Tag: bharathi vishnuvardhan

  • 45 ವರ್ಷದ ಹಿಂದೆ ವಿಷ್ಣುವರ್ಧನ್ ಬಳಸಿದ್ದ ಕಲ್ಲನ್ನು ಗಿಫ್ಟ್ ನೀಡಲಿದ್ದಾರೆ ಚಿಕ್ಕಮಗಳೂರಿನ ಜನ

    45 ವರ್ಷದ ಹಿಂದೆ ವಿಷ್ಣುವರ್ಧನ್ ಬಳಸಿದ್ದ ಕಲ್ಲನ್ನು ಗಿಫ್ಟ್ ನೀಡಲಿದ್ದಾರೆ ಚಿಕ್ಕಮಗಳೂರಿನ ಜನ

    ಚಿಕ್ಕಮಗಳೂರು: ಸಾಹಸಸಿಂಹ, ನಟ ವಿಷ್ಣುವರ್ಧನ್ ಅವರ ಮುಂದಿನ ಹುಟ್ಟುಹಬ್ಬಕ್ಕೆ ಅವರ ಕುಟುಂಬಸ್ಥರು ಹಾಗೂ ಪತ್ನಿ ಭಾರತಿ ವಿಷ್ಣುವರ್ಧನ್‍ಗೆ ಚಿಕ್ಕಮಗಳೂರಿನ ಜನ ಎಂದೂ ಮರೆಯದ ವಿಶೇಷವಾದ ಕಲ್ಲನ್ನು ಉಡುಗೊರೆಯಾಗಿ ನೀಡಲಿದ್ದಾರೆ.

    ಸ್ವತಃ ವಿಷ್ಣುವರ್ಧನ್ ಅವರೇ ಹಿಡಿದು ಚಿತ್ರಕ್ಕಾಗಿ ಬಳಸಿದ್ದ ಕಲ್ಲು. 45 ವರ್ಷಗಳಿಂದ ಆ ಸಾಧಾರಣ ಕಲ್ಲನ್ನು ರಕ್ಷಣೆ ಮಾಡಿಕೊಂಡು ಬಂದಿರುವ ಮಲೆನಾಡಿಗರು, ಈಗ ಆ ಕಲ್ಲನ್ನು ಅವರ ಕುಟುಂಬಸ್ಥರಿಗೆ ನೀಡಲು ಮುಂದಾಗಿದ್ದಾರೆ. ನೋಡೋಕೆ ಇದೊಂದು ಕಲ್ಲಷ್ಟೆ. ಆದರೆ ಈ ಕಲ್ಲನ್ನು ಹಿಡಿದು ವಿಷ್ಣುವರ್ಧನ್ ನಟಿಸಿದ್ದ ನಟನೆ, ತೋರಿದ ಭಾವ ಕನ್ನಡ ಚಿತ್ರರಂಗದಲ್ಲಿ ಅಚ್ಚಳಿಯದೆ ಉಳಿದಿರೋದಂತು ಸತ್ಯ. ಅಂತಹ ಕಲ್ಲನ್ನು ಭಾರತಿ ವಿಷ್ಣುವರ್ಧನ್ ಉಡುಗೊರೆಯಾಗಿ ಪಡೆಯಲಿದ್ದಾರೆ. ಇದನ್ನು ಓದಿ: ಭೂತಯ್ಯನ ಮಗ ಅಯ್ಯು ನೆನಪು – ಇಂದಿಗೂ ಹಾಗೆಯೇ ಇದೆ ಮನೆ, ಹೋಟೆಲ್

    ಆ ಕಲ್ಲು ಭಾರತೀಯ ಚಿತ್ರರಂಗದ ಎವರ್ ಗ್ರೀನ್ ಸಿನಿಮಾ, ‘ಭೂತಯ್ಯನಮಗ ಅಯ್ಯು’ ಚಿತ್ರದಲ್ಲಿ ವಿಷ್ಣುವರ್ಧನ್ ಕತ್ತಿಯನ್ನ ಮಸೆದ ಕಲ್ಲು. ಈ ಚಿತ್ರದ ಶೇಕಡ 60ರಷ್ಟು ಭಾಗ ಚಿತ್ರೀಕರಣಗೊಂಡಿದ್ದು ಚಿಕ್ಕಮಗಳೂರು ತಾಲೂಕಿನ ಕಳಸಾಪುರದಲ್ಲಿ. ಆ ಕಲ್ಲನ್ನು ಅದೇ ಊರಿನ ಜನ 45 ವರ್ಷಗಳಿಂದ ರಕ್ಷಣೆ ಮಾಡಿಕೊಂಡು ಬಂದಿದ್ದಾರೆ. ಹಳೇ ಮನೆಯಲ್ಲಿದ್ದ ಕಲ್ಲನ್ನು ಹೊಸ ಮನೆಗೂ ಕೊಂಡೊಯ್ದಿದ್ದಾರೆ. ಬೇರೆ-ಬೇರೆ ಸಿನಿಮಾದವರು ಶೂಟಿಂಗ್‍ಗೆ ಬಂದಾಗ ಕೇಳಿದಾಗಲು ಕೊಟ್ಟಿಲ್ಲ. ದುಡ್ ಕೊಡುತ್ತೇವೆ ಎಂದರು ಇಲ್ಲ ಅಂದಿದ್ದಾರೆ. ಈಗ ಆ ಕಲ್ಲನ್ನು ಊರಿನ ಯುವಕರು ವಿಷ್ಣುವರ್ಧನ್ ಹುಟ್ಟುಹಬ್ಬಕ್ಕೆ ಅವರ ಮನೆಯವರಿಗೆ ಉಡುಗೊರೆಯಾಗಿ ನೀಡಲು ಮುಂದಾಗಿದ್ದಾರೆ. ವಿಷ್ಣುವರ್ಧನ್ ಅವರ ಮುಂದಿನ ಹುಟ್ಟುಹಬ್ಬದಂದು ಅವರ ಮನೆಗೆ ತೆರಳಿ ಭಾರತಿ ಅವರ ಕೈಗೆ ಅದನ್ನು ನೀಡಲು ಗ್ರಾಮದ ಯುವಕರು ನಿರ್ಧರಿಸಿದ್ದಾರೆ.

    ಊರಿನ ಜನ ಅದರಲ್ಲಿ ವಿಷ್ಣುವರ್ಧರನ್ನು ಕಾಣುತ್ತಿದ್ದು, ಅವರ ಮಾತು-ಕಥೆ, ಜನರೊಂದಿಗೆ ಬೆರೆಯುತ್ತಿದ್ದ ಅವರ ಮುಕ್ತ ಮನಸ್ಸನು ಆ ಕಲ್ಲಿನಲ್ಲಿ ಕಾಣುತ್ತಿದ್ದಾರೆ. 45 ವರ್ಷದಿಂದ ಯಾರಿಗೂ ಕೊಟ್ಟಿಲ್ಲ. 45 ವರ್ಷಗಳಿಂದ ವಿಷ್ಣು ಅವರ ವ್ಯಕ್ತಿತ್ವವನ್ನು ಕಲ್ಲಿನಲ್ಲಿ ಕಾಣುತ್ತಿದ್ದಾರೆ. ಇದು ಬದುಕಿನ ಸಾರ್ಥಕತೆ ಅನ್ನೋದ್ರಲ್ಲಿ ಎರಡು ಮಾತಿಲ್ಲ. ಭಾರತಿ ವಿಷ್ಣುವರ್ಧನ್ ಅವರ ಜೀವಮಾನದಲ್ಲಿ ಸಾವಿರಾರು, ಲಕ್ಷಾಂತರ ಉಡುಗೊರೆಗಳನ್ನ ಪಡೆದಿರಬಹುದು. ಆದರೆ ಈ ಉಡುಗೊರೆಯಂತಹಾ ಸ್ಪೆಷಲ್ ಗಿಫ್ಟ್ ಅವರಿಗೆ ಎಂದೂ ಸಿಕ್ಕಿರೋದಿಲ್ಲ ಎಂಬ ಭಾವನೆ ಯುವಕರದ್ದು.

    https://www.facebook.com/publictv/videos/2503585009931141/

  • ಭಾರತಿ ವಿಷ್ಣುವರ್ಧನ್‍ರಿಂದ ಸಂತ್ರಸ್ತರಿಗೆ ಸ್ವೆಟರ್, ಬಟ್ಟೆ ವಿತರಣೆ

    ಭಾರತಿ ವಿಷ್ಣುವರ್ಧನ್‍ರಿಂದ ಸಂತ್ರಸ್ತರಿಗೆ ಸ್ವೆಟರ್, ಬಟ್ಟೆ ವಿತರಣೆ

    ಮೈಸೂರು: ನೆರೆ ಪೀಡಿತ ಪ್ರದೇಶಗಳಿಗೆ ಕೆಲ ಸ್ಯಾಂಡಲ್‍ವುಡ್ ನಟರು ಹೋಗಿ ಸಂತ್ರಸ್ತರ ಕಷ್ಟಗಳನ್ನು ಆಲಿಸಿದ್ದಾರೆ. ಅವರ ಅಭಿಮಾನಿಗಳು ತಮ್ಮ ತಮ್ಮ ಕೈಲಾದಷ್ಟು ಸಹಾಯವನ್ನು ಮಾಡಿದ್ದಾರೆ. ಇದೀಗ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರು ಸಂತ್ರಸ್ತರ ಕೇಂದ್ರಕ್ಕೆ ಹೋಗಿ ಸಾಂತ್ವನ ಹೇಳಿದ್ದಾರೆ.

    ಜಿಲ್ಲೆಯಲ್ಲಿ ಕಪಿಲಾ ಪ್ರವಾಹದಿಂದ ಮನೆ ಕಳೆದುಕೊಂಡು ಸಂತ್ರಸ್ತರು ನಂಜನಗೂಡಿನಲ್ಲಿನ ಸಾಂತ್ವನ ಕೇಂದ್ರದಲ್ಲಿ ಆಶ್ರಯ ಪಡೆದುಕೊಂಡಿದ್ದರು. ಇಂದು ನಟಿ ಭಾರತಿ ವಿಷ್ಣುವರ್ಧನ್ ಮತ್ತು ಅವರ ಅಳಿಯ ನಟ ಅನಿರುದ್ಧ ಕೇಂದ್ರಕ್ಕೆ ತೆರಳಿ ಅಲ್ಲಿ ಆಶ್ರಯ ಪಡೆದಿರುವ ಮಹಿಳೆಯರು ಹಾಗೂ ಮಕ್ಕಳ ಜೊತೆ ಕುಳಿತು ಮಾತುಕತೆ ನಡೆಸಿದರು. ಅಷ್ಟೇ ಅಲ್ಲದೆ ಭಾರತೀ ವಿಷ್ಣುವರ್ಧನ್ ಸಂತ್ರಸ್ತರಿಗೆ ಸ್ವೆಟರ್, ಬಟ್ಟೆ, ಬಿಸ್ಕೆಟ್ ಮತ್ತು ಕೆಲ ಅಗತ್ಯ ವಸ್ತುಗಳನ್ನ ನೀಡಿದ್ದಾರೆ.

    ಇತ್ತೀಚೆಗೆ ಗದಗ ಜಿಲ್ಲೆಯ ಹೊಳೆ ಹೊನ್ನೂರು ಗ್ರಾಮಕ್ಕೆ ಸತೀಶ್ ಮತ್ತು ಅವರ ತಂಡ ಭೇಟಿ ನೀಡಿತ್ತು. ಗ್ರಾಮದ ಪ್ರತಿ ಮನೆಗಳಿಗೂ ತೆರಳಿದ್ದ ಸತೀಶ್ ಎಲ್ಲರ ನೋವನ್ನು ಆಲಿಸಿ, ಪ್ರವಾಹ ಪರಿಣಾಮವನ್ನು ಅರಿತರು. ಹಾಗೆಯೇ ಕೆಲ ದಿನಬಳಕೆ ವಸ್ತುಗಳನ್ನು ನೀಡಿ ನಿರಾಶ್ರಿತರಿಗೆ ಸಹಾಯ ಮಾಡಿದ್ದರು. ಪ್ರತಿ ಮನೆಗೆ ಭೇಟಿ ನೀಡಿದ ಸತೀಶ್ ತಾವು ಅದೇ ಗ್ರಾಮದ ನಿವಾಸಿ ಎಂಬಂತೆ ಗ್ರಾಮಸ್ಥರೊಂದಿಗೆ ಬೆರೆತಿದ್ದರು.

  • ವಚನದ ಮೂಲಕವೇ ಅಸಮಾಧಾನ ಹೊರಹಾಕಿದ ಭಾರತಿ ವಿಷ್ಣುವರ್ಧನ್

    ವಚನದ ಮೂಲಕವೇ ಅಸಮಾಧಾನ ಹೊರಹಾಕಿದ ಭಾರತಿ ವಿಷ್ಣುವರ್ಧನ್

    -ಉಳ್ಳವರು ಶಿವಾಲಯವ ಮಾಡುವರಯ್ಯ, ನಾನೇನು ಮಾಡಲಿ ಬಡವನಯ್ಯ

    ಚಿಕ್ಕಬಳ್ಳಾಪುರ: ಉಳ್ಳವರು ಶಿವಾಲಯವ ಮಾಡುವರಯ್ಯ, ನಾನೇನು ಮಾಡಲಿ ಬಡವನಯ್ಯಾ ಅಂತ ಬಸವಣ್ಣನವರ ವಚನ ಸ್ಮರಿಸಿದ ಭಾರತಿ ವಿಷ್ಣುವರ್ಧನ್ ಅವರು ವಿಷ್ಣುವರ್ದನ್ ಸ್ಮಾರಕ ನಿರ್ಮಾಣ ವಿಚಾರದಲ್ಲಿ ತಮ್ಮ ಅಸಹಾಯಕತೆ ತೋಡಿಕೊಂಡಿದ್ದಾರೆ.

    ಚಿಕ್ಕಬಳ್ಳಾಪುರ ತಾಲೂಕು ಅಗಲಗುರ್ಕಿಯ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‍ನ ಬಿಜಿಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂದು ಮಾತೃ ಭೋಜನ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಶ್ರೀಗಳ ಜೊತೆ ಮುಖ್ಯ ಅತಿಥಿಗಳಾಗಿ ಭಾರತಿ ವಿಷ್ಣುವರ್ಧನ್ ಆಗಮಿಸಿದ್ದರು.

    ಇದಕ್ಕೂ ಮುನ್ನ ಭಾರತಿ ವಿಷ್ಣುವರ್ಧನ್ ಹಾಗೂ ಅಳಿಯ ಅನಿರುದ್ದ್ ಸೇರಿ ಮಕ್ಕಳಿಗೆ ತಮ್ಮ ಕೈ ತುತ್ತು ತಿನ್ನಿಸಿದರು. ಕೆಲಹೊತ್ತು ಮಕ್ಕಳ ಜೊತೆಗೆ ಕಾಲ ಕಳೆದರು. ಬಳಿಕ ಡಾ.ನಿರ್ಮಲಾನಂದನಾಥ ಶ್ರೀಗಳ ಜೊತೆಗೆ ಪಂಕ್ತಿ ಭೋಜನ ಸವಿದರು. ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ವಚನವನ್ನು ಹೇಳುವ ಮೂಲಕ ಭಾರತಿ ಅವರು ವಿಷ್ಣುವರ್ಧನ್ ಸ್ಮಾರಕ ಸಾಕಾರವಾಗದಿದ್ದಕ್ಕೆ ತಮ್ಮ ಅಸಹಾಯಕತೆ ವ್ಯಕ್ತಪಡಿಸಿದಂತೆ ಭಾಸವಾಯಿತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದೌರ್ಜನ್ಯ ನಡೆಸಿ ವಿಷ್ಣು ಸ್ಮಾರಕಕ್ಕೆ ಜಮೀನು ಕಿತ್ತುಕೊಳ್ಳೋ ಬದಲು ವಿಷ ಕೊಟ್ಟು ಬಿಡಿ – ರೈತ ಮಹಿಳೆ

    ದೌರ್ಜನ್ಯ ನಡೆಸಿ ವಿಷ್ಣು ಸ್ಮಾರಕಕ್ಕೆ ಜಮೀನು ಕಿತ್ತುಕೊಳ್ಳೋ ಬದಲು ವಿಷ ಕೊಟ್ಟು ಬಿಡಿ – ರೈತ ಮಹಿಳೆ

    ಮೈಸೂರು: ನಮ್ಮ ಮೇಲೆ ದೌರ್ಜನ್ಯ ನಡೆಸಿ ಜಮೀನು ಕಿತ್ತು ಕೊಳ್ಳುವ ಬದಲು ವಿಷ ಕೊಟ್ಟು ಬಿಡಿ ಇಲ್ಲೆ ಎಲ್ಲಾ ಸತ್ತು ಹೋಗುತ್ತೇವೆ ಎಂದು ಡಾ. ವಿಷ್ಣು ಸ್ಮಾರಕ ನಿರ್ಮಾಣ ಮಾಡಲು ಗುರುತಿಸಿರುವ ಜಮೀನಿನಲ್ಲಿ ಕೃಷಿ ಮಾಡುತ್ತಿರುವ ರೈತ ಮಹಿಳೆ ಜಯಮ್ಮ ಹೇಳಿದ್ದಾರೆ.

    ಮೈಸೂರಿನ ಹೊರವಲಯದ ಹಾಲಾಳು ಗ್ರಾಮದಲ್ಲಿ ಸ್ಮಾರಕ ನಿರ್ಮಾಣಕ್ಕೆ ಸರಕಾರ ಮುಂದಾಗಿತ್ತು. ಸರ್ಕಾರದ ನಿರ್ಧಾರಕ್ಕೆ ಈ ಜಾಗದಲ್ಲಿ ಕಳೆದ 4 ತಲೆಮಾರುಗಳಿಂದ ಉಳುಮೆ ಮಾಡುತ್ತಿರುವ ಜಯಮ್ಮ ಕುಟುಂಬ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದೆ.

    ವಿಷ್ಣು ಸ್ಮಾರಕ ವಿವಾದಕ್ಕೆ ಅಭಿಮಾನಿಗಳು ಆಗ್ರಹಿಸಿದ ಅಭಿಮಾನಿಗಳ ಹಿನ್ನೆಲೆಯಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ರೈತ ಮಹಿಳೆ ಜಯಮ್ಮ, ನಮಗೆ ಸೂಕ್ತವಾದ ಪರಿಹಾರ ಕೊಟ್ಟು ಜಮೀನು ತೆಗೆದುಕೊಳ್ಳಿ ಎಂದು ಹೇಳಿದ್ದೇನೆ. ಅದನ್ನು ಬಿಟ್ಟು ದೌರ್ಜನ್ಯ ಮಾಡಿ ಜಮೀನು ಕಿತ್ತು ಕೊಳ್ಳುವುದಾರೆ ವಿಷ ಕೊಡಿ. ನಮ್ಮ ಸಮಾಧಿಯೂ ಇಲ್ಲೇ ಮಾಡಿ ಎಂದರು.

    ಭಾರತಿ ವಿಷ್ಣುವರ್ಧನ್ ಅವರು ನಮ್ಮ ಜೊತೆ ಸರಿಯಾಗಿ ಮಾತನಾಡಿಲ್ಲ. ಇಲ್ಲಿಗೆ ಬರುವ ಎಲ್ಲರೂ ದೌರ್ಜನ್ಯದಿಂದ ನಡೆದುಕೊಳ್ಳುತ್ತಿದ್ದಾರೆ. ನಾಳೆಯಿಂದ ಈ ಜಮೀನಿಗೆ ಯಾರಿಗೂ ಕಾಲಿಡುವುದಕ್ಕೂ ಬಿಡಲ್ಲ. ನಮಗೇ ಸೂಕ್ತ ಪರಿಹಾರ ನೀಡದೆ 4 ತಲೆ ಮಾರುಗಳಿಂದ ಇದೇ ಭೂಮಿಯನ್ನು ನಂಬಿ ಜೀವನ ನಡೆಸುವ ನಮ್ಮ ಅನ್ನಕ್ಕೆ ಕಲ್ಲು ಹಾಕಬೇಡಿ. ನಿಮಗೇ ಇದೇ ಜಾಮೀನು ಬೇಕೆಂದರೆ ಸೂಕ್ತ ಪರಿಹಾರ ನೀಡಿ. ಈ ವಿಚಾರದಲ್ಲಿ ಭಾರತಿ ವಿಷ್ಣುವರ್ಧನ್ ಅವರು ಅಸಹಾಯಕರಾಗಿದ್ದಾರೆ. ಈ ಹಿಂದೆ ಸರ್ಕಾರ ಸ್ಮಾರಕ ನಿರ್ಮಾಣಕ್ಕೆ ಹಣ ನೀಡಲ್ಲ ಎಂದು ಹೇಳಿ, ಸ್ವತಃ ಅವರೇ ಹಣ ನೀಡುತ್ತೇನೆ ಎಂದು ಮಾಹಿತಿ ನೀಡಿದ್ದರು. ಆದರೆ ಅವರು ನೀಡುವ 20 ಲಕ್ಷ ರೂ. ಮಾತ್ರ ನೀಡಿದರೆ ನಮಗೆ ಅನ್ಯಾಯವಾಗುತ್ತದೆ. ಸರ್ಕಾರ ಗೋಮಾಳ ಎಂದು ಹೇಳುತ್ತೆ. ಅದಕ್ಕೆ ನಾವು ಪರಿಹಾರಕ್ಕಾಗಿ ನ್ಯಾಯಾಲಯ ಮೋರೆ ಹೋಗಿದ್ದೇವೆ ಎಂದರು. ಇದನ್ನು ಓದಿ : ಸಾಹಸ ಸಿಂಹನಿಗೆ ಪೂಜೆ ಸಲ್ಲಿಸಿದ ಅಭಿಮಾನಿಗಳು – ಸ್ಮಾರಕ ನಿರ್ಮಾಣಕ್ಕೆ ಶಂಕು ಸ್ಥಾಪನೆ

    ಎಷ್ಟು ಪರಿಹಾರ ಬೇಕು ಎಂದು ಕೇಳಿದ್ದಕ್ಕೆ, 20 ಲಕ್ಷ ಬೇಡ. ನಮ್ಮ ಮನೆಯಲ್ಲಿ 5 ಮಂದಿ ಇದ್ದಾರೆ. ಒಂದೊಂದು ತಲೆಗೆ 30 ಲಕ್ಷ ಕೊಡಬೇಕು. ನಮ್ಮ ಬೇಡಿಕೆಗೆ ಭಾರತಿ ವಿಷ್ಣುವರ್ಧನ್ ಒಪ್ಪಿಗೆ ನೀಡಲಿಲ್ಲ ಎಂದು ಹೇಳಿದರು.

    ಕಲಾವದರಿಗೂ ಕಷ್ಟ ಸುಖ ಗೊತ್ತಿರುತ್ತದೆ. ನಮಗೆ ಮಾತುಕತೆ ಮೂಲವೇ ಚರ್ಚೆ ನಡೆಸಿ ಪರಿಹಾರ ನೀಡಲು ಮುಂದಾದರೆ ಸಿದ್ಧರಾಗಿದ್ದೇವೆ. ಈ ಕುರಿತು ಸರ್ಕಾರದ ಅಧಿಕಾರಿಗಳಿಗೂ ಕೂಡ ನಮ್ಮ ಬೇಡಿಕೆ ತಿಳಿಸಿದ್ದೇವೆ. ಈ ಭೂಮಿಯನ್ನು ನಂಬಿಯೇ ನಮ್ಮ ಕುಟುಂಬ ಜೀವನ ನಡೆಸುತ್ತಿದ್ದು, ಸೂಕ್ತ ಪರಿಹಾರ ನೀಡಬೇಕು ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವಿಷ್ಣು ಕುಟುಂಬದ ನಿರ್ಧಾರದ ಮೇಲೆ ಸ್ಮಾರಕದ ಚರ್ಚೆ: ಶಾಸಕ ಮುನಿರತ್ನ

    ವಿಷ್ಣು ಕುಟುಂಬದ ನಿರ್ಧಾರದ ಮೇಲೆ ಸ್ಮಾರಕದ ಚರ್ಚೆ: ಶಾಸಕ ಮುನಿರತ್ನ

    ಬೆಂಗಳೂರು: ಕುಟುಂಬದವರ ಅನಿಸಿಕೆಗೂ ಅಭಿಮಾನಿಗಳ ಮಾತಿಗೂ ವ್ಯತ್ಯಾಸವಿರುತ್ತದೆ. ಹೀಗಾಗಿ ಸಾಹಸಸಿಂಹ ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ಅವರ ಕುಟುಂಬದವರ ನಿರ್ಧಾರದ ಮೇಲೆ ನಾನು ಸಿಎಂ ಕುಮಾರಸ್ವಾಮಿ ಜೊತೆಗೆ ಚರ್ಚೆ ಮಾಡುತ್ತೇನೆ ಎಂದು ನಿರ್ಮಾಪಕ ಹಾಗೂ ಶಾಸಕ ಮುನಿರತ್ನ ಹೇಳಿದ್ದಾರೆ.

    ಭಾರತಿ ವಿಷ್ಣುವರ್ಧನ್ ನಿವಾಸಕ್ಕೆ ಇಂದು ಮಧ್ಯಾಹ್ನ ಭೇಟಿ ನೀಡಿ ಮಾತನಾಡಿದ ಅವರು, ವರನಟ ರಾಜ್‍ಕುಮಾರ್ ಹಾಗೂ ರೆಬೆಲ್ ಸ್ಟಾರ್ ಅಂಬರೀಶ್ ಸ್ಮಾರಕದಂತೆ ಸಾಹಸಸಿಂಹ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಮಾಡಲಾಗುತ್ತದೆ. ಆದರೆ ಎಲ್ಲಿ, ಹೇಗೆ ಎನ್ನುವ ಕುರಿತು ವೈಯಕ್ತಿಕವಾಗಿ ಹೇಳಿಕೆ ನೀಡಲು ಸಾಧ್ಯವಿಲ್ಲ. ಸರ್ಕಾರದ ಒಪ್ಪಿಗೆ ಬೇಕಾಗುತ್ತದೆ ಎಂದರು. ಇದನ್ನು ಓದಿನಿಮಗೆ ಏನು ಅನ್ನಿಸುತ್ತೆ ಹಾಗೆಯೇ ಮಾಡಿ: ಭಾರತಿ ವಿಷ್ಣುವರ್ಧನ್

    ನಾನು ಕೂಡ ವಿಷ್ಣುವರ್ಧನ್ ಅವರ ಒಬ್ಬ ಅಭಿಮಾನಿ. ಅವರ ಸ್ಮಾರಕ ಆದಷ್ಟು ಬೇಗ ನಿರ್ಮಾಣವಾಗಬೇಕು ಎನ್ನುವುದು ನನ್ನ ಉದ್ದೇಶ. ಈ ಹಿನ್ನೆಲೆಯಲ್ಲಿ ಸರ್ಕಾರದ ಮೇಲೆ ಒತ್ತಡ ಹೇರುತ್ತೇನೆ. ಭಾರತಿ ವಿಷ್ಣುವರ್ಧನ್ ಅವರು ನೀಡಿರುವ ಮನವಿ ಪತ್ರವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ತಲುಪಿಸಿ, ಚರ್ಚೆ ಮಾಡುತ್ತೇನೆ ಎಂದು ಭರವಸೆ ನೀಡಿದರು.

    ಇದೇ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಭಾರತಿ ವಿಷ್ಣುವರ್ಧನ್, ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿತ್ತು. ಆದರೆ ಜಾಗದ ಮಾಲೀಕ ನಡುವೆ ಜಗಳ ಉಂಟಾಗಿ, ಕಾಮಗಾರಿ ತಡೆಯಲಾಗಿತ್ತು. ಜಾಗದ ಸಮಸ್ಯೆಯನ್ನು ಬಗೆಹರಿಸಿ ಅಲ್ಲಿಯೇ ಸ್ಮಾರಕ ನಿರ್ಮಾಣ ಮಾಡಬೇಕು ಎಂದು ತಿಳಿಸಿದರು.

    ಅಭಿಮಾನ್ ಸ್ಟುಡಿಯೋದಲ್ಲಿಯೇ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಮುಂದಾದರೆ ನಿಮ್ಮ ಅಭಿಪ್ರಾಯವೇನು ಎಂದು ಮಾಧ್ಯಮದವರು ಪ್ರಶ್ನಿಸುತ್ತಿದ್ದಂತೆ ಕೈ ಮುಗಿದ ಭಾರತೀ ವಿಷ್ಣುವರ್ಧನ್ ಅವರು, ನನಗೂ ಅದಕ್ಕೂ ಸಂಬಂಧವೇ ಇಲ್ಲವೆಂದು ಮೌನವಾದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಸ್ಮಾರಕ ಸಂಘರ್ಷ: ಇಂದು ಸಿಎಂಗೆ ಅನಿರುದ್ಧ್ ಮನವಿ ಪತ್ರ

    ಸ್ಮಾರಕ ಸಂಘರ್ಷ: ಇಂದು ಸಿಎಂಗೆ ಅನಿರುದ್ಧ್ ಮನವಿ ಪತ್ರ

    – ವಿಷ್ಣು ಕುಟುಂಬಸ್ಥರ ಜೊತೆ ನಿರ್ಮಾಪಕರಿಂದ ಚರ್ಚೆ

    ಬೆಂಗಳೂರು: ರಾಜ್ಯದಲ್ಲಿ ಅಂಬಿ ಸಾವಿನ ಬಳಿಕ ವಿಷ್ಣು ಸ್ಮಾರಕದ ಚರ್ಚೆಯೆದ್ದಿದೆ. ಅಭಿಮಾನ್ ಸ್ಟುಡಿಯೋದಲ್ಲೇ ಸ್ಮಾರಕ ಆಗಬೇಕೆಂದು ಭಾರತಿ ಪಟ್ಟುಹಿಡಿದಿದ್ದಾರೆ. ಆದ್ರೆ ಇದೆಲ್ಲದರ ನಡುವೆ ಇಂದು ಸಿಎಂಗೆ ಅನಿರುದ್ಧ್ ಪತ್ರ ಬರೆಯಲಿದ್ದಾರೆ. ಅತ್ತ ನಿರ್ಮಾಪಕ ಸಂಘ ಇಂದು ವಿಷ್ಣು ಕುಟುಂಬಸ್ಥರೊಂದಿಗೆ ಚರ್ಚೆ ನಡೆಸಲಿದೆ.

    ಕನ್ನಡ ಚಿತ್ರರಂಗದ ಮೂರು ಮಾಣಿಕ್ಯಗಳಾದ ರಾಜಕುಮಾರ್, ವಿಷ್ಣುವರ್ಧನ್, ಅಂಬರೀಶ್ ಇತಿಹಾಸದ ಪುಟ ಸೇರಿದ್ದಾರೆ. ಈ ಮೂವರು ಕಲಾರತ್ನಗಳು ಬದುಕಿದ್ದಾಗ ಎಂದೂ ವಿವಾದವನ್ನ ಮೈಮೇಲೆ ಎಳೆದುಕೊಂಡವರಲ್ಲ. ಸಾಹಸಸಿಂಹ ವಿಷ್ಣುವರ್ಧನ್ ಅವರಂತೂ ವಿವಾದದಿಂದ ದೂರವೇ ಉಳಿದವರು. ವಿಷ್ಣು ಅಗಲಿ 10 ವರ್ಷಗಳಾಗಿದ್ದು, ಸ್ಮಾರಕ ನಿರ್ಮಾಣವಾಗಿಲ್ಲ. ರಾಜ್-ಅಂಬಿ ಅವರಂತೆ ವಿಷ್ಣು ಅವರ ಸ್ಮಾರಕವನ್ನೂ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನಿರ್ಮಿಸಬೇಕು ಅನ್ನೋ ಚರ್ಚೆ ಜೋರಾಗಿದೆ. ಇದನ್ನೂ ಓದಿ: ನಿಮಗೆ ಏನು ಅನ್ನಿಸುತ್ತೆ ಹಾಗೆಯೇ ಮಾಡಿ: ಭಾರತಿ ವಿಷ್ಣುವರ್ಧನ್

    ಕಂಠೀರವ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕ ಬೇಡ. ಅಭಿಮಾನ್ ಸ್ಟುಡಿಯೋ ಅಥವಾ ಮೈಸೂರಲ್ಲೇ ಮಾಡಿ. ಈ ಬಗ್ಗೆ ಡಿಸೆಂಬರ್ 30ರೊಳಗೆ ಸರ್ಕಾರ ಒಂದು ತೀರ್ಮಾನಕ್ಕೆ ಬರಬೇಕು ಅಂತ ಭಾರತಿ ವಿಷ್ಣುವರ್ಧನ್ ಎಚ್ಚರಿಸಿದ್ದಾರೆ.

    ಈ ಬಗ್ಗೆ ಪಬ್ಲಿಕ್ ಟಿವಿ ವೇದಿಕೆಯಲ್ಲಿ ಮಾತನಾಡಿದ ಅನಿರುದ್ಧ್, ಸ್ಮಾರಕ ನಿರ್ಮಾಣದ ಬಗ್ಗೆ ಸಿಎಂ ಕುಮಾರಸ್ವಾಮಿಗೆ ಮನವಿ ಪತ್ರ ಕೊಡ್ತೀವಿ ಅಂದ್ರು. ಇದಕ್ಕೆ ಪ್ರತಿಕ್ರಿಯಿಸಿದ ನಿರ್ಮಾಪಕ ಮುನಿರತ್ನ, ಇಂದು ಮಧ್ಯಾಹ್ನ 2 ಗಂಟೆಗೆ ವಿಷ್ಣು ಕುಟುಂಬಸ್ಥರನ್ನು ಭೇಟಿ ಮಾಡಿ ಚರ್ಚಿಸ್ತೇನೆ ಎಂದರು.

    ವಿಷ್ಣುವರ್ಧನ್ ಅವರ ಸಮಾಧಿ ಬೆಂಗಳೂರಿನ ಅಭಿಮಾನ್ ಸ್ಟುಡಿಯೊದಲ್ಲಿ ಮಾಡಲಾಗಿದೆ. ಇಲ್ಲೇ ಸ್ಮಾರಕ ನಿರ್ಮಿಸಬೇಕೆಂಬ ಬೇಡಿಕೆ ಇದೆ. ಆದರೆ, ಈ ಸ್ಟುಡಿಯೊ ಜಾಗ ಇದೀಗ ವ್ಯಾಜ್ಯದಲ್ಲಿರುವುದೇ ಸ್ಮಾರಕ ನಿರ್ಮಾಣದ ಹಿನ್ನಡೆಗೆ ಕಾರಣವಾಗಿದೆ. ಒಟ್ಟಿನಲ್ಲಿ ಇಂದು ವಿಷ್ಣು ಸ್ಮಾರಕ ನಿರ್ಮಾಣದ ವಿಚಾರದಲ್ಲಿ ಕುಟುಂಬಸ್ಥರು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

    https://www.youtube.com/watch?v=-hY6Ux0McaA

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಪ್ಪಾಜಿಯನ್ನ ವಿರೋಧಿಸಿದವರೇ ನಮ್ಮನ್ನು ಕಡೆಗಣಿಸುತ್ತಿದ್ದಾರೆ: ವಿಷ್ಣು ಪುತ್ರಿ

    ಅಪ್ಪಾಜಿಯನ್ನ ವಿರೋಧಿಸಿದವರೇ ನಮ್ಮನ್ನು ಕಡೆಗಣಿಸುತ್ತಿದ್ದಾರೆ: ವಿಷ್ಣು ಪುತ್ರಿ

    ಬೆಂಗಳೂರು: ಅಪ್ಪಾಜಿ ಅವರನ್ನು ವಿರೋಧಿಸುತ್ತಿದ್ದವರೇ ಈಗ ಅವರ ಕುಟುಂಬವನ್ನು ಕಡೆಗಣಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಿಷ್ಣುವರ್ಧನ್ ಪುತ್ರಿ ಕೀರ್ತಿ ಅನಿರುದ್ಧ್ ಗಂಭೀರವಾಗಿ ಆರೋಪಿಸಿದರು.

    ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅಪ್ಪನ ಬಗ್ಗೆ ಗೊತ್ತಿರುವವರು ನಮ್ಮ ಕುರಿತು ಹಗುರವಾಗಿ ಮಾತನಾಡುತ್ತಿರಲಿಲ್ಲ. ಕೆ.ಮಂಜು ಅವರು ಮಾಧ್ಯಮಗಳ ಮುಂದೆ ಮಾತ್ರ ಮಾತನಾಡುತ್ತಾರೆ. ನಮ್ಮ ಬಳಿಗೆ ಬಂದು ಯಾವತ್ತೂ ಚರ್ಚೆ ಮಾಡಿಲ್ಲ. ತಮಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

    ಅಪ್ಪ ಏನು ಅಂತಾ ನನಗೆ ಗೊತ್ತು. ಅವರ ಪ್ರತಿ ಅಭಿಮಾನಿಗಳ ಬಗ್ಗೆ ಮಾಹಿತಿಯಿದೆ. ನಮ್ಮನ್ನು ಯಾಕೆ ಇಷ್ಟು ದ್ವೇಷಿಸುತ್ತಿದ್ದಾರೆ, ಗುರಿ ಮಾಡುತ್ತಿದಾರೆ ಎನ್ನುವುದೇ ಅರ್ಥವಾಗುತ್ತಿಲ್ಲ ಎಂದ ಅವರು, ವೀರಕಪುತ್ರ ಶ್ರೀನಿವಾಸ್ ಅವರನ್ನು ನಾನು ನೇರವಾಗಿ ನೋಡಿಲ್ಲ. ಆದರೂ ಸ್ಮಾರಕ ವಿಚಾರದಲ್ಲಿ ಮಾಧ್ಯಮಗಳ ಮುಂದೆ ಮಾತನಾಡುತ್ತಿದ್ದಾರೆ ಎಂದು ದೂರಿದರು. ಇದನ್ನು ಓದಿನಿಮಗೆ ಏನು ಅನ್ನಿಸುತ್ತೆ ಹಾಗೆಯೇ ಮಾಡಿ: ಭಾರತಿ ವಿಷ್ಣುವರ್ಧನ್

    ಕಳೆದ 9 ವರ್ಷಗಳಿಂದ ಮುಖ್ಯಮಂತ್ರಿಗಳಿಗೆ ಮನವಿ ಪತ್ರಗಳನ್ನು ನೀಡುತ್ತಲೇ ಬಂದಿದ್ದೇವೆ. ಅಪ್ಪನ ಸ್ಮಾರಕದ ಯಾರೊಬ್ಬರೂ ಮಾತನಾಡಲಿಲ್ಲ. ಸಿಎಂ ಗಳು ಬದಲಾಗುತ್ತಾ ಬಂದರೇ ಹೊರತು, ಯಾರೊಬ್ಬರೂ ಸ್ಮಾರಕದ ಬಗ್ಗೆ ಯೋಚನೆ ಮಾಡಲಿಲ್ಲ. ಕುಮಾರಸ್ವಾಮಿ ಅವರು ಈಗ ನೀಡಿರುವ ಭರವಸೆಯನ್ನು ಈ ಹಿಂದೆಯೇ ನೀಡಬಹುದಿತ್ತು. ನಮ್ಮನ್ನು ಕಚೇರಿಯಿಂದ ಕಚೇರಿಗೆ ಅಲೆದಾಡಿಸಿದರು ಎಂದು ಕಿಡಿಕಾರಿದರು.

    ಸ್ಮಾರಕ ನಿರ್ಮಾಣ ಮಾಡಿದರೆ ನಮಗೆ ಏನು ಸಿಗುತ್ತದೆ. ನಾವೇನು ಅಲ್ಲಿಯೇ ಇರುತ್ತೀವಾ? ಕೆಲವರು ಅಪ್ಪಾಜಿಯನ್ನು ಕಡೆಗಣಿಸುತ್ತಿದ್ದಾರೆ. ಮಾಧ್ಯಮಗಳ ಮುಂದೆ ಮಾತನಾಡುವವರು ನಮ್ಮ ಜೊತೆಗೆ ಕುಳಿತು ಚರ್ಚೆ ಮಾಡಲಿ. ಪರಿಸ್ಥಿತಿ ಏನು ಎನ್ನುವುದು ಅರ್ಥವಾಗುತ್ತದೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ನಿಮಗೆ ಏನು ಅನ್ನಿಸುತ್ತೆ ಹಾಗೆಯೇ ಮಾಡಿ: ಭಾರತಿ ವಿಷ್ಣುವರ್ಧನ್

    ನಿಮಗೆ ಏನು ಅನ್ನಿಸುತ್ತೆ ಹಾಗೆಯೇ ಮಾಡಿ: ಭಾರತಿ ವಿಷ್ಣುವರ್ಧನ್

    -ಭಗವಂತನ ಇಚ್ಛೆ ಏನ್ ಇದೆಯೋ ಅದೇ ಆಗಲಿ

    ಬೆಂಗಳೂರು: ನಿಮಗೆ ಏನು ಎನಿಸುತ್ತದೆ ಹಾಗೆಯೇ ಮಾಡಿ ಎಂದು ಸರ್ಕಾರಕ್ಕೆ ಭಾರತಿ ವಿಷ್ಣುವರ್ಧನ್ ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಿಷ್ಣುಗೆ ಸ್ಮಾರಕವೇ ಬೇಕಿಲ್ಲ. ಕುಲಕೋಟಿ ಅಭಿಮಾನಿಗಳ ಪ್ರೀತಿ ಸಿಕ್ಕಿದೆ ಅಷ್ಟೇ ಸಾಕು ಎಂದು ಮಾತು ಶುರು ಮಾಡುತ್ತಲೇ ಭಾರತಿ ವಿಷ್ಣುವರ್ಧನ್  ಭಾವುಕರಾದರು.

    ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ಅಂತ್ಯಸಂಸ್ಕಾರದ ಬಳಿಕ ಸ್ಮಾರಕದ ಬಗ್ಗೆ ಯಾರು ಮಾತನಾಡಿರಲಿಲ್ಲ. ಇದರಿಂದಾಗಿ ನನಗೆ ತುಂಬಾ ಸಂಕಟವಾಗಿತ್ತು. ಬಳಿಕ ನಾನೇ 7 ಲಕ್ಷ ರೂ, ಖರ್ಚು ಮಾಡಿ ಸ್ವಂತ ಹಣದಲ್ಲಿ ಪುಣ್ಯಭೂಮಿ ನಿರ್ಮಿಸಿದ್ದೇವು. ಅಲ್ಲಿ ಆರೋಗ್ಯ ಶಿಬಿರ, ಸಾಂಸ್ಕೃತಿಕ ಚಟುವಟಿಕೆ ನಡೆಸಿ ವಿಷ್ಣುವರ್ಧನ್ ಪುಣ್ಯಭೂಮಿ ಇದೆ ಅಂತಾ ಜನರಿಗೆ ಗೊತ್ತಾಯಿತು ಎಂದು ಹೇಳಿದರು.

    ಅಭಿಮಾನಿಗಳು ಈಗ ಸ್ಮಾರಕದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ರೆಬಲ್ ಸ್ಟಾರ್ ಅಂಬರೀಶ್ ಅವರು ಹಿರಿಯ ಕಲಾವಿದರಿಗೆ ಗೌರವ ಸಲ್ಲಿಸಬೇಕು. ಹೀಗಾಗಿ ವಿಷ್ಣುವರ್ಧನ್ ಅವರ ಸ್ಮಾರಕ ಭವನ ನಿರ್ಮಾಣಕ್ಕೆ ಮುಂದಾಗಿದ್ದಾರೆ ಎಂದು ತಿಳಿಸಿದರು.

    ವಿಷ್ಣುಗೆ ಮೈಸೂರು ಅಂದರೆ ತುಂಬಾ ಇಷ್ಟ ಹೀಗಾಗಿ ಮೈಸೂರಿನಲ್ಲಿ ಸ್ಮಾರಕ ಮಾಡಿ ಅಂತ ಕೇಳಿಕೊಳುತ್ತಿದ್ದೇವೆ ಅಷ್ಟೇ. ಅಭಿಮಾನ್ ಸ್ಟುಡಿಯೋದಲ್ಲಿ ಜಾಗ ಸಿಗದ ಕಾರಣಕ್ಕೆ ಸರ್ಕಾರವೇ ಮೈಸೂರಿನಲ್ಲಿ ಜಾಗ ಗೊತ್ತುಪಡಿಸಿದೆ. ಹೀಗಾಗಿ ನಾವು ಮೈಸೂರಿನಲ್ಲಿ ಸ್ಮಾರಕ ನಿರ್ಮಾಣಕ್ಕೆ ಒಪ್ಪಿಕೊಂಡಿದ್ದೇವೆ. ಅಲ್ಲಿಯೂ ಕೂಡ ಅಡ್ಡಿಯಾಗುತ್ತಿದೆ. ಈ ಜಾಗ ನಮಗೆ ಜಾಗಬೇಕು ಎಂದು ರೈತರು ಅಂತಿದ್ದಾರೆ. ಯಾರೊಬ್ಬರೂ ಕಾಳಜಿ ತೆಗೆದುಕೊಳ್ಳದಿದ್ದರೆ ಹೇಗೆ ಸಮಸ್ಯೆ ಬಗೆಹರಿಯುತ್ತದೆ ಎಂದು ಸರ್ಕಾರವನ್ನ ಪ್ರಶ್ನೆ ಮಾಡಿದರು.

    ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡಿಕೊಡುವುದಕ್ಕೆ ಆಗಲ್ಲ ಅಂದರೆ ಅಭಿಮಾನ್ ಸ್ಟುಡಿಯೋದಲ್ಲಿಯೇ ಮಾಡಿ ತೊಂದರೆಯಿಲ್ಲ. ನಾನು ಯಾವುದೇ ಒತ್ತಾಯವನ್ನು ಸರ್ಕಾರದ ಮೇಲೆ ಹೇರುವುದಿಲ್ಲ. ಸರ್ಕಾರ ನಿಗದಿಪಡಿಸಿದ ಜಾಗದಲ್ಲೇ ಆಗಲಿ. ಸ್ಮಾರಕದ ವಿಚಾರದಲ್ಲಿ ನಾವು ವಾದ ಮಾಡುವುದಿಲ್ಲ. ಅವರ ಇಚ್ಚೆ ಭಗವಂತನ ಇಚ್ಚೆ ಏನಿದೆಯೋ ಹಾಗೆಯೇ ಆಗಲಿ. ನಿಜವಾದ ಅಭಿಮಾನಿಗಳು ನಮ್ಮ ಜೊತೆ ಇದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಷ್ಣು ಸ್ಮಾರಕದ ಕುರಿತು ಉತ್ತಮ ಸ್ಪಂದನೆ ನೀಡುತ್ತಾರೆಂಬ ನಂಬಿಕೆಯಿದೆ ಅಂತ ಅಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಸಿಎಂ ಕುಮಾರಸ್ವಾಮಿ ಕೆಂಡಾಮಂಡಲ -ಅನಿರುದ್ಧ್ ಖಡಕ್ ಉತ್ತರ

    ಸಿಎಂ ಕುಮಾರಸ್ವಾಮಿ ಕೆಂಡಾಮಂಡಲ -ಅನಿರುದ್ಧ್ ಖಡಕ್ ಉತ್ತರ

    ಬೆಂಗಳೂರು: ಪದ ಬಳಕೆ ಮಾಡುವಾಗ ಪದಗಳ ಗಾಂಭೀರ್ಯತೆಯನ್ನು ಅರ್ಥ ಮಾಡಿಕೊಳ್ಳಬೇಕು. ಕಲಾವಿದರು ಮಾಡಿದ ಕೆಲಸಕ್ಕೆ ಸರ್ಕಾರ ಗೌರವ ಕೊಟ್ಟಿದ್ದೇವೆ ಎಂದು ಸಿಎಂ ಕುಮಾರಸ್ವಾಮಿ ದಿವಂಗತ ವಿಷ್ಣುವರ್ಧನ್ ಅಳಿಯ ನಟ ಅನಿರುದ್ಧ್ ವಿರುದ್ಧ ಕಿಡಿಕಾರಿದ್ದರು. ಈಗ ಸಿಎಂ ಮಾತಿಗೆ ಅನಿರುದ್ಧ್ ಸ್ಪಷ್ಟನೆ ಕೊಟ್ಟಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ನಟ ಅನಿರುದ್ಧ, ನನಗೆ ವೈಯಕ್ತಿಕವಾಗಿ ಸಿಎಂ ಕುಮಾರಸ್ವಾಮಿ ಮೇಲೆ ತುಂಬಾ ಆತ್ಮೀಯತೆ ಇದೆ. ಅವರ ಮೇಲೆ, ಅವರ ಕುಟುಂಬದ ಮೇಲೆ ಸಾಕಷ್ಟು ಗೌರವವಿದೆ. ಅಂದು ಅಪ್ಪಾಜಿ ಮೃತಪಟ್ಟಿದ್ದಾಗ ಬಂದು ಎಲ್ಲಿ ಮಾಡಬೇಕು ಎಂದುಕೊಂಡಿದ್ದೀರ ಅಂತ ಕೇಳಿದ್ದರು. ಅದಕ್ಕೆ ನಾನು ನೇರವಾಗಿ ಬನಶಂಕರಿನಲ್ಲೇ ಅಂತ್ಯಸಂಸ್ಕಾರ ಮಾಡಬೇಕು ಎಂದು ಕೊಂಡಿದ್ದೇನೆ ಅಂತ ಹೇಳಿದ್ದೆ. ವಿಷ್ಣುವರ್ಧನ್ ದೊಡ್ಡ ಕಲಾವಿದರು, ಅವರಿಗಾಗಿ ವಿಶೇಷ ಜಾಗ ಆಗಬೇಕು ಅಂತ ಅಪ್ಪಾಜಿ ಅವರು ಅಂದರೆ ದೇವೇಗೌಡರು ಹೇಳಿದ್ದಾರೆ ಅಂತ ತಿಳಿಸಿದ್ದರೆಂದು ಅನಿರುದ್ಧ್ ಹೇಳಿದರು.

    ಅದರಂತಯೇ ಸ್ಮಾರಕಕ್ಕೆ  2004ರಲ್ಲಿ ಕೇಸ್ ಹಾಕಿರುವ ಜಾಗವನ್ನು ಕೊಟ್ಟಿದ್ದರು. ಆದರೆ ಇಂದಿಗೂ ಸ್ಮಾರಕ ಆಗಿಲ್ಲ. ಒಂಬತ್ತು ವರ್ಷದ ತಾಳ್ಮೆ, ಶ್ರಮ ಇದೆ. ನಾಲ್ಕು ಗಂಟೆಗಳು ನಾನು ಅಮ್ಮ ಕಾದು ಕುಳಿತ್ತಿದ್ದವು. ಆದರೆ ಬ್ಯುಸಿ ಎಂದು ಪ್ರತಿಕ್ರಿಯಿಸಿಲಿಲ್ಲ. ಮಾರನೇ ದಿನ, ಒಂದುವಾರ, 10 ದಿನಗಳ ಬಳಿಕ ಕರೆಸಿ ಮಾತನಾಡಿದ್ದರು. ಆದರೂ ಇದುವರೆಗೂ ಮಾತನಾಡಿಲ್ಲ ಎಂದು ಬೇಸರಿಂದ ಅನಿರುದ್ಧ ಹೇಳಿದ್ದಾರೆ.

    ನಾವು 5 ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದೇವೆ. ತುಂಬಾ ಕಚೇರಿ, ಅಧಿಕಾರಿಗಳ ಮನೆಗೆ ಅಲೆದಾಡಿದ್ದೇವೆ. ಏನು ಪ್ರಯೋಜವಾಗಿಲ್ಲ. ಅವರೇ ಸ್ಮಾರಕ ಮಾಡಬೇಕು ಎಂದು ಹೇಳಿ 11 ಕೋಟಿ ರೂ. ಹಣವನ್ನು ನೀಡಿದ್ದರು. ಇದುವರೆಗೂ ಸ್ಮಾರಕ ಆಗಿಲ್ಲ. ಸರ್ಕಾರ ಕೊಟ್ಟಿರುವ ಮಾತನ್ನ ನಡೆಸಿಕೊಡಲಿ ಇದನ್ನು ನಾನು ಕೈ ಮುಗಿದು, ಕಳಕಳಿಯಿಂದ ಕೇಳಿಕೊಳ್ಳುತ್ತಿದ್ದೇನೆ ಎಂದು ಮನವಿ ಮಾಡಿಕೊಂಡರು.


    ಅಭಿಮಾನಿಗಳು ಪ್ರತಿದಿನ ಕರೆ ಮಾಡಿ ಸರ್ ಪ್ರತಿಭಟನೆ ಮಾಡೋಣ, ಸ್ಮಾರಕ ಇನ್ನು ಮಾಡಿಲ್ಲ ಅಂತ ಹೇಳುತ್ತಾರೆ. ನಾನು ಬೇಡ ಅಪ್ಪಾಜಿ ಅವರು ಶಾಂತಿಯಿಂದ ಇರಬೇಕೆಂದು ಇಷ್ಟ ಪಡುತ್ತಾರೆ. ಆದ್ದರಿಂದ ನಾವು ಗಲಾಟೆ ಮಾಡುವುದು ಬೇಡ ಎಂದು ಸಮಾಧಾನ ಮಾಡುತ್ತಿದ್ದೇನೆ. ಮನಷ್ಯನಿಗೆ ತಾಳ್ಮೆ ಅಂತ ಇರುತ್ತೆ. ತಾಳ್ಮೆ ಕಳೆದುಕೊಂಡಾಗ ಈ ರೀತಿಯಾಗಿ ಮಾತನಾಡುತ್ತಾನೆ. ನಾನು ಕುಮಾರಸ್ವಾಮಿ ಅವರ ಬಗ್ಗೆ ಮಾತನಾಡಿಲ್ಲ. ಸರ್ಕಾರದ ಬಗ್ಗೆ ಮಾತನಾಡಿದ್ದೇವೆ. ಕ್ಷಮಿಸಿ ಅದನ್ನು ಅವರು ತಪ್ಪಾಗಿ ತಿಳಿದುಕೊಂಡಿದ್ದಾರೆ ಅಂತ ಅನಿರುದ್ಧ್ ಖಡಕ್ ಉತ್ತರ ಕೊಟ್ಟಿದ್ದಾರೆ.

    ನಾನು ಮಾನ, ಮರ್ಯಾದೇ, ಗೌರವ ಈ ಮಾತನ್ನು ಸರ್ಕಾರದ ಬಗ್ಗೆ ಹೇಳಿದ್ದೇನೆ. ಕುಮಾರಸ್ವಾಮಿ ಬಗ್ಗೆ ಹೇಳಿಲ್ಲ. ಸ್ಮಾರಕದ ಮುಂದಾಳತ್ವವನ್ನು ಸಿಎಂ ವಹಿಸಿಕೊಳ್ಳಬೇಕು. ನಾವು ಅದರ ಬಗ್ಗೆ ಗಮನ ಕೊಡುತ್ತಿದ್ದೇವೆ ಎಂದು ಸುಮ್ಮನೆ ಕುಳಿತಿಕೊಂಡರೆ ಕೆಲಸ ಆಗದು. ರೈತರನ್ನು, ನಮ್ಮನ್ನು ಕರೆಸಿ ಮಾತನಾಡಬೇಕು. ನಾವು ಹೋದಾಗ ಸರ್ಕಾರ, ಸರ್ಕಾರಿ ಅಧಿಕಾರಿಗಳು ತುಂಬಾ ಗೌರವ, ಭರವಸೆ ಕೊಡುತ್ತಾರೆ. ಆದರೆ ಸ್ಮಾರಕದ ಕೆಲಸ ಏನು ನಡೆಯುತ್ತಿಲ್ಲ ಎಂದು ಗರಂ ಆಗಿ ಮಾತನಾಡಿದ್ದಾರೆ.

    ಬ್ರಹ್ಮ, ವಿಷ್ಣು, ಮಹೇಶ್ವರ ಮೂವರು ಒಂದೇ ಕಡೆ ಇರುವುದಿಲ್ಲ. ಸರ್ಕಾರ ಸ್ಮಾರಕ ಮಾಡಿದರು ನಾನು ಖಂಡಿತ ಒಪ್ಪಲ್ಲ. ಸುಮಾರು 5 ಜಾಗವನ್ನು ತೋರಿಸಿದರು. ನಾವು ಏನು ಮಾತನಾಡದೇ ಒಪ್ಪಿಕೊಂಡಿದ್ದೇವು. ಆದರೆ ಸ್ಮಾರಕ ನಿರ್ಮಾಣದ ಕೆಲಸ ಪ್ರಾರಂಭಿಸುವ ಮೊದಲೇ ಏನೋ ಸಮಸ್ಯೆಯಾಗಿ ಕ್ಯಾನ್ಸಲ್ ಆಗುತ್ತಿತ್ತು. ಈಗ ಮೈಸೂರಿನಲ್ಲಿ ತೋರಿಸಿರುವ ಜಾಗದಲ್ಲಿ ಸ್ಮಾರಕ ನಿರ್ಮಾಣ ಮಾಡುತ್ತಿದ್ದೇವೆ. ಆದರೆ ಅಲ್ಲಿಗೂ ರೈತರು ಬಂದು ಕೇಸ್ ಹಾಕಿದ್ದಾರೆ. ಆದ್ದರಿಂದ ಕೆಲಸ ನಿಂತು ಹೋಗಿದೆ. ಹೀಗಾಗಿ ಈ ಬಗ್ಗೆ ವಿಚಾರಣೆ ಮಾಡಿ ಬೇಗ ಕೆಲಸ ಮುಂದುವರಿಸುವಂತೆ ಮಾಡಿಕೊಡಿ ಎಂದು ಕಳಕಳಿಯಿಂದ ಅನಿರುದ್ಧ್ ಕೇಳಿಕೊಂಡರು.

    ಒಂಬತ್ತು ವರ್ಷಗಳಾದರೂ ಸ್ಮಾರಕ ನಿರ್ಮಾಣವಾಗಿಲ್ಲ. ಅಮ್ಮ ಎಷ್ಟು ದಿನ ಕಣ್ಣೀರು ಹಾಕಿದ್ದಾರೆ ಅಂತ ನನಗೆ ಗೊತ್ತು. ಸರ್ಕಾರ ಒಂದು ಕೆಲಸವನ್ನು ಮಾಡಿಕೊಡುತ್ತೇನೆ ಎಂದು ಗಡುವು ಕೊಟ್ಟಿರುತ್ತದೆ. ಆ ಗಡುವಿನಲ್ಲೇ ಕೆಲಸ ಮಾಡಿಕೊಡಬೇಕು. ವಿಷ್ಣು ಅಭಿಮಾನಿಗಳು ಸಿಂಹಗಳಿದಂತೆ ಅವರನ್ನು ಬಡಿದು ಎಬ್ಬಿಸಬೇಡಿ. ಆದ್ದರಿಂದ ಮುಂದಿನ ತಿಂಗಳ ಡಿಸೆಂಬರ್ 30ರವಗೆ ವಿಷ್ಣು ಸ್ಮಾರಕದ ಕೆಲಸ ಶುರುವಾಗಬೇಕು ಎಂದು ನಾನು ಪ್ರೀತಿಯಿಂದ ಗಡುವು ಕೊಡುತ್ತಿದ್ದೇನೆ ಎಂದು ಅನಿರುದ್ಧ್ ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅನಿರುದ್ಧ್ ಹೇಳಿಕೆಗೆ ಕ್ಷಮೆ ಕೋರಿದ ಭಾರತಿ ವಿಷ್ಣುವರ್ಧನ್

    ಅನಿರುದ್ಧ್ ಹೇಳಿಕೆಗೆ ಕ್ಷಮೆ ಕೋರಿದ ಭಾರತಿ ವಿಷ್ಣುವರ್ಧನ್

    ಬೆಂಗಳೂರು: ಸಿಎಂ ಕುಮಾರಸ್ವಾಮಿ ಅವರ ಭೇಟಿಗೆ ಅವಕಾಶ ಲಭಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದ ನಟ ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಅವರ ಮಾತಿಗೆ ಭಾರತಿ ವಿಷ್ಣುವರ್ಧನ್ ಕ್ಷಮೆ ಕೋರಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಭಾರತಿ ವಿಷ್ಣುವರ್ಧನ್, ನಾವು ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲು ತೆರಳಿದ್ದೇವು. ಆದರೆ ಅಂದು ಕಾದು ಕಾದು ವಾಪಸ್ ಆಗಿದ್ದೇವು. ಆ ಬಳಿಕ 3 ದಿನಗಳಲ್ಲಿ ಭೇಟಿಗೆ ಅವಕಾಶ ಮಾಡಿಕೊಡುವುದಾಗಿ ಹೇಳಿದ್ದರು. ಆದರೆ ಆ ಬಗ್ಗೆ ಮಾಹಿತಿ ನೀಡಲಿಲ್ಲ. ಅದ್ದರಿಂದ ಅನಿರುದ್ಧ್ ಅವರಿಗೆ ನೋವುಂಟಾಗಿ ಈ ರೀತಿ ಹೇಳಿಕೆ ನೀಡಿರಬಹುದು ಎಂದು ಸ್ಪಷ್ಟನೆ ನೀಡಿದರು.

    ಸಾಂದರ್ಭಿಕ ಚಿತ್ರ

    ಅನಿರುದ್ಧ್ ಅವರು ಎಂದು ಈ ರೀತಿ ಮಾತನಾಡಿದವರಲ್ಲ. ಆದರೆ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣದಲ್ಲಿ 5 ಸಿಎಂ ಬದಲಾದರು ನಿರೀಕ್ಷಿತ ರೀತಿಯಲ್ಲಿ ಕಾರ್ಯ ನಡೆದಿಲ್ಲ. ಈ ಬಗ್ಗೆ ಅವರಿಗೆ ಸಾಕಷ್ಟು ನೋವಿದೆ. ಅದ್ದರಿಂದ ಇಂತಹ ಪದ ಉಪಯೋಗ ಮಾಡಿರಬಹುದು ಅಷ್ಟೇ. ಉದ್ದೇಶ ಪೂರ್ವಕವಾಗಿ ಈ ಬಗ್ಗೆ ಅನಿರುದ್ಧ ಮಾತನಾಡಿಲ್ಲ. ಆದ್ದರಿಂದ ಸಿಎಂ ವರಿಗೆ ನೋವುಂಟಾಗಿದ್ದೆ ಅನಿರುದ್ಧ್ ಪರವಾಗಿ ನಾನು ಸಿಎಂ ಬಳಿ ಈ ಮೂಲಕ ಕ್ಷಮೆ ಕೇಳುತ್ತೇನೆ ಎಂದು ತಿಳಿಸಿದರು.

    ಮೈಸೂರಲ್ಲೇ ಸ್ಮಾರಕ: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಅಧಿಕಾರ ಅವಧಿಯಲ್ಲೇ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡುವ ಕಾರ್ಯ ಆರಂಭವಾಗಿದೆ. ಆದ್ದರಿಂದ ಅಲ್ಲೇ ಅದನ್ನು ಪೂರ್ಣಗೊಳಿಸಬೇಕು. ಸಿಎಂ ಅವರಿಗೆ ನಾನು ಕೂಡ ಈ ಬಗ್ಗೆ ಮನವಿ ಮಾಡುತ್ತೇನೆ. ಈ ಕುರಿತು ಉಂಟಾಗಿರುವ ತೊಂದರೆಯನ್ನು ನಿವಾರಣೆ ಮಾಡಿ ಸ್ಮಾರಕ ನಿರ್ಮಾಣ ಕಾರ್ಯ ಪುನರ್ ಆರಂಭವಾಗುವಂತೆ ಮಾಡಲು ಅವಕಾಶ ಮಾಡಿಕೊಡ ಬೇಕೆಂದು ಮನವಿ ಮಾಡಿದರು.

    ಇದೇ ವೇಳೆ ಕೆಲ ಅಭಿಮಾನಿಗಳು ವಿಷ್ಣುವರ್ಧನ್, ಅಂಬರೀಶ್ ಹಾಗೂ ರಾಜ್‍ಕುಮಾರ್ ಅವರ ಸ್ಮಾರಕ ಒಂದೇ ಸ್ಥಳದಲ್ಲಿ ನಿರ್ಮಾಣ ಆಗಲಿ ಎಂಬ ಇಟ್ಟಿದ್ದ ಬೇಡಿಕೆ ಬಗ್ಗೆ ಭಾರತಿ ವಿಷ್ಣುವರ್ಧನ್ ಅವರು ಸ್ಪಷ್ಟನೆಯನ್ನು ನೀಡಿದ್ದು, ಈಗಾಗಲೇ ಮೈಸೂರಿನಲ್ಲಿ ಅವರ ಸ್ಮಾರಕ ನಿರ್ಮಾಣ ಕಾರ್ಯ ಒಂದು ಹಂತಕ್ಕೆ ಆಗಿರುವುದರಿಂದ ಮತ್ತೆ ಅದರ ಸ್ಥಳಾಂತರದ ಚರ್ಚೆ ಬೇಡ. ಈ ಬಗ್ಗೆ ಚರ್ಚೆ ಮಾಡಲು ನಮಗೆ ಇಷ್ಟವಿಲ್ಲ. ಏಕೆಂದರೆ ಅದಕ್ಕೆ ಕಾಲಾವಕಾಶ ಅಂತ್ಯವಾಗಿದೆ. ಕೆಲವರು ಸ್ಮಾರಕದ ಬಗ್ಗೆ ಕೋರ್ಟ್ ಮೆಟ್ಟಿಲು ಹತ್ತಿದ್ದು, ಸಿಎಂ ಅವರು ಈ ಕುರಿತು ಚರ್ಚೆ ನಡೆಸಿ ತೀರ್ಮಾನ ಕೈಗೊಂಡರೆ ಒಳಿತು. ನಾನು ಈ ಬಗ್ಗೆ ಸಿಎಂ ಅವರೊಂದಿಗೆ ಚರ್ಚೆ ನಡೆಸಲು ಸಿದ್ಧಳಾಗಿದ್ದೇನೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv