Tag: Bigbas Kannada 8

  • ನನಗೆ ಆ ಆಘಾತದಿಂದ ಆಚೆ ಬರಲು ಆಗುತ್ತಿಲ್ಲ: ರಘು

    ನನಗೆ ಆ ಆಘಾತದಿಂದ ಆಚೆ ಬರಲು ಆಗುತ್ತಿಲ್ಲ: ರಘು

    ಪ್ರತಿವಾರ ಕೊನೆಯಲ್ಲಿ ಕಿಚ್ಚ ಸುದೀಪ್ ಅವರು ಯೆಸ್ ಆರ್ ನೋ ಪ್ರಶ್ನೆಗಳನ್ನು ಮನೆಯ ಸ್ಪರ್ಧಿಗಳನ್ನು ಕೇಳುತ್ತಾರೆ. ಹಾಗೆಯೇ ಈ ವಾರ ಸುದೀಪ್, ಮೊದಲ ಪ್ರಶ್ನೆಯಲ್ಲಿಯೇ ಸ್ನಾನಕ್ಕೆ ಹೋದ ಮೇಲೆ ಇನ್ಮುಂದೆ ಯಾವುದೇ ಕಾರಣಕ್ಕೂ ರಘುರವರು ಬಾಗಿಲು ತೆಗೆಯುವುದಿಲ್ಲ ಎಂದು ಹೇಳುತ್ತಾರೆ.

    ಈ ವೇಳೆ ಮನೆಮಂದಿ ಯೆಸ್ ಎಂದು ಉತ್ತರಿಸಿದ್ದಾರೆ. ಆಗ ಸುದೀಪ್‍ರವರು ಯೆಸ್ ಯಾಕೆ ಎಂದು ಪ್ರಶಾಂತ್ ಸಂಬರ್ಗಿಯವರನ್ನು ಕೇಳಿದಾಗ, ರಘು ಈಗ ಹೆದರಿಕೊಂಡು ಬಿಟ್ಟಿದ್ದಾರೆ. ಸೋಪ್ ಬೇಕು, ಟವೆಲ್ ಬೇಕು ಎಂದು ಏನೂ ಕೇಳುವುದಿಲ್ಲ. ಬಟ್ಟೆ ಹಾಕಿಕೊಂಡು ಆಚೆ ಬರುತ್ತಾರೆ ಎನ್ನುತ್ತಾರೆ. ನಂತರ ಶಮಂತ್ ಇನ್ನು ಏನೂ ಉಳಿದಿಲ್ಲ ಎಂದು ಹೇಳುತ್ತಾರೆ.

    ಆದರೆ ನೋ ಎಂದಿದ್ದ ಚಕ್ರವರ್ತಿಯವರು, ಶೋ ಮುಗಿದ ನಂತರ ಎಲ್ಲಾ ಗೊತ್ತಾಗಿರುತ್ತದೆ. ಏನು ಭಯವಿರುವುದಿಲ್ಲ. ಒಂದು ಸಾರಿ ಆ ರೀತಿ ಆಗುವ ತನಕ ಅಷ್ಟೇ. ರಘು ಈಗ ಯಾವ ಕಾನ್ಫಿಡೆಂಟ್ಸ್ ಲೆವರ್‍ನಲ್ಲಿದ್ದಾರೆ ಎಂದರೆ ರೊಚ್ಚು ರಘು ಆಗಿದ್ದಾರೆ ಎಂದಿದ್ದಾರೆ.

    ಕೊನೆಗೆ ರಘುರವರು ನಾನು ಆ ಆಘಾತದಿಂದ ಆಚೆ ಬರುವುದಕ್ಕೆ ಆಗುತ್ತಿಲ್ಲ ಎಂದಾಗ, ಸುದೀಪ್‍ರವರು ಪ್ರಶಾಂತ್‍ರವರಿಗೂ ಬರಲು ಆಗುತ್ತಿಲ್ಲ ಎನ್ನುತ್ತಾರೆ. ಈ ವೇಳೆ ರಘು ಪ್ರಶಾಂತ್‍ರವರಿಗೆ ಆಘಾತವಾಗಿರುವಂತೆ ನನಗೆ ಒಂದು ಪರ್ಸೆಂಟ್ ಕೂಡ ಕಾಣಿಸುತ್ತಿಲ್ಲ. ಸ್ನಾನಕ್ಕೆ ಹೋಗುವುದಕ್ಕೂ ಮುನ್ನ ಸೋಪ್, ಶ್ಯಾಂಪೂ ಎಲ್ಲ ಇದ್ಯಾ ಎಂದು ಚೆಕ್ ಮಾಡುತ್ತೇನೆ. ಆದರೆ ಅವತ್ತು ಜಗ್‍ನನ್ನು ಮರೆತು ಹೋಗಿದ್ದೆ ಅಷ್ಟೇ ಸರ್. ಬಾಗಿಲು ತೆರೆದು ಸ್ವಲ್ಪ ಕೈ ಆಚೆ ಹಾಕಿದ್ದೆ ಅಷ್ಟೋತ್ತಿಗೆ ಇವರು ಬಂದು ಬಿಟ್ಟರು. ಅದರಲ್ಲೂ ಅಂದು ನನ್ನನ್ನು ಎಳೆದು ಈಚೆ ಎಲ್ಲಿ ಹಾಕಿಬಿಡುತ್ತಾರೋ ಎಂದು ಭಯವಾಗಿತ್ತು ಎಂದು ಹೇಳುತ್ತಾರೆ. ಈ ವೇಳೆ ರಘು ಮಾತು ಕೇಳಿ ಮನೆಮಂದಿಯೆಲ್ಲಾ ಸಿಕ್ಕಾಪಟ್ಟೆ ನಕ್ಕಿದ್ದಾರೆ.

  • ಪ್ರಶಾಂತ್ ಸಂಬರಗಿಯವರು ನನ್ನಿಂದ ಏನು ಕಿತ್ಕೊಳ್ಳೊಕೆ ಆಗಲ್ಲ: ಶಮಂತ್

    ಪ್ರಶಾಂತ್ ಸಂಬರಗಿಯವರು ನನ್ನಿಂದ ಏನು ಕಿತ್ಕೊಳ್ಳೊಕೆ ಆಗಲ್ಲ: ಶಮಂತ್

    ಬೆಂಗಳೂರು: ಬಿಗ್‍ಬಾಸ್ ಮನೆಗೆ ರೀ ಎಂಟ್ರಿ ಕೊಟ್ಟು ಸ್ಪರ್ಧಿಗಳು ಆಟ ಶುರು ಮಾಡಿದ್ದಾರೆ. ಸದ್ಯ ಪ್ರಶಾಂತ್ ಸಂಬರಗಿ, ಪ್ರಿಯಾಂಕಾ ತಿಮ್ಮೇಶ್, ಚಕ್ರವರ್ತಿ ಒಟ್ಟಿಗೆ ಕುಳಿತು ಚರ್ಚೆ ನಡೆಸುತ್ತಿದ್ದಾಗ, ಶಮಂತ್ ಪ್ರಶಾಂತ್ ಸಂಬರಗಿಗೆ ಚಿಕ್ಕಪ್ಪ ಎಂದು ಕರೆಯುತ್ತಾರೆ. ಇದಕ್ಕೆ ಪ್ರಶಾಂತ್ ಇನ್ನೊಮ್ಮೆ ನೀನು ನನ್ನನ್ನು ಚಿಕ್ಕಪ್ಪ ಎಂದರೆ ಎಂದು ವಾರ್ನ್ ಮಾಡುತ್ತಾರೆ. ಆಗ ಶಮಂತ್ ಚಿಕ್ಕಪ್ಪ, ಚಿಕ್ಕಪ್ಪ ಎಂದು ಮತ್ತೆ ರೇಗಿಸುತ್ತಾರೆ.

    ಈ ವೇಳೆ ಪ್ರಿಯಾಂಕಾ ತಿಮ್ಮೇಶ್, ಪ್ರಶಾಂತ್ ಅವರಿಗೇನಾದರೂ ಮಗಳಿದ್ದಿದ್ದರೆ ಇಷ್ಟೊತ್ತಿಗೆ ಎಂಗೇಜ್‍ಮೆಂಟ್ ಆಗಿರುತ್ತಿತ್ತು ಎಂದು ಶಮಂತ್ ಹೇಳುತ್ತಿದ್ದರು ಎಂದಿದ್ದಾರೆ. ಇದರ ಅರ್ಥ ಇಷ್ಟು ಒಳ್ಳೆಯ ಮಾವ ಸಿಕ್ಕಿದ್ದಾರೆ ಮಗಳನ್ನು ಬಿಡಬಾರದು ಎಂದು ಪ್ರಿಯಾಂಕಾ ತಿಮ್ಮೇಶ್ ವಿವರಿಸುತ್ತಾರುವಾಗ, ಶಮಂತ್ ಮಾವ ಕೆಟ್ಟವರು. ಆದರೆ ನನಗೆ ಒಳ್ಳೆಯವರಷ್ಟೇ ಮಾವ ಬ್ರಿಲಿಯಂಟ್ ಎಂದು ಹೇಳುತ್ತಾರೆ.

    ನಂತರ ಚಕ್ರವರ್ತಿ ಚಂದ್ರಚೂಡ್‍ರವರು ನಿನಗೆ ಪ್ರಶಾಂತ್ ಏನು ಅನಿಸುತ್ತಾರೆ, ನಿನಗೆ ಅವರ ಮೇಲೆ ಏನು ಫೀಲಿಂಗ್ ಇದೆ ಎಂದು ಪ್ರಶ್ನಿಸಿದಾಗ, ಶಮಂತ್ ಪ್ರಶಾಂತ್‍ರವರು ನನಗೆ ಒಂದು ರೀತಿ ಅಂಕಲ್ ಮಾದರಿ, ಚಿಕ್ಕಪ್ಪ ನನ್ನ ಹತ್ತಿರ ಏನು ಕಿತ್ತಿಕೊಳ್ಳುವುದಕ್ಕೆ ಆಗುವುದಿಲ್ಲ. ಬರೆದು ಕೊಂಡುತ್ತೇನೆ ಪ್ರಶಾಂತ್ ಸಂಬರ್ಗಿಯವರು ಶಮಂತ್ ಅವರಿಂದ ಏನು ಕಿತ್ತುಕೊಳ್ಳಲು ಆಗುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ:ತುಂಬಾ ಜನ ನನ್ನ ಮೇಲೆ ದೃಷ್ಟಿ ಹಾಕಿದ್ದಾರೆ ಅಂದ ಶಮಂತ್