Tag: Bhanuka Rajapaksa

  • IPL 2023: ರಾಜಪಕ್ಸ ಫಿಫ್ಟಿ, ಅರ್ಷ್‌ದೀಪ್‌ ಬೆಂಕಿ ಬೌಲಿಂಗ್‌ – ಮಳೆ ನಡುವೆಯೂ ಪಂಜಾಬ್‌ಗೆ 7 ರನ್‌ ರೋಚಕ ಜಯ

    IPL 2023: ರಾಜಪಕ್ಸ ಫಿಫ್ಟಿ, ಅರ್ಷ್‌ದೀಪ್‌ ಬೆಂಕಿ ಬೌಲಿಂಗ್‌ – ಮಳೆ ನಡುವೆಯೂ ಪಂಜಾಬ್‌ಗೆ 7 ರನ್‌ ರೋಚಕ ಜಯ

    ಮೊಹಾಲಿ: ಭಾನುಕ ರಾಜಪಕ್ಷ ಭರ್ಜರಿ ಬ್ಯಾಟಿಂಗ್‌ ಹಾಗೂ ಅರ್ಷ್‌ದೀಪ್‌ ಸಿಂಗ್‌ ಬೆಂಕಿ ಬೌಲಿಂಗ್‌ ದಾಳಿಯ ಪರಿಣಾಮ ಮಳೆಯ ನಡುವೆಯೂ ಪಂಜಾಬ್‌ ಕಿಂಗ್ಸ್‌ (Punjab Kings), ಕೆಕೆಆರ್‌ (KKR) ವಿರುದ್ಧ 7 ರನ್‍ಗಳ ರೋಚಕ ಜಯ ಸಾಧಿಸಿದೆ.

    ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಸುಧಾರಣೆಯಿಂದ ಗೆಲುವಿನ ನಿರೀಕ್ಷೆಯಲ್ಲಿದ್ದ ಕೆಕೆಆರ್‌ಗೆ ಕೊನೆಯ 24 ಎಸೆತಗಳಲ್ಲಿ 55 ರನ್‌ ಗಳ ಅಗತ್ಯವಿತ್ತು. ಆದರೆ ಮಳೆ ಅಡ್ಡಿಯಾದ್ದರಿಂದ ಡಕ್ವರ್ಥ್ ಲೂಯಿಸ್‌ ನಿಯಮ (DLS Method) ಅನ್ವಯಿಸಲಾಯಿತು. ಈ ನಿಯಮದಂತೆ ಪಂಜಾಬ್‌ 7 ರನ್‌ಗಳ ರೋಚಕ ಜಯ ಸಾಧಿಸಿತು.

    ಶನಿವಾರ ಮೊಹಾಲಿಯ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ನಡೆದ 2023ರ ಐಪಿಎಲ್‌ನ (IPL 2023) 2ನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ ಭರ್ಜರಿ 191 ರನ್‌ ಕಲೆಹಾಕಿತ್ತು. 192 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಕೋಲ್ಕತ್ತಾ ನೈಟ್‌ರೈಡರ್ಸ್‌ ಮಳೆಯ ಕಾರಣ ನಿಗದಿತ 16 ಓವರ್‌ಗಳಲ್ಲಿ 146 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

    ಚೇಸಿಂಗ್‌ ಆರಂಭಿಸಿದ ಕೋಲ್ಕತ್ತಾ ನೈಟ್‌ರೈಡರ್ಸ್‌ ಭರ್ಜರಿ ಆರಂಭದಲ್ಲೇ ಪ್ರಮುಖ ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಅಗ್ರಕ್ರಮಾಂಕದ ಬ್ಯಾಟರ್‌ಗಳು ಪಂಜಾಬ್ ‌ಬೌಲರ್‌ಗಳ ದಾಳಿಗೆ ತತ್ತರಿಸಿದರು. ಇದನ್ನೂ ಓದಿ: ಬಣ್ಣದ ಉಡುಗೆಯಲ್ಲಿ ಮಿರಿಮಿರಿ ಮಿಂಚಿದ ರಶ್ಮಿಕಾ, ತಮನ್ನಾ – ಇಲ್ಲಿದೆ ಕಣ್ಮನ ಸೆಳೆಯುವ Photos

    ಆರಂಭಿಕರಾಗಿ ಕಣಕ್ಕಿಳಿದ ಮಂದೀಪ್‌ ಸಿಂಗ್‌ 4 ಎಸೆತಗಳಲ್ಲಿ ಕೇವಲ 2 ರನ್‌ ಗಳಿಸಿದರೆ, ರಹಮಾನುಲ್ಲಾ ಗುರ್ಬಾಜ್ 16 ಎಸೆತಗಳಲ್ಲಿ 22 ರನ್‌ (3 ಬೌಂಡರಿ, 1 ಸಿಕ್ಸರ್‌) ಬಾರಿಸಿ ಪೆವಿಲಿಯನ್‌ ಸೇರಿದರು. ತಾಳ್ಮೆಯ ಆಟವಾಡಿದ ನಾಯಕ ನಿತೀಶ್‌ ರಾಣಾ (Nitish Rana) 17 ಎಸೆತಗಳಲ್ಲಿ 3 ಬೌಂಡರಿ 1 ಸಿಕ್ಸರ್‌ನೊಂದಿಗೆ 24 ರನ್‌ ಗಳಿಸಿದರು. ರಿಂಕು ಸಿಂಗ್‌, ಅನುಕುಲ್‌ ರಾಯ್‌ ತಲಾ 4 ರನ್‌ ಗಳಿಸಿದರು. ಉಳಿದಂತೆ ಯಾವೊಬ್ಬ ಆಟಗಾರರು ಸ್ಥಿರವಾಗಿ ನಿಲ್ಲದ ಕಾರಣ ಕೆಕೆಆರ್‌ ತಂಡ ಮೊದಲ ಪಂದ್ಯದಲ್ಲೇ ಸೋಲನ್ನು ಎದುರಿಸಬೇಕಾಯಿತು.

    ಮಧ್ಯಮ ಕ್ರಮಾಂಕದಲ್ಲಿ ಒಂದಾದ ವೆಂಕಟೇಶ್‌ ಅಯ್ಯರ್ (Venkatesh Iyer) ಹಾಗೂ ಆಂಡ್ರೆ ರಸೆಲ್ (Andre Russell) ಸ್ಫೋಟಕ ಬ್ಯಾಟಿಂಗ್‌ ನಡೆಸುವ ಮೂಲಕ ತಂಡಕ್ಕೆ ನೆರವಾದರು. ಇದರಿಂದ ಕೆಕೆಆರ್‌ಗೆ ಮತ್ತೆ ಗೆಲುವಿನ ಆಸೆ ಚಿಗುರಿತ್ತು. ಆದರೆ, ಸ್ಯಾಮ್‌ ಕರ್ರನ್‌, ಅರ್ಷ್‌ದೀಪ್‌ ಸಿಂಗ್‌ ಇವರಿಬ್ಬರ ಆಟಕ್ಕೆ ಬ್ರೇಕ್‌ ಹಾಕಿ ಪೆವಿಲಿಯನ್‌ಗೆ ದಾರಿ ತೋರಿಸಿದರು. ವೆಂಕಟೇಶ್‌ ಅಯ್ಯರ್‌ 28 ಎಸೆತಗಳಲ್ಲಿ 1 ಸಿಕ್ಸರ್‌, 3 ಬೌಂಡರಿ ಸಹಿತ 34 ರನ್‌ ಗಳಿಸಿದರೆ, ರಸೆಲ್‌ 19 ಎಸೆತಗಳಲ್ಲಿ 2 ಸಿಕ್ಸರ್‌, 3 ಬೌಂಡರಿಯೊಂದಿಗೆ 35 ರನ್‌ ಚಚ್ಚಿ ಔಟಾದರು. ಕೊನೆಯಲ್ಲಿ ಶಾರ್ದೂಲ್‌ ಠಾಕೂರ್‌ 3 ಎಸೆತಗಳಲ್ಲಿ 8 ರನ್‌ ಹಾಗೂ ಸುನೀಲ್‌ ನರೇನ್‌ 2 ಎಸೆತಗಳಲ್ಲಿ 7 ರನ್‌ ಗಳಿಸಿ ಕ್ರೀಸ್‌ನಲ್ಲಿದ್ದರು. ಈ ವೇಳೆ ಮಳೆ ಅಬ್ಬರಿಸಿದ್ದರಿಂದ ಡಕ್ವರ್ಥ್‌ ಲೂಯಿಸ್‌ ನಿಯಮ ಅನ್ವಯಿಸಲಾಯಿತು. ಇದರಿಂದ ಗೆಲುವಿನ ನಿರೀಕ್ಷೆಯಲ್ಲಿದ್ದ ಕೆಕೆಆರ್‌ಗೆ ನಿರಾಸೆಯುಂಟಾಯಿತು.

    ಪಂಜಾಬ್‌ ಕಿಂಗ್ಸ್‌ ಪರ ಅರ್ಷ್‌ದೀಪ್‌ ಸಿಂಗ್‌ 3 ವಿಕೆಟ್‌ ಪಡೆದರೆ, ಸ್ಯಾಮ್‌ ಕರ್ರನ್‌, ನಾಥನ್ ಎಲ್ಲಿಸ್, ಸಿಕಂದರ್‌ ರಾಜಾ ಹಾಗೂ ರಾಹುಲ್‌ ಚಹಾರ್‌ ತಲಾ ಒಂದೊಂದು ವಿಕೆಟ್‌ ಪಡೆದರು. ಇದನ್ನೂ ಓದಿ: ಕೊನೆಯಲ್ಲಿ ಸಿಕ್ಸರ್‌, ಬೌಂಡರಿ – ಚೆನ್ನೈಗೆ ಗುನ್ನ ಕೊಟ್ಟ ಗುಜರಾತ್‌; ಹಾಲಿ ಚಾಂಪಿಯನ್ಸ್‌ಗೆ ರೋಚಕ ಜಯ

    ಇದಕ್ಕೂ ಮುನ್ನ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ ಭಾನುಕ ರಾಜಪಕ್ಸ (Bhanuka Rajapaksa ಮತ್ತು ನಾಯಕ ಶಿಖರ್ ಧವನ್ ಭರ್ಜರಿ ಬ್ಯಾಟಿಂಗ್‌ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 191 ರನ್‌ ಕಲೆಹಾಕಿತು.

    ಭಾನುಕ ರಾಜಪಕ್ಸ ಕೇವಲ 32 ಎಸೆತಗಳಲ್ಲಿ 50 ರನ್ (5 ಬೌಂಡರಿ, 2 ಸಿಕ್ಸರ್‌) ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನೂ ನಾಯಕ ಶಿಖರ್ ಧವನ್ 29 ಎಸೆತಗಳಲ್ಲಿ 6 ಬೌಂಡರಿ ಸಮೇತ 40 ರನ್ ಗಳಿಸಿ ಔಟಾದರು. ನಂತರ ಬಂದ ಜಿತೇಶ್ ಶರ್ಮಾ 11 ಎಸೆತಗಳಲ್ಲಿ 21 ರನ್‌ಗಳ (1 ಬೌಂಡರಿ, 2 ಸಿಕ್ಸರ್‌) ಕೊಡುಗೆ ನೀಡಿದರು. ಇದೇ ವೇಳೆ ಜಿಂಬಾಬ್ವೆ ಆಲ್‌ರೌಂಡರ್ ಸಿಕಂದರ್ ರಾಜ 13 ಎಸೆತಗಳಲ್ಲಿ 16 ರನ್ ಗಳಿಸಿದರು.

    ಕೊನೆಯಲ್ಲಿ ಐಪಿಎಲ್‌ನ ದುಬಾರಿ ಆಟಗಾರ ಸ್ಯಾಮ್ ಕರ್ರನ್ (Sam Curran) 17 ಎಸೆತಗಳಲ್ಲಿ 2 ಸಿಕ್ಸರ್ ಸಮೇತ 26 ರನ್ ಬಾರಿಸಿದರೆ, ಶಾರೂಖ್ ಖಾನ್ 11 ರನ್ ಗಳಿಸಿ ತಂಡದ ಮೊತ್ತ 190ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.

    ಬೌಲಿಂಗ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಟಿಮ್ ಸೌಥಿ 4 ಓವರ್‌ಗಳಲ್ಲಿ 54 ರನ್ ನೀಡಿ 2 ವಿಕೆಟ್ ಪಡೆದರೆ, ವರುಣ್ ಚಕ್ರವರ್ತಿ 4 ಓವರ್‌ಗಳಲ್ಲಿ 26 ರನ್ ನೀಡಿ 1 ವಿಕೆಟ್ ಪಡೆದರು. ಇನ್ನೂ ಉಮೇಶ್ ಯಾದವ್ 4 ಓವರ್‌ಗಳಲ್ಲಿ 27 ರನ್ ನೀಡಿ 1 ವಿಕೆಟ್ ಪಡೆದರೆ, ಸುನಿಲ್ ನರೈನ್ 4 ಓವರ್‌ಗಳಲ್ಲಿ 40 ರನ್ ನೀಡಿ 1 ವಿಕೆಟ್ ಕಿತ್ತರು.

  • T20WorldCup: ಶ್ರೀಲಂಕಾ ವಿರುದ್ಧ ನಮೀಬಿಯಾ ಆರ್ಭಟ – ಉದ್ಘಾಟನಾ ಪಂದ್ಯದಲ್ಲೇ 55 ರನ್‌ಗಳ ಭರ್ಜರಿ ಜಯ

    T20WorldCup: ಶ್ರೀಲಂಕಾ ವಿರುದ್ಧ ನಮೀಬಿಯಾ ಆರ್ಭಟ – ಉದ್ಘಾಟನಾ ಪಂದ್ಯದಲ್ಲೇ 55 ರನ್‌ಗಳ ಭರ್ಜರಿ ಜಯ

    ಕ್ಯಾನ್ಬೆರಾ: ಜಾನ್ ಪ್ರೈಲಿಂಕ್ (JanFrylinck), ಜೆಜೆ ಸ್ಮಿತ್ ಆಲ್‌ರೌಂಡರ್ ಆಟ ಹಾಗೂ ಸಂಘಟಿತ ಬೌಲಿಂಗ್ ದಾಳಿಯ ನೆರವಿನಿಂದ ಟಿ20 ವಿಶ್ವಕಪ್ (T20 WorldCup) ಮೊದಲ ಪಂದ್ಯದಲ್ಲೇ ಶ್ರೀಲಂಕಾ (SriLanka) ವಿರುದ್ಧ ನಮೀಬಿಯಾ (Namibia) 55 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಅರ್ಹತಾ ಸುತ್ತಿನ ಉದ್ಘಾಟನಾ ಪಂದ್ಯದಲ್ಲೇ ಶುಭಾರಂಭ ಪಡೆದುಕೊಂಡಿದೆ.

    ಶ್ರೀಲಂಕಾ ಬೌಲರ್‌ಗಳ ಸಂಘಟಿತ ಪ್ರದರ್ಶನದ ಹೊರತಾಗಿಯೂ ನಮೀಬಿಯಾ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 163 ರನ್ ಬಾರಿಸಿತು. ಸಾಧಾರಣ ರನ್‌ಗಳ ಗುರಿ ಬೆನ್ನತ್ತಿದ ಲಂಕಾ ಪ್ರಮುಖ ಬ್ಯಾಟರ್‌ಗಳ ವೈಫಲ್ಯದಿಂದಾಗಿ ನಿಗದಿತ 19 ಓವರ್‌ಗಳಲ್ಲೇ 108 ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು ಸೋಲನ್ನು ಒಪ್ಪಿಕೊಂಡಿತು.

    ಟಾಸ್ ಗೆದ್ದ ಶ್ರೀಲಂಕಾ ಮೊದಲು ಬ್ಯಾಟಿಂಗ್ ಮಾಡುವ ಅವಕಾಶವನ್ನು ನಮೀಬಿಯಾಕ್ಕೆ ನೀಡಿತು. ನಂತರ ಕ್ರೀಸ್‌ಗಳಿದ ಲಂಕಾಕ್ಕೆ ಆರಂಭಿಕ ಆಘಾತ ಎದುರಾಯಿತು. ಆರಂಭಿಕರಾದ ಪಾತುಮ್ ನಿಸ್ಸಾಂಕ ಹಾಗೂ ಕುಸಲ್ ಮೆಂಡಿಸ್ (Kusal Mendis)  ಅಲ್ಪಮೊತ್ತಕ್ಕೆ ನಿರ್ಗಮಿಸಿದರು. ನಿಸ್ಸಾಂಕ 10 ಎಸೆತಗಳಲ್ಲಿ 9 ರನ್‌ಗಳಿಸಿದರೆ ಮೆಂಡಿಸ್ 6 ಎಸೆತಕ್ಕೆ 6ರನ್ ಗಳಿಸಿ ಪೆವಿಲಿಯನ್ ಸೇರಿದರು. ನಂತರ ಬ್ಯಾಟ್ ಬೀಸಿದ ಧನಂಜಯ ಡಿ ಸಿಲ್ವಾ 11 ಎಸೆತಗಳಲ್ಲಿ 1 ಬೌಂಡರಿಯೊಂದಿಗೆ 12 ರನ್ ಗಳಿಸಿ ನಿರ್ಗಮಿಸಿದರು.

    ಈ ವೇಳೆ ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಭಾನುಕಾ ರಾಜಪಕ್ಸೆ (Bhanuka Rajapaksa)ಹಾಗೂ ದಸುನ್ ಶನಕ ಉತ್ತಮ ಸಾಂಘಿಕ ಪ್ರದರ್ಶನದಿಂದ 49 ರನ್ ಕಲೆಹಾಕಿದರು. ಇಬ್ಬರ ಜೊತೆಯಾಟದಲ್ಲಿ 4 ಬೌಂಡರಿ 1 ಸಿಕ್ಸರ್ ಸೇರಿ 44 ಎಸೆತಗಳಲ್ಲಿ 49 ರನ್ ಗಳಿಸಿದರು. ಇದರಿಂದ ತಂಡ ಗೆಲುವಿನ ಕನಸು ಕಾಣುತ್ತಿರುವಾಗಲೇ ರಾಜಪಕ್ಸೆ ಆಟಕ್ಕೆ ನಮೀಬಿಯಾ ಬೌಲರ್ ಬ್ರೇಕ್ ಹಾಕಿದರು. ರಾಜಪಕ್ಸೆ 20 ರನ್ (21 ಎಸೆತ, 2 ಬೌಂಡರಿ), ದಸುಮ್ ಶನಕ 29 ರನ್ (23 ಎಸೆತ, 2 ಬೌಂಡರಿ, 1 ಸಿಕ್ಸರ್) ಬಾರಿಸಿ ಔಟಾದರು. ನಂತರದ ಆಟಗಾರರು ಸ್ಥಿರವಾಗಿ ನಿಲ್ಲದ ಕಾರಣ ಲಂಕಾ ಉದ್ಘಾಟನಾ ಪಂದ್ಯದಲ್ಲೇ ಸೋಲನ್ನು ಅನುಭವಿಸಬೇಕಾಯಿತು.

    ದನುಷ್ಕ ಗುಣತಿಲಕ, ಪ್ರಮೋದ್ ಮದುಶನ್ ಶೂನ್ಯಕ್ಕೆ ನಿರ್ಗಮಿಸಿದರೆ, ವನಿಂದು ಹಸರಂಗ 4 ರನ್, ಚಾಮಿಕಾ ಕರುಣಾರತ್ನೆ 5 ರನ್, ದುಷ್ಮಂತ ಚಮೀರ 8 ರನ್ ಗಳಿಸಿದರು. ಮಹೇಶ್ ತೀಕ್ಷಣ 11 ರನ್‌ಗಳಿಸಿ ಅಜೇಯರಾಗುಳಿದರು. ಶ್ರೀಲಂಕಾ ತಂಡದ ಪರ ಪ್ರಮೋದ್ ಮದುಶನ್ 2 ವಿಕೆಟ್ ಪಡೆದರೆ, ಮಹೀಶ್ ತೀಕ್ಷಣ, ಚಮೀರಾ, ಕರುಣರತ್ನೆ ಹಾಗೂ ವನಿಂದ ಹಸರಂಗ (Wanindu Hasaranga) ತಲಾ ಒಂದೊಂದು ವಿಕೆಟ್ ಪಡೆದರು. ಒಟ್ಟಿನಲ್ಲಿ ಲಂಕಾ ಬ್ಯಾಟಿಂಗ್ ವೈಫಲ್ಯ ಇಂದಿನ ಸೋಲಿಗೆ ಕಾರಣವಾಯಿತು.

    ಇಲ್ಲಿನ ಸೈಮಂಡ್ಸ್ ಸ್ಟೇಡಿಯಂನಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ನಮೀಬಿಯಾ ತಂಡವು ಉತ್ತಮ ಆರಂಭ ಪಡೆಯಲು ವಿಫಲವಾಗಿತ್ತು. ಆರಂಭಿಕ ಬ್ಯಾಟರ್‌ಗಳಾದ ಮಿಚೆಲ್ ವ್ಯಾನ್ ಲಿಂಗೆನ್ 3 ರನ್, ಡಿವನ್ ಲಾ ಕುಕ್ 9 ರನ್‌ಗಳಿಗೆ ವಿಕೆಟ್ ಒಪ್ಪಿಸಿದರು. 16 ರನ್ ಗಳಿಸುವಷ್ಟರಲ್ಲಿ ಆರಂಭಿಕರಿಬ್ಬರೂ ಪೆವಿಲಿಯನ್ ಸೇರಿದರು. ಬಳಿಕ ಮಧ್ಯಮ ಕ್ರಮಾಂಕದಲ್ಲಿ ಜಾನ್ ನಿಕೊಲ್ ಈಟನ್ 20 ರನ್, ಸ್ಟಿಫನ್ ಬಾರ್ಡ್ 26, ನಾಯಕ ಗೆರ್ಹಾಡ್ ಬಾರ್ಡ್ 20 ರನ್ ಕಲೆಹಾಕಿ ಸಮಯೋಚಿತ ಬ್ಯಾಟಿಂಗ್ ನಡೆಸುವ ಮೂಲಕ ತಂಡಕ್ಕೆ ಆಸರೆಯಾದರು.

    ಪ್ರೈಲಿಂಕ್ – ಸ್ಮಿತ್ ಆಲ್‌ರೌಂಡರ್ ಆಟ: ನಮೀಬಿಯಾ ತಂಡವು 14.2 ಓವರ್‌ಗಳಲ್ಲಿ 6 ವಿಕೆಟ್‌ಗಳನ್ನು ಕಳೆದುಕೊಂಡು 93 ರನ್ ಗಳಿಸಿ ಸಂಕಷ್ಟದ ಸುಳಿಗೆ ಸಿಲುಕಿತ್ತು. ಆದರೆ 7ನೇ ವಿಕೆಟ್‌ಗೆ ಜಾನ್ ಪ್ರೈಲಿಂಕ್ (JanFrylinck) ಹಾಗೂ ಜೆಜೆ ಸ್ಮಿತ್ 34 ಎಸೆತಗಳಲ್ಲಿ 69 ರನ್‌ಗಳ ಜೊತೆಯಾಟವಾಡುವ ಮೂಲಕ ತಂಡದ ಮೊತ್ತವನ್ನು 160ರ ಗಡಿ ದಾಟಿಸಿದರು. ಸ್ಫೋಟಕ ಬ್ಯಾಟಿಂಗ್ ನಡೆಸಿದ ಜಾನ್ ಪ್ರೈಲಿಂಕ್ ಕೇವಲ 28 ಎಸೆತಗಳಲ್ಲಿ 4 ಬೌಂಡರಿ ಸಹಿತ 44 ರನ್ ಬಾರಿಸಿ ರನೌಟ್ ಆದರು. ಇನ್ನು ಮತ್ತೊಂದು ತುದಿಯಲ್ಲಿ ಜೆಜೆ ಸ್ಮಿತ್ 16 ಎಸೆತಗಳಲ್ಲಿ 2 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 31 ರನ್ ಪೇರಿಸಿ ತಂಡಕ್ಕೆ ಆಸರೆಯಾದರು.

    ಇನ್ನೂ ಬೌಲಿಂಗ್‌ನಲ್ಲೂ ಅಬ್ಬರಿಸಿದ ಪ್ರೈಲಿಂಕ್ 4 ಓವರ್‌ಗಳಲ್ಲಿ 26 ರನ್ ನೀಡಿ 2 ವಿಕೆಟ್ ಪಡೆದರೆ, ಜೆಜೆ ಸ್ಮಿತ್ 3 ಓವರ್‌ಗಳಲ್ಲಿ 16 ರನ್ ನೀಡಿ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

    ನಮೀಬಿಯಾ ತಂಡದ ಪರ ಡೇವಿಡ್ ವೈಸ್, ಬರ್ನಾರ್ಡ್ ಸ್ಕೋಲ್ಟ್ಜ್‌, ಬೆನ್ ಶಿಕೊಂಗೊ, ಜಾನ್ ಫ್ರಿಲಿಂಕ್, ತಲಾ ಎರಡು ವಿಕೆಟ್ ಪಡೆದರೆ, ಜೆಜೆ ಸ್ಮಿತ್ 1 ವಿಕೆಟ್ ಪಡೆದರು.

    Live Tv
    [brid partner=56869869 player=32851 video=960834 autoplay=true]

  • ಭಾರತದ ಖೇಲ್ ಖತಂ: ಏಷ್ಯಾ ಕಪ್‌ನಿಂದ ಬಹುತೇಕ ಔಟ್‌

    ಭಾರತದ ಖೇಲ್ ಖತಂ: ಏಷ್ಯಾ ಕಪ್‌ನಿಂದ ಬಹುತೇಕ ಔಟ್‌

    ದುಬೈ: ಶ್ರೀಲಂಕಾ ರೋಚಕ 6 ವಿಕೆಟ್ ಗಳ ಜಯ ಸಾಧಿಸಿದ್ದು, ಏಷ್ಯಾ ಕಪ್ ನಿಂದ ಭಾರತ ಬಹುತೇಕ ಹೊರಬಿದ್ದಿದೆ‌. ಬಾಕಿ ಇರುವ ಇತರ ತಂಡಗಳ ಫಲಿತಾಂಶ ತನ್ನ ಪರವಾಗಿ ಬಂದರೆ ಮಾತ್ರ ಭಾರತ ಫೈನಲ್‌ಗೆ ಏರುವ ಸಾಧ್ಯತೆಯಿದೆ.

    ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿ, 174 ರನ್‌ಗಳ ಗುರಿ ನೀಡಿತು. ಸಾಧಾರಣ ಮೊತ್ತದ ರನ್‌ ಗುರಿ ಬೆನ್ನತ್ತಿದ ಶ್ರೀಲಂಕಾ 19.5 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ174 ರನ್‌ಗಳಿಸಿ ರೋಚಕ ಜಯ ಸಾಧಿಸಿದೆ

    ನಿಧಾನಗತಿಯಲ್ಲಿ ಬ್ಯಾಟಿಂಗ್‌ ಆರಂಭಿಸಿದ ಲಂಕಾ ಮೊದಲ 4 ಓವರ್‌ಗಳಿಗೆ 22 ರನ್‌ಗಳನ್ನಷ್ಟೇ ಗಳಿಸಿತ್ತು. ನಂತರದಲ್ಲಿ ಬಿರುಸಿನ ಬ್ಯಾಟಿಂಗ್‌ನಿಂದ ಪವರ್‌ ಪ್ಲೇ ಮುಗಿಯುವ ವೇಳೆಗೆ 50 ರನ್‌ಗಳ ಗಡಿದಾಟಿತು. ಆರಂಭಿಕರಾಗಿ ಕಣಕ್ಕಿಳಿದ ಪಾತುಂ ನಿಸ್ಸಾಂಕ ಹಾಗೂ ಕುಸಲ್ ಮೆಂಡಿಸ್ 67 ಎಸೆತೆಗಳಲ್ಲಿ 97 ರನ್‌ ಸಿಡಿಸಿ ಉತ್ತಮ ಇನ್ನಿಂಗ್ಸ್‌ ಕಟ್ಟಿದರು. ಪಾತುಂ ನಿಸ್ಸಾಂಕ ಹಾಗೂ ಕುಸಲ್ ಮೆಂಡಿಸ್ ಭಾರತದ ಬೌಲರ್‌ಗಳ ಬೆವರಿಳಿಸಿದರು. ಪಾತುಂ ನಿಸ್ಸಾಂಕ 37 ಎಸೆತಗಳಲ್ಲಿ 2 ಸಿಕ್ಸರ್‌ 4 ಬೌಂಡರಿಯೊಂದಿಗೆ 52 ರನ್‌ ಸಿಡಿಸಿದರೆ, ಕುಸಾಲ್ ಮೆಂಡಿಸ್ 37 ಎಸೆತಗಳಲ್ಲಿ 57 ರನ್‌ (4 ಬೌಂಡರಿ, 3 ಸಿಕ್ಸರ್‌) ಸಿಡಿಸಿ ಪೆವಿಲಿಯನ್‌ ಸೇರಿದರು.

    ಇದಾದ ಬಳಿಕ ಲಂಕಾ ಸತತ ನಾಲ್ಕು ವಿಕೆಟ್‌ ಕಳೆದುಕೊಂಡು ಆಘಾತಕ್ಕೆ ಸಿಲುಕಿತು. ಮೆಂಡಿಸ್‌ ನಂತರ ಕಣಕ್ಕಿಳಿದ ಚರಿತ್ ಅಸಲಂಕಾ ಡಕೌಟ್‌ ಆದರು. ಈ ಬೆನ್ನಲ್ಲೇ 7 ಎಸೆತಗಳನ್ನು ಎದುರಿಸಿದ ದನುಷ್ಕ ಗುಣತಿಲಕ 1 ರನ್‌ಗಳಿಸಿ ಔಟಾದರು.

    ನಂತರ ಬಂದ ಭಾನುಕಾ ರಾಜಪಕ್ಸೆ ಹಾಗೂ ದಾಸುನ್ ಶನಕ ಉತ್ತಮ ಜೊತೆಯಾಟವಾಡಿದರು. 18 ಓವರ್‌ಗಳಲ್ಲಿ 153 ರನ್‌ಗಳಿಸಿದ ಲಂಕಾ ತಂಡಕ್ಕೆ ಕೊನೆಯ 2 ಓವರ್‌ಗಳಲ್ಲಿ 21 ರನ್‌ಗಳ ಅವಶ್ಯಕತೆಯಿತ್ತು. 19ನೇ ಓವರ್‌ನಲ್ಲಿ ಬೌಲಿಂಗ್‌ ಮಾಡಿದ ಭುವನೇಶ್ವರ್‌ ಕುಮಾರ್‌ ಮೊದಲ 2 ಎಸೆತಗಳಲ್ಲಿ ಒಂದೊಂದೇ ರನ್‌ ನೀಡಿ, ಸತತ 2 ವೈಡ್‌ ಎಸೆದು, 3ನೇ ಎಸೆತದಲ್ಲಿ 4 ರನ್‌ ಚಚ್ಚಿಸಿಕೊಂಡರು. ತಮ್ಮ ಕೊನೆಯ ಓವರ್‌ನಲ್ಲಿ 14 ರನ್‌ ನೀಡಿದ್ದು, ಟೀಂ ಇಂಡಿಯಾ ಸೋಲಿಗೆ ಪ್ರಮುಖ ಕಾರಣವಾಯಿತು.

    ಕೊನೆಯ ಓವರ್‌ನಲ್ಲಿ ಅರ್ಶ್‌ದೀಪ್‌ ಸಿಂಗ್‌ಗೆ 6 ಎಸೆತಗಳಲ್ಲಿ 7 ರನ್‌ಗಳನ್ನು ಕಂಟ್ರೋಲ್‌ ಮಾಡುವ ಸವಾಲು ಎದುರಾಗಿತ್ತು. ಮೊದಲ 2 ಎಸೆತಗಳಲ್ಲಿ ಒಂದೊಂದು ರನ್‌ ನೀಡಿದ ಅರ್ಶ್‌ದೀಪ್‌, 3ನೇ ಎಸೆತದಲ್ಲಿ 2 ರನ್‌ ನೀಡಿ ಉತ್ತಮ ಹಿಡಿದ ಸಾಧಿಸಿದ್ದರು.  ಕೊನೆಯ 2 ಎಸೆತಗಳಲ್ಲಿ 2 ರನ್‌ ಬೇಕಿದ್ದ ಲಂಕಾಗೆ 5ನೇ ಎಸೆತವನ್ನು ಬೀಟ್ ಮಾಡಿದರೂ, ರನೌಟ್‌ ಮಾಡುವ ಪ್ರಯತ್ನದಲ್ಲಿ ರಿಷಣ್‌ ಪಂತ್‌ 2 ರನ್‌ ಉಚಿತವಾಗಿಯೇ ನೀಡಿದ್ದರಿಂದ ಜಯ ಭಾರತದ ಕೈಚೆಲ್ಲಿತು. ಉತ್ತಮ ಜೊತೆಯಾಟವಾಡಿದ ಭಾನುಕಾ ರಾಜಪಕ್ಸೆ 17 ಎಸೆತಗಳಲ್ಲಿ 25 ರನ್‌ ಗಳಿಸಿದರೆ ಹಾಗೂ ದಾಸುನ್ ಶನಕ  18 ಎಸೆತಗಳಲ್ಲಿ 33 ರನ್‌ ಪೇರಿಸಿ ಲಂಕಾ ತಂಡಕ್ಕೆ ಜಯ ತಂದುಕೊಟ್ಟರು.

    ಚಾಹಲ್‌ ಕಮಾಲ್‌: ಮೊದಲ 10 ಓವರ್‌ಗಳ ವರೆಗೂ ಟೀಂ ಇಂಡಿಯಾ ಯಾವುದೇ ವಿಕೆಟ್‌ ಪಡೆದಿರಲಿಲ್ಲ. ನಂತರ ತಮ್ಮ ಬೌಲಿಂಗ್‌ ಕಮಾಲ್‌ ಮಾಡಿದ ಯಜುವೇಂದ್ರ ಚಾಹಲ್‌ 4 ಓವರ್‌ಗಳಲ್ಲಿ 34 ರನ್‌ ನೀಡಿ 3 ವಿಕೆಟ್‌ ಕಬಳಿಸಿದರು. ಈ ಬೆನ್ನಲ್ಲೇ ರವಿಚಂದ್ರನ್‌ ಅಶ್ವಿನ್‌ 1 ವಿಕೆಟ್‌ ಪಡೆದರು. ಇದರಿಂದ ಟೀಂ ಇಂಡಿಯಾ ಮತ್ತೆ ಗೆಲುವಿನ ಭರವಸೆ ಕಂಡುಕೊಂಡಿತ್ತು.

    ಟಾಸ್‌ ಸೋತು ಮೊದಲು ಕ್ರೀಸ್‌ಗಿಳಿದ ಟೀಂ ಇಂಡಿಯಾಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ನಿಧಾನಗತಿಯಲ್ಲಿ ಬ್ಯಾಟಿಂಗ್‌ ಆರಂಭಿಸಿದ ಟೀಂ ಇಂಡಿಯಾ ಪವರ್‌ ಪ್ಲೇ ಮುಗಿಯುವಷ್ಟರಲ್ಲೇ 2 ವಿಕೆಟ್‌ಗಳನ್ನು ಕಳೆದುಕೊಂಡಿತು. 3ನೇ ಓವರ್‌ನಲ್ಲಿ 11 ರನ್‌ಗಳಾಗಿದ್ದಾಗಲೇ 6 ರನ್ ಗಳಿಸಿ ಆಡುತ್ತಿದ್ದ ಕೆ.ಎಲ್.ರಾಹುಲ್ ಎಲ್‌ಬಿ ಬಲೆಗೆ ಬಿದ್ದರು. ನಂತರ ಬಂದ ಕಿಂಗ್‌ ಕೊಹ್ಲಿ ಯಾವುದೇ ರನ್‌ಗಳಿಸದೇ ಶೂನ್ಯಕ್ಕೆ ಔಟಾದರು.

    ಈ ವೇಳೆ ಭಾರತ 13 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ನಾಯಕ ರೋಹಿತ್ ಶರ್ಮಾ 41 ಎಸೆತಗಳಲ್ಲಿ 70 ರನ್ ಕಲೆಹಾಕಿ ಉತ್ತಮ ಇನ್ನಿಗ್ಸ್‌ ಕಟ್ಟಿದ್ದರು. ಇದಕ್ಕೆ ಸೂರ್ಯಕುಮಾರ್ ಯಾದವ್ ಜೊತೆಯಾದರು. ಇಬ್ಬರ ಸಾಂಘಿಕ ಬ್ಯಾಟಿಂಗ್‌ ಪ್ರದರ್ಶನದಿಂದ 97 ರನ್‌ಗಳು ಟೀಂ ಇಂಡಿಯಾ ಬತ್ತಳಿಕೆ ಸೇರಿತು. ಈ ವೇಳೆ ರೋಹಿತ್‌ ಶರ್ಮಾ 41 ಎಸೆತಗಳಲ್ಲಿ 72 ರನ್‌ (5 ಬೌಂಡರಿ, 4 ಸಿಕ್ಸರ್‌) ಸಿಡಿಸಿದರೆ, ಸೂರ್ಯಕುಮಾರ್‌ ಯಾದವ್‌ 29 ಎಸೆತಗಳಲ್ಲಿ 34 ರನ್‌ ಗಳಿಸಿ ಪೆವಿಲಿಯನ್‌ ಸೇರಿದರು. ಮಧ್ಯಮ ಕ್ರಮಾಂಕದ ನಂತರ ಕ್ರೀಸ್‌ಗಿಳಿದ ಯಾರೊಬ್ಬರು ಸ್ಥಿರವಾಗಿ ನಿಲ್ಲಲಿಲ್ಲ. ಹಾರ್ದಿಕ್ ಪಾಂಡ್ಯ 17 ರನ್, ರಿಷಭ್ ಪಂತ್ 17 ರನ್‌, ದೀಪಕ್‌ ಹೂಡಾ 3 ರನ್‌ ಗಳಿಸಿದರು. ಕೊನೆಯಲ್ಲಿ ಬಂದ ಅಶ್ವಿನ್‌ 7 ಎಸೆತಗಳಲ್ಲಿ 15 ರನ್‌ ಗಳಿಸಿದರು. ಇದು ಟೀಂ ಇಂಡಿಯಾ 170 ರನ್‌ಗಳ ಗಡಿ ದಾಟಲು ನೆರವಾಯಿತು.

    ಬೌಲಿಂಗ್‌ನಲ್ಲಿ ಶ್ರೀಲಂಕಾ ತಂಡದ ಪರ ದಿಲ್ಶನ್ ಮಧುಶಂಕ 4 ಓವರ್‌ಗಳಲ್ಲಿ 24 ರನ್ ನೀಡಿ 3 ವಿಕೆಟ್ ಗಳಿಸಿದರು. ಚಮಿಕಾ ಕರುಣಾರತ್ನೆ 4 ಓವರ್‌ಗಳಲ್ಲಿ 27 ರನ್ ನೀಡಿ 2 ವಿಕೆಟ್ ಪಡೆದರು. ನಾಯಕ ದಸುನ್ ಶನಕ 2 ಓವರ್‌ಗಳಲ್ಲಿ 26 ನೀಡಿ 2 ವಿಕೆಟ್ ಪಡೆದರು. ಮಹೀಶ್ ತೀಕ್ಷಣ ಒಂದು ವಿಕೆಟ್ ಪಡೆದುಕೊಂಡರು.

    Live Tv
    [brid partner=56869869 player=32851 video=960834 autoplay=true]