Tag: bharat ratna

  • ಶ್ರೀಗಳಿಗೆ ಭಾರತರತ್ನ ಕೊಡದಿರುವುದು ಎಲ್ಲರಿಗಿಂತ ನನಗೆ ಹೆಚ್ಚು ನೋವು ತಂದಿದೆ – ಬಿಎಸ್‍ವೈ

    ಶ್ರೀಗಳಿಗೆ ಭಾರತರತ್ನ ಕೊಡದಿರುವುದು ಎಲ್ಲರಿಗಿಂತ ನನಗೆ ಹೆಚ್ಚು ನೋವು ತಂದಿದೆ – ಬಿಎಸ್‍ವೈ

    ಚಿತ್ರದುರ್ಗ: ಲಿಂಗೈಕ್ಯರಾದ ತುಮಕೂರು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡದಿರುವುದು ಎಲ್ಲರಿಗಿಂತ ಹೆಚ್ಚಾಗಿ ನನಗೆ ನೋವು ತಂದಿದೆ. ಆದ್ರೆ ಏನ್ ಮಾಡೋದು ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಪ್ರಶ್ನಿಸಿ ಬೇಸರ ವ್ಯಕ್ತಪಡಿಸಿದ್ದಾರೆ.

    ಜಿಲ್ಲೆಯ ಹಿರಿಯೂರು, ಚಳ್ಳಕೆರೆ ತಾಲೂಕಿನ ವಿವಿಧೆಡೆ ಬರ ವೀಕ್ಷಣೆ ಮಾಡಿದ ಬಳಿಕ ಖಂಡೇನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಕೊಡದಿರುವುದು ನೋವು ತಂದಿದೆ. ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನಕ್ಕಾಗಿ ಶಕ್ತಿಮೀರಿ ಪ್ರಯತ್ನಿಸಿದ್ದೇವೆ. ಈ ವಿಷಯದಲ್ಲಿ ಎಲ್ಲರಿಗಿಂತ ಹೆಚ್ಚು ನನಗೆ ನೋವಾಗಿದೆ, ಏನುಮಾಡುವುದು ಎಂದು ವಿಷಾದ ವ್ಯಕ್ತಪಡಿಸಿದರು. ಇದನ್ನೂ ಓದಿ:  ಭಾರತ ರತ್ನ – ಲತಾಗಿಲ್ಲದ ನಿಯಮಾವಳಿ ಸಿದ್ದಗಂಗಾ ಶ್ರೀಗಳಿಗೆ ಮಾತ್ರ ಯಾಕೆ?

    ಚಿತ್ರದುರ್ಗ ಜಿಲ್ಲೆಯಲ್ಲಿ ನಾಲ್ಕು ವರ್ಷದಿಂದ ಬರ ತಾಂಡವವಾಡುತ್ತಿದೆ. ಬೆಳೆ ವಿಫಲವಾಗಿ ಜಿಲ್ಲೆಯ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬರ ವೀಕ್ಷಣೆ ವರದಿಯನ್ನು ಸರ್ಕಾರಕ್ಕೆ ನೀಡುತ್ತೇವೆ. ಅಧಿವೇಶನದಲ್ಲಿ ಬರ, ರೈತರ ಸ್ಥಿತಿಗತಿ ಬಗ್ಗೆ ಮಾತನಾಡುತ್ತೇವೆ. ಸಾಲ ಮನ್ನಾ ಮಾಡುತ್ತೇವೆ ಎಂದು ಸರ್ಕಾರ ಕಾಲಹರಣ ಮಾಡಿದೆ. ರಾಜ್ಯದಿಂದ ಕೊಟ್ಟಿರುವ ವರದಿಗೆ ಸ್ಪಂದಿಸಿ ಕೇಂದ್ರದಿಂದ ಪರಿಹಾರ ಕೊಡಿಸುತ್ತೇವೆ. ರಾಜ್ಯದ ಬಗ್ಗೆ ಮೋದಿ ಸರ್ಕಾರ ತಾರತಮ್ಯ ಮಾಡುವುದಿಲ್ಲ ಎಂದು ಅವರು ಭರವಸೆ ನೀಡಿದರು.

    ಇದೇ ವೇಳೆ ಕಾಂಗ್ರೆಸ್ ಶಾಸಕ ಆನಂದಸಿಂಗ್ ಹಾಗೂ ಕಂಪ್ಲಿ ಶಾಸಕ ಗಣೇಶ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಸಮ್ಮಿಶ್ರ ಸರ್ಕಾರದ ಸಿಎಂ, ಮಂತ್ರಿಗಳು ಬರ ವೀಕ್ಷಿಸಿಲ್ಲ. ಬರ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಂಡಿಲ್ಲ. ಬೆಂಗಳೂರಿನಲ್ಲಿ ಕುಳಿತು ಪ್ರಧಾನಿ ಮೋದಿ ಕಡೆ ಬೆರಳು ತೋರುತ್ತಾರೆ ಎಂದು ಸರ್ಕಾರದ ವಿರುದ್ಧ ಗುಡುಗಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಇಲ್ಲ – ಪ್ರಣಬ್ ಮುಖರ್ಜಿ ಸೇರಿ ಮೂವರಿಗೆ ಗೌರವ

    ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಇಲ್ಲ – ಪ್ರಣಬ್ ಮುಖರ್ಜಿ ಸೇರಿ ಮೂವರಿಗೆ ಗೌರವ

    ನವದೆಹಲಿ: ವಿಶ್ವರತ್ನ, ನಡೆದಾಡುವ ದೇವರು, ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಸಿಗಬೇಕು ಎನ್ನುವ ಕೋಟ್ಯಂತರ ಕನ್ನಡಿಗರ ದನಿ ಕೊನೆಗೂ ಪ್ರಧಾನಿ ಮೋದಿಗೆ ಕೇಳಿಸಲೇ ಇಲ್ಲ. ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ಪ್ರಶಸ್ತಿ ಪ್ರಕಟವಾಗಿದ್ದು ಈ ಬಾರಿಗೆ ಮೂವರಿಗೆ ನೀಡಲಾಗಿದೆ.

    ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಖ್ಯಾತ ಹಿನ್ನೆಲೆ ಗಾಯಕ ಭೂಪೇನ್ ಹಜಾರಿಕ, ಸಮಾಜ ಸೇವಕ ನಾನಾಜಿ ದೇಶ್‍ಮುಖ್ ಅವರಿಗೆ ಈ ಬಾರಿಯ ಭಾರತ ರತ್ನ ಪ್ರಶಸ್ತಿ ಒಲಿದಿದೆ. ಗಣರಾಜ್ಯೋತ್ಸವದ ಅಂಗವಾಗಿ ದೇಶದ ಮೂವರು ಗಣ್ಯರಿಗೆ ಭಾರತ ರತ್ನ ಪ್ರಶಸ್ತಿ ನೀಡ ಗೌರವಿಸಲಾಗಿದೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ಹೊರಡಿಸಲಾಗಿದೆ.

    ನಾನಾಜಿ ದೇಶ್‍ಮುಖ್ ಮತ್ತು ಭೂಪೇನ್ ಹಜಾರಿಕಾ ಅವರಿಗೆ ಮರಣೋತ್ತರವಾಗಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಣಬ್ ಮುಖರ್ಜಿ ಅವರಿಗೆ ಶುಭಾಶಯ ಕೋರಿ ಟ್ವೀಟ್ ಮಾಡಿದ್ದಾರೆ.

    ಸಿದ್ದಗಂಗಾ ಶ್ರೀಗಳಿಗೆ ಇಲ್ಲ:
    ವಿಶ್ವರತ್ನ, ನಡೆದಾಡುವ ದೇವರು, ಸಿದ್ದಗಂಗಾ ಶ್ರೀಗಳಿಗೆ ಈ ಬಾರಿ ಭಾರತ ರತ್ನ ಸಿಗಬೇಕು ಎಂದು ಕನ್ನಡಿಗರು, ರಾಜಕಾರಣಿಗಳು ಬೇಡಿಕೆ ಇಟ್ಟಿದ್ದರು. ಆದರೆ ಈ ಪಟ್ಟಿಯಲ್ಲಿ ಶ್ರೀಗಳ ಹೆಸರು ಇಲ್ಲದೇ ಇರುವುದು ಕನ್ನಡಿಗರಿಗೆ ಬೇಸರ ತಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪೂಜ್ಯ ಗದ್ದುಗೆಯಲ್ಲಿ ಐಕ್ಯರಾದ ಶ್ರೀಗಳು

    ಪೂಜ್ಯ ಗದ್ದುಗೆಯಲ್ಲಿ ಐಕ್ಯರಾದ ಶ್ರೀಗಳು

    ತುಮಕೂರು: ವಿಶ್ವಚೇತನ, ವಿಶ್ವರತ್ನ, ಕಾಯಕಯೋಗಿ, ನಡೆದಾಡುವ ದೇವರು ಡಾ. ಶಿವಕುಮಾರಸ್ವಾಮೀಜಿಗಳ ಯುಗಾಂತ್ಯವಾಗಿದೆ. ಸೋಮವಾರ 11 ಗಂಟೆ 44 ನಿಮಿಷಕ್ಕೆ ಲಿಂಗೈಕ್ಯರಾದ ಮಹಾನ್ ಮಾನವತಾವಾದಿಗೆ ಕೋಟಿ ಮನಸುಗಳು ಭಾರ ಹೃದಯದಿಂದ ಬೀಳ್ಕೊಡುಗೆ ನೀಡಿದ್ದಾರೆ. ಸಿದ್ದಗಂಗಾ ಮಠದ ಆವರಣದಲ್ಲಿ ಗುರು ಉದ್ಧಾನ ಶಿವಯೋಗಿಗಳ ಪಕ್ಕದಲ್ಲಿ ಶಿವಕುಮಾರ ಸ್ವಾಮೀಜಿಯವರನ್ನು ಗದ್ದುಗೆಯಲ್ಲಿ ಐಕ್ಯ ಮಾಡಲಾಗಿದೆ.

    ಮಧ್ಯಾಹ್ನ 4.30ರ ವೇಳೆಗೆ ಆರಂಭವಾದ ಕ್ರಿಯಾ ವಿಧಾನ, ವಿಧಿ ವಿಧಾನಗಳು ಅಂತಿಮವಾಗಿ 8.30 ಗಂಟೆಗೆ ಪೂರ್ಣಗೊಂಡಿತು. ಶ್ರೀಗಳು ಚೈತನ್ಯ ಅವರ ದೇಹವನ್ನು ಬಿಟ್ಟು ಹೋದ ಬಳಿಕ ಅವರ ದೇಹಕ್ಕೆ ಮತ್ತೆ ಚೈತನ್ಯ ತುಂಬಲು ಕ್ರಿಯಾ ಸಮಾಧಿ ವಿಧಿ ವಿಧಾನ ಮಾಡಲಾಯಿತು. ಲಿಂಗಧಾರಣೆ ಮಾಡಿ, ಇಷ್ಟಲಿಂಗ ಪೂಜೆ ಮಾಡುವ ಅಧ್ಯಾತ್ಮ ಸಾಧಕರಿಗೆ ಮಾತ್ರ ಲಿಂಗಾಯತ ಕ್ರಿಯಾಸಮಾಧಿ ಮಾಡಲಾಗುತ್ತದೆ.

    ಸಂಜೆ 4.30ಕ್ಕೆ ಆರಂಭವಾದ ಈ ಪ್ರಕ್ರಿಯೆಯಲ್ಲಿ ಕಿರಿಯ ಶ್ರೀಗಳು ಮುಂದಿದ್ದು ಎಲ್ಲಾ ವಿಧಿ ವಿಧಾನಗಳನ್ನು ನೆರವೇರಿಸಿದರು. 5 ಗಂಟೆಗೆ ಶ್ರೀಗಳು ಮಹಾ ಮಂಗಳಾರತಿ ಮಾಡಿದ ಬಳಿಕ ಮೆರವಣಿಗೆಗೆ ಆರಂಭ ಮಾಡಲಾಯಿತು. 5.15 ಗಂಟೆಗೆ ಸುಮಾರಿಗೆ ಲಿಂಗೈಕ್ಯ ದೇಹವನ್ನು 1 ಲಕ್ಷದ 1 ರುದ್ರಾಕ್ಷಿ ಹಾಗೂ ಹೂಗಳಿಂದ ಅಲಂಕಾರ ಮಾಡಿದ್ದ ವಿಮಾನಗೋಪುರದ ಮೂಲಕ ಅಂತಿಮ ಯಾತ್ರೆ ಮೆರವಣಿಗೆ ಆರಂಭ ಮಾಡಲಾಯಿತು.

    ಸಂಜೆ 6 ಗಂಟೆ ವೇಳೆಗೆ ಸಿಎಂ ಕುಮಾರಸ್ವಾಮಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ, ದಿನೇಶ್ ಗುಂಡೂರಾವ್, ವೀರಪ್ಪ ಮೊಯ್ಲಿ, ದೇಶಪಾಂಡೆ, ಶೋಭಾ ಕರಂದ್ಲಾಜೆ, ಶ್ರೀರಾಮುಲು, ಜನಾರ್ದನ ರೆಡ್ಡಿ, ಡಿಸಿಎಂ ಪರಮೇಶ್ವರ್, ಗೃಹ ಸಚಿವ ಎಂ.ಬಿ.ಪಾಟೀಲ್, ಮಾಜಿ ಸಚಿವ ವಿ.ಸೋಮಣ್ಣ, ಸಚಿವ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು, ಸಂಸದರು, ಶಾಸಕರು, ಸಚಿವರು ಸೇರಿದಂತೆ ಜನಪ್ರತಿನಿಧಿಗಳು ಹಾಜರಿದ್ದು, ಗೌರವ ಸಲ್ಲಿಸಿದರು. ಬಳಿಕ 3 ಸುತ್ತು ಕುಶಾಲುತೋಪು ಹಾರಿಸಿ, ಸಕಲ ಸರ್ಕಾರಿ ಗೌರವ ಸಲ್ಲಿಸಲಾಯಿತು. ಬಳಿಕ ಶ್ರೀಗಳ ಲಿಂಗ ದೇಹದ ಮೇಲೆ ಹೊದಿಸಿದ್ದ ತ್ರಿವರ್ಣ ಧ್ವಜವನ್ನು ಸಿಎಂ ಕುಮಾರಸ್ವಾಮಿ ಅವರು ಕಿರಿಯ ಶ್ರೀಗಳಿಗೆ ಹಸ್ತಾಂತರಿಸಿದರು. ಈ ಮೂಲಕ ಅಧಿಕೃತವಾಗಿ ಶ್ರೀಗಳ ಲಿಂಗಕಾಯವನ್ನು ಮಠಕ್ಕೆ ಹಸ್ತಾಂತರ ಮಾಡಿದರು. ರಾಷ್ಟ್ರಧ್ವಜ ಹೊದಿಸುವಾಗ “ಶ್ರೀಗಳಿಗೆ ಭಾರತರತ್ನ ನೀಡಿ” ಎನ್ನುವ ಘೋಷ ಕೇಳಿಬಂತು.

    ಪಂಚ ವಾದ್ಯಗಳ ಮೂಲಕ ಶಿವಯೋಗಿಗಳ ಗದ್ದುಗೆವರೆಗೂ ಮೆರವಣಿಗೆ ಮಾಡಲಾಯಿತು. “ಶಿವಕುಮಾರ ಸ್ವಾಮೀಜಿಗಳಿಗೆ, ನಡೆದಾಡುವ ದೇವರಿಗೆ ಜಯವಾಗಲಿ, ಅನ್ನ ದಾಸೋಹಿಗೆ ಜಯವಾಗಲಿ, ಜ್ಞಾನ ದಾಸೋಹಿಗೆ ಜಯವಾಗಲಿ” ಎಂಬ ಘೋಷ ಕೂಗುತ್ತಾ 3 ಪ್ರದಕ್ಷಿಣೆ ಮಾಡಿದ ಬಳಿಕ ಗದ್ದುಗೆಯ ಸಮಾಧಿ ಸ್ಥಳದಲ್ಲಿ ಐವರು ಸ್ವಾಮೀಜಿಗಳು ಈ ವೇಳೆ ಕ್ರಿಯಾ ವಿಧಿ ವಿಧಾನಗಳನ್ನು ಆರಂಭಿಸಿದರು. ಗದ್ದುಗೆ ಪೂಜೆ ಸ್ಥಳದಲ್ಲಿ ಕ್ರಿಯಾ ಸಮಾಧಿ ಶಾಸ್ತ್ರಗಳು, ಮಂತ್ರ ಪಠಣ ಮೂಲಕ ಕಾರ್ಯ ನಡೆಯಿತು. ಅಟವೀ ಶಿವಯೋಗಿಗಳ ಗದ್ದುಗೆಯ ಅರ್ಚಕರೂ ಕೂಡ ಈ ಪೂಜೆಯಲ್ಲಿ ತೊಡಗಿದ್ದರು. ಬೆಳಗ್ಗೆಯಿಂದಲೇ ನಡೆದ ಪೂಜೆ ಶಾಸ್ತ್ರಗಳನ್ನು ಕಿರಿಯ ಸ್ವಾಮೀಜಿಗಳು ಪೂರ್ಣಗೊಳಿಸಿದರು. ಕ್ರಿಯಾ ಸಮಾಧಿ ವೇಳೆ 10 ರಿಂದ 11 ಸಾವಿರ ವಿಭೂತಿ ಗಟ್ಟಿ, 20 ಚೀಲ ಅಂದರೆ 500 ಕೆಜಿ ಉಪ್ಪು, 10 ಚೀಲ ಮರಳು, 1001 ವಿವಿಧ ರೀತಿಯ ಪತ್ರೆಗಳನ್ನು ಬಳಕೆ ಮಾಡಲಾಗಿತ್ತು.

    ಕ್ರಿಯಾ ಸಮಾಧಿ: ವೀರಶೈವ ಲಿಂಗಾಯಿತ ಆಗಮೋಕ್ತ ಕ್ರಿಯಾ ಸಮಾಧಿ ವಿಧಿ ವಿಧಾನಗಳ ಮೂಲಕ ಶ್ರೀಗಳ ಕ್ರಿಯಾ ಸಮಾಧಿಯನ್ನು ಮಾಡಲಾಯಿತು. 9 ಪಾದ ಆಳ, 9 ಪಾದ ಉದ್ದ, 5 ಪಾದ ಅಗಲದಲ್ಲಿ ನಿರ್ಮಾಣವಾಗಿರುವ ಕ್ರಿಯಾ ಸಮಾಧಿಯಲ್ಲಿ 3 ಹಂತಗಳಲ್ಲಿ ಮೆಟ್ಟಿಲು (ಸೋಪನ) ನಿರ್ಮಾಣ ಮಾಡಲಾಗಿರುತ್ತದೆ. ಶ್ರೀಗಳ ಪಾರ್ಥಿವ ಶರೀರವನ್ನು ಕೂರಿಸಲು ಆದರೊಳಗೆ ತ್ರಿಕೋನಾಕೃತಿಯಲ್ಲಿ ಗೂಡು ನಿರ್ಮಿಸಲಾಗಿತ್ತು. ಇದರಲ್ಲಿ ಶ್ರೀಗಳ ಐಕ್ಯವನ್ನಿಟ್ಟು, ವಿಭೂತಿ, ಪತ್ರೆ, ಉಪ್ಪು ಸೇರಿದಂತೆ ವಿವಿಧ ಬಿಲ್ವಪತ್ರೆಗಳನ್ನ ಕ್ರಿಯಾ ಸಮಾಧಿಯನ್ನು ಮುಚ್ಚಲಾಯಿತು.

    ಮೊದಲಿಗೆ ಪಾರ್ಥೀವ ಶರೀರಕ್ಕೆ ನಾಡಿನ ಪುಣ್ಯ ನದಿಗಳಿಂದ ತರಿದ್ದ ಪವಿತ್ರ ತೀರ್ಥದಿಂದ ಅಭಿಷೇಕ ನೆರವೇರಿಸಿ ಹೊಸ ಕಶಾಯ ವಸ್ತ್ರಗಳನ್ನು ಧಾರಣೆ ಮಾಡಲಾಯಿತು. ಈ ವೇಳೆ ಪಂಚಾಮೃತ ಹಾಗೂ ಪತ್ರೆ ಇಟ್ಟು ಪ್ರತಿ ಸೋಪಾನದಲ್ಲೂ ಅಭಿಷೇಕ ನಡೆಸಲಾಯಿತು.

    ಪಾರ್ಥಿವ ಶರೀರವನ್ನು ಗದ್ದುಗೆಯ ಒಳಭಾಗದ ಗೂಡಿನಲ್ಲಿ ಪದ್ಮಾಸನ ಸ್ಥಿತಿಯಲ್ಲಿ ಕೂರಿಸಿ, ಕೈಗೆ ಇಷ್ಟ ಲಿಂಗವನ್ನು ನೀಡಲಾಯಿತು. ನಂತರ ರುದ್ರ ಚಮಕ ಪಠಣ ಮಾಡುತ್ತಾ ಪಾರ್ಥೀವ ಶರೀರಕ್ಕೆ ಪಂಚಾಮೃತಾಭಿಷೇಕ ನೆರವೇರಿಸಲಾಯಿತು. ಈ ವೇಳೆ ಶ್ರೀಗಳಿಗೆ ಮಹಾ ಮಂಗಳಾರತಿ ಹಾಗೂ ತಂಬಿಟ್ಟು, ಚಿಗಲಿ ಹಾಗೂ ಹಸಿ ಕಡಲೆಕಾಳು ನೈವೇದ್ಯ ನೆರವೇರಿಸಲಾಯಿತು. ಕೆಳ ಭಾಗದಲ್ಲಿ ಉಪ್ಪು, ಮೆಣಸು ನಂತರ ವಿಭೂತಿ ಗಟ್ಟಿಗಳಿಂದ ಲಿಂಗ ಶರೀರವನ್ನು ಮುಚ್ಚಲಾಯಿತು.

    https://www.youtube.com/watch?v=S5rWpX2kQ2g

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪೊಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸಿದ ಸಿಎಂ ಕುಮಾರಸ್ವಾಮಿ

    ಪೊಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸಿದ ಸಿಎಂ ಕುಮಾರಸ್ವಾಮಿ

    ತುಮಕೂರು: ನಡೆದಾಡುವ ದೇವರು, ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳ ಲಿಂಗೈಕ್ಯದಿಂದ ಹಿಡಿದು ಕ್ರಿಯಾ ವಿಧಾನವರೆಗೂ ಅಚ್ಚುಕಟ್ಟಾಗಿ ಬಂದೋಬಸ್ತ್ ಒದಗಿಸಿದ ಪೊಲೀಸ್ ಇಲಾಖೆಗೆ ಸಿಎಂ ಕುಮಾರಸ್ವಾಮಿ ಧನ್ಯವಾದ ತಿಳಿಸಿದ್ದಾರೆ.

    ಶ್ರೀಗಳಿಗೆ ಸರ್ಕಾರದ ಗೌರವ ವಂದನೆ ಸಲ್ಲಿಸಿದ ಬಳಿಕ ಮಾತನಾಡಿದ ಸಿಎಂ ಕುಮಾರಸ್ವಾಮಿ, ಭಕ್ತರು ಶ್ರೀಗಳ ದರ್ಶನ ಹಾಗೂ ಅಂತಿಮ ಕ್ರಿಯಾ ವಿಧಾನವರೆಗೂ ಪೊಲೀಸ್ ಇಲಾಖೆಗೆ ಸಹಕಾರ ನೀಡಿ ಶಾಂತಿಯಿಂದ ನಡೆದುಕೊಂಡ ಕಾರಣ ಧನ್ಯವಾದ ತಿಳಿಸಿದರು. ಅಲ್ಲದೇ ಸೂಕ್ತ ಭದ್ರತಾ ವ್ಯವಸ್ಥೆಗಳನ್ನು ಕೈಗೊಂಡಿದ್ದ ಪೊಲೀಸ್ ಇಲಾಖೆಯ ಕಾರ್ಯವನ್ನು ಶ್ಲಾಘಿಸಿ ಔರಾದ್ಕಾರ್ ವರದಿ ಜಾರಿ ಮಾಡುವುದಕ್ಕೆ ಶ್ರಮಿಸುತ್ತೇನೆ ಎಂದು ಹೇಳಿದರು.

    ರಾತ್ರಿಯೆಲ್ಲಾ ಮಠದ ಎನ್‍ಸಿಸಿ ವಿದ್ಯಾರ್ಥಿಗಳು ಸೇರಿದಂತೆ ಎಲ್ಲರು ರಾತ್ರಿ ಇಡೀ ನಿಂತು ಶ್ರಮವಹಿಸಿದ್ದೀರಾ. ರಾಜ್ಯ ಸರ್ಕಾರ ಪೊಲೀಸರ ಅಭಿವೃದ್ಧಿಗಾಗಿ ಶ್ರಮಿಸುತ್ತದೆ. ಮಠದ ಆವರಣದಲ್ಲಿ ಈ ಕುರಿತು ಭರವಸೆ ನೀಡುತ್ತಿದ್ದು, ಔರಾದ್ಕಾರ್ ವರದಿ ಜಾರಿ ಮಾಡುವ ಕಾರ್ಯ ಮಾಡಲಾಗುತ್ತದೆ. ಅಲ್ಲದೇ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡುವ ಕುರಿತು ರಾಷ್ಟ್ರಪತಿ ಹಾಗೂ ಪ್ರಧಾನಿಯನ್ನು ಖುದ್ದು ಭೇಟಿ ಮಾಡಿ ಶಿಪಾರಸ್ಸು ಮಾಡುತ್ತೇನೆ. ಈ ಬಗ್ಗೆ ಭಕ್ತರಿಗೆ ಭರವಸೆ ನೀಡುತ್ತೇನೆ ಎಂದು ಸಿಎಂ ತಿಳಿಸಿದರು.

    ಮುಂದಿನ ಸಮಯದಲ್ಲೂ ಮಠಕ್ಕೆ ಆಗಮಿಸುವ ಭಕ್ತರಿಗೆ ಸೌಲಭ್ಯ ಕಲ್ಪಿಸಿಕೊಡಲಾವುದು. ನಾಡಿಗೆ ಪೊಲೀಸ್ ಇಲಾಖೆ ಸಲ್ಲಿಸಿರುವ ಸೇವೆಗೆ ರಾಜ್ಯದ ಜನರು ಕೂಡ ಅಭಿನಂದನೆ ಸಲ್ಲಿಸುತ್ತಾರೆ. ನಿಮ್ಮ ಉತ್ತಮ ಸೇವೆ ಹೀಗೇ ಮುಂದುವರಿಯಲಿ ಎಂದು ಮನವಿ ಮಾಡುತ್ತೇನೆ ಎಂದರು.

    https://www.youtube.com/watch?v=nE4fxo3zMMQ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಡೆದಾಡುವ ದೇವರಿಗೆ ಭಾರತ ರತ್ನ ನೀಡಿ ಗೌರವಿಸಿ: ಧ್ವನಿಗೂಡಿಸಿದ ಹಲವು ನಾಯಕರು

    ನಡೆದಾಡುವ ದೇವರಿಗೆ ಭಾರತ ರತ್ನ ನೀಡಿ ಗೌರವಿಸಿ: ಧ್ವನಿಗೂಡಿಸಿದ ಹಲವು ನಾಯಕರು

    ತುಮಕೂರು: ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಿ ಗೌರವಿಸಬೇಕು ಎನ್ನುವ ಬೇಡಿಕೆಗೆ ಹಲವು ನಾಯಕರು ಧ್ವನಿಗೂಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದರು. ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿ, ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ಪತ್ರವನ್ನು ಕಳುಹಿಸಿದ್ದೇನೆ ಎಂದು ತಿಳಿಸಿದರು.

    ಪೂಜ್ಯ ಶ್ರೀಗಳಿಗೆ ಆದಷ್ಟು ಬೇಗ ಭಾರತ ರತ್ನ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದೇವೆ. ಸ್ವಾಮೀಜಿಗಳಿಗೆ ಭಾರತ ರತ್ನ ನೀಡುವುದು ನಮ್ಮೆಲ್ಲರ ಭಾಗ್ಯ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲಾಗುತ್ತದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ಇದನ್ನು ಓದಿ: ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಪತ್ರ- ಮಲ್ಲಿಕಾರ್ಜುನ ಖರ್ಗೆ

    ಯಾವಾಗಲೋ ಭಾರತ ರತ್ನ ನೀಡಿದರೆ ಯಾವುದೇ ಪ್ರಯೋಜನವಿಲ್ಲ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಚರ್ಚೆ ನಡೆಸಿ, ಆದಷ್ಟು ಬೇಗ ಶ್ರೀಗಳಿಗೆ ಭಾರತ ರತ್ನ ಸಿಗುವಂತೆ ಶ್ರಮಿಸಬೇಕು. ಶ್ರೀಗಳಿಗೆ ಭಾರತ ರತ್ನ ನೀಡಿದರೆ, ಪುರಸ್ಕರಕ್ಕೆ ಮತ್ತಷ್ಟು ಗೌರವ ಬರುತ್ತದೆ ಎಂದು ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ಆಗ್ರಹಿಸಿದರು.

    ಸಾರ್ವಜನಿಕರು ಕೂಡ ಶ್ರೀಗಳಿಗೆ ಭಾರತ ರತ್ನ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಪಬ್ಲಿಕ್ ಟಿವಿ ಕೂಡ ಶಿವಕುಮಾರ ಸ್ವಾಮೀಜಿ ಭಾರತ ರತ್ನ ಗೌರವ ಅಂತ ಆಗ್ರಹಿಸಿ ಅಭಿಯಾನ ಆರಂಭಿಸಿದೆ. ಇದನ್ನು ಓದಿ: ಪವಾಡ ಎಂಬಂತೆ 45 ನಿಮಿಷ ಸ್ವಂತವಾಗಿ ಉಸಿರಾಟ – ನಡೆದಾಡುವ ದೇವರ ಆರೋಗ್ಯದಲ್ಲಿ ಗಣನೀಯ ಚೇತರಿಕೆ

    ಶ್ರೀಗಳ ಭಾವಚಿತ್ರ ಅನಾವರಣ: ನಡೆದಾಡುವ ದೇವರು, ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗಳ ಭಾವಚಿತ್ರವನ್ನು ಮಠದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿ ಬಿಡಿಸಿದ್ದು, ಅದನ್ನು ಕಿರಿಯ ಶ್ರೀಗಳು ಅನಾವರಣ ಮಾಡಿದರು.

    ಪ್ರಾರ್ಥನೆ ಮುಗಿಸಿದ ಬಳಿಕ ಭಾವಚಿತ್ರವನ್ನು ಅನಾವರಣ ಮಾಡಿದ ಕಿರಿಯ ಶ್ರೀಗಳು, ವಾಸ್ತವಕ್ಕೆ ಹತ್ತಿರ ಇರುವ ಶಿವಕುಮಾರ ಸ್ವಾಮೀಜಿಗಳ ಚಿತ್ರವನ್ನೇ ವಿದ್ಯಾರ್ಥಿ ಬಿಡಿಸಿದ್ದಾನೆ ಎಂದು ಕಿರಿಯ ಶ್ರೀಗಳು ಕೊಂಡಾಡಿದರು. ಈ ವೇಳೆ ಸಾವಿರಾರು ವಿದ್ಯಾರ್ಥಿಗಳು ಸಾಲಾಗಿ ಕುಳಿತು ಶ್ರೀಗಳಿಗೆ ಮತ್ತಷ್ಟು ಆರೋಗ್ಯ ಹಾಗೂ ಆಯಸ್ಸನ್ನು ಕರುಣಿಸಲಿ ಎಂದು ದೇವರಿಗೆ ಪ್ರಾರ್ಥನೆ ಸಲ್ಲಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಪತ್ರ- ಮಲ್ಲಿಕಾರ್ಜುನ ಖರ್ಗೆ

    ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಪತ್ರ- ಮಲ್ಲಿಕಾರ್ಜುನ ಖರ್ಗೆ

    ತುಮಕೂರು: ನಡೆದಾಡುವ ದೇವರು, ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

    ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಅವರು, ಶ್ರೀಗಳಿಗೆ ಉಸಿರಾಟದ ತೊಂದರೆಯಿದ್ದು ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಅವರು ಸಂಪೂರ್ಣವಾಗಿ ಗುಣಮುಖರಾಗುವ ವಿಶ್ವಾಸ ಇದೆ ಎಂದರು.

    ಪೂಜ್ಯರು ದೇಶಕ್ಕೆ ವಿಶೇಷ ನೀಡಿದ್ದಾರೆ. ಅವರಿಗೆ ಭಾರತ ರತ್ನ ಕೊಡುವಂತೆ ಪಕ್ಷಾತೀತವಾಗಿ ಒತ್ತಾಯ ಮಾಡಬೇಕು. ಈ ಸಂಬಂಧ ನಾನು ಕೂಡ ಕೇಂದ್ರಕ್ಕೆ ಪತ್ರ ಬರೆದು ಶ್ರೀಗಳಿಗೆ ಭಾರತ ರತ್ನ ನೀಡಿ ಗೌರವಿಸುವಂತೆ ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದರು.

    ವೈದ್ಯ ಡಾ.ಪರಮೇಶ್ ಅವರು ನಿನ್ನೆಯಷ್ಟೇ ಸಿದ್ದಗಂಗಾ ಶ್ರೀಗಳ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಚೇತರಿಕೆ ಕಂಡುಬರುತ್ತಿಲ್ಲ. ಮತ್ತೆ ಅವರ ಶ್ವಾಸಕೋಶದ ಎರಡೂ ಭಾಗದಲ್ಲಿ ನೀರು ತುಂಬಿಕೊಂಡಿದೆ. ಈಗಾಗಲೇ ದೇಹದಿಂದ ನೀರನ್ನು ಹೊರಕ್ಕೆ ತೆಗೆಯಲಾಗಿದೆ. ಸದ್ಯ ಶ್ರೀಗಳು ಸನ್ನೆ ಮೂಲಕವೇ ಮಾತನಾಡುತ್ತಿದ್ದು, ಕಣ್ಣು ಬಿಟ್ಟು ನೋಡುತ್ತಿದ್ದಾರೆ. ಮಲಗಿದಲ್ಲಿಯೇ ಶ್ರೀಗಳು ಅವರ ಕೈಕಾಲುಗಳ ಚಲನವಲನ ಮಾಡುತ್ತಿದ್ದಾರೆ ಎಂದು ತಿಳಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರ‍್ಯಾಂಕ್ ಬದಲು ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಅಗತ್ಯತೆ ಇದೆ: ಸಿಎನ್‍ಆರ್ ರಾವ್

    ರ‍್ಯಾಂಕ್ ಬದಲು ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಅಗತ್ಯತೆ ಇದೆ: ಸಿಎನ್‍ಆರ್ ರಾವ್

    ಧಾರವಾಡ: ರ‍್ಯಾಂಕಿಂಗ್‌ ಬದಲು ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಅಗತ್ಯತೆ ಇದೆ ಎಂದು ಭಾರತ ರತ್ನ ಪುರಸ್ಕೃತ ವಿಜ್ಞಾನಿ ಪ್ರೊ.ಸಿ.ಎನ್.ಆರ್.ರಾವ್ ಅಭಿಪ್ರಾಯಪಟ್ಟಿದ್ದಾರೆ.

    ನಗರದಲ್ಲಿ ಹಮ್ಮಿಕೊಂಡಿದ್ದ ಉನ್ನತ ಶಿಕ್ಷಣ ಅಕಾಡೆಮಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದು ಜಗತ್ತಿನಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಫಿನ್‍ಲ್ಯಾಂಡ್ ಮೊದಲ ಸ್ಥಾನದಲ್ಲಿದ್ದರೆ, ನಂತರದ ಸ್ಥಾನದಲ್ಲಿ ದಕ್ಷಿಣ ಕೊರಿಯಾ ಇದೆ. ಅಮೆರಿಕ ಕೂಡ 25ನೇ ಸ್ಥಾನದಲ್ಲಿದೆ. ಅಲ್ಲಿಯೂ ಕೂಡ ಗುಣಮಟ್ಟದ ಶಿಕ್ಷಣದ ಕೊರತೆ ಇದೆ. ಆದರೆ ನಮ್ಮ ದುರಾದೃಷ್ಟವೆಂದರೆ ಭಾರತ ಈ ವಿಚಾರದಲ್ಲಿ ನೂರನೇ ಸ್ಥಾನವನ್ನು ದಾಟಿದೆ ಎಂದು ಬೇಸರ ವ್ಯಕ್ತಪಡಿಸಿದರು.

    ಇಂದಿನ ದಿನಗಳಲ್ಲಿ ಮಕ್ಕಳು ರ‍್ಯಾಂಕ್ ತರುವ ಸ್ಪರ್ಧೆಯಲ್ಲಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳು ನಾವು ಮೊದಲು ಬಿಎಸ್ಸಿ ಮಾಡಬೇಕು, ನಂತರ ಐಐಟಿ ಮಾಡಬೇಕು, ಇದರ ಜೊತೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮಾಡುವ ಯತ್ನದಲ್ಲಿದ್ದಾರೆ. ಇದರಿಂದಾಗಿ ದೇಶದಲ್ಲಿ ಕೆಲವರು ಆತ್ಮಹತ್ಯೆ ಮಾಡಿಕೊಂಡರೆಮ ಇನ್ನು ಕೆಲವರು ಹುಚ್ಚರಾಗುತ್ತಿದ್ದಾರೆ ಎಂದು ಬೇಸರಿಸಿದರು.

    ಎಲ್ಲರೂ ಗಮನದಲ್ಲಿಟ್ಟಿಕೊಳ್ಳಿ, ನಮಗೆ ರ‍್ಯಾಂಕ್ ಬದಲು ಗುಣಮಟ್ಟದ ಶಿಕ್ಷಣದ ಅಗತ್ಯತೆ ಇದೆ. ಈ ಬಗ್ಗೆ ಎಲ್ಲಾ ಕಡೆ ನಾನು ಹೇಳುತ್ತಲೇ ಇರುತ್ತೇನೆ. ನಮ್ಮ ದೇಶದಲ್ಲಿ 50 ಕೋಟಿ ಮಕ್ಕಳು ಗ್ರಾಮೀಣ ಭಾಗಗಳಲ್ಲಿ ಇದ್ದಾರೆ. ಇಷ್ಟು ದೊಡ್ಡ ಪ್ರಮಾಣದ ಮಕ್ಕಳು ಬೇರೆ ಕಡೆ ಎಲ್ಲೂ ಇಲ್ಲ. ಅವರಿಗೆ ನಾವು ಸಹಾಯ ಮಾಡಬೇಕು. ಅವರಲ್ಲಿ ಪ್ಯಾರಡೆ, ನ್ಯೂಟನ್‍ರಂತಹ ವ್ಯಕ್ತಿಗಳು ಅಡಗಿದ್ದಾರೆ. ಅದನ್ನು ನಾವು ಹೊರಗೆ ತೆಗೆಯಬೇಕು. ಆಗ ಮಾತ್ರ ನಾವು ಒಳ್ಳೆಯ ಶಿಕ್ಷಕರಾಗಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು.

    ಬಡ ಕೂಲಿ ಮಾಡುವ ಮಕ್ಕಳನ್ನು, ನಾವು ಉನ್ನತ ಮಟ್ಟದ ಶಿಕ್ಷಣ ನೀಡಿ ಅವರನ್ನು ಉನ್ನತ ಮಟ್ಟಕ್ಕೆ ತರುವುದೇ ಗುರಿಯಾಗಿರಬೇಕು. ದೇಶದ ಪ್ರಧಾನಿ ಸೇರಿದಂತೆ ರಾಜಕೀಯ ಪ್ರತಿನಿಧಿಗಳು, ಯಾವೊಬ್ಬ ಅಧಿಕಾರಿಯೂ ಮಾಡದೇ ಇರುವಂತಹ ಕೆಲಸ ಶಿಕ್ಷಕರದ್ದು. ಅದನ್ನು ಎಲ್ಲರೂ ಸರಿಯಾಗಿ ನಿರ್ವಹಿಸಬೇಕು ಎಂದು ಶಿಕ್ಷಕರಲ್ಲಿ ಮನವಿ ಮಾಡಿಕೊಂಡರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಮೋದಿಗೆ ಸಿಎಂ ಪತ್ರ

    ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಮೋದಿಗೆ ಸಿಎಂ ಪತ್ರ

    ಬೆಂಗಳೂರು: ಸಿದ್ದಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರನ್ನು ಭಾರತ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರದ ಮೂಲಕ ಮನವಿ ಮಾಡಿದ್ದಾರೆ.

    ಶತಮಾನಗಳಷ್ಟು ಹಳೆಯದಾದ ತುಮಕೂರಿನ ಸಿದ್ದಗಂಗಾ ಮಠ ಕಳೆದ 600 ವರ್ಷಗಳಿಂದ ಶಿಕ್ಷಣ, ಅನ್ನ ದಾಸೋಹ ಮಾಡುತ್ತಾ ಬಂದಿದೆ. ಎಲ್ಲಾ ವರ್ಗದ ಜನರ ಪ್ರೀತಿಗೆ ಪಾತ್ರರಾಗಿರುವ ಶತಾಯುಶಿ, ಶಿಕ್ಷಣ, ಅನ್ನದಾಸೋಹದ ಪ್ರಮುಖ ರೂವಾರಿ ಸಿದ್ದಗಂಗಾ ಶ್ರೀಗಳ ಕೊಡುಗೆ ಅನನ್ಯವಾಗಿದೆ. ಅವರು ಈಗ 110 ವರ್ಷಗಳನ್ನು ಪೂರೈಸಿದ್ದಾರೆ. ಆದ್ದರಿಂದ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರಕ್ಕೆ ಆಯ್ಕೆ ಮಾಡಬೇಕೆಂದು ಪತ್ರದಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ.

    ಎಲ್ಲ ಸಮುದಾಯದ ಕಡುಬಡವ ಮಕ್ಕಳಿಗೆ ಅನ್ನ ದಾಸೋಹ ಮಾಡುವ ಮೂಲಕ ಶಿಕ್ಷಣ ನೀಡಿ ಉತ್ತಮ ನಾಗರಿಕರನ್ನಾಗಿ ಮಾಡಿದ ಕೀರ್ತಿ ಸ್ವಾಮೀಜಿಗೆ ಸಲ್ಲುತ್ತದೆ. ಸಿದ್ದಗಂಗಾ ಮಠ ಎಲ್ಲ ಹಂತದ ಶಿಕ್ಷಣವನ್ನು ಬಡವ ಬಲ್ಲಿದರೆಂಬ ಭೇದವಿಲ್ಲದೆ ಶಿಕ್ಷಣವನ್ನು ಉಚಿತವಾಗಿ ನೀಡುತ್ತಾ ಬಂದಿದೆ. ಅಷ್ಟೇ ಅಲ್ಲದೇ ಉನ್ನತ ಅಧ್ಯಯನಕ್ಕೆ ಪ್ರೋತ್ಸಾಹವನ್ನು ಸಹ ನೀಡುತ್ತದೆ. ಇದರಿಂದ ದೇಶದ ಉದ್ದಗಲಕ್ಕೂ ಈ ಸಂಸ್ಥೆಯಲ್ಲಿ ಅಧ್ಯಯನ ಮಾಡಿರುವ ವಿದ್ಯಾರ್ಥಿಗಳು ಆದರ್ಶ ವ್ಯಕ್ತಿಗಳಾಗಿದ್ದಾರೆ. ಇದು ಅವರ ನಿಸ್ವಾರ್ಥ ಸೇವೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ತಿಳಿಸಿದ್ದಾರೆ.

    ಇಂದಿಗೂ ಸಿದ್ದಗಂಗಾ ಮಠ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಸತಿ, ಶಿಕ್ಷಣ ಜೊತೆಗೆ ಉಚಿತ ಪ್ರಸಾದವನ್ನು ನೀಡುತ್ತಾ ಬಂದಿದೆ. ದೇಶದಲ್ಲೇ ಅತ್ಯುನ್ನತ ಶಿಕ್ಷಣ ಸಂಸ್ಥೆ ಎಂದು ಖ್ಯಾತಿಯಾಗಿದೆ. ಇದರ ರೂವಾರಿಯಾಗಿರುವ ಡಾ. ಶಿವಕುಮಾರ ಸ್ವಾಮೀಜಿ ಅವರ ಅನನ್ಯ ಸೇವೆಯನ್ನು ಪರಿಗಣಿಸಿ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ ಭಾರತ ರತ್ನಕ್ಕೆ ಶಿಫಾರಸು ಮಾಡಬೇಕೆಂದು ರಾಜ್ಯದ ಪರವಾಗಿ ನಾನು ವಿನಂತಿಸಿಕೊಳ್ಳುತ್ತಿದ್ದೆನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

  • ಭಾರತರತ್ನ ಪ್ರಶಸ್ತಿಯನ್ನು ಅಂಬೇಡ್ಕರ್ ಗೆ ನೀಡಿಲ್ಲ ಯಾಕೆ: ಕಾಂಗ್ರೆಸ್‍ಗೆ ಮೋದಿ ಪ್ರಶ್ನೆ

    ಭಾರತರತ್ನ ಪ್ರಶಸ್ತಿಯನ್ನು ಅಂಬೇಡ್ಕರ್ ಗೆ ನೀಡಿಲ್ಲ ಯಾಕೆ: ಕಾಂಗ್ರೆಸ್‍ಗೆ ಮೋದಿ ಪ್ರಶ್ನೆ

    ಅಹಮದಾಬಾದ್: ಡಾ.ಬಿಆರ್ ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನ ಅಂಗವಾಗಿ ಅವರಿಗೆ ವಂದನೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಪಕ್ಷ ಯಾಕೆ ಅಂಬೇಡ್ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.

    ಗುಜರಾತ್ ಚುನಾವಣೆಯ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಒಂದು ಕುಟುಂಬ ಅತಿದೊಡ್ಡ ಅನ್ಯಾಯ ಮಾಡಿದೆ ಎಂದು ಹೇಳುವ ಮೂಲಕ ನೆಹರು ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಕ್ಷದಲ್ಲಿ ಜವಾಹರಲಾಲ್ ನೆಹರೂ ಅವರ ಪ್ರಭಾವ ಇದ್ದಾಗ ಅಂಬೇಡ್ಕರ್ ಅವರು ಸಂವಿಧಾನ ಸಭೆಗೆ ಆಯ್ಕೆಯಾಗುವುದು ಕಠಿಣವಾಗಿತ್ತು ಎಂದು ಆರೋಪ ಮಾಡಿದರು.

    ಬಿಜೆಪಿ ಆಡಳಿತದ ಅವಧಿಯಲ್ಲಿ ರಾಜ್ಯದ ಕಾನೂನು ಹಾಗೂ ಸುವ್ಯವಸ್ಥೆ ಸಾಕಷ್ಟು ಸುಧಾರಿಸಿದೆ. ಯುವ ಸಮುದಾಯಕ್ಕೆ ಉತ್ತಮ ತಂತ್ರಜ್ಞಾನ ಶಿಕ್ಷಣ ನೀಡಲಾಗುತ್ತಿದೆ. ಅಲ್ಲದೇ ಗುಜರಾತ್ ಯುವ ಜನತೆಗೆ ಈಗ ಕಫ್ರ್ಯೂ ಎಂಬ ಪದದ ಪರಿಚಯವೇ ಇಲ್ಲವಾಗಿದೆ. ನಮ್ಮ ಗುರಿ ಯುವ ಸಮುದಾಯ ಸ್ವಾವಲಂಬಿ ಜೀವನ ರೂಪಿಸಿಕೊಳ್ಳುವ ಸಾಮರ್ಥ್ಯ ನಿರ್ಮಾಣ ಮಾಡುವುದು ಎಂದು ಹೇಳಿದರು.

    ಪ್ರಧಾನಿ ಮೋದಿ ಅವರು ಇಂದು ಗುಜರಾತ್‍ನ ದಾಹೊದ್ ಮತ್ತು ನಟ್ರಾಂಗ್ ಪ್ರದೇಶದಲ್ಲಿ ಮತ್ತೆರಡು ಚುನಾವಣೆ ಪ್ರಚಾರ ರ‍್ಯಾಲಿಯಲ್ಲಿ ಭಾಗವಹಿಸಲಿದ್ದಾರೆ. ನಂತರ ಶುಕ್ರವಾರ ದಂದು ಲುನಾವಾಡಾ, ಬೊಡಲಿ, ಆನಂದ್ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಗುಜರಾತ್ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರ ಕೊನೆಯ ಪ್ರಚಾರ ಸಮಾರಂಭವು ಮೆಹ್ಸಾನಾ ಪ್ರದೇಶದ ಪಟಿದಾರ್ ಕೋಟೆಯಲ್ಲಿ ನಡೆಯಲಿದೆ.

    ಗುಜರಾತ್ ಚುನಾವಣೆಯ ಪ್ರಚಾರ ಕಾರ್ಯಕ್ರಮಗಳಿಗೆ ಓಖೀ ಚಂಡಮಾರುತದ ಪ್ರಭಾವವು ಬೀರಿದ್ದು, ಪ್ರಚಾರದಲ್ಲಿ ಭಾಗವಹಿಸ ಬೇಕಿದ್ದ ಉತ್ತರಪ್ರದೇಶ ಸಿಎಂ ಯೋಗಿ ಅದಿತ್ಯನಾಥ್, ರಾಜಸ್ತಾನ್ ಸಿಎಂ ವಾಸುಂದರ ರಾಜೇ, ಬಿಜೆಪಿ ನಾಯಕ ಮನೋಜ್ ತಿವಾರಿ ಸೇರಿದಂತೆ ಕಾಂಗ್ರೆಸ್ ನಾಯಕ ರಾಜ್ ಬಬ್ಬರ್ ತಮ್ಮ ಭೇಟಿಯನ್ನು ರದ್ದುಗೊಳಿಸಿದ್ದಾರೆ.

    ಇಂದು ದೇಶದ್ಯಾಂತ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನವನ್ನು ಅಚರಿಸಲಾಗುತ್ತಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರ ಪತಿ ವೆಂಕಯ್ಯನಾಯ್ಡು, ಸೇರಿದಂತೆ ದೇಶದ ಪ್ರಮುಖ ಮುಖಂಡರು ಅಂಬೇಡ್ಕರ್ ಅವರಿಗೆ ಗೌರವ ವಂದನೆ ಸಲ್ಲಿಸಿದರು.

  • ನಾಳೆ  ಸಿದ್ದಗಂಗಾ ಶ್ರೀಗಳಿಗೆ 110ನೇ ಹುಟ್ಟುಹಬ್ಬ: ತುಮಕೂರಿನಲ್ಲಿ ಸಂಭ್ರಮ ಜೋರು

    ನಾಳೆ ಸಿದ್ದಗಂಗಾ ಶ್ರೀಗಳಿಗೆ 110ನೇ ಹುಟ್ಟುಹಬ್ಬ: ತುಮಕೂರಿನಲ್ಲಿ ಸಂಭ್ರಮ ಜೋರು

    ತುಮಕೂರು: ನಡೆದಾಡುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಶ್ರೀಗಳು ಶನಿವಾರ 110ನೇ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ.  ಈ ಸಂಭ್ರಮಾಚರಣೆಯನ್ನು ತುಮಕೂರು ಸೇರಿದಂತೆ ನಾಡಿನ ಜನತೆ ಹಬ್ಬದ ರೀತಿ ಆಚರಿಸಲಿದ್ದಾರೆ. ಈಗಾಗಲೇ ನಗರಾದ್ಯಂತ ಬಂಟಿಂಗ್, ಬ್ಯಾನರ್‍ಗಳು ರಾರಾಜಿಸುತ್ತಿವೆ.

    ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳು 1908ರಲ್ಲಿ ಮಾಗಡಿ ತಾಲೂಕಿನ ವೀರಾಪುರ ಗ್ರಾಮದಲ್ಲಿ ಪಟೇಲ್ ಹೊನ್ನಪ್ಪ ಮತ್ತು ಗಂಗಮ್ಮ ನವರ ಮಗನಾಗಿ ಜನಿಸಿದರು. ವೀರಾಪುರ ಮತ್ತು ನಾಗವಲ್ಲಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದು ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಪಿಯುಸಿ ಮತ್ತು ಡಿಗ್ರಿ ಪದವಿ ಪಡೆದ ಕಾಲಜ್ಞಾನಿ ಶ್ರೀ ಉದ್ಧಾನ ಶಿವಯೋಗಿ ಸ್ವಾಮಿಗಳಿಂದ 1930ರಲ್ಲಿ ದೀಕ್ಷೆ ಸ್ವೀಕರಿಸಿ 1941ರಲ್ಲಿ ಮಠಾಧಿಪತಿಗಳಾದರು. ಜನಾನುರಾಗಿ ಭಾವನೆ, ಬಡವರ ಮೇಲೆ ಅನುಕಂಪ, ಶಿಸ್ತಿನ ಜೀವನ, ಮಾನವೀಯ ಗುಣಗಳಿಂದ ಪ್ರಸಿದ್ಧಿ ಪಡೆದವರು. 128 ಶಾಲಾ ಕೇಂದ್ರಗಳನ್ನು ಹೊಂದಿರೋ ಮಠದಲ್ಲಿ ಈಗಲೂ 10 ಸಾವಿರ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ.

    ನಸುಕಿನ ಜಾವ 2 ಗಂಟೆಗೆ ಏಳುವ ಶ್ರೀಗಳು ಸ್ನಾನ, ಶಿವಪೂಜೆ ಮುಗಿಸಿ ಬೆಳಗಿನ ಜಾವ 5.30 ರಿಂದ 6ರ ವೇಳೆಗೆ ಕಚೇರಿಗೆ ಬರ್ತಾರೆ. ರಾತ್ರಿ 9.30 ರವರೆಗೂ ಒಂದಲ್ಲೊಂದು ಕಾರ್ಯದಲ್ಲಿ ತೊಡಗಿ ರಾತ್ರಿ 11 ಗಂಟೆ ವೇಳೆಗೆ ನಿದ್ರೆಗೆ ಜಾರಿ ಆರೋಗ್ಯವನ್ನ ಕಾಪಾಡಿಕೊಂಡು ಬಂದಿದ್ದಾರೆ.

    ಶ್ರೀಗಳ 110 ನೇ ಹುಟ್ಟುಹಬ್ಬದ ಅಂಗವಾಗಿ ನಗರದಾದ್ಯಂತ ಶುಭಾಶಯದ ಬ್ಯಾನರ್ ಹಾಗೂ ಬಂಟಿಂಗ್ಸ್ ಗಳು ರಾರಾಜಿಸುತ್ತಿವೆ. ನಾಳೆ ಭೂರಿ ಭೋಜನದ ವ್ಯವಸ್ಥೆ ಮಾಡಲಾಗಿದೆ. 2 ಲಕ್ಷ ಭಕ್ತರಿಗೆ ಆಗುವಷ್ಟು ಪಾಯಸ, 250 ಕ್ವಿಂಟಲ್ ಬೂಂದಿ, ಚಿತ್ರಾನ್ನ ಸೇರಿದಂತೆ ವಿವಿಧ ಸಿಹಿ ತಿನಿಸುಗಳನ್ನು ಸಿದ್ಧಪಡಿಸಲಾಗುತ್ತಿದೆ.

    ಮಠದಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತಿದೆ. ಹೀಗಾಗಿ ಶಾಂತಿಗೆ ಭಂಗವಾಗಬಾರದು ಎಂಬ ಉದ್ದೇಶದಿಂದ ಭಕ್ತಾದಿಗಳು 10 ಗಂಟೆಯ ನಂತರ ಮಠಕ್ಕೆ ಆಗಮಿಸಿ ಶುಭ ಕೋರುವಂತೆ ಕಿರಿಯ ಸಿದ್ದಲಿಂಗಶ್ರೀಗಳು ಮನವಿ ಮಾಡಿದ್ದಾರೆ.

    ಶ್ರಿಗಳ ಹೆಜ್ಜೆ ಗುರುತು:

    1908: ಬೆಂಗಳೂರು ಗ್ರಾಮಾಂತರ ಜಿಲ್ಲೆ ಈಗಿನ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ವೀರಾಪುರ ಗ್ರಾಮದಲ್ಲಿ ಹೊನ್ನಪ್ಪ , ಗಂಗಮ್ಮ ದಂಪತಿ ಪುತ್ರರತ್ನರಾಗಿ ಜನನ.
    1913-27: ವೀರಾಪುರ, ಪಾಲಹಳ್ಳಿಯಲ್ಲಿ ಪ್ರಾಥಮಿಕ, ನಾಗವಲ್ಲಿಯಲ್ಲಿ ಮಾಧ್ಯಮಿಕ, ತುಮಕೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರೌಢಶಿಕ್ಷಣ ಹಾಗೂ ಮೆಟ್ರಿಕ್ಯೂಲೇಷನ್ ತೇರ್ಗಡೆ.
    1927-30: ಬೆಂಗಳೂರಿನ ತೋಟದಪ್ಪ ವಿದ್ಯಾರ್ಥಿನಿಲಯದಲ್ಲಿ ಆಶ್ರಯ, ಸೆಂಟ್ರಲ್ ಕಾಲೇಜಿನಲ್ಲಿ ಬಿಎ ವಿದ್ಯಾಭ್ಯಾಸ.
    1930: ಮಾ.3ರಂದು ಸಿದ್ದಗಂಗಾ ಕ್ಷೇತ್ರದ ಉತ್ತರಾಧಿಕಾರಿಯಾಗಿ ಆಯ್ಕೆ.

    1941: ಜ.11ರಂದು ಶ್ರೀಉದ್ಧಾನ ಶಿವಯೋಗಿ ಸ್ವಾಮೀಜಿ ಲಿಂಗೈಕ್ಯ, ಮಠಾಧ್ಯಕ್ಷರಾಗಿ ಶಿವಕುಮಾರ ಸ್ವಾಮೀಜಿ ಅಧಿಕಾರ ಸ್ವೀಕಾರ.
    1949: ಜೂ.18ರಂದು ಶ್ರೀಸಿದ್ಧಲಿಂಗೇಶ್ವರರ ಸಂಸ್ಕೃತ ಮತ್ತು ವೇದಪಾಠಶಾಲೆ ರಜತೋತ್ಸವ.
    1950: ಧರ್ಮಸ್ಥಳದ ಶ್ರೀಮಂಜಯ್ಯ ಹೆಗ್ಗಡೆಯವರಿಂದ ಮಹಾ ನಡಾವಳಿ ಉತ್ಸವದಲ್ಲಿ ಗೌರವ ಸ್ವೀಕಾರ.
    1956: ಶ್ರೀಕ್ಷೇತ್ರದಲ್ಲಿ ಸಂಸ್ಕೃತ ಕಾಲೇಜು ಕಟ್ಟಡ ನಿರ್ಮಾಣ.

    1960: ಶ್ರೀಮಠದಲ್ಲಿ ಸಾರ್ವಜನಿಕ ವಿದ್ಯಾರ್ಥಿನಿಲಯ ನಿರ್ಮಾಣ ಆರಂಭ.
    1962: ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯ ಸ್ಥಾಪನೆ.
    1963:  ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನ ಆರಂಭ ಹಾಗೂ ಸಿದ್ದಗಂಗಾ ಎಂಜಿನಿಯರಿಂಗ್ ಕಾಲೇಜು ಸ್ಥಾಪನೆ.
    1965: ನ.6 ಕರ್ನಾಟಕ ವಿವಿಯಿಂದ ಗೌರವ ಡಿ.ಲಿಟ್ ಸ್ವೀಕಾರ.
    1970: ಡಿ.27 ಬೆಂಗಳೂರಿನಲ್ಲಿ ನಡೆದ 47ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ.

    1972: ಮೇ 26 ಶ್ರೀಮಠದ ಪೀಠಾಧಿಕಾರ ಸ್ವೀಕಾರದ ರಜತ ಮಹೋತ್ಸವ.
    ಮೇ.28 ಉಚಿತ ವಿದ್ಯಾರ್ಥಿ ನಿಲಯ ಮತ್ತು ಸಂಸ್ಕೃತ ಕಾಲೇಜಿನ ಸುವರ್ಣ ಮಹೋತ್ಸವ.
    1982: ಏ.24 ರಾಷ್ಟ್ರಪತಿ ನೀಲಂ ಸಂಜೀವರೆಡ್ಡಿ ಸಮ್ಮುಖದಲ್ಲಿ ಮುಖ್ಯಮಂತ್ರಿ ಎಸ್.ಗುಂಡೂರಾವ್ ಅವರಿಂದ ಸುವರ್ಣಮಹೋತ್ಸವ ನೆನಪಿಗಾಗಿ ಗೌರವ ಗ್ರಂಥ `ಸಿದ್ಧಗಂಗಾಶ್ರೀ’ ಬಿಡುಗಡೆ,
    ಶ್ರೀಸಿದ್ಧಗಂಗಾ ಮಹಿಳಾ ಕಾಲೇಜು ಸ್ಥಾಪನೆ.
    1984: ನೆಲಮಂಗಲದಲ್ಲಿ ಶ್ರೀಸಿದ್ಧಗಂಗಾ ಪ್ರಥಮ ದರ್ಜೆ ಕಾಲೇಜು ಸ್ಥಾಪನೆ, ಶ್ರೀಸಿದ್ಧಗಂಗಾ ಫಾರ್ಮಸಿ ಕಾಲೇಜು ಸ್ಥಾಪನೆ

    1987: ಏ.20 ಹುಬ್ಬಳ್ಳಿ 3 ಸಾವಿರ ಮಠದ ಜಗದ್ಗುರು ಗಂಗಾಧರರಾಜ ಯೋಗೀಂದ್ರ ಸ್ವಾಮೀಜಿ ರಜತ ಮಹೋತ್ಸವದ ಅಧ್ಯಕ್ಷತೆ.
    1988: ಮಾ.30 ಉತ್ತರಾಧಿಕಾರಿಯಾಗಿ ಸಿದ್ಧಲಿಂಗ ಸ್ವಾಮೀಜಿ ನೇಮಕ.
    1992: ಫೆ.16 ಶ್ರೀಗಳ ವಜ್ರ ಮಹೋತ್ಸವ ಸ್ಮಾರಕ ಕಟ್ಟಡಗಳ ಶಿಲಾನ್ಯಾಸ ಅಂದಿನ ಉಪರಾಷ್ಟ್ರಪತಿ ಡಾ.ಶಂಕರ್ ದಯಾಳ್ ಶರ್ಮ ಅವರಿಂದ ಸಿದ್ಧಗಂಗಾ ನರ್ಸಿಂಗ್ ಕಾಲೇಜು ಸ್ಥಾಪನೆ.
    1995: ಫೆ.2 ಸಿದ್ಧಗಂಗಾ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಸ್ಥಾಪನೆ.

    1997: ಮಾ.22 ಶ್ರೀಗಳ ವಜ್ರಮಹೋತ್ಸವ ಬೃಹತ್ ವಿದ್ಯಾರ್ಥಿನಿಲಯ, ಪ್ರಸಾದ ನಿಲಯ ಹಾಗೂ ದಾಸೋಹ ಸಿರಿ ಗ್ರಂಥ ಸಮರ್ಪಣೆ.
    2000-05: ಜ.30 ಪ್ರಧಾನಿ ವಾಜಪೇಯಿ ಅವರಿಂದ ಸಂಸ್ಕೃತ ಕಾಲೇಜು, ಅಮೃತ ಮಹೋತ್ಸವ ಉದ್ಘಾಟನೆ. ಅಂಧ ಮಕ್ಕಳಿಗೆ ನೂತನ ಶಾಲಾ ಕಟ್ಟಡ ಹಾಗೂ ವಸತಿ ನಿಲಯ ನಿರ್ಮಾಣ.
    2005: ಏ.24 ಶ್ರೀಗಳ 98ನೇ ಜನ್ಮದಿನೋತ್ಸವ ಸಮಾರಂಭ, ಮಾಜಿ ಉಪಪ್ರಧಾನಿ ಎಲ್.ಕೆ.ಆಡ್ವಾಣಿ ಭಾಗಿ.
    ಏ.25 75ನೇ ಪೀಠಾರೋಹಣ(ಅಮೃತ ಮಹೋತ್ಸವ) ಸಮಾರಂಭ ಗೃಹಸಚಿವ ಶಿವರಾಜ್ ಪಾಟೀಲ್, ಸಿಎಂ ಧರಂಸಿಂಗ್ ಭಾಗಿ.
    2006:ಏ.7 ಶ್ರೀಗಳ ಗುರುವಂದನಾ ಕಾರ್ಯಕ್ರಮ ರಾಷ್ಟ್ರಪತಿ ಎಪಿಜೆ ಅಬ್ಬುಲ್ ಕಲಾಂ, ರಾಜ್ಯಪಾಲ ಚತುರ್ವೇದಿ, ಸಿಎಂ ಕುಮಾರಸ್ವಾಮಿ, ಡಿಸಿಎಂ ಯಡಿಯೂರಪ್ಪ, ಸುತ್ತೂರು ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧ್ಯಕ್ಷರು ಭಾಗವಹಿಸಿದ್ದರು.
    2007: ರಾಜ್ಯ ಸರ್ಕಾರದಿಂದ ಕರ್ನಾಟಕ ರತ್ನ ಪ್ರಶಸ್ತಿ, ಸಿದ್ದಗಂಗಾ ಶ್ರೀಗಳ ಜನ್ಮಶತಮಾನೋತ್ಸವ ಸಮಾರಂಭ
    2012: ಗುರುವಂದನಾ ಕಾರ್ಯಕ್ರಮ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭಾಗಿ.
    2013: ಬೆಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್ ಪ್ರದಾನ.
    2014: ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯದ ಸುವರ್ಣ ಮಹೋತ್ಸವದ ಅಂಗವಾಗಿ ಹಳೆಯ ವಿದ್ಯಾರ್ಥಿಗಳ ಜಾಗತಿಕ ಸಮಾವೇಶ
    2015: ಜುಲೈನಲ್ಲಿ ಪದ್ಮಭೂಷಣ ಪ್ರಶಸ್ತಿ ಪ್ರದಾನ.