Tag: Bhubaneswar

  • ಆರ್ಥಿಕ ಸಮಸ್ಯೆಯಿಂದ 40,000ಕ್ಕೆ 4 ವರ್ಷದ ಹೆಣ್ಣುಮಗು ಮಾರಾಟ – ಪೋಷಕರು ಸೇರಿ 6 ಮಂದಿ ಅರೆಸ್ಟ್‌

    ಆರ್ಥಿಕ ಸಮಸ್ಯೆಯಿಂದ 40,000ಕ್ಕೆ 4 ವರ್ಷದ ಹೆಣ್ಣುಮಗು ಮಾರಾಟ – ಪೋಷಕರು ಸೇರಿ 6 ಮಂದಿ ಅರೆಸ್ಟ್‌

    ಭುವನೇಶ್ವರ: ಹಣಕಾಸಿನ ಸಮಸ್ಯೆಯಿಂದಾಗಿ ಪೋಷಕರು ತಮ್ಮ 4 ವರ್ಷದ ಹೆಣ್ಣು ಮಗುವನ್ನು 40,000 ರೂ.ಗಳಿಗೆ ಮಾರಾಟ (Daughter Selling) ಮಾಡಿರುವ ಆಘಾತಕಾರಿ ಘಟನೆ ಒಡಿಶಾದಲ್ಲಿ (Odisha) ನಡೆದಿದೆ.

    ಘಟನೆ ತಿಳಿದ ಕೂಡಲೇ ಮಗುವನ್ನು ರಕ್ಷಣೆ ಮಾಡಿರುವ ಬಡಗಡ ಪೊಲೀಸರು (Badagada Police), ಪೋಷಕರು ಹಾಗೂ ಮಗು ಮಾರಾಟಕ್ಕೆ ಸಹಾಯ ಮಾಡಿದ ನಾಲ್ವರು ಸೇರಿ 6 ಮಂದಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಪಾಗಲ್ ಪ್ರೇಮಿಯಿಂದ ನರ್ಸ್ ಮೇಲೆ ಮಚ್ಚಿನಿಂದ ಹಲ್ಲೆ – ಸಿಸಿಟಿವಿಯಲ್ಲಿ ದೃಶ್ಯ ಸೆರೆ

    ಆರೋಪಿ ದಂಪತಿ ಬಿಹಾರ ಮೂಲದವರಾಗಿದ್ದು, ಬಡಗಡದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಕುಟುಂಬದಲ್ಲಿ ತುಂಬಾ ಹಣಕಾಸಿನ ಸಮಸ್ಯೆ ಎದುರಿಸುತ್ತಿದ್ದರು. ಹಾಗಾಗಿ ತಮ್ಮ ನಾಲ್ಕು ವರ್ಷದ ಮಗುವನ್ನು ಪಿಪಿಲಿಯಲ್ಲಿರುವ ಮಕ್ಕಳಿಲ್ಲದ ದಂಪತಿಗೆ ಮಾರಾಟ ಮಾಡಿದ್ದರು ಎಂದು ಬಡಗಡ ಪೊಲೀಸ್ ಠಾಣೆಯ ಪ್ರಭಾರಿ ತೃಪ್ತಿ ರಂಜನ್ ನಾಯಕ್ ತಿಳಿಸಿದ್ದಾರೆ.

    ಘಟನೆ ಬೆಳಕಿಗೆ ಬಂದ ನಂತರ ಬಡಗಡ ಪೊಲೀಸರು ಮಗುವನ್ನು ರಕ್ಷಿಣೆ ಮಾಡಿದ್ದಾರೆ. ಪ್ರಕರಣ ಸಂಬಂಧ ಮಧ್ಯವರ್ತಿಗಳು ಮತ್ತು ಮಗುವಿನ ಪೋಷಕರು ಸೇರಿದಂತೆ ಒಟ್ಟು 6 ಜನರನ್ನ ಬಂಧಿಸಿದ್ದಾರೆ. ಇದನ್ನೂ ಓದಿ: ಧನುಷ್, ಐಶ್ವರ್ಯಾಗೆ ಡಿವೋರ್ಸ್ ಮಂಜೂರು ಮಾಡಿದ ಕೋರ್ಟ್- 18 ವರ್ಷಗಳ ದಾಂಪತ್ಯ ಅಂತ್ಯ

    ಘಟನೆ ಕುರಿತು ಮಾತನಾಡಿದ ತೃಪ್ತಿ ರಂಜನ್ ನಾಯಕ್, ಸಾರ್ಥಕ್ ಮಹಾದಿಕ್ ಎಂಬಾತನಿಂದ ಬಿಹಾರದ ದಂಪತಿಗಳು ತಮ್ಮ ಮಗುವನ್ನು ಮಾರಾಟ ಮಾಡಿರುವ ಮಾಹಿತಿ ಗೊತ್ತಾಯಿತು. ತಕ್ಷಣ ಕಾರ್ಯಾಚರಣೆ ನಡೆಸಿ, ಮಗುವನ್ನು ರಕ್ಷಿಸಿದ್ದೇವೆ. ಪೋಷಕರು ಸೇರಿ 6 ಜನರನ್ನ ಬಂಧಿಸಿ ತನಿಖೆ ನಡೆಸುತ್ತಿದ್ದೇವೆ. ಪೋಷಕರು ಮಗುವನ್ನು ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಂವಿಧಾನ ಪುಸ್ತಕ ಹಿಡಿದು ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣವಚನ ಸ್ವೀಕಾರ

  • ಒಡಿಶಾ ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ ತಿಂಗಳಿಗೆ 1 ಮುಟ್ಟಿನ ರಜೆ ಘೋಷಣೆ

    ಒಡಿಶಾ ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ ತಿಂಗಳಿಗೆ 1 ಮುಟ್ಟಿನ ರಜೆ ಘೋಷಣೆ

    ಭುವನೇಶ್ವರ್: ಒಡಿಶಾ (Odisha) ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ ತಿಂಗಳಿಗೆ 1 ದಿನ ಮುಟ್ಟಿನ ರಜೆಯನ್ನು ಘೋಷಣೆ ಮಾಡಿದೆ.

    ಮಹಿಳೆಯರು ವಾರ್ಷಿಕವಾಗಿ ಪ್ರಸ್ತುತ ಪಡೆಯುವ 15 ದಿನಗಳ ಸಾಂದರ್ಭಿಕ ರಜೆ (CL) ಹೊರತಾಗಿ ವಾರ್ಷಿಕವಾಗಿ 12 ದಿನಗಳ ಹೆಚ್ಚುವರಿ ರಜೆ ಸಿಗಲಿದೆ ಎಂದು ಸಿಎಂ ಕಚೇರಿ ಬಿಡುಗಡೆ ಮಾಡಿರುವ ಅಧಿಕೃತ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ: ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ರಾಯಗಢ ಜಲಪಾತದ ಬಳಿ ಶೂಟಿಂಗ್ ಅಭ್ಯಾಸ ನಡೆಸಿದ್ದ ಹಂತಕರು

    ಮಹಿಳಾ ಉದ್ಯೋಗಿಗಳು ತಿಂಗಳಿಗೆ ಒಂದು ದಿನದ ವೇತನ ಸಹಿತ ಋತುಚಕ್ರದ ರಜೆಗೆ ಅರ್ಹರಾಗಿರುತ್ತಾರೆ ಎಂದು ಸ್ವಾತಂತ್ರ‍್ಯ ದಿನದಂದು ಉಪಮುಖ್ಯಮಂತ್ರಿ ಪ್ರವತಿ ಪರಿದಾ ಅವರು ಘೋಷಣೆಯನ್ನು ಮಾಡಿದ್ದರು. ಅದರನ್ವಯ ಸರ್ಕಾರ ಈಗ ಜಾರಿ ಮಾಡಿದೆ. ಇದನ್ನೂ ಓದಿ: ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು, ಇದು ಸಾಧ್ಯತೆಯ ಕಲೆ: ಡಿಕೆ ಶಿವಕುಮಾರ್‌

    ಹಿಂದಿನ ಬಿಜೆಡಿ ಸರ್ಕಾರವು ಕುಟುಂಬದ ಜವಾಬ್ದಾರಿಗಳು ಮತ್ತು ಮಹಿಳೆಯರ ವಿವಿಧ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ರಜೆ ಘೋಷಿಸಿತ್ತು. ಈಗ, ಮಹಿಳೆಯರಿಗೆ ಸಿಎಲ್‌ಗಳ ಸಂಖ್ಯೆ ಎರಡು ಪಟ್ಟು ಹೆಚ್ಚಾಗಿದೆ. ಇದನ್ನೂ ಓದಿ: ಆಪರೇಷನ್ ಆಲೌಟ್ ಜೆಡಿಎಸ್ – ಸಿಎಂ ಮುಂದೆ ಡಿಕೆಶಿ ಶಪಥ

    ಒಡಿಶಾ ಸರ್ಕಾರದ ಎಲ್ಲಾ ಮಹಿಳಾ ಉದ್ಯೋಗಿಗಳು ಪ್ರಸ್ತುತ ಪಡೆಯುವ 15 ದಿನಗಳನ್ನು ಹೊರತುಪಡಿಸಿ ವಾರ್ಷಿಕವಾಗಿ ಹೆಚ್ಚುವರಿ ಸಿಎಲ್‌ಗಳನ್ನು ಪಡೆಯಬಹುದು ಎಂದು ಅಧಿಕೃತ ಟಿಪ್ಪಣಿಯಲ್ಲಿ ಸರ್ಕಾರ ಮಂಗಳವಾರ ತಿಳಿಸಿದೆ. ಈ ಕುರಿತು ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ (Mohan Charan Majhi) ನಿರ್ದೇಶನ ನೀಡಿದ್ದಾರೆ ಎಂದು ತಿಳಿಸಿದೆ. ಇದನ್ನೂ ಓದಿ: ಕೋಲಾರ | ಎಂಜಿನಿಯರಿಂಗ್ ಬಿಟ್ಟು ವ್ಯವಸಾಯದಲ್ಲಿ ತೊಡಗಿದ್ದ ರೈತನ 9 ಎಕರೆ ಬೆಳೆ ನಾಶ

    ಈಗ, ಮಹಿಳಾ ಉದ್ಯೋಗಿಗಳಿಗೆ ಸಿಎಲ್‌ಗಳ ಸಂಖ್ಯೆ 27 ದಿನಗಳಾಗಿದ್ದು, ಪುರುಷರು 15 ದಿನಗಳ ಸಿಎಲ್ ಅರ್ಹರಾಗಿರುತ್ತಾರೆ. ಇದನ್ನೂ ಓದಿ: ಧಾರವಾಡ| ನದಿಯಲ್ಲಿ ಕೊಚ್ಚಿ ಹೋಯ್ತು ಕಾರು- ಮರ ಏರಿದ್ದ ಚಾಲಕನ ರಕ್ಷಣೆ

  • ಬಟ್ಟೆ ಬಿಚ್ಚಿ ಹಲ್ಲೆ ಮಾಡಿದ್ರು; ಒಡಿಶಾ ಠಾಣೆಯಲ್ಲಿ ಅನುಭವಿಸಿದ ಯಾತನೆಯ ಕತೆ ಹೇಳಿದ ಸೇನಾಧಿಕಾರಿಯ ಭಾವಿ ಪತ್ನಿ

    ಬಟ್ಟೆ ಬಿಚ್ಚಿ ಹಲ್ಲೆ ಮಾಡಿದ್ರು; ಒಡಿಶಾ ಠಾಣೆಯಲ್ಲಿ ಅನುಭವಿಸಿದ ಯಾತನೆಯ ಕತೆ ಹೇಳಿದ ಸೇನಾಧಿಕಾರಿಯ ಭಾವಿ ಪತ್ನಿ

    – ಸೇನಾಧಿಕಾರಿಗಳ ಮಧ್ಯಪ್ರವೇಶದ ಬಳಿಕ ಎಚ್ಚೆತ್ತ ಒಡಿಶಾ ಪೊಲೀಸ್
    – ಐವರು ಅಧಿಕಾರಿಗಳ‌ ವಿರುದ್ಧ ಎಫ್‌ಐಆರ್‌, ಅಮಾನತು

    ಭುವನೇಶ್ವರ: ಇಲ್ಲಿನ ಭರತ್‌ಪುರ ಪೊಲೀಸ್ ಠಾಣೆಯಲ್ಲಿ (Bharatpur police Station) ಹಲ್ಲೆಗೊಳಗಾದ ಸೇನಾ ಅಧಿಕಾರಿಯ ಭಾವಿ ಪತ್ನಿ ಜೈಲಿಂದ ಬಿಡುಗಡೆಯಾದ ಬಳಿಕ ಪೊಲೀಸರ ವಿರುದ್ಧ ಹಲ್ಲೆ, ಲೈಂಗಿಕ ಕಿರುಕುಳ ಮತ್ತು ಅಕ್ರಮ ಬಂಧನದ ಆರೋಪ ಮಾಡಿದ್ದಾರೆ.

    ಹೌದು. ಇದೇ ಸೆಪ್ಟೆಂಬರ್‌ 14ರಂದು ಭುವನೇಶ್ವರದಲ್ಲಿ (Bhubaneswar) ರೆಸ್ಟೋರೆಂಟ್ ಮುಚ್ಚಿದ ಬಳಿಕ ನಾನು ನನ್ನ ಭಾವಿ ಪತಿಯ ಜೊತೆ ಮನೆಗೆ ಹೋಗುತ್ತಿದ್ದಾಗ ಗುಂಪೊಂದು ನಮ್ಮ ಮೇಲೆ ಹಲ್ಲೆ ಮಾಡಿದೆ. ಈ ಬಗ್ಗೆ ಭರತ್‌ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಪ್ರಯತ್ನಿಸಿದೆವು. ಆದ್ರೆ ದೂರು ನೀಡಲು ಹೋದ ನಮ್ಮನ್ನೇ ಲಾಕಪ್‌ಗೆ ಹಾಕಿ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಇದನ್ನೂ ಓದಿ: ಅಮೆರಿಕದಲ್ಲಿ ಭಾರತ ಮೂಲದ ಧ್ರುವಿ ಪಟೇಲ್‌ಗೆ ಮಿಸ್ ಇಂಡಿಯಾ ವರ್ಲ್ಡ್‌ವೈಡ್ ಕಿರೀಟ!

    ಆ ದಿನ ಏನಾಯ್ತು?
    ರೆಸ್ಟೋರೆಂಟ್‌ನಿಂದ ಮನೆಗೆ ಹೋಗುವಾಗ ದುಷ್ಕರ್ಮಿಗಳ ಗುಂಪೊಂದು ನಮ್ಮ ಬೆಟ್ಟಿತು. ನಾವು ಭರತ್‌ಪುರ ಪೊಲೀಸ್ ಠಾಣೆಗೆ ದೂರು ಕೊಡಲು ಹೋದಾಗ ಅಲ್ಲಿ ಒಬ್ಬ ಮಹಿಳಾ ಕಾನ್‌ಸ್ಟೆಬಲ್ ಮಾತ್ರ ಸಿವಿಲ್ ಡ್ರೆಸ್‌ನಲ್ಲಿದ್ದರು. ಅವರು ನಮಗೆ ಸಹಾಯ ಮಾಡಲು ನಿರಾಕರಿಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿದರು. ಈ ವೇಳೆ ಕೆಲ ಪುರುಷ ಪೊಲೀಸರು ಸ್ಥಳಕ್ಕೆ ಆಗಮಿಸಿ ಲಿಖಿತ ಹೇಳಿಕೆ ಕೊಡುವಂತೆ ನಮ್ಮನ್ನ ಕೇಳಿದರು. ಬಳಿಕ ನನ್ನ ಸಂಗಾತಿಯನ್ನು ಲಾಕಪ್‌ಗೆ ಹಾಕಿದರು. ಆರ್ಮಿ ಅಧಿಕಾರಿಗಳನ್ನು ಅಕ್ರಮವಾಗಿ ಕಸ್ಟಡಿಯಲ್ಲಿ ಇರಿಸಲು ಸಾಧ್ಯವಿಲ್ಲ ಎಂದು ನಾನು ಹೇಳಿದೆ. ಈ ವೇಳೆ ಇಬ್ಬರು ಮಹಿಳಾ ಅಧಿಕಾರಿಗಳು ಬಂದು ನನ್ನ ಮೇಲೆ ಹಲ್ಲೆ ನಡೆಸಿದರು. ಬಳಿಕ ಲಾಕಪ್‌ನಲ್ಲಿ ಕೂಡಿ ಹಾಕಿದರು ಎಂದು ಮಹಿಳೆ ಆರೋಪಿಸಿದ್ದಾರೆ.

    ನಂತರ ನಾನು ಸಹಾಯಕ್ಕಾಗಿ ಚೀರಾಡುತ್ತಿದ್ದಾಗ ಯಾರೂ ಬರಲಿಲ್ಲ. ಠಾಣೆಯ ಪೊಲೀಸ್‌ ಇನ್ಸ್‌ಪೆಕ್ಟರ್ ಬೆಳಿಗ್ಗೆ 6 ಗಂಟೆ ಸುಮಾರಿಗೆ ಬಂದರು. ತಮ್ಮ ಪ್ಯಾಂಟ್ ಅನ್ನು ಕೆಳಕ್ಕೆ ಇಳಿಸಿ, ಅವರ ಖಾಸಗಿ ಅಂಗಾಂಗಳನ್ನು ತೋರಿಸಿ ಹಿಂಸೆ ಮಾಡಿದರು. ಅವಾಚ್ಯ ಶಬ್ಧಗಳಿಂದ ನಿಂದಿಸಿದರು. ಬಟ್ಟೆ ಬಿಚ್ಚಿಸಿ ಹಲ್ಲೆ ಮಾಡಿದರು, ನನ್ನ ಎದೆಗೆ ಜಾಡಿಸಿ ಒದ್ದರು ಎಂದು ಆರೋಪಿಸಿದ್ದಾರೆ. ಮಹಿಳೆಯ ಆರೋಪದ ತೀವ್ರತೆಯನ್ನು ಪರಿಗಣಿಸಿ ಒಡಿಶಾ ಹೈಕೋರ್ಟ್ ಮಹಿಳೆಗೆ ಗುರುವಾರ ಜಾಮೀನು ನೀಡಿತು. ಇದನ್ನೂ ಓದಿ: ತಿರುಪತಿ ಲಡ್ಡು ಪ್ರಸಾದದಲ್ಲಿ ಮೀನಿನ ಎಣ್ಣೆ ಬೆರೆಸಿರುವುದು ಸ್ಪಷ್ಟವಾಗಿದೆ: ರಾಮಜನ್ಮಭೂಮಿ ಪ್ರಧಾನ ಅರ್ಚಕ

    ಇದಕ್ಕೂ ಮುನ್ನ ಪೊಲೀಸರು ಸಹ ಸೇನಾ ಅಧಿಕಾರಿ ಮತ್ತವರ ಭಾವಿ ಪತ್ನಿ ವಿರುದ್ಧ ಆರೋಪಿಸಿದ್ದರು. ಅವರಿಬ್ಬರು ಕುಡಿದು ಕೋಲ್ಕತ್ತಾದ 22 ಸಿಖ್ ರೆಜಿಮೆಂಟ್‌ನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದಾರೆ, ಪೊಲೀಸ್ ಠಾಣೆಯೊಳಗಿನ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದರು.

    ಪ್ರಕರಣವು ತೀವ್ರ ಸ್ವರೋಪ ಪಡೆದುಕೊಳ್ಳುತ್ತಿದ್ದಂತೆ ಭರತ್‌ಪುರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸೇರಿದಂತೆ ಐವರು ಅಧಿಕಾರಿಗಳನ್ನ ಅಮಾನತುಗೊಳಿಸಿದ್ದಾರೆ. ರಾಷ್ಟ್ರೀಯ ಮಹಿಳಾ ಆಯೋಗ ಸಹ ಪ್ರಕರಣದಲ್ಲಿ ಮಧ್ಯಪ್ರವೇಶಿಸಿದ್ದು, ಈ ಕುರಿತು ಪೊಲೀಸರಿಂದ ವರದಿಯನ್ನು ಕೇಳಿದೆ ಎಂದು ಒಡಿಶಾ ಪೊಲೀಸ್ ಉನ್ನತ ಮೂಲಗಳು ತಿಳಿಸಿದೆ. ಈ ಮಧ್ಯೆ ಸೇನಾಧಿಕಾರಿ ದೂರು ದಾಖಲಿಸಿದ ನಂತರ ಐವರು ಪೊಲೀಸ್ ಅಧಿಕಾರಿಗಳ ವಿರುದ್ಧ ಅಧಿಕೃತವಾಗಿ ಎಫ್‌ಐಆರ್ ದಾಖಲಿಸಲಾಗಿದೆ. ಇದನ್ನೂ ಓದಿ: ತಿರುಪತಿ ಲಡ್ಡು ವಿವಾದ – ವರದಿ ಕೇಳಿದ ಕೇಂದ್ರ ಸರ್ಕಾರ

    ಪ್ರಕರಣದ ಇಂಚಿಂಚು ಮಾಹಿತಿ:
    ಸೆಪ್ಟೆಂಬರ್ 14: ಮಧ್ಯರಾತ್ರಿ
    * ಅಪರಿಚಿತರ ದುಷ್ಕರ್ಮಿಗಳ ಗುಂಪೊಂದು ಸೇನಾಧಿಕಾರಿ ಮತ್ತು ಅವರ ಪತ್ನಿಯನ್ನು ಭುವನೇಶ್ವರದಲ್ಲಿ ಬೆನ್ನಟ್ಟಿಕೊಂಡು ಬಂದಿತು. ಕೊನೆಗೆ ಅವರು ರಕ್ಷಣೆ ಕೋರಿ ಸಮೀಪದ ಠಾಣೆಗೆ ದೌಡಾಯಿಸಿದರು.

    ಸೆಪ್ಟೆಂಬರ್ 15: ಮಧ್ಯರಾತ್ರಿ 1 ಗಂಟೆ
    ಸೇನಾ ಅಧಿಕಾರಿ ಹಾಗೂ ಭಾವಿ ಪತ್ನಿ ಇಬ್ಬರು ಭರತ್‌ಪುರ ಪೊಲೀಸ್ ಠಾಣೆಗೆ ದೂರು ದಾಖಲಿಸಲು ಬಂದರು.

    ಸೆಪ್ಟೆಂಬರ್ 15: ಮಧ್ಯರಾತ್ರಿ 1.30 ರಿಂದ 3 ಗಂಟೆ
    ದೂರು ನೀಡಲು ಹೋದವರನ್ನೇ ಪೊಲೀಸರು ಲಾಕಪ್‌ಗೆ ತಳ್ಳಿ ತೀವ್ರವಾಗಿ ಹಲ್ಲೆ ನಡೆಸಿದರು. ಈ ವೇಲೆ ತನ್ನ ಬಟ್ಟೆ ಬಿಚ್ಚಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ, ದೈಹಿಕವಾಗಿ ಹಿಂಸಿಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

    ಸೆಪ್ಟೆಂಬರ್ 16:
    ಘಟನೆಯ ಬಗ್ಗೆ ಸೇನೆಗೆ ತಿಳಿದ ನಂತರ, ಅದು ಒಡಿಶಾ ಸರ್ಕಾರದೊಂದಿಗೆ ಸಂಪರ್ಕಿಸಲಾಯಿತು.

    ಸೆಪ್ಟೆಂಬರ್ 17:
    ಪ್ರಕರಣ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಒಡಿಶಾ ಸರ್ಕಾರವು ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿತು.

    ಸೆಪ್ಟೆಂಬರ್ 18:
    ಸೇನಾಧಿಕಾರಿ ಭಾವಿ ಪತ್ನಿ ಆರೋಪದ ಬಳಿಕ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಇದೇ ವೇಳೆ ಪೊಲೀಸರಿಂದ ಹಲ್ಲೆಗೊಳಗಾದ ಮಹಿಳೆಗೆ ಜಾಮೀನು ನೀಡಿದೆ.

    ಸೆಪ್ಟೆಂಬರ್ 19:
    ಜೈಲಿಂದ ಬಿಡುಗಡೆ ಮಾಡಲಾಯಿತು. ಬಳಿಕ ಅವರು ಪೊಲೀಸ್‌ ಠಾಣೆಯಲ್ಲಿ ಅನುಭವಿಸಿದ ನರಕಯಾತನೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟರು.

    ಸೆಪ್ಟೆಂಬರ್ 20:
    ಸೇನಾಧಿಕಾರಿ ದೂರನ್ನು ದಾಖಲಿಸಿದ ನಂತರ ಐವರು ಪೊಲೀಸ್ ಅಧಿಕಾರಿಗಳ ವಿರುದ್ಧ ಅಧಿಕೃತವಾಗಿ ಎಫ್‌ಐಆರ್ ದಾಖಲಿಸಲಾಗಿದೆ.

  • ಚಿಕಿತ್ಸೆ ಪಡೆಯುತ್ತಿದ್ದ 27ರ ಒಡಿಶಾ ಗಾಯಕಿ ರುಕ್ಸಾನಾ ಬಾನೊ ಆಸ್ಪತ್ರೆಯಲ್ಲೇ ಸಾವು!

    ಚಿಕಿತ್ಸೆ ಪಡೆಯುತ್ತಿದ್ದ 27ರ ಒಡಿಶಾ ಗಾಯಕಿ ರುಕ್ಸಾನಾ ಬಾನೊ ಆಸ್ಪತ್ರೆಯಲ್ಲೇ ಸಾವು!

    ಭುವನೇಶ್ವರ: ಜನಪ್ರಿಯ ಒಡಿಶಾ ಗಾಯಕಿ (Odisha Singer) ರುಕ್ಸಾನಾ ಬಾನೊ ಅವರು ಭುವನೇಶ್ವರದ ಏಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗಲೇ ಸಾವನ್ನಪ್ಪಿರುವ ಘಟನೆ ಒಡಿಶಾದಲ್ಲಿ ನಡೆದಿದೆ.

    27 ವರ್ಷದ ರುಕ್ಸಾನಾ ಸ್ಕ್ರಬ್ ಟೈಫಸ್‌ (Scrub Typhus) (ಬ್ಯಾಕ್ಟೀರಿಯಾದಿಂದ ಉಂಟಾಗುವ ಕಾಯಿಲೆ) ಚಿಕಿತ್ಸೆಗೆ ಒಳಗಾಗಿದ್ದರು ಎಂದು ವೈದ್ಯರು ತಿಳಿಸಿದ್ದಾರೆ. ಆದ್ರೆ ಸಾವಿಗೆ ನಿಖರ ಕಾರಣವನ್ನು ಬಹಿರಂಗಪಡಿಸಿಲ್ಲ. ಆದಾಗ್ಯೂ ಅವರಿಗೆ ನಿರಂತರ ಬೆದರಿಕೆಗಳು ಬರುತ್ತಿದ್ದವು, ಜೊತೆಗೆ ತನ್ನ ಪ್ರತಿಸ್ಪರ್ಧಿ ಗಾಯಕನಿಂದಾಗಿ ವಿಷ ಸೇವಿಸಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

    ಆಗಿದ್ದೇನು?
    ಸುಮಾರು 15 ದಿನಗಳ ಹಿಂದೆ ರುಕ್ಸಾನಾ ಅವರು ಬೋಲಂಗಿರ್‌ನಲ್ಲು ಶೂಟಿಂಗ್‌ ಮಾಡುತ್ತಿದ್ದರು. ಈ ವೇಳೆ ಅವರು ಜ್ಯೂಸ್‌ ಕುಡಿದರು. ಜ್ಯೂಸ್‌ ಕುಡಿದ ಕೆಲವೇ ಕ್ಷಣಗಳಲ್ಲಿ ಅಸ್ವಸ್ಥರಾಗಿದ್ದರು, ನಂತರ ಅವರನ್ನು ಭವಾನಿಪಟ್ಟಣದಲ್ಲಿರುವ ಭೀಮಾ ಭೋಯ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದ್ದರಿಂದ ಬಾರ್‌ಗಢ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿಯೂ ಆಕೆ ಆರೋಗ್ಯದಲ್ಲಿ ಸುಧಾರಣೆ ಕಂಡುಬರದ ಕಾರಣ ಭುವನೇಶ್ವರದ ಏಮ್ಸ್‌ಗೆ ಕರೆತರಲಾಯಿತು ಎಂದು ಆಕೆಯ ಸಹೋದರಿ ರೂಬಿ ಬಾನೊ ತಿಳಿಸಿದ್ದಾರೆ.

    ಮೃತನ ತಾಯಿ ಕೂಡ ಇದೇ ರೀತಿ ಹೇಳಿಕೆ ನೀಡಿ ವಿಡಿಯೋ ಸಂದೇಶವನ್ನು ನೀಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

  • ಹಾವು ಕಚ್ಚಿಸಿ ಪತ್ನಿ, ಎರಡು ವರ್ಷದ ಮಗಳ ಹತ್ಯೆ- ಆರೋಪಿ ಅರೆಸ್ಟ್

    ಹಾವು ಕಚ್ಚಿಸಿ ಪತ್ನಿ, ಎರಡು ವರ್ಷದ ಮಗಳ ಹತ್ಯೆ- ಆರೋಪಿ ಅರೆಸ್ಟ್

    ಭುವನೇಶ್ವರ್: ವಿಷಪೂರಿತ ಹಾವನ್ನು (Snake) ಹೆಂಡತಿ (Wife) ಮತ್ತು ಮಗಳು ಮಲಗಿದ್ದ ಕೋಣೆಗೆ ಬಿಟ್ಟು ಅವರನ್ನು ಕೊಲೆಗೈದಿದ್ದ ಆರೋಪಿಯನ್ನು ಒಡಿಶಾ (Odisha) ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ಕೆ.ಗಣೇಶ್ (25) ಎಂದು ಗುರುತಿಸಲಾಗಿದೆ. ಆರೋಪಿ ಅಧೇಗಾಂವ್ ಗ್ರಾಮದ ತನ್ನ ಮನೆಯಲ್ಲಿ ಹೆಂಡತಿ ಬಸಂತಿ ಪತ್ರಾ (23) ಹಾಗೂ ತನ್ನ 2 ವರ್ಷದ ಮಗಳು ದೇಬಾಸ್ಮಿತಾ ಮಲಗಿದ್ದ ವೇಳೆ ಅವರನ್ನು ಕೊಲ್ಲುವ ಉದ್ದೇಶದಿಂದ ರೂಂ ಒಳಗೆ ಹಾವನ್ನು ಬಿಟ್ಟಿದ್ದ. ಬಳಿಕ ಆಕಸ್ಮಿಕವಾಗಿ ಹಾವು ಕಚ್ಚಿದೆ ಎಂಬಂತೆ ಬಿಂಬಿಸಿದ್ದ. ಇದನ್ನೂ ಓದಿ: ಡ್ರಗ್ಸ್‌ ಖರೀದಿಸಲು 74,000 ರೂ.ಗೆ ಹೆತ್ತ ಮಕ್ಕಳನ್ನೇ ಮಾರಾಟ ಮಾಡಿದ ಪೋಷಕರು – ಅಪ್ಪ-ಅಮ್ಮ ಅರೆಸ್ಟ್‌

    ಈ ಸಂಬಂಧ ಮೃತ ಮಹಿಳೆಯ ಮಾವ ಅನುಮಾನ ವ್ಯಕ್ತಪಡಿಸಿ, ಪ್ರಕರಣ ದಾಖಲಿಸಿದ್ದರು. ಆರಂಭದಲ್ಲಿ ಇದು ಆಕಸ್ಮಿಕವಾಗಿ ಸಂಭವಿಸಿದೆ ಎಂದು ಪೊಲೀಸರು ಭಾವಿಸಿದ್ದರು. ಬಳಿಕ ತನಿಖೆ ನಡೆಸಿ ಸಾಕ್ಷ್ಯ ಕಲೆಹಾಕಿ ಘಟನೆ ನಡೆದ ಒಂದು ತಿಂಗಳ ಬಳಿಕ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಆರೋಪಿ ಅಕ್ಟೋಬರ್ 6 ರಂದು ಹಾವಾಡಿಗನಿಂದ, ಧಾರ್ಮಿಕ ಕಾರ್ಯಕ್ರಮಕ್ಕೆ ಎಂದು ಹಾವು ತಂದಿದ್ದ ಎಂದು ತಿಳಿದು ಬಂದಿದೆ. ಮೊದಲು ಆರೋಪಿ ತನ್ನ ಮೇಲಿನ ಆರೋಪವನ್ನು ನಿರಾಕರಿಸಿದ್ದ. ಬಳಿಕ ತೀವ್ರ ವಿಚಾರಣೆ ವೇಳೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಆರೋಪಿ ಹಾಗೂ ಆತನ ಪತ್ನಿ ನಡುವೆ ಕೌಟುಂಬಿಕ ಕಲಹ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಹಿಂದೆ 2020ರಲ್ಲಿ ಕೇರಳದ ಕೊಲ್ಲಂನಲ್ಲಿ ಆಸ್ತಿಗಾಗಿ ವ್ಯಕ್ತಿಯೊಬ್ಬ ಪತ್ನಿಯನ್ನು ಇದೇ ಮಾದರಿಯಲ್ಲಿ ಕೊಲೆಗೈದು ಹಾವಿನ ದ್ವೇಷದ ಕಥೆ ಕಟ್ಟಿದ್ದ. ಬಳಿಕ ಪತಿ ಹಾಗೂ ಕೃತ್ಯಕ್ಕೆ ಸಹಕರಿಸಿದ್ದ ಹಾವಾಡಿಗನನ್ನು ಕೇರಳ ಪೊಲೀಸರು ಬಂಧಿಸಿದ್ದರು. ಅಂಚಲ್ ನಿವಾಸಿ ಸೂರಜ್ (27) ಕೊಲೆಗೈದ ಪತಿ ಹಾಗೂ ಸುರೇಶ್ ಕೊಲೆಗೆ ಸಹಕರಿಸಿದ ಹಾವಾಡಿಗನಾಗಿದ್ದ. ಎಸ್.ಉತ್ತರ (25) ಕೊಲೆಯಾದ ಮಹಿಳೆ ಆಗಿದ್ದಳು. ಇದನ್ನೂ ಓದಿ: ಮಥುರಾದ ಪಟಾಕಿ ಮಳಿಗೆಯಲ್ಲಿ ಅಗ್ನಿ ಅವಘಡ- ಮೃತರ ಸಂಖ್ಯೆ 12ಕ್ಕೆ ಏರಿಕೆ

  • ಚಾಲಕನಿಗೆ ಹೃದಯ ಸ್ತಂಭನ- ಸಾಯೋ ಮೊದ್ಲು 48 ಪ್ರಯಾಣಿಕರ ರಕ್ಷಿಸಿದ ಬಸ್ ಚಾಲಕ

    ಚಾಲಕನಿಗೆ ಹೃದಯ ಸ್ತಂಭನ- ಸಾಯೋ ಮೊದ್ಲು 48 ಪ್ರಯಾಣಿಕರ ರಕ್ಷಿಸಿದ ಬಸ್ ಚಾಲಕ

    ಭುವನೇಶ್ವರ: ಬಸ್ ಚಲಾಯಿಸುತ್ತಿದ್ದ ಸಂದರ್ಭ ಚಾಲಕ (Driver) ಹೃದಯ ಸ್ತಂಭನಕ್ಕೆ (Cardiac Arrest) ಒಳಗಾಗಿದ್ದು, ಕೊನೆಯುಸಿರೆಳೆಯುವ ಮೊದಲು ಬಸ್‌ನಲ್ಲಿದ್ದ 48 ಪ್ರಯಾಣಿಕರ (Passengers) ಪ್ರಾಣ ಉಳಿಸಿದ ಘಟನೆ ಒಡಿಶಾದ (Odisha) ಭುವನೇಶ್ವರದಲ್ಲಿ (Bhubaneswar) ನಡೆದಿದೆ.

    ಕಂಧಮಾಲ್ ಜಿಲ್ಲೆಯ ಪಬುರಿಯಾ ಗ್ರಾಮದ ಬಳಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಮೃತ ಚಾಲಕನನ್ನು ಸನಾ ಪ್ರಧಾನ್ ಎಂದು ಗುರುತಿಸಲಾಗಿದ್ದು, ಬಸ್ ಚಾಲನೆ ಮಾಡುವಾಗ ಎದೆ ನೋವು ಕಾಣಿಸಿಕೊಂಡಿದೆ. ಬಳಿಕ ಸ್ಟೇರಿಂಗ್‌ನ ನಿಯಂತ್ರಣವನ್ನು ಕಳೆದುಕೊಂಡಿದ್ದಾರೆ. ಈ ವೇಳೆ ಬಸ್ ಅನ್ನು ರಸ್ತೆ ಬದಿಯ ಗೋಡೆಯೊಂದಕ್ಕೆ ಡಿಕ್ಕಿ ಹೊಡೆದು ನಿಲ್ಲಿಸುವ ಮೂಲಕ ಪ್ರಯಾಣಿಕರ ಜೀವವನ್ನು ಉಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಆರ್ಥಿಕ ಸಂಕಷ್ಟ – ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆ

    ಖಾಸಗಿ ಬಸ್ ‘ಮಾ ಲಕ್ಷ್ಮಿ’ ಸಾಮಾನ್ಯವಾಗಿ ಪ್ರತಿ ರಾತ್ರಿ ಕಂಧಮಾಲ್‌ನ ಸಾರಂಗರ್‌ನಿಂದ ಜಿ ಉದಯಗಿರಿ ಮೂಲಕ ರಾಜ್ಯದ ರಾಜಧಾನಿ ಭುವನೇಶ್ವರಕ್ಕೆ ಚಲಿಸುತ್ತದೆ. ಘಟನೆಯ ಬಳಿಕ ಚಾಲಕನನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಲ್ಲಿನ ವೈದ್ಯರು ಹೃದಯ ಸ್ತಂಭನದಿಂದಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು. ಇದನ್ನೂ ಓದಿ: ಕಳ್ಳತನಕ್ಕೆ ಯತ್ನ – ಮಹಿಳೆಗೆ ಗುಂಡು ಹಾರಿಸಿ ಹತ್ಯೆ

    ಮರಣೋತ್ತರ ಪರೀಕ್ಷೆಯ ನಂತರ ಪ್ರಧಾನ್ ಅವರ ದೇಹವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಈ ಕುರಿತು ತನಿಖೆಯನ್ನೂ ಆರಂಭಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ದರೋಡೆ, ಅತ್ಯಾಚಾರ, ಜೈಲಿಗೆ ಹೋಗೋದ್ರಲ್ಲಿ ಮುಸ್ಲಿಮರೇ ನಂ.1- ವಿವಾದಕ್ಕೀಡಾದ ಅಜ್ಮಲ್ ಹೇಳಿಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಒಡಿಶಾ ರೈಲು ದುರಂತ – ಭುವನೇಶ್ವರದಲ್ಲಿ ಅಧಿಕಾರಿಗಳೊಂದಿಗೆ ಸಂತೋಷ್ ಲಾಡ್ ಸಭೆ

    ಒಡಿಶಾ ರೈಲು ದುರಂತ – ಭುವನೇಶ್ವರದಲ್ಲಿ ಅಧಿಕಾರಿಗಳೊಂದಿಗೆ ಸಂತೋಷ್ ಲಾಡ್ ಸಭೆ

    ಭುವನೇಶ್ವರ: ಒಡಿಶಾದ ಬಹನಾಗ್‍ನಲ್ಲಿ ನಡೆದ ಭೀಕರ ರೈಲು ದುರಂತಕ್ಕೆ (Odisha Train Accident) ಸಂಬಂಧಿಸಿದಂತೆ ಕರ್ನಾಟಕದ ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad) ಅವರು ಭುವನೇಶ್ವರದ (Bhubaneswar)  ರಾಜೀವ್ ಭವನದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

    ಅಪಘಾತ ನಡೆದ ಸ್ಥಳದಲ್ಲಿ ಕೈಗೊಳ್ಳಲಾದ ಕ್ರಮಗಳ ಬಗ್ಗೆ ಪರಿಹಾರ ಹಾಗೂ ರಕ್ಷಣಾ ಕಾರ್ಯಾಚರಣೆಗಳ ಆಯುಕ್ತರು ಹಾಗೂ ಎನ್‍ಡಿಆರ್‍ಎಫ್ ಮುಖ್ಯಸ್ಥರೊಂದಿಗೆ ಚರ್ಚಿಸಲಾಯಿತು. ಅಲ್ಲದೆ ದುರಂತದಲ್ಲಿ ಕರ್ನಾಟಕದ ಪ್ರಯಾಣಿಕರು ಸಿಲುಕಿ ತೊಂದರೆಗೊಳಗಾಗಿರುವ ಬಗ್ಗೆ ಸಚಿವರು ಮಾಹಿತಿ ಪಡೆದಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ದುರಂತಕ್ಕೆ ಕಾರಣರಾದವರನ್ನು ಸುಮ್ಮನೆ ಬಿಡಲ್ಲ: ಪ್ರಧಾನಿ ಮೋದಿ

    ಸಂತೋಷ್ ಲಾಡ್ ಅವರು ಈಗಾಗಲೇ ದುರಂತ ನಡೆದ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದರು. ಜೊತೆಗೆ ಕರ್ನಾಟಕದ ಪ್ರಯಾಣಿಕರ ರಕ್ಷಣಾ ಕಾರ್ಯದಲ್ಲಿ ಸೂಕ್ತ ಕ್ರಮ ಕೈಗೊಂಡಿದ್ದರು. ಸಚಿವರೊಂದಿಗೆ ರಾಜ್ಯದ ಅಧಿಕಾರಿಗಳು ಸಹ ತೆರಳಿದ್ದಾರೆ. ಅವರು ಆಸ್ಪತ್ರೆ, ಶವಾಗಾರಗಳಿಗೆ ಭೇಟಿ ನೀಡಿ ರಾಜ್ಯದ ಪ್ರಯಾಣಿಕರ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

    ಅಪಘಾತವಾದ ರೈಲುಗಳಲ್ಲಿದ್ದ ಕರ್ನಾಟಕದ ಪ್ರಯಾಣಿಕರ ರಕ್ಷಣೆಗೆ ಕರ್ನಾಟಕ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ರೈಲುಗಳಲ್ಲಿ ಪ್ರಯಾಣಿಸುತ್ತಿದ್ದ ಬಹುತೇಕ ಕನ್ನಡಿಗರು ಸುರಕ್ಷಿತವಾಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ಅಪಘಾತದಿಂದ ಪಾರಾಗಿ ಬಂದಿದ್ದವರು ಹೊರಟಿದ್ದ ಬಸ್ ಅಪಘಾತ- ಹಲವರ ಸ್ಥಿತಿ ಗಂಭೀರ

  • ಪರೀಕ್ಷೆಗೆ ಚೆನ್ನಾಗಿ ಓದಿಲ್ಲ ಅಂತ ಕಬ್ಬಿಣದ ರಾಡ್‌ನಿಂದ ಥಳಿಸಿದ ಅಣ್ಣ – ಸಹೋದರ ಸಾವು

    ಪರೀಕ್ಷೆಗೆ ಚೆನ್ನಾಗಿ ಓದಿಲ್ಲ ಅಂತ ಕಬ್ಬಿಣದ ರಾಡ್‌ನಿಂದ ಥಳಿಸಿದ ಅಣ್ಣ – ಸಹೋದರ ಸಾವು

    ಭುವನೇಶ್ವರ: ಕಾಲೇಜು ವಿದ್ಯಾರ್ಥಿಯೊಬ್ಬ (College Student) ಪರೀಕ್ಷೆಗೆ ಚೆನ್ನಾಗಿ ಓದಿಲ್ಲ ಅಂತ ಆತನ ಸಹೋದರ (Brother) ಮನಬಂದಂತೆ ಥಳಿಸಿ, ತಮ್ಮನ ಸಾವಿಗೆ ಕಾರಣವಾಗಿರುವ ಘಟನೆ ಒಡಿಶಾದ (Odisha) ಭುವನೇಶ್ವರದಲ್ಲಿ (Bhubaneswar) ನಡೆದಿದೆ. ಕಾಲೇಜು ವಿದ್ಯಾರ್ಥಿ ರಾಜ್‌ಮೋಹನ್ ಸೇನಾಪತಿ(21) ಅಣ್ಣನ ಹೊಡೆತಕ್ಕೆ ಸಾವನ್ನಪ್ಪಿದ ಯುವಕ.

    ರಾಜ್‌ಮೋಹನ್ ಬ್ಯಾಚುಲರ್ ಆಫ್ ಸೈನ್ಸ್(Zoology) ಹಾಗೂ ಬ್ಯಾಚುಲರ್ ಇನ್ ಎಜುಕೇಶನ್ ಕೋರ್ಸ್‌ನಲ್ಲಿ ಒಂದೇ ಸಮಯದಲ್ಲಿ ಪದವಿಯನ್ನು ಪಡೆಯುತ್ತಿದ್ದ. ಆತನ ಅಣ್ಣ ಬಿಸ್ವಮೋಹನ್(24), ತನ್ನ ತಮ್ಮ ಅಧ್ಯಯನದ ಮೇಲೆ ಚೆನ್ನಾಗಿ ಗಮನ ಹರಿಸುತ್ತಿಲ್ಲ, ಕುಟುಂಬ ಕಷ್ಟಪಟ್ಟು ದುಡಿದ ಹಣವನ್ನು ಆತ ವ್ಯರ್ಥ ಮಾಡುತ್ತಿದ್ದಾನೆ ಎಂದುಕೊಂಡು ಮನಬಂದಂತೆ ಥಳಿಸಿದ್ದಾನೆ. ಇದನ್ನೂ ಓದಿ: ಚಂಡೀಗಢ ವಿವಿ ಬಳಿಕ ಐಐಟಿ ಬಾಂಬೆ- ಹಾಸ್ಟೆಲ್ ಸ್ನಾನಗೃಹದಲ್ಲಿ ಇಣುಕಿದ ಕ್ಯಾಂಟೀನ್ ಸಿಬ್ಬಂದಿ ಬಂಧನ

    crime

     

    ಸೋಮವಾರ ಬಿಸ್ವಮೋಹನ್ ತನ್ನ ತಮ್ಮ ಅಧ್ಯಯನದಲ್ಲಿ ಹಿಂದೆ ಉಳಿಯುತ್ತಿರುವುದು ಹಾಗೂ ಬೇಕಾಬಿಟ್ಟಿ ಹಣ ಖರ್ಚು ಮಾಡುತ್ತಿದ್ದುದನ್ನು ಕಂಡು ಛೀಮಾರಿ ಹಾಕಿದ್ದ. ತನ್ನ ಮಾತನ್ನು ಆತ ಕೇಳುತ್ತಿಲ್ಲ ಎಂದು ಸಿಟ್ಟುಗೊಂಡ ಬಿಸ್ವಾಮೋಹನ್ ಕಬ್ಬಿಣದ ರಾಡ್ ತೆಗೆದುಕೊಂಡು ತಮ್ಮನಿಗೆ ಮನಬಂದಂತೆ ಥಳಿಸಿದ್ದಾನೆ. ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ರಾಜ್‌ಮೋಹನ್‌ನನ್ನು ಭುವನೇಶ್ವರದ ಕ್ಯಾಪಿಟಲ್ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಅಲ್ಲಿ ವೈದ್ಯರು ಆತ ಸಾವನ್ನಪ್ಪಿದ್ದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ವೃದ್ಧ ತಂದೆಯನ್ನು ಅಮಾನುಷವಾಗಿ ಹಲಗೆಯಿಂದ ಥಳಿಸಿದ ಪಾಪಿ ಮಗ- ಅರೆಸ್ಟ್

    ಘಟನೆಯ ಬಗ್ಗೆ ತಿಳಿದ ಪೊಲೀಸರು ಬಿಸ್ವಾಮೋಹನ್‌ನನ್ನು ಮಂಗಳವಾರ ಬಂಧಿಸಿದ್ದಾರೆ. ಆತನ ವಿರುದ್ಧ ಭಾರತೀಯ ದಂಡಸಂಹಿತೆಯ ಸೆಕ್ಷನ್ 302(Murder) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಪ್ರಿಯಕರನಿಗೆ 15 ಬಾರಿ ಕರೆ ಮಾಡಿ ಟೆಕ್ಕಿ ಸುಂದರಿ ಆತ್ಮಹತ್ಯೆ

    ಪ್ರಿಯಕರನಿಗೆ 15 ಬಾರಿ ಕರೆ ಮಾಡಿ ಟೆಕ್ಕಿ ಸುಂದರಿ ಆತ್ಮಹತ್ಯೆ

    ಭುವನೇಶ್ವರ: ಒಡಿಶಾದಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್ ಆಗಿ ಕೆಲಸ ಮಾಡ್ತಿದ್ದ ಯುವತಿಯೊಬ್ಬಳು ಪ್ರಿಯಕರನಿಂದ ಬ್ಲ್ಯಾಕ್‌ಮೇಲ್‌ಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಸಾಫ್ಟ್‌ವೇರ್‌ ಎಂಜಿನಿಯರ್ ಶ್ವೇತಾ ಉತ್ಕಲ್ ಕುಮಾರಿ ಎಂಬಾಕೆಯೇ ತನ್ನನ್ನು ಉಸಿರುಗಟ್ಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕವೇ ಇದು ಗೊತ್ತಾಗಿದ್ದು, ಯುವತಿ ಕುಟುಂಬಸ್ಥರು ಪ್ರಿಯಕರ ಸೌಮ್ಯಜಿತ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಯುವತಿಯ ದೇಹದ ಮೇಲೆ ಯಾವುದೇ ಗಾಯದ ಗುರುತುಗಳೂ ಇರಲಿಲ್ಲ ಎಂದು ವರದಿ ಹೇಳಿದೆ. ಇದನ್ನೂ ಓದಿ: ಒಪ್ಪಿಗೆಯಿಲ್ಲದೇ ಅಪ್ರಾಪ್ತೆಯೊಂದಿಗೆ ಸೆಕ್ಸ್ ನಡೆಸಿದ ವ್ಯಕ್ತಿಗೆ 100 ವರ್ಷ ಜೈಲು!

    ಏನಿದು ಟೆಕ್ಕಿ ಸುಂದರಿಯ ಕಹಾನಿ?
    ಭುವನೇಶ್ವರದ ಪ್ರತಿಷ್ಠಿತ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಶ್ವೇತಾ, ಸೌಮ್ಯಜಿತ್ ಎಂಬಾತನನ್ನು ಪ್ರೀತಿಸುತ್ತಿದ್ದರು. ಆಗಾಗ್ಗೆ ಇಬ್ಬರೂ ಹೊರಗೆ ಸುತ್ತಾಡುತ್ತಿದ್ದರು. ಇದೇ ಸಂದರ್ಭದಲ್ಲಿ ಸೌಮ್ಯಜಿತ್, ಶ್ವೇತಾಳ ಖಾಸಗಿ ಫೋಟೋಗಳನ್ನು ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದನು. ಇಬ್ಬರ ನಡುವೆ ಮದುವೆ ಮಾತುಕತೆ ನಡೆದಾಗ ಪಬ್‌ವೊಂದರಲ್ಲಿ ಜಗಳ ಮಾಡಿಕೊಂಡಿದ್ದರು. ವರದಕ್ಷಿಣೆಗಾಗಿ ಸೌಮ್ಯಜಿತ್ 30 ಲಕ್ಷ ರೂ. ಬೇಡಿಕೆಯಿಟ್ಟದ್ದನು. ಇದನ್ನು ನಿರಾಕರಿಸಿದ ನಂತರ ಶ್ವೇತಾಳ ಖಾಸಗಿ ಫೋಟೋಗಳನ್ನು ತೋರಿಸಿ ಸೌಮ್ಯಜಿತ್ ಆಕೆಯನ್ನು ಬ್ಲ್ಯಾಕ್‌ಮೇಲ್ ಮಾಡಲು ಶುರು ಮಾಡಿದ್ದಾನೆ. ಹಣ ಕೊಡದೇ ಇದ್ದರೇ ಖಾಸಗಿ ಫೋಟೋಗಳನ್ನು ಜಾಲತಾಣಗಳಲ್ಲಿ ಹರಿಯಬಿಡುವುದಾಗಿಯೂ ಬೆದರಿಕೆ ಹಾಕಿದ್ದನು. ಇದನ್ನೂ ಓದಿ: ತುಮಕೂರಿನ ಭೀಕರ ರಸ್ತೆ ಅಪಘಾತಕ್ಕೆ ಪ್ರಧಾನಿ ಸಂತಾಪ- ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ

    ಇದರಿಂದ ಮನನೊಂದ ಶ್ವೇತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಸೌಮ್ಯಜಿತ್‌ಗೆ 15 ಬಾರಿ ಕರೆ ಮಾಡಿದ್ದರು. ಆದರೆ ಸೌಮ್ಯಜಿತ್ ಫೋನ್ ರಿಸೀವ್ ಮಾಡಿಲ್ಲ ಎಂಬುದು ತನಿಖೆ ವೇಳೆ ತಿಳಿದುಬಂದಿದೆ ಎಂದು ಚಂದ್ರಶೇಖರಪುರದ ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

    ಶ್ವೇತಾಳ ಫೋನ್ ಕರೆಗಳು ಹಾಗೂ ಡೈರಿ ಪರಿಶೀಲಿಸಿದಾಗ ಗೆಳೆಯನ ಬಗ್ಗೆ ಮಾಹಿತಿ ಸಿಕ್ಕಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಶ್ವೇತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮಾಜಿ ‘ಬಿಗ್ ಬಾಸ್’ ಸ್ಪರ್ಧಿ ಸೊನಾಲಿ ಕೊಲೆಯಾಗಿದ್ದಾಳೆ: ಸಹೋದರ ರಿಂಕು ಆರೋಪ

    ಸದ್ಯ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ ಅಥವಾ ದುಷ್ಪ್ರೇರಣೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಸೆರೆಹಿಡಿಯಲು ಬಲೆ ಬೀಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮದ್ವೆಯಾಗಿ 6 ವರ್ಷ ಕಳೆದ್ರೂ ಫಸ್ಟ್ ನೈಟ್ ಆಗಿಲ್ಲ – ಪತಿಯ ಮನೆ ತೊರೆಯುವಂತೆ ಪತ್ನಿಗೆ ಕೋರ್ಟ್ ಆರ್ಡರ್

    ಮದ್ವೆಯಾಗಿ 6 ವರ್ಷ ಕಳೆದ್ರೂ ಫಸ್ಟ್ ನೈಟ್ ಆಗಿಲ್ಲ – ಪತಿಯ ಮನೆ ತೊರೆಯುವಂತೆ ಪತ್ನಿಗೆ ಕೋರ್ಟ್ ಆರ್ಡರ್

    ಭುವನೇಶ್ವರ್: ಒಡಿಶಾದ ಕಟಕ್ ಜಿಲ್ಲೆಯ ಉಪವಿಭಾಗ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಎಸ್‍ಡಿಜೆಎಮ್) ನ್ಯಾಯಾಲಯವು ರಾಜ್ಯದ ಖ್ಯಾತ ನಟಿ ವರ್ಷಾ ಪ್ರಿಯದರ್ಶಿನಿಗೆ ನಟ ಮತ್ತು ಲೋಕಸಭಾ ಸಂಸದ ಅನುಭವ್ ಮೊಹಂತಿ ಅವರ ಮನೆಯನ್ನು ಖಾಲಿ ಮಾಡುವಂತೆ ಆದೇಶಿಸಿದೆ.

    court order law

    ಈ ವೇಳೆ ಪ್ರತಿ ತಿಂಗಳು 10 ರಂದು ಅಥವಾ ಅದಕ್ಕೂ ಮೊದಲು ಪ್ರಿಯದರ್ಶಿನಿ ಅವರಿಗೆ ಅನುಭವ್ ಮೊಹಂತಿಯವರು 30 ಸಾವಿರ ರೂಪಾಯಿ ಆರ್ಥಿಕ ನೆರವು ನೀಡುವಂತೆ ಸೂಚಿಸಿದೆ. ಇತ್ತೀಚೆಗೆ ಒಡಿಶಾ ಹೈಕೋರ್ಟ್, ಅನುಭವ್ ಮೊಹಾಂತಿ ಮತ್ತು ವರ್ಷಾ ಪ್ರಿಯದರ್ಶಿನಿ ಅವರ ಸಾಂಪ್ರದಾಯಿಕ ಚಿತ್ರವನ್ನು ಗಮನದಲ್ಲಿಟ್ಟುಕೊಂಡು, ಸಾಮಾಜಿಕ ಜಾಲತಾಣಗಳಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ವೀಡಿಯೋವನ್ನು ಅಪ್‍ಲೋಡ್ ಮಾಡದಂತೆ ನ್ಯಾಯಾಲಯ ಆದೇಶಿಸಿದೆ. ಇದನ್ನೂ ಓದಿ: ಆಂಧ್ರಪ್ರದೇಶದ ಕಾರ್ಖಾನೆಯಲ್ಲಿ ಅನಿಲ ಸೋರಿಕೆ – 200 ಮಹಿಳಾ ಕಾರ್ಮಿಕರು ಅಸ್ವಸ್ಥ

    BRIBE

    ಅನುಭವ್ ಮೊಹಂತಿ ಮತ್ತು ವರ್ಷಾ ಪ್ರಿಯದರ್ಶಿನಿ ಯಾರು? ಅವರ ಖಾಸಗಿ ಜೀವನ ಏಕೆ ನ್ಯಾಯಾಲಯದ ಮೆಟ್ಟಿಲೇರಿತು? ಒಡಿಸ್ಸಿ ಚಲನಚಿತ್ರಗಳ ಜಗತ್ತಿನಲ್ಲಿ ದೊಡ್ಡ ಹೆಸರನ್ನು ಪಡೆದ ನಂತರ, ಅನುಭವ್ ಮೊಹಾಂತಿ ಅವರು 2014 ರಲ್ಲಿ ರಾಜ್ಯದ ಜನಪ್ರಿಯ ನಟಿ ವರ್ಷಾ ಪ್ರಿಯದರ್ಶಿನಿ ಅವರನ್ನು ವಿವಾಹವಾಗಿದ್ದರು. ಅದರ ನಂತರ ನಟ ಮತ್ತು ನಟಿ ಇಬ್ಬರೂ ದಾಪಂತ್ಯ ಜೀವನ ಚೆನ್ನಾಗಿಯೇ ಇತ್ತು. ಕೆಲವು ದಿನಗಳ ನಂತರ ಅವರ ಕೌಟುಂಬಿಕ ಜೀವನದಲ್ಲಿ ಬಿರುಕು ಮೂಡಲಾರಭಿಸಿತು. ಇದನ್ನೂ ಓದಿ: ವೀಸಾ ಹಗರಣ – ಕಾರ್ತಿ ಚಿದಂಬರಂಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

    ಅನುಭವ್ ಮೊಹಾಂತಿ ಅವರು 2016 ರಲ್ಲಿ ತಮ್ಮ ಪತ್ನಿ ವರ್ಷಾ ವಿರುದ್ಧ ಮೊದಲ ಬಾರಿಗೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಮದುವೆಯಾಗಿ 2 ವರ್ಷಗಳು ಕಳೆದಿವೆ. ಆದರೆ ನನ್ನ ಪತ್ನಿ ಲೈಂಗಿಕ ಸಂಬಂಧ ಬೆಳೆಸಲು ಮತ್ತು ಸಹಜ ವೈವಾಹಿಕ ಜೀವನಕ್ಕೆ ಅವಕಾಶ ಮಾಡಿಕೊಟ್ಟಿಲ್ಲ ಎಂದು ಅರ್ಜಿ ಸಲ್ಲಿಸಿದ್ದರು. ಮತ್ತೊಂದೆಡೆ ವರ್ಷ ಅವರು ಸಹ ಪತಿ ಅನುಭವ್ ವಿರುದ್ಧ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಅವರು ಮದ್ಯವ್ಯಸನಿಯಾಗಿದ್ದು, ಇತರ ಮಹಿಳೆಯರೊಂದಿಗೆ ಅನೈತಿಕ ಸಂಬಂಧಗಳನ್ನು ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ.

    ಅನುಭವ್ ಮೊಹಾಂತಿ ಒಡಿಯಾ ಚಲನಚಿತ್ರಗಳಲ್ಲಿ ನಟಿಸುವ ಮೂಲಕ ಜನಪ್ರಿಯ ನಟರಾಗಿ ಪರಿಚಿತರಾದವರು, ನಂತರ ಅವರು 2013 ರಲ್ಲಿ ರಾಜ್ಯದ ಆಡಳಿತ ಪಕ್ಷವಾದ ಬಿಜು ಜನತಾದೊಂದಿಗೆ ರಾಜಕೀಯಕ್ಕೆ ಪ್ರವೇಶಿಸಿದರು. ಅದೇ ಸಮಯದಲ್ಲಿ, 2014 ರಲ್ಲಿ ಒಡಿಶಾ ಸರ್ಕಾರವು ಮೊಹಾಂತಿ ಅವರನ್ನು ರಾಜ್ಯಸಭಾ ಸಂಸದರನ್ನಾಗಿ ಮಾಡಿತು. 2019 ರಲ್ಲಿ, ಮೊಹಾಂತಿ ಅವರನ್ನು ಕೇಂದ್ರದ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ತೆಗೆದುಕೊಳ್ಳುವ ಮೂಲಕ ಚುನಾವಣೆಯಲ್ಲಿ ಕಣಕ್ಕಿಳಿಸಲಾಯಿತು. ಅದರಲ್ಲಿ ಅವರು ಗೆಲುವು ಪಡೆದರು. ಆದಾಗ್ಯೂ, ಕೌಟುಂಬಿಕ ಕಲಹಗಳಿಂದಾಗಿ ಮೊಹಾಂತಿಯವರ ರಾಜಕೀಯ ಜೀವನವು ನಿರಂತರ ವಿವಾದದಲ್ಲಿ ಉಳಿಯಿತು.

    ಈ ಕುರಿತು ಅವರ ವೈಯಕ್ತಿಕ ಜೀವನ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸಂಸದ ಅನುಭವ್ ಮೊಹಂತಿ ಕಳೆದ ಹಲವು ತಿಂಗಳುಗಳಿಂದ ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ವೈಯಕ್ತಿಕ ಜೀವನವನ್ನು ಜನರಿಗೆ ತಿಳಿಸಲು ಪ್ರಯತ್ನಿಸಿದ್ದಾರೆ. ಆದರೆ ಸಂಸದರು ತಮ್ಮ ಪತ್ನಿಯೊಂದಿಗಿನ ಲೈಂಗಿಕ ಸಂಬಂಧದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಮಾಡುವ ಮೂಲಕ ಪ್ರಸ್ತಾಪಿಸಿದ್ದಾರೆ. ಮೊಹಂತಿ ಮಾತನಾಡಿ, ಕಳೆದ 8 ವರ್ಷಗಳಿಂದ ಕೌಟುಂಬಿಕ ಕಲಹದ ನಡುವೆ ಪತ್ನಿ ವರ್ಷಾ ಪ್ರಿಯದರ್ಶಿನಿ ಜತೆ ದೈಹಿಕ ಸಂಬಂಧ ಹೊಂದಿರಲಿಲ್ಲ. ಇತ್ತೀಚಿನ ದಿನಗಳಲ್ಲಿ ನನ್ನ ಇಡೀ ಕುಟುಂಬ ಮತ್ತು ನಾನು ಹೆಂಡತಿಯ ಕಾರಣದಿಂದ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದೇನೆ. ಇದರಿಂದ ನನ್ನ ರಾಜಕೀಯ ಜೀವನದ ಮೇಲೆ ಪರಿಣಾಮ ಬೀರುತ್ತಿದೆ. ನಾನು ನನ್ನ ಹೆಂಡತಿಯಿಂದ ವಿಚ್ಛೇದನವನ್ನು ಬಯಸುತ್ತೇನೆ ಆದರೆ ಇದೀಗ ಈ ನಿರ್ಧಾರವು ನ್ಯಾಯಾಲಯದಲ್ಲಿದೆ ಎಂದಿದ್ದರು.