Tag: Bhaskar Rao

  • ‘ಕಂಬಿ ಹಿಂದೆ ಹೋಗಬೇಕಾಗುತ್ತೆ’ – ಸ್ವಿಗ್ಗಿ ಮ್ಯಾನೇಜ್‍ಮೆಂಟ್‍ಗೆ ಬೆಂಗಳೂರು ಕಮೀಷನರ್ ಕ್ಲಾಸ್

    ‘ಕಂಬಿ ಹಿಂದೆ ಹೋಗಬೇಕಾಗುತ್ತೆ’ – ಸ್ವಿಗ್ಗಿ ಮ್ಯಾನೇಜ್‍ಮೆಂಟ್‍ಗೆ ಬೆಂಗಳೂರು ಕಮೀಷನರ್ ಕ್ಲಾಸ್

    ಬೆಂಗಳೂರು: ಆನ್‍ಲೈನ್ ಫುಡ್ ಡೆಲಿವರಿಯಲ್ಲಿ ಕೆಲ ಕಂಪನಿಗಳು 30 ನಿಮಿಷದೊಳಗೆ ಪಿಜ್ಜಾ ಡೆಲಿವರಿ ಮಾಡ್ತೀವಿ ಇಲ್ಲದೇ ಇದ್ರೆ, ಪಿಜ್ಜಾ ಫ್ರೀ ಎನ್ನುವ ಆಫರ್ ಕೊಡುತ್ತಿವೆ. ಇದರಿಂದ ಪ್ರಾಣದ ಹಂಗು ತೊರೆದು ಪಿಜ್ಜಾ ಡೆಲಿವರಿ ಬಾಯ್‍ಗಳು ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ ಡ್ರೈವಿಂಗ್ ಮಾಡುತ್ತಿದ್ದಾರೆ.

    ಇದಕ್ಕೆ ಬೆಂಗಳೂರು ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ಟ್ವೀಟ್ ಮೂಲಕ ಈ ಸಮಯವನ್ನು 40 ನಿಮಿಷಕ್ಕೆ ಏರಿಸಿ, ಪ್ರಾಣ ಪಣಕ್ಕಿಟ್ಟು ಡೆಲಿವರಿ ಬಾಯ್‍ಗಳು ಒದ್ದಾಡುತ್ತಾರೆ. ಟ್ರಾಫಿಕ್ ಜಾಮ್‍ನಲ್ಲಿ ಹೇಗೆ ತಾನೇ 30 ನಿಮಿಷಕ್ಕೆ ತಲುಪಿಸುತ್ತಾನೆ ಎಂದು ಕಮೀಷನರ್ ತರಾಟೆಗೆ ತೆಗೆದುಕೊಂಡಿದ್ದಾರೆ.

    ಭಾಸ್ಕರ್ ರಾವ್ ಅವರ ಟ್ವೀಟ್‍ಗೆ ಸ್ವಿಗ್ಗಿ ಪ್ರತಿಕ್ರಿಯಿಸಿ, ಹಾಗೇನಿಲ್ಲ ಸರ್. ನಾವು ಸಂಚಾರಿ ನಿಯಮವನ್ನು ಪಾಲಿಸುತ್ತೇವೆ. ಯಾರಾದರೂ ಡೆಲಿವರಿ ಬಾಯ್‍ಗಳು ಪಾಲನೆ ಮಾಡದಿದ್ದರೆ ನಮ್ಮ ಸಹಾಯವಾಣಿಗೆ ದೂರು ಕೊಡಿ ಎಂದು ರೀ-ಟ್ವೀಟ್ ಮಾಡಿದ್ದಾರೆ.

    ಈ ಟ್ವೀಟ್‍ನಿಂದ ಸಿಟ್ಟಿಗೆದ್ದ ಭಾಸ್ಕರ್ ರಾವ್, ನಿಮ್ಮ ಕಿರಿಕ್‍ನಿಂದಾಗಿ ಡೆಲಿವರಿ ಬಾಯ್‍ಗಳು ನಿಯಮವನ್ನು ಉಲ್ಲಂಘಿಸಿ ಟ್ರಾಫಿಕ್ ಪೊಲೀಸರ ಕೈ-ಕಾಲು ಹಿಡಿದುಕೊಂಡು ಬಿಟ್ಟು ಬಿಡಿ ಸರ್, ಇಲ್ಲದಿದ್ದರೆ ನಮಗೆ ತೊಂದರೆಯಾಗುತ್ತೆ. ಇನ್ ಟೈಂಗೆ ಡೆಲಿವರಿ ಮಾಡಬೇಕು ಎಂದು ಬೇಡಿಕೊಳ್ತಾರೆ. ಸಿಕ್ಕಾಪಟ್ಟೆ ರೂಲ್ಸ್ ಬ್ರೇಕ್ ಮಾಡುವುದು ನಿಮ್ಮ ಡೆಲಿವರಿ ಬಾಯ್ ಗಳೇ, ಯಾರಾದರೂ ಡೆಲಿವರಿ ಬಾಯ್‍ಗೆ ಆಕ್ಸಿಡೆಂಟ್ ಆಗಿ ಸಮಸ್ಯೆಯಾಗಬೇಕು. ಆಗ ನಿಮ್ಮ ಸ್ವಿಗ್ಗಿ ಮ್ಯಾನೇಜ್ ಮೆಂಟ್ ನವರು ಕಂಬಿ ಹಿಂದೆ ಇರಬೇಕಾಗುತ್ತೆ ಎಂದು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಸಾರ್ವಜನಿಕರೂ ಕೂಡ ಸ್ವಿಗ್ಗಿ ಕಂಪನಿಗೆ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

  • ಕಮಿಷನರ್ ಬುಲೆಟ್ ಬೈಕ್ ಓಡಿಸಿದ ವಿಡಿಯೋ ವೈರಲ್

    ಕಮಿಷನರ್ ಬುಲೆಟ್ ಬೈಕ್ ಓಡಿಸಿದ ವಿಡಿಯೋ ವೈರಲ್

    ಬೆಂಗಳೂರು: ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಬುಲೆಟ್ ಓಡಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

    650 ಎಂಜಿನ್ ಸಾಮರ್ಥ್ಯದ ಹಿಮಾಲಯನ್ ಬುಲೆಟ್ ಬೈಕನ್ನು ಆಯುಕ್ತರು ಓಡಿಸಿದ್ದಾರೆ. ಕಮಿಷನರ್ ಹಿಂಬದಿಯಲ್ಲಿ ಜಂಟಿ ಪೊಲೀಸ್ ಆಯುಕ್ತ (ಸಂಚಾರ) ರವಿಕಾಂತೇಗೌಡ ಸಹ ಕುಳಿತಿದ್ದಾರೆ. ಬುಲೆಟ್ ಬೈಕ್ ಓಡಿಸಿ ಒಂದೊಳ್ಳೆಯ ರೈಡ್ ಅಂತ ಕಮಿಷನರ್ ಹೇಳಿದ್ದಾರೆ.

    ಕೊ ರೈಡರ್ ರವಿಕಾಂತೇಗೌಡ ಜೊತೆ ಬೈಕ್ ರೈಡ್ ಎಂದಿರುವ ಕಮಿಷನರ್, ತಲೆಗೆ ಹೆಲ್ಮೆಟ್ ಮತ್ತು ಕೈ ಕಾಲಿಗೆ ಸೇಫ್ಟಿ ಗಾರ್ಡ್ ಧರಿಸಿ ಬೈಕ್ ಚಾಲನೆ ಮಾಡಿದ್ದಾರೆ. ಅಲ್ಲದೇ ವಿಡಿಯೋವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.

    ಮಹಿಳೆಯರ ಸೇಫ್ಟಿಗಾಗಿ ಬೈಕ್ ರ‍್ಯಾಲಿ ವೇಳೆ ಬುಲೆಟ್ ಓಡಿಸಲಾಗಿದ್ದು, ಮೂರು ದಿನಗಳ ಹಿಂದೆ ಚಾಮರಾಜಪೇಟೆಯ ಸಿಎಆರ್ ಗ್ರೌಂಡ್ ನಿಂದ 20ಕ್ಕೂ ಹೆಚ್ಚು ಮಹಿಳಾ ಸಬ್ ಇನ್ಸ್ ಪೆಕ್ಟರ್ ಗಳು ಬೈಕ್ ರ‍್ಯಾಲಿ ಮಾಡಿದರು. ಮಹಿಳೆಯರ ಸೇಫ್ಟಿಗಾಗಿ ರ‍್ಯಾಲಿ ಆಯೋಜನೆ ಮಾಡಲಾಗಿದ್ದು, ನಂದಿ ಹಿಲ್ಸ್ ವರೆಗೆ ಬೈಕ್ ರೈಡ್ ಮಾಡಲಾಗಿತ್ತು.

  • ಸಂಘಟನೆಗೂ ಕೊಲೆ ಸ್ಕೆಚ್ ಆರೋಪಿಗಳಿಗೂ ಸಂಬಂಧವಿಲ್ಲ- ಕಮಿಷನರ್ ವಿರುದ್ಧ ಕಾನೂನು ಹೋರಾಟ: ಎಸ್‍ಡಿಪಿಐ ಅಧ್ಯಕ್ಷ

    ಸಂಘಟನೆಗೂ ಕೊಲೆ ಸ್ಕೆಚ್ ಆರೋಪಿಗಳಿಗೂ ಸಂಬಂಧವಿಲ್ಲ- ಕಮಿಷನರ್ ವಿರುದ್ಧ ಕಾನೂನು ಹೋರಾಟ: ಎಸ್‍ಡಿಪಿಐ ಅಧ್ಯಕ್ಷ

    ಬೆಂಗಳೂರು: ಟೌನ್‍ಹಾಲ್ ಎದುರು ನಡೆದ ಸಿಎಎ ಪರ ಪ್ರತಿಭಟನೆ ವೇಳೆ ಸಂಸದ ತೇಜಸ್ವಿಸೂರ್ಯ ಮತ್ತು ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ಕೊಲೆಗೆ ಎಸ್‍ಡಿಪಿಐ ಕಾರ್ಯಕರ್ತರು ಸ್ಕೆಚ್ ಹಾಕಿದ್ದರು ಎಂಬ ನಗರ ಪೊಲೀಸ್ ಆಯುಕ್ತರು ಅಘಾತಕಾರಿ ಮಾಹಿತಿ ಇಂದು ಹೊರಹಾಕಿದ್ದಾರೆ. ಆದರೆ ಘಟನೆಗೂ ನಮ್ಮ ಸಂಘಟನೆಗೂ ಸಂಬಂಧವಿಲ್ಲ ಎಂದು ಎಸ್‍ಡಿಪಿಐ ರಾಜ್ಯ ಘಟಕದ ಅಧ್ಯಕ್ಷ ಇಲಿಯಾಸ್ ಮಹಮ್ಮದ್ ತುಂಬೆ ಹೇಳಿದ್ದಾರೆ.

    ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ತುಂಬೆ ಅವರು, ಪ್ರಕರಣದಲ್ಲಿ ಎಸ್‍ಡಿಪಿಐ ಕಾರ್ಯಕರ್ತರು ಬಂಧಿತರಾಗಿದ್ದಾರೆ ಎಂಬ ಮಾಹಿತಿಯನ್ನು ಮಾಧ್ಯಮಗಳಿಂದ ಪಡೆದಿದ್ದೇವೆ. ಆ ಬಳಿಕ ಈ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಿದ್ದು, ಆ ವೇಳೆ ಆರೋಪಿಗಳು ಎಸ್‍ಡಿಪಿಐ ಕಾರ್ಯಕರ್ತರಲ್ಲ ಎಂಬುವುದು ತಿಳಿದು ಬಂದಿದೆ ಎಂದರು. ಇದನ್ನು ಓದಿ: ಸಿಎಎ ಪರ ಬ್ಯಾಟಿಂಗ್ ಮಾಡಿದ್ದಕ್ಕೆ ಟಾರ್ಗೆಟ್ – ಸೂಲಿಬೆಲೆ, ತೇಜಸ್ವಿ ಕೊಲೆಗೆ ಸ್ಕೆಚ್

    ನಮ್ಮ ಸಂಘಟನೆಯ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ. ಈ ಆರೋಪವನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸಾಬೀತು ಮಾಡದಿದ್ದರೆ ಅವರು ಒಬ್ಬ ಸುಳ್ಳುಗಾರ ಎನಿಸಿಕೊಳ್ಳುತ್ತಾರೆ. ಅವರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ. ಅವರ ಅಧಿಕಾರದಲ್ಲಿ ಮೇಲೇರಲು, ಯಾರನ್ನೋ ಮೆಚ್ಚಿಸಲು ಈ ಆರೋಪ ಮಾಡಿದ್ದಾರೆ. ಮಾಧ್ಯಮಗಳು ಕೂಡ ಸುಖಾಸುಮ್ಮನೆ ವರದಿ ಮಾಡುತ್ತಿದೆ. ನಮ್ಮ ಸಂಘಟನೆಯ ಕಾರ್ಯಕರ್ತರು ಭಾಗಿಯಾಗಿದ್ದರೆ ಎಂದಾದರೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ಮಾಹಿತಿ ನೀಡಬೇಕು. ಕಾನೂನಿನ ಅಡಿ ಶಿಕ್ಷೆ ಕೊಡಿಸುವ ಕಾರ್ಯಕ್ಕೆ ಮುಂದಾಗಬೇಕು. ಕಮಿಷನರ್ ಬೇಜವಾಬ್ದಾರಿ ಹೇಳಿಕೆ ನೀಡಿದ್ದರೆ ನಾವು ಅವರು ವಿರುದ್ಧ ಕಾನೂನು ಕ್ರಮಕೈಗೊಳ್ಳುತ್ತೇವೆ ಎಂದರು. ಇದನ್ನು ಓದಿ: ಒಬ್ಬ ಹಿಂದೂ ಆಗಿ ಸಾಯೋದಕ್ಕೆ ಹೆದರಿ ಬದುಕುವ ಜೀವ ನನ್ನದಲ್ಲ: ಸೂಲಿಬೆಲೆ

    ಬಿಜೆಪಿ ಪಕ್ಷದವರಿಗೆ ಸೈದ್ಧಾಂತಿಕವಾಗಿ ನಮ್ಮನ್ನು ಎದುರಿಸಲು ಸಾಧ್ಯವಾಗದೇ ಹೀಗೆಲ್ಲಾ ಮಾಡುತ್ತಿದ್ದಾರೆ. ಆರೋಪಿಗಳು ಎಸ್‍ಡಿಪಿಐ ಕಾರ್ಯಕರ್ತರು ಎಂದು ಹೇಳಲು ಕಮಿಷನರ್ ಅವರ ಬಳಿ ಯಾವ ಸಾಕ್ಷಿಯಿದೆ ಇದೆ. ಈ ಆರೋಪಿಗಳಿಗೂ ಎಸ್‍ಡಿಪಿಐಗೂ ಸಂಬಂಧವೇ ಇಲ್ಲ. ಆದರೆ ಇದು ಉದ್ದೇಶ ಪೂರ್ವಕವಾಗಿ ಮಾಡಲಾಗುತ್ತಿರುವ ಆರೋಪ. ಭಾಸ್ಕರ್ ರಾವ್ ಜೊತೆರೊಂದಿಗೆ ಯಾರಿದ್ದಾರೆ ಎಂಬುವುದು ನಮಗೂ ಗೊತ್ತಿದೆ ಎಂದರು. ಇದೇ ವೇಳೆ ಮಂಗಳೂರು ಕಮಿಷನರ್ ಹರ್ಷ ವಿರುದ್ಧ ಕ್ರಮ ಕೈಗೊಂಡಿದ್ದಾರಾ ಎಂದು ತುಂಬೆ ಆಕ್ರೋಶ ವ್ಯಕ್ತಪಡಿಸಿದರು. ಇದನ್ನು ಓದಿ: ದೇಶ ವಿರೋಧಿಗಳು ನನ್ನನ್ನು ಟಾರ್ಗೆಟ್ ಮಾಡಿದ್ದಕ್ಕೆ ಹೆಮ್ಮೆ ಅನಿಸ್ತಿದೆ: ಸೂಲಿಬೆಲೆ

  • ಭಾಸ್ಕರ್ ರಾವ್ ಕಾಪಿ ಹೊಡೆದು ಐಪಿಎಸ್ ಪಾಸ್ ಮಾಡಿರಬೇಕು: ಆಯುಕ್ತರ ವಿರುದ್ಧ ಕಾರ್ಮಿಕರ ಕಿಡಿ

    ಭಾಸ್ಕರ್ ರಾವ್ ಕಾಪಿ ಹೊಡೆದು ಐಪಿಎಸ್ ಪಾಸ್ ಮಾಡಿರಬೇಕು: ಆಯುಕ್ತರ ವಿರುದ್ಧ ಕಾರ್ಮಿಕರ ಕಿಡಿ

    ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ಭಾರತ್ ಬಂದ್ ಮಾಡಲು ಕಾರ್ಮಿಕ ಸಂಘಟನೆಯವರು ಕರೆಕೊಟ್ಟಿದ್ದರು. ಆದರೆ ರ‍್ಯಾಲಿಗೆ ಅವಕಾಶ ಕೊಡದ ನಗರ ಪೊಲೀಸ್ ಆಯುಕ್ತರ ವಿರುದ್ಧ ಕಾರ್ಮಿಕ ಸಂಘಟನೆಯ ಸದಸ್ಯರು ಸಿಡಿದೆದ್ದಾರೆ.

    ಸಿಲಿಕಾನ್ ಸಿಟಿಯಲ್ಲಿ ಪ್ರತಿಭಟನೆ ಕಿಚ್ಚು ಜಾಸ್ತಿ ಇಲ್ಲದ ಕಾರಣ ಭಾರತ್ ಬಂದ್‍ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಮಧ್ಯೆ ಈ ಬಾರಿ ರ‍್ಯಾಲಿಗೆ ಅವಕಾಶ ಕೊಡದ ನಗರ ಪೊಲೀಸ್ ಆಯುಕ್ತರ ವಿರುದ್ಧ ಕಾರ್ಮಿಕರು ಸಿಡಿದೆದಿದ್ದಾರೆ. ಕೇಂದ್ರ ಸರ್ಕಾರದ ಬದಲಾಗಿ ಕಮೀಷನರ್ ಮೇಲೆ ವಾಗ್ದಾಳಿ ನಡೆಸಿದರು.

    ಕಾರ್ಮಿಕ ಸಂಘಟನೆ ಮುಖಂಡ ಮೀನಾಕ್ಷಿ ಸುಂದರಂ ಮಾತನಾಡಿ, ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ಕಾಪಿ ಹೊಡೆದು ಐಪಿಎಸ್ ಪಾಸ್ ಮಾಡಿರಬೇಕು. ಅಧಿಕಾರದಲ್ಲಿರುವವರ ಬೂಟ್ ನೆಕ್ಕಿ ಅಧಿಕಾರ ಗಿಟ್ಟಿಸಿಕೊಂಡಿದ್ದಾರೆ. ಯಡಿಯೂರಪ್ಪ ಚೇಲಾ ಆಗಿರುವ ಭಾಸ್ಕರ್ ರಾವ್. ನಾವ್ ಮನಸ್ಸು ಮಾಡಿದರೆ ಠಾಣೆಗೆ ಮುತ್ತಿಗೆ ಹಾಕುತ್ತೇವೆ ಎಂದು ಕಿಡಿಕಾರಿದರು.

  • ಹೆಚ್ಚು ಕಡಿಮೆ ಆದ್ರೆ ನೀವೇ ಜವಾಬ್ದಾರಿ, ಬಿ ಕೇರ್ ಫುಲ್: ಭಾಸ್ಕರ್ ರಾವ್

    ಹೆಚ್ಚು ಕಡಿಮೆ ಆದ್ರೆ ನೀವೇ ಜವಾಬ್ದಾರಿ, ಬಿ ಕೇರ್ ಫುಲ್: ಭಾಸ್ಕರ್ ರಾವ್

    ಬೆಂಗಳೂರು: ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸುವಂತೆ ಕರೆದಿರುವ ಭಾರತ್ ಬಂದ್‍ಗೆ ಎಲ್ಲೆಡೆ ಪರ-ವಿರೋಧಗಳು ವ್ಯಕ್ತವಾಗುತ್ತಿದೆ. ಈಗಾಗಲೇ 46 ಸಂಘಟನೆಗಳು ಪ್ರತಿಭಟನೆಗೆ ಅವಕಾಶವನ್ನು ಪಡೆದುಕೊಂಡಿವೆ. ಆದರೆ ಪೊಲೀಸ್ ಇಲಾಖೆ ತುಂಬಾ ಎಚ್ಚರಿಕೆಯಿಂದ ಇರಬೇಕು ಅಂತ ಸೂಚನೆ ನೀಡಲಾಗಿದೆ.

    ನಾಳೆಯ ಭಾರತ್ ಬಂದ್‍ಗೆ ಖಡಕ್ ಸೂಚನೆಗಳನ್ನು ನೀಡಿರುವ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಪ್ರತಿಯೊಂದು ಸ್ಟೇಷನ್ ವ್ಯಾಪ್ತಿಯ ಇನ್ಸ್ ಪೆಕ್ಟರ್ ಗಳಿಗೆ ಸೂಚನೆ ನೀಡಿದ್ದಾರೆ. ಯಾವುದೇ ಅಹಿತಕರ ಘಟನೆಗಳನ್ನು ನಡೆಯದಂತೆ ಎಚ್ಚರಿಕೆ ವಹಿಸಬೇಕು. ನಿಮ್ಮ ಎಚ್ಚರಿಕೆಯನ್ನೂ ಮೀರಿ ಪ್ರತಿಭಟನಾ ರ‍್ಯಾಲಿಗಳು, ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸೋದು, ಕಲ್ಲು ತೂರಾಟ ಮಾಡಿದ ಕುರಿತು ವರದಿಯಾದರೆ ಅದಕ್ಕೆ ಇನ್ಸ್‍ಪೆಕ್ಟರ್‍ಗಳೇ ಜವಾಬ್ದಾರಿ ಎಂದು ವಾರ್ನ್ ಮಾಡಿದ್ದಾರೆ. ಇದನ್ನೂ ಓದಿ: ಬುಧವಾರ ಭಾರತ್ ಬಂದ್ – ಏನು ಇರುತ್ತೆ? ಏನು ಇರಲ್ಲ?

    ಇಂದು ರಾತ್ರಿಯಿಂದಲೇ ಅತಿ ಹೆಚ್ಚು ಗಸ್ತು ತಿರುಗಲು ಸೂಚನೆ ನೀಡಲಾಗಿದೆ. ಬೆಳ್ಳಂಬೆಳಗ್ಗೆ ಸಂಚರಿಸುವ ಬಸ್‍ಗಳಿಗೂ ಭದ್ರತೆಯನ್ನು ಒದಗಿಸಬೇಕು. ಗುಂಪು ಸೇರಿ ಹೊಂಚು ಹಾಕುವವರ ಬಗ್ಗೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.

  • ಜನವರಿ 8ರ ಮುಷ್ಕರಕ್ಕೆ ಅನುಮತಿಯಿಲ್ಲ: ಭಾಸ್ಕರ್ ರಾವ್

    ಜನವರಿ 8ರ ಮುಷ್ಕರಕ್ಕೆ ಅನುಮತಿಯಿಲ್ಲ: ಭಾಸ್ಕರ್ ರಾವ್

    ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ 10 ಕಾರ್ಮಿಕ ಸಂಘಟನೆಗಳು ಬುಧವಾರ ದೇಶವ್ಯಾಪಿ ಬಂದ್‍ಗೆ ಕರೆ ನೀಡಿದೆ. ಆದರೆ ಜನವರಿ 8ರ ಮುಷ್ಕರಕ್ಕೆ ಪೊಲೀಸ್ ಇಲಾಖೆ ಬಿಗ್ ಶಾಕ್ ನೀಡಿದೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಮುಷ್ಕರ ಅಥವಾ ಮೆರವಣಿಗೆಗೆ ಅನುಮತಿ ನಿರಾಕರಿಸಲಾಗಿದೆ. ಮುಷ್ಕರದ ಹೆಸರಲ್ಲಿ ಮೆರವಣಿಗೆ ನಡೆಸಿ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತದೆ. ಆದ್ದರಿಂದ ಮುಷ್ಕರಕ್ಕೆ ಅನುಮತಿ ನೀಡದಂತೆ ಖಡಕ್ ಸೂಚನೆ ನೀಡಿದರು.

    ಒಂದು ವೇಳೆ ಆದೇಶ ಉಲ್ಲಂಘಿಸಿ ಮೆರವಣಿಗೆ ಮಾಡಿದರೆ ಆಯೋಜಕರ ಮೇಲೆ 107 ಸೆಕ್ಷನ್ ಆಡಿ ಕೇಸ್ ದಾಖಲಿಸಲು ಕಮಿಷನರ್ ಸೂಚನೆ ನೀಡಿದರು. ಕೆಲವು ಕಾರ್ಮಿಕ ಸಂಘಟನೆಗಳು ಮೆರವಣಿಗೆ ಮಾಡುವುದಾಗಿ ಅನುಮತಿ ಕೇಳೋದಕ್ಕೆ ಬಂದಿದ್ದರು. ಆದರೆ ನಾವು ಮೆರವಣಿಗೆ ಮಾಡಲು ಅನುಮತಿ ಕೊಡಲ್ಲ ಅಂತ ಹೇಳಿದ್ದೀವಿ. ಅವರು ಏನೇ ಮಾಡೋದ್ದಿದ್ದರೂ ಫ್ರೀಡಂ ಪಾರ್ಕಿನಲ್ಲಿ ಮಾಡಬೇಕು ಎಂದರು. ಇದನ್ನೂ ಓದಿ: ಬುಧವಾರ ಕಾರ್ಮಿಕರ ಪ್ರತಿಭಟನೆ – ಭಾರತ್ ಬಂದ್ ಯಾಕೆ? ಬೇಡಿಕೆ ಏನು?

    ಬೆಂಗಳೂರಿನಲ್ಲಿ ದಿನ ಬೆಳಗಾದ್ರೆ ಟ್ರಾಫಿಕ್ ಜಾಮ್ ಅಗುತ್ತದೆ. ಇದರಿಂದ ಸಾರ್ವಜನಿಕರಿಗೆ ತೊಂದರೆ ಅಗುತ್ತದೆ. ಇವರು ಮೆರವಣಿಗೆ ಮಾಡಿ ಲಕ್ಷಾಂತರ ಜನರಿಗೆ ತೊಂದರೆ ಕೊಡಲು ಬಿಡಲ್ಲ. ಭಾರತ್ ಬಂದ್ ಬಗ್ಗೆ ನಮಗೆ ಯಾವುದೇ ಮಾಹಿತಿ ಬಂದಿಲ್ಲ. ಒಂದು ವೇಳೆ ಬಂದ್ ಮಾಡಿದರೆ ಅದಕ್ಕೆ ಆಯೋಜಕರೇ ನೇರ ಹೊಣೆಯಾಗುತ್ತಾರೆ ಎಂದು ಹೇಳಿದರು.

    ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಷರತ್ತುಗಳು ಇವೆ. ಏನೇ ಸಣ್ಣ ಘಟನೆಯಾದರೂ ಆಯೋಜಕರ ಮೇಲೆ ಕೇಸ್ ಹಾಕುತ್ತೇವೆ. ಏನೇ ಅನಾಹುತವಾದರೂ ಅವರೇ ಅದಕ್ಕೆ ಜವಾಬ್ದಾರರು ಎಂದು ಕಮಿಷನರ್ ಭಾಸ್ಕರ್ ರಾವ್ ಸ್ಪಷ್ಟಪಡಿಸಿದ್ದಾರೆ.

  • ಬೀದಿ ಕಾಮಣ್ಣರ ವಿರುದ್ಧ ಕಠಿಣ ಕ್ರಮ: ಭಾಸ್ಕರ್ ರಾವ್

    ಬೀದಿ ಕಾಮಣ್ಣರ ವಿರುದ್ಧ ಕಠಿಣ ಕ್ರಮ: ಭಾಸ್ಕರ್ ರಾವ್

    ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಯ ವೇಳೆ ಯುವತಿಯರಿಗೆ ಕಿರುಕುಳ ನೀಡಿದ ಕಾಯುಕರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಹೊಸ ವರ್ಷಾಚರಣೆ 2020: ಖಾಕಿ ಸಮ್ಮುಖದಲ್ಲೇ ನಡೀತು ಲೈಂಗಿಕ ಕಿರುಕುಳ

    ನಗರದಲ್ಲಿ ಪ್ರತಿಗೊಷ್ಠಿಯಲ್ಲಿ ಮಾತನಾಡಿದ ಬಾಸ್ಕರ್ ರಾವ್, ಯುವತಿಯರಿಗೆ ಕಿರುಕುಳ ನೀಡಿರುವ ಸಿಸಿಟಿವಿ ವಿಡಿಯೋಗಳನ್ನ ಪಡೆದು ಕಾಮುಕರ ವಿರುದ್ಧ ದೂರು ಕೊಡುವಂತೆ ಅಪ್ರೋಚ್ ಮಾಡಲಾಗುತ್ತೆ. ಒಂದು ವೇಳೆ ನೊಂದ ಯುವತಿಯರು ಯಾರು ಕೂಡ ಪೊಲೀಸ್ ಠಾಣೆಗೆ ಬಂದು ದೂರು ಕೊಡದಿದ್ದರೂ, ನಾವೇ ಸ್ವಯಂಪ್ರೇರಿತವಾಗಿ ಸೊಮೊಟೊ ಕೇಸ್ ದಾಖಲಿಕೊಂಡು ತನಿಖೆ ಮಾಡಿ ಆರೋಪಿಗಳನ್ನು ಬಂಧಿಸಲಾಗುತ್ತೆ. ತಪ್ಪು ಮಾಡಿದವರಿಗೆ ರಕ್ಷಣೆ ಮಾಡುವ ಪ್ರಮೇಯವೇ ಬರುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಜನ್ರ ಸಮ್ಮುಖದಲ್ಲೇ ಜೋಡಿ ಲಿಪ್‍ಲಾಕ್ – ಪೊಲೀಸ್ರು ನಿಯೋಜನೆ ಮಾಡಿದ್ದ ರಸ್ತೆಯಲ್ಲೇ ಪ್ರೇಮಿಗಳು ಅರೆಬೆತ್ತಲೆ

    ಹೊಸ ವರ್ಷದ ಸಂಭ್ರಮಾಚರಣೆಗೆ ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಜನರು ಬಂದಿದ್ದರು. ಬ್ರಿಗೇಡ್ ರೋಡ್, ಚರ್ಚ್ ಸ್ಟ್ರಿಟ್‍ನಿಂದ ಹೆಚ್ಚು ಜನ ಕೋರಮಂಗಲಕ್ಕೆ ಬಂದಿದ್ದರು. ಸುಮಾರು ಮೂರು ಲಕ್ಷದಷ್ಟು ಮಂದಿಯನ್ನ ನಮ್ಮ ಪೊಲೀಸರು ಹತೋಟಿಗೆ ತಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ನಗರ ಭಾಸ್ಕರ್ ರಾವ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

  • ಹೆಚ್ಚು ಜನ ಸಭೆ ನಡೆಸುತ್ತಾರಷ್ಟೇ, ಯಾವುದೇ ಮೆರವಣಿಗೆಗೆ ಅವಕಾಶ ನೀಡಿಲ್ಲ- ಭಾಸ್ಕರ್ ರಾವ್

    ಹೆಚ್ಚು ಜನ ಸಭೆ ನಡೆಸುತ್ತಾರಷ್ಟೇ, ಯಾವುದೇ ಮೆರವಣಿಗೆಗೆ ಅವಕಾಶ ನೀಡಿಲ್ಲ- ಭಾಸ್ಕರ್ ರಾವ್

    – ಮೆರವಣಿಗೆಗೆ ಅವಕಾಶ ಕೇಳಿಲ್ಲ, ನೀಡಿಯೂ ಇಲ್ಲ
    – ಅಂಗಡಿ ಬಂದ್ ಮಾಡಲು ಅನುಮತಿ ನೀಡಿಲ್ಲ,
    – ಶಾಲಾ ಕಾಲೇಜುಗಳಿಗೆ ರಜೆ ಇಲ್ಲ

    ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಹಿನ್ನೆಲೆ ಶಾಂತಿ ಸಭೆ ಹಮ್ಮಿಕೊಂಡಿದ್ದು, ಈ ಹಿನ್ನೆಲೆ ಸೋಮವಾರ ಖುದ್ದೂಸ್ ಸಾಬ್ ಈದ್ಗಾ ಮೈದಾನದಲ್ಲಿ ಒಂದು ಲಕ್ಷ ಜನ ಸೇರಲಿದ್ದಾರೆ. ಹೀಗಾಗಿ ಸುತ್ತಮುತ್ತ ಹೆಚ್ಚು ಸಂಚಾರ ದಟ್ಟಣೆ ಸಂಭವಿಸುವ ಸಾಧ್ಯತೆ ಇದೆ.

    ಈ ಕುರಿತು ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ನಾಳೆ ಖುದ್ದೂಸ್ ಸಾಬ್ ಈದ್ಗಾ ಮೈದಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಲಿದ್ದಾರೆ. ಎನ್‍ಆರ್ ಸಿ ಹಾಗೂ ಸಿಎಎ ಖಂಡಿಸಿ ಡಿ.21ರಂದು ಪ್ರತಿಭಟನೆ ಹಮ್ಮಿಕೊಂಡಿದ್ದರು. ಆದರೆ ಸಿಎಂ ಸಭೆ ನಡೆಸಿ ಮನವೊಲಿಸಿದ್ದಾರೆ. ಪ್ರತಿಭಟನೆ ನಡೆಸುವುದಿಲ್ಲ ಶಾಂತಿ ಸಭೆ ನಡೆಸುತ್ತೇವೆ ಎಂದು ಅನುಮತಿ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು.

    ಪೊಲೀಸ್ ಇಲಾಖೆಯಿಂದ ಎಲ್ಲಾ ರೀತಿ ಕ್ರಮ ಕೈಗೊಂಡಿದ್ದೇವೆ. ಕಾರ್ಯಕ್ರಮದಲ್ಲಿ ಒಂದು ಲಕ್ಷ ಜನ ಭಾಗಿಯಾಗುವ ಸಾಧ್ಯತೆಯಿದೆ. ದರ್ಗಾಕ್ಕೆ ಬರಲು ಐದು ದಾರಿಗಳಿದ್ದು, ಬಹಳ ವ್ಯಾಪಕವಾದ ಸಂಚಾರಿ ವ್ಯವಸ್ಥೆ ಮಾಡಲಾಗುತ್ತದೆ. ಮುನ್ನೆಚ್ಚರಿಕಾ ಕ್ರಮವಾಗಿ ನಾವೂ ಸಹ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಅಲ್ಲದೆ ಅಗ್ನಿಶಾಮಕ ದಳ, ಅಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮದ ಸ್ಥಳದಲ್ಲಿ ಒಂದು ಸಾವಿರ ಕ್ಯಾಮೆರಾ ಹಾಕಲಾಗಿದೆ ಎಂದರು.

    ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1ರ ವರೆಗೆ ಕಾರ್ಯಕ್ರಮ ನಡೆಯಲಿದೆ. ಸಮುದಾಯದ ಎಲ್ಲ ಮುಖಂಡರಿಗೆ ಶಾಂತಿ ಕಾಪಾಡುವಂತೆ ಮನವಿ ಮಾಡಲಾಗಿದೆ. ಕಾನೂನು ಕೈಗೆತ್ತಿಕೊಂಡಲ್ಲಿ ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳಲಾಗುವುದು. ನಾವು ಯಾರಿಗೂ ತೊಂದರೆ ಕೊಡುವುದಿಲ್ಲ. ನಾಳೆ ನಡೆಯುವ ಕಾರ್ಯಕ್ರಮದಲ್ಲಿ ಅಹಿತಕರ ಘಟನೆ ನಡೆದರೆ ಸಂಬಂಧ ಪಟ್ಟ ಮುಖಂಡರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದರು.

    ನಾಳೆ ಸಾರ್ವಜನಿಕರು ಆ ರಸ್ತೆಯಲ್ಲಿ ಸಂಚರಿಸದಂತೆ ಈ ಮೂಲಕ ಮನವಿ ಮಾಡುತ್ತೇವೆ. 60 ಸಿಎಆರ್, 56 ಕೆಎಸ್‍ಆರ್‍ಪಿ ತುಕಡಿಗಳನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ಎಲ್ಲ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಭದ್ರತೆ ಕಲ್ಪಿಸಲಾಗಿದೆ. ಮುಸ್ಲಿಂ ಮುಖಂಡರು ಮೆರವಣಿಗೆಗೆ ಅವಕಾಶ ಕೇಳಿಲ್ಲ, ನಾವು ನೀಡಿಯೂ ಇಲ್ಲ. ಅಂಗಡಿ ಬಂದ್ ಮಾಡುವ ಬಗ್ಗೆ ಸಹ ಅನುಮತಿ ನೀಡಿಲ್ಲ. ಶಾಲಾ ಕಾಲೇಜುಗಳು ಎಂದಿನಂತೆ ಚಾಲ್ತಿಯಲ್ಲಿರುತ್ತವೆ. ಒತ್ತಾಯ ಪೂರ್ವಕವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದರು.

  • ಭಾನುವಾರದಿಂದ ಸಿಲಿಕಾನ್ ಸಿಟಿಯಲ್ಲಿ ನಿಷೇಧಾಜ್ಞೆ ಇರೋದಿಲ್ಲ

    ಭಾನುವಾರದಿಂದ ಸಿಲಿಕಾನ್ ಸಿಟಿಯಲ್ಲಿ ನಿಷೇಧಾಜ್ಞೆ ಇರೋದಿಲ್ಲ

    ಬೆಂಗಳೂರು: ಪೌರತ್ವ ತಿದ್ದುಪಡೆ ಕಾಯ್ದೆ ವಿರೋಧಿಸಿ ಪ್ರತಿಭಟನೆಗಳು ನಡೆಯಬಹುದು ಎಂದು ನಗರದಲ್ಲಿ ಹೇರಲಾಗಿದ್ದ 144 ಸೆಕ್ಷನ್ ಇಂದು ರಾತ್ರಿ 12 ಗಂಟೆಗೆ ಮುಕ್ತಾಯವಾಗಲಿದೆ.

    ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು, ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಇದ್ದ ನಿಷೇಧಾಜ್ಞೆ ಇಂದಿಗೆ ಕೊನೆಯಾಗಲಿದ್ದು, ನಾಳೆಯಿಂದ ಮುಂದುವರಿಸುವುದಿಲ್ಲ. ಡಿಸೆಂಬರ್ 19ರ ಬೆಳಗಿನ ಜಾವದಿಂದ ನಿಷೇಧಾಜ್ಞೆ ಹೇರಲಾಗಿತ್ತು. ಈ ಮೂರು ದಿನಗಳಿಂದ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ ಎಂದು ತಿಳಿಸಿದ್ದಾರೆ.

    ನಗರದಲ್ಲಿ ಕೆಲವೊಂದಷ್ಟು ಪ್ರತಿಭಟನೆಗಳನ್ನು ಹೊರತು ಪಡಿಸಿದರೆ ಯಾವುದೇ ಸಾರ್ವಜನಿಕ ಆಸ್ತಿ ಪಾಸ್ತಿ, ಕಾನೂನು ಸುವ್ಯವಸ್ಥೆಗೆ ಭಂಗವಾಗಿಲ್ಲ. ಇದೇ ತಿಂಗಳ 23ರಂದು ಪುಲಿಕೇಶಿನಗರದ ಖುದೂಸ್ ಮಸೀದಿಯಲ್ಲಿ ಮುಸಲ್ಮಾನ ಬಂಧುಗಳು ಸಭೆ ಸೇರಿ ಪೌರತ್ವ ತಿದ್ದುಪಡೆ ಕಾಯ್ದೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಹೀಗಾಗಿ ಅವತ್ತು ಒಂದಷ್ಟು ಭದ್ರತೆ ಹಾಗೂ ಸಭೆಗೆ ಬರುವವರಿಗೆ ಅನುಕೂಲವಾಗುವಂತೆ ಟ್ರಾಫಿಕ್ ವ್ಯವಸ್ಥೆಯನ್ನು ಕಲ್ಪಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

    ಪೌರತ್ವ ತಿದ್ದುಪಡೆ ಕಾಯ್ದೆ ವಿರೋಧಿಸಿ ಮುಂದಿನ ದಿನಗಳಲ್ಲಿ ಪ್ರತಿಭಟನೆಗಳಿಗೆ ಅವಕಾಶ ಕೊಡಬೇಕೋ, ಬೇಡಮೋ ಎನ್ನುವುದನ್ನು ಆಯಾ ಪ್ರದೇಶದ ಡಿಸಿಪಿಗಳು ನಿರ್ಧರಿಸುತ್ತಾರೆ. ಒಂದು ವೇಳೆ ಪರಿಸ್ಥಿತಿ ಕೈ ಮೀರುವ ಸಂದರ್ಭ ಬಂದರೆ, ಮತ್ತೆ 144 ಸೆಕ್ಷನ್ ಬಗ್ಗೆ ಯೋಚನೆ ಮಾಡುತ್ತೇನೆ ಎಂದು ಮಾಹಿತಿ ನೀಡಿದರು.

    ಕೆಲವರು ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಕೇಳಿಕೆ ನೀಡಿದ್ದಾರೆ. ಅಂಥವರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದ್ದು, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

  • ಪ್ರತಿಭಟನೆ ನಡೆಸಿದ್ರೆ ಹುಷಾರ್ – ಬೆಂಗಳೂರು ನಗರ ಪೊಲೀಸ್ ಆಯುಕ್ತರಿಂದ ಖಡಕ್ ವಾರ್ನಿಂಗ್

    ಪ್ರತಿಭಟನೆ ನಡೆಸಿದ್ರೆ ಹುಷಾರ್ – ಬೆಂಗಳೂರು ನಗರ ಪೊಲೀಸ್ ಆಯುಕ್ತರಿಂದ ಖಡಕ್ ವಾರ್ನಿಂಗ್

    ಬೆಂಗಳೂರು: ರಾಷ್ಟ್ರೀಯ ಪೌರತ್ವ ಕಾಯ್ದೆ ತಿದ್ದುಪಡಿ ವಿಚಾರ ಸಂಬಂಧ ದೇಶಾದ್ಯಂತ ಪರ- ವಿರೋಧ ಹೇಳಿಕೆಗಳು ವ್ಯಕ್ತವಾಗುತ್ತಿವೆ. ಜೊತೆಗೆ ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಪ್ರತಿಭಟನೆಯ ಕಾವು ಜೋರಾಗುತ್ತಿದೆ. ಇದರಿಂದ ಎಚ್ಚತ್ತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಖಡಕ್ ವಾರ್ನಿಂಗ್ ನೀಡಿದ್ದಾರೆ.

    ಪೌರತ್ವ ಕಾಯ್ದೆ ತಿದ್ದುಪಡಿ ವಿಚಾರ ಸಂಬಂಧ ಯಾವುದೇ ಪ್ರತಿಭಟನೆಗೆ ಅವಕಾಶ ಇಲ್ಲ. ಒಂದು ವೇಳೆ ಪ್ರತಿಭಟನೆ ನಡೆಸಿದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಕೆಲ ಶಿಕ್ಷಣ, ಸಂಸ್ಥೆ ವಿದ್ಯಾರ್ಥಿಗಳು ನಗರದಲ್ಲಿ ಪ್ರತಿಭಟನೆ ನಡೆಸಿವೆ. ವಿಡಿಯೋ ಗ್ರಾಫ್ ಅಧಾರದ ಮೇಲೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದರು.

    ಪ್ರತಿಭಟನೆಗೆ ಅವಕಾಶ ಕೋರಿ ಸಾಕಷ್ಟು ಅರ್ಜಿಗಳು ಬಂದಿದ್ದವು. ಇಲ್ಲಿವರೆಗೂ ಯಾರಿಗೂ ಅನುಮತಿ ಕೊಟ್ಟಿಲ್ಲ. ಪ್ರತಿಭಟನೆ ಮಾಡುವವರು ಉತ್ತರ ಭಾರತದ ರಾಜ್ಯಕ್ಕೆ ಹೋಗಿ ಅಲ್ಲಿ ಪ್ರತಿಭಟನೆ ಮಾಡಿ, ನಗರದಲ್ಲಿ ಮಾಡಲು ಅವಕಾಶ ಇಲ್ಲ ಎಂದರು.

    ಇದೇ ವೇಳೆ ಇನ್ನೂ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಗಳನ್ನು ಹಾಕುತ್ತಿದ್ದಾರೆ. ಅಂತವರ ಮೇಲೆ ಐಟಿ ಸೆಲ್‍ನಿಂದ ನಿಗಾ ವಹಿಸಲಾಗಿದ್ದು, ಸೂಕ್ತ ಕ್ರಮದ ಎಚ್ಚರಿಕೆ ನೀಡಿದರು.