ಎಕ್ಸ್ನಲ್ಲಿ ಏನಿದೆ?
60% ಕಾಂಗ್ರೆಸ್ ಸರ್ಕಾರದ ಕಮಿಷನ್ ದಂಧೆ ಮತ್ತೊಮ್ಮೆ ಸಾಬೀತಾಗಿದೆ. ಭೋವಿ ನಿಗಮದಲ್ಲಿ ಭೂ ಒಡೆತನ ಯೋಜನೆಯಡಿ ಭೂಮಿ ಮಂಜೂರಾದವರಿಗೆ 25 ಲಕ್ಷ ರೂ. ಸಹಾಯಧನ ಬಿಡುಗಡೆ ಮಾಡಲು ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್ 5 ಲಕ್ಷ ರೂ. ಕಮಿಷನ್ ಪಡೆಯುತ್ತಿದ್ದಾನೆ. ಇದನ್ನೂ ಓದಿ: ಬೆಂಗಳೂರು ಟು ಬಳ್ಳಾರಿ ಜೈಲು – ದರ್ಶನ್ ಭವಿಷ್ಯ ಇಂದು ಕೋರ್ಟ್ನಲ್ಲಿ ನಿರ್ಧಾರ
ರಾಜ್ಯ ಸರ್ಕಾರ ಕೂಡಲೇ ಭ್ರಷ್ಟ ಅಧ್ಯಕ್ಷನನ್ನು ವಜಾ ಮಾಡಿ, ಆತನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆಗೆ ಆದೇಶಿಸಬೇಕು ಎಂದು ಜೆಡಿಎಸ್ ಪಕ್ಷವು ಆಗ್ರಹಿಸುತ್ತದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂ. ಹಗರಣ ನಡೆಸಿದ್ದ ಭ್ರಷ್ಟ ಸರ್ಕಾರ, ಬಳಿಕ ಎಸ್ಸಿಎಸ್ಪಿ/ಟಿಎಸ್ಪಿ ನಿಧಿಯಲ್ಲಿನ ಸಾವಿರಾರು ಕೋಟಿ ರೂ. ಹಣವನ್ನು ದುರ್ಬಳಕೆ ಮಾಡಿಕೊಂಡು ಪರಿಶಿಷ್ಟರಿಗೆ ದ್ರೋಹ ಬಗೆದಿದ್ದ ಕಾಂಗ್ರೆಸ್, ಮತ್ತೊಮ್ಮೆ ದಲಿತರ ಬೆನ್ನಿಗೆ ಚೂರಿ ಹಾಕಿದೆ. ದಲಿತ ವಿರೋಧಿ ಸಿದ್ದರಾಮಯ್ಯ (Siddaramaiah) ಸರ್ಕಾರದ ದುರಾಡಳಿತ ಮಿತಿಮೀರಿದೆ ಎಂದು ಜೆಡಿಎಸ್ ಕಿಡಿಕಾರಿದೆ.
ಬೆಂಗಳೂರು: ಭೋವಿ ನಿಗಮದಲ್ಲಿ (Bhovi Corporation) ನಡೆದ ಅಕ್ರಮದ ತನಿಖೆ ಎದುರಿಸಿದ್ದ ವಕೀಲೆ ಹಾಗೂ ಉದ್ಯಮಿ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 90 ದಿನಗಳ ಕಾಲ ತನಿಖೆ ನಡೆಸಿದ್ದ ವಿಶೇಷ ತನಿಖಾ ತಂಡ (SIT) 2,300 ಪುಟಗಳ ಅಂತಿಮ ವರದಿಯನ್ನು ಹೈಕೋರ್ಟ್ಗೆ (Highcourt) ಸಲ್ಲಿಸಿದೆ.
ಕೋರ್ಟ್ಗೆ ಸಲ್ಲಿಸಿದ ಅಂತಿಮ ವರದಿಯಲ್ಲಿ ಮೃತ ಜೀವಾ (Lawyer Jeeva) ಡೆತ್ ನೋಟ್ನಲ್ಲಿದ್ದ ಬಹುತೇಕ ಆರೋಪಗಳು ಸಾಬೀತಾಗಿದೆ. ಅಲ್ಲದೇ ಡಿವೈಎಸ್ಪಿ ಕನಕಲಕ್ಷ್ಮಿ ಅವರು ಕಿರುಕುಳ ನೀಡಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ ಇದೆಲ್ಲರ ದಾಖಲೆಗಳನ್ನು ಕೋರ್ಟ್ಗೆ ಸಲ್ಲಿಸಲಾಗಿದೆ. ಅಲ್ಲದೇ ವಿಧಿವಿಜ್ಞಾನ ಪ್ರಯೋಗಾಲಯ ವರದಿಗಳು, ಮರಣೋತ್ತರ ಪರೀಕ್ಷಾ ವರದಿ, ಡೆತ್ನೋಟ್ ಫಾರೆನ್ಸಿಕ್ ರಿಪೋರ್ಟ್ಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಲು ಮೂವರು ಐಪಿಎಸ್ ಅಧಿಕಾರಿಗಳನ್ನೊಳಗೊಂಡ ಎಸ್ಐಟಿ ತಂಡವನ್ನ ರಚಿಸಲಾಗಿತ್ತು. ಇದರಲ್ಲಿ ಸಿಸಿಬಿ ಡಿಸಿಪಿ ಹಕಾಯ್ ಅಕ್ಷಯ್ ಮಚೀಂದ್ರ, ಎಸ್ಪಿ ನಿಶಾ ಜೇಮ್ಸ್, ಸಿಬಿಐ ಎಸ್ಪಿ ವಿನಾಯಕ್ ವರ್ಮ ಅವರನ್ನೊಳಗೊಂಡ ಎಸ್ಐಟಿ ತಂಡ 90 ದಿನಗಳ ಕಾಲ ಸುದೀರ್ಘ ತನಿಖೆ ನಡೆಸಿತ್ತು. ಸದ್ಯ ತನಿಖೆ ಪೂರ್ಣಗೊಳಿಸಿರುವ ತಂಡ ಹೈಕೋರ್ಟ್ಗೆ ಅಂತಿಮ ವರದಿ ಸಲ್ಲಿಸಿದೆ.
ಏನಿದು ಪ್ರಕರಣ?
ಭೋವಿ ನಿಗಮ ಅಕ್ರಮ ಸಂಬಂಧ ಜೀವಾರನ್ನು ಸಿಐಡಿ ವಿಚಾರಣೆಗೆ ಒಳಪಡಿಸಿತ್ತು. ಆದರೆ ಕಿರುಕುಳದ ಆರೋಪ ಮಾಡಿ ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದರು. ಭೋವಿ ನಿಗಮದಲ್ಲಿ ಒಟ್ಟು 34 ಕೋಟಿ ರೂ. ಅಕ್ರಮ ಹಣ ವರ್ಗಾವಣೆಯಾಗಿದೆ. ಇದರಲ್ಲಿ ಜೀವಾ ಮಾಲೀಕತ್ವದ ಸಂಸ್ಥೆ ಅನ್ನಿಕಾ ಎಂಟರ್ಪ್ರೆಸಸ್ಗೆ 7.16 ಕೋಟಿ ರೂ., ಅವರ ಸಹೋದರಿ ಹೆಸರಲ್ಲಿರುವ ಹರ್ನಿತಾ ಕ್ರಿಯೇಷನ್ಸ್ಗೆ 3.79 ಕೋಟಿ ರೂ. ವರ್ಗಾವಣೆ ಆಗಿತ್ತು. ಇನ್ನುಳಿದ ಹಣ ಮಾಜಿ ಎಂಡಿಗಳ ಆಪ್ತರ ಪಾಲುದಾರಿಕೆಯ ಸಂಸ್ಥೆಗಳಿಗೆ ವರ್ಗವಾಗಿತ್ತು. ಈ ಪ್ರಕರಣದ ಬಗ್ಗೆ ಆಂತರಿಕ ತನಿಖೆ ನಡೆಸಲು ಗೃಹ ಇಲಾಖೆ ಮುಂದಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ಕೊಡದೇ ತಮ್ಮನ್ನ ವಿಚಾರಣೆಗೆ ಕರೆದು ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಜೀವಾ ಆರೋಪಿಸಿ ಬನಶಂಕರಿಯಲ್ಲಿರುವ ತಮ್ಮ ಮನೆಯಲ್ಲಿ ಜೀವಾ ಆತ್ಮಹತ್ಯೆಗೆ ಶರಣಾಗಿದ್ದರು.
ಸಿಐಡಿ ಅಧಿಕಾರಿಗಳ ವಿರುದ್ಧ ಪ್ರಕರಣ:
ಜೀವಾ ಅವರ ಕಿರಿಯ ಸಹೋದರಿ ಸಂಗೀತಾ ಅವರು ನೀಡಿದ ದೂರಿನಲ್ಲಿ ವಿಚಾರಣೆ ನೆಪದಲ್ಲಿ ಸಿಐಡಿ ಅಧಿಕಾರಿಗಳು ತನ್ನ ಅಕ್ಕ ಜೀವಾಗೆ ಅವಮಾನ ಮಾಡಿದ್ದಾರೆ. ಅಂತೆಯೇ ಹಣಕ್ಕೆ ಬೇಡಿಕೆ ಇರಿಸಿದ್ದಾರೆ ಎಂದು ಆರೋಪಿಸಿದ್ದರು. ಈ ದೂರಿನಮೇರೆಗೆ ಬನಶಂಕರಿ ಠಾಣೆ ಪೊಲೀಸರು ಸಿಐಡಿ ಅಧಿಕಾರಿಗಳ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಎಫ್ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದರು.
ಅಲ್ಲದೇ ಜೀವಾ ಆತ್ಮಹತ್ಯೆಗೂ ಮುನ್ನ ಮಹಿಳಾ ಉದ್ಯಮಿ ಜೀವಾ 13 ಪುಟಗಳ ಮರಣಪತ್ರ ಬರೆದಿದ್ದರು. ಅದರಲ್ಲಿ ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಸಂಬಂಧ ಸಿಐಡಿ ಅಧಿಕಾರಿಗಳ ವಿಚಾರಣೆ ವಿಚಾರ ಪ್ರಸ್ತಾಪಿಸಿದ್ದರು. ಸಿಐಡಿ ವಿಚಾರಣೆಯಿಂದ ನನಗೆ ಅವಮಾನವಾಗಿದ್ದು, ಮಾನಸಿಕವಾಗಿ ನೊಂದಿದ್ದೇನೆ. ಎಂದು ಉಲ್ಲೇಖಿಸಿದ್ದರು. ಅಂತೆಯೆ ನನಗೆ ಅವಿವಾಹಿತ ತಂಗಿ ಇರುವುದರಿಂದ ನನ್ನ ಆತ್ಮಹತ್ಯೆ ಸುದ್ದಿಗೆ ಹೆಚ್ಚು ಪ್ರಚಾರ ನೀಡದಂತೆಯೂ ಜೀವಾ ಮರಣಪತ್ರದಲ್ಲಿ ಮನವಿ ಮಾಡಿದ್ದರು ಎಂದು ಅಧಿಕಾರಿ ಮೂಲಗಳಿಂದ ತಿಳಿದುಬಂದಿತ್ತು.
ಬೆಂಗಳೂರು: ಭೋವಿ ನಿಗಮ ಹಗರಣ ಪ್ರಕರಣದಲ್ಲಿ ಇಡಿ ಅಧಿಕಾರಿಗಳು (Enforcement Directorate) ನಿಗಮದ ಜನರಲ್ ಮ್ಯಾನೇಜರ್ ನಾಗರಾಜಪ್ಪ ಅವರನ್ನು ಬಂಧಿಸಲಾಗಿದ್ದು, ನ್ಯಾಯಾಲಯ ಅವರನ್ನು 14 ದಿನಗಳ ಕಾಲ ಇಡಿ ಕಸ್ಟಡಿಗೆ ಒಪ್ಪಿಸಿದೆ.
ಪ್ರಕರಣ ಸಂಬಂಧ ಏ.4 ರಂದು ಇಡಿ ಅಧಿಕಾರಿಗಳು ಭೋವಿ ನಿಗಮ ಸೇರಿದಂತೆ 10 ಕಡೆಗಳಲ್ಲಿ ದಾಳಿ ನಡೆಸಿದ್ದರು. ಈ ವೇಳೆ ದಾಖಲೆಗಳು ಹಾಗೂ, ಆಸ್ತಿಗಳ ಡಿಜಿಟಲ್ ದಾಖಲೆಗಳನ್ನು ಜಪ್ತಿ ಮಾಡಿದ್ದರು. ಅಲ್ಲದೇ ನಿಗಮದ ಜನರಲ್ ಮ್ಯಾನೇಜರ್ ನಾಗರಾಜಪ್ಪ ಅವರನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: Bhovi Corporation Scam – ಜನರಲ್ ಮ್ಯಾನೇಜರ್ ನಾಗರಾಜಪ್ಪ 14 ದಿನ ಇಡಿ ಕಸ್ಟಡಿಗೆ
ಭೋವಿ ನಿಗಮದಲ್ಲಿ (Bhovi Corporation Scam) ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆತ್ಮಹತ್ಯೆಗೆ ಶರಣಾದ ಜೀವಾ ಅವರ ಪಾತ್ರ ಇತ್ತಾ ಎಂಬ ಅನುಮಾನ ಇದೆ. ಇದರ ಬಗ್ಗೆ ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಜೀವಾ ಅವರ ಅನ್ನಿಕಾ ಎಂಟರ್ ಪ್ರೈಸಸ್ಗೆ ಕೋಟಿ ಕೋಟಿ ಹಣ ವರ್ಗಾವಣೆ ಆಗಿದೆ.
ಅನ್ನಿಕಾ ಎಂಟರ್ ಪ್ರೈಸಸ್ಗೆ 7.16 ಕೋಟಿ ರೂ., ಸೋದರಿ ಹೆಸರಿನಲ್ಲಿರುವ ಹರ್ನಿತಾ ಕ್ರಿಯೇಷನ್ಸ್ಗೆ ಒಟ್ಟು 10.9 ಕೋಟಿ ರೂ. ವರ್ಗವಾಗಿದೆ. ಇನ್ನುಳಿದ ಮೂರು ಕಂಪನಿಗಳಲ್ಲಿ ನಿಗಮದ ಮಾಜಿ ಪ್ರಧಾನ ವ್ಯವಸ್ಥಾಪಕ ಬಿ.ಕೆ.ನಾಗರಾಜಪ್ಪರವರ ಆಪ್ತರ ಪಾಲುದಾರಿಕೆ ಇದೆ.
ಬೆಂಗಳೂರು: ಭೋವಿ ನಿಗಮ ಹಗರಣ ಪ್ರಕರಣದಲ್ಲಿ ಇಡಿ ಅಧಿಕಾರಿಗಳು (Enforcement Directorate) ನಿಗಮದ ಜನರಲ್ ಮ್ಯಾನೇಜರ್ ನಾಗರಾಜಪ್ಪ ಅವರನ್ನು ಬಂಧಿಸಿದೆ. ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಪೊಲೀಸ್ ಕಸ್ಟಡಿಗೆ ಕೇಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಭೋವಿ ನಿಗಮದಲ್ಲಿ (Bhovi Corporation Scam) ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆತ್ಮಹತ್ಯೆಗೆ ಶರಣಾದ ಜೀವಾ ಅವರ ಪಾತ್ರ ಇತ್ತಾ ಎಂಬ ಅನುಮಾನ ಇದೆ. ಇದರ ಬಗ್ಗೆ ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಜೀವಾ ಅವರ ಅನ್ನಿಕಾ ಎಂಟರ್ ಪ್ರೈಸಸ್ಗೆ ಕೋಟಿ ಕೋಟಿ ಹಣ ವರ್ಗಾವಣೆ ಆಗಿದೆ. ಇದನ್ನೂ ಓದಿ: ಭೋವಿ ನಿಗಮದಿಂದ 34 ಕೋಟಿ ಹಣ ಅಕ್ರಮ ವರ್ಗಾವಣೆ – ಯಾರ್ಯಾರಿಗೆ ಎಷ್ಟು ಹಣ?
ಅನ್ನಿಕಾ ಎಂಟರ್ ಪ್ರೈಸಸ್ಗೆ 7.16 ಕೋಟಿ ರೂ., ಸೋದರಿ ಹೆಸರಿನಲ್ಲಿರುವ ಹರ್ನಿತಾ ಕ್ರಿಯೇಷನ್ಸ್ಗೆ ಒಟ್ಟು 10.9 ಕೋಟಿ ರೂ. ವರ್ಗವಾಗಿದೆ. ಇನ್ನುಳಿದ ಮೂರು ಕಂಪನಿಗಳಲ್ಲಿ ನಿಗಮದ ಮಾಜಿ ಪ್ರಧಾನ ವ್ಯವಸ್ಥಾಪಕ ಬಿ.ಕೆ.ನಾಗರಾಜಪ್ಪರವರ ಆಪ್ತರ ಪಾಲುದಾರಿಕೆ ಇದೆ.
ಬೆಂಗಳೂರು: ಭೋವಿ ನಿಗಮದಲ್ಲಿ (Bhovi Corporation) ನಡೆದ ಅಕ್ರಮ ತನಿಖೆ ಎದುರಿಸಿದ್ದ ವಕೀಲೆ ಹಾಗೂ ಉದ್ಯಮಿ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮೀಯನ್ನು (DYSP Kanakalakshmi) ಎಸ್ಐಟಿ (SIT) ಅಧಿಕಾರಿಗಳು ಬಂಧಿಸಿದ್ದಾರೆ.
ವಕೀಲೆ ಜೀವಾ, ನನ್ನ ಆತ್ಮಹತ್ಯೆಗೆ ಡಿವೈಎಸ್ಪಿ ಕನಕಲಕ್ಷ್ಮೀ ಕಾರಣ ಎಂದು 13 ಪುಟಗಳ ಸುದೀರ್ಘ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಇಂದು ಬೆಳಗ್ಗೆ ಕನಕಲಕ್ಷ್ಮೀ ಎಸ್ಐಟಿ ವಿಚಾರಣೆಗೆ ಹಾಜರಾಗಿದ್ದಾಗ ಬಂಧಿಸಲಾಗಿದೆ. ಈ ಹಿಂದೆ ಎರಡು ಬಾರಿ ಕನಕಲಕ್ಷ್ಮೀ ಅವರ ಹೇಳಿಕೆಯನ್ನು ಎಸ್ಐಟಿ ದಾಖಲು ಮಾಡಿತ್ತು. ಇಂದು ಬೆಳಗ್ಗೆ ವಿಚಾರಣೆಗೆ ಒಳಪಡಿಸಿ ಬಳಿಕ ಬಂಧಿಸಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ನಿಂದ SCSP, TSP ಹಣ ಗ್ಯಾರೆಂಟಿಗೆ ಬಳಕೆ – ಕೋಲಾರ ಬಿಜೆಪಿ ಮುಖಂಡರಿಂದ ಖಂಡನೆ
ಏನಿದು ಪ್ರಕರಣ?
ಭೋವಿ ನಿಗಮ ಅಕ್ರಮ ಸಂಬಂಧ ಜೀವಾರನ್ನು ಸಿಐಡಿ ವಿಚಾರಣೆಗೆ ಒಳಪಡಿಸಿತ್ತು. ಆದರೆ ಕಿರುಕುಳದ ಆರೋಪ ಮಾಡಿ ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದರು. ಭೋವಿ ನಿಗಮದಲ್ಲಿ ಒಟ್ಟು 34 ಕೋಟಿ ರೂ. ಅಕ್ರಮ ಹಣ ವರ್ಗಾವಣೆಯಾಗಿದೆ. ಇದರಲ್ಲಿ ಜೀವಾ ಮಾಲೀಕತ್ವದ ಸಂಸ್ಥೆ ಅನ್ನಿಕಾ ಎಂಟರ್ಪ್ರೆಸಸ್ಗೆ 7.16 ಕೋಟಿ ರೂ., ಅವರ ಸಹೋದರಿ ಹೆಸರಲ್ಲಿರುವ ಹರ್ನಿತಾ ಕ್ರಿಯೇಷನ್ಸ್ಗೆ 3.79 ಕೋಟಿ ರೂ. ವರ್ಗಾವಣೆ ಆಗಿತ್ತು. ಇನ್ನುಳಿದ ಹಣ ಮಾಜಿ ಎಂಡಿಗಳ ಆಪ್ತರ ಪಾಲುದಾರಿಕೆಯ ಸಂಸ್ಥೆಗಳಿಗೆ ವರ್ಗವಾಗಿತ್ತು. ಈ ಪ್ರಕರಣದ ಬಗ್ಗೆ ಆಂತರಿಕ ತನಿಖೆ ನಡೆಸಲು ಗೃಹ ಇಲಾಖೆ ಮುಂದಾಗಿತ್ತು. ಇದನ್ನೂ ಓದಿ: ರಾಯಚೂರು| ಎರಡು ಬೈಕ್ಗಳಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ – ಐವರು ದುರ್ಮರಣ
ಸಿಐಡಿ ಅಧಿಕಾರಿಗಳ ವಿರುದ್ಧ ಪ್ರಕರಣ:
ಜೀವಾ ಅವರ ಕಿರಿಯ ಸಹೋದರಿ ಸಂಗೀತಾ ಅವರು ನೀಡಿದ ದೂರಿನಲ್ಲಿ ವಿಚಾರಣೆ ನೆಪದಲ್ಲಿ ಸಿಐಡಿ ಅಧಿಕಾರಿಗಳು ತನ್ನ ಅಕ್ಕ ಜೀವಾಗೆ ಅವಮಾನ ಮಾಡಿದ್ದಾರೆ. ಅಂತೆಯೇ ಹಣಕ್ಕೆ ಬೇಡಿಕೆ ಇರಿಸಿದ್ದಾರೆ ಎಂದು ಆರೋಪಿಸಿದ್ದರು. ಈ ದೂರಿನಮೇರೆಗೆ ಬನಶಂಕರಿ ಠಾಣೆ ಪೊಲೀಸರು ಸಿಐಡಿ ಅಧಿಕಾರಿಗಳ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಎಫ್ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದರು. ಇದನ್ನೂ ಓದಿ: ಮಸೀದಿ, ಚರ್ಚ್ನಿಂದ ಸರ್ಕಾರಕ್ಕೆ 5 ರೂಪಾಯಿ ತೆರಿಗೆ ಬರ್ತಿದೆಯಾ: ಪ್ರತಾಪ್ ಸಿಂಹ ಪ್ರಶ್ನೆ
ಆತ್ಮಹತ್ಯೆಗೂ ಮುನ್ನ ಮಹಿಳಾ ಉದ್ಯಮಿ ಜೀವಾ 13 ಪುಟಗಳ ಮರಣಪತ್ರ ಬರೆದಿದ್ದಾರೆ. ಅದರಲ್ಲಿ ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಸಂಬಂಧ ಸಿಐಡಿ ಅಧಿಕಾರಿಗಳ ವಿಚಾರಣೆ ವಿಚಾರ ಪ್ರಸ್ತಾಪಿಸಿದ್ದಾರೆ. ಸಿಐಡಿ ವಿಚಾರಣೆಯಿಂದ ನನಗೆ ಅವಮಾನವಾಗಿದ್ದು, ಮಾನಸಿಕವಾಗಿ ನೊಂದಿದ್ದೇನೆ. ಎಂದು ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ. ಅಂತೆಯೆ ನನಗೆ ಅವಿವಾಹಿತ ತಂಗಿ ಇರುವುದರಿಂದ ನನ್ನ ಆತ್ಮಹತ್ಯೆ ಸುದ್ದಿಗೆ ಹೆಚ್ಚು ಪ್ರಚಾರ ನೀಡದಂತೆಯೂ ಜೀವಾ ಮರಣಪತ್ರದಲ್ಲಿ ಮನವಿ ಮಾಡಿದ್ದಾರೆ ಎಂದು ಅಧಿಕಾರಿ ಮೂಲಗಳಿಂದ ತಿಳಿದುಬಂದಿತ್ತು. ಇದನ್ನೂ ಓದಿ: ಹೆಚ್ಡಿಕೆಗೆ ಅನಾರೋಗ್ಯ – 3 ದಿನಗಳಿಂದ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ
ಬೆಂಗಳೂರು: ಭೋವಿ ನಿಗಮದಲ್ಲಿ ನಡೆದ ಅಕ್ರಮ (Bhovi Corporation Scam) ತನಿಖೆ ಎದುರಿಸಿದ್ದ ವಕೀಲೆ ಹಾಗೂ ಉದ್ಯಮಿ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಲು ಎಸ್ಐಟಿ (SIT) ರಚಿಸಿ ಕರ್ನಾಟಕ ಹೈಕೋರ್ಟ್ನ ಏಕಸದಸ್ಯ ಪೀಠ ಆದೇಶಿಸಿದೆ.
ಅಲ್ಲದೇ ಮೂರು ತಿಂಗಳಲ್ಲಿ ವಿಚಾರಣೆ ಮುಗಿಸಿ ವರದಿ ನೀಡುವಂತೆ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಸೂಚನೆ ನೀಡಿದೆ. ಒಟ್ಟಾರೆ ಮೂವರು ಐಪಿಎಸ್ ಅಧಿಕಾರಿಗಳನ್ನು (ಸಿಬಿಐ ಎಸ್ಪಿ ವಿನಾಯಕ್ ವರ್ಮ, ಐಪಿಎಸ್ ಅಕ್ಷಯ್ ಮಜ್ಲಿ, ಎಸ್ಪಿ ನಿಶಾ ಜೇಮ್ಸ್) ಎಸ್ಐಟಿ ಹೊಂದಿರಲಿದೆ. ಈ ಪೈಕಿ ಇಬ್ಬರು ಎಸ್ಪಿಗಳಿದ್ದಾರೆ. ಇದನ್ನೂ ಓದಿ: ಸಚಿವರ ಕಾರ್ಯವೈಖರಿ ಬಗ್ಗೆ ಹೈಕಮಾಂಡ್ ರಿಪೋರ್ಟ್ ಕೇಳಿದೆ: ಡಾ. ಎಂ.ಸಿ.ಸುಧಾಕರ್
ಏನಿದು ಪ್ರಕರಣ?
ಭೋವಿ ನಿಗಮ ಅಕ್ರಮ ಸಂಬಂಧ ಜೀವಾರನ್ನು ಸಿಐಡಿ ವಿಚಾರಣೆಗೆ ಒಳಪಡಿಸಿತ್ತು. ಆದರೆ ಕಿರುಕುಳದ ಆರೋಪ ಮಾಡಿ ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದರು. ಭೋವಿ ನಿಗಮದಲ್ಲಿ ಒಟ್ಟು 34 ಕೋಟಿ ರೂ. ಅಕ್ರಮ ಹಣ ವರ್ಗಾವಣೆಯಾಗಿದೆ. ಇದರಲ್ಲಿ ಜೀವಾ ಮಾಲೀಕತ್ವದ ಸಂಸ್ಥೆ ಅನ್ನಿಕಾ ಎಂಟರ್ಪ್ರೆಸಸ್ಗೆ 7.16 ಕೋಟಿ ರೂ., ಅವರ ಸಹೋದರಿ ಹೆಸರಲ್ಲಿರುವ ಹರ್ನಿತಾ ಕ್ರಿಯೇಷನ್ಸ್ಗೆ 3.79 ಕೋಟಿ ರೂ. ವರ್ಗಾವಣೆ ಆಗಿತ್ತು. ಇನ್ನುಳಿದ ಹಣ ಮಾಜಿ ಎಂಡಿಗಳ ಆಪ್ತರ ಪಾಲುದಾರಿಕೆಯ ಸಂಸ್ಥೆಗಳಿಗೆ ವರ್ಗವಾಗಿತ್ತು. ಈ ಪ್ರಕರಣದ ಬಗ್ಗೆ ಆಂತರಿಕ ತನಿಖೆ ನಡೆಸಲು ಗೃಹ ಇಲಾಖೆ ಮುಂದಾಗಿತ್ತು.
ಸಿಐಡಿ ಅಧಿಕಾರಿಗಳ ವಿರುದ್ಧ ಪ್ರಕರಣ:
ಜೀವಾ ಅವರ ಕಿರಿಯ ಸಹೋದರಿ ಸಂಗೀತಾ ಅವರು ನೀಡಿದ ದೂರಿನಲ್ಲಿ ವಿಚಾರಣೆ ನೆಪದಲ್ಲಿ ಸಿಐಡಿ ಅಧಿಕಾರಿಗಳು ತನ್ನ ಅಕ್ಕ ಜೀವಾಗೆ ಅವಮಾನ ಮಾಡಿದ್ದಾರೆ. ಅಂತೆಯೇ ಹಣಕ್ಕೆ ಬೇಡಿಕೆ ಇರಿಸಿದ್ದಾರೆ ಎಂದು ಆರೋಪಿಸಿದ್ದರು. ಈ ದೂರಿನಮೇರೆಗೆ ಬನಶಂಕರಿ ಠಾಣೆ ಪೊಲೀಸರು ಸಿಐಡಿ ಅಧಿಕಾರಿಗಳ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಎಫ್ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದರು. ಇದನ್ನೂ ಓದಿ: ಮೋಹಕ ತಾರೆ ಫ್ಯಾನ್ಸ್ಗೆ ಗುಡ್ ನ್ಯೂಸ್- ಉಪೇಂದ್ರ ಜೊತೆ ‘ರಕ್ತ ಕಾಶ್ಮೀರ’ದ ಕಥೆ ಹೇಳಲು ಸಜ್ಜಾದ ರಮ್ಯಾ
11 ಪುಟಗಳ ಡೆತ್ ನೋಟ್?:
ಆತ್ಮಹತ್ಯೆಗೂ ಮುನ್ನ ಮಹಿಳಾ ಉದ್ಯಮಿ ಜೀವಾ 11 ಪುಟಗಳ ಮರಣಪತ್ರ ಬರೆದಿದ್ದಾರೆ. ಅದರಲ್ಲಿ ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಸಂಬಂಧ ಸಿಐಡಿ ಅಧಿಕಾರಿಗಳ ವಿಚಾರಣೆ ವಿಚಾರ ಪ್ರಸ್ತಾಪಿಸಿದ್ದಾರೆ. ಸಿಐಡಿ ವಿಚಾರಣೆಯಿಂದ ನನಗೆ ಅವಮಾನವಾಗಿದ್ದು, ಮಾನಸಿಕವಾಗಿ ನೊಂದಿದ್ದೇನೆ. ಎಂದು ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ. ಅಂತೆಯೆ ನನಗೆ ಅವಿವಾಹಿತ ತಂಗಿ ಇರುವುದರಿಂದ ನನ್ನ ಆತ್ಮಹತ್ಯೆ ಸುದ್ದಿಗೆ ಹೆಚ್ಚು ಪ್ರಚಾರ ನೀಡದಂತೆಯೂ ಜೀವಾ ಮರಣಪತ್ರದಲ್ಲಿ ಮನವಿ ಮಾಡಿದ್ದಾರೆ ಎಂದು ಅಧಿಕಾರಿ ಮೂಲಗಳಿಂದ ತಿಳಿದುಬಂದಿತ್ತು.
ಬೆಂಗಳೂರು: ಭೋವಿ ನಿಗಮದಲ್ಲಿ ನಡೆದ ಅಕ್ರಮ (Bhovi Corporation Scam) ತನಿಖೆ ಎದುರಿಸಿದ್ದ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ (High Court) ಚಾಟಿ ಬೀಸಿದ ಬೆನ್ನಲ್ಲೇ ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಘಟನೆ ಸಂಬಂಧ ಸಾಕ್ಷಿಗಳನ್ನು ಕಲೆಹಾಕಲು ಸಿಸಿಬಿ ವಿಶೇಷ ತನಿಖಾಧಿಕಾರಿಗಳ ತಂಡ ಮುಂದಾಗಿದೆ. ಜೀವಾ ತನಿಖೆ ಕರೆಯಲು ಕಾರಣ ಏನು? ಜೀವಾಗೆ ಸಂಬಂಧಿಸಿದ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಿದ್ಯಾ? ಎಷ್ಟು ಬಾರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ಎದುರಿಸಿದ್ದಾರೆ? ಎಂಬ ಆಯಾಮಗಳಲ್ಲಿ ತನಿಖೆ ನಡೆಸಲು, ಅಲ್ಲದೇ ಜೀವಾ ಅವರು ಬರೆದಿದ್ದ ಡೆತ್ನೋಟನ್ನ (Death Note) ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದರೊಂದಿಗೆ ಸಿಸಿಬಿ ಡಿವೈಎಸ್ಪಿ ಕನಕಲಕ್ಷ್ಮಿ ಅವರಿಗೆ ನೋಟಿಸ್ ನೀಡಿ ವಿಚಾರಣೆಗೆ ಕರೆಸಲು ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಸರ್ಕಾರಕ್ಕೆ ಕೋರ್ಟ್ ಚಾಟಿ:
ಭೋವಿ ನಿಗಮದ ಅಕ್ರಮ ಪ್ರಕರಣದಲ್ಲಿ ಸಿಸಿಬಿ ಡಿವೈಎಸ್ಪಿ ಕನಕಲಕ್ಷ್ಮಿ (DySP Kanaka Lakshmi) ಕಿರುಕುಳ ನೀಡುತ್ತಿದ್ದಾರೆ ಎಂದು ಡೆತ್ನೋಟ್ (Death Note) ಬರೆದಿಟ್ಟು ವಕೀಲೆ, ಉದ್ಯಮಿ ಜೀವಾ ಆತ್ಮಹತ್ಯೆ (Jeeva Suicide Case) ಮಾಡಿಕೊಂಡಿರುವ ಪ್ರಕರಣದಲ್ಲಿ ಇಲ್ಲಿಯವರೆಗೆ ಯಾಕೆ ಆರೋಪಿಯನ್ನು ಬಂಧಿಸಿಲ್ಲ ಎಂದು ಸರ್ಕಾರಕ್ಕೆ ಹೈಕೋರ್ಟ್ ಚಾಟಿ ಬೀಸಿತ್ತು. ಇದನ್ನೂ ಓದಿ: ಭೋವಿ ನಿಗಮದಿಂದ 34 ಕೋಟಿ ಹಣ ಅಕ್ರಮ ವರ್ಗಾವಣೆ – ಯಾರ್ಯಾರಿಗೆ ಎಷ್ಟು ಹಣ?
ಪ್ರಕರಣದ ತನಿಖೆಯನ್ನು ಸಿಬಿಐಗೆ (CBI) ವಹಿಸುವಂತೆ ಕೋರಿ ಬೆಂಗಳೂರು ವಕೀಲರ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ, ಸರ್ಕಾರ ಹಾಗೂ ಪೊಲೀಸ್ ಇಲಾಖೆಯನ್ನು ತರಾಟೆಗೆ ತೆಗೆದುಕೊಂಡಿತು. ಮೃತರು 13 ಪುಟಗಳ ಡೆತ್ನೋಟ್ ಬರೆದಿದ್ದಾರೆ. ಇಲ್ಲಿಯವರೆಗೆ ಆರೋಪಿಯನ್ನು ವಿಚಾರಣೆ ಮಾಡಿಲ್ಲ, ಅರೆಸ್ಟ್ ಮಾಡಿಲ್ಲ. ಡಿವೈಎಸ್ಪಿ ಎಂಬ ಕಾರಣಕ್ಕೆ ವಿಚಾರಣೆ ಮಾಡುತ್ತಿಲ್ಲವೇ ಎಂದು ಪ್ರಶ್ನಿಸಿ ಕ್ಲಾಸ್ ತೆಗೆದುಕೊಂಡಿತ್ತು. ಇದನ್ನೂ ಓದಿ: ಭೋವಿ ನಿಗಮ ಹಗರಣ: ಡಿವೈಎಸ್ಪಿ ಹೆಸರು ಬರೆದಿಟ್ಟರೂ ಬಂಧನ ಮಾಡಿಲ್ಲ ಯಾಕೆ – ಸರ್ಕಾರಕ್ಕೆ ಹೈಕೋರ್ಟ್ ಚಾಟಿ
ರಾಜ್ಯ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳದೇ ಇದ್ದರೆ ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುತ್ತೇನೆ ಎಂದು ಹೇಳಿ ಗರಂ ಆಗಿದೆ. ಇದಕ್ಕೆ ಎಲ್ಲಾ ಪ್ರಕರಣದಲ್ಲಿ ಆರೋಪಿಗಳನ್ನು ಅರೆಸ್ಟ್ ಮಾಡುವುದಿಲ್ಲ. ಈ ಪ್ರಕರಣವನ್ನು ಸಿಸಿಬಿಗೆ ನೀಡಲಾಗಿದೆ ಎಂದು ಸರ್ಕಾರದ ಪರ ವಕೀಲ ಜಗದೀಶ್ ಉತ್ತರಿಸಿದರು. ಡಿವೈಎಸ್ಪಿ ಕನಕಲಕ್ಷ್ಮಿ ಪರ ವಾದ ಮಂಡಿಸಿದ ವಕೀಲರು, ನಮ್ಮ ಕಕ್ಷಿದಾರರು ಯಾವುದೇ ಕಿರುಕುಳ ನೀಡಿಲ್ಲ. ತನಿಖೆ ನಡೆದು ಸತ್ಯಾಸತ್ಯತೆ ಬರಲಿ. ಕನಕಲಕ್ಷ್ಮಿ ಲಾಟರಿ ಹಗರಣದಲ್ಲಿದ್ದರು ಎಂದು ಇವರು ಆರೋಪ ಮಾಡುವುದು ಸರಿಯಲ್ಲ ಎಂದು ವಾದಿಸಿದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ಆದೇಶವನ್ನು ನವೆಂಬರ್ 29ಕ್ಕೆ ಕಾಯ್ದಿರಿಸಿದೆ.
ಏನಿದು ಪ್ರಕರಣ?
ಭೋವಿ ನಿಗಮ ಅಕ್ರಮ ಸಂಬಂಧ ಜೀವಾರನ್ನು ಸಿಐಡಿ ವಿಚಾರಣೆಗೆ ಒಳಪಡಿಸಿತ್ತು. ಆದರೆ ಕಿರುಕುಳದ ಆರೋಪ ಮಾಡಿ ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದರು. ಭೋವಿ ನಿಗಮದಲ್ಲಿ ಒಟ್ಟು 34 ಕೋಟಿ ರೂ. ಅಕ್ರಮ ಹಣ ವರ್ಗಾವಣೆಯಾಗಿದೆ. ಇದರಲ್ಲಿ ಜೀವಾ ಮಾಲೀಕತ್ವದ ಸಂಸ್ಥೆ ಅನ್ನಿಕಾ ಎಂಟರ್ಪ್ರೆಸಸ್ಗೆ 7.16 ಕೋಟಿ ರೂ., ಅವರ ಸಹೋದರಿ ಹೆಸರಲ್ಲಿರುವ ಹರ್ನಿತಾ ಕ್ರಿಯೇಷನ್ಸ್ಗೆ 3.79 ಕೋಟಿ ರೂ. ವರ್ಗಾವಣೆ ಆಗಿತ್ತು. ಇನ್ನುಳಿದ ಹಣ ಮಾಜಿ ಎಂಡಿಗಳ ಆಪ್ತರ ಪಾಲುದಾರಿಕೆಯ ಸಂಸ್ಥೆಗಳಿಗೆ ವರ್ಗವಾಗಿತ್ತು. ಈ ಪ್ರಕರಣದ ಬಗ್ಗೆ ಆಂತರಿಕ ತನಿಖೆ ನಡೆಸಲು ಗೃಹ ಇಲಾಖೆ ಮುಂದಾಗಿದೆ. ಇದನ್ನೂ ಓದಿ: ಲಿವ್ ಇನ್ ಗೆಳತಿಯ ಮೇಲೆ ರೇಪ್; 40-50 ತುಂಡುಗಳಾಗಿ ಕತ್ತರಿಸಿ ಬಿಸಾಡಿದ ಕಿರಾತಕ
ಬೆಂಗಳೂರು: ಭೋವಿ ನಿಗಮದಲ್ಲಿ (Bhovi Corporation Scam) ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. 34 ಕೋಟಿ ಹಣ ಅಕ್ರಮವಾಗಿ ವರ್ಗಾವಣೆ ಆಗಿದ್ದು, ಇದರಲ್ಲಿ ಉದ್ಯಮಿ ಜೀವಾ ಅವರ ಪಾತ್ರ ಇತ್ತ ಎಂಬ ಅನುಮಾನ ಮೂಡಿದೆ.
ಅನ್ನಿಕಾ ಎಂಟರ್ ಪ್ರೈಸಸ್ಗೆ 7.16 ಕೋಟಿ ರೂ., ಸೋದರಿ ಹೆಸರಿನಲ್ಲಿರುವ ಹರ್ನಿತಾ ಕ್ರಿಯೇಷನ್ಸ್ಗೆ ಒಟ್ಟು 10.9 ಕೋಟಿ ರೂ. ವರ್ಗವಾಗಿದೆ. ಇನ್ನುಳಿದ ಮೂರು ಕಂಪನಿಗಳಲ್ಲಿ ನಿಗಮದ ಮಾಜಿ ಪ್ರಧಾನ ವ್ಯವಸ್ಥಾಪಕ ಬಿ.ಕೆ.ನಾಗರಾಜಪ್ಪರವರ ಆಪ್ತರ ಪಾಲುದಾರಿಕೆ ಇದೆ.