಯನ್ನು ಆಸ್ಪತ್ರೆಯಲ್ಲೇ ಅಬ್ಸರ್ವಶೇನ್ ಇರಿಸಿಕೊಳ್ಳುವ ಬಗ್ಗೆ ಚಿಂತಿಸುತ್ತಿದ್ದೇವೆ ಅಂತ ತಿಳಿಸಿದ್ರು.

    ಶ್ರೀಗಳು ಆರಾಮಾಗಿ, ಆರೋಗ್ಯವಾಗಿದ್ದಾರೆ. ಏನೂ ಸಮಸ್ಯೆಯಿಲ್ಲ. ವಿಶ್ರಾಂತಿ ಪಡೆಯುತ್ತಿದ್ದು, ಆದಷ್ಟು ಬೇಗ ಗುಣಮುಖರಾಗಲಿ. ಇಂದು ಸಂಜೆ ಇಲ್ಲ ನಾಳೆ ಡಿಸ್ಚಾರ್ಜ್ ಆಗ್ತಾರೆ ಅಂತ ಬಿಬಿಎಂಪಿ ಮೇಯರ್ ಗಂಗಾಬಿಕೆ ಹೇಳಿದ್ರು.

    ಇದೇ ಸಂದರ್ಭದಲ್ಲಿ ಬಿಜಿಎಸ್ ಆಸ್ಪತ್ರೆಗೆ ಆದಿ ಚುಂಚನಗಿರಿ ಮಠದ ನಿರ್ಮಾಲಾನಂದ ಸ್ವಾಮೀಜಿ ಆಗಮಿಸಿ, ಶ್ರೀಗಳ ಆರೋಗ್ಯ ವಿಚಾರಿಸಿದ್ರು. ಶನಿವಾರ ರಾತ್ರಿ ಡಾ. ರವೀಂದ್ರ ಅವರಿಂದ ಶ್ರೀ ಗಳಿಗೆ ಮೂರು ಭಾರಿ ಜನರಲ್ ಚೆಕ್ ಅಪ್ ನಡೆಸಲಾಗಿತ್ತು. ವೈದ್ಯರು ನಿನ್ನೆಯಿಂದ ರಕ್ತಪರೀಕ್ಷೆ, ಅಲ್ಟ್ರಾಸೌಂಡ್, ಶ್ವಾಸಕೋಶ ಸಂಬಂಧಿ ಕೆಲ ಪರೀಕ್ಷೆ ನಡೆಸಿದ್ದಾರೆ. ಇಂದು ಬೆಳಗ್ಗೆ 5.30ಕ್ಕೆ ಎದ್ದಿರುವ ಶ್ರೀಗಳು, ಎಂದಿನಂತೆ ಲವಲವಿಕೆಯಿಂದ ಪೂಜೆ ಮುಗಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಾನ್ ಇಲ್ಲಿರಲ್ಲ..ನನ್ನ ಮಠಕ್ಕೆ ಕಳುಹಿಸಿ – ಆಸ್ಪತ್ರೆಯಲ್ಲಿ ಹಠ ಹಿಡಿದ ಸಿದ್ದಗಂಗಾ ಶ್ರೀ

    ನಾನ್ ಇಲ್ಲಿರಲ್ಲ..ನನ್ನ ಮಠಕ್ಕೆ ಕಳುಹಿಸಿ – ಆಸ್ಪತ್ರೆಯಲ್ಲಿ ಹಠ ಹಿಡಿದ ಸಿದ್ದಗಂಗಾ ಶ್ರೀ

    ಬೆಂಗಳೂರು: ಶತಾಯುಷಿ ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದ್ದು, ಆಸ್ಪತ್ರೆಯಲ್ಲಿ ನಾನಿರಲ್ಲ.. ನನ್ನನ್ನು ಮಠಕ್ಕೆ ಕಳುಹಿಸಿ ಎಂದು ಶ್ರೀಗಳು ಹಠ ಮಾಡುತ್ತಿದ್ದಾರೆ.

    ಸಿದ್ದಗಂಗಾ ಮಠದ ಶ್ರೀ ಶಿವಕುಮಾರಸ್ವಾಮಿ ಸ್ವಾಮೀಜಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಶುಕ್ರವಾರ ನಗರದ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಸಿದ್ದಗಂಗಾ ಶ್ರೀಗಳಿಗೆ ಚಿಕಿತ್ಸೆ ಮುಂದುವರಿದಿದ್ದು, ಮುಂಜಾನೆ 6 ಗಂಟೆಗೆ ನುರಿತ ವೈದ್ಯರಿಂದ ವೈದ್ಯಕೀಯ ತಪಾಸಣೆ ನಡೆಸಿದ್ದಾರೆ.

    ಇಂದು ಬೆಳಗ್ಗೆ 7.30ರ ಲಿಂಗ ಪೂಜೆ ಬಳಿಕ ಬಿಜಿಎಸ್ ವೈದ್ಯರ ತಂಡ ಸಿಟಿ ಸ್ಕ್ಯಾನ್ ಮಾಡಿದ್ದಾರೆ. ಸಿಟಿ ಸ್ಕ್ಯಾನ್ ಬಳಿಕ ಆರೋಗ್ಯದಲ್ಲಿ ಹೆಚ್ಚಿನ ಚೇತರಿಕೆ ಕಂಡುಬಂದಲ್ಲಿ ಡಿಸ್ಚಾರ್ಜ್ ಮಾಡುವುದಾಗಿ ವೈದ್ಯರು ತಿಳಿಸಿದ್ದರು. ಆದರೆ ಶ್ರೀಗಳು ನಾನು ಆಸ್ಪತ್ರೆಯಲ್ಲಿ ಇರಲ್ಲ. ನನ್ನನ್ನ ಮಠಕ್ಕೆ ಕಳುಹಿಸಿ ಎಂದು ಹಠ ಮಾಡಿದ್ದಾರೆ. ಆದ್ದರಿಂದ ಇಂದು ಮಧ್ಯಾಹ್ನ ಸುಮಾರು 12 ಗಂಟೆಗೆ ಶ್ರೀಗಳನ್ನು ಡಿಸ್ಚಾರ್ಜ್ ಮಾಡಲು ವೈದ್ಯರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

    ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ.ರವೀಂದ್ರ, ಶ್ರೀಗಳಿಗೆ ಎಲ್ಲಾ ತಪಾಸಣೆ ಮಾಡಿದ್ದೇವೆ. ನಾವು ಮುಂದಿನ ತಿರ್ಮಾನ ತೆಗೆದುಕೊಳ್ಳುತ್ತಿದ್ದು, ಡಿಸ್ಚಾರ್ಜ್ ಮಾಡಲು ನಿರ್ಧಾರ ಮಾಡಿದ್ದೇವೆ, ಆದರೆ ಮಠಕ್ಕೆ ಹೋದ ನಂತರ 10 ದಿನಗಳ ವಿಶ್ರಾಂತಿ ಪಡೆಯಬೇಕು. ಆದ್ದರಿಂದ ಅಲ್ಲಿಯೂ ಎಲ್ಲಾ ಸಿದ್ಧತೆ ಮಾಡಿದ್ದೇವೆ. ಈಗಾಗಲೇ ಬಂದವರಿಗೆ ದರ್ಶನ ಕೊಡುತ್ತಿದ್ದಾರೆ ಎಂದು ಹೇಳಿದ್ದಾರೆ.

  • ನಡೆದಾಡುವ ದೇವರ ಆರೋಗ್ಯದಲ್ಲಿ ಚೇತರಿಕೆ- ಮುಂಜಾನೆ 6 ಗಂಟೆಗೆ ವೈದ್ಯಕೀಯ ತಪಾಸಣೆ

    ನಡೆದಾಡುವ ದೇವರ ಆರೋಗ್ಯದಲ್ಲಿ ಚೇತರಿಕೆ- ಮುಂಜಾನೆ 6 ಗಂಟೆಗೆ ವೈದ್ಯಕೀಯ ತಪಾಸಣೆ

    ಬೆಂಗಳೂರು: ಶತಾಯುಷಿ ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದ್ದು, ಮಠದಲ್ಲಿ ಭಕ್ತರು ಸಂತಸಗೊಂಡಿದ್ದಾರೆ.

    ಬಿಜಿಎಸ್ ಆಸ್ಪತ್ರೆಯಲ್ಲಿ ಸಿದ್ದಗಂಗಾ ಶ್ರೀಗಳಿಗೆ ಚಿಕಿತ್ಸೆ ಮುಂದುವರಿದಿದ್ದು, ಮುಂಜಾನೆ 6 ಗಂಟೆಗೆ ನುರಿತ ವೈದ್ಯರಿಂದ ವೈದ್ಯಕೀಯ ತಪಾಸಣೆ ನಡೆಸಿದ್ದಾರೆ. 7.30ರ ಲಿಂಗ ಪೂಜೆ ಬಳಿಕ ಬಿಜಿಎಸ್ ವೈದ್ಯರ ತಂಡ ಸಿಟಿ ಸ್ಕ್ಯಾನ್ ಮಾಡಲಿದ್ದಾರೆ. ಸಿಟಿ ಸ್ಕ್ಯಾನ್ ಬಳಿಕ ಆರೋಗ್ಯದಲ್ಲಿ ಹೆಚ್ಚಿನ ಚೇತರಿಕೆ ಕಂಡುಬಂದಲ್ಲಿ ಡಿಸ್ಚಾರ್ಜ್ ಸಾಧ್ಯತೆಗಳಿವೆ ಎಂಬುದಾಗಿ ತಿಳಿದುಬಂದಿದೆ.

    ಆಸ್ಪತ್ರೆಯಲ್ಲಿ ಶಿವಕುಮಾರ ಶ್ರೀಗಳ ಜೊತೆ ಮಠದ ಕಿರಿಯ ಶ್ರೀಗಳು ಇದ್ದಾರೆ. ಮಠದಲ್ಲಿ ನೂರಾರು ಭಕ್ತರು ಶ್ರೀಗಳು ಕುಳಿತುಕೊಳ್ಳುತ್ತಿದ್ದ ಹಳೇಮಠದ ಗದ್ದುಗೆಗೆ ನಮಸ್ಕರಿಸಿ ವಾಪಸ್ಸಾಗುತಿದ್ದಾರೆ. ಶ್ರೀಗಳು ಗುಣಮುಖರಾಗಿ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.

    ಸಿದ್ದಗಂಗಾ ಮಠದ ಶ್ರೀ ಶಿವಕುಮಾರಸ್ವಾಮಿ ಸ್ವಾಮೀಜಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಶುಕ್ರವಾರ ನಗರದ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ವಾಮೀಜಿ ಆರೋಗ್ಯದ ಬಗ್ಗೆ ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ. ಬಿಪಿಯಲ್ಲಿ ಬದಲಾವಣೆಯಾಗಿದೆ ಅಷ್ಟೇ. ಯಾರೂ ಹೆದರಬೇಡಿ. ಶ್ರೀಗಳ ಆರೋಗ್ಯ ಬೇಗ ಸುಧಾರಿಸುತ್ತದೆ ಎಂದು ಸಿದ್ಧಗಂಗಾ ಮಠದ ಕಿರಿಯ ಸ್ವಾಮೀಜಿ ನಿನ್ನೆ ತಿಳಿಸಿದ್ದರು.

    ಶ್ರೀಗಳಿಗೆ ಗುರುವಾರ ರಾತ್ರಿ ಸುಮಾರು 1 ಗಂಟೆಗೆ ಜ್ವರ, ಬಿಪಿ, ಕಫ ಕಂಡುಬಂದಿತ್ತು. ಈಗಾಗಲೇ ರಕ್ತ ಪರೀಕ್ಷೆ, ಎಕ್ಸ್ ರೇ ಮಾಡಲಾಗಿದೆ. ಇದರಲ್ಲಿ ನಿಮೋನಿಯಾ ಕಂಡು ಬಂದಿದೆ. ರಕ್ತ ಪರೀಕ್ಷೆಯ ಮಾಡಿದ್ದೇವೆ. ರಿಪೋರ್ಟ್‍ನಲ್ಲಿ ಸ್ವಾಮೀಜಿಗೆ ಸೋಂಕು ತಗುಲಿರುವುದು ಗೊತ್ತಾಗಿದೆ ಬಿಜಿಎಸ್ ಆಸ್ಪತ್ರೆಯ ಡಾ. ರವೀಂದ್ರ ಹೇಳಿದ್ದರು.

     

  • ನಟ ಭುವನ್ ತೊಡೆ ಕಚ್ಚಿದ ಪ್ರಥಮ್- ಕೋರ್ಟ್‍ಗೆ ಒಳ್ಳೆ ಹುಡ್ಗ ಹಾಜರು

    ನಟ ಭುವನ್ ತೊಡೆ ಕಚ್ಚಿದ ಪ್ರಥಮ್- ಕೋರ್ಟ್‍ಗೆ ಒಳ್ಳೆ ಹುಡ್ಗ ಹಾಜರು

    ಬೆಂಗಳೂರು: ನಟ ಭುವನ್ ತೊಡೆ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ವಿನ್ನರ್ ಪ್ರಥಮ್ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

    ಪ್ರಥಮ್‍ನಿಂದ ಕಚ್ಚಿಸಿಕೊಂಡ ಭುವನ್ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಬಳಿಕ ಮೆಡಿಕಲ್ ರಿಪೋರ್ಟ್ ಪಡೆದ ನಂತರ ನಿರ್ಮಾಪಕರೂಂದಿಗೆ ನಿನ್ನೆ ತಲಘಟ್ಟಪುರ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದರು.

    ಈ ಹಿನ್ನೆಲೆಯಲ್ಲಿ ಪ್ರಥಮ್ ವಿರುದ್ಧ ಎಫ್‍ಐಆರ್ ದಾಖಲಾಗಿದ್ದು, ಪೊಲೀಸರ ಕಣ್ಣುತಪ್ಪಿಸಿ ಪ್ರಥಮ್ ಎರಡನೇ ಎಸಿಜೆಎಂ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಅಲ್ಲದೇ ಪ್ರಥಮ್ ಪರ ವಕೀಲರು ಜಾಮೀನಿಗಾಗಿ ಅರ್ಜಿಹಾಕಿಕೊಂಡಿದ್ದಾರೆ.

    ಪ್ರಕರಣ ಸಂಬಂಧ ಭಾನುವಾರ ಪ್ರಥಮ್ ಪೊಲೀಸರ ಜೊತೆ ಮಾತನಾಡಿ, ಧಾರಾವಾಹಿ ಸೆಟ್ ನಲ್ಲಿ ನಡೆದ ಘಟನೆಯ ಬಗ್ಗೆ ವಿವರಣೆ ನೀಡಿದ್ದರು. ಚಿತ್ರೀಕರಣದ ವೇಳೆಯಲ್ಲಿ ಆನ್ ಶೂಟ್ ಮತ್ತೆ ಆಫ್ ಶೂಟ್‍ನಲ್ಲಿ ಸಂಜನಾ ಭುವನ್ ಜೊತೆ ಚೆನ್ನಾಗಿ ಮಾತಾನಾಡುತ್ತಿದ್ದಳು. ಆದ್ರೆ ನನ್ನ ಜೊತೆ ಆನ್ ಶೂಟ್ ಮತ್ತೆ ಆಫ್ ಶೂಟ್ ನಲ್ಲಿ ಹೆಚ್ಚಾಗಿ ಮಾತನಾಡುತ್ತಿರಲಿಲ್ಲ. ಕೈ ಹಿಡಿದು ಮಾತಾನಾಡುವ ದೃಶ್ಯದ ಚಿತ್ರೀಕರಣ ಇತ್ತು. ಆನ್ ಶೂಟ್ ನಲ್ಲಿ ಕೈ ಹಿಡಿದು ಮಾತನಾಡಿಸಿದ್ರು ಆಕೆ ನನ್ನನ್ನ ತಿರಸ್ಕಾರ ಮಾಡುತ್ತಿದ್ದಳು. ಮತ್ತೆ ಆಫ್ ಶೂಟ್ ನಲ್ಲಿ ಸಹ ಅದೇ ರೀತಿ ಮಾಡುತ್ತಿದ್ದಳು. ಆದ್ದರಿಂದ ಆಕೆಯನ್ನು ನಾನು ಬೈದಿದ್ದೆ. ಆಗ ಭುವನ್ ಬಂದು ಹೆಣ್ಣು ಮಕ್ಕಳಿಗೆ ಮರ್ಯಾದೆ ಕೊಟ್ಟು ಮಾತನಾಡು ಅಂತ ಹೇಳಿದ್ದನು. ಈ ಸಂಬಂಧ ಇಬ್ಬರ ನಡುವೆ ಮಾತಿನ ಚಕಮಕಿ ಹಾಗೂ ತಳ್ಳಾಟ ನಡೆದಿತ್ತು ಅಂತ ಫೋನ್ ಮುಖಾಂತರ ಹೇಳಿಕೆ ನೀಡಿದ್ದಾರೆ.

    ಬಳಿಕ ನಾಳೆ ಪೊಲೀಸ್ ಠಾಣೆಗೆ ಹಾಜರಾಗಿ ವಿವರಣೆ ನೀಡುವುದಾಗಿ ಹೇಳಿದ್ದರು. ಅದ್ರೆ ಆನಂತರದಿಂದ ಪ್ರಥಮ್ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದರು. ಪ್ರಥಮ್ ಹಾಗೂ ಭುವನ್ ಗಲಾಟೆಯನ್ನು ಸೆಟ್ ನಲ್ಲಿದ್ದ ಸಿಬ್ಬಂದಿ ಬಿಡಿಸಿದ್ದಾರೆ.

    https://twitter.com/actressharshika/status/889134639113134080

    ಇದನ್ನೂ ಓದಿ: ಭುವನ್ ತೊಡೆಯನ್ನು ಕಚ್ಚಿದ ಬಿಗ್‍ಬಾಸ್ ವಿನ್ನರ್ ಪ್ರಥಮ್

  • ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಲ್ಲೇ ಬೆಳಗ್ಗೆ ದೇವರ ಪೂಜೆ, ಇಂದು ಡಿಸ್ಚಾರ್ಜ್ ಸಾಧ್ಯತೆ

    ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಲ್ಲೇ ಬೆಳಗ್ಗೆ ದೇವರ ಪೂಜೆ, ಇಂದು ಡಿಸ್ಚಾರ್ಜ್ ಸಾಧ್ಯತೆ

    ಬೆಂಗಳೂರು: ನಡೆದಾಡುವ ದೇವರು ತುಮಕೂರಿನ ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆಯಾಗಿದೆ.

    ಬೆಂಗಳೂರಿನ ಕೆಂಗೇರಿಯಲ್ಲಿರುವ ಬಿಜಿಎಸ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಶ್ರೀಗಳು ಶುಕ್ರವಾರ ರಾತ್ರಿ ಗಂಜಿ, ಅನ್ನ, ತಿಳಿ ಸಾರು ಮತ್ತು ಫಲಾಹಾರ ಸೇವಿಸಿದ್ದಾರೆ. ವೈದ್ಯರ ಸಲಹೆಯಂತೆ ಸ್ವಾಮೀಜಿಗಳು ವಿಶ್ರಾಂತಿ ಪಡೆಯುತ್ತಿದ್ದಾರೆ.

    ಶ್ರೀಗಳ ಲಿಂಗ ಪೂಜೆಗೆ ಪೂಜಾಸಾಮಗ್ರಿಗಳ ಮಠದಿಂದ ತರಿಸಲಾಗಿದೆ. ಶ್ರೀಗಳಿಗೆ ಮಠದಿಂದಲೇ ಪ್ರಸಾದವನ್ನ ಶಿಷ್ಯವೃಂದ ತಂದಿದ್ದಾರೆ. ಬೆಳಗ್ಗೆ 7:30ರ ಸುಮಾರಿಗೆ ಶ್ರೀಗಳು ಆಸ್ಪತ್ರೆಯಲ್ಲಿ ಇಷ್ಟಲಿಂಗ ಪೂಜೆ ನೆರವೇರಿಸಿದ್ದಾರೆ. ಇಂದು ಮತ್ತೊಂದು ಸುತ್ತಿನ ಆರೋಗ್ಯ ತಪಾಸಣೆ, ರಕ್ತ ಪರೀಕ್ಷೆ ನಡೆಯಲಿದೆ. ಮಠಕ್ಕೆ ಕರೆದುಕೊಂಡು ಹೋಗಿ ಅಲ್ಲೇ ಚಿಕಿತ್ಸೆ ಮುಂದುವರೆಸಿ ಅಂತಾ ಈಗಾಗಲೇ ಶ್ರೀಗಳು ಹೇಳಿರೋದ್ರಿಂದ ಇಂದು ಸ್ವಾಮೀಜಿಯವ್ರನ್ನ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ. ಡಿಸ್ಚಾರ್ಜ್ ಬಳಿಕ ಶ್ರೀಗಳಿಗೆ ಮಠದಲ್ಲೇ ಚಿಕಿತ್ಸೆ ಮುಂದುವರೆಸುವ ಸಾಧ್ಯತೆಯಿದೆ. ಇಂದು ಆರೋಗ್ಯ ತಪಾಸಣೆಯ ರಿಪೋರ್ಟ್ ಬಂದ ಬಳಿಕ ವೈದ್ಯರ ತಂಡ ಮಠದವರ ಜೊತೆ ಚರ್ಚೆ ಮಾಡಿ ಮುಂದಿನ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಲಿದ್ದಾರೆ.

    ಪಿತ್ತನಾಳದಲ್ಲಿ ಅಳವಡಿಸಿದ್ದ ಸ್ಟಂಟ್‍ಗೆ ಸೋಂಕು ತಗುಲಿದ ಪರಿಣಾಮ ಬಿಜಿಎಸ್ ಆಸ್ಪತ್ರೆಯಲ್ಲಿ ಶ್ರೀಗಳಿಗೆ ಸುಮಾರು ಒಂದು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಗ್ಯಾಸ್ಟ್ರೋ ಎಂಟಾಲಾಜಿಸ್ಟ್ ಡಾ.ರವೀಂದ್ರ ನೇತೃತ್ವದಲ್ಲಿ ಎಂಡೋಸ್ಕೋಪಿ ಮೂಲಕ ಸ್ಟಂಟ್ ಬದಲಾವಣೆ ಮಾಡಲಾಯ್ತು. ಸದ್ಯ ಶ್ರೀಗಳನ್ನು ಜನರಲ್ ವಾರ್ಡ್‍ಗೆ ಶಿಫ್ಟ್ ಮಾಡಲಾಗಿದ್ದು, 24 ಗಂಟೆಗಳಲ್ಲಿ ಶ್ರೀಗಳು ಸಂಪೂರ್ಣವಾಗಿ ಚೇತರಿಸಿಕೊಳ್ಳಲಿದ್ದಾರೆ ಅಂತ ವೈದ್ಯ ರವೀಂದ್ರ ಹೇಳಿದ್ದಾರೆ.

    ಸಿದ್ದಗಂಗಾ ಮಠದಲ್ಲಿ ಶ್ರೀಗಳ ದರ್ಶನಕ್ಕಾಗಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಕಾದು ಕುಳಿತಿದ್ದಾರೆ. ರಾಜ್ಯದ ನಾನಾ ಭಾಗದಿಂದ ಆಗಮಿಸಿರುವ ಭಕ್ತಾದಿಗಳು ಮಠದಲ್ಲೇ ಉಳಿದುಕೊಂಡಿದ್ದು ಶಿವಕುಮಾರ ಸ್ವಾಮಿಜಿಗಳ ಬರುವಿಕೆಗಾಗಿ ಎದುರು ನೋಡುತ್ತಿದ್ದಾರೆ. ಅಲ್ಲದೆ ಶ್ರೀಗಳು ಕುಳಿತು ಭಕ್ತಾದಿಗಳಿಗೆ ಆಶೀರ್ವಾದ ಮಾಡುತಿದ್ದ ಗದ್ದುಗೆಗೆ ಭಕ್ತರು ನಮಿಸಿ ಶ್ರೀಗಳು ಬೇಗ ಗುಣಮುಖರಾಗಿ ಬರಲಿ ಎಂದು ಪ್ರಾರ್ಥಿಸುತಿದ್ದಾರೆ.