Tag: Bhaskar

  • ಮತ್ತೊಂದು ಮದುವೆ ಸಂಭ್ರಮಕ್ಕೆ ಸಿದ್ಧವಾದ ಸ್ವರಾ ಭಾಸ್ಕರ್

    ಮತ್ತೊಂದು ಮದುವೆ ಸಂಭ್ರಮಕ್ಕೆ ಸಿದ್ಧವಾದ ಸ್ವರಾ ಭಾಸ್ಕರ್

    ಬಾಲಿವುಡ್ ನಟಿ ಸ್ವರಾ ಭಾಸ್ಕರ್  (Swara Bhaskar) ಸಮಾಜವಾದಿ ಪಕ್ಷದ ನಾಯಕ ಫಹಾದ್ ಝಿರಾರ್ ಅಹ್ಮದ್ (Fahad Zirar Ahmed) ಅವರನ್ನು ಮದುವೆ (Marriage) ಆಗುವ ಮೂಲಕ ಅಚ್ಚರಿಯ ಸುದ್ದಿಯನ್ನು ನೀಡಿದ್ದರು. ಅನ್ಯ ಧರ್ಮೀಯರನ್ನು ಮದುವೆಯಾದ ಕಾರಣದಿಂದಾಗಿ ಸಾಕಷ್ಟು ಟ್ರೋಲ್ ಗೂ ಅವರು ಗುರಿಯಾಗಿದ್ದರು. ಫಹಾದ್ ಅವರನ್ನು ಮದುವೆಯಾದ ಕಾರಣದಿಂದಾಗಿ ಟೀಕೆಯನ್ನೂ ಅವರು ಎದುರಿಸಬೇಕಾಯಿತು. ಆದರೂ, ಸ್ವರ ತಲೆಕೆಡಿಸಿಕೊಂಡಿಲ್ಲ. ಈ ನಡುವೆ ಮತ್ತೊಂದು ಮದುವೆ ಸಂಭ್ರಮಕ್ಕೆ ಸ್ವರಾ ಕುಟುಂಬ ಸಜ್ಜಾಗಿದೆ.

    ಸ್ವರಾ ಭಾಸ್ಕರ್ ಸಿಂಪಲ್ ಆಗಿ ಮದುವೆ ಆಗಿದ್ದರಿಂದ, ಅವರ ಕುಟುಂಬಸ್ಥರು ಅದ್ಧೂರಿಯಾಗಿ ಮದುವೆ ಸಂಭ್ರಮವನ್ನು ಮಾಡಲು ತಯಾರಿ ಮಾಡಿಕೊಂಡಿದ್ದಾರೆ. ಮಾರ್ಚ್ 15 ಮತ್ತು 16ರಂದು ದೆಹಲಿಯಲ್ಲಿ ಎರಡು ದಿನಗಳ ಕಾಲ ಸ್ವರಾ ಮತ್ತು ಫಹಾದ್ ಮದುವೆ ಸಮಾರಂಭ ಅದ್ಧೂರಿಯಾಗಿ ನಡೆಯಲಿದೆ. ಅದಕ್ಕಾಗಿ ಈಗಿನಿಂದಲೇ ಅವರ ಕುಟುಂಬ ಸಿದ್ಧತೆಯಲ್ಲಿ ತೊಡಗಿದೆ. ಇದನ್ನೂ ಓದಿ:ರಶ್ಮಿಕಾ ಮಂದಣ್ಣಗೆ ಪ್ರಪೋಸ್ ಮಾಡಿದ ಯುವ ಕ್ರಿಕೆಟಿಗ

    ಈ ಮದುವೆಯಾಗಿಯೇ ಪ್ರತೀಕ್ ವಿನ್ಯಾಸಗೊಳಿಸಿರುವ ಮದುವೆ ಕಾರ್ಡ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಮಗಳ ಮದುವೆಗೆ ನಿಮ್ಮ ಉಪಸ್ಥಿತಿ ಇರಲಿ ಎಂದು ಬರೆಯಿಸಲಾಗಿದೆ. ಅಲ್ಲದೇ, ಅಳಿಯನನ್ನು ನಮ್ಮ ಕುಟುಂಬ ಅಭಿನಂದಿಸುತ್ತದೆ ಎಂದೂ ಬರಹ ಇದೆ. ಸ್ವರಾ ಕುಟುಂಬವು ತಮ್ಮ ಆಪ್ತರಿಗೆ ಇದೇ ಮದುವೆಯ ಕಾರ್ಡ್ ಅನ್ನು ನೀಡಿದೆ.

    ಸದಾ ವಿವಾದವನ್ನು ಮೈಮೇಲೆ ಎಳೆದುಕೊಳ್ಳುವ ಸ್ವರಾ, ಮೊನ್ನೆಯಷ್ಟೇ ತಮ್ಮ ಮೊದಲ ರಾತ್ರಿಗಾಗಿ ಸಿದ್ಧವಾಗಿದ್ದ ಮಂಚದ ಫೋಟೋವನ್ನು ಹಂಚಿಕೊಂಡಿದ್ದರು. ಆ ಮಂಚವನ್ನು ಸಿಂಗರಿಸಿದ್ದಕ್ಕಾಗಿ ಅವರ ತಾಯಿಗೆ ಧನ್ಯವಾದಗಳನ್ನೂ ಅವರು ಹೇಳಿದ್ದರು. ಮದುವೆಯ ಮಹತ್ವವನ್ನೂ ಅವರು ಹಂಚಿಕೊಂಡಿದ್ದರು. ಈ ಕಾರಣಕ್ಕಾಗಿ ಮತ್ತೆ ಅವರು ವಿವಾದದ ಕೇಂದ್ರಬಿಂದುವಾಗಿದ್ದರು.

  • ಕಿರುತೆರೆಯ ಖ್ಯಾತ ನಿರ್ಮಾಪಕ, ನಟ ರವಿಕಿರಣ್ ಸಹೋದರ ಭಾಸ್ಕರ್ ನಿಧನ

    ಕಿರುತೆರೆಯ ಖ್ಯಾತ ನಿರ್ಮಾಪಕ, ನಟ ರವಿಕಿರಣ್ ಸಹೋದರ ಭಾಸ್ಕರ್ ನಿಧನ

    ನ್ನಡ ಕಿರುತೆರೆಯ ಖ್ಯಾತ ನಟ, ನಿರ್ದೇಶಕ ರವಿಕಿರಣ್ (Ravikiran) ಅವರ ಸಹೋದರ ಭಾಸ್ಕರ್ ( Bhaskar) ರವಿವಾರ ತಡರಾತ್ರಿ ನಿಧನ (Passed away) ಹೊಂದಿದ್ದಾರೆ. ಬದುಕು, ಸುಕನ್ಯಾ ಸೇರಿದಂತೆ ಹಲವು ಧಾರಾವಾಹಿಗಳನ್ನು ಭಾಸ್ಕರ್ ನಿರ್ಮಿಸಿದ್ದರು. ರವಿಕಿರಣ್ ಬ್ಯಾನರ್ ನಲ್ಲಿ ಬರುತ್ತಿದ್ದ ಬಹುತೇಕ ಧಾರಾವಾಹಿಗಳಿಗೆ ಭಾಸ್ಕರ್ ನಿರ್ಮಾಪಕರಾಗಿರುತ್ತಿದ್ದರು. ಅಲ್ಲದೇ, ರವಿಕಿರಣ್ ಅವರಿಗೆ ಬೆನ್ನೆಲುಬಾಗಿ ನಿಂತವರು.

    ಭಾಸ್ಕರ್ ಕೇವಲ ನಿರ್ಮಾಪಕರು ಮಾತ್ರವಲ್ಲ, ಉದ್ಯಮಿಯೂ ಕೂಡ. ಹಲವಾರು ಉದ್ಯಮದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಜೊತೆಗೆ ಕರ್ನಾಟಕ ಟೆಲಿವಿಷನ್ ಕ್ಲಬ್ ನ ನಿರ್ದೇಶಕರಾಗಿಯೂ ಅವರು ಟಿವಿ ಉದ್ಯಮದಲ್ಲಿ ಕೆಲಸ ಮಾಡಿದ್ದಾರೆ. ಇವರ ನಿರ್ಮಾಣದಲ್ಲಿ ಮೂಡಿ ಬಂದ ಬದುಕು ಸಾವಿರಕ್ಕೂ ಹೆಚ್ಚು ಕಂತುಗಳಲ್ಲಿ ಪ್ರಸಾರವಾಗಿದೆ. ಸುಕನ್ಯಾ ಕೂಡ ಜನಪ್ರಿಯ ಧಾರಾವಾಹಿಗಳಲ್ಲಿ ಒಂದು.  ಇದನ್ನೂ ಓದಿ: ಪತಿ ಜೊತೆಗಿನ ರೊಮ್ಯಾಂಟಿಕ್ ಫೋಟೋ ಹಂಚಿಕೊಂಡ `ವಜ್ರಕಾಯ’ ನಟಿ ಶುಭ್ರ ಅಯ್ಯಪ್ಪ

    ಭಾಸ್ಕರ್ ಪುತ್ರ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದಾರೆ. ತೆಲುಗು ಮತ್ತು ಕನ್ನಡದ ಹಲವು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಭಾಸ್ಕರ್ ನಿಧನಕ್ಕೆ ಕಿರುತೆರೆಯ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ. ಟೆಲಿವಿಷನ್ ಉದ್ಯಮದ ನಾನಾ ಸಂಘಟನೆಗಳು ಸಂತಾಪ ವ್ಯಕ್ತಪಡಿಸಿವೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • Breaking News- ಅನಿರುದ್ಧ ಬ್ಯಾನ್ ವಿಚಾರ: ಫಿಲ್ಮ್ ಚೇಂಬರ್ ಗೆ ಬಾರದಿರಲು ನಿರ್ಮಾಪಕರ ಸಂಘ ನಿರ್ಧಾರ

    Breaking News- ಅನಿರುದ್ಧ ಬ್ಯಾನ್ ವಿಚಾರ: ಫಿಲ್ಮ್ ಚೇಂಬರ್ ಗೆ ಬಾರದಿರಲು ನಿರ್ಮಾಪಕರ ಸಂಘ ನಿರ್ಧಾರ

    ಕಿರುತೆರೆ ನಿರ್ಮಾಪಕರ ಸಂಘವು ನಟ  ಅನಿರುದ್ಧ ಮೇಲೆ ತಗೆದುಕೊಂಡು ಕ್ರಮದ ಕುರಿತಾಗಿ ಇಂದು ಮಧ್ಯಾಹ್ನ 3.30ಕ್ಕೆ ಬೆಂಗಳೂರಿನ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ಅನಿರುದ್ಧ, ನಿರ್ದೇಶಕ ಎಸ್.ನಾರಾಯಣ್ ಹಾಗೂ ಕಿರುತೆರೆ ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್ ಹಾಗೂ ಪದಾಧಿಕಾರಿಗಳು ಬರುತ್ತಾರೆ ಎಂದು ಹೇಳಲಾಗಿತ್ತು. ಆದರೆ, ಈ ಸಭೆಯಲ್ಲಿ ತಾವು ಭಾಗಿ ಆಗುತ್ತಿಲ್ಲವೆಂದು ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿ ಡಿಜಿಟಲ್ ನೊಂದಿಗೆ ಮಾತನಾಡಿದ ಭಾಸ್ಕರ್, ‘ಇದು ಕಿರುತೆರೆಗೆ ಸಂಬಂಧಿಸಿದ ವಿಚಾರ. ವಾಣಿಜ್ಯ ಮಂಡಳಿಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಈ ಸಮಸ್ಯೆ ಬಗೆಹರಿಯಬೇಕಾಗಿದ್ದು ನಮ್ಮಲ್ಲೇ. ಹಾಗಾಗಿ ವಾಣಿಜ್ಯ ಮಂಡಳಿಗೆ ಹೋಗದಿರಲು ನಿರ್ಧರಿಸಿದ್ದೇವೆ. ಚಿತ್ರೋದ್ಯಮದ ಮಾತೃಸಂಸ್ಥೆಯ ಅಧ್ಯಕ್ಷರಾದ ಭಾ.ಮಾ ಹರೀಶ್ ಅವರು ನಮಗೆ ಕರೆ ಮಾಡಿದ್ದರು. ಜೊತೆಗೆ ಅನಿರುದ್ಧ ಬರುತ್ತಾರೆ ಅಂದರು. ಅನಿರುದ್ಧ ಬರುತ್ತಾರೆ ಅಂದರೆ, ನಾವು ಬರುವುದಿಲ್ಲ ಎಂದು ಹೇಳಿದ್ದೇವೆ’ ಎಂದರು.

    ಇಂದು ಸಂಜೆ ನಿರ್ಮಾಪಕರ ಸಂಘದಲ್ಲೇ ಮತ್ತೊಂದು ಸಭೆ ನಡೆಯಲಿದ್ದು, ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ನ ಮಾಜಿ ಅಧ್ಯಕ್ಷರು, ಹಾಲಿ ಅಧ್ಯಕ್ಷರು ಹಾಗೂ ಹಿರಿಯ ನಿರ್ದೇಶಕರು ಈ ವಿಷಯದ ಕುರಿತು ಚರ್ಚಿಸಿ ಒಂದು ತೀರ್ಮಾನಕ್ಕೆ ಬರುವುದಾಗಿಯೂ ಭಾಸ್ಕರ್ ತಿಳಿಸಿದ್ದಾರೆ. ಸಭೆಯಲ್ಲಿ ಬಿ.ಸುರೇಶ್, ಶೇಷಾದ್ರಿ, ಎಸ್.ವಿ. ಶಿವಕುಮಾರ್, ರವಿಕಿರಣ್, ರವಿ ಗರಣಿ ಸೇರಿದಂತೆ ಅನೇಕರು ಭಾಗಿಯಾಗಲಿದ್ದಾರೆ.

    ಕರ್ನಾಟಕ ಟೆಲಿವಿಷನ್ ಅಸೋಷಿಯೇಷನ್ನ ಒಂದು ಅಂಗ ಸಂಸ್ಥೆಯಾಗಿರುವ ಕಿರುತೆರೆ ನಿರ್ಮಾಪಕರ ಸಂಘವು ಯಾವುದೇ ಕಾರಣಕ್ಕೂ ಅನಿರುದ್ಧ ಅವರ ಮಾತನ್ನು ಒಪ್ಪುತ್ತಿಲ್ಲ. ಎರಡು ವರ್ಷಗಳ ಕಾಲ ಯಾವುದೇ ನಿರ್ಮಾಪಕರು ಅನಿರುದ್ಧ ಅವರಿಗೆ ಅವಕಾಶ ಕೊಡುವುದು ಬೇಡ ಎಂದು ಹೊರಡಿಸಿರುವ ಆದೇಶವನ್ನು ವಾಪಸ್ಸು ಪಡೆಯುತ್ತಿಲ್ಲ. ಸಂಧಾನಕ್ಕೂ ಸಿದ್ಧರಾಗಿಲ್ಲ. ಹಾಗಾಗಿ ಅನಿರುದ್ಧ ವಾಣಿಜ್ಯ ಮಂಡಳಿಯ ಕದ ತಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅನಿರುದ್ಧ ಬ್ಯಾನ್ ವಿಚಾರ: ಮಧ್ಯಾಹ್ನ 3 ಗಂಟೆಗೆ ಮಹತ್ವದ ಸಭೆ

    ಅನಿರುದ್ಧ ಬ್ಯಾನ್ ವಿಚಾರ: ಮಧ್ಯಾಹ್ನ 3 ಗಂಟೆಗೆ ಮಹತ್ವದ ಸಭೆ

    ನ್ನಡ ಕಿರುತೆರೆ ನಿರ್ಮಾಪಕರ ಸಂಘವು ನಟ ಅನಿರುದ್ಧ ಅವರ ವಿರುದ್ಧ ಹೊರಡಿಸಿರುವ ಅಲಿಖಿತ ಬ್ಯಾನ್ ವಿಚಾರ ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಚರ್ಚೆಯಾಗಲಿದೆ. ಮಧ್ಯಾಹ್ನ 3 ಗಂಟೆಗೆ ನಿರ್ಮಾಪಕರ ಸಂಘ ಮತ್ತು ವಾಣಿಜ್ಯ ಮಂಡಳಿಯು ಜಂಟಿಯಾಗಿ ಅನಿರುದ್ಧ ಜೊತೆ ಮಾತನಾಡಲಿದೆ. ಈ ಸಂದರ್ಭದಲ್ಲಿ ಅನಿರುದ್ಧ ಮೇಲಿನ ನಿಷೇಧವನ್ನು ಹಿಂದಕ್ಕೆ ಪಡೆಯುತ್ತಾರಾ? ಅಥವಾ ಮುಂದುವರೆಸುತ್ತಾರಾ ಎನ್ನುವುದನ್ನು ಕಾದು ನೋಡಬೇಕು. ಮಧ್ಯಾಹ್ನದ ನಂತರ ಅನಿರುದ್ಧ ಭವಿಷ್ಯ ನಿರ್ಧಾರವಾಗಲಿದೆ.

    ಜೊತೆ ಜೊತೆಯಲಿ ಧಾರಾವಾಹಿ ವಿಚಾರವಾಗಿ ಅನಿರುದ‍್ಧ ಅವರ ಮೇಲೆ ಗುರುತರ ಆರೋಪಗಳನ್ನು ಮಾಡಲಾಗಿತ್ತು. ಆ ಆರೋಪಗಳನ್ನು ಅನಿರುದ್ಧ ನಿರಾಕರಿಸಿದರೂ, ನಿರ್ಮಾಪಕರ ಸಂಘವು ಅನಿರುದ್ಧ ಮೇಲೆ ನಿಷೇಧ ಹೇರಿತ್ತು. ಇದೀಗ ಅನಿರುದ್ಧ ಅವರು ಸೂರ್ಯವಂಶ ಧಾರಾವಾಹಿಯಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ ಈ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಅವರನ್ನು ಈ ಧಾರಾವಾಹಿಯಿಂದಲೂ ಕೈ ಬಿಡುವಂತೆ ಒತ್ತಡ ಹೇರಲಾಗುತ್ತಿದೆ. ಇದನ್ನೂ ಓದಿ:  ವಸಿಷ್ಠ ಸಿಂಹ- ಹರಿಪ್ರಿಯಾ ಮದುವೆ ಡೇಟ್ ಫಿಕ್ಸ್

    ಈ ಕುರಿತು ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಮಾತನಾಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ.ಮಾ ಹರೀಶ್, ‘ಗಲಾಟೆ ಆಗಿದ್ದು ಕಿರುತೆರೆ ನಿರ್ಮಾಪಕರ ಸಂಘಕ್ಕೂ ಮತ್ತು ಅನಿರುದ್ಧ ಅವರಿಗೂ ನಿಜ. ಆದರೆ, ಅನಿರುದ್ಧ ಅವರು ವಾಣಿಜ್ಯ ಮಂಡಳಿಯ ಸದಸ್ಯರು ಮತ್ತು ಈ ಧಾರಾವಾಹಿಯನ್ನು ನಿರ್ದೇಶನ ಮಾಡುತ್ತಿರುವ ಎಸ್.ನಾರಾಯಣ್ ಅವರು ಸಿನಿಮಾ ರಂಗದವರು. ಅದಕ್ಕೂ ಹೆಚ್ಚಾಗಿ ಈ ವಿಷಯವನ್ನು ಸೌಹಾರ್ದಯುತವಾಗಿ ಮುಗಿಸಿಕೊಡಿ ಎಂದು ಅನಿರುದ್ಧ ಮಂಡಳಿಗೆ ಪತ್ರ ಬರೆದಿದ್ದಾರೆ. ಹಾಗಾಗಿ ಕರೆಯಿಸಿಕೊಂಡು ಮಾತನಾಡಲಿದ್ದೇವೆ’ ಅಂದರು.

    ಕರ್ನಾಟಕ ಟೆಲಿವಿಷನ್ ಅಸೋಷಿಯೇಷನ್ನ ಒಂದು ಅಂಗ ಸಂಸ್ಥೆಯಾಗಿರುವ ಕಿರುತೆರೆ ನಿರ್ಮಾಪಕರ ಸಂಘವು ಯಾವುದೇ ಕಾರಣಕ್ಕೂ ಅನಿರುದ್ಧ ಅವರ ಮಾತನ್ನು ಒಪ್ಪುತ್ತಿಲ್ಲ. ಎರಡು ವರ್ಷಗಳ ಕಾಲ ಯಾವುದೇ ನಿರ್ಮಾಪಕರು ಅನಿರುದ್ಧ ಅವರಿಗೆ ಅವಕಾಶ ಕೊಡುವುದು ಬೇಡ ಎಂದು ಹೊರಡಿಸಿರುವ ಆದೇಶವನ್ನು ವಾಪಸ್ಸು ಪಡೆಯುತ್ತಿಲ್ಲ. ಸಂಧಾನಕ್ಕೂ ಸಿದ್ಧರಾಗಿಲ್ಲ. ಹಾಗಾಗಿ ಅನಿರುದ್ಧ ವಾಣಿಜ್ಯ ಮಂಡಳಿಯ ಕದ ತಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಸದ್ದು ವಿಚಾರಣೆ ನಡೆಯುತ್ತಿದೆ’ ಸಿನಿಮಾ ಮೆಚ್ಚಿಕೊಂಡ ಪ್ರಬುದ್ಧ ಪ್ರೇಕ್ಷಕ

    ‘ಸದ್ದು ವಿಚಾರಣೆ ನಡೆಯುತ್ತಿದೆ’ ಸಿನಿಮಾ ಮೆಚ್ಚಿಕೊಂಡ ಪ್ರಬುದ್ಧ ಪ್ರೇಕ್ಷಕ

    ಭಾಸ್ಕರ್ ನಿರ್ದೇಶನದ ‘ಸದ್ದು ವಿಚಾರಣೆ ನಡೆಯುತ್ತಿದೆ’ ಸಿನಿಮಾ ನಾಳೆ ಎರಡನೇ ವಾರಕ್ಕೆ ಕಾಲಿಡುತ್ತಿದೆ. ದಿನದಿಂದ ದಿನಕ್ಕೆ ಪ್ರೇಕ್ಷಕರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಲೇ ಯಶಸ್ಸಿ ಸಿನಿಮಾಗಳ ಸಾಲಿನತ್ತ ಹೆಜ್ಜೆ ಹಾಕುತ್ತಿದೆ. ವಿಮರ್ಶೆಕರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಹೊಸ ತಂಡದ ಚಿತ್ರಕ್ಕೆ ನೋಡುಗರು ಕೂಡ ಮೆಚ್ಚುಗೆ ಸೂಚಿಸಿದ್ದಾರೆ. ಇದೊಂದು ಹೊಸ ಬಗೆಯ ಸಿನಿಮಾ ಎಂದೂ ಬಣ್ಣಿಸಿದ್ದಾರೆ.

    ‘ಬೆಲ್‍ ಬಾಟಮ್’ ಸಿನಿಮಾದ ನಂತರ ಆ ಮಾದರಿಯ ಮತ್ತೊಂದು ಸಿನಿಮಾವನ್ನು ಪ್ರೇಕ್ಷಕ ಕೊಂಡಾಡುತ್ತಿದ್ದಾನೆ ಎನ್ನುವ ನೆನಪನ್ನು ‘ಸದ್ದು ವಿಚಾರಣೆ ನಡೆಯುತ್ತಿದೆ’ ಚಿತ್ರ ಮಾಡಿದೆ. ಭಾಸ್ಕರ್ ನಿರ್ದೇಶನದ ಈ ಸಿನಿಮಾದಲ್ಲಿ ಪ್ರೇಕ್ಷಕನಿಗೆ ಥ್ರಿಲ್ ಮಾಡುವಂತಹ ಸಾಕಷ್ಟು ಸಂಗತಿಗಳು ಇವೆ ಎನ್ನುವುದು ವಿಶೇಷ.

    ಈ ಚಿತ್ರದ ಮೂಲಕ ಪಶುವೈದ್ಯರಾಗಿರುವ ಮಧುನಂದನ್ ಸಿನಿಮಾ ರಂಗಕ್ಕೆ ಹೀರೋ ಆಗಿ ಎಂಟ್ರಿ ಕೊಟ್ಟಿದ್ದಾರೆ. ಥೇಟ್ ನೆನಪಿರಲಿ ಪ್ರೇಮ್ ರೀತಿಯಲ್ಲಿ ಕಾಣುವ ಇವರು, ಈ ಸಿನಿಮಾದಲ್ಲಿ ಪೃಥ್ವಿ ಎಂಬ ಪೊಲೀಸ್ ಆಫೀಸರ್ ಪಾತ್ರ ಮಾಡಿದ್ದು, ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿದ್ದಾರೆ. ಇದು ಇವರ ಚೊಚ್ಚಲ ಸಿನಿಮಾವಾಗಿದ್ದರೂ, ರಂಗಭೂಮಿ ಮೇಲಿನ ಸೆಳೆತ ಮತ್ತು ನಟನಾಗಬೇಕು ಎನ್ನುವ ಹಂಬಲವೇ ಇಂಥದ್ದೊಂದು ಪಾತ್ರ ಮಾಡಿಸಿದೆ. ಆ ಪಾತ್ರವನ್ನು ನೋಡುಗ ಕೂಡ ಮೆಚ್ಚಿಕೊಂಡಿದ್ದಾನೆ.

    ಈ ಸಿನಿಮಾದ ಮತ್ತೊಂದು ವಿಶೇಷ  ಅಂದರೆ, ಎಲ್ಲಾ ವರ್ಗದ ಪ್ರೇಕ್ಷಕರನ್ನು ಮನದಲ್ಲಿಟ್ಟುಕೊಂಡು ಚಿತ್ರಕಥೆ ಹೆಣೆದಿದ್ದಾರೆ ನಿರ್ದೇಶಕ ಭಾಸ್ಕರ್ ರಾವ್. ಪುಟ್ಟ ಪುಟ್ಟ ಪಾತ್ರಕ್ಕೂ ಹಿನ್ನೆಲೆ ಕೊಟ್ಟಿದ್ದಾರೆ. ಹಾಗಾಗಿ ಚಿತ್ರಕಥೆಯಲ್ಲಿ ಹಲವು ತಿರುವುಗಳಿದ್ದರೂ, ನೋಡುಗನನ್ನು ಈ ಸಿನಿಮಾ ಸರಾಗವಾಗಿ ನೋಡಿಸಿಕೊಂಡು ಹೋಗುತ್ತದೆ. ತಿರುವುಗಳಲ್ಲಿ ಥ್ರಿಲ್ ಕೊಡುತ್ತದೆ. ಒಂದಷ್ಟು ದೃಶ್ಯಗಳು ನಗಿಸುತ್ತಲೇ ಮತ್ತೆ ಸಿನಿಮಾದ ಕಥೆಯೊಳಗೇ ನಮ್ಮನ್ನು ತಂದು ಬಿಡುವುದು ಚಿತ್ರದ ಹೆಗ್ಗಳಿಕೆ.

    ಅಚ್ಯುತ್ ಕುಮಾರ್, ರಾಘು ಶಿವಮೊಗ್ಗ, ಪಾವನಾ, ರಾಕೇಶ್ ಮಯ್ಯ, ಜಹಾಂಗೀರ್, ಕೃಷ್ಣ ಹೆಬ್ಬಾಳೆಯಂತಹ ಪ್ರತಿಭಾವಂತ ಕಲಾವಿದರ ದಂಡೇ ಈ ಸಿನಿಮಾದಲ್ಲಿದೆ. ಒಬ್ಬೊಬ್ಬರದ್ದು ಒಂದೊಂದು ರೀತಿಯ ನಟನೆ. ಅಚ್ಯುತ್ ಕುಮಾರ್ ಪೊಲೀಸ್ ಅಧಿಕಾರಿಯಾಗಿ ಹೊಸ ಅನುಭವವನ್ನೇ ಕೊಟ್ಟರೆ, ರಾಘು ಶಿವಮೊಗ್ಗ ಖಳನಾಯಕನಾಗಿ ಅಚ್ಚರಿ ಮೂಡಿಸುತ್ತಾರೆ. ಪಾವನಾ ಮತ್ತು ರಾಕೇಶ್ ಮಯ್ಯ ಲವ್ ಸ್ಟೋರಿ ಈ ಹೊತ್ತಿನ ಸಮಾಜಕ್ಕೆ ಹಿಡಿದ ಕನ್ನಡಿಯಂತಿದೆ. ಜಹಾಂಗೀರ್ ಒದ್ದಾಟ, ಕೃಷ್ಣ ಹೆಬ್ಬಾಳೆಯವರ ಗತ್ತು ಸಿನಿಮಾಗೆ ಮತ್ತಷ್ಟು ಕಸುವು ತುಂಬಿದೆ.

    ಮೇಲ್ನೋಟಕ್ಕೆ ಸಸ್ಪೆನ್ಸ್, ಥ್ರಿಲ್ಲರ್ ಮತ್ತು ಮರ್ಡರ್ ಮಿಸ್ಟರಿ ಸಿನಿಮಾ ಅನಿಸಿದರೂ, ಕ್ಯಾಮೆರಾ ಕೆಲಸ, ಹಿನ್ನೆಲೆ ಸಂಗೀತ, ಹಾಡು ಮತ್ತು ಪಾತ್ರಗಳ ಹಿನ್ನೆಲೆಯ ಕಾರಣದಿಂದಾಗಿ ನಾನು ಅಂದುಕೊಂಡಿದ್ದನ್ನು ಸುಳ್ಳು ಮಾಡುತ್ತಾ, ಹೊಸ ಲೋಕವನ್ನೇ ಸಿನಿಮಾ ನಮ್ಮೆದುರು ತಂದಿಡುತ್ತಿದೆ. ಭಾಸ್ಕರ್ ನಿರ್ದೇಶನದ ಚೊಚ್ಚಲು ಸಿನಿಮಾ ಇದಾಗಿದ್ದರೂ, ಹಾಗೆ ಅನಿಸುವುದಿಲ್ಲ. ಆ ರೀತಿಯಲ್ಲಿ ಚಿತ್ರವನ್ನು ಕಟ್ಟಿಕೊಟ್ಟಿದ್ದಾರೆ. ಪ್ರತಿಭಾವಂತರ ತಂಡವೇ ಈ ಚಿತ್ರದಲ್ಲಿ ಇರುವುದರಿಂದ, ಚಿತ್ರವು ಸ್ಯಾಂಡಲ್ ವುಡ್‍ನಲ್ಲಿ ಸಖತ್ ಸದ್ದು ಮಾಡುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ‘ಸದ್ದು’ ಮಾಡುತ್ತಿದೆ ಸ್ಯಾಂಡಲ್ ವುಡ್ ಮತ್ತೊಂದು ಸಿನಿಮಾ

    ‘ಸದ್ದು’ ಮಾಡುತ್ತಿದೆ ಸ್ಯಾಂಡಲ್ ವುಡ್ ಮತ್ತೊಂದು ಸಿನಿಮಾ

    ಸ್ಪೆನ್ಸ್, ಥ್ರಿಲ್ಲರ್ ಮಾದರಿಯ ಸಿನಿಮಾಗಳನ್ನು ಪ್ರೇಕ್ಷಕ ನಿಧಾನಗತಿಯಲ್ಲೇ ತಗೆದುಕೊಳ್ಳುತ್ತಾನೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಹೊಸಬರು ಮತ್ತು ಪ್ರತಿಭಾವಂತ ಟೀಮ್‍ ಹೊಂದಿರುವ ‘ಸದ್ದು ವಿಚಾರಣೆ ನಡೆಯುತ್ತಿದೆ’ ಸಿನಿಮಾದ ಬಗ್ಗೆ ಭಾರೀ ಪ್ರಶಂಸೆ ವ್ಯಕ್ತವಾಗುತ್ತಿದೆ. ‘ಬೆಲ್‍ ಬಾಟಮ್’ ಸಿನಿಮಾದ ನಂತರ ಆ ಮಾದರಿಯ ಮತ್ತೊಂದು ಸಿನಿಮಾವನ್ನು ಪ್ರೇಕ್ಷಕ ಕೊಂಡಾಡುತ್ತಿದ್ದಾನೆ ಎನ್ನುವ ನೆನಪನ್ನು ‘ಸದ್ದು ವಿಚಾರಣೆ ನಡೆಯುತ್ತಿದೆ’ ಚಿತ್ರ ಮಾಡಿದೆ. ಭಾಸ್ಕರ್ ನಿರ್ದೇಶನದ ಈ ಸಿನಿಮಾದಲ್ಲಿ ಪ್ರೇಕ್ಷಕನಿಗೆ ಥ್ರಿಲ್ ಮಾಡುವಂತಹ ಸಾಕಷ್ಟು ಸಂಗತಿಗಳು ಇವೆ ಎನ್ನುವುದು ವಿಶೇಷ.

    ಈ ಚಿತ್ರದ ಮೂಲಕ ಪಶುವೈದ್ಯರಾಗಿರುವ ಮಧುನಂದನ್ ಸಿನಿಮಾ ರಂಗಕ್ಕೆ ಹೀರೋ ಆಗಿ ಎಂಟ್ರಿ ಕೊಟ್ಟಿದ್ದಾರೆ. ಥೇಟ್ ನೆನಪಿರಲಿ ಪ್ರೇಮ್ ರೀತಿಯಲ್ಲಿ ಕಾಣುವ ಇವರು, ಈ ಸಿನಿಮಾದಲ್ಲಿ ಪೃಥ್ವಿ ಎಂಬ ಪೊಲೀಸ್ ಆಫೀಸರ್ ಪಾತ್ರ ಮಾಡಿದ್ದು, ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿದ್ದಾರೆ. ಇದು ಇವರ ಚೊಚ್ಚಲ ಸಿನಿಮಾವಾಗಿದ್ದರೂ, ರಂಗಭೂಮಿ ಮೇಲಿನ ಸೆಳೆತ ಮತ್ತು ನಟನಾಗಬೇಕು ಎನ್ನುವ ಹಂಬಲವೇ ಇಂಥದ್ದೊಂದು ಪಾತ್ರ ಮಾಡಿಸಿದೆ. ಆ ಪಾತ್ರವನ್ನು ನೋಡುಗ ಕೂಡ ಮೆಚ್ಚಿಕೊಂಡಿದ್ದಾನೆ. ಇದನ್ನೂ ಓದಿ: ಕಾಶ್ಮೀರ್‌ ಫೈಲ್ಸ್‌ ಕಾಲ್ಪನಿಕ ಅಂತಾ ಸಾಬೀತುಪಡಿಸಿದ್ರೆ, ಸಿನಿಮಾ ಮಾಡೋದನ್ನೇ ಬಿಡ್ತೀನಿ- ವಿವೇಕ್ ಅಗ್ನಿಹೋತ್ರಿ

    ಈ ಸಿನಿಮಾದ ಮತ್ತೊಂದು ವಿಶೇಷ  ಅಂದರೆ, ಎಲ್ಲಾ ವರ್ಗದ ಪ್ರೇಕ್ಷಕರನ್ನು ಮನದಲ್ಲಿಟ್ಟುಕೊಂಡು ಚಿತ್ರಕಥೆ ಹೆಣೆದಿದ್ದಾರೆ ನಿರ್ದೇಶಕ ಭಾಸ್ಕರ್ ರಾವ್. ಪುಟ್ಟ ಪುಟ್ಟ ಪಾತ್ರಕ್ಕೂ ಹಿನ್ನೆಲೆ ಕೊಟ್ಟಿದ್ದಾರೆ. ಹಾಗಾಗಿ ಚಿತ್ರಕಥೆಯಲ್ಲಿ ಹಲವು ತಿರುವುಗಳಿದ್ದರೂ, ನೋಡುಗನನ್ನು ಈ ಸಿನಿಮಾ ಸರಾಗವಾಗಿ ನೋಡಿಸಿಕೊಂಡು ಹೋಗುತ್ತದೆ. ತಿರುವುಗಳಲ್ಲಿ ಥ್ರಿಲ್ ಕೊಡುತ್ತದೆ. ಒಂದಷ್ಟು ದೃಶ್ಯಗಳು ನಗಿಸುತ್ತಲೇ ಮತ್ತೆ ಸಿನಿಮಾದ ಕಥೆಯೊಳಗೇ ನಮ್ಮನ್ನು ತಂದು ಬಿಡುವುದು ಚಿತ್ರದ ಹೆಗ್ಗಳಿಕೆ.

    ಅಚ್ಯುತ್ ಕುಮಾರ್, ರಾಘು ಶಿವಮೊಗ್ಗ, ಪಾವನಾ, ರಾಕೇಶ್ ಮಯ್ಯ, ಜಹಾಂಗೀರ್, ಕೃಷ್ಣ ಹೆಬ್ಬಾಳೆಯಂತಹ ಪ್ರತಿಭಾವಂತ ಕಲಾವಿದರ ದಂಡೇ ಈ ಸಿನಿಮಾದಲ್ಲಿದೆ. ಒಬ್ಬೊಬ್ಬರದ್ದು ಒಂದೊಂದು ರೀತಿಯ ನಟನೆ. ಅಚ್ಯುತ್ ಕುಮಾರ್ ಪೊಲೀಸ್ ಅಧಿಕಾರಿಯಾಗಿ ಹೊಸ ಅನುಭವವನ್ನೇ ಕೊಟ್ಟರೆ, ರಾಘು ಶಿವಮೊಗ್ಗ ಖಳನಾಯಕನಾಗಿ ಅಚ್ಚರಿ ಮೂಡಿಸುತ್ತಾರೆ. ಪಾವನಾ ಮತ್ತು ರಾಕೇಶ್ ಮಯ್ಯ ಲವ್ ಸ್ಟೋರಿ ಈ ಹೊತ್ತಿನ ಸಮಾಜಕ್ಕೆ ಹಿಡಿದ ಕನ್ನಡಿಯಂತಿದೆ. ಜಹಾಂಗೀರ್ ಒದ್ದಾಟ, ಕೃಷ್ಣ ಹೆಬ್ಬಾಳೆಯವರ ಗತ್ತು ಸಿನಿಮಾಗೆ ಮತ್ತಷ್ಟು ಕಸುವು ತುಂಬಿದೆ.

    ಮೇಲ್ನೋಟಕ್ಕೆ ಸಸ್ಪೆನ್ಸ್, ಥ್ರಿಲ್ಲರ್ ಮತ್ತು ಮರ್ಡರ್ ಮಿಸ್ಟರಿ ಸಿನಿಮಾ ಅನಿಸಿದರೂ, ಕ್ಯಾಮೆರಾ ಕೆಲಸ, ಹಿನ್ನೆಲೆ ಸಂಗೀತ, ಹಾಡು ಮತ್ತು ಪಾತ್ರಗಳ ಹಿನ್ನೆಲೆಯ ಕಾರಣದಿಂದಾಗಿ ನಾನು ಅಂದುಕೊಂಡಿದ್ದನ್ನು ಸುಳ್ಳು ಮಾಡುತ್ತಾ, ಹೊಸ ಲೋಕವನ್ನೇ ಸಿನಿಮಾ ನಮ್ಮೆದುರು ತಂದಿಡುತ್ತಿದೆ. ಭಾಸ್ಕರ್ ನಿರ್ದೇಶನದ ಚೊಚ್ಚಲು ಸಿನಿಮಾ ಇದಾಗಿದ್ದರೂ, ಹಾಗೆ ಅನಿಸುವುದಿಲ್ಲ. ಆ ರೀತಿಯಲ್ಲಿ ಚಿತ್ರವನ್ನು ಕಟ್ಟಿಕೊಟ್ಟಿದ್ದಾರೆ. ಪ್ರತಿಭಾವಂತರ ತಂಡವೇ ಈ ಚಿತ್ರದಲ್ಲಿ ಇರುವುದರಿಂದ, ಚಿತ್ರವು ಸ್ಯಾಂಡಲ್ ವುಡ್‍ನಲ್ಲಿ ಸಖತ್ ಸದ್ದು ಮಾಡುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಪ್ರತಿಭಾವಂತ ತಂಡದ ಸದ್ದು ವಿಚಾರಣೆ ನಡೆಯುತ್ತಿದೆ ಟ್ರೇಲರ್ ರಿಲೀಸ್

    ಪ್ರತಿಭಾವಂತ ತಂಡದ ಸದ್ದು ವಿಚಾರಣೆ ನಡೆಯುತ್ತಿದೆ ಟ್ರೇಲರ್ ರಿಲೀಸ್

    ಭಾಸ್ಕರ್ ಆರ್ ನೀನಾಸಂ ನಿರ್ದೇಶನದ ‘ಸದ್ದು ವಿಚಾರಣೆ ನಡೆಯುತ್ತಿದೆ’ ಸಿನಿಮಾ ಪ್ರೇಕ್ಷಕರೆದುರು ಬರಲು ಸಜ್ಜಾಗಿದೆ. ಹಾಡುಗಳ ಮೂಲಕ ಗಮನ ಸೆಳೆದ ಚಿತ್ರತಂಡ ಇದೀಗ ಪ್ರಾಮಿಸಿಂಗ್ ಟ್ರೇಲರ್ ಬಿಡುಗಡೆ ಮಾಡಿ ಸಿನಿರಸಿಕರಲ್ಲಿ ನಿರೀಕ್ಷೆಯನ್ನು ಹೆಚ್ಚಿಸಿದೆ. ಎಂ. ಎಂ. ಸಿನಿಮಾಸ್ ಬ್ಯಾನರ್ ನಡಿ ಸುರಭಿ ಲಕ್ಷ್ಮಣ್ ಚಿತ್ರವನ್ನು ನಿರ್ಮಾಣ ಮಾಡಿದ್ದು, ರಾಜ್ ಕಾಂತ ಕ್ಯಾಮೆರಾ ನಿರ್ದೇಶನ, ಸಚಿನ್ ಬಸ್ರೂರು ಸಂಗೀತ, ಶಶಿಧರ್ ಪಿ ಸಂಕಲನ ಚಿತ್ರಕ್ಕಿದೆ.

    ನೈಜ ಘಟನೆ ಆಧರಿಸಿ ಹೆಣೆದ ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂಡ ಚಿತ್ರ ‘ಸದ್ದು ವಿಚಾರಣೆ ನಡೆಯುತ್ತಿದೆ’. ಚಿತ್ರಕ್ಕೆ ಕಥೆ ಬರೆದು ಭಾಸ್ಕರ್ ಆರ್ ನೀನಾಸಂ ನಿರ್ದೇಶನ ಮಾಡಿದ್ದಾರೆ. ರಾಕೇಶ್ ಮಯ್ಯ, ಪಾವನ ಗೌಡ ನಾಯಕ ನಾಯಕಿಯಾಗಿ ನಟಿಸಿದ್ದು, ಪ್ರಮುಖ ಪಾತ್ರದಲ್ಲಿ ಮಧುನಂದನ್ ನಟಿಸಿದ್ದಾರೆ. ಅಚ್ಯುತ್ ಕುಮಾರ್, ರಾಘು ಶಿವಮೊಗ್ಗ, ಜಾಹಂಗೀರ್ ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಗಣದಲ್ಲಿದ್ದಾರೆ. ಇದನ್ನೂ ಓದಿ:ಸಾನಿಯಾ, ಮಲಿಕ್ ದಾಂಪತ್ಯ ಜೀವನ ಅಂತ್ಯ? – ಹುಳಿ ಹಿಂಡಿದ ಸ್ಟಾರ್ ನಟಿ

    ಹಿರಿಯ ನಟ ಅಚ್ಯುತ್ ಕುಮಾರ್ ಮಾತನಾಡಿ ಭಾಸ್ಕರ್ ನಟನೆ ಮಾಡ್ತಾನೆ ಅಂತ ಗೊತ್ತಿತ್ತು, ನಿರ್ದೇಶನ ಮಾಡುತ್ತಾನೆ ಎಂದು ಗೊತ್ತಿರಲಿಲ್ಲ. ನನ್ನ ನಾಟಕಗಳಲ್ಲಿ ಭಾಸ್ಕರ್ ಅಭಿನಯಿಸಿದ್ದಾನೆ. ತುಂಬಾ ಚೆನ್ನಾಗಿ ನಿರ್ದೇಶನ ಮಾಡಿದ್ದಾನೆ. ಈ ಚಿತ್ರದಲ್ಲಿ ಇನ್ಸ್ ಪೆಕ್ಟರ್ ಪಾತ್ರ ಎಂದು ಹೇಳಿದಾಗ ನಾನು ಮಾಡೋದಿಲ್ಲ ಚಿತ್ರದಲ್ಲಿರೋ ಕೋಳಿ ಕಳ್ಳರ ಪಾತ್ರ ಕೊಡು ತುಂಬಾ ಇಂಟ್ರಸ್ಟಿಂಗ್ ಆಗಿದೆ ಎಂದೆ ಆದ್ರೆ ಇನ್ಸ್ ಪೆಕ್ಟರ್ ಪಾತ್ರವನ್ನು ನೀವೇ ಮಾಡಬೇಕು ಎಂದು ಹೇಳಿದ್ರಿಂದ ಇನ್ಸ್ ಪೆಕ್ಟರ್ ಪಾತ್ರ ನಿರ್ವಹಿಸಿದ್ದೇನೆ. ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಮಧುನಂಧನ್ ಚಿತ್ರವನ್ನು ನಿರ್ಮಾಣ ಮಾಡೋದ್ರ ಜೊತೆಗೆ ನಟನೆ ಕೂಡ ಮಾಡಿದ್ದಾರೆ. ನಟನೆಯಲ್ಲಿ ಅವರಿಗೆ ತುಂಬಾ ಪ್ಯಾಶನ್ ಇದೆ‌. ಇನ್ನೊಂದಿಷ್ಟು ತಯಾರಿ ಮಾಡಿಕೊಂಡ್ರೆ ಒಳ್ಳೆ ಭವಿಷ್ಯ ಇದೆ.  ಸಿನಿಮಾ ಇದೇ ತಿಂಗಳು ಬಿಡುಗಡೆಯಾಗುತ್ತಿದೆ ಎಲ್ಲರೂ ನೋಡಿ ಹರಸಿ ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡ್ರು ಅಚ್ಯುತ್ ಕುಮಾರ್.

    Live Tv
    [brid partner=56869869 player=32851 video=960834 autoplay=true]

  • ನಟ ಅನಿರುದ್ಧ ವಿರುದ್ಧ ಆರೋಪಗಳ ಸುರಿಮಳೆ ಸುರಿಸಿದ ‘ಜೊತೆ ಜೊತೆಯಲಿ’ ನಿರ್ಮಾಪಕ ಜಗದೀಶ್

    ನಟ ಅನಿರುದ್ಧ ವಿರುದ್ಧ ಆರೋಪಗಳ ಸುರಿಮಳೆ ಸುರಿಸಿದ ‘ಜೊತೆ ಜೊತೆಯಲಿ’ ನಿರ್ಮಾಪಕ ಜಗದೀಶ್

    ಜೊತೆ ಜೊತೆಯಲಿ ಧಾರಾವಾಹಿಯಿಂದ ಅನಿರುದ್ಧ ಅವರನ್ನು ಕೈ ಬಿಡಲಾಗಿದ್ದು, ಈ ಕುರಿತು ನಿರ್ಮಾಪಕರಾದ ಆರೂರು ಜಗದೀಶ್ ಮತ್ತು ಸ್ಮಿತಾ ಶೆಟ್ಟಿ ಜಂಟಿಯಾಗಿ ಅನಿರುದ್ಧ ಅವರಿಗೆ ಇ-ಮೇಲ್ ಕಳುಹಿಸಿದ್ದಾರೆ. ಅನಿರುದ್ಧ ಅವರನ್ನು ಧಾರಾವಾಹಿಯಿಂದ ಕೈ ಬಿಟ್ಟಿರುವ ಕುರಿತು ಮಾಧ್ಯಮಗಳಿಗೂ ಆರೂರು ಜಗದೀಶ್ ಖಚಿತ ಪಡಿಸಿದ್ದಾರೆ. ಜೊತೆಗೆ ಅನಿರುದ್ಧ ವಿರುದ್ಧ ಆರೋಪಗಳ ಸುರಿಮಳೆಯನ್ನೇ ಸುರಿಸಿದ್ದಾರೆ.

    ಧಾರಾವಾಹಿ ಶುರುವಾಗಿ ಎರಡು ತಿಂಗಳ ನಂತರ ಅನಿರುದ್ಧ ಅವರು ಅಸಹಕಾರವನ್ನು ತೋರುತ್ತಾ ಬಂದಿರುವುದಾಗಿಯೂ ನಿರ್ಮಾಪಕರು ಆರೋಪಿಸಿದ್ದಾರೆ. ಅಲ್ಲದೇ, ಬೀದಿ ಬದಿಯಲ್ಲಿ ಕೂತು ತಿನ್ನುತ್ತಿದ್ದ ಅನಿರುದ್ಧ ಅವರು, ಇದೀಗ ಕ್ಯಾರಾವಾನ್ ಇಲ್ಲದೇ ಶೂಟಿಂಗ್ ಗೆ ಬರುವುದಿಲ್ಲ ಎನ್ನುವಲ್ಲಿಗೆ ಬೆಳೆದಿದ್ದಾರೆ. ಹಾಗಾಗಿ ಅವರಿಂದ ಸಾಕಷ್ಟು ಹಣವನ್ನು ಕಳೆದುಕೊಂಡಿರುವುದಾಗಿ ಜಗದೀಶ್ ಆರೋಪಗಳನ್ನು ಮಾಡಿದ್ದಾರೆ.

    ಜಗದೀಶ್ ಮಾಡುವ ಆರೋಪವೇನು?

    * ಅನಿರುದ್ಧ ಅವರು ಧಾರಾವಾಹಿ ಪಾತ್ರ ಒಪ್ಪಿಕೊಂಡಾಗ ಆರ್ಯವರ್ಧನ್ ಪಾತ್ರ ನೆಗಟಿವ್ ಆಗಿತ್ತು. ಇವರು ಜನಪ್ರಿಯತೆ ಜಾಸ್ತಿ ಆಗುತ್ತಿದ್ದಂತೆಯೇ ಆ ಪಾತ್ರವನ್ನು ಬದಲಿಸಲು ಪಟ್ಟು ಹಿಡಿದರು. ಪಾತ್ರವನ್ನು ಪಾಸಿಟಿವ್ ರೀತಿಯಲ್ಲಿ ಕಥೆ ಮಾಡಿಸಿದರು. ಕಥೆಯೇ ಬಿದ್ದು ಹೋಯಿತು.

    * ಡೈಲಾಗ್ ಸ್ಕ್ರಿಪ್ ಸಲುವಾಗಿ ಅನೇಕ ಬಾರಿ ಜಗಳ ಮಾಡಿದ್ದಾರೆ. ಸೀನ್ ಪೇಪರ್ ತಡವಾಗಿ ಬಂದರೆ ಶೂಟಿಂಗ್ ಮಾಡುವುದಿಲ್ಲ ಎಂದೇ ಎದ್ದೇ ಹೋಗುತ್ತಿದ್ದರು.

    * ಸಾಮಾನ್ಯವಾಗಿ ಧಾರಾವಾಹಿಗಳಲ್ಲಿ ಕ್ಯಾರವಾನ್ ಬಳಸುವುದಿಲ್ಲ. ಇವರಿಗಾಗಿ ಕ್ಯಾರವಾನ್ ತರಿಸಲಾಗುತ್ತಿತ್ತು. ಕ್ಯಾರವಾನ್ ಗಾಗಿ ಗಲಾಟೆ ಮಾಡಿದರು.

    * ಧಾರಾವಾಹಿ ನಡೆಯುತ್ತಿರುವುದೇ ನನ್ನಿಂದ ಎನ್ನುವಂತೆ ದುರಹಂಕಾರ ತೋರಿಸಿದರು. ಧಾರಾವಾಹಿ ಬಗ್ಗೆ ನೆಗೆಟಿವ್ ಪ್ರಚಾರ ಮಾಡುತ್ತಾ ಬಂದರು.

    * ಬೆನ್ಜ್ ಕಾರು, ಹೆಲಿಕಾಪ್ಟರ್ ಹೀಗೆ ದುಬಾರಿ ಖರ್ಚು ಮಾಡಿ ಧಾರಾವಾಹಿ ಮಾಡುತ್ತಿದ್ದರೂ, ಅವರು ಅದಕ್ಕೆ ಕ್ಯಾರೆ ಅನ್ನುತ್ತಿರಲಿಲ್ಲ. ಹಾಗಾಗಿ ಇವರಿಂದಾಗಿಯೇ ಸಾಕಷ್ಟು ಲಾಸ್ ಆಗಿದೆ.

    * ಪ್ರತಿ ಶಾಟ್ ತಗೆದಾಗಲೂ ಮಾನೆಟರ್ ಹತ್ತಿರ ಬಂದು ನೋಡುತ್ತಿದ್ದರು. ಮತ್ತೊಂದು ಸಲ ನಟಿಸ್ತೀನಿ ಅನ್ನುತ್ತಿದ್ದರು. ಹೀಗಾಗಿ ಕಾಲಹರಣವಾಗುತ್ತಿತ್ತು.

    * ಸಣ್ಣದೊಂದು ತಪ್ಪಾದರೂ, ಸೆಟ್ ನಲ್ಲಿ ಜೋರಾಗಿ ಕೂಗುತ್ತಿದ್ದರು. ಬೈಯುತ್ತಿದ್ದರು. ಇವರ ಸಲುವಾಗಿ ಅನೇಕರು ಕೆಲಸ ಬಿಟ್ಟು ಹೋದರು. ಕೆಲವರನ್ನು ನಾವೇ ಕಳುಹಿಸಿ ಕೊಡಬೇಕಾಯಿತು.

    * ಒಂಬತ್ತು ಗಂಟೆಗೆ ಫಸ್ಟ್ ಶಾಟ್ ಅಂದರೆ, ಬರುತ್ತಿರಲಿಲ್ಲ. ತಿಂಡಿ ತಿನ್ನುತ್ತಾ, ಸಹ ಕಲಾವಿದರನ್ನೂ ಕೂರಿಸಿಕೊಂಡು ಬೇಕು ಅಂತನೇ ತಡ ಮಾಡುತ್ತಿದ್ದರು.

    * ಟೀಮ್ ನಲ್ಲಿ ಅವರ ಬಗ್ಗೆ ಗಾಸಿಪ್ ಮಾಡ್ತಾರೆ ಅಂತ ಕೆಲ ದಿನಗಳ ಕಾಲ ಶೂಟಿಂಗ್ ಗೆ ಬರಲೇ ಇಲ್ಲ. ಮನೆಗೆ ಹೋಗಿ ಮನವಿ ಮಾಡಿಕೊಂಡು ಕರೆದುಕೊಂಡು ಬಂದೆವು.

    * ಸ್ಟಾರ್ ಹೋಟೆಲ್ ನಿಂದ ಊಟ ಬರಬೇಕು ಎಂದು ಗಲಾಟೆ ಮಾಡಿದರು. ಸ್ಟಾರ್ ಹೋಟೆಲ್ ನಲ್ಲಿ ಅವರ ಬಿಲ್ ಎರಡು ಲಕ್ಷ ಆಗಿತ್ತು.

    Live Tv
    [brid partner=56869869 player=32851 video=960834 autoplay=true]

  • ಬ್ಯಾನ್ ನಿರ್ಧಾರ ತೆಗೆದುಕೊಳ್ಳುವಷ್ಟು ನಟ ಅನಿರುದ್ಧ ಕಿರಿಕ್ ಮಾಡಿದ್ರಾ?: ಪಿನ್ ಟು ಪಿನ್ ಮಾಹಿತಿ

    ಬ್ಯಾನ್ ನಿರ್ಧಾರ ತೆಗೆದುಕೊಳ್ಳುವಷ್ಟು ನಟ ಅನಿರುದ್ಧ ಕಿರಿಕ್ ಮಾಡಿದ್ರಾ?: ಪಿನ್ ಟು ಪಿನ್ ಮಾಹಿತಿ

    ಜೊತೆ ಜೊತೆಯಲಿ ಧಾರಾವಾಹಿಯಿಂದ ನಟ, ಡಾ.ವಿಷ್ಣುವರ್ಧನ್ ಅಳಿಯ ಅನಿರುದ್ಧ ಹೊರ ನಡೆದ ವಿಚಾರ ಕನ್ನಡ ಕಿರುತೆರೆ ಜಗತ್ತಿನಲ್ಲಿ ಭಾರೀ ಕೋಲಾಹಲವನ್ನೇ ಸೃಷ್ಟಿ ಮಾಡಿದೆ. ಹಲವು ತಿಂಗಳಿಂದ ಈ ಕಿರಿಕಿರಿ ಇತ್ತಾದರೂ, ಧಾರಾವಾಹಿಯಿಂದಲೇ ಅವರನ್ನು ತಗೆದು ಹಾಕುವಷ್ಟರ ಮಟ್ಟಿಗೆ ಅದು ಹೋಗಿರಲಿಲ್ಲ. ಕೇವಲ ಧಾರಾವಾಹಿ ಸೆಟ್ ನಲ್ಲಿ ಆಗುತ್ತಿದ್ದ ಜಗಳ ಇದೀಗ ಬೀದಿಗೆ ಬಂದಿದೆ. ಹಾಗಾಗಿ ಅನಿವಾರ್ಯವಾಗಿ ಇಂಥದ್ದೊಂದು ನಿರ್ಧಾರವನ್ನು ತಗೆದುಕೊಳ್ಳಲು ಕಿರುತೆರೆ ನಿರ್ಮಾಪಕರ ಸಂಘ ಮುಂದಾಗಿದೆ.

    ಕನ್ನಡ ಕಿರುತೆರೆ ನಿರ್ಮಾಪಕರ ಸಂಘಕ್ಕೆ ಜೊತೆ ಜೊತೆಯಲಿ ಧಾರಾವಾಹಿಯ ನಿರ್ಮಾಪಕ ಆರೂರು ಜಗದೀಶ್ ಕೊಟ್ಟ ದೂರಿನಲ್ಲಿ ಅನಿರುದ್ಧ ಮತ್ತು ಸೀರಿಯಲ್ ಟೀಮ್ ನಡುವೆ ಆಗಾಗ್ಗೆ ಗಲಾಟೆ ಆಗುತ್ತಲೇ ಇತ್ತಂತೆ. ಶೂಟಿಂಗ್ ಸೆಟ್ ಗೆ ತಡವಾಗಿ ಬರುವುದು, ಡೇಟ್ ಹೊಂದಾಣಿಕೆ ಮಾಡಿಕೊಳ್ಳದೇ ಇರುವುದು, ಬರೆದ ಡೈಲಾಗ್ ಅನ್ನು ಹೇಳಲ್ಲ ಅನ್ನುವುದು ಹೀಗೆ ನಾನಾ ರೀತಿಯಲ್ಲಿ ಅನಿರುದ್ಧ ಅವರು ಅಸಹಕಾರ ತೋರುತ್ತಿದ್ದರು ಎಂದು ಹೇಳಲಾಗಿದೆ.

    ಅನಿರುದ್ಧ ಮತ್ತು ಸೀರಿಯಲ್ ಟೀಮ್ ನಡುವಿನ ಗಲಾಟೆಯು ವಾಹಿನಿಯ ಅಂಗಳಕ್ಕೂ ತಲುಪಿರುವ ವಿಚಾರವನ್ನು ಕಿರುತೆರೆ ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್ ಖಚಿತ ಪಡಿಸಿದ್ದಾರೆ. ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಮಾತನಾಡಿದ ಅವರು, ‘ಈಗಾಗಲೇ ಈ ಗಲಾಟೆ ಇವತ್ತು, ನಿನ್ನೆಯದ್ದಲ್ಲ. ಹಲವು ತಿಂಗಳುಗಳಿಂದ ನಡೆಯುತ್ತಲೇ ಇದೆ. ವಾಹಿನಿಯ ಮುಖ್ಯಸ್ಥರು ಕೂಡ ಇಬ್ಬರನ್ನೂ ಕೂರಿಸಿಕೊಂಡು ಸಂಧಾನದ ಪ್ರಯತ್ನವನ್ನೂ ಮಾಡಿದ್ದಾರೆ. ಆದರೆ, ಅದು ಫಲ ಕೊಟ್ಟಿಲ್ಲ. ಹಾಗಾಗಿ ಅನಿವಾರ್ಯವಾಗಿ ಜಗದೀಶ್ ಅವರು ನಮ್ಮ ಸಂಘಕ್ಕೆ ದೂರು ನೀಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಕೊನೆಗೂ ಶಿವಣ್ಣ, ಅನುಶ್ರೀ ಭೇಟಿಯಾಗಿ ಆಸೆ ಈಡೇರಿಸಿಕೊಂಡ ಕಾಫಿನಾಡು ಚಂದು

    ಆಗಸ್ಟ್ 18 ರಂದು ಎಂದಿನಂತೆ ಶೂಟಿಂಗ್ ಗೆ ಬಂದ ಅನಿರುದ್ಧ ಅವರು ಡೈಲಾಗ್ ವಿಚಾರವಾಗಿ ಮತ್ತೆ ಕಿರಿಕಿರಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಮಾತಿಗೆ ಮಾತು ಬೆಳೆದು, ಸೀರಿಯಲ್ ತಂಡ ಪ್ರಮುಖರೊಬ್ಬರಿಗೆ ‘ಈ ಮೂರ್ಖನ ಜೊತೆ ಕೆಲಸ ಮಾಡಲ್ಲ’ ಎಂದು ಹೇಳುತ್ತಾ ಕ್ಯಾಮೆರಾಗೆ ಕೈ ಮುಗಿದು ಅಲ್ಲಿಂದ ಮನೆಗೆ ತೆರಳಿದರು ಎನ್ನುತ್ತಾರೆ ತಂಡದ ಸದಸ್ಯರು. ಈ ಬೆಳವಣಿಗೆಯೇ ಅನಿರುದ್ಧ ಅವರನ್ನು ಸೀರಿಯಲ್ ನಿಂದ ಕೈ ಬಿಡಲು ಕಾರಣವಾಗಿದೆಯಂತೆ.

    Live Tv
    [brid partner=56869869 player=32851 video=960834 autoplay=true]

  • ಅನಿರುದ್ಧ ಬ್ಯಾನ್ : ಕಿರುತೆರೆ ನಿರ್ಮಾಪಕರ ಸಂಘದಿಂದ ಖಡಕ್ ನಿರ್ಧಾರ

    ಅನಿರುದ್ಧ ಬ್ಯಾನ್ : ಕಿರುತೆರೆ ನಿರ್ಮಾಪಕರ ಸಂಘದಿಂದ ಖಡಕ್ ನಿರ್ಧಾರ

    ಜೊತೆ ಜೊತೆಯಲಿ ಧಾರಾವಾಹಿಯಿಂದ ಕೊನೆಗೂ ಅನಿರುದ್ದ ಹೊರ ನಡೆಯುವುದು ನಿಶ್ಚಿತವಾಗಿದೆ. ಮತ್ತೆ ಆ ಧಾರಾವಾಹಿಯಲ್ಲಿ ಅವರನ್ನು ತಗೆದುಕೊಳ್ಳಬಾರದು ಹಾಗೂ ಬೇರೆ ಯಾವುದೇ ಧಾರಾವಾಹಿ, ರಿಯಾಲಿಟಿ ಶೋಗಳಲ್ಲಿ ಅನಿರುದ್ಧ ಅವರನ್ನು ಆಯ್ಕೆ ಮಾಡಿಕೊಳ್ಳಬಾರದು ಎಂದು ಕಿರುತೆರೆ ನಿರ್ಮಾಪಕರ ಸಂಘವು ನಿರ್ಧಾರ ತಗೆದುಕೊಂಡಿದೆ. ಜೊತೆ ಜೊತೆಯಲಿ ಧಾರಾವಾಹಿ ನಿರ್ಮಾಪಕ ಆರೂರು ಜಗದೀಶ್ ನೀಡಿದ ದೂರಿನ ಮೇರೆಗೆ ಇಂಥದ್ದೊಂದು ನಿರ್ಧಾರ ತಗೆದುಕೊಳ್ಳುವುದಾಗಿ ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಮಾತನಾಡಿರುವ ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್ , ‘ಅನಿರುದ್ಧ ಅವರ ಮೇಲೆ ನಿರ್ಮಾಪಕರು ದೂರು ನೀಡಿದ್ದರು. ಅದನ್ನು ಪರಿಶೀಲಿಸಿ ಮಹತ್ವದ ನಿರ್ಧಾರವೊಂದನ್ನು ತಗೆದುಕೊಂಡಿದ್ದೇನೆ. ಅವರನ್ನು ಬ್ಯಾನ್ ಮಾಡಿದ್ದೇವೆ ಎಂದು ಹೇಳುತ್ತಿಲ್ಲ. ಆದರೆ, ಮುಂದೆ ಯಾರೂ ಅವರನ್ನು ಧಾರಾವಾಹಿಗಾಗಲಿ, ರಿಯಾಲಿಟಿ ಶೋಗಾಗಿ ಆಯ್ಕೆ ಮಾಡಿಕೊಳ್ಳಬಾರದು ಎಂದು ನಿರ್ಧಾರ ಮಾಡಿದ್ದೇವೆ. ಈ ಕುರಿತು ವಾಹಿನಿಗೂ ತಿಳಿಸಿದ್ದೇವೆ’ ಅಂದರು. ಇದನ್ನೂ ಓದಿ: ಫಸ್ಟ್‌ ಟೈಮ್ ಮುದ್ದಾದ ಎರಡೂ ಮಕ್ಕಳ ಮುಖ ತೋರಿಸಿದ ನಟಿ ಅಮೂಲ್ಯ

    ಕೇವಲ ಅನಿರುದ್ಧ ಮಾತ್ರವಲ್ಲ, ಅನೇಕ ಕಲಾವಿದರು ಹೀಗೆಯೇ ನಿರ್ಮಾಪಕರಿಗೆ ತೊಂದರೆ ಕೊಡುತ್ತಲೇ ಇದ್ದಾರೆ. ಅವರನ್ನು ಸರಿದಾರಿಗೆ ತರಲು ಏನಾದರೂ ಒಂದು ಕಠಿಣ ಕ್ರಮವನ್ನು ತಗೆದುಕೊಳ್ಳಲೇಬೇಕು. ನಿರ್ಮಾಪಕರಿಗೆ ತೊಂದರೆ ಆದರೆ, ಅನೇಕರಿಗೆ ಅದರಿಂದ ಕೆಟ್ಟ ಪರಿಣಾಮ ಬೀರುತ್ತದೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಅನಿರುದ್ಧ ಘಟನೆಯು ಇತರರಿಗೆ ಪಾಠವಾಗಬೇಕು ಎನ್ನುತ್ತಾರೆ ಭಾಸ್ಕರ್.

    ಅನಿರುದ್ಧ ವಿಚಾರವಾಗಿ ಈಗಾಗಲೇ ಜೀ ಕನ್ನಡ ವಾಹಿನಿಯೊಂದಿಗೆ ಮಾತನಾಡಿರುವುದಾಗಿ ಭಾಸ್ಕರ್ ತಿಳಿಸಿದರು. ಈಗಾಗಲೇ ಹಲವು ಬಾರಿ ವಾಹಿನಿಯು ಕೂಡ ಅನಿರುದ್ಧ ಮತ್ತು ನಿರ್ಮಾಪಕರ ನಡುವೆ ರಾಜಿ  ಸಂಧಾನ ಮಾಡಿದೆಯಂತೆ. ಆದರೂ, ಅದು ಸರಿ ಹೋಗದೇ ಇರುವ ಕಾರಣಕ್ಕಾಗಿ ಅನಿವಾರ್ಯವಾಗಿ ಇಂಥದ್ದೊಂದು ಕ್ರಮ ತಗೆದುಕೊಳ್ಳಬೇಕಾಗಿದೆ ಎನ್ನುತ್ತಾರೆ ಭಾಸ್ಕರ್.

    Live Tv
    [brid partner=56869869 player=32851 video=960834 autoplay=true]