Tag: BharatJodoYatra

  • ಹಿಂದೂ ಕಾರ್ಯಕರ್ತರ ಸರಣಿ ಹತ್ಯೆ ನಡೆದಾಗ ಬರಲಿಲ್ಲ, ಇದೀಗ ಅಧಿಕಾರಕ್ಕಾಗಿ ಇಷ್ಟೊಂದು ನಾಟಕವೇ?: ಸುಧಾಕರ್

    ಹಿಂದೂ ಕಾರ್ಯಕರ್ತರ ಸರಣಿ ಹತ್ಯೆ ನಡೆದಾಗ ಬರಲಿಲ್ಲ, ಇದೀಗ ಅಧಿಕಾರಕ್ಕಾಗಿ ಇಷ್ಟೊಂದು ನಾಟಕವೇ?: ಸುಧಾಕರ್

    ಬೆಂಗಳೂರು: ಕಾಶ್ಮೀರದಲ್ಲಿ ಹಿಂದೂಗಳ ಮಾರಣ ಹೋಮ ನಡೆದಾಗ ಭಾರತ್ ಜೋಡೋ ಯಾತ್ರೆ (Bharat Jodo Yatra) ನೆನಪಾಗಲಿಲ್ಲ. ಮುಂಬಯಿ ಮೇಲೆ ಉಗ್ರರ ದಾಳಿ, ಬೋಧ ಗಯಾದಲ್ಲಿ ಭಯೋತ್ಪಾದಕ ದಾಳಿ ನಡೆದಾಗ ಸಹಬಾಳ್ವೆಯ ನೆನಪಾಗಲಿಲ್ಲ. ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತರ ಸರಣಿ ಹತ್ಯೆ ನಡೆದಾಗ ಶಾಂತಿ ಮಂತ್ರದ ಸ್ಮರಣೆ ಬರಲಿಲ್ಲ. ಈಗ ಮರಳಿ ಅಧಿಕಾರ ಗಳಿಸುವುದಕ್ಕಾಗಿ ಇಷ್ಟೊಂದು ನಾಟಕವೇ ಎಂದು ಸಚಿವ ಡಾ.ಕೆ ಸುಧಾಕರ್ (Dr.K Sudhakar) ಸರಣಿ ಟ್ವೀಟ್ ಮೂಲಕ ಭಾರತ್ ಜೋಡೋ ಯಾತ್ರೆ ಕುರಿತಾಗಿ ಟೀಕಿಸಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?
    ರಾಹುಲ್ ಗಾಂಧಿ (RahulGandhi)  ನೇತೃತ್ವದ ಭಾರತ್ ಜೋಡೋ ಯಾತ್ರೆ ಸೂತ್ರ ಹರಿದ ಗಾಳಿಪಟದಂತ ಒಂದು ವ್ಯರ್ಥ ಹಾರಾಟ. ಗೊತ್ತು- ಗುರಿ ಎರಡೂ ಇಲ್ಲದ ಈ ನಡಿಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ನಿಂದಿಸುವ ಏಕಮಾತ್ರ ಉದ್ದೇಶ ಹೊಂದಿರುವುದು ವಿಪರ್ಯಾಸ. ಕಾಂಗ್ರೆಸ್ ಈ ದೇಶವನ್ನು ಅರ್ಧ ಶತಮಾನಗಳ ಕಾಲ ಆಳಿದೆ. ಈ ಅವಧಿಯಲ್ಲಿ ರಾಹುಲ್ ಗಾಂಧಿಯವರ ಪೂರ್ವಜರು ಎಲ್ಲೆಲ್ಲಿ ದೇಶವನ್ನು ಒಡೆದರೋ ಅದೆಲ್ಲವನ್ನೂ ಜತನದಿಂದ ಕಟ್ಟುವ ಕಾರ್ಯವನ್ನು ಆರ್‌ಎಸ್‌ಎಸ್‌ ಮಾಡಿದೆ. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ ಕಾಂಗ್ರೆಸ್ಸಿಗರ ಭಾರತ ಬಿಟ್ಟು ಓಡೋ ಯಾತ್ರೆ: ನಳೀನ್ ಕುಮಾರ್ ಕಟೀಲ್

    ಈಗ ರಾಹುಲ್ ಗಾಂಧಿ ಕೂಡಿಸಿದ್ದನ್ನು ಕಳೆಯಲು ಹೊರಟಿದ್ದಾರೆ ಎಂಬುದೇ ಹೆಚ್ಚು ಸಮರ್ಪಕ ವ್ಯಾಖ್ಯಾನವಾದೀತು. ರಾಹುಲ್ ಗಾಂಧಿಯವರ ಪಾದಯಾತ್ರೆಯ ಸದುದ್ದೇಶವನ್ನು ಅರ್ಥ ಮಾಡಿಕೊಳ್ಳುವ ಅಗತ್ಯವೇ ಇಲ್ಲ. ಇದೊಂದು ಶುದ್ಧ ರಾಜಕೀಯ ಅಜೆಂಡಾದ ವಿಭಜಕ ಮನಸುಗಳ ವಿಜೃಂಭಣೆಯ ನಡಿಗೆ! ದೇಶ ವಿಭಜನೆ, ಕಾಶ್ಮೀರ ವಿಭಜನೆ, ಎಮರ್ಜೆನ್ಸಿ ಹೇರಿಕೆ, ಬೋಫೋರ್ಸ್ ಹಗರಣ (Bofors Scam), 2ಜಿ ಸ್ಯಾಮ್ (2G Spectrum case) ಇದೆಲ್ಲವೂ ಕಾಂಗ್ರೆಸ್ ನಡೆಸಿದ ವಿಭಜಕ ಆಡಳಿತದ ಫಲಶೃತಿ. ಇದೆಲ್ಲದರ ಸಾಕ್ಷಿ ಪ್ರಜ್ಞೆಯೇ ರಾಹುಲ್ ಗಾಂಧಿ. ಇನ್ನೇನು ಉಳಿಸಿದ್ದೀರಿ ಜೋಡಿಸುವುದಕ್ಕೆ? ನಿಮ್ಮ ಯಾತ್ರೆಯ ಕಾಲದಲ್ಲಿ ಒಮ್ಮೆಯಾದರೂ ಆತ್ಮವಿಮರ್ಶೆ ಮಾಡಿಕೊಂಡು ಈ ಪ್ರಶ್ನೆಗಳಿಗೆ ಉತ್ತರಿಸಿ. ಇದನ್ನೂ ಓದಿ: ಭಾರತ್ ರಾಷ್ಟ್ರ ಸಮಿತಿ – ರಾಷ್ಟ್ರೀಯ ಪಕ್ಷ ಪ್ರಾರಂಭಿಸಿದ KCR

    ಕಾಶ್ಮೀರದಲ್ಲಿ ಹಿಂದೂಗಳ ಮಾರಣ ಹೋಮ ನಡೆದಾಗ ಭಾರತ್ ಜೋಡೋ ಯಾತ್ರೆ ನೆನಪಾಗಲಿಲ್ಲ, ಮುಂಬಯಿ ಮೇಲೆ ಉಗ್ರರ ದಾಳಿ, ಬೋಧ ಗಯಾದಲ್ಲಿ ಭಯೋತ್ಪಾದಕ ದಾಳಿ ನಡೆದಾಗ ಸಹಬಾಳ್ವೆಯ ನೆನಪಾಗಲಿಲ್ಲ, ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತರ ಸರಣಿ ನಡೆದಾಗ ಶಾಂತಿ ಮಂತ್ರದ ಸ್ಮರಣೆ ಬರಲಿಲ್ಲ. ಈಗ ಮರಳಿ ಅಧಿಕಾರ ಗಳಿಸುವುದಕ್ಕಾಗಿ ಇಷ್ಟೊಂದು ನಾಟಕವೇ?

    Live Tv
    [brid partner=56869869 player=32851 video=960834 autoplay=true]

  • ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ, ಪ್ರಿಯಾಂಕಾ ಭಾಗಿ – ಡಿಕೆಶಿ

    ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ, ಪ್ರಿಯಾಂಕಾ ಭಾಗಿ – ಡಿಕೆಶಿ

    ಬೆಂಗಳೂರು: ಕಾಂಗ್ರೆಸ್ (Congress) ನಾಯಕ ರಾಹುಲ್‌ಗಾಂಧಿ (Rahul Gandhi) ನೇತೃತ್ವದಲ್ಲಿ ನಡೆಯಲಿರುವ ಭಾರತ್ ಜೋಡೋ (Bharath Jodo Yatra) ಪಾದಯಾತ್ರೆಯಲ್ಲಿ ಕಾಂಗ್ರೆಸ್ ಮಹಾ ನಾಯಕಿಯರಾದ ಸೋನಿಯಾ ಗಾಂಧಿ (Sonia Gandhi) ಹಾಗೂ ಪ್ರಿಯಾಂಕಾ ಗಾಂಧಿ (Priyanka Gandhi) ಅವರು ಭಾಗವಹಿಸಲಿದ್ದಾರೆ ಎಂದು ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

    ಖಾಸಗಿ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆಶಿ (DK Shivakumar), ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ನಡೆಯಲಿರುವ ಭಾರತ ಜೋಡೋ ಯಾತ್ರೆಯಲ್ಲಿ ಎಐಸಿಸಿ (AICC) ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಭಾಗವಹಿಸಲಿದ್ದಾರೆ. ಅವರು ಭಾಗವಹಿಸಲಿರುವ ದಿನಾಂಕ ಶೀಘ್ರದಲ್ಲೇ ತಿಳಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿಯವರು ನೆಪ ಹೇಳೋ ಬದಲು PFIಯನ್ನು ನಿಷೇಧಿಸಲಿ: ದಿನೇಶ್ ಗುಂಡೂರಾವ್

    ಇಂದು ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ (KC Venugopal) ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ಹೊತ್ತಿರುವ ರಣದೀಪ್ ಸುರ್ಜೇವಾಲ ಅವರು ಭಾರತ ಜೋಡೋ ಯಾತ್ರೆಯ ಸಿದ್ಧತೆಗಳ ಪರಿಶೀಲನೆ ಮಾಡುತ್ತಿದ್ದಾರೆ. ಈ ಯಾತ್ರೆ ಪ್ರಮುಖ 5 ವಿಚಾರಗಳನ್ನು ಒಳಗೊಂಡಿದೆ. ಈ ಯಾತ್ರೆಯಲ್ಲಿ ಎಲ್ಲಾ ಪ್ರಮುಖ ನಾಯಕರಿಗೆ ಜವಾಬ್ದಾರಿ ನೀಡಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

    ಹೇಗಿರಲಿದೆ ರೂಪುರೇಷೆ?
    ರಾಜ್ಯದಲ್ಲಿ ಸೆ.30 ರಂದು ಬೆಳಗ್ಗೆ 9 ಗಂಟೆಗೆ ಚಾಮರಾಜನಗರ (Chamarajanagar) ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಿಂದ ಭಾರತ ಐಕ್ಯತಾ ಯಾತ್ರೆ ಆರಂಭವಾಗಲಿದೆ. ಅ.2 ರಂದು ಬದನವಾಳು ಗ್ರಾಮದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ನಂತರ ದಸರಾ (Mysuru Dasara) ಹಬ್ಬದ ಪ್ರಯುಕ್ತ 2 ದಿನಗಳ ಕಾಲ ಯಾತ್ರೆಗೆ ಬಿಡುವು ನೀಡಲಾಗುವುದು. ಆಮೇಲೆ ಬಳ್ಳಾರಿಯಲ್ಲಿ (Bellary) ಬೃಹತ್ ಸಾರ್ವಜನಿಕ ಸಮಾವೇಶ ನಡೆಯಲಿದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಫಿಸಿಕಲ್ ಟ್ರೈನರ್‌ಗೆ ಉಂಗುರ ತೊಡಿಸಿ ಎಂಗೇಜ್ಡ್ ಆದ ಆಮೀರ್ ಖಾನ್ ಪುತ್ರಿ

    ಯಾತ್ರೆಯ ಭಾಗವಾಗಿ ರಾಹುಲ್ ಗಾಂಧಿ ಅವರು ಯುವಕರು, ಮಹಿಳೆಯರು, ರೈತರು, ನಾಗರಿಕ ಸಮುದಾಯಗಳು, ವಿದ್ಯಾರ್ಥಿಗಳು, ಬುಡಕಟ್ಟು ಜನರ ಜೊತೆ ಒಂದೊಂದು ದಿನ ಮಾತುಕತೆ ನಡೆಸಲಿದ್ದಾರೆ. ಪ್ರತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ, ಪಕ್ಷದ ಘಟಕಗಳು, ಪರಾಜಿತ ಅಭ್ಯರ್ಥಿಗಳು ಜನರನ್ನು ಕರೆ ತಂದ ದಿನ ರಾಹುಲ್ ಗಾಂಧಿ ಅವರ ಜತೆ ಹೆಜ್ಜೆ ಹಾಕಲು ಅವಕಾಶ ಮಾಡಿಕೊಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

    ನಾಗರಿಕ ಸಮಾಜದ ಗಣ್ಯರು, ಕಲಾವಿದರು, ಕೈಗಾರಿಕೋದ್ಯಮಿಗಳು, ಚಿಂತಕರು ಸೇರಿದಂತೆ ಪ್ರಮುಖರಿಗೆ ಅವಕಾಶ ಮಾಡಿಕೊಡಲಾಗುವುದು. ಈ ಯಾತ್ರೆ ಮಾರ್ಗದಲ್ಲಿ ಬರುವ ಅತಿ ದೊಡ್ಡ ನಗರ ಮೈಸೂರು ಆಗಿದ್ದು, ಮೈಸೂರು ಜನರು ಬೆಳಗ್ಗೆ 7 ಗಂಟೆಗೆ ರಾಹುಲ್ ಗಾಂಧಿ ಜತೆಗೆ ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ಹೇಳಿದ್ದಾರೆ.

    ಪಕ್ಷದ ಅಧ್ಯಕ್ಷ ಸ್ಥಾನದ ಚುನಾವಣೆ (Congress Presidential Election) ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ರಾಹುಲ್ ಗಾಂಧಿಯವರು ಪಕ್ಷದ ಮುಂದಾಳತ್ವ ವಹಿಸಬೇಕು ಎಂದು ನಮ್ಮ ರಾಜ್ಯದ ಎಲ್ಲಾ ನಾಯಕರ ಒತ್ತಾಸೆಯಾಗಿದೆ. ಆದರೆ ಅವರು ಯಾವ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಕಾದು ನೋಡಬೇಕು ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]