Tag: Bharat Gaurav

  • ಕಾಶಿ ದರ್ಶನ ಮೊದಲ ಟ್ರಿಪ್‌ನ ಎಲ್ಲಾ ಸೀಟ್‌ ಭರ್ತಿ – ನ. 23ಕ್ಕೆ ಎರಡನೇ ಪ್ರವಾಸ

    ಕಾಶಿ ದರ್ಶನ ಮೊದಲ ಟ್ರಿಪ್‌ನ ಎಲ್ಲಾ ಸೀಟ್‌ ಭರ್ತಿ – ನ. 23ಕ್ಕೆ ಎರಡನೇ ಪ್ರವಾಸ

    – ರೈಲು ಪ್ರಯಾಣಕ್ಕೆ ಅಂತಿಮ ಹಂತದ ಸಿದ್ದತೆಗಳ ಪರಿಶೀಲನೆ
    – ಕೇವಲ 3 ದಿನದಲ್ಲಿಯೇ ಸಂಪೂರ್ಣ ಬುಕ್ಕಿಂಗ್‌

    ಬೆಂಗಳೂರು: ಕರ್ನಾಟಕ ಭಾರತ್‌ ಗೌರವ್‌(Bharat Gaurav) ಕಾಶಿ ದರ್ಶನ ರೈಲ್ವೇ ಪ್ಯಾಕೇಜ್‌ನ ಎರಡನೇ ಟ್ರಿಪ್‌ಗೆ ನವೆಂಬರ್‌ 23ಕ್ಕೆ ಸಿದ್ದತೆ ನಡೆಸಿಕೊಳ್ಳುವಂತೆ ಅಧಿಕಾರಿಗಳಿಗೆ ಮಾನ್ಯ ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಜೊಲ್ಲೆ(Shashikala Jolle) ಸೂಚನೆ ನೀಡಿದರು.

    ಇಂದು ಬೆಂಗಳೂರು ನಗರದ ಸರ್‌ ಎಂ ವಿಶ್ವೇಶ್ವರಯ್ಯ ರೈಲ್ವೇ ನಿಲ್ದಾಣದಲ್ಲಿ ಕರ್ನಾಟಕ(Karnataka) ಧಾರ್ಮಿಕ ದತ್ತಿ ಇಲಾಖೆಯ ವತಿಯಿಂದ ಕಾಶಿ(Kashi) ದರ್ಶನಕ್ಕೆ ಸಿದ್ದಪಡಿಸಲಾಗುತ್ತಿರುವ ಕರ್ನಾಟಕ ಭಾರತ್‌ ಗೌರವ್‌ ಕಾಶಿ ದರ್ಶನ ಯೋಜನೆಯ ಅಡಿಯಲ್ಲಿ ಸಿದ್ದವಾಗುತ್ತಿರುವ ರೈಲಿನ ಸಿದ್ದತೆಗಳನ್ನು ಪರಿಶೀಲಿಸಿ, ರೈಲ್ವೇ ಅಧಿಕಾರಿಗಳು, ಐಆರ್‌ಸಿಟಿಸಿ ಮತ್ತು ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.

    ರಾಜ್ಯದ ಜನರನ್ನ ಕಾಶಿ ದರ್ಶನಕ್ಕೆ ಕಳುಹಿಸಬೇಕು ಎನ್ನುವುದು ನನ್ನ ಆಶಯವಾಗಿತ್ತು. ಇದಕ್ಕೆ ಬೆನ್ನುಲಾಗಿ ನಿಂತಿದ್ದು ಮುಖ್ಯಮಂತ್ರಿಗಳು. ಮೊದಲ ಟ್ರಿಪ್‌ ನವೆಂಬರ್‌ 11 ರಂದು ಹೊರಡಲಿದೆ. 8 ದಿನಗಳ ಈ ಯಾತ್ರೆಯಲ್ಲಿ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗರಾಜ್‌ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿ ಬೆಂಗಳೂರಿಗೆ ಹಿಂದಿರುಗಲಿದೆ ಎಂದು ಹೇಳಿದರು.
    ಇದನ್ನೂ ಓದಿ: ʻವರಾಹ ರೂಪಂ’ ಮ್ಯೂಸಿಕ್ ಕದ್ದಿಲ್ಲ: ಧರ್ಮಸ್ಥಳದಲ್ಲಿ ರಿಷಬ್ ಶೆಟ್ಟಿ ಪ್ರತಿಕ್ರಿಯೆ

    ಮೊದಲ ಟ್ರಿಪ್‌ನ ಟಿಕೆಟ್‌ಗಳು ಕೇವಲ 3 ದಿನದಲ್ಲಿಯೇ ಸಂಪೂರ್ಣ ಬುಕ್ಕಿಂಗ್‌ ಆಗಿದೆ. ಎರಡನೇ ಟ್ರಿಪ್‌ಗೂ ಈಗಾಗಲೇ 100 ಕ್ಕೂ ಹೆಚ್ಚು ಬುಕ್ಕಿಂಗ್‌ ಗೆ ಆಸಕ್ತಿ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನವೆಂಬರ್‌ 23 ರಂದು ಎರಡನೇ ಟ್ರಿಪ್‌ ಗೆ ಸಿದ್ದತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ದಕ್ಷಿಣ ಭಾರತದಲ್ಲೇ ಪ್ರಪ್ರಥಮ ಬಾರಿಗೆ ಭಾರತ್‌ ಗೌರ್‌ ರೈಲನ್ನ ಪ್ರಾರಂಭಿಸುತ್ತಿರುವ ಹೆಗ್ಗಳಿಕೆ ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ಪಾತ್ರವಾಗಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ 3 ಟಯರ್‌ ಎಸಿಯ ವ್ಯವಸ್ಥೆಯನ್ನು ಮಾಡಲಾಗಿದ್ದು, 14 ಬೋಗಿಗಳ ಮೇಲೂ ರಾಜ್ಯದ 28 ದೇವಸ್ಥಾನಗಳ ಛಾಯಾಚಿತ್ರಗಳ ಬ್ರಾಂಡಿಂಗ್‌ ಮಾಡಲಾಗಿದೆ. ನಮ್ಮ ರಾಜ್ಯದ ದೇವಸ್ಥಾನಗಳನ್ನು ಭಾರತದ ಉದ್ದಗಲಕ್ಕೂ ಸಂಚರಿಸಲಿರುವ ಟ್ರೈನ್‌ ಮೂಲಕ ಪ್ರಚಾರ ಮಾಡುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.

    ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್‌ 11 ರಂದು ಬೆಂಗಳೂರಿಗೆ ಆಗಮಿಸುತ್ತಿದ್ದು, ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಆ ಕಾರ್ಯಕ್ರಮಗಳ ಜೊತೆಯಲ್ಲಿಯೇ ನಮ್ಮ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಯಾದ ಕರ್ನಾಟಕ ಭಾರತ್‌ ಗೌರವ್‌ ಕಾಶಿ ದರ್ಶನ ರೈಲಿಗೂ ಚಾಲನೆ ನೀಡಲಿ ಎನ್ನುವುದು ನಮ್ಮ ಆಶಯವಾಗಿದೆ. ಈ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳು ಪ್ರಧಾನಮಂತ್ರಿ ಕಾರ್ಯಾಲಯಕ್ಕೆ ಮಾಹಿತಿ ನೀಡಿದ್ದು ಸದ್ಯದಲ್ಲೇ ಪ್ರಧಾನಿ ಕಾರ್ಯಾಲಯದಿಂದ ಒಪ್ಪಿಗೆ ಬರುವ ಸಾಧ್ಯತೆಯಿದೆ ಎಂದು ಹೇಳಿದರು.

    ಐಆರ್‌ಸಿಟಿಸಿ ಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದ್ದು ಊಟ, ಉಪಹಾರ, ಯಾತ್ರಾ ಸ್ಥಳದಲ್ಲಿ ತಂಗುವ ವ್ಯವಸ್ಥೆ ಹಾಗೂ ಯಾತ್ರಾ ಸ್ಥಳಗಳಿಗೆ ಪ್ರಯಾಣಿಸಲು ಸ್ಥಳೀಯ ಸಾರಿಗೆ ವ್ಯವಸ್ಥೆ ಹಾಗೂ ತುರ್ತು ವೈದ್ಯಕೀಯ ಸೇವೆ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದರು.

    ಸಭೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಾದ ರೋಹಿಣಿ ಸಿಂಧೂರಿ, ಐಆರ್‌ಸಿಟಿಸಿ ಹಾಗೂ ರೈಲ್ವೇ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

    ive Tv
    [brid partner=56869869 player=32851 video=960834 autoplay=true]

  • ಚೆನ್ನೈನಿಂದ ಚಿಂಗವನಂಗೆ ರೈಲು ಸೇವೆ – ಶಬರಿಮಲೆ ಯಾತ್ರಾರ್ಥಿಗಳಿಗೆ ಬಂಪರ್ ಆಫರ್

    ಚೆನ್ನೈನಿಂದ ಚಿಂಗವನಂಗೆ ರೈಲು ಸೇವೆ – ಶಬರಿಮಲೆ ಯಾತ್ರಾರ್ಥಿಗಳಿಗೆ ಬಂಪರ್ ಆಫರ್

    ತಿರುವನಂತಪುರಂ: ಶಬರಿಮಲೆ ಯಾತ್ರಾರ್ಥಿಗಳಿಗೆ ಬಂಪರ್ ಆಫರ್ ಸಿಕ್ಕಿದ್ದು, ಚೆನ್ನೈನಿಂದ ಚಿಂಗವನಂಗೆ ರೈಲು ಸೇವೆ ನೀಡಲಾಗುವುದು ಎಂದು ಸೌತ್ ಸ್ಟಾರ್ ರೈಲಿನ ಯೋಜನಾ ಅಧಿಕಾರಿ ಎಸ್.ರವಿಶಂಕರ್ ಮಾಹಿತಿ ನೀಡಿದ್ದಾರೆ.

    ಸೌತ್ ಸ್ಟಾರ್ ರೈಲಿನ ಯೋಜನಾ ಅಧಿಕಾರಿ ಎಸ್.ರವಿಶಂಕರ್ ಈ ಕುರಿತು ಮಾತನಾಡಿದ್ದು, ತೀರ್ಥಯಾತ್ರಾ ಕಾಲದಲ್ಲಿ ಶಬರಿಮಲೆ ಯಾತ್ರಾರ್ಥಿಗಳ ಪ್ರಯಾಣಕ್ಕೆ ಅನುಕೂಲವಾಗುವಂತೆ ಭಾರತೀಯ ರೈಲ್ವೆಯ ಭಾರತ್ ಗೌರವ್ ರೈಲುಗಳು ಚೆನ್ನೈನಿಂದ ಕೇರಳದ ಕೊಟ್ಟಾಯಂನ ಚಿಂಗವನಂ ರೈಲು ನಿಲ್ದಾಣಕ್ಕೆ ಸೇವೆಗಳನ್ನು ನೀಡಲಾಗುವುದು ಎಂದು ವಿವರಿಸಿದ್ದಾರೆ.

    ಸಾಂದರ್ಭಿಕ ಚಿತ್ರ

    ಭಾರತೀಯ ದಕ್ಷಿಣ ರೈಲ್ವೇ ವಲಯದಿಂದ ಏರ್ಪಡಿಸಲಾಗುವ ರೈಲು ಸೇವೆಗಳು ಆಗಸ್ಟ್ 18, ಸೆಪ್ಟೆಂಬರ್ 17, ಅಕ್ಟೋಬರ್ 20, ನವೆಂಬರ್ 17, ಡಿಸೆಂಬರ್ 1 ಮತ್ತು 15 ರಂದು ಚಾಲ್ತಿಯಲ್ಲಿ ಇರುತ್ತೆ. ಭಾರತ್ ಗೌರವ್ ರೈಲಿನ ದರವು ತತ್ಕಾಲ್ ಟಿಕೆಟ್‍ಗಿಂತ ಶೇಕಡಾ 20 ರಷ್ಟು ಹೆಚ್ಚಾಗಿರುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯವರು ಕಡ್ಲೆಪುರಿ ತಿನ್ನುವುದನ್ನು ನಿಲ್ಲಿಸುತ್ತಾರೆಯೇ?: GST ವಿರುದ್ಧ ಬ್ಯಾನರ್ಜಿ ವಾಗ್ದಾಳಿ

    ಭಾರತ್ ಗೌರವ್ ರೈಲು
    ನವೆಂಬರ್ 2021 ರಲ್ಲಿ, ಭಾರತೀಯ ರೈಲ್ವೆಯು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ಐತಿಹಾಸಿಕ ಸ್ಥಳಗಳನ್ನು ಪ್ರದರ್ಶಿಸಲು ಥೀಮ್ ಆಧಾರಿತ ಭಾರತ್ ಗೌರವ್ ರೈಲುಗಳನ್ನು ಓಡಿಸಲು ಖಾಸಗಿ ಕಂಪನಿಗೆ ಅವಕಾಶ ಮಾಡಿಕೊಟ್ಟಿತು. ಈ ಯೋಜನೆಯು ಐಆರ್‌ಸಿಟಿಸಿಯ ಥೀಮ್-ಆಧಾರಿತ ಪ್ರವಾಸಿ ರೈಲುಗಳಂತೆಯೇ ಇದೆ. ರಾಮಾಯಣ ಎಕ್ಸ್‌ಪ್ರೆಸ್‌ನಂತೆ, ಇದು ಭಾರತ ಮತ್ತು ವಿದೇಶಿ ಪ್ರವಾಸಿಗರನ್ನು ಆಕರ್ಷಿಸುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಭಾರತದಲ್ಲಿ ಮೊದಲ ಖಾಸಗಿ ರೈಲು ಸಂಚಾರ ಆರಂಭ- ಖಾಸಗೀಕರಣಕ್ಕೆ ರೈಲ್ವೆ ನೌಕರರ ವಿರೋಧ

    ಭಾರತದಲ್ಲಿ ಮೊದಲ ಖಾಸಗಿ ರೈಲು ಸಂಚಾರ ಆರಂಭ- ಖಾಸಗೀಕರಣಕ್ಕೆ ರೈಲ್ವೆ ನೌಕರರ ವಿರೋಧ

    ಚೆನ್ನೈ: ಭಾರತೀಯ ರೈಲ್ವೆ ಸೇವೆ ಆರಂಭವಾದ ಬಳಿಕ ಮೊದಲ ಬಾರಿಗೆ ಖಾಸಗಿ ಸಂಸ್ಥೆಗಳು ನಿರ್ವಹಿಸುವ ಪ್ರಯಾಣಿಕರ ರೈಲು ಸೇವೆ ಆರಂಭವಾಗಿದೆ. ದೇಶದ ಮೊದಲ ಖಾಸಗಿ ರೈಲು ಇದಾಗಿದೆ.

    ಕೇಂದ್ರ ಸರ್ಕಾರದ `ಭಾರತ್ ಗೌರವ್’ ಯೋಜನೆಯಡಿ ಚಾಲನೆಗೊಂಡ ಈ ರೈಲು ಕೊಯಮತ್ತೂರು ಮತ್ತು ಶಿರಡಿ ನಡುವೆ ಸಂಚರಿಸುತ್ತದೆ. ಜೂನ್ 14ರ ಸಂಜೆ ಕೊಯಮತ್ತೂರಿನಲ್ಲಿ ಖಾಸಗಿ ರೈಲುಸೇವೆಗೆ ಚಾಲನೆ ದೊರೆತಿದ್ದು, ರೈಲು ತಮಿಳುನಾಡಿನ ಕೊಯಮತ್ತೂರು ಉತ್ತರ ರೈಲು ನಿಲ್ದಾಣದಿಂದ ಶಿರಡಿ ನಡುವೆ ಸಂಚರಿಸುತ್ತದೆ. ಇದನ್ನೂ ಓದಿ: 4 ದಿನ, 80 ಅಡಿ ಕೊಳವೆ ಬಾವಿಯಲ್ಲೇ ಸಿಲುಕಿದ್ದ ಹುಡುಗ – 104 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ

    ಶಿರಡಿಗೆ ತಲುಪುವ ಮೊದಲು, ರೈಲು ತಿರುಪುರ್, ಈರೋಡ್, ಸೇಲಂ ಜೋಲಾರ್‌ಪೇಟ್, ಬೆಂಗಳೂರು ಯಲಹಂಕ, ಧರ್ಮಾವರ, ಮಂತ್ರಾಲಯ ರಸ್ತೆ (ನಿಲುಗಡೆ), ಮತ್ತು ವಾಡಿಯಲ್ಲಿ ನಿಲ್ಲುತ್ತದೆ.

    ಖಾಸಗಿ ರೈಲಿನ ದರಗಳು ಭಾರತೀಯ ರೈಲ್ವೇಗಳು ವಿಧಿಸುವ ನಿಯಮಿತ ರೈಲು ಟಿಕೆಟ್ ದರಗಳಿಗೆ ಸಮನಾಗಿರುತ್ತದೆ ಮತ್ತು ಶಿರಡಿ ಸಾಯಿ ಬಾಬಾ ದೇವಸ್ಥಾನದಲ್ಲಿ ವಿಶೇಷ ವಿಐಪಿ ದರ್ಶನವನ್ನು ಒದಗಿಸುತ್ತದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲ್ಲ ಎಂದ ಶರದ್ ಪವಾರ್ 

    ದಕ್ಷಿಣ ರೈಲ್ವೇ ಮಜ್ದೂರ್ ಯೂನಿಯನ್‌ಗೆ ಸೇರಿದ ರೈಲ್ವೇ ನೌಕರರ ಗುಂಪು ಖಾಸಗಿ ರೈಲುಸೇವೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಖಾಸಗಿ ರೈಲು ಸೇವೆ ಭಾರತೀಯ ರೈಲ್ವೆಯನ್ನು ಖಾಸಗೀಕರಣಗೊಳಿಸುವ ಯೋಜನೆಯಾಗಿದೆ ಎಂದು ಅವರು ಆರೋಪಿಸಿದ್ದಾರೆ.

    Live Tv