Tag: Bharath Band

  • ಭಾರತ್ ಬಂದ್: 100ಕ್ಕೂ ಹೆಚ್ಚು ರೈತರ ಬಂಧನ, ಬಿಡುಗಡೆ

    ಭಾರತ್ ಬಂದ್: 100ಕ್ಕೂ ಹೆಚ್ಚು ರೈತರ ಬಂಧನ, ಬಿಡುಗಡೆ

    ಬೆಂಗಳೂರು: ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಕರೆ ನೀಡಲಾಗಿದ್ದ ಭಾರತ್ ಬಂದ್ ಬೆಂಬಲಿಸಲು ಬಂದಿದ್ದ 100ಕ್ಕೂ ಹೆಚ್ಚು ರೈತರನ್ನು ಬಂಧಿಸಿ, ಬಿಡುಗಡೆ ಮಾಡಲಾಗಿದೆ.

    ಮೌರ್ಯ ಸರ್ಕಲ್‍ನಲ್ಲಿ ಒಂದುಗೂಡಿ ವಿನೂತನ ರೀತಿಯ ಮೆರವಣಿಗೆ ನಡೆಸಲು ರೈತರು ಯತ್ನಿಸಿದ್ದಾರೆ. ಈ ವೇಳೆ ರೈತ ಮುಖಂಡರನ್ನು ಬಂಧಿಸಲು ಯತ್ನಿಸಿದಾಗ ಪೊಲೀಸರು ಹಾಗೂ ರೈತರ ನಡುವೆ ಭಾರಿ ವಾಗ್ವಾದ ನಡೆಯಿತು. ಏಕೆ ಬಂಧನ ಮಾಡುತ್ತೀರಿ, ನಾವು ಮೆರವಣಿಗೆಯನ್ನೇ ಆರಂಭಿಸಿಲ್ಲ, ನಮ್ಮ ರೈತರು ಬರುತ್ತಿದ್ದಾರೆ. ಅಲ್ಲಿ ತನಕ ಊರಿನಿಂದ ತಂದಿರುವ ತಿಂಡಿಯನ್ನು ತಿಂದು ಮುಂದೆ ಸಾಗುತ್ತೇವೆ ಎಂದು ರೈತರು ಪೊಲೀಸರ ಬಳಿ ಹೇಳಿದ್ದಾರೆ. ಇದನ್ನೂ ಓದಿ: ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಎದುರಲ್ಲೇ ಶಾಸಕಿ ರೂಪಾಲಿ ನಾಯ್ಕ್ ಗರಂ

    ಇದಕ್ಕೆ ಅವಕಾಶ ನೀಡದ ಪೊಲೀಸರು, ಯಾವುದೇ ಪ್ರತಿ ಉತ್ತರ ನೀಡದೆ ರೈತರನ್ನು ಬಂಧಿಸಿದರು. ಪೊಲೀಸರ ಈ ನಡೆಯನ್ನು ಖಂಡಿಸಿದ ಕುರುಬೂರು ಶಾಂತಕುಮಾರ್, ಕಾನೂನುಬಾಹಿರ ಕ್ರಮಗಳನ್ನ ಕೈಗೊಳ್ಳುತ್ತಿರುವುದು ಪೊಲೀಸರ ಸರ್ವಾಧಿಕಾರಿ ಧೋರಣೆಯಾಗಿದೆ. ಇದನ್ನು ನಾವು ಸಹಿಸಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತೇವೆ. ಕೇಂದ್ರದ ಕೆಲವು ಮಂತ್ರಿಗಳು ರೈತ ಚಳುವಳಿಯ ಬಗ್ಗೆ ಹಗುರವಾಗಿ ಕೋಲೆ ಬಸವನ ರೀತಿ ಮಾತನಾಡುತ್ತಿದ್ದಾರೆ. ಇವರಿಗೆ ಕೃಷಿ ಕಾಯ್ದೆಗಳ ದುಷ್ಪರಿಣಾಮಗಳ ಬಗ್ಗೆ ಅರಿವೇ ಇಲ್ಲ ಬೇಕಿದ್ದರೆ ರೈತ ಮುಖಂಡರ ಸಭೆ ಕರೆದು ಚರ್ಚಿಸಲಿ ಎಂದು ಬಹಿರಂಗ ಸವಾಲು ಹಾಕಿದರು. ಇದನ್ನೂ ಓದಿ: ತಪ್ಪು ಕಲ್ಪನೆಗಳಿಂದ ಭಾರತ್ ಬಂದ್ ಕರೆ ನೀಡಲಾಗಿದೆ: ಲಕ್ಷ್ಮಣ್ ಸವದಿ

    ರೈತರು ಉತ್ಪನ್ನಗಳನ್ನ ಎಲ್ಲಿ ಬೇಕಾದರೂ ಯಾರಿಗಾದರೂ ಮಾರಾಟ ಮಾಡಬಹುದು ಎನ್ನುತ್ತಾರೆ. ನಾವು ವಿಧಾನಸೌಧಕ್ಕೆ ಹಣ್ಣು ತರಕಾರಿಗಳನ್ನ ಮಾರಲು ಹೋಗುತ್ತಿದ್ದರೆ ಪೊಲೀಸರೇ ತಡೆಯುತ್ತಿದ್ದಾರೆ. ಇಂತಹ ನಡೆ ರೈತರ ಕಣ್ಣಿಗೆ ಮಣ್ಣೆರಚುವ ಕೇಂದ್ರ ಸರ್ಕಾರದ ಕುತಂತ್ರವಲ್ಲವೇ ಎಂದು ಕಿಡಿಕಾರಿದರು. ವಿಧಾನಸೌಧ ಬಳಿ ಎತ್ತಿನಗಾಡಿ ಕುದುರೆಗಾಡಿ ಪ್ರತಿಭಟನೆ ನಡೆಸುವಾಗ ಯಾವುದನ್ನೂ ಕೇಳದ ಪೊಲೀಸರು, ನಮ್ಮನ್ನ ಮಾತ್ರ ಅನುಮತಿ ಪಡೆಯಲಾಗಿದೆಯೇ ಎಂದು ಕೇಳುತ್ತಾರೆ. ಇದು ಪೊಲೀಸರ ಕಾರ್ಯವೈಖರಿ ಎಂದು ವ್ಯಂಗ್ಯವಾಡಿದರು.

    ಕೇಂದ್ರ ಸರ್ಕಾರ ಇನ್ನೂ ಎಚ್ಚೆತ್ತುಕೊಳ್ಳದಿದ್ದರೆ ಗಂಭೀರ ಪರಿಣಾಮವನ್ನು ಎದುರಿಸಬೇಕಾಗುತ್ತದೆ. ನವೆಂಬರ್ 26ಕ್ಕೆ ಹೋರಾಟಕ್ಕೆ ಒಂದು ವರ್ಷ ತುಂಬುತ್ತದೆ. ಆಗ ದೇಶದ ಎಲ್ಲಾ ರಾಜ್ಯಗಳಿಂದ 5 ಕೋಟಿಗೂ ಹೆಚ್ಚು ರೈತರು ದೆಹಲಿ ಪ್ರವೇಶ ಮಾಡುತ್ತಾರೆ. ಸರ್ಕಾರದ ಯಾವುದೇ ಕುತಂತ್ರದ ಕಾರ್ಯತಂತ್ರಗಳಿಗೂ ನಾವು ಬಗ್ಗುವುದಿಲ್ಲ ಎಂದು ಎಚ್ಚರಿಸಿದರು.

    ಇದೇ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ನಾರಾಯಣ ರೆಡ್ಡಿ ಮಾತನಾಡಿ, ರೈತರು ಕರೆ ನೀಡಿರುವ ಭಾರತ್ ಬಂದ್ ವಿಫಲಗೊಳಿಸಲು ಸರ್ಕಾರ ಪೊಲೀಸ್ ಬಲದ ಮೂಲಕ ಯತ್ನಿಸುತ್ತಿದೆ. ಪೊಲೀಸರು ಕಾನೂನು ಪಾಲಕರಾಗದೇ ಮಂತ್ರಿಗಳ ಗುಲಾಮರ ರೀತಿ ನಡೆದುಕೊಳ್ಳುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ ಎಂದರು.

    ನೂರಕ್ಕೂ ಹೆಚ್ಚು ರೈತರನ್ನು ಪೊಲೀಸರು ಆಡುಗೋಡಿ ಪೊಲೀಸ್ ಮೈದಾನಕ್ಕೆ ಕರೆದೊಯ್ದಾಗ ಅಲ್ಲಿ ರೈತರು 1 ಗಂಟೆ ಕಾಲ ಬಸ್ಸಿನಿಂದ ಕೆಳಗೆ ಇಳಿಯದೆ ಪೊಲೀಸರ ಕಾನೂನುಬಾಹಿರ ವರ್ತನೆಯನ್ನ ಖಂಡಿಸಿದ್ದಾರೆ. 3 ಗಂಟೆ ನಂತರ ಬಂಧಿತ ರೈತರು, ರೈತ ಮಹಿಳೆಯರು, ಬೀದಿ ಬದಿ ವ್ಯಾಪಾರಿಗಳನ್ನು ಬಿಡುಗಡೆಗೊಳಿಸಿದರು. ಪ್ರತಿಭಟನೆಯಲ್ಲಿ ಅಂದಪ್ಪ ಕೊಳೂರ, ಬೆಂಗಳೂರು ನಗರಾಧ್ಯಕ್ಷೆ ಶಿವಮ್ಮ, ಚನ್ನರಾಯಪಟ್ಟಣದ ಪ್ರೇಮ, ಮೈಸೂರು ಜಿಲ್ಲೆಯ ನಾಗರಾಜ್, ಪ್ರಜಾ ಪರಿವರ್ತನಾ ವೇದಿಕೆಯ ಗೋವಿಂದರಾಜು ಹೆಸರಘಟ್ಟ, ಶಿವರುದ್ರಪ್ಪ ಇನ್ನು ಮುಂತಾದವರಿದ್ದರು.

     

  • ಮೋದಿಯನ್ನು ಟೀಕಿಸುತ್ತಿದ್ದ ಶಿವಸೇನೆ ಬಂದ್‍ಗೆ ಬೆಂಬಲ ಸೂಚಿಸಿ, ತಟಸ್ಥವಾಯ್ತು!

    ಮೋದಿಯನ್ನು ಟೀಕಿಸುತ್ತಿದ್ದ ಶಿವಸೇನೆ ಬಂದ್‍ಗೆ ಬೆಂಬಲ ಸೂಚಿಸಿ, ತಟಸ್ಥವಾಯ್ತು!

    ಮುಂಬೈ: ತೈಲ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಕರೆ ನೀಡಿದ್ದ ಭಾರತ್ ಬಂದ್‍ಗೆ ಬೆಂಬಲ ಸೂಚಿಸಿದ್ದ ಶಿವಸೇನೆಯು ಸೋಮವಾರದ ಬಂದ್‍ನಲ್ಲಿ ತಟಸ್ಥ ಧೋರಣೆಯನ್ನು ಅನುಸರಿಸಿದೆ.

    ಬಿಜೆಪಿ ಸರ್ಕಾರವನ್ನು ಟೀಕಿಸುತ್ತಿದ್ದ ಶಿವಸೇನೆ ಇದೀಗ ಬಂದ್ ವಿಚಾರಕ್ಕೆ ಸಂಬಂಧಿಸಿದಂತೆ ತಟಸ್ಥ ನಿಲುವು ತಳೆದಿರುವುದು ಕೂತುಹಲ ಕೆರಳಿಸಿದೆ. ಶಿವಸೇನೆಯ ಆಪ್ತ ಸಂಘಟನೆ ಮಹಾರಾಷ್ಟ್ರ ಏಕೀಕರಣ ಸಮಿತಿ ಬಂದ್ ಗೆ ಬೆಂಬಲ ನೀಡಿದ್ದರೂ ಸಹ ಶಿವಸೇನೆ ಮಾತ್ರ ಬಂದ್ ನಿಂದ ದೂರ ಉಳಿದಿದೆ.

    ಬಂದ್‍ಗೆ ಬೆಂಬಲ ಸೂಚಿಸುವಂತೆ ಕಾಂಗ್ರೆಸ್ ನೀಡಿದ್ದ ಮನವಿಯನ್ನು ಸ್ವೀಕರಿಸಿದ್ದಲ್ಲದೇ, ಬಂದ್‍ಗೆ ಸಂಪೂರ್ಣ ಬೆಂಬಲವಿದೆಯಂದು ಭಾನುವಾರ ಘೋಷಿಸಿತ್ತು. ಆದರೆ ಸೋಮವಾರ ನಡೆದ ಬಂದ್‍ನಲ್ಲಿ ತಟಸ್ಥ ಧೋರಣೆಯನ್ನು ಅನುಸರಿಸುವ ಮೂಲಕ ಬಂದ್‍ನಿಂದ ಹಿಂದೆ ಸರಿದಿದೆ. ಮಾಹಿತಿಗಳ ಪ್ರಕಾರ ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಸೇರಿದಂತೆ ತೈಲ ಉತ್ಪನ್ನಗಳನ್ನು ಜಿಎಸ್‍ಟಿ ವ್ಯಾಪ್ತಿಗೆ ತರುವ ನಿರ್ಣಯ ಕೈಗೊಂಡಿರುವ ಹಿನ್ನೆಲೆಯಲ್ಲಿ ಶಿವಸೇನೆ ಹಿಂದೆ ಸರಿದಿದೆ ಎನ್ನಲಾಗಿದೆ.

    ಈ ಕುರಿತು ಪ್ರತಿಕ್ರಿಯಿಸಿರುವ ಸೇನಾ ವಕ್ತಾರ ಹಾಗೂ ಸಂಸದ ಸಂಜಯ್ ರಾವತ್‍ರವರು, ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಜಿಎಸ್‍ಟಿ ವ್ಯಾಪ್ತಿಗೆ ಸೇರಿಸುವುದಕ್ಕೆ ಶಿವಸೇನೆಯ ಸಂಪೂರ್ಣ ಬೆಂಬಲವಿದೆ. ಜಿಎಸ್‍ಟಿಗೆ ಸೇರಿಸುವವರೆಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವ್ಯಾಟ್ ದರವನ್ನು ಕಡಿತಗೊಳಿಸಿ ಸಾರ್ವಜನಿಕರ ಮೇಲಿನ ಹೊರೆಯನ್ನು ತಗ್ಗಿಸಬೇಕು ಎಂದು ಹೇಳಿದ್ದಾರೆ.

    ಮಹಾರಾಷ್ಟ್ರದಾದ್ಯಂತ ಬಂದ್ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬಿಜೆಪಿ ಸರ್ಕಾರ ಆಡಳಿತದಲ್ಲಿರುವ ಬಹುತೇಕ ರಾಜ್ಯಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೇಂದ್ರದ ಜೊತೆ ರಾಜ್ಯ ಸರ್ಕಾರಕ್ಕೂ ಎಚ್ಚರಿಕೆ ಕೊಟ್ಟ ವಾಟಾಳ್ ನಾಗರಾಜ್

    ಕೇಂದ್ರದ ಜೊತೆ ರಾಜ್ಯ ಸರ್ಕಾರಕ್ಕೂ ಎಚ್ಚರಿಕೆ ಕೊಟ್ಟ ವಾಟಾಳ್ ನಾಗರಾಜ್

    ಬೆಂಗಳೂರು: ಭಾರತ್ ಬಂದ್ ಕೇಂದ್ರ ಸರ್ಕಾರಕ್ಕೆ ಮಾತ್ರವಲ್ಲದೇ ರಾಜ್ಯ ಸರ್ಕಾರಕ್ಕೂ ಅನ್ವಯಿಸುತ್ತದೆ ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.

    ತೈಲ ಬೆಲೆ ಏರಿಕೆ ವಿರೋಧಿಸಿ ಹಮ್ಮಿಕೊಂಡಿರುವ ಭಾರತ್ ಬಂದ್ ವೇಳೆ ಎಮ್ಮೆ ಮೇಲೆ ಬಂದು ವಿನೂತನವಾಗಿ ವಾಟಾಳ್ ನಾಗರಾಜ್ ಪ್ರತಿಭಟಿಸಿದರು. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಭಾರತ್ ಬಂದ್ ಕೇವಲ ಕೇಂದ್ರ ಸರ್ಕಾರಕ್ಕೆ ಮಾತ್ರ ಸೀಮಿತವಲ್ಲ, ಇದು ರಾಜ್ಯ ಸರ್ಕಾರಕ್ಕೂ ಅನ್ವಯಿಸುತ್ತದೆ. ಮೊದಲು ಪೆಟ್ರೋಲ್, ಡೀಸೆಲ್ ದರಗಳ ಮೇಲಿನ ಸೆಸ್ ದರವನ್ನು ಕಡಿಮೆ ಮಾಡಬೇಕು. ಒಂದು ವೇಳೆ ರಾಜ್ಯದಲ್ಲಿ ಬಸ್ ದರ ಏರಿಕೆ ಮಾಡಿದ್ದೇ ಆದರೆ, ನಿಮ್ಮ ವಿರುದ್ಧವು ಪ್ರತಿಭಟಿಸಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

    ತೈಲ ದರ ಹಾಗೂ ಅಡುಗೆ ಅನಿಲಗಳ ದರಗಳನ್ನು ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಕನ್ನಡಪರ ಸಂಘಟನೆಗಳು ಬಂದ್ ಮಾಡಲು ನಿರ್ಧಾರ ಮಾಡಿದ್ದೆವು. ಆದರೆ ಅಷ್ಟೋತ್ತಿಗೆ ಕಾಂಗ್ರೆಸ್ ಭಾರತ್ ಬಂದ್‍ಗೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದ 2 ಸಾವಿರ ಕನ್ನಡಪರ ಸಂಘಟನೆಗಳು ಕಾಂಗ್ರೆಸ್ ಕರೆ ನೀಡಿದ್ದ ಬಂದ್‍ಗೆ ಬೆಂಬಲ ನೀಡಿವೆ ಎಂದು ಹೇಳಿದರು.

    ಇಂದು ಎಮ್ಮೆ ಸವಾರಿ ಮಾಡುವ ಮೂಲಕ ಕೇಂದ್ರ ಸರ್ಕಾರ ತೈಲ ಏರಿಕೆ ನೀತಿಯನ್ನು ವಿರೋಧಿಸಿದ್ದೇವೆ. ಕೇಂದ್ರ ಪೆಟ್ರೋಲ್, ಡಿಸೇಲ್ ಹಾಗೂ ಅನಿಲ ದರಗಳಿಗೆ ವೈಜ್ಞಾನಿಕ ರೀತಿಯ ಬೆಲೆ ನಿಗದಿಮಾಡಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಕುಸಿದು ಬಿದ್ದಿದೆ. ಅವರದ್ದು ಪೈಸಾ ಸರ್ಕಾರ, ಇದೇ ರೀತಿ ಮುಂದುವರಿದರೆ ದೇಶದಲ್ಲಿ ದಂಗೆ ಏಳುತ್ತದೆ ಎಂದು ಎಚ್ಚರಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • 70 ವರ್ಷಗಳಲ್ಲಿ ಕುಸಿಯದಿರುವ ರೂಪಾಯಿ ಮೌಲ್ಯ ಮೋದಿ ಆಡಳಿತದಲ್ಲಿ ನೆಲಕಚ್ಚಿದೆ: ರಾಹುಲ್ ಗಾಂಧಿ

    70 ವರ್ಷಗಳಲ್ಲಿ ಕುಸಿಯದಿರುವ ರೂಪಾಯಿ ಮೌಲ್ಯ ಮೋದಿ ಆಡಳಿತದಲ್ಲಿ ನೆಲಕಚ್ಚಿದೆ: ರಾಹುಲ್ ಗಾಂಧಿ

    ನವದೆಹಲಿ: 70 ವರ್ಷಗಳಲ್ಲಿ ಕುಸಿಯದಿರುವ ರೂಪಾಯಿ ಮೌಲ್ಯ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದಲ್ಲಿ ನೆಲಕಚ್ಚಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಗಂಭೀರವಾಗಿ ಆರೋಪಿಸಿದ್ದಾರೆ.

    ದೆಹಲಿಯಲ್ಲಿ ನಡೆದ ಭಾರತ್ ಬಂದ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿಯವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿಕೊಂಡ ಬಳಿಕ, ಜನರಿಗೆ ಹಲವಾರು ಯೋಜನೆಗಳ ಕುರಿತು ಮಾತನ್ನು ಕೊಟ್ಟಿದ್ದರು. ಪ್ರಮುಖವಾಗಿ ಮಹಿಳೆಯರು, ಯುವಪೀಳಿಗೆ ಹಾಗೂ ರೈತರಿಗೆ ಹೆಚ್ಚಿನ ಭರಪೂರ ಭರವಸೆಯನ್ನು ನೀಡಿದ್ದರು. ತಮ್ಮ ಭಾಷಣಗಳಲ್ಲಿ ಪ್ರತಿ ಬಾರಿಯೂ ಕಳೆದ 70 ವರ್ಷಗಳಲ್ಲಿ ಆಗದಿರುವ ಬದಲಾವಣೆಯನ್ನು ನಾವು ಮಾಡುತ್ತೇನೆ ಎಂದು ಹೇಳುತ್ತಲೇ ಇದ್ದರು. ಆದರೆ ಅವರು ಇಂದು ಏನು ಮಾಡಿದ್ದಾರೆ, 70 ವರ್ಷಗಳಲ್ಲಿ ಕುಸಿಯದಿರುವ ರೂಪಾಯಿ ಮೌಲ್ಯ ಇವರ ಆಡಳಿತದಲ್ಲಿ ನೆಲಕಚ್ಚಿ ಹೋಗಿದೆ. ಪೆಟ್ರೋಲ್ ದರಗಳೂ ಸಹ ದಿನೇ ದಿನೇ ಗಗನಕ್ಕೇರುತ್ತಿವೆ. ಈಗಾಗಲೇ ಪೆಟ್ರೋಲ್ 80 ರೂಪಾಯಿ ದಾಟಿದ್ದು, ಡೀಸೆಲ್ ಸಹ 80 ರೂಪಾಯಿ ಸಮೀಪಕ್ಕೆ ಬಂದು ಕೂತಿದೆ ಎಂದು ತೀವ್ರವಾಗಿ ಕಿಡಿಕಾರಿದರು.

    ಮೋದಿಯವರು ಯಾವಾಗಲೂ ದೇಶದ ತುಂಬಾ ಓಡಾಡುತ್ತಾ, ಬಡಾಯಿ ಕೊಚ್ಚಿಕೊಳ್ಳುವುದರಲ್ಲೇ ತಮ್ಮ ಸಮಯ ಕಳೆಯುತ್ತಿದ್ದಾರೆ. ಇದರ ಬದಲು ಅಭಿವೃದ್ಧಿ ಕೆಲಸ ಬಗ್ಗೆ ಗಮನ ಹರಿಸಬಹುದಿತ್ತು.  ತಾವು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ  ಭಾರತೀಯರಿಗೆ ನೀಡಿದ್ದ ಭರವಸೆಗಳ ಪೈಕಿ ಒಂದನ್ನೂ ಈಡೇರಿಸಿಲ್ಲವೆಂದು ಗಂಭೀರವಾಗಿ ಆರೋಪಿಸಿದರು.

    ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದಲ್ಲಿಯೇ ದೇಶದಲ್ಲಿ ಅತ್ಯಾಚಾರಗಳು, ರೈತರ ಆತ್ಮಹತ್ಯೆಗಳು ಹಾಗೂ ನಿರುದ್ಯೋಗದ ಸಮಸ್ಯೆಗಳು ಹೆಚ್ಚಾಗಿ ಹೋಗಿವೆ. ಇವೆಲ್ಲದರ ಕುರಿತು ಅವರು ಮೌನವಹಿಸಿದ್ದಾರೆ. ಈ ಬಗ್ಗೆ ಜನಸಾಮಾನ್ಯರು ಪ್ರಶ್ನಿಸಿದರೆ, ಅದನ್ನು ಸಹ ಕೇಳಿಸಿಕೊಳ್ಳುವ ಸಮಯ ಅವರಿಗಿಲ್ಲ. ರಫೇಲ್ ಹಗರಣದ ಕುರಿತು ಪ್ರಶ್ನಿಸಿದರೆ ಅವರ ಬಳಿ ಉತ್ತರವೇ ಇಲ್ಲ. ಇದುವರೆಗೂ ನೋಟು ಅಮಾನ್ಯೀಕರಣದ ಬಗ್ಗೆ ನಿಖರವಾದ ಕಾರಣವನ್ನೇ ನೀಡುತ್ತಿಲ್ಲವೆಂದು ಆಕ್ರೋಶ ಹೊರಹಾಕಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಭಾರತ್ ಬಂದ್ ದುರುದ್ದೇಶದಿಂದ ಕೂಡಿದ್ದು, ಜನರನ್ನ ದಿಕ್ಕು ತಪ್ಪಿಸುವಂತೆ ಮಾಡ್ತಿದ್ದಾರೆ: ಬಿಎಸ್‍ವೈ

    ಭಾರತ್ ಬಂದ್ ದುರುದ್ದೇಶದಿಂದ ಕೂಡಿದ್ದು, ಜನರನ್ನ ದಿಕ್ಕು ತಪ್ಪಿಸುವಂತೆ ಮಾಡ್ತಿದ್ದಾರೆ: ಬಿಎಸ್‍ವೈ

    ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ಕುತಂತ್ರದಿಂದ ಬಂದ್ ಮಾಡಿಸಿ ಜನರ ದಿಕ್ಕನ್ನು ತಪ್ಪಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.

    ಡಾಲರ್ಸ್ ಕಾಲೋನಿಯ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಭಾರತ್ ಬಂದ್ ದುರುದ್ದೇಶದಿಂದ ಕೂಡಿದೆ. ತೈಲ ಬೆಲೆ ಏಕೆ ಹೆಚ್ಚಳ ಆಗಿದೆ ಅನ್ನುವುದು ಜಗತ್ತಿಗೆ ಗೊತ್ತು. ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯಿರುವ ಕರ್ನಾಟಕದಲ್ಲಿ ಬಂದ್ ಗೆ ವಿಶೇಷವಾಗಿ ಬೆಂಬಲ ನೀಡಿವೆ. ಈ ಸರ್ಕಾರವು ಕುತಂತ್ರ ಹಾಗೂ ಷಡ್ಯಂತ್ರ ರೂಪಿಸಿ ರಾಜ್ಯವನ್ನು ಸಂಪೂರ್ಣ ಬಂದ್ ಮಾಡಿದ್ದಾರೆ. ಅಲ್ಲದೇ ಶಾಲಾ-ಕಾಲೇಜುಗಳನ್ನು ಸಹ ಮುಚ್ಚಿಸಿದ್ದಾರೆ. ಇವರುಗಳು ಜನರ ದಿಕ್ಕನ್ನು ತಪ್ಪಿಸಲು ಬಂದ್ ಮಾಡಿಸುತ್ತಿದ್ದಾರೆ. ಬಂದ್ ಮಾಡುವುದಕ್ಕೆ ನಮ್ಮ ಅಭ್ಯವಂತರವೇನಿಲ್ಲ. ಆದರೆ ಬಂದ್‍ನ್ನು ಶಾಂತಿಯುತವಾಗಿ ಮಾಡಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ನಡೆಸಬೇಕು ಎಂದು ಹೇಳಿದರು.

    ಈ ವೇಳೇ ಡಿ.ಕೆ.ಸುರೇಶ್ ಹೇಳಿಕೆಗೆ ಏಕವಚನದಲ್ಲೇ ಪ್ರತಿಕ್ರಿಯಿಸಿದ ಅವರು, ಯಾವನ್ ರೀ ಆ ಸುರೇಶ್, ನಾನ್ಯಾಕೆ ಅವನಿಗೆ ಉತ್ತರ ಕೊಡಬೇಕು. ಅವನೇ ಇಷ್ಟೆಲ್ಲ ಮಾಡಿರೋದು. ಅವನೇ ಸೃಷ್ಟಿ ಮಾಡಿರುವ ಪತ್ರ ಅದು. ಒಂದು ವೇಳೆ ಅದು 2017ರ ಜನವರಿಯಲ್ಲಿ ಬರೆದ ಪತ್ರವಾಗಿದ್ದರೆ, ಇಷ್ಟು ದಿನ ಏನು ಮಾಡ್ತಾ ಇದ್ದರು. ಈವಾಗ ಆ ಪತ್ರವನ್ನು ಇಟ್ಟುಕೊಂಡು ಮಾತನಾಡುತ್ತಿದ್ದಾರಾ ಎಂದು ಪ್ರಶ್ನಿಸಿದರು. ಇದು ದುರುದ್ದೇಶದಿಂದ ನೀಡಿದ ಹೇಳಿಕೆಗೆಯಾಗಿದೆ. ಹೀಗಾಗಿ ಅವರ ಹೇಳಿಕೆಗೆ ಉತ್ತರ ಕೊಡುವ ಅವಶ್ಯಕತೆ ಇಲ್ಲ. ಇದು ಸಹ ನಕಲಿ ಪತ್ರ. ಈ ಹಿಂದೆಯೂ ಕೂಡ ಅವರು ಡ್ಯೂಪ್ಲಿಕೇಟ್ ಮಾಡಿ ಬಿಡುಗಡೆ ಮಾಡಿದ್ದರು. ಇಂತಹ ಬುದ್ಧಿ ಸುರೇಶ್ ಕುಮಾರ್ ರೂಢಿಯಾಗಿದೆ. ಸುಳ್ಳು ಆರೋಪಗಳನ್ನು ಮಾಡಿ ಜನರ ದಿಕ್ಕನ್ನು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ. ನನಗೂ ಡಿಕೆಶಿಗೆ ಏನು ಸಂಬಂಧ? ಹಾಗಾಗಿ ಅದಕ್ಕೂ ನಮಗೂ ಯಾವುದೇ ಸಂಬಂಧ ಇಲ್ಲವೆಂದು ತಿರುಗೇಟು ನೀಡಿದರು.

    ತೈಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರ ವಿರುದ್ಧ ಕಾಂಗ್ರೆಸ್ ಭಾರತ ಬಂದ್ ವಿಚಾರ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಡಾಲರ್ಸ್ ಕಾಲೋನಿ ನಿವಾಸಕ್ಕೆ ಹೆಚ್ಚಿನ ಭದ್ರತೆ ನೀಡಲಾಗಿದ್ದು, ದಿನನಿತ್ಯದ ಭದ್ರತೆಗಿಂತ ಸೋಮವಾರ 10ಕ್ಕೂ ಹೆಚ್ಚು ಪೊಲೀಸರು ನಿಯೋಜನೆಗೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಉಡುಪಿಯಲ್ಲಿ ಕಾಂಗ್ರೆಸ್-ಬಿಜೆಪಿ ಜಟಾಪಟಿ: ಪರಸ್ಪರ ತಳ್ಳಾಡಿದ ಉದ್ರಿಕ್ತರು

    ಉಡುಪಿಯಲ್ಲಿ ಕಾಂಗ್ರೆಸ್-ಬಿಜೆಪಿ ಜಟಾಪಟಿ: ಪರಸ್ಪರ ತಳ್ಳಾಡಿದ ಉದ್ರಿಕ್ತರು

    ಉಡುಪಿ: ಭಾರತ್ ಬಂದ್ ವಿಚಾರವಾಗಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಹಿಂದೂಪರ ಸಂಘಟನೆ ಕಾರ್ಯಕರ್ತರ ನಡುವೆ ಜಟಾಪಟಿಯಾಗಿರುವ ಘಟನೆ ಜಿಲ್ಲೆಯ ಕಡಿಯಾಳಿಯಲ್ಲಿ ವರದಿಯಾಗಿದೆ.

    ಭಾರತ್ ಬಂದ್ ಹಿನ್ನೆಲೆಯಲ್ಲಿ ಒತ್ತಾಯದ ಬಂದ್ ಮಾಡಿಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರು, ಪ್ರಧಾನಿ ನರೇಂದ್ರ ಮೋದಿಗೆ ಧಿಕ್ಕಾರ ಕೂಡಿ, ಅಂಗಡಿಗಳನ್ನು ಬಲವಂತವಾಗಿ ಬಂದ್ ಮಾಡಿಸುತ್ತಿದ್ದರು. ಈ ವೇಳೆ ಮಧ್ಯಪ್ರವೇಶಿಸಿದ ಬಿಜೆಪಿ ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಪ್ರಧಾನಿ ಮೋದಿಗೆ ಜೈಕಾರ ಕೂಗಿದರು. ಆಗ ಎರಡು ಗುಂಪುಗಳ ನಡುವೆ ಗಲಾಟೆ ಶುರುವಾಗಿದೆ.

    ಹಿಂದೂ ಕಾರ್ಯಕರ್ತೆಯೊಬ್ಬರ ನಡುವೆ ವಾಗ್ಯುದ್ಧ ಶುರುವಾಯ್ತು. ಪರಸ್ಪರ ತಳ್ಳಾಟ ಮಾಡಿಕೊಂಡ ಕಾರ್ಯಕರ್ತರನ್ನು ಬಿಡಿಸಲು ಪೊಲೀಸರು ಹರಸಾಹಸಪಟ್ಟರು. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಗಲಾಟೆ ಬಿಡಿಸುವಷ್ಟರಲ್ಲಿ ಹೈರಾಣಾಗಿ ಹೋದರು. ಎರಡು ಗುಂಪುಗಳ ಮನವೊಲಿಸುವಷ್ಟರಲ್ಲಿ ಖಾಕಿಧಾರಿಗಳು ಸುಸ್ತಾಗಿ ಹೋದರು.

    ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಹಿಂದೂ ಕಾರ್ಯಕತೆ, ಧಮ್ಕಿ ಹಾಕಿ, ರೌಡೀಸಂ ಮಾಡಿ ಅಂಗಡಿ ಮುಚ್ಚಿಸಲು ಕಾಂಗ್ರೆಸ್ ಕಾರ್ಯಕರ್ತರು ಮುಂದಾದಾಗ ನಾನು ಅಲ್ಲೇ ಇದ್ದೆ. ಇದು ಕಾನೂನು ಬಾಹಿರ ಮತ್ತು ಅನ್ಯಾಯದ ಚಟುವಟಿಕೆಯಾಗಿದೆ. ನಾವು ಮಾಡಿದ ಸ್ಥಳದಲ್ಲೇ ಖಂಡಿಸಿದ್ದೇನೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಂಗಳೂರಿನ ಹಲವೆಡೆ ಬಸ್ಸುಗಳ ಮೇಲೆ ಕಲ್ಲು ತೂರಾಟ

    ಮಂಗಳೂರಿನ ಹಲವೆಡೆ ಬಸ್ಸುಗಳ ಮೇಲೆ ಕಲ್ಲು ತೂರಾಟ

    ಮಂಗಳೂರು: ಭಾರತ್ ಬಂದ್ ನಡುವೆಯೂ ಸಂಚರಿಸುತ್ತಿದ್ದ ಖಾಸಗಿ ಬಸ್ಸುಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ, ದಾಂದಲೆ ನಡೆಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ವರದಿಯಾಗಿದೆ.

    ಭಾರತ್ ಬಂದ್ ನಡುವೆಯೂ ಸಂಚರಿಸುತ್ತಿದ್ದ ಖಾಸಗಿ ಬಸ್ಸುಗಳಿಗೆ ಕದ್ರಿ ಠಾಣೆಯ ಮುಂಭಾಗ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ ದಾಂದಲೆ ನಡೆಸಿ, ಜ್ಯೋತಿ ವೃತ್ತದಲ್ಲಿ ಟೈರ್ ಗೆ ಬೆಂಕಿ ಹೊತ್ತಿಸಿ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ. ಇದಲ್ಲದೇ ದಕ್ಷಿಣ ಕನ್ನಡ ಜಿಲ್ಲೆಯ ಕೋಡಾಜೆಯಲ್ಲಿನ ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ ಹಂಚಿ ರಸ್ತೆ ಸಂಚಾರಕ್ಕೆ ಅಡ್ಡಿ ಪಡಿಸಿದ್ದಾರೆ.

    ಮಂಗಳೂರಿನ ಕದ್ರಿ ಶಿವಭಾಗ್ ನಲ್ಲಿ ಬಂದ್ ನಡುವೆಯೂ ಸೇವೆ ನೀಡುತ್ತಿದ್ದ ಹೋಟೆಲ್ ಮೇಲೆ ಕಲ್ಲು ತೂರಾಟ ನಡೆದಿದ್ದು, ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಯೋರ್ವ ಮುಖಕ್ಕೆ ಹೆಲ್ಮೆಟ್ ಧರಿಸಿ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾನೆ. ಕಲ್ಲು ತೂರಾಟ ನಡೆಸಿದ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಭಾರತ್ ಬಂದ್‍ಗೆ ವರ್ತಕರು ಹಾಗೂ ಹಲವು ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದಲ್ಲದೆ, ಸೋಮವಾರದ ಬಂದ್ ದಿನ ಎಲ್ಲಾ ಅಂಗಡಿಗಳು 1 ಗಂಟೆ ಹೆಚ್ಚುವರಿಯಾಗಿ ಕಾರ್ಯನಿರ್ವಹಿಸುವುದರ ಬಗ್ಗೆ ಪೋಸ್ಟರ್ ಗಳನ್ನು ಹಾಕಿಕೊಂಡಿದ್ದರು. ಹೀಗಾಗಿ ಭದ್ರತೆ ಒದಗಿಸುವಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಿಕೊಂಡಿದ್ದರು.

    ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಬಂದೋಬಸ್ತ್ ಕಲ್ಪಿಸಿಕೊಡಲಾಗಿದೆ. ಅಲ್ಲದೇ ಖಾಸಗಿ ಸೇರಿದಂತೆ ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ಕಲ್ಲಡ್ಕದಲ್ಲಿ ಟೈರ್ ಹೊತ್ತಿಸಿ ಸಂಚಾರಕ್ಕೆ ಅಡ್ಡಿಪಡಿಸಲು ಯತ್ನಿಸಿದ್ದವರನ್ನು ಚದುರಿಸಿ, ಉರಿಯುತ್ತಿದ್ದ ಟೈರ್ ಬೆಂಕಿಯನ್ನು ಪೋಲಿಸರು ನಂದಿಸಿದ್ದಾರೆ. ಕುಲಶೇಖರ್ ಬಳಿಯು ಟೈರ್ ಗೆ ಬೆಂಕಿ ಹತ್ತಿಸುವ ಯತ್ನವನ್ನು ವಿಫಲಗೊಳಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಹೆದ್ದಾರಿ ಉದ್ದಕ್ಕೂ ಪೊಲೀಸ್ ಸಿಬ್ಬಂದಿ ನಿಯೋಜನೆಗೊಂಡಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಮ್ಮಿಶ್ರ ಸರ್ಕಾರ ಉರುಳಿಸಲು ಬಿಜೆಪಿಯಿಂದ ವಾಮಮಾರ್ಗ: ಪುಟ್ಟರಂಗಶೆಟ್ಟಿ

    ಸಮ್ಮಿಶ್ರ ಸರ್ಕಾರ ಉರುಳಿಸಲು ಬಿಜೆಪಿಯಿಂದ ವಾಮಮಾರ್ಗ: ಪುಟ್ಟರಂಗಶೆಟ್ಟಿ

    ಚಾಮರಾಜನಗರ: ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಬಿಜೆಪಿಯು ವಾಮಮಾರ್ಗ ಅನುಸರಿಸುತ್ತಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಆರೋಪಿಸಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಬಿಜೆಪಿ ಐಟಿ ಇಲಾಖೆ ದುರ್ಬಳಕೆ ಮಾಡಿಕೊಂಡು ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಹೆದರಿಸುವ ಕೆಲಸ ಮಾಡುತ್ತಿದೆ. ಬಿಜೆಪಿಯವರು ಅಧಿಕಾರ ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದವರ ಮೇಲೆ ದಾಳಿ ನಡೆಸುತ್ತಿದೆ. ಇದು ಬಿಜೆಪಿಯವರ ಸೇಡಿನ ರಾಜಕಾರಣವೇ ಹೊರತು ಬೇರೇನೂ ಅಲ್ಲ. ಎಲ್ಲದರ ಬಗ್ಗೆ ನಾಡಿನ ಜನತೆಗೆ ಗೊತ್ತಿದೆ. ಕೇಂದ್ರದ ಬಿಜೆಪಿ ಸರ್ಕಾರ ಏನೇ ಮಾಡಿದರೂ, ಅದನ್ನು ಎದುರಿಸುವ ಶಕ್ತಿ ಡಿಕೆಶಿ ಅವರಿಗಿದೆ ಎಂದು ಹೇಳಿದರು.

    ಡಿಕೆಶಿಯವರು ತೆರಿಗೆಯನ್ನು ಕಟ್ಟಿ ಕಾನೂನು ಮೂಲಕವೇ ಆಸ್ತಿ ಸಂಪಾದನೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದವರಿಗಿಂತಲೂ ಬಿಜೆಪಿಯವರು ಹೆಚ್ಚಿನ ಭ್ರಷ್ಟಾಚಾರ ಮಾಡಿದ್ದಾರೆ. ಆದರೆ ಅವರ ಮನೆಯ ಮೇಲೆ ದಾಳಿ ಮಾಡುವ ಕೆಲಸವನ್ನು ಜಾರಿ ನಿರ್ದೇಶನಾಲಯ (ಇಡಿ), ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ಮಾಡುತ್ತಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

    ಸಂಸದೆ ಶೋಭಾ ಕರಂದ್ಲಾಜೆಯವರ ತಾಕತ್ತಿದ್ದರೆ ಶಾಸಕರು ಹಾಗೂ ಸಚಿವರನ್ನು ಉಳಿಸಿಕೊಳ್ಳಿ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, ಈ ಹಿಂದೆ ಬಿಜೆಪಿಯವರು ಮಾಡಿದ ಆಪರೇಷನ್ ಕಮಲಕ್ಕೆ ತುತ್ತಾಗಿದ್ದ ಶಾಸಕರ ಪರಿಸ್ಥಿತಿ ಇವತ್ತು ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತು. ಯಾರಾದರೂ ರಾತ್ರಿ ಕಂಡ ಬಾವಿಗೆ ಹಗಲು ಬೀಳಲು ಸಾಧ್ಯವೇ. ಯಾರು ಕೂಡ ಬಿಜೆಪಿ ಪಕ್ಷ ಸೇರುವುದಿಲ್ಲ ಮತ್ತು ಕ್ಷೇತ್ರದ ಮತದಾರರಿಗೆ ಅನ್ಯಾಯ ಮಾಡುವುದಿಲ್ಲ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ:ಕಾಂಗ್ರೆಸ್ಸಿಗೆ ತಾಕತ್ತಿದ್ರೆ ಅವ್ರ ಶಾಸಕರು, ಸಚಿವರನ್ನ ಹಿಡಿದಿಟ್ಟುಕೊಳ್ಳಲಿ: ಶೋಭಾ ಕರಂದ್ಲಾಜೆ

    ಸೋಮವಾರದ ಭಾರತ್ ಬಂದ್ ಕುರಿತು ಮಾತನಾಡಿ, ಚಾಮರಾಜನಗರ ಜಿಲ್ಲೆಯಲ್ಲಿ ಬಂದ್ ಗೆ ಸಂಪೂರ್ಣ ಬೆಂಬಲ ನೀಡಿದ್ದು, ಈಗಾಗಲೇ ಬಂದ್ ಆಚರಿಸಲು ನಿರ್ಧರಿಸಲಾಗಿದೆ. ನಮಗೆ ಖಾಸಗಿ ಬಸ್ ಮಾಲೀಕರು, ಆಟೋ ಮಾಲೀಕರ ಸಂಘ, ಥಿಯೇಟರ್ ಮಾಲೀಕರ ಸಂಘ, ಪೆಟ್ರೋಲ್ ಬಂಕ್ ಮಾಲೀಕರ ಸಂಘ ಸೇರಿದಂತೆ ಹಲವು ಸಂಘ-ಸಂಸ್ಥೆಗಳು ಬೆಂಬಲ ನೀಡಿವೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಪೆಟ್ರೋಲಿಯಂ ಉತ್ಪನ್ನಗಳು ಏರಿಕೆಯಾಗುತ್ತಲೇ ಇದೆ. ತರಕಾರಿ, ಹಾಲು ಎಲ್ಲದರ ಬೆಲೆಗಳು ಗಗನಕ್ಕೇರಿದೆ. ಹೀಗಾಗಿ ಬಂದ್‍ಗೆ ಎಲ್ಲರೂ ಸಹಕಾರ ನೀಡಬೇಕೆಂದು ಮನವಿ ಮಾಡಿಕೊಂಡರು. ಇದನ್ನೂ ಓದಿ: ಕರ್ನಾಟಕದಲ್ಲಿ ಬಹುತೇಕ ಬಂದ್ ಖಚಿತ – ಬೆಳಗ್ಗೆ 6 ರಿಂದ ಮಧ್ಯಾಹ್ನ 3 ಗಂಟೆವರೆಗೆ ಸಾರಿಗೆ ಸ್ತಬ್ಧ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸೋಮವಾರದ ಭಾರತ್ ಬಂದ್‍ಗೆ ಸಂಪೂರ್ಣ ಬೆಂಬಲ: ಎಚ್‍ಡಿಡಿ

    ಸೋಮವಾರದ ಭಾರತ್ ಬಂದ್‍ಗೆ ಸಂಪೂರ್ಣ ಬೆಂಬಲ: ಎಚ್‍ಡಿಡಿ

    ಹಾಸನ: ತೈಲ ದರಗಳ ಏರಿಕೆ ಖಂಡಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ಸೋಮವಾರದ ಭಾರತ್ ಬಂದ್‍ಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಾಳೆ ಭಾರತ್ ಬಂದ್‍ಗೆ ದೇಶದಲ್ಲಿ ಬಿಜೆಪಿ ಹೊರತುಪಡಿಸಿ ಎಲ್ಲಾ ಪ್ರಾದೇಶಿಕ ಪಕ್ಷಗಳು ಬೆಂಬಲ ನೀಡುತ್ತಿದ್ದು, ನಮ್ಮ ಪಕ್ಷದ ಬೆಂಬಲವೂ ಇದೆ. ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರುತ್ತಿದೆ. ಪೆಟ್ರೋಲ್, ಡೀಸೆಲ್ ಬೆಲೆಗಳು ಯಾವುದೇ ಅಡೆ-ತಡೆ ಇಲ್ಲದೆ ಏರಿಕೆಯಾಗುತ್ತಿವೆ. ಇದರಿಂದಾಗ ಜನಸಾಮಾನ್ಯನ ಮೇಲೆ ಹೊರೆ ಹೆಚ್ಚುತ್ತಿದೆ. ಹೀಗಾಗಿ ನಾವು ಬಂದ್‍ಗೆ ಬೆಂಬಲ ನೀಡುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.

    ಸೋಮವಾರ ನಾನು ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ದೆಹಲಿಗೆ ಪ್ರಯಾಣ ಬೆಳೆಸಿ, ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗುತ್ತೇವೆ. ಭೇಟಿ ವೇಳೆ ನೆರೆ ಹಾವಳಿಯಿದಾಗಿ ಆಗಿರುವ ಹಾನಿ ಕುರಿತು ಅಂಕಿ-ಅಂಶಗಳನ್ನು ನೀಡಿ, ಪರಿಹಾರಕ್ಕಾಗಿ ಮನವಿ ಮಾಡಿಕೊಳ್ಳುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಬಹುತೇಕ ಬಂದ್ ಖಚಿತ – ಬೆಳಗ್ಗೆ 6 ರಿಂದ ಮಧ್ಯಾಹ್ನ 3 ಗಂಟೆವರೆಗೆ ಸಾರಿಗೆ ಸ್ತಬ್ಧ

    ಸೋಮವಾರದ ಭಾರತ್ ಬಂದ್‍ಗೆ ಜೆಡಿಎಸ್ ಸಂಪೂರ್ಣ ಬೆಂಬಲ ನೀಡಿದ್ದು, ಜಿಲ್ಲಾ ಕಾಂಗ್ರೆಸ್ ಹಾಗೂ ಲಾರಿ ಮಾಲೀಕರ ಸಂಘವೂ ಬೆಂಬಲ ನೀಡಿದೆ. ಹೀಗಾಗಿ ನಾಳೆ ಸಾರಿಗೆ ಬಸ್ ಹಾಗೂ ಲಾರಿ ಸಂಚಾರ ಸ್ಥಗಿತವಾಗಲಿದೆ. ಶಾಲಾ-ಕಾಲೇಜುಗಳೀಗೆ ರಜೆ ಘೋಷಣೆ ಇನ್ನೂ ನಿಗದಿಯಾಗಿಲ್ಲ. ನಾಳಿನ ಬಂದ್ ಸಂಪೂರ್ಣವಾಗಿ ಯಶಸ್ವಿಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸೆಪ್ಟೆಂಬರ್ 10ಕ್ಕೆ ಭಾರತ್ ಬಂದ್‍ಗೆ ಕಾಂಗ್ರೆಸ್ ಕರೆ

    ಸೆಪ್ಟೆಂಬರ್ 10ಕ್ಕೆ ಭಾರತ್ ಬಂದ್‍ಗೆ ಕಾಂಗ್ರೆಸ್ ಕರೆ

    ನವದೆಹಲಿ: ದಿನದಿಂದ ದಿನಕ್ಕೆ ತೈಲ ಬೆಲೆಗಳು ಗಗನಕ್ಕೇರುತ್ತಿದ್ದರೂ, ಕೇಂದ್ರ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ, ಹೀಗಾಗಿ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಇದೇ ಸೆಪ್ಟೆಂಬರ್ 10 ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಭಾರತ್ ಬಂದ್ ಗೆ ಕರೆ ನೀಡಿದೆ ಎಂದು ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೆವಾಲಾ ತಿಳಿಸಿದ್ದಾರೆ.

    ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಪೆಟ್ರೋಲ್, ಡಿಸೇಲ್ ಹಾಗೂ ಅಡುಗೆ ಅನಿಲಗಳ ಬೆಲೆಗಳಿಂದಾಗಿ ಜನಸಾಮಾನ್ಯ ಸುಟ್ಟು ಹೋಗುತ್ತಿದ್ದಾನೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೇಂದ್ರ ಸರ್ಕಾರಕ್ಕೆ ಇದರ ಬಿಸಿ ಮುಟ್ಟಿಸಲು ಇದೇ ಸೆಪ್ಟೆಂಬರ್ ದೇಶವ್ಯಾಪಿ ಪ್ರತಿಭಟನೆ ನಡೆಸಿ ಭಾರತ್ ಬಂದ್ ನಡೆಸಲಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ನೂರರ ಗಡಿಯತ್ತ ತೈಲ ಬೆಲೆ: ಪೆಟ್ರೋಲ್‍ನಲ್ಲಿ ಕೇಂದ್ರ, ರಾಜ್ಯ ಸರ್ಕಾರದ ಪಾಲು ಎಷ್ಟು? ಕೇಂದ್ರ ಹೇಳೋದು ಏನು?

    ಕೇಂದ್ರ ಸರ್ಕಾರ ತೈಲ ದರ ಏರಿಕೆ ಮಾಡುವ ಮೂಲಕ 11 ಲಕ್ಷ ಕೋಟಿ ರೂಪಾಯಿಯನ್ನು ಕೊಳ್ಳೆಹೊಡೆದಿದೆ. ಶೀಘ್ರವೇ ಕೇಂದ್ರ ತೆರಿಗೆ ಹಾಗೂ ಅಬಕಾರಿ ಸುಂಕವನ್ನು ರಾಜ್ಯಗಳಲ್ಲಿ ಕಡಿತಗೊಳಿಸಬೇಕು. ಹಾಗೆಯೇ ಪೆಟ್ರೋಲ್ ಹಾಗೂ ಡೀಸೆಲ್ ಗಳನ್ನು ಸಹ ಜಿಎಸ್‍ಟಿ ವ್ಯಾಪ್ತಿಗೆ ಒಳಪಡಿಸಬೇಕೆಂದು ಆಗ್ರಹಿಸುತ್ತೇವೆ. ಇದರಿಂದಾಗಿ ಜನಸಾಮಾನ್ಯರ ಮೇಲಿನ ಭಾರ ಸ್ವಲ್ಪವಾದರೂ ಕಡಿಮೆಯಾಗುತ್ತದೆ. ಹೀಗಾಗಿ ಭಾರತ್ ಬಂದ್‍ಗೆ ಎಲ್ಲಾ ವಿರೋಧ ಪಕ್ಷದ ನಾಯಕರು ಸಹ ಬೆಂಬಲ ನೀಡಬೇಕು. ಅಲ್ಲದೇ ಎಲ್ಲಾ ಎನ್‍ಜಿಓ ಹಾಗೂ ಜನರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಕೋರಿಕೊಂಡರು.

    ಈ ವೇಳೆ ಕಾಂಗ್ರೆಸ್ಸಿನ ಹಿರಿಯ ಮುಖಂಡರಾದ ಆಶೋಕ್ ಗೆಹ್ಲೋಟ್ ಮಾತನಾಡಿ, ನಾವು ಭಾರತ್ ಬಂದ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರನ್ನು ಎಚ್ಚರಿಸಬೇಕಾಗಿದೆ. ಇಂಧನ ಬೆಲೆಗಳು ಗಗನಕ್ಕೇರಿದ್ದರೂ ಅವರನ್ನು ಸುಮ್ಮನೆ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಭಾರತದಲ್ಲಿ ಪೆಟ್ರೋಲ್ ದರ 82 ರೂ. – ಪಾಕಿಸ್ತಾನ, ಅಮೆರಿಕ, ಶ್ರೀಲಂಕಾದಲ್ಲಿ ಎಷ್ಟು?

    ಭಾರತ್ ಬಂದ್ ಕುರಿತು ದೆಹಲಿಯಲ್ಲಿ ಪ್ರತಿಕ್ರಿಯಿಸಿರು ಕೆಪಿಸಿಸಿ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಪೆಟ್ರೋಲ್ ಹಾಗೂ ಡಿಸೇಲ್ ದರಗಳು ಗಗನಕ್ಕೆ ಏರಿಕೆಯಾಗುತ್ತಿದ್ದರೂ, ಪ್ರಧಾನಿ ನರೇಂದ್ರ ಮೋದಿ ಹೃದಯ ಇಲ್ಲದಂತೆ, ಕರುಣೆ ಇಲ್ಲದಂತೆ ವರ್ತಿಸುತ್ತಿದ್ದಾರೆ. ಹೀಗಾಗಿ ಪೆಟ್ರೋಲ್, ಡೀಸೆಲ್ ಬೆರೆ ಏರಿಕೆ ಖಂಡಿಸಿ ಇದೇ ಸೆಪ್ಟೆಂಬರ್ 10ಕ್ಕೆ ಕಾಂಗ್ರೆಸ್ ವತಿಯಿಂದ ರಾಷ್ಟ್ರವ್ಯಾಪಿ ಭಾರತ್ ಬಂದ್ ನಡೆಸಲು ತೀರ್ಮಾಸಿದ್ದೇವೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv