Tag: Bigg Boss Kannada 12

  • ಬಿಗ್‌ಬಾಸ್‌ನಿಂದ ಇದುವರೆಗೂ 1 ರೂಪಾಯಿ ಹಣ ಬಂದಿಲ್ಲ ಎಂದ ಕಂಟೆಸ್ಟೆಂಟ್‌ ಸತೀಶ್

    ಬಿಗ್‌ಬಾಸ್‌ನಿಂದ ಇದುವರೆಗೂ 1 ರೂಪಾಯಿ ಹಣ ಬಂದಿಲ್ಲ ಎಂದ ಕಂಟೆಸ್ಟೆಂಟ್‌ ಸತೀಶ್

    ಬಿಗ್‌ಬಾಸ್ (Bigg Boss Kannada 12) ಕಾರ್ಯಕ್ರಮಕ್ಕೆ ಸ್ಪರ್ಧಿಯಾಗಿ ಹೋಗಿದ್ದ ಸತೀಶ್ (Satish) ಈಗ ಎಲಿಮಿನೇಶನ್ ಆಗುವ ಮೂಲಕ ಹೊರಬಂದಿದ್ದಾರೆ. ವೇದಿಕೆಯಲ್ಲೇ ಈ ಕಾರ್ಯಕ್ರಮಕ್ಕಾಗಿ 25 ಲಕ್ಷದ ಬಟ್ಟೆ ಖರೀದಿಸಿರುವುದಾಗಿ ಸತೀಶ್ ಹೇಳಿದ್ದರು. ಹಾಗಾದರೆ ಸ್ಪರ್ಧಿಯಾಗಿ ಒಳ ಹೋಗಲು ಅದೆಷ್ಟು ಸಂಭಾವನೆ ಪಡೆದಿರಬಹುದು ಅನ್ನೋ ಕುತೂಹಲ ಸಹಜ. ಆದರೆ, ‘ಪಬ್ಲಿಕ್ ಟಿವಿ’ಗೆ ನೀಡಿದ ಸಂದರ್ಶನದಲ್ಲಿ ಡಾಗ್ ಸತೀಶ್, ಬಿಗ್‌ಬಾಸ್ ತಮಗೆ ನೀಡಿರುವ ಸಂಭಾವನೆ ವಿಚಾರ ಬಿಚ್ಚಿಟ್ಟಿದ್ದಾರೆ. ಇದುವರೆಗೂ ಬಿಗ್‌ಬಾಸ್ ಕಾರ್ಯಕ್ರಮದಿಂದ ತಮಗೆ 1 ರೂಪಾಯಿ ಹಣ ತಮಗೆ ಬಂದಿಲ್ಲ ಅನ್ನೋದಾಗಿ ಹೇಳಿದ್ದಾರೆ.

    ಬಿಗ್‌ಬಾಸ್ ಕಾರ್ಯಕ್ರಮಕ್ಕೆ ಹೋಗುವ ವೇಳೆ ಪ್ರತಿ ಸ್ಪರ್ಧಿಯೂ ಒಂದೊಂದು ಮೊತ್ತದ ಸಂಭಾವನೆ ಪಡೆದಿರುತ್ತಾರೆ. ಪ್ರತಿ ವಾರವೂ ಅವರಿಗೆ ಹಣ ಸಂದಾಯವಾಗುತ್ತದೆ. ಆದರೆ, ಕಾರ್ಯಕ್ರಮಕ್ಕೆ ಎಂಟ್ರಿ ಕೊಡುವ ಪೂರ್ವದಲ್ಲೂ ಅಡ್ವಾನ್ಸ್ ಹಣ ಹಾಗೂ ಬಳಿಕವೂ ತಮಗೆ ಹಣ ಬಂದಿಲ್ಲ ಎಂದಿದ್ದಾರೆ ಸತೀಶ್. ಇದನ್ನೂ ಓದಿ: 100 ಕೋಟಿ ನಾಯಿ ಲಾಂಚ್ ಮಾಡ್ತೀನಿ- ಸವಾಲೆಸೆದ ಬಿಗ್‌ಬಾಸ್ ಸ್ಪರ್ಧಿ ಸತೀಶ್

    ‘ಆಧಾರ್ ಹಾಗೂ ಪಾನ್ ಕಾರ್ಡ್ ಲಿಂಕ್ ಆಗಿಲ್ಲ. ನಿಮಗೆ ಹಣ ಟ್ರಾನ್ಸ್‌ಫರ್‌ ಆಗುತ್ತಿಲ್ಲ ಎಂದು ಟೀಮ್ ಹೇಳಿತ್ತು. ಆಗ ನಾನು ಹಣವನ್ನ ಕೊಡಿ ಅಂತ ನಿಮ್ಮನ್ನು ಕೇಳಿದ್ನಾ ಎಂದೆ. ನನಗೆ ಹಣ ಮುಖ್ಯವಲ್ಲ, ನನ್ನ ಟರ್ನ್ವೋವರ್ ಚೆನ್ನಾಗಿದೆ. ನನಗೆ ಜನರ ಮುಂದೆ ಗುರುತಿಸಿಕೊಳ್ಳುವುದು ಮುಖ್ಯ. ವೇದಿಕೆ ಮುಖ್ಯವಾಗಿತ್ತು. ನಾನು ಒಂದು ಸಿನಿಮಾ ಕಾರ್ಯಕ್ರಮಕ್ಕೆ ನಾಯಿ ಹಿಡಿದುಕೊಂಡು ಹೋದ್ರೆ ಸಾಕು ಲಕ್ಷ ಲಕ್ಷ ಹಣ ಕೊಡ್ತಾರೆ. ಬಿಗ್‌ಬಾಸ್‌ ಮನೆಯಲ್ಲಿ ಇರೋವ್ರೆಲ್ಲ ಗೆಸ್ಟ್ ಆಗಿ ಹೋದ್ರೆ ಮೂವತ್ತೋ ನಲವತ್ತೋ ಸಾವಿರ ಕೊಡ್ತಾರಂತೆ’ ಎಂದಿದ್ದಾರೆ.

    ಈ ಮೂಲಕ ಬಿಗ್‌ಬಾಸ್ ಕಾರ್ಯಕ್ರಮದಿಂದ ಬರುವ ಹಣ ತಮಗೆ ಮುಖ್ಯವಲ್ಲ ಅಂತ ಸತೀಶ್ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಕಾಂತಾರ ಚಿತ್ರದ ಬಗ್ಗೆ ದೈವ ಯಾವುದೇ ಅಭಯ ನುಡಿ ನೀಡಿಲ್ಲ: ಬಲವಾಂಡಿ-ಪಿಲಿಚಂಡಿ ದೈವಸ್ಥಾನ ಸ್ಪಷ್ಟನೆ

  • ಅ.18, 19ಕ್ಕೆ ಬಿಗ್ ಬಾಸ್ ಕನ್ನಡ ಮಿಡ್ ಸೀಸನ್ ಫಿನಾಲೆ

    ಅ.18, 19ಕ್ಕೆ ಬಿಗ್ ಬಾಸ್ ಕನ್ನಡ ಮಿಡ್ ಸೀಸನ್ ಫಿನಾಲೆ

    ಬಿಗ್ ಬಾಸ್ ಕನ್ನಡ ಸೀಸನ್ 12, Expect The Unexpected ಎಂಬ ಥೀಮ್ ನಲ್ಲಿ ಅತ್ಯಂತ ರೋಚಕವಾಗಿ ಸಾಗುತ್ತಾ ಬಂದಿದೆ. ಈಗ ಇನ್ನೊಂದು ಅನಿರೀಕ್ಷಿತವನ್ನು ಕೊಡಲಿದೆ ಬಿಗ್ ಬಾಸ್! ಅದುವೇ ಮಿಡ್ ಸೀಸನ್ ಫಿನಾಲೆ.

    ಹೌದು. ಇದೇ ಮೊದಲ ಬಾರಿಗೆ ಮೂರನೇ ವಾರಕ್ಕೆ ಫಿನಾಲೆ ನಡೆಯಲಿದೆ. ಇದು ನಿರೀಕ್ಷೆಗೂ ಮೀರಿದ, ಕುತೂಹಲಕರ ತಿರುವುಗಳನ್ನು ತರಲಿದೆ.

    ಈ ಫಿನಾಲೆಯಲ್ಲಿ ಭಾರೀ `ಎಲಿಮಿನೇಷನ್’ ನಡೆಯಲಿದ್ದು, ಜೊತೆಗೆ ಹೊಸ ವೈಲ್ಡ್ ಕಾರ್ಡ್ ಸ್ಪರ್ಧಿಗಳು ಮನೆಯಲ್ಲಿ ಕಾಲಿಡುತ್ತಿದ್ದಾರೆ. ಇವರ ಆಗಮನದಿಂದ ಈಗಾಗಲೇ ಇರುವ ಸ್ಪರ್ಧಿಗಳ ಆಟಕ್ಕೆ ಹೊಸ ಉತ್ಸಾಹ ಮತ್ತು ತಿರುವು ಸಿಗಲಿದೆ. ಇದಲ್ಲದೆ, ಈ ಬಾರಿ ಮಿಡ್ ಸೀಸನ್ ವಿನ್ನರ್ ಯಾರೆಂದು ಘೋಷಿಸಲಾಗುವುದು ಮತ್ತು ಅವರಿಗೆ ಬಹುಮಾನ ಕೂಡಾ ನೀಡಲಾಗುತ್ತದೆ.

    ಈ ವಾರಾಂತ್ಯ ಪ್ರೇಕ್ಷಕರಿಗೆ ನೃತ್ಯ ಪ್ರದರ್ಶನ, ಹಾಸ್ಯಭರಿತ ಮಾತುಕತೆ ಹಾಗೂ ಅನಿರೀಕ್ಷಿತ ಸೆಲೆಬ್ರಿಟಿಗಳು ಕೂಡಾ ಬಿಗ್ ಬಾಸ್ ಮನೆಗೆ ಬರಲಿದ್ದಾರೆ. ಅವರು ಮನೆಯಲ್ಲಿ ಆಟಗಳನ್ನು ಆಡುವುದಲ್ಲದೇ, ಸ್ಪರ್ಧಿಗಳೊಂದಿಗೆ ಬೆರೆಯುತ್ತಾ ಮರೆಯಲಾಗದ ಮನರಂಜನೆ ನೀಡಲಿದ್ದಾರಂತೆ. ಒಟ್ಟು 6 ಗಂಟೆಗಳ ಮನರಂಜನಾ ಸಂಭ್ರಮ ಇದಾಗಿದೆ. ಅಕ್ಟೋಬರ್ 18 ಮತ್ತು 19 ರಂದು ಕಲರ್ಸ್ ಕನ್ನಡದಲ್ಲಿ ರಾತ್ರಿ 8 ರಿಂದ 11 ಗಂಟೆಗಳವರೆಗೆ ಪ್ರಸಾರವಾಗುವ ಮಿಡ್ ಸೀಸನ್ ಫಿನಾಲೆ ಈಗಿನಿಂದಲೇ ಕುತೂಹಲ ಮೂಡಿಸಿದೆ.

  • ಕನ್ನಡಿಗರ ಆಶೀರ್ವಾದ ಇರೋತನಕ ಬಿಗ್‌ ಬಾಸ್‌ ನಿಲ್ಲಲ್ಲ – ಮೌನ ಮುರಿದ ಕಿಚ್ಚ ಸುದೀಪ್‌

    ಕನ್ನಡಿಗರ ಆಶೀರ್ವಾದ ಇರೋತನಕ ಬಿಗ್‌ ಬಾಸ್‌ ನಿಲ್ಲಲ್ಲ – ಮೌನ ಮುರಿದ ಕಿಚ್ಚ ಸುದೀಪ್‌

    – ಡಿಕೆ ಸಾಹೇಬ್ರು, ನಲಪಾಡ್‌ಗೆ ಧನ್ಯವಾದ ಎಂದ ಕಿಚ್ಚ

    ಜಾಲಿವುಡ್‌ ಸ್ಟುಡಿಯೋ ಮತ್ತೆ ತೆರೆಯಲು ಅನುಮತಿ ನೀಡಿದ ಬಳಿಕ ಬಿಗ್‌ ಬಾಸ್‌ ಶೂಟಿಂಗ್‌ ಮತ್ತೆ ಶುರುವಾಗಿದೆ. ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss Kannada 12) ಎರಡನೇ ವಾರದ ಪಂಚಾಯಿತಿ ಇಂದು (ಅಕ್ಟೋಬರ್ 11) ನಡೆದಿದೆ. ಸುದೀಪ್ ಅವರು ಪ್ರತಿಬಾರಿಯಂತೆ ಈ ಬಾರಿಯೂ ಸಹ ಸ್ಪರ್ಧಿಗಳ ತಪ್ಪು-ಸರಿಗಳ ಪರಾಮರ್ಶೆ ಮಾಡಿದ್ರು. ಕಾಕ್ರೂಚ್ ಸುಧಿಗೆ ಕೊಟ್ಟಿದ್ದ ಅಸುರ ಟಾಸ್ಕ್​ ಬಗ್ಗೆ ಸುದೀಪ್ ಚರ್ಚೆ ಮಾಡಿದ್ರು.

    ಇದೇ ವೇಳೆ ವಿವಾದದ ಬಗ್ಗೆ ಕಿಚ್ಚ ಸುದೀಪ್‌ (Kichcha Sudeep) ಮೌನ ಮುರಿದು ಮಾತನಾಡಿದ್ರು. ಕನ್ನಡಿಗರ ಆಶೀರ್ವಾದ ಇರೋತನಕ ಬಿಗ್ ಬಾಸ್ ಸುಲಭವಾಗಿ ನಿಲ್ಲಲ್ಲ. ಇಲ್ಲಿ ಆಗಿದ್ದೇ ಬೇರೆ.. ಹೊರಗಡೆ ನಡಿತಾ ಇದ್ದಿದ್ದೆ ಬೇರೆ. ಇಲ್ಲಿ ನಡೆದಿರುವ ವಿಚಾರಕ್ಕೂ ಬಿಗ್‌ ಬಾಸ್‌ಗೂ, ಕಲರ್ಸ್‌ ಕನ್ನಡಕ್ಕೂ ಯಾವುದೇ ಸಂಬಂಧ ಇಲ್ಲ. ವಿವಾದ ಬಂದಿದ್ದು ನಾವು ಶೋ ನಡೆಸುತ್ತಿದ್ದ ಜಾಗದ್ದು. ಕೆಲವೊಮ್ಮೆ ಖಾಲಿ ಜಾಗಕ್ಕೆ ಒಂದು ಅಡ್ರೆಸ್‌ ಬೇಕಾಗುತ್ತೆ. ಆ ಅಡ್ರೆಸ್ಸೆ ಬಿಸ್‌ ಬಾಸ್‌ ಆಗಿ ಹೋಯ್ತು ಅಂತ ಕಿಚ್ಚ ಸ್ಪಷ್ಟನೆ ಕೊಟ್ರು.

    ಇಲ್ಲಿ ನಡೆದ ಘಟನೆಗೂ ಬಿಗ್‌ ಬಾಸ್‌ಶೋಗೂ ಯಾವುದೇ ಸಂಬಂಧ ಇಲ್ಲ. ಬಿಗ್ ಬಾಸ್ ಎಷ್ಟೋ ಜನಕ್ಕೆ ಅನ್ನಹಾಕಿದೆ, ದಾರಿದೀಪ ಆಗಿದೆ. ಅತಿದೊಡ್ಡ ಶೋ ಕೆಲವರ ಕಣ್ಣು ಕುಕ್ಕುತ್ತಾ ಇರುತ್ತೆ. ಖಾಲಿ ಜಾಗಕ್ಕೆ ಬಿಗ್ ಬಾಸ್ ಅನ್ನೋ ಹೆಸರಿಟ್ಟರೂ ಅದಕ್ಕೊಂದು ತೂಕ ಇದೆ ಎಂದು ಹೇಳಿದ್ರು.

    ಇಂತಹ ಸಂದರ್ಭದಲ್ಲಿ ಶೋ ಮತ್ತೆ ಶುರುವಾಗಲು ಕಾರಣರಾದ ಡಿಕೆ ಸಾಹೇಬ್ರಿಗೆ ಹಾಗೂ ನನ್ನ ಸ್ನೇಹಿತ ನಲಪಾಡ್‌ ಅವರಿಗೆ ಧನ್ಯವಾದ ಹೇಳಲೇಬೇಕು. ಹಾಗೆಯೇ ಸಪೋರ್ಟ್‌ ಮಾಡಿದ ಆಡಳಿತ ಮಂಡಳಿಯ ಎಲ್ಲರಿಗೂ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದ್ರು.

  • ಸ್ಪರ್ಧಿಗಳು ಮನೆಯೊಳಗೆ ಎಂಟ್ರಿ ಕೊಡ್ತಿರುವ ವೀಡಿಯೋ ರಿಲೀಸ್ ಮಾಡಿದ ಬಿಗ್‌ಬಾಸ್ ಟೀಂ

    ಸ್ಪರ್ಧಿಗಳು ಮನೆಯೊಳಗೆ ಎಂಟ್ರಿ ಕೊಡ್ತಿರುವ ವೀಡಿಯೋ ರಿಲೀಸ್ ಮಾಡಿದ ಬಿಗ್‌ಬಾಸ್ ಟೀಂ

    ವಾಯುಮಾಲಿನ್ಯ ನಿಯಂತ್ರಣ ಮಂಡಳಿ ಜಾಲಿವುಡ್ ಸ್ಟುಡಿಯೋಗೆ (Jollywood Studios) ಬೀಗ ಜಡಿದ ಪರಿಣಾಮ ಬಿಗ್‌ಬಾಸ್ ಸ್ಪರ್ಧಿಗಳನ್ನ (Bigg Boss Contestants) ಅಲ್ಲಿಂದ ಸ್ಥಳಾಂತರಗೊಳಿಸಿ ಚಿತ್ರೀಕರಣಕ್ಕೆ ಫುಲ್‌ಸ್ಟಾಪ್ ಇಡಲಾಗಿತ್ತು. ಬಳಿಕ ಸಮಸ್ಯೆ ಬಗೆಹರಿಸುವಂತೆ ಸೂಚಿಸಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ ಕಳುಹಿಸಿದ ಬಳಿಕ ರಾತ್ರೋರಾತ್ರಿ ಬಿಗ್‌ಬಾಸ್ ಮನೆಗೆ ಸ್ಪರ್ಧಿಗಳನ್ನ ವಾಪಸ್ ಕರೆದುಕೊಂಡು ಬರಲಾಯಿತು. ಈ ದೃಶ್ಯ ಬಿಗ್‌ಬಾಸ್ (Bigg Boss Kannada 12) ಕಾರ್ಯಕ್ರಮದಲ್ಲಿ ಪ್ರಸಾರವಾಗುವ ಸಂಭವ ಇದೆ. ಆ ಕುರಿತು ಪ್ರೋಮೋ ರಿಲೀಸ್ ಮಾಡಿದೆ ಟೀಂ.

    17 ಸ್ಪರ್ಧಿಗಳನ್ನೊಳಗೊಂಡ ಬಿಗ್‌ಬಾಸ್ ಮನೆಯ ಮುಖ್ಯದ್ವಾರ ತೆರೆದು ಎಲ್ಲರೂ ಮನೆಗೆ ಎಂಟ್ರಿ ಕೊಡ್ತಿರುವ ವೀಡಿಯೋ ಇದೀಗ ರಿಲೀಸ್ ಆಗಿದೆ. ಒಟ್ಟು 17 ಸ್ಪರ್ಧಿಗಳನ್ನ ಬಿಗ್‌ಬಾಸ್ ಹೌಸ್ ಹತ್ತಿರದ ಈಗಲ್‌ಟನ್ ರೆಸಾರ್ಟ್ಗೆ ಶಿಫ್ಟ್ ಮಾಡಲಾಗಿತ್ತು. ಅಲ್ಲಿ ಮಂಗಳವಾರ ರಾತ್ರಿ 7 ಗಂಟೆಯಿಂದ ಗುರುವಾರದವರೆಗೂ ಇದ್ದ ಸ್ಪರ್ಧಿಗಳು ರಾತ್ರೋರಾತ್ರಿ ಮತ್ತೆ ಬಿಗ್‌ಬಾಸ್ ಹೌಸ್‌ಗೆ ವಾಪಸ್ಸಾಗಿದ್ದಾರೆ.

    ಹೀಗೆ ವಾಪಸ್ಸಾದ ಸ್ಪರ್ಧಿಗಳನ್ನ ವೆಲ್‌ಕಮ್ ಬ್ಯಾಕ್ ಎಂದು ಹೇಳಿ ಬಿಗ್‌ಬಾಸ್ ಸ್ಪಾಗತಿಸುವ ದೃಶ್ಯವನ್ನ ವಾಹಿನಿಯು ಪ್ರೊಮೋದಲ್ಲಿ ತೋರಿಸಿದೆ. ಹೀಗೆ ರಾತ್ರೋರಾತ್ರಿ ಎಲ್ಲಾ ಸ್ಪರ್ಧಿಗಳು ಮತ್ತೆ ಬಿಗ್ ಮನೆಗೆ ಆಗಮಿಸಿದ್ದು, ಅಲ್ಪವಿರಾಮ ಪಡೆದಿದ್ದ ದೊಡ್ಮನೆಯ ಆಟ ಮತ್ತೆ ಶುರುವಾಗಿದೆ.

  • ಒಂದು ಬಾರಿ ನೋಟಿಸ್ ಕೊಟ್ಟ ಮೇಲೆ ಅದು ಸರಿ ಆಗೋವರೆಗೂ ಬೀಗ ತೆಗೆಯೋದು ಸರಿಯಲ್ಲ: ರಾಮಲಿಂಗಾರೆಡ್ಡಿ

    ಒಂದು ಬಾರಿ ನೋಟಿಸ್ ಕೊಟ್ಟ ಮೇಲೆ ಅದು ಸರಿ ಆಗೋವರೆಗೂ ಬೀಗ ತೆಗೆಯೋದು ಸರಿಯಲ್ಲ: ರಾಮಲಿಂಗಾರೆಡ್ಡಿ

    ಬೆಂಗಳೂರು: ಒಂದು ಬಾರಿ ಬಿಗ್‌ಬಾಸ್ (Bigg Boss Kannada 12) ಶೋಗೆ ನೋಟಿಸ್ ಕೊಟ್ಟ ಮೇಲೆ ಅದು ಸರಿ ಆಗೋವರೆಗೂ ಬೀಗ ತೆಗೆಯೋದು ಸರಿಯಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ (Ramalingareddy) ಬಿಗ್‌ಬಾಸ್ ವಿಚಾರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ನಡೆಗೆ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.

    ಬಿಗ್‌ಬಾಸ್‌ಗೆ ಬೀಗ ಹಾಕಿ ಮತ್ತೆ ತೆಗೆದ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಾನು ಈ ವಿಷಯವನ್ನು ಮಾಧ್ಯಮಗಳ ಮೂಲಕ ನೋಡಿದೆ. ಮಾಲಿನ್ಯ ನಿಯಂತ್ರಣ ಬೋರ್ಡ್ ಅಧ್ಯಕ್ಷ ನರೇಂದ್ರಸ್ವಾಮಿ ಅವರು ಬಿಗ್‌ಬಾಸ್ ನಿಯಮ ಮೀರಿದ್ದಾರೆ ಅಂತ ನೋಟಿಸ್ ಕೊಟ್ಟಿದ್ದರು. ಅವರು ನೋಟಿಸ್‌ಗೂ ಕ್ಯಾರೆ ಎನ್ನಲಿಲ್ಲ ಅಂತ ಬೀಗ ಹಾಕಿದ್ರು. ಈಗ ನಿನ್ನೆ ಡಿಕೆ ಶಿವಕುಮಾರ್ (D.K.Shivakumar) ಅನುಮತಿ ಕೊಡಿ ಅಂತ ಹೇಳಿದ್ದಾರೆ ಅಂತ ಮಾಧ್ಯಮಗಳಲ್ಲಿ ನೋಡಿದೆ. ನನಗೆ ಇಷ್ಟೇ ಮಾಹಿತಿ ಗೊತ್ತಿರೋದು. ನಾನು ಊರಲ್ಲಿ ಇರಲಿಲ್ಲ. ಇಷ್ಟೇ ಗೊತ್ತಿರೋದು ಅಂತ ತಿಳಿಸಿದರು. ಇದನ್ನೂ ಓದಿ: ಬಿಗ್‌ಬಾಸ್ ಮನೆ ಬೀಗ ಓಪನ್ ಆದ್ರೂ ಶೂಟಿಂಗ್ ಇನ್ನೂ ಶುರುವಾಗಿಲ್ಲ!

    ಒಂದು ಸಾರಿ ನೋಟಿಸ್ ಕೊಟ್ಟ ಮೇಲೆ, ಮುಚ್ಚಿದ ಮೇಲೆ ಅದು ಸರಿ ಆಗೋವರೆಗೂ ತೆಗೆಯೋಕೆ ಅವಕಾಶ ಕೊಡಬಾರದು. ನನಗೆ ಡಿಸಿ ಮಾಹಿತಿ ಕೊಡೋಕೆ ನಾನು ಊರಲ್ಲಿ ಇರಲಿಲ್ಲ. ಮಾಲಿನ್ಯ ‌ಬೋರ್ಡ್ ಸ್ವಾಯತ್ತ ಸಂಸ್ಥೆ. ಅದರ ಕೆಲಸ ಅದು ಮಾಡಿದೆ. ಏನಾಗಿದೆ ತಿಳಿದುಕೊಳ್ಳುತ್ತೇನೆ. ಈಗ ಏನ್ ಆಯ್ತು ಅಂತ ಡಿಕೆ ಶಿವಕುಮಾರ್ ಅವರನ್ನೇ ಕೇಳಿ ಎಂದರು.

    ಪರಿಸರ ನಿಯಮ ಉಲ್ಲಂಘಿಸಿದ ಆರೋಪದಲ್ಲಿ ಬಿಡದಿಯಲ್ಲಿರುವ ಜಾಲಿವುಡ್‌ ಸ್ಟುಡಿಯೋಸ್‌ ಬಂದ್‌ ಮಾಡಲಾಗಿತ್ತು. ಅಲ್ಲೇ ಇರುವ ಬಿಗ್‌ಬಾಸ್‌ ಮನೆಗೂ ಇದರ ಬಿಸಿ ತಟ್ಟಿತ್ತು. ರಾತ್ರೋರಾತ್ರಿ ಬಿಗ್‌ಬಾಸ್‌ ಸ್ಪರ್ಧಿಗಳನ್ನು ಮನೆಯಿಂದ ಹೊರಹಾಕಲಾಗಿತ್ತು. ಒಂದು ದಿನದ ನಾಟಕೀಯ ಬೆಳವಣಿಗೆ ಬೆನ್ನಲ್ಲೇ, ಜಾಲಿವುಡ್‌ ಸ್ಟುಡಿಯೋಸ್‌ ಗೇಟ್‌ಗೆ ಹಾಕಿರುವ ಸೀಲ್‌ ತೆಗೆಯುವಂತೆ ಡಿಸಿಎಂ ಸೂಚನೆ ನೀಡಿದರು. ಈಗ ಜಾಲಿವುಡ್‌ ಓಪನ್‌ ಆಗಿದ್ದು, ಸ್ಪರ್ಧಿಗಳು ಕೂಡ ಬಿಗ್‌ಬಾಸ್‌ ಮನೆಗೆ ವಾಪಸ್‌ ಆಗಿದ್ದಾರೆ. ಇದನ್ನೂ ಓದಿ: ಡಿಕೆಶಿ ವೈಲ್ಡ್‌ ಕಾರ್ಡ್‌ಎಂಟ್ರಿ – ಬಿಗ್‌ಬಾಸ್‌ ಮನೆ ಓಪನ್‌ | ರಾತ್ರಿ ಏನೇನಾಯ್ತು? ಇಲ್ಲಿದೆ ಇನ್‌ಸೈಡ್‌ ಸ್ಟೋರಿ

  • ಬಿಗ್‌ಬಾಸ್ ಮನೆ ಬೀಗ ಓಪನ್ ಆದ್ರೂ ಶೂಟಿಂಗ್ ಇನ್ನೂ ಶುರುವಾಗಿಲ್ಲ!

    ಬಿಗ್‌ಬಾಸ್ ಮನೆ ಬೀಗ ಓಪನ್ ಆದ್ರೂ ಶೂಟಿಂಗ್ ಇನ್ನೂ ಶುರುವಾಗಿಲ್ಲ!

    ಜಾಲಿವುಡ್ ಸ್ಟುಡಿಯೋಸ್‌ (Jollywood Studios) ಬೀಗ ಓಪನ್ ಆಗಿದೆ. ಒಂದು ಕಡೆ ಜಾಲಿವುಡ್ ಹಾಗೂ ಬಿಗ್‌ಬಾಸ್‌ಗೆ (Bigg Boss Kannada 12) ಗುಡ್ ನ್ಯೂಸ್ ಸಿಕ್ಕಿದೆ. ರಾತ್ರೋರಾತ್ರಿ ಬಿಗ್‌ಬಾಸ್ ಸ್ಪರ್ಧಿಗಳು ವಾಪಸ್ ಬಿಗ್‌ಹೌಸ್ ಸೇರಿದ್ದಾರೆ. ಆದರೆ, ಬಿಗ್‌ಬಾಸ್ ಮನೆಯೊಳಗೆ ಹೋದರೂ ಶೂಟಿಂಗ್ ಇನ್ನೂ ಶುರುವಾಗಿಲ್ಲ.

    ಬಿಗ್‌ಬಾಸ್ ಆಡಳಿತ ಮಂಡಳಿ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಆದೇಶ ಕಾಪಿ ಬರೋವರೆಗೂ ಶೂಟಿಂಗ್ ಶುರು ಮಾಡಲು ಹಿಂದೇಟು ಹಾಕಿದೆ. ಡಿಸಿಎಂ ಡಿಕೆ ಶಿವಕುಮಾರ್ ಜಾಲಿವುಡ್ ಸ್ಟುಡಿಯೋಸ್‌ ಓಪನ್ ಮಾಡಿಸಿದರೂ ಶುರುವಾಗಿಲ್ಲ ಬಿಗ್‌ಬಾಸ್ ಶೂಟಿಂಗ್. ಮಾಲಿನ್ಯ ನಿಯಂತ್ರಣ ಮಂಡಳಿಯ ಅನುಮತಿ ಸಿಗುವ ತನಕ ಬಿಗ್‌ಬಾಸ್ ಆಯೋಜಕರ ತಂಡ ಶೂಟಿಂಗ್ ಶುರು ಮಾಡುತ್ತಿಲ್ಲ. ಇದನ್ನೂ ಓದಿ: ಡಿಕೆಶಿ ವೈಲ್ಡ್‌ ಕಾರ್ಡ್‌ಎಂಟ್ರಿ – ಬಿಗ್‌ಬಾಸ್‌ ಮನೆ ಓಪನ್‌ | ರಾತ್ರಿ ಏನೇನಾಯ್ತು? ಇಲ್ಲಿದೆ ಇನ್‌ಸೈಡ್‌ ಸ್ಟೋರಿ

    ಅಂದಹಾಗೆ ಇನ್ನು ಎರಡು ದಿನಗಳ ಕಾಲ ಆಗುವಷ್ಟು ಎಪಿಸೋಡ್ ಬ್ಯಾಂಕಿಂಗ್ ಇರುವ ಧೈರ್ಯ ಬಿಗ್‌ಬಾಸ್ ಆಡಳಿತ ಮಂಡಳಿಗಿದೆ. ಹೀಗಾಗಿ, ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಸಿಗುವವರೆಗೂ ಕಾಯುತ್ತಿದೆ. ಬಿಗ್‌ಬಾಸ್ ಆಡಳಿತ ಮಂಡಳಿ. ‘ಪಬ್ಲಿಕ್ ಟಿವಿ’ಗೆ ಬಿಗ್‌ಬಾಸ್ ಆಡಳಿತ ಮಂಡಳಿಯ ಉನ್ನತ ಮೂಲಗಳ ಮಾಹಿತಿ ಸಿಕ್ಕಿದೆ.

  • ಬಿಗ್‌ಬಾಸ್‌ಗೆ ರಿಲೀಫ್‌| ಜಾಲಿವುಡ್‌ ಸ್ಟುಡಿಯೋಸ್‌ ಓಪನ್‌ಗೆ ಡಿಸಿಎಂ ಸೂಚನೆ – ಧನ್ಯವಾದ ತಿಳಿಸಿದ ಕಿಚ್ಚ ಸುದೀಪ್‌

    ಬಿಗ್‌ಬಾಸ್‌ಗೆ ರಿಲೀಫ್‌| ಜಾಲಿವುಡ್‌ ಸ್ಟುಡಿಯೋಸ್‌ ಓಪನ್‌ಗೆ ಡಿಸಿಎಂ ಸೂಚನೆ – ಧನ್ಯವಾದ ತಿಳಿಸಿದ ಕಿಚ್ಚ ಸುದೀಪ್‌

    ಜಾಲಿವುಡ್‌ ಸ್ಟುಡಿಯೋಸ್‌ ಓಪನ್‌ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸೂಚನೆ ನೀಡಿದ್ದು, ಬಿಗ್‌ಬಾಸ್‌ಗೆ ರಿಲೀಫ್‌ ಸಿಕ್ಕಿದೆ. ಮನವಿಗೆ ಸ್ಪಂದಿಸಿದ ಡಿಸಿಎಂಗೆ ಕಿಚ್ಚ ಸುದೀಪ್‌ ಧನ್ಯವಾದ ತಿಳಿಸಿದ್ದಾರೆ.

    ಸುದೀಪ್‌ ಎಕ್ಸ್‌ ಪೋಸ್ಟ್‌ನಲ್ಲೇನಿದೆ?
    ಸಕಾಲಿಕ ಸ್ಪಂದನೆಗಾಗಿ ಡಿ.ಕೆ.ಶಿವಕುಮಾರ್ ಸರ್‌ಗೆ ನಾನು ಹೃತ್ಪೂರ್ವಕವಾಗಿ ಧನ್ಯವಾದ ಹೇಳುತ್ತೇನೆ. ಇತ್ತೀಚಿನ ಅವ್ಯವಸ್ಥೆ ಅಥವಾ ಗೊಂದಲಗಳಲ್ಲಿ ಬಿಗ್‌ಬಾಸ್‌ ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ನನ್ನ ಕರೆಗೆ ತಕ್ಷಣ ಸ್ಪಂದಿಸಿದ್ದಕ್ಕಾಗಿ DCM ಅವರನ್ನು ನಾನು ನಿಜವಾಗಿಯೂ ಪ್ರಶಂಸಿಸುತ್ತೇನೆ. ನಲಪಾಡ್‌ ಅವರ ಸಮರ್ಪಿತ ಪ್ರಯತ್ನಗಳಿಗೆ ಧನ್ಯವಾದಗಳು. ಬಿಗ್‌ಬಾಸ್‌ ಕನ್ನಡ ಸೀಸನ್‌ 12 ಇಲ್ಲಿಯೇ ಇರುತ್ತದೆ ಎಂದು ಸುದೀಪ್‌ ಸಂದೇಶ ಹಂಚಿಕೊಂಡಿದ್ದಾರೆ.

    ಪರಿಸರ ನಿಯಮ ಉಲ್ಲಂಘನೆ ಆರೋಪದಲ್ಲಿ ಜಾಲಿವುಡ್‌ ಸ್ಟುಡಿಯೋಸ್‌ ಬಂದ್‌ ಮಾಡಲಾಗಿತ್ತು. ಸ್ಟುಡಿಯೋಸ್‌ನಲ್ಲೇ ಇರುವ ಬಿಗ್‌ಬಾಸ್‌ ಮನೆಗೂ ಇದರ ಬಿಸಿ ತಟ್ಟಿತ್ತು. ಮನೆಯಲ್ಲಿದ್ದ ಎಲ್ಲಾ ಸ್ಪರ್ಧಿಗಳನ್ನು ಹೊರಗೆ ಹಾಕಲಾಗಿತ್ತು. ಇದು ಭಾರಿ ಚರ್ಚೆಗೆ ಕಾರಣವಾಗಿತ್ತು.

    ಡಿಸಿಎಂ ಡಿಕೆ ಶಿವಕುಮಾರ್‌ ಅವರ ನಟ್ಟು ಬೋಲ್ಟು ಹೇಳಿಕೆ ಇದೇ ಹೊತ್ತಲ್ಲಿ ಚರ್ಚೆಗೆ ಬಂದಿತು. ಸುದೀಪ್ ಟಾರ್ಗೆಟ್ ಬಗ್ಗೆಯೇ ಬಿಸಿಬಿಸಿ ಚರ್ಚೆಯಾಗಿತ್ತು. ಕನ್ನಡ ಇಂಡಸ್ಟ್ರಿ ಟಾರ್ಗೆಟ್ ಮಾಡಿದ್ದಾರೆಂದು ಡಿಸಿಎಂ ಡಿಕೆ ಶಿವಕುಮಾರ್ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಆರೋಪಗಳ ಸುರಿಮಳೆ ಬಂದಿತ್ತು.

    ಈಗ ಸ್ಟುಡಿಯೋಸ್‌ ಓಪನ್‌ಗೆ ಡಿಸಿಎಂ ಸೂಚನೆ ಕೊಟ್ಟಿದ್ದಾರೆ. ಅದಕ್ಕೆ, Thank U sir ಅಂತಾ ಸ್ವತಃ ಕಿಚ್ಚ ಸುದೀಪ್ ಡಿಸಿಎಂ ಡಿಕೆಶಿಗೆ ಧನ್ಯವಾದ ತಿಳಿಸಿದ್ದಾರೆ.

  • ತಕ್ಷಣವೇ ಜಾಲಿವುಡ್‌ ಸ್ಟುಡಿಯೋಸ್‌ ಸೀಲ್‌ ತೆಗೆಯಿರಿ: ಬೆ.ದಕ್ಷಿಣ ಡಿಸಿಗೆ ಡಿಕೆಶಿ ಸೂಚನೆ

    ತಕ್ಷಣವೇ ಜಾಲಿವುಡ್‌ ಸ್ಟುಡಿಯೋಸ್‌ ಸೀಲ್‌ ತೆಗೆಯಿರಿ: ಬೆ.ದಕ್ಷಿಣ ಡಿಸಿಗೆ ಡಿಕೆಶಿ ಸೂಚನೆ

    – ಈಗಲ್‌ಟನ್‌ ರೆಸಾರ್ಟ್‌ನಿಂದ ಬಿಗ್‌ಬಾಸ್‌ ಮನೆಗೆ 17 ಸ್ಪರ್ಧಿಗಳು ಇಂದೇ ಶಿಫ್ಟ್‌

    ಜಾಲಿವುಡ್‌ ಬಂದ್‌ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಬಿಗ್‌ಬಾಸ್‌ಗೆ ಕೊನೆಗೂ ಗುಡ್‌ನ್ಯೂಸ್‌ ಸಿಕ್ಕಿದೆ. ತಕ್ಷಣವೇ ಜಾಲಿವುಡ್‌ ಸ್ಟುಡಿಯೋಸ್‌ ಸೀಲ್‌ ತೆಗೆಯುವಂತೆ ಬೆಂಗಳೂರು ದಕ್ಷಿಣ ಡಿಸಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ನಿರ್ದೇಶನ ನೀಡಿದ್ದಾರೆ.

    ಡಿಸಿಎಂ ಎಕ್ಸ್‌ ಪೋಸ್ಟ್‌ನಲ್ಲೇನಿದೆ?
    ಈ ಕುರಿತು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಡಿಕೆಶಿ, ಬಿಗ್‌ಬಾಸ್ ಕನ್ನಡ ಚಿತ್ರೀಕರಣ ನಡೆಯುತ್ತಿರುವ ಬಿಡದಿಯಲ್ಲಿರುವ ಜಾಲಿವುಡ್ ಆವರಣದ ಸೀಲ್ ಅನ್ನು ತೆಗೆದುಹಾಕಲು ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿಗೆ ನಾನು ನಿರ್ದೇಶನ ನೀಡಿದ್ದೇನೆ.

    ಪರಿಸರ ಅನುಸರಣೆ ಪ್ರಮುಖ ಆದ್ಯತೆಯಾಗಿ ಉಳಿದಿದ್ದರೂ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ನಿಗದಿಪಡಿಸಿದ ಮಾನದಂಡಗಳಿಗೆ ಅನುಗುಣವಾಗಿ ಉಲ್ಲಂಘನೆಗಳನ್ನು ಪರಿಹರಿಸಲು ಸ್ಟುಡಿಯೋಗೆ ಸಮಯ ನೀಡಲಾಗುವುದು.

    ಕನ್ನಡ ಮನರಂಜನಾ ಉದ್ಯಮವನ್ನು ಬೆಂಬಲಿಸಲು ನಾನು ಬದ್ಧನಾಗಿರುತ್ತೇನೆ, ಜೊತೆಗೆ ಪರಿಸರ ಸಂರಕ್ಷಣೆಯ ಬಗ್ಗೆ ನಮ್ಮ ಜವಾಬ್ದಾರಿಯನ್ನು ಎತ್ತಿಹಿಡಿಯುತ್ತೇನೆ ಎಂದು ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

  • ಬಿಗ್‌ಬಾಸ್‌ ಶೋ ಬಂದ್‌ – ರಾತ್ರೋರಾತ್ರಿ ಮನೆಯಿಂದ ಎಲ್ಲಾ ಸ್ಪರ್ಧಿಗಳು ಹೊರಕ್ಕೆ

    ಬಿಗ್‌ಬಾಸ್‌ ಶೋ ಬಂದ್‌ – ರಾತ್ರೋರಾತ್ರಿ ಮನೆಯಿಂದ ಎಲ್ಲಾ ಸ್ಪರ್ಧಿಗಳು ಹೊರಕ್ಕೆ

    ರಿಸರ ನಿಯಮ ಉಲ್ಲಂಘನೆ ಆರೋಪದಲ್ಲಿ ಜಾಲಿವುಡ್‌ ಸ್ಟುಡಿಯೋಸ್‌ಗೆ ಬೀಗ ಬಿದ್ದಿದ್ದು, ಅಲ್ಲೇ ನಡೆಯುವ ಬಿಗ್‌ಬಾಸ್‌ ಶೋ ಕೂಡ ಬಂದ್‌ ಆಗಿದೆ. ಬಿಗ್‌ಬಾಸ್‌ ಸ್ಪರ್ಧಿಗಳು ಮನೆಯಿಂದ ಹೊರಬಂದಿದ್ದಾರೆ.

    ಅಧಿಕೃತವಾಗಿ ಬಿಗ್‌ಬಾಸ್‌ ಮನೆಗೆ ಬೀಗ ಹಾಕಲಾಗಿದೆ. ಸ್ಪರ್ಧೆಯಲ್ಲಿದ್ದ ಎಲ್ಲರನ್ನೂ ರಾತ್ರಿ ಮನೆಯಿಂದ ಹೊರಹಾಕಲಾಗಿದೆ. ಸ್ವತಃ ತಹಶೀಲ್ದಾರ್‌ ತೇಜಸ್ವಿನಿಯವರು ಮುಂದೆ ನಿಂತು ಸ್ಪರ್ಧಿಗಳು ಹೊರಗೆ ಕರೆತಂದಿದ್ದಾರೆ.

    ಬಿಗ್‌ಬಾಸ್‌ ದಿಢೀರ್‌ ಸ್ಥಗಿತದಿಂದ ಸ್ಪರ್ಧಿಗಳು, ತಂತ್ರಜ್ಞರು ಸೇರಿದಂತೆ 700 ಕ್ಕೂ ಹೆಚ್ಚು ಜನರು ಮನೆಗೆ ವಾಪಸ್‌ ಆಗುವಂತಾಗಿದೆ. ಆರು ತಿಂಗಳ ಕಾಲ ಮೂರು ಶಿಫ್ಟ್‌ನಲ್ಲಿ ತಂತ್ರಜ್ಞರು ಕೆಲಸ ಮಾಡುತ್ತಿದ್ದರು.

    ಐದು ಕೋಟಿಗೂ ಅಧಿಕ ವೆಚ್ಚದಲ್ಲಿ ಬಿಗ್‌ ಬಾಸ್‌ ಮನೆ ನಿರ್ಮಾಣವಾಗಿತ್ತು. ಈಗ ತಾತ್ಕಾಲಿಕವಾಗಿ ಅನಾಥವಾಗಲಿದೆ. ಅರಮನೆ ವಿನ್ಯಾಸದಲ್ಲಿ ಬಿಗ್‌ ಬಾಸ್‌ ಮನೆಯನ್ನು ನಿರ್ಮಿಸಲಾಗಿತ್ತು. ಕಿಚ್ಚ ಸುದೀಪ್‌ ಆಶಯದಂತೆ ಇದೇ ಮೊದಲ ಬಾರಿಗೆ ಅದ್ಧೂರಿಯಾಗಿ ಮನೆ ನಿರ್ಮಾಣಗೊಂಡಿತ್ತು.

  • ಜಾಲಿವುಡ್‌ ಸ್ಟುಡಿಯೋಸ್‌ಗೆ ಬಿತ್ತು ಬೀಗ – ಬಿಗ್‌ ಬಾಸ್‌ ಸ್ಥಗಿತಕ್ಕೆ ಸೂಚನೆ

    ಜಾಲಿವುಡ್‌ ಸ್ಟುಡಿಯೋಸ್‌ಗೆ ಬಿತ್ತು ಬೀಗ – ಬಿಗ್‌ ಬಾಸ್‌ ಸ್ಥಗಿತಕ್ಕೆ ಸೂಚನೆ

    ರಾಮನಗರ: ಪರಿಸರ ನಿಯಮ ಉಲ್ಲಂಘನೆ ಆರೋಪದಲ್ಲಿ ಜಾಲಿವುಡ್‌ ಸ್ಟುಡಿಯೋಸ್‌ಗೆ (Jollywood Studios) ಬೀಗ ಬಿದ್ದಿದೆ. ಬಿಗ್‌ ಬಾಸ್‌ (Bigg Boss  Kannada 12) ನಡೆಯುತ್ತಿರುವ ಜಾಗಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಬೀಗ ಜಡಿದಿದ್ದಾರೆ.

    ನಿಯಮ ಮೀರಿ ಜಾಲಿವುಡ್‌ ಸ್ಟುಡಿಯೋಸ್‌ ನಡೆಸುತ್ತಿರುವ ಬಗ್ಗೆ ನೋಟಿಸ್‌ ನೀಡಲಾಗಿತ್ತು. ಆದರೆ, ಯಾವುದೇ ಪಾಲನೆ ಆಗದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಇಂದು ಸಂಜೆ ಸ್ಟುಡಿಯೋಸ್‌ಗೆ ಭೇಟಿ ನೀಡಿದರು. ಇದನ್ನೂ ಓದಿ: ಜಾಲಿವುಡ್‌ ಸ್ಟುಡಿಯೋಸ್‌ ಬಂದ್‌ಗೆ ನೋಟಿಸ್ -‌ ಬಿಗ್‌ ಬಾಸ್‌ ಮನೆಗೆ ಬೀಳುತ್ತಾ ಬೀಗ?

    ರಾಮನಗರ ತಹಶೀಲ್ದಾರ್‌ ತೇಜಸ್ವಿನಿ, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರ ಸ್ಥಳಕ್ಕೆ ಭೇಟಿ ನೀಡಿ ಜಾಲಿವುಡ್‌ ಒಳಗೆ ಪರಿಶೀಲನೆ ನಡೆಸಿದರು.

    ನೋಟಿಸ್ ತೆಗೆದುಕೊಳ್ಳಲು ಜಾಲಿವುಡ್ ಆಡಳಿತ ಮಂಡಳಿ ನಕಾರ ಮಾಡಿತು. ಆಗ ಜಾಲಿವುಡ್ ಸ್ಟುಡಿಯೋಸ್‌ ಸಿಬ್ಬಂದಿಯನ್ನು ತಹಶೀಲ್ದಾರ್ ತರಾಟೆಗೆ ತೆಗೆದುಕೊಂಡರು. ನೋಟಿಸ್ ಸ್ವೀಕರಿಸೋದಕ್ಕೆ ಬರಲು ಅರ್ಧ ಗಂಟೆ ಬೇಕಾ ಎಂದು ಗರಂ ಆದರು. ಇದನ್ನೂ ಓದಿ: ಅಕ್ಕ, ಬಾವನ ಜೊತೆ ಗಲಾಟೆ – ಬಿಗ್‌ ಬಾಸ್‌ ರಂಜಿತ್‌ ಮೇಲೆ ದೂರು ದಾಖಲು

    ಕೂಡಲೇ ನೋಟೀಸ್ ತೆಗೆದುಕೊಳ್ಳಿ. ಅಧಿಕೃತವಾಗಿ ಇಂದು ಸೀಜ್ ಮಾಡ್ತೀವಿ. ಸಾರ್ವಜನಿಕರಿಗೆ ತೊಂದರೆ ಆಗದಂತೆ ಸಂಜೆ 7 ಗಂಟೆ ವರೆಗೂ ಎಕ್ಸಿಟ್ ಗೇಟ್ ಓಪನ್ ಮಾಡಿಕೊಳ್ಳಿ. ಕೂಡಲೇ ಜಾಲಿವುಡ್ ಸ್ಟುಡಿಯೋ ಕ್ಲೋಸ್ ಮಾಡುವಂತೆ ಸೂಚನೆ ನೀಡಿದರು.

    ಕೊನೆಗೆ ಜಾಲಿವುಡ್ ಆಡಳಿತ ಮಂಡಳಿ ನೋಟಿಸ್‌ ಸ್ವೀಕರಿಸಿತು. ನಾಳೆಯಿಂದ ಜಾಲಿವುಡ್ ಸ್ಟುಡಿಯೋಸ್‌ ಯಾವುದೇ ಕಾರ್ಯಾಚರಣೆ ಮಾಡಬಾರದು. ಎಲ್ಲಾ ರೀತಿಯ ಕಾರ್ಯಚಟುವಟಿಕೆ ಸ್ಥಗಿತ ಮಾಡುವಂತೆ ಸೂಚನೆ ನೀಡಲಾಯಿತು. ಸ್ಟುಡಿಯೋಸ್‌ ಸ್ವತಃ ತಾವೇ ನಿಂತು ತಹಶೀಲ್ದಾರ್‌ ಬೀಗ ಹಾಕಿದರು. ಬಿಗ್‌ ಬಾಸ್‌ ಸ್ಥಗಿತಕ್ಕೂ ಸೂಚನೆ ನೀಡಿದರು.

    ಬಿಗ್ ಬಾಸ್‌ನಿಂದ ಆಚೆ ಬರ್ತಾರಾ ಸ್ಪರ್ಧಿಗಳು?
    ಸೀಲ್‌ಡೌನ್ ಆದಮೇಲೆ ಒಳಗೆ ಯಾವುದೇ ಆಕ್ಟಿವಿಟಿ ನಡೆಯುವಂತಿಲ್ಲ. ಯಾವುದೇ ವ್ಯಕ್ತಿಗಳೂ ಇರುವಂತಿಲ್ಲ. ಹಾಗಾಗಿ, ಬಿಗ್ ಬಾಸ್ ಮನೆಯಿಂದ ಸ್ಪರ್ಧಿಗಳನ್ನ ಆಚೆ ಕಳುಹಿಸುವ ಸಾಧ್ಯತೆ ಇದೆ.