Tag: Bhargav

  • ದ್ವಾರಕೀಶ್ ನನ್ ಗುರು, ಅನ್ನದಾತ: ಭಾವುಕರಾದ ನಿರ್ದೇಶಕ ಭಾರ್ಗವ್

    ದ್ವಾರಕೀಶ್ ನನ್ ಗುರು, ಅನ್ನದಾತ: ಭಾವುಕರಾದ ನಿರ್ದೇಶಕ ಭಾರ್ಗವ್

    ಹಿರಿಯ ನಟ ದ್ವಾರಕೀಶ್ (Dwarakish) ಅವರ ನಿಧನಕ್ಕೆ (Passed away) ಹಿರಿಯ ನಿರ್ದೇಶಕ ಭಾರ್ಗವ್ (Bhargav) ಸಂತಾಪ ಸೂಚಿಸಿದ್ದಾರೆ. ದ್ವಾರಕೀಶ್ ಅವರ ಸಂಬಂಧಿಯೂ ಆಗಿರುವ ಭಾರ್ಗವ್, ಅಗಲಿದ ದ್ವಾರಕೀಶ್ ಅವರನ್ನು ನೆನಪಿಸಿಕೊಂಡಿದ್ದು ಹೀಗೆ, ನಾನು ಮತ್ತು ದ್ವಾರಕೀಶ್ ಬಾಲ್ಯದ ಸ್ನೇಹಿತರು. ಸ್ಕೂಲ್ ಕಾಲೇಜು ಶಿಕ್ಷಣ ಒಟ್ಟಿಗೆ ಕಲಿತಿದ್ದೇವೆ. ಕಾಲೇಜು ದಿನಗಳಿಂದಾನೇ ದ್ವಾರಕೀಶ್ ಗೆ ನಟನಾ ಆಸಕ್ತಿ. ಅವ್ರ ಅಣ್ಣ ಮೈಸೂರಲ್ಲಿ ಅಂಗಡಿ ಹಾಕಿ ಕೊಟ್ಟಿದ್ರು. ಅಂಗಡಿ ಬಿಟ್ಟು ಬೆಂಗಳೂರಿಗೆ ನಟ ಆಗೋಕೆ ಬಂದ್ರು. ಚಿತ್ರರಂಗದಲ್ಲಿ 50ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ಮಿಸಿದ್ದಾರೆ. ನನ್ಗೆ ಅವ್ನು ಅನ್ನದಾತ ಅವ್ನಿಂದ್ಲೇ ನಾನು ಚಿತ್ರರಂಗಕ್ಕೆ ಬಂದೆ . ದ್ವಾರಕೀಶ್ ನನ್ ಗುರು ಅನ್ನದಾತ ಎಂದು ಭಾರ್ಗವ್ ಭಾವುಕ ಮಾತುಗಳನ್ನು ಆಡಿದ್ದಾರೆ.

    81 ವರ್ಷದ ದ್ವಾರಕೀಶ್ 19 ಅಗಷ್ಟ್ 1942ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದರು. ತಂದೆ ಶಾಮರಾವ್ ಮತ್ತು ತಾಯಿ ಜಯಮ್ಮ. ಶಾರದ ವಿಲಾಸ್ ಮತ್ತು ಬನುಮಯ್ಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ್ದಾರೆ. ಫ್ರೌಡಶಿಕ್ಷಣದ ನಂತರ ಸಿಪಿಸಿ ಪಾಕಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮುಗಿಸಿದರು. ನಂತರ ತಮ್ಮ ಸಹೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಆರಂಭಿಸಿದ್ದರು. 1963ರಲ್ಲಿ ವ್ಯಾಪಾರ ಬಿಟ್ಟು ನಟನೆಯತ್ತ ಮುಖ ಮಾಡಿದ ದ್ವಾರಕೀಶ್ ತಮ್ಮ ಸೋದರ ಮಾವ ಹುಣಸೂರು ಕೃಷ್ಣಮೂರ್ತಿ ಅವರ ಮೂಲಕ 1964ರಲ್ಲಿ ‘ವೀರ ಸಂಕಲ್ಪ’ ಚಲನಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ದ್ವಾರಕೀಶ್, ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ಈವರೆಗೂ ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ.

    ನಿರ್ಮಾಪಕರಾಗಿ ಡಾ.ರಾಜ್ ಅವರೊಂದಿಗೆ ‘ಮೇಯರ್ ಮುತ್ತಣ್ಣ’ ಭಾಗ್ಯವಂತರು ನಿರ್ಮಿಸಿದರು. ನಂತರ  ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಜೋಡಿ ಬಹಳ ಪ್ರಸಿದ್ಧಿ ಪಡೆಯಿತು. ಕಳ್ಳ-ಕುಳ್ಳ ಎಂದೇ ಪ್ರಸಿದ್ದವಾಗಿದ್ದ ಇವರಿಬ್ಬರು ಉತ್ತಮ ಸ್ನೇಹಿತರಾಗಿದ್ದು, ದ್ವಾರಕೀಶ್ ವಿಷ್ಣು ಅಭಿನಯದ ಬಹುತೇಕ ಸಿನಿಮಾಗಳಲ್ಲಿ ತೆರೆಹಂಚಿಕೊಂಡಿದ್ದರು. 2006 ರಲ್ಲಿ ಆಪ್ತಮಿತ್ರ ನಿರ್ಮಾಣ ಮಾಡಿದ ದ್ವಾರಕೀಶ್ ಅತ್ಯಂತ ಯಶಸ್ಸು ಕಂಡಿದ್ದರು.

     

    ನಂತರ ಹಲವಾರು ಚಿತ್ರ ನಿರ್ಮಾಣ ಮಾಡಿದರು ಅಂತಹ ಯಶಸ್ಸು ಕಾಣದೆ ಕಂಗಾಲಾಗಿದ್ದರು. ಚಿತ್ರಜೀವನದಲ್ಲಿ ಹಲವಾರು ಏಳುಬಿಳು ಕಂಡ ದ್ವಾರಕೀಶ್ ಕರ್ನಾಟಕದ ಕುಳ್ಳ ಎಂಬ ಖ್ಯಾತಿಯ ಜೊತೆಗೆ ವಿದೇಶದಲ್ಲಿ ಚಿತ್ರೀಕರಣ ಲಂಡನ್ ನಲ್ಲಿ ಹಾಡುಗಳ ಧ್ವನಿಮುದ್ರಣ , ಕಿಶೋರ್ ಕುಮಾರ್ ಅವರಂತಹ ಗಾಯಕರನ್ನು ಪರಿಚಯಿಸಿದ್ದು. ನಟ. ನಟಿಯರನ್ನ, ಸಂಗೀತಗಾರನ್ನ, ಗಾಯಕರನ್ನು,  ತಂತ್ರಜ್ಞರನ್ನು ಪರಿಚಯಿಸಿದ ಸಾಹಸಿ ಇದೇ ದ್ವಾರಕೀಶ್.

  • ಕಿರುತೆರೆ ಖಡಕ್ ಖಳನಟ ಈಗ ಬೆಳ್ಳಿತೆರೆಯ ನಾಯಕನಟ – ‘ಬಹುಕೃತಂ ವೇಷಂ’ನಲ್ಲಿ ಶಶಿಕಾಂತ್ ಹೊಸ ಅವತಾರ

    ಕಿರುತೆರೆ ಖಡಕ್ ಖಳನಟ ಈಗ ಬೆಳ್ಳಿತೆರೆಯ ನಾಯಕನಟ – ‘ಬಹುಕೃತಂ ವೇಷಂ’ನಲ್ಲಿ ಶಶಿಕಾಂತ್ ಹೊಸ ಅವತಾರ

    ಬೆಂಗಳೂರು: ಕಿರುತೆರೆಯ ನಟ-ನಟಿಯರು ಚಂದನವನದತ್ತ ಮುಖ ಮಾಡೋದು ಕಾಮನ್. ಆದರೆ ಇತ್ತೀಚಿನ ದಿನಗಳಲ್ಲಿ ಇದರ ಸಂಖ್ಯೆ ಬಹುಪಾಲು ಹೆಚ್ಚಾಗಿದೆ. ಕಿರುತೆರೆಯಲ್ಲಿ ಜನರ ಮನೆ ಮನಸ್ಸುಗಳಲ್ಲಿ ಬೇರೂರುವ ಮೂಲಕ ಬೆಳ್ಳಿ ಪರೆದೆ ಮೇಲೆ ಪ್ರಯೋಗಕ್ಕೆ ಮುಂದಾಗಿಗುತ್ತಿದ್ದಾರೆ. ಆ ಸಾಲಿಗೆ ಮತ್ತೊಬ್ಬ ನಟ ಸೇಪರ್ಡೆಯಾಗಿದ್ದಾರೆ. ಅವರೇ ಕುಲವಧು ಧಾರಾವಾಹಿ ಖ್ಯಾತಿಯ ಖಳನಟ ಶಶಿಕಾಂತ್.

    ‘ಬಹುಕೃತ ವೇಷಂ’ ಸಿನಿಮಾ ಮೂಲಕ ನಾಯಕ ನಟನಾಗಿ ಸಿಲ್ವರ್ ಸ್ಕ್ರೀನ್ ಮೇಲೆ ಮಿಂಚಲು ಸಜ್ಜಾಗಿದ್ದಾರೆ. ಕಿರುತೆರೆಯ ಖಡಕ್ ಖಳನಟ ಶಶಿಕಾಂತ್. ಖಾಸಗಿ ವಾಹಿನಿಯ ಕುಲವಧು ಧಾರಾವಾಹಿಯಲ್ಲಿ ವಿಲನ್ ರೋಲ್ ನಲ್ಲಿ ಜನಮನ್ನಣೆ ಪಡೆದ ಶಶಿಕಾಂತ್ ನಾಯಕನಟನಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಹಾಗಂತ ಇದೇನು ಇವರ ಮೊದಲ ಸಿನಿಮಾವಲ್ಲ. ಇದಕ್ಕೂ ಮುನ್ನ ರಣರಣಕ, ಗೌಡ್ರು ಸೈಕಲ್ ಸಿನಿಮಾಗಳಲ್ಲಿ ನಟನಾಗಿ ಭರವಸೆ ಮೂಡಿಸಿದ್ದಾರೆ. ಇದೀಗ ‘ಬಹುಕೃತ ವೇಷಂ’ ಸಿನಿಮಾ ಮೂಲಕ ಮತ್ತೊಮ್ಮೆ ಸೌಂಡ್ ಮಾಡಲು ಸಜ್ಜಾಗಿದ್ದಾರೆ. ಈಗಾಗಲೇ ಚಿತ್ರದ ಫಸ್ಟ್ ಲುಕ್, ಟೀಸರ್ ಹಾಗೂ ಒಂದು ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಿ ಗಮನ ಸೆಳೆಯುತ್ತಿದೆ. ಬಿಡುಗಡೆಯ ಅಂಚಿನಲ್ಲಿರುವ ಈ ಚಿತ್ರ ಸೆನ್ಸಾರ್ ಅಂಗಳದಲ್ಲಿದೆ.

    ಎಲ್ಲರೂ ಜೀವನದಲ್ಲಿ ಒಂದಲ್ಲ ಒಂದು ಕಾರಣಕ್ಕೆ ಮುಖವಾಡ ಹಾಕುತ್ತಾರೆ. ಹಾಗೆಯೇ ಪ್ರೀತಿಯನ್ನು ಪಡೆಯಲು ಮುಖವಾಡ ಹಾಕಬೇಕಾಗುತ್ತೆ. ಇದನ್ನೇ ಚಿತ್ರದ ಎಳೆಯಾಗಿಟ್ಟುಕೊಂಡು ಚೆಂದದ ಪ್ರೇಮ್ ಕಹಾನಿ ಹೆಣೆದಿದ್ದಾರೆ ಅಧ್ಯಾಯ್ ತೇಜ್. ಚಿತ್ರಕಥೆ ಕೂಡ ಇವರದ್ದೇ. ಕ್ಯೂಟ್ ಲವ್ ಸ್ಟೋರಿ ಜೊತೆಗೆ ಸೈಕಲಾಜಿಕಲ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರಕ್ಕೆ ಪ್ರಶಾಂತ್ ಯಲ್ಲಂಪಳ್ಳಿ ಆಕ್ಷನ್ ಕಟ್ ಹೇಳಿದ್ದಾರೆ. ನಾಯಕ ನಟಿಯಾಗಿ ಅಗ್ನಿಸಾಕ್ಷಿ ಖ್ಯಾತಿಯ ವೈಷ್ಣವಿ ನಟಿಸಿದ್ದಾರೆ. ಇದನ್ನೂ ಓದಿ: ಮದುವೆಗೆ ಸ್ಥಳ ಹುಡುಕುತ್ತ ಜೈಪುರಗೆ ಬಂದ್ರು ಲವ್ ಬರ್ಡ್ಸ್

    ಕಿರುತೆರೆಯಿಂದ ಹಿರಿತೆರೆಗೆ ಕಾಲಿಟ್ಟಿರುವ ಶಶಿಕಾಂತ್ ಬೆಳ್ಳಿಪರದೆ ಮೇಲೆ ತಮ್ಮದೇ ಛಾಪನ್ನು ಒತ್ತಬೇಕೆಂಬ ಮಹದಾಸೆಯನ್ನು ಹೊಂದಿದ್ದಾರೆ. ಹಾಗಂತ ಇಲ್ಲಿವರೆಗೆ ನಡೆದುಬಂದ ಸುಲಭದಲ್ಲ. ಮೂಲತಃ ಮಂಡ್ಯದವರಾದ ಶಶಿಕಾಂತ್ ರೈತ ಕುಟುಂಬದವರು. ಬಿಎಸ್ಸಿ ಓದಿಕೊಂಡಿರುವ ಶಶಿಕಾಂತ್ ಗೆ ಕಾಲೇಜು ದಿನಗಳಿಂದ ರಂಗಭೂಮಿ ನಂಟು. ಆಗಲೇ ನಟನಾಗಬೇಕು ಎಂದು ಕನಸು ಕಂಡವರು. ಬಿಎಸ್‍ಸಿ ಮುಗಿಯುತ್ತಿದ್ದಂತೆ ಉದ್ಯೋಗ ಅರಸಿ ಬಂದ ಶಶಿಕಾಂತ್ ಪ್ರೊಫೇಶನ್ ಬಿಟ್ಟು ಆಯ್ಕೆ ಮಾಡಿಕೊಂಡಿದ್ದು ಫ್ಯಾಶನ್. ಬೆಂಗಳೂರಿಗೆ ಬಂದವರೇ ಸೀದಾ ರಂಗಭೂಮಿ ತಂಡ ಸೇರಿ ನಟನೆಗೆ ಬೇಕಾದ ಕಸರತ್ತುಗಳನ್ನು ಕಲಿತುಕೊಂಡ್ರು. ಬಣ್ಣದ ಲೋಕದಲ್ಲಿ ಅವಕಾಶ ಪಡೆಯಲು ಅಲೆದಾಟ ನಡೆಸುತ್ತಿರುವಾಗ ಸಿಕ್ಕಿದ್ದು ಕಿರುತೆರೆಯ ಅವಕಾಶ. ಮೀರಾ ಮಾಧವ, ಖುಷಿ, ಮಿಸ್ಟರ್ ಅಂಡ್ ಮಿಸಸ್ ರಂಗೇಗೌಡ, ಕುಲವಧು ಮುಂತಾದ ಧಾರಾವಾಹಿಗಳಲ್ಲಿ ಶಶಿಕಾಂತ್ ನಟಿಸಿದ್ದಾರೆ. ಇದನ್ನೂ ಓದಿ: ನಾಗಚೈತನ್ಯ ‘ಲವ್ ಸ್ಟೋರಿ’ ಲೀಕ್ ಆಯ್ತು

    ನಟಿಸಿದ ಎಲ್ಲಾ ಧಾರಾವಾಹಿಗಳಲ್ಲಿ ರಗಡ್ ವಿಲನ್ ಪಾತ್ರಗಳಲ್ಲೇ ಮಿಂಚಿದ ಶಶಿಕಾಂತ್ ರಣರಣಕ ಚಿತ್ರದ ಮೂಲಕ ನಾಯಕ ನಟನಾಗಿ ಸ್ಯಾಂಡಲ್‍ವುಡ್ ಅಂಗಳಕ್ಕೆ ಪಾದಾರ್ಪಣೆ ಮಾಡಿದ್ರು. ಇದೀಗ ಬಣ್ಣದ ಲೋಕದಲ್ಲೇ ಬದುಕುಕಟ್ಟಿಕೊಳ್ಳಲು ಮುಂದಾಗಿರುವ ಶಶಿಕಾಂತ್ ಗೆ ಹಲವು ಸಿನಿಮಾ ಆಫರ್ ಗಳು ಒಲಿದು ಬರುತ್ತಿದೆ. ಇದನ್ನೂ ಓದಿ: ಒಳ ಉಡುಪು ಜಾಹೀರಾತಿನಲ್ಲಿ ಅಭಿನಯ – ಟ್ರೋಲ್ ಕೆಂಗಣ್ಣಿಗೆ ಗುರಿಯಾದ ರಶ್ಮಿಕಾ ಮಂದಣ್ಣ