Tag: bhatkala

  • ಕಾಂಗ್ರೆಸ್ ಗೆದ್ದ ಬೆನ್ನಲ್ಲೇ ಕೇಸರಿ ಧ್ವಜದ ಪಕ್ಕ ಇಸ್ಲಾಂ ಬಾವುಟ ಹಾರಿಸಿದ ಯುವಕ

    ಕಾಂಗ್ರೆಸ್ ಗೆದ್ದ ಬೆನ್ನಲ್ಲೇ ಕೇಸರಿ ಧ್ವಜದ ಪಕ್ಕ ಇಸ್ಲಾಂ ಬಾವುಟ ಹಾರಿಸಿದ ಯುವಕ

    ಕಾರವಾರ: ವಿಧಾನಸಭಾ ಚುನಾವಣೆಯಲ್ಲಿ (Karnataka Election 2023) ಕಾಂಗ್ರೆಸ್ (Congress) ಭರ್ಜರಿಯಾಗಿ ಜಯಗಳಿಸಿದ್ದು, ಇದರ ಬೆನ್ನಲ್ಲೇ ಕೇಸರಿ ಬಾವುಟದ ಪಕ್ಕ ಇಸ್ಲಾಂ ಬಾವುಟ ಹಾರಿಸಿರುವ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳದಲ್ಲಿ (Bhatkala) ನಡೆದಿದೆ.

    ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಹುಮತ ಸಿಕ್ಕಿದ್ದು, ಅಭ್ಯರ್ಥಿ ಮಂಕಾಳು ವೈದ್ಯರಿಗೆ ಗೆಲುವಾಗಿದೆ. ಹೀಗಾಗಿ ಭಟ್ಕಳದ ಮುಸ್ಲಿಂ ಯುವಕರು ಇಸ್ಲಾಂ ಧ್ವಜವನ್ನು ಹಿಡಿದು ನಗರದ ಬೀದಿಯಲ್ಲಿ ಸಂಭ್ರಮಿಸಿದ್ದಲ್ಲದೇ ಭಟ್ಕಳ ಸಂಶುದ್ದೀನ್ ಸರ್ಕಲ್ ಮೇಲೆ ನಿಂತು ಕೇಸರಿ ಬಾವುಟದ ಪಕ್ಕದಲ್ಲಿ ಇಸ್ಲಾಂ ಧ್ವಜ ಹಿಡಿದು ಸಂಭ್ರಮಾಚರಣೆ ನಡೆಸಿದ್ದಾರೆ. ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

    ಭಟ್ಕಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಕಾಳು ವೈದ್ಯ ಅವರು ಬಿಜೆಪಿಯ ಸುನಿಲ್ ನಾಯಕ್ ವಿರುದ್ಧ 32 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಮಂಕಾಳು ವೈದ್ಯರ ಗೆಲುವನ್ನು ಸಂಭ್ರಮಿಸುವ ವೇಳೆ ಭಟ್ಕಳ ಪಟ್ಟಣದಲ್ಲಿರುವ ಸಂಶುದ್ದೀನ್ ವೃತ್ತದ ಮೇಲೇರಿದ ಮುಸ್ಲಿಂ ಯುವಕರು ಕೇಸರಿ ಧ್ವಜದ ಪಕ್ಕ ನಿಂತು ಇಸ್ಲಾಂ ಧ್ವಜ ಪ್ರದರ್ಶನ ಮಾಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಸೋಲಿನ ಜವಾಬ್ದಾರಿ ನಾನೇ ಹೊರುತ್ತೇನೆ: ಬೊಮ್ಮಾಯಿ

    ಮಂಕಾಳು ವೈದ್ಯ ಭಾವಚಿತ್ರವಿರುವ ಧ್ವಜ, ಅಂಬೇಡ್ಕರ್‌ರ ಧ್ವಜದೊಂದಿಗೆ ಮುಸ್ಲಿಂ ಧ್ವಜ ಪ್ರದರ್ಶನ ಮಾಡಿ ವೃತ್ತದಲ್ಲಿ ಹಾಕಲಾಗಿದ್ದ ಕೇಸರಿ ಧ್ವಜದ ಪಕ್ಷದಲ್ಲೇ ಮುಸ್ಲಿಂ ಧ್ವಜ ಹಾಕಿದ್ದಾರೆ. ಸದ್ಯ ಇದರ ವೀಡಿಯೋ ವೈರಲ್ ಆಗುತ್ತಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

    ಹಿಂದೂಗಳ ಹೆಣ ಎತ್ತಲೂ ಯಾರು ಇರಬಾರದು:
    ಕಾಂಗ್ರೆಸ್‌ಗೆ ಬಹುಮತ ಬರುತ್ತಿದ್ದಂತೆ ಇದರ ಸಂತೋಷಕ್ಕೆ ಭಟ್ಕಳದಲ್ಲಿ ಇಸ್ಲಾಂ ಧ್ವಜ ಹಾರಿಸಲಾಯಿತು. ಮಾತ್ರವಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಸಮಾಜಘಾತುಕ ಸಂದೇಶಗಳನ್ನು ರವಾನಿಸಲಾಗುತ್ತಿದೆ. ಹಿಂದೂಗಳ ಹೆಣ ಎತ್ತಲೂ ಯಾರೂ ಇರಬಾರದು. ಕರ್ನಾಟಕದಲ್ಲಿ ಇನ್ನು ಮುಂದೆ ಮುಸ್ಲಿಂ ಹವಾ, ಅಲ್ಲಾಹು ಅಕ್ಬರ್ ಎಂದು ಮುಸ್ಲಿಂ ಯುವಕನೊಬ್ಬ ಮಾಡಿದ ಕಾಮೆಂಟ್‌ನ ಸ್ಕ್ರೀನ್ ಶಾಟ್ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: Karnataka Election 2023 Result – ಕಾಂಗ್ರೆಸ್‌ 136, ಬಿಜೆಪಿ 65, ಜೆಡಿಎಸ್‌ 19 ಮುನ್ನಡೆ LIVE Updates

  • NIAಯಿಂದ ಸಾಕ್ಷಿ ಕೊರತೆ: ಭಟ್ಕಳ ಮೂಲದ ಉಗ್ರಗಾಮಿ ವಾಯಿದ್‌ಗೆ ಬಿಗ್ ರಿಲೀಫ್‌ ನೀಡಿದ ಕೋರ್ಟ್‌

    NIAಯಿಂದ ಸಾಕ್ಷಿ ಕೊರತೆ: ಭಟ್ಕಳ ಮೂಲದ ಉಗ್ರಗಾಮಿ ವಾಯಿದ್‌ಗೆ ಬಿಗ್ ರಿಲೀಫ್‌ ನೀಡಿದ ಕೋರ್ಟ್‌

    ಕಾರವಾರ: ಮುಂಬೈ ಅಟ್ಯಾಕ್, ಚಿನ್ನಸ್ವಾಮಿ ಕ್ರೀಡಾಂಗಣ ಬ್ಲಾಸ್ಟ್‌ನಲ್ಲಿ ಆರೋಪಿಯಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೂಲದ ಉಗ್ರಗಾಮಿ ಅಬ್ದುಲ್ ವಾಯಿದ್ ಸಿದ್ದಿಬಪ್ಪಗೆ (Abdul Wahid Siddibappa) ದೆಹಲಿ ಪಟಿಯಾಲ ಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ. ಭಯೋತ್ಪಾದಕ ಚಟುವಟಿಕೆಗೆ ಹವಾಲಾ ಹಣ ವರ್ಗಾವಣೆ ಆರೋಪ ಸಾಬೀತಾಗದ ಹಿನ್ನಲೆಯಲ್ಲಿ ಪ್ರಕರಣ ರದ್ದು ಮಾಡಿ ಕೋರ್ಟ್‌ ಆದೇಶ ಹೊರಡಿಸಿದೆ.

    ದುಬೈನಲ್ಲಿ ಕುಳಿತು ಭಯೋತ್ಪಾದನೆ ಚಟುವಟಿಕೆ ನಡೆಸುತ್ತಿದ್ದ ಆರೋಪದಡಿ ಅಲ್ಲಿನ ಸರ್ಕಾರ ಈತನನ್ನು ಗಡಿಪಾರು ಮಾಡಿತ್ತು. ನಂತರ 2016ರ ಮೇ 20 ರಲ್ಲಿ NIA ದೆಹಲಿಯಲ್ಲಿ ಬಂಧಿಸಿತ್ತು. ಇದನ್ನೂ ಓದಿ: ಸ್ವಂತ ಮನೆಯಿಲ್ಲ ಎಂದಿದ್ದ ರಾಹುಲ್‌ ಗಾಂಧಿಗೆ 4 ಅಂತಸ್ತಿನ ಮನೆ ನೀಡಿದ ಕಾಂಗ್ರೆಸ್‌ ʻರಾಜಕುಮಾರಿʼ

    ಈತನ ವಿರುದ್ಧ ಇಂಡಿಯನ್ ಮುಜಾಹಿದ್ದಿನ್ (ಸಿಮಿ) ಸಂಘಟನೆಗೆ ಅಕ್ರಮ ಹಣಕಾಸು ವ್ಯವಹಾರ, ಹವಾಲಾ ದಂಧೆ, ಮುಂಬೈ ಅಟ್ಯಾಕ್, ಚಿನ್ನಸ್ವಾಮಿ ಕ್ರೀಡಾಂಗಣ ಬ್ಲಾಸ್ಟ್‌ನಲ್ಲಿ ಸಹ ಈತನ ಕೈವಾಡ ಇರುವ ಕುರಿತು NIA ಪ್ರಕರಣ ದಾಖಲಿಸಿತ್ತು.

    ಭಟ್ಕಳ ಮೂಲದ ಅಬ್ದುಲ್ ವಾಯಿದ್ ಸಿದ್ದಿಬಪ್ಪ ವಿರುದ್ಧ NIA ದಾಖಲಿಸಿದ್ದ, ಭಯೋತ್ಪಾದನೆ ಸಂಘಟನೆಗೆ ಹಣ ಒದಗಿಸಿದ ಕುರಿತು ಇರುವ ದೂರಿನಲ್ಲಿ ಸಾಕ್ಷಿ ಕೊರತೆ ಹಿನ್ನಲೆಯಲ್ಲಿ ಪ್ರಕರಣವನ್ನು ದೆಹಲಿ ಪಟಿಯಾಲ ಕೋರ್ಟ್‌ ಶನಿವಾರ ರದ್ದುಪಡಿಸಿತು. ಅಲ್ಲದೇ ವಾಯಿದ್‌ ಬಿಡುಗಡೆ ಮಾಡುವಂತೆ ಸೋಮವಾರ ಆದೇಶ ಮಾಡಿದೆ. ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೆ ಬಂದ್ರೆ ಗಲಭೆಕೋರರನ್ನ ತಲೆಕೆಳಗಾಗಿ ನೇತು ಹಾಕ್ತೀವಿ – ಅಮಿತ್ ಶಾ ಗುಡುಗು

  • ಭಟ್ಕಳದಲ್ಲಿ ಗುಡ್ಡ ಕುಸಿತ – ನಾಲ್ವರು ಸಾವು, ಮೂವರ ಶವ ಹೊರತೆಗೆದ ರಕ್ಷಣಾ ಸಿಬ್ಬಂದಿ

    ಭಟ್ಕಳದಲ್ಲಿ ಗುಡ್ಡ ಕುಸಿತ – ನಾಲ್ವರು ಸಾವು, ಮೂವರ ಶವ ಹೊರತೆಗೆದ ರಕ್ಷಣಾ ಸಿಬ್ಬಂದಿ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಭಾರೀ ಮಳೆಯಿಂದಾಗಿ ಭಟ್ಕಳದಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿತಗೊಂಡಿದ್ದು, ಮನೆಯಲ್ಲಿ ಸಿಲುಕಿಕೊಂಡಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಅವರಲ್ಲಿ ಇದೀಗ ಮೂವರ ಶವ ಹೊರ ತೆಗೆಯಲಾಗಿದೆ.

    ಹೌದು, ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಕೆಲ ಪ್ರದೇಶಗಳು ಸಂಪೂರ್ಣ ಮುಳುಗಡೆಯಾಗಿದ್ದು, ಹಲವೆಡೆ ಗುಡ್ಡ ಕುಸಿತಗೊಂಡಿದೆ. ಜಿಲ್ಲೆಯ ಭಟ್ಕಳ ತಾಲೂಕಿನ ಗ್ರಾಮದಲ್ಲಿ ಲಕ್ಷ್ಮಿ ನಾಯ್ಕ್ ಅವರ ಮನೆಯ ಮೇಲೆ ಗುಡ್ಡ ಕುಸಿತಗೊಂಡಿದ್ದು, ಮನೆಯೊಳಗೆ ನಾಲ್ವರು ಸಿಲುಕಿಕೊಂಡಿದ್ದರು. ಇದೀಗ ಮೂವರ ಶವವನ್ನು ರಕ್ಷಣಾ ಸಿಬ್ಬಂದಿ ಹೊರ ತೆಗೆದಿದ್ದು, ಮತ್ತೊಬ್ಬರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಇದನ್ನೂ ಓದಿ: Commonwealth Games: ಪದಕಗೆಲ್ಲೋ ತವಕದಲ್ಲಿದ್ದ ಭಾರತದ ಮೀನಾಕ್ಷಿಗೆ ಅಪಘಾತ – ಆಂಗ್ಲರ ಪಾಲಾದ ಚಿನ್ನ

    ಗುಡ್ಡ ಕುಸಿತದಿಂದಾಗಿ ಮೃತಪಟ್ಟ ಲಕ್ಷ್ಮೀ ನಾರಾಯಯಣ ನಾಯ್ಕ (48), ಅವರ ಪುತ್ರಿ ಲಕ್ಷ್ಮೀ ನಾಯ್ಕ (33) ಹಾಗೂ ಸಹೋದರಿಯ ಮಗ ಪ್ರವೀಣ್ ನಾಯ್ಕ (20) ಅವರ ಮೃತ ದೇಹವನ್ನು ಹೊರಗೆ ತೆಗೆಯಾಲಿದ್ದು, ಪುತ್ರ ಅನಂತ ನಾಯ್ಕ (32) ಶವಕ್ಕಾಗಿ ಶೋಧಕಾರ್ಯ ನಡೆಸಲಾಗುತ್ತಿದೆ. ಅಲ್ಲದೇ ಘಟನಾ ಸ್ಥಳಕ್ಕೆ ಶಾಸಕ ಸುನೀಲ್ ನಾಯ್ಕ್ ಮತ್ತು ಜಿಲ್ಲಾಧಿಕಾರಿ ಮುಲ್ಲೇ ಮುಹಿಲನ್ ಭೇಟಿ ನೀಡಿದ್ದು, ಘಟನೆ ಸಂಬಂಧ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಫಾಝಿಲ್ ಕೊಲೆ ಪ್ರಕರಣ- 3 ದಿನಕ್ಕೆ 15 ಸಾವಿರ ಬಾಡಿಗೆಗೆ ಕಾರು ಖರೀದಿಸಿದ್ದ ಗ್ಯಾಂಗ್: ಎನ್. ಶಶಿಕುಮಾರ್ ಸುದ್ದಿಗೋಷ್ಠಿ

  • ISIS ನಂಟು – ಭಟ್ಕಳದಲ್ಲಿ ಶಂಕಿತ ಉಗ್ರ ವಶಕ್ಕೆ

    ISIS ನಂಟು – ಭಟ್ಕಳದಲ್ಲಿ ಶಂಕಿತ ಉಗ್ರ ವಶಕ್ಕೆ

    ಕಾರವಾರ: ಐಎಸ್‍ಐಎಸ್ ನಂಟು ಹೊಂದಿರುವ ಶಂಕೆ ಹಿನ್ನೆಲೆ ಎನ್ಐಎ ತಂಡದಿಂದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೂಲದ ಓರ್ವನನ್ನು ವಶಕ್ಕೆ ಪಡೆಯಲಾಗಿದೆ.

    ಆರೋಪಿ ಅಬ್ದುಲ್ ಮಸ್ತಿರ್‌ (30) ಎಂಬಾತನನ್ನು ಎನ್ಐಎ ತಂಡ ಇಂದು ವಶಕ್ಕೆ ಪಡೆದಿದೆ. ಐಎಸ್‍ಐಎಸ್ ಬರಹಗಳನ್ನು ಭಾಷಾಂತರ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಬಿತ್ತರಿಸಿದ ಕಾರಣಕ್ಕಾಗಿ ಅಬ್ದುಲ್ ಮಸ್ತಿರನನ್ನು ಭಟ್ಕಳ ನಗರದ ಅರ್ಬನ್ ಬ್ಯಾಂಕ್ ಬಳಿ ಇರುವ ಆತನ ಮನೆಯಿಂದ ಎನ್‍ಐಎ ತಂಡ ವಶಕ್ಕೆ ಪಡೆದಿದೆ. ಇದನ್ನೂ ಓದಿ: ಆರೋಪಿಗಳೊಂದಿಗೆ ಅಜಿತ್‍ಗೆ ಸಂಪರ್ಕವಿದೆ – ಆದಷ್ಟು ಬೇಗ ಇತರ ಆರೋಪಿಗಳನ್ನು ಬಂಧಿಸುತ್ತೇವೆ: ಶಶಿಕುಮಾರ್

    ಪ್ರಾಥಮಿಕ ಮಾಹಿತಿಯಂತೆ ಈತ ಭಟ್ಕಳ ನಗರದಲ್ಲಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಐಎಸ್‍ಐಎಸ್‍ನ ಬರಹಗಳನ್ನು ಭಾರತೀಯ ಭಾಷೆಗಳಿಗೆ ಈತ ಭಾಷಾಂತರ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದ ಎಂಬ ಆರೋಪದಡಿ ಈತನನ್ನು ವಶಕ್ಕೆ ಪಡೆಯಲಾಗಿದ್ದು, ಭಟ್ಕಳದಲ್ಲೇ ತನಿಖೆ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಮನೆಗೆ ಶೋಭಾ ಕರಂದ್ಲಾಜೆ ಭೇಟಿ- ಕುಟುಂಬಸ್ಥರಿಗೆ ಸಾಂತ್ವನ, 5 ಲಕ್ಷ ಪರಿಹಾರ

    Live Tv
    [brid partner=56869869 player=32851 video=960834 autoplay=true]

  • ಐಸಿಸ್ ಸಂಪರ್ಕ – ಭಟ್ಕಳದಲ್ಲಿ ಓರ್ವ ಅರೆಸ್ಟ್

    ಐಸಿಸ್ ಸಂಪರ್ಕ – ಭಟ್ಕಳದಲ್ಲಿ ಓರ್ವ ಅರೆಸ್ಟ್

    ಕಾರವಾರ: ಐಸಿಸ್ ನೊಂದಿಗೆ ನಂಟು ಹೊಂದಿರುವ ಶಂಕೆಯ ಮೇರೆಗೆ ಭಟ್ಕಳದಲ್ಲಿ ಮತ್ತೆ ಎನ್‍ಐಎ ದಾಳಿ ನಡೆಸಿದ್ದು, ಓರ್ವನನ್ನು ಬಂಧಿಸಲಾಗಿದೆ.

    ಪಟ್ಟಣದ ಉಮರ್ ಸ್ಟ್ರೀಟ್ ಹಾಗೂ ತೆಂಗಿನಗುಂಡಿಯ ಸಾಗರ ರಸ್ತೆಯಲ್ಲಿರುವ ಮನೆಗಳ ಮೇಲೆ ಶುಕ್ರವಾರ ಏಕಕಾಲಕ್ಕೆ ದಾಳಿ ನಡೆಸಿ ಓರ್ವನನ್ನು ಬಂಧಿಸಲಾಗಿದೆ. ಬಂಧಿತನನ್ನು ಜುಪ್ರಿ ಜವಾಹರ್ ದಾಮುದಿ ಎಂದು ಗುರುತಿಸಲಾಗಿದೆ. ಈತ ಐಸಿಸ್ ವೈಸ್ ಆಫ್ ಹಿಂದ್ ನ ವೆಬ್ ಸೈಟ್ ಮೂಲಕ ಭಯೋತ್ಪಾದಕ ಸಂಬಂಧಿ ಬರಹಗಳನ್ನು ದಕ್ಷಿಣ ಭಾರತೀಯ ಭಾಷೆಗಳಿಗೆ ಭಾಷಾಂತರಿಸುತ್ತಿದ್ದ. ಅಬು ಹಜೀರ್ ಅಲ್ ಬದ್ರಿ ಎಂಬುವವನ ಸಂಪರ್ಕದಲ್ಲಿದ್ದ ಕಾರಣ ಬಂಧಿಸಿ ವಿಚಾರಣೆ ನಡೆಸಲಾಗಿದೆ. ಇದನ್ನೂ ಓದಿ: ಭಟ್ಕಳದಲ್ಲಿ NIA ದಾಳಿ- ಭಯೋತ್ಪಾದಕರೊಂದಿಗೆ ಸಂಪರ್ಕ, ಮೂವರು ವಶಕ್ಕೆ

    ಜುಪ್ರಿ ಜವಾಹರ್ ದಾವುದಿ ಸದ್ಯ ಅಫ್-ಪಾಕ್ ಪ್ರದೇಶದಿಂದ ಕಾರ್ಯನಿರ್ವಹಿಸುತ್ತಿದ್ದ ಐಸಿಸ್ ಮುಖಂಡರೊಂದಿಗೆ ಸಂಪರ್ಕದಲ್ಲಿದ್ದನು. ಅವರು ಭಯೋತ್ಪಾದಕ ಸಂಬಂಧಿ ವಿಚಾರಗಳನ್ನು ಈತನ ಮೂಲಕ ಪ್ರಚಾರ ಮಾಡುತ್ತಿದ್ದರು. ಈ ಮಾಹಿತಿ ಆಧರಿಸಿ ತನಿಖೆ ನಡೆಸಿದ ಎನ್‍ಐಎ ಅಧಿಕಾರಿಗಳಿಗೆ ಭಟ್ಕಳದ ಜುಪ್ರಿ ಬಳಿ ಎನ್ಕ್ರಿಪ್ಟ್ ಸಂದೇಶ ವಿನಿಮಯ ಮಾಡಿದ್ದ ಮತ್ತು ಈತ ಐಸಿಸ್ ಪ್ರಸಾರ ಚಾನಲ್ ಗಳಲ್ಲಿ ಸದಸ್ಯನಾಗಿದ್ದ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಇದನ್ನೂ ಓದಿ: ಮಾಜಿ ಶಾಸಕ ಇದಿನಬ್ಬನವರ ಮೊಮ್ಮಗನಿಗೆ ಐಸಿಸ್ ನಂಟು – ಎನ್‍ಐಎಯಿಂದ ಅರೆಸ್ಟ್

    ಈ ಎಲ್ಲ ಮಾಹಿತಿ ಆಧರಿಸಿ ಶುಕ್ರವಾರ ಬೆಳಗ್ಗೆಯೇ ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಗುಪ್ತವಾಗಿ ದಾಳಿ ಮಾಡಿರುವ ಎನ್‍ಐಎ ಅಧಿಕಾರಿಗಳು, ಎರಡು ಮನೆಗಳ ಪರಿಶೀಲನೆ ನಡೆಸಿ, ಒಟ್ಟು ಮೂವರನ್ನು ವಶಕ್ಕೆ ಪಡೆದಿದ್ದರು ಎನ್ನಲಾಗಿದೆ. ಎಲ್ಲರನ್ನೂ ಗೌಪ್ಯ ಸ್ಥಳದಲ್ಲಿ ವಿಚಾರಣೆ ನಡೆಸಿದ್ದು, ಅದರಲ್ಲಿ ಜುಪ್ರಿ ಜವಾಹರ್ ದಾಮುದಿ ಬಂಧಿಸಲಾಗಿದೆ. ಅಲ್ಲದೆ ಈತ ಬಳಸುತ್ತಿದ್ದ ಹಲವು ಮೊಬೈಲ್, ಹಾರ್ಡ್ ಡಿಸ್ಕ್, ಎಸ್‍ಡಿ ಕಾರ್ಡ್ ಇತ್ಯಾದಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದ ಸಂಬಂಧ ತನಿಖೆ ಮುಂದುವರಿದಿದೆ.

    ದಾಳಿಯ ವೇಳೆ ಭಟ್ಕಳ ತಾಲೂಕಿನ ಹಲವೆಡೆ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ವಶಕ್ಕೆ ಪಡೆದಿರುವವರ ಮನೆಯ ಸುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ತನಿಖೆ ನಡೆಯುತ್ತಿದೆ.

  • ಭಟ್ಕಳದಲ್ಲಿ NIA ದಾಳಿ- ಭಯೋತ್ಪಾದಕರೊಂದಿಗೆ ಸಂಪರ್ಕ, ಮೂವರು ವಶಕ್ಕೆ

    ಭಟ್ಕಳದಲ್ಲಿ NIA ದಾಳಿ- ಭಯೋತ್ಪಾದಕರೊಂದಿಗೆ ಸಂಪರ್ಕ, ಮೂವರು ವಶಕ್ಕೆ

    ಕಾರವಾರ: ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಐಎ (ರಾಷ್ಟ್ರೀಯ ತನಿಖಾ ದಳ) ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ದಾಳಿ ನಡೆಸಿದೆ. ಭಟ್ಕಳದ ಉಮರ್ ಸ್ಟ್ರೀಟ್, ತೆಂಗಿನ ಗುಂಡಿ ಹಾಗೂ ಸಾಗರ ರಸ್ತೆಯಲ್ಲಿರುವ ಮನೆಗಳಿಗೆ ಜಿಲ್ಲಾ ಪೊಲೀಸ್ ಇಲಾಖೆ ಸಹಯೋಗದಲ್ಲಿ ಏಕಕಾಲಕ್ಕೆ ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದಿದೆ.

    ಭಟ್ಕಳದ ಅಮೀನ್ ಜುವೇಬ್ ಹಾಗೂ ಜವಾದ್ ಇಬ್ಬರನ್ನು ತೀವ್ರ ತನಿಖೆ ನಡೆಸುತ್ತಿದ್ದು, ಈ ಹಿಂದೆ ದುಬೈ ನಲ್ಲಿ ಬಂಧನಕ್ಕೊಳಕ್ಕಾಗಿರುವ ಭಯೋತ್ಪಾದಕ ಓರ್ವನ ತಮ್ಮನನ್ನೂ ಎನ್‍ಐಎ ವಶಕ್ಕೆ ಪಡೆದಿದೆ. ಇದನ್ನೂ ಓದಿ: ಮಾಜಿ ಶಾಸಕ ಇದಿನಬ್ಬನವರ ಮೊಮ್ಮಗನಿಗೆ ಐಸಿಸ್ ನಂಟು – ಎನ್‍ಐಎಯಿಂದ ಅರೆಸ್ಟ್

    ಸ್ಥಳದಲ್ಲಿ ಕೆಎಸ್‍ಆರ್ ಪಿ ತುಕಡಿ ಜಮಾವಣೆ ಮಾಡಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಮೊಕ್ಕಾಂ ಹೂಡಿದ್ದಾರೆ. ವಶಕ್ಕೆ ಪಡೆದವರಿಗೆ ಐಸಿಸ್ ನಂಟಿರುವ ಕುರಿತು ಅಧಿಕಾರಿಗಳಿಂದ ತನಿಖೆ ಮುಂದುವರೆದಿದೆ. ಇದನ್ನೂ ಓದಿ: ಉಗ್ರರ ಜೊತೆ ನಂಟು ಶಂಕೆ – ಮಾಜಿ ಶಾಸಕ ಇದಿನಬ್ಬ ಮಗನ ಮನೆ ಮೇಲೆ ಎನ್‍ಐಎ ದಾಳಿ

  • 8 ವರ್ಷವಾದ್ರೂ ಚಾರ್ಜ್‍ಶೀಟ್ ಸಲ್ಲಿಕೆಯಾಗಿಲ್ಲ, ಇದು ಮಾನವ ಹಕ್ಕುಗಳ ಉಲ್ಲಂಘನೆ – ಭಟ್ಕಳದ ಸಿದ್ದಿಬಪ್ಪನಿಂದ ಜಾಮೀನಿಗೆ ಅರ್ಜಿ

    8 ವರ್ಷವಾದ್ರೂ ಚಾರ್ಜ್‍ಶೀಟ್ ಸಲ್ಲಿಕೆಯಾಗಿಲ್ಲ, ಇದು ಮಾನವ ಹಕ್ಕುಗಳ ಉಲ್ಲಂಘನೆ – ಭಟ್ಕಳದ ಸಿದ್ದಿಬಪ್ಪನಿಂದ ಜಾಮೀನಿಗೆ ಅರ್ಜಿ

    – ಉಗ್ರರ ಜೊತೆ ಸಂಪರ್ಕ ಆರೋಪ
    – ದುಬೈಯಲ್ಲಿ ಎನ್‍ಐಎಯಿಂದ ಬಂಧನ

    ಕಾರವಾರ: ತನ್ನ ವಿರುದ್ಧ ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ಇನ್ನೂ ಆರೋಪಪಟ್ಟಿ ಸಲ್ಲಿಸದ ಹಿನ್ನೆಲೆಯಲ್ಲಿ ಭಟ್ಕಳದ ಅಬ್ದುಲ್ ವಾಹಿದ್ ಸಿದ್ದಿಬಪ್ಪ ಜಾಮೀನು ಮಂಜೂರು ಕೋರಿ ದೆಹಲಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾನೆ.

    ಉಗ್ರಗಾಮಿ ಚಟುವಟಿಕೆಯ ಆರೋಪದಡಿ 2012ರಲ್ಲಿ ದುಬೈನಲ್ಲಿ ವಾಹಿದ್ ಸಿದ್ದಿಬಪ್ಪನನ್ನು ಎನ್‍ಐಎ ಬಂಧಿಸಿದೆ. ಕಳೆದ ಎಂಟು ವರ್ಷಗಳಿಂದ 100ಕ್ಕೂ ಹೆಚ್ಚು ಬಾರಿ ಕೋರ್ಟ್ ವಿಚಾರಣೆ ನಡೆದಿದ್ದರೂ ಇನ್ನೂ ಚಾರ್ಜ್‍ಶೀಟ್ ಸಲ್ಲಿಕೆಯಾಗಿಲ್ಲ. ಹೀಗಾಗಿ ಜಾಮೀನು ಅರ್ಜಿ ಸಲ್ಲಿಸಿದ್ದು ಮೇ 6 ರಂದು ವಿಚಾರಣೆಗೆ ಬರಲಿದೆ.

    ಆರೋಪ ಏನು?
    2012ರ ಸೆಪ್ಟೆಂಬರ್ 10 ರಂದು ವಿದ್ವಂಸಕ ಕೃತ್ಯ, ಇಂಡಿಯನ್ ಮುಜಾಹಿದ್ದೀನ್ ಭಯೋತ್ಪಾದಕ ಚಟುವಟಿಕೆ, ಭಯೋತ್ಪಾದಕ ರಿಯಾಜ್ ಭಟ್ಕಳ್ ನೊಂದಿಗೆ ಸಂಪರ್ಕ, ಹವಾಲ ಹಣ ವಹಿವಾಟು, ಬೆಂಗಳೂರು, ಮುಂಬೈ ಬಾಂಬ್ ಸ್ಫೋಟ ಸೇರಿದಂತೆ ಹಲವು ಆರೋಪದಲ್ಲಿ ಈತನನ್ನು ಬಂಧಿಸಿ ಕೇಸ್ ದಾಖಲಿಸಿತ್ತು.

    ಮೊದಲ ಹಂತದಲ್ಲಿ ಐದು ಜನರ ವಿರುದ್ಧ ತನಿಖೆ ನಡೆಸಿದ ಎನ್‍ಐಎ 4 ಜನರ ಮೇಲೆ ಸಪ್ಲಿಮೆಂಟ್ ಚಾರ್ಜ್‍ಶೀಟ್ ಹಾಕಿತು. ನಂತರ 20 ಜನರ ಮೇಲೆ ಚಾರ್ಜ್ ಶೀಟ್ ಹಾಕಿತ್ತು. ನಂತರ ಮೂರನೇ ಸಪ್ಲಿಮೆಂಟರಿ ಚಾರ್ಜ್ ಶೀಟ್ ಅನ್ನು 2016ರ ನವೆಂಬರ್ 15 ರಂದು ವಾಹಿದ್ ಸಿದ್ದಿಬಪ್ಪ ವಿರುದ್ಧ ಸಲ್ಲಿಕೆ ಮಾಡಿ ಮೂರನೇ ಆರೋಪಿಯಾಗಿ ಸೇರಿಸಿತು.

    2013ರ ಡಿಸೆಂಬರ್ 28 ರಂದು ಮೊದಲು ಜಾರ್ಜ್ ಶೀಟ್ ಸಲ್ಲಿಸಿದ ಪ್ರಕರಣದ ವಿಚಾರಣೆ ನಡೆದಿತ್ತು. ಆದರೆ ಎನ್‍ಐಎ ತನಿಖಾ ತಂಡ ಈತನ ವಿರುದ್ಧ ಸಾಕ್ಷಿ ನೀಡಲು 100 ದಿನಾಂಕಗಳನ್ನು ತೆಗೆದುಕೊಂಡರೂ ಯಾವುದೇ ಆರೋಪ ಪಟ್ಟಿ ಸಲ್ಲಿಕೆ ಮಾಡಿರಲಿಲ್ಲ.

    ಈ ನಡುವೆ ಸಿದ್ದಿಬಪ್ಪ ಎರಡು ಬಾರಿ ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದು, ಎರಡೂ ಬಾರಿಯೂ ಅರ್ಜಿ ತಿರಸ್ಕೃತಗೊಂಡಿತ್ತು. ಈಗ ಮತ್ತೊಮ್ಮೆ ಜಾಮೀನು ಅರ್ಜಿ ಸಲ್ಲಿಸಿದ್ದು, ಮೇ 6 ರಂದು ವಿಚಾರಣೆಗೆ ಬರಲಿದೆ.

    ದೆಹಲಿಯ ತಿಹಾರ್ ಜೈಲಿನಲ್ಲಿ ಎಂಟು ವರ್ಷಗಳಿಂದ ಇದ್ದೇನೆ. ವಿರುದ್ಧ ಯಾವುದೇ ಆರೋಪ ಪಟ್ಟಿ ಸಲ್ಲಿಕೆಯಾಗಿಲ್ಲ. ತನಿಖೆ ನಡೆಸುವಲ್ಲಿ ವಿಳಂಬ ಮಾಡಲಾಗುತ್ತಿದ್ದು, ಇದರಿಂದ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಆದಷ್ಟು ಬೇಗ ತನಿಖೆ ನಡೆಸಿ ತೀರ್ಪು ನೀಡಿ ಇಲ್ಲವೇ ನನಗೆ ಮಧ್ಯಂತರ ಜಾಮೀನು ನೀಡುವಂತೆ ಅಬ್ದುಲ್ ವಾಹಿದ್ ಸಿದ್ದಿಬಪ್ಪ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾನೆ.

  • ವಿಚಾರಣೆಗೆ ಬಂದವರು ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದ್ರು

    ವಿಚಾರಣೆಗೆ ಬಂದವರು ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದ್ರು

    – ದೂರಿನ ಹಿನ್ನೆಲೆ ತನಿಖೆಗೆ ಬಂದಿದ್ದ ಅಧಿಕಾರಿಗಳು
    – ವೈದ್ಯಾಧಿಕಾರಿ ಪರ ನಿಂತ ಸ್ಥಳೀಯರು

    ಕಾರವಾರ: ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ವೈದ್ಯಾಧಿಕಾರಿಯ ವಿಚಾರಣೆ ನೆಡೆಸಲು ಬಂದ ಅಧಿಕಾರಿಗಳು ವೈದ್ಯರ ಉತ್ತಮ ಕಾರ್ಯ ಹಾಗೂ ಸಾರ್ವಜನಿಕರ ಅಕ್ರೋಶಕ್ಕೆ ಮಣಿದು ತಾಲೂಕು ವೈದ್ಯಾಧಿಕಾರಿಗೆ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದ ಅಪರೂಪದ ಘಟನೆ ಬುಧವಾರ ಭಟ್ಕಳದಲ್ಲಿ ಸಾಕ್ಷಿಯಾಯಿತು.

    ಭಟ್ಕಳ ತಾಲೂಕು ವೈದ್ಯಾಧಿಕಾರಿ ಡಾ. ಸವಿತಾ ಕಾಮತ್ ರವರ ವಿರುದ್ಧ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಭಟ್ಕಳದ ಈಶ್ವರ್ ನಾಯ್ಕ್ ಎಂಬವರು ದೂರು ನೀಡಿದ್ದರು. ಈ ದೂರಿನ ಆಧಾರದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳ ನೇತ್ರತ್ವದ ತಂಡ ಭಟ್ಕಳದ ತಾಲೂಕು ಆಸ್ಪತ್ರೆಗೆ ಆಗಮಿಸಿ ತನಿಖೆ ನೆಡೆಸುತಿತ್ತು.

    ಈ ವಿಷಯ ಸುತ್ತಮುತ್ತಲ ಜನರಿಗೆ ತಿಳಿದು ಆಸ್ಪತ್ರೆಯಲ್ಲಿ ನೂರಾರು ಜನರು ಗುಂಪುಗೂಡಿದರು. ಹಾಳು ಬಿದ್ದಿದ್ದ ಆಸ್ಪತ್ರೆಯನ್ನು ಹೈಟೆಕ್ ಆಸ್ಪತ್ರೆಯನ್ನಾಗಿ ಪರಿವರ್ತಿಸಿ ಹಗಲು ರಾತ್ರಿ ಎನ್ನದೇ ದುಡಿಯುತ್ತಿರುವ ವೈದ್ಯರಿಗೆ ಹಳೆಯ ದ್ವೇಷ ಇಟ್ಟುಕೊಂಡು ದೂರು ನೀಡಿದ ವ್ಯಕ್ತಿಯ ಮಾತು ಕೇಳಿ ಬಂದಿರುವುದಕ್ಕೆ ಸಾರ್ವಜನಿಕರು ಅಕ್ರೋಶ ವ್ಯಕ್ತಪಡಿಸಿದರು ನಂತರ ವೈದ್ಯಾಧಿಕಾರಿಯ ಪ್ರಾಮಾಣಿಕ ಕಾರ್ಯವೈಖರಿ ನೋಡಿ ಸಂತಸ ಪಟ್ಟ ತನಿಖಾಧಿಕಾರಿಗಳ ತಂಡ ಅವರಿಗೆ ಅಭಿನಂದನಾ ಪತ್ರ ನೀಡಿ ಅಭಿನಂದಿಸಿದರು.

    ನಾಯಿಗಳ ವಾಸಸ್ಥಾನವಾಗಿದ್ದ ತಾಲೂಕು ಆಸ್ಪತ್ರೆಯನ್ನು ಹೈಟೆಕ್ ಆಸ್ಪತ್ರೆ ಮಾಡಿದ್ದ ವೈದ್ಯಾಧಿಕಾರಿ ಡಾ.ಸವಿತಾ ಕಾಮತ್. ಭಟ್ಕಳ ತಾಲೂಕು ಆಸ್ಪತ್ರೆಗೆ ವರ್ಗವಾಗಿ ಬಂದಾಗ ಯಾವುದೇ ಮೂಲಭೂತ ವ್ಯವಸ್ಥೆ ಇಲ್ಲದೇ ಹಾಳು ಬಿದ್ದಿದ್ದ ಸರ್ಕಾರಿ ಆಸ್ಪತ್ರೆಯನ್ನು ಅಭಿವೃದ್ಧಿ ಪಡಿಸಿದ್ದರು.

    ರಾತ್ರಿ ಹಗಲು ಎನ್ನದೇ ಕರ್ತವ್ಯ ಮುಗಿದರೂ ರೋಗಿಗಳೊಂದಿಗೆ ಇದ್ದು ಅವರ ಯೋಗಕ್ಷೇಮ ನೋಡಿಕೊಳ್ಳುತಿದ್ದಾರೆ. ಇವರು ಹಲವು ದಾನಿಗಳ ಸಹಕಾರದೊಂದಿಗೆ 50 ಲಕ್ಷದ ಡೆಯಾಬಿಟಿಸ್ ಸೆಂಟರ್ ಸಹ ತೆರೆದು ಉಚಿತ ವಾಗಿ ಎಲ್ಲವೂ ಸಿಗುವಂತೆ ಮಾಡಿದ್ದರು.

    ಕೋವಿಡ್ ಸಂದರ್ಭದಲ್ಲಿ ಹೆದರದೇ ಕಾರ್ಯನಿರ್ವಹಿಸಿ ತಮಗೂ ಕೂಡ ಸೋಂಕು ಬಂದರೂ ಕಾರ್ಯವನ್ನು ಮರೆತಿರಲಿಲ್ಲ. ಹೀಗಾಗಿ ಜನರ ಪ್ರೀತಿ ಗಳಿಸಿದ್ದ ವೈದ್ಯೆ ಎಲ್ಲರ ಅಚ್ಚುಮೆಚ್ವಿನ ತಾಯಿಯಾಗಿದ್ದರು. ಹೀಗಿರುವಾಗ ಇವರ ಬಳಿಯೇ ಕೆಲಸ ಮಾಡುತಿದ್ದ ಈಶ್ವರ್ ನಾಯ್ಕ ಎಂಬಾತ ಬೇಡದೇ ಇರುವ ಕೆಲಸ ಮಾಡಿದ್ದಕ್ಕೆ ಹೊರಹಾಕಿದ್ದರಿಂದ ಸೇಡು ತೀರಿಸಿಕೊಳ್ಳಲು ತನ್ನ ಪ್ರಭಾವ ಬಳಸಿ ಅಧಿಕಾರಿಗಳಿಗೆ ಪತ್ರ ಬರೆದಿದ್ದನು.

    ಇನ್ನು ಆಸ್ಪತ್ರೆಯಲ್ಲಿ ನೂರಾರು ಜನ ಸೇರಿ ವೈದ್ಯರ ತನಿಖೆಗೆ ವಿರೋಧ ವ್ಯಕ್ತಪಡಿಸಿದರು. ಇನ್ನು ಒಂದುವೇಳೆ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾದರೆ ಆಸ್ಪತ್ರೆಗೆ ಬೀಗ ಜಡಿದು ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನು ಸ್ಥಳೀಯರು ನೀಡಿದ್ದರು. ಇದಲ್ಲದೇ ಪರಿಸ್ಥಿತಿ ಉಗ್ರವಾಗುತಿತ್ತು. ನಂತರ ಆಧಿಕಾರಿಗಳು ಇವರು ಮಾಡಿದ ಕೆಲಸಗಳನ್ನು ಪರಿಶೀಲಿಸಿ ಅಭಿನಂದನಾ ಪತ್ರ ನೀಡಿ ಸನ್ಮಾನಿಸಿ ಮರಳಿದರು.

  • ಭಟ್ಕಳದಿಂದ ಉಡುಪಿಗೆ ಗಾಂಜಾ ಸಪ್ಲೈ- ಗಾಂಜಾ ಸೇವಿಸಿದ್ದ ಐವರು ಬಂಧನ

    ಭಟ್ಕಳದಿಂದ ಉಡುಪಿಗೆ ಗಾಂಜಾ ಸಪ್ಲೈ- ಗಾಂಜಾ ಸೇವಿಸಿದ್ದ ಐವರು ಬಂಧನ

    ಉಡುಪಿ: ಜಿಲ್ಲೆಯ ಬೈಂದೂರು ಪೊಲೀಸರು ಲಾಡ್ಜ್ ಒಂದರ ಮೇಲೆ ದಾಳಿ ನಡೆಸಿ ಗಾಂಜಾ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ತಂಡವನ್ನು ಬಂಧಿಸಿದ್ದಾರೆ. ಐವರು ಆರೋಪಿಗಳ ಸಹಿತ ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಬಂಧಿತರನ್ನು ಬ್ರಹ್ಮಾವರದ ಮಟಪಾಡಿ ನಿವಾಸಿ ಯೋಗೇಶ್ ಗಾಣಿಗ, ಕೇರಳ ತಿರುವನಂತಪುರಂ ನಿವಾಸಿ ಯದುನಾರಾಯಣ, ಬೈಂದೂರು ಬಿಜೂರು ನಿವಾಸಿ ಗುರುರಾಜ್ ಪೂಜಾರಿ, ಉಪ್ಪುಂದ ನಿವಾಸಿ ಸುನೀಲ್ ಪೂಜಾರಿ, ಮತ್ತು ಬಿಜೂರು ನಿವಾಸಿ ರವಿ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗಿನ ಜಾವ 3 ಗಂಟೆಗೆ ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸುರೇಶ್ ಜಿ. ನಾಯ್ಕ್ ಅವರಿಗೆ ದೊರಕಿದ ಅಧಿಕೃತ ಮಾಹಿತಿ ಆಧರಿಸಿ ಉಪ್ಪುಂದದ ಪ್ರಸಿದ್ಧ ಲಾಡ್ಜ್ ಮೇಲೆ ದಾಳಿ ನಡೆಸಲಾಗಿತ್ತು.

    ದಾಳಿ ಸಂದರ್ಭ ಲಾಡ್ಜಿನ ರೂಮಿನೊಳಗೆ ಗಾಂಜಾ ಸೇವಿಸುತ್ತಿದ್ದುದು ಪತ್ತೆಯಾಗಿದೆ. ಆರೋಪಿ ಯೋಗೇಶ್ ಗಾಣಿಗ ಎಂಬಾತನ ಬ್ಯಾಗಿನಲ್ಲಿ 40 ಗ್ರಾಂ ದುಬಾರಿ ಗಾಂಜಾ ಪತ್ತೆಯಾಗಿದೆ. ಆರೋಪಿಗಳಿಂದ 6 ಮೊಬೈಲ್ ಫೋನ್‍ಗಳು, 3 ದ್ವಿಚಕ್ರ ವಾಹನಗಳು ಸೇರಿದಂತೆ 1,71,500 ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

    ತನಿಖೆ ವೇಳೆ ಆರೋಪಿಗಳಿಗೆ ಭಟ್ಕಳ ಮೂಲದ ಶಬ್ಬೀರ್ ಎಂಬಾತ ಗಾಂಜಾ ಸರಬರಾಜು ಮಾಡುತ್ತಿದ್ದ ಎನ್ನುವುದು ಗೊತ್ತಾಗಿದೆ. ಬ್ಯಾಗಿನಲ್ಲಿ ಗಾಂಜಾ ಸೇವಿಸಲು ಬಳಸುವ ಒಸಿಬಿ ಸ್ಲಿಮ್ ಪ್ರೀಮಿಯಂ ಎನ್ನುವ ಕಾಗದದ ಚೂರುಗಳು ಪತ್ತೆಯಾಗಿವೆ. ಈ ಸಂಬಂಧ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಭಟ್ಕಳದಲ್ಲಿ 39ಕ್ಕೆ ಏರಿದ ಕೊರೊನಾ ಸೋಂಕಿತರ ಸಂಖ್ಯೆ

    ಭಟ್ಕಳದಲ್ಲಿ 39ಕ್ಕೆ ಏರಿದ ಕೊರೊನಾ ಸೋಂಕಿತರ ಸಂಖ್ಯೆ

    – ಇಬ್ಬರು ಬಾಲಕರು, ಆಟೋ ಚಾಲಕನಿಗೂ ಸೋಂಕು

    ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಏಳು ಕೊರೊನಾ ಪ್ರಕರಣ ದೃಢವಾಗುವ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 39ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯ ಜನರನ್ನು ಬೆಚ್ಚಿ ಬೀಳುವಂತೆ ಮಾಡಿದೆ.

    ಸೋಂಕಿತ ಎಂಟು ಮಂದಿಯನ್ನು ಸಂಪರ್ಕ ಮಾಡಿರುವ ಏಳು ಜನರಲ್ಲಿ ಇಬ್ಬರು ಬಾಲಕರು ಸೇರಿ ಐದು ಜನ ಪುರುಷರು ಹಾಗೂ ಇಬ್ಬರು ಮಹಿಳೆಯರಿಗೆ ಸೋಂಕು ದೃಢವಾಗಿದೆ. ಇವರೆಲ್ಲರೂ ಉತ್ತರಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದವರಾಗಿದ್ದು, ರೋಗಿ ಸಂಖ್ಯೆ 659ರ ಜೊತೆ ದ್ವಿತೀಯ ಹಾಗೂ ನೇರ ಸಂಪರ್ಕಕ್ಕೆ ಬಂದಿದ್ದವರಾಗಿದ್ದಾರೆ.

    50 ವರ್ಷದ ಮಹಿಳೆ, 21 ವರ್ಷದ ಯುವತಿ, 16 ಮತ್ತು 15 ವರ್ಷದ ಬಾಲಕರು, 42, 31, 60 ವರ್ಷದ ಪುರುಷರು ಸೋಂಕಿತರಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಎರಡು ದಿನದಲ್ಲಿ ಸೋಂಕಿತರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ. ಜಿಲ್ಲಾಡಳಿತ 30 ಮಂದಿಯ ಗಂಟಲ ದ್ರವದ ಮಾದರಿಯನ್ನು ಲ್ಯಾಬ್‍ಗೆ ಕಳುಹಿಸಿದ್ದು, ಇವುಗಳಲ್ಲಿ ಮೊದಲ ಹಂತದ ಪರೀಕ್ಷಾ ಪಲಿತಾಂಶ ಬಂದಿದೆ. ಸಂಜೆ ಅಥವಾ ನಾಳೆ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ ಆಗುವ ಸಾಧ್ಯತೆಗಳಿವೆ.

    ಇಂದು ಪಾಸಿಟಿವ್ ಬಂದವರಲ್ಲಿ 42 ವರ್ಷದ ಆಟೋ ಚಾಲಕನೂ ಸೇರಿದ್ದು, ಎಲ್ಲರೂ ಏಳು ಮಂದಿ ನಿನ್ನೆ ಸೋಂಕು ದೃಢಪಟ್ಟ ಸೋಂಕಿತರ ಸಂಬಂಧಿಗಳಾಗಿದ್ದಾರೆ. ಆಟೋ ಚಾಲಕನಿಗೂ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆತ ಯಾವ ಪ್ರದೇಶಕ್ಕೆ ಸಂಚರಿಸಿದ್ದ ಎಂಬ ಮಾಹಿತಿ ಹೊರಬರಬೇಕಿದೆ. ಸೋಂಕಿತರಲ್ಲಿ ಕೆಲವರು ಉಡುಪಿ ಹಾಗೂ ಭಟ್ಕಳದಲ್ಲಿ ಸಂಚರಿಸಿದ್ದು, ಮೂವರು ಮೆಡಿಕಲ್ ಸ್ಟೋರ್‍ನಲ್ಲಿ ಮಾತ್ರೆ ಖರೀದಿಸಿದ್ದರು ಎಂದು ಮೊದಲ ಹಂತದ ವಿವರದಲ್ಲಿ ತಿಳಿದು ಬಂದಿದೆ.