Tag: bidar

  • ಬೀದರ್‌ನಲ್ಲಿ ಏಕಕಾಲಕ್ಕೆ 4 ಕಡೆ ಲೋಕಾಯುಕ್ತ ದಾಳಿ – ಭ್ರಷ್ಟ ಅಧಿಕಾರಿಗೆ ಶಾಕ್ ಶಾಕ್‌

    ಬೀದರ್‌ನಲ್ಲಿ ಏಕಕಾಲಕ್ಕೆ 4 ಕಡೆ ಲೋಕಾಯುಕ್ತ ದಾಳಿ – ಭ್ರಷ್ಟ ಅಧಿಕಾರಿಗೆ ಶಾಕ್ ಶಾಕ್‌

    ಬೀದರ್: ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನಲೆಯಲ್ಲಿ ಬೆಳ್ಳಂಬೆಳಗ್ಗೆ ಬೀದರ್‌ನಲ್ಲಿ‌ (Bidar) ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಭ್ರಷ್ಟ ಅಧಿಕಾರಿಗೆ ಶಾಕ್ ನೀಡಿದ್ದಾರೆ. ಔರಾದ್ ತಾಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ದೂಳಪ್ಪ ಎಂಬ ಅಧಿಕಾರಿಯ ನಿವಾಸ ಸೇರಿದಂತೆ ಏಕಕಾಲಕ್ಕೆ ಜಿಲ್ಲೆಯಾದ್ಯಂತ ಒಟ್ಟು 4 ಕಡೆ ದಾಳಿ ಮಾಡಲಾಗಿದೆ.

    ಬೀದರ್ ನಗರದ ಗುರುನಾನಕ್ ಕಾಲೋನಿಯ ನಿವಾಸ, ಭಾಲ್ಕಿಯ ಕಡ್ಯಾಳ ಗ್ರಾಮದ ನಿವಾಸ, ಔರಾದ್‌ನ ಎಡಿ ಆಫೀಸ್ ಮತ್ತು ಔರಾದ್‌ನ ಮುದೋಳ ಕಚೇರಿ ಮೇಲೆ ದಾಳಿ‌‌ (Lokayukta Raid) ಮಾಡಲಾಗಿದೆ‌. ಇದನ್ನೂ ಓದಿ: ಚಿತ್ರದುರ್ಗದಲ್ಲಿ ಭ್ರಷ್ಟ ಅಧಿಕಾರಿಗೆ ಬೆಳ್ಳಂಬೆಳಗ್ಗೆ ಶಾಕ್; ಕೃಷಿ ಇಲಾಖೆ ಎಡಿ ಮನೆ ಮೇಲೆ ಲೋಕಾಯುಕ್ತ ದಾಳಿ

    ಅಕ್ರಮ ಆಸ್ತಿಗಳಿಗೆ ದೂರು ಬಂದ ಹಿನ್ನೆಲೆಯಲ್ಲಿ ದಾಳಿ ಮಾಡಿ ಲೋಕಾಯುಕ್ತ ಅಧಿಕಾರಿಗಳು ನಿವಾಸದಲ್ಲಿ ದಾಖಲೆಗಳನ್ನ ತೀವ್ರ ಪರಿಶೀಲನೆ ಮಾಡುತ್ತಿದ್ದಾರೆ. ಲೋಕಾಯುಕ್ತ ಎಸ್‌ಪಿ ಸಿದ್ದರಾಜು ಮಾರ್ಗದರ್ಶನದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಹನುಮಂತ ರೆಡ್ಡಿ ನೇತೃತ್ವದಲ್ಲಿ 4 ಕಡೆ ಏಕಕಾಲಕ್ಕೆ ದಾಳಿ ಮಾಡಲಾಗಿದೆ. ಇದನ್ನೂ ಓದಿ: ಹಬ್ಬಕ್ಕೆ ಸಾಲು ಸಾಲು ರಜೆ – ಖಾಸಗಿ ಬಸ್ ಪ್ರಯಾಣ ದರ ಏರಿಕೆ, ನಿಮ್ಮೂರಿಗೆ ಎಷ್ಟು ನೋಡಿ!

  • ಬಿಜೆಪಿ ಮುಖಂಡರಿಂದ ಬೆಳೆಹಾನಿ ವೀಕ್ಷಣೆ – ರೈತರ ಸಂಕಷ್ಟಗಳನ್ನು ವಿವರಿಸಿದ ಪ್ರಭು ಚವ್ಹಾಣ್‌

    ಬಿಜೆಪಿ ಮುಖಂಡರಿಂದ ಬೆಳೆಹಾನಿ ವೀಕ್ಷಣೆ – ರೈತರ ಸಂಕಷ್ಟಗಳನ್ನು ವಿವರಿಸಿದ ಪ್ರಭು ಚವ್ಹಾಣ್‌

    ಬೀದರ್: ಜಿಲ್ಲೆಯ ಬಿಜೆಪಿ ಮುಖಂಡರು ಬೀದರ್‌ನಾದ್ಯಂತ ಸಂಚರಿಸಿ ಅತೀವೃಷ್ಟಿಯಿಂದ ಉಂಟಾಗಿರುವ ಬೆಳೆ ಹಾನಿಯನ್ನು ವೀಕ್ಷಿಸಿದರು. ಈ ವೇಳೆ ಶಾಸಕ ಪ್ರಭು ಚವ್ಹಾಣ್‌ (Prabhu Chauhan) ಬೆಳೆ ಹಾನಿಯ ಬಗ್ಗೆ ವಿವರಣೆ ನೀಡಿದರು.

    ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್ ನೇತೃತ್ವದಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಯಿತು. ಕೌಠಾ(ಬಿ) ಗ್ರಾಮದಲ್ಲಿ ಹಾನಿಯಾದ ಕೃಷಿಭೂಮಿಗಳಿಗೆ ಟ್ರಾಕ್ಟರ್ ಮೂಲಕ ತೆರಳಿ ಹಾನಿಯ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಬೆಳೆಹಾನಿಯ ಬಗ್ಗೆ ಶಾಸಕ ಪ್ರಭು ಚವ್ಹಾಣ್‌ ಅವರು, ಔರಾದ(ಬಿ) ಕ್ಷೇತ್ರದಲ್ಲೇ ಅತೀ ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿದೆ. ಪ್ರತಿಯೊಂದು ಗ್ರಾಮದಲ್ಲಿ ಸಾವಿರಾರು ಎಕರೆಯಷ್ಟು ಬೆಳೆ ಹಾನಿಯಾಗಿದೆ. ಇಲ್ಲಿನ ಬಹುತೇಕ ರೈತರು ಉಪಜೀವನಕ್ಕೆ ಕೃಷಿಯನ್ನು ಅವಲಂಬಿಸಿದ್ದಾರೆ. ಆದರೆ ಬೆಳೆದು ನಿಂತಿದ್ದ ಉದ್ದು, ಹೆಸರು, ಸೋಯಾಬೀನ್, ತೊಗರಿ, ಹತ್ತಿ, ಕಬ್ಬು ಸೇರಿದಂತೆ ಎಲ್ಲ ಬೆಳೆಗಳು ಮುಳುಗಡೆಯಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ತಿಳಿಸಿದರು.ಇದನ್ನೂ ಓದಿ: ಟ್ರಂಪ್‌ ಭಾಷಣಕ್ಕೆ ಅಡ್ಡಿ – ಇಬ್ಬರು ಇಸ್ರೇಲ್‌ ಸಂಸದರನ್ನು ಹೊರದಬ್ಬಿದ ಸಿಬ್ಬಂದಿ

    ನಮ್ಮೂರಿನ ಎಲ್ಲ ಕಡೆಗಳಲ್ಲಿ ಬೆಳೆ ನಷ್ಟವಾಗಿದೆ. ನದಿ ತೀರದಲ್ಲಿ ಅತೀ ಹೆಚ್ಚು ಹಾಳಾಗಿದ್ದು, ಎಲ್ಲ ಹೊಲಗಳು ಸಂಪೂರ್ಣ ಮುಳುಗಡೆಯಾಗಿವೆ. ಮಳೆಗಾಲದ ಆರಂಭದಲ್ಲಿ ಎಲ್ಲ ಬೆಳೆಗಳು ಚೆನ್ನಾಗಿದ್ದವು. ಹಾಗಾಗಿ ರೈತರು ಈ ಬಾರೀ ಹೆಚ್ಚಿನ ಲಾಭ ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದರು. ಆದರೆ ಅನಿರೀಕ್ಷಿತವಾಗಿ ಸುರಿದ ಧಾರಾಕಾರ ಮಳೆಗೆ ಎಲ್ಲ ಬೆಳೆಗಳು ಕೊಚ್ಚಿಕೊಂಡು ಹೋಗಿವೆ. ಬೆಳೆ ಕಳೆದುಕೊಂಡ ರೈತರಿಗೆ ಸರ್ಕಾರ ಬೇಗ ಪರಿಹಾರ ಕೊಡಲು ತಾವು ಸಹಕರಿಸಬೇಕು ಎಂದು ಮನವಿ ಮಾಡಿದರು.

  • ಆಟ ಆಡುವಾಗ ಬಾವಿಗೆ ಬಿದ್ದು ಬಾಲಕ ಸಾವು

    ಆಟ ಆಡುವಾಗ ಬಾವಿಗೆ ಬಿದ್ದು ಬಾಲಕ ಸಾವು

    ಬೀದರ್ : ಆಟ ಆಡುವಾಗ ಬಾವಿಗೆ ಬಿದ್ದು ಬಾಲಕ (Boy) ಸಾವನ್ನಪ್ಪಿದ ಘಟನೆ ಬೀದರ್ (Bidar) ಜಿಲ್ಲೆಯ ಬಸವಕಲ್ಯಾಣ (Basava Kalyana) ಪಟ್ಟಣದ ಈಶ್ವರ ಕಾಲೋನಿಯಲ್ಲಿ ನಡೆದಿದೆ

    ಮನೆಯ ಪಕ್ಕದಲ್ಲಿ ಆಟ ಆಡುವ ವೇಳೆ‌ ಆಕಸ್ಮಿಕವಾಗಿ ಬಾವಿಗೆ ಬಿದ್ದು 6 ವರ್ಷದ ಶೇಖ್ ನುಸ್ತಕಿಮ್ ಅಕ್ಬರಲಿ ಬಾವಿಗೆ ಬಿದ್ದು ಮೃತಪಟ್ಟಿದ್ದಾನೆ. ಇದನ್ನೂ ಓದಿ:  12 ಪಾಕ್‌ ಸೈನಿಕರನ್ನು ಹತ್ಯೆ – ಅಫ್ಘಾನ್‌ ಮೇಲೆ ಮತ್ತೆ ಏರ್‌ಸ್ಟ್ರೈಕ್‌

    ವಿಷಯ ತಿಳಿದು ಸ್ಥಳಕ್ಕೆ ದೌಡಾಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬಾಲಕನ ಶವ ಹೊರತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಬಾಲಕನ ಶವ ರವಾನೆ ಮಾಡಿದ್ದಾರೆ. ಬಸವಕಲ್ಯಾಣ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ಗಡಿಜಿಲ್ಲೆ ಬೀದರ್‌ನಲ್ಲಿ ಮಾಂಜ್ರಾ ಪ್ರವಾಹದ ಎಫೆಕ್ಟ್‌ – ಲಕ್ಷಾಂತರ ಮೌಲ್ಯದ ಬೆಳೆ ಸರ್ವನಾಶ

    ಗಡಿಜಿಲ್ಲೆ ಬೀದರ್‌ನಲ್ಲಿ ಮಾಂಜ್ರಾ ಪ್ರವಾಹದ ಎಫೆಕ್ಟ್‌ – ಲಕ್ಷಾಂತರ ಮೌಲ್ಯದ ಬೆಳೆ ಸರ್ವನಾಶ

    ಬೀದರ್: ಜಿಲ್ಲೆಯಲ್ಲಿ ಸಂಭವಿಸಿದ್ದ ಮಾಂಜ್ರಾ ಪ್ರವಾಹದಿಂದಾಗಿ ಲಕ್ಷಾಂತರ ಮೌಲ್ಯದ ಬೆಳೆ ಸರ್ವನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ.

    ಸಾವಿರಾರು ಎಕರೆಯಲ್ಲಿ ಪ್ರವಾಹದ ನೀರು ಬರೋಬ್ಬರಿ 10 ದಿನಗಳ ಕಾಲ ನಿಂತು ಬೆಳೆಗಳನ್ನು ಸಂಪೂರ್ಣವಾಗಿ ನಾಶ ಮಾಡಿದೆ. ಸೋಯಾ, ಕಬ್ಬು, ಹೆಸರು, ತೊಗರಿ ಸೇರಿದಂತೆ ಎಲ್ಲಾ ಬೆಳೆಗಳು ಕೊಳೆತು ಕಪ್ಪಾಗಿ ಹೋಗಿದೆ.ಇದನ್ನೂ ಓದಿ:ಬಿಹಾರ ವಿಧಾನಸಭೆ ಚುನಾವಣೆ; ಎನ್‌ಡಿಎ-ಇಂಡಿಯಾ ಒಕ್ಕೂಟದ ನಡುವೆ ಸೀಟು ಹಂಚಿಕೆ ಲೆಕ್ಕಾಚಾರ

    ಹುಲಸೂರು, ಭಾಲ್ಕಿ, ಔರಾದ್, ಬೀದರ್ ತಾಲೂಕು ಸೇರಿದಂತೆ ಜಿಲ್ಲೆಯಾದ್ಯಂತ ಲಕ್ಷ ಲಕ್ಷ ಎಕರೆ ಬೆಳೆಗಳು ಮಾಂಜ್ರಾ ಪ್ರವಾಹದ ಪಾಲಾಗಿದೆ. ಬೀದರ್ ತಾಲೂಕಿನ ಹಿಪ್ಪಳಗಾಂವ್ ಗ್ರಾಮದ ಕಲ್ಯಾಣರಾವ್ ಪಾಟೀಲ್, ರಾಮಶೆಟ್ಟಿ ಬಿರಾದರ್ಷ, ಶಿವರಾಜ್ ಬಿರಾದರ್, ಸಂಜುಕುಮಾರ್ ದನ್ಗರ್ ಸೇರಿದಂತೆ 800ಕ್ಕೂ ಅಧಿಕ ಎಕರೆಯಲ್ಲಿ ಬೆಳೆದಿದ್ದ ಬೆಳೆಗಳು ಸರ್ವನಾಶವಾಗಿದೆ.

    40 ವರ್ಷದಲ್ಲೇ ಈ ಬಾರಿ ಮಾಂಜ್ರಾ ಪ್ರವಾಹ ಬಂದಿದ್ದು, ನದಿ ದಡದಲ್ಲಿರುವ ಸಾವಿರಾರು ಎಕರೆ ಬೆಳೆಗಳು ಹಾಳಾಗಿದೆ. ಸಿದ್ದರಾಮಯ್ಯ ಮೇಲಿಂದ ಬಂದು ಮೇಲೆಯೇ ಹೋದರು. ಇಷ್ಟೊಂದು ಬೆಳೆ ಹಾನಿಯಾದರೂ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹಾಗೂ ಕ್ಷೇತ್ರದ ಶಾಸಕ ಹಾಗೂ ಸಚಿವ ರಹೀಂಖಾನ್ ಒಂದು ಬಾರಿಯೂ ಬಂದಿಲ್ಲ ಎಂದು ಜಿಲ್ಲೆಯ ರೈತರು ಹಿಡಿಶಾಪ ಹಾಕುತ್ತಿದ್ದಾರೆ.ಇದನ್ನೂ ಓದಿ: ರಾಯಚೂರಿನಲ್ಲಿ ನಿಲ್ಲದ ಮನೆಗಳ್ಳರ ಹಾವಳಿ – ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ಕಂಡು ನಿವಾಸಿಗಳು ಶಾಕ್‌

  • `ಶಕ್ತಿ’ ಚಂಡಮಾರುತ ಎಫೆಕ್ಟ್ – ಗಡಿಜಿಲ್ಲೆ ಬೀದರ್‌ನಲ್ಲಿ ವರುಣನ ಅಬ್ಬರ ಜೋರು

    `ಶಕ್ತಿ’ ಚಂಡಮಾರುತ ಎಫೆಕ್ಟ್ – ಗಡಿಜಿಲ್ಲೆ ಬೀದರ್‌ನಲ್ಲಿ ವರುಣನ ಅಬ್ಬರ ಜೋರು

    ಬೀದರ್: ಅರಬ್ಬಿ ಸಮುದ್ರದಲ್ಲಿ ಶಕ್ತಿ (Shakti) ಚಂಡಮಾರುತದ ಹಿನ್ನೆಲೆ ಗಡಿಜಿಲ್ಲೆ ಬೀದರ್‌ನಲ್ಲಿ (Bidar) ವರುಣಾರ್ಭಟ ಜೋರಾಗಿದೆ.

    ಸೋಮವಾರ (ಅ.6) ಬೆಳಗ್ಗೆಯಿಂದ ಬಿಟ್ಟು ಬಿಡದೇ ಧಾರಾಕಾರ ಮಳೆ ಸುರಿಯುತ್ತಿದ್ದು, ಗುಡುಗು, ಬಿರುಗಾಳಿ ಸಹಿತ ವರುಣ ಅಬ್ಬರಿಸುತ್ತಿದ್ದಾನೆ. ಬೀದರ್, ಹುಮ್ನಾಬಾದ್, ಬಸವ ಕಲ್ಯಾಣ, ಭಾಲ್ಕಿ, ಔರಾದ್ ಸೇರಿದಂತೆ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ.ಇದನ್ನೂ ಓದಿ: ಚಿತ್ರದುರ್ಗ | ರಸ್ತೆ ದಾಟುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್‌ಗೆ ಲಾರಿ ಡಿಕ್ಕಿ – ಗಂಭೀರ ಗಾಯ

    ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಹೋಗಲು ಪರದಾಡುವಂತಾಗಿದ್ದು, ಇತ್ತ ಕಚೇರಿ ಕೆಲಸಗಳಿಗೆ ಹೋಗಲು ಜನರು ಕೂಡ ಹೈರಾಣಾಗುತ್ತಿದ್ದಾರೆ. ಹವಾಮಾನ ಇಲಾಖೆಯ ಪ್ರಕಾರ ಇಂದು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

  • ಬೀದರ್-ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ಎಕ್ಸ್‌ಪ್ರೆಸ್‌ ರೈಲು

    ಬೀದರ್-ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ಎಕ್ಸ್‌ಪ್ರೆಸ್‌ ರೈಲು

    ಬೀದರ್/ಬೆಂಗಳೂರು: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆ ಬೆಂಗಳೂರು ಕಂಟೋನ್ಮೆಂಟ್ ಮತ್ತು ಬೀದರ್ ನಡುವೆ ವಿಶೇಷ ಎಕ್ಸ್‌ಪ್ರೆಸ್‌ ರೈಲು ಸೇವೆಯನ್ನು ಒದಗಿಸಲಿದೆ.

    ರೈಲಿನ ಮಾಹಿತಿ:
    ರೈಲು ಸಂಖ್ಯೆ 07063 ಬೀದರ್-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್‌ ರೈಲು ಇದೇ ಅಕ್ಟೋಬರ್ 4ರಂದು (ಶನಿವಾರ) ಬೀದರ್‌ನಿಂದ ಮಧ್ಯಾಹ್ನ 2:40ಕ್ಕೆ ಹೊರಟು, ಮರುದಿನ ಬೆಳಿಗ್ಗೆ 5:00ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ. ಇನ್ನೂ ರೈಲು ಸಂಖ್ಯೆ 07064 ಬೆಂಗಳೂರು ಕಂಟೋನ್ಮೆಂಟ್-ಬೀದರ್ ವಿಶೇಷ ಎಕ್ಸ್‌ಪ್ರೆಸ್‌ ರೈಲು ಇದೇ ಅಕ್ಟೋಬರ್ 5ರಿಂದ (ಭಾನುವಾರ) ರಾತ್ರಿ 10:30ಕ್ಕೆ ಬೆಂಗಳೂರು ಕಂಟೋನ್ಮೆಂಟ್‌ನಿಂದ ಹೊರಟು, ಮರುದಿನ ಮಧ್ಯಾಹ್ನ 2:40ಕ್ಕೆ ಬೀದರ್ ತಲುಪಲಿದೆ.ಇದನ್ನೂ ಓದಿ: ಪೊಲೀಸ್ ನೇಮಕಾತಿಗಳಿಗೆ ಪ್ರತ್ಯೇಕ ಶಾಶ್ವತ ವಯೋಮಿತಿ ಸಡಿಲಿಕೆ ಮಾಡ್ತೇವೆ – ಪರಮೇಶ್ವರ್

    ಈ ರೈಲು ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಯಾದಗಿರಿ, ವಾಡಿ, ಶಹಾಬಾದ್, ಕಲಬುರಗಿ, ಕಮಲಾಪುರ ಮತ್ತು ಹುಮನಾಬಾದ್ ನಿಲ್ದಾಣಗಳಲ್ಲಿ ನಿಲ್ಲಲಿದೆ.

    ಈ ವಿಶೇಷ ರೈಲು 24 ಬೋಗಿಗಳ ಸಂಯೋಜನೆಯೊಂದಿಗೆ ಓಡಲಿದೆ. ಇದರಲ್ಲಿ 1 ಎಸಿ 2 ಟಯರ್, 2 ಎಸಿ ತ್ರಿ ಟಯರ್, 17 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು, 2 ಸಾಮಾನ್ಯ ಬೋಗಿಗಳು ಹಾಗೂ 2 ಲಗೇಜ್ ಕಮ್ ದಿವ್ಯಾಂಗ ಸ್ನೇಹಿ ಬೋಗಿಗಳು ಇರಲಿವೆ.ಇದನ್ನೂ ಓದಿ: ಪೀಕ್‌ ಅವರ್‌ನಲ್ಲಿ ಬೆಂಗಳೂರಿನಲ್ಲಿ ಒಬ್ಬರೇ ಕಾರ್‌ನಲ್ಲಿ ಸಂಚರಿಸಿದ್ರೆ ಟ್ಯಾಕ್ಸ್‌?

  • ರೈತರ ವಿಚಾರದಲ್ಲಿ ತಾತ್ಸಾರ ಬೇಡ, ಸಿಎಂ ಬೆಂಗಳೂರಿಗೆ ಸೀಮಿತರಾಗಿದ್ದಾರೆ – ಬಿವೈವಿ ಕಿಡಿ

    ರೈತರ ವಿಚಾರದಲ್ಲಿ ತಾತ್ಸಾರ ಬೇಡ, ಸಿಎಂ ಬೆಂಗಳೂರಿಗೆ ಸೀಮಿತರಾಗಿದ್ದಾರೆ – ಬಿವೈವಿ ಕಿಡಿ

    ಬೀದರ್: ರೈತರ ವಿಚಾರದಲ್ಲಿ ತಾತ್ಸಾರ ಬೇಡ, ಸಿಎಂ ಸಿದ್ದರಾಮಯ್ಯ (CM Siddaramaiah) ಬೆಂಗಳೂರಿಗೆ (Bengaluru) ಮಾತ್ರ ಸೀಮಿತರಾಗಿದ್ದಾರೆ ಎಂದು ಬಿಜೆಪಿ ರಾಜಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಕಿಡಿಕಾರಿದ್ದಾರೆ.

    ಬೀದರ್ (Bidar) ಸೇರಿದಂತೆ ಕಲ್ಯಾಣ ಕರ್ನಾಟಕದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾದ ಹಿನ್ನೆಲೆ ಬಿವೈ ವಿಜಯೇಂದ್ರ ಸೇರಿದಂತೆ ಬಿಜೆಪಿ ತಂಡ ನೆರೆ ವೀಕ್ಷಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಸಿಎಂಗೆ ಕಲ್ಯಾಣ ಕರ್ನಾಟಕದ ಬಗ್ಗೆ ಕಾಳಜಿ ಇಲ್ಲ, ಈ ಭಾಗದಲ್ಲಿ ರೈತರ ಬೆಳೆಗಳು ಸಂಪೂರ್ಣವಾಗಿ ಸರ್ವನಾಶವಾಗಿದೆ. ಕಳೆದ ಒಂದು ತಿಂಗಳಿಂದ ಮಳೆಯಾಗಿ ಎಲ್ಲಾ ಬೆಳೆಗಳು ನಾಶವಾಗಿದೆ. ರೈತರ ವಿಚಾರದಲ್ಲಿ ಸಿಎಂ ತಾತ್ಸಾರ ಬೇಡ, ಸಿಎಂ ಸಿದ್ದರಾಮಯ್ಯ ಬೆಂಗಳೂರಿಗೆ ಸೀಮಿತರಾಗಿದ್ದಾರೆ. ಇಂತಹ ಸಮಯದಲ್ಲಿ ಸಿಎಂ ಹಾಗೂ ಸಚಿವರ ಹುಡುಗಾಟ ಬೇಡ ಎಂದು ವಾಗ್ದಾಳಿ ನಡೆಸಿದ್ದಾರೆ.ಇದನ್ನೂ ಓದಿ: ಸರ್ಕಾರದಿಂದ ಉತ್ತರ ಕರ್ನಾಟಕಕ್ಕೆ 3,000 ಕೋಟಿ ಪ್ರವಾಹ ಪರಿಹಾರ ನೀಡಬೇಕು – ಅಶೋಕ್ ಆಗ್ರಹ

    ರಾಜ್ಯ ಸರ್ಕಾರ ತಮ್ಮ ಜವಾಬ್ದಾರಿ ನಿರ್ವಹಿಸುತ್ತಿಲ್ಲ. ಬಿಎಸ್‌ವೈ ಮನೆ ಕಳೆದುಕೊಂಡವರಿಗೆ ಕೇಂದ್ರದ ಕಡೆ ನೋಡದೆ ಪರಿಹಾರ ಕೊಟ್ಟಿದ್ದರು. ಇನ್ನು ತಡಮಾಡದೇ ನೀವು, ನಿಮ್ಮ ಸಚಿವರು ಇಲ್ಲಿಗೆ ಧಾವಿಸಿ ಎಂದು ಆಕ್ರೋಶ ಹೊರಹಾಕಿದ್ದಾರೆ.

  • ಗಡಿ ಜಿಲ್ಲೆ ಬೀದರ್‌ನಲ್ಲಿ ಧಾರಾಕಾರ ಮಳೆಗೆ ಭಾರೀ ಅವಾಂತರ – ರಸ್ತೆ ಸಂಚಾರ ಬಂದ್‌

    ಗಡಿ ಜಿಲ್ಲೆ ಬೀದರ್‌ನಲ್ಲಿ ಧಾರಾಕಾರ ಮಳೆಗೆ ಭಾರೀ ಅವಾಂತರ – ರಸ್ತೆ ಸಂಚಾರ ಬಂದ್‌

    ಬೀದರ್‌: ಗಡಿ ಜಿಲ್ಲೆ ಬೀದರ್‌ನಲ್ಲಿ ಬೆಳಗ್ಗೆಯಿಂದ ಬಿಟ್ಟೂ ಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಗೆ ಹುಲಸುರು, ಬೀದರ್ ತಾಲೂಕು, ಭಾಲ್ಕಿಯಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಧಾರಾಕಾರ ಮಳೆಗೆ ಹುಲಸೂರು ತಾಲೂಕಿನ ಇಂಚುರು ಸೇತುವೆ ಮೇಲೆ ಅಪಾರ ಪ್ರಮಾಣದ ನೀರು ಹರಿದು ರಸ್ತೆ ಸಂಚಾರ ಬಂದಾಗಿದೆ.

    ಹುಲಸೂರು ಇಂದ ಭಾಲ್ಕಿ ರಸ್ತೆ ಸಂಚಾರ ಬಂದಾಗಿ ವಾಹನ ಸವಾರರು ಪರದಾಡುತ್ತಿದ್ದು ಬೀದರ್ ತಾಲೂಕಿನ ಚಿಲ್ಲರ್ಗಿ ಸೇತುವೆ ಮೇಲೆ ನೀರು ಹರಿದು ರಸ್ತೆ ಸಂಚಾರ ಬಂದಾಗಿದೆ. ಸೇತುವೆ ಮೇಲೆ ನೀರು ಹರಿದು ಪರಿಣಾಮ ರಸ್ತೆ ಸಂಚಾರ ಬಂದಾಗಿದ್ದು, ಚಿಲ್ಲರ್ಗಿ ಟು ಚಿಮ್ಮಕೋಡ್, ಗಾದಗಿ ರಸ್ತೆ ಸಂಚಾರ ಬಂದಾಗಿದೆ. ರಸ್ತೆ ಸಂಚಾರ ಬಂದಾಗಿ ವಾಹನ ಸವಾರರು ಪರದಾಡುತ್ತಿದ್ದರೆ, ಕೆಲವರು ನೀರು ತುಂಬಿದ ರಸ್ತೆ ಮೇಲೆಯ ನಡೆದುಕೊಂಡು ಸೇತುವೆ ದಾಟುತ್ತಿದ್ದಾರೆ.

    ಇನ್ನೂ ಕಮಲನಗರದ ಗ್ರಾಮವೊಂದರಲ್ಲಿ ರಸ್ತೆ ಮೇಲೆ ರಭಸವಾಗಿ ಹರಿಯುತ್ತಿರುವ ನೀರಿನಲ್ಲಿ ದಾಟಲು ಎಮ್ಮೆಗಳು ಪರದಾಡಿವೆ. ಮಾಂಜ್ರಾನದಿಗೆ ಲಕ್ಷ ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಹಿನ್ನೆಲೆ ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಮಾಂಜ್ರಾನದಿ ದಡದಲ್ಲಿರುವ ಲಕ್ಷಾಂತರ ಎಕರೆ ಜಮೀನುಗಳಲ್ಲಿ ಬೆಳೆದಿದ್ದ ಬೆಳಗಳು ಸಂಪೂರ್ಣವಾಗಿ ಜಲಾವೃತವಾಗಿವೆ. ಧಾರಾಕಾರ ಮಳೆ ಹಾಗೂ ಮಾಂಜ್ರಾನದಿ ಎಫೆಕ್ಟ್ ಜಿಲ್ಲೆಯ ಜನ್ರ ಜೀವನ ಮೂರಾಬಟ್ಟೆಯಾಗಿದ್ದು ಇಂದು ಕೂಡಾ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

  • ಮಾತು ಬಾರದ ಮಹಿಳೆ ಬಾಯಿಗೆ ಬಟ್ಟೆ ತುರುಕಿ ವಿಕೃತಿ – ಆರೋಪಿ ಅರೆಸ್ಟ್

    ಮಾತು ಬಾರದ ಮಹಿಳೆ ಬಾಯಿಗೆ ಬಟ್ಟೆ ತುರುಕಿ ವಿಕೃತಿ – ಆರೋಪಿ ಅರೆಸ್ಟ್

    ಬೀದರ್: ಮಾತು ಬಾರದ ಮಹಿಳೆ ಬಾಯಿಗೆ ಬಟ್ಟೆ ತುರುಕಿ ವ್ಯಕ್ತಿಯೊಬ್ಬ ಅನುಚಿತವಾಗಿ ವರ್ತಿಸಿರುವ ಘಟನೆ ಜಿಲ್ಲೆಯ ಹುಮ್ನಾಬಾದ ತಾಲೂಕಿನ ಹಳ್ಳಿಖೇಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

    ಆರೋಪಿಯನ್ನು ಅಬು ಪಾಷಾ ಎಂದು ಗುರುತಿಸಲಾಗಿದೆ. ಘಟನೆ ನಡೆದ ದಿನ ಸಂತ್ರಸ್ತೆಯ ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದಾಗ ವಿಕೃತಿ ಮೆರೆದಿದ್ದಾನೆ.ಇದನ್ನೂ ಓದಿ: ಚಿನ್ನಯ್ಯನ ಜೊತೆ ಮಾತನಾಡಿದ್ದ ಪಾರ್ಟ್-2 ವಿಡಿಯೋ ರಿಲೀಸ್ – ಆರೋಪದಿಂದ ಪಾರಾಗಲು ಬುರುಡೆ ಗ್ಯಾಂಗ್‌ ಪ್ಲ್ಯಾನ್‌?

    ಸಂತ್ರಸ್ತೆಯ ತಾಯಿ ಮನೆಗೆ ಮರಳುತ್ತಿದ್ದಂತೆ ಆಕೆಯನ್ನು ತಳ್ಳಿ ಆರೋಪಿ ಓಡಿಹೋಗಿದ್ದಾನೆ. ಕೂಡಲೇ ತಾಯಿ ಮಗಳ ಬಳಿ ಹೋಗಿ ಕೇಳಿದಾಗ ಸನ್ನೆ ಮಾಡಿ ನಡೆದ ವಿಷಯವನ್ನು ತಿಳಿಸಿದ್ದಾಳೆ. ಮಹಿಳೆ ಬಾಯಿಗೆ ಬಟ್ಟೆ ತುರುಕಿ, ಆಕೆಯ ಬಟ್ಟೆ ಹರಿದು ಮಾನಭಂಗ ಮಾಡಲು ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.

    ಈ ಕುರಿತು ಸಂತ್ರಸ್ತೆಯ ತಾಯಿ ಹಳ್ಳಿಖೇಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, 329(4), 79 BNS, ಹಾಗೂ ಕಲಂ 3(1)w, 3(2) SC/ST ಕಾಯ್ದೆಯಡಿ ಕೇಸ್ ದಾಖಲಾಗಿದೆ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.ಇದನ್ನೂ ಓದಿ: ನಾಳೆ ಮಹಾಲಯ ಅಮಾವಾಸ್ಯೆ ಸೂರ್ಯಗ್ರಹಣ; ಯಾವೆಲ್ಲ ರಾಶಿಗಳಿಗೆ ಶುಭ-ಅಶುಭ?

  • ಕಳ್ಳತನ ಮಾಡೋರಿಗೆ ಅದ್ರ ಬಗ್ಗೆ ಗೊತ್ತಿರುತ್ತೆ, ರಾಹುಲ್ ಗಾಂಧಿ ತಪಾಸಣೆ ಮಾಡಿದ್ರೆ ಎಲ್ಲ ತಿಳಿಯುತ್ತೆ – ಶೋಭಾ ಕರಂದ್ಲಾಜೆ

    ಕಳ್ಳತನ ಮಾಡೋರಿಗೆ ಅದ್ರ ಬಗ್ಗೆ ಗೊತ್ತಿರುತ್ತೆ, ರಾಹುಲ್ ಗಾಂಧಿ ತಪಾಸಣೆ ಮಾಡಿದ್ರೆ ಎಲ್ಲ ತಿಳಿಯುತ್ತೆ – ಶೋಭಾ ಕರಂದ್ಲಾಜೆ

    ಬೀದರ್: ಕಳ್ಳತನ ಮಾಡುವವರಿಗೆ ಅದರ ಬಗ್ಗೆ ಗೊತ್ತಿರುತ್ತದೆ. ಅದೇ ರೀತಿ ರಾಹುಲ್ ಗಾಂಧಿ (Rahul Gandhi) ಅವರನ್ನು ತಪಾಸಣೆ ಮಾಡಿದ್ರೆ ಮತಗಳ್ಳತನದ ಬಗ್ಗೆ ಎಲ್ಲ ತಿಳಿಯುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ವಾಗ್ದಾಳಿ ನಡೆಸಿದರು.

    ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮತದಾರರ ಹೆಸರು ಡಿಲೀಟ್, ರಾಹುಲ್ ಗಾಂಧಿ ಆರೋಪದ ಬಗ್ಗೆ ಮಾತನಾಡಿದ ಅವರು, ಲೋಕಸಭಾ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿಗೆ ಸಾಮಾನ್ಯಜ್ಞಾನ ಇಲ್ಲ. ಕಳ್ಳತನ ಮಾಡುವವರಿಗೆ ಕಳ್ಳತನದ ಬಗ್ಗೆ ಗೊತ್ತಿರುತ್ತದೆ. ಅದೇ ರೀತಿ ರಾಹುಲ್ ಗಾಂಧಿ ಅವರನ್ನು ತಪಾಸಣೆ ಮಾಡಿದ್ರೆ ಮತಗಳ್ಳತನದ (Vote Theft) ಬಗ್ಗೆ ಎಲ್ಲ ತಿಳಿಯುತ್ತದೆ ಎಂದು ಕಿಡಿಕಾರಿದರು.ಇದನ್ನೂ ಓದಿ: ಮಾದಪ್ಪನ ಬೆಟ್ಟದಲ್ಲಿ ಹುಂಡಿ ಎಣಿಕೆ – 29 ದಿನಗಳಲ್ಲಿ 1.70 ಕೋಟಿ ಸಂಗ್ರಹ

    ಮಾಲೂರು ಕಾಂಗ್ರೆಸ್ (Congress) ಶಾಸಕರನ್ನ ಕೋರ್ಟ್ ಅಸಿಂಧೂಗೊಳಿಸಿದ್ದು ಯಾಕೆ? ಇದಕ್ಕೆ ರಾಹುಲ್ ಗಾಂಧಿ ಉತ್ತರ ನೀಡಬೇಕು. ಮೋಸ ಮಾಡಿದವರು ಯಾರು? ಕಾಂಗ್ರೆಸ್ ಮೋಸ ಮಾಡಿ 135 ಸ್ಥಾನ ಗೆದ್ದವರು. ಆಳಂದದಲ್ಲಿ ಕಾಂಗ್ರೆಸ್ ಅಭ್ಯರ್ಥಿನೇ ಗೆದ್ದಿದ್ದು. ಸಿದ್ದರಾಮಯ್ಯರ ಕ್ಷೇತ್ರದಲ್ಲೂ ಮನೆ ನಂ. ಸೊನ್ನೆ ಅಂತಲೇ ತೋರಿಸುತ್ತದೆ. 20-25ರ ಮತದಾರರ ಪಟ್ಟಿ ನೋಡಿದ್ರೆ ಈಗಲೂ ಸೊನ್ನೆ ಅಂತಲೇ ಮನೆ ನಂ. ಇದೆ. ಮಹದೇವಪುರದಲ್ಲೂ ರಾಹುಲ್ ಗಾಂಧಿ ಆರೋಪ ಮಾಡಿದರು. ಬಾಡಿಗೆ ಮನೆಯಲ್ಲಿ ಇದ್ದವರು, ಮನೆ ನಂಬರ್ ಎ,ಬಿ,ಸಿ,ಡಿ ಅಂತ ಮಾಡಿರುತ್ತಾರೆ. ಮನೆ ನಂಬರ್ ಸರಿಯಾಗಿ ಫೀಡ್ ಆಗಿರಲ್ಲ, ಡಾಟಾ ಆಪರೇಟರ್ ಸರಿಯಾಗಿ ಫೀಡ್ ಮಾಡಿರಲ್ಲ. ಮನೆ ನಂಬರ್ ಎಬಿಸಿಡಿ ಹಾಕಿದ್ರೆ ತೊಗೊಳಲ್ಲ. ಆಗ ಸೊನ್ನೆ ಹಾಕ್ತಾರೆ ಎಂದರು.

    ರಾಜ್ಯ ಕಾಂಗ್ರೆಸ್ ಸದ್ಯ ಬರ್ಬಾದ್ ಆಗಿದೆ. ಯಾವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ, ಎಲ್ಲಾ ಕಂಪನಿಗಳು ಬೆಂಗಳೂರು ಬಿಟ್ಟು ಹೋಗುತ್ತಿವೆ, ರಸ್ತೆ ಗುಂಡಿಗಳನ್ನು ಮುಚ್ಚಲು ಕಾಂಗ್ರೆಸ್ ಬಳಿ ಹಣವಿಲ್ಲ ಎಂದು ಲೇವಡಿ ಮಾಡಿದರು.

    ಇನ್ನೂ ಜಾತಿಗಣತಿ ಮೂಲಕ ಸಿಎಂ ಹೊಡೆದಾಡುವ ನೀತಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, 2013ರಲ್ಲಿ ಲಿಂಗಾಯತರು ಮತ್ತು ವೀರಶೈವರನ್ನ ಒಡೆಯುವ ಕೆಲಸ ಸಿಎಂ ಸಿದ್ದರಾಮಯ್ಯ ಮಾಡಿದರು. ಈಗ ಮತ್ತೆ ಎಲ್ಲಾ ಜಾತಿ, ಉಪಜಾತಿಗಳನ್ನು ಒಡೆಯಲು ಹೊರಟಿದ್ದು, ಒಕ್ಕಲಿಗ, ಲಿಂಗಾಯತ, ಗಾಣಿಗ ಸೇರಿದಂತೆ ಎಲ್ಲವನ್ನು ಕ್ರಿಶ್ಚಿಯನ್ ಎಂದು ಬರೆಸುತ್ತಿದ್ದೀರಿ ಎಂದು ಆಕ್ರೋಶ ಹೊರಹಾಕಿದರು.ಇದನ್ನೂ ಓದಿ:‘ಹೂವಿನ ಬಾಣದಂತೆ..’ ವೈರಲ್ ಹುಡುಗಿ ನಿತ್ಯಶ್ರೀ ಬಗ್ಗೆ ಅರ್ಜುನ್ ಜನ್ಯಾ ಹೇಳಿದ್ದೇನು?