Tag: bidar

  • ಬೀದರ್‌ನಲ್ಲಿ ದ್ವಿಚಕ್ರ ವಾಹನಗಳಿಗೆ ಪೆಟ್ರೋಲ್ ಹಾಕಂಗಿಲ್ಲ

    ಬೀದರ್‌ನಲ್ಲಿ ದ್ವಿಚಕ್ರ ವಾಹನಗಳಿಗೆ ಪೆಟ್ರೋಲ್ ಹಾಕಂಗಿಲ್ಲ

    ಬೀದರ್: ಜಿಲ್ಲೆಯಾದ್ಯಂತ ಮುಂದಿನ ಆದೇಶದವರೆಗೆ ಖಾಸಗಿ ದ್ವಿಚಕ್ರ ವಾಹನಗಳಿಗೆ ಪೆಟ್ರೋಲ್ ಬಂಕ್ ಸೇವೆಯನ್ನು ಷರತ್ತುಗಳಿಗೊಳಪಟ್ಟು ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ.ಹೆಚ್.ಆರ್.ಮಹಾದೇವ್ ಆದೇಶ ಹೊರಡಿಸಿದ್ದಾರೆ.

    ಈ ನಿಯಮ ಸರ್ಕಾರಿ ವಾಹನಗಳಿಗೆ, ಸರ್ಕಾರಿ ನೌಕರರಿಗೆ, ವೃದ್ಧರಿಗೆ, ವೈದ್ಯಕೀಯ ಸಿಬ್ಬಂದಿಗೆ, ಎಲ್ಲ ಅಂಬುಲೆನ್ಸ್ ಗಳಿಗೆ, ಔಷಧಿ ವ್ಯಾಪಾರಿಗಳಿಗೆ, ಪತ್ರಕರ್ತರಿಗೆ, ಗ್ಯಾಸ್ ಸಿಲಿಂಡರ್ ತಲುಪಿಸುವ ವಾಹನಗಳಿಗೆ ಸೇರಿದಂತೆ ಕೇವಲ ಅವಶ್ಯಕ ಸೇವಾ ವ್ಯಾಪ್ತಿಗೊಳಪಡುವುದನ್ನು ಹೊರತುಪಡಿಸಿ ಎಲ್ಲ ದ್ವಿಚಕ್ರ ವಾಹನಗಳಿಗೂ ಪೆಟ್ರೋಲ್ ಹಾಕದಂತೆ ಸೂಚಿಸಲಾಗಿದೆ.

    ಅಗತ್ಯ ಸೇವೆಗಳ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವವರು ಪೆಟ್ರೋಲ್ ತುಂಬಿಸುವಾಗ ಕಡ್ಡಾಯವಾಗಿ ಅವರ ಗುರುತಿನ ಚೀಟಿಯನ್ನು ತೋರಿಸಬೇಕು. ಪೆಟ್ರೋಲ್ ಬಂಕ್ ಸಿಬ್ಬಂದಿ ಸಹ ಐಡಿ ಕಾರ್ಡ್ ಪರಿಶೀಲಿಸಿ ಇಂಧನ ತುಂಬಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

    ಕೆಲ ಬೈಕ್ ಸವಾರರು ಅನಗತ್ಯವಾಗಿ ರಸ್ತೆಯಲ್ಲಿ ಸಂಚರಿಸುತ್ತಿದ್ದು, ಇದರಿಂದಾಗಿ ಕಾನೂನು ಪಾಲನೆಯಲ್ಲಿ ಅಡೆತಡೆಯುಂಟಾಗುತ್ತಿದೆ. ಬೇಕಾಬಿಟ್ಟಿಯಾಗಿ ಜನ ಓಡಾಡುತ್ತಿದ್ದಾರೆ. ಹೀಗಾಗಿ ಮುಂದಿನ ಆದೇಶದವರೆಗೆ ಖಾಸಗಿ ದ್ವಿಚಕ್ರ ವಾಹನಗಳಿಗೆ ಜಿಲ್ಲೆಯಾದ್ಯಂತ ಪೆಟ್ರೋಲ್ ಬಂಕ್‍ಗಳ ಸೇವೆಯನ್ನು ನಿರ್ಬಂಧಿಸುವುದು ಅವಶ್ಯಕವಾಗಿದೆ. ಅದರಂತೆ ಸಿರ್‍ಪಿಸಿ ಕಾಯ್ದೆ 1973ರ ಕಲಂ 133 ರನ್ವಯ ಅಧಿಕಾರ ಚಲಾಯಿಸಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ.

  • ಮಾಸ್ಕ್, ಸ್ಯಾನಿಟೈಜರ್ ಅಧಿಕ ಬೆಲೆಗೆ ಮಾರಾಟ ಮಾಡಿದರೆ ಕ್ರಮ: ಡಿಸಿ ಎಚ್ಚರಿಕೆ

    ಮಾಸ್ಕ್, ಸ್ಯಾನಿಟೈಜರ್ ಅಧಿಕ ಬೆಲೆಗೆ ಮಾರಾಟ ಮಾಡಿದರೆ ಕ್ರಮ: ಡಿಸಿ ಎಚ್ಚರಿಕೆ

    ಬೀದರ್: ಮಾಸ್ಕ್ ಮತ್ತು ಸ್ಯಾನಿಟೈಜರ್ ಗಳ ಕೃತಕ ಅಭಾವ ಸೃಷ್ಟಿಸುವಂತಿಲ್ಲ ಮತ್ತು ಅಧಿಕ ಬೆಲೆಗೆ ಮಾರಾಟ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿಗಳಾದ ಡಾ. ಹೆಚ್.ಆರ್ ಮಹಾದೇವ್ ಅವರು ಇಂದು ಬೀದರ ಜಿಲ್ಲೆಯ ಎಲ್ಲಾ ಔಷದ ವ್ಯಾಪಾರಿಗಳಿಗೆ ಮತ್ತು ಮಾರಾಟಗಾರರಿಗೆ ಎಚ್ಚರಿಕೆ ನೀಡಿದ್ದಾರೆ.

    ಭಾರತ ಸರ್ಕಾರವು ಹೊರಡಿಸಿದ ಅಧಿಸೂಚನೆ-2020ರಲ್ಲಿ ಒಂದು 2 ಲೇಯರ್ ಮಾಸ್ಕಗೆ 8 ರೂಪಾಯಿ ಮತ್ತು ಒಂದು 3 ಲೇಯರ್ ಮಾಸ್ಕಗೆ 10 ರೂಪಾಯಿಗಿಂತ ಅಧಿಕ ಬೆಲೆಗೆ ಮಾರಾಟ ಮಾಡುವಂತಿಲ್ಲ. ಹಾಗೆಯೇ ಪ್ರತಿ 200 ಎಂಎಲ್ ಬಾಟಲ್ ಸ್ಯಾನಿಟೈಜರ್ ನ್ನು 100 ರೂಪಾಯಿಗಿಂತ ಅಧಿಕ ಬೆಲೆಗೆ ಮಾರಾಟ ಮಾಡುವಂತಿಲ್ಲವೆಂದು ಆದೇಶಿಸಲಾಗಿದೆ.

    ಹೀಗಾಗಿ ಕೇಂದ್ರ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಮೇಲ್ಕಂಡ ವಸ್ತುಗಳನ್ನು ಅಧಿಕ ಬೆಲೆಗೆ ಮಾರಾಟ ಮಾಡಿದರೆ ಅಗತ್ಯ ವಸ್ತುಗಳ ಕಾಯ್ದೆ-1955, ಅಗತ್ಯ ವಸ್ತುಗಳ ಕಾಯ್ದೆ ತಿದ್ದುಪಡಿ ಆದೇಶ-2020 ಹಾಗೂ ಪೊಟ್ಟಣ ಸಾಮಾಗ್ರಿಗಳ ಕಾಯ್ದೆಯಡಿ ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿಗಳು ಎಚ್ಚರಿಸಿದ್ದಾರೆ.

  • ಊರೆಲ್ಲ ಓಡಾಡಿದ ಕೊರೊನಾ ಶಂಕಿತನ ವಿರುದ್ಧ ಎಫ್‍ಐಆರ್

    ಊರೆಲ್ಲ ಓಡಾಡಿದ ಕೊರೊನಾ ಶಂಕಿತನ ವಿರುದ್ಧ ಎಫ್‍ಐಆರ್

    ಬೀದರ್: ಮನೆಯಲ್ಲಿರುವಂತೆ ಸೂಚಿಸಿದರೂ ಕೊರೊನಾ ಶಂಕಿತ ವ್ಯಕ್ತಿಯೊಬ್ಬ ಗ್ರಾಮದಲ್ಲಿ ತಿರುಗಾಡಿದ್ದಾನೆ. ಕೊರೊನಾ ತಡೆಗೆ ಮುಂಜಾಗೃತಾ ಕ್ರಮ ಪಾಲಿಸದ ಹಿನ್ನೆಲೆಯಲ್ಲಿ ಗೃಹ ಬಂಧನದಲ್ಲಿರುವ ವ್ಯಕ್ತಿ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ.

    ಚಿಟಗುಪ್ಪಾ ತಾಲೂಕಿನ ನಿರ್ಣಾ ಗ್ರಾಮದ ವ್ಯಕ್ತಿ ದುಬೈನಿಂದ ಆಗಮಿಸಿದ್ದರು. ಈ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಮುಂಜಾಗೃತಾ ಕ್ರಮಗಳನ್ನು ಪಾಲಿಸದೇ ಬೇಕಾ ಬಿಟ್ಟಿಯಾಗಿ ಗ್ರಾಮದಲ್ಲಿ ತಿರುಗಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಮನ್ನಾಎಖ್ಖೆಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಐಪಿಸಿ ಸೆಕ್ಷನ್ 269(ಜೀವಕ್ಕೆ ಅಪಾಯಕಾರಿಯಾದ ರೋಗವನ್ನು ನಿರ್ಲಕ್ಷ್ಯದಿಂದ ಹರಡುವುದು), 270(ಸೋಂಕು ಹರಡುವವರ ವಿರುದ್ಧ ಕೇಸ್) ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ಮಾರ್ಚ್ 22 ರಂದು ದುಬೈನಿಂದ ಈ ವ್ಯಕ್ತಿ ಆಗಮಿಸಿದ್ದರು. ಬಳಿಕ ಪಿಎಸ್‍ಐ ಸುನಿತಾ ಹಾಗೂ ವೈದ್ಯಾಧಿಕಾರಿ ಚಂದ್ರಶೇಖರ್, ವ್ಯಕ್ತಿಯ ಮನೆಗೆ ಭೇಟಿ ನೀಡಿ, ಗೃಹ ಬಂಧನದಲ್ಲಿ ಇರಬೇಕು. ಗ್ರಾಮದಲ್ಲಿ ತಿರುಗಾಡಬಾರದು ಎಂದು ತಿಳಿ ಹೇಳಿದ್ದಾರೆ. ಅಲ್ಲದೆ ಕೊರೊನಾ ವೈರಸ್ ಹರಡದಂತೆ ಮುಂಜಾಗೃತಾ ಕ್ರಮಗಳ ಬಗ್ಗೆ ತಿಳಿ ಹೇಳಿದ್ದರು.

    ಆದರೂ ಈ ವ್ಯಕ್ತಿ ಮನೆಯಲ್ಲಿ ಇರದೇ ಗ್ರಾಮದ ಬಸವೇಶ್ವರ ವೃತ್ತ ಸೇರಿದಂತೆ ವಿವಿಧೆಡೆ ತಿರುಗಾಡಿದ್ದಾನೆ. ಈ ವ್ಯಕ್ತಿ ವರ್ತನೆ ನೋಡಿ ಆತಂಕದಲ್ಲಿ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸದ್ಯ ಪ್ರಕರಣ ದಾಖಲಾಗಿದೆ.

  • ಕೊರೊನಾ, ಹಕ್ಕಿಜ್ವರ ಆತಂಕದ ಬೆನ್ನಲ್ಲೇ ಈಗ ಚಿಕನ್ ಗುನ್ಯಾ ಭಯ

    ಕೊರೊನಾ, ಹಕ್ಕಿಜ್ವರ ಆತಂಕದ ಬೆನ್ನಲ್ಲೇ ಈಗ ಚಿಕನ್ ಗುನ್ಯಾ ಭಯ

    ಬೀದರ್: ಡೆಡ್ಲಿ ಕೊರೊನಾ ವೈರಸ್, ಹಕ್ಕಿಜ್ವರ, ಹಂದಿಜ್ವರದ ಬೆನ್ನಲ್ಲೇ ಈಗ ಗಡಿ ಜಿಲ್ಲೆ ಬೀದರ್‌ನ ಜನರಿಗೆ ಚಿಕನ್ ಗುನ್ಯಾ ಭಯ ಶುರುವಾಗಿದೆ.

    ಬುಧವಾರ ಹುಮ್ನಮಾದ್ ತಾಲೂಕಿನ ನಂದಗಾಂವ್ ಗ್ರಾಮದಲ್ಲಿ ಹಂದಿ ಜ್ವರದಿಂದ 200ಕ್ಕೂ ಹೆಚ್ಚು ಹಂದಿಗಳು ಸಾವನ್ನಪ್ಪಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿತ್ತು. ಆದರೆ ಇಂದು ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ನಾಗೂರು ಗ್ರಾಮದ 20ಕ್ಕೂ ಹೆಚ್ಚು ಜನರಿಗೆ ಏಕಾಏಕಿ ಜ್ವರ, ಕಾಲು ಹಾಗೂ ಕೈ ನೋವು ಕಾಣಿಸಿಕೊಳ್ಳುವ ಮೂಲಕ ಚಿಕನ್ ಗುನ್ಯಾ ಲಕ್ಷಣಗಳು ಪತ್ತೆಯಾಗಿವೆ.

    ಈಗಾಗಲೇ ವಿಷಯ ತಿಳಿದು ಸ್ಥಳಕ್ಕೆ ಬಂದ ತಾಲೂಕು ಆರೋಗ್ಯಾಧಿಕಾರಿಗಳು ಗ್ರಾಮದ 20ಕ್ಕೂ ಹೆಚ್ಚು ಜನರ ರಕ್ತ ಮಾದರಿಯನ್ನು ಬ್ರೀಮ್ಸ್ ಪ್ರಯೋಗಾಲಯಕ್ಕೆ ಕಳಿಸಿಕೊಟ್ಟಿದ್ದಾರೆ. ಇನ್ನು ಕೆಲವರಿಗೆ ಹತ್ತಿರದಲ್ಲಿರುವ ವಡಗಾಂವ್ ಪ್ರಾಥರ್ಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎರಡು ದಿನಗಳಿಂದ ಗ್ರಾಮದಲ್ಲಿ ಜ್ವರ ಹಾಗೂ ನೋವಿನಿಂದ ಜನರು ಭಯಗೊಂಡಿದ್ದರೂ ಪಂಚಾಯತ್ ಅಧಿಕಾರಿಗಳು ಸ್ಥಳಕ್ಕೆ ಬಂದಿರಲಿಲ್ಲ. ಇದರಿಂದ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ.

    ಈಗಾಗಲೇ ಪ್ರಯೋಗಾಲಯಕ್ಕೆ ರಕ್ತ ಮಾದರಿಯನ್ನು ಕಳಿಸಿಕೊಡಲಾಗಿದೆ. ವರದಿ ಬಂದ ಬಳಿಕ ಚಿಕನ್ ಗುನ್ಯಾ ಬಗ್ಗೆ ಖಚಿತ ಮಾಹಿತಿ ನೀಡುತ್ತೇವೆ ಎಂದು ಪಬ್ಲಿಕ್ ಟಿವಿಗೆ ತಾಲೂಕು ಆರೋಗ್ಯಾಧಿಕಾರಿ ಡಾ.ಶರಣಯ್ಯ ಸ್ವಾಮಿ ಮಾಹಿತಿ ನೀಡಿದ್ದಾರೆ. ಮಹಿಳೆಯರು, ಮಕ್ಕಳು, ವೃದ್ಧರಿಗೆ ಚಿಕನ್ ಗುನ್ಯಾ ಲಕ್ಷಣಗಳು ಏಕಾಏಕಿ ಕಾಣಿಸಿಕೊಳ್ಳುವ ಮೂಲಕ ಜಿಲ್ಲೆಯ ಜನರನ್ನು ಮೊತ್ತೊಮ್ಮೆ ಆತಂಕಕ್ಕೆ ದೂಡಿದೆ.

  • ‘ಕೊರೊನಾ ತುರ್ತು ಪರಿಸ್ಥಿತಿಯನ್ನೇ ಬಂಡವಾಳ ಮಾಡ್ಕೊಂಡ್ರೆ ಜೈಲಿಗೆ ಕಳಿಸ್ತೀವಿ’

    ‘ಕೊರೊನಾ ತುರ್ತು ಪರಿಸ್ಥಿತಿಯನ್ನೇ ಬಂಡವಾಳ ಮಾಡ್ಕೊಂಡ್ರೆ ಜೈಲಿಗೆ ಕಳಿಸ್ತೀವಿ’

    – ಎಚ್.ಆರ್ ಮಹಾದೇವ ಎಚ್ಚರಿಕೆ

    ಬೀದರ್: ಕೊರೊನಾ ತುರ್ತು ಪರಿಸ್ಥಿತಿಯನ್ನು ಉಪಯೋಗಿಸಿಕೊಂಡು ಲಾಭ ಮಾಡಲು ಹೊರಟರೆ ಮುಲಾಜಿಲ್ಲದೆ ಜೈಲಿಗೆ ಕಳುಹಿಸುವುದಾಗಿ ಜಿಲ್ಲಾಧಿಕಾರಿ ಫಾರ್ಮಸಿ ಅಂಗಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

    ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ ಎಚ್.ಆರ್ ಮಹಾದೇವ, ವಿಶ್ವದಾದ್ಯಂತ ಕೊರೊನಾ ವೃಸ್ ಭೀತಿ ಹೆಚ್ಚಾಗುತ್ತಿದೆ. ಇದರಿಂದ ತಪ್ಪಿಸಿಕೊಳ್ಳಬೇಕು ಅಂತ ಎಲ್ಲರೂ ಮಾಸ್ಕ್ ಮೊರೆ ಹೋಗುತ್ತಿದ್ದಾರೆ. ಹೀಗಾಗಿ ಕೆಲ ಫಾರ್ಮಸಿ ಅಂಗಡಿಗಳು ಮಾಸ್ಕ್ ಗೆ ದುಪ್ಪಟ್ಟು ಹಣ ಪಡೆಯುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಯಾರಾದರೂ ಈ ಪರಿಸ್ಥಿತಿಯನ್ನ ದುರ್ಬಳಕೆ ಮಾಡಿಕೊಂಡು ಡಬಲ್ ರೇಟಿಗೆ ಮಾಸ್ಕ್ ಮಾರಿದ್ದು ಕಂಡು ಬಂದ್ರೆ ಅವರನ್ನ ಜೈಲಿಗೆ ಕಳಿಸುವುದಾಗಿ ತಿಳಿಸಿದ್ದಾರೆ.

    ಕೊರೊನಾ ವೈರಸನ್ನೇ ಬಂಡವಾಳ ಮಾಡಿಕೊಂಡು ಹೆಚ್ಚಿನ ಬೆಲೆ ಮಾಸ್ಕ್ ಮಾರಾಟ ಮಾಡಿದರೆ ಕೂಡಲೇ ನನ್ನ ಗಮನಕ್ಕೆ ತನ್ನಿ. ನಾನು ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇನೆ. ಈಗಾಗಲೇ ನಮ್ಮ ಜಿಲ್ಲೆಗೆ ವಿದೇಶದಿಂದ 126 ಜನ ಬಂದಿದ್ದಾರೆ. ಅವರನ್ನು ಮನೆಯಿಂದಾನೆ ನಮ್ಮ ಸಿಬ್ಬಂದಿ ನಿಗಾ ವಹಿಸಿದ್ದಾರೆ. ಇನ್ನೂ 300 ಜನ ವಿದೇಶದಿಂದ ಬರಲಿದ್ದಾರೆ ಎಂಬ ಮಾಹಿತಿ ಇದೆ. ಹೀಗಾಗಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಸಿದ್ಧವಿದೆ. ಹಳ್ಳಿ-ಹಳ್ಳಿಗಳಲ್ಲಿ ಈಗಾಗಾಲೇ ಕೊರೊನಾ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲೆಯಲ್ಲಿ 6 ಬೆಂಗಾವಲು ಪಡೆಗಳು ಕಾರ್ಯನಿರ್ವಸುತ್ತಿವೆ ಎಂದು ತಿಳಿಸಿದರು.

  • ಕಲಬುರಗಿಗೆ ಹೋಗುವ ಬಸ್ಸುಗಳೆಲ್ಲ ಖಾಲಿ ಖಾಲಿ

    ಕಲಬುರಗಿಗೆ ಹೋಗುವ ಬಸ್ಸುಗಳೆಲ್ಲ ಖಾಲಿ ಖಾಲಿ

    ಬೀದರ್: ಮಹಾಮಾರಿ ಕೊರೊನಾ ವೈರಸ್ ದೇಶದ ಜನರನ್ನು ಬೆಚ್ಚಿ ಬೀಳಿಸುತ್ತಿದ್ದು, ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 80ರ ಗಡಿ ದಾಟಿದೆ. ಅಲ್ಲದೆ ದೇಶದಲ್ಲೇ ಮೊದಲ ಕೊರೊನಾ ಸೋಂಕಿತ ವ್ಯಕ್ತಿ ಕಲಬುರಗಿಯಲ್ಲಿ ಸಾವನ್ನಪ್ಪಿದ್ದಾನೆ. ಹೀಗಾಗಿ ಗಡಿ ಜಿಲ್ಲೆ ಬೀದರ್ ಪ್ರಯಾಣಿಕರು ಕಲಬುರಗಿ ಎಂದರೆ ಭಯ ಪಡುತ್ತಿದ್ದಾರೆ.

    ಪ್ರತಿದಿನ ಹತ್ತಾರು ಬಸ್ಸುಗಳಲ್ಲಿ ನೂರಾರು ಪ್ರಯಾಣಿಕರು ಬೀದರ್ ಹಾಗೂ ಕಲಬುರಗಿ ನಡುವೆ ಸಂಚರಿಸುತ್ತಿದ್ದರು. ಆದರೆ ಕೆಲವು ದಿನಗಳ ಹಿಂದೆ ಕಲಬುರಗಿಯಲ್ಲಿ 76ರ ವೃದ್ಧನನ್ನು ಕೊರೊನಾ ಮೊದಲ ಬಲಿಯಾಗಿ ತೆಗೆದುಕೊಂಡಿದ್ದರಿಂದ ಕಲಬುರಗಿ ಕಡೆ ಪ್ರಯಾಣ ಮಾಡಲು ಪ್ರಯಾಣಿಕರು ಹಿಂದೇಟು ಹಾಕುತ್ತಿದ್ದಾರೆ.

    ಕೇಂದ್ರ ಬಸ್ ನಿಲ್ದಾಣದಲ್ಲಿನ ಬಸ್ಸುಗಳಲ್ಲಿ ಪ್ರಯಾಣಿಕರಿಲ್ಲದೆ ಖಾಲಿ ಹೊಡೆಯುತ್ತಿದ್ದು, ಬಸ್ಸುಗಳು ಖಾಲಿಯಾಗಿ ಸಂಚಾರ ಮಾಡುತ್ತಿವೆ. ಶೇಕಡ 70ರಷ್ಟು ಪ್ರಯಾಣಿಕರ ಸಂಖ್ಯೆ ಕುಸಿದಿದ್ದು, ಪ್ರಯಾಣಿಕರಿಲ್ಲದೆ ಬಸ್ಸುಗಳು ಸರತಿಯಲ್ಲಿ ನಿಂತುಕೊಂಡಿವೆ. ಪ್ರಯಾಣಿಕರಿಲ್ಲದ್ದಕ್ಕೆ ಸಾರಿಗೆ ಸಿಬ್ಬಂದಿ ಸಹ ಕೆಲಸವಿಲ್ಲದೆ ಕುಳಿತಿದ್ದಾರೆ. ಹೀಗಾಗಿ ಕೊರೊನಾ ವೈರಸ್ ಆರ್ಭಟಕ್ಕೆ ಸಾರಿಗೆ ಇಲಾಖೆ ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸುತ್ತಿದೆ.

  • ನಿಶ್ಚಿತಾರ್ಥದಲ್ಲಿ ಊಟ ಮಾಡಿದ 200ಕ್ಕೂ ಹೆಚ್ಚು ಮಂದಿ ಅಸ್ವಸ್ಥ

    ನಿಶ್ಚಿತಾರ್ಥದಲ್ಲಿ ಊಟ ಮಾಡಿದ 200ಕ್ಕೂ ಹೆಚ್ಚು ಮಂದಿ ಅಸ್ವಸ್ಥ

    ಬೀದರ್: ನಿಶ್ಚಿತಾರ್ಥ ಸಮಾರಂಭದಲ್ಲಿ ಊಟ ಮಾಡಿದ 100ಕ್ಕೂ ಅಧಿಕ ಜನರು ವಾಂತಿ, ಭೇದಿಯಿಂದ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮುಸ್ತಾಪುರ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಮಾರುತಿ ಪಾಟೀಲ ಎಂಬವರ ಮಗಳ ನಿಶ್ಚಿತಾರ್ಥ ಕಾರ್ಯಕ್ರಮ ನಿಮಿತ್ತ ಮಧ್ಯಾಹ್ನ ಸುಮಾರು 2 ಗಂಟೆಗೆ ಊಟ ಮಾಡಿದ ಜನರಿಗೆ ವಾಂತಿ ಭೇದಿ ಶುರುವಾಗಿದ್ದು, ವಾಂತಿ ಭೇದಿಯಿಂದ ಜನರ ಅಸ್ವಸ್ಥರಾಗಿದ್ದಾರೆ. ಬಸವಕಲ್ಯಾಣ ನಗರದ ಸರ್ಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಾದ ಪಾಟೀಲ್ ಆಸ್ಪತ್ರೆ, ರಿಫಾ ಆಸ್ಪತ್ರೆ, ಬಿರಾದಾರ್ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಮುಸ್ತಾಪುರ ಗ್ರಾಮದ ಯುವತಿಯನ್ನು ನಾರಾಯಣಪೂರ ಗ್ರಾಮದ ಯುವಕನೊಂದಿಗೆ ಮದುವೆ ಸಂಬಂಧ ನಿಶ್ಚಿತಾರ್ಥ ನಡೆಸಲಾಗುತ್ತಿತ್ತು. ಮುಸ್ತಾಪುರ ಸೇರಿದಂತೆ ಮುಚಳಂಬ, ನಾರಾಯಣಪೂರ ಗ್ರಾಮದಿಂದ ಆಗಮಿಸಿದ ಸಂಬಂಧಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಊಟ ಮಾಡಿದರು. ಸುಮಾರು 600ರಷ್ಟು ಜನ ಊಟ ಮಾಡಿದ್ದು, ಇದರಲ್ಲಿ ಸುಮಾರು 200ಕ್ಕೂ ಅಧಿಕ ಜನರಿಗೆ ವಾಂತಿ, ಭೇದಿ ಶುರುವಾಗಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

    ಅಸ್ವಸ್ಥರಲ್ಲಿ ಮಹಿಳೆಯರು, ಮಕ್ಕಳು, ವೃದ್ಧರು ಸೇರಿದಂತೆ ಎಲ್ಲಾ ವಯೋಮಾನದ ಜನರಿದ್ದು ಕೆಲವರ ಸ್ಥಿತಿ ಗಂಭೀರವಾಗಿದೆ. ಸುದ್ದಿ ತಿಳಿದು ಬಸವಕಲ್ಯಾಣ ಉಪ ವಿಭಾಗದ ಸಹಾಯಕ ಆಯುಕ್ತ ಭಂವರಸಿಗ್ ಮೀನಾ, ಸಿಪಿಐ ಮಹೇಶಗೌಡ ಪಾಟೀಲ್, ಪಿಎಸ್‍ಐ ಸುನೀಲಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿನೆ ನಡೆಸಿ ಘಟನೆ ಬಗ್ಗೆ ಮಾಹಿತಿ ಪಡೆದರು.

  • ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ – ಕೊರೊನಾ ಕುರಿತು ಮಾಹಿತಿಗಾಗಿ ಸಹಾಯವಾಣಿ ಆರಂಭಿಸಲು ಕ್ರಮ

    ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ – ಕೊರೊನಾ ಕುರಿತು ಮಾಹಿತಿಗಾಗಿ ಸಹಾಯವಾಣಿ ಆರಂಭಿಸಲು ಕ್ರಮ

    ಬೀದರ್: ಕೊರೊನಾ ವೈರಸ್ ಸೋಂಕು ಕುರಿತಂತೆ ಸಾರ್ವಜನಿಕರಿಗೆ ಮಾಹಿತಿ ಲಭ್ಯವಾಗಲು ಜಿಲ್ಲಾ ಕೇಂದ್ರದಲ್ಲಿ ಸಹಾಯವಾಣಿ ಕೇಂದ್ರ ಆರಂಭಿಸುವ ಕುರಿತಂತೆ ಜಿಲ್ಲಾಧಿಕಾರಿಗಳಾದ ಡಾ.ಹೆಚ್.ಆರ್ ಮಹಾದೇವ್ ಅವರು ಡಿಹೆಚ್‍ಓ ಮತ್ತು ಇನ್ನಿತರ ಅಧಿಕಾರಿಗಳೊಂದಿಗೆ ಚರ್ಚಿಸಿದರು.

    ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಟಿ.ಎಂ ವಿಜಯ್‍ಭಾಸ್ಕರ್ ಅವರು ಇಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ಬಳಿಕ ಜಿಲ್ಲಾಧಿಕಾರಿಗಳು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಹೊರ ದೇಶ ಅಥವಾ ಹೊರ ರಾಜ್ಯಗಳಿಂದ ವಿಮಾನ, ರೈಲ್ವೆ ಅಥವಾ ಬಸ್‍ಗಳ ಮೂಲಕ ಜಿಲ್ಲೆಗೆ ಆಗಮಿಸುವ ವ್ಯಕ್ತಿಗಳ ತಪಾಸಣೆ ನಡೆಸಬೇಕು. ಕೆಲವು ದಿನಗಳ ಹಿಂದೆ ಜಿಲ್ಲೆಗೆ ಯಾರಾದರೂ ಕೊರೊನಾ ಸೋಂಕು ಪೀಡಿತ ರಾಷ್ಟ್ರಗಳಿಂದ ಆಗಮಿಸಿದ್ದರೆ ಆ ವ್ಯಕ್ತಿಗಳ ಮಾಹಿತಿ ಕಲೆ ಹಾಕಿ, ಅವರ ಮೇಲೆ ವಿಶೇಷ ನಿಗಾ ವಹಿಸಬೇಕು ಎಂದು ತಿಳಿಸಿದರು.

    ಜಾತ್ರೆ, ಸಂತೆಗಳು ಸಾಧ್ಯವಾದಷ್ಟು ನಡೆಯದಂತೆ ಎಚ್ಚರ ವಹಿಸುವುದು ಸೂಕ್ತ. ವಿಮಾನ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಗಳಲ್ಲಿ ಸ್ವಯಂ ಘೋಷಣಾ ಪ್ರಮಾಣ ಪತ್ರಗಳ ಅರ್ಜಿಗಳು ಮತ್ತು ಹೆಲ್ಪ್ ಡೆಸ್ಕ್ ವ್ಯವಸ್ಥೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ತಾಲೂಕು ಮಟ್ಟದ ಆರೋಗ್ಯಾಧಿಕಾರಿಗಳು ಸಹ ಸಕ್ರಿಯವಾಗಿ ಕರ್ತವ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು. ಗ್ರಾಮೀಣ ಭಾಗದಲ್ಲಿ ಕೊರೊನಾ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದು ಸೂಚಿಸಿದರು.

    ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಸೂರ್ಯಕಾಂತ ಎಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ವಿ.ಜಿ ರೆಡ್ಡಿ, ಬೀದರ ಬ್ರಿಮ್ಸ್ ನಿರ್ದೇಶಕರಾದ ಡಾ. ಶಿವಕುಮಾರ್, ಬ್ರಿಮ್ಸ್ ವೈದ್ಯಾಧಿಕಾರಿಗಳಾದ ವಿಜಯ್‍ಕುಮಾರ್ ಅಂತಪನೋರ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

  • ದಕ್ಷಿಣ ಭಾರತದ ಏಕೈಕ ಸಿಖ್ಖರ ಪವಿತ್ರ ಸ್ಥಳ ಗುರುದ್ವಾರಕ್ಕೂ ಕೊರೊನಾ ಭೀತಿ

    ದಕ್ಷಿಣ ಭಾರತದ ಏಕೈಕ ಸಿಖ್ಖರ ಪವಿತ್ರ ಸ್ಥಳ ಗುರುದ್ವಾರಕ್ಕೂ ಕೊರೊನಾ ಭೀತಿ

    ಬೀದರ್: ಕರುನಾಡಿನಲ್ಲಿ ನಾಲ್ಕು ಜನ ಕೊರೊನಾ ಸೋಂಕಿತ ಪ್ರಕರಣಗಳು ದೃಢಪಟ್ಟ ಬೆನ್ನಲ್ಲೇ ರಾಜ್ಯದ ಜನರಲ್ಲಿ ತೀವ್ರ ಭೀತಿ ಸೃಷ್ಟಿಯಾಗಿದೆ. ಇದೀಗ ಬೀದರಿನಲ್ಲಿರುವ ದಕ್ಷಿಣ ಭಾರತದ ಏಕೈಕ ಸಿಖ್ಖರ ಪವಿತ್ರ ಸ್ಥಳ ಗುರುದ್ವಾರಕ್ಕೂ ಕೊರೊನಾ ಬಿಸಿ ತಟ್ಟಿದೆ.

    ರಾಜ್ಯ ಹೊರ ರಾಜ್ಯದಿಂದ ಸಾವಿರಾರು ಪ್ರವಾಸಿಗರು ಬರುವ ಈ ಪವಿತ್ರ ಸ್ಥಳದಲ್ಲಿ ಈಗ ಕೊರೊನಾ ವೈರಸ್ ಭಯ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಯಾರು ಗುರುದ್ವಾರದ ಕಡೆ ಬರಲು ಭಯ ಬೀಳುತ್ತಿದ್ದಾರೆ.

    ಹೆಚ್ಚಾಗಿ ಪಂಜಾಬ್‍ನ ಅಮೃತಸರ ಹಾಗೂ ಮಹಾರಾಷ್ಟ್ರದ ನಾಂದೇಡ್‍ನಿಂದ ಪ್ರತಿದಿನ ಸಾವಿರಾರು ಪ್ರವಾಸಿಗರು ಬರುತ್ತಿದ್ದರು. ಆದರೆ ಕೊರೊನಾ ವೈರಸ್‍ನಿಂದ ಪ್ರವಾಸಿಗರ ಸಂಖ್ಯೆ ಅತಿ ಕಡಿಮೆಯಾಗಿದೆ. ಗುರುದ್ವಾರದ ವ್ಯವಸ್ಥಾಪಕ ಮಂಡಳಿ ಕೊರೊನಾ ವೈರಸ್ ಬರದಂತೆ ಹೇಗೆ ಮುಂಜಾಗ್ರತೆ ತೆಗೆದುಕೊಳ್ಳಬೇಕು ಎಂದು ಪೋಸ್ಟ್ ಹಾಕುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ.

  • ಕೊರೊನಾ ಎಫೆಕ್ಟ್- ವ್ಯಾಪಾರ ವಹಿವಾಟಿನಲ್ಲಿ ಭಾರೀ ಕುಸಿತ

    ಕೊರೊನಾ ಎಫೆಕ್ಟ್- ವ್ಯಾಪಾರ ವಹಿವಾಟಿನಲ್ಲಿ ಭಾರೀ ಕುಸಿತ

    ಬೀದರ್: ಡೆಡ್ಲಿ ಮಹಾಮಾರಿ ಕೊರೊನಾ ಚೀನಾದಲ್ಲಿ ಕಾಣಿಸಿಕೊಂಡು ಮರಣ ಮೃದಂಗ ಬಾರಿಸುತ್ತಿದೆ. ಇದರ ಎಫೆಕ್ಟ್ ವಿಶ್ವದ ಬಹುತೇಕ ದೇಶಗಳಿಗೆ ತಟ್ಟಿದ್ದು ಎಲ್ಲಾ ದೇಶಗಳು ಈ ವಿಷಯದಲ್ಲಿ ಪುಲ್ ಅಲರ್ಟ್ ಆಗಿವೆ.

    ಈ ಡೆಡ್ಲಿ ವೈರಸ್ ಭೀತಿ ಈಗ ಭಾರತೀಯರ ಕಲರ್‍ಫುಲ್ ಹಬ್ಬ ಹೋಳಿಗೂ ತಟ್ಟಿದೆ. ಪ್ರತಿ ವರ್ಷ ಗಡಿ ಜಿಲ್ಲೆ ಬೀದರ್‍ನಲ್ಲಿ ಹೋಳಿ ಹಬ್ಬವನ್ನು ಬಹಳ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿತ್ತು. ಆದರೆ ಈ ಕೊರೊನಾ ವೈರಸ್ ಸಂಭ್ರಮವನ್ನೇ ಕಿತ್ತುಕೊಂಡಿದೆ.

    ರಂಗಿನಾಟಕ್ಕೆ ನಾಳೆ ಒಂದೇ ದಿನ ಬಾಕಿಯಿದ್ದು, ಇಷ್ಟೊತ್ತಿಗಾಗಲೇ ಬಹುತೇಕ ವಹಿವಾಟು ಆಗುತ್ತಿತ್ತು. ಆದರೆ ಮಕ್ಕಳ ಆಟಿಕೆ ವಸ್ತುಗಳು ಹಾಗೂ ಕೆಲ ಬಣ್ಣಗಳು ಚೀನಾದಿಂದ ಆಮದು ಆಗಿರುವ ವದಂತಿ ಹಿನ್ನೆಲೆಯಲ್ಲಿ ಪೋಷಕರು ಇವುಗಳನ್ನು ತಮ್ಮ ಮಕ್ಕಳಿಗೆ ಕೊಡಿಸಲು ನಿರಾಕರಿಸುತ್ತಿದ್ದಾರೆ.

    ಇದರಿಂದ ಬಂಡವಾಳ ಹಾಕಿರುವ ಮಾಲೀಕರ ಎದೆಯಲ್ಲಿ ಢವ ಢವ ಶುರುವಾಗಿದ್ದು ದೇವರೇ ಕಾಪಾಡು ಎಂದು ತಲೆ ಮೇಲೆ ಕೈಹೊತ್ತು ಕುಳಿತುಕೊಂಡು ಬಿಟ್ಟಿದ್ದಾರೆ. ಶೇ.60 ರಷ್ಟು ವ್ಯಾಪಾರವಾಗಬೇಕಿತ್ತು. ಆದರೆ ಸದ್ಯ ಶೇ.30 ರಷ್ಟು ಮಾತ್ರ ವ್ಯಾಪಾರವಾಗಿದ್ದು, ಕೊರೊನಾ ವೈರಸ್ ಮಾಲೀಕರಿಗೆ ಶಾಕ್ ನೀಡಿದೆ.