ಕಿರುತೆರೆ ನಟಿ ಭವ್ಯಾ ಗೌಡ (Bhavya Gowda) ಅವರು ‘ಗೀತಾ’ ಸೀರಿಯಲ್ (Geetha Serial) ಮೂಲಕ ಮನೆ ಮಾತಾಗಿದ್ದರು. ಈ ಸೀರಿಯಲ್ನಿಂದ ಅಪಾರ ಅಭಿಮಾನಿಗಳ ಬಳಗ ಕೂಡ ನಟಿ ಹೊಂದಿದ್ದರು. ಇದೀಗ ಜನಪ್ರಿಯ ಗೀತಾ ಧಾರಾವಾಹಿ ಮುಕ್ತಾಯವಾಗಿದೆ. ಈ ಬೆನ್ನಲ್ಲೇ ನಟಿ ಭವ್ಯಾ ಧರ್ಮಸ್ಥಳ, ಕಟೀಲು ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.
‘ಗೀತಾ’ ಸೀರಿಯಲ್ 4 ವರ್ಷಗಳ ಕಾಲ ಟಿವಿ ಪ್ರೇಕ್ಷಕರನ್ನು ರಂಜಿಸಿತ್ತು. ಮಧ್ಯಮ ಕುಟುಂಬದ ಹುಡುಗಿಯ ಪಾತ್ರದಲ್ಲಿ ಭವ್ಯಾ ಗಮನ ಸೆಳೆದಿದ್ದರು. ಟಿಕ್ ಟಾಕ್ ಸ್ಟಾರ್ ಆಗಿದ್ದ ಭವ್ಯಾ ಕಿರುತೆರೆ ನಟಿಯಾಗಿ ಗೆದ್ದಿದ್ದರು. ಧನುಷ್ ಗೌಡ-ಭವ್ಯಾ ಜೋಡಿ ಪ್ರೇಕ್ಷಕರಿಗೆ ಹಿಡಿಸಿತ್ತು. ಇದನ್ನೂ ಓದಿ:ಬಹುಕಾಲದ ಗೆಳೆಯನ ಜೊತೆ ಹೊಸ ಜೀವನಕ್ಕೆ ಕಾಲಿಟ್ಟ ಗೂಗ್ಲಿ ಬೆಡಗಿ
ಈಗ ಸತತ 4 ವರ್ಷಗಳು ರಂಜಿಸಿದ್ದ ‘ಗೀತಾ’ ಧಾರಾವಾಹಿ ಜರ್ನಿ ಅಂತ್ಯವಾಗಿದೆ. ಹೊಸ ಜರ್ನಿಗೆ ಮುನ್ನುಡಿ ಬರೆಯುವ ಮೊದಲು ದೇವರ ಸನ್ನಿಧಿಗೆ ನಟಿ ಭೇಟಿ ನೀಡಿದ್ದಾರೆ. ಧರ್ಮಸ್ಥಳ ಮಂಜುನಾಥ ಮತ್ತು ಕಟೀಲು ದುರ್ಗಾಪರವೇಶ್ವರಿ ದೇವಿಗೆ ನಟಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ:ಐರೆನ್ ಲೆಗ್ ಎಂದು ಕೆಣಕುವವರಿಗೆ ಕೆಲಸದ ಮೂಲಕ ಉತ್ತರ ಕೊಟ್ರು ಪೂಜಾ ಹೆಗ್ಡೆ
‘ಗೀತಾ’ ಸೀರಿಯಲ್ ನಂತರ ಮುಂದೇನು? ಎಂಬ ಪ್ರಶ್ನೆ ಭವ್ಯಾ ಅಭಿಮಾನಿಗಳಲ್ಲಿ ಕಾಡ್ತಿದೆ. ಮತ್ತೆ ಕಿರುತೆರೆಗೆ ಎಂಟ್ರಿ ಕೊಡ್ತಾರಾ? ಅಥವಾ ಬೆಳ್ಳಿಪರದೆಯಲ್ಲಿ ಮಿಂಚುತ್ತಾರಾ ಕಾದುನೋಡಬೇಕಿದೆ.
ಕಿರುತೆರೆಯ ಜನಪ್ರಿಯ ಸೀರಿಯಲ್ ‘ಗೀತಾ’ (Geetha) ಹೀರೋ ಧನುಷ್ ಗೌಡ್ (Dhanush Gowda) ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸಂಜನಾ ಜೊತೆ ಅದ್ದೂರಿಯಾಗಿ ಧನುಷ್ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
‘ಗೀತಾ’ ಸೀರಿಯಲ್ ಮೂಲಕ ಮನೆಮಾತಾದ ವಿಜಯ್ ಅಲಿಯಾಸ್ ಧನುಷ್ ಗೌಡ ಅವರು ಗ್ರ್ಯಾಂಡ್ ಆಗಿ ಸಂಜನಾ (Sanjana Prabhu) ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಮೂಲಕ ಗಾಸಿಪ್ಗೆಲ್ಲಾ ಬ್ರೇಕ್ ಹಾಕಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ನಟಿ ಭವ್ಯಾ ಗೌಡ (Bhavya Gowda) ಅವರು ಧನುಷ್-ಸಂಜನಾ ಜೊತೆಗಿನ ಫೋಟೋ ಹಂಚಿಕೊಂಡು ಹೊಸ ಬಾಳಿಗೆ ಶುಭಕೋರಿದ್ದಾರೆ. ಧನುಷ್ ಎಂಗೇಜ್ಮೆಂಟ್ ಫೋಟೋ ವೈರಲ್ ಆಗ್ತಿದ್ದಂತೆ ಅಭಿಮಾನಿಗಳು ಶುಭ ಹಾರೈಸಿದ್ದಾರೆ. ಅಂದಹಾಗೆ ಧನುಷ್ ನಿಶ್ಚಿತಾರ್ಥದ ಸುಂದರ ಫೋಟೋಗಳು ಸುಜಯ್ ನಾಯ್ಡು ಅವರ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ.
ಇನ್ನೂ ‘ಗೀತಾ’ (Geetha) ಧಾರಾವಾಹಿಯ ಭವ್ಯಾ- ಧನುಷ್ ಇಬ್ಬರೂ ಡೇಟಿಂಗ್ ಮಾಡ್ತಿದ್ದಾರೆ. ಲವ್ನಲ್ಲಿದ್ದಾರೆ ಎಂದೇ ಹೇಳಲಾಗಿತ್ತು. ಇಬ್ಬರೂ ಈ ವಿಚಾರವನ್ನು ತಳ್ಳಿಹಾಕಿದ್ದರು. ನಾವಿಬ್ಬರು ಬೆಸ್ಟ್ ಫ್ರೆಂಡ್ಸ್ ನಮ್ಮ ನಡುವೆ ಏನಿಲ್ಲ ಎಂದು ಸ್ಪಷ್ಟನೆ ನೀಡಿದ್ದರು ಈ ಜೋಡಿ. ಸಂಜನಾ ಜೊತೆ ಎಂಗೇಜ್ಮೆಂಟ್ ಮಾಡಿಕೊಳ್ಳುವ ಮೂಲಕ ಎಲ್ಲಾ ಅಂತೆ ಕಂತೆ ಗಾಸಿಪ್ಗೆ ಬ್ರೇಕ್ ಹಾಕಿದ್ದಾರೆ ನಟ ಧನುಷ್.
ಬಿಗ್ ಬಾಸ್ ಕನ್ನಡ ಸೀಸನ್ 10 (Bigg Boss Kannada 10) ಆಟ ಶುರುವಾಗಲು ನಾಲ್ಕು ದಿನ ಬಾಕಿಯಿದ್ದು, ಈ ಬಾರಿ ದೊಡ್ಮನೆ ಆಟದಲ್ಲಿ ಯಾರೆಲ್ಲಾ ಭಾಗಿಯಾಗಲಿದ್ದಾರೆ ಎಂಬುದರ ಮತ್ತೊಂದು ಸಂಭಾವ್ಯ ಸ್ಪರ್ಧಿಗಳ ಲಿಸ್ಟ್ ಹರಿದಾಡುತ್ತಿದೆ. ಅಕ್ಟೋಬರ್ 8ಕ್ಕೆ ಬಿಗ್ ಬಾಸ್ ಗ್ರ್ಯಾಂಡ್ ಓಪ್ನಿಂಗ್ಗೆ ಸಾಕಷ್ಟು ತಯಾರಿ ನಡೆಯುತ್ತಿದ್ದು, ಈಗ ಮತ್ತೆ ಒಂದಿಷ್ಟು ಹೊಸ ಸ್ಪರ್ಧಿಗಳ ಹೆಸರು ವೈರಲ್ ಆಗುತ್ತಿದೆ. ಇದನ್ನೂ ಓದಿ:ನಟ ರಣಬೀರ್ ಕಪೂರ್ ಗೆ ‘ಇಡಿ’ ಶಾಕ್: ವಿಚಾರಣೆಗಾಗಿ ನೋಟಿಸ್
ದೊಡ್ಮನೆಗೆ ಆಟಕ್ಕೆ ಮೊದಲ ಸ್ಪರ್ಧಿಯಾಗಿ ‘777 ಚಾರ್ಲಿ’ ಎಂಟ್ರಿ ಕೊಡುವ ವಿಚಾರ ಅಧಿಕೃತವಾಗಿ ಹೊರಬಿದ್ದಿದೆ. ನಟ ಸುನೀಲ್ ರಾವ್, ಭವ್ಯಾ ಗೌಡ(Bhavya Gowda), ರಘು ಮುಖರ್ಜಿ, ಸಮಾಜ ಸೇವಕಿ ಅಕ್ಕ ಅನು, ಪ್ರಕಾಶ್ ತುಮ್ಮಿನಾಡು, ರಂಜನಿ ರಾಘವನ್, ಹುಲಿ ಕಾರ್ತಿಕ್, ನಮ್ರತಾ ಗೌಡ, ಚಂದ್ರಪ್ರಭ, ಅಗ್ನಿಸಾಕ್ಷಿ ಖ್ಯಾತಿಯ ರಾಜೇಶ್ ಧ್ರುವ (Rajesh Dhruva), ‘ಕೆಜಿಎಫ್’ ನಟಿ ರೂಪಾ ರಾಯಪ್ಪ, ಮಿಮಿಕ್ರಿ ಗೋಪಿ, ಕ್ರಿಕೆಟರ್ ವಿನಯ್ ಕುಮಾರ್, ಪೋಷಕ ನಟಿ ಸ್ವಾತಿ, ರಕ್ಷಕ್ ಬುಲೆಟ್ ಪ್ರಕಾಶ್, ರ್ಯಾಪರ್ ಇಶಾನಿ ಸೇರಿದಂತೆ ಹಲವರು ಬಿಗ್ ಬಾಸ್ ಸ್ಪರ್ಧಿಸುವ ಸ್ಯಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಬಿಗ್ ಬಾಸ್ ಕನ್ನಡ ಸೀಸನ್ 10ಕ್ಕೆ ದಿನಗಣನೆ ಶುರುವಾಗಿದೆ. ಈಗಾಗಲೇ ಹಲವು ಪ್ರೋಮೋಗಳನ್ನು ರಿಲೀಸ್ ಮಾಡುವ ಮೂಲಕ ವಾಹಿನಿಯು ಪ್ರೇಕ್ಷಕರಲ್ಲಿ ಕುತೂಹಲವನ್ನುಂಟು ಮಾಡುತ್ತಿದೆ. ಈಗಾಗಲೇ ಬಿಗ್ ಬಾಸ್ ಯಾವಾಗಿಂದ ಶುರುವಾಗುತ್ತದೆ ಎನ್ನುವ ಮಾಹಿತಿಯನ್ನು ಹಂಚಿಕೊಂಡಿದೆ. ಈಗ ಪ್ರಸಾರದ ವೇಳೆಯನ್ನೂ ಅದು ಹೇಳಿಕೊಂಡಿದೆ.
ಅಕ್ಟೋಬರ್ 8ರಿಂದ ಪ್ರಾರಂಭವಾಗುವ ಬಿಗ್ ಬಾಸ್ ಶೋ, ಮೊದಲ ದಿನ ಸಂಜೆ 6 ಗಂಟೆಗೆ ಪ್ರಸಾರವಾಗಲಿದೆ. ಮರುದಿನದಿಂದ ಪ್ರತಿ ರಾತ್ರಿ 9.30ಕ್ಕೆ ಕಾರ್ಯಕ್ರಮ ಪ್ರಸಾರವಾಗಲಿದೆ ಎಂದು ವಾಹಿನಿಯು ರಿಲೀಸ್ ಮಾಡಿದ ಪ್ರೋಮೋದಲ್ಲಿ ತಿಳಿಸಲಾಗಿದೆ. ಇದಕ್ಕಾಗಿಯೇ ವಿಶೇಷ ಪ್ರೋಮೋ ಕೂಡ ಮಾಡಿದೆ.
ಬಿಗ್ ಬಾಸ್ಗೆ ಹೋಗುವ ಮುನ್ನವೇ ವಾಹಿನಿಯಾಗಲಿ, ಬಿಗ್ ಬಾಸ್ ಮನೆ ಪ್ರವೇಶ ಮಾಡುವ ಸ್ಪರ್ಧಿಗಳಾಗಲೀ ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡುವ ವಿಚಾರವನ್ನು ರಿವೀಲ್ ಮಾಡೋದಿಲ್ಲ. ಸ್ಪರ್ಧಿಗಳು ಯಾರು ಅನ್ನೋದು ಬಿಗ್ ಬಾಸ್ ಶೋ ಲಾಂಚ್ ಆಗುವ ದಿನವೇ ಗೊತ್ತಾಗುತ್ತದೆ. ಆದರೆ ಈ ಬಾರಿ ಮೊದಲ ಬಾರಿಗೆ ಸೋಶಿಯಲ್ ಮೀಡಿಯಾದಲ್ಲಿ ಸ್ಪರ್ಧಿ ಯಾರು ಅನ್ನೋದನ್ನು ಇದೀಗ ವಾಹಿನಿ ಹೇಳಿದೆ. ರಕ್ಷಿತ್ ಶೆಟ್ಟಿ ಜೊತೆ ನಟಿಸಿದ ಚಾರ್ಲಿ ಮನೆಗೆ ಎಂಟ್ರಿ ಕೊಡುತ್ತಿದ್ದಾರೆ.
ಸದ್ಯ ವೈರಲ್ ಆಗಿರುವ ಸ್ಪರ್ಧಿಗಳ ಹೆಸರು ಕೇಳಿ ಫ್ಯಾನ್ಸ್ ಖುಷಿ ಪಡ್ತಿದ್ದಾರೆ. ಆದರೆ ಇವರೆಲ್ಲರೂ ದೊಡ್ಮನೆ ಆಟದಲ್ಲಿ ಇರುತ್ತಾರಾ? ಅಕ್ಟೋಬರ್ 8ರವರೆಗೆ ಕಾಯಬೇಕಿದೆ.
‘ಗೀತಾ’ (Geetha) ಸೀರಿಯಲ್ ಮೂಲಕ ಮನೆ ಮಾತಾದ ನಟಿ ಭವ್ಯಾ ಗೌಡ (Bhavya Gowda) ಅವರು ಇದೀಗ ಬಿಗ್ ಬಾಸ್ ಮನೆಗೆ (Bigg Boss House) ಬರಲಿದ್ದಾರೆ. ಗೀತಾ ಆಗಿ ಸಿನಿಪ್ರಿಯರ ಮನ ಗೆದ್ದಿರುವ ನಟಿ, ದೊಡ್ಮನೆ ಆಟದಲ್ಲಿ ಭಾಗವಹಿಸಲಿದ್ದಾರೆ. ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಶುರುವಾಗಿದೆ. ಇದನ್ನೂ ಓದಿ:ಪ್ಯಾರಿಸ್ನಲ್ಲಿ ಸ್ನೇಹಿತರ ಮದುವೆಯಲ್ಲಿ ಮಿಂಚಿದ ರಾಮ್ ಚರಣ್ ದಂಪತಿ
ಟಿಕ್ ಟಾಕ್ ಮೂಲಕ ಫೇಮಸ್ ಆಗಿದ್ದ ಭವ್ಯಾ ‘ಗೀತಾ’ ಧಾರಾವಾಹಿಯಲ್ಲಿ ನಟಿಸುವ ಚಾನ್ಸ್ ಗಿಟ್ಟಿಸಿಕೊಂಡರು. ಮೊದಲ ಸೀರಿಯಲ್ನಲ್ಲೇ ಗಮನ ಸೆಳೆದ ಯುವ ನಟಿಗೆ ಸಿನಿಮಾ ಆಫರ್ಸ್ಗಳು ಸಿಗುತ್ತಿವೆ. ಹೀಗಿರುವಾಗ ಈ ಬಾರಿಯ ಬಿಗ್ ಬಾಸ್ ಮನೆಗೆ ಸ್ಪರ್ಧಿಯಾಗಿ ನಟಿ ಭವ್ಯಾ ಕೂಡ ಬರುತ್ತಿದ್ದಾರೆ ಎನ್ನಲಾಗುತ್ತಿದೆ.
‘ಅನುಬಂಧ ಅವಾರ್ಡ್’ ಕಾರ್ಯಕ್ರಮದಲ್ಲಿ ಹೊಸ ಸೀರಿಯಲ್ ಲಾಂಚ್ ಆಗಿದೆ. ಬೃಂದಾವನ ಎಂಬ ಸೀರಿಯಲ್ ಬರುತ್ತಿದೆ. ಟಿವಿಯಲ್ಲಿ ಈ ಶೋ ಇನ್ನೂ ಪ್ರಸಾರವಾಗಬೇಕಿದೆ. ಹಾಗಾಗಿ ಬಿಗ್ ಬಾಸ್ ಮನೆಗೆ (Bigg Boss Kannada) ನಟಿ ಬರುತ್ತಾರೆ ಎನ್ನಲಾಗುತ್ತಿದೆ.
ಸ್ಯಾಂಡಲ್ವುಡ್ ನಟಿ ಅಮೂಲ್ಯ (Amulya) ಸಂಬಂಧಿ ಆಗಿರುವ ಭವ್ಯಾಗೆ ಸೋಶಿಯಲ್ ಮೀಡಿಯಾದಲ್ಲೂ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಗೀತಾ ಸೀರಿಯಲ್ ಸಹನಟ ಧನುಷ್ ಗೌಡ ಜೊತೆಗಿನ ಸ್ನೇಹದ ವಿಚಾರವಾಗಿ ನಟಿ ಹೈಲೆಟ್ ಆಗಿದ್ದರು. ಇಬ್ಬರು ಡೇಟ್ ಮಾಡುತ್ತಿದ್ದಾರೆ ಎನ್ನಲಾಗಿತ್ತು. ಬಳಿಕ ಇದೆಲ್ಲಾ ಸುಳ್ಳು ಎಂದು ಈ ಜೋಡಿ ಡೇಟಿಂಗ್ ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿದ್ದರು.
ಕನ್ನಡ ಕಿರುತೆರೆಯಲ್ಲಿ ‘ಗೀತಾ’ ಸೀರಿಯಲ್ ಮೂಲಕ ಮೋಡಿ ಮಾಡಿರುವ ಜೋಡಿ ಭವ್ಯಾ- ಧನುಷ್ ಗೌಡ (Dhanush Gowda) ಇದೀಗ ತಮ್ಮ ಬಗೆಗಿನ ಗಾಸಿಪ್ ಬಗ್ಗೆ ಮಾತನಾಡಿದ್ದಾರೆ. ಧರ್ಮಸ್ಥಳಕ್ಕೆ ಓಡಿ ಹೋಗಿ ಮದುವೆಯಾಗಿದ್ದಾರೆ (Wedding) ಎಂಬ ಸುದ್ದಿಗೆ ಈ ಜೋಡಿ ಸ್ಪಷ್ಟನೆ ನೀಡಿದೆ. ಗೀತಾ ಮತ್ತು ವಿಜಯ್ ರಿಯಲ್ ಲೈಫ್ನಲ್ಲೂ ಲವ್ (Love) ಮಾಡ್ತಿದ್ದಾರಾ? ಎಂಬ ಅಭಿಮಾನಿಗಳ ಪ್ರಶ್ನೆಗೆ ಈಗ ಕ್ಲ್ಯಾರಿಟಿ ನೀಡಿದ್ದಾರೆ.
ತಮ್ಮ ಬಗೆಗಿನ ಕೇಳಿರುವ ಸುದ್ದಿ ಬಗ್ಗೆ ‘ಗೀತಾ’ (Geetha Serial) ಸೀರಿಯಲ್ ಜೋಡಿ ಪ್ರತಿಕ್ರಿಯೆ ನೀಡಿದೆ. ನಾವಿಬ್ಬರೂ ಲವ್ ಮಾಡ್ತಿದ್ದೀವಿ. ಮದುವೆಯಾಗಿ ಈಗಾಗಲೇ ಮಕ್ಕಳಾಗಿದೆ. ಮಕ್ಕಳ ನಾಮಕರಣ ಮಾಡಿದ್ದೀವಿ. ಧರ್ಮಸ್ಥಳಕ್ಕೆ ಓಡಿ ಹೋಗಿ ಮದುವೆ ಆಗಿದ್ದೀವಿ ಅಂತಾ ಕೇಳಿದ್ದೀವಿ. ನಾವು ಕೇಳಿರುವ ಕೆಟ್ಟ ಗಾಸಿಪ್ನಲ್ಲಿ ಇದೊಂದು ಎಂದಿದ್ದಾರೆ.
ನಿಮ್ಮ ಮಗಳಿಗೆ ಮದುವೆ ಆಗಿದೆಯಂತೆ ಎಂದು ಕೆಲವರು ನಮ್ಮ ತಾಯಿಗೆ ಕರೆ ಮಾಡಿ ಕೇಳಿದ್ದರು. ನಮ್ಮಿಬ್ಬರ ಮನೆಯಲ್ಲೂ ನಮ್ಮ ಸ್ನೇಹಕ್ಕೆ ಬೆಂಬಲ ಇದೆ. ನಿಮಗೆ ನಿಮ್ಮ ಫ್ರೆಂಡ್ಶಿಪ್ ಬಗ್ಗೆ ನಂಬಿಕೆ ಇದ್ಯಾ? ಸಾಕು ಎಲ್ಲರನ್ನೂ ಮೆಚ್ಚಿಸುವ ಅವಶ್ಯಕತೆಯಿಲ್ಲ. ನಿಮಗೆ ನೀವು ಏನು ಅಂತಾ ಗೊತ್ತಿದ್ರೆ ಸಾಕು ಎಂದು ನಮ್ಮಿಬ್ಬರ ಕುಟುಂಬ ನಮಗೆ ಸಾಥ್ ನೀಡಿದ್ರು ಎಂದು ‘ಗೀತಾ’ ನಟಿ ಭವ್ಯಾ (Bhavya Gowda) ಮಾತನಾಡಿದರು. ಇದನ್ನೂ ಓದಿ:ಕಪ್ಪು ಸೀರೆಯುಟ್ಟು ಮಿಂಚಿದ ನಟಿ ಸಮಂತಾ
ಇಲ್ಲದ ಈ ಕೆಟ್ಟ ಸುದ್ದಿ ವೈರಲ್ ಆದಾಗ, ಗೀತಾ ಸೀರಿಯಲ್ ಶುರುವಿನಲ್ಲಿ ವಿಜಯ್ ಜೊತೆ 8 ತಿಂಗಳು ಮಾತನಾಡೋದನ್ನೇ ಬಿಟ್ಟಿದ್ದೆ ಎಂದು ಭವ್ಯಾ ಹೇಳಿದರು. ನಮ್ಮ ಇಬ್ಬರಿಗೂ ವೈಯಕ್ತಿಕ ಬದುಕಿದೆ. ಈ ತರಹದ ಸುದ್ದಿ ನಮ್ಮ ಜೀವನಕ್ಕೂ ಹಾನಿ ಮಾಡುತ್ತೆ. ಕಡೆಗೆ ನಾವಿಬ್ಬರೂ ಕುಳಿತು ಮಾತನಾಡಿದ್ವಿ. ನಮ್ಮ ಇಬ್ಬರೂ ಲವ್ ಫಿಲಿಂಗ್ಸ್ ಇಲ್ಲ ಅಂದ ಮೇಲೆ ಬೇರೆ ಅವರಿಗೆ ಕ್ಲ್ಯಾರಿಟಿ ಕೊಡುವ ಅಗತ್ಯವಿಲ್ಲ ಎಂದು ಡಿಸೈಡ್ ಮಾಡಿ ಫ್ರೆಂಡ್ಶಿಪ್ ಮುಂದುವರೆಸಿದ್ವಿ. ನಾವಿಬ್ಬರೂ ಬೆಸ್ಟ್ ಫ್ರೆಂಡ್ಸ್ ಅಷ್ಟೇ ಎಂದು ನಟಿ ಭವ್ಯಾ- ಧನುಷ್ ಸ್ಪಷ್ಟನೆ ನೀಡಿದ್ದಾರೆ. ಈ ಮೂಲಕ ಲವ್ ಮತ್ತು ಮದುವೆ ಸುದ್ದಿಗೆ ಬ್ರೇಕ್ ಹಾಕಿದ್ದಾರೆ.
‘ನನ್ನರಸಿ ರಾಧೆ’ (Nanarasi Radhe) ಸೀರಿಯಲ್ ಮೂಲಕ ಅಭಿಮಾನಿಗಳಿಗೆ ಪರಿಚಿತರಾದ ನಟಿ ಸಹನಾ, ಹೀರೋ ಅಗಸ್ತ್ಯ ರಾಥೋಡ್ ಸಹೋದರಿಯಾಗಿ ನಟಿಸಿದ್ದರು. ಊರ್ವಿ ಪಾತ್ರದಲ್ಲಿ ನಟಿ ಬಣ್ಣ ಹಚ್ಚಿದ್ದರು.
ಗುರುಹಿರಿಯರು ನಿಶ್ಚಿಯಿಸಿದ ವರ ಪ್ರತಾಪ್ ಶೆಟ್ಟಿ ಜೊತೆ ಹೊಸ ಬಾಳಿಗೆ ಸಹನಾ ಶೆಟ್ಟಿ ಕಾಲಿಟ್ಟಿದ್ದಾರೆ. ಬೆಂಗಳೂರಿನ ಖಾಸಗಿ ರೆಸಾರ್ಟ್ವೊಂದರಲ್ಲಿ ಸಹನಾ- ಪ್ರತಾಪ್ ಸೋಮವಾರ (ಮೇ.8)ರಂದು ಮದುವೆಯಾಗಿದ್ದಾರೆ.
ಸಹನಾ ಶೆಟ್ಟಿ ಮದುವೆಗೆ, ‘ಗೀತಾ’ ಸೀರಿಯಲ್ ಜೋಡಿ ಭವ್ಯಾ ಗೌಡ- ಧನುಷ್ ಗೌಡ, ನಟಿ ಅಮೂಲ್ಯ, ಬಿಗ್ ಬಾಸ್ ಜಯಶ್ರೀ ಆರಾಧ್ಯ ಸೇರಿದಂತೆ ಹಲವರು ಭಾಗವಹಿಸಿ ನವಜೋಡಿಗೆ ಶುಭಕೋರಿದ್ದಾರೆ.
ಕಿರುತೆರೆಯ ಪ್ರತಿಭಾನ್ವಿತ ನಟಿ ಭವ್ಯಾ ಗೌಡ (Actress Bhavya Gowda) ಅವರು `ಗೀತಾ’ (Geetha Serial) ಸೀರಿಯಲ್ ಮೂಲಕ ಗಮನ ಸೆಳೆದಿದ್ದಾರೆ. ಇದೀಗ ಬಣ್ಣದ ಬದುಕಿಗೆ ಬರುವ ಮುನ್ನ ಮತ್ತು ಬಂದ ಮೇಲೆ ಎದುರಿಸಿದ ಸಂಕಷ್ಟಗಳ ಬಗ್ಗೆ ನಟಿ ಮಾತನಾಡಿದ್ದಾರೆ. ಅಮ್ಮನ ತ್ಯಾಗ ನೆನೆದು ನನ್ನಮ್ಮ ಸೂಪರ್ ಸ್ಟಾರ್ -2 ವೇದಿಕೆಯಲ್ಲಿ ಭವ್ಯಾ ಕಣ್ಣೀರಿಟ್ಟಿದ್ದಾರೆ.
ಭವ್ಯಾ ಗೌಡ ಅವರು ಇತ್ತೀಚಿಗೆ ನನ್ನಮ್ಮ ಸೂಪರ್ ಸ್ಟಾರ್-2 ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಹಲವು ವಿಚಾರಗಳ ಬಗ್ಗೆ ನಟಿ ಮಾತನಾಡಿದ್ದಾರೆ. ಈ ವೇಳೆ ಕೈ ಹಿಡಿಯಲಿರುವ ಹುಡುಗ ಹೇಗಿರಬೇಕು ಎಂದು ವೇದಿಕೆ ಮೇಲೆ ನಿರೂಪಕ ನಿರಂಜನ್ ದೇಶಪಾಂಡೆ ಕೇಳಿದ್ದಾರೆ. ಈಗಿನ ಕಾಲದ ಮಕ್ಕಳು ನಾವು ಇಷ್ಟ ಪಟ್ಟ ರೀತಿ ಏನೂ ಇಲ್ಲ ಅವರು ಆಯ್ಕೆ ಮಾಡುವುದನ್ನು ನಾವು ಒಪ್ಪಿಕೊಳ್ಳಬೇಕು ಖಂಡಿತ ಒಪ್ಪಿಕೊಳ್ಳುವೆ. ನಮ್ಮ ಮಗಳನ್ನು ಚೆನ್ನಾಗಿ ನೋಡಿಕೊಂಡರೆ ಸಾಕು ಎಂದು ಗೀತಾ ಅವರ ತಾಯಿ ಹೇಳಿದ್ದಾರೆ. ಅರೇಂಜ್ಡ್ ಮ್ಯಾರೇಜ್ ಆಗಬೇಕು ಅನ್ನೋ ಆಸೆ ತುಂಬಾ ಇದೆ ಎಂದು ಗೀತಾ ಹೇಳಿದ್ದಾರೆ.
ಪ್ರತಿಯೊಬ್ಬರ ಜೀವನದಲ್ಲೂ ಅವರ ತಾಯಿನೇ ಸೂಪರ್ ಸ್ಟಾರ್. ನನ್ನ ಲೈಫಲ್ಲಿ ಅಮ್ಮ ಯಾಕೆ ಸ್ಟಾರ್ ಅಂದ್ರೆ ಎಲ್ಲನೂ ತ್ಯಾಗ ಮಾಡಿದ್ದಾರೆ. ನಾವು ನಾಲ್ಕು ಜನ ಹೆಣ್ಣು ಮಕ್ಕಳು ಚಿಕ್ಕ ವಯಸ್ಸಿನಿಂದ ಕಷ್ಟ ನೋಡಿಕೊಂಡು ಬೆಳೆದಿದ್ದೇವೆ. ನಾವು ನಾಲ್ಕು ಜನರನ್ನು ಬೆಳೆಸುವಾಗ ಸಾಕಷ್ಟು ಅವಮಾನಗಳನ್ನು ಎದುರಿಸಿದ್ದಾರೆ. ನಿಮ್ಮ ಹೆಣ್ಣು ಮಕ್ಕಳು ಬೀದಿಗೆ ತರುತ್ತಾರೆ ಬಿಡು ಅಂತ ಮಾತನಾಡಿದ್ದಾರೆ. ಆ ನೋವನ್ನು ಬಚ್ಚಿಟ್ಟುಕೊಂಡು ಕಷ್ಟ ಪಟ್ಟು ಇಷ್ಟ ಪಟ್ಟು ಬೆಳೆಸಿದ್ದಾರೆ. ನಾನು ಸ್ಕ್ರೀನ್ ಮೇಲೆ ಬರಬೇಕು ಅನ್ನೋದು ನನ್ನ ತಾಯಿ ಆಸೆ ಆಗಿತ್ತು. ಸುಮ್ಮನೆ ಪ್ರಯತ್ನ ಪಟ್ಟೆ ಅವಕಾಶ ಸಿಗ್ತು. ಅವಕಾಶ ಸಿಕ್ಕಿದ ಮೇಲೆ ತುಂಬಾ ಅವಮಾನ ಎದುರಿಸಿದೆ. ದಿನ ಟ್ರೋಲ್ ಮಾಡುತ್ತಿದ್ದರು ಕೆಟ್ಟ ಕೆಟ್ಟ ಕಾಮೆಂಟ್ ಮಾಡುತ್ತಿದ್ದರು. ಆಗ ಅಮ್ಮ ಒಂದು ಮಾತು ಹೇಳಿದ್ದರು “ನೀನು ಏನೆಂದು ನಿನಗೆ ಗೊತ್ತು ನನಗೆ ನಿನ್ನ ಬಗ್ಗೆ ಗೊತ್ತು” ಎಂದು ಹೇಳಿ ಧೈರ್ಯ ತುಂಬಿದರು. ನನ್ನ ತಾಯಿ (Mother) ಆಶೀರ್ವಾದದಿಂದ (Blessings) ಇಷ್ಟು ನಟನೆಯಲ್ಲಿ ಬೆಳೆಯಲು ಸಾಧ್ಯವಾಯಿತು ಎಂದು ಗೀತಾ ನಟಿ ಭವ್ಯಾ ಮಾತನಾಡಿದ್ದಾರೆ. ಇದನ್ನೂ ಓದಿ: ಅಯ್ಯಂಗಾರ್ ಸಂಪ್ರದಾಯದಂತೆ ನಿರ್ದೇಶಕ ಎಸ್.ಕೆ ಭಗವಾನ್ ಅಂತ್ಯಕ್ರಿಯೆ
ಅಮ್ಮ ಮೊದಲು ನಿನಗೆ ಕ್ಷಮೆ ಕೇಳುವೆ. ಶೂಟಿಂಗ್ ಕೆಲಸ ಪ್ರೆಶರ್ ಕೋಪ ಎಲ್ಲವೂ ನಿನ್ನ ಮೇಲೆ ತೋರಿಸಿರುವೆ. ದಿನ ಬೆಳಗ್ಗೆ 4 ಗಂಟೆಗೆ ಎದ್ದು ಬಾಕ್ಸ್ ಪ್ಯಾಕ್ ಮಾಡುವೆ. ನೀನು ನನ್ನ ಮೇಲೆ ತುಂಬಾ ಪ್ರೀತಿ ತೋರಿಸುವೆ ನಾನು ತುಂಬಾ ಕಿರಿಕಿರಿ ಮಾಡಿದ್ದರೂ ಅದೇ ಪ್ರೀತಿ ನನಗೆ ಕೊಡುತ್ತಿರುವೆ. ನಿನ್ನ ಜೊತೆ ಸಮಯ ಕಳೆಯಲು ಆಗುತ್ತಿಲ್ಲ ಸಮಯ ಕೊಡುವೆ. ಹೈದರಾಬಾದ್ಗೆ ಹೋದಾಗ ಹುಷಾರಿಯಿಲ್ಲ ಅನ್ನೋ ವಿಚಾರ ನಿನ್ನಿಂದ ಮುಚ್ಚಿಟಾಗ ನೀನು ಫೋನ್ ಮಾಡಿ ಅತ್ತಿರುವೆ. ಇದಕ್ಕೆಲ್ಲಾ ಕ್ಷಮೆ ಕೇಳುವೆ. ನನ್ನ ಇರಿಟೇಷನ್ ನಾನೇ ಅನುಭವಿಸುವೆ ಇನ್ಮುಂದೆ ನಿನ್ನ ಮೇಲೆ ತೋರಿಸುವುದಿಲ್ಲ ಎಂದು ಭವ್ಯಾ ಮಾತನಾಡಿದ್ದಾರೆ.
LIVE TV
[brid partner=56869869 player=32851 video=960834 autoplay=true]