Tag: Bhaskar Naik

  • ‘ಕುದ್ರು’ ಸಿನಿಮಾದಲ್ಲಿ ಕ್ಲಾಸ್ ಬಂಕ್ ಹಾಡು

    ‘ಕುದ್ರು’ ಸಿನಿಮಾದಲ್ಲಿ ಕ್ಲಾಸ್ ಬಂಕ್ ಹಾಡು

    ಕುದ್ರು (Kudru) ಚಿತ್ರದ ‘ಉಡಾಯಿಸು’ ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ಇದು ಚಿತ್ರದ  ಮೂರನೇ ಹಾಡಾಗಿದ್ದು, ಈ ಹಾಡನ್ನು (Song) ಉಡುಪಿ ಹಾಗೂ ಮಲೆನಾಡು ಪ್ರದೇಶದ ಸುಂದರ ಪರಿಸರದಲ್ಲಿ  ಚಿತ್ರಿಕರಿಸಲಾಗಿದೆ. ಉಡಾಯಿಸು ಕಾಲೇಜು ಹುಡುಗರಿಗಾಗಿ ಚಿತ್ರೀಕರಿಸಿದ ಹಾಡು. ಕಾಲೇಜಲ್ಲಿ ಕ್ಲಾಸ್ ಬಂಕ್ ಮಾಡಿ ಎಂಜಾಯ್ ಮಾಡುವ ಗೀತೆಯಿದು.

    ನಾನು ಮೂಲತಃ ಉಡುಪಿಯವನು. ನೀರಿನಿಂದ ಸುತ್ತುವರೆದ ದ್ವೀಪವನ್ನು ತುಳುವಿನಲ್ಲಿ ಕುದ್ರು ಎನ್ನುತ್ತಾರೆ. ಈ ಚಿತ್ರದ ಕಥೆಯನ್ನು ನಾನೇ ಬರೆದು ನಿರ್ದೇಶಿಸಿ, ನಿರ್ಮಾಣ ಮಾಡಿದ್ದೇನೆ ಎನ್ನುತ್ತಾರೆ ಭಾಸ್ಕರ ನಾಯ್ಕ್ (Bhaskar Naik). ಕುದ್ರು ದ್ವೀಪದಲ್ಲಿ  ಹಿಂದೂ, ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಮೂರು ಪಂಗಡದವರು ವಾಸಿಸುತ್ತಿರುತ್ತಾರೆ. ಎಲ್ಲರೂ ಸಹಬಾಳ್ವೆಯಿಂದ ಜೀವನ ನಡೆಸುತ್ತಿರುತ್ತಾರೆ. ಈ ರೀತಿಯಲ್ಲಿ ನಮ್ಮ ಚಿತ್ರದ ಕಥೆ ಸಾಗುತ್ತದೆ. ಉಡುಪಿ, ಬೆಂಗಳೂರು, ಗೋವಾ  ಹಾಗೂ ಸೌದಿ ಅರೇಬಿಯಾದಲ್ಲಿ ಚಿತ್ರೀಕರಣ ಮಾಡಿದ್ದೇವೆ.

    ಕುದ್ರು ನನ್ನ ಮೊದಲ ನಿರ್ದೇಶನದ ಚಿತ್ರ. ಒಂದು ಸಣ್ಣ ದ್ವೀಪದಲ್ಲಿ ಬೇರೆಬೇರೆ ಸಮುದಾಯದವರು ಸಾಮರಸ್ಯದಿಂದ ಬಾಳುತ್ತಿದಾಗ, ಒಂದು ವಾಟ್ಸಾಪ್ ಸಂದೇಶ ಹೇಗೆ ಅಶಾಂತಿಯನ್ನು  ತಂದು ಹಾಕುತ್ತದೆ ಹಾಗೂ ಬಂದ ತೊಂದರೆಯನ್ನು ನಿವಾರಣೆ ಮಾಡಿಕೊಂಡು‌ ಮತ್ತೆ ಸಾಮರಸ್ಯದಿಂದ ಹೇಗೆ ಜೀವನ ನಡೆಸಬಹುದು ಎಂಬುದನ್ನು ಚಿತ್ರದಲ್ಲಿ ತೋರಿಸುತ್ತಿದ್ದೇವೆ.

     

    ಹರ್ಷಿತ್ ಶೆಟ್ಟಿ, ಗಾಡ್ವಿನ್ ಹಾಗೂ ಫರ್ಹಾನ್ ಚಿತ್ರದ ನಾಯಕರಾಗಿ ನಟಿಸಿದ್ದು, ಪ್ರಿಯಾ ಹೆಗ್ಡೆ, ವಿನುತ ಹಾಗೂ ಡೈನ ಡಿಸೋಜ ನಾಯಕಿಯಾಗಿ ಅಭಿನಯಿಸಿದ್ದಾರೆ. ಪ್ರತೀಕ್ ಕುಂಡು ಸಂಗೀತ ನಿರ್ದೇಶನ ಮಾಡಿ, ಸುದೇಷ್ಣ ದಾಸ್ ಹಾಗೂ ಪ್ರತೀಕ್ ಕುಂಡು ಧ್ವನಿ ಕೊಟ್ಟಿರುತ್ತಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದುಬೈನಲ್ಲಿ ‘ಕುದ್ರು’ ಸಿನಿಮಾದ ಸಾಂಗ್ ರಿಲೀಸ್

    ದುಬೈನಲ್ಲಿ ‘ಕುದ್ರು’ ಸಿನಿಮಾದ ಸಾಂಗ್ ರಿಲೀಸ್

    ತ್ತೀಚೆಗೆ ದುಬೈ (Dubai) ಯಲ್ಲಿ ನಡೆದ ಆಟಿದೊಂಜಿ ದಿನ ಸಮಾರಂಭದಲ್ಲಿ ‘ಕುದ್ರು’ (Kudru) ಸಿನಿಮಾ ಹಾಡುಗಳ ವಿಡಿಯೋ (Song Release) ರಿಲೀಸ್ ಮಾಡಲಾಯಿತು. ಕತೆಗಾರ, ನಿರ್ದೇಶಕ ಹಾಗೂ ನಿರ್ಮಾಪಕರಾದ ಭಾಸ್ಕರ್ ನಾಯ್ಕ್ (Bhaskar Naik), ನಾಯಕ ನಟ ಹರ್ಷಿತ್ ಶೆಟ್ಟಿ (Harshit Shetty)  ನಾಯಕಿರಾದ ಪ್ರಿಯಾ ಹೆಗ್ಡೆ, ಡೈನ ಡಿಸೋಜ ಸಮಾರಂಭದಲ್ಲಿ ಭಾಗವಹಿಸಿದ್ದರು.  ಶ್ರೀಮತಿ ಸಂಧ್ಯಾ ಪ್ರಸಾದ್ ಅತಿಥಿಗಳಿಗೆ ಪುಷ್ಪಗುಚ್ಚ ನೀಡಿ ಸ್ವಾಗತಿಸಿದರು.

    ದಕ್ಷಿಣ ಕನ್ನಡದ ಸಂಸ್ಕೃತಿಯನ್ನು UAE ಯಲ್ಲಿ ಎತ್ತಿ ಬಿಂಬಿಸುವ  ಹಬ್ಬದಾಚರಣೆ (ಆಟಿದೊಂಜಿ ದಿನ) ಎಲ್ಲರ ಮನ ಗೆದ್ದಿತು. ಈ ಸಮಾರಂಭದಲ್ಲಿ ಕುದ್ರು ಸಿನಿಮಾದ ಟೈಟಲ್ ಸಾಂಗ್  ಹಾಗೂ  ಫೇರ್ವೆಲ್ ಪಾರ್ಟಿ ಸಾಂಗ್ ಬಿಡುಗಡೆ ಮಾಡಲಾಯಿತು. ನಮ್ರಿತ ಮಲ್ಲ ಈ ಹಾಡುಗಳಿಗೆ ಹೆಜ್ಜೆ ಹಾಕಿದರು. ಇದನ್ನೂ ಓದಿ:ಬಿಗ್ ಬಾಸ್ ಫ್ಯಾನ್ಸ್‌ಗೆ ಗುಡ್ ನ್ಯೂಸ್- ದೊಡ್ಮನೆ ಆಟಕ್ಕೆ ಮುಹೂರ್ತ ಫಿಕ್ಸ್

    ಕುದ್ರು ಚಿತ್ರದಲ್ಲಿ ದಕ್ಷಿಣ ಕನ್ನಡದ  ಸುಂದರ ತಾಣಗಳನ್ನು ಹಾಗೂ ಕೋಲ, ಕಂಬಳ, ಯಕ್ಷಗಾನ ದಂತಹ  ಕಲೆಗಳನ್ನು ಪರಿಚಯ ಮಾಡಿಸಿದ್ದಾರೆ ನಿರ್ದೇಶಕ ಭಾಸ್ಕರ್ ನಾಯ್ಕ್.  ಸಿನೆಮಾ ಬಗ್ಗೆ ಮಾತನಾಡಿ ನಿರ್ದೇಶಕರು, ಕುದ್ರು ಒಂದು ಸಮಾಜಕ್ಕೆ ಒಳ್ಳೆಯ ನುಡಿ ಕೊಡುವ ಸಿನಿಮಾ,  ಆಯಿಲ್ ರಿಗ್ ನಲ್ಲಿ ಶೂಟ್ ಮಾಡಿದ ಮೊದಲ ಭಾರತೀಯ ಸಿನಿಮಾ ಕುದ್ರು”ಎನ್ನುವ ಮೂಲಕ UAE ಜನರಿಗೆ ಇನ್ನೂ ಕುತೂಹಲ ಮೂಡಿಸಿದರು.

     

    ಹರ್ಷಿತ್ ಶೆಟ್ಟಿ, ಪ್ರಿಯ ಹೆಗ್ಡೆ ಹಾಗೂ ಡೈನ  ಡಿಸೋಜಾ ಮಾತನಾಡಿ ತಮ್ಮ ಪರಿಚಯದೊಂದಿಗೆ ಸಿನಿಮಾ ಕುರಿತಾದ ಅನುಭವ ಹಂಚಿಕೊಂಡರು.  ಸ್ಥಳೀಯ ಉದ್ಯಮಿ ಮತ್ತು ಪ್ರಖ್ಯಾತ ಕಾರ್ಯ ನಿರ್ವಾಹಕ ರೊನಾಲ್ಡ್ ಒಲಿವೆರಾ ಸಮಾರಂಭದ ನಿರ್ವಾಹಣೆ ಮಾಡಿದ್ದರು. ಪ್ರವೀಣ್ ಶೆಟ್ಟಿ, ಉದ್ಯಮಿಗಳಾದ ಡೇವಿಡ್ ಫ್ರಾಂಕ್ ಫೆರ್ನಾಂಡಿಸ್ ಹಾಗೂ ಜೋಸೆಫ್ ಮತಾಯಸ್ ಹಾಡುಗಳನ್ನು ಬಿಡುಗಡೆ ಮಾಡಿದರು. ಗುರೂಜಿ ಹರೀಶ್,  ಸುಹೈಲ್ ಕುದ್ರೋಳಿ, ಶೋಧನ್ ಪ್ರಸಾದ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕರಾವಳಿ ಭಾಗದ ಪರಂಪರೆ ಸಾರುವ ‘ಕುದ್ರು’ ಸಿನಿಮಾ

    ಕರಾವಳಿ ಭಾಗದ ಪರಂಪರೆ ಸಾರುವ ‘ಕುದ್ರು’ ಸಿನಿಮಾ

    ತ್ತೀಚಿಗೆ ದಕ್ಷಿಣ ಕನ್ನಡದ ಭವ್ಯ ಪರಂಪರೆಯ ಕುರಿತಾದ ಚಿತ್ರಗಳು ಹೆಚ್ಚು ಬರುತ್ತಿದೆ‌. “ಕುದ್ರು” ಸಹ ಅದೇ ಸುಂದರ ಪರಿಸರದಲ್ಲಿ  ನಡೆಯವ ಕಥೆ.  ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾಹಿತಿ ನೀಡಿದರು.  ನಾನು ಮೂಲತಃ ಉಡುಪಿಯವನು.  ನೀರಿನಿಂದ ಸುತ್ತುವರೆದ ದ್ವೀಪವನ್ನು ತುಳುವಿನಲ್ಲಿ “ಕುದ್ರು ಎನ್ನುತ್ತಾರೆ. ಈ ಚಿತ್ರದ ಕಥೆಯನ್ನು ನಾನೇ ಬರೆದಿದ್ದೇನೆ. ಮಧು ವೈ ಜಿ ಹಳ್ಳಿ ನಿರ್ದೇಶನ ಮಾಡಿದ್ದಾರೆ. “ಕುದ್ರು” ದ್ವೀಪದಲ್ಲಿ  ಹಿಂದೂ, ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಮೂರು ಪಂಗಡದವರು ವಾಸಿಸುತ್ತಿರುತ್ತಾರೆ. ಎಲ್ಲರೂ ಸಹಬಾಳ್ವೆಯಿಂದ ಜೀವನ ನಡೆಸುತ್ತಿರುತ್ತಾರೆ. ಈ ರೀತಿಯಲ್ಲಿ ನಮ್ಮ ಚಿತ್ರದ ಕಥೆ ಸಾಗುತ್ತದೆ. ಉಡುಪಿ, ಬೆಂಗಳೂರು, ಗೋವಾ  ಹಾಗೂ ಸೌದಿ ಅರೇಬಿಯಾದಲ್ಲಿ ಚಿತ್ರೀಕರಣ ಮಾಡಿದ್ದೇವೆ. ಇಂದು ಅಭಿಮಾನ್ ಸ್ಟುಡಿಯೋದಲ್ಲಿ ಹಾಡಿನ ಚಿತ್ರೀಕರಣ ಮಾಡಿತ್ತಿದ್ದೇವೆ. ಈ ಹಾಡಿಗೆ ಹೆಜ್ಜೆ ಹಾಕಲು ದೂರದ ದೆಹಲಿಯಿಂದ ನಟಿ ನಮ್ರತಾ ಮಲ್ಲ ಬಂದಿದ್ದಾರೆ ಎಂದರು ನಿರ್ಮಾಪಕ ಹಾಗೂ ಕಥೆಗಾರ ಭಾಸ್ಕರ್ ನಾಯಕ್.

    “ಕುದ್ರು” ನನ್ನ ಮೊದಲ ನಿರ್ದೇಶನದ ಚಿತ್ರ. ಒಂದು ಸಣ್ಣ ದ್ವೀಪದಲ್ಲಿ ಬೇರೆಬೇರೆ ಸಮುದಾಯದವರು ಸಾಮರಸ್ಯದಿಂದ ಬಾಳುತ್ತಿದಾಗ, ಒಂದು ವಾಟ್ಸಾಪ್ ಸಂದೇಶ ಹೇಗೆ ಅಶಾಂತಿಯನ್ನು  ತಂದು ಹಾಕುತ್ತದೆ ಹಾಗೂ ಬಂದ ತೊಂದರೆಯನ್ನು ನಿವಾರಣೆ ಮಾಡಿಕೊಂಡು‌ ಮತ್ತೆ ಸಾಮರಸ್ಯದಿಂದ ಹೇಗೆ ಜೀವನ ನಡೆಸಬಹುದು ಎಂಬುದನ್ನು “ಕುದ್ರು” ಚಿತ್ರದಲ್ಲಿ ತೋರಿಸುತ್ತಿದ್ದೇವೆ. ಹರ್ಷಿತ್ ಶೆಟ್ಟಿ, ಗಾಡ್ವಿನ್ ಹಾಗೂ ಫರ್ಹಾನ್ ಚಿತ್ರದ ನಾಯಕರಾಗಿ ನಟಿಸಿದ್ದು, ಪ್ರಿಯಾ ಹೆಗ್ಡೆ, ವಿನುತ ಹಾಗೂ ಡೈನ ಡಿಸೋಜ ನಾಯಕಿಯಾಗಿ ಅಭಿನಯಿಸಿದ್ದಾರೆ. ಮೂವರು ನಾಯಕರು ನಮ್ರತಾ ಅವರೊಂದಿಗೆ  ಅಭಿನಯಿಸುತ್ತಿರುವ ಈ ಹಾಡಿನ ಚಿತ್ರೀಕರಣದೊಂದಿಗೆ ನಮ್ಮ ಚಿತ್ರದ ಚಿತ್ರೀಕರಣ ಮುಕ್ತಾಯವಾಗಲಿದೆ.‌ ಪ್ರತೀಕ್ ಕುಂಡು ಸಂಗೀತ ನಿರ್ದೇಶನ ಹಾಗೂ ದೀಪು ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.  ಎಪ್ಪತ್ತಕ್ಕೂ ಅಧಿಕ ಭಾಗದ ಚಿತ್ರೀಕರಣ ರೈನ್ ಎಫೆಕ್ಟ್ ನಲ್ಲೇ ನಡೆದಿರುವುದು ಚಿತ್ರದ ವಿಶೇಷ ಎಂದರು ನಿರ್ದೇಶಕ ಮಧು ವೈ ಜಿ ಹಳ್ಳಿ.

    ನಾನು ಈ ಚಿತ್ರದಲ್ಲಿ ತುಂಟ ಮುಸ್ಲಿಂ ಸಮುದಾಯದ ಹುಡುಗಿಯಾಗಿ  ಸಕಲೇಶಪುರದ ಡೈನ ಡಿಸೋಜ, ಬ್ರಾಹ್ಮಣ ಹುಡುಗನಾಗಿ ಹರ್ಷಿತ್ ಶೆಟ್ಟಿ ಅಭಿನಯಿಸಿದ್ದಾರೆ. ಕ್ರಿಶ್ಚಿಯನ್ ಹುಡುಗನ ಪಾತ್ರಧಾರಿ ಗಾಡ್ವಿನ್ ಹಾಗೂ ಮುಸ್ಲಿಂ ಹುಡುಗನ ಪಾತ್ರದಲ್ಲಿ ಪಾತ್ರದಲ್ಲಿ ಅಭಿನಯಿಸಿರುವ ಫರ್ಹಾನ್ ಹಾಗೂ ಚಿತ್ರದಲ್ಲಿ ಬ್ರಾಹ್ಮಣ ಹುಡುಗಿ ಪಾತ್ರಧಾರಿ ನಾಯಕಿ ಪ್ರಿಯಾ ಹೆಗ್ಡೆ  ತಮ್ಮ ಪಾತ್ರದ ಕುರಿತು ಮಾತನಾಡಿದರು.

    Live Tv
    [brid partner=56869869 player=32851 video=960834 autoplay=true]