Tag: bidar

  • ಅರಣ್ಯ ಇಲಾಖೆ ಕಚೇರಿ ಮುಂದೆಯೇ ಬರ್ಬರವಾಗಿ ಸಿಬ್ಬಂದಿ ಕೊಲೆಗೈದ ದುಷ್ಕರ್ಮಿಗಳು!

    ಅರಣ್ಯ ಇಲಾಖೆ ಕಚೇರಿ ಮುಂದೆಯೇ ಬರ್ಬರವಾಗಿ ಸಿಬ್ಬಂದಿ ಕೊಲೆಗೈದ ದುಷ್ಕರ್ಮಿಗಳು!

    ಬೀದರ್: ಅರಣ್ಯ ಇಲಾಖೆ ಕಚೇರಿ ಮುಂದೆಯೇ ರಾಡ್ ಮತ್ತು ಕಟ್ಟಿಗೆಯಿಂದ ಹೊಡೆದು ಓರ್ವ ಸಿಬ್ಬಂದಿಯನ್ನು ಬರ್ಬರವಾಗಿ ಕೊಲೆಗೈದ ಘಟನೆ ಬೀದರ್ ತಾಲೂಕಿನ ಶಾಪೂರ್ ಸಮೀಪದಲ್ಲಿ ನಡೆದಿದೆ.

    ಶಾಪೂರ್ ಸಮೀಪ ಅರಣ್ಯ ಇಲಾಖೆಯ ಪ್ರಭು (61) ಕೊಲೆಯಾದ ಸಿಬ್ಬಂದಿ. ದುಷ್ಕರ್ಮಿಗಳು ಇಂದು ಬೆಳಗ್ಗೆ ಈ ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ಆದರೆ ಕೊಲೆಗೆ ಸೂಕ್ತ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

    ಪ್ರಭು ಅವರು ಈ ಹಿಂದೆ ಪಶು ಇಲಾಖೆಯಲ್ಲಿ ಕೆಲಸ ಮಾಡಿ ನಿವೃತ್ತಿಯಾಗಿದ್ದರು. ಬಳಿಕ ಗುತ್ತಿಗೆ ಆಧಾರದ ಮೇಲೆ ಅರಣ್ಯ ಇಲಾಖೆಯ ನರ್ಸರಿಯಲ್ಲಿ ಕೆಲಸ ಮಾಡುತ್ತಿದ್ದರು. ಘಟನಾ ಸ್ಥಳದಲ್ಲಿ ಮೃತ ಪ್ರಭು ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ.

    ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಮಾರ್ಕೆಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತ ಎಸ್‍ಪಿ ಶ್ರೀಧರ್ ಅವರು ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ‘ಮಾನ್ಯ ಮುಖ್ಯಮಂತ್ರಿಗಳ ಸನ್ನಿಧಾನಕ್ಕೆ, ಕರ್ನಾಟಕ ಸರ್ಕಾರ’- ಸಿಎಂಗೆ ನೋವಿನ ಪತ್ರ ಬರೆದು ರೈತ ಆತ್ಮಹತ್ಯೆ

    ‘ಮಾನ್ಯ ಮುಖ್ಯಮಂತ್ರಿಗಳ ಸನ್ನಿಧಾನಕ್ಕೆ, ಕರ್ನಾಟಕ ಸರ್ಕಾರ’- ಸಿಎಂಗೆ ನೋವಿನ ಪತ್ರ ಬರೆದು ರೈತ ಆತ್ಮಹತ್ಯೆ

    ಬೆಂಗಳೂರು: ರಾಜ್ಯದಲ್ಲಿ ರೈತರ ಸಾವಿಗೆ ಕೊನೆಯೇ ಇಲ್ಲವಂತಾಗಿದ್ದು, ಶುಕ್ರವಾರವೂ ಸಹ ಮಂಡ್ಯ ಮತ್ತು ಬೀದರ್ ಜಿಲ್ಲೆಯಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಮಂಡ್ಯ ತಾಲೂಕಿನ ಕನ್ನಹಟ್ಟಿ ಗ್ರಾಮದ ಜೈಕುಮಾರ್ (43) ಸಾಲಬಾಧೆ ಮತ್ತು ಅನಾರೋಗ್ಯದಿಂದ ತಮ್ಮ ಜಮೀನಿನಲ್ಲೇ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮುನ್ನ ಮುಖ್ಯಮಂತ್ರಿಗಳ ಸನ್ನಿಧಾನಕ್ಕೆ, ಕರ್ನಾಟಕ ಸರ್ಕಾರ ಎಂದು ಡೆತ್ ನೋಟ್ ಬರೆದಿದ್ದಾರೆ.

    ಡೆತ್‍ನೋಟ್ ನಲ್ಲಿ ನಾನು ಮದುವೆಯಾಗಿ ಸುಮಾರು 15 ವರ್ಷ ಆಗಿದೆ. ರಕ್ಷಿತ್ (13) ಹಾಗೂ ರಾಜೇಶ್ (10) ಎಂಬ ಇಬ್ಬರು ಚಿಕ್ಕ ಮಕ್ಕಳಿದ್ದಾರೆ. 3 ಲಕ್ಷ ರೂಪಾಯಿ ಸಾಲವನ್ನು ಮಾಡಿದ್ದು, ಜೊತೆಗೆ 80 ಸಾವಿರ ಸಾಲ ಮಾಡಿ ವ್ಯವಸಾಯಕ್ಕೆ ಹಾಕಿದ್ದೆ. ಆದರೆ ಇಂದು ಅದು ಕೂಡ ಕೈ ಹಿಡಿಯಲಿಲ್ಲ. ನನಗೆ ಗಂಟಲು ಕ್ಯಾನ್ಸರ್ ಇದ್ದು, ವೈದ್ಯರು ಮೂರು ಲಕ್ಷ ರೂಪಾಯಿ ಹಣ ಬೇಕೆಂದು ಹೇಳಿದ್ದಾರೆ. ನಾಲ್ಕು ವರ್ಷದಿಂದ ಬರಗಾಲ ಬಂದು ಜೀವನ ನಡೆಸುವುದೇ ಕಷ್ಟವಾಗಿದೆ. ನಮ್ಮ ಕುಟುಂಬಕ್ಕೆ ಸಹಾಯಮಾಡಿ ಎಂದು ವಿನಂತಿಸಿಕೊಂಡಿದ್ದಾರೆ.

    ವಿಷಯ ತಿಳಿದ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಮುಖ್ಯಮಂತ್ರಿ ಕುಮಾರಸ್ವಾಮಿ ಬರುವವರೆಗೂ ಸ್ಥಳದಿಂದ ಮೃತದೇಹವನ್ನು ಎತ್ತುವುದಿಲ್ಲವೆಂದು ಸ್ಥಳದಲ್ಲೇ ಪಟ್ಟು ಹಿಡಿದು ಕುಳಿತ್ತಿದ್ದಾರೆ. ಅಲ್ಲದೇ ಸಿಎಂ ಅವರು ಸಂಚರಿಸುವ ಮಾರ್ಗದ ಸಮೀಪವೇ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ.

    ಘಟನಾ ಸ್ಥಳಕ್ಕೆ ತೆರಳಿದ ಮಂಡ್ಯ ಉಸ್ತುವಾರಿ ಸಚಿವ ಸಿ.ಎಸ್ ಪುಟ್ಟರಾಜು ಮೃತ ರೈತನ ಕುಟುಂಬಕ್ಕೆ ಸಾಂತ್ವಾನ ಹೇಳಿ, ವೈಯಕ್ತಿಕವಾಗಿ 5 ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ. ಅಲ್ಲದೇ ಸರ್ಕಾರದಿಂದ ಬರಬಹುದಾಗಿರುವ ಪರಿಹಾರಗಳನ್ನು ಕೊಡಿಸುವ ಬಗ್ಗೆ ಭರವಸೆ ನೀಡಿದ್ದರಿಂದ ಕುಟುಂಬಸ್ಥರು ರೈತನ ಶವಪರೀಕ್ಷೆಗೆ ಒಪ್ಪಿಗೆ ಸೂಚಿಸಿದ್ದಾರೆ.

    ಬೀದರ್ ತಾಲೂಕಿನ ಬಸಂತಪುರ ಗ್ರಾಮದ ರೈತ ಶಿವರಾಜ್ (45) ಸಾಲಕ್ಕೆ ಹೆದರಿ, ಯಾರು ಇಲ್ಲದ ವೇಳೆ ತಮ್ಮ ಹೊಲದಲ್ಲಿಯೇ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಶಿವರಾಜ್ ಡಿಸಿಸಿ ಬ್ಯಾಂಕ್ ಸೇರಿದಂತೆ ವಿವಿಧ ಬ್ಯಾಂಕುಗಳಲ್ಲಿ 50 ಸಾವಿರ ರೂಪಾಯಿ ಸಾಲವನ್ನು ಮಾಡಿಕೊಂಡಿದ್ದರು. ಬೆಳೆ ಇಲ್ಲದೇ, ಸಾಲ ಮರುಪಾವತಿ ಮಾಡಲಾಗದೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನೆ ಸಂಬಂಧ ಜನವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    https://www.youtube.com/watch?v=Wz8MLiz9Q70

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಹಳೆಯ ದ್ವೇಷಕ್ಕೆ ರೈತನ 3 ಹಸುಗಳಿಗೆ ಕಿಡಿಗೇಡಿಗಳಿಂದ ವಿಷ

    ಹಳೆಯ ದ್ವೇಷಕ್ಕೆ ರೈತನ 3 ಹಸುಗಳಿಗೆ ಕಿಡಿಗೇಡಿಗಳಿಂದ ವಿಷ

    ಬೀದರ್: ಹಳೆಯ ದ್ವೇಷದ ಹಿನ್ನೆಲೆ ಕಿಡಿಗೇಡಿಗಳು ರೈತರೊಬ್ಬರ ಮೂರು ಹಸುಗಳಿಗೆ ವಿಷ ಹಾಕಿ ಅಮಾನವೀಯತೆ ಮೆರೆದ ಘಟನೆ ಬೀದರ್ ನಲ್ಲಿ ನಡೆದಿದೆ.

    ವಿಷ ತಿಂದ ಹಸುಗಳು ಜಿಲ್ಲೆಯ ಔರಾದ್ ಪಟ್ಟಣದ ಗೋವಿಂದ ರೆಡ್ಡಿಗೆ ಸೇರಿದ್ದಾಗಿವೆ. ಯಾರೋ ಕಿಡಿಗೇಡಿಗಳು ಗೋವಿಂದ ಅವರ ಮೂರು ಹಸುಗಳಿಗೆ ವಿಷ ಹಾಕಿದ್ದಾರೆ. ವಿಷ ಹಾಕಿದ ಪರಿಣಾಮ ಮೂಕ ಪ್ರಾಣಿಗಳು ನರಳಿ ನರಳಿ ಕೊನೆಯುಸಿರೆಳೆದಿವೆ.

    ಬಸ್ ಸ್ಟ್ಯಾಂಡ್ ಹಿಂದಿನ ರಸ್ತೆ ಪಕ್ಕದಲ್ಲಿ ಹಸುಗಳಿಗೆ ಮೇವು ಹಾಕಲಾಗಿತ್ತು. ಆದರೆ ತಡರಾತ್ರಿ ಅಪರಿಚಿತರು ಮೇವಿನಲ್ಲಿ ಕ್ರಿಮಿನಾಶಕ ವಿಷ ಬೆರೆಸಿ ಹಸುಗಳ ಸಾವಿಗೆ ಕಾರಣರಾಗಿದ್ದಾರೆ. ತೀವ್ರ ಅಸ್ವಸ್ಥರಾದ ಹಸುಗಳಿಗೆ ಸ್ಥಳೀಯ ಪಶು ವೈದ್ಯರು ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಹಸುಗಳು ಮತಪಟ್ಟಿದೆ.

    ಸದ್ಯ ಘಟನೆ ನಂತರ ಸ್ಥಳಕ್ಕೆ ತಹಶೀಲ್ದಾರ್ ಚಂದ್ರಶೇಖರ್ ಅವರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಲಕ್ಷಾಂತರ ಮೌಲ್ಯದ ಸಾಕು ಹಸುಗಳನ್ನು ಕಳೆದುಕೊಂಡು ಕಂಗಾಲಾದ ಗೋವಿಂದ ರೆಡ್ಡಿ ಅವರು ಔರಾದ್ ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಪೊಲೀಸರ ಮೇಲೆಯೇ ವಾಹನ ಹರಿಸಲು ಮುಂದಾದ ಗಾಂಜಾ ಆರೋಪಿಗಳು!

    ಪೊಲೀಸರ ಮೇಲೆಯೇ ವಾಹನ ಹರಿಸಲು ಮುಂದಾದ ಗಾಂಜಾ ಆರೋಪಿಗಳು!

    ಬೀದರ್: ಅಕ್ರಮ ಗಾಂಜಾ ಸಾಗಾಟದ ಹಿನ್ನೆಲೆಯಲ್ಲಿ ವಾಹನ ತಪಾಸಣೆ ನಡೆಸಲು ಮುಂದಾದಗ ಪೊಲೀಸರ ಮೇಲೆಯೇ ಆರೋಪಿಗಳು ವಾಹನವನ್ನು ಹತ್ತಿಸಲು ಯತ್ನ ಮಾಡಿ ಪರಾರಿಯಾಗಿರುವ ಘಟನೆ ತಾಲೂಕಿನ ಬೆನಕನಹಳ್ಳಿ ರಸ್ತೆಯಲ್ಲಿ ನಡೆದಿದೆ.

    ಜಂಬಗಿಯಿಂದ ಬೀದರ್ ಮಾರ್ಗವಾಗಿ ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ, ಬೀದರ್ ಗ್ರಾಮಾಂತರ ಪೊಲೀಸರು ಬೆನಕನಹಳ್ಳಿ ರಸ್ತೆಯಲ್ಲಿ ಎಲ್ಲಾ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಬೆಂಗಳೂರು ನೊಂದಣಿ ಹೊಂದಿದ್ದ ಕಾರಿನ ಮೂಲಕ ಇಬ್ಬರು ಗಾಂಜಾ ಆರೋಪಿಗಳು ಅದೇ ಮಾರ್ಗವಾಗಿ ಬಂದಿದ್ದಾರೆ. ಪೊಲೀಸರು ತಪಾಸಣೆ ನಡೆಸಲು ಮುಂದಾಗುತ್ತಿದ್ದಂತೆ, ಆರೋಪಿಗಳು ಪೊಲೀಸರ ಮೇಲೆಯೇ ಕಾರನ್ನು ನುಗ್ಗಿಸಲು ಯತ್ನಿಸಿ ಪರಾರಿಯಾಗಿದ್ದಾರೆ.

    ಕೂಡಲೇ ಎಚ್ಚೆತ್ತ ಪೊಲೀಸರ ಸಿನಿಮೀಯ ರೀತಿಯಲ್ಲಿ ಆರೋಪಿಗಳಿದ್ದ ಕಾರನ್ನು ಚೇಸ್ ಮಾಡಿದ್ದಾರೆ. ಆದರೆ ಪೊಲೀಸರು ಹಿಂದಿನ ಚೇಸ್ ಮಾಡುತ್ತಿದ್ದಾರೆ ಎನ್ನುವ ವಿಚಾರ ತಿಳಿದ ಆರೋಪಿಗಳು, ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಕಾರು ಇರುವ ಸ್ಥಳಕ್ಕೆ ಬಂದ ಪೊಲೀಸರು, ಕಾರಿನಲ್ಲಿದ್ದ ಸುಮಾರು 25 ಕೆಜಿ ತೂಕದ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಕೊಂಡಿದ್ದಾರೆ.

    ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ವರಿಷ್ಠಾಧಿಕಾರಿ ಶ್ರೀಧರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪರಾರಿಯಾಗಿರುವ ಆರೋಪಿಗಳಿಗಾಗಿ ಪೊಲೀಸರು ತೀವ್ರ ಶೋಧಕಾರ್ಯ ನಡೆಸಿದ್ದಾರೆ. ಘಟನೆ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಎಸಿಬಿಯನ್ನು ರಾಜ್ಯ ಸರ್ಕಾರ ದುರ್ಬಳಕೆ ಮಾಡಿಕೊಳ್ತಿದೆ: ಬಿಎಸ್‍ವೈ

    ಎಸಿಬಿಯನ್ನು ರಾಜ್ಯ ಸರ್ಕಾರ ದುರ್ಬಳಕೆ ಮಾಡಿಕೊಳ್ತಿದೆ: ಬಿಎಸ್‍ವೈ

    ಬೀದರ್: ಗಾಲಿ ಜನಾರ್ದನ ರೆಡ್ಡಿಯವರ ಪ್ರಕರಣದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಎಸಿಬಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಪರೋಕ್ಷವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.

    ನಗರದ ಬಿಜೆಪಿ ಕಚೇರಿಯಲ್ಲಿ ಪದಾಧಿಕಾರಿಗಳ ಸಭೆಯ ಉದ್ಘಾಟನೆಗೆ ಆಗಮಿಸಿದ್ದ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ರೆಡ್ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಯಾವುದೇ ಪ್ರತಿಕ್ರಿಯೆ ನೀಡಲು ಸಿದ್ಧನಿಲ್ಲ. ಪ್ರಕರಣಕ್ಕೆ ಸಂಬಂಧ ತನಿಖೆಯಾಗಿ ಸತ್ಯಾಂಶ ಹೊರಗೆ ಬರಲಿ, ಅದಕ್ಕೆ ಸಂಬಂಧಿಸಿದಂತೆ ನಾನು ಯಾವುದೇ ಟೀಕೆ ಮಾಡಲ್ಲ. ಆದರೆ ಒಟ್ಟಾರೆಯಾಗಿ ಹೇಳಬೇಕೆಂದರೇ ರಾಜ್ಯ ಸರ್ಕಾರ ಎಸಿಬಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸುವ ಮೂಲಕ ಪರೋಕ್ಷವಾಗಿ ರೆಡ್ಡಿ ಪರ ಮಾತನಾಡಿದ್ದಾರೆ.

    ಇದೇ ವೇಳೆ ಟಿ.ಬಿ.ಜಯಚಂದ್ರರ ವಿವಾದಾತ್ಮಕ ಹೇಳಿಕೆ ಕುರಿತು ಮಾತನಾಡಿ, ಈ ಕೂಡಲೇ ಪ್ರಧಾನಿ ನರೇಂದ್ರ ಮೋದಿಯವರ ಬಳಿ ಜಯಚಂದ್ರ ಕ್ಷಮೆ ಕೇಳಬೇಕು. ಒಂದು ವೇಳೆ ಕ್ಷಮೆ ಕೇಳದಿದ್ದರೆ, ಮಾನನಷ್ಟ ಮೊಕದ್ದಮೆ ಹೂಡಲಾಗುವುದು. ಈಗಾಗಲೇ ಈ ಬಗ್ಗೆ ಸೋಮವಾರ ಬೆಂಗಳೂರಿನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಕರೆಯಲಾಗಿದೆ. ಸಭೆಯಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆಂದು ತಿಳಿಸಿದರು.

     

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಕೂಲಿ ಕಾರ್ಮಿಕ ಆತ್ಮಹತ್ಯೆಗೆ ಶರಣು

    ಕೂಲಿ ಕಾರ್ಮಿಕ ಆತ್ಮಹತ್ಯೆಗೆ ಶರಣು

    ಬೀದರ್: ಸಾಲಬಾಧೆಯಿಂದ ಮನನೊಂದು ಕೂಲಿ ಕಾರ್ಮಿಕನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಔರಾದ್ ತಾಲೂಕಿನ ಬರ್ಗಾನ್ ತಾಂಡದಲ್ಲಿ ನಡೆದಿದೆ.

    ರಾಮ್‍ರಾವ್ ರಾಥೋಡ್ (37) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ರಾಮ್‍ರಾವ್ ಖಾಸಗಿಯಾಗಿ ಸಾಲ ಮಾಡಿಕೊಂಡು ಅದನ್ನು ಮರುಪಾವತಿ ಮಾಡಲಾದಗೆ ಕಷ್ಟಪಡುತ್ತಿದ್ದರು. ಸಾಲಬಾಧೆಯಿಂದ ಬೇಸತ್ತ ಕಾರ್ಮಿಕ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

    ರಾಥೋಡ್ ಸಾವಿನಿಂದ ಮನನೊಂದಿರುವ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಈ ಕುರಿತು ಸಂತಪೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವ ಖಾಶಂಪೂರ್ ಫುಲ್ ಕ್ಲಾಸ್

    ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವ ಖಾಶಂಪೂರ್ ಫುಲ್ ಕ್ಲಾಸ್

    ಬೀದರ್: ಕಳೆದ ಬಾರಿಯ ಕೆಡಿಪಿ ಸಭೆಯಲ್ಲಿ ಕೇಳಿದ್ದ ಮಾಹಿತಿ ನೀಡದ್ದಕ್ಕೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶಂಪೂರ್ ಅವರು ಹಿಗ್ಗಾಮಗ್ಗಾ ತರಾಟೆ ತೆಗೆದುಕೊಂಡಿದ್ದಾರೆ.

    ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳಿಗೆ ಬೀದರ್‍ನ ಹೇಳಿಕೆಗಾಗಿ ಒಬ್ಬ ಏನಾದರೂ ಬಂದಿದ್ದಿರಾ? ಕಾಟಾಚಾರಕ್ಕೆ ಯಾಕೆ ಕೆಲಸ ಮಾಡುತ್ತಿದ್ದಿರಿ. ನಮ್ಮ ಬೀದರ್ ಅನ್ನು ಉದ್ಧಾರ ಮಾಡೋಕೆ ಏನ್‍ಬೇಕು ಎಂದು ಒಬ್ಬ ಆಫೀಸರ್ ಎದ್ದು ಹೇಳಿ. ನಾನು ಕರೆದಾಗ ಬರೋದಲ್ಲ. ನೀವು ನನ್ನ ಬಳಿ ಎಂದಾದರೂ ಚರ್ಚೆ ಮಾಡಿದ್ದೀರಾ? ಏನ್ ತಿಳ್ಕೊಂದ್ದಿರಾ ನೀವು ಸರ್ಕಾರ ಅದ್ರೆ ಏನು? 14 ರಂದು ಮುಖ್ಯಮಂತ್ರಿಗಳು ಬರುತ್ತಾರೆ. ಸ್ಪೆಷಲ್ ಪ್ಯಾಕೇಜ್ ಕೊಡಬೇಕು ಅಂದುಕೊಂಡಿದ್ದೇವೆ. ನಿಮ್ಮನ್ನು ಕಟ್ಕೊಂಡು ನಾವು ಯಾವ ಪ್ಯಾಕೇಜ್ ಮಾಡುವುದು. ಬೈದ್ರೆ ಕೈ ಕಟ್ಟಿಕೊಂಡು ನಿಲ್ಲೋದು ಮಾತ್ರ ಗೊತ್ತು ಎಂದು ವಾಗ್ದಾಳಿ ನಡೆಸಿದರು.

    ಜನರು ನಮ್ಮ ಮೇಲೆ ನಿರೀಕ್ಷೆಯನ್ನು ಇಟ್ಟಿರುತ್ತಾರೆ. ಯಾವ ಅಧಿಕಾರಿ ಕೆಲಸ ಮಾಡುವುದಿಲ್ಲವೋ ಅವರನ್ನು ಮುಲಾಜು ಇಲ್ಲದೇ ತೆಗೆದು ಹಾಕುತ್ತೇನೆ ಎಂದು ಹೇಳಿ ಬಂಡೆಪ್ಪ ಖಾಶಂಪೂರ್ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

    ಅಧಿಕಾರಿಗಳಿಗೆ ಸಚಿವರು ಪುಲ್‍ಕ್ಲಾಸ್ ತೆಗೆದುಕೊಳ್ಳುತ್ತಿದ್ದರೂ ಕೆಲ ಅಧಿಕಾರಿಗಳು ಮಾತ್ರ ಇದಕ್ಕೂ ನಮಗೂ ಸಂಬಂಧ ಇಲ್ಲ ಎನ್ನುವಂತೆ ಸಭೆಯ ಒಳಗಡೆ ಮೊಬೈಲ್ ನಲ್ಲಿ ಬ್ಯುಸಿಯಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಾನು ಸೊಂಟ ಮುಟ್ಟಿಲ್ಲ, ಅದು ಫೋಟೋ ಶೂಟ್ ಅಷ್ಟೇ- ಐಶ್ವರ್ಯ ಆರೋಪಕ್ಕೆ ಚೇತನ್ ತಿರುಗೇಟು

    ನಾನು ಸೊಂಟ ಮುಟ್ಟಿಲ್ಲ, ಅದು ಫೋಟೋ ಶೂಟ್ ಅಷ್ಟೇ- ಐಶ್ವರ್ಯ ಆರೋಪಕ್ಕೆ ಚೇತನ್ ತಿರುಗೇಟು

    ಬೀದರ್: ಶೂಟಿಂಗ್ ವೇಳೆ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪ ಮಾಡಿದ್ದ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಆರೋಪಕ್ಕೆ ಇಂದು ನಟ ಚೇತನ್ ತಿರುಗೇಟು ನೀಡಿದ್ದಾರೆ.

    ಚೇತನ್ ಬೀದರ್ ಅಲೆಮಾರಿ ಜನಾಂಗದ ಮೂಲಭೂತ ಸೌಕರ್ಯದ ಬಗ್ಗೆ ತಿಳಿದುಕೊಳ್ಳಲು ಬಂದಿದ್ದರು. ಈ ವೇಳೆ ಚೇತನ್ ಪಬ್ಲಿಕ್ ಟಿವಿ ಜೊತೆ ಮಾತನಾಡಿ ಮೀಟೂ ಬಗ್ಗೆ ಪ್ರತಿಕ್ರಿಯೆ ನೀಡಿದರು. ನಾನು ಐಶ್ವರ್ಯ ಸೊಂಟ ಮುಟ್ಟಿಲ್ಲ, ಅದು ಫೋಟೋ ಶೂಟ್ ಅಷ್ಟೇ. ಸರ್ಜಾ ಅವರೇ ಅದನ್ನು ನಿರ್ವಹಣೆ ಮಾಡಿದ್ದರು ಎಂದರು. ಇದನ್ನೂ ಓದಿ: ಚೇತನ್ ವಿರುದ್ಧ ಐಶ್ವರ್ಯ ಸರ್ಜಾ ಮೀಟೂ ಬಾಂಬ್ – ಆಡಿಯೋ ಕೇಳಿ

    ನಾನು ಊಟಕ್ಕೆ ಕರೆದಿದ್ದೇನೆ ಎಂದು ಐಶ್ವರ್ಯ ಹೇಳಿದ್ದಾರೆ. ಆದರೆ ನಾನು ಅವರನ್ನು ಊಟಕ್ಕೆ ಕರೆದೇ ಇಲ್ಲ. ಅವರ ತಂದೆ ಅರ್ಜುನ್ ಸರ್ಜಾ ಅವರೇ ಮನೆಗೆ ಊಟಕ್ಕೆ ಬನ್ನಿ ಎಂದು ಕರೆದಿದ್ದರು. ಐಶ್ವರ್ಯ ಅವರ ಈ ರೀತಿಯ ಹೇಳಿಕೆಯಿಂದ ಸರ್ಜಾ ಕುಟುಂಬದ ಘನತೆ ಕಡಿಮೆಯಾಗುತ್ತಿದೆ ಎಂದು ಹೇಳಿದರು.

    ಮೀಟೂ ಒಂದು ಸೀರಿಯಸ್ ವಿಷಯ. ಎಲ್ಲಾ ವರ್ಗದಲ್ಲಿ ಮೀಟೂ ದೌರ್ಜನ್ಯವಾಗಿದೆ. ಅದಕ್ಕೆ ನಾನು ಮಹಿಳೆಯರಿಗೆ ನ್ಯಾಯ ಒದಗಿಸಲು ಫೈರ್ ಸಂಸ್ಥೆಯನ್ನು ಕಟ್ಟಿದ್ದು ಎಂದು ಚೇತನ್ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಗೆ ಖಾರವಾಗಿ ತಿರುಗೇಟು ನೀಡಿದರು.

    ಐಶ್ವರ್ಯ ಆರೋಪವೇನು?
    ನಟ ಚೇತನ್ ನನ್ನನ್ನು ಊಟಕ್ಕೆ ಕರೆದಿದ್ದರು. ಅಲ್ಲದೇ ಪ್ರೇಮ ಬರಹ ಸಿನಿಮಾ ವೇಳೆ ನಟ ಚೇತನ್ ರೊಂದಿಗೆ ಫೋಟೋ ಶೂಟ್, ವರ್ಕ್ ಶಾಪ್ ಮಾಡಲಾಗಿತ್ತು. ಈ ವೇಳೆ ಚೇತನ್ ನನ್ನ ಬೆನ್ನು ಮುಟ್ಟಿದ್ದರು, ಅಲ್ಲದೇ ಊಟಕ್ಕೂ ಕರೆದಿದ್ದರು. ಇದನ್ನು ಲೈಂಗಿಕ ಶೋಷಣೆ ಎಂದು ಕರೆಯಬಹುದುಲ್ಲವೇ ಎಂದು ಪ್ರಶ್ನೆ ಮಾಡಿದ್ದರು.

    https://www.youtube.com/watch?v=p-XbtCRr48o

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪುಟ್ಟಗೌರಿ ಖ್ಯಾತಿಯ ನಟಿ ರಂಜನಿಯಿಂದ ಎಡವಟ್ಟು

    ಪುಟ್ಟಗೌರಿ ಖ್ಯಾತಿಯ ನಟಿ ರಂಜನಿಯಿಂದ ಎಡವಟ್ಟು

    ಬೀದರ್: ಬಸವಣ್ಣನ ಕರ್ಮಭೂಮಿಯಲ್ಲಿ ನಡೆದ ಕಲ್ಯಾಣ ಪರ್ವ ಕಾರ್ಯಕ್ರಮದಲ್ಲಿ ಪಾದರಕ್ಷೆ ಹಾಕಿಕೊಂಡು ವೇದಿಕೆ ಏರಿ ಪುಟ್ಟಗೌರಿ ಧಾರವಾಹಿ ಖ್ಯಾತಿಯ ನಾಯಕಿ ರಂಜನಿ ರಾಘವನ್ ಎಡವಟ್ಟು ಮಾಡಿಕೊಂಡಿದ್ದಾರೆ.

    ಇಂದು ಬಸವಣ್ಣನ ಕರ್ಮ ಭೂಮಿ ಬಸವಕಲ್ಯಾಣದಲ್ಲಿ 17ನೇ ಕಲ್ಯಾಣ ಪರ್ವ ಕಾರ್ಯಕ್ರಮ ನಡೆಯುತ್ತಿತ್ತು. ಈ ಕಾರ್ಯಕ್ರದಲ್ಲಿ ಕಲ್ಯಾಣ ಪರ್ವ ಪವಿತ್ರ ವೇದಿಕೆಯಲ್ಲಿ ಬಸವ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಸೇರಿದಂತೆ ಶರಣರು ಇದ್ದರು. ಆದರೆ ಈ ವೇದಿಕೆಯ ಮೇಲೆ ಪುಟ್ಟಗೌರಿ ಖ್ಯಾತಿಯ ರಂಜನಿ ರಾಘವನ್ ಚಪ್ಪಲಿ ಹಾಕಿಕೊಂಡು ಹೋಗಿ ಎಡವಟ್ಟು ಮಾಡಿಕೊಂಡಿದ್ದಾರೆ.

    ರಂಜನಿ ಕಲ್ಯಾಣ ಪರ್ವ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ಮಹಿಳಾ ಪೊಲೀಸರು ಮತ್ತು ಶರಣರು ಅವರನ್ನು ವೇದಿಕೆಯ ಮೇಲೆ ಕರೆದುಕೊಂಡು ಬರುತ್ತಿದ್ದರು. ವೇದಿಕೆಯ ಮೆಟ್ಟಿಲು ವರೆಗೂ ಪೊಲೀಸರು ಬಂದಿದ್ದಾರೆ. ಆದರೆ ಅಲ್ಲಿಂದ ಪೊಲೀಸರು ಬಂದಿಲ್ಲ. ಬಳಿಕ ರಂಜನಿ ಅವರು ಪಾದರಕ್ಷೆಯ ಸಮೇತ ವೇದಿಕೆಯ ಮೇಲೆ ಹೋಗಿದ್ದಾರೆ.

    ಅಷ್ಟೇ ಅಲ್ಲದೇ ರಂಜನಿ ಅವರ ಕೈಯಿಂದ ವೇದಿಕೆಯ ಮೇಲಿದ್ದವರಿಗೆ ಹಾರ ಹಾಕಿಸಲು ಶರಣರು ಮುಂದಾಗಿದ್ದರು. ಈ ಸಂದರ್ಭದಲ್ಲಿ ಅವರು ಹಾರ ಹಾಕಲು ಮುಂದಾಗುತ್ತಿದ್ದರು. ಆಗ ಅವರ ಪಕ್ಕದಲ್ಲಿದ್ದರು ಬಂದು ಪಾದರಕ್ಷೆ ಬಿಡುವಂತೆ ಸೂಚಿಸಿದ್ದಾರೆ. ಬಳಿಕ ರಂಜನಿಯವರು ಪಾದರಕ್ಷೆಯನ್ನು ಬಿಟ್ಟು ವೇದಿಕೆಯ ಮೇಲೆ ಆಸೀನರಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ತೆಂಗಿನಕಾಯಿ ಕಟ್ಟಿದ್ರೆ ಸಂತಾನಭಾಗ್ಯ- ಬೀದರ್ ನ ಚಳಕಾಪುರದಲ್ಲಿ ಹನುಮಂತನ ಪವಾಡ

    ತೆಂಗಿನಕಾಯಿ ಕಟ್ಟಿದ್ರೆ ಸಂತಾನಭಾಗ್ಯ- ಬೀದರ್ ನ ಚಳಕಾಪುರದಲ್ಲಿ ಹನುಮಂತನ ಪವಾಡ

    ಬೀದರ್: ಸುಮಾರು 5 ಸಾವಿರ ವರ್ಷಗಳ ಇತಿಹಾಸವಿರುವ ಹನುಮಾನ್ ದೇವಸ್ಥಾನದಲ್ಲಿ ಹಲವು ವಿಸ್ಮಯಗಳು ನಡೆಯುತ್ತಿವೆ. ಎಲ್ಲಾ ದೇವಸ್ಥಾನಗಳು ದಕ್ಷೀಣಾಮುಖಿವಾಗಿ ಇದ್ರೆ ಈ ದೇವಸ್ಥಾನ ಮಾತ್ರ ಉತ್ತರಾಭಿಮುಖಿವಾಗಿರುವುದು ಒಂದು ವಿಶೇಷವಾಗಿದೆ. ಇಲ್ಲಿಗೆ ಹನುಮಂತ ಮತ್ತು ಲಕ್ಷ್ಮಣ ಬಂದ ಪ್ರತೀತಿ ಇದೆ. ಈ ಹನುಮಾನ್ ಎಂದ್ರೆ ಈ ತೆಂಗಿನ ಕಾಯಿ ಪವಾಡ ಎಂದು ಖ್ಯಾತವಾಗಿದೆ.

    ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಚಳಕಾಪೂರ ಗ್ರಾಮದಲ್ಲಿರುವ ಈ ಉತ್ತಾರಾಭಿಮುಖಿ ಹನುಮಾನ್ ದೇವಸ್ಥಾನಕ್ಕೆ ಮಕ್ಕಳಾಗದ ಮಹಿಳೆಯರು ಬಂದು ದೇವಾಲಯದ ಗೋಡೆ ಮೇಲೆ ತೆಂಗಿನಕಾಯಿ ಕಟ್ಟಿದ್ರೆ ಮಕ್ಕಳಾಗುತ್ತವೆ ಎಂಬ ನಂಬಿಕೆಯಿದೆ. ಇದರ ಒಳಿತನ್ನು ಕಂಡವರೂ ಇದ್ದಾರೆ.

    ಇದಕ್ಕೆ ಸುಮಾರು 5 ಸಾವಿರ ವರ್ಷಗಳ ಇತಿಹಾಸವಿದೆ. ಇಲ್ಲಿಗೆ ಬರುವ ಭಕ್ತರು ಕಷ್ಟವನ್ನು ಹೇಳಿಕೊಂಡು ತೆಂಗಿನ ಕಾಯಿ ಕಟ್ಟುತ್ತಾರೆ. ಕಷ್ಟ ಪರಿಹಾರವಾದ ಮೇಲೆ ತೆಂಗಿನಕಾಯಿಯನ್ನು ಬಿಚ್ಚಿಕೊಂಡು ಹೋಗ್ತಾರೆ ಅಂತ ಭಕ್ತರಾದ ವಿಮಲಾಬಾಯಿ ಹೇಳಿದ್ದಾರೆ.

    ಈ ಗ್ರಾಮಕ್ಕೆ ಚಳಕಾಪೂರ ಎಂದು ಹೇಸರು ಬರಲೂ ಒಂದು ಕಾರಣವಿದೆ. ಈ ಹಿಂದೆ “ಚಾಳಕಾದೇವಿ” ಎಂಬ ರಾಮನ ಭಕ್ತೆ ಇಲ್ಲಿ ವಾಸವಿದ್ದಳಂತೆ. ಆಕೆಯ ಪತಿ “ಚಳಕಾಸುರ್” ಎಂಬ ರಾಕ್ಷಸನ ಅಟ್ಟಹಾಸ ಜೋರಾಗಿದ್ದಾಗ ರಾಮನಿಂದ ಆ ರಾಕ್ಷಸನ ವಧೆಯಾಗಿತ್ತಂತೆ. ಹೀಗಾಗಿ ಇದಕ್ಕೆ ಚಳಕಾಪುರ ಎಂಬ ಹೆಸ್ರು ಬಂದಿದೆ. ಇನ್ನು ಇಲ್ಲಿನ ಹನುಮಂತ ಉದ್ಭವ ಮೂರ್ತಿಯಾಗಿದ್ದು, ದೇವಸ್ಥಾನದ ಪಕ್ಕದಲೇ ಒಂದು ಗುಡ್ಡವಿದ್ದು ಅದನ್ನು ಸಂಜೀವಿನಿ ಪರ್ವತ ಎಂದು ಕರೆಯಲಾಗುತ್ತೆ ಅಂತ ಭಕ್ತರಾದ ಮೇಘಾ ಕುಲಕರ್ಣಿ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv