Tag: Bharath Bandh

  • ಇಂದು ಭಾರತ್ ಬಂದ್ – ಬೀದರ್‌ನಲ್ಲಿ ಸಾವಿರಾರು ಕಾರ್ಮಿಕರಿಂದ ಬೃಹತ್ ಪ್ರತಿಭಟನಾ ರ‍್ಯಾಲಿ

    ಇಂದು ಭಾರತ್ ಬಂದ್ – ಬೀದರ್‌ನಲ್ಲಿ ಸಾವಿರಾರು ಕಾರ್ಮಿಕರಿಂದ ಬೃಹತ್ ಪ್ರತಿಭಟನಾ ರ‍್ಯಾಲಿ

    ಬೀದರ್: ಕೇಂದ್ರದ ಕಾರ್ಮಿಕ-ರೈತ ವಿರೋಧಿ ಕ್ರಮಗಳು ಹಾಗೂ ಕಾರ್ಪೊರೇಟ್ ಪರ ನಿಲುವು ಖಂಡಿಸಿ ಬುಧವಾರ ಭಾರತ್ ಬಂದ್‌ಗೆ 10ಕ್ಕೂ ಹೆಚ್ಚು ಸಂಘಟನೆಗಳು ಕರೆ ನೀಡಿವೆ. ಈ ಹಿನ್ನೆಲೆ ಗಡಿಜಿಲ್ಲೆ ಬೀದರ್‌ನಲ್ಲಿ ಸಾವಿರಾರು ಕಾರ್ಮಿಕರು ಸೇರಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದ್ದಾರೆ.

    ನಗರದ ಅಂಬೇಡ್ಕರ್ ವೃತದಿಂದ ಡಿಸಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದ್ದು, ವಿವಿಧ ಚಾಲಕರು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಸಾವಿರಾರು ಕಾರ್ಮಿಕರು ಪ್ರತಿಭಟನಾ ರ‍್ಯಾಲಿಯಲ್ಲಿ ಭಾಗಿಯಾಗಿದ್ದಾರೆ. ಈ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.ಇದನ್ನೂ ಓದಿ: ಹೊಸ ಗೆಟಪ್‌ನಲ್ಲಿ ಶಿವಣ್ಣನ ಫಸ್ಟ್ ಲುಕ್ ರಿಲೀಸ್

    ಸಾವಿರಾರು ಕಾರ್ಮಿಕರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಡಿಸಿ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಿದ್ದಾರೆ. ಮಹಿಳಾ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದು, ಧರಣಿ ಬಳಿಕ ಡಿಸಿಗೆ ಮನವಿ ಸಲ್ಲಿಸಲಿದ್ದಾರೆ.

    ಬೇಡಿಕೆಗಳೇನು?
    * ನಾಲ್ಕು ಕಾರ್ಮಿಕ ಸಂಹಿತೆ ರದ್ದುಗೊಳಿಸಬೇಕು
    * ಕೇಂದ್ರ ಸರ್ಕಾರ ತಂದಿರುವ ನಾಲ್ಕು ಸಂಹಿತೆಗಳನ್ನು ತಿರಸ್ಕರಿಸಬೇಕು
    * ಕನಿಷ್ಠ ವೇತನ ಜಾರಿಗೊಳಿಸಬೇಕು
    * ಕೇಂದ್ರ ತಂದಿರುವ ನಿಯಮದಲ್ಲಿ ಸಂಘ ರಚಿಸುವ ಹಕ್ಕು ಕಸಿದುಕೊಳ್ಳಲಾಗಿದೆ
    * ಇದನ್ನು ರಾಜ್ಯ ಸರ್ಕಾರ ವಾಪಸ್ ಪಡೆಯಬೇಕು
    * ಹೊಸ ಸಂಘ ರಚಿಸಲು ಅನುಮತಿ ನೀಡಬೇಕು
    * ಕೆಲಸದ ಅವಧಿಯನ್ನು 12 ಗಂಟೆಯಿಂದ 8ಗಂಟೆಗೆ ಕಡಿತಗೊಳಿಸಬೇಕು
    * ಗುತ್ತಿಗೆ ನೌಕರಿ ರದ್ದುಗೊಳಿಸಿ ಖಾಯಂ ನೌಕರಿ ಜಾರಿಯಾಗಬೇಕು. ಇದನ್ನೂ ಓದಿ: ಡಿಕೆ ಬ್ರದರ್ಸ್ ಹೆಸ್ರಲ್ಲಿ ವಂಚನೆ ಕೇಸ್; ಸಿನಿಮಾ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಿದ್ದ `ಬಂಗಾರಿ’ ಗೌಡ!

  • ಭಾರತ್ ಬಂದ್ ನಡುವೆ ಕಾರ್ಖಾನೆಗೆ ಬೀಗ ಹಾಕಲು ರೈತರ ಯತ್ನ

    ಭಾರತ್ ಬಂದ್ ನಡುವೆ ಕಾರ್ಖಾನೆಗೆ ಬೀಗ ಹಾಕಲು ರೈತರ ಯತ್ನ

    – ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹ

    ಬೀದರ್: ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದ ರೈತರು ಏಕಾಏಕಿ ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಬೀಗ ಹಾಕಲು ಯತ್ನಿಸಿದ ಘಟನೆ ಜನವಾಡ ಬಳಿ ನಡೆದಿದೆ.

    ತಾಲೂಕಿನ ಜನವಾಡ ಗ್ರಾಮದ ಬಳಿ ಕೃಷಿ ಕಾಯ್ದೆ ವಿರೋಧಿಸಿ ರಾಜ್ಯ ಹೆದ್ದಾರಿ ತಡೆದು ಹಾಗೂ ತಮಟೆ ಬಾರಿಸುತ್ತಾ ರೈತರು ಪ್ರತಿಭಟನೆ ಮಾಡುತ್ತಿದ್ದರು. ಇದೇ ವೇಳೆ ಕಬ್ಬಿಗೆ ಬೆಂಬಲ ನೀಡುವಂತೆ ಆಗ್ರಹಿಸಿ ನೂರಾರು ರೈತರು, ದಿಢೀರ್ ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಿ ಬೀಗ ಹಾಕಲು ಯತ್ನಿಸಿದ್ದಾರೆ. ಈ ವೇಳೆ ರೈತರ ಕೈಯಲ್ಲಿದ್ದ ಬೀಗವನ್ನು ಸ್ಥಳದಲ್ಲಿದ್ದ ಪೆÇಲೀಸರು ಕಸಿದುಕೊಂಡು ಬೀಗ ಹಾಕುವುದನ್ನು ತಡೆದಿದ್ದಾರೆ. ಇದನ್ನೂ ಓದಿ: ಭಾರತ್ ಬಂದ್: 100ಕ್ಕೂ ಹೆಚ್ಚು ರೈತರ ಬಂಧನ, ಬಿಡುಗಡೆ

    ಮೂರು ಕೃಷಿ ಕಾಯ್ದೆಗಳು ರೈತರಿಗೆ ಮಾರಕವಾಗಿದ್ದು, ಈ ಕೂಡಲೇ ಪ್ರಧಾನಿ ನರೇಂದ್ರ ಮೋದಿ ಈ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಪ್ರತಿಭಟನಾನಿರತ ರೈತರು ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಕೆಡಿಪಿ ಸಭೆಯಲ್ಲಿ ಅಧಿಕಾರಿಗಳ ನಿದ್ರೆ – ಉಳಿದವರು ಮೊಬೈಲ್‍ನಲ್ಲಿ ಮಗ್ನ

    ನಂತರ ಕೃಷಿ ಕಾಯ್ದೆ ವಿರೋಧಿ ರೈತ ಪರ, ದಲಿತ ಪರ, ಕನ್ನಡ ಪರ ಹಾಗೂ ಕಾರ್ಮಿಕ ಸಂಘಟನೆಗಳು ನಗರದ ಅಂಬೇಡ್ಕರ್ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

  • ಭಾರತ್ ಬಂದ್ ದಿನ ಕರ್ನಾಟಕ ಬಂದ್‍ಗೆ ಕರೆ ಕೊಟ್ಟ ರೈತರು- ಯಾರ ಬೆಂಬಲವಿದೆ, ಯಾರದ್ದು ಇಲ್ಲ..?

    ಭಾರತ್ ಬಂದ್ ದಿನ ಕರ್ನಾಟಕ ಬಂದ್‍ಗೆ ಕರೆ ಕೊಟ್ಟ ರೈತರು- ಯಾರ ಬೆಂಬಲವಿದೆ, ಯಾರದ್ದು ಇಲ್ಲ..?

    ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ಹಾಗೂ ಬೆಲೆ ಏರಿಕೆ ಖಂಡಿಸಿ ಮತ್ತೆ ರೈತರು ರಣಕಹಳೆ ಮೊಳಗಿಸಲಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ ಭಾರತ್ ಬಂದ್ ಗೆ ಕರೆ ನೀಡಿದೆ. ಭಾರತ್ ಬಂದ್ ದಿನ ಕರ್ನಾಟಕ ಬಂದ್ ಗೆ ರೈತರು ಕರೆಕೊಟ್ಟಿದ್ದಾರೆ.

    ಹೌದು. ಸೋಮವಾರ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಗಳು ಭಾರತ್ ಬಂದ್ ಗೆ ಕರೆಕೊಟ್ಟಿದ್ದು ರಾಜ್ಯದಲ್ಲಿ ಕರ್ನಾಟಕ ಬಂದ್ ಮಾಡೋದಾಗಿ ರೈತ ಸಂಘಟನೆಗಳು ಹೇಳಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿರುವ ಕೋಡಿಹಳ್ಳಿ ಚಂದ್ರಶೇಖರ್ ರಾಜ್ಯದಲ್ಲಿ ಬಂದ್ ನಡೆಸುತ್ತೇವೆ ಎಲ್ಲರ ಬೆಂಬಲ ಕೋರುತ್ತೇವೆ. ಈಗಾಗಲೇ ದಲಿತ ಸಂಘ, ಕಾರ್ಮಿಕ ಸಂಘ ಕೆಲ ಆಟೋ ಸಂಘ ಕನ್ನಡ ಸಂಘಗಳು ಬೆಂಬಲ ಕೊಟ್ಟಿದೆ ಅಂದ್ರು.

    ರೈತ ಸಂಘದ ಪ್ಲಾನ್ ಏನು..?
    ಬೆಂಗಳೂರಿನ ಪ್ರಮುಖ ಹೆದ್ದಾರಿ ಸೇರಿದಂತೆ ರಾಜ್ಯದ್ಯಾಂತ ಹೆದ್ದಾರಿ ತಡೆ. ಬೆಂಗಳೂರಿನಲ್ಲಿ ಟೌನ್ ಹಾಲ್ ನಿಂದ ಮೈಸೂರು ಬ್ಯಾಂಕ್ ಸರ್ಕಲ್ ವರೆಗೆ ಬೃಹತ್ ರ‍್ಯಾಲಿ. ಒಟ್ಟು 700ಕ್ಕೂ ಹೆಚ್ಚು ಕ್ಯಾಂಟರ್ ವಾಹನದಲ್ಲಿ ನಗರದಲ್ಲಿ ರ‍್ಯಾಲಿ ನಡೆಸಲು ಪ್ಲಾನ್ ಮಾಡಿದ್ದಾರೆ. ಇದನ್ನೂ ಓದಿ: ಭಾರತ-ಅಮೆರಿಕ ಸಂಬಂಧ ವೃದ್ಧಿಗೆ ಬೀಜ ಬಿತ್ತಲಾಗಿದೆ: ಪ್ರಧಾನಿ ಮೋದಿ

    ಕುರುಬೂರು ಶಾಂತಕುಮಾರ್ ಬಣ ಬಂದ್ ದಿನ ಯಾವ ಮಾದರಿಯ ಹೋರಾಟ ನಡೆಸಬೇಕು ಎನ್ನುವ ಬಗ್ಗೆ ಇಂದು ಸಭೆ ನಡೆಸಿ ರೂಪುರೇಷೆ ಹಾಕೋದಾಗಿ ಹೇಳಿದ್ರು. ಕೊರೊನಾ ಕಾರಣದಿಂದ ರೈತರ ಪ್ರತಿಭಟನೆಗೆ ಸಂಘಟನೆಗಳಿಂದ ನಿರೀಕ್ಷಿತ ಬೆಂಬಲ ವ್ಯಕ್ತವಾಗಿಲ್ಲ. ಹೀಗಾಗಿ ಬಂದ್ ಗೆ ಬಹುತೇಕ ಸಂಘಟನೆಗಳು ಬೆಂಬಲ ಕೊಟ್ಟಿಲ್ಲ.

    ಎಪಿಎಂಸಿ ತರಕಾರಿ ಮಾರುಕಟ್ಟೆ ವರ್ತಕರ ಸಂಘ ಬಂದ್ ಗೆ ಬೆಂಬಲ ಕೊಟ್ಟಿದೆ. ಹೀಗಾಗಿ ಕಲಾಸಿಪಾಳ್ಯ, ಯಶವಂತ ಪುರ, ದಾಸನಪುರ ಮಾರ್ಕೆಟ್ ಬಂದ್ ಆಗುವ ಸಾಧ್ಯತೆ ಇದೆ. ಕೆಲವು ದಲಿತ ಹಾಗೂ ಕಾರ್ಮಿಕ ಸಂಘಟನೆಗಳು ಬಂದ್ ಗೆ ಬೆಂಬಲ ಕೊಟ್ಟಿದ್ದು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಕಾಂಗ್ರೆಸ್ ಕಿಸಾನ್ ಘಟಕದಿಂದ ಬೆಂಬಲ ಪ್ರತಿಭಟನೆ ಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ವಾಟಾಳ್ ನೇತೃತ್ವದ ಕನ್ನಡ ಒಕ್ಕೂಟದಿಂದಲೂ ಬೆಂಬಲ ಸಿಕ್ಕಿದೆ.

    ಆಟೋ, ಊಬರ್, ಓಲಾ ಸಂಘಟನೆಗಳಿಂದ ನೈತಿಕ ಬೆಂಬಲ ನೀಡಿವೆ. ಕೊರೊನಾ ಕಾರಣದಿಂದ ಬಂದ್ ದಿನ ವಾಹನ ಸ್ಥಗಿತಗೊಳಿಸಲ್ಲ. ಎಂದಿನಂತೆ ಸಂಚಾರ ವ್ಯವಸ್ಥೆ ಇರಲಿದೆ. ಸಾರಿಗೆ ಯೂನಿಯನ್ ಗಳು ಬಂದ್ ಗೆ ಬೆಂಬಲ ಕೊಟ್ಟಿಲ್ಲ. ರೈತರ ಪ್ರತಿಭಟನೆಗೆ ಸಾರಿಗೆ ನೌಕರರು ಪಾಲ್ಗೊಳ್ಳಲ್ಲ. ಬಸ್ ಸಂಚಾರ ಯಥಾ ಸ್ಥಿತಿ ಇರುತ್ತೆ. ಈ ಹಿನ್ನೆಲೆಯಲ್ಲಿ ದೂರದ ಊರುಗಳಿಗೂ ಬಸ್ ಸೇವೆ ಲಭ್ಯವಿರಲಿವೆ.

    ಮೆಟ್ರೋ ಸಂಚಾರದಲ್ಲಿ ಯಾವುದೇ ವ್ಯತ್ಯಯ ಇಲ್ಲ. ಹೋಟೆಲ್ ಗಳ ಬೆಂಬಲ ಇಲ್ಲ. ಯಾಕೆಂದರೆ ಕೊರೊನಾ ಕಾರಣದಿಂದ ಈಗಾಗಲೇ ನಷ್ಟದ ಹೊಡೆತ ತಿಂದಿದ್ದೇವೆ. ಹೀಗಾಗಿ ಯಾವ ಬಂದ್ ಗೂ ಬೆಂಬಲ ಕೊಡಲ್ಲ ಅನ್ನೋದು ಹೋಟೆಲ್ ಮಾಲೀಕರ ಸಂಘದ ಅಭಿಪ್ರಾಯವಾಗಿದೆ.

    ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಕೇವಲ ನೈತಿಕ ಬೆಂಬಲ ವ್ಯಕ್ತವಾಗಿದೆ. ಹೀಗಾಗಿ ಶಾಲಾ- ಕಾಲೇಜು ಎಂದಿನಂತೆ ತೆರೆಯಲಿದೆ. ಮಾಲ್ ಅಸೋಸಿಯೇಷನ್ ನವರು ಇಂದು ಅಂತಿಮ ತೀರ್ಮಾನ ಹೇಳೋದಾಗಿ ಹೇಳಿದ್ದಾರೆ. ಆದರೆ ಬಹುತೇಕ ಬೆಂಬಲ ಕೊಡದೇ ಇರಲು ತೀರ್ಮಾನ ಮಾಡಿದ್ದಾರೆ. ತುಂಬಾ ಕಾಲ ಬಂದ್ ಆಗಿದ್ದ ಮಾಲ್ ನಷ್ಟದ ಕಾರಣವೊಡ್ಡಿ ಬಂದ್ ದಿನ ಒಪನ್ ಮಾಡಲು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಬೀದಿ ಬದಿ ವ್ಯಾಪಾರ ಕೂಡ ಎಂದಿನಂತೆ ನಡೆಯಲಿದೆ. ಇತ್ತ ಕನ್ನಡ ಸಂಘಟನೆಗಳು ಇನ್ನು ಅಂತಿಮ ನಿರ್ಧಾರ ಪ್ರಕಟಿಸಿಲ್ಲ. ಪ್ರತಿಭಟನೆ ಗೆ ಬೆಂಬಲದ ಬಗ್ಗೆ ಕರವೇ ನಾರಾಯಣ ಗೌಡ ಹಾಗೂ ಪ್ರವೀಣ್ ಶೆಟ್ಟಿ ಬಣ ಇನ್ನು ತಮ್ಮ ಅಂತಿಮ ನಿರ್ಧಾರ ತಿಳಿಸಿಲ್ಲ. ಒಟ್ಟಾರೆ ಕೊರೋನಾ ಸಂದರ್ಭದಲ್ಲಿ ಬಂದ್ ಎಷ್ಟರಮಟ್ಟಿಗೆ ಸಫಲವಾಗುತ್ತೆ ಅನ್ನೋದನ್ನು ನೋಡಬೇಕಾಗಿದೆ.

  • ನಾಳೆ ಚಿಕ್ಕಬಳ್ಳಾಪುರ ಬಂದ್‍ಗೆ ಸಿಐಟಿಯು ಸಂಘಟನೆ ಕರೆ

    ನಾಳೆ ಚಿಕ್ಕಬಳ್ಳಾಪುರ ಬಂದ್‍ಗೆ ಸಿಐಟಿಯು ಸಂಘಟನೆ ಕರೆ

    ಚಿಕ್ಕಬಳ್ಳಾಪುರ: ದೇಶವ್ಯಾಪಿ ಕಾರ್ಮಿಕ ಸಂಘಟನೆಗಳಿಂದ ಮುಷ್ಕರ ಕರೆ ಹಿನ್ನಲೆಯಲ್ಲಿ ನಾಳೆ(ಬುಧವಾರ) ಚಿಕ್ಕಬಳ್ಳಾಪುರ ಜಿಲ್ಲಾ ಬಂದ್ ಗೆ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಸಂಘಟನೆ ಕರೆ ನೀಡಿದೆ.

    ಕನಿಷ್ಠ ವೇತನ, ಖಾತ್ರಿ ಮಾಸಿಕ ಪಿಂಚಣಿ, ಸಮಾನ ಕೆಲಸಕ್ಕೆ ಸಮಾನವೇತನ ಜಾರಿ ಮಾಡಿ ಗುತ್ತಿಗೆ ಪದ್ಧತಿ ರದ್ದತಿ, ಕಾರ್ಮಿಕರ ವಿವಿಧ ಬೇಡಿಕೆಗಳನ್ನ ಈಡೇರಿಕೆಗಾಗಿ ನಾಳೆ ಬಂದ್ ಗೆ ಕರೆ ನೀಡಲಾಗಿದೆ. ಇದಕ್ಕೆ ಸಾರ್ವಜನಿಕರು ಸಹಕಾರ ನೀಡುವಂತೆ ಸಿಪಿಐಎಂ ಪಕ್ಷದ ಮುಖಂಡ ಮುನಿವೆಂಕಟಪ್ಪ ಮನವಿ ಮಾಡಿಕೊಂಡಿದ್ದಾರೆ.

    ಜಿಲ್ಲೆಯ ಎಲ್ಲಾ ಆರು ತಾಲೂಕುಗಳಲ್ಲಿ ಬಂದ್ ಗೆ ಕರೆ ನೀಡಲಾಗಿದೆ. ಆದರೆ ಬಂದ್ ಗೆ ಕರ್ನಾಟಕ ಪ್ರಾಂತ ರೈತ ಸಂಘ, ಜನವಾದಿ ಮಹಿಳಾ ಸಂಘಟನೆ ಸೇರಿದಂತೆ ಭಾರತ ಕಮ್ಯೂನಿಸ್ಟ್ ಪಕ್ಷವಷ್ಟೇ ಬೆಂಬಲ ನೀಡಿರುವುದರಿಂದ ಬಂದ್ ಯಶಸ್ವಿಯಾಗುತ್ತಾ ಇಲ್ವಾ ಎಂಬುದನ್ನು ಕಾದು ನೋಡಬೇಕಿದೆ.

  • ಪ್ರತಿಭಟನಾಕಾರರಿಗೆ ದಾವಣಗೆರೆ ಡಿಸಿ ಖಡಕ್ ಎಚ್ಚರಿಕೆ

    ಪ್ರತಿಭಟನಾಕಾರರಿಗೆ ದಾವಣಗೆರೆ ಡಿಸಿ ಖಡಕ್ ಎಚ್ಚರಿಕೆ

    – ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿಲ್ಲ

    ದಾವಣಗೆರೆ: ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಒಂದು ದಿನದ ಮುಷ್ಕರ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರಿಗೆ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಖಡತ್ ಎಚ್ಚರಿಕೆ ನೀಡಿದ್ದಾರೆ.

    ಮುಷ್ಕರದ ಬಿಗಿ ಭದ್ರತೆಯ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಪ್ರತಿಭಟನೆ ಸಾಂವಿಧಾನಿಕ ಹಕ್ಕು, ಅದನ್ನು ಶಾಂತಿಯುತವಾಗಿ ನಡೆಸಬೇಕು. ಅದು ಬಿಟ್ಟು ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಏನಾದರೂ ನಷ್ಟವಾದರೆ ಹಾಗೂ ಅಹಿತಕರ ಘಟನೆ ನಡೆದರೆ ಅಂಥವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

    ಈಗಾಗಲೇ ಎಲ್ಲಾ ಕಾರ್ಮಿಕ ಮುಖಂಡರ ಜೊತೆ ಚರ್ಚಿಸಲಾಗಿದೆ. ಜಯದೇವ ಸರ್ಕಲ್ ನಿಂದ ನಗರದ ಪ್ರಮುಖ ರಸ್ತೆಗಳಲ್ಲಿ ರ್ಯಾಲಿ ಹಮ್ಮಿಕೊಂಡು ಗಡಿಯಾರ ಕಂಬದ ಬಳಿ ಸಮಾವೇಶ ಹಮ್ಮಿಕೊಂಡಿದ್ದಾರೆ. ಇದೆಲ್ಲ ಶಾಂತಿಯುತವಾಗಿ ನಡೆಸಲು ಸೂಚಿಸಲಾಗಿದೆ. ಪೊಲೀಸ್ ಬಿಗಿ ಭದ್ರತೆಯನ್ನು ನೀಡಲಾಗಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ಸಾರಿಗೆಯಲ್ಲಿ ಕೂಡ ಯಥಾಸ್ಥಿತಿ ಇರುತ್ತದೆ ಎಂದು ಡಿಸಿ ಸ್ಪಷ್ಟಪಡಿಸಿದರು.

  • ಕೈಯಲ್ಲಿ ಹೆಲ್ಮೆಟ್ ಇಟ್ಕೊಂಡು ರೋಡಿಗಿಳಿದ ಬಿಎಂಟಿಸಿ ಬಸ್ ಪ್ರಯಾಣಿಕರು..!

    ಕೈಯಲ್ಲಿ ಹೆಲ್ಮೆಟ್ ಇಟ್ಕೊಂಡು ರೋಡಿಗಿಳಿದ ಬಿಎಂಟಿಸಿ ಬಸ್ ಪ್ರಯಾಣಿಕರು..!

    ಬೆಂಗಳೂರು: ಭಾರತ್ ಬಂದ್ ಇರುವ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್ಸನ್ನು ಅವಲಂಬಿಸಿರುವ ಪ್ರಯಾಣಿಕರು ತಮ್ಮ ಕೈಯಲ್ಲಿ ಹೆಲ್ಮೆಟ್ ಹಿಡಿದುಕೊಂಡು ಸಿಲಿಕಾನ್ ಸಿಟಿಯಲ್ಲಿ ರೋಡ್‍ಗಿಳಿದಿದ್ದಾರೆ.

    ಚಾರ್ಟೆಡ್ ಅಕೌಂಟೆಂಟ್‍ವೊಬ್ಬರು ಹೆಲ್ಮೆಟ್ ಹಿಡಿದುಕೊಂಡು ರೋಡಿನಲ್ಲಿ ನಿಂತಿದ್ದಾರೆ. ನಾನು ಬೆಳಗ್ಗೆ ಏಳು ಗಂಟೆಗೆ ಜಾಲಹಳ್ಳಿ ಮನೆಯಿಂದ ಹೊರಟೆ. ಅಲ್ಲದೇ ಬಂದ್ ದಿನ ಬಸ್ ವ್ಯತ್ಯಯವಾಗಬಹುದು ಅಂತಾ ಕೈಯಲ್ಲಿ ಒಂದು ಹೆಲ್ಮೆಟ್ ತೆಗೆದುಕೊಂಡು ಬಂದೆ. ಆದರೆ ಪಾಪ ಅಲ್ಲಲ್ಲಿ ಸಾಕಷ್ಟು ಜನ ದ್ವಿಚಕ್ರ ವಾಹನದವರು ಡ್ರಾಪ್ ಕೊಡುತ್ತಿದ್ದಾರೆ. ಈಗ ನಂಗೆ ಬಸ್ ಸಿಗ್ತಿಲ್ಲ, ದ್ವಿಚಕ್ರ ವಾಹನವೂ ಕೂಡ ಸಿಗ್ತಿಲ್ಲ. ಜಿಎಸ್‍ಟಿ ಕೆಲಸ ಎಲ್ಲಾ ಮುಗಿಸಬೇಕಾಗಿದೆ. ಈ ಬಂದ್ ನಿಂದ ಯಾರಿಗೆ ಲಾಭ ಎಂದು ಕಿಡಿಕಾರಿದ್ದಾರೆ.

    ಮಂಗಳವಾರದ ಮುಷ್ಕರಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆಯಲ್ಲಿ ಇಂದು ಬಸ್‍ಗಳನ್ನು ರಸ್ತೆಗಿಳಿಸಲು ಬಿಎಂಟಿಸಿ, ಕೆಎಸ್‍ಆರ್ ಟಿಸಿ ನಿರ್ಧರಿಸಿತ್ತು. ಆದರೆ ಕೆಲ ಬಸ್‍ಗಳ ಮೇಲೆ ಕಲ್ಲು ತೂರಾಟ ನಡೆದಿದ್ದು, ಹೀಗಾಗಿ ಬಹುತೇಕ ಬಸ್‍ಗಳು ಸಂಚಾರವನ್ನು ಸ್ಥಗಿತಗೊಳಿಸಿವೆ. ಇದರಿಂದಾಗಿ ಶಾಲಾ ವಿದ್ಯಾರ್ಥಿಗಳು ಬಸ್‍ಗಳಿಲ್ಲದೆ ಪರದಾಟ ನಡೆಸುತ್ತಿದ್ದಾರೆ.

    ಶಾಲಾ- ಕಾಲೇಜಿಗೆ ರಜೆ ಘೋಷಣೆ ಮಾಡದೇ ಇರುವುದರಿಂದ ಬೆಳಗ್ಗೆ ಬಸ್ ಇತ್ತು ಎಂದು ವಿದ್ಯಾರ್ಥಿಗಳು ಕಾಲೇಜ್ ಗೆ ಬಂದಿದ್ದರು. ಆದರೆ ಈಗ ಕಾಲೇಜು ರಜೆ ಘೋಷಣೆ ಮಾಡಿದೆ. ಹಾಗಾಗಿ ವಿದ್ಯಾರ್ಥಿಗಳು ಮನೆಗೆ ವಾಪಾಸ್ ಹೋಗುವುದಕ್ಕೆ ಬಸ್ ಇಲ್ಲದೆನಿಲ್ದಾಣದಲ್ಲಿಯೇ ಕಾಲ ಕಳೆಯುತ್ತಿದ್ದಾರೆ.

    https://www.youtube.com/watch?v=Boi_fgZKdzI

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮದ್ಯಪ್ರಿಯರಿಗಿಲ್ಲ ಬಂದ್ ಬಿಸಿ- ಬೆಳ್ಳಂಬೆಳಗ್ಗೆ ಬಾರ್​ಗೆ ಮಹಿಳೆ ಎಂಟ್ರಿ

    ಮದ್ಯಪ್ರಿಯರಿಗಿಲ್ಲ ಬಂದ್ ಬಿಸಿ- ಬೆಳ್ಳಂಬೆಳಗ್ಗೆ ಬಾರ್​ಗೆ ಮಹಿಳೆ ಎಂಟ್ರಿ

    – ಬಂದ್ ಆದ್ರೂ ಕೊಪ್ಪಳದಲ್ಲಿ ಬಾರ್ ಓಪನ್

    ಕೊಪ್ಪಳ: ಎರಡು ದಿನ ಕಾರ್ಮಿಕ ಮುಷ್ಕರ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಭಾರತ್ ಬಂದ್ ಘೋಷಣೆಯಾಗಿದೆ. ಆದರೆ ಕೊಪ್ಪಳದಲ್ಲಿ ಬೆಳ್ಳಂಬೆಳ್ಳಗೆ ಬಾರ್ ಓಪನ್ ಆಗಿದ್ದು, ಮದ್ಯ ಪ್ರಿಯರು ಫುಲ್ ಖುಷಿಯಾಗಿದ್ದಾರೆ.

    ಇಂದು ಬಂದ್ ಇದ್ದರೂ ಕೂಡ ಬಾರ್ ಮಾಲೀಕರು ಬೆಳ್ಳಂಬೆಳ್ಳಗೆ ತಮ್ಮ ಅಂಗಡಿಯನ್ನು ಓಪನ್ ಮಾಡಿದ್ದಾರೆ. ಹಾಗಾಗಿ ಬೆಳ್ಳಂಬೆಳ್ಳಗೆ ಮದ್ಯ ಪ್ರಿಯರು ಬಾರ್ ಮುಂದೆ ಹಾಜರಾಗಿದ್ದಾರೆ. ಬಾರ್ ಓಪನ್ ಆಗುತ್ತಿದ್ದಂತೆಯೇ ಮಹಿಳೆಯೊಬ್ಬರು ಎಣ್ಣೆ ಹೊಡೆಯಲು ಬಂದಿದ್ದು, ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.

    ಭಾರತ್ ಬಂದ್ ದಿನ ಕೂಡ ಬಾರ್ ಓಪನ್ ಇರುವುದು ಎಲ್ಲಾ ಕುಡುಕರಿಗೂ ಖುಷಿ ತಂದಿದೆ. ಎಲ್ಲರೂ ಬಾರ್ ಮುಂದೆ ಮದ್ಯಪಾನ ಮಾಡಿ ಖುಷಿಪಡುತ್ತಿದ್ದಾರೆ.

    ಭಾರತ್ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು, ಬೆಂಗಳೂರು ಗ್ರಾ., ಮಂಡ್ಯ, ಮೈಸೂರು, ಕೋಲಾರ, ಚಾಮರಾಜನಗರ, ಬಳ್ಳಾರಿ, ಧಾರವಾಡ, ಉತ್ತರ ಕನ್ನಡ, ತುಮಕೂರು, ರಾಯಚೂರು, ದಾವಣಗೆರೆ, ರಾಮನಗರ, ಬೆಳಗಾವಿ, ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ, ಬಾಗಲಕೋಟೆ, ಬೀದರ್, ಕಲಬುರಗಿ, ಗದಗ, ಚಿಕ್ಕಬಳ್ಳಾಪುರ, ಕೊಪ್ಪಳ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

    ಮಡಿಕೇರಿ, ಚಿಕ್ಕಮಗಳೂರು, ವಿಜಯಪುರ, ಹಾವೇರಿ, ಹಾಸನ, ಯಾದಗಿರಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಬಂದ್‍ಗೆ ಈವರೆಗೆ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ. ಹೀಗಾಗಿ ಭಾರತ್ ಬಂದ್ ಗೆ ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ‘ಅಕ್ಕಿ ಉದ್ದು ನೆನೆಸಿಯಾಗಿದೆ, ತರಕಾರಿ ಕಟ್ ಆಗಿದೆ, ಬಂದ್ ಮಾಡ್ಲಿಕೆ ಹೋಟೆಲ್ ಇವರ …..?’

    ‘ಅಕ್ಕಿ ಉದ್ದು ನೆನೆಸಿಯಾಗಿದೆ, ತರಕಾರಿ ಕಟ್ ಆಗಿದೆ, ಬಂದ್ ಮಾಡ್ಲಿಕೆ ಹೋಟೆಲ್ ಇವರ …..?’

    – ಉಡುಪಿಯಲ್ಲಿ ಹೋಟೆಲ್ ಮಾಲೀಕ ಗರಂ

    ಉಡುಪಿ: ಎರಡು ದಿನಗಳ ಭಾರತ್ ಬಂದ್ ಗೆ ಉಡುಪಿಯಲ್ಲಿ ಸಾರ್ವಜನಿಕರು ಅಸಮಾಧಾನ ವ್ಯಕ್ತ ಮಾಡಿದ್ದಾರೆ. ಬಂದ್ ಮಾಡಿ ಅಂತ ಯಾರೂ ಹೇಳಿಲ್ಲ. ಇಷ್ಟಕ್ಕೂ ಬಂದ್ ಯಾಕೆ ಮಾಡ್ಬೇಕು ಅಂತ ಪ್ರಶ್ನೆ ಮಾಡಿದ್ದಾರೆ.

    ಬ್ರಹ್ಮಗಿರಿಯ ದುರ್ಗಾ ಹೋಟೆಲ್ ಮಾಲೀಕ ದೇವು ಪಬ್ಲಿಕ್ ಟಿವಿ ಜೊತೆ ಮಾತನಾಡಿ, ದಿನಾ ಬಂದ್ ಮಾಡಿದ್ರೆ ಖರ್ಚಿಗೆ ಹಣ ಯಾರು ಇವರು ಕೊಡ್ತಾರಾ? ಜನಕ್ಕೆ ಇದ್ರಿಂದ ಕಷ್ಟ ಅಲ್ವಾ? ಹೋಟೆಲ್ ಬಂದ್ ಆದ್ರೆ ಎಲ್ಲರೂ ಮನೆಯಿಂದ ಬುತ್ತಿ ತರೋಕೆ ಆಗುತ್ತಾ? ನಾವು ನಾಳೆಗೆ ಉದ್ದು ಅಕ್ಕಿ ನೆನೆಸಿಯಾಗಿದೆ. ಬನ್ಸ್ ಗೆ ಹಿಟ್ಟು ಕಲಸಿಯಾಗಿದೆ. ಇದನ್ನು ಏನ್ ಮಾಡೋದು ಎಂದು ಕೇಳಿದ್ದಾರೆ. ಒತ್ತಾಯಪೂರ್ವಕ ಬಂದ್ ಮಾಡೋಕೆ ಹೋಟೆಲ್ ಇವರ ಅಪ್ಪನದ್ದಾ ಎಂದು ಅವರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

    ಆಟೋ ರಿಕ್ಷಾ ಚಾಲಕರು, ದಿನಸಿ- ತರಕಾರಿ ಅಂಗಡಿ ಮಾಲೀಕರು ಎರಡು ದಿನ ಬಂದ್ ಎಂದು ಹೇಳಿದ ಕೂಡಲೇ ಮೂಗು ಮುರಿಯುತ್ತಿದ್ದಾರೆ. ಬಂದ್ ಮಾಡಿ ಅಂತ ನಮಗೆ ಯಾರೂ ಹೇಳಿಲ್ಲ. ಬಸ್ಸಲ್ಲಿ ಬೋರ್ಡ್ ಅಂಟಿಸಿರೋದನ್ನು ನೋಡಿದ್ದೇವೆ ಎಂದು ಹೇಳಿದ್ದಾರೆ.

    ಆಟೋ, ಟೆಂಪೋ ಮಾಲಕರು, ಚಾಲಕರು ಬಂದ್ ಮಾಡ್ಬೇಕಾ ಬೇಡ್ವಾ ಅನ್ನೋ ಗೊಂದಲದಲ್ಲಿದ್ದಾರೆ. ಶಾಲೆಯಿಂದ ಮನೆಗೆ ಹೋಗುವ ವಿದ್ಯಾರ್ಥಿಗಳು ನಾಳೆ ಮನೆಯಿಂದ ಹೊರಗೆ ಬರ್ಬೇಕಾ ಬೇಡ್ವಾ ಅನ್ನುವ ಆತಂಕದಲ್ಲಿದ್ದಾರೆ.

    ಬಸ್‍ಗಳು ರಸ್ತೆಗಿಳಿಯಲ್ಲ:
    ಕಾರ್ಮಿಕ ಸಂಘಟನೆಗಳು ಕರೆ ಕೊಟ್ಟಿರುವ ಭಾರತ್ ಬಂದ್‍ಗೆ ಉಡುಪಿ ಜಿಲ್ಲೆಯಲ್ಲಿ ಬೆಂಬಲ ವ್ಯಕ್ತವಾಗಿದೆ. ಜಿಲ್ಲೆಯಲ್ಲಿ ಐದು ಬಿಜೆಪಿ ಶಾಸಕರಿದ್ದರೂ, ಕೇಂದ್ರದ ಕಾರ್ಮಿಕ ನೀತಿ ವಿಚಾರದಲ್ಲಿ ಕಾರ್ಮಿಕರು ಬಂದ್ ಮಾಡಲಿದ್ದಾರೆ. ಖಾಸಗಿ ಬಸ್ ಚಾಲಕರು, ನಿರ್ವಾಹಕರು ಬಂದ್‍ಗೆ ಬೆಂಬಲ ಕೊಟ್ಟಿದ್ದಾರೆ. ಖಾಸಗಿ ಬಸ್ ಮಾಲಕರು ಬಂದ್ ಮಾಡಬಾರದೆಂದು ಮನವೊಲಿಸುತ್ತಿದ್ದರೂ, ಬಸ್ ಗಳು ರಸ್ತೆಗೆ ಇಳಿಯಲ್ಲ. ಸರ್ಕಾರಿ ಶಾಲಾ ಕಾಲೇಜು ರಜೆ ಬಗ್ಗೆ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಈವರೆಗೆ ನಿರ್ಧಾರ ತೆಗೆದುಕೊಂಡಿಲ್ಲ.

    ಟ್ಯಾಕ್ಸಿಮೆನ್ ಅಸೋಸಿಯೇಷನ್ ಬಂದ್ ಮಾಡದಿರಲು ಸದ್ಯ ನಿರ್ಧರಿಸಿದ್ದಾರೆ. ಉಡುಪಿ ಜಿಲ್ಲೆಯ ಹೋಟೆಲ್-ಬಾರ್ ಅಸೋಸಿಯೇಶನ್ ಹೋರಾಟಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಮಾಡಿದ್ದಾರೆ. ಆದ್ರೆ ಬಂದ್ ಮಾಡಲ್ಲ ಅಂತ ಹೇಳಿದ್ದಾರೆ. ರಾಜ್ಯ ಸಂಘ ಬೆಂಗಳೂರಲ್ಲಿ ನಿರ್ಧಾರ ಮಾಡಿದ್ದನ್ನು ಇಲ್ಲಿ ಅನುಸರಿಸುತ್ತಾರಂತೆ ಹೋಟೆಲ್ ಮಾಲೀಕರು ಹೇಳುತ್ತಾರೆ.

    ಕೆಎಸ್‍ಆರ್‍ಟಿಸಿ ಬಸ್‍ಗಳು ಸ್ವಯಂಪ್ರೇರಿತ ಬಂದ್ ಇಲ್ಲ ಅನ್ನೋ ಮಾಹಿತಿ ಇದೆ. ಖಾಸಗಿ ಬಸ್ ಕಾರ್ಮಿಕರು ಬಂದ್ ಒತ್ತಾಯ ಮಾಡಿ ಬಸ್ ಅಡ್ಡ ಹಾಕಿ ಗಲಾಟೆ ಮಾಡಿದರೆ ಬಂದ್ ಆಗುತ್ತದೆ. ಕೆಎಸ್‍ಆರ್‍ಟಿಸಿ ಚಾಲಕ ನಿರ್ವಾಹಕರು ಸೇವೆಗೆ ಬರದಿದ್ದರೆ ಬಸ್ ಓಡಲ್ಲ.

    ಮೆಡಿಕಲ್ ಆಸ್ಪತ್ರೆ ಓಪನ್ ಇರುತ್ತದೆ. ಉಡುಪಿಯಲ್ಲಿ ಚಿತ್ರಮಂದಿರ ಬಂದ್ ಇರುವುದಿಲ್ಲ. ಕಮ್ಯೂನಿಸ್ಟ್ ಬೆಂಬಲಿತ ಆಟೋರಿಕ್ಷಾಗಳು ಓಡಲ್ಲ. ಬಿಜೆಪಿ ಬೆಂಬಲಿತ ಯೂನಿಯನ್ ಆಟೋಗಳು ಬಾಡಿಗೆ ಮಾಡುತ್ತದೆ. ಮಂಗಳವಾರ ಶುಭ ಕಾರ್ಯ ಇಲ್ಲ. ಮದುವೆಗಳು ಇರುವುದಿಲ್ಲ.

    ಒಟ್ಟಿನಲ್ಲಿ ಕರಾವಳಿ ಜಿಲ್ಲೆ ಉಡುಪಿಯಲ್ಲಿ ಜನರು ಮತ್ತು ವ್ಯಾಪಾರಸ್ಥರು, ವಾಹನ ಚಾಲಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೈ ಋಣ ತೀರಿಸಲು ಮೋದಿಯನ್ನು ನೇರವಾಗಿ ಎದುರಿಸಲಾಗದೇ ಪುಕ್ಕಲುತನದಿಂದ ಬಂದ್ ಮಾಡ್ತಿದ್ದಾರೆ: ಸಿಎಂ ವಿರುದ್ಧ ಪ್ರತಾಪ್ ಸಿಂಹ ಕಿಡಿ

    ಕೈ ಋಣ ತೀರಿಸಲು ಮೋದಿಯನ್ನು ನೇರವಾಗಿ ಎದುರಿಸಲಾಗದೇ ಪುಕ್ಕಲುತನದಿಂದ ಬಂದ್ ಮಾಡ್ತಿದ್ದಾರೆ: ಸಿಎಂ ವಿರುದ್ಧ ಪ್ರತಾಪ್ ಸಿಂಹ ಕಿಡಿ

    ಮೈಸೂರು: ಪ್ರಧಾನಿ ಮೋದಿಯನ್ನು ನೇರವಾಗಿ ಎದುರಿಸಲಾಗದೇ ಕಾಂಗ್ರೆಸ್ಸಿನ ಋಣ ತೀರಿಸಲು ರಾಜ್ಯದಲ್ಲಿ ಬಂದ್ ಮಾಡಿಸಿದ್ದಾರೆ ಎಂದು ಎಂದು ಸಂಸದ ಪ್ರತಾಪ ಸಿಂಹ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಭಾರತ್ ಬಂದ್ ಹಿನ್ನೆಲೆಯಲ್ಲಿ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ತಮ್ಮನ್ನು ಮುಖ್ಯಮಂತ್ರಿ ಮಾಡಿರುವ ರಾಹುಲ್ ಗಾಂಧಿಯ ಋಣ ತೀರಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಬಂದ್‍ಗೆ ಸಂಪೂರ್ಣ ಬೆಂಬಲ ನೀಡಿದ್ದಾರೆ. ಇವರಿಗೇನಾದರೂ ಯೋಗ್ಯತೆ ಇದ್ದರೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಬಾರದಿತ್ತು. ಸಾರಿಗೆ ಸಂಸ್ಥೆಗಳಿಗೆ ನಿರ್ದೇಶನ ನೀಡಬಾರದಿತ್ತು. ಅದನ್ನು ಬಿಟ್ಟು ಪ್ರಧಾನಿ ಮೋದಿಯವರನ್ನು ನೇರವಾಗಿ ಎದುರಿಸಲಾಗದೇ ಈ ರೀತಿ ಬಂದ್‍ಗೆ ಬೆಂಬಲ ಕೊಡುತ್ತಿದ್ದಾರೆ. ಮೋದಿ ಮೇಲಿನ ಭಯದ ಪುಕ್ಕಲುತನದಿಂದ ಬಂದ್ ಮಾಡಿಸುತ್ತಿದ್ದೀರಿ ಎಂದು ವಾಗ್ದಾಳಿ ನಡೆಸಿದರು.

    ಈ ವೇಳೆ ವಸತಿ ಸಚಿವ ಯು ಟಿ.ಖಾದರ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಈ ಹಿಂದೆ ಬಂದ್ ಮಾಡಿದವರಿಗೆ ಚಪ್ಪಲಿಯಲ್ಲಿ ಹೊಡೆಯಬೇಕು ಅಂತಾ ಖಾದರ್ ಹೇಳಿದ್ದರು. ಆದರೆ ಈಗ ಅವರು ಚಪ್ಪಲಿ ಎಲ್ಲಿ ಇಟ್ಟಿದ್ದಾರೆ? ಈಗ ಯಾರಿಗೆ ಚಪ್ಪಲಿಯಲ್ಲಿ ಹೊಡೆಯಬೇಕು ಎಂದು ಪ್ರಶ್ನಿಸಿದರು.

    ಬಂದ್‍ಗೆ ಬೆಂಬಲ ನೀಡಿದ ಮಾಜಿ ಪ್ರಧಾನಿ ದೇವೇಗೌಡರ ಹೇಳಿಕೆ ಪ್ರತಿಕ್ರಿಯಿಸಿ, ದೇವೆಗೌಡರೇ ನೀವು ದೇಶದ ಆಡಳಿತ ನಡೆಸಿದ್ದವರು, ಬಂದ್‍ಗೆ ಬೆಂಬಲ ಸೂಚಿಸುವ ಮುನ್ನ ಸ್ವಲ್ಪ ಯೋಚಿಸಬೇಕಿತ್ತು. ಮೊದಲು ನಿಮ್ಮ ಮಗ ಮುಖ್ಯಮಂತ್ರಿಗೆ ಪೆಟ್ರೋಲ್ ದರವನ್ನು ಹೇಗೆ ಕಡಿಮೆ ಮಾಡೋದು ಎನ್ನುವುದನ್ನು ಹೇಳಿ ಕೊಡಿ, ನಂತರ ಬಂದ್‍ಗೆ ಬೆಂಬಲ ನೀಡಿ ಎಂದು ಹೇಳಿದರು.

    ಮೂರು ತೆರಿಗೆ ಲೂಟಿ ಮಾಡ್ತಿರೋದು ರಾಜ್ಯ ಸರ್ಕಾರಗಳು, ಪೆಟ್ರೋಲ್, ಮದ್ಯ ಹಾಗೂ ರಿಯಲ್ ಎಸ್ಟೇಟ್ ಮೂರರ ಮೇಲೆ ಅತಿ ಹೆಚ್ಚು ತೆರೆಗೆ ಹಾಕುತ್ತಿದ್ದಾರೆ. ಈ ಮೂರರ ಮೇಲೆ ತೆರಿಗೆ ಹಾಕಿ ಲೂಟಿ ಮಾಡಲಾಗುತ್ತದೆ ಎಂದು ಪ್ರತಾಪ್ ಸಿಂಹ ಗಂಭೀರ ಆರೋಪ ಮಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಭಾರತ್ ಬಂದ್- ಊಟ ಸಿಗದೆ ಮಾಜಿ ಸಿಎಂ ಬಂಗಾರಪ್ಪ ಅವರನ್ನು ನೆನೆದು ಕುಡುಕರ ರಂಪಾಟ

    ಭಾರತ್ ಬಂದ್- ಊಟ ಸಿಗದೆ ಮಾಜಿ ಸಿಎಂ ಬಂಗಾರಪ್ಪ ಅವರನ್ನು ನೆನೆದು ಕುಡುಕರ ರಂಪಾಟ

    ಉಡುಪಿ: ಭಾರತ್ ಬಂದ್ ಆಗಿರುವುದರಿಂದ ಊಟ ಸಿಗದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಕುಡುಕರು ರಂಪಾಟ ಮಾಡಿದ್ದಾರೆ. ಊಟ ಇಲ್ಲ ಅಂತ ಮಾಜಿ ಸಿಎಂ ಬಂಗಾರಪ್ಪ ಅವರನ್ನು ನೆನಪು ಮಾಡಿಕೊಂಡಿದ್ದಾರೆ.

    ಭಾರತ್ ಬಂದ್ ಹಿನ್ನೆಲೆಯಲ್ಲಿ ಉಡುಪಿಯಲ್ಕಿ ಹೋಟೆಲ್ ಎಲ್ಲಾ ಬಂದ್ ಆಗಿದೆ. ಸಿಟಿ ಬಸ್ ನಿಲ್ದಾಣ ಸಮೀಪ ಐದಾರು ಕುಡುಕರು ಹೊಟ್ಟೆ ಹಸಿವಿನಿಂದ ಗೋಳಾಡಿದ್ದಾರೆ. ಕುಡುಕರಿಗೆ ಬಂದ್ ಎಫೆಕ್ಟ್ ನೇರವಾಗಿ ತಟ್ಟಿದೆ. ಹಸಿವು, ಹಸಿವು ಅಂತ ಗೋಳಾಟ ಮಾಡಿದ ಜನ, ಹೊಟೇಲ್ ಓಪನ್ ಮಾಡಿ ಅಂತ ರಂಪಾಟ ಮಾಡಿದರು.

    ಹೊಟೇಲ್, ಅಂಗಡಿ ಓಪನ್ ಮಾಡಿ. ಊಟ ಕೊಡಿ ಅಂತ ಅಂಗಲಾಚಿದರು. ಉಡುಪಿ ಬಸ್ ಸಮೀಪ ಹೈಡ್ರಾಮಾ ನಡೆಸಿದರು. ರಸ್ತೆ ಮಧ್ಯದಲ್ಲಿ ಮಾಧ್ಯಮಗಳ ಕಾಲಿಗೆ ಬಿದ್ದು ಊಟ ಬೇಕು ಅಂತ ಕೇಳಿಕೊಂಡರು. ನಮ್ಮ ಬಂಗಾರಪ್ಪನವರ ಕಾಲದಲ್ಲಿ ಹೀಗೆ ಇರಲಿಲ್ಲ. ಎಲ್ಲವೂ ಚೆನ್ನಾಗಿತ್ತು ಅಂತ ಮಾಜಿ ಸಿಎಂ ದಿವಂಗತ ಬಂಗಾರಪ್ಪ ಅವರನ್ನು ನೆನಪಿಸಿಕೊಂಡರು.

    ನಮ್ಮ ಬಂಗಾರಪ್ಪನವರು ಅಧಿಕಾರದಲ್ಲಿದ್ದಾಗ ಹೀಗೆಲ್ಲ ಇರಲಿಲ್ಲ. ರಾಜ್ಯ ಸುಗಮವಾಗಿ ಸಾಗುತ್ತಿತ್ತು ಅಂತ ಬೇಸರ ವ್ಯಕ್ತಪಡಿಸಿದರು. ನಿನ್ನೆಯಿಂದ ಊಟವೇ ಮಾಡಿಲ್ಲ ಅಂತ ಗುರುವಪ್ಪ ಕುಡಿದ ಮತ್ತಿನಲ್ಲಿತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv