Tag: Bhagwant Maan

  • ನವರಾತ್ರಿಯಲ್ಲಿ ಸಿಎಂ ಭಗವಂತ್ ಮಾನ್ ಗರ್ಬಾ ಡ್ಯಾನ್ಸ್

    ನವರಾತ್ರಿಯಲ್ಲಿ ಸಿಎಂ ಭಗವಂತ್ ಮಾನ್ ಗರ್ಬಾ ಡ್ಯಾನ್ಸ್

    ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವತ್ ಮಾನ್ (Punjab Chief Minister Bhagwant Mann) ಅವರು ಶನಿವಾರ ರಾತ್ರಿ ಗುಜರಾತ್‍ನಲ್ಲಿ ನಡೆದ ನವರಾತ್ರಿ ಉತ್ಸವದಲ್ಲಿ (Navratri festivities) ಪಾಲ್ಗೊಂಡರು. ಈ ವೇಳೆ ಯಾವುದೇ ಪೂರ್ವಸಿದ್ಧತೆಯಿಲ್ಲದೇ ಗಾರ್ಬಾ ಟ್ಯೂನ್‍ಗೆ (Garba tune) ನೃತ್ಯ ಮಾಡಿದ್ದಾರೆ. ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ರಾಜ್‍ಕೋಟ್‍ನಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಪ್ರೇಕ್ಷಕರು ಭಗವತ್ ಮಾನ್ ಅವರನ್ನು ಹುರಿದುಂಬಿಸುವುದರೊಂದಿಗೆ ಕೆಲವು ಭಾಂಗ್ರಾ ಸ್ಟೆಪ್ಸ್ (Bhangra moves) ಹಾಕುವಂತೆ ಒತ್ತಾಯಿಸಿದರು. ಹೀಗಾಗಿ ಪ್ರೇಕ್ಷರನ್ನು ಸಂತೋಷ ಪಡಿಸಲು ಭಗವಂತ್ ಮಾನ್ ಅವರು ನೃತ್ಯ ಮಾಡಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಇದನ್ನೂ ಓದಿ: ಸುವರ್ಣಸೌಧದಲ್ಲಿ ಈ ವರ್ಷ ಚೆನ್ನಮ್ಮ, ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ- ಬೊಮ್ಮಾಯಿ

    ವರ್ಷಕ್ಕೊಮ್ಮೆ ಬರುವ ಹಿಂದೂ ಹಬ್ಬಗಳಲ್ಲಿ ನವರಾತ್ರಿ ಕೂಡ ದೊಡ್ಡ ಹಬ್ಬವಾಗಿದ್ದು, ಇದರಲ್ಲಿ ಒಂಬತ್ತು ರಾತ್ರಿ ದುರ್ಗಾದೇವಿಯನ್ನು ಪೂಜಿಸಲಾಗುತ್ತದೆ. ಗುಜರಾತ್‍ನ ಫೇಮಸ್ ನೃತ್ಯವನ್ನು ಈ ಸಮಯದಲ್ಲಿ ಆಡುತ್ತಾರೆ. ನವರಾತ್ರಿಯು ವಾರ್ಷಿಕ ಹಿಂದೂ ಹಬ್ಬವಾಗಿದ್ದು, ಇದರಲ್ಲಿ ಒಂಬತ್ತು ರಾತ್ರಿ ದುರ್ಗಾದೇವಿಯನ್ನು ಪೂಜಿಸಲಾಗುತ್ತದೆ, ಗರ್ಬಾ ಗುಜರಾತ್‍ನ ಸಿಗ್ನೇಚರ್ ನೃತ್ಯ ಪ್ರಕಾರವಾಗಿದೆ, ಭಾಂಗ್ರಾಗೂ ಪಂಜಾಬ್‍ಗೂ ವಿಶಿಷ್ಟವಾದ ಸಂಬಂಧವಿದೆ.

    ಇತ್ತೀಚೆಗಷ್ಟೇ ವಡೋದರದಲ್ಲಿ ನಡೆದ ಮತ್ತೊಂದು ಸಾರ್ವಜನಿಕ ಸಮಾರಂಭದಲ್ಲಿ ಎಎಪಿ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ (Raghav Chadha) ಗರ್ಬಾ ನೃತ್ಯ ಮಾಡಿ ಪ್ರೇಕ್ಷಕರೊಂದಿಗೆ ಕುಪ್ಪಳಿಸಿದ್ದರು. ಈ ವೀಡಿಯೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದನ್ನೂ ಓದಿ: ರಾಹುಲ್‌, ಸೋನಿಯಾ ಗಾಂಧಿ ಅವರ ತ್ಯಾಗ ಬಹಳಷ್ಟಿದೆ: ಮಲ್ಲಿಕಾರ್ಜುನ ಖರ್ಗೆ

    Live Tv
    [brid partner=56869869 player=32851 video=960834 autoplay=true]

  • AAP ಉರುಳಿಸಲು ಬಿಜೆಪಿ, ಕಾಂಗ್ರೆಸ್ ಒಟ್ಟಾಗಿ ಕುತಂತ್ರ ನಡೆಸುತ್ತಿವೆ – ಭಗವಂತ್ ಮಾನ್

    AAP ಉರುಳಿಸಲು ಬಿಜೆಪಿ, ಕಾಂಗ್ರೆಸ್ ಒಟ್ಟಾಗಿ ಕುತಂತ್ರ ನಡೆಸುತ್ತಿವೆ – ಭಗವಂತ್ ಮಾನ್

    ಚಂಡೀಗಢ: ಆಮ್ ಆದ್ಮಿ ಪಕ್ಷವನ್ನು (AAP) ಉರುಳಿಸಲು ಬಿಜೆಪಿ (BJP) ಮತ್ತು ಕಾಂಗ್ರೆಸ್ (Congress) ಪರಸ್ಪರ ಕುತಂತ್ರ ನಡೆಸುತ್ತಿವೆ ಎಂದು ಪಂಜಾಬ್ (Punjab) ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Maan) ಆರೋಪಿಸಿದ್ದಾರೆ.

    ಅವರಿಂದು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು ರಾಜ್ಯದಲ್ಲಿ ಪ್ರಜಾಸತ್ತಾತ್ಮಕವಾಗಿ ಚುನಾಯಿತವಾದ ಸರ್ಕಾರವನ್ನು (Punjab Government) ಉರುಳಿಸಲು ಕೈಜೋಡಿವೆ. ಹಾಗಾಗಿ ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸ ನಿರ್ಣಯ ಮಂಡಿಸುವುದು ಅಗತ್ಯವಾಗಿದೆ ಎಂದು ಹೇಳಿದ್ದಾರೆ.

    ಪಂಜಾಬ್‌ನಲ್ಲಿ ಹಿಂಬಾಗಿಲಿನಿಂದ ಸರ್ಕಾರ ರಚಿಸಲು ಬಿಜೆಪಿ ಪಕ್ಷಾಂತರ ನಿಷೇಧ ಕಾನೂನನ್ನು ಸಾಧನವಾಗಿ ಬಳಸುತ್ತಿದೆ. ದುರಾದೃಷ್ಟವಶಾತ್ ಕಾಂಗ್ರೆಸ್ ಸಹ ಇದನ್ನು ಬೆಂಬಲಿಸುತ್ತಿದೆ. ಬಿಜೆಪಿಯು ಮಧ್ಯಪ್ರದೇಶ, ಮಹಾರಾಷ್ಟ್ರ, ಕರ್ನಾಟಕ (Karnataka) ಮತ್ತು ಇತರ ರಾಜ್ಯಗಳಲ್ಲಿ ಶಾಸಕರನ್ನು ಸೆಳೆಯುವ ಮೂಲಕ ಚುನಾಯಿತ ಸರ್ಕಾರಗಳನ್ನು ಉರುಳಿಸಿದೆ. ಆದರೆ ತಮ್ಮ ಕೆಟ್ಟ ನಡೆಯಿಂದ ದೆಹಲಿಯಲ್ಲಿ ಮೂರು ಬಾರಿಯೂ ಅಧಿಕಾರಕ್ಕೆ ಬರುವಲ್ಲಿ ವಿಫಲರಾಗಿದ್ದಾರೆ. ಈಗ ಪಂಜಾಬ್‌ನಲ್ಲಿ ಶಾಸಕರನ್ನು ಖರೀದಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

    AAP 02

    ಬಿಜೆಪಿ (BJP) ತನ್ನ ಹಣದ ಚೀಲಗಳನ್ನು ಬಳಸಿಕೊಂಡು ಪ್ರಜಾಪ್ರಭುತ್ವಕ್ಕೆ ತುಂಬಲಾರದ ನಷ್ಟವುಂಟುಮಾಡುತ್ತಿದೆ. ಹಿಂದೆ ಕಾಂಗ್ರೆಸ್ (Congress) ಸಹ ಅದನ್ನೇ ಮಾಡಿತ್ತು. ಈಗ ಕೇಸರಿ ಪಕ್ಷವೂ ಅದೇ ಹಾದಿಯಲ್ಲಿ ಸಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚಾಮರಾಜನಗರ ದಸರಾ ಉದ್ಘಾಟನೆಯಲ್ಲಿ ಕಪ್ಪು ಬಾವುಟ ಪ್ರದರ್ಶನ: ವಿ. ಸೋಮಣ್ಣ ಕೆಂಡಾಮಂಡಲ

    ಇದೇ ವೇಳೆ ಭಾರತ್ ಜೋಡೋ ಯಾತ್ರೆ (Bharat Jodo Yatra) ಕುರಿತು ಟೀಕಿಸಿದ ಮಾನ್, ಕಾಂಗ್ರೆಸ್ ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ `ಭಾರತ್ ಜೋಡೋ ಯಾತ್ರೆ’ ಹಮ್ಮಿಕೊಂಡಿದೆ. ಆದರೆ ಬಿಜೆಪಿಗೆ ಲಾಭ ಮಾಡಿಕೊಡುವ ಉದ್ದೇಶದಿಂದಲೇ ಗುಜರಾತ್ ಹಾಗೂ ಹಿಮಾಚಲ ಪ್ರದೇಶ ರಾಜ್ಯಗಳನ್ನ ಹೊರಗಿಡಲಾಗಿದೆ ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಚಿರಯುವಕರಂತೆ ವಾಲಿಬಾಲ್ ಆಡಿದ ಭಗವಂತ್ ಮಾನ್ – ವೀಡಿಯೋ ವೈರಲ್

    ಚಿರಯುವಕರಂತೆ ವಾಲಿಬಾಲ್ ಆಡಿದ ಭಗವಂತ್ ಮಾನ್ – ವೀಡಿಯೋ ವೈರಲ್

    ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು, ಸೋಮವಾರ ಜಲಂಧರ್‌ನ ಗುರು ಗೋವಿಂದ್ ಸಿಂಗ್ ಕ್ರೀಡಾಂಗಣದಲ್ಲಿ ವಾಲಿಬಾಲ್ ಆಟವನ್ನು ಆಡಿದ್ದಾರೆ.

    Bhagwant Mann

    ಎರಡು ತಿಂಗಳ ಕಾಲ ನಡೆಯುವ ವಾಲಿಬಾಲ್ ಕ್ರೀಡಾಕೂಟವನ್ನು ಉದ್ಘಾಟಿಸಿದ ಬಳಿಕ ಭಗವಂತ್ ಮಾನ್ ಅವರು ಸುಮಾರು 10-15 ನಿಮಿಷಗಳ ಕಾಲ ಕ್ರೀಡಾಪಟುಗಳೊಂದಿಗೆ ವಾಲಿಬಾಲ್ ಪಂದ್ಯವನ್ನು ಆಡಿದ್ದಾರೆ. ನೆಟ್‍ನಲ್ಲಿ ತಾವೂ ಕೂಡ ವಾಲಿಬಾಲ್ ಸರ್ವ್ ಮಾಡಿ ಆಟದ ಕೌಶಲ್ಯ ಮೆರೆದಿದ್ದಾರೆ. ಇದನ್ನೂ ಓದಿ: ರೈಲ್ವೆ ನಿಲ್ದಾಣದಲ್ಲಿ ಕಿಡ್ನ್ಯಾಪ್ ಆಗಿದ್ದ ಮಗು ಬಿಜೆಪಿ ಕಾರ್ಪೊರೇಟರ್ ಮನೆಯಲ್ಲಿ ಪತ್ತೆ

    ವಾಲಿಬಾಲ್ ಅಂಕಣದ ಹೊರಗೆ ಭದ್ರತಾ ಸಿಬ್ಬಂದಿ ನಿಂತಿದ್ದರು. ಈ ವೇಳೆ ಟ್ರ್ಯಾಕ್‍ಸೂಟ್ ಮತ್ತು ಕ್ಯಾಪ್ ಧರಿಸಿ ಮೈದಾನಕ್ಕೆ ಇಳಿದ ಭಗವಂತ್ ಮಾನ್ ಅವರು ಎದುರಾಳಿಗಳು ನೀಡಿದ ಪಾಸ್ ಅನ್ನು ಒಂದೇ ಕೈಯಿಂದ ತಡೆದು ನಿಲ್ಲಿಸಿದ್ದು ಅಲ್ಲಿದ್ದವರಿಗೆ ಬೆರಗು ಮೂಡಿಸಿದೆ. ಭಗವಂತ್ ಮಾನ್ ಅವರು ಕೇವಲ ಆಟವಷ್ಟೇ ಅಲ್ಲ. ತಮ್ಮ ತಂಡಕ್ಕೆ ಅಂಕವನ್ನು ಸಹ ತಂದು ಕೊಟ್ಟಿದ್ದಾರೆ. ಇದನ್ನೂ ಓದಿ: ಹಾಲಿನ ದರ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸಿ – ಸರ್ಕಾರಕ್ಕೆ ಕೆಎಂಎಫ್‌ ಪ್ರಸ್ತಾವ

    ವಾಲಿಬಾಲ್ ಕ್ರೀಡಾಕೂಟವನ್ನು ಉದ್ಘಾಟಿಸುವ ಮುನ್ನ ಮಾತನಾಡಿದ ಅವರು, ನಾಲ್ಕು ಲಕ್ಷಕ್ಕೂ ಹೆಚ್ಚು ಆಟಗಾರರು 28 ಕ್ರೀಡಾ ವಿಭಾಗಗಳಲ್ಲಿ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ರಾಜ್ಯಮಟ್ಟದ ವಿಜೇತರಿಗೆ ಒಟ್ಟು 6 ಕೋಟಿ ರೂಪಾಯಿ ನಗದು ಬಹುಮಾನ ನೀಡಲಾಗುವುದು. ಈ ಬಾರಿಯ ಕ್ರೀಡಾಕೂಟಗಳು ರಾಜ್ಯದ ಕ್ರೀಡಾ ಕ್ಯಾಲೆಂಡರ್‌ನಲ್ಲಿ ವಾರ್ಷಿಕ ವೈಶಿಷ್ಟ್ಯವಾಗಲಿದೆ. ಪಂಜಾಬ್ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಯುವಕರು ಸಂತೋಷವಾಗಿರುವುದನ್ನು ಕಂಡು ನಾನು ಹರ್ಷಗೊಂಡಿದ್ದೇನೆ. ರಾಜ್ಯ ಸರ್ಕಾರವು ರಾಜ್ಯಾದ್ಯಂತ ಕ್ರೀಡೆಯನ್ನು ಉತ್ತೇಜಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಯುವಕರ ಸಾಮರ್ಥ್ಯವನ್ನು ಬೆಂಬಲಿಸುತ್ತಿದೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪಂಜಾಬ್ ಸಿಎಂ ಭಗವಂತ್ ಮಾನ್ ಆಸ್ಪತ್ರೆಗೆ ದಾಖಲು

    ಪಂಜಾಬ್ ಸಿಎಂ ಭಗವಂತ್ ಮಾನ್ ಆಸ್ಪತ್ರೆಗೆ ದಾಖಲು

    ನವದೆಹಲಿ: ಹೊಟ್ಟೆ ನೋವಿನ ಹಿನ್ನೆಲೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ.

    ಭಗವಂತ್ ಮಾನ್ ಅವರು ಅಸ್ವಸ್ಥಗೊಂಡ ಹಿನ್ನೆಲೆ ದೆಹಲಿಯ ಅಪೊಲೋ ಆಸ್ಪತ್ರೆಗೆ ಚಿಕಿತ್ಸೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಮುಖ್ಯಮಂತ್ರಿಯವರಿಗೆ ಹೊಟ್ಟೆನೋವಿನ ತಪಾಸಣೆ ನಡೆಸಲಾಗಿದ್ದು, ಅವರಿಗೆ ಇನ್‍ಫೆಕ್ಷನ್ ಆಗಿದೆ ಎಂದು ವೈದ್ಯರು ತಿಳಿಸಿರುವುದಾಗಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಇದನ್ನೂ ಓದಿ: ಟೋಲ್‍ನಲ್ಲಿ ಹಸು ಮಲಗಿದ್ದೇ ಅಪಘಾತಕ್ಕೆ ಕಾರಣ – ಅಂಬುಲೆನ್ಸ್ ಚಾಲಕನ

    ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಕ್ರಿಮಿನಲ್‍ಗಳು ಮತ್ತು ಪಂಜಾಬ್ ಪೊಲೀಸರ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಗ್ಯಾಂಗ್‍ಸ್ಟರ್‌ಗಳನ್ನು ಪೊಲೀಸರು ಎನ್‍ಕೌಂಟರ್ ಮಾಡಿದ್ದಾರೆ. ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಭಗವಂತ್ ಮಾನ್ ಅಭಿನಂದನೆ ಸಲ್ಲಿಸಿದ್ದರು. ಇದನ್ನೂ ಓದಿ: ಕನ್ನಡ ಸಾಹಿತ್ಯ ಲೋಕದ ಹಿರಿಯ ಚಿಂತಕ, ಸಾಹಿತಿ ಜಿ. ರಾಜಶೇಖರ್ ವಿಧಿವಶ

  • ಭಗವಂತ್ ಮಾನ್ ಮದುವೆ ರೆಸಿಪಿ ಲಿಸ್ಟ್ ಏನು ಗೊತ್ತಾ?

    ಭಗವಂತ್ ಮಾನ್ ಮದುವೆ ರೆಸಿಪಿ ಲಿಸ್ಟ್ ಏನು ಗೊತ್ತಾ?

    ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಡಾ.ಗುರುಪ್ರೀತ್ ಕೌರ್ ಅವರನ್ನು ಇಂದು ಗುರು ಹಿರಿಯರ ಸಮ್ಮುಖದಲ್ಲಿ ತಮ್ಮ ನಿವಾಸದಲ್ಲಿ ವಿವಾಹವಾಗಿದ್ದಾರೆ. ವಿಶೇಷವೆಂದರೆ ಈ ಮದುವೆ ಸಮಾರಂಭದಲ್ಲಿನ ಫುಡ್ ಮೆನು ಎಲ್ಲರ ಗಮನ ಸೆಳೆದಿದೆ.

    ಸಾಮಾನ್ಯವಾಗಿ ಮದುವೆ ಸಮಾರಂಭ ಊಟವಿಲ್ಲದೇ ಪರಿಪೂರ್ಣವಾಗುವುದಿಲ್ಲ. ಮದುವೆ ವೇಳೆ ಅನೇಕ ವಿವಿಧ ಖಾದ್ಯಗಳನ್ನು ಮಾಡಿಸಲಾಗಿರುತ್ತದೆ. ಸದ್ಯ ಭಗವಂತ್ ಮಾನ್ ಅವರು ತಮ್ಮ ಮದುವೆಗೆ ಆಗಮಿಸಿರುವ ಅಥಿತಿಗಳಿಗೆ ವಿಶೇಷ ಭೋಜನ ಕೂಟವನ್ನು ಏರ್ಪಡಿಸಿದ್ದಾರೆ. ಎಲ್ಲ ರೀತಿಯ ಖಾದ್ಯಗಳು ಎಲ್ಲರ ಬಾಯಿಯಲ್ಲಿ ನೀರು ತರಿಸುವಂತಿದೆ. ಇದನ್ನೂ ಓದಿ: ನಿಮ್ಮ ಮದುವೆ ಯಾವಾಗ – ರಾಘವ್ ಚಡ್ಡಾಗೆ ಪ್ರಶ್ನೆ

    Bhagwant Maan

    ಹೌದು ಭಗವಂತ್ ಮಾನ್ ಅವರ ಮದುವೆ ಸಮಾರಂಭದಲ್ಲಿ ಅತಿಥಿಗಳಿಗಾಗಿ ಕರಾಹಿ ಪನೀರ್, ತಂದೂರಿ ಕುಲ್ಚಾ, ದಾಲ್ ಮಖಾನಿ, ನವರತನ್ ಬಿರಿಯಾನಿ, ಮೌಸಮಿ ಸಬ್ಜಿಯಾನ್, ಏಪ್ರಿಕಾಟ್ ಸ್ಟಫ್ಡ್ ಕೋಫ್ತಾ, ಲಸಾಗ್ನಾ ಸಿಸಿಲಿಯಾನೋ ಮತ್ತು ಬಿರಿಯಾನಿ ರೈತಾ ಸೇರಿದಂತೆ ಭಾರತೀಯ ಮತ್ತು ಇಟಾಲಿಯನ್ ಫುಡ್‍ಗಳನ್ನು ಮಾಡಿಸಲಾಗಿದೆ. ಇದನ್ನೂ ಓದಿ: ನಾಳೆ ಪಂಜಾಬ್ ಸಿಎಂ 2ನೇ ಮದುವೆ – ಮತ್ತೆ ಹಸೆಮಣೆ ಏರಲಿದ್ದಾರೆ ಭಗವಂತ್ ಮಾನ್

    ಇನ್ನೂ ಸಿಹಿ ತಿಂಡಿ ವಿಚಾರಕ್ಕೆ ಬಂದರೆ ಫ್ರೆಶ್ ಫ್ರೂಟ್ ಟ್ರಫಲ್, ಮೂಂಗ್ ದಾಲ್ ಹಲ್ವಾ, ಶಾಹಿ ತುಕ್ಡಾ, ಅಂಗೂರಿ ರಸಮಲೈ ಮತ್ತು ಡ್ರೈ ಫ್ರೂಟ್ ರಬರಿ, ಬಿಸಿ ಗುಲಾಬ್ ಜಾಮೂನ್‍ನಂತಹ ವಿವಿಧ ಸಿಹಿತಿಂಡಿಗಳಿವೆ ಮತ್ತು ಆರೋಗ್ಯ ಸಮಸ್ಯೆಗೆ ಹೊಂದಿರುವವರಿಗೆ ವಿವಿಧ ರೀತಿಯ ಸಲಾಡ್‍ಗಳ ವ್ಯವಸ್ಥೆಗೊಳಿಸಲಾಗಿದೆ.

    ಸಿಎಂ ನಿವಾಸದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಕೂಡ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಿರಿಯ ಸಚಿವರಾಗಿ ಭಗವಂತ್ ಸಂಪುಟ ಸೇರಿದ ವಕೀಲ

    ಕಿರಿಯ ಸಚಿವರಾಗಿ ಭಗವಂತ್ ಸಂಪುಟ ಸೇರಿದ ವಕೀಲ

    ಚಂಡೀಗಢ: ಪಂಜಾಬ್‍ನಲ್ಲಿ ನೂತನವಾಗಿ ರಚನೆಯಾಗಿರುವ ಆಮ್ ಆದ್ಮಿ ಪಕ್ಷದ ಸರ್ಕಾರದಲ್ಲಿ ಇಬ್ಬರು ವಕೀಲರು ಸ್ಥಾನಗಳಿಸಿದ್ದಾರೆ.

    ಸಿಎಂ ಭಗವಂತ್ ಮಾನ್ ಅವರ ಸಚಿವ ಸಂಪುಟಕ್ಕೆ ಹರ್‍ಪಲ್ ಸಿಂಗ್ ಚೀಮಾ ಹಾಗೂ ಹರ್‍ಜೋತ್ ಸಿಂಗ್ ಬೇನ್ಸ್ ಸೇರ್ಪಡೆಯಾಗಿದ್ದಾರೆ. ಇದನ್ನೂ ಓದಿ:  ಉಪ್ಪಿ ಕಂಠಸಿರಿಯಲ್ಲಿ ‘ಹುಷಾರ್’ ಹಾಡು

     

    ಈ ಇಬ್ಬರೂ ಪಂಜಾಬ್ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದವರಾಗಿದ್ದಾರೆ. 31 ವರ್ಷದ ಹರ್‍ಜೋತ್ ಅವರು ಮಾನ್ ಸಂಪುಟದ ಅತಿ ಕಿರಿಯ ವಯಸ್ಸಿನ ಸಚಿವರು ಮಾತ್ರವಲ್ಲ ಇಡೀ ದೇಶದಲ್ಲೇ ಅತಿ ಚಿಕ್ಕ ವಯಸ್ಸಿನ ಸಚಿವರಾಗಿದ್ದಾರೆ. ಹರ್‍ಪಲ್ ಅವರು ಎರಡನೇ ಬಾರಿಗೆ ವಿಧಾನಸಭೆ ಪ್ರವೇಶಿಸುತ್ತಿದ್ದಾರೆ.

    ಹರ್‍ಪಲ್ ಸಿಂಗ್ ಚೀಮಾ 2017ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದರು. ಜೊತೆಗೆ 2017-19ರ ಅವಧಿಯಲ್ಲಿ ಪಂಜಾಬ್‍ನ ಪ.ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ಸಮಿತಿಯಲ್ಲಿ ಸೇವೆ ಸಲ್ಲಿಸಿದ್ದರು. ಹರ್‍ಜೋತ್ ಸಿಂಗ್ ಬೇನ್ಸ್ ಪಂಜಾಬ್ ಆಮ್‍ಆದ್ಮಿ ಘಟಕದ ಮುಖ್ಯ ವಕ್ತಾರರಾಗಿದ್ದರು. 2017ರಲ್ಲಿ ಸಹ್ನೆವಾಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಇದನ್ನೂ ಓದಿ: ‘ದಿ ಕಾಶ್ಮೀರ್‌ ಫೈಲ್ಸ್’ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸಹಾಯ ಮಾಡುವುದಿಲ್ಲ: ಸಂಜಯ್ ರಾವತ್

    ಸದ್ಯ ಇಬ್ಬರೂ ನೂತನ ಮುಖ್ಯಮಂತ್ರಿಯಾಗಿರುವ ಭಗವಂತ್ ಮಾನ್ ಅವರ ಸಚಿವ ಸಂಪುಟ ಸೇರಿದ್ದಾರೆ. ಸಂಪುಟದಲ್ಲಿ ಸ್ಥಾನ ನೀಡಿದ್ದಕ್ಕೆ ಚೀಮಾ ಮತ್ತು ಬೇನ್ಸ್ ಸಿಎಂ ಗೆ ಅಭಿನಂದನೆ ಸಲ್ಲಿಸಿದ್ದಾರೆ.