Tag: Bhavneshwar

  • ದೊಣ್ಣೆಯಿಂದ ಹೊಡೆದು ಪತ್ನಿಯ ಹತ್ಯೆ

    ದೊಣ್ಣೆಯಿಂದ ಹೊಡೆದು ಪತ್ನಿಯ ಹತ್ಯೆ

    ಭುವನೇಶ್ವರ: ಕುಡಿದ ಮತ್ತಿನಲ್ಲಿ ಪತ್ನಿಯನ್ನು ಬಿದಿರಿನ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಓಡಿಶಾದ ಮಯೂರ್ಭಂಜ್ ಜಿಲ್ಲೆಯಲ್ಲಿ ನಡೆದಿದೆ.

    ರಾಣಿ ಸೊರೆನ್ ಮೃತ ಮಹಿಳೆ. ಈ ಘಟನೆ ಶುಕ್ರವಾರ ರಾತ್ರಿ ಮಾಧವ್‍ಪುರ್ ಗ್ರಾಮದಲ್ಲಿ ನಡೆದಿದೆ. ಆರೋಪಿ ಖೇಲಾ ಸೊರೆನ್ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೊಣ್ಣೆಯಿಂದ ಪತ್ನಿ ರಾಣಿ ಸೊರೆನ್‍ಳನ್ನು ಹೊಡೆದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಕಳೆದ ಕೆಲವು ದಿನಗಳಿಂದ ದಂಪತಿಯ ನಡುವೆ ಜಗಳ ನಡೆಯುತ್ತಿತ್ತು. ಅದೇ ರೀತಿ ಶುಕ್ರವಾರ ರಾತ್ರಿವೂ ಜಗಳ ನಡೆದಿದೆ. ನಂತರ ಆರೋಪಿ ಖೇಲಾ ಕುಡಿದು ಬಂದು ದೊಣ್ಣೆಯಿಂದ ಪತ್ನಿಯ ತಲೆ, ಕಾಲು ಮತ್ತು ಬೆನ್ನಿಗೆ ಹೊಡೆದಿದ್ದಾನೆ. ಪರಿಣಾಮ ಪತ್ನಿ ರಾಣಿಗೆ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ ಎಂದು ಸ್ಥಳೀಯರು ತಿಳಿಸಿದ್ದಾರೆ.

    ಮೃತರ ಸಹೋದರ ನಮಗೆ ಮಾಹಿತಿ ತಿಳಿಸಿದ್ದು, ತಕ್ಷಣ ನಾವು ಘಟನೆ ನಡೆದ ಸ್ಥಳಕ್ಕೆ ಹೋದೆವು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರಗೆ ರವಾನೆ ಮಾಡಿ ಈ ಕುರಿತು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ಇನ್ಸ್ ಪೆಕ್ಟರ್ ಹೇಳಿದ್ದಾರೆ.

    ಸದ್ಯಕ್ಕೆ ಪೊಲೀಸರು ಈ ಕುರಿತು ಪ್ರಕರಣ ದಾಖಲಿಕೊಂಡು ತನಿಖೆ ಮುಂದುವರಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

  • ರಾಡ್‍ಗೆ ಕಟ್ಟಿ ಏಕಾಏಕಿ ಪತ್ನಿಗೆ ಬೆಂಕಿ ಹಚ್ಚಿ ಕೊಂದ ಪತಿ

    ರಾಡ್‍ಗೆ ಕಟ್ಟಿ ಏಕಾಏಕಿ ಪತ್ನಿಗೆ ಬೆಂಕಿ ಹಚ್ಚಿ ಕೊಂದ ಪತಿ

    ಭುವನೇಶ್ವರ: ಎರಡನೇ ಮಗುವೂ ಹೆಣ್ಣಾಗಿದ್ದಕ್ಕೆ ಪತಿ, ಅತ್ತೆ-ಮಾವ ಸೇರಿಕೊಂಡು ಸೊಸೆಗೆ ಹಿಂಸೆ ಕೊಟ್ಟು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಂದಿರುವ ಘಟನೆ ಒಡಿಶಾದ ಸಂಬಲ್ಪುರ ಜಿಲ್ಲೆಯಲ್ಲಿ ನಡೆದಿದೆ.

    ಹಿರಾಕುಡ್ ಪ್ರದೇಶದಲ್ಲಿ ವಿಎಸ್‍ಎಸ್ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಮೃತ ಮಹಿಳೆಯನ್ನು ಜ್ಯೋತಿರ್ಮಯಿ ನಾಯಕ್ (27) ಎಂದು ಗುರುತಿಸಲಾಗಿದೆ. ಜ್ಯೋತಿರ್ಮಯಿಗೆ ಈಗಾಗಲೇ ಒಂದು ಹೆಣ್ಣು ಮಗು ಇತ್ತು. ಇತ್ತೀಚೆಗೆ ಎರಡನೇ ಮಗು ಸಹ ಹೆಣ್ಣಾಗಿದೆ. ಇತ್ತ ಅವರ ಪತಿಯ ಮನೆಯವರಿಗೆ ಗಂಡು ಮಗು ಬೇಕಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

    ಗಂಡು ಮಗುವಾಗಿಲ್ಲ ಎಂದು ಪ್ರತಿದಿನ ಪತಿಯ ಮನೆಯವರು ಹಿಂಸೆ ಕೊಡುತ್ತಿದ್ದರು. ಫೆಬ್ರವರಿ 13ರಂದು ಜ್ಯೋತಿರ್ಮಯಿಯ ಪತಿ ಸ್ಮೃತಿ ರಂಜನ್, ಮಾವ ರಘುನಾಥ್ ನಾಯಕ್ ಮತ್ತು ಅತ್ತೆ ಬಸಂತಿ ನಾಯಕ್ ಸೇರಿಕೊಂಡು ತಮ್ಮ ಮನೆಯ ಛಾವಣಿಯ ಮೇಲೆ ಬಲವಂತವಾಗಿ ಕರೆದುಕೊಂಡು ಹೋಗಿ ರಾಡ್‍ಗೆ ಕಟ್ಟಿದ್ದಾರೆ. ಬಳಿಕ ಆಕೆಯ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ.

    ನೆರೆಹೊರೆಯವರು ಬಂದು ಆಕೆಯನ್ನು ಬುರ್ಲಾದಲ್ಲಿರುವ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಮಹಿಳೆಯ ದೇಹ 90% ರಷ್ಟು ಸುಟ್ಟು ಹೋಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಜ್ಯೋತಿರ್ಮಯಿ ಮೃತಪಟ್ಟಿದ್ದಾರೆ.

    ಮೃತ ಜ್ಯೋತಿರ್ಮಯಿಯ ತಂದೆ ಕೃಷ್ಣಾ ಚಂದ್ರ ಸತ್ಪತಿ ಅವರು ಹಿರಾಕುಡ್ ಪೊಲೀಸರಿಗೆ ಈ ಕುರಿತು ದೂರು ಸಲ್ಲಿಸಿದ್ದಾರೆ. ಮೃತ ಮಹಿಳೆಯ ತಂದೆ ನೀಡಿದ ದೂರಿನ ಆಧಾರದ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದು, ಮಹಿಳೆ ಪತಿ ಮತ್ತು ಅತ್ತೆ-ಮಾವನನ್ನು ಬಂಧಿಸಿ ತನಿಖೆ ಮುಂದುವರಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv