Tag: bhavya gowda

  • ಕರ್ಣನಿಗೆ ಗ್ರೀನ್ ಸಿಗ್ನಲ್ – ಭವ್ಯಾ, ನಮ್ರತಾ, ಕಿರಣ್ ರಾಜ್ ತ್ರಿವಳಿ ಆಟ

    ಕರ್ಣನಿಗೆ ಗ್ರೀನ್ ಸಿಗ್ನಲ್ – ಭವ್ಯಾ, ನಮ್ರತಾ, ಕಿರಣ್ ರಾಜ್ ತ್ರಿವಳಿ ಆಟ

    ಜೀ ಕನ್ನಡ ವಾಹಿನಿಯ (Zee Kannada Serial) ಬಹುನಿರೀಕ್ಷಿತ ಮತ್ತು ಬಿಡುಗಡೆಗೆ ಮೊದಲೇ ಅತೀ ಸದ್ದು ಮಾಡಿದ ಧಾರಾವಾಹಿ ಕರ್ಣ. ಆದರೆ ಹುಟ್ಟುವ ಮೊದಲೇ ಶಾಪಗ್ರಸ್ತನಾದ ಈ ‘ಕರ್ಣ’ ಈಗ ಶಾಪಮುಕ್ತನಾಗಿದ್ದಾನೆ. ಎಲ್ಲಾ ಅಡೆತಡೆಗಳನ್ನು ಎದುರಿಸಿ ಕೊಟ್ಟ ಮಾತಿಗೆ ತಪ್ಪದೇ ಮನರಂಜಿಸಲು ʻಕರ್ಣʼ (Karna Serial) ಇದೇ 3 ಜುಲೈರಿಂದ ಬರಲಿದ್ದಾನೆ.

    ʻಕರ್ಣʼ ಧಾರಾವಾಹಿಯ ಮೊದಲ ಪ್ರೊಮೊ ಬಿಡುಗಡೆ ಆದ ಸ್ವಲ್ಪ ಹೊತ್ತಿಗೆ ಸಖತ್‌ ವೈರಲ್ ಆಗಿದ್ದು ಕನ್ನಡಿಗರ ಮನಗೆದ್ದಿದೆ. ಸಿನೆಮಾಟೋಗ್ರಫಿ, ನಿರ್ದೇಶನ, ಕಿರಣ್ ರಾಜ್ ನಟನೆ ಬಗ್ಗೆ ಪ್ರೇಕ್ಷಕರು ಅತಿಯಾದ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಮತ್ತೊಂದು ಸರ್ಪ್ರೈಸ್ ಎಂಬಂತೆ ವಾಹಿನಿ ಭವ್ಯ ಗೌಡ (Bhavya Gowda) -ಕಿರಣ್ ರಾಜ್ ಹಾಡನ್ನು ಬಿಟ್ಟಿದ್ದು ಇವರಿಬ್ಬರ ಕೆಮಿಸ್ಟ್ರಿ ಪ್ರೇಕ್ಷಕರ ಮನದಲ್ಲಿ ಕಚಗುಳಿ ಎಬ್ಬಿಸಿದೆ. ಅಷ್ಟೇ ಅಲ್ಲದೇ ಪ್ರೊಮೊ ಮತ್ತು ಹಾಡು ಎರಡೂ ಸಖತ್ ಆಗಿ ಮೂಡಿ ಬಂದಿದ್ದು ಧಾರಾವಾಹಿಯನ್ನು ನೋಡಲು ಜನರು ಹಾತೊರೆಯುತ್ತಿದ್ದಾರೆ.

    ಇನ್ನೂ ವರುಷಗಳ ನಟ ಕಿರಣ್ ರಾಜ್ ಮರಳಿ ಕಿರುತೆರೆಗೆ ಬರುತ್ತಿರುವುದು ಅವರ ಅಭಿಮಾನಿಗಳಲ್ಲಿ ಉತ್ಸುಕತೆ ಹೆಚ್ಚಿಸಿದೆ. ಅಷ್ಟೇ ಅಲ್ಲದೇ ಕಿರುತೆರೆಯಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದ ಭವ್ಯ ಗೌಡ ಮತ್ತು ನಮ್ರತಾ ಗೌಡ (Namratha Gowda) ಅವರು ಕಿರಣ್ ರಾಜ್ ಅವರಿಗೆ ಜೋಡಿಯಾಗಿ ನಟಿಸಲಿದ್ದಾರೆ. ಈ ಫ್ರೆಶ್ ಜೋಡಿಯ ಮೋಡಿ ಹೇಗಿರಲಿದೆ ಎಂಬ ಕುತೂಹಲ ಪ್ರೇಕ್ಷಕರಲ್ಲಿ ಹೆಚ್ಚಾಗಿದೆ. ಅಷ್ಟೇ ಅಲ್ಲದೇ ಕರ್ಣ ಪ್ರೋಮೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡಿದ್ದು ಅಲ್ಲದೇ ಕಾಮೆಂಟ್ ಸೆಕ್ಷನ್‌ಗಳು ಪಾಸಿಟಿವ್ ಕಾಮೆಂಟ್‌ಗಳಿಂದ ತುಂಬಿವೆ. ಶ್ರುತಿ ನಾಯ್ಡು ಪ್ರೊಡ್ಯೂಸ್ ಮಾಡುತ್ತಿರುವ ಈ ಧಾರಾವಾಹಿಯಲ್ಲಿ ಹಿರಿಯ ನಟರಾದ ಅಶೋಕ್, ನಾಗಾಭರಣ ಸೇರಿ ಹಲವಾರು ದಿಗ್ಗಜರು ಅಭಿನಯಿಸಿದ್ದಾರೆ.

    ಅನಾಥವಾಗಿ ಬಿದ್ದಿದ್ದ ತಾತನಿಗೆ ಕೊಟ್ಟ ಮಾತಿನಂತೆ ದೊಡ್ಡವನಾದ ಮೇಲೆ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞನಾಗಿ ತಾತ ಕಟ್ಟಿಸಿದ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಾನೆ. ಅಷ್ಟೇ ಅಲ್ಲದೇ ಯಾವ ತಾಯಿಯು ಮಗುವನ್ನು ಕಳೆದುಕೊಳ್ಳಬಾರದು ಮತ್ತು ಯಾವ ಮಗುವು ಅಮ್ಮನಿಲ್ಲದ ತಬ್ಬಲಿಯಾಗಬಾರದು ಎಂಬುದು ಇವನ ಸಿದ್ದಾಂತ. ಸದಾ ಬಡವರ ಸೇವೆಗೆ ತುಡಿಯುವ ಈ ನಿಷ್ಕಲ್ಮಶ ಮನಸ್ಸಿನ ಕರ್ಣನಿಗೆ ಮನೆಯಲ್ಲಿ ಸಿಕ್ಕಿದ್ದು ಮಾತ್ರ ತಿರಸ್ಕಾರ. ಎಲ್ಲಾ ಆಸ್ತಿಯೂ ತನ್ನ ಹೆಸರಿನಲ್ಲೇ ಇದ್ದರೂ ಕರ್ಣ ಬಯಸುತ್ತಿರುವುದು ಮಾತ್ರ ಅಪ್ಪನ ಪ್ರೀತಿ, ಮಾಯೆಯವರ ವಾತ್ಸಲ್ಯದ ಅಪ್ಪುಗೆ. ಅಜ್ಜಿ ಬಿಟ್ಟು ಮನೆಯಲ್ಲಿರೋ ಎಲ್ಲರಿಗೂ ಕರ್ನನ್ನು ಕಂಡ್ರೆ ಅಷ್ಟಕಷ್ಟೇ. ಕರ್ಣನಿಗೆ ಮನೆಯವರ ಪ್ರೀತಿ ಸಿಗೋದು ಯಾವಾಗ? ಇನ್ನೇನು ಸದ್ಯದಲ್ಲೇ ನಿಮಗೆ ಸಿಗತ್ತೆ!

    ನಿಷ್ಕಲ್ಮಶ ಮನಸ್ಸಿನ ಕರ್ಣನಿಗೆ ನಿಷ್ಕಲ್ಮಶ ಪ್ರೀತಿ, ಅಪ್ಪನ ಪ್ರೀತಿ, ಮನೆಯವರ ಒಪ್ಪಿಗೆಯ ಅಪ್ಪುಗೆ ಸಿಗುತ್ತಾ? ತಿಳ್ಕೊಳೋಕೆ ವೀಕ್ಷಿಸಿ ಕರ್ಣ ಇದೇ ಜುಲೈ 03 ರಿಂದ ರಾತ್ರಿ 8 ಗಂಟೆಗೆ.

  • ಅಮೂಲ್ಯ ಅತ್ತಿಗೆ ಸಖತ್ ಸ್ವೀಟ್- ಹೊಗಳಿದ ಭವ್ಯಾ ಗೌಡ

    ಅಮೂಲ್ಯ ಅತ್ತಿಗೆ ಸಖತ್ ಸ್ವೀಟ್- ಹೊಗಳಿದ ಭವ್ಯಾ ಗೌಡ

    ‘ಬಿಗ್ ಬಾಸ್ ಕನ್ನಡ 11’ರ (Bigg Boss Kannada 11) ಸ್ಪರ್ಧಿ ಭವ್ಯಾ ಗೌಡ (Bhavya Gowda) ಅವರು ಬಿಗ್ ಬಾಸ್ ಆಟ ಮುಗಿದ್ಮೇಲೆ ಮದುವೆ, ವೃತ್ತಿ ಜೀವನದ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಇನ್ನೂ ‘ಚೆಲುವಿನ ಚಿತ್ತಾರ’ ಖ್ಯಾತಿಯ ನಟಿ ಅಮೂಲ್ಯ ಜೊತೆಗಿನ ಬಾಂಧವ್ಯದ ಬಗ್ಗೆ ಭವ್ಯಾ ಮಾತನಾಡಿದ್ದಾರೆ. ಅಮೂಲ್ಯ (Amulya) ಅತ್ತಿಗೆ ಸಖತ್ ಸ್ವೀಟ್ ಎಂದಿದ್ದಾರೆ.

    ಬಿಗ್ ಬಾಸ್‌ಗೆ ಹೋಗುವಾಗ ಜಗದೀಶ್ ಅಣ್ಣ ಮತ್ತು ಅಮೂಲ್ಯ ಅತ್ತಿಗೆ ಆಲ್ ದಿ ಬೆಸ್ಟ್ ಹೇಳಿದ್ರು. ನಾನ್ ಬಿಗ್ ಬಾಸ್‌ಗೆ ಹೋದ್ಮೇಲೆಯೂ ಅಮೂಲ್ಯ ಅತ್ತಿಗೆ ತುಂಬಾ ಸಪೋರ್ಟ್ ಮಾಡಿದ್ದಾರೆ. 2 ದಿನದಿಂದ ಅಂದುಕೊಳ್ಳುತ್ತೇಲೆ ಇದ್ದೇನೆ. ಅವರ ಮನೆಗೆ ಅಮೂಲ್ಯ ಅತ್ತಿಗೆ ಹಾಗೂ ಅಣ್ಣನ್ನು ಭೇಟಿಯಾಗಬೇಕು ಅಂತ. ಸದ್ಯದಲ್ಲೇ ಅವರನ್ನು ಭೇಟಿಯಾಗುತ್ತೇನೆ ಎಂದಿದ್ದಾರೆ. ಇದನ್ನೂ ಓದಿ:ನಾನೊಬ್ಬರಿಗೆ ಪಾರ್ಟ್ನರ್ ಆಗಿದ್ದೇನೆ: ರಿಲೇಷನ್‌ಶಿಪ್ ಬಗ್ಗೆ ಮಾತನಾಡಿದ ರಶ್ಮಿಕಾ ಮಂದಣ್ಣ

    ಇನ್ನೂ ಅಮೂಲ್ಯ ಅತ್ತಿಗೆ ಯಾವಾತ್ತೂ ಆ್ಯಕ್ಟಿಂಗ್ ಹಾಗೇ ಮಾಡು ಹೀಗೆ ಎಂದು ಸಜೇಷನ್ ಕೊಟ್ಟಿಲ್ಲ. ಆದರೆ ನೀನು ಏನು ಮಾಡುತ್ತಿದ್ದಿಯೋ ಅದು ನಿನಿಗೆ ಗೊತ್ತಿರಬೇಕು. ಕೆಲಸದಲ್ಲಿ 100% ಕೊಡು ಒಂದಿಷ್ಟು ಸಲಹೆ ಕೊಟ್ಟಿದ್ದಾರೆ. ಅಮೂಲ್ಯ ಅತ್ತಿಗೆ ಸಖತ್ ಸ್ವೀಟ್, ಅದು ಎಲ್ಲರಿಗೂ ಗೊತ್ತು. ಅವರು ಸಖತ್ ಹಂಬಲ್, ಯಾರೇ ಮನೆಗೆ ಬಂದ್ರೂ ಖುಷಿಯಿಂದ ಮಾತನಾಡಿಸುತ್ತಾರೆ. ಜಗದೀಶ್ ಅಣ್ಣ ಹೇಳ್ತಾರೆ, ನಿಮಗೆ ಏನು ಹೇಳೋದು. ನಿಮ್ಮ ಮನೆಗೆ ನೀವೇ 4 ಜನ ಗಂಡು ಮಕ್ಕಳು ಅಂತ. ನೀವು ಬೆಳೆಯುತ್ತಿರುವ ರೀತಿ ಖುಷಿಯಿದೆ ಎಂದು ಸಾಕಷ್ಟು ಬಾರಿ ಹೇಳಿದ್ದಾರೆ. ನಮ್ಮ ಒಳ್ಳೆಯದನ್ನೇ ಅವರು ಬಯಸುತ್ತಾರೆ ಎಂದು ಭವ್ಯಾ ಹೇಳಿದ್ದಾರೆ.

    ಇನ್ನೂ ಭವ್ಯಾಗೆ ಸಂಬಂಧದಲ್ಲಿ ಜಗದೀಶ್ ಅವರು ಅಣ್ಣ ಆಗಬೇಕು, ದೊಡ್ಡಪ್ಪನ ಮಗ. ಅಮೂಲ್ಯ ಅವರು ಅತ್ತಿಗೆ ಆಗುತ್ತಾರೆ.

  • BBK 11: ತ್ರಿವಿಕ್ರಮ್ ಕಡೆಯಿಂದ ಮದುವೆ ಪ್ರಪೋಸಲ್ ಬಂದ್ರೆ ಭವ್ಯಾ ರಿಯಾಕ್ಷನ್ ಏನು?

    BBK 11: ತ್ರಿವಿಕ್ರಮ್ ಕಡೆಯಿಂದ ಮದುವೆ ಪ್ರಪೋಸಲ್ ಬಂದ್ರೆ ಭವ್ಯಾ ರಿಯಾಕ್ಷನ್ ಏನು?

    ‘ಬಿಗ್ ಬಾಸ್ ಕನ್ನಡ 11’ರ (Bigg Boss Kannada 11) ಆಟಕ್ಕೆ ತೆರೆಬಿದ್ದಿದೆ. ಹನುಮಂತ (Hanumantha) ವಿನ್ನರ್ ಆಗಿದ್ದು, ತ್ರಿವಿಕ್ರಮ್ ರನ್ನರ್ ಅಪ್ ಆಗಿ ಗೆದ್ದು ಬೀಗಿದ್ದಾರೆ. 5ನೇ ರನ್ನರ್ ಅಪ್ ಆಗಿರುವ ಭವ್ಯಾ ಅವರು ತ್ರಿವಿಕ್ರಮ್ (Trivikram) ಜೊತೆಗಿನ ಬಾಂಡಿಂಗ್ ಬಗ್ಗೆ ಮಾತನಾಡಿದ್ದಾರೆ. ತ್ರಿವಿಕ್ರಮ್ ಕಡೆಯಿಂದ ಮದುವೆ ಪ್ರಪೋಸಲ್ ಬಂದ್ರೆ ಭವ್ಯಾ (Bhavya Gowda) ಉತ್ತರ ಏನಾಗಿರುತ್ತದೆ ಎಂದು ನಟಿ ರಿಯಾಕ್ಟ್ ಮಾಡಿದ್ದಾರೆ.

    ಅವರ ಕಡೆಯಿಂದ ಮದುವೆ ಪ್ರಪೋಸಲ್ ಬರಲ್ಲ ಅಂತ ನನಗೂ ಗೊತ್ತು. ನನ್ನ ಕಡೆಯಿಂದಲೂ ಬರಲ್ಲ ಅನ್ನೋದು ತ್ರಿವಿಕ್ರಮ್‌ಗೆ ಗೊತ್ತು. ಇಬ್ಬರೂ ಲೈನ್ ಹಾಕಿಕೊಂಡು ಇದ್ದೀವಿ, ನನಗೂ ಮತ್ತು ತ್ರಿವಿಕ್ರಮ್‌ಗೂ ಈ ರೀತಿಯ ಆಲೋಚನೆ ಇರಲಿಲ್ಲ. ನಮ್ಮೀಬ್ಬರ ನಡುವೆ ಇಬ್ಬರಿಗೂ ಒಳ್ಳೆಯ ಬಾಂಡಿಂಗ್ ಹಾಗೂ ಫ್ರೆಂಡ್ಶಿಪ್ ಇದೆ. ಇದನ್ನೂ ಓದಿ:ಸುದೀಪ್ ಸರ್ ಕೊಟ್ಟಿರೋದಕ್ಕೆ ಬೆಲೆ ಕಟ್ಟಲಾಗಲ್ಲ, ಫ್ರೇಮ್ ಹಾಕಿಸಿ ಇಟ್ಟುಕೊಳ್ಳುತ್ತೇನೆ: ಯುವನ್

    ‘ಬಿಗ್ ಬಾಸ್’ ಆಟ ಅಂತ ಬಂದಾಗ ಅವರ ಆಟ ಅವರು ಆಡಿದ್ದಾರೆ. ನನ್ನ ಆಟ ನಾನು ಆಡಿದ್ದೇನೆ. ಆ ಮನೆಯಲ್ಲಿ ಕಂಫರ್ಟ್ ಝೋನ್ ಅಂತ ಕೊಟ್ಟಿರೋದು ತ್ರಿವಿಕ್ರಮ್. ನನ್ನ ಏಳು ಬೀಳುಗಳಲ್ಲಿ ಅವರು ನನ್ನ ಜೊತೆ ಇದ್ದರು. ಆ ತರಹ ಏನಿಲ್ಲ ಇದ್ದರೆ ಖಂಡಿತವಾಗಿಯೂ ನಾವು ತಿಳಿಸುತ್ತಿದ್ವಿ ಎಂದು ತ್ರಿವಿಕ್ರಮ್ ಜೊತೆಗೆ ಮದುವೆಯಾಗುವ ಪ್ಲ್ಯಾನ್ ಇಲ್ಲ ಎಂದು ಭವ್ಯಾ ಸ್ಪಷ್ಟಪಡಿಸಿದ್ದಾರೆ.

    ಇನ್ನೂ ‘ಬಿಗ್ ಬಾಸ್’ ಮನೆಯ 5ನೇ ರನ್ನರ್ ಆಗಿ ಹೊರಹೊಮ್ಮಿರುವ ಭವ್ಯಾ ಇದೀಗ ಹೊಸ ಶೋವೊಂದಕ್ಕೆ ಆಯ್ಕೆಯಾಗಿದ್ದಾರೆ. ‘ಬಾಯ್ಸ್ ವರ್ಸಸ್ ಗರ್ಲ್ಸ್’ ನಟಿ ಭಾಗಿಯಾಗಲಿದ್ದಾರೆ. ಇದರ ಜೊತೆ ಸಿನಿಮಾ ಅಥವಾ ಸೀರಿಯಲ್ ಆಫರ್‌ಗಳಿಗಾಗಿ ನಟಿ ಎದುರು ನೋಡುತ್ತಿದ್ದಾರೆ.

  • ಭವ್ಯಾ ಮೇಲೆ ನಿಜವಾಗಲೂ ಲವ್ ಆಗಿದ್ಯಾ?- ತ್ರಿವಿಕ್ರಮ್ ಹೇಳೋದೇನು?

    ಭವ್ಯಾ ಮೇಲೆ ನಿಜವಾಗಲೂ ಲವ್ ಆಗಿದ್ಯಾ?- ತ್ರಿವಿಕ್ರಮ್ ಹೇಳೋದೇನು?

    ‘ಬಿಗ್ ಬಾಸ್ ಕನ್ನಡ 11’ರ (Bigg Boss Kannada 11) ತ್ರಿವಿಕ್ರಮ್ ಅವರು ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಇದೀಗ ಬಿಗ್ ಬಾಸ್ ಜರ್ನಿ ಜೊತೆಗೆ ಭವ್ಯಾ ಜೊತೆಗಿನ ಒಡನಾಟದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ತ್ರಿವಿಕ್ರಮ್ (Trivikram) ಮಾತನಾಡಿದ್ದಾರೆ. ಭವ್ಯಾ ಮೇಲೆ ಲವ್ ಆಗಿತ್ತಾ? ಹೇಗೆ ಎಂದು ಸ್ಪಷ್ಟಪಡಿಸಿದ್ದಾರೆ.‌ ಇದನ್ನೂ ಓದಿ:BBK 11: ನಾನು ಯಾವತ್ತಿದ್ದರೂ ಡಿಬಾಸ್‌ ಫ್ಯಾನ್:‌ ‘ಬಿಗ್‌ ಬಾಸ್‌’ ರಜತ್‌

    ತಮ್ಮ ಗರ್ಲ್‌ಫ್ರೆಂಡ್ ಡಾಕ್ಟರ್ ಎಂದು ವೈರಲ್ ಆಗಿದ್ದ ಸುದ್ದಿಗೆ ತ್ರಿವಿಕ್ರಮ್ ಮಾತನಾಡಿ, ನನ್ನ ಗರ್ಲ್‌ಫ್ರೆಂಡ್ ಡಾಕ್ಟರ್ ಆ ನನಗೂ ಗೊತ್ತಿಲ್ಲ ಎಂದು ಹೇಳಿ ವಿಚಾರವನ್ನು ಅವರು ಅಲ್ಲಗೆಳೆದಿದ್ದಾರೆ. ಈ ವಿಚಾರ ಸುಳ್ಳು ಎಂದಿದ್ದಾರೆ.

    ಇನ್ನೂ ಭವ್ಯಾಗೆ ಅವರ ಪೋಷಕರು ಬರೆದ ಲೆಟರ್‌ನಲ್ಲಿ ಪನ್ನಿಕುಟ್ಟಿ ಅಂತ ಬರೆದಿತ್ತು. ಅದನ್ನೇ ನಾನು ಮುಂದುವರೆಸಿದೆ. ಆ ತರ ಲವ್ ಯೂ ಅಂತ ಆಚೆನೂ ಹೇಳಿದ್ದೇನೆ. ಬಿಗ್ ಬಾಸ್ ಮನೆಯಲ್ಲಿ ಎಲ್ಲರೂ ನಿಮ್ಮನ್ನು ಆಚೆ ತಳ್ಳುತ್ತಿದ್ದಾರೆ ಅಂದರೆ ಒಬ್ಬರು ಜೆನ್ಯೂನ್ ಫ್ರೆಂಡ್ ಬೇಕಾಗುತ್ತಾರೆ. ಹಾಗೆಯೇ ನನಗೆ ಭವ್ಯಾ ಫ್ರೆಂಡ್ ಅಷ್ಟೇ. ನನಗೆ ಅನುಷಾ, ಚೈತ್ರಾಕ್ಕ, ರಂಜಿತ್ ಎಲ್ಲರೂ ಕ್ಲೋಸ್ ಆಗಿದ್ದಾರೆ. ಅವರಂತೆಯೇ ಭವ್ಯಾ ಕೂಡ ಬೆಸ್ಟ್‌ ಫ್ರೆಂಡ್‌ ಎಂದಿದ್ದಾರೆ.

    ಇನ್ನೂ ಭವ್ಯಾ ನನ್ನಗಿಂತ ಚಿಕ್ಕವಳು. ಅವಳೊಂದಿಗೆ ಮದುವೆ ಆಗಲ್ಲ ಎಂದು ಕೂಡ ತ್ರಿವಿಕ್ರಮ್ ತಿಳಿಸಿದ್ದಾರೆ.

  • BBK 11: ‘ಬಿಗ್‌ ಬಾಸ್‌’ನಿಂದ ಡೇರಿಂಗ್‌ ಗರ್ಲ್‌ ಭವ್ಯಾ ಔಟ್‌

    BBK 11: ‘ಬಿಗ್‌ ಬಾಸ್‌’ನಿಂದ ಡೇರಿಂಗ್‌ ಗರ್ಲ್‌ ಭವ್ಯಾ ಔಟ್‌

    ‘ಬಿಗ್ ಬಾಸ್ ಕನ್ನಡ 11’ರ (Bigg Boss Kannada 11) ಶೋನಲ್ಲಿ ವಿನ್ನರ್ ಯಾರೆಂದು ತಿಳಿದುಕೊಳ್ಳಲು ಕೌಂಟ್ ಡೌನ್ ಶುರುವಾಗಿದೆ. ದೊಡ್ಮನೆಯ ಡೇರಿಂಗ್‌ ಗರ್ಲ್ ಎಂದೇ ಸೌಂಡ್‌ ಮಾಡಿದ್ದ ಭವ್ಯಾ (Bhavya Gowda) ಎಲಿಮಿನೇಟ್ ಆಗಿದ್ದಾರೆ. ಭವ್ಯಾ ಆಟಕ್ಕೆ ಬಿಗ್‌ ಬಾಸ್ ಬ್ರೇಕ್ ಹಾಕಿದ್ದಾರೆ.

    ಬಿಗ್ ಬಾಸ್ ಮನೆಯಲ್ಲಿ ಭವ್ಯಾ ಗೌಡ ಅವರು ಫಿನಾಲೆ ವಾರ ತಲುಪಿದ ಸ್ಪರ್ಧಿಗಳಲ್ಲಿ ಒಬ್ಬರಾಗಿ ಆಟ ಆಡಿದ್ದರು. ಅವರ ಆಟ ಅನೇಕರಿಗೆ ಇಷ್ಟ ಆಗುತ್ತಿದೆ. ಅವರು ಸಾಕಷ್ಟು ಬಾರಿ ಎಡವಿದರೂ ಮತ್ತೆ ಎದ್ದು ನಿಂತು ಆಟ ಆಡಿದ್ದರು. ಅವರು ಮೂರು ಬಾರಿ ಕ್ಯಾಪ್ಟನ್ ಆದರೂ ಅವರ ಬಗ್ಗೆ ಇರೋ ಆರೋಪಗಳು ಸಾಕಷ್ಟಿತ್ತು.

    ಭವ್ಯಾ ಅವರು ಎರಡು ಶೇಡ್‌ನಲ್ಲಿ ಕಾಣಿಸಿಕೊಂಡಿದ್ದರು. ವಾರದ ದಿನಗಳಲ್ಲಿ ಹಾರಾಟ-ಚೀರಾಟ ನಡೆಸುವ ಅವರು ವೀಕೆಂಡ್‌ನಲ್ಲಿ ಸೈಲೆಂಟ್ ಆಗಿರುತ್ತಿದ್ದರು. ಸಾಕಷ್ಟು ವಿಚಾರಗಳಲ್ಲಿ ಅವರು ಡ್ರಾಮಾ ಮಾಡಿದ್ದು ಇದೆ. ಅವರು ತ್ರಿವಿಕ್ರಮ್‌ನ ಸ್ವಾರ್ಥಕ್ಕಾಗಿ ಬಳಸಿಕೊಂಡರು ಎಂಬ ಆರೋಪ ಇದೆ. ಸ್ವತಃ ತ್ರಿವಿಕ್ರಮ್ ಅವರೇ ಈ ಆರೋಪ ಮಾಡಿದ್ದರು. ಅದಷ್ಟೇ ಅಲ್ಲ, ತ್ರಿವಿಕಮ್‌ ಜೊತೆಗಿನ ಗೆಳೆತನದ ವಿಚಾರವಾಗಿಯೂ ಹೈಲೆಟ್‌ ಆಗಿದ್ದರು ಭವ್ಯಾ. ಇಬ್ಬರೂ ಪ್ರೇಮಿಗಳು ಎಂದೇ ಹೈಲೆಟ್‌ ಆಗಿದ್ದಾರೆ.

    ಇದೀಗ ಬಿಗ್ ಬಾಸ್ ಆಟದ ರೇಸ್‌ನಲ್ಲಿ ಭವ್ಯಾ ಕೂಡ ಇದ್ದು ಕಪ್ ಗೆಲ್ಲುವ ಭರವಸೆಯಲ್ಲಿದ್ದರು. ಆದರೆ ಆಸೆಗೆ ಬ್ರೇಕ್ ಬಿದ್ದಿದೆ.

  • BBK 11: ಭವ್ಯಾಗೆ ಡವ್‌ ಮಾಡ್ತೀಯಾ ಎಂದ ಹನುಮಂತ

    BBK 11: ಭವ್ಯಾಗೆ ಡವ್‌ ಮಾಡ್ತೀಯಾ ಎಂದ ಹನುಮಂತ

    ‘ಬಿಗ್‌ ಬಾಸ್‌ ಕನ್ನಡ 11’ರ (Bigg Boss Kannada 11)  ಸ್ಪರ್ಧಿ ಹನುಮಂತ (Hanumantha) ಅವರು ಯಾವುದೇ ವಿಚಾರ ಇದ್ದರೂ ಅದನ್ನು ನೇರ ಮಾತುಗಳಲ್ಲಿ ಹೇಳುತ್ತಾರೆ. ಹೊರಗೊಂದು ಒಳಗೊಂದು ಎಂಬುದು ಇಲ್ಲ. ಆಪ್ತ ಎನಿಸಿಕೊಂಡವರಿಗೆ ಅವರು ಯಾವಾಗಲೂ ಫೇವರಿಸಂ ಮಾಡಿಲ್ಲ. ಈಗ ಭವ್ಯಾಗೆ ‘ಡವ್ ಮಾಡ್ತೀಯಾ’ ಎಂದು ಹನುಮಂತ ನೇರ ಮಾತುಗಳಲ್ಲಿ ಹೇಳಿದ್ದಾರೆ.

    ‘ಬಿಗ್ ಬಾಸ್’ ಕೊನೆಯ ವಾರದಲ್ಲಿ ರೆಸಾರ್ಟ್ ಮಾದರಿಯ ಸೆಟ್‌ನ ಹಾಕಲಾಗಿತ್ತು. ಅಲ್ಲಿ ಊಟಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಇದರ ಜೊತೆಗೆ ಸ್ಪರ್ಧಿಗಳಿಗೆ ಪತ್ರ ಬರೆದು ಅವರ ಬಗೆಗಿನ ಒಳ್ಳೆಯ ಮಾತನ್ನು ಹೇಳಬೇಕಿತ್ತು. ಹನುಮಂತ ಅವರು ಭವ್ಯಾಗೆ ಪತ್ರ ಬರೆದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

    ನಿನ್ನ ಆಟ ಸೂಪರ್, ನಿನ್ನ ಮಾತು ಸೂಪರ್, ನಿನ್ನ ನೋಟ ಸೂಪರ್, ನಿನ್ನ ಡ್ಯಾನ್ಸ್ ಸೂಪರ್, ನೀನು ಮಾಡೋ ಡವ್ ಸೂಪರ್. ಆದರೆ, ಸಿಟ್ಟು ಸ್ವಲ್ಪ ಕಡಿಮೆ ಮಾಡಿಕೊಳ್ಳಿ ಸಿಸ್ಟರ್ ಎಂದು ಹನುಮಂತ ಬರೆದಿದ್ದಾರೆ. ಇದಕ್ಕೆ ಭವ್ಯಾ ನಗುತ್ತಲೇ ನಾನೇನು ಡವ್ ಮಾಡಿದ್ದೀನಿ ಎಂದು ಕೇಳಿದರು. ಈಗ ಮಾಡ್ತಾ ಇದ್ದೀಯಲ್ಲ ಇದುವೇ ಡವ್ ಎಂದು ಭವ್ಯಾ ಕಾಲೆಳೆದಿದ್ದಾರೆ. ಆಗ ಹನುಮಂತನ ಮಾತಿಗೆ ಭವ್ಯಾಗೆ ಮಾತೇ ಬರಲಿಲ್ಲ. ಹನುಮಂತ ಅವರ ನೇರ ಮಾತಿಗೆ ಸ್ಪರ್ಧಿಗಳು ಭೇಷ್ ಎಂದಿದ್ದಾರೆ.

  • BBK 11: ಭವ್ಯಾಗೆ ಐ ಲವ್‌ ಯೂ ಪನ್ನಿ ಕುಟ್ಟಿ ಎಂದ ತ್ರಿವಿಕ್ರಮ್‌

    BBK 11: ಭವ್ಯಾಗೆ ಐ ಲವ್‌ ಯೂ ಪನ್ನಿ ಕುಟ್ಟಿ ಎಂದ ತ್ರಿವಿಕ್ರಮ್‌

    ಬಿಗ್‌ ಬಾಸ್‌ ಮನೆಯ ಆಟ (Bigg Boss Kannada 11) ಇನ್ನೇನು 4 ದಿನಗಳಲ್ಲಿ ಅಂತ್ಯವಾಗಲಿದೆ. ಹೀಗಿರುವಾಗಲೇ ಭವ್ಯಾಗೆ ಪತ್ರ ಬರೆದು ತಮ್ಮ ಮನದಾಳದ ಮಾತನ್ನು ತ್ರಿವಿಕ್ರಮ್ ಅವರು ಹೇಳಿಕೊಂಡಿದ್ದಾರೆ. ಸ್ಪರ್ಧಿಗಳ ಎದುರು ಭವ್ಯಾಗೆ (Bhavya Gowda) ಐ ಲವ್ ಯೂ ಎಂದು ತ್ರಿವಿಕ್ರಮ್ ಮನದಾಳದ ಮಾತನ್ನು ಹಂಚಿಕೊಂಡಿದ್ದಾರೆ.‌ ಇದನ್ನೂ ಓದಿ:ನಿವೃತ್ತಿ ಬಗ್ಗೆ ಮಾತನಾಡಿದ ರಶ್ಮಿಕಾ ಮಂದಣ್ಣ- ಶ್ರೀವಲ್ಲಿ ಅಭಿಮಾನಿಗಳು ಶಾಕ್

    ಬಿಗ್ ಬಾಸ್‌ನಲ್ಲಿ ಚಟುವಟಿಕೆ ಒಂದನ್ನು ನೀಡಲಾಗಿತ್ತು. ಈ ಚಟುವಟಿಕೆ ಪ್ರಕಾರ, ಸ್ಪರ್ಧಿಗಳು ಎಲ್ಲಾ ಸ್ಪರ್ಧಿಗಳಿಗೆ ಪತ್ರ ಬರೆದು ತಮಗೆ ಅನಿಸಿದ ಮಾತನ್ನು ತಿಳಿಸಬೇಕಿತ್ತು. ಇದಕ್ಕಾಗಿ ರೆಸಾರ್ಟ್ ಮಾದರಿಯ ಸೆಟ್ ಕೂಡ ಹಾಕಿದ್ದರು ಬಿಗ್ ಬಾಸ್. ಅಲ್ಲಿ ಊಟದ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಈ ವೇಳೆ, ಭವ್ಯಾ ಅವರಿಗೆ ತ್ರಿವಿಕ್ರಮ್ ಪತ್ರ ಬರೆದಿದ್ದಾರೆ. ಭಾವನೆಗಳ ಮಹಾಪೂರ ನೀನು, ಕನಸುಗಳ ಶಿಖರ ನೀನು, ಸಾಧನೆಗಳ ಚೀಲವನ್ನು ನೀರು ಕುಡಿದಷ್ಟೇ ಸಲೀಸಾಗಿ ಹೊತ್ತು ಸಾಗುತ್ತಿರುವ ಸ್ಮಾಲ್ ಸಾಧಕಿ ನೀನು. ಕಷ್ಟ ಎಂಬ ಕೆಸರಿನಲ್ಲಿ ಅರಳಿದ ಕಮಲ ನೀನು. ತಂದೆ-ತಾಯಿಗೆ ಗಂಡು ಮಗ ನೀನು. ಗೆಳೆಯರಿಗೆ ರೌಡಿ ಬೇಬಿ ನೀನು. ಕನ್ನಡಿಗರ ಮನ ಗೆದ್ದ ಗೀತಾ ನೀನು. ಜಗತ್ತು ಬೇಕಾದ್ದು ಹೇಳಲಿ, ನನ್ನ ಮತ್ತು ನಿನ್ನ ಗೆಳೆತನ ಕಲುಷಿತವಾಗದಿರಲಿ. ಯಾರು ಏನಾದರೂ ಹೇಳಿಕೊಳ್ಳಲಿ. ಐ ಲವ್ ಯೂ ಪನ್ನಿ ಕುಟ್ಟಿ ಎಂದು ಭವ್ಯಾಗಾಗಿ  ತ್ರಿವಿಕ್ರಮ್ (Trivikram) ಪತ್ರದಲ್ಲಿ ಹೇಳಿದ್ದಾರೆ.

    ಈ ವೇಳೆ, ಇದೆಲ್ಲ ವೋಟ್ ಪಡೆಯಲು ಮಾಡಿದ ತಂತ್ರ ಎಂದು ಹನುಮಂತಗೆ ಅನ್ನಿಸಿರಬಹುದು. ಇದಕ್ಕಾಗಿ ಅವರು, ಏನ್ ಆಡ್ತಾರಿ ಆಟಾನ ಎಂದರು. ಈ ಮಾತನ್ನು ಕೇಳಿ ಎಲ್ಲರೂ ನಕ್ಕರು.

    ಇನ್ನೂ ಈ ಮೊದಲು ಭವ್ಯಾಗೆ ತ್ರಿವಿಕ್ರಮ್ ಅವರು ಪ್ರಪೋಸ್ ಕೂಡ ಮಾಡಿದ್ದರು. ಹೊರ ಹೋದ ಬಳಿಕ ಆ ಬಗ್ಗೆ ಯೋಚಿಸೋಣ ಎಂದು ಭವ್ಯಾ ಅವರು ನೇರವಾಗಿ ಹೇಳಿಕೊಂಡಿದ್ದರು. ಇದು ವೀಕೆಂಡ್‌ ಪಂಚಾಯಿತಿಯಲ್ಲಿ ಸುದೀಪ್‌ ಮುಂದೆ ಚರ್ಚೆ ಕೂಡ ಆಗಿತ್ತು. ಆದರೆ ಇಬ್ಬರೂ ಪ್ರೀತಿಸುತ್ತಿರೋದಾಗಿ ಒಪ್ಪಿಕೊಂಡಿಲ್ಲ. ನಾವಿಬ್ಬರೂ ಜಸ್ಟ್‌ ಫ್ರೆಂಡ್ಸ್‌ ಎಂದಷ್ಟೇ ಮಾತನಾಡಿದರು.

  • BBK 11: ನಿನಗೆ ಮೋಹ, ಪ್ರೀತಿ ಅಡ್ಡಿಯಾಗುತ್ತಿದೆ: ಭವ್ಯಾಗೆ ಗುರೂಜಿ ಭವಿಷ್ಯ

    BBK 11: ನಿನಗೆ ಮೋಹ, ಪ್ರೀತಿ ಅಡ್ಡಿಯಾಗುತ್ತಿದೆ: ಭವ್ಯಾಗೆ ಗುರೂಜಿ ಭವಿಷ್ಯ

    ‘ಬಿಗ್ ಬಾಸ್ ಕನ್ನಡ 11’ರಲ್ಲಿ (Bigg Boss Kannada 11) ಗಟ್ಟಿ ಸ್ಪರ್ಧಿಯಾಗಿ ಗುರುತಿಸಿಕೊಂಡಿರುವ ಭವ್ಯಾ ಗೌಡ ಅವರು ತ್ರಿವಿಕ್ರಮ್ (Trivikram) ಜೊತೆಗಿನ ಸ್ನೇಹ ವಿಚಾರವಾಗಿ ಹೈಲೆಟ್ ಆಗಿದ್ದಾರೆ. ಇದೀಗ ಬಿಗ್ ಬಾಸ್ ಮನೆಗೆ ವಿದ್ಯಾಶಂಕರಾನಂದ ಸರಸ್ವತಿ ಗುರೂಜಿ ಆಗಮಿಸಿದ್ದಾರೆ. ನಿನಗೆ ಮೋಹ, ಪ್ರೀತಿ ಅಡ್ಡಿಯಾಗುತ್ತಿದೆ ಎಂದು ಭವ್ಯಾಗೆ (Bhavya Gowda) ಗುರೂಜಿ ಕಿವಿ ಮಾತೊಂದನ್ನು ಹೇಳಿದ್ದಾರೆ. ಇದನ್ನೂ ಓದಿ:ಚಿಲ್ಕೂರ್ ಬಾಲಾಜಿ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಿಯಾಂಕಾ ಚೋಪ್ರಾ

    ಭವ್ಯಾ ಅವರನ್ನು ಕರೆದು ವಿದ್ಯಾಶಂಕರಾನಂದ ಸರಸ್ವತಿ ಅವರು ಭವಿಷ್ಯ ಹೇಳಿದ್ದಾರೆ. ಈ ವೇಳೆ ಅವರಿಗೆ ಎಚ್ಚರಿಕೆ ನೀಡುವ ಕೆಲಸ ಆಗಿದೆ. ಜಾತಕದ ಅನ್ವಯ ಪ್ರಸ್ತುತ ಶನಿ ದಶಾ ನಡೆಯುತ್ತಿದೆ. ಸಣ್ಣಪುಟ್ಟ ಅನಾರೋಗ್ಯ ಸಮಸ್ಯೆ ಕಾಡುತ್ತದೆ. ಕೂದಲು ಉದುರುವುದು, ಹಲ್ಲು ನೋವು, ಜಾಯಿಂಟ್ ಪೇನ್ ಬರುತ್ತದೆ. ಶನಿ ಸಣ್ಣಪುಟ್ಟ ಸಮಸ್ಯೆ ಕೊಡುತ್ತಾನೆ. ಇದನ್ನು ನಿರ್ಲಕ್ಷ್ಯ ಮಾಡಬಹುದು. ಶನಿ ಹೋದಮೇಲೆ ಅದೂ ಹೋಗುತ್ತದೆ ಎಂದಿದ್ದಾರೆ ಗುರೂಜಿ.

    2027ರಿಂದ ನಿನ್ನ ಭವಿಷ್ಯದಲ್ಲಿ ಸುವರ್ಣಯುಗ. ನೀನು ಫ್ಯಾಷನ್ ಇಂಡಸ್ಟ್ರೀಗೆ ಸಂಬಂಧಿಸಿ ಉದ್ಯಮ ಆರಂಭಿಸುತ್ತೀಯ ಎಂದಿದ್ದಾರೆ ಅವರು. ಆ ಬಳಿಕ ವೀಳ್ಯದ ಎಲೆ ಎತ್ತಲು ಗುರೂಜಿ ಹೇಳಿದರು. 15 ಎಲೆಯನ್ನು ಭವ್ಯಾ ಎತ್ತಿಕೊಟ್ಟರು. ನಿನಗೆ ಮೋಹ, ಪ್ರೀತಿ ಅಡ್ಡಿಯಾಗುತ್ತಿದೆ ಎಂದು ಗುರೂಜಿ ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ:ಸೈಫ್‌ ಕುಟುಂಬಕ್ಕೆ ಸೇರಿದ 15 ಸಾವಿರ ಕೋಟಿ ಮೌಲ್ಯದ ಆಸ್ತಿ ಕೇಂದ್ರದ ವಶಕ್ಕೆ?

    ಇನ್ನೂ ಬಿಗ್ ಬಾಸ್‌ನಲ್ಲಿ ತ್ರಿವಿಕ್ರಮ್ ಅವರು ಭವ್ಯಾಗೆ ಪ್ರಪೋಸ್ ಮಾಡಿದ್ದಾರೆ. ಅದನ್ನು ಇಬ್ಬರೂ ಒಪ್ಪಿಕೊಂಡಿಲ್ಲ. ನಮ್ಮೀಬ್ಬರ ನಡುವೆ ಏನಿಲ್ಲ ಎಂದು ಹೇಳುತ್ತಲೇ ಬಂದಿದ್ದಾರೆ. ಇದನ್ನೇ ಗುರೂಜಿ ಪರೋಕ್ಷವಾಗಿ ಭವ್ಯಾಗೆ ಹೇಳಿದ್ರಾ? ಎಂದು ಅಭಿಮಾನಿಗಳು ಊಹಿಸುತ್ತಿದ್ದಾರೆ.

  • BBK 11: ವರಸೆ ಬದಲಿಸಿದ ಭವ್ಯಾಗೆ ಪುಂಗಬೇಡ ಎಂದ ತ್ರಿವಿಕ್ರಮ್‌

    BBK 11: ವರಸೆ ಬದಲಿಸಿದ ಭವ್ಯಾಗೆ ಪುಂಗಬೇಡ ಎಂದ ತ್ರಿವಿಕ್ರಮ್‌

    ದೊಡ್ಮನೆಯಲ್ಲಿ (Bigg Boss Kannada 11) ಪ್ರೇಮ ಪಕ್ಷಿಗಳಾಗಿದ್ದ ತ್ರಿವಿಕ್ರಮ್ ಮತ್ತು ಭವ್ಯಾ ನಡುವೆ ಬಿರುಕಾಗಿದೆ. ಇದೀಗ ಭವ್ಯಾ (Bhavya Gowda) ವಿರುದ್ಧ ತ್ರಿವಿಕ್ರಮ್ ತಿರುಗಿ ಬಿದ್ದಿದ್ದಾರೆ. ನಿನ್ನ ಬಂಡವಾಳ ಬಯಲಾಯ್ತು ಪುಂಗಬೇಡ ಅಂತ ಭವ್ಯಾ ವಿರುದ್ಧ ತ್ರಿವಿಕ್ರಮ್‌ (Trivikram) ಗುಡುಗಿದ್ದಾರೆ. ಇದನ್ನೂ ಓದಿ:ಶ್ರೇಯಸ್ ಜೊತೆ ದಿಲ್ ದಾರ್ ಅಖಾಡಕ್ಕಿಳಿದ ಕೀರ್ತಿ ಕೃಷ್ಣ!

    ದೊಡ್ಮನೆ ಆಟಕ್ಕೆ ಬ್ರೇಕ್‌ ಬೀಳಲು ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಸ್ಪರ್ಧಿಗಳು ತಮ್ಮನ್ನು ತಾವು ಕಾಪಾಡಿಕೊಳ್ಳಲು ಬಿಗ್ ಬಾಸ್‌ನಲ್ಲಿ ಇನ್ನೊಬ್ಬರ ಮೇಲೆ ದೂರಬೇಕಾದ ಅನಿವಾರ್ಯತೆ ಎದುರಾಗಿದೆ. ಇಷ್ಟು ದಿನ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದ ತ್ರಿವಿಕ್ರಮ್ ಹಾಗೂ ಭವ್ಯಾ ನಡುವೆ ಬಿರುಕು ಮೂಡಿದೆ. ಯಾರು ಯಾರನ್ನ ಹಿಂದಿಕ್ಕಿ ಮುಂದೆ ಹೋಗಲು ಪ್ರಯತ್ನ ಮಾಡುತ್ತಿದ್ದಾರೆ ಎಂಬುದರ ಕುರಿತು ಇಬ್ಬರ ನಡುವೆ ಬಿರುಸಿನ ಚರ್ಚೆ ನಡೆದಿದೆ.

    105 ದಿನಗಳಿಂದ ಇರದಿದ್ದ ಬಾಂಡಿಂಗ್ ಈಗ ಇನ್ನೊಬ್ಬರ ಜೊತೆ ಸೇರಿಕೊಂಡು ಆಚೆ ಇಡುತ್ತಿದ್ದೀಯ. ತುಂಬಾ ಬಂಡವಾಳಗಳು ಗೊತ್ತಾದಾಗ ಯಾರು ಏನು ಮಾಡೋಕೆ ಆಗಲ್ಲ ಎಂದು ತ್ರಿವಿಕ್ರಮ್ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಭವ್ಯಾ ನೀನು ಏನೇನೋ ತಲೆಗೆ ಹಾಕ್ಕೊಂಡು ಮಾತನಾಡಬೇಡ. ನೀವೇ ಹಾಳಾಗುತ್ತಿದ್ದೀರಾ ಅಷ್ಟೇ ಎಂದು ಭವ್ಯಾ ಉತ್ತರಿಸಿದ್ದಾರೆ. ಈ ವೇಳೆ ತ್ರಿವಿಕ್ರಮ್, ನೀನೇನು ನನಗೆ ಹೇಳುವುದು. ಇಷ್ಟೆಲ್ಲಾ ಪುಂಗೋ ಅವಶ್ಯಕತೆ ಇಲ್ಲ ಎಂದ ತ್ರಿವಿಕ್ರಮ್‌ಗೆ ನಿನ್ನ ಫ್ರೆಂಡ್‌ಶಿಪ್‌ ಅನ್ನು ಎಲ್ಲೂ ನಾನು ಬಳಸಿಕೊಂಡಿಲ್ಲ ಎಂದಿದ್ದಾರೆ. ಮೊದಲ ದಿನ ಇದ್ದ ಹಾಗೇ ಈಗ ನೀನಿಲ್ಲ ಎಂದು ಭವ್ಯಾಗೆ ನೇರವಾಗಿಯೇ ಹೇಳಿದ್ದಾರೆ.

    ತ್ರಿವಿಕ್ರಮ್ ಹಾಗೂ ಭವ್ಯಾ ಇಬ್ಬರು ಸೋಫಾ ಮೇಲೆ ಕುಳಿತು ಈ ರೀತಿಯಾಗಿ ಮಾತನಾಡಿದ್ದಾರೆ. ಇದರಿಂದ ಬೇಸರ ಮಾಡಿಕೊಂಡ ಭವ್ಯಾ ಎದ್ದು ಹೋಗಿದ್ದಾರೆ. ಸದ್ಯ ನೋಡುಗರಿಗೆ ಇಬ್ಬರ ನಡುವಿನ ಸ್ನೇಹ, ಪ್ರೀತಿ ಈಗ ಇಲ್ಲ ಎಂದು ಅನಿಸುತ್ತಿದೆ. ಟ್ರೋಫಿ ಗೆಲ್ಲುವ ಉದ್ದೇಶದಿಂದ ಹೀಗೆ ಒಬ್ಬರನೊಬ್ಬರು ದೂರ ಮಾಡಿಕೊಳ್ಳುತ್ತಿದ್ದಾರಾ? ಎನ್ನುವ ಪ್ರಶ್ನೆ ಮೂಡಿದೆ. ಇಬ್ಬರೂ ದೂರವಾಗೋ ಸೂಚನೆ ಸಿಕ್ಕಿದೆ.

  • BBK 11: ರಜತ್‌ಗೆ ಟಾರ್ಗೆಟ್‌- ಮೋಕ್ಷಿತಾ ಜೊತೆ ಭವ್ಯಾ ಮ್ಯಾಚ್‌ ಫಿಕ್ಸಿಂಗ್‌

    BBK 11: ರಜತ್‌ಗೆ ಟಾರ್ಗೆಟ್‌- ಮೋಕ್ಷಿತಾ ಜೊತೆ ಭವ್ಯಾ ಮ್ಯಾಚ್‌ ಫಿಕ್ಸಿಂಗ್‌

    ಬಿಗ್ ಬಾಸ್ ಮನೆಯ ಆಟ (Bigg Boss Kannada 11)  ಇನ್ನೇನು 2 ವಾರಗಳಲ್ಲಿ ಮುಗಿಯಲಿದೆ. ಜ.26ರಂದು ಗ್ರ್ಯಾಂಡ್‌ ಫಿನಾಲೆ ನಡೆಯಲಿದೆ. ಇನ್ನೂ ಚೈತ್ರಾ ಕುಂದಾಪುರ ಎಲಿಮಿನೇಷನ್ ಬಳಿಕ ಮನೆಯಲ್ಲಿ 8 ಸ್ಪರ್ಧಿಗಳಿದ್ದಾರೆ. ತಮ್ಮ ಉಳಿವಿಕೆಗಾಗಿ ಗುದ್ದಾಟ ಶುರುವಾಗಿದೆ. ಇನ್ನೂ ಈ ವಾರ ಮೀಡ್ ವೀಕ್ ಎಲಿಮಿನೇಷನ್ ಇರೋದ್ರಿಂದ ಇದರಿಂದ ಪಾರಾಗಲು ರಜತ್‌ಗೆ ಮೋಕ್ಷಿತಾ ಹಾಗೂ ಭವ್ಯಾ ಸ್ಕೆಚ್ ಹಾಕಿದ್ದಾರೆ.

    ಇಂದಿನ ಪ್ರೋಮೋದಲ್ಲಿ ವಾರದ ಮಧ್ಯೆಯಲ್ಲಿ ಮಿಡ್ ವೀಕ್ ಎಲಿಮಿನೇಷನ್ ನಡೆಯಲಿದೆ. ಒಬ್ಬರು ಮನೆಯಿಂದ ಹೋಗೋದು ಖಚಿತ ಎಂದು ಘೋಷಿಸಿದ್ದಾರೆ. ಈ ವಾರದ ಟಾಸ್ಕ್ ಗೆಲ್ಲುವ ಒಬ್ಬ ಸದಸ್ಯ ಮಿಡ್ ವೀಕ್ ಎಲಿಮಿನೇಷನ್‌ನಿಂದ ಪಾರಾಗುತ್ತಾರೆ ಎಂದು ತಿಳಿಸಿದ್ದಾರೆ. ಆ ನಂತರ ಟಾಸ್ಕ್ ವೇಳೆ, ರಜತ್‌ರನ್ನ ಮನೆಯಿಂದ ಹೊರ ಕಳುಹಿಸಲು ಮೋಕ್ಷಿತಾ ಮತ್ತು ಭವ್ಯಾ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:BBK 11: ಕೊರಗಜ್ಜನ ಪವಾಡದಿಂದ ಸೇಫ್‌ ಆದ ಧನರಾಜ್‌- ಫೈರ್‌ ಬ್ರ್ಯಾಂಡ್ ಚೈತ್ರಾ ಔಟ್

    ಹೆಚ್ಚು ಮರದ ತುಂಡುಗಳನ್ನು ನೆಟ್‌ನಲ್ಲಿ ಹೊಂದಿರುವ ಸದಸ್ಯ ಟಾಸ್ಕ್‌ನಿಂದ ಔಟ್ ಆಗಲಿದ್ದಾರೆ ಎಂಬುದು ಆಟದ ನಿಯಮವಾಗಿತ್ತು. ಅದರಂತೆ ರಜತ್ ಫೋಟೋವಿದ್ದ ಬುಟ್ಟಿಗೆ ಮರದ ತುಂಡುಗಳನ್ನು ಭವ್ಯಾ ಹಾಗೂ ಮೋಕ್ಷಿತಾ ಹಾಕಲು ಪ್ರಯತ್ನಿಸಿದ್ದಾರೆ. ಇನ್ನೂ ತನ್ನನ್ನು ಔಟ್ ಮಾಡಲು ಭವ್ಯಾ ಮತ್ತು ಮೋಕ್ಷಿತಾ ಮ್ಯಾಚ್ ಫಿಕ್ಸಿಂಗ್ ಬಗ್ಗೆ ರಜತ್ ಅರಿವಿಗೆ ಬಂದಿದ್ದು, ಅವರು ರಾಂಗ್ ಆಗಿದ್ದಾರೆ. ನಿಮ್ಮಿಬ್ಬರಿಂದ ನಾನು ಇದನ್ನು ನಿರೀಕ್ಷೆ ಮಾಡಿರಲಿಲ್ಲ ಎಂದಿದ್ದಾರೆ.

    ಟಿಕೆಟ್ ಟು ಫಿನಾಲೆ ಹೋಗಬಾರದು ಅಂತ ಭವ್ಯಾ ಹೆಸರನ್ನು ನೀವು ತೆಗೆದುಕೊಳ್ಳೀರಿ, ಈಗ ನಾಮಿನೇಷನ್‌ನಿಂದ ಉಳಿಯಬೇಕು ಅಂತ ಭವ್ಯಾ ಜೊತೆ ಸೇರಿಕೊಳ್ತೀರಾ ಅಂತ ಮೋಕ್ಷಿತಾಗೆ ತ್ರಿವಿಕ್ರಮ್ ಟಾಂಗ್ ಕೊಟ್ಟಿದ್ದಾರೆ. ನಾವು ನಿಯತ್ತಾಗಿ ಆಟ ಆಡಿದ್ದೇವೆ ಎಂದ ಮೋಕ್ಷಿತಾಗೆ ಸಮರ್ಥನೆ ಬೇಡ ಅಂತ ರಜತ್ ತಿರುಗೇಟು ನೀಡಿದ್ದಾರೆ. ಇನ್ನೂ ಭವ್ಯಾಗೆ ಅನೇಕ ಬಾರಿ ರಜತ್ ಕಿವಿಮಾತು ಹೇಳಿದ್ದು ಇದೆ. ಆದರೆ, ಈಗ ಆಟದಲ್ಲಿ ಭವ್ಯಾ ಈ ರೀತಿ ಮೋಸ ಮಾಡಿದ್ದಕ್ಕೆ ರಜತ್ ಸಿಟ್ಟಾಗಿದ್ದಾರೆ. ಅವರಿಗೆ ಬೇಸರವೂ ಉಂಟಾಗಿದೆ.

    ಭವ್ಯಾ, ಮೋಕ್ಷಿತಾ, ರಜತ್‌, ಧನರಾಜ್‌, ಉಗ್ರಂ ಮಂಜು, ತ್ರಿವಿಕ್ರಮ್‌, ಗೌತಮಿ ಈ ಸ್ಪರ್ಧಿಗಳಲ್ಲಿ ಫಿನಾಲೆಗೆ ಹೋಗಲು ಫೈಟ್‌ ನಡೆಯುತ್ತಿದೆ. ಇದೆಲ್ಲದರ ನಡುವೆ ಮಿಡ್ ವೀಕ್ ಎಲಿಮಿನೇಷನ್‌ನಿಂದ ಯಾರ ಆಟಕ್ಕೆ ಬ್ರೇಕ್ ಬೀಳಲಿದೆ ಎಂಬುದನ್ನು ಕಾದುನೋಡಬೇಕಿದೆ.