Tag: bidar

  • ರಾತ್ರಿ ವೇಳೆ ರೈತನ ಜಮೀನು ಕಾಯುತ್ತಿವೆ ಬಿಯರ್ ಬಾಟಲ್‍ಗಳು!

    ರಾತ್ರಿ ವೇಳೆ ರೈತನ ಜಮೀನು ಕಾಯುತ್ತಿವೆ ಬಿಯರ್ ಬಾಟಲ್‍ಗಳು!

    ಬೀದರ್: ಬಿಯರ್ ಎಂದ್ರೆ ಸಾಕು ಮದ್ಯ ಪ್ರಿಯರಿಗೆ ಅರ್ಧ ನಶೆ ಏರುತ್ತದೆ. ಮದ್ಯ ಖಾಲಿಯಾದರೆ ಬಾಟಲ್‍ನನ್ನು ಎಲ್ಲಂದರಲ್ಲಿ ಎಸೆಯುತ್ತಾರೆ. ಆದರೆ ಇದೇ ಬಾಟಲ್‍ಗಳು ಬೀದರ್ ರೈತರೊಬ್ಬರ ಜಮೀನನ್ನು ಕಾಯುತ್ತಿವೆ.

    ಔರಾದ್ ತಾಲೂಕಿನ ನಾಗೂರ ಗ್ರಾಮದ ರೈತ ಶಿವರಾಜ ಸಾಗರ್ ಅವರು ಇಂತಹ ವಿನೂತನ ಪ್ರಯೋಗದ ಮೂಲಕ ಬೆಳೆಯನ್ನು ರಕ್ಷಣೆ ಮಾಡಿಕೊಳ್ಳುತ್ತಿದ್ದಾರೆ. ರಾತ್ರಿ ವೇಳೆ ಜಮೀನಿಗೆ ನುಗ್ಗುತ್ತಿದ್ದ ಕಾಡು ಹಂದಿ, ಜಿಂಕೆ ಹಾಗೂ ತೋಳಗಳು ಬೆಳೆ ಹಾಳು ಮಾಡುತ್ತಿದ್ದವು. ಇದನ್ನು ತಡೆಯುವ ಉದ್ದೇಶದಿಂದ ಶಿವರಾಜ ಸಾಗರ್ ಈ ರೀತಿ ಉಪಾಯ ಕಂಡುಕೊಂಡಿದ್ದಾರೆ.

    ಏನಿದು ಉಪಾಯ?
    ಜಮೀನಿನ ಸುತ್ತ ಹಾಗೂ ಮಧ್ಯದಲ್ಲಿ ಇರುವ ಮರಗಳಿಗೆ ನೇತಾಡುವಂತೆ ಎರಡು-ಮೂರು ಬಿಯರ್ ಬಾಟಲ್‍ಗಳನ್ನು ಜೋಡಿಸಿ ನೇತಾಡುವಂತೆ ಕಟ್ಟಿದ್ದಾರೆ. ಗಾಳಿ ಬೀಸಿದರೆ ಬಾಟಲ್‍ಗಳು ಒಂದಕ್ಕೊಂದು ಬಡಿದು ಒಂದು ರೀತಿಯ ಶಬ್ದವನ್ನು ಹೊಮ್ಮಿಸುತ್ತವೆ. ಇದರಿಂದಾಗಿ ಜಮೀನಿನಲ್ಲಿ ಯಾರೋ ಇದ್ದಾರೆ ಅಂತಾ ಪ್ರಾಣಿಗಳು ಹೆದರಿ, ಅಲ್ಲಿಂದ ಓಡುತ್ತವೆ.

    ಸಿಂದಗಿ ಭಾಗದ ನಾಗೂರ, ಬೋರ್ಗಿ, ಜೋಜನಾ, ಚಟನಳ್ಳಿ, ಜಿರಗಾ, ಮುಸ್ತಾಪುರ, ಪಾಷಾಪುರ ಹಾಗೂ ಕೌಡಗಾಂವ್ ಗ್ರಾಮಗಳ ಜಮೀನುಗಳಿಗೆ ಕಾಡು ಹಂದಿ, ಜಿಂಕೆ, ಮಂಗ ಹಾಗೂ ಹಕ್ಕಿಗಳ ಕಾಟ ಹೆಚ್ಚಾಗುತ್ತಿದೆ. ಅದರಲ್ಲೂ ಮುಂಗಾರಿನ ಹೆಸರು, ಉದ್ದು, ಜೋಳ, ತೊಗರಿ, ಸೋಯಾಬಿನ್ ಬೆಳೆಗಳನ್ನು ರಾತ್ರಿ ವೇಳೆ ರಕ್ಷಣೆ ಮಾಡಿಕೊಳ್ಳುವುದೇ ಕಷ್ಟವಾಗಿತ್ತು.

    ಜಿಂಕೆ ಹಾಗೂ ಕಾಡು ಹಂದಿ ಹಾವಳಿ ತಡೆಯಲು ಈ ಮೊದಲು ರೈತರು ಜಮೀನಿನ ಸುತ್ತ ಮುಳ್ಳಿನ ಬೇಲಿ ಹಾಕುತ್ತಿದ್ದರು. ಆದರೂ ಬೆಳೆ ರಕ್ಷಣೆ ಕಷ್ಟವಾಗಿತ್ತು. ಅಷ್ಟೇ ಅಲ್ಲದೆ ಇತ್ತೀಚಿನ ದಿನಗಳಲ್ಲಿ ಮುಳ್ಳಿನ ಕಂಟಿ ಕೂಡ ಸಿಗುತ್ತಿಲ್ಲ. ಇದನ್ನು ಅರಿತ ರೈತ ಶಿವರಾಜ ಅವರು ಡಾಬಾ, ಹೋಟೆಲ್ ಹಾಗೂ ಬಾರ್ ಗಳಲ್ಲಿ ಸಿಗುವ ಖಾಲಿ ಬಿಯರ್ ಬಾಟಲ್‍ಗಳನ್ನು ತಂದಿದ್ದಾರೆ. ಮೊದಲು ಪ್ರಾಯೋಗಿಕವಾಗಿ ಎರಡು ಬಾಟಲ್‍ಗಳನ್ನು ಮರಕ್ಕೆ ನೇತುಬಿಟ್ಟು ಕಟ್ಟಿದ್ದಾರೆ. ಅವುಗಳ ಶಬ್ದದಿಂದ ಜಮೀನಿನಲ್ಲಿ ಯಾರೋ ಇದ್ದಾರೆ ಅಂತಾ ಹೆದರಿ ವನ್ಯ ಜೀವಿಗಳು ಹಾಗೂ ಪಕ್ಷಿಗಳು ಜಮೀನಿನ ಕಡೆಗೆ ಬರಲು ಹಿಂಜರಿಯುತ್ತಿವೆ. ತಮ್ಮ ಪ್ರಯೋಗದಿಂದ ಯಶಸ್ವಿಯಾದ ರೈತ ಶಿವರಾಜ್ ಅವರು ಜಮೀನಿನ ಸುತ್ತಲಿನ ಮರಗಳಿಗೆ ಬಾಟಲ್ ಕಟ್ಟಿ ಕಾಡು ಪ್ರಾಣಿಗಳಿಂದ ಬೆಳೆಯನ್ನು ರಕ್ಷಿಸಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಲ್ಲು ಗುಡ್ಡವನ್ನು ಕೃಷಿ ಭೂಮಿಯನ್ನಾಗಿ ಮಾಡಿದ್ರು- ವರ್ಷಕ್ಕೆ 15 ಲಕ್ಷ ರೂ. ಸಂಪಾದಿಸ್ತಾರೆ ರೈತ

    ಕಲ್ಲು ಗುಡ್ಡವನ್ನು ಕೃಷಿ ಭೂಮಿಯನ್ನಾಗಿ ಮಾಡಿದ್ರು- ವರ್ಷಕ್ಕೆ 15 ಲಕ್ಷ ರೂ. ಸಂಪಾದಿಸ್ತಾರೆ ರೈತ

    ಬೀದರ್: ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮುಸ್ತರಿವಾಡಿ ಗ್ರಾಮದ ರೈತ, ಕಲ್ಲು ಬಂಡೆಗಳಿಂದ ಕೂಡಿದ ಜಾಗವನ್ನು ಕೃಷಿ ಭೂಮಿಯಾಗಿ ಮಾಡಿಕೊಂಡು ಪ್ರತಿ ವರ್ಷ 10 ರಿಂದ 15 ಲಕ್ಷ ರೂ. ಸಂಪಾದನೆ ಮಾಡುವ ಮೂಲಕ ರಾಜ್ಯದ ರೈತರಿಗೆ ಮಾದರಿಯಾಗಿದ್ದಾರೆ.

    ಮುಸ್ತರಿವಾಡಿ ಗ್ರಾಮದ ರೈತ ವೀರರಡ್ಡಿ ಜಿಲ್ಲೆಯ ಮಾದರಿ ರೈತರಾಗಿದ್ದಾರೆ. ರಾಜ್ಯದಲ್ಲಿ ಅನ್ನದಾತರು ಸಾಲು ಸಾಲಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಈ ದಿನಗಳಲ್ಲಿ ಬರಡು ಭೂಮಿಯಲ್ಲಿ ಬಂಪರ್ ಬೆಳೆ ಬೆಳೆದು ರೈತರಿಗೆ ಸ್ಫೂರ್ತಿಯಾಗಿದ್ದಾರೆ. ತನ್ನ 2.5 ಎಕ್ರೆ ಭೂಮಿಯಲ್ಲಿ ಕಡಿಮೆ ಬಂಡವಾಳದಲ್ಲಿ ಪಪ್ಪಾಯ, ಮೂಸಂಬಿ ಬೆಳೆಗಳನ್ನು ಬೆಳೆದು ಪ್ರತಿ ವರ್ಷ 10 ರಿಂದ 15 ಲಕ್ಷ ರೂ. ಸಂಪಾದನೆ ಮಾಡುತ್ತಾರೆ.

    ಮೊದಲು ಈ ಭೂಮಿ ಬರಡು ಭೂಮಿಯಾಗಿತ್ತು. 5 ವರ್ಷಗಳ ಸತತ ಪರಿಶ್ರಮದಿಂದಾಗಿ ಕಲ್ಲು ಗುಡ್ಡವನ್ನು ಕೃಷಿ ಭೂಮಿಯನ್ನಾಗಿ ಮಾಡಿಕೊಂಡಿದ್ದೆ. ಬಳಿಕ ಕಷ್ಟ ಪಟ್ಟು ಬೆಳೆ ಬೆಳೆದು ಜೀವನ ಸಾಗಿಸುತ್ತಿದ್ದೇನೆ. ಕಷ್ಟ ಪಟ್ಟು ಕೆಲಸ ಮಾಡಿದರೆ ಎಲ್ಲಾ ಸಿಗುತ್ತದೆ. ಮನಸಿದ್ದರೆ ಮಾರ್ಗ ಎಂದು ಮಾದರಿ ರೈತ ವೀರರೆಡ್ಡಿ ಹೇಳಿದ್ದಾರೆ.

    ರೈತರು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ಬಿಟ್ಟು ಈ ರೀತಿಯ ಸತತ ಪರಿಶ್ರಮ ಪಟ್ಟರೆ ಏನಾದರು ಮಾಡಬಹದು ಎಂಬುದನ್ನು ರಾಜ್ಯಕ್ಕೆ ತೋರಿಸಿಕೊಟ್ಟಿದ್ದಾರೆ. ಸಿಎಂ ಕುಮಾರಸ್ವಾಮಿ ರೈತರ ಸಾಲ ಮನ್ನಾ ಮಾಡಿದ್ರೂ ಜಿಲ್ಲೆಯಲ್ಲಿ ಅತೀ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೆ ನಮ್ಮ ತಂದೆಯ ಸ್ಫೂರ್ತಿ ಪಡೆದು ಆತ್ಮಹತ್ಯೆ ಪ್ರಕರಣಗಳು ಕಡಿಮೆಯಾಗಿವೆ. ನಮ್ಮನ್ನು ಕೃಷಿಯಲ್ಲಿ ತೊಡಿಸಿಕೊಂಡು ಕೃಷಿ ಬಗ್ಗೆ ಪಾಠ ಹೇಳಿಕೊಡುತ್ತಿದ್ದಾರೆ. ಈ ಬೆಳೆಗೆ ಯಾವುದೇ ರಾಸಾಯಿನಿಕ ಗೊಬ್ಬರ ಹಾಕದೆ ಸಾವಯವ ಗೊಬ್ಬರ ಹಾಕಿ ಇಳುವರಿ ಜಾಸ್ತಿ ತೆಗೆಯುತ್ತಾರೆ. ನಮ್ಮ ತಂದೆಯ ಕೃಷಿ ಮಾದರಿಯನ್ನು ನೋಡಿದ ಜಿಲ್ಲೆಯ ರೈತರು ಸಲಾಂ ಎನ್ನುತ್ತಿದ್ದಾರೆ. ಭೂಮಿತಾಯಿಯನ್ನು ನಂಬಿದವರಿಗೆ ಯಾವತ್ತೂ ಮೋಸವಾಗುವುದಿಲ್ಲ. ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂದು ಮಾದರಿ ರೈತನ ಮಗ ಸಿದ್ದಾರೆಡ್ಡಿ ತಿಳಿಸಿದ್ದಾರೆ.

    ಒಬ್ಬ ರೈತ ಮನಸು ಮಾಡಿದ್ರೆ ಏನು ಬೇಕಾದರೂ ಮಾಡಬಹುದು ಎನ್ನುವುದಕ್ಕೆ ಈ ಬರಡು ಭೂಮಿಯನ್ನು ಸತತ ಪರಿಶ್ರಮದಿಂದ ಕೃಷಿ ಭೂಮಿಯನ್ನಾಗಿ ಮಾಡಿಕೊಂಡ ಈ ಮಾದರಿ ರೈತನನ್ನು ನಾವು ಮೆಚ್ಚಬೇಕು. ಈ ರೈತನ ಸಾಧನೆಯನ್ನು ನೋಡಿಯಾದರು ರಾಜ್ಯದಲ್ಲಿಯಾಗುವ ರೈತರ ಸರಣಿ ಆತ್ಮಹತ್ಯೆಗಳು ಕಡಿಮೆಯಾಗಲಿ ಎನ್ನುವುದು ನಮ್ಮ ಆಶಯವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಯಡಿಯೂರಪ್ಪನ ಬಾಯಿ ದೆವ್ವದ ಬಾಯಿ ಇದ್ದಂತೆ: ವೆಂಕಟರಾವ್ ನಾಡಗೌಡ

    ಯಡಿಯೂರಪ್ಪನ ಬಾಯಿ ದೆವ್ವದ ಬಾಯಿ ಇದ್ದಂತೆ: ವೆಂಕಟರಾವ್ ನಾಡಗೌಡ

    ಬೀದರ್: ಯಡಿಯೂರಪ್ಪನ ಬಾಯಿ ದೆವ್ವದ ಬಾಯಿ ಇದ್ದಂತೆ. ಇಡೀ ದೇಶಕ್ಕೆ ಆಪರೇಷನ್ ಮಾಡೋಕೆ ಬರುತ್ತೆ ಅಂತ ತೋರಿಸಿದವರೇ ಅವರು ಎಂದು ಪಶು ಸಂಗೋಪನೆ ಸಚಿವ ವೆಂಕಟರಾವ್ ನಾಡಗೌಡ ಬಿಎಸ್‍ವೈ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಪಶು ಇಲಾಖೆ ಸಭಾಂಗಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದೇಶದಲ್ಲಿ ಆಪರೇಷನ್ ಮಾಡುವುದಕ್ಕೆ ಬರುತ್ತದೆ ಎಂದು ತೋರಿಸಿದ ವ್ಯಕ್ತಿ ಯಡಿಯೂರಪ್ಪ. ನಾನು ಶಾಸಕನಾಗಿದ್ದಾಗ ಆಪರೇಷನ್ ಕಮಲ ಮಾಡಿ, ರಾಜೀನಾಮೆ ಕೊಡಿಸಿ ಮಂತ್ರಿ ಮಾಡಿದರು. ಈಗ ಅವರಿಗೆ ಆಪರೇಷನ್ ಭಯ ಶುರುವಾಗಿದೆ. ಅವರು ಕೂಡ ಮುಖ್ಯಮಂತ್ರಿ ಆಗಬೇಕು ಎಂದು ಕನಸ್ಸು ಕಾಣುತ್ತಿದ್ದಾರೆ. ಈಗಾಗಲೇ ಒಂದು ದಿನ ಮುಖ್ಯಮಂತ್ರಿ ಆಗಿದ್ದು ಆಗಿದೆ. ಆಪರೇಷನ್ ಮಾಡೋದು ಅವರಿಗೆ ಹವ್ಯಾಸವಾಗಿದೆ ಎಂದು ಕಿಡಿಕಾರಿದರು.

    ಮಾಧ್ಯಮಗಳ ವಿರುದ್ಧ ವಾಗ್ದಾಳಿ ನಡೆಸಿದ ಸಚಿವರು ಬೆಂಕಿಯಲ್ಲಿ ಹೊಗೆ ಆಡೋದು ನೋಡಿದ್ದೇನೆ. ಆದರೆ ನೀವು ಬೂದಿಯಲ್ಲಿ ಹೊಗೆ ಹಾರಿಸುತ್ತಿದ್ದೀರಿ ಎಂದರು.

    ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯನವರನ್ನು ಯಾರು ಮೂಲೆ ಗುಂಪು ಮಾಡಿಲ್ಲ. ಎಲ್ಲ ವಿಷಯವು ಅವರ ಬಳಿ ಚರ್ಚೆಯಾಗಿ ಕಾರ್ಯಕ್ಕೆ ಬರುತ್ತವೆ. ಸಿಎಂ ದಂಗೆ ಎನ್ನುವ ಪದವನ್ನು ಬೇರೆ ಅರ್ಥದಲ್ಲಿ ಬಳಸಿದ್ದಾರೆ ಎಂದು ವೆಂಕಟರಾವ್ ನಾಡಗೌಡ ಸ್ಪಷ್ಟನೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಿಎಸ್‍ವೈಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಗಾದಿಯಿಂದ ಕೆಳಗಿಳಿಸಿ- ಅಮಿತ್ ಶಾಗೆ ಕಾರ್ಯಕರ್ತನಿಂದ ಪತ್ರ

    ಬಿಎಸ್‍ವೈಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಗಾದಿಯಿಂದ ಕೆಳಗಿಳಿಸಿ- ಅಮಿತ್ ಶಾಗೆ ಕಾರ್ಯಕರ್ತನಿಂದ ಪತ್ರ

    ಬೀದರ್: ಬಿ.ಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಗಾದಿಯಿಂದ ಕೆಳಗಿಳಿಸುವಂತೆ ಭಾಲ್ಕಿಯ ಕಮಲ ಕಾರ್ಯಕರ್ತರೊಬ್ಬರು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.

    ಭರತ್ ಖಂಡ್ರೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಬಿಜೆಪಿ ಆಡಳಿತಕ್ಕೆ ಬಾರದೇ ಇರುವುದಕ್ಕೆ ಯಡಿಯೂರಪ್ಪನವರೇ ಕಾರಣ ಅಂತ ಪತ್ರದಲ್ಲಿ ದೂರಿದ್ದಾರೆ. ರಾಜ್ಯದಲ್ಲಿ ಅಮಿತ್ ಶಾ ಹಾಕಿದ್ದ ಮಿಷನ್ 150 ಸಫಲವಾಗುವ ಎಲ್ಲ ಸಾಧ್ಯತೆಗಳಿದ್ದವು. ಆದರೆ ಕೆಜೆಪಿಯಿಂದ ಬಂದವರಿಗೆ ಟಿಕೆಟ್ ನೀಡಿದ್ದರಿಂದ ಬಿಜೆಪಿ ಅಧಿಕಾರದಿಂದ ವಂಚಿತವಾಯಿತು. ಅಲ್ಲದೇ ಜಿಲ್ಲೆಯಲ್ಲಿ ಕಮಲ ಪಕ್ಷ ಸಂಪೂರ್ಣ ನೆಲಕಚ್ಚಿದೆ ಎಂದು ಆರೋಪಿಸಿದ್ದಾರೆ.

    ಜಿಲ್ಲೆಯಲ್ಲಿ 5 ಸಾಮಾನ್ಯ ಕ್ಷೇತ್ರಗಳಿದ್ದು, ವಿಧಾನಸಭಾ ಚುನಾವಣೆಯಲ್ಲಿ ಒಂದು ಸೀಟು ಗೆಲ್ಲಲು ಆಗಿಲ್ಲ. ಪ್ರಧಾನಿ ಮೋದಿ ಯೋಗಿ ಆದಿತ್ಯನಾಥ್ ಬಂದರೂ ಅದು ಫಲಿಸಿಲ್ಲ. ಜಿಲ್ಲೆಯಲ್ಲಿ ಮೋದಿ ಅಭಿಮಾನಿಗಳ ಸಂಖ್ಯೆ ಜಾಸ್ತಿ ಇದ್ದರೂ ಯಡಿಯೂರಪ್ಪನವರ ಬಂಟರಿಂದಲೇ ಪಕ್ಷ ಪತನದತ್ತ ಸಾಗುತ್ತಿದೆ. ಹೀಗಾಗಿ ಕೂಡಲೇ ಬಿಎಸ್‍ವೈ ಅವರನ್ನು ಅಧ್ಯಕ್ಷ ಹುದ್ದೆಯಿಂದ ಕೆಳಗಿಳಿಸಬೇಕು ಎಂದು ಆಗ್ರಹಿಸಿದ್ದಾರೆ.

    ಈಗಾಗಲೇ ಯಡಿಯೂರಪ್ಪ ಅಪರೇಶನ್ ಕಮಲದ ಮೂಲಕ ಸಿಎಂ ಆಗಲು ಹೊರಟಿರುವಾಗ ಬಿಜೆಪಿ ಕಾರ್ಯಕರ್ತ ಈ ರೀತಿ ಪತ್ರ ಬರೆದಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಾಗರ ಹಾವನ್ನೇ ನುಂಗಿದ ಕಪ್ಪೆರಾಯ

    ನಾಗರ ಹಾವನ್ನೇ ನುಂಗಿದ ಕಪ್ಪೆರಾಯ

    ಬೀದರ್: ಹಾವುಗಳು ಕಪ್ಪೆಗಳನ್ನು ನುಂಗೋದನ್ನು ಕೇಳಿರುತ್ತವೆ ಮತ್ತು ನೋಡಿರುತ್ತವೆ. ಆದ್ರೆ ಕಪ್ಪೆಯೊಂದು ಹಾವನ್ನೇ ನುಂಗಿರುವ ವಿಚಿತ್ರ ಘಟನೆಯೊಂದು ಜಿಲ್ಲೆಯ ಔರಾದ್ ತಾಲೂಕಿನ ಯನಗುಂದಾ ಗ್ರಾಮದಲ್ಲಿ ನಡೆದಿದೆ.

    ಇಂದು ಬೆಳಗ್ಗೆ ಯನಗುಂದಾ ಗ್ರಾಮದ ಚರಂಡಿ ಬಳಿ ನಾಗರ ಹಾವು ಕಾಣಿಸಿಕೊಂಡಿತ್ತು. ಹಾವನ್ನು ಕಂಡ ಗ್ರಾಮಸ್ಥರು ಹಾವನ್ನು ನೋಡಲು ಹೋಗುತ್ತಿದ್ದಂತೆ ನಾಗರಾಜ ಚರಂಡಿಯೊಳಗೆ ನುಗ್ಗಿದ್ದಾನೆ. ಚರಂಡಿಯಲ್ಲಿ ಹೋಗುತ್ತಿದ್ದಂತೆ ಕಪ್ಪೆಯೊಂದು ಹಾವನ್ನು ನುಂಗಲು ಆರಂಭಿಸಿದೆ. ಹಾವನ್ನು ಕಪ್ಪೆ ನುಂಗುವದನ್ನು ನೋಡಿದ ಗ್ರಾಮಸ್ಥರು ದೃಶ್ಯವನ್ನು ಮೊಬೈಲಿನಲ್ಲಿ ಸೆರೆಹಿಡಿದುಕೊಂಡಿದ್ದಾರೆ.

    ಹಾವು ಕಪ್ಪೆಯನ್ನು ನುಂಗುವುದನ್ನು ನೋಡಿದ್ದೇವೆ. ಆದ್ರೆ ಇದೇ ಮೊದಲ ಬಾರಿಗೆ ಕಪ್ಪೆಯೇ ಹಾವನ್ನು ನುಂಗಿದನ್ನು ನೋಡಿದ್ದೇವೆ ಎಂದು ಗ್ರಾಮಸ್ಥರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಸದ್ಯ ಈ ವಿಡಿಯೋ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಮೇ ತಿಂಗಳಿನಲ್ಲಿ ಚಿಕ್ಕಮಗಳೂರಿನ ಪ್ರದೀಪ್ ಎಂಬವರ ಮನೆಯೊಳಗಡೆ ಆರು ಅಡಿ ಉದ್ದದ ಹಾವು ಸೇರಿಕೊಂಡಿತ್ತು. ಹಾವು ದೊಡ್ಡ ಕಪ್ಪೆ ನುಂಗಿ ತೆವಳಲು ಆಗದೆ ವಾಷಿಂಗ್ ಮಷೀನ್ ಸೇರಿತ್ತು. ವಾಷಿಂಗ್ ಮಷೀನ್ ಬಳಿ ರಕ್ತ ನೋಡಿ ಮನೆಯವರು ಗಾಬರಿಗೊಂಡಿದ್ದರು. ಮೊದಲು ಹಾವನ್ನು ನೋಡಿ ನಾಗರಹಾವೆಂದು ಮನೆಯವರು ಹೆದರಿಕೊಂಡಿದ್ದರು. ವಾಷಿಂಗ್ ಮಷೀನ್ ಬಿಚ್ಚಿದ ಮೇಲೆ ಅದು ಕೆರೆ ಹಾವು ಎಂದು ತಿಳಿದಿತ್ತು ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಸ್ನೇಕ್ ನರೇಶ್ ಹಾವನ್ನು ರಕ್ಷಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://youtu.be/Amw3EVqleM0

  • ತಂದೆ ಮಾಡಿದ ಕೆಲಸದಿಂದ ಬೇಸತ್ತು ಮಗ ಆತ್ಮಹತ್ಯೆ!

    ತಂದೆ ಮಾಡಿದ ಕೆಲಸದಿಂದ ಬೇಸತ್ತು ಮಗ ಆತ್ಮಹತ್ಯೆ!

    ಬೀದರ್: ತಂದೆ ಮಾಡಿದ್ದ ಸಾಲಕ್ಕೆ ಹೆದರಿ ಮಗ ಸೀಮೆ ಎಣ್ಣೆ ಸುರಿದು ಕೊಂಡು ಆತ್ಮಹತ್ಯೆ ಶರಣಾದ ಘಟನೆ ಬೀದರ್ ತಾಲೂಕಿನ ಅಲಿಯಂಬರ್ ಗ್ರಾಮದಲ್ಲಿ ನಡೆದಿದೆ.

    ಉಮೇಶ್(35)ಆತ್ಮಹತ್ಯೆ ಮಾಡಿಕೊಂಡ ಮಗ. ಈತನ ತಂದೆ ಗುಂಡಪ್ಪ 5.50 ಲಕ್ಷ ಸಾಲ ಮಾಡಿದ್ದರು. ತಂದೆ ಸಾಲ ಮಾಡಿಕೊಂಡಿದ್ದರಿಂದ ಉಮೇಶ್ ಸಾಲ ತೀರಿಸುವ ಬಗ್ಗೆ ನೊಂದಿದ್ದರು ಎನ್ನಲಾಗಿದೆ.

    ಈ ಹಿನ್ನೆಲೆಯಲ್ಲಿ ಸಾಲ ತೀರಿಸಲು ಸಾಧ್ಯವಾಗುವುದಿಲ್ಲ ಅಂತ ಸೀಮೆ ಎಣ್ಣೆ ಸುರಿದು ಬಳಿಕ ಬೆಂಕಿ ಹಚ್ಚಿಕೊಂಡಿದ್ದಾರೆ. ಕೂಡಲೇ ಅವರನ್ನು ಸ್ಥಳೀಯರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಉಮೇಶ್ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಉಮೇಶ್ ಈ ಕೃತ್ಯ ಎಸಗಿದ್ದಾನೆ ಅಂತ ಪೋಷಕರು ಕಣ್ಣೀರು ಹಾಕುತ್ತಿದ್ದಾರೆ.

    ಜನವಾಡ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಯುವತಿಯನ್ನ ಚುಡಾಯಿಸಿದ ರೋಡ್ ರೋಮಿಯೋಗೆ ಬಿತ್ತು ಗೂಸಾ

    ಯುವತಿಯನ್ನ ಚುಡಾಯಿಸಿದ ರೋಡ್ ರೋಮಿಯೋಗೆ ಬಿತ್ತು ಗೂಸಾ

    ಬೀದರ್: ಯುವತಿಯನ್ನು ಚುಡಾಯಿಸಿದ ರೋಡ್ ರೋಮಿಯೋಗೆ ಸಾರ್ವಜನಿಕರು ಸಖತ್ ಗೂಸಾ ನೀಡಿರುವ ಘಟನೆ ಬೀದರ್ ನಗರದ ರೈಲ್ವೆ ನಿಲ್ದಾಣ ಬಳಿ ನಡೆದಿದೆ.

    ಬೀದರ್ ರೈಲು ನಿಲ್ದಾಣದಲ್ಲಿ ಯುವತಿ ತಮ್ಮ ಗ್ರಾಮಕ್ಕೆ ಹೋಗಲು ನಿಂತಿದ್ದಳು. ಈ ವೇಳೆ ರೋಡ್ ರೋಮಿಯೋ ಬಂದು ಯುವತಿಯನ್ನು ಚುಡಾಯಿಸಿದ್ದಾನೆ. ಅಷ್ಟೇ ಅಲ್ಲದೇ ಒತ್ತಾಯ ಪೂರ್ವಕವಾಗಿ ಯುವತಿ ಬಳಿಯಿದ್ದ ಮೊಬೈಲ್ ಕಸಿದುಕೊಂಡಿದ್ದಾನೆ. ಬಳಿಕ ಬ್ಲ್ಯಾಕ್ ಮೇಲ್ ಮಾಡಿ ಆಟೋದಲ್ಲಿ ಸಾಗಿಸಲು ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ.

    ಈ ವೇಳೆ ಯುವತಿಗೆ ರಕ್ಷಣೆಗಾಗಿ ಕೂಗಿಗೊಂಡಿದ್ದಾಳೆ. ಇದನ್ನು ಕಂಡ ಸ್ಥಳೀಯರು ಕಾಮುಕನಿಂದ ಯುವತಿಯ ರಕ್ಷಣೆ ಮಾಡಿ ಆತನಿಗೆ ಧರ್ಮದೇಟು ನೀಡಿದ್ದಾರೆ. ಬಳಿಕ ರಸ್ತೆಯಲ್ಲಿಯೇ ಆರೋಪಿಗೆ ಗೂಸಾ ನೀಡುತ್ತಾ ಸಾರ್ವಜನಿಕರೇ ಪೊಲೀಸ್ ಠಾಣೆಗೆ ಎಳೆದುಕೊಂಡು ಹೋಗಿ ಪೊಲೀಸರಿಗೆ ಒಪ್ಪಿಸಿದ್ದಾರೆ.

    ನ್ಯೂಟೌ ನ ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಹಾಸನ ಪಶುವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಅಶ್ವಿನಿಗೆ 11 ಚಿನ್ನದ ಪದಕ!

    ಹಾಸನ ಪಶುವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಅಶ್ವಿನಿಗೆ 11 ಚಿನ್ನದ ಪದಕ!

    ಬೀದರ್: ಇಂದು ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಯಲದ ಹತ್ತನೇ ಘಟಿಕೋತ್ಸವ ನಡೆಯಿತು. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ವಿವಿಧ ವಿಭಾಗಗಳಲ್ಲಿ ಹೆಚ್ಚು ಅಂಕ ಪಡೆದ 34 ವಿದ್ಯಾರ್ಥಿಗಳಿಗೆ ಒಟ್ಟು 66 ಚಿನ್ನದ ಪದಕ ಪ್ರದಾನ ಮಾಡಿದರು.

    ಹಾಸನದ ಪಶುವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಅಶ್ವಿನಿ 11 ಚಿನ್ನದ ಪದಕ ಪಡೆದಿದ್ದಾರೆ. ರೈತನ ಮಗಳಾಗಿರುವ ಅಶ್ವಿನಿ ಸಂತಸ ವ್ಯಕ್ತಪಡಿಸಿದ್ದು, ಪೋಷಕರು, ಸ್ನೇಹಿತರು ಹಾಗೂ ಶಿಕ್ಷಕರ ಮಾರ್ಗದರ್ಶದಿಂದ ನಾನು 11 ಚಿನ್ನದ ಪದಕ ಗೆಲ್ಲಲು ಸಾಧ್ಯವಾಯಿತು. ಅವರಿಗೆ ನನ್ನ ಧನ್ಯವಾದಗಳು ಎಂದು ಹೇಳಿದ್ದಾರೆ.

    ಘಟಿಕೋತ್ಸವದಲ್ಲಿ 447 ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರ ಹಾಗೂ 29 ವಿದ್ಯಾರ್ಥಿಗಳಿಗೆ ಪಿಎಚ್.ಡಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಹಕಾರ ಸಚಿವ ಬಂಡೆಪ್ಪ ಖಾಶಂಪುರ, ಸಂಸದ ಭಗವಂತ್ ಖೂಬಾ ಭಾಗವಹಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದೇವಾಲಯಕ್ಕೆ ಮುಗಿಬೀಳುತ್ತಿದ್ದ ವಿದ್ಯಾರ್ಥಿಗಳು: ಅನುಮಾನದಿಂದ ನೋಡಿದಾಗ ಬಯಲಾಯ್ತು ಡ್ರಗ್ಸ್ ದಂಧೆ!

    ದೇವಾಲಯಕ್ಕೆ ಮುಗಿಬೀಳುತ್ತಿದ್ದ ವಿದ್ಯಾರ್ಥಿಗಳು: ಅನುಮಾನದಿಂದ ನೋಡಿದಾಗ ಬಯಲಾಯ್ತು ಡ್ರಗ್ಸ್ ದಂಧೆ!

    ಬೀದರ್: ಮನೆಯಲ್ಲಿಯೇ ಚಿಕ್ಕ ದೇವಾಲಯವನ್ನು ನಿರ್ಮಿಸಿಕೊಂಡು ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ನಟೋರಿಯಸ್ ತಂಡವನ್ನು ಭೇದಿಸುವಲ್ಲಿ ಅಬಕಾರಿ ಪೊಲೀಸರು ಯಶಸ್ವಿಯಾಗಿದ್ದಾರೆ.

    ಭಾಲ್ಕಿ ಪಟ್ಟಣದ ಬಸವನಗರ ಬಡಾವಣೆಯ ರೇಣುಕಾ ಜಲ್ದೆಯು ಮನೆಯಲ್ಲೇ ದೇವಾಲಯ ನಿರ್ಮಿಸಿಕೊಂಡು ಕಾಲೇಜು ವಿದ್ಯಾರ್ಥಿಗಳಿಗೆ ನಶೆ ಏರಿಸುವ ಡ್ರಗ್ಸ್ ಮಾರಾಟಮಾಡುತ್ತಿದ್ದಳು. ಇದರ ಖಚಿತ ಮಾಹಿತಿ ಮೇರೆಗೆ ಅಬಕಾರಿ ಜಿಲ್ಲಾಧಿಕಾರಿ ಶಿವಪ್ರಕಾಶ್ ಹಾಗೂ ಡ್ರಗ್ಸ್ ನಿಯಂತ್ರಣ ಅಧಿಕಾರಿ ಶರಣಬಸಪ್ಪ ಸೇರಿದಂತೆ ಅಧಿಕಾರಿಗಳ ತಂಡ ಭಾನುವಾರ ದಾಳಿ ನಡೆಸಿದೆ.

    ದಾಳಿ ವೇಳೆ ಮನೆಯಲ್ಲಿ ಬಚ್ಚಿಟ್ಟಿದ್ದ ಅಪಾರ ಪ್ರಮಾಣದ ಮತ್ತೇರಿಸುವ ಮಾತ್ರೆಗಳು ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ರೇಣುಕಾ ಜಲ್ದೆಯನ್ನು ಬಂಧಿಸಿದ್ದು, ದಂಧೆಯ ಪ್ರಮುಖ ರೂವಾರಿ ಆಕೆಯ ಗಂಡ ಸಂಜೀವ ಕುಮಾರನಿಗಾಗಿ ಪತ್ತೆಗೆ ವ್ಯಾಪಕ ಶೋಧ ನಡೆಸಿದ್ದಾರೆ.

    ಪತ್ತೆಯಾಗಿದ್ದು ಹೇಗೆ?
    ಮನೆಯಲ್ಲೇ ಸಣ್ಣದಾದ ದೇವಸ್ಥಾನ ನಿರ್ಮಿಸಿಕೊಂಡಿದ್ದ ದಂಧೆಕೋರರು, ಅಂಗಳದಲ್ಲಿನ ತುಳಸಿ ಗಿಡದ ಪಕ್ಕದ ಪೊದೆಯೊಂದರಲ್ಲಿ ಡ್ರಗ್ಸ್ ಸಂಗ್ರಹಿಸಿಟ್ಟುಕೊಂಡಿದ್ದರು. ದರ್ಶನದ ನೆಪ ಹೇಳಿ ಬರುತ್ತಿದ್ದ ವಿದ್ಯಾರ್ಥಿಗಳು ಹಾಗೂ ಯುವಕರಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡಲಾಗುತಿತ್ತು. ಮೇಲ್ನೋಟಕ್ಕೆ ಸ್ಥಳೀಯರಿಗೆ ದೇವಸ್ಥಾನಕ್ಕೆ ವಿದ್ಯಾರ್ಥಿಗಳು ಬಂದು ಹೋಗುತ್ತಿದ್ದರ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ದಿನೇ ದಿನೇ ವಿದ್ಯಾರ್ಥಿಗಳು ಹಾಗೂ ಯುವಕರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬ್ರೀಮ್ಸ್ ಅವ್ಯವಸ್ಥೆ ನೋಡಿ ನಿರ್ದೇಶಕರನ್ನ ತರಾಟೆ ತಗೆದುಕೊಂಡ ಬಂಡೆಪ್ಪ ಖಾಶೆಂಪೂರ್

    ಬ್ರೀಮ್ಸ್ ಅವ್ಯವಸ್ಥೆ ನೋಡಿ ನಿರ್ದೇಶಕರನ್ನ ತರಾಟೆ ತಗೆದುಕೊಂಡ ಬಂಡೆಪ್ಪ ಖಾಶೆಂಪೂರ್

    ಬೀದರ್: ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ್ ಇಂದು ಬ್ರೀಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದು, ಅಲ್ಲಿನ ಅವ್ಯವಸ್ಥೆ ಕಂಡು ಬ್ರೀಮ್ಸ್ ನಿರ್ದೇಶಕ ಡಾ. ಚನ್ನಣ್ಣನವರ ಅವರನ್ನು ತರಾಟೆಗೆ ತಗೆದುಕೊಂಡಿದ್ದಾರೆ.

    ಆಸ್ಪತ್ರೆಯಲ್ಲಿ ಅವ್ಯವಹಾರ ನಡೆಯುತ್ತಿದೆ ಹಾಗೂ ಅವ್ಯವಸ್ಥಿತೆಯಿಂದ ರೋಗಿಗಳು ಪರದಾಡುವಂತಾಗಿದೆ ಎಂದು ಸ್ಥಳೀಯರು ಸಚಿವರಿಗೆ ದೂರು ನೀಡಿದ್ದರು. ಹೀಗಾಗಿ ಇಂದು ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವಪ್ಪ ನೇತೃತ್ವದಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ್ದು, ಬೆಡ್‍ಗಳ ಮೇಲೆ ದೂಳು ಇರುವುದು, ಸ್ವಚ್ಛತೆ ಇಲ್ಲದಿರುವುದು, ಬೆಳಕಿನ ಅಭಾವ ಕಂಡು ಅಧಿಕಾರಿಗಳ ವಿರುದ್ಧ ಗರಂ ಆದರು.

    ನಿಮ್ಮ ಮನೆಯ ಕೆಲಸಗಾರರು ಸರಿಯಾಗಿ ಕೆಲಸ ಮಾಡದಿದ್ದರೆ ನೀವು ಸುಮ್ಮನೆ ಇರುತ್ತಿರಾ? ಆಸ್ಪತ್ರೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳಲು ನಿಮಗೇನು ತೊಂದರೆ? ನಿಮ್ಮ ನಿಷ್ಕಾಳಜಿ ರೋಗಿಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ನಿಮ್ಮ ಸಮಸ್ಯೆ ಏನು ಅಂತಾ ಹೇಳಿ ಎಂದು ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡರು.

    ಸ್ವಚ್ಛತೆ ಕಾಪಾಡಲು ಹಾಗೂ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲು ನಿಮಗೆ ಏನು ಸವಲತ್ತು ಬೇಕು ಹೇಳಿ, ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ನಿಮಗೆ ಅನುಕೂಲ ಮಾಡಿಕೊಡುತ್ತೇನೆ. ಸಹಾಯ ಮಾಡಲಾಗುತ್ತದೆ ಅಂತಾ ನಾನೇ ಪತ್ರದಲ್ಲಿ ಬರೆದುಕೊಡಬೇಕೇ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv