Tag: bidar

  • ಸೇತುವೆ ದಾಟಲು ಹೋಗಿ ನೀರಿನಲ್ಲಿ ಕೊಚ್ಚಿ ಹೋದ ಕ್ರೂಸರ್ ವಾಹನ

    ಸೇತುವೆ ದಾಟಲು ಹೋಗಿ ನೀರಿನಲ್ಲಿ ಕೊಚ್ಚಿ ಹೋದ ಕ್ರೂಸರ್ ವಾಹನ

    ಬೀದರ್: ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಜಮಖಂಡಿ ಬಳಿ ಕ್ರೂಸರ್ ವಾಹನ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ.

    ಮಹಾರಾಷ್ಟ್ರದ – ಲಾತೂರ್ – ಬೀದರ್ ಸಂಪರ್ಕ ಕಡಿತಗೊಂಡಿದ್ದು, ಭಾಲ್ಕಿ ತಾಲೂಕಿನ ಜಮಖಂಡಿ ಬಳಿ ಸೇತುವೆ ದಾಟಲು ಯತ್ನಿಸಿದ್ದ ವೇಳೆ ಕ್ರೂಸರ್ ವಾಹನ ಕೊಚ್ಚಿಕೊಂಡು ಹೋಗಿದೆ.

    ಸೇತುವೆ ಮೇಲೆ ನೀರು ರಭಸದಿಂದ ಹರಿಯುತ್ತಿದ್ದರೂ ಚಾಲಕ ಧೈರ್ಯಮಾಡಿ ಕ್ರೂಸರ್ ವಾಹನವನ್ನು ಚಲಾಯಿಸಿದ್ದಾನೆ. ಅರ್ಧ ಸಾಗುತ್ತಿದ್ದಂತೆ ನೀರಿನ ರಭಸಕ್ಕೆ ನಿಯಂತ್ರಣಕ್ಕೆ ಸಿಗದೇ ಕ್ರೂಸರ್ ಹಳ್ಳಕ್ಕೆ ಬಿದ್ದಿದೆ. ಬಿದ್ದ ಕೂಡಲೇ ಅದರಲ್ಲಿದ್ದ ಪ್ರಯಾಣಿಕರು ಡೋರು ತೆಗೆದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಹಳ್ಳದಲ್ಲಿ ಕೋಚ್ಚಿ ಹೋದ ವಾಹನ ಹೊರಗಡೆ ತೆಗೆಯಲು ಸಾರ್ವಜನಿಕರು ಹರಸಾಹಸ ಪಟ್ಟಿದ್ದಾರೆ. ಭಾರೀ ಮಳೆ ಅವಾಂತರಕ್ಕೆ ನೆರೆ ರಾಜ್ಯಕ್ಕೆ ಹೋಗುವ ಪ್ರಯಾಣಿಕರು ಮತ್ತು ವಾಹನ ಸವಾರರು ಪರದಾಡುತ್ತಿದ್ದಾರೆ. ಮುಂಗಾರು ಮಳೆಗೆ ಭಾನುವಾರದಿಂದ ಜಿಲ್ಲೆಯ ಹಲವು ಸೇತುವೆಗಳ ಸಂಪರ್ಕ ಕಡಿತಗೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

  • ಮಾಜಿ ಸಿಎಂ ಮನಸ್ಸು ಮಾಡಿದ್ರೆ 2 ನಿಮಿಷದಲ್ಲೇ ಸರ್ಕಾರ ಇರಲ್ಲ- ಸಿದ್ದು ಆಪ್ತ ನಾರಾಯಣ ಕೆಂಡಾಮಂಡಲ

    ಮಾಜಿ ಸಿಎಂ ಮನಸ್ಸು ಮಾಡಿದ್ರೆ 2 ನಿಮಿಷದಲ್ಲೇ ಸರ್ಕಾರ ಇರಲ್ಲ- ಸಿದ್ದು ಆಪ್ತ ನಾರಾಯಣ ಕೆಂಡಾಮಂಡಲ

    ಬೀದರ್: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯವರನ್ನು ಯಾವ ನನ್ನ ಮಗನೂ ಕಡೆಗಣಿಸಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಸಿದ್ದರಾಮಯ್ಯನೇ. ಅವರು ಮನಸ್ಸು ಮಾಡಿದ್ರೆ ಎರಡು ನಿಮಿಷದಲ್ಲೇ ಸರ್ಕಾರ ಇರಲ್ಲ ಅಂತ ಬಸವಕಲ್ಯಾಣ ಕಾಂಗ್ರೆಸ್ ಶಾಸಕ ಬಿ. ನಾರಾಯಣ ಕಿಡಿಕಾರಿದ್ದಾರೆ.

    ನಗರದಲ್ಲಿ ಮಾಜಿ ಸಚಿವ ಈಶ್ವರ್ ಖಂಡ್ರೆ ಸುದ್ದಿಗೋಷ್ಠಿ ಆಯೋಜಿಸಿದ್ದರು. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಕಾಂಗ್ರೆಸ್ಸಿನಲ್ಲಿ ಕಡೆಗಣಿಸಲಾಗುತ್ತಿದೆಯೇ ಎಂದು ಮಾಧ್ಯಮದವರು ಪ್ರಶ್ನೆ ಕೇಳಿದ್ದಾರೆ.

    ಈ ವೇಳೆ ಕೆಂಡಾಮಂಡಲರಾದ ಬಿ. ನಾರಾಯಣ, ಯಾವ ನನ್ ಮಗ ಕಡೆಗಣಿಸಲು ಆಗಲ್ಲ. ಅವರು ಸಿದ್ದರಾಮಯ್ಯ ಮನಸ್ಸು ಮಾಡಿದ್ರೆ ಎರಡು ನಿಮಿಷ ಸರ್ಕಾರ ಇರಲ್ಲ. ಸಿದ್ದರಾಮಯ್ಯಗೆ ಯಾರು ಅಗೌರವ ತೋರುತ್ತಾರೆ? ಯಾರು ಕಡೆಗಣನೆ ಮಾಡುತ್ತಾರೆ? ಅವರು ಪಕ್ಷದಿಂದಲೇ ಹೋಗುತ್ತಾರೆ. ಸಿದ್ದರಾಮಯ್ಯ ಕೂದಲಿಗೂ ಧಕ್ಕೆ ತರಲು ನಾವು ಬಿಡಲ್ಲ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸಿದ್ದರಾಮಯ್ಯ ಅವರನ್ನು ಯಾರೂ ಮೂಲೆಗುಂಪು ಮಾಡಿಲ್ಲ. ಮೈತ್ರಿ ಸರ್ಕಾರದ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಅತಂಹ ಕೆಲಸ ಯಾರೂ ಮಾಡಲು ಆಗಲ್ಲ. ನಾವು ಅಂತಹ ನೀಚ ಕೆಲಸ ಮಾಡಲ್ಲ ಎಂದು ಹೇಳಿ ಸಿದ್ದರಾಮಯ್ಯನವರ ಬಗ್ಗೆ ಅಭಿಮಾನ ಹೊರ ಹಾಕಿದ್ದಾರೆ.

  • ಬೀದರ್ ನಲ್ಲಿ ಭಾರೀ ಮಳೆ: ಸಂಪರ್ಕ ಕಳೆದುಕೊಂಡು ಒದ್ದಾಡುತ್ತಿದ್ದಾರೆ ಗ್ರಾಮಸ್ಥರು

    ಬೀದರ್ ನಲ್ಲಿ ಭಾರೀ ಮಳೆ: ಸಂಪರ್ಕ ಕಳೆದುಕೊಂಡು ಒದ್ದಾಡುತ್ತಿದ್ದಾರೆ ಗ್ರಾಮಸ್ಥರು

    ಬೀದರ್: ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಔರಾದ್ ತಾಲೂಕಿನ ಗ್ರಾಮದಲ್ಲಿ ನಿರ್ಮಾಣ ಹಂತದ ಸೇತುವೆಯ ಪಕ್ಕ ಹಾಕಲಾಗಿದ್ದ ತಾತ್ಕಾಲಿಕ ಸೇತುವೆಯೊಂದು ಕೊಚ್ಚಿ ಹೋಗಿದೆ.

    ನಿಡೋದಾ ಗ್ರಾಮದಲ್ಲಿ ತಾತ್ಕಾಲಿಕವಾಗಿ ನಿರ್ಮಾಣಗೊಂಡಿದ್ದ ಸೇತುವೆ ಕೊಚ್ಚಿ ಹೋದ ಪರಿಣಾಮ 2 ಸಾವಿರಕ್ಕೂ ಹೆಚ್ಚು ಜನ ವಸತಿ ಇರುವ ಗ್ರಾಮ ಈಗ ಸಂಪರ್ಕ ಕಳೆದುಕೊಂಡಿದೆ.

    ನಿಡೋದಾ ಗ್ರಾಮದ ಬಳಿ ಮಂಜ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸೇತುವೆಯೊಂದನ್ನು ನಿರ್ಮಿಸಲಾಗಿತ್ತು. ಆದರೆ ಜಿಲ್ಲೆಯಾದ್ಯಂತ ಮಳೆ ಹೆಚ್ಚಾಗಿದ್ದರಿಂದ ಮಂಜ್ರಾ ನದಿ ನೀರಿನ ಪ್ರಮಾಣ ಹೆಚ್ಚಾಗಿ ತಡರಾತ್ರಿ ತಾತ್ಕಾಲಿಕ ಸೇತುವೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ.

    ಸುಮಾರು 2000 ಜನವಸತಿ ಹೊಂದಿರುವ ನಿಡೋದಾ ಗ್ರಾಮವು ತಡರಾತ್ರಿಯಿಂದ ಸಂಪರ್ಕ ಕಳೆದುಕೊಂಡಿದೆ. ಈ ಗ್ರಾಮಕ್ಕೆ ಈ ದಾರಿ ಹೊರತು ಪಡಿಸಿ ಯಾವುದೇ ಅನ್ಯ ದಾರಿಗಳಿಲ್ಲದ್ದರಿಂದ ಸಂಚಾರ ಇಲ್ಲದೆ ಗ್ರಾಮಸ್ಥರು ಪರದಾಡುವ ಸ್ಥಿತಿ ಎದುರಾಗಿದೆ.

    ಗ್ರಾಮಸ್ಥರು ಊರಿಂದ ಹೊರಗೆ ಮತ್ತು ಒಳಗೆ ಬಾರದಂತಹ ಅಸಹಾಯಕ ಸ್ಥಿತಿ ಎದುರಾಗಿದೆ. ಗ್ರಾಮಸ್ಥರು ಮಳೆ ಅವಾಂತರದಿಂದ ಒದ್ದಾಡುತ್ತಿದ್ದರೂ, ಇಲ್ಲಿಯವರೆಗೂ ಯಾವುದೇ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿಲ್ಲ. ಇವರೆಲ್ಲರೂ  ಪರಿಷತ್ ಚುನಾವಣೆಯಲ್ಲಿ ಬ್ಯುಸಿ ಆಗಿರುವುದುದರಿಂದ ಸ್ಥಳಕ್ಕೆ ಭೇಟಿ ನೀಡಿಲ್ಲವೆಂದು ತಿಳಿದು ಬಂದಿದೆ.

  • ಶೌಚಾಲಯ ನಿರ್ಮಾಣಕ್ಕೆ ಬರಿಗಾಲಲ್ಲಿ ಜಾಗೃತಿ ಮೂಡಿಸ್ತಿದ್ದಾರೆ ಚಿಂತಾಕಿ ಪಿಡಿಒ ಶಿವಾನಂದ್

    ಶೌಚಾಲಯ ನಿರ್ಮಾಣಕ್ಕೆ ಬರಿಗಾಲಲ್ಲಿ ಜಾಗೃತಿ ಮೂಡಿಸ್ತಿದ್ದಾರೆ ಚಿಂತಾಕಿ ಪಿಡಿಒ ಶಿವಾನಂದ್

    ಬೀದರ್: ಸಾಮಾನ್ಯವಾಗಿ ಅಧಿಕಾರಿಗಳು, ಜನಪ್ರತಿನಿಧಿಗಳು ಅಂದ್ರೆ ಕಚ್ಚಾಟವೇ ಜಾಸ್ತಿ ಇರತ್ತೆ. ಆದ್ರೆ, ಇವತ್ತಿನ ಪಬ್ಲಿಕ್ ಹೀರೋ ಸ್ವಲ್ಪ ವಿಭಿನ್ನವಾಗಿದ್ದಾರೆ. ಬೀದರ್ ನ ಔರಾದ್ ತಾಲೂಕಿನ ಚಿಂತಾಕಿ ಗ್ರಾಮ ಪಂಚಾಯ್ತಿಯ ಪಿಡಿಒ ಮತ್ತು ಜನಪ್ರತಿನಿಧಿಗಳು ಬಯಲು ಮುಕ್ತ ಶೌಚಾಲಯ ನಿರ್ಮಿಸುವಲ್ಲಿ ಟೊಂಕಕಟ್ಟಿ ಯಶಸ್ವಿಯಾಗ್ತಿದ್ದಾರೆ.

    ಅಧಿಕಾರಿಗಳು, ಜನಪ್ರತಿನಿಧಿಗಳು ಮನಸ್ಸು ಮಾಡಿದ್ರೆ ಏನುಬೇಕಾದ್ರೂ ಮಾಡಬಹುದು ಅನ್ನೋದಕ್ಕೆ ಬೀದರ್ ನ ಓರಾದ್ ತಾಲೂಕಿನ ಚಿಂತಾಕಿ ಗ್ರಾಮ ಪಂಚಾಯ್ತಿ ಸಾಕ್ಷಿ. ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಐದು ಗ್ರಾಮಗಳನ್ನ ಬಯಲು ಮುಕ್ತ ಶೌಚಾಲಯ ಮಾಡಬೇಕೆಂದು ಪಿಡಿಒ ಶಿವಾನಂದ ಚಂದ್ರಕಾಂತ್ ಔರಾದೆ ಹಾಗೂ ಅಧ್ಯಕ್ಷ ವಿರಾರೆಡ್ಡಿ ಮತ್ತವರ ತಂಡ ಪಣ ತೊಟ್ಟಿದೆ.

    ಐದು ಗ್ರಾಮಗಳಲ್ಲಿ ಒಟ್ಟು 20 ಸಾವಿರ ಜನವಿದ್ದು ಈಗಾಗಲೇ ಬೆಲ್ದಾಳ್, ಲಿಂಗದಗಳ್ಳಿ 2 ಗ್ರಾಮಗಳು ಬಯಲು ಮುಕ್ತ ಶೌಚಾಲಯವಾಗಿವೆ. ಇನ್ನುಳಿದ 3 ಗ್ರಾಮಗಳಲ್ಲಿ ಶೇಕಡಾ 90ರಷ್ಟು ಬಯಲು ಮುಕ್ತ ಶೌಚಾಲಯಗಳ ಕಾಮಗಾರಿ ಮುಕ್ತಾಯದ ಅಂಚಿಗೆ ಬಂದಿದೆ. ಈಗಾಗಲೇ ಮೂರು ತಿಂಗಳಿನಿಂದ ಕಾಲಿಗೆ ಪಾದರಕ್ಷೆ ಹಾಕದೆ ಪ್ರತಿ ಮನೆ ಮನೆಗೆ ತೆರಳಿ ಶೌಚಾಲಯದ ಬಗ್ಗೆ ಜಾಗೃತಿ ಮೂಡಿಸ್ತಿದ್ದಾರೆ.

    ಬಯಲು ಮುಕ್ತ ಶೌಚಾಲಯದ ಬಗ್ಗೆ ಪ್ರತಿಯೊಬ್ಬ ಮತದಾರನ ಮನೆಗೆ ಕೊರಿಯರ್ ಮೂಲಕ ಅಂಚೆ ಚೀಟಿಗಳನ್ನು ಕಳಿಸಿ ಜಾಗೃತಿ ಮೂಡಿಸ್ತಿದ್ದಾರೆ. ಮಾತ್ರವಲ್ಲ, ವಿದ್ಯಾರ್ಥಿಗಳ ಮೂಲಕ ಬಿತ್ತಿ ಪತ್ರಗಳನ್ನು ಮನೆ ಮನೆಗೆ ತೆರಳುತ್ತಿದ್ದಾರೆ.

    ಇದರ ಜೊತೆಗೆ “ಪಂಚಾಯ್ತಿತಿ ಪರಿಹಾರ” ಎಂಬ ಕಾರ್ಯಕ್ರಮದಲ್ಲಿ ಪ್ರತಿ ವಾರಕ್ಕೆ ಒಂದು ಸಲ ಗ್ರಾಮಕ್ಕೆ ಭೇಟಿ ನೀಡುವ ಈ ತಂಡ ಸಮಸ್ಯೆಗೆ ಪರಿಹಾರ ನೀಡ್ತಿದೆ.

    https://www.youtube.com/watch?v=SWJURNYgmLA

  • ತನ್ನ ಮೇಕೆ ಬಳಿ ಹೋಗಿದ್ದ ವಿದ್ಯಾರ್ಥಿಯ ಕೈ ಕತ್ತರಿಸಿದ ಮಾಲೀಕ

    ತನ್ನ ಮೇಕೆ ಬಳಿ ಹೋಗಿದ್ದ ವಿದ್ಯಾರ್ಥಿಯ ಕೈ ಕತ್ತರಿಸಿದ ಮಾಲೀಕ

    ಬೀದರ್: ಕುಡಿದ ಅಮಲಿನಲ್ಲಿ ವಿದ್ಯಾರ್ಥಿಯೊಬ್ಬನ ಮೇಲೆ ತಲ್ವಾರ್ ನಿಂದ ಹಲ್ಲೆ ನಡೆಸಿದ ಘಟನೆ ಬೀದರ್ ತಾಲೂಕಿನ ಕಾಡವಾದ ಗ್ರಾಮದಲ್ಲಿ ನಡೆದಿದೆ.

    9ನೇ ತರಗತಿಯ ಅನಿಲ್ ಕುಮಾರ್ ಹಲ್ಲೆಗೊಳಗಾದ ವಿದ್ಯಾರ್ಥಿ. ಸಾಬಣ್ಣ ಹಲ್ಲೆ ನಡೆಸಿದ ಆರೋಪಿಯಾಗಿದ್ದಾನೆ. ಸಾಬಣ್ಣನ ಮೇಕೆ ಮನೆಗೆ ಅನಿಲ್ ಕುಮಾರ್ ಹೋಗಿದ್ದರಿಂದ ಕೋಪಗೊಂಡ ಸಾಬಣ್ಣ ಕುಡಿದ ಅಮಲಿನಲ್ಲಿ ಅನಿಲ್ ಮೇಲೆ ತಲ್ವಾರ್ ನಿಂದ ಹಲ್ಲೆ ಮಾಡಿದ್ದಾನೆ.

    ಹಲ್ಲೆಗೊಳಗಾದ ಅನಿಲ್ ಕುಮಾರ್‍ನ ಕೈ ಬಹುತೇಕ ತುಂಡಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಯ ಆವರಣದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಬಗದಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಡ್ಯುಕ್ ಬೈಕ್ ಕ್ರೇಜ್: ವೈದ್ಯಕೀಯ ವಿದ್ಯಾರ್ಥಿ ಬಲಿ

    ಡ್ಯುಕ್ ಬೈಕ್ ಕ್ರೇಜ್: ವೈದ್ಯಕೀಯ ವಿದ್ಯಾರ್ಥಿ ಬಲಿ

    ಬೀದರ್: ಬೈಕ್ ನಿಯಂತ್ರಣ ತಪ್ಪಿದ ಪರಿಣಾಮ ಪಲ್ಟಿ ಹೊಡೆದು ಸ್ಥಳದಲ್ಲಿಯೇ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಬೀದರ್ ಹೊರ ವಲಯದ ಬೆನಕನಹಳ್ಳಿ ರಸ್ತೆಯಲ್ಲಿ ನಡೆದಿದೆ.

    ಬೀದರ್ ವೈದ್ಯಕೀಯ ಮಹಾವಿದ್ಯಾಲಯದ (ಬ್ರೀಮ್ಸ್) ವಿನೋದ ದೊಡಮನಿ (22) ಮೃತ ವಿದ್ಯಾರ್ಥಿ. ಮೃತ ವಿನೋದ ಮೂಲತಃ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ನಿವಾಸಿಯಾಗಿದ್ದು ಹಾಸ್ಟೆಲ್ ನಲ್ಲಿದ್ದುಕೊಂಡು ಎಂಬಿಬಿಎಸ್ ಅಂತಿಮ ವರ್ಷದಲ್ಲಿ ಅಧ್ಯಯನ ಮಾಡುತ್ತಿದ್ದ.

    ಡ್ಯುಕ್ ಬೈಕ್ ಮೇಲೆ ಒಂದು ರೌಂಡ್ ಹೋಗಲು ಕ್ರೇಜ್‍ಗಾಗಿ ಬೆಳಗ್ಗೆ 9 ಗಂಟೆ ಸುಮಾರಿಗೆ ಬೆನಕನಹಳ್ಳಿ ರಸ್ತೆ ಮಾರ್ಗವಾಗಿ ಹೊರಟಿದ್ದ. ಬೈಕ್ ನಿಯಂತ್ರಣ ತಪ್ಪಿದ ಪರಿಣಾಮ ಪಲ್ಟಿ ಹೊಡೆದು ರಸ್ತೆಯಿಂದ ಹೊರಗೆ ಬಿದ್ದಿದ್ದಾನೆ. ತಲೆ ಹಾಗೂ ಮುಖಕ್ಕೆ ಬಲಬಾದ ಪೆಟ್ಟು ಬಿದ್ದಿದ್ದರಿಂದ ವಿನೋದ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

    ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ, ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಜಿಲ್ಲಾ ಆಸ್ಪತ್ರೆಗೆ ತಂದೆ ಹಾಗೂ ಕೆಲವು ಸಂಬಂಧಿಕರು ಬಂದಿದ್ದು, ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಲವ್ ಮಾಡಿ ಹುಡ್ಗಿ ಜೊತೆ ಬೆಂಗ್ಳೂರಿಗೆ ಬಂದವ ಮತ್ತೊಬ್ಬಾಕೆ ಜೊತೆ ಎಂಗೇಜಾದ – ಪತ್ನಿ ನೇಣಿಗೆ!

    ಲವ್ ಮಾಡಿ ಹುಡ್ಗಿ ಜೊತೆ ಬೆಂಗ್ಳೂರಿಗೆ ಬಂದವ ಮತ್ತೊಬ್ಬಾಕೆ ಜೊತೆ ಎಂಗೇಜಾದ – ಪತ್ನಿ ನೇಣಿಗೆ!

    ಬೀದರ್: ಗೃಹಿಣಿಯೊಬ್ಬಳ ಮೃತದೇಹ ಬೆಂಗಳೂರು ನಗರದಲ್ಲಿ ಅನುಮಾನಸ್ಪದವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

    4 ದಿನಗಳ ಹಿಂದೆ ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿರುವ ನಿವಾಸದಲ್ಲಿ ಅಶ್ವಿನಿ ಎಂಬವರ ಮೃತದೇಹ ಪತ್ತೆಯಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪತಿಯೇ ಕೊಲೆ ಮಾಡಿ ನೇಣು ಹಾಕಿದ್ದಾನೆ ಎಂದು ಮೃತ ಅಶ್ವಿನಿಯ ಪೋಷಕರು ಆರೋಪಿಸಿದ್ದಾರೆ.

    ನಡೆದಿದ್ದೇನು?: ಅಶ್ವಿನಿ ಮತ್ತು ನಾಗೇಶ್ ಇಬ್ಬರು ಬೀದರ್ ತಾಲೂಕಿನ ಅಣದೂರು ನಿವಾಸಿಗಳಾಗಿದ್ದು, ಐದು ವರ್ಷಗಳ ಹಿಂದೆ ಪ್ರೀತಿಸಿಸುತ್ತಿದ್ದರು. ನಂತರ ಇವರ ಮದುವೆಗೆ ಮನೆಯವರು ಒಪ್ಪದ ಕಾರಣ ಬೀದರ್ ನಿಂದ ಬೆಂಗಳೂರಿಗೆ ಓಡಿ ಬಂದಿದ್ದರು. ನಂತರ ಇಬ್ಬರು ಮದುವೆಯಾಗಿ ಮಾದನಾಯಕನಹಳ್ಳಿ ವಾಸವಾಗಿದ್ದರು. ಅಶ್ವಿನಿ ಗೃಹಿಣಿಯಾಗಿದ್ದು, ನಾಗೇಶ್ ಮಾತ್ರ ಕೆಲಸಕ್ಕೆ ಹೋಗುತ್ತಿದ್ದನು. ಆದರೆ ದಿನ ಕಳೆಯುತ್ತಿದ್ದಂತೆ ಆರೋಪಿ ನಾಗೇಶ್ ಬೇರೆ ಹುಡುಗಿಯೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾನೆ.

    ಪತಿಯ ಅನೈತಿಕ ಸಂಬಂಧದ ವಿಚಾರ ಅಶ್ವಿನಿಗೆ ತಿಳಿದಿದೆ. ನಂತರ ಅಶ್ವಿನಿ ಮತ್ತು ನಾಗೇಶ್ ಮಧ್ಯೆ ಪ್ರತಿದಿನ ಇದೇ ವಿಚಾರಕ್ಕೆ ಜಗಳ ನಡೆಯುತ್ತಿತ್ತು. ಒಂದು ದಿನ ಅದೇ ವಿಚಾರಕ್ಕೆ ಮತ್ತೆ ಜಗಳವಾಡುತ್ತಿದ್ದಾಗ ಆರೋಪಿ ನಾಗೇಶ್ ಕೋಪಗೊಂಡು ಆಕೆಯ ಮೇಲೆ ಹಲ್ಲೆ ಮಾಡಿದ್ದಾನೆ. ಆದರೆ ಅಂದೇ ಆಕೆ ಬೆಲ್ಟಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

    ಆರೋಪಿ ನಾಗೇಶ್ ಪೊಲೀಸರಿಗೆ ಕರೆ ಮಾಡಿ ನನ್ನ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿದ್ದಾನೆ. ಪೊಲೀಸರು ಸ್ಥಳಕ್ಕೆ ಬಂದು ಆಕೆಯ ಸಂಬಂಧಿಕರಿಗೆ ಮಾಹಿತಿ ತಿಳಿಸಿದ್ದಾರೆ. ತಾನೇ ಕೊಲೆ ಮಾಡಿ ಆತ್ಮಹತ್ಯೆ ಅಂತ ಬಿಂಬಿಸಲು ಬೆಲ್ಟ್ ನಿಂದ ನೇಣು ಹಾಕಿದ್ದಾನೆ ಎಂದು ಮೃತ ಅಶ್ವಿನಿ ಪೋಷಕರು ಆರೋಪಿಸುತ್ತಿದ್ದಾರೆ.

    ಇಂದು ಮೃತ ಅಶ್ವಿನಿ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಬೀದರ್ ಗೆ ತರಲಾಗಿದೆ. ಆದರೆ ಮಗಳ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯಕ್ಕೆ ಈ ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ನಾಗೇಶ್ ನನ್ನು ಬಂಧಿಸಿ ವಿಚಾರಣೆಯನ್ನು ಮುಂದುವರಿಸಿದ್ದಾರೆ.

  • ಪತ್ನಿ ಕುತ್ತಿಗೆಗೆ ಚಾಕು ಇರಿದು ಪತಿ ಪರಾರಿ!

    ಪತ್ನಿ ಕುತ್ತಿಗೆಗೆ ಚಾಕು ಇರಿದು ಪತಿ ಪರಾರಿ!

    ಬೀದರ್: ಪತಿಯೇ ಪತ್ನಿಗೆ ಚಾಕು ಇರಿದ ಘಟನೆಯೊಂದು ಬೀದರ್ ನಗರದ ವಿದ್ಯಾ ಕಾಲೋನಿಯಲ್ಲಿ ನಡೆದಿದೆ.

    ಆರೋಪಿ ಪತಿ ಪತ್ನಿ ಮಹಾದೇವಿಯ ಕುತ್ತಿಗೆಗೆ ಚಾಕು ಇರಿದಿದ್ದಾನೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡು ಪತ್ನಿ ಕುಸಿದು ಬಿದ್ದಿದ್ದಾರೆ. ಬಳಿಕ ಪತಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಸದ್ಯ ಗಾಯಾಳು ಪತ್ನಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಸ್ಥಳಕ್ಕೆ ದೌಡಾಯಿಸಿದ ಬೀದರ್ ಪೊಲೀಸರು, ಇದೊಂದು ಕೌಟುಂಬಿಕ ಕಲಹದಿಂದಾಗಿ ಪತಿ ಈ ಕೃತ್ಯ ಎಸಗಿರಬಹುದೆಂದು ಪ್ರಾಥಮಿಕ ತನಿಖೆಯಲ್ಲಿ ಪೊಲೀಸರು ತಿಳಿಸಿದ್ದಾರೆ.

    ಘಟನೆ ಸಂಬಂಧ ಬೀದರ್ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • 500 ರೂ.ಗಾಗಿ ಮ್ಯಾನ್ ಹೋಲ್ ಗೆ ಇಳಿದ ಕಾರ್ಮಿಕರು!

    500 ರೂ.ಗಾಗಿ ಮ್ಯಾನ್ ಹೋಲ್ ಗೆ ಇಳಿದ ಕಾರ್ಮಿಕರು!

    ಬೀದರ್: 500 ರುಪಾಯಿಗಾಗಿ ಇಬ್ಬರು ವ್ಯಕ್ತಿಗಳು ಮ್ಯಾನ್ ಹೋಲ್‍ಗೆ ಇಳಿದ ಘಟನೆ ಬೀದರ್‍ನಲ್ಲಿ ನಡೆದಿದೆ. ಗಬ್ಬು ನಾರುವ ದುರ್ವಾಸನೆಯ ನಡುವೆ ಚರಂಡಿಯಲ್ಲಿ ತುಂಬಿಕೊಂಡಿದ್ದ ಹೂಳನ್ನು ಎತ್ತುವ ದೃಶ್ಯ ಪಬ್ಲಿಕ್ ಟಿವಿಗೆ ಲಭಿಸಿದೆ.

    ಬೀದರ್ ನಗರದ ಹುಡ್ಕೋ ಕಾಲೋನಿಯಲ್ಲಿ ಇಬ್ಬರು ಕಾರ್ಮಿಕರು ಬಡಾವಣೆಯ ರಸ್ತೆಯಲ್ಲಿದ್ದ ಮ್ಯಾನ್ ಹೋಲ್‍ಗೆ ಇಳಿದು ಸ್ವಚ್ಛಗೊಳಿಸುತ್ತಿರುವ ಅಮಾನವೀಯ ಘಟನೆ ಕಂಡು ಬಂದಿದೆ. ಈ ಬಡಾವಣೆಯಲ್ಲಿ ಚರಂಡಿ ಹೂಳು ತುಂಬಿಕೊಂಡು ಮನೆಗಳಿಗೆ ಚರಂಡಿ ನೀರು ನುಗ್ಗಿ ಗಬ್ಬು ನಾರುವ ವಾಸನೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿತ್ತು. ಹೀಗಾಗಿ 500 ರುಪಾಯಿ ಕೂಲಿ ಪಡೆದು ಇಬ್ಬರು ಕಾರ್ಮಿಕರು ಮ್ಯಾನ್ ಹೋಲ್‍ಗೆ ಇಳಿದಿದ್ದಾರೆ.

    ಕೈಗೆ ಹ್ಯಾಂಡ್ ಗ್ಲೋಸ್ ಹಾಕಿಕೊಳ್ಳದೆ, ಮುಖಕ್ಕೆ ಮಾಸ್ಕ್ ಕೂಡ ಹಾಕಿಕೊಳ್ಳದೆ ಅಪಾಯಕಾರಿಯಾದ ಮ್ಯಾನ್ ಹೋಲ್‍ನಲ್ಲಿ ಎಂಟ್ರಿಕೊಟ್ಟು ಅಸಹಾಯಕ ಕಾರ್ಮಿಕರನ್ನು ಬಳಸಿಕೊಳ್ಳಲಾಗಿದೆ. ಇಂಥ ಅಮಾನವೀಯ ಕೆಲಸಗಳಲ್ಲಿ ಸುರಕ್ಷಿತ ಸಾಧನಗಳನ್ನು ಬಳಸಿ ಸ್ವಚ್ಛತೆ ಮಾಡಬೇಕೆಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ್ದರೂ ರಾಜ್ಯದಲ್ಲಿ ಆದೇಶ ನಿರಂತರ ಉಲ್ಲಂಘನೆಯಾಗುತ್ತಿದೆ.

  • ಖಾಸಗಿ ಬಸ್ ಪಲ್ಟಿ- ಸ್ಥಳದಲ್ಲೇ ಯುವತಿ ಸಾವು, 9 ಜನರಿಗೆ ಗಾಯ

    ಖಾಸಗಿ ಬಸ್ ಪಲ್ಟಿ- ಸ್ಥಳದಲ್ಲೇ ಯುವತಿ ಸಾವು, 9 ಜನರಿಗೆ ಗಾಯ

    ಬೀದರ್: ಖಾಸಗಿ ಬಸ್ ಪಲ್ಟಿಯಾಗಿ ಓರ್ವ ಯುವತಿ ಮೃತಪಟ್ಟು 9 ಜನರು ಗಾಯಗೊಂಡ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 9ರಲ್ಲಿ ನಡೆದಿದೆ.

    ಸ್ವಾತಿ(24) ಮೃತಪಟ್ಟ ಯುವತಿ. ಬಸ್ ಸೋಲಾಪೂರಯಿಂದ ಹೈದ್ರಾಬಾದ್ ಗೆ ಹೊರಟಿದ್ದಾಗ ಈ ಅಪಘಾತ ಸಂಭವಿಸಿದೆ. ಇನ್ನೂ ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಸದ್ಯ ಹುಮ್ನಾಬಾದ್ ಸಂಚಾರಿ ಠಾಣೆಯಲ್ಲಿ ದೂರು ದಾಖಲಾಗಿದೆ.