Tag: bidar

  • ನೀರು ಕುಡಿದು ನಲ್ಲಿ ಬಂದ್ ಮಾಡುವ ಹಸು-ವಿಡಿಯೋ ನೋಡಿ

    ನೀರು ಕುಡಿದು ನಲ್ಲಿ ಬಂದ್ ಮಾಡುವ ಹಸು-ವಿಡಿಯೋ ನೋಡಿ

    ಬೀದರ್: ಹಸುವೊಂದು ನೀರು ಕುಡಿದು ನಲ್ಲಿಯನ್ನು ಬಂದ್ ಮಾಡಿದೆ. ನಗರದ ಉಸ್ಮಾನಗಂಜ್ ಮಾರುಕಟ್ಟೆಯಲ್ಲಿ ನೀರು ಕುಡಿದ ಹಸು ಕೊನೆಗೆ ನಲ್ಲಿ ಬಂದ್ ಮಾಡುವ ಮೂಲಕ ಸ್ಥಳೀಯರ ಅಚ್ಚರಿಗೆ ಕಾರಣವಾಗಿದೆ.

    ನಮ್ಮ ಅಂಗಡಿಯ ಎದುರಿನ ನೀರಿನ ತೊಟ್ಟಿಯ ನಲ್ಲಿಯನ್ನು ತಿರುಗಿಸಿ ಹಸು ನೀರು ಕುಡಿದು ಹೋಗುತ್ತದೆ. ಕಳೆದ ಕೆಲವು ದಿನಗಳಿಂದ ಈ ಹಸು ಮಾತ್ರ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ನೀರು ಕುಡಿದು ಹೋಗುತ್ತದೆ. ಮೂಕಪ್ರಾಣಿಯಾದರೂ ನೀರನ್ನು ವ್ಯರ್ಥ ಮಾಡುತ್ತಿಲ್ಲ. ಫೆಬ್ರವರಿಯಿಂದಲೇ ನಮ್ಮಲ್ಲಿ ಕುಡಿಯಲು ನೀರು ಸಿಗುತ್ತಿಲ್ಲ. ನೀರನ್ನು ಉಳಿಸಿ ಎಂದು ಹಸು ಸಮಾಜಕ್ಕೆ ಹೇಳುತ್ತಿದೆ. ಅನಾವಶ್ಯಕವಾಗಿ ನೀರು ವ್ಯರ್ಥ ಮಾಡೋದನ್ನು ನಾವೆಲ್ಲರೂ ನಿಲ್ಲಿಸಬೇಕಿದೆ ಎಂದು ಸ್ಥಳೀಯ ನಿವಾಸಿ ಸಂತೋಷ್ ಕುಮಾರ್ ಹೇಳುತ್ತಾರೆ.

    ಬೇಸಿಗೆ ಆರಂಭವಾಗುತ್ತಿದ್ದಂತೆ ಬೀದರ್ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಹನಿ ನೀರಿಗೂ ಹಾಹಾಕಾರ ಆರಂಭವಾಗುತ್ತದೆ. ಅಂತಹದರಲ್ಲಿ ಕೆಲವರು ನೀರನ್ನು ಮಾತ್ರ ಪೋಲು ಮಾಡೋದನ್ನು ಮಾತ್ರ ನಿಲ್ಲಿಸಲ್ಲ. ಮೂಕ ಪ್ರಾಣಿಯೊಂದು ನಲ್ಲಿಯನ್ನು ಬಂದ್ ಮಾಡುವ ಮೂಲಕ ನೀರನ್ನು ವ್ಯರ್ಥ ಮಾಡದ್ರಿ ಎಂಬ ಸಂದೇಶವನ್ನು ಸಮಾಜಕ್ಕೆ ನೀಡುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೋದಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಹೊಸ ಬಾಂಬ್ ಸಿಡಿಸಿದ ಬಿಎಸ್‍ವೈ

    ಮೋದಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಹೊಸ ಬಾಂಬ್ ಸಿಡಿಸಿದ ಬಿಎಸ್‍ವೈ

    ಬೀದರ್: ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್-ಜೆಡಿಎಸ್ ಮೈತಿ ಸರ್ಕಾರ ಅಧಿಕಾರಲ್ಲಿ ಇರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.

    ಹುಮ್ನಾಬಾದ್ ಪಟ್ಟಣದಲ್ಲಿ ಮೋದಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಮುಂದಿನ ಎರಡು ತಿಂಗಳಲ್ಲಿ ಮುಕ್ತಾಯವಾಗುತ್ತದೆ. ಬೀದರ್, ಕಲಬುರಗಿ ಸೇರಿದಂತೆ ರಾಜ್ಯದ 22 ಕ್ಷೇತ್ರಗಳಿಂದ ಬಿಜೆಪಿ ಜಯಗಳಿಸಿದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಅಂದುಕೊಂಡಂತೆ ಲೋಕಸಭಾ ಚುನಾವಣೆ ಫಲಿತಾಂಶ ಬಂದರೆ ರಾಜ್ಯದಲ್ಲಿ ಸಿಎಂ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಇರುವುದಿಲ್ಲ. ಇದರ ಬಗ್ಗೆ ಯಾವುದೇ ಸಂದೇಹವೇ ಬೇಡ ಎಂದು ಎಂದು ಹೇಳಿದ್ದಾರೆ.

    ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ 25 ಸ್ಥಾನ ಗೆಲ್ಲಿಸಿಕೊಡಿ. ನಂತರ ಕರ್ನಾಟಕದಲ್ಲಿ ನಮ್ಮದೇ ಸರ್ಕಾರ ಅಸ್ಥಿತ್ವಕ್ಕೆ ಬರಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅನಿತ್ ಶಾ ಅವರು ಗುರುವಾರ ಬೆಂಗಳೂರಿನಲ್ಲಿ ಪಕ್ಷದ ಸಂಸದರು, ಶಾಸಕರು, ಲೋಕಸಭಾ ಪ್ರಬಾರಿಗಳು ಹಾಗೂ ಜಿಲ್ಲಾಧ್ಯಕ್ಷರ ಸಭೆಯಲ್ಲಿ ತಿಳಿಸಿದ್ದರು.

    ಅಮಿತ್ ಶಾ ಅವರು ನೀಡಿರುವ ಟಾರ್ಗೆಟ್ ಬೆನ್ನು ಹತ್ತಿರುವ ಬಿ.ಎಸ್.ಯಡಿಯೂರಪ್ಪ ಲೋಕಸಭಾ ಚುನಾವಣೆಗೆ ಭಾರೀ ಸಿದ್ಧತೆ ನಡೆಸಿದ್ದಾರೆ. ಹೇಗಾದರೂ ಮಾಡಿ ರಾಜ್ಯದಲ್ಲಿ 22ರಿಂದ 25 ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎನ್ನುವ ಪಣತೊಟ್ಟಿದ್ದಾರೆ. ಸದ್ಯಕ್ಕೆ ಆಪರೇಷನ್ ಕಮಲಕ್ಕೆ ಬ್ರೇಕ್ ಬಿದ್ದಿದ್ದು, 20ಕ್ಕಿಂತಲೂ ಹೆಚ್ಚಿನ ಸ್ಥಾನ ಗೆದ್ದರೆ ಕರ್ನಾಟಕದ ಮೈತ್ರಿ ಸರ್ಕಾರದ ವಿರುದ್ಧ ಜನಾಭಿಪ್ರಾಯವಿದೆ ಎನ್ನುವುದು ಸ್ಪಷ್ಟವಾಗುತ್ತದೆ. ಹೀಗಾಗಿ ನಂತರ ಆಪರೇಷನ್ ಕಮಲ ಮಾಡಿದರೆ ಯಾವುದೇ ಸಮಸ್ಯೆ ಇಲ್ಲ ಎನ್ನುವ ಲೆಕ್ಕಾಚಾರವನ್ನು ಬಿಎಸ್‍ವೈ ಹಾಕಿದ್ದಾರೆ ಎನ್ನಲಾಗಿದೆ.

    ಆಪರೇಷನ್ ಕಮಲ ಆಡಿಯೋ ಪ್ರಕರಣದಿಂದ ಸ್ವಲ್ಪ ರಿಲೀಫ್ ಆಗಿದ್ದ ಬಿ.ಎಸ್.ಯಡಿಯೂರಪ್ಪ ಅವರು, ಮಧ್ಯಾಹ್ನದ ಹುಮ್ನಾಬಾದ್ ಪಟ್ಟಣದ ವೀರಭದ್ರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ಬಳಿಕ ಮಾತನಾಡಿ, ಮೈತ್ರಿ ನಾಯಕರು ದ್ವೇಷದ ರಾಜಕಾರಣ ಮಾಡಲು ಹೊರಟಿದ್ದರು. ಆದರೆ ಕೋರ್ಟ್ ನನಗೆ ನ್ಯಾಯ ಒದಗಿಸಿಕೊಟ್ಟಿದೆ. ನಾನು ಯಾವುದೇ ತಪ್ಪು ಮಾಡಿಲ್ಲ. ನ್ಯಾಯಾಲಯ, ದೇವರ ಬಗ್ಗೆ ನನಗೆ ಅಪಾರ ವಿಶ್ವಾಸವಿದೆ. ಹೀಗಾಗಿ ನನಗೆ ಅನ್ಯಾಯವಾಗಲಿಲ್ಲ ಎಂದು ಕಿಡಿಕಾರಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವಚನ ವಿಜಯೋತ್ಸವ – ಬಸವಣ್ಣನವರ ವಚನ ಗ್ರಂಥವನ್ನು ತಲೆ ಮೇಲೆ ಹೊತ್ತು ಸಾಗಿದ ಶರಣಭಕ್ತರು

    ವಚನ ವಿಜಯೋತ್ಸವ – ಬಸವಣ್ಣನವರ ವಚನ ಗ್ರಂಥವನ್ನು ತಲೆ ಮೇಲೆ ಹೊತ್ತು ಸಾಗಿದ ಶರಣಭಕ್ತರು

    ಬೀದರ್: 16ನೇ ವಚನ ವಿಜಯೋತ್ಸವದಲ್ಲಿ ಸಾವಿರಾರು ಶರಣಭಕ್ತರು ಮೆರವಣಿಗೆಯಲ್ಲಿ ಬಸವಣ್ಣನವರ ವಚನ ಗ್ರಂಥವನ್ನು ತಲೆಯ ಮೇಲೆ ಹೊತ್ತು ಸಾಗಿದ್ದಾರೆ.

    ವಚನ ವಿಜಯೋತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ್ ಚಾಲನೆ ನೀಡಿದರು. ಹೂವಿನಿಂದ ಅಲಂಕರಿಸಿದ ರಥದಲ್ಲಿ ಬಸವಣ್ಣನವರ ವಚನ ಗ್ರಂಥವನ್ನು ಮೆರೆವಣಿಗೆ ಮಾಡಲಾಯಿತು. ನಗರದ ಬಸವೇಶ್ವರ ಸರ್ಕಲ್‍ನಿಂದ ಬಸವಗಿರಿವರೆಗೆ ಭವ್ಯ ಮೆರವಣಿಗೆ ನಡೆಸಲಾಯಿತು.

    16ನೇ ವಚನ ವಿಜಯೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಬಸವಣ್ಣ ಅವರ ವಚನ ಗ್ರಂಥವನ್ನು ತಲೆ ಮೇಲೆ ಹೊತ್ತುಕೊಂಡು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ಅಲ್ಲದೆ ಈ ವಿಶೇಷ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಹಲವು ಕಲಾ ತಂಡಗಳು ನೃತ್ಯ ಪ್ರದರ್ಶನ ಮಾಡುವ ಮೂಲಕ ಜನರ ಗಮನ ಸೆಳೆಯಿತು. ಅಲ್ಲದೆ ಮೆರವಣಿಗೆಯಲ್ಲಿ ಅಣ್ಣ ಬಸವಣ್ಣ, ಅಕ್ಕಮಹಾದೇವಿ, ಮಡಿವಾಳ ಮಾಚಯ್ಯ ವೇಷಧಾರಿಗಳು ನೆರೆದವರ ಮನಸೆಳೆದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಭಯೋತ್ಪಾದನೆ, ಕತ್ತೆ ರಫ್ತು ಇವೆರಡೇ ಪಾಕ್‍ಗೆ ಗೊತ್ತಿರೋದು: ಸೂಲಿಬೆಲೆ ಕಿಡಿ

    ಭಯೋತ್ಪಾದನೆ, ಕತ್ತೆ ರಫ್ತು ಇವೆರಡೇ ಪಾಕ್‍ಗೆ ಗೊತ್ತಿರೋದು: ಸೂಲಿಬೆಲೆ ಕಿಡಿ

    ಬೀದರ್: ಮಾನವ ಹಕ್ಕುಗಳ ಹೆಸರಿನಲ್ಲಿ ಬೀದಿಗೆ ಬರುವ ಕೇಲ ಅಯೋಗ್ಯರಿಂದಲೇ ಇಂದು ಕಾಶ್ಮೀರ ಹಾಳಾಗಿದೆ ಇದು ದುರ್ದೈವದ ಸಂಗತಿಯಾಗಿದೆ. ಅದರಲ್ಲೂ ಗಿರೀಶ್ ಕಾರ್ನಾಡ್, ಪ್ರಕಾಶ್ ರೈ ಹಾಗೂ ಗೌರಿ ಲಂಕೇಶ್ ಇವರೆಲ್ಲರೂ ಸೇರಿಕೊಂಡು ಮಾನವ ಹಕ್ಕುಗಳ ಹೆಸರಿನಲ್ಲಿ ಜನರಿಗೆ ಅನ್ಯಾಯ ಮಾಡುತ್ತಿದ್ದಾರೆ. ಇದು ನಿಜಕ್ಕೂ ದುರ್ದೈವದ ಸಂಗತಿ ಎಂದು ಖ್ಯಾತ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಕಿಡಿಕಾರಿದ್ದಾರೆ.

    ಬೀದರ್‍ ನ ಫಾರ್ಮಸಿ ಕಾಲೇಜು ಆವರಣದಲ್ಲಿ ನಡೆದ “ದೇಶಕ್ಕಾಗಿ ಮೋದಿ, ಮೋದಿಗಾಗಿ ನಾವು” ಎಂಬ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸೂಲಿಬೆಲೆ, ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿ ಒಂದು ನಿಮಿಷ ಮೌನಚರಣೆ ಮಾಡಿದ್ರು. ಇದನ್ನೂ ಓದಿ: ಆರ್ಥಿಕ ದಿವಾಳಿ ಸರಿದೂಗಿಸಲು ಕತ್ತೆಗಳ ಮೊರೆ ಹೋದ ಪಾಕಿಸ್ತಾನ

    ಬಳಿಕ ಮಾತನಾಡಿದ ಅವರು, ಪಾಪಿ ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಾಕಿಸ್ತಾನ ಬೀಕಾರಿ ದೇಶವಾಗಿದ್ದು, ಕತ್ತೆ ರಫ್ತು ಮಾಡುವ ದಯನೀಯ ಸ್ಥಿತಿಗೆ ಬಂದಿದೆ. ಭಯೋತ್ಪಾದನೆ ಮತ್ತು ಚೀನಾಕ್ಕೆ ಕತ್ತೆ ರಫ್ತು ಮಾಡುವುದು ಇವರೆಡೇ ಪಾಕಿಸ್ತಾನಕ್ಕೆ ಗೊತ್ತಿರುವುದು. ಮುಂದೆ ಭಾರತ ಒಬ್ಬ ಯೋಧನನ್ನು ಕಳೆದುಕೊಳ್ಳಬಾರದು. ಪಾಕಿಸ್ತಾನದ ಒಬ್ಬರನ್ನು ಬಿಡಬಾರದು ಎಂದು ಹುತಾತ್ಮ ಯೋಧರು ಸಾವನ್ನಪ್ಪಿದ ಕ್ಷಣಗಳನ್ನು ಹಂಚಿಕೊಳ್ಳುತ್ತಾ ಭಾವುಕರಾದರು.

    ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಕುಟುಂಬದ ರಾಜಕೀಯ ಬಗ್ಗೆ ಕಿಡಿಕಾರಿದ್ದು, ತಂದೆ ಪ್ರಧಾನಿಯಾಗಿದ್ದ ಪ್ರಭಾವದಿಂದ ಮಗ ಸಿಎಂ, ಮಗ ಸಿಎಂ ಎನ್ನುವ ಕಾರಣಕ್ಕೆ ಅಣ್ಣ ಮಂತ್ರಿ, ಸಿಎಂ ಪತ್ನಿ ಶಾಸಕಿ, ಸಿಎಂ ಪತ್ನಿ ಶಾಸಕಿಯಾಗಿದ್ದರಿಂದ ನಾನು ಯಾಕೆ ಶಾಸಕಿಯಾಗಬಾರದು ಎಂದು ಅಣ್ಣನ ಪತ್ನಿ ಗಲಾಟೆ ಮಾಡುತ್ತಿದ್ದಾರೆ. ಲೋಕಸಭಾ ಚುನಾವಣೆಗಾಗಿ ಸಿಎಂ ಹಾಗೂ ಅಣ್ಣನ ಮಕ್ಕಳಲ್ಲಿ ಪೈಪೋಟಿ ಇದೆ. ಇವರಿಗೆ ಪರಿವಾರವೇ ದೇಶವಾಗಿದೆ. ಆದರೆ ಮೋದಿಗೆ ದೇಶವೇ ಪರಿವಾರ ಎಂದು ಮಾಜಿ ಪ್ರಧಾನಿ ಎಚ್.ಡಿ.ಡಿ ಹಾಗೂ ಸಿಎಂ ಎಚ್.ಡಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದರು.

    https://www.youtube.com/watch?v=uqZadi6yn30

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿಎಂ ಕುಮಾರಸ್ವಾಮಿಗೆ ಎಚ್ಚರಿಕೆ ಕೊಟ್ಟ ರೈತರು!

    ಸಿಎಂ ಕುಮಾರಸ್ವಾಮಿಗೆ ಎಚ್ಚರಿಕೆ ಕೊಟ್ಟ ರೈತರು!

    ಬೀದರ್: ನಾನು ಮಣ್ಣಿನ ಮಗ ಎಂದು ರೈತರ ಪರ ಬ್ಯಾಟಿಂಗ್ ಮಾಡುವ ಸಿಎಂ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಕಾರಂಜಾ ಹಿನ್ನೀರಿನಲ್ಲಿ ಭೂಮಿ ಕಳೆದುಕೊಂಡ ರೈತರು ಪ್ರತಿಭಟನೆ ನಡೆಸಿ ಎಚ್ಚರಿಕೆ ನೀಡಿದ್ದಾರೆ.

    ವಿಧಾನಸೌದದಲ್ಲಿ ಇಂದು ಜಂಟಿ ಅಧಿವೇಶನ ನಡೆಯುತ್ತಿದ್ದು 10ಕ್ಕೂ ಹೆಚ್ಚು ಶಾಸಕರು ಅಧಿವೇಶನಕ್ಕೆ ಗೈರಾಗಿದ್ದಕ್ಕೆ ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಸಿಎಂ ಎಚ್‍ಡಿಕೆ ತುಂಬಾ ತಲೆಕೆಡಿಸಿಕೊಂಡಿದ್ದಾರೆ. ಇದೇ ಬೆನ್ನಲ್ಲಿ ಇಂದು ಕಾರಂಜಾ ಹಿನ್ನೀರಿನಲ್ಲಿ ಭೂಮಿ ಹಾಗೂ ಮನೆ ಕಳೆದುಕೊಂಡ ಕಾರಂಜಾ ಸಂತ್ರಸ್ತರು ಇಂದು ಬೀದರ್ ಟು ಹುಮ್ನಾಬಾದ್ ರಾಜ್ಯ ಹೆದ್ದಾರಿ ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

    ಸಾವಿರಾರು ಸಂಖ್ಯೆಯಲ್ಲಿ ರೈತರು ಸೇರಿ ರಸ್ತೆ ತಡೆದು ಪ್ರತಿಭಟನೆ ಮಾಡುತ್ತಾ, ಸಿಎಂ ಕುಮಾರಸ್ವಾಮಿ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಅಷ್ಟೇ ಅಲ್ಲದೆ ಜಿಲ್ಲೆಯ ಮೂವರು ಸಚಿವರು ಹಾಗೂ ಶಾಸಕರ ವಿರುದ್ಧ ಕಿಡಿಕಾರಿದ್ದಾರೆ. ಈ ವೇಳೆ ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸರು ಸರ್ಪಗಾವಲು ಹಾಕಿದ್ದರು.

    ಚುನಾವಣೆ ವೇಳೆ ಶಾಸಕರು ಹಾಗೂ ಸಚಿವರು ಬೀದರ್‍ಗೆ ಬಂದು ಕಾರಂಜಾ ಹಿನ್ನೀರಿನಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ಶೀಘ್ರ ಪರಿಹಾರ ನೀಡುವುದಾಗಿ ಸುಳ್ಳು ಆಶ್ವಾಸನೆ ನೀಡಿ ಹೋಗಿದ್ದೀರಿ. ಒಂದು ವೇಳೆ ಈ ಅಧಿವೇಶನದಲ್ಲಿ ಈ ಬಗ್ಗೆ ಧ್ವನಿ ಎತ್ತಿಲ್ಲಾ ಅಂದ್ರೆ ಮೂರು ತಾಲೂಕುಗಳಿಗೆ ಕಾರಂಜಾ ನೀರು ಬಂದ್ ಮಾಡುತ್ತೇವೆ ಎಂದು ಕಿಡಿಕಾರಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನೀರಿನ ಸಮಸ್ಯೆಯಿಂದ ಶಾಲೆಗೆ ಗೈರಾಗುತ್ತಿದ್ದಾರೆ ವಿದ್ಯಾರ್ಥಿಗಳು..!

    ನೀರಿನ ಸಮಸ್ಯೆಯಿಂದ ಶಾಲೆಗೆ ಗೈರಾಗುತ್ತಿದ್ದಾರೆ ವಿದ್ಯಾರ್ಥಿಗಳು..!

    ಬೀದರ್: ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳು ಶಾಲೆಗೆ ಹೋಗಬೇಕು ಎಂದು ಸರ್ಕಾರ ಹಲವು ಕಸರತ್ತು ಮಾಡ್ತಿದೆ. ಆದ್ರೆ ಜಿಲ್ಲೆಯಲ್ಲಿ ಮಾತ್ರ ನೀರಿನ ಸಮಸ್ಯೆಯಿಂದಾಗಿ ವಿದ್ಯಾರ್ಥಿಗಳು ಶಾಲೆಗೆ ಗೈರಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

    ಹೌದು, ಇದಕ್ಕೆ ಕಾರಣ ಕುಡಿಯುವ ನೀರು. ಬೇಸಿಗೆ ಇನ್ನು ದೂರ ಇರುವಾಗಲೇ ಗಡಿ ಜಿಲ್ಲೆಯಲ್ಲಿ ನೀರಿನ ಪಾಲಿಟಿಕ್ಸ್ ಶುರುವಾಗಿದೆ. ಬೀದರ್ ನಗರದಿಂದ 15 ಕಿಲೋ ಮೀಟರ್ ದೂರದಲ್ಲಿರುವ ಖಾಜಾಪೂರ್ ಅಲ್ಪಸಂಖ್ಯಾತ ಕಲ್ಯಾಣ ಸಚಿವ ರಹೀಂಖಾನ್ ಕ್ಷೇತ್ರವಾಗಿದ್ದು, ಇಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಒಂದು ಹನಿ ನೀರಿಗಾಗಿ ಮಹಿಳೆಯರು ಕೂಲಿಗೆ ಹೋಗದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದರೆ, ಮಕ್ಕಳು ಶಾಲೆಗೆ ಚಕ್ಕರ್ ಹಾಕಬೇಕಾಗಿದೆ. ನೀರು ಕೊಡುತ್ತೆನೆ ಎಂದು ಚುನಾವಣೆಯ ಟೈಂನಲ್ಲಿ ಕಲರ್ ಕಲರ್ ಕಾಗೆ ಹಾರಿಸಿದ ಮಿನಿಸ್ಟರ್ ಮಾತ್ರ ಇಂದು ಬಿಂದಾಸ್ ಆಗಿದ್ದಾರೆ.

    ಚುನಾವಣೆಯ ಸಮಯದಲ್ಲಿ ನೀರು ಕೊಡ್ತೇನೆ, ಕ್ಷೇತ್ರದ ಸಮಸ್ಯೆಗಳನ್ನು ನಿವಾರಿಸುತ್ತೇನೆ ಅಂತ ರಹೀಂಖಾನ್ ಅವರು ಜನರಿಗೆ ಆಶ್ವಾಸನೆ ಕೊಟ್ಟಿದ್ದರು. ಆದ್ರೆ ಈಗ ಗೆದ್ದು ಮಂತ್ರಿಯಾದ ಬಳಿಕ ರಹೀಂಖಾನ್ ಅವರು ಮಾತ್ರ ಏನೂ ಟೆನ್ಶನ್ ಇಲ್ಲದೇ ಬಿಂದಾಸಾಗಿದ್ದಾರೆ. ಜನರು ನೀರಿಲ್ಲದೆ ಪರದಾಡುತ್ತಿದ್ದರೂ ಅವರ ಕಷ್ಟವನ್ನು ಕೇಳುವವರೇ ಇಲ್ಲದಂತಾಗಿದೆ. ದಿನನಿತ್ಯ ಸಾಕಷ್ಟು ದೂರ ಹೋಗಿ ಕುಡಿಯುವ ನೀರನ್ನು ತರುವುದೇ ಈ ಭಾಗದ ಜನರಿಗೆ ಕೆಲಸವಾಗಿ ಬಿಟ್ಟಿದೆ. ಆದ್ದರಿಂದ ಈ ಭಾಗದಲ್ಲಿ ಮಕ್ಕಳು ಶಾಲೆಗೆ ಗೈರಾಗಿ ನೀರು ತರಲು ಕಿಲೋ ಮೀಟರ್‍ಗಟ್ಟಲೆ ಹೋಗುತ್ತಿದ್ದಾರೆ.

    ಪ್ರತಿವರ್ಷ ಸರ್ಕಾರ ಕುಡಿಯೋ ನೀರಿಗೆ ಅಂತಾನೆ ಕೋಟ್ಯಂತರ ರೂಪಾಯಿ ಅನುದಾನ ಕೊಡ್ತಿದೆ. ಆದ್ರೆ ಇಲ್ಲಿಯವರೆಗೆ ಈ ಭಾಗಕ್ಕೆ ಯಾವುದೆ ಶಾಶ್ವತ ಪರಿಹಾರ ಸಿಕ್ಕಿಲ್ಲ. ಈ ಬಗ್ಗೆ ಗ್ರಾಮಸ್ಥರು ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಹೈರಾಣಾಗಿ ಹೋಗಿದ್ದಾರೆ. ಬೀದರ್ ಉತ್ತರ ಕ್ಷೇತ್ರದ ಶಾಸಕ ರಹೀಂಖಾನ್ ಗೆದ್ದು ಮಂತ್ರಿಯಾಗಿ ಐಷಾರಾಮಿ ಜೀವನ ನಡೆಸುತ್ತಿದ್ದಾರೆ. ಆದ್ರೆ ಕ್ಷೇತ್ರದ ಜನರು ನೀರಿನ ಸಮಸ್ಯೆಗೆ ಪರಿಹಾರ ಕಾಣದಿರೋದು ಮಾತ್ರ ವಿಪರ್ಯಾಸ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬೀದರ್ ವಿವಿಯಲ್ಲಿ ಯುವಕ-ಯುವತಿ ಒಟ್ಟಿಗೆ ತಿರುಗಾಡುವುದಕ್ಕೆ ಬ್ರೇಕ್!

    ಬೀದರ್ ವಿವಿಯಲ್ಲಿ ಯುವಕ-ಯುವತಿ ಒಟ್ಟಿಗೆ ತಿರುಗಾಡುವುದಕ್ಕೆ ಬ್ರೇಕ್!

    ಬೀದರ್: ಕ್ಯಾಂಪಸ್ ನಲ್ಲಿ ಯುವಕ-ಯುವತಿ ಕಾರಣವಿಲ್ಲದೇ ಒಟ್ಟಿಗೆ ತಿರುಗಾಡುವುದಕ್ಕೆ ಬೀದರ್ ವಿವಿ ಬ್ರೇಕ್ ಹಾಕಿದೆ.

    ಬೀದರ್ ಹೊರವಲಯದ ನಂದಿ ನಗರದಲ್ಲಿರುವ ಪಶು ವೈದ್ಯಕೀಯ, ಮೀನುಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯದ ಹಾಸ್ಟೆಲ್ ವಾರ್ಡನ್ ಜಗನ್ನಾಥ್ ಅವರು ಈ ಆದೇಶ ಹೊರಡಿಸಿದ್ದಾರೆ.

    ಯುವಕ-ಯುವತಿ ಒಟ್ಟಿಗೆ ಸುತ್ತಾಡುತ್ತಿದ್ದರೆ ಅದು ಜನರಿಗೆ ತಪ್ಪು ಸಂದೇಶ ನೀಡುತ್ತೆ. ಹೀಗಾಗಿ ಕಾಲೇಜ್ ಕ್ಯಾಂಪಸ್‍ನಲ್ಲಿ ಹಾಗೂ ಬೀದರ್ ನಗರದಲ್ಲಿ ಯುವಕ-ಯುವತಿ ಒಟ್ಟಿಗೆ ತಿರುಗಾಡಿದರೆ ಶಿಸ್ತು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

    ಆದೇಶದಲ್ಲಿ ಏನಿದೆ?
    ನಮ್ಮ ವಿಶ್ವವಿದ್ಯಾಲಯದ ಹಲವು ವಿದ್ಯಾರ್ಥಿನಿಯರು ಸಂಜೆ ವೇಳೆ ಯುವಕರ ಜೊತೆ ನಂದಿನಿ ಗೇಟ್ ಬಳಿ, ಕಾಲೇಜ್ ಕ್ಯಾಂಪಸ್ ಹಾಗೂ ನಗರದ ಹೊರವಲಯದಲ್ಲಿ ತಿರುಗಾಡುತ್ತಿರುವ ವಿಷಯ ಮುಖ್ಯ ವಾರ್ಡನ್, ವಿಶ್ವವಿದ್ಯಾಲಯದ ಹಿರಿಯ ಅಧಿಕಾರಿಗಳು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶಕರ ಗಮನಕ್ಕೆ ಬಂದಿದೆ.

    ಕಾಲೇಜ್ ಕ್ಯಾಂಪಸ್ ಅಲ್ಲದೇ ನಗರದ ಹೊರವಲಯದಲ್ಲೂ ಯುವಕ- ಯುವತಿಯರು ಒಟ್ಟಿಗೆ ತಿರುಗಾಡುತ್ತಿದ್ದಾರೆ. ಈ ರೀತಿ ತಿರುಗಾಡುವುದರಿಂದ ಜನರಿಗೆ ತಪ್ಪು ಸಂದೇಶ ನೀಡುತ್ತದೆ. ಯಾವುದೇ ಕಾರಣ ಇಲ್ಲದೇ ಯುವಕ-ಯುವತಿಯರು ಒಟ್ಟಿಗೆ ತಿರುಗಾಡುತ್ತಿರುವುದು ಕಂಡು ಬಂದರೆ, ಅವರ ವಿರುದ್ಧ ಶಿಸ್ತು ಕ್ರಮವನ್ನು ಕೈಗೊಳ್ಳಲಾಗುತ್ತದೆ. ದಿಢೀರ್ ಆಗಿ ಭೇಟಿ ನೀಡಿ ಈ ರೀತಿಯ ಬೆಳವಣಿಗೆಯನ್ನು ತಡೆಯಲು ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಎಲ್ಲ ವಿದ್ಯಾರ್ಥಿಗಳು ಕ್ಯಾಂಪಸಿನಲ್ಲಿ ಶಿಸ್ತನ್ನು ಕಾಪಾಡಬೇಕು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಯಡಿಯೂರಪ್ಪನವರೇ ಸಿಹಿ ಸುದ್ದಿ ಎಲ್ಲಿದೆ ಹೇಳ್ರೀ  – ಬಂಡೆಪ್ಪ ಕಾಶೆಂಪೂರ ವ್ಯಂಗ್ಯ

    ಯಡಿಯೂರಪ್ಪನವರೇ ಸಿಹಿ ಸುದ್ದಿ ಎಲ್ಲಿದೆ ಹೇಳ್ರೀ – ಬಂಡೆಪ್ಪ ಕಾಶೆಂಪೂರ ವ್ಯಂಗ್ಯ

    ಬೀದರ್: ಸಿಹಿ ಸುದ್ದಿ ಎಲ್ಲಿದೆ ಹೇಳ್ರೀ ಯಡಿಯೂರಪ್ಪನವರೇ? ಆ ಸಿಹಿಯನ್ನು ಕರ್ನಾಟಕ ಅಥವಾ ದೆಹಲಿಯಿಂದ ತರುತ್ತೀರೋ ಇಲ್ಲಾ ವಿದೇಶದಿಂದ ಬರಬೇಕೇ ಎಂದು ಪ್ರಶ್ನಿಸಿ ಬಂಡೆಪ್ಪ ಕಾಶೆಂಪೂರ ವ್ಯಂಗ್ಯವಾಡಿದ್ದಾರೆ.

    ಜಿಲ್ಲೆಯ ರಂಗಮಂದಿರದಲ್ಲಿ ನಡೆದ ಬಡವರ ಬಂಧು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪುರ ಮಾತನಾಡಿ, ಈಗಾಗಲೇ ಬಿಜೆಪಿಯ ಎಲ್ಲಾ ಬಾಂಬ್‍ಗಳು ಠುಸ್ಸಾಗಿದ್ದು, ಎಲ್ಲಾ ಅತೃಪ್ತ ಶಾಸಕರು ವಾಪಸ್ ಪಕ್ಷಕ್ಕೆ ಬಂದಿದ್ದಾರೆ. ಕಾಂಗ್ರೆಸ್ ಅಥವಾ ಜೆಡಿಎಸ್‍ನ ಸಿಂಗಲ್ ಎಂಎಲ್‍ಎಗಳು ಬಿಜೆಪಿಗೆ ಹೋಗುವುದಿಲ್ಲ. ಬಿಜೆಪಿ ಈ ಆಟಕ್ಕೆ ರಾಜ್ಯದ ಜನ ಮುಂದೆ ತಕ್ಕ ಉತ್ತರ ಕೊಡುತ್ತಾರೆ ಎಂದು ಕಿಡಿಕಾರಿದರು.

    ಸಿಹಿ ಸುದ್ದಿ ಕೊಡುತ್ತೇವೆ ಎಂದು ಬಾಯಿ ಮಾತಿಗೆ ಹೇಳ್ತಾರೆ. ಯಡಿಯೂರಪ್ಪನವರೇ ಎಲ್ಲಿದೆ ಸಿಹಿ ಸುದ್ದಿ? ಕರ್ನಾಟಕದಲ್ಲಿ ಇದೆಯೇ? ದೆಹಲಿಯಲ್ಲಿ ಇದೆಯೋ? ಇಲ್ಲಾ ವಿದೇಶದಿಂದ ಬರಬೇಕೇ? ಇದೆಲ್ಲ ಬಿಜೆಪಿ ಅವರು ಜನರ ದಿಕ್ಕು ತಪ್ಪಿಸಲು ಮಾಡುತ್ತಿದ್ದಾರೆ. ಅವರ ಆಟ ನಡಿಯುವುದಿಲ್ಲ ಎಂದರು.

    ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವರು, ಶ್ರೀಗಳ ಆರೋಗ್ಯ ಬೇಗ ಚೇತರಿಕೆಯಾಗಲಿ ಎಂದು ನಾನು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ. ನಾನು ಕೂಡ ಹೋಗಿ ಶ್ರೀಗಳ ದರ್ಶನ ಪಡೆಯುವೆ. ಕರ್ನಾಟಕಕ್ಕೆ ನಡೆದಾಡುವ ದೇವರ ಕೊಡುಗೆ ಅಪಾರ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 6,000 ವರ್ಷದ ಇತಿಹಾಸ – ಆಂಜನೇಯನ ಮಂಗಳಾರತಿಗೆ ವಾನರ ದಂಡು

    6,000 ವರ್ಷದ ಇತಿಹಾಸ – ಆಂಜನೇಯನ ಮಂಗಳಾರತಿಗೆ ವಾನರ ದಂಡು

    ಬೀದರ್: ಕಾರ್ಗಿಲ್ ಯುದ್ದದಲ್ಲಿ ಯೋಧರು ಹೋರಾಟ ಮಾಡಿದ್ದನ್ನು ನೀವು ಕೇಳಿದ್ದೀರಿ. ಆದರೆ ಗಡಿ ಜಿಲ್ಲೆಯಲ್ಲಿ ನಿಜಾಮರಿಂದ ಹಿಂದೂಗಳ ಮೇಲೆ ದೌರ್ಜನ್ಯ, ಅತ್ಯಾಚಾರಗಳು ನಡೆಯುತ್ತಿದ್ದಾಗ ನಿಜಾಮನ ವಿರುದ್ಧ ವಾನರಗಳು ಹೋರಾಡಿದ ಇತಿಹಾಸವಿದೆ.

    ಹೌದು. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಚಾಳಕಾಪೂರ್ ಗ್ರಾಮದಲ್ಲಿರುವ ಪವಾಡ ಪುರುಷ ಆಂಜನೇಯನ ದೇವಸ್ಥಾನದಲ್ಲಿ ಚಮತ್ಕಾರ ನಡೆಯುತ್ತಿದೆ. 6 ಸಾವಿರ ವರ್ಷ ಇತಿಹಾಸವಿರುವ ಆಂಜನೇಯ ದೇವಸ್ಥಾನದಲ್ಲಿ ಪ್ರತಿ ಶನಿವಾರ ವಿಶೇಷ ಪೂಜೆ, ಮಹಾಮಂಗಳಾರತಿ ನಡೆಯುತ್ತದೆ. ಆ ಸಮಯಕ್ಕೆ ಸರಿಯಾಗಿ ನೂರಾರು ಕೋತಿಗಳು ಹಾಜರಾಗಿ ಒಗಟ್ಟು ತೋರಿಸುತ್ತವೆ.

    ಬೇರೆ ಸಮಯದಲ್ಲಿ ನೋಡಲು ಒಂದು ಮಂಗಗಳು ಸಿಗುವುದಿಲ್ಲ. ಆದರೆ ಮಹಾಮಂಗಳಾರತಿ ಸಮಯಕ್ಕೆ ಸರಿಯಾಗಿ ನೂರಾರು ಮಂಗಗಳು ಎಲ್ಲಿಂದ ಬರುತ್ತವೆ ಎಂಬುದು ಆಶ್ಚರ್ಯಕ್ಕೆ ಕಾರಣವಾಗಿದೆ. ಜೊತೆಗೆ 200 ವರ್ಷಗಳ ಹಿಂದೆ ನಿಜಾಮರ ದೌಬ್ಬಾಳಿಕೆ, ದೌರ್ಜನ್ಯ, ಅತ್ಯಾಚಾರ ನಡೆಯುತ್ತಿದ್ದಾಗ ಸಾವಿರಾರು ಮಂಗಳು ಒಟ್ಟಾಗಿ ಸೇರಿ ನಿಜಾಮರ ವಿರುದ್ಧ ಹೋರಾಡಿ ನಿಜಾಮರಿಂದ ಮುಕ್ತಿ ನೀಡುತ್ತಿದ್ದು, ಅಂದಿನಿಂದ ಹಿಂದೂಗಳು ನಿರಾಳವಾಗಿ ಬದುಕುತ್ತಿದ್ದಾರೆ ಎಂದು ಸ್ಥಳೀಯ ಭಕ್ರ ಅನೀಲ್‍ಕುಮಾರ್ ಕೋರೆ ಹೇಳಿದ್ದಾರೆ.

    ಈ ದೇವಸ್ಥಾನಕ್ಕೆ ಬಹುದೊಡ್ಡ ಇತಿಹಾಸವಿದ್ದು, ಶ್ರೀರಾಮ, ಲಕ್ಷ್ಮಣ ವನವಾಸದಲ್ಲಿ ಇರುವಾಗ ಈ ಚಳಕಾಪೂರ್ ಅರಣ್ಯದಲ್ಲಿ ವಾಸವಾಗಿದ್ದರಂತೆ. ಚಳಕಾ ದೇವಿಯ ಮಾತಿನಂತೆ ಶ್ರೀರಾಮ ಅಸುರನ್ನು ಸಂಹಾರ ಮಾಡಿದ್ದರಿಂದ “ಚಳಕಾಪೂರ್” ಎಂದು ಹೆಸರು ಬಂದಿದೆ ಎನ್ನುವ ಪ್ರತೀತಿ ಇದೆ. ಇನ್ನು ಹನುಮಂತ ಸಂಜೀನಿ ಪರ್ವತ ಅಂಗೈಯಲ್ಲಿ ತೆಗೆದುಕೊಂಡು ಹೋಗಬೇಕಾದರೆ ಒಂದು ಸಣ್ಣ ತುಂಡು ಈ ಸ್ಥಳದಲ್ಲಿ ಬಿದ್ದಿರುವ ಕಾರಣ ಇಲ್ಲಿ ಆಂಜನೇಯ ನೆಲೆಸಿದ್ದಾನೆ. ಈ ದೇವಸ್ಥಾಕ್ಕೆ ಬಂದು ಹರಕೆ ಬೇಡಿಕೊಂಡರೆ ಮನಸ್ಸಿನ ಇಷ್ಟಾರ್ಥ ದಯ ಪಾಲಿಸುತ್ತಾನೆ ಎಂಬ ನಂಬಿಕೆ ಭಕ್ತರದ್ದಾಗಿದೆ.

    ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ್ ಸೇರಿದಂತೆ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರು ಬಂದು ಪವರ್ ಫುಲ್ ಆಂಜನೇಯನ ದರ್ಶನ ಪಡೆದುಕೊಂಡು ಹೋಗುತ್ತಾರೆ. ಈ ದೇವರ ವಿಶೇಷತೆ ಜೊತೆಗೆ ಭಕ್ತರು ಮಂಗಗಳ ಪವಾಡ ನೋಡಿ ಆಶ್ಚರ್ಯಚಕಿತರಾಗಿ ಮಂಗಗಳಿಗೆ ಹಣ್ಣು, ಹಂಪಲು ನೀಡಿ ದರ್ಶನ ಪಡೆಯುತ್ತಾರೆ ಎಂದು ಭಕ್ತ ಆಕಾಶ್ ಮಾಳೆ ತಿಳಿಸಿದ್ದಾರೆ.

    ನಾವು ಹಲವಾರು ರೀತಿಯ ಪವಾಡಗಳನ್ನು ನೋಡಿದ್ದೇವೆ. ಆದರೆ ಈ ರೀತಿ ಮಂಗಗಳ ಪವಾಡ ನೋಡುತ್ತಿರುವುದು ಇದೇ ಮೊದಲು ಎನ್ನಬಹುದು. ಮಂಗಗಳಲ್ಲಿ ದೇವರು ಸ್ವರೂಪ ಇದೆ ಎನ್ನುವುದಕ್ಕೆ ಈ ದೇವಸ್ಥಾನಕ್ಕೆ ಬರುವ ಕೋತಿಗಳ ಸಮೂಹವೇ ಸಾಕ್ಷಿಯಾಗಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮುತ್ತೂಟ್ ಫೈನಾನ್ಸ್ ಗೆ ನುಗ್ಗಿ ಸಿಬ್ಬಂದಿಗೆ ಗನ್ ತೋರಿಸಿದ ದರೋಡೆಕೋರರು- ವಿಡಿಯೋ ನೋಡಿ

    ಮುತ್ತೂಟ್ ಫೈನಾನ್ಸ್ ಗೆ ನುಗ್ಗಿ ಸಿಬ್ಬಂದಿಗೆ ಗನ್ ತೋರಿಸಿದ ದರೋಡೆಕೋರರು- ವಿಡಿಯೋ ನೋಡಿ

    ಬೀದರ್: ಶನಿವಾರದಂದು ಸಿನಿಮೀಯ ರೀತಿಯಲ್ಲಿ 6 ಮಂದಿ ಮುಸುಕುಧಾರಿಗಳು ಬ್ಯಾಂಕ್ ಸಿಸಿಟಿವಿಗೆ ಸ್ಪ್ರೇ ಮಾಡಿ ದರೋಡೆಗೆ ಯತ್ನಿಸಿದ ದೃಶ್ಯಾವಳಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.

    ಜಿಲ್ಲೆಯ ಮಡಿವಾಳ ವೃತ್ತದಲ್ಲಿರುವ ಮುತ್ತೂಟ್ ಫೈನಾನ್ಸ್ ಗೆ ನುಗ್ಗಿ ದರೋಡೆ ಮಾಡಲು 6 ಮಂದಿ ಯತ್ನಿಸಿದ್ದರು. ಬೆಳಗ್ಗೆ 9 ಗಂಟೆ ಸಮಯದಲ್ಲಿ ಆಗಮಿಸಿದ್ದ ಖದೀಮರು, ಮೊದಲೇ ಪ್ಲಾನ್ ರೂಪಿಸಿಕೊಂಡು ಏಕಾಏಕಿ ಬ್ಯಾಂಕ್ ಪ್ರವೇಶ ಮಾಡಿದ್ದರು. ಇದಾದ ಬಳಿಕ ಕೆಲ ಸಮಯದಲ್ಲೇ ಬ್ಯಾಂಕ್‍ನಿಂದ ಹೊರ ಬಂದ ಆರೋಪಿಗಳು ಕಾರು ಹತ್ತಿ ಪರಾರಿಯಾಗಲು ಸಿದ್ಧರಾಗಿದ್ದರು. ಈ ವೇಳೆ ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಪೊಲೀಸರ ತಂಡ ಬ್ಯಾಂಕ್ ಮುಂದೆ ಕಾರ್ಯಾಚರಣೆ ನಡೆಸಲು ಸಿದ್ಧತೆ ನಡೆಸಿತ್ತು. ಆದರೆ ಕ್ಷಣ ಮಾತ್ರದಲ್ಲಿ ಪೊಲೀಸರನ್ನು ಕಣ್ಣು ತಪ್ಪಿಸಿದ ಖದೀಮರು ಕಾರಿನ ಸಮೇತ ಪರಾರಿಯಾಗಿದ್ದರು.

    ಈ ಘಟನೆಗೆ ಸಂಬಂಧಿಸಿದಂತೆ ಬ್ಯಾಂಕ್ ಒಳಗೆ ಖದೀಮರು ಮಾಡಿದ ದುಷ್ಕೃತ್ಯದ ವಿಡಿಯೋ ಇಂದು ಲಭ್ಯವಾಗಿದೆ. ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಫುಲ್‍ಪ್ಲಾನ್ ಮಾಡಿಕೊಂಡು, ಮುಖಕ್ಕೆ ಮಾಸ್ಕ್ ಧರಿಸಿ ಬ್ಯಾಂಕ್ ಒಳ ನುಗ್ಗಿದ ದರೋಡೆಕೋರರು ಸಿಬ್ಬಂದಿ ಗನ್ ಹಾಗೂ ಮಾರಕಾಸ್ತ್ರ ತೋರಿಸಿ ಹೆದರಿಸಿದ್ದಾರೆ. ಅಲ್ಲದೆ ಬ್ಯಾಂಕ್ ಒಳಗೆ ಬಂದಂತೆ ಅಲ್ಲಿನ ಸಿಸಿ ಕ್ಯಾಮೆರಾಗೆ ಸ್ಪ್ರೇ ಮಾಡಿ ದರೋಡೆ ಮಾಡಲು ಯತ್ನಿಸಿದ್ದಾರೆ. ದರೋಡೆಕೋರರು ಬೆದರಿಸುತ್ತಿರುವ ದೃಶ್ಯಾವಳಿಗಳು ಪಬ್ಲಿಕ್ ಟಿವಿಗೆ ದೊರಕಿದೆ.

    https://www.youtube.com/watch?v=xDwDxv7oGts

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv