Tag: Bhumi shetty

  • ಚಂದನವನಕ್ಕೆ ಎಂಟ್ರಿ ಕೊಟ್ಟ ವರ್ಲ್ಡ್ ಚಾಂಪಿಯನ್ ದಿ ಗ್ರೇಟ್ ಖಲಿ

    ಚಂದನವನಕ್ಕೆ ಎಂಟ್ರಿ ಕೊಟ್ಟ ವರ್ಲ್ಡ್ ಚಾಂಪಿಯನ್ ದಿ ಗ್ರೇಟ್ ಖಲಿ

    ರಾಕಿ ಸೋಮ್ಲಿ (Rocky Somli) ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಸಿನಿಮಾ ‘ಕೆಂಡದ ಸೆರಗು’ (Kenda Seragu). ಟೀಸರ್ ಮೂಲಕ ಗಮನ ಸೆಳೆಯುತ್ತಿರುವ ಈ ಚಿತ್ರ ಕುಸ್ತಿ ಕುರಿತ ಸಿನಿಮಾ. ಭೂಮಿ ಶೆಟ್ಟಿ (Bhumi Shetty), ಮಾಲಾಶ್ರೀ (Malashree) ಮುಖ್ಯ ತಾರಾಬಳಗದ ಈ ಚಿತ್ರದಿಂದ ಹೊಸ ಅಪ್ಡೇಟ್ ಹೊರಬಿದ್ದಿದೆ. ‘ಕೆಂಡದ ಸೆರಗು’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಸಿನಿ ಜಗತ್ತಿಗೆ ವರ್ಲ್ಡ್ ಚಾಂಪಿಯನ್ ಕುಸ್ತಿ ಪಟು ದಿ ಗ್ರೇಟ್ ಖಲಿ (Khali) ಎಂಟ್ರಿ ಕೊಟ್ಟಿದ್ದಾರೆ.

    ಈ ಚಿತ್ರ ನಿರ್ದೇಶಕ ರಾಕಿ ಸೋಮ್ಲಿ ಅವರೇ ಬರೆದ ಕಾದಂಬರಿ ‘ಕೆಂಡದ ಸೆರಗು’ ಆಧರಿಸಿದ ಸಿನಿಮಾ. ಮಹಿಳಾ ಪ್ರಧಾನ ಕಥಾಹಂದರ ಒಳಗೊಂಡ ಈ ಚಿತ್ರ ಕುಸ್ತಿ ಪಟು ಕಥೆ ಹೇಳಲಿದೆ. ಕಮರ್ಶಿಯಲ್ ಎಳೆಯಲ್ಲಿ ಸಿನಿಮಾವನ್ನು ತೆರೆ ಮೇಲೆ ತರಲಾಗುತ್ತಿದ್ದು, ಇದೀಗ  ನಿರ್ದೇಶಕ ರಾಕಿ ಸೋಮ್ಲಿ ವರ್ಲ್ಡ್ ಚಾಂಪಿಯನ್ ದಿ ಗ್ರೇಟ್ ಖಲಿಯನ್ನು ಕರೆ ತರುವ ಮೂಲಕ ಕ್ಯೂರಿಯಾಸಿಟಿ ಮೂಡಿಸಿದ್ದಾರೆ. ಇದನ್ನೂ ಓದಿ:ಮದುವೆಯ ಬಳಿಕ ಮ್ಯಾಂಗೋ ಬಣ್ಣದ ಡ್ರೆಸ್‌ನಲ್ಲಿ ಮಿಂಚಿದ ಕಿಯಾರಾ ಅಡ್ವಾಣಿ

    ನಿರ್ದೇಶಕ ರಾಕಿ ಸೋಮ್ಲಿ ದಿ ಗ್ರೇಟ್ ಖಲಿಯನ್ನು ಭೇಟಿ ಮಾಡಿ ಸಿನಿಮಾ ಕಥೆ ಹಾಗೂ ಅವರ ಪಾತ್ರದ ಬಗ್ಗೆ ವಿಶ್ಲೇಷಣೆ ಮಾಡಿದ್ದಾರೆ. ಸಿನಿಮಾ ಬಗ್ಗೆ ಕೇಳಿ ಥ್ರಿಲ್ ಆಗಿರುವ ಖಲಿ ಸಿನಿಮಾದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಖಲಿ ಜೊತೆಗಿನ ಫೋಟೋ ಶೇರ್ ಮಾಡಿಕೊಂಡಿರುವ ರಾಕಿ ಸೋಮ್ಲಿ ಚಿತ್ರತಂಡಕ್ಕೆ ಖಲಿ ಎಂಟ್ರಿ ನೀಡುತ್ತಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಈ ಮೂಲಕ ಕನ್ನಡ ಸಿನಿಮಾಗೆ  ಎಂಟ್ರಿ ಕೊಡುತ್ತಿದ್ದಾರೆ ಖಲಿ. ಸದ್ಯದಲ್ಲೇ ಖಲಿ ಚಿತ್ರತಂಡ ಸೇರಿಕೊಳ್ಳಲಿದ್ದು, ಚಿತ್ರೀಕರಣ ಆರಂಭವಾಗಲಿದೆ.

    ಕುಸ್ತಿ ಸುತ್ತ ಹೆಣೆಯಲಾದ ಚಿತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ ಪೊಲೀಸ್ ಕಮಿಷನರ್ ಪಾತ್ರದಲ್ಲಿ ನಟಿಸಿದ್ದು, ಭೂಮಿ ಶೆಟ್ಟಿ ಕುಸ್ತಿ ಪಟುವಾಗಿ ಬಣ್ಣಹಚ್ಚಿದ್ದಾರೆ. ಶ್ರೀ ಮುತ್ತು ಟಾಕೀಸ್ ಮತ್ತು ಎಸ್ ಕೆ ಪ್ರೊಡಕ್ಷನ್ಸ್ ಬ್ಯಾನರ್ ನಡಿ ಕೆ.ಕೊಟ್ರೇಶ್ ಗೌಡ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಯಶ್ ಶೆಟ್ಟಿ, ವರ್ಧನ್ ತೀರ್ಥಹಳ್ಳಿ, ಪ್ರತಿಮಾ. ಹರೀಶ್ ಅರಸು, ಬಸು ಹಿರೇಮಠ್, ಶೋಭಿತ, ಸಿಂಧು ಲೋಕನಾಥ್ ಚಿತ್ರದ ತಾರಾಬಳಗದಲ್ಲಿದ್ದಾರೆ. ವಿಪಿನ್ ವಿ ರಾಜ್ ಛಾಯಾಗ್ರಹಣ, ವೀರೇಶ್ ಕಂಬ್ಲಿ ಸಂಗೀತ ನಿರ್ದೇಶನ, ಶ್ರೀಕಾಂತ್ ಸಂಕಲನ ಚಿತ್ರಕ್ಕಿದೆ.

  • ‘ಕೆಂಡದ ಸೆರಗು’ ಚಿತ್ರಕ್ಕಾಗಿ ಒಂದಾದ ಮಾಲಾಶ್ರೀ ಮತ್ತು ಭೂಮಿ ಶೆಟ್ಟಿ : ಟೀಸರ್ ರಿಲೀಸ್

    ‘ಕೆಂಡದ ಸೆರಗು’ ಚಿತ್ರಕ್ಕಾಗಿ ಒಂದಾದ ಮಾಲಾಶ್ರೀ ಮತ್ತು ಭೂಮಿ ಶೆಟ್ಟಿ : ಟೀಸರ್ ರಿಲೀಸ್

    ರಾಕಿ ಸೋಮ್ಲಿ ಚೊಚ್ಚಲ ನಿರ್ದೇಶನದಲ್ಲಿ ಭೂಮಿ ಶೆಟ್ಟಿ ಮುಖ್ಯ ಭೂಮಿಕೆಯ ಹಾಗೂ ಕನಸಿನ ರಾಣಿ ಮಾಲಾಶ್ರೀ ನಟಿಸಿರುವ ‘ಕೆಂಡದ ಸೆರಗು’ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಈ ಚಿತ್ರ ನಿರ್ದೇಶಕ ರಾಕಿ ಸೋಮ್ಲಿ ಬರೆದ ‘ಕೆಂಡದ ಸೆರಗು’ ಕಾದಂಬರಿ ಆಧಾರಿತ ಸಿನಿಮಾ. ಕುಸ್ತಿ ಸುತ್ತ ಹೆಣೆಯಲಾದ ಚಿತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ ಪೊಲೀಸ್ ಕಮಿಷನರ್ ಪಾತ್ರದಲ್ಲಿ ನಟಿಸಿದ್ದು, ಭೂಮಿ ಶೆಟ್ಟಿ ಕುಸ್ತಿ ಪಟುವಾಗಿ ಬಣ್ಣಹಚ್ಚಿದ್ದಾರೆ. ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

    ನಟಿ ಮಾಲಾಶ್ರೀ ಮಾತನಾಡಿ ಒಂದೊಳ್ಳೆ ಸಬ್ಜೆಕ್ಟ್ ಚಿತ್ರದಲ್ಲಿದೆ. ಸಿನಿಮಾ ಕೆಲಸ ಆದ ಮೇಲೆ ಒಮ್ಮೆ ನನಗೆ ತೋರಿಸಿ ಎಂದು ಹೇಳಿದ್ದೆ ರಫ್ ಸ್ಕೆಚ್ ನೋಡಿದ್ದೀನಿ ತುಂಬಾ ಚೆನ್ನಾಗಿ ಬಂದಿದೆ ಸಿನಿಮಾ. ನಾನು ಪೋಲೀಸ್ ಪಾತ್ರ ತುಂಬಾ ಮಾಡಿದ್ದೀನಿ ಆದ್ರೆ ಇಲ್ಲಿವರೆಗೆ ಮಾಡಿರುವ ಪಾತ್ರಕ್ಕಿಂತ ಡಿಫ್ರೆಂಟ್ ಫೀಲ್ ಈ ಪಾತ್ರ ನೀಡಿದೆ. ಈ ಚಿತ್ರ ಕೇವಲ ಕುಸ್ತಿ ಬಗ್ಗೆ ಅಂತಲ್ಲ ಹೆಣ್ಣುಮಗಳೊಬ್ಬಳ ನೋವಿನ ಕಥೆ ಚಿತ್ರದಲ್ಲಿದೆ. ಒಂದೊಳ್ಳೆ ಮೆಸೇಜ್ ಚಿತ್ರದಲ್ಲಿದೆ. ಈ ಸಿನಿಮಾದ ಭಾಗವಾಗಿದ್ದಕ್ಕೆ ತುಂಬಾ ಖುಷಿ ಇದೆ. ನಾನೇ ಈ ಚಿತ್ರಕ್ಕೆ ಡಬ್ ಮಾಡುತ್ತಿದ್ದೇನೆ ಎಂದು ಸಿನಿಮಾ ಬಗ್ಗೆ ಸಂತಸ ಹಂಚಿಕೊಂಡ್ರು. ಇದನ್ನೂ ಓದಿ: ಸಾನ್ಯ ಅಯ್ಯರ್‌ ಬೆರಳಲ್ಲಿ ಶೆಟ್ಟಿ ವಧು ಧರಿಸುವ ರಿಂಗ್ ನೋಡಿ ಶಾಕ್‌ ಆದ ನೆಟ್ಟಿಗರು

    ನಿರ್ದೇಶಕ ರಾಕಿ ಸೋಮ್ಲಿ ಮಾತನಾಡಿ ‘ಕೆಂಡದ ಸೆರಗು’ ನಾನೇ ಬರೆದ ಕಾದಂಬರಿ ಆಧಾರಿತ ಸಿನಿಮಾ. ನಿರ್ಮಾಪಕ ಕೊಟ್ರೇಶ್ ಹಾಗೂ ನಾನು ಇಬ್ಬರು ಸ್ನೇಹಿತರು. ಅವರಿಗೆ ನಾನು ಈ ಕಾದಂಬರಿ ಬಗ್ಗೆ ಹೇಳಿದಾಗ. ಸಿನಿಮಾ ಮಾಡೋಣ ಎಂದು ಹೇಳಿದ್ರು. ಭೂಮಿ ಶೆಟ್ಟಿ ತಮ್ಮ ಪಾತ್ರವನ್ನು ಅದ್ಭುತವಾಗಿ ನಿಭಾಯಿಸಿದ್ದಾರೆ. ಸಿನಿಮಾ ಮಾಡುವಾಗ ಮಾಲಾಶ್ರೀ ಮೇಡಂ ಕೈನಲ್ಲಿ ಒಂದು ಪಾತ್ರ ಮಾಡಿಸಬೇಕು ಎಂದು ಒಂದು ಆಲೋಚನೆ ಬಂತು. ಕಥೆ ಕೇಳಿದ ಮೇಲೆ ಒಪ್ಪಿಕೊಂಡ್ರು. ಸಿನಿಮಾ ಚಿತ್ರೀಕರಣದಲ್ಲೂ ಸಪೋರ್ಟ್ ಮಾಡಿದ್ರು. ಕಮರ್ಶಿಯಲ್ ಆಗಿ ಮೂಡಿ ಬಂದಿದೆ. ಕುಸ್ತಿಗೆ ಹೆಚ್ಚು ಫೋಕಸ್ ನೀಡಲಾಗಿದೆ. ಡಬ್ಬಿಂಗ್ ಕೆಲಸ ನಡೆಯುತ್ತಿದೆ ಚಿತ್ರದಲ್ಲಿ ಆರು ಹಾಡುಗಳಿವೆ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು.

    ನಾಯಕಿ ಭೂಮಿ ಶೆಟ್ಟಿ ಮಾತನಾಡಿ ಮಹಿಳೆ ಎಲ್ಲಿ ಪ್ರಧಾನವಾಗಿರುತ್ತಾಳೆ ಆ ರೀತಿಯ ಪಾತ್ರ ಮಾಡಲು ನಾನು ಕಾತುರದಿಂದ ಕಾಯುತ್ತಿದ್ದೆ. ಅದೇ ಸಮಯದಲ್ಲಿ ಕೆಂಡದ ಸೆರಗು ಸಿನಿಮಾ ಸಿಕ್ತು. ಕಥೆ, ಅದರ ಸುತ್ತಮುತ್ತ ಇರುವ ಪಾತ್ರಗಳು, ಸಿನಿಮಾದಲ್ಲಿನ ಶೇಡ್ ಎಲ್ಲವನ್ನು ಕೇಳಿ ಇಷ್ಟವಾಯ್ತು. ಚಾಲೆಂಜಿಂಗ್ ಪಾತ್ರ ನಾನು ಮಾಡಲೇಬೇಕು ಎಂದು ಒಪ್ಪಿಕೊಂಡೆ. ಕುಸ್ತಿಗೆ ಹಂಡ್ರೆಡ್ ಪರ್ಸೆಂಟ್ ಗಿಂತ ಜಾಸ್ತಿ ಎಫರ್ಟ್ ಹಾಕಿದ್ದೇನೆ. ನನ್ನ ಪಾತ್ರಕ್ಕಿರುವ ಶೇಡ್ಸ್ ತುಂಬಾ ಚೆನ್ನಾಗಿದೆ. ಸಮಾಜದಲ್ಲಿ ವೇಶ್ಯೆ ಹಾಗೂ ಆಕೆಯ ಮಗಳನ್ನು ಬೇರೆಯದ್ದೇ ರೀತಿ ನೋಡುತ್ತಾರೆ ಆದ್ರೆ ಆಕೆಗೂ ಅವಕಾಶ ನೀಡಿದ್ರೆ ಏನ್ ಬೇಕಿದ್ರು ಸಾಧಿಸುತ್ತಾಳೆ ಎನ್ನುವ ಎಳೆ ಚಿತ್ರದ್ದು. ತುಂಬಾ ಚೆನ್ನಾಗಿ ಮೂಡಿ ಬಂದಿದೆ ಎಲ್ಲರೂ ಸಪೋರ್ಟ್ ಮಾಡಿ ಎಂದು ಪಾತ್ರದ ಬಗ್ಗೆ ಮಾಹಿತಿ ಹಂಚಿಕೊಂಡ್ರು.

    ನಿರ್ಮಾಪಕ ಕೆ. ಕೊಟ್ರೇಶ್  ಗೌಡ ಮಾತನಾಡಿ ದಾವಣಗೆರೆಯಲ್ಲಿ ನನ್ನದೊಂದು ಬೀಡ ಅಂಗಡಿ ಇದೆ. ಸಿನಿಮಾ ಮಾಡಬೇಕು ಎಂದು ನಾನು ರಾಕಿ ಸೋಮ್ಲಿ ಮಾತನಾಡುತ್ತಿದ್ವಿ. ಪ್ರೊಡ್ಯೂಸರ್ ಗಾಗಿ ಒಂದು ವರ್ಷ ಹುಡುಕಾಟ ನಡೆಸಿದ್ವಿ ನಂತರ ನಂದೇ ಒಂದು ಸೈಟ್ ಇತ್ತು, ಬಂಗಾರ ಇತ್ತು ಅದನ್ನು ಮಾರಿ ಸಿನಿಮಾ ಮಾಡಿದ್ದೀನಿ. ರಾಕಿ ನನ್ನ ಸ್ನೇಹಿತ ಅತನಿಗೆ ಸಪೋರ್ಟ್ ಮಾಡಬೇಕು, ಜೊತೆಗೆ ಕೆಂಡದ ಸೆರಗು ಪುಸ್ತಕದಲ್ಲಿ ಕುಸ್ತಿ ಬಗ್ಗೆ ತುಂಬಾ ಡಿಟೈಲ್ ಆಗಿ ಬರೆದಿದ್ದಾರೆ. ಸಿನಿಮಾ ಮಾಡಿದ್ರೆ ಕ್ಲಿಕ್ ಆಗುತ್ತೆ ಎಂದು ಬಂಡವಾಳ ಹಾಕಿದ್ದೀನಿ ಸಿನಿಮಾ ತುಂಬಾ ಚೆನ್ನಾಗಿ ಮೂಡಿ ಬಂದಿದೆ ಎಂದು ತಿಳಿಸಿದ್ರು.  ಶ್ರೀ ಮುತ್ತು ಟಾಕೀಸ್ ಮತ್ತು ಎಸ್ ಕೆ ಪ್ರೊಡಕ್ಷನ್ಸ್ ಬ್ಯಾನರ್ ನಡಿ ಕೆ.ಕೊಟ್ರೇಶ್ ಗೌಡ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಯಶ್ ಶೆಟ್ಟಿ, ವರ್ಧನ್ ತೀರ್ಥಹಳ್ಳಿ, ಪ್ರತಿಮಾ. ಹರೀಶ್ ಅರಸು, ಬಸು ಹಿರೇಮಠ್, ಶೋಭಿತ, ಸಿಂಧು ಲೋಕನಾಥ್ ಚಿತ್ರದ ತಾರಾಬಳಗದಲ್ಲಿದ್ದಾರೆ. ವಿಪಿನ್ ವಿ ರಾಜ್ ಛಾಯಾಗ್ರಹಣ, ವೀರೇಶ್ ಕಂಬ್ಲಿ ಸಂಗೀತ ನಿರ್ದೇಶನ, ಶ್ರೀಕಾಂತ್ ಸಂಕಲನ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮುತ್ತು ನೀಡ್ತಿದ್ದ ಕಿಶನ್‍ಗೆ ಸಿಕ್ತು ರೊಮ್ಯಾಂಟಿಕ್ ಕಿಸ್

    ಮುತ್ತು ನೀಡ್ತಿದ್ದ ಕಿಶನ್‍ಗೆ ಸಿಕ್ತು ರೊಮ್ಯಾಂಟಿಕ್ ಕಿಸ್

    ಬೆಂಗಳೂರು: ಬಿಗ್ ಬಾಸ್ ಸೀಸನ್-7ರ ಸ್ಪರ್ಧಿ ಕಿಶನ್, ಕಿರುತೆರೆ ನಟಿ ಭೂಮಿ ಅವರಿಂದ ಮುತ್ತು ಪಡೆದು ಸ್ವಿಮ್ಮಿಂಗ್ ಪೂಲ್‍ಗೆ ಹಾರಿದ್ದಾರೆ.

    ಸ್ಪರ್ಧಿಗಳಾದ ಭೂಮಿ, ಕಿಶನ್, ಪ್ರಿಯಾಂಕಾ, ವಾಸುಕಿ ವೈಭವ್ ಹಾಗೂ ಕುರಿ ಪ್ರತಾಪ್ ಗಾರ್ಡನ್ ಏರಿಯಾದಲ್ಲಿ ಕುಳಿತು ಮಾತನಾಡುತ್ತಿರುತ್ತಾರೆ. ಈ ವೇಳೆ ಅಲ್ಲಿ ಮಳೆ ಬರುತ್ತಿದ್ದು, ಸ್ಪರ್ಧಿಗಳು ಈ ಬಗ್ಗೆ ಮಾತನಾಡುತ್ತಾರೆ. ಆಗ ಕಿಶನ್ ನನ್ನ ಸ್ವಿಮ್ಮಿಂಗ್ ಪೂಲ್ ಒದ್ದೆ ಆಗುತ್ತಿದೆ ಎಂದು ಹೇಳಿದ್ದಾರೆ. ಇದನ್ನು ಕೇಳಿದ ಪ್ರಿಯಾಂಕಾ ನೀನು ಈಗ ಸ್ವಿಮ್ಮಿಂಗ್ ಪೂಲ್‍ಗೆ ಹೋಗಿ ಹಾರಬೇಡ ಎಂದು ಹೇಳಿದ್ದಾರೆ. ಬಳಿಕ ಭೂಮಿ ಸ್ವಿಮ್ಮಿಂಗ್ ಪೂಲ್‍ಗೆ ಜಂಪ್ ಮಾಡು ಎಂದಿದ್ದಾರೆ.

    ಭೂಮಿ ಹಾಗೂ ಪ್ರಿಯಾಂಕಾ ಮಾತು ಕೇಳಿದ ಕಿಶನ್, ಯಾರಾದರೂ ಮುತ್ತು ಕೊಟ್ಟರೆ ನಾನು ಸ್ವಿಮ್ಮಿಂಗ್ ಪೂಲ್‍ಗೆ ಹಾರುತ್ತೇನೆ ಎಂದಿದ್ದಾರೆ. ಕಿಶನ್ ಈ ರೀತಿ ಹೇಳುತ್ತಿದ್ದಂತೆ ಅವರಿಗೆ ಮುತ್ತು ನೀಡುವಂತೆ ಪ್ರಿಯಾಂಕಾ, ಭೂಮಿಗೆ ಹೇಳುತ್ತಾರೆ. ಪ್ರಿಯಾಂಕಾ ಮಾತು ಕೇಳಿ ಭೂಮಿ, ಕಿಶನ್‍ನ ಎರಡು ಕೆನ್ನೆಗೆ ಮುತ್ತು ನೀಡಿದ್ದಾರೆ. ಮುತ್ತು ಪಡೆದ ತಕ್ಷಣ ಕಿಶನ್ ಮಳೆ ಬರುತ್ತಿದ್ದರೂ ಸಹ ಸ್ವಿಮ್ಮಿಂಗ್ ಪೂಲ್‍ಗೆ ಹಾರಿದ್ದಾರೆ. ಕಿಶನ್ ಈಜುಕೋಳದಲ್ಲಿ ಹಾರಿದ್ದನು ನೋಡಿ ಅಲ್ಲಿದ್ದ ಸ್ಪರ್ಧಿಗಳು ಶಾಕ್ ಆಗಿದ್ದಾರೆ. ಭೂಮಿ, ಕಿಶನ್‍ಗೆ ಮುತ್ತು ನೀಡಿದ ಸಂಚಿಕೆ ವಾಹಿನಿಯಲ್ಲಿ ಪ್ರಸಾರವಾಗಿಲ್ಲ.

    ಈ ಹಿಂದೆ ಪ್ರಿಯಾಂಕಾ ಈ ಮನೆಯಲ್ಲಿ ಎಲ್ಲಾ ಹುಡುಗಿಯರಿಗೂ ಮುತ್ತು ಕೊಟ್ಟಿದ್ದೀರಿ ಅಲ್ವಾ. ಚಂದನಾ, ದೀಪಿಕಾ, ಭೂಮಿ, ಸುಜಾತ, ರಶ್ಮಿ, ಚೈತ್ರಾ ಕೊಟ್ಟೂರು ಮತ್ತು ಚೈತ್ರಾ ವಾಸುದೇವನ್ ಅವರಿಗೆ ಕೊಟ್ಟಿದ್ದೀರಾ ಎಂದು ಕಿಶನ್‍ಗೆ ಕೇಳಿದ್ದರು. ಅದಕ್ಕೆ ಕಿಶನ್ ಸುಜಾತಾ ಅವರಿಗೆ ಕೊಟ್ಟಿಲ್ಲ. ಆದರೆ ತುಂಬಾ ಕಷ್ಟವಾಗಿದ್ದು ದೀಪಿಕಾ, ಅವರಿಗೂ ಕೊಟ್ಟಿದ್ದೀನಿ ಎಂದಿದ್ದರು. ಈ ವೇಳೆ ರಾಜು ತಾಳಿಕೋಟೆ ಮತ್ತು ಭೂಮಿ ಮಧ್ಯೆ ಕಿಶನ್ ಕುಳಿತ್ತಿದ್ದರು. ಆಗ ರಾಜು ಅವರು ಕಿಶನ್‍ಗೆ ಮುತ್ತು ಕೊಟ್ಟು ಪಾಸ್ ಮಾಡು ಎಂದರು. ತಕ್ಷಣ ಕಿಶನ್ ಭೂಮಿ ಕೆನ್ನೆಗೆ ಎಲ್ಲರ ಮುಂದೆಯೇ ಕಿಸ್ ಮಾಡಿದ್ದಾರೆ. ಈ ಸಂಚಿಕೆ ಕೂಡ ಟಿವಿಯಲ್ಲಿ ಪ್ರಸಾರವಾಗಿರಲಿಲ್ಲ. ಅನ್‍ಸೀನ್‍ನಲ್ಲಿ ಈ ವಿಡಿಯೋ ಪ್ರಸಾರವಾಗಿತ್ತು.