Tag: Bhupesh Baghel

  • ಸಾರ್ವಜನಿಕರ ಬಸ್‌ಗೆ ಬೆಂಕಿ ಇಟ್ಟ ನಕ್ಸಲರು – 15 ಮಂದಿ ಸಾವು

    ಸಾರ್ವಜನಿಕರ ಬಸ್‌ಗೆ ಬೆಂಕಿ ಇಟ್ಟ ನಕ್ಸಲರು – 15 ಮಂದಿ ಸಾವು

    ರಾಯಪುರ: ನಕ್ಸಲರ ಗುಂಪೊಂದು (Naxals) ಪ್ರಯಾಣಿಕರ ಬಸ್‌ಗೆ (Bus) ಬೆಂಕಿ ಹಚ್ಚಿ 15 ಜನ ಸಾವನ್ನಪ್ಪಿದ ಘಟನೆ ಛತ್ತೀಸ್‌ಗಢದ (Chattisgarh) ದಾಂತೇವಾಡ (Dantewada) ಜಿಲ್ಲೆಯ ಮಾಲೆವಾಹಿ (Malewahi) ಪ್ರದೇಶದಲ್ಲಿ ನಡೆದಿದೆ.

    ಮಾರ್ಚ್ 31ರಂದು ಮಧ್ಯಾಹ್ನ ಬಸ್ ದಾಂತೇವಾಡದಿಂದ ಸುಕ್ಮಾಗೆ (Sukma) ತೆರಳುತ್ತಿದ್ದ ಸಂದರ್ಭ, ಮಾಲೆವಾಹಿ ಬಳಿ ನಕ್ಸಲರು ಬಸ್ ತಡೆದು ಬೆಂಕಿ ಹಚ್ಚಿದ್ದಾರೆ. ಈ ಘಟನೆಯಿಂದ 15 ಜನ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ನಕಲಿ ಅಂಕಪಟ್ಟಿ ನೀಡಿ ಪ್ರಾಚಾರ್ಯ ಹುದ್ದೆಗೇರಿದ್ದ ಪ್ರಾಂಶುಪಾಲ- ಪ್ರಕರಣ ದಾಖಲು 

    ಈ ಘಟನೆಯನ್ನು ರಾಜಕೀಯ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೇ ಸಂತ್ರಸ್ತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ (Bhupesh Baghel) ನಕ್ಸಲರ ದಾಳಿಯನ್ನು ಖಂಡಿಸಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಅಷ್ಟೇ ಅಲ್ಲದೇ ಸಂತ್ರಸ್ತರ ಕುಟುಂಬಕ್ಕೆ ಪರಿಹಾರವನ್ನೂ ಘೋಷಿಸಿದ್ದಾರೆ. ಇದನ್ನೂ ಓದಿ: ಇಂಡಿಗೋ ವಿಮಾನ ಸಿಬ್ಬಂದಿಯ ಜೊತೆ ಅನುಚಿತ ವರ್ತನೆ- ಸ್ವೀಡಿಷ್ ಪ್ರಜೆಯ ಬಂಧನ

    ನಾಗರಿಕರ ಮೇಲೆ ದಾಳಿ ನಡೆಯುತ್ತಿರುವುದು ಛತ್ತೀಸ್‌ಗಢದಲ್ಲಿ ಇದೇ ಮೊದಲಲ್ಲ. ಈ ಪ್ರದೇಶವು ಹಲವು ವರ್ಷಗಳಿಂದ ನಕ್ಸಲ್ ಹಿಂಸಾಚಾರವನ್ನು ಎದುರಿಸುತ್ತಿದೆ. ಅಮಾಯಕ ನಾಗರಿಕರು ಆಗಾಗ ಅವರ ದಾಳಿಗೆ ಒಳಗಾಗುತ್ತಾರೆ. ಈ ಪ್ರದೇಶದಲ್ಲಿ ನಕ್ಸಲ್ ಬಂಡಾಯವನ್ನು ಎದುರಿಸಲು ಸರ್ಕಾರ ಹಲವು ವರ್ಷಗಳಿಂದ ಪ್ರಯತ್ನಿಸುತ್ತಿದೆ. ಆದರೆ ಅನಿಶ್ಚಿತ ಪರಿಸ್ಥಿತಿಗಳಿಂದಾಗಿ ನಕ್ಸಲರು ಸರಾಗವಾಗಿ ದಾಳಿ ನಡೆಸುತ್ತಿದ್ದು, ಇದನ್ನು ನಿಭಾಯಿಸಲು ಭದ್ರತಾ ಪಡೆಯವರು ಹರಸಾಹಸ ಪಡುತ್ತಿದ್ದಾರೆ. ಇದನ್ನೂ ಓದಿ: ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆಗೈದ ಪತ್ನಿಗೆ ಜೀವಾವಧಿ ಶಿಕ್ಷೆ

  • ಮುಂದಿನ ವರ್ಷದಿಂದ ನಿರುದ್ಯೋಗಿ ಯುವಕರಿಗೆ ಮಾಸಿಕ ಭತ್ಯೆ: ಛತ್ತಿಸ್‍ಗಢ ಸಿಎಂ

    ಮುಂದಿನ ವರ್ಷದಿಂದ ನಿರುದ್ಯೋಗಿ ಯುವಕರಿಗೆ ಮಾಸಿಕ ಭತ್ಯೆ: ಛತ್ತಿಸ್‍ಗಢ ಸಿಎಂ

    ರಾಯ್ಪುರ: ಮುಂದಿನ ಹಣಕಾಸು ವರ್ಷದಿಂದ ನಿರುದ್ಯೋಗಿ ಯುವಕರಿಗೆ (Unemployed Youth) ಮಾಸಿಕ ಭತ್ಯೆ ನೀಡುವುದಾಗಿ ಛತ್ತಿಸ್‍ಗಢದ (Chhattisgarh) ಮುಖ್ಯಮಂತ್ರಿ ಭೂಪೇಶ್ ಬಘೇಲ್ (Bhupesh Baghel) ಭರವಸೆ ನೀಡಿದರು.

    ಬಸ್ತಾರ್ ಜಿಲ್ಲೆಯ ಪ್ರಧಾನ ಕಚೇರಿ ಜಗದಲ್‍ಪುರದ ಲಾಲ್‍ಬಾಗ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಮಾತನಾಡಿದ ಅವರು, ಗುಡಿ ಕೈಗಾರಿಕೆಯನ್ನು ಬಲಪಡಿಸಲು ರಾಜ್ಯದಲ್ಲಿ ಗ್ರಾಮೀಣ ಕೈಗಾರಿಕೆ ನೀತಿಯನ್ನು ರೂಪಿಸುವುದಾಗಿ ಘೋಷಿಸಿದರು.

    ಕೈಗಾರಿಕಾ ಇಲಾಖೆ ಅಭಿವೃದ್ಧಿಪಡಿಸಿರುವ ಕೈಗಾರಿಕಾ ಪ್ರದೇಶಗಳಲ್ಲಿನ ಕಾರ್ಖಾನೆಗಳಿಗೆ ಆಸ್ತಿ ತೆರಿಗೆಯಿಂದ ವಿನಾಯಿತಿ ನೀಡಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಅಂತಿಮ ಹಂತದಲ್ಲಿ ಕೇಂದ್ರ ಬಜೆಟ್ – ಹಲ್ವಾ ಹಂಚಿದ ನಿರ್ಮಲಾ ಸೀತಾರಾಮನ್

    ಮೂರು ವರ್ಷಗಳ ಅವಧಿಗೆ ಛತ್ತೀಸ್‍ಗಢ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿ ಮಾಡಿಕೊಂಡಿರುವ ಕಟ್ಟಡ ಕಾರ್ಮಿಕರಿಗೆ ಅವರ ಮನೆ ನಿರ್ಮಿಸಿಕೊಳ್ಳಲು 50 ಸಾವಿರ ರೂ.ಗಳ ಅನುದಾನ ನೀಡಲಾಗುವುದು ಎಂದರು. ಇದನ್ನೂ ಓದಿ: ರಾಷ್ಟ್ರಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಉದ್ಘಾಟಿಸಿದ ಬೊಮ್ಮಾಯಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಕ್ರಮ ಹಣ ವರ್ಗಾವಣೆ ಕೇಸ್ – ಛತ್ತಿಸ್‌ಗಢ ಸಿಎಂ ಉಪಕಾರ್ಯದರ್ಶಿ ಅರೆಸ್ಟ್

    ಅಕ್ರಮ ಹಣ ವರ್ಗಾವಣೆ ಕೇಸ್ – ಛತ್ತಿಸ್‌ಗಢ ಸಿಎಂ ಉಪಕಾರ್ಯದರ್ಶಿ ಅರೆಸ್ಟ್

    ರಾಯಪುರ: ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಛತ್ತಿಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ (Bhupesh Baghel) ಅವರ ಉಪ ಕಾರ್ಯದರ್ಶಿ ಸೌಮ್ಯಾ ಚೌರಾಸಿಯಾ (Saumya Chaurasia) ಅವರನ್ನ ಶುಕ್ತವಾರ ಜಾರಿ ನಿರ್ದೇಶನಾಲಯ ಬಂಧಿಸಿದೆ.

    ಸೌಮ್ಯಾ ಅವರನ್ನು ಬಂಧಿಸಿದ ಬಳಿಕ ಆರೋಗ್ಯ ತಪಾಸಣೆಗೆ ಕರೆದೊಯ್ಯಲಾಯಿತು. ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಬೆಂಗಾವಲಿನಲ್ಲಿ ಅವರನ್ನು ಸ್ಥಳೀಯ ನ್ಯಾಯಾಲಯಕ್ಕೆ ಕರೆದೊಯ್ಯಲಾಯಿತು. ಇದನ್ನೂ ಓದಿ: ಶ್ರದ್ಧಾ ಬಿಟ್ಟು ಹೋಗುವ ಆತಂಕದಲ್ಲಿ ಹತ್ಯೆ ಮಾಡಿದೆ – ಮಂಪರು ಪರೀಕ್ಷೆಯಲ್ಲಿ ಅಫ್ತಾಬ್ ಮತ್ತೊಮ್ಮೆ ತಪ್ಪೊಪ್ಪಿಗೆ

    ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್‌ನಲ್ಲಿ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯ ಭಾರತ ಆಡಳಿತ ಸೇವೆಯ (IAS) ಅಧಿಕಾರಿ ಸಮೀರ್ ವಿಷ್ಣೋಯ್ ಹಾಗೂ ಇತರ ಇಬ್ಬರನ್ನು ಬಂಧಿಸಿತ್ತು.

    ಆದಾಯ ತೆರಿಗೆ ಇಲಾಖೆ ನೀಡಿದ್ದ ದೂರಿನ ಅನ್ವಯ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ಆರಂಭಿಸಿತ್ತು. ಛತ್ತಿಸ್‌ಗಢದಿಂದ ಸಾಗಾಣಿಕೆ ಮಾಡುವ ಪ್ರತಿ ಟನ್ ಕಲ್ಲಿದ್ದಲಿನ ಮೇಲೆ ಟನ್‌ಗೆ 25 ರೂ. ಅಕ್ರಮ ಚಂದಾ ಸಂಗ್ರಹಿಸಲಾಗುತ್ತಿದೆ ಎಂಬ ಆರೋಪ ಬಂದ ಹಿನ್ನೆಲೆಯಲ್ಲಿ ತನಿಖೆ ನಡೆಯುತ್ತಿದೆ. ಇದರಲ್ಲಿ ಹಿರಿಯ ಅಧಿಕಾರಿಗಳು, ಉದ್ಯಮಿಗಳು, ರಾಜಕಾರಣಿಗಳು ಮತ್ತು ಮಧ್ಯವರ್ತಿಗಳು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಲೂಧಿಯಾನ ಕೋರ್ಟ್ ಸ್ಫೋಟದ ಆರೋಪಿ, ಭಯೋತ್ಪಾದಕ ಹರ್‌ಪ್ರೀತ್ ಸಿಂಗ್ ಬಂಧನ

    ಸೌಮ್ಯಾ ಅವರ ಮನೆಯ ಮೇಲೆ 2020ರಲ್ಲಿಯೂ ದಾಳಿ ನಡೆದಿತ್ತು. ಆಗ ಕೇಂದ್ರ ಸರ್ಕಾರವು ರಾಜಕೀಯ ಸೇಡು ತೀರಿಸಿಕೊಳ್ಳಲು ಸಂಸ್ಥೆ ಮೂಲಕ ದಾಳಿ ನಡೆಸಿದೆ ಎಂದು ಬಘೇಲ್ ಆರೋಪಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • 4 ದಿನ, 80 ಅಡಿ ಕೊಳವೆ ಬಾವಿಯಲ್ಲೇ ಸಿಲುಕಿದ್ದ ಹುಡುಗ – 104 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ

    4 ದಿನ, 80 ಅಡಿ ಕೊಳವೆ ಬಾವಿಯಲ್ಲೇ ಸಿಲುಕಿದ್ದ ಹುಡುಗ – 104 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ

    ರಾಯ್ಪುರ: ಕಳೆದ ನಾಲ್ಕು ದಿನಗಳಿಂದಲೂ ಕೊಳವೆ ಬಾವಿಯಲ್ಲೇ ಸಿಲುಕಿದ್ದ 11 ವರ್ಷದ ಹುಡುಗನನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (NDRF) ಸತತ 104 ಗಂಟೆಗಳ ಕಾರ್ಯಾಚರಣೆ ನಡೆಸಿ ರಕ್ಷಿಸಿದ ರೋಚಕ ಘಟನೆ ಛತ್ತಿಸ್‌ಘಡದಲ್ಲಿ ನಡೆದಿದೆ.

    ಕಳೆದ ಶುಕ್ರವಾರ ಮಧ್ಯಾಹ್ನ 2 ಗಂಟೆ ವೇಳೆಯಲ್ಲಿ ಆಟವಾಡುತ್ತಿದ್ದ ಬಾಲಕ ರಾಹುಲ್ ಸಾಹು (11) ಜಾಂಜ್‌ಗೀರ್ ಚಂಪಾ ಜಿಲ್ಲೆಯ ಪಿಹ್ರಿದ್ ಗ್ರಾಮದಲ್ಲಿ ತಮ್ಮ ಮನೆಯ ಹಿಂಬದಿಯಲ್ಲೇ ಕೊರೆದಿದ್ದ 80 ಅಡಿ ಕೊಳವೆ ಬಾವಿಗೆ ಬಿದ್ದಿದ್ದಾನೆ. ಇದನ್ನೂ ಓದಿ: ಉತ್ತರಪ್ರದೇಶ ಮಾದರಿಯಲ್ಲೇ ಕಾಫಿನಾಡಿನಲ್ಲೂ ಬುಲ್ಡೋಜರ್ ಪ್ರಯೋಗ

    ಇದರಿಂದ ಎನ್‌ಡಿಆರ್‌ಎಫ್, ಸ್ಥಳೀಯ ಪೊಲೀಸ್, ಭಾರತೀಯ ಸೇನೆ ಯೋಧರು ಹಾಗೂ ಆಡಳಿತಾಧಿಕಾರಿಗಳು ಸೇರಿದಂತೆ 500ಕ್ಕೂ ಹೆಚ್ಚು ಅಧಿಕಾರಿ ವರ್ಗ ಬಾಲಕನನ್ನು ರಕ್ಷಿಸಲು ಸತತ ಕಾರ್ಯಾಚರಣೆ ಕೈಗೊಂಡಿತ್ತು. ಬಾಲಕನಿಗೆ ಆಮ್ಲಜನಕ ಪೂರೈಕೆಗಾಗಿ ಪೈಪ್ ಲೈನ್ ಅಳವಡಿಸಲಾಗಿತ್ತು. ರಾಹುಲ್‌ನ ಪ್ರತಿ ನಡೆಯ ಮೇಲೆ ನಿಗಾ ಇಡಲು ವಿಶೇಷ ಕ್ಯಾಮೆರಾಗಳನ್ನು ಅಳವಡಿಸಿ, ಆಹಾರ ಪದಾರ್ಥಗಳನ್ನೂ ನೀಡಲಾಗಿತ್ತು. ಸದ್ಯ ಬಾಲಕನನ್ನು ರಕ್ಷಿಸಿದ್ದು ಬಿಲಾಸ್‌ಪುರ ಜಿಲ್ಲೆಯ ಅಪೊಲೊ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಬಿಲಾಸ್‌ಪುರ ಜಿಲ್ಲಾಧಿಕಾರಿ ಜಿತೇಂದ್ರ ಶುಕ್ಲಾ ತಿಳಿಸಿದ್ದಾರೆ.

    ಹಾವು – ಚೇಳುಗಳ ಅಪಾಯ: ಕೊಳವೆ ಬಾವಿಯಿಂದ ಹುಡುಗನನ್ನು ರಕ್ಷಿಸಲು ಅದಕ್ಕೆ ಸಮನಾಗಿ ಸುರಂಗ ಕೊರೆಸುವ ಕಾಮಗಾರಿಯಲ್ಲೂ ಬಿಕ್ಕಟ್ಟು ಕಡಿಮೆ ಆಗಿರಲಿಲ್ಲ. ಕಲ್ಲಿನ ಬಂಡೆಯಿಂದಾಗಿ ಹಾವು, ಚೇಳುಗಳು ಬರುವ ಅಪಾಯವಿತ್ತು. ಅತ್ಯಂತ ವಿಷಕಾರಿ ಹಾವುಗಳನ್ನು ತೆರವುಗೊಳಿಸಲು ಉರಗ ತಜ್ಞರನ್ನು ಹಾಗೂ ಅಪಾಯ ಸಂಭವಿಸಿದರೆ ತಕ್ಷಣ ಚಿಕಿತ್ಸೆ ನೀಡಲು ವೈದ್ಯರಿಗೆ ವ್ಯವಸ್ಥೆಯನ್ನೂ ಮಾಡುವಂತೆ ಆಡಳಿತ ಮಂಡಳಿಗೆ ಸೂಚಿಸಲಾಗಿತ್ತು ಎಂದು ರಕ್ಷಣಾ ತಂಡದ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಲೋಕಾಯುಕ್ತ ಬಿ.ಎಸ್. ಪಾಟೀಲ್

    ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಎಲ್ಲರ ಪ್ರಾರ್ಥನೆ, ರಕ್ಷಣಾ ತಂಡದ ನಿರಂತರ ಕಾರ್ಯಾಚಾರಣೆ ಹಾಗೂ ಸಮರ್ಪಿತ ಪ್ರಯತ್ನದಿಂದಾಗಿ ರಾಹುಲ್ ಸಾಹುವನ್ನು ರಕ್ಷಿಸಲಾಗಿದೆ. ಆಸ್ಪತ್ರೆಯಿಂದ ಆದಷ್ಟು ಬೇಗ ಗುಣಮುಖರಾಗಲೆಂದು ಹಾರೈಸುತ್ತೇನೆ ಎಂದಿದ್ದಾರೆ.

  • ಛತ್ತೀಸ್‍ಗಢ ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನ ಮಾತ್ರ ಕೆಲಸ

    ಛತ್ತೀಸ್‍ಗಢ ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನ ಮಾತ್ರ ಕೆಲಸ

    ರಾಯ್ಪರ: ಛತ್ತೀಸ್‍ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಗಣರಾಜ್ಯೋತ್ಸವ ಅಂಗವಾಗಿ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆಯನ್ನು ಕೊಟ್ಟಿದ್ದಾರೆ. ಸರ್ಕಾರಿ ಕಚೇರಿಗಳು ವಾರದಲ್ಲಿ 5 ದಿನ ಮಾತ್ರ ಕಾರ್ಯನಿರ್ವಹಿಸಲಿವೆ ಎಂದು ಹೇಳಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?: ಸರ್ಕಾರಿ ನೌಕರರ ದಕ್ಷತೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವ ಪ್ರಯತ್ನದ ಭಾಗವಾಗಿ, ಛತ್ತೀಸ್‍ಗಢ ಸರ್ಕಾರವು ವಾರದಲ್ಲಿ ಐದು ದಿನ ಕೆಲಸ ನಿಯಮವನ್ನು ಜಾರಿಗೊಳಿಸುತ್ತಿದೆ. ಪಿಂಚಣಿ ಯೋಜನೆಯಲ್ಲಿ ರಾಜ್ಯ ಸರ್ಕಾರದ ಕೊಡುಗೆಯನ್ನು ಸಹ ಶೇಕಡಾ 10 ರಿಂದ ಶೇಕಡಾ 14 ಕ್ಕೆ ಹೆಚ್ಚಿಸಲಾಗುವುದು ಎಂದು ಬಘೇಲ್ ಟ್ವೀಟ್ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ಸೋದರಮಾವನ ಜೊತೆ ಸೇರಿ ಪತಿಯನ್ನೇ ಕೊಂದಳು!

    ಮಹಿಳೆಯರ ಸುರಕ್ಷತೆಯನ್ನು ಬಲಪಡಿಸಲು ಎಲ್ಲಾ ಜಿಲ್ಲೆಗಳಲ್ಲಿ ಮಹಿಳಾ ಸುರಕ್ಷತಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ವಸತಿ ಪ್ರದೇಶಗಳಲ್ಲಿ ಕೈಗೊಳ್ಳಲಾಗುತ್ತಿರುವ ಸಣ್ಣ ವಾಣಿಜ್ಯ ಚಟುವಟಿಕೆಗಳಿಗೆ ನ್ಯಾಯ ಒದಗಿಸುವ ಮಸೂದೆಯನ್ನು ರಾಜ್ಯ ಸರ್ಕಾರವು ಪರಿಚಯಿಸುತ್ತಿದೆ. ಇದು ಸಾವಿರಾರು ಸಣ್ಣ ಉದ್ಯಮಿಗಳಿಗೆ ಪ್ರಯೋಜನವಾಗಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪಿಂಚಣಿ ಪಡೆಯಲು ಚಿಕ್ಕಪ್ಪನ ಶವವನ್ನ ಪೋಸ್ಟ್ ಆಫೀಸ್‍ಗೇ ತಂದ!

    ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಸಾರಿಗೆ ಇಲಾಖೆ ಸಾರ್ವಜನಿಕರಿಗೆ ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಾಗುವಂತೆ ರಾಜ್ಯಾದ್ಯಂತ ಹೆಚ್ಚಿನ ಸಂಖ್ಯೆಯ ಸಾರಿಗೆ ಸೌಲಭ್ಯ ಕೇಂದ್ರಗಳನ್ನು ತೆರೆಯಲಾಗುವುದು. ಇದಕ್ಕೆ ಪೂರಕವಾಗಿ ಕಲಿಕಾ ಚಾಲನಾ ಪರವಾನಗಿ ನೀಡುವ ನಿಯಮಗಳನ್ನು ಸರಳೀಕರಿಸಲಾಗುವುದು. ಛತ್ತೀಸ್‍ಗಢವು ದಟ್ಟವಾದ ಅರಣ್ಯ ಪ್ರದೇಶವಾಗಿದ್ದು, ಬಹುಪಾಲು ಬುಡಕಟ್ಟು ಜನಸಂಖ್ಯೆಯ ಜೀವನೋಪಾಯವು ಅರಣ್ಯಗಳ ಮೇಲೆ ಅವಲಂಬಿತವಾಗಿದೆ. ಈ ಅರಣ್ಯವಾಸಿಗಳಿಗೆ ಕೆಲವು ಯೋಜನೆಗಳನ್ನು ಮುಂದಿನ ದಿನಗಳಲ್ಲಿ ತರುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಎಂದಿಗೂ ಮನೆಗೆ ಬಾರದ ಮಾಲಕಿಗಾಗಿ ಕಾಯುತ್ತಿರುವ ನಾಯಿ – ವೀಡಿಯೋ ವೈರಲ್!

  • 70 ವರ್ಷದ ದೇಶದ ಸಾಧನೆಯನ್ನು ಪ್ರಶ್ನಿಸುತ್ತಿರುವುದು ದುರದೃಷ್ಟಕರ: ಭೂಪೇಶ್ ಬಘೇಲ್

    70 ವರ್ಷದ ದೇಶದ ಸಾಧನೆಯನ್ನು ಪ್ರಶ್ನಿಸುತ್ತಿರುವುದು ದುರದೃಷ್ಟಕರ: ಭೂಪೇಶ್ ಬಘೇಲ್

    ರಾಯಪುರ: ಕಳೆದ 70 ವರ್ಷಗಳಲ್ಲಿ ದೇಶದ ಸಾಧನೆಗಳನ್ನು ಕೆಲವರು ಪ್ರಶ್ನಿಸುತ್ತಿರುವುದು ದುರದೃಷ್ಟಕರ ಎಂದು ಛತ್ತೀಸ್‍ಗಢ ಸಿಎಂ ಭೂಪೇಶ್ ಬಘೇಲ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಹಿರಿಯ ಪತ್ರಕರ್ತ ರಶೀದ್ ಕಿದ್ವಾಯಿ ಬರೆದಿರುವ ‘ಭಾರತ್ ಕೆ ಪ್ರಧಾನಮಂತ್ರಿ – ದೇಶ್, ದಶಾ ಮತ್ತು ದಿಶಾ’ ಪುಸ್ತಕವನ್ನು ಬಿಡುಗಡೆ ಮಾಡಿ ಮಾತನಾಡಿದ ಬಘೇಲ್ ಅವರು, ಭಾರತಕ್ಕೆ ಸ್ವಾತಂತ್ರ್ಯ ಬಂದಾಗ ಸೂಜಿಯನ್ನು ಸಹ ತಯಾರಿಸಲಿಲ್ಲ. ನಂತರ ನವರತ್ನ(ಸಾರ್ವಜನಿಕ ವಲಯದ ಕಂಪನಿಗಳು) ಸ್ಥಾಪಿಸಲಾಯಿತು. ಐಐಟಿಗಳು ಮತ್ತು ಇತರ ಸಂಸ್ಥೆಗಳನ್ನು ಸ್ಥಾಪಿಸಲಾಯಿತು. ಆದರೆ ಈಗಿನ ಪೀಳಿಗೆ ಹಿಂದಿನ ಪೀಳಿಗೆಯವರು 70 ವರ್ಷಗಳಲ್ಲಿ ಏನು ಮಾಡಿದ್ದಾರೆ ಎಂದು ಕೇಳುತ್ತಾರೆ, ಇದು ಅತ್ಯಂತ ದುರದೃಷ್ಟಕರ ಎಂದು ಹೇಳಿದರು. ಇದನ್ನೂ ಓದಿ:  ಬೇರೆಯವರ ವ್ಯಾಕ್ಸಿನೇಷನ್ ಮಾಹಿತಿಯನ್ನೂ CoWIN ವೆಬ್‍ಸೈಟ್‍ನಲ್ಲಿ ಚೆಕ್ ಮಾಡಿ

    ನಮ್ಮ ಪೂರ್ವಜರು ಮಾಡಿದ ಕಾರ್ಯದ ಬಗ್ಗೆ ಹೆಮ್ಮೆ ಪಡಲು ಸಾಧ್ಯವಾಗದಿದ್ದರೆ, ಅವರನ್ನು ಅವಮಾನಿಸುವ ಹಕ್ಕು ಈಗಿನ ಪೀಳಿಗೆಗೆ ಇಲ್ಲ. ನಾವು ಇಂದು ಇರುವುದನ್ನು ಹೇಗೆ ಮುಂದಕ್ಕೆ ಕೊಂಡೊಯ್ಯಬಹುದು ಎಂದು ಇಂದಿನ ಪೀಳಿಗೆ ಚಿಂತಿಸಬೇಕು ಎಂದು ತಿಳಿ ಹೇಳಿದರು.

    ಪ್ರತಿಯೊಬ್ಬ ಪ್ರಧಾನ ಮಂತ್ರಿಗಳು ಅವರ ಸೃಜನಶೀಲ, ಸಕಾರಾತ್ಮಕ ಚಿಂತನೆ ಮತ್ತು ದೂರದೃಷ್ಟಿಯನ್ನು ಹೊಂದಿರುತ್ತಾರೆ. ಅವರ ಹೋರಾಟಗಳು, ನಿರ್ಧಾರಗಳು, ತ್ಯಾಗಗಳು ರಾಷ್ಟ್ರವನ್ನು ನಿರ್ಮಿಸುವಲ್ಲಿ ಪ್ರಮುಖವಾಗಿವೆ ಎಂದು ಹೇಳಿ ಜವಾಹರಲಾಲ್ ನೆಹರು, ಗುಲ್ಜಾರಿ ಲಾಲ್ ನಂದಾ, ಲಾಲ್ ಬಹದ್ದೂರ್ ಶಾಸ್ತ್ರಿ, ಚಂದ್ರಶೇಖರ್ ಮತ್ತು ಹಿಂದಿನ ಪ್ರಧಾನಿಗಳನ್ನು ಸ್ಮರಿಸಿಕೊಂಡಿದ್ದಾರೆ. ಇದನ್ನೂ ಓದಿ: 1.5 ಕೋಟಿ ರೂ. ಮೌಲ್ಯದ ಹಾವಿನ ವಿಷ ಮಾರಾಟ – ಇಬ್ಬರು ಅರೆಸ್ಟ್

  • ವೀಡಿಯೋ-ಚಾಟಿ ಏಟು ತಿಂದ ಛತ್ತೀಸ್‍ಗಢ ಸಿಎಂ

    ವೀಡಿಯೋ-ಚಾಟಿ ಏಟು ತಿಂದ ಛತ್ತೀಸ್‍ಗಢ ಸಿಎಂ

    ರಾಯ್ಪುರ್: ಛತ್ತೀಸ್‍ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಗೋವರ್ಧನ ಪೂಜೆಯ ಭಾಗವಾಗಿ ಚಾಟಿ ಏಟನ್ನು ಸ್ವೀಕರಿಸಿದ್ದಾರೆ. ಈ ವೀಡಿಯೋ ಸಖತ್ ವೈರಲ್ ಆಗಿದೆ.

    ಛತ್ತೀಸ್‍ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ದುರ್ಗ್‍ನಲ್ಲಿ ಗೋವರ್ಧನ ಪೂಜೆಯ ಆಚರಣೆಯ ಅಂಗವಾಗಿ ಚಾಟಿಯಿಂದ ಹೊಡೆಸಿಕೊಂಡಿದ್ದಾರೆ. ದುರ್ಗ್ ಜಿಲ್ಲೆಯ ಜಾಂಜ್ ಗರಿ ಗ್ರಾಮದಲ್ಲಿ ಗೋವರ್ಧನ ಪೂಜೆಯಲ್ಲಿ ಪಾಲ್ಗೊಂಡು ಪ್ರತಿ ವರ್ಷದಂತೆ ಈ ಬಾರಿಯೂ ಹುಲ್ಲಿನಿಂದ ಮಾಡಿದ ಚಾಟಿ ಏಟು ತಿನ್ನುವ ಸಂಪ್ರದಾಯವನ್ನು ಪಾಲಿಸಿದ್ದಾರೆ. ರಾಜ್ಯದ ಒಳಿತಿಗಾಗಿ ಪ್ರಾರ್ಥಿಸಿದ್ದು, ನಮ್ಮ ನೆಲದ ಅಸ್ಮಿತೆಯನ್ನು ಕಾಪಾಡುವುದು ಮತ್ತು ಅದನ್ನು ಉತ್ತೇಜಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಸಿಎಂ ಬಘೇಲ್ ಹೇಳಿದ್ದಾರೆ. ಇದನ್ನೂ ಓದಿ:  ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಿಂದ ಬೊಕ್ಕಸಕ್ಕೆ 2,100 ಕೋಟಿ ಆದಾಯ ನಷ್ಟ: ಸಿಎಂ

    ವೀಡಿಯೋದಲ್ಲಿ ಏನಿದೆ?: ದೇವಸ್ಥಾನದ ಸಿಬ್ಬಂದಿಯೋರ್ವ ಸಿಎಂ ಅವರಿಗೆ ಚಾಟಿಯಿಂದ ಕೈಗೆ ಹೊಡೆಯುತ್ತಿರುವುದನ್ನು ನೋಡಹುದು. ಈ ವೇಳೆ ಡೋಲು ಇತರೇ ಸಾಂಪ್ರದಾಯಿಕ ವಾದ್ಯಗಳನ್ನು ಬಾರಿಸಲಾಗುತ್ತಿತ್ತು. ಈ ವೀಡಿಯೋವನ್ನು ಛತ್ತೀಸ್‍ಗಢದ ದುರ್ಗ್ ಜಿಲ್ಲೆಯ ದೇವಾಲಯವೊಂದರಲ್ಲಿ ಚಿತ್ರೀಕರಿಸಲಾಗಿದೆ. ಬರೋಬ್ಬರಿ 8 ಬಾರಿ ಸಿಎಂ ಚಾಟಿ ಎಟು ಕೊಟ್ಟ ವ್ಯಕ್ತಿ. ಬಳಿಕ ಸಿಎಂ ಅವರನ್ನು ಅಪ್ಪಿಕೊಂಡು ಧನ್ಯವಾದ ತಿಳಿಸಿದ್ದಾರೆ ಈ ವೀಡಿಯೋವನ್ನು ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹಂಚಿಕೊಂಡಿದ್ದು, ದೆವರಿಗೆ ಹರಕೆ ಮಾಡಿಕೊಂಡಿದ್ದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಪೆಟ್ರೋಲ್ 100.63, ಡೀಸೆಲ್ 85.03ರೂ. – ಸರ್ಕಾರದಿಂದ ಅಧಿಕೃತ ಅಧಿಸೂಚನೆ

    ದೀಪಾವಳಿಯ ಮರುದಿನ ಪ್ರತಿವರ್ಷ ಗೋವರ್ಧನ ಪೂಜೆಯನ್ನು ನಡೆಸಲಾಗುತ್ತದೆ. ಈ ವರ್ಷ ಹಬ್ಬವನ್ನು ಇಂದು ಆಚರಸಲಾಗಿದೆ. ಶ್ರೀಕೃಷ್ಣ ಇದೇ ದಿನದಂದು ಗೋವರ್ಧನ ಪರ್ವತವನ್ನು ಕಿರುಬೆರಳಿನಲ್ಲಿ ಎತ್ತಿ ಜನರನ್ನು ರಕ್ಷಣೆ ಮಾಡಿ ಇಂಧ್ರದೇವನ ಅಹಂಕರವನ್ನು ಅಡಗಿಸಿದ್ದ ಎಂಬ ಧಾರ್ಮಿಕ ನಂಬಿಕೆ ಸ್ಥಳೀಯರಲ್ಲಿದೆ. ಈ ದಿನದಂದು ದೇವಾಲಯದಲ್ಲಿ ಚಾಟಿ ಏಟು ಸ್ವೀಕರಿಸಿದರೇ ಕಷ್ಟಗಳು ದೂರವಾಗಿ ಜೀವನದಲ್ಲಿ ಒಳ್ಳೆಯದಾಗುತ್ತದೆ ಎನ್ನುವ ನಂಬಿಕೆ ಸ್ಥಳೀಯರಲ್ಲಿದೆ.

  • ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಹೇಳಿಕೆ – ಛತ್ತೀಸ್‍ಗಢದ ಸಿಎಂ ತಂದೆ ಅರೆಸ್ಟ್

    ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಹೇಳಿಕೆ – ಛತ್ತೀಸ್‍ಗಢದ ಸಿಎಂ ತಂದೆ ಅರೆಸ್ಟ್

    ಛತ್ತೀಸ್‍ಗಢ: ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ತಂದೆ ನಂದ್ ಕುಮಾರ್ ಬಘೇಲ್ ಅವರನ್ನು ನಿನ್ನೆ ಪೊಲೀಸರು ಅರೆಸ್ಟ್ ಮಾಡಿದ್ದು, ಅವರನ್ನು 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

    ಈ ಕುರಿತು ಪ್ರತಿಕ್ರಿಯಿಸಿದ ಅವರ ವಕೀಲ, ನಾವು ಜಾಮೀನು ಕೋರಲಿಲ್ಲ. ನೇರವಾಗಿ ಸೆಪ್ಟೆಂಬರ್ 21 ರಂದು ನ್ಯಾಯಾಲಯಕ್ಕೆ ಹಾಜರಾಗುವುದಾಗಿ ತಿಳಿಸಿದ್ದಾರೆ.  ಇದನ್ನೂ ಓದಿ:  ಶಾಲಾ ಕಟ್ಟಡ ನಿರ್ಮಾಣಕ್ಕೆ ಅಡ್ಡಿ – ಕ್ರೀಡಾಪಟುಗಳ ಮೇಲೆ ಮಾಧುಸ್ವಾಮಿ ಗರಂ

    ಕಾನೂನಿನ ಮುಂದೆ ತಲೆಬಾಗಲೇ ಬೇಕು!:

    ಈ ಕುರಿತು ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿದ ಭೂಪೇಶ್ ಬಘೇಲ್, ನನ್ನ ಸರ್ಕಾರದಲ್ಲಿ ಯಾರೂ ಕಾನೂನನ್ನು ಮೀರುವಂತಿಲ್ಲ. ಅವರು ಸಿಎಂ ಅವರ 86 ವರ್ಷದ ತಂದೆಯಾಗಿದ್ದರೂ ಸಹ ಅವರು ಕಾನೂನಿನ ಮುಂದೆ ತಲೆಬಾಗಲೇ ಬೇಕು. ಮುಖ್ಯಮಂತ್ರಿಯಾಗಿ ವಿವಿಧ ಸಮುದಾಯಗಳ ನಡುವೆ ಸಾಮರಸ್ಯವನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ನನ್ನ ಮೇಲಿದೆ. ಅವರು ಒಂದು ಸಮುದಾಯದ ವಿರುದ್ಧ ಟೀಕೆ ಮಾಡಿದ್ದರೆ, ಅದಕ್ಕೆ ನಾನು ಕ್ಷಮೆ ಕೇಳುತ್ತೇನೆ. ಇದಕ್ಕೆ ಕಾನೂನು ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ:  ಜಾತಿಗಣತಿ ವರದಿ ಬಹಿರಂಗ ಆಗಬೇಕು: ಜಿ.ಪರಮೇಶ್ವರ್

    ನನ್ನ ತಂದೆಯೊಂದಿಗಿನ ನನ್ನ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳ ಬಗ್ಗೆ ಎಲ್ಲರಿಗೂ ತಿಳಿದಿದೆ. ನಮ್ಮ ರಾಜಕೀಯ ಆಲೋಚನೆಗಳು ಮತ್ತು ನಂಬಿಕೆಗಳು ಅವರಿಗಿಂತ ವಿಭಿನ್ನವಾಗಿವೆ. ನಾನು ಅವರ ಮಗನಾಗಿ ಅವರನ್ನು ಗೌರವಿಸುತ್ತೇನೆ. ಆದರೆ ಮುಖ್ಯಮಂತ್ರಿಯಾಗಿ, ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ ಇಂತಹ ತಪ್ಪುಗಳಿಗಾಗಿ ನಾನು ಅವರನ್ನು ಕ್ಷಮಿಸಲು ಸಾಧ್ಯವಿಲ್ಲ ಎಂದು ನಿಖರವಾಗಿ ಹೇಳಿದ್ದಾರೆ.

    ನಮ್ಮ ಸರ್ಕಾರವು ಪ್ರತಿಯೊಂದು ಧರ್ಮ, ಜಾತಿ ಮತ್ತು ಸಮುದಾಯದವರ ಭಾವನೆಯನ್ನು ಗೌರವಿಸುತ್ತೆ ಎಂದು ಒತ್ತಿ ಹೇಳಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಗ್ರಾನೈಟ್ ಉದ್ಯಮಿಯ ಮನೆಗೆ ಕನ್ನ – 3 ಕೆಜಿ ಚಿನ್ನ, 25 ಲಕ್ಷ ಹಣ ಕದ್ದ ಆರೋಪ

    ಏನಿದು ಘಟನೆ?
    ಇತ್ತೀಚೆಗೆ ಉತ್ತರಪ್ರದೇಶಕ್ಕೆ ಭೇಟಿ ನೀಡಿದ ನಂದ್ ಕುಮಾರ್ ಬಘೇಲ್ ಅವರು, ಮತದಾರರಿಗೆ ಜಾಗೃತಿ ಮೂಡಿಸುವ ಗುಂಪಿನ ಮುಖ್ಯಸ್ಥರಾಗಿದ್ದು, ಪ್ರಮುಖ ಒಬಿಸಿ ಧ್ವನಿಯಾಗಿದ್ದರು. ಈ ವೇಳೆ ಮಾತನಾಡಿದ ಅವರು, ಬ್ರಾಹ್ಮಣರನ್ನು ಗಂಗಾ ನದಿಯಿಂದ ವೋಲ್ಗಾಗೆ ಕಳುಹಿಸಬೇಕು. ಅವರು ವಿದೇಶಿಯರು. ಅವರು ನಮ್ಮ ದೇಶಕ್ಕೆ ಬಂದು ನಮ್ಮನ್ನೇ ಅಸ್ಪøಶ್ಯರು ಎಂದು ಹೇಳುತ್ತಾರೆ. ಅದು ಅಲ್ಲದೇ ನಮ್ಮ ಎಲ್ಲಾ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದಾರೆ. ಬ್ರಾಹ್ಮಣರು ತಮ್ಮ ಹಳ್ಳಿಗೆ ಪ್ರವೇಶಿಸದಂತೆ ನಾನು ಗ್ರಾಮಸ್ಥರನ್ನು ಒತ್ತಾಯಿಸುತ್ತೇನೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದನ್ನೂ ಓದಿ:   ಇಂದಿನಿಂದ ಪ್ರಖ್ಯಾತ ತಿರುಪತಿ ತಿಮ್ಮಪ್ಪನ ದೇಗುಲದಲ್ಲಿ ಸರ್ವದರ್ಶನಕ್ಕೆ ಅವಕಾಶ

    ನಂದ್ ಕುಮಾರ್ ಅವರು ಮೇಲ್ಜಾತಿ ವಿರೋಧಿಯಾಗಿದ್ದು, 2000ರಲ್ಲಿ ಈ ವಿಷಯದ ಕುರಿತು ಪುಸ್ತಕವನ್ನು ಬರೆದಿದ್ದರು. ಆದರೆ ಅದನ್ನು  ಕಾಂಗ್ರೆಸ್ ಸರ್ಕಾರವು ನಿಷೇಧಿಸಿತು.

  • ಛತ್ತೀಸ್​ಗಢ ಮುಖ್ಯಮಂತ್ರಿ ತಂದೆ ವಿರುದ್ಧವೇ ಎಫ್‍ಐಆರ್

    ಛತ್ತೀಸ್​ಗಢ ಮುಖ್ಯಮಂತ್ರಿ ತಂದೆ ವಿರುದ್ಧವೇ ಎಫ್‍ಐಆರ್

    ಛತ್ತೀಸಗಢ: ಬ್ರಾಹ್ಮಣರನ್ನು ಬಹಿಷ್ಕರಿಸುವುದಾಗಿ ಹೇಳಿಕೆ ನೀಡಿದ್ದ ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ತಂದೆ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.

    ಸಿಎಂ ಭೂಪೇಶ್ ಬಘೇಲ್‍ರವರ ತಂದೆ ನಂದ ಕುಮಾರ್ ಬಘೇಲ್ ಇತ್ತೀಚೆಗಷ್ಟೇ ಉತ್ತರ ಪ್ರದೇಶದಲ್ಲಿ, ನಾನು ಬ್ರಾಹ್ಮಣರನ್ನು ಭಾರತದಲ್ಲಿರುವ ಎಲ್ಲಾ ಗ್ರಾಮಗಳಿಗೆ ಸೇರಿಸದಂತೆ ಒತ್ತಾಯಿಸುತ್ತೇನೆ. ಅವರನ್ನು ಬಹಿಷ್ಕಾರ ಹಾಕಲು ಎಲ್ಲ ಸಮುದಾಯಗಳಿಗೆ ತಿಳಿಸುತ್ತೇನೆ. ಅವರನ್ನು ವೋಲ್ಗಾ ನದಿಯ ದಡಕ್ಕೆ ವಾಪಸ್ ಕಳುಹಿಸಬೇಕು ಎಂದು ಹೇಳಿದ್ದರು. ಇದನ್ನೂ ಓದಿ: ಸೈಯದ್ ಅಲಿ ಶಾ ಗೀಲಾನಿ ಮೃತದೇಹಕ್ಕೆ ಪಾಕ್ ಧ್ವಜ ಹೊದಿಸಿದ ಕುಟುಂಬಸ್ಥರ ವಿರುದ್ಧ

    Bhupesh Baghel

    ಈ ಬಗ್ಗೆ ಭೂಪೇಶ್ ಬಘೇಲ್ ಕಾನೂನು ಮತ್ತು ಸರ್ಕಾರ ಎಲ್ಲರ ಪರವಾಗಿ ನಿಂತಿದೆ. ನನ್ನ ತಂದೆಗೆ 86 ವರ್ಷ ವಯಸ್ಸಾಗಿದ್ದರೂ ಕಾನೂನಿನ ಮುಂದೆ ಯಾರು ದೊಡ್ಡವರಲ್ಲ. ಛತ್ತೀಸ್ ಗಢ ಸರ್ಕಾರವು ಪ್ರತಿಯೊಂದು ಧರ್ಮ, ಪಂಗಡ, ಸಮುದಾಯ ಮತ್ತು ಅವರ ಭಾವನೆಗಳನ್ನು ಗೌರವಿಸುತ್ತದೆ. ನನ್ನ ತಂದೆ ನಂದ ಕುಮಾರ್ ಬಘೇಲ್ ಅವರು ನೀಡುವ ಹೇಳಿಕೆ ಕೋಮು ಶಾಂತಿಗೆ ಭಂಗ ತಂದಿದೆ. ಅವರ ಹೇಳಿಕೆ ನನಗೂ ಬೇಸರ ತಂದಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶಾರೂಖ್, ನಯನ ತಾರಾ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರಾ ರಾಣಾ ದಗ್ಗುಬಾಟಿ

    ನಾವು ರಾಜಕೀಯವನ್ನು ನೋಡುವ ದೃಷ್ಟಿಗೂ ಮತ್ತು ನಂಬಿಕೆಗೂ ವ್ಯತ್ಯಾಸವಿದೆ. ಒಬ್ಬ ಮಗನಾಗಿ ನಾನು ಅವರನ್ನು ಗೌರವಿಸುತ್ತೇನೆ. ಆದರೆ ಮುಖ್ಯಮಂತ್ರಿಯಾಗಿ ನಾನು ಅವರು ಮಾಡಿರುವ ತಪ್ಪನ್ನು ಕ್ಷಮಿಸಲು ಸಾಧ್ಯವಿಲ್ಲ. ಇದು ಸಾರ್ವಜನಿಕ ಸುವ್ಯವಸ್ಥೆಗೆ ಭಂಗವನ್ನುಂಟು ಮಾಡುತ್ತದೆ ಎಂದು ಹೇಳಿದ್ದಾರೆ.

  • ಕೊರೊನಾ ನಿಯಮ ಉಲ್ಲಂಘನೆ – ಯುವಕನ ಕಪಾಳಕ್ಕೆ ಥಳಿಸಿದ ಡಿಸಿಗೆ ಬಿಸಿ ಮುಟ್ಟಿಸಿದ ಸಿಎಂ

    ಕೊರೊನಾ ನಿಯಮ ಉಲ್ಲಂಘನೆ – ಯುವಕನ ಕಪಾಳಕ್ಕೆ ಥಳಿಸಿದ ಡಿಸಿಗೆ ಬಿಸಿ ಮುಟ್ಟಿಸಿದ ಸಿಎಂ

    ರಾಯ್ಪುರ: ಕೋವಿಡ್-19 ನಿಯಮ ಉಲ್ಲಂಘನೆ ಮಾಡಿದ ವ್ಯಕ್ತಿಗಳಿಗೆ ಅಧಿಕಾರಿಗಳು ಥಳಿಸುತ್ತಿರುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದ್ದು, ಇಂಥಹದ್ದೇ ಘಟನೆ ಛತ್ತೀಸ್ ಗಢದದಲ್ಲಿ ನಡೆದಿದ್ದು, ಜಿಲ್ಲಾಧಿಕಾರಿಯನ್ನು ಕೆಲಸದಿಂದ ಬಿಡುಗಡೆ ಮಾಡಲಾಗಿದೆ.

    ಸೂರಜ್ ಪುರ ಜಿಲ್ಲೆಯ ಜಿಲ್ಲಾಧಿಕಾರಿ ಕೋವಿಡ್-19 ನಿಯಮ ಉಲ್ಲಂಘನೆ ಮಾಡಿದ ವ್ಯಕ್ತಿಯನ್ನು ಥಳಿಸಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಅಧಿಕಾರಿ ಕ್ಷಮೆ ಕೋರಿದ್ದಾರೆ.

    ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಲಾಕ್‍ಡೌನ್ ಜಾರಿಯಲ್ಲಿದೆ. ಆದರೆ ಅಮಾನ್ ಮಿತ್ತಲ್ (23) ಲಾಕ್‍ಡೌನ್ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಕ್ಕಾಗಿ ಅಧಿಕಾರಿಗಳು ಆತನನ್ನು ತಡೆದಿದ್ದರು. ತಾನು ಸಂಚರಿಸುತ್ತಿರುವುದಕ್ಕೆ ಕಾರಣ ಹೇಳಲು ಯತ್ನಿಸುತ್ತಿದ್ದ ಯವಕ ಮೊಬೈಲ್ ಫೋನ್ ಹಾಗೂ ಕಾಗದವನ್ನು ತೋರಿಸುತ್ತಿದ್ದದ್ದು ವೀಡಿಯೋದಲ್ಲಿ ದಾಖಲಾಗಿದೆ. ಆದರೆ ಅಧಿಕಾರಿ ಅದನ್ನು ಕಸಿದುಕೊಂಡು ಎಸೆದಿರುವುದು ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ.

    ಈ ಬೆನ್ನಲ್ಲೇ ಹಿರಿಯ ಅಧಿಕಾರಿಯೊಬ್ಬರು ಯುವಕನನ್ನು ಥಳಿಸಲು ಪ್ರಾರಂಭಿಸಿದ್ದು, ಇಬ್ಬರು ಪೊಲೀಸ್ ಅಧಿಕಾರಿಗಳಿಗೂ ಥಳಿಸುವಂತೆ ಹೇಳಿದ್ದಾರೆ. ಪರಿಣಾಮ ಯುವಕನಿಗೆ ಅಧಿಕಾರಿಗಳು ದೊಣ್ಣೆಯಿಂದ ಹೊಡೆದಿದ್ದಾರೆ. ಈ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಜಿಲ್ಲಾಧಿಕಾರಿ ರಣ್ ಬೀರ್ ಶರ್ಮಾ ಲಾಕ್‍ಡೌನ್ ನಿಯಮ ಉಲ್ಲಂಘಿಸಿದ ಯುವಕನೋರ್ವನಿಗೆ ಥಳಿಸುತ್ತಿರುವ ವೀಡಿಯೋ ವೈರಲ್ ಆಗತೊಡಗಿದೆ. ಇದಕ್ಕಾಗಿ ನಾನು ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ.

    ಈ ಸಾಂಕ್ರಾಮಿಕದ ಅವಧಿಯಲ್ಲಿ ಸೂರಜ್ ಪುರ ಜಿಲ್ಲೆ ಅಪಾರ ಪ್ರಮಾಣದ ಜೀವ ಹಾನಿಯನ್ನು ಕಂಡಿದೆ. ಈ ಸಮಸ್ಯೆಯನ್ನು ನಿಭಾಯಿಸುವುದಕ್ಕಾಗಿ ನಾವು ರಾಜ್ಯ ಸರ್ಕಾರದ ಅಧಿಕಾರಿಗಳು ಶ್ರಮಿಸುತ್ತಿದ್ದೇವೆ ಎಂದು ತಮ್ಮ ಹೇಳಿಕೆಯಲ್ಲಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

    ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಸೂರಜ್‍ಪುರ ಜಿಲ್ಲಾಧಿಕಾರಿ ರಣಬೀರ್ ಶರ್ಮಾ ಅವರು ಯುವಕನ ಮೇಲೆ ವರ್ತಿಸಿದ ಪ್ರಕರಣ ನನ್ನ ಗಮನಕ್ಕೆ ಬಂದಿದೆ. ಇದು ತುಂಬಾ ದುಃಖಕರ ಮತ್ತು ಖಂಡನೀಯ. ಛತ್ತೀಸ್‍ಗಢದಲ್ಲಿ ನಡೆಯುವ ಅಂತಹ ಯಾವುದೇ ಕೃತ್ಯವನ್ನು ಸಹಿಸುವುದಿಲ್ಲ. ಜಿಲ್ಲಾಧಿಕಾರಿ ರಣಬೀರ್ ಶರ್ಮಾ ಅವರನ್ನು ತಕ್ಷಣ ಕರ್ತವ್ಯದಿಂದ ತಗೆದು ಹಾಕುವಂತೆ ಸೂಚನೆ ನೀಡಲಾಗಿದೆ ಎಂದು ಛತ್ತೀಸ್‍ಗಢ ಸಿಎಂ ಭೂಪೇಶ್ ಬಘೇಲ್ ಟ್ವೀಟ್ ಮಾಡಿದ್ದಾರೆ.