Tag: bidar

  • ಲಾರಿ-ಬೈಕ್ ಡಿಕ್ಕಿ: ತುಂಬು ಗರ್ಭಿಣಿಯ ಹೊಟ್ಟೆಯಿಂದ ಹೊರಬಂತು ಮಗು!

    ಲಾರಿ-ಬೈಕ್ ಡಿಕ್ಕಿ: ತುಂಬು ಗರ್ಭಿಣಿಯ ಹೊಟ್ಟೆಯಿಂದ ಹೊರಬಂತು ಮಗು!

    ಬೀದರ್: ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ತುಂಬು ಗರ್ಭಿಣಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಹೃದಯವಿದ್ರಾವಕ ಘಟನೆ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಳ್ಳಿಖೇಡ್ ಗ್ರಾಮದ ಬಳಿ ನಡೆದಿದೆ.

    25 ವರ್ಷದ ಯಾಸಮೀನ್ ಮೃತಪಟ್ಟ ದುರ್ದೈವಿ ಗರ್ಭಿಣಿ. ಘಟನೆಯಿಂದ ಪತಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಯಾಸಮೀನ್ 8 ತಿಂಗಳ ಗರ್ಭಿಣಿಯಾಗಿದ್ದು, ಬೈಕ್ ಗೆ ಲಾರಿ ಡಿಕ್ಕಿಯಾದ ರಭಸಕ್ಕೆ ಆಕೆಯ ಹೊಟ್ಟೆಯಿಂದ ಮಗು ಹೊರಬಂದಿದೆ. ಅರ್ಧಗಂಟೆ ಜೀವ ಇದ್ದ ಮಗು ಬಳಿಕ ಮೃತಪಟ್ಟಿದೆ.

    ಹುಮ್ನಾಬಾದ್ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

  • ದ್ವಿತೀಯ ಪಿಯುಸಿ ಮುಗಿಸಲು ಹಣದ ಸಮಸ್ಯೆ: 1 ವರ್ಷದಿಂದ ಶಿಕ್ಷಣವಿಲ್ದೆ ಮನೆಯಲ್ಲಿರೋ ಬೀದರ್‍ನ ಈ ವಿದ್ಯಾರ್ಥಿಗೆ ಬೇಕಿದೆ ಸಹಾಯ

    ದ್ವಿತೀಯ ಪಿಯುಸಿ ಮುಗಿಸಲು ಹಣದ ಸಮಸ್ಯೆ: 1 ವರ್ಷದಿಂದ ಶಿಕ್ಷಣವಿಲ್ದೆ ಮನೆಯಲ್ಲಿರೋ ಬೀದರ್‍ನ ಈ ವಿದ್ಯಾರ್ಥಿಗೆ ಬೇಕಿದೆ ಸಹಾಯ

    ಬೀದರ್: ಇಲ್ಲಿನ ಗ್ರಾಮೀಣ ಪ್ರತಿಭೆ ಆರ್ಥಿಕ ಸಮಸ್ಯೆಯಿಂದ ಕಾಲೇಜು ಬಿಡುವ ಹಂತದಲ್ಲಿದ್ದಾನೆ. ಮೊದಲನೆ ವರ್ಷದ ವಿಜ್ಞಾನ ಪಿಯುಸಿ ಮುಗಿಸಿದ್ದು, ಎರಡನೇ ವರ್ಷದ ಪಿಯುಸಿಗೆ ಆರ್ಥಿಕ ಸಮಸ್ಯೆ ಎದುರಾಗಿದೆ. ಕಡು ಬಡತನದಲ್ಲಿ ಹುಟ್ಟಿದ ಈ ಗ್ರಾಮೀಣ ಪ್ರತಿಭೆಗೆ ವಿದ್ಯಾಭ್ಯಾಸ ಮಾಡಲು ಹಣವಿಲ್ಲದೆ ಒಂದು ವರ್ಷ ಮನೆಯಲ್ಲಿ ಕುಳಿತುಕೊಂಡಿದ್ದಾನೆ. ಇದೀಗ ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮದ ಮೂಲಕವಾದ್ರು ಯಾರಾದ್ರೂ ದಾನಿಗಳು ಸಹಾಯ ಮಾಡುವ ಮೂಲಕ ನನ್ನ ಜೀವನಕ್ಕೆ ಬೆಳಕು ನೀಡುತ್ತಾರೆ ಎಂಬ ಭರವಸೆಯಲ್ಲಿದ್ದಾನೆ.

    ಬೀದರ್ ನಗರದ ಅಬ್ದುಲ್ ಫೈಜಾ ದರ್ಗಾ ಕಾಲೋನಿಯ ನಿವಾಸಿಯಾಗಿರುವ ಮಹ್ಮದ್ ಇಲಿಯಾಜ್ ಇದೀಗ ಶಿಕ್ಷಣದಿಂದ ವಂಚಿತನಾಗುತ್ತಿರುವ ಗ್ರಾಮೀಣ ಪ್ರತಿಭೆ. ಎಸ್‍ಎಸ್‍ಎಲ್‍ಸಿ ಯಲ್ಲಿ 55% ಹಾಗೂ ಪ್ರಥಮ ಪಿಯುಸಿಯಲ್ಲಿ 53% ಅಂಕ ತೆಗೆದುಕೊಂಡು ದಾನಿಗಳ ಸಹಾಯದಿಂದ ಓದು ಮುಗಿಸಿದ್ದಾನೆ. ಆದ್ರೆ ಎರಡನೆಯ ವರ್ಷದ ಪಿಯುಸಿ ಮುಗಿಸಲು 12 ಸಾವಿರ ರೂ. ಬೇಕಾಗಿದೆ. ಆದ್ರೆ ಅಷ್ಟೊಂದು ಹಣ ಕೊಡಲು ಅಸಾಧ್ಯವಾಗಿರುವುದರಿಂದ ಮುಂದಿನ ಶಿಕ್ಷಣವನ್ನೇ ಕೈ ಬಿಡುವ ಹಂತದಲ್ಲಿದ್ದಾನೆ.

    ಈಗಾಗಲೇ ಆರ್ಥಿಕ ಸಮಸ್ಯೆಯಿಂದ ಒಂದು ವರ್ಷ ಮನೆಯಲ್ಲೆ ಕಳೆದಿದ್ದು, ಈಗಲಾದ್ರು ಯಾರಾದ್ರು ದಾನಿಗಳು ಸಹಾಯ ಮಾಡಿದ್ರೆ ಓದಿ ಡಾಕ್ಟರೋ, ಇಂಜಿನಿಯರೋ ಆಗ್ತೀನಿ ಅನ್ನೋ ಕನಸು ಕಾಣುತ್ತಿದ್ದಾನೆ. ಕುಟುಂಬ ಒಂದು ಹೊತ್ತಿನ ಊಟಕ್ಕೆ ಪ್ರತಿದಿನ ನರಕಯಾತನೆ ಪಡುತ್ತಿದ್ದು, ಇರಲು ಒಂದು ಸರಿಯಾದ ನಿವೇಶನ ಇಲ್ಲದೆ ಬಾಡಿಗೆ ನೀಡಿ ಮುರುಕಲು ಮನೆಯಲ್ಲಿ ವಾಸವಾಗಿದ್ದಾರೆ. ಇದಕ್ಕೆ ಪ್ರತಿ ತಿಂಗಳು 1500 ರೂ. ಹಣ ನೀಡುತ್ತಿದ್ದು, ಇನ್ನು ಶಿಕ್ಷಣದ ಮಾತೆಲ್ಲಿ! ನನಗೆ ಓದುವ ಮನಸ್ಸಿದ್ದು, ಯಾರಾದ್ರೂ ದಾನಿಗಳು ಸಹಾಯ ಮಾಡಿದ್ರೆ ಖಂಡಿತ ಓದಿ ಮುಂದೆ ಜೀವನ ರೂಪಿಸಿಕೊಳ್ಳುತ್ತೇನೆ ಅಂತಾ ನೊಂದ ವಿದ್ಯಾರ್ಥಿ ಹೇಳುತ್ತಿದ್ದಾನೆ.

    ಮಹ್ಮದ್ ಗೌಸ್ ಮತ್ತು ಅಮೀರಾ ಬಿ ದಂಪತಿಗಳಿಗೆ ಒಟ್ಟು ನಾಲ್ಕು ಜನ ಮಕ್ಕಳಿದ್ದು, ಶಿಕ್ಷಣ ಪಡೆಯದೆ ಕೂಲಿ ಕೆಲಸ ಮಾಡುತ್ತಿದ್ದಾರೆ. ತಂದೆ ಮಹ್ಮದ್ ಗೌಸ್ ಕೂಡಾ ಕುಟುಂಬ ನಿರ್ವಹಣೆ ಮಾಡಲು 14 ಗಂಟೆಗಳ ಕಾಲ ಆಟೋ ಓಡಿಸಿ 200 ರಿಂದ 300 ರೂ. ವರೆಗೆ ಸಂಪಾದನೆ ಮಾಡುತ್ತಾರೆ. ಆದ್ರೆ ಇದು ಜೀವನ ನಿರ್ವಹಣೆಗೆ ಸರಿಯಾಗುತ್ತಿದ್ದು, ಮಕ್ಕಳಿಗೆ ಶಿಕ್ಷಣ ಕೊಡಿಸುವ ಸಾಮಥ್ರ್ಯ ಪೋಷಕರಿಗಿಲ್ಲ. ಹೀಗಾಗಿ ಯಾರಾದ್ರೂ ದಾನಿಗಳು ಸಹಾಯ ಮಾಡಿದ್ರೆ ನನ್ನ ಮಗ ಶಿಕ್ಷಣವನ್ನು ಮುಂದುವರಿಸಬಹುದು ಎಂದು ಬೇಡಿಕೊಳ್ಳುತ್ತಿದ್ದಾರೆ.

    ವಿದ್ಯಾರ್ಥಿ ಕೂಡಾ ಒಂದು ವರ್ಷ ಶಿಕ್ಷಣದಿಂದ ದೂರ ಉಳಿದು ಸಮಯ ವ್ಯರ್ಥ ಮಾಡಿದ್ದು, ಈಗಾಲಾದ್ರೂ ಯಾರಾದ್ರೂ ನೆರವಿಗೆ ಬಂದ್ರೆ ಓದುವ ಅಭಿಲಾಷೆ ಇಟ್ಟುಕೊಂಡಿದ್ದಾನೆ. ತಂದೆ ಕೂಡ ಮಗನಿಗೆ ಶಿಕ್ಷಣ ನೀಡಬೇಕು ಎಂದು ಹರಸಾಹಸ ಪಡುತ್ತಿದ್ದು ಸಹಾಯಕ್ಕಾಗಿ ಪರಿ ಪರಿಯಾಗಿ ಬೇಡಿಕೊಳ್ಳುತ್ತಿದ್ದಾರೆ.

    ಹಣವಿದ್ರೂ ಓದಲು ಆಸಕ್ತಿ ಇಲ್ಲದ ಸಾವಿರಾರು ವಿದ್ಯಾರ್ಥಿಗಳ ಮಧ್ಯೆ ಈ ಗ್ರಾಮೀಣ ಪ್ರತಿಭೆಗೆ ಹಣವಿಲ್ಲದೆ ಶಿಕ್ಷಣ ತೊರೆಯುತ್ತಿರುವುದು ಬೇಸರದ ಸಂಗತಿಯಾಗಿದೆ. ಕಡುಬಡತನದಲ್ಲಿ ನೊಂದು ಬೆಂದಿರುವ ಈ ಕುಡುಂಬಕ್ಕೆ ಮಗನಿಗೆ ಶಿಕ್ಷಣ ನೀಡುವುದು ಅಸಾಧ್ಯವಾದ ಮಾತಾಗಿದೆ. ಒಟ್ಟಿನಲ್ಲಿ ಈ ಗ್ರಾಮೀಣ ಪ್ರತಿಭೆಯ ಸ್ಟೋರಿ ನೋಡಿದ ಯಾರಾದ್ರು ದಾನಿಗಳು ಸಹಾಯ ಮಾಡಿ ಆತನ ವಿದ್ಯಾರ್ಥಿ ಜೀವನಕ್ಕೆ ಬೆಳಕು ನೀಡುವಂತಾಗಲಿ ಅನ್ನೋದು ನಮ್ಮ ಆಶಯ.

    https://www.youtube.com/watch?v=QvZFNVubjfs

  • ವಿಡಿಯೋ: ಡ್ಯಾನ್ಸ್ ಮಾಡುತ್ತಿದ್ದ ನರ್ಸ್‍ಗಳ ಮೇಲೆ ಹಣದ ಹೊಳೆ

    ವಿಡಿಯೋ: ಡ್ಯಾನ್ಸ್ ಮಾಡುತ್ತಿದ್ದ ನರ್ಸ್‍ಗಳ ಮೇಲೆ ಹಣದ ಹೊಳೆ

    ಬೀದರ್: ಶುಕ್ರವಾರ ನಗರದಲ್ಲಿ ನರ್ಸ್ ಫ್ಲೋರೆನ್ಸ್ ನೈಟಿಂಗೇಲ್ ಹುಟ್ಟು ಹಬ್ಬ ಆಚರಣೆ ವೇಳೆಯಲ್ಲಿ ಇಬ್ಬರು ಮಹಿಳೆಯರು ಖುಷಿಯಿಂದ ಮೆರವಣಿಗೆ ಡ್ಯಾನ್ಸ್ ಮಾಡುವಾಗ ವ್ಯಕ್ತಿಯೊಬ್ಬ ಅವರ ಮೇಲೆ 10 ರೂ. ನೋಟುಗಳನ್ನು ಚೆಲ್ಲುವ ಮೂಲಕ ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದ್ದಾನೆ.

    ಶುಕ್ರವಾರ ಬೀದರ್‍ನಲ್ಲಿ ಸರ್ಕಾರಿ ಮತ್ತು ಖಾಸಗಿ ನರ್ಸ್‍ಗಳಿಂದ ಫ್ಲೋರೆನ್ಸ್ ನೈಟಿಂಗೇಲ್ ಹುಟ್ಟುಹಬ್ಬವನ್ನು ತುಂಬಾ ಅದ್ಧೂರಿಯಾಗಿ ಆಚರಣೆ ಮಡಲಾಗುತ್ತಿತ್ತು. ಮೆರವಣಿಗೆ ಸಂದರ್ಭದಲ್ಲಿ ಮಹಿಳಾ ನರ್ಸ್‍ಗಳು ಡ್ಯಾನ್ಸ್ ಮಾಡುವಾಗ ಅವರ ಮೇಲೆ ನೋಟುಗಳನ್ನು ಎಸೆಯಲಾಗಿದೆ. ಇದು ಎಲ್ಲಡೆ ವ್ಯಾಪಕ ಟೀಕೆಗೆ ಒಳಗಾಗಿದೆ.

    ಮಹಿಳೆಯರ ಮೇಲೆ ನೋಟು ಎಸೆದ ವ್ಯಕ್ತಿಯನ್ನು ಅಧಿಕಾರಿಗಳು ಅಮಾನತು ಮಾಡಬೇಕು. ಪೊಲೀಸ್ ಇಲಾಖೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಕಠಿಣ ಶಿಕ್ಷೆ ನೀಡಬೇಕು ಎಂದು ಡಾ.ಬಿ.ಆರ್.ಅಂಬೇಡ್ಕರ್ ಯೂತ್ ಬ್ರಿಗೇಡ್ ಆಗ್ರಹಿಸಿದೆ.

    https://youtu.be/zd2QcaujYHI

     

  • ಬೀದರ್‍ನಲ್ಲಿ ಭೀಕರ ಅಪಘಾತಕ್ಕೆ ಐವರು ಬಲಿ – ಲಾರಿ ಹೊಡೆತಕ್ಕೆ ಕಾರು ಚಿಂದಿ

    ಬೀದರ್‍ನಲ್ಲಿ ಭೀಕರ ಅಪಘಾತಕ್ಕೆ ಐವರು ಬಲಿ – ಲಾರಿ ಹೊಡೆತಕ್ಕೆ ಕಾರು ಚಿಂದಿ

    ಬೀದರ್: ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮುಂಬೈ ಮೂಲದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದಿದೆ.

    ಇಲ್ಲಿನ ರಾಷ್ಟ್ರೀಯ ಹೆದ್ದಾರಿ 9 ಸಸ್ತಾಪುರು ಬಂಗ್ಲಾ ಬಳಿ ಮಧ್ಯರಾತ್ರಿ ಸುಮಾರು 2 ಗಂಟೆ ವೇಳೆಯಲ್ಲಿ ಈ ಅಪಘಾತ ಸಂಭವಿಸಿದೆ. ಮಯೂರ ಚಾವ್ಲಾ, ಜಿನಲ್ ಚಾವ್ಲಾ, ಭಾರತಿ ಚಾವ್ಲಾ, ಖಯಾಬ್ ಚಾವ್ಲಾ ಮತ್ತು ಕಾರು ಚಾಲಕ ಸುನೀಲ್ ಮೃತ ದುರ್ದೈವಿಗಳು. ಮುಂಬೈನ ನಯಿಬ್‍ನಿಂದ ಹೈದ್ರಾಬಾದ್ ಗೆ ತರಳುತ್ತಿರುವಾಗ ಈ ದುರ್ಘಟನೆ ನಡದಿದೆ.

    8 ವರ್ಷದ ತ್ರಿಶಾ ಎಂಬ ಬಾಲಕಿಯ ಸ್ಥಿತಿ ಗಂಭೀರವಾಗಿದ್ದು, ಹೈದ್ರಾಬಾದ್‍ನ ಅಪೋಲೋ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಎಸ್.ಪಿ ಪ್ರಕಾಶ್ ನಿಕ್ಕಂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬಸವಕಲ್ಯಾಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • SSLC ಫಲಿತಾಂಶ: ಉಡುಪಿ ಫಸ್ಟ್, ದಕ್ಷಿಣ ಕನ್ನಡ ಸೆಕೆಂಡ್, ಬೀದರ್ ಲಾಸ್ಟ್

    SSLC ಫಲಿತಾಂಶ: ಉಡುಪಿ ಫಸ್ಟ್, ದಕ್ಷಿಣ ಕನ್ನಡ ಸೆಕೆಂಡ್, ಬೀದರ್ ಲಾಸ್ಟ್

    ಬೆಂಗಳೂರು: 2016-17ನೇ ಸಾಲಿನ ಎಸ್‍ಎಸ್‍ಎಲ್ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಒಟ್ಟು 5,81,134 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ.67.87 ಫಲಿತಾಂಶ ದಾಖಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ.7.24 ರಷ್ಟು ಫಲಿತಾಂಶ ಇಳಿಕೆಯಾಗಿದ್ದು ಕಳೆದ 6 ವರ್ಷದಲ್ಲೇ ಕಳಪೆ ಫಲಿತಾಂಶ ದಾಖಲಾಗಿದೆ.

    ಪಿಯುಸಿ ಫಲಿತಾಂಶದಂತೆ ಎಸ್‍ಎಸ್‍ಎಲ್‍ಸಿಯಯಲ್ಲೂ ಉಡುಪಿ ಮತ್ತು ದಕ್ಷಿಣ ಕನ್ನಡ ಅನುಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಸ್ಥಾನವನ್ನು ಪಡೆದಿದೆ. ಚಿಕ್ಕೋಡಿ ಮೂರನೇ ಸ್ಥಾನವನ್ನು ಪಡೆದರೆ ಬೀದರ್ ಕೊನೆಯ ಸ್ಥಾನವನ್ನು ಪಡೆದಿದೆ.

    ಎಂದಿನಂತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದು 2,96,426 ಮಂದಿ ವಿದ್ಯಾರ್ಥಿನಿಯರು ತೇರ್ಗಡೆಯಗಿದ್ದರೆ, 2,84,708 ವಿದ್ಯಾರ್ಥಿಗಳು ತೇಗಡೆಯಾಗಿದ್ದಾರೆ. 924 ಶಾಲೆಗಳಲ್ಲಿ ಶೇ.100 ಫಲಿತಾಂಶ ದಾಖಲಾಗಿದ್ದು, 60 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ದಾಖಲಾಗಿದೆ. ಶೂನ್ಯ ಫಲಿತಾಂಶ ದಾಖಲಾದ ಶಾಲೆಗಳಲ್ಲಿ 51 ಖಾಸಗಿ ಶಾಲೆಗಳು ಸೇರಿವೆ.

    ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಭಾಗದ 3,17,570( ಶೇ.74.12) ವಿದ್ಯಾರ್ಥಿಗಳು ಪಾಸಾಗಿದ್ದರೆ, ನಗರ ಪ್ರದೇಶದ 2,42,869( ಶೇ.72.18) ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

    36,138 ವಿದ್ಯಾರ್ಥಿಗಳು ಎ+ ಶ್ರೇಣಿ ಪಡೆದರೆ, 93,332 ವಿದ್ಯಾರ್ಥಿಗಳು ಎ ಶ್ರೇಣಿ ಪಡೆದಿದ್ದಾರೆ. ಮೂವರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳಿಸಿದ್ದಾರೆ.

    ಪೂರಕ ಪರೀಕ್ಷೆ-ಜೂನ್ 15 ರಿಂದ 22ರವರೆಗೆ ನಡೆಯಲಿದ್ದು,  ಮರು ಏಣಿಕೆ ಮತ್ತು ಉತ್ತರ ಪತ್ರಿಕೆ ಪ್ರತಿಗೆ ಅರ್ಜಿ ಸಲ್ಲಿಸಲು ಮೇ 22 ಕೊನೆ ದಿನಾಂಕವಾಗಿದೆ.

  • ರಸ್ತೆಗಾಗಿ 20 ವರ್ಷಗಳಿಂದ ಹೋರಾಟ ಮಾಡಿದ್ರೂ ಫಲ ಸಿಕ್ಕಿಲ್ಲ!

    ರಸ್ತೆಗಾಗಿ 20 ವರ್ಷಗಳಿಂದ ಹೋರಾಟ ಮಾಡಿದ್ರೂ ಫಲ ಸಿಕ್ಕಿಲ್ಲ!

    ಬೀದರ್: ರಾಜಕೀಯ ಪಕ್ಷಗಳ ಮುಸುಕಿನ ಗುದ್ದಾಟ. 20 ವರ್ಷಗಳಿಂದ ಒಂದು ಡಾಂಬರು  ರಸ್ತೆ ಬೇಕು ಎಂದು ಹಲವು ಬಾರಿ ಹೋರಾಟ ಮಾಡಿದ್ರೂ ನೋ ಯೂಸ್. ಮಳೆಗಾಲ ಬಂದ್ರೆ ಈ ಗ್ರಾಮ ಒಂದು ದ್ವೀಪವಾಗಿ ಸಾವಿನ ಸರಮಾಲೆಯನ್ನು ನೋಡಬೇಕಾಗುತ್ತದೆ. 4 ಕೀಲೋ ಮೀಟರ್ ರಸ್ತೆ ಮಾಡೋಕೆ ಯಾಕೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂಬುದೆ ತಿಳಿಯದ ಸಂಗತಿಯಾಗಿದೆ. ಹಲವು ವರ್ಷಗಳಿಂದ ಬೇಸತ್ತಿರುವ ಗ್ರಾಮಸ್ಥರು ಬೆಳಕು ಕಾರ್ಯಕ್ರಮದ ಮೂಲಕವಾದ್ರೂ ನಮ್ಮ ಗ್ರಾಮಕ್ಕೆ ಬೆಳಕು ಬರುತ್ತೆ ಎಂಬ ನಂಬಿಕೆಯಲ್ಲಿದ್ದಾರೆ.

    ಹೌದು. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ರಾಚಪ್ಪಗೌಡಗಾಂವ್ ಗ್ರಾಮದ ಜನ ಪ್ರತಿನಿತ್ಯ ಪಡುತ್ತಿರುವ ನರಕಯಾತನೆಯ ಸ್ಟೋರಿ ಇದು. ಈ ಗ್ರಾಮದಿಂದ ಮೊರಂಬಿ ಹೋಬಳಿಗೆ ಸಂಪರ್ಕ ನೀಡುವ 4 ಕೀಲೋ ಮೀಟರ್ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು ರಸ್ತೆ ನಿರ್ಮಾಣ ಮಾಡಿಕೊಡಿ ಸ್ವಾಮಿ ಎಂದು 20 ವರ್ಷಗಳಿಂದ ಪ್ರತಿಭಟನೆ, ಮನವಿ ಮಾಡಿದ್ರೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ.

    ಪ್ರತಿಭಟನೆ ಮತ್ತು ಮನವಿ ಮಾಡಿದಾಗ ಮಾಡಿಕೊಡುವುದಾಗಿ ಹೇಳಿದ ಅಧಿಕಾರಿಗಳು ಮತ್ತೆ ಮೇರೆತೇ ಬಿಡುತ್ತಾರೆ. ಇನ್ನು ರಾಜಕೀಯ ಮುಖಂಡರು ಈ ಗ್ರಾಮದ ಅಭಿವೃದ್ಧಿಯಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.

    ಈ ಬಗ್ಗೆ ಹಾಲಿ ಶಾಸಕರ ಗಮನಕ್ಕೆ ತಂದ್ರೂ ಯಾಕೆ ಅಭಿವೃದ್ಧಿ ಕಾರ್ಯಕ್ಕೆ ನಿರ್ಲಕ್ಷ್ಯ ಮಾಡುತ್ತಿದ್ದಾರೋ ತಿಳಿಯದ ಸಂಗತಿಯಾಗಿದೆ. ಅಭಿವೃದ್ಧಿ ಕಾರ್ಯಗಳಲ್ಲಿ ರಾಜಕೀಯ ಬಿಟ್ಟು ನಮ್ಮ ಗ್ರಾಮದ ಅಭಿವೃದ್ಧಿಗೆ ಶ್ರಮಿಸಿ ಎನ್ನುತ್ತಿದ್ದಾರೆ ಗ್ರಾಮಸ್ಥರು. ಇನ್ನು ಈ ಭಾಗದ ಸಂಸದ ಭಗವತ್ ಖೂಬಾ ಸಾಹೇಬ್ರು ಮಾತ್ರ ಮಾಡೋಣ ಎನ್ನುವ ಮೂಲಕ ಮೌನಕ್ಕೆ ಶರಣರಾಗಿದ್ದಾರೆ. ರಾಜಕೀಯ ನಾಯಕರ ಅಸಡ್ಡೆ ಮತ್ತು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮದ ಮೂಲಕವಾದ್ರೂ ನಮ್ಮ ಗ್ರಾಮಕ್ಕೆ ರಸ್ತೆ ಭಾಗ್ಯ ಸಿಗುತ್ತೆ ಎಂಬ ಭರವಸೆಯಲ್ಲಿ  ಮನವಿ ಮಾಡಿಕೊಂಡಿದ್ದಾರೆ.

    ರಸ್ತೆ ಸಮಸ್ಯೆಯಿಂದ ಈ ಕುಗ್ರಾಮಕ್ಕೆ ಹತ್ತು ಹಲವಾರು ಜ್ವಲಂತ ಸಮಸ್ಯೆಗಳು ಕಾಡುತ್ತಿವೆ. ಮಳೆಗಾಲ ಬಂದ್ರೆ ಇರುವ ಒಂದು ಸೇತುವೆ ನೀರು ತುಂಬಿ ಗ್ರಾಮ ದ್ವೀಪವಾಗಿ ಬಿಡುತ್ತೆ. ಹೀಗಾಗಿ ಯಾರು ಬೇರೆ ಕಡೆ ಹೋಗಲು ಸಾಧ್ಯವಾಗಲ್ಲ. ಮಹಿಳೆಯರು ಹೆರಿಗೆ ಅಂದ್ರೆ ಕನಸಿನಲ್ಲೂ ಭಯ ಬಿಳುತ್ತಾರೆ.

    ತುರ್ತು ಚಿಕಿತ್ಸೆ ಇದ್ರೆ ಅಂಬುಲೆನ್ಸ್ ಬರುವುದಿಲ್ಲ. ಯಾರಾದ್ರು ಆಸ್ಪತ್ರೆಗೆ ಅಂದ್ರೆ ಕಷ್ಟ, ವಿದ್ಯಾರ್ಥಿಗಳ ಶಿಕ್ಷಣ ಮೊಟಕುಗೊಳ್ಳುತ್ತಿದೆ. ಈ ಗ್ರಾಮಕ್ಕೆ ಬಸ್ ವ್ಯವಸ್ಥೆ ಕೂಡ ಇಲ್ಲ. ಹಲವು ದಶಕಗಳಿಂದ ಈ ಕುಗ್ರಾಮದ ಸ್ಥಿತಿ ಚಿಂತಾಜನಕವಾಗಿದ್ದು , ಗುತ್ತಿಗೆದಾರರಿಗೆ ಮಾತ್ರ ಈ ರಸ್ತೆ ಲಾಭದಾಯಕ ರಸ್ತೆಯಾಗಿದೆ. ರಸ್ತೆಗಾಗಿ ಟೆಂಡರ್ ಮೇಲೆ ಟೆಂಡರ್ ಮಾಡಿಕೊಂಡು ಅಧಿಕಾರಿಗಳು ರಸ್ತೆ ಮಾಡದೆ ಲಕ್ಷ-ಲಕ್ಷ ಗೋಲ್‍ಮಾಲ್ ಮಾಡಿದ ಉದಾಹರಣೆಗಳು ಇವೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಕ್ಷೇತ್ರದ ಹಾಲಿ ಶಾಸಕರು ಮತ್ತು ಸಚಿವರಾಗಿರುವ ಈಶ್ವರ್ ಖಂಡ್ರೆಗೆ ಪ್ರಶ್ನೆಗಳ ಸುರಿಮಳೆಯನ್ನೇ ಹಾಕುತ್ತಿದ್ದಾರೆ. ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡೋದನ್ನು ಬಿಟ್ಟು ದಯವಿಟ್ಟು ನಮ್ಮ ಗ್ರಾಮಕ್ಕೆ ಒಂದು ಡಾಂಬರು ರಸ್ತೆ ಮಾಡಿಕೊಡಿ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಒಟ್ಟಿನಲ್ಲಿ ಸ್ವಾತಂತ್ರ್ಯ ಬಂದು ಹಲವು ದಶಕಗಳಾದ್ರು ಇನ್ನೂ ಈ ಕುಗ್ರಾಮಕ್ಕೆ ಒಂದು ಸರಿಯಾದ ರಸ್ತೆ ಇಲ್ಲದೆ ಇರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಅಭಿವೃದ್ಧಿ ಕಾರ್ಯಗಳಲ್ಲಿ ರಾಜಕೀಯ ಮಿಶ್ರಣವಾದ್ರೆ ಗ್ರಾಮಗಳು ಯಾವ ರೀತಿ ಅಭಿವೃದ್ಧಿ ಕುಂಟಿತವಾಗುತ್ತವೆ ಎಂಬುದಕ್ಕೆ ಈ ಸ್ಟೋರಿ ನೈಜ ಉದಾಹರಣೆಯಾಗಿದೆ. ಇನ್ನಾದ್ರು ರಾಜಕೀಯ ಬಿಟ್ಟು ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ಕೆ ಸ್ಪಂದಿಸುತ್ತಾರೆ ಎಂಬ ನಂಬಿಕೆಯಲ್ಲಿದ್ದಾರೆ ಗ್ರಾಮದ ಜನ.

    https://www.youtube.com/watch?v=9nlGGvHWt4c

     

  • ಎಂಬಿಬಿಎಸ್ ವಿದ್ಯಾರ್ಥಿನಿ ಹಾಸ್ಟೆಲ್ ಮಹಡಿಯಿಂದ ಜಿಗಿದು ಆತ್ಮಹತ್ಯೆ

    ಎಂಬಿಬಿಎಸ್ ವಿದ್ಯಾರ್ಥಿನಿ ಹಾಸ್ಟೆಲ್ ಮಹಡಿಯಿಂದ ಜಿಗಿದು ಆತ್ಮಹತ್ಯೆ

    ಬೀದರ್: ಎಂಬಿಬಿಎಸ್ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿನಿ ಹಾಸ್ಟೆಲ್‍ನ 4ನೇ ಮಹಡಿ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಈ ಘಟನೆ ಬೀದರ್ ಬ್ರಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ನಡೆದಿದ್ದು, ಕೇರಳ ಮೂಲದ ಕೀರ್ತಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಆತ್ಮಹತ್ಯೆಗೆ ಮಾನಸಿಕ ಖಿನ್ನತೆ ಕಾರಣ ಎಂದು ಹೇಳಲಾಗುತ್ತಿದ್ದು ಪೊಲೀಸರ ತನಿಖೆಯಿಂದ ಸತ್ಯಾಸತ್ಯತೆ ತಿಳಿಯಬೇಕಿದೆ.

    ಸ್ಥಳಕ್ಕೆ ನ್ಯೂಟೌನ್ ಪೊಲೀಸರು ಭೇಟಿ ಪರಿಶೀಲನೆ ಮಾಡುತ್ತಿದ್ದು ಮಾಹಿತಿ ಕಲೆಹಾಕುತ್ತಿದ್ದಾರೆ.

  • ಚಲಿಸುತ್ತಿದ್ದ ಬಸ್ ಹತ್ತಲು ಹೋಗಿ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸಾವು

    ಚಲಿಸುತ್ತಿದ್ದ ಬಸ್ ಹತ್ತಲು ಹೋಗಿ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸಾವು

    ಬೀದರ್: ಚಲಿಸುತ್ತಿದ್ದ ಬಸ್ ಹತ್ತಲು ಹೋಗಿ ವ್ಯಕ್ತಿಯೊಬ್ಬರು ಸಾರಿಗೆ ಸಂಸ್ಥೆಯ ಬಸ್‍ಗೆ ಸಿಲುಕಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಬಸವಕಲ್ಯಾಣ ಪಟ್ಟಣದಲ್ಲಿ ನಡೆದಿದೆ.

    30 ವರ್ಷದ ಸುರೇಶ್ ಬಿರಾದಾರ ಮೃತ ದುರ್ದೈವಿ. ಸುರೇಶ್ ಅವರು ಮೂಲತಃ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನವರು ಎಂದು ತಿಳಿದುಬಂದಿದೆ. ಬಸವಕಲ್ಯಾಣ ಪಟ್ಟಣದಲ್ಲಿ ತಮ್ಮ ಸಂಬಂಧಿಯ ಮನೆಯಿಂದ ಹಿಂದಿರುಗುವಾಗ ಬಸ್‍ನ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಬಸ್ ಬಸವಕಲ್ಯಾಣದಿಂದ ರಾಜೇಶ್ವರ ನಗರಕ್ಕೆ ತೆರಳುತ್ತಿತ್ತು.

    ಸುರೇಶ್ ಅವರ ಮೃತ ದೇಹವನ್ನು ತಾಲೂಕು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಬಸ್ ಬಸವಕಲ್ಯಾಣ ಡಿಪೋಗೆ ಸೇರಿದ್ದಾಗಿದೆ. ಸ್ಥಳಕ್ಕೆ ಬಸವಕಲ್ಯಾಣ ಸಂಚಾರಿ ಠಾಣೆಯ ಪೊಲೀಸರು ಆಗಮಿಸಿದ್ದು, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

  • ಬೀದರ್: ಹಳಿ ತಪ್ಪಿದ ರೈಲು- ಇಬ್ಬರಿಗೆ ಗಂಭೀರ ಗಾಯ

    ಬೀದರ್: ಹಳಿ ತಪ್ಪಿದ ರೈಲು- ಇಬ್ಬರಿಗೆ ಗಂಭೀರ ಗಾಯ

    ಬೀದರ್: ಔರಂಗಾಬಾದ್ ನಿಂದ ಹೈದ್ರಾಬಾದ್‍ಗೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲಿನ ಎಂಜಿನ್ ಸೇರಿದಂತೆ ಮೂರು ಬೋಗಿಗಳು ಹಳಿ ತಪ್ಪಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕಳಗಾಪುರ ಬ್ರಿಡ್ಜ್ ಬಳಿ ನಡೆದಿದೆ.

    ತಡರಾತ್ರಿ 1:45ಕ್ಕೆ ಈ ಘಟನೆ ಸಂಭವಿಸಿದೆ. ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಕೆಲವರಿಗೆ ಸಣ್ಣ ಪಟ್ಟ ಗಾಯಗಳಾಗಿವೆ. ಬ್ರಿಡ್ಜ್ ಬಳಿ ಘಟನೆ ನಡೆದಿದ್ದು, ಭಾರೀ ಅನಾಹುತ ತಪ್ಪಿದೆ.

    ಘಟನೆ ನಡೆದ ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ರೈಲ್ವೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಘಟನೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

  • ಪತ್ನಿ ಕುಟುಂಬಸ್ಥರಿಂದ ವರದಕ್ಷಿಣೆಯ ಹಣಕ್ಕಾಗಿ ಬೇಡಿಕೆ: ಪತಿರಾಯ ಆತ್ಮಹತ್ಯೆ

    ಪತ್ನಿ ಕುಟುಂಬಸ್ಥರಿಂದ ವರದಕ್ಷಿಣೆಯ ಹಣಕ್ಕಾಗಿ ಬೇಡಿಕೆ: ಪತಿರಾಯ ಆತ್ಮಹತ್ಯೆ

    ಬೀದರ್: ಪತ್ನಿಯ ಸಂಬಂಧಿಕರು ವರದಕ್ಷಿಣೆಯಾಗಿ ನೀಡಿದ ಹಣವನ್ನು ಮರಳಿ ನೀಡುವಂತೆ ಜೀವ ಬೆದರಿಕೆ ಹಾಕಿದ್ದಕ್ಕೆ ಭಯಗೊಂಡ ಪತಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಔರಾದ್ ತಾಲೂಕಿನ ಬೆಡಕುಂದಾ ಗ್ರಾಮದಲ್ಲಿ ನಡೆದಿದೆ.

    30 ವರ್ಷ ವಯಸ್ಸಿನ ಅರವಿಂದ್ ಶಂಕರ್ ಆತ್ಮಹತ್ಯೆಗೆ ಶರಣಾದ ಪತಿರಾಯ. ಒಂದು ವರ್ಷದ ಹಿಂದೆ ಭಾಲ್ಕಿ ತಾಲೂಕಿನ ಜಯಶ್ರೀ ಎಂಬವರನ್ನು ಮದುವೆಯಾಗಿದ್ದರು. ಸಂಸಾರದ ಗಲಾಟೆಯಿಂದಾಗಿ ಜಯಶ್ರೀ ಅವರು ತವರು ಮನೆ ಸೇರಿದ್ದರು.

    ತವರು ಮನೆಗೆ ಸೇರಿದ ಬಳಿಕ ಜಯಶ್ರೀ ಮತ್ತು ಅವರ ಕುಟುಂಬಸ್ಥರು ಮದುವೆ ವೇಳೆ ನೀಡಿದ್ದ ವರದಕ್ಷಿಣೆ 5 ಲಕ್ಷ ರೂ.ಗಳನ್ನು ಮರಳಿ ನೀಡಬೇಕೆಂದು ಬೇಡಿಕೆ ಇಟ್ಟಿದ್ದರು. ಒಂದು ವೇಳೆ ಈ ಹಣವನ್ನು ನೀಡದೇ ಇದ್ದರೆ ಕೊಲ್ಲುವ ಬೆದರಿಕೆಯನ್ನೂ ಹಾಕಿದ್ದರು ಎನ್ನಲಾಗಿದೆ. ಹೀಗಾಗಿ ಅರವಿಂದ್ 4.5 ಲಕ್ಷ ರೂ. ಹಣವನ್ನು ಹಿಂದುರುಗಿಸಿದ್ದರು. ಆದರೆ ಪತ್ನಿ ಮತ್ತು ಕುಟುಂಬಸ್ಥರ ಕಿರುಕುಳಕ್ಕೆ ಅರವಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದ ಹೇಳಲಾಗುತ್ತಿದೆ.

    ಸ್ಥಳಕ್ಕೆ ಠಾಣಾಕುಶನೂರು ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.