Tag: bigg boss mini season

  • ಜಗಳವಾಡಿ ಕ್ಷಮೆ ಕೇಳುವುದರೊಳಗೆ ತಂದೆ ಹೆಣವಾಗಿದ್ದರು: ಅಭಿನವ್

    ಜಗಳವಾಡಿ ಕ್ಷಮೆ ಕೇಳುವುದರೊಳಗೆ ತಂದೆ ಹೆಣವಾಗಿದ್ದರು: ಅಭಿನವ್

    ಬಿಗ್‍ಬಾಸ್ ಮಿನಿ ಸೀಸನ್‍ನ ಸ್ಪರ್ಧಿಯಾಗಿರುವ ಧಾರವಾಹಿ ನಟ ಅಭಿನವ್ ತಮ್ಮ ತಂದೆ ಸಾವನ್ನಪ್ಪಿರುವ ದಿನವನ್ನು ನೆನೆದು ಕಣ್ಣೀರು ಹಾಕಿದ್ದಾರೆ.

    ಬಿಗ್‍ಬಾಸ್ ವೇದಿಕೆ ಮೇಲೆ ನೋವುಗಳನ್ನು ಹೇಳಿಕೊಳ್ಳೋಕೆ ಅವಕಾಶ ನೀಡಲಾಗಿತ್ತು. ಈ ವೇಳೆ ಎಲ್ಲರೂ ತಮ್ಮ ನೋವುಗಳನ್ನು ಹೇಳಿಕೊಂಡಿದ್ದಾರೆ. ಅದೇ ರೀತಿ ಅಭಿನವ್ ತಾವು ತಂದೆ ಕಳೆದುಕೊಂಡ ವಿಚಾರವನ್ನು ಹೇಳಿಕೊಂಡಿದ್ದಾರೆ. ನಾವು ದೆಹಲಿಗೆ ಹೊರಟಿದ್ದೆವು. ನನ್ನ ತಂದೆ ಹಾಗೂ ನನ್ನ ನಡುವೆ ಜಗಳವಾಗಿತ್ತು. ಮೂರು ದಿನ ಅವರನ್ನು ಭೇಟಿ ಮಾಡಿರಲಿಲ್ಲ. ಅಂದು ಅವರು ಮನೆಗೆ ಬರಬೇಕಿತ್ತು. ಆದರೆ ಬಂದಿದ್ದು ಅವರ ಹೆಣ. ನಾನು ಅವರ ಬಳಿ ಕ್ಷಮೆ ಕೇಳಬೇಕಿತ್ತು. ಅದಕ್ಕೂ ಅವಕಾಶ ನೀಡದೇ ಅವರು ನನ್ನನ್ನು ಬಿಟ್ಟು ಹೋದರು ಎಂದು ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ:  ಸಾಯೋಕಿಂತ ಮುಂಚೆ ನನ್ನ ಅಪ್ಪನ ನೋಡ್ಬೇಕು: ವೈಷ್ಣವಿ

    ಅಭಿನವ್ ಹುಟ್ಟಿದ್ದು, ಬೆಳೆದಿದ್ದು ದೆಹಲಿಯಲ್ಲಿ. ಅವರ ಕುಟುಂಬ ದೆಹಲಿಯಲ್ಲಿದ್ದ ಕಾರಣ ಅವರು ಅಲ್ಲಿಯೇ ಇರುವ ಅನಿವಾರ್ಯತೆ ಎದುರಾಗಿತ್ತು. ಅಭಿನವ್ ಅವರು ದೆಹಲಿಯಲ್ಲಿದ್ದಾಗ ತಂದೆಯನ್ನು ಕಳೆದುಕೊಂಡೆ. ನಾನು ಕ್ಷಮೆ ಕೇಳುವ ಮೊದಲೇ ತಂದೆ ಮೃತಪಟ್ಟಿದ್ದಾರೆ ಎಂದು ಅಭಿನವ್ ಹೇಳುವಾಗ ಸ್ಪರ್ಧಿಗಳು ಕೂತಲ್ಲಿಯೇ ಕಣ್ಣೀರು ಹಾಕಿದ್ದಾರೆ.

    ಅಭಿನವ್ ಖಾಸಗಿ ವಾಹಿನಿಯಲ್ಲಿ ಪ್ರಸಸಾರವಾಗುವ ನನ್ನರಸಿ ರಾಧೆ ಧಾರಾವಾಹಿಯಲ್ಲಿ ಅಗಸ್ತ್ಯ ಪಾತ್ರದ ಮೂಲಕ ಹೆಚ್ಚು ಗುರುತಿಸಿಕೊಂಡಿದ್ದಾರೆ. ಈ ಪಾತ್ರ ಅವರಿಗೆ ಸಾಕಷ್ಟು ಜನಪ್ರಿಯತೆ ತಂದುಕೊಟ್ಟಿದೆ. ತೆರೆಮೇಲಿನ ಪಾತ್ರವನ್ನು ನೋಡಿ ಇಷ್ಟಪಟ್ಟಿದ್ದ ವೀಕ್ಷಕರಿಗೆ ಈಗ ಅಭಿನವ್ ಅವರ ಜೀವನ ಕಥೆ ಕೇಳಿ ಸಾಕಷ್ಟು ನೋವಾಗಿದೆ. ಬಿಗ್‍ಬಾಸ್ ಮಿನಿ ಸೀಸನ್ ಮೂಲಕ ಧಾರವಾಹಿಯ ನಟ, ನಟಿಯರ ಈ ಹಿಂದೆ ಪಟ್ಟಿರುವ ಕಷ್ಟವನ್ನು ಎಳೆ ಎಳೆಯಾಗಿ ಬಿಚ್ಚಿಡುತ್ತಿದ್ದಾರೆ.

  • ಸಾಯೋಕಿಂತ ಮುಂಚೆ ನನ್ನ ಅಪ್ಪನ ನೋಡ್ಬೇಕು: ವೈಷ್ಣವಿ

    ಸಾಯೋಕಿಂತ ಮುಂಚೆ ನನ್ನ ಅಪ್ಪನ ನೋಡ್ಬೇಕು: ವೈಷ್ಣವಿ

    ಬೆಂಗಳೂರು: ಬಿಗ್‍ಬಾಸ್ ಮಿನಿ ಸೀಸನ್‍ನಲ್ಲಿ ಸ್ಪರ್ಧಿಯಾಗಿರುವ ಧಾರಾವಾಹಿ ನಟಿ ವೈಷ್ಣವಿ ತಮ್ಮ ತಂದೆಯನ್ನು ಒಮ್ಮೆ ನೋಡಬೇಕು ಎಂದು ಹೇಳುತ್ತಾ ಕಣ್ಣೀರು ಹಾಕಿದ್ದಾರೆ.

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಮಿಥುನ ರಾಶಿ ಸೀರಿಯಲ್ ಮೂಲಕ ಫೇಮಸ್ ಆದ ನಟಿ ವೈಷ್ಣವಿ ಅವರು ಇತ್ತೀಚೆಗೆ ದೊಡ್ಮನೆಯಲ್ಲಿ ಮಕ್ಕಳಂತೆ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ತಮ್ಮ ಮನದಾಳದ ನೋವನ್ನು ಎಲ್ಲರ ಎದುರು ಹೇಳಿಕೊಂಡಿದ್ದಾರೆ. ವೈಷ್ಣವಿ ಮಾತನಾಡಿರುವುದು ಹೃದಯಸ್ಪರ್ಶಿ ಆಗಿದೆ. ಅದನ್ನು ಕೇಳಿ ಬಿಗ್‍ಬಾಸ್ ಮನೆಯ ಇನ್ನುಳಿದ ಸದಸ್ಯರು ಕೂಡ ಕಣ್ಣೀರು ಸುರಿಸಿದ್ದಾರೆ. ಅಪ್ಪನನ್ನು ನೋಡಬೇಕು ಎಂದು ಕಣ್ಣೀರು ಹಾಕುತ್ತೀರುವ ದೃಶ್ಯ ವೀಕ್ಷಕರ ಕಣ್ಣು ಒದ್ದೆ ಮಾಡುವಂತಿದೆ.

    ನನಗೆ ಅಪ್ಪನ ಹೆಸರು ಗೊತ್ತಾಗಿದ್ದು 10ನೇ ಕ್ಲಾಸ್‍ನಲ್ಲಿ. ನನಗೆ ಅಪ್ಪ ಇದ್ದಾರೆ ಎನಿಸುತ್ತದೆ. ಅವರು ಸತ್ತಿಲ್ಲ. ಅವರು ನಮ್ಮ ಜೊತೆ ಕೂಡ ಇಲ್ಲ. ನಾನು ಅವರನ್ನು ನೋಡಿಯೇ ಇಲ್ಲ. ಇವಳಿಗೆ ಇವರ ಅಪ್ಪನ ಹೆಸರೇ ಗೊತ್ತಿಲ್ಲ ಎಂದು ನನ್ನ ಎದುರಿಗೇ ಜನರು ಆಡಿಕೊಳ್ಳುತ್ತಿದ್ದರು. ನಮ್ಮ ಅಪ್ಪ ಸಾಯುವುದಕ್ಕಿಂತ ಮುಂಚೆ ನಾನು ಅವರನ್ನ ನೋಡಬೇಕು. ಒಂದೇ ಒಂದು ಬಾರಿ ಅವರನ್ನು ನಾನು ಅಪ್ಪ ಎಂದು ಕರೆಯಬೇಕು ಅಂತ ತುಂಬ ಆಸೆ ಇದೆ ಎನ್ನುತ್ತ ವೈಷ್ಣವಿ ಕಣ್ಣೀರು ಸುರಿಸಿದ್ದಾರೆ. ಇದನ್ನೂ ಓದಿ: ದೈಹಿಕ ಹಾಗೂ ಮಾನಸಿಕ ಅತ್ಯಾಚಾರಕ್ಕೆ ಕೊನೆ ಯಾವಾಗ?: ಶ್ರುತಿ

    ತೆರೆಮೇಲೆ ಖುಷಿಖುಷಿಯಾಗಿ ಮನರಂಜಿಸುವ ನಟ-ನಟಿಯರ ರಿಯಲ್ ಲೈಫ್ ಬಗ್ಗೆ ಅಭಿಮಾನಿಗಳಿಗೆ ಹೆಚ್ಚೇನೂ ಗೊತ್ತಿರುವುದಿಲ್ಲ. ಸೆಲೆಬ್ರಿಟಿಗಳ ಬದುಕಿನಲ್ಲಿಯೂ ಹೇಳಿಕೊಳ್ಳಲಾಗದಂತಹ ನೋವಿನ ಘಟನೆಗಳು ಇರುತ್ತವೆ. ಬಿಗ್‍ಬಾಸ್ ಮಿನಿ ಸೀಸನ್‍ನಲ್ಲಿ ಭಾಗವಹಿಸಿರುವ ಕೆಲವು ಕಲಾವಿದರು ತಮ್ಮ ಬದುಕಿನ ಅಂತಹ ಕೆಲವು ನೋವುಗಳನ್ನು ಪ್ರೇಕ್ಷಕರ ಮುಂದೆ ಹಂಚಿಕೊಂಡಿದ್ದಾರೆ.