Tag: Bhovi community

  • ಭೋವಿ ನಿಗಮದಲ್ಲಿ 60% ಕಮಿಷನ್‌, ಅಧ್ಯಕ್ಷರಿಂದಲೇ ಬೇಡಿಕೆ – ವಿಡಿಯೋ ರಿಲೀಸ್‌

    ಭೋವಿ ನಿಗಮದಲ್ಲಿ 60% ಕಮಿಷನ್‌, ಅಧ್ಯಕ್ಷರಿಂದಲೇ ಬೇಡಿಕೆ – ವಿಡಿಯೋ ರಿಲೀಸ್‌

    – ಭೋವಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವೆಂಕಟೇಶ್ ಗಂಭೀರ ಆರೋಪ
    – ರವಿಕುಮಾರ್‌ ವಜಾಗೊಳಿಸಿ, ಬಂಧಿಸುವಂತೆ ಆಗ್ರಹ

    ಬೆಂಗಳೂರು: ಸರ್ಕಾರದ ಕಚೇರಿಯಲ್ಲಿಯೇ ಡೀಲ್‌ ನಡೆಯುತ್ತಿದ್ದು, ಈ ಕಾಂಗ್ರೆಸ್‌ ಸರ್ಕಾರದಲ್ಲಿ 60% ಕಮಿಷನ್‌ ಕೇಳಲಾಗುತ್ತಿದೆ ಎಂದು ಭೋವಿ ಸಮಾಜದ (Bhovi Community) ರಾಷ್ಟ್ರೀಯ ಅಧ್ಯಕ್ಷ ವೆಂಕಟೇಶ್ ಸ್ಫೋಟಕ ಆರೋಪ ಮಾಡಿದ್ದಾರೆ.

    ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ 40% ಕಮಿಷನ್ ಎಂದು ಕಾಂಗ್ರೆಸ್‌ ಆರೋಪ ಮಾಡಿತ್ತು. ಆದರೆ ಇವರ ಅವಧಿಯಲ್ಲಿ 60% ಕಮಿಷನ್‌ ಕೇಳಲಾಗುತ್ತಿದೆ. ಭೋವಿ ಸಮಾಜದಲ್ಲಿ ನಿರಂತರವಾಗಿ ಅಕ್ರಮ ನಡೆಯುತ್ತಿದೆ ಎಂದು ದೂರಿದರು.

    ಸಿದ್ದರಾಮಯ್ಯ (Siddaramaiah) 65 ಕೋಟಿ ರೂ.ಗಳನ್ನು ಭೋವಿ ಸಮಾಜಕ್ಕೆ ಘೋಷಣೆ ಮಾಡಿದ್ದಾರೆ. ಆದರೆ ಬಿಡುಗಡೆಯಾಗಿದ್ದು ಕೇವಲ 13 ಕೋಟಿ ರೂ. ಕಾಂಗ್ರೆಸ್ ಕಾರ್ಯಕರ್ತ ರವಿಕುಮಾರ್‌ (Ravikumar) ಅವರನ್ನು ನಿಗಮದ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಇವರು ಭೋವಿ ಸಮಾಜದ ಅಭಿವೃದ್ಧಿಗಾಗಿ ಸರ್ಕಾರದ ಮಟ್ಟದಲ್ಲಿ ಕೆಲಸ ಮಾಡಬೇಕಾಗಿತ್ತು. ಆದರೆ ನಿಗಮದ ಅಧ್ಯಕ್ಷರೇ ಬ್ರೋಕರ್ ಜೊತೆಗೆ 60% ಕಮಿಷನ್‌ಗೆ ಬೇಡಿಕೆ ಇಟ್ಟಿರುವ ವಿಡಿಯೋ ಸಿಕ್ಕಿದೆ ಎಂದರು.

    ಸಚಿವ ರಾಜಣ್ಣನ ಮಾದರಿಯಲ್ಲಿಯೇ ಈ ಅಧ್ಯಕ್ಷನನ್ನು ವಜಾ ಮಾಡಿ ಬಂಧಿಸಬೇಕು. ರವಿಕುಮಾರ್ ಅವಧಿಯಲ್ಲಿನ ಹಗರಣದ ತನಿಖೆ ನಡೆಯಬೇಕು. ಆತನ ಮನೆಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಭದ್ರಾವತಿಯಲ್ಲಿ ಮನೆಗಳ್ಳತನ ಬೆಂಗಳೂರಿನ ಮಹಿಳೆ ಸೇರಿ ಇಬ್ಬರು ಅರೆಸ್ಟ್

     

    ಫಲಾನುಭವಿಗಳಿಗೆ ನಿಗಮದಲ್ಲಿ 10 ಲಕ್ಷ ರೂ. ಸಾಲ ಸಿಗುತ್ತದೆ. ಆದರೆ ಇದರಲ್ಲಿ ಅಧಿಕಾರಿಗಳು ಕಮೀಷನ್ ತಿಂದು ಫಲಾನುಭವಿಗಳಿಗೆ ಕೊಡೋದು ಕೇವಲ 25 ಸಾವಿರ ರೂ. ಅಷ್ಟೇ. ಈ ವಿಡಿಯೋದಲ್ಲಿ ರವಿಕುಮಾರ್ ಬಂಜಾರದಲ್ಲಿ ಕೋಟಿ ಕೋಟಿ ಡೀಲ್ ನಡೆಯುತ್ತಿದೆ ಎನ್ನುತ್ತಿದ್ದಾರೆ. ಬಿಹಾರ ಚುನಾವಣೆ ಕಲೆಕ್ಷನ್‌ಗ ಈ ಡೀಲ್‌ ನಡೆಯುತ್ತಿದ್ಯಾ? ನಾನು ಅಹಿಂದ ನಾಯಕ ಎಂದು ಸಿಎಂ ಹೇಳುತ್ತಿದ್ದಾರೆ. ಹಾಗಿದ್ದಾರೆ ಇಂದೇ ರವವಿಕುಮಾರ್‌ ರಾಜೀನಾಮೆ ಪಡೆಯಲಿ ಎಂದು ಹೇಳಿದರು.

    ಭೋವಿ ನಿಗಮದಲ್ಲಿ ನೇರ ಸಾಲ ಸೌಲಭ್ಯ ಯೋಜನೆ ಇದ್ದು ಭೂಮಿ ಖರೀದಿಗೆ ಫಲಾನುಭವಿಗಳಿಗೆ 20 ಲಕ್ಷ ರೂ. ನೀಡಲಾಗುತ್ತದೆ. ಯೋಜನೆಯಲ್ಲಿ ಬ್ರೋಕರ್ ಜೊತೆ ಹತ್ತು ಲಕ್ಷ ರೂ. ದುಡ್ಡು ತೆಗೆದುಕೊಂಡು ಮತ್ತೆ ಹತ್ತು ಲಕ್ಷ ರೂ. ಕೊಡುತ್ತೇವೆ ಎಂದು ಹೇಳುತ್ತಾರೆ. ಚುನಾವಣೆ ಹತ್ತಿರ ಬಂದಾಗ ಈ ನಿಗಮಗಳನ್ನು ಮುಂದಿಟ್ಟು 60% ಕಮೀಷನ್ ಸರ್ಕಾರ ತೆಗೆದುಕೊಳ್ಳುತ್ತಿದೆ ಅಂತಾ ಅನಿಸುತ್ತದೆ ಎಂದರು. ಇದನ್ನೂ ಓದಿ: ಅನೈತಿಕ ಸಂಬಂಧ ಶಂಕೆ ಪೆಟ್ರೋಲ್ ಸುರಿದು 26ರ ಲಿವ್ ಇನ್ ಗೆಳತಿಯ ಹತ್ಯೆಗೈದ 52ರ ವ್ಯಕ್ತಿ

    ರವಿಕುಮಾರ್‌ ಸಮಾಜ ಕಲ್ಯಾಣ ಇಲಾಖೆ ನೇರ ಸಂಬಂಧವಿದೆ. ವಿಡಿಯೋದಲ್ಲಿ ಮೇಲೆನೂ ಹಂಚಬೇಕು ಅಂದಿದ್ದಾರೆ. ಇದಕ್ಕೆ ಸಮಾಜ ಕಲ್ಯಾಣ ಇಲಾಖೆ ಸಚಿವರೇ ಉತ್ತರ ಕೊಡಬೇಕು. ಮಂತ್ರಿಗಳಿಗೆ ಕೊಡಬೇಕು ಅಂತಾ ವಿಡಿಯೋದಲ್ಲಿ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರನ್ನು ನೇರವಾಗಿ ಭೇಟಿ ಮಾಡಿ ದೂರು ನೀಡುತ್ತೇವೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ಕೊಡುತ್ತೇವೆ. ಒಂದು ವೇಳೆ ರವಿಕುಮಾರ್‌ ವಜಾಗೊಳಿಸದೇ ಇದ್ದರೆ ಸಿಎಂ , ಮಹದೇವಪ್ಪ, ಎಲ್ಲೇ ಹೋದರೂ ನಾವು ಘೇರಾವು ಹಾಕುತ್ತೇವೆ ಎಂದು ತಿಳಿಸಿದರು.

    ಬಿಜೆಪಿ ಅವಧಿಯಲ್ಲಿಯೂ ಅಕ್ರಮ ನಡೆದಿತ್ತು. ಬೊಮ್ಮಾಯಿ ಅವಧಿಯಲ್ಲಿ ಲೋಕಾಯುಕ್ತ ಎಸಿಬಿಯಲ್ಲಿಯೂ ಅಧಿಕಾರಿಗಳು ಸಿಕ್ಕಿಹಾಕಿಕೊಂಡಿದ್ದರು. ಆದರೆ 85 ಕೋಟಿ ಹಗರಣದ ವಿಚಾರಣೆ ಇನ್ನೂ ಮುಗಿದಿಲ್ಲ.  ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ತನಿಖೆ ನಡೆಯುತ್ತಿದ್ದರೂ ಭಯವಿಲ್ಲದೇ ಈ ಡೀಲ್ ನಡೆಯುತ್ತಿದೆ ಅಂದರೆ ನಿಜಕ್ಕೂ ಶಾಕ್ ಆಗುತ್ತಿದೆ. ತೆಲಂಗಾಣದ ಚುನಾವಣಾ ಅವಧಿಯಲ್ಲಿ ವಾಲ್ಮೀಖಿ ಹಗರಣ ಆಯ್ತು. ಭೋವಿ ನಿಗಮದ ತನಿಖೆ ಯಾಕೆ ವಿಳಂಬವಾಗುತ್ತಿದೆ ಎಂದು ಪ್ರಶ್ನಿಸಿದರು.

  • ರಾಜ್ಯ ಭೋವಿ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರ ನೇಮಕಕ್ಕೆ ಆಗ್ರಹ

    ರಾಜ್ಯ ಭೋವಿ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರ ನೇಮಕಕ್ಕೆ ಆಗ್ರಹ

    ನವದೆಹಲಿ: ರಾಜ್ಯ ಭೋವಿ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರ ನೇಮಕ ಮಾಡುವಂತೆ ಆಗ್ರಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ನೀಡಿದೆ. ಅಖಿಲ ಭಾರತೀಯ ಭೋವಿ ಸಮಾಜ ಅಧ್ಯಕ್ಷ ಡಾ. ವೆಂಕಟೇಶ್ ಮೌರ್ಯ ನೇತೃತ್ವದಲ್ಲಿ ದೆಹಲಿಯ ಕರ್ನಾಟಕ ಭವನದಲ್ಲಿ ಮನವಿ ಪತ್ರ ನೀಡಲಾಯಿತು.

    ಮುಖ್ಯಮಂತ್ರಿ ಬಸವರಾಜ ಪರವಾಗಿ ಅವರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಮನವಿ ಸ್ವೀಕರಿಸಿದರು. ಕೂಡಲೇ ಈ ಬಗ್ಗೆ ಸಿಎಂ ಜೊತೆಗೆ ಚರ್ಚಿಸಿ ಅಧ್ಯಕ್ಷರ ನೇಮಕ ಮಾಡುವ ಭರವಸೆ ನೀಡಿದ್ದಾರೆ. ಮನವಿ ನೀಡಿದ ಬಳಿಕ ಮಾತನಾಡಿದ ಭಾರತೀಯ ಭೋವಿ ಸಮಾಜ ಅಧ್ಯಕ್ಷ ಡಾ. ವೆಂಕಟೇಶ್ ಮೌರ್ಯ, ಕಳೆದ ನಾಲ್ಕು ವರ್ಷಗಳಿಂದ ಭೋವಿ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರ ನೇಮಕ ಆಗಿಲ್ಲ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಕಡೆಯದಾಗಿ ಸೀತರಾಮ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿತ್ತು. ಇದನ್ನೂ ಓದಿ: ಪೊಲೀಸ್ ಠಾಣೆಗಳು ಬಿಜೆಪಿ ಸರ್ಕಾರದ ಸೆಟ್ಲ್ಮೇಂಟ್ ಕೇಂದ್ರಗಳಾಗಿವೆ: ಈಶ್ವರ್ ಖಂಡ್ರೆ

    ಬಳಿಕ ಕಾಂಗ್ರೆಸ್ ಜೆಡಿ ಎಸ್ ಮೈತ್ರಿ ಸರ್ಕಾರದ ಅವಧಿಯಲ್ಲೂ ಅಧ್ಯಕ್ಷರ ನೇಮಕವಾಗಿಲ್ಲ ಇದರಿಂದಾಗಿ ನಿಗಮದಲ್ಲಿ ಅಧಿಕಾರಿಗಳೇ ಸುಪ್ರೀಂ ಆಗಿದ್ದು ಕೋಟ್ಯಾಂತರ ರೂಪಾಯಿ ಅಕ್ರಮ ನಡೆದಿದೆ. ಈ ಸಂಬಂಧ ಹಿಂದೆ ತನಿಖೆ ನಡೆಸಿದ್ದ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅಧಿಕಾರಿಗಳನ್ನು ಅಮಾನತು ಮಾಡಿದ್ದರು. ಇದನ್ನೂ ಓದಿ:  ದಾವಣಗೆರೆಗೆ ಹಿಜಬ್ ವಿವಾದ ಎಂಟ್ರಿ – ಕೇಸರಿ ಶಾಲಿನೊಂದಿಗೆ ವಿದ್ಯಾರ್ಥಿಗಳು ಹಾಜರ್

    ಈಗ ಅಮಾನತು ಆದೇಶಕ್ಕೆ ಕೋರ್ಟ್ ಆದೇಶಕ್ಕೆ ತಡೆ ತಂದಿರುವ ಅಧಿಕಾರಿಗಳು ಮತ್ತದೇ ಸ್ಥಾನದಲ್ಲಿ ಮುಂದುವರಿದ್ದು ಮತ್ತಷ್ಟು ಅಕ್ರಮಕ್ಕೆ ಎಡೆಮಾಡಿಕೊಟ್ಟಾಗಿದೆ ಎಂದು ಆರೋಪಿಸಿದರು. ಈ ಹಿನ್ನಲೆ ನಿಯಮಕ್ಕೆ ಅಧ್ಯಕ್ಷರ ನೇಮಕ ಮಾಡುವ ಮೂಲಕ ಸರ್ಕಾರದ ಯೋಜನೆಗಳನ್ನು ಸೂಕ್ತ ಫಲಾನುಭವಿಗಳಿಗೆ ತಲುಪಲು ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.

  • ಮಹಾರಾಷ್ಟ್ರ ಮಾದರಿಯಲ್ಲಿ ಭೋವಿ ಸಮಾಜದವರಿಗೆ ಮಾತ್ರ ಕಲ್ಲು ಗಣಿಗಾರಿಕೆಗೆ ಅವಕಾಶ ನೀಡಿ: ಬಸವರಾಜು ಆಗ್ರಹ

    ಮಹಾರಾಷ್ಟ್ರ ಮಾದರಿಯಲ್ಲಿ ಭೋವಿ ಸಮಾಜದವರಿಗೆ ಮಾತ್ರ ಕಲ್ಲು ಗಣಿಗಾರಿಕೆಗೆ ಅವಕಾಶ ನೀಡಿ: ಬಸವರಾಜು ಆಗ್ರಹ

    ಬೆಂಗಳೂರು: ರಾಜ್ಯದ ಕಲ್ಲು ಗಣಿಗಾರಿಕೆ ಕೇಂದ್ರಗಳನ್ನು ಬಂಡವಾಳಶಾಹಿಗಳಿಗೆ ನೀಡುವ ಮೂಲಕ, ಇದನ್ನೇ ಕುಲ ಕಸುಬಾಗಿ ಮಾಡಿಕೊಂಡಿರುವ ಭೋವಿ ಸಮಾಜದವರ ಮೇಲೆ ಆರ್ಥಿಕವಾಗಿ ಅತ್ಯಾಚಾರ ಮಾಡಲಾಗುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿಯ ಮುಖಂಡ, ವಿರಾಜಪೇಟೆಯ ಮಾಜಿ ಶಾಸಕರಾದ ಎಚ್.ಡಿ.ಬಸವರಾಜುರವರು ಆಕ್ರೋಶ ವ್ಯಕ್ತಪಡಿಸಿದರು.

    ಬೆಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಬಸವರಾಜುರವರು, ಅನೇಕ ಶತಮಾನಗಳಿಂದಲೂ ಭೋವಿ ಸಮಾಜದವರು ಕಲ್ಲು ಗಣಿಗಾರಿಕೆಯಲ್ಲಿ ಪ್ರಾಮಾಣಿಕವಾಗಿ ತೊಡಗಿಕೊಂಡಿದ್ದಾರೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಬಂಡವಾಳಶಾಹಿಗಳು, ಶಾಸಕರಿಗೆ, ರಾಜಕೀಯ ಬಲಾಢ್ಯರಿಗೆ ಮಾತ್ರ ಕ್ರಷರ್ ಯೂನಿಟ್‍ಗಳನ್ನು ನೀಡುವ ಮೂಲಕ ಭೋವಿ ಸಮಾಜದವರ ಉದ್ಯೋಗವನ್ನು ಕಿತ್ತುಕೊಳ್ಳಲಾಗುತ್ತಿದೆ. ರಾಜ್ಯದ ಯಾವ ಶಾಸಕರು ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿಲ್ಲ ಎಂದು ಹುಡುಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಬಂಡವಾಳಶಾಹಿಗಳಿಗೆ ನಾಡಿನ ಸಂಪನ್ಮೂಲದ ಮೇಲೆ ಯಾವುದೇ ರೀತಿಯ ಭಾವನಾತ್ಮಕ ಸಂಬಂಧ ಇರುವುದಿಲ್ಲ. ಕೇವಲ ದುಡ್ಡು ಮಾಡುವ ಉದ್ದೇಶ ಹೊಂದಿರುವ ಅವರು ರಾಜ್ಯದ ಸಂಪನ್ಮೂಲವನ್ನು ಸಾಧ್ಯವಾದಷ್ಟು ಲೂಟಿ ಮಾಡುತ್ತಿದ್ದಾರೆ. ಇದಕ್ಕಾಗಿ ಎಲ್ಲ ರೀತಿಯ ಅಕ್ರಮವನ್ನು ಬಂಡವಾಳಶಾಹಿಗಳು ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

    ಮಹಾರಾಷ್ಟ್ರದಲ್ಲಿ ಕಲ್ಲು ಗಣಿಗಾರಿಕೆಯನ್ನು ಭೋವಿ ಸಮಾಜದವರಿಗೆ ಮೀಸಲಿರಿಸಲಾಗಿದೆ. ರಾಜ್ಯದಲ್ಲೂ ಗಣಿ ಮತ್ತು ಭೂವಿಜ್ಞಾನ ಕಾಯಿದೆಗೆ ತಿದ್ದುಪಡಿ ತಂದು ಭೋವಿ ಸಮಾಜದವರಿಗೆ ಮಾತ್ರ ಅನುಮತಿಯನ್ನು ನೀಡಬೇಕು. ಕ್ರಷರ್ ಯೂನಿಟ್‍ಗಳನ್ನು ಆರಂಭಿಸಲು ಭೋವಿ ಸಮಾಜದವರಿಗೆ ಅತ್ಯಾಧುನಿಕ ಉಪಕರಣಗಳನ್ನು ಕೊಳ್ಳಲು ಆರ್ಥಿಕ ನೆರವು ನೀಡುವ ಯೋಜನೆಯನ್ನು ಆರಂಭಿಸಬೇಕು. ಇದರಿಂದ ಅವರಿಗೆ ಉದ್ಯೋಗ ಭದ್ರತೆ ಕಲ್ಪಿಸಿದಂತೆಯೂ ಆಗುತ್ತದೆ, ಬಂಡವಾಳಶಾಹಿಗಳ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಿದಂತೆಯೂ ಆಗುತ್ತದೆ. ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಭೋವಿ ಸಮಾಜದ ಮೇಲೆ ಕಿಂಚಿತ್ತಾದರೂ ಕಾಳಜಿಯಿದ್ದರೆ ಕಾಯಿದೆಗೆ ತಿದ್ದುಪಡಿ ತರಲಿ ಎಂದು ಬಸವರಾಜುರವರು ಸವಾಲು ಹಾಕಿದರು. ಇದನ್ನೂ ಓದಿ : SSLC ವಿದ್ಯಾರ್ಥಿಗಳಿಗೆ ಗುಡ್‍ನ್ಯೂಸ್ – ಪರೀಕ್ಷಾ ದಿನಗಳಂದು ಉಚಿತ ಪ್ರಯಾಣಕ್ಕೆ KSRTC, BMTC ಅನುಮತಿ

    ಎಎಪಿ ರಾಜ್ಯ ಮಾಧ್ಯಮ ಸಂಚಾಲಕರಾದ ಜಗದೀಶ್ ಸದಂ ರವರು ಮಾತನಾಡಿ, ಕರ್ನಾಟಕದವರು ಮಾತ್ರವಲ್ಲದೇ ತಮಿಳುನಾಡು, ಆಂಧ್ರಪ್ರದೇಶದ ಭೋವಿ ಸಮಾಜದ ಅನೇಕರು ಕೂಡ ರಾಜ್ಯದ ಗಣಿಗಾರಿಕೆ ಪ್ರದೇಶದಲ್ಲಿ ಸರಿಯಾದ ವೇತನವಿಲ್ಲದೇ ಕೆಲಸ ಮಾಡುತ್ತಿದ್ದಾರೆ. ಸಮರ್ಪಕ ರಕ್ಷಣಾ ಸೌಲಭ್ಯಗಳಿಲ್ಲದೇ ಅನೇಕರು ಕೆಲಸ ಮಾಡುತ್ತಿರುವಾಗಲೇ ಮೃತಪಟ್ಟಿದ್ದಾರೆ. ಅವರ ಈ ಸಮಸ್ಯೆಗಳನ್ನು ಬಗೆಹರಿಸಿ, ನ್ಯಾಯ ಕೊಡಿಸುವುದರಲ್ಲಿ ರಾಜ್ಯದ ಕಾರ್ಮಿಕ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಹೇಳಿದರು.

    ಊಹೆಗೂ ನಿಲುಕದಷ್ಟು ದೊಡ್ಡ ಪ್ರಮಾಣದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಬೇಬಿ ಬೆಟ್ಟದಲ್ಲಿ ವರ್ಷಕ್ಕೆ ಗರಿಷ್ಠ 25,000 ಮೆಟ್ರಿಕ್ ಟನ್ ಕಲ್ಲು ತೆಗೆಯಲು ಮಾತ್ರ ಪರಿಸರ ಅನುಮೋದನಾ ಸಮಿತಿ ಅನುಮತಿ ನೀಡಿದೆ. ಆದರೆ 2017ರಿಂದ ಪ್ರತಿವರ್ಷ ಲಕ್ಷಾಂತರ ಮೆಟ್ರಿಕ್ ಕಲ್ಲನ್ನು ತೆಗೆಲಾಗುತ್ತಿದೆ. ಇಲಾಖೆಯ ಇತ್ತೀಚಿನ ಮಾಹಿತಿ ಪ್ರಕಾರ ಬೇಬಿ ಬೆಟ್ಟವೊಂದರಲ್ಲೇ 280 ಕೋಟಿ ರೂ. ಹಾಗೂ ಮಂಡ್ಯ ಜಿಲ್ಲೆಯಲ್ಲಿ 320ಕೋಟಿ ರೂ. ದಂಡ ಹಾಕಲಾಗಿದೆ. ರಾಜ್ಯಾದ್ಯಂತ ದಂಡದ ಮೊತ್ತವು ಸಾವಿರಾರು ಕೋಟಿಯಷ್ಟಿದೆ. ದಂಡವನ್ನು ವಸೂಲಿ ಮಾಡಲು ಸರ್ಕಾರ ಹಾಗೂ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂದು ಜಗದೀಶ್ ಸದಂ ಬೇಸರ ವ್ಯಕ್ತಪಡಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರು ಮುಖಂಡರಾದ ಪ್ರಕಾಶ್ ನಾಗರಾಜ್, ಉಷಾ ಮೋಹನ್, ಜ್ಯೋತಿಷ್ ಕುಮಾರ್ ಇನ್ನಿತರರು ಭಾಗವಹಿಸಿದ್ದರು.

  • ಸಿದ್ದರಾಮೇಶ್ವರ ಜಯಂತಿಗೆ ಜನಪ್ರತಿನಿಧಿಗಳು ಗೈರು – ಕಾರ್ಯಕ್ರಮ ಬಹಿಷ್ಕರಿಸಿ ಪ್ರತಿಭಟನೆ

    ಸಿದ್ದರಾಮೇಶ್ವರ ಜಯಂತಿಗೆ ಜನಪ್ರತಿನಿಧಿಗಳು ಗೈರು – ಕಾರ್ಯಕ್ರಮ ಬಹಿಷ್ಕರಿಸಿ ಪ್ರತಿಭಟನೆ

    – ಕೂಲಿ ಕೆಲಸ ಬಿಟ್ಟು ಬಂದಿದ್ದೇವೆ, ಜನಪ್ರತಿನಿಧಿಗಳು ಬಂದಿಲ್ಲ
    – ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಆಕ್ರೋಶ

    ಮಡಿಕೇರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸಲಾಗಿದ್ದ ಸಿದ್ದರಾಮೇಶ್ವರ ಜಯಂತಿಗೆ ಜಿಲ್ಲೆಯ ಯಾವುದೇ ಜನಪ್ರತಿನಿಧಿ ಹಾಜರಾಗದ ಹಿನ್ನೆಲೆ ಭೋವಿ ಜನಾಂಗದ ಜನರು ಕಾರ್ಯಕ್ರಮ ಬಹಿಷ್ಕರಿಸಿ, ಊಟ ಮಾಡದೆ ಹೊರನಡೆದ ಘಟನೆ ಮಡಿಕೇರಿಯಲ್ಲಿ ನಡೆದಿದೆ

    ಮಡಿಕೇರಿಯ ದೇವರಾಜ ಅರಸು ಭವನದಲ್ಲಿ ಇಂದು ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮಕ್ಕೆ ಸಂಸದ ಪ್ರತಾಪ್ ಸಿಂಹ, ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್, ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ ಮತ್ತು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಹರೀಶ್ ಅವರನ್ನು ಆಹ್ವಾನಿಸಲಾಗಿತ್ತು.

    ಈ ಕಾರ್ಯಕ್ರಮಕ್ಕೆ ಭೋವಿ ಜನಾಂಗದ ಮುಖಂಡರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಮತ್ತು ಕಾರ್ಯಕ್ರಮದ ಭಾಷಣಕಾರರು ಹಾಜರಾಗಿದ್ದು ಬಿಟ್ಟರೆ, ಜನಪ್ರತಿನಿಧಿಯಾಗಿ ಒಬ್ಬರೂ ಭಾಗವಹಿಸಿರಲಿಲ್ಲ. ಹೀಗಾಗಿ ಕಾರ್ಯಕ್ರಮಕ್ಕೆ ಬಂದಿದ್ದ ಭೋವಿ ಜನಾಂಗದ ಜನರು ಕಾರ್ಯಕ್ರಮವನ್ನು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಾವು ಕೂಲಿ ಕೆಲಸ ಬಿಟ್ಟು ಕಾರ್ಯಕ್ರಮಕ್ಕೆ ಬಂದಿದ್ದೇವೆ. ಆದರೆ ಜನಪ್ರತಿನಿಧಿಗಳು ಭಾಗವಹಿಸದೆ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

  • ಭೋವಿ ಸಮುದಾಯಕ್ಕೆ ಟಿಕೆಟ್ ನೀಡಿಲ್ಲ ಅಂದ್ರೆ ರಾಜೀನಾಮೆ: ಬಿಜೆಪಿ ಶಾಸಕರಿಂದ ಎಚ್ಚರಿಕೆ

    ಭೋವಿ ಸಮುದಾಯಕ್ಕೆ ಟಿಕೆಟ್ ನೀಡಿಲ್ಲ ಅಂದ್ರೆ ರಾಜೀನಾಮೆ: ಬಿಜೆಪಿ ಶಾಸಕರಿಂದ ಎಚ್ಚರಿಕೆ

    ಬೆಂಗಳೂರು: ಭೋವಿ ಸಮುದಾಯಕ್ಕೆ ಟಿಕೆಟ್ ನೀಡಿಲ್ಲ ಅಂದ್ರೆ ಪಕ್ಷಕ್ಕೆ ರಾಜೀನಾಮೆ ನೀಡುತ್ತೇವೆ ಎಂದು ಬಿಜೆಪಿಯ ಇಬ್ಬರು ಶಾಸಕರು ಎಚ್ಚರಿಕೆ ನೀಡಿದ್ದಾರೆ.

    ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಭೋವಿ ಸಮುದಾಯದ ಅಭ್ಯರ್ಥಿಗೆ ಅವಕಾಶ ನೀಡಬೇಕು ಎಂದು ಜಿಲ್ಲೆಯ ಶಾಸಕರಾದ ಎಂ.ಚಂದ್ರಪ್ಪ ಹಾಗೂ ಗೂಳಿಹಟ್ಟಿ ಶೇಖರ್ ಒತ್ತಡ ಹೇರಿದ್ದಾರೆ. ಒಂದು ವೇಳೆ ನಮ್ಮ ಸಮುದಾಯಕ್ಕೆ ಟಿಕೆಟ್ ನೀಡದಿದ್ದರೆ ಪಕ್ಷಕ್ಕೆ ರಾಜೀನಾಮೆ ನೀಡುತ್ತೇವೆ ಎಂದು ನಾಯಕರಿಗೆ ಖಡಕ್ ಸಂದೇಶ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

    ಚಿತ್ರದುರ್ಗ ಲೋಕಸಭಾ ಕ್ಷೇತ್ರವು ಪರಿಶಿಷ್ಟ ಜಾತಿಗೆ ಮೀಸಲಾಗಿದೆ. ಹೀಗಾಗಿ ಈ ಕ್ಷೇತ್ರದಿಂದ ಭೋವಿ ಸಮುದಾಯದ ನಾಯಕ ಆನೇಕಲ್ ನಾರಾಯಾಣಸ್ವಾಮಿ ಅವರ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ. ಆದರೆ ಸಮುದಾಯದ ಯಾರಿಗೆ ಟಿಕೆಟ್ ನೀಡಿದರೂ ನಮಗೆ ಒಪ್ಪಿಗೆ ಇದೆ ಎಂದು ಶಾಸಕರು ಅಭ್ಯರ್ಥಿಯ ಹೆಸರು ಪ್ರಸ್ತಾಪಿಸದೆ ಬೇಡಿಕೆ ಇಟ್ಟಿದ್ದಾರಂತೆ.

    ಚಿತ್ರದುರ್ಗದಲ್ಲಿ ಇತ್ತೀಚೆಗೆ ಭೋವಿ ಸಮಾವೇಶ ನಡೆಸಿ ರಾಜ್ಯದಲ್ಲಿ ಐದು ಮೀಸಲಾತಿ ಕ್ಷೇತ್ರಗಳಿವೆ. ಅವುಗಳಲ್ಲಿ ಒಂದು ಕ್ಷೇತ್ರದ ಟಿಕೆಟ್ ಅನ್ನು ಭೋವಿ ಸಮುದಾಯದ ನಾಯಕರಿಗೆ ನೀಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಲಾಗಿತ್ತು. ಆದರೂ ಸ್ಥಳೀಯ ಶಾಸಕರು, ಮುಖಂಡರ ಅಭಿಪ್ರಾಯ ಕೇಳದೆ ಟಿಕೆಟ್ ಫೈನಲ್ ಮಾಡಲಾಗಿದೆ ಎಂದು ಶಾಸಕರು ಅಸಮಾಧಾನ ಹೊರಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.