Tag: bigg boss season 8

  • ಅಧಿಕೃತವಾಗಿ ‘ಬಿಗ್ ಬಾಸ್’ ಮನೆಗೆ ಕಾಲಿಟ್ಟ ಕಂಟೆಸ್ಟೆಂಟ್ : ನಟ ನಾಗಾರ್ಜುನ ಬದಲಾಗಲಿಲ್ಲ

    ಅಧಿಕೃತವಾಗಿ ‘ಬಿಗ್ ಬಾಸ್’ ಮನೆಗೆ ಕಾಲಿಟ್ಟ ಕಂಟೆಸ್ಟೆಂಟ್ : ನಟ ನಾಗಾರ್ಜುನ ಬದಲಾಗಲಿಲ್ಲ

    ಬಿಗ್ ಬಾಸ್ ತೆಲುಗು ಸೀಸನ್ 8(Bigg Boss Season 8)  ಶುರುವಾಗಿದೆ. ಈ ಸೀಸನ್‍ ನಾನಾ ಕಾರಣಗಳಿಂದಾಗಿ ಕುತೂಹಲ ಮೂಡಿಸಿತ್ತು. ಕಳೆದ ವರ್ಷದಂತೆ ಈ ವರ್ಷವೂ ನಿರೂಪಕರ ಬದಲಾವಣೆ ಕುರಿತು ಸಾಕಷ್ಟು ಚರ್ಚೆ ಎದ್ದಿತ್ತು. ನಟ ನಾಗಾರ್ಜುನ (Nagarjuna) ಬದಲು ಬೇರೆ ನಿರೂಪಕರು ಈ ಬಾರಿ ಇರಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಈ ಮಾತು ಸುಳ್ಳಾಗಿದೆ. ಬಿಗ್ ಬಾಸ್ ತೆಲುಗು ಸೀಸನ್ 8 ಅನ್ನು ನಾಗಾರ್ಜುನ ಅವರೇ ನಡೆಸಿಕೊಡುತ್ತಿದ್ದಾರೆ.

    ಈ ಸೀಸನ್ ಸಾಕಷ್ಟು ಕಾರಣಗಳಿಂದಾಗಿ ನೋಡುಗರ ಗಮನ ಸೆಳೆಯಲಿದೆ. ಕನ್ನಡದ ನಾಲ್ವರು ಈ ಬಾರಿ ಬಿಗ್ ಬಾಸ್ ತೆಲುಗು ಶೋನಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಕನ್ನಡದಲ್ಲಿ ಮೂಡಿ ಬಂದ ಮನೆಯೇ ಮಂತ್ರಾಲಯ ಧಾರಾವಾಹಿಯ ನಿಖಿಲ್, ವಿದ್ಯಾ ವಿನಾಯಕ ನಟಿ ಯಶ್ಮಿ ಗೌಡ, ಕನ್ನಡದ ಬಿಗ್ ಬಾಸ್ ನಲ್ಲೂ ಕಾಣಿಸಿಕೊಂಡಿದ್ದ ಪ್ರೇರಣಾ, ಪೃಥ್ವಿರಾಜ್ ಶೆಟ್ಟಿ ಹೀಗೆ ನಾಲ್ವರು ಕಲಾವಿದರು ಈ ಬಾರಿ ತೆಲುಗು ಬಿಗ್ ಬಾಸ್ ಮನೆಯ ಪ್ರವೇಶ ಮಾಡಿದ್ದಾರೆ.

    ಕನ್ನಡದಲ್ಲಿ ಬಿಗ್ ಬಾಸ್ ಶುರುವಾಗೋ ಮುನ್ನವೇ ತೆಲುಗಿನಲ್ಲಿ ಗ್ರ್ಯಾಂಡ್ ಓಪನಿಂಗ್ ಆಗಿದೆ. 14 ಸ್ಪರ್ಧಿಗಳು ದೊಡ್ಮನೆಗೆ ಪ್ರವೇಶ ಮಾಡಲಿದ್ದಾರೆ. ಅದರಲ್ಲಿ ನಾಲ್ವರು ಕನ್ನಡದ ಮೂಲದವರೇ ಇದ್ದಾರೆ ಅನ್ನೋದು ವಿಶೇಷ. ಮುಂದಿನ ದಿನಗಳಲ್ಲಿ ಯಾವೆಲ್ಲ ಕಂಟೆಸ್ಟೆಂಟ್ ಗಳು ಗಮನ ಸೆಳೆಯುತ್ತಾರೆ ಅನ್ನೋದನ್ನ ಕಾದು ನೋಡಬೇಕು.

  • ಬಿಗ್ ಬಾಸ್ ಶೋ ನಿರೂಪಣೆ ಮಾಡಲ್ಲ: ನಟ ಕಮಲ್ ಹಾಸನ್

    ಬಿಗ್ ಬಾಸ್ ಶೋ ನಿರೂಪಣೆ ಮಾಡಲ್ಲ: ನಟ ಕಮಲ್ ಹಾಸನ್

    ಸ್ಟಾರ್ ನಟ ಕಮಲ್ ಹಾಸನ್ (Kamal Haasan) ಕಳೆದ 7 ವರ್ಷಗಳಿಂದ ಬಿಗ್ ಬಾಸ್ ಕಾರ್ಯಕ್ರಮ ನಿರೂಪಣೆ ಮಾಡುತ್ತಾ ಬಂದಿದ್ದರು. ಅವರ ನಿರೂಪಣೆಯ ಶೈಲಿಯನ್ನು ಅಭಿಮಾನಿಗಳು ಮೆಚ್ಚಿಕೊಂಡಿದ್ದರು. ಇದೀಗ ಬಿಗ್ ಬಾಸ್ ಶೋ ಮಾಡಲ್ಲ ಎಂದು ಅಭಿಮಾನಿಗಳಿಗೆ ಕಮಲ್ ಹಾಸನ್ ಪತ್ರ ಬರೆದಿದ್ದಾರೆ. ಇದನ್ನೂ ಓದಿ:ವಿಕ್ಕಿ ಕೌಶಲ್ ಜೊತೆಗಿನ ‘ಚಾವಾ’ ಚಿತ್ರಕ್ಕಾಗಿ ಮರಾಠಿ ಕಲಿತ ರಶ್ಮಿಕಾ ಮಂದಣ್ಣ

    7 ವರ್ಷಗಳ ಹಿಂದೆ ಶುರುವಾದ ನನ್ನ ಬಿಗ್ ಬಾಸ್ ಪಯಣಕ್ಕೆ ಬ್ರೇಕ್ ನೀಡಲು ನಿರ್ಧರಿಸಿದ್ದೇನೆ ಎಂದು ಭಾರವಾದ ಹೃದಯದಿಂದ ನಿಮಗೆ ತಿಳಿಸುತ್ತಿದ್ದೇನೆ. ಈ ಮೊದಲೇ ಒಪ್ಪಿಕೊಂಡ ಸಿನಿಮಾಗಳ ಕೆಲಸದ ಕಾರಣದಿಂದ ನನಗೆ ಈ ಬಾರಿಯ ಬಿಗ್ ಬಾಸ್ ಶೋ ನಿರೂಪಣೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಕಮಲ್ ಹಾಸನ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

     

    View this post on Instagram

     

    A post shared by Kamal Haasan (@ikamalhaasan)

    ‘ಬಿಗ್ ಬಾಸ್’ ಕಾರ್ಯಕ್ರಮದ ಮೂಲಕ ನಿಮ್ಮ ಮನ ಮತ್ತು ಮನೆ ತಲುಪಿದ್ದೇನೆ. ಅಗಾಧ ಪ್ರೀತಿ ಮತ್ತು ಕಾಳಜಿಯನ್ನು ತೋರಿಸಿದ್ದೀರಿ. ನಿಮ್ಮ ಬೆಂಬಲದಿಂದಾಗಿ ಬಿಗ್ ಬಾಸ್ ತಮಿಳು ರಿಯಾಲಿಟಿ ಶೋ ನನ್ನ ಪಾಲಿಗೆ ಬೆಸ್ಟ್ ಆಯಿತು. ಕಲಿಕೆಯ ಅನುಭವ ನೀಡಿದ ಈ ಶೋಗೆ ನಾನು ಋಣಿಯಾಗಿದ್ದೇನೆ. ಸ್ಪರ್ಧಿಗಳಿಂದ ಹಿಡಿದು ಪ್ರತಿಯೊಬ್ಬರಿಗೂ ನನ್ನ ಧನ್ಯವಾದಗಳು ಎಂದು ಕಮಲ್ ಹಾಸನ್ ತಿಳಿಸಿದ್ದಾರೆ.

    ಇನ್ನೂ ತಮಿಳಿನ ಬಿಗ್ ಬಾಸ್ ಶೋಗೆ ಮುಂದಿನ ನಿರೂಪಕ ಯಾರು ಎಂಬುದನ್ನು ವಾಹಿನಿ ಅಧಿಕೃತವಾಗಿ ತಿಳಿಸಬೇಕಿದೆ. ಹೀಗಿರುವಾಗ ಮುಂದಿನ ಹೋಸ್ಟ್‌ ಯಾರಿರಬಹುದು ಎಂಬುದರ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಮೂಡಿದೆ.

  • ಶೀಘ್ರದಲ್ಲೇ ‘ಬಿಗ್ ಬಾಸ್’ ಶೋ ಶುರು- ಸ್ಪರ್ಧಿಗಳ ಲಿಸ್ಟ್‌ ಔಟ್‌

    ಶೀಘ್ರದಲ್ಲೇ ‘ಬಿಗ್ ಬಾಸ್’ ಶೋ ಶುರು- ಸ್ಪರ್ಧಿಗಳ ಲಿಸ್ಟ್‌ ಔಟ್‌

    ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಮತ್ತೆ ಶುರುವಾಗ್ತಿದೆ. ಶೀಘ್ರದಲ್ಲೇ ತೆಲುಗಿನ ಬಿಗ್ ಬಾಸ್ ಸೀಸನ್ 8 (Bigg Boss Telugu 8) ಶುರುವಾಗಲಿದೆ. ಈ ಮೂಲಕ ಫ್ಯಾನ್ಸ್‌ಗೆ ಸಿಹಿಸುದ್ದಿ ಸಿಕ್ಕಿದೆ. ಅದಷ್ಟೇ ಅಲ್ಲ, ದೊಡ್ಮನೆ ಆಟಕ್ಕೆ ಬರಲಿರುವ ಸ್ಪರ್ಧಿಗಳು ಕೂಡ ಫೈನಲ್ ಆಗಿದ್ದಾರೆ.

    ಕನ್ನಡದ ಬಿಗ್ ಬಾಸ್ ಮತ್ತು ತೆಲುಗಿನ ಬಿಗ್ ಬಾಸ್‌ಗಾಗಿ ಫ್ಯಾನ್ಸ್ ಕಾತರದಿಂದ ಕಾಯುತ್ತಾರೆ. ಬಿಗ್‌ ಬಾಸ್‌ಗೆ ದೊಡ್ಡಮಟ್ಟದ ಫ್ಯಾನ್ ಬೇಸ್ ಕೂಡ ಇದೆ. ಅಂದಹಾಗೆ, ಇದೇ ಆಗಸ್ಟ್ 4ರಂದು ತೆಲುಗಿನ ಬಿಗ್ ಬಾಸ್ ಪ್ರಸಾರವಾಗಿದೆ. ಇದನ್ನೂ ಓದಿ:ದುಬೈನಲ್ಲಿ ಚಂದನ್ ಶೆಟ್ಟಿ ನಟನೆಯ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಪ್ರೀಮಿಯರ್ ಶೋ

    ಇನ್ನೂ ಸ್ಪರ್ಧಿಗಳ ವಿಚಾರಕ್ಕೆ ಬಂದರೆ, ಕುಮಾರಿ ಆಂಟಿ ಎಂಬುವರು ರಸ್ತೆ ಬದಿ ಫುಡ್ ಟ್ರಕ್ ಇಟ್ಟುಕೊಂಡಿದ್ದಾರೆ. ಇವರು ಬಿಗ್ ಬಾಸ್‌ಗೆ ಬರಲಿದ್ದಾರೆ ಎನ್ನಲಾಗಿದೆ. ರೇವ್ ಪಾರ್ಟಿ ಪ್ರಕರಣದ ಆರೋಪಿ ಹೇಮಾ (Hema), ಅಮೃತಾ ಪ್ರಣಯ್, ಯೂಟ್ಯೂಬರ್ ನೇತ್ರಾ ಮತ್ತು ವಂಶಿ ಸೇರಿದಂತೆ ಅನೇಕರ ಹೆಸರುಗಳು ವೈರಲ್ ಆಗಿದೆ. ಅಧಿಕೃತ ಮಾಹಿತಿಗಾಗಿ ಕಾಯಬೇಕಿದೆ.

    ಅಂದಹಾಗೆ, ಈ ಸೀಸನ್ ಕೂಡ ಅಕ್ಕಿನೇನಿ ನಾಗಾರ್ಜುನ (Akkineni Nagarjuna) ಅವರೇ ನಿರೂಪಣೆ ಮಾಡಲಿದ್ದಾರೆ. ಸದ್ಯ ಈ ಸುದ್ದಿ ಕೇಳಿ ಬಿಗ್ ಬಾಸ್ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

  • Breaking-ಬಿಗ್ ಬಾಸ್ ಸೀಸನ್ 9 ಶೂಟಿಂಗ್ ಶುರು: ಪ್ರೊಮೋ ಚಿತ್ರೀಕರಣದಲ್ಲಿ ಸುದೀಪ್ ಭಾಗಿ (Exclusive Photos)

    Breaking-ಬಿಗ್ ಬಾಸ್ ಸೀಸನ್ 9 ಶೂಟಿಂಗ್ ಶುರು: ಪ್ರೊಮೋ ಚಿತ್ರೀಕರಣದಲ್ಲಿ ಸುದೀಪ್ ಭಾಗಿ (Exclusive Photos)

    ಲರ್ಸ್ ಕನ್ನಡ ವಾಹಿನಿ ಮುಖ್ಯಸ್ಥ ಪರಮೇಶ್ವರ ಗುಂಡ್ಕಲ್ ಮೊನ್ನೆಯಷ್ಟೇ ಬಿಗ್ ಬಾಸ್ ತಯಾರಿ ಕುರಿತು ಸಣ್ಣದೊಂದು ಅಪ್ ಡೇಟ್ ಕೊಟ್ಟಿದ್ದರು. ಹೊಸ ಮನೆ ನಿರ್ಮಾಣ ಆಗುತ್ತಿರುವ ಮಸುಕಾದ ಫೋಟೋವೊಂದು ತಮ್ಮ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ಹಾಕಿ ಕುತೂಹಲಕ್ಕೆ ಕಾರಣವಾಗಿದ್ದರು. ಇದೀಗ ಸದ್ದಿಲ್ಲದೇ ಪ್ರೊಮೋ ಶೂಟ್ ಕೂಡ ಮುಗಿಸಿದ್ದಾರೆ. ನಿನ್ನೆ ಬೆಂಗಳೂರಿನಲ್ಲಿ ಪ್ರೊಮೋ ಶೂಟ್ ಮುಗಿದಿದ್ದು, ಕಿಚ್ಚ ಸುದೀಪ್ ಭಾಗಿಯಾಗಿದ್ದಾರೆ.

    ವಿಕ್ರಾಂತ್ ರೋಣ ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿದ್ದರೂ, ಸುದೀಪ್ ನಿನ್ನೆ ಬೆಳಗ್ಗೆಯಿಂದ ಸಂಜೆವರೆಗೂ ನಡೆದ ಬಿಗ್ ಬಾಸ್ 9ರ ಪ್ರೋಮೋ ಶೂಟ್ ನಲ್ಲಿ ಭಾಗಿಯಾಗಿದ್ದಾರೆ. ಸ್ವತಃ ಪರಮೇಶ್ವರ ಗುಂಡ್ಕಲ್ ಅವರೇ ಈ ಪ್ರೊಮೋವನ್ನು ಚಿತ್ರೀಕರಿಸಿದ್ದು ವಿಶೇಷ. ಈ ಬಾರಿಯ ಬಿಗ್ ಬಾಸ್ ವಿಶೇಷ ಏನು? ಯಾವ ಯಾವ ಕ್ಷೇತ್ರದ ಜನರು ಭಾಗಿಯಾಗಲಿದ್ದಾರೆ? ಸೀಸನ್ 8ರಲ್ಲಿ ಏನೆಲ್ಲ ನೋಡಬಹುದು ಎನ್ನುವ ಕುರಿತಾದ ಸ್ಕ್ರಿಪ್ಟ್ ಗೆ ಕಿಚ್ಚ ಆಕ್ಟ್ ಮಾಡಿದ್ದಾರೆ. ಇದನ್ನೂ ಓದಿ:ಕೆ.ಎಲ್ ರಾಹುಲ್ ಜೊತೆ ಮದುವೆಯ ವದಂತಿಗೆ ಸ್ಪಷ್ಟನೆ ನೀಡಿದ ಅಥಿಯಾ ಶೆಟ್ಟಿ

    ಬಿಗ್ ಬಾಸ್ ಸೀಸನ್ 9ರ ಪ್ರೊಮೋಗಾಗಿ ಕಿಚ್ಚ ಸುದೀಪ್ ವಿಶೇಷ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದರು. ಬಿಳಿ ಅಂಗಿ, ಕರಿಪ್ಯಾಂಟು, ಮೇಲೊಂದು ಕೋಟು ಹಾಗೂ ವಿಶೇಷ ಹೇರ್ ಸ್ಟೈಲ್ ನಲ್ಲಿ ಈ ಬಾರಿ ಪ್ರೊಮೋ ಶೂಟ್ ಮಾಡಲಾಗಿದೆ. ಮೊದಲು ಓಟಿಟಿಯಲ್ಲಿ ನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ ಈ ಬಾರಿಯ ಬಿಗ್ ಬಾಸ್ ಪ್ರಸಾರವಾಗಲಿದ್ದು, ಅದಕ್ಕೆ ತಕ್ಕಂತೆ ಪ್ರೊಮೋಗಳನ್ನು ಶೂಟ್ ಮಾಡಲಾಗಿದೆ ಎನ್ನುತ್ತಿವೆ ಮೂಲಗಳು. ಈ ಎರಡಲ್ಲೂ ಕಿಚ್ಚನ ನಿರೂಪಣೆಯೇ ಇರಲಿದೆಯಂತೆ.

    ಎರಡು ವೇದಿಕೆಯಲ್ಲಿ ಈ ಬಾರಿ ಬಿಗ್ ಬಾಸ್ ಮೂಡಿ ಬರಲಿದ್ದು, ಮೊದಲು ವೂಟ್ಸ್ ನಲ್ಲಿ ನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ವೂಟ್ಸ್ ನಲ್ಲಿ ಗೆದ್ದವರಿಗೆ ಕಲರ್ಸ್ ವಾಹಿನಿಯಲ್ಲಿ ನಡೆಯುವ ಬಿಗ್ ಬಾಸ್ ನಲ್ಲಿ ಭಾಗಿಯಾಗಲು ಅವಕಾಶ ನೀಡಲಾಗುತ್ತಿದೆ ಎಂದು ಹೇಳಲಾಗಿದ್ದು, ವಾಹಿನಿಯು ಅದನ್ನು ಅಧಿಕೃತವಾಗಿ ಮುಂದಿನ ದಿನಗಳಲ್ಲಿ ಹೇಳಲಿದೆಯಂತೆ.

    Live Tv
    [brid partner=56869869 player=32851 video=960834 autoplay=true]

  • ಮಂಜನ ಅಪ್ಪ, ಅಮ್ಮನ ಜೊತೆ ಮದುವೆ ಬಗ್ಗೆ ಮಾತನಾಡಿದ್ದೇನೆ: ದಿವ್ಯಾ ಸುರೇಶ್

    ಮಂಜನ ಅಪ್ಪ, ಅಮ್ಮನ ಜೊತೆ ಮದುವೆ ಬಗ್ಗೆ ಮಾತನಾಡಿದ್ದೇನೆ: ದಿವ್ಯಾ ಸುರೇಶ್

    ಬಿಗ್‍ಬಾಸ್ ಸೀಸನ್-8 ಗ್ರ್ಯಾಂಡ್ ಫಿನಾಲೆ ಭಾನುವಾರ ಅದ್ಧೂರಿಯಾಗಿ ನೆರವೇರಿದೆ. ಈ ವೇಳೆ ಕಿಚ್ಚ ಸುದೀಪ್ ಅವರು ಅರವಿಂದ್ ಮದುವೆಗಿಂತ ಮೊದಲು ಮಂಜನ ಮದುವೆಯಾಗುತ್ತೆ ಎಂದು ಕೇಳಿದರು. ಅದಕ್ಕೆ ಒಂದಿಬ್ಬರು ಹೊರತುಪಡಿಸಿ ಎಲ್ಲರೂ ಯಸ್ ಎಂದು ಹೇಳಿದರು.

    ಇದೇ ವೇಳೆ ಸುದೀಪ್ ಯಸ್ ಯಾಕೆ ದಿವ್ಯಾ ಸುರೇಶ್ ಎಮದು ಕೇಳಿದಾಗ, ನಾನು ಅವರ ಅಪ್ಪ-ಅಮ್ಮ ಜೊತೆ ಮದುವೆ ವಿಚಾರ ಮಾತನಾಡಿದ್ದೇನೆ. ಆಗ ಅವರು ಅವನು ಆಡುತ್ತಿರುವ ರೇಂಜ್ ನೋಡಿದರೆ ಶೋ ಮುಗಿಸಿ ಬಂದ ಕೊಡಲೇ ಮದುವೆಯಾಗುತ್ತಾನೆ ಎಂದು ಹೇಳಿದ್ದಾಗಿ ತಿಳಿಸಿದರು. ಇದನ್ನೂ ಓದಿ: ದಿವ್ಯಾ ಸುರೇಶ್ ಬಗ್ಗೆ ಲ್ಯಾಗ್ ಮಂಜು ಹೇಳಿದ್ದೇನು..?

    ಆಗ ಕಿಚ್ಚ ಆ ರೇಂಜ್ ಅಂದ್ರೆ ಏನ್ ನೋಡಿದ್ರು ಅವರು ಎಂದು ಕೇಳಿದಕ್ಕೆ ದಿವ್ಯಾ, ಯಾವಾಗಲೂ ಮದುವೆಯಾಗಬೇಕು, ಮದುವೆ ಆಗಬೇಕು ಎಂದು ಹೇಳುತ್ತಿರುತ್ತಾರೆ. ಅದಕ್ಕೆ ಬಂದ ಕೂಡಲೇ ಆಗಬಹುದು ಎಂದು ಹೇಳಿದೆ ಎಂದರು. ಇದನ್ನೂ ಓದಿ: ಮಂಜು ಬಗ್ಗೆ ಹೇಳುತ್ತಾ ಭಾವುಕರಾದ ಚಕ್ರವರ್ತಿ ಚಂದ್ರಚೂಡ್..!

    ಇತ್ತ ರಾಜೀವ್ ಅವರು ಈ ಬಗ್ಗೆ ಮಾತನಾಡಿ, ಹೌದು ಅಣ್ಣ ಮಂಜಗೆ ತುಂಬಾ ಆಸೆ ಇದೆ. ಅದರಲ್ಲಿ ಮದುವೆಯಾಗಬೇಕು ಎಂಬುದು ಟಾಪ್‍ನಲ್ಲಿದೆ. ಅದಕ್ಕೆ ಅವರು ಆಚೆ ಬಂದ ತಕ್ಷಣ ಮದುವೆಯಾಗುತ್ತಾರೆ. ರಾಜೀವ್ ಮಾತಿಗೆ ಅರವಿಂದ್ ಸಹ ದನಿಗೂಡಿಸಿದ್ದು, ಹೌದು ಸರ್ ತುಂಬಾ ಅಜೆರ್ಂಟ್‍ನಲ್ಲಿದ್ದಾನೆ. ಬೇಗ ಮದುವೆಯಗುತ್ತಾನೆ ಎಂದು ತಮಾಷೆ ಮಾಡಿ ಎಲ್ಲಾ ಸ್ಪರ್ಧಿಗಳು ಮಂಜನ ಕಾಲೆಳೆದಿದ್ದಾರೆ. ಇದನ್ನೂ ಓದಿ: ಬಿಗ್‍ಬಾಸ್ ಮನೆಯಲ್ಲಿ ಮಂಜು ಕಲಿತಿದ್ದೇನು..?- ಮುಂದಿನ ಯೋಚನೆ, ಯೋಜನೆಗಳ ಬಗ್ಗೆ ವಿನ್ನರ್ ಮಾತು

    ನಂತರ ಮಂಜ ಅವರ ತಾಯಿಯ ಬಳಿ ಕಿಚ್ಚ ಮಾತನಾಡಿ, ಯಾವಾಗ ಮದುವೆ ಮಾಡಿಸುತ್ತೀರಾ ಅಮ್ಮ ಎಂದು ಕೇಳಿದಕ್ಕೆ, ಅವನು ಹೊರಗೆ ಬಂದು ಯಾವಾಗ ಇಷ್ಟ ಪಡುತ್ತಾನೆ ಆಗ ಮದುವೆ ಮಾಡಿಸುತ್ತೇವೆ ಎಂದರು. ಅದಕ್ಕೆ ಸುದೀಪ್ ಬೇಡ ಅವರು ಬಂದ ತಕ್ಷಣ ಮದುವೆ ಮಾಡಿಬಿಡಿ. ನೋಡಿ ಫುಲ್ ರೆಡಿಯಾಗಿ, ಚೆನ್ನಾಗಿ ಹಲ್ಲು ಉಜ್ಜಿಕೊಂಡಿದ್ದಾರೆ. ಹುಡುಗಿಯನ್ನ ಹುಡುಕಲು ಹೋಗುವಾಗ ಶುಭಾ ಮತ್ತೆ ಚಕ್ರವರ್ತಿ ಅವರನ್ನು ಕರೆದುಕೊಂಡು ಹೋಗಿ ಎಂದು ತಮಾಷೆ ಮಾಡಿದ್ದಾರೆ. ಕಿಚ್ಚನ ಮಾತಿಗೆ ನೆರೆದಿದ್ದವರು ಜೋರಾಗಿ ನಕ್ಕಿದ್ದಾರೆ.

  • ದಿವ್ಯಾ ಸುರೇಶ್ ಬಗ್ಗೆ ಲ್ಯಾಗ್ ಮಂಜು ಹೇಳಿದ್ದೇನು?

    ದಿವ್ಯಾ ಸುರೇಶ್ ಬಗ್ಗೆ ಲ್ಯಾಗ್ ಮಂಜು ಹೇಳಿದ್ದೇನು?

    – ಶುಭಾ, ನಿಧಿ ಕುರಿತು ವಿನ್ನರ್ ಮಾತು

    ಬೆಂಗಳೂರು: ಬಿಗ್ ಬಾಸ್ ಸೀಸನ್ 8ರ ಆರಂಭದಲ್ಲಿ ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆಪಿ ಒಂದು ಜೋಡಿಯಾಗಿದ್ದರೆ, ಮಂಜು ಪಾವಗಡ ಹಾಗೂ ದಿವ್ಯಾ ಸುರೇಶ್ ಇನ್ನೊಂದು ಜೋಡಿಯಾಗಿ ವೀಕ್ಷಕರ ಗಮನ ಸೆಳೆದಿದ್ದರು. ಇದೀಗ ವಿನ್ನರ್ ಆದ ಬಳಿಕ ಮಂಜು ಅವರು ದಿವ್ಯಾ ಸುರೇಶ್ ಬಗ್ಗೆ ಮಾತನಾಡಿದ್ದಾರೆ. ಇದನ್ನೂ ಓದಿ: ಏನಪ್ಪಾ ಇದು ವೈಭೋಗ, ನನ್ನ ಜಾತಕದಲ್ಲಿ ಇದೆಲ್ಲಾ ಇದೆ ಅಂತ ಗೊತ್ತಿರಲಿಲ್ಲ: ಮಂಜು

    ಹೌದು. ಬಿಗ್ ಬಸಸ್ ಮನೆಯಲ್ಲಿ ದಿವ್ಯಾ ಜೊತೆಗಿನ ಗೆಳೆತನದ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮನಬಿಚ್ಚಿ ಮಾತನಾಡಿದ ಮಂಜು, ದಿವ್ಯಾ ಸುರೇಶ್ ನನ್ನ ಬೆಸ್ಟ್ ಫ್ರೆಂಡ್. ಬಿಗ್ ಬಾಸ್ ಮನೆಯೊಳಗಡೆ ಹೋದಾಗ ಅಲ್ಲಿ ನಮ್ಮವರು ಅಂತ ಯಾರೂ ಇರಲ್ಲ. ಆಗ ಹೇಳಿಕೊಳ್ಳೋಕೆ ಒಬ್ಬರು ಬೇಕು ಅನಿಸುತ್ತದೆ. ಆಗ ನಮ್ಮ ಮೆಂಟಾಲಿಟಿಗೆ ಮ್ಯಾಚ್ ಆಗೋರು ಒಬ್ಬರು ಸಿಗುತ್ತಾರೆ. ಹೀಗೆ ನನಗೆ ದಿವ್ಯಾ ಸುರೇಶ್ ಸಿಕ್ಕಿದ್ದಾಳೆ. ತುಂಬಾ ಸಪೋರ್ಟ್ ಮಾಡುತ್ತಿದ್ದಳು. ಹಾಗೆಯೇ ಒಳ್ಳೆಯ ಸ್ಪರ್ಧಿ ಕೂಡ. ಒಟ್ಟಿನಲ್ಲಿ ನಾವಿಬ್ಬರೂ ಒಳ್ಳೆಯ ಫ್ರೆಂಡ್ಸ್ ಅಂದ್ರು. ಇದನ್ನೂ ಓದಿ: ಇಷ್ಟೊಂದು ದೊಡ್ಡ ಮೊತ್ತವನ್ನು ಜೀವನದಲ್ಲೇ ನೋಡಿಲ್ಲ: ಮಂಜು

    ಮನೆಯೊಳಗಡೆ ಹೋದಾಗ ಸೆಲೆಬ್ರಿಗಳಾದ ನಿಧಿ, ಶುಭಾ ಹಾಗೂ ಶಂಕರ್ ಅಶ್ವಥ್ ನೋಡಿ ಹೆಂಗಪ್ಪಾ ಇಲ್ಲಿ ಇರೋದು ಅಂದುಕೊಂಡಿದ್ದೆ. ಆದರೆ ಹೋಗ್ತಾ ಹೋಗ್ತಾ ಎಲ್ಲರೂ ನನಗೆ ಕ್ಲೋಸ್ ಆದ್ರು. ಶುಭಾ ಅಂತೂ ಈಗ ನನಗೆ ಪ್ರೀತಿಯ ಗುಂಡಮ್ಮ ಆಗಿದ್ದಾಳೆ. ಇನ್ನು ಬಾಲಿವುಡ್ ನಲ್ಲಿ ಸಿನಿಮಾ ಮಾಡಿರುವ ನಿಧಿಸುಬ್ಬಯ್ಯ ಅವರನ್ನು ನಿಧಿ, ಪಿಪಿಇ ಕಿಟ್ ಅಂತೆಲ್ಲಾ ಕರೆಯೋಕೆ ಆರಂಭಿಸಿದೆ. ಇತ್ತ ಶಂಕರ್ ಅಣ್ಣನನ್ನೂ ರೇಗಿಸ್ತೀನಿ. ಒಟ್ಟಿನಲ್ಲಿ ಸದ್ಯ ದೊಡ್ಡ ದೊಡ್ಡವರ ಜೊತೆ ಇದ್ದು ಇಂದು ನಾನು ಗೆದ್ದಿರೋದು ತುಂಬಾನೆ ಖುಷಿ ಇದೆ ಎಂದು ಮಂಜು ಹೇಳಿದರು. ಇದನ್ನೂ ಓದಿ: ಪುಟ್ಟ ಕಲಾವಿದನನ್ನು ಫಿನಾಲೆವರೆಗೆ ತಲುಪಿಸಿ ವಿನ್ನರ್ ಮಾಡಿದ್ದಕ್ಕೆ ತುಂಬಾ ಥ್ಯಾಂಕ್ಸ್: ಮಂಜು

    ಒಟ್ಟಿನಲ್ಲಿ ಮನರಂಜನೆ ಹಾಗೂ ಉತ್ತಮ ಸ್ಪರ್ಧೆಯಿಂದಲೇ ವೀಕ್ಷಕರ ಗಮನ ಸೆಳೆಯುವ ಮೂಲಕ ಲ್ಯಾಗ್ ಮಂಜು ಅವರು ವಿನ್ನರ್ ಆಗಿ ಬಿಗ್ ಬಾಸ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದ್ದಾರೆ. ನಿನ್ನೆ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ ಸುದೀಪ್ ಅವರು ಮಂಜು ಕೈ ಮೇಲೆ ಎತ್ತುವ ಮೂಲಕವಾಗಿ ವಿನ್ನರ್ ಯಾರು ಎಂದು ಘೋಷಣೆ ಮಾಡಿದರು. ಬಿಗ್‍ಬಾಸ್ ವಿನ್ನರ್ ಪಟ್ಟದ ಜೊತೆಗೆ ಮಂಜು ಅವರಿಗೆ 53 ಲಕ್ಷ ರೂ. ಹಣವನ್ನು ಮಂಜುಗೆ ನೀಡಲಾಗಿದೆ. ರನ್ನರ್ ಅಪ್ ಅರವಿಂದ್‍ಗೆ 11 ಲಕ್ಷ ರೂಪಾಯಿ ಹಣವನ್ನು ನೀಡಲಾಗಿದೆ. ಇದನ್ನೂ ಓದಿ: ಮಂಜುಗೆ ಒಲಿದ ದೊಡ್ಮನೆ ಕಿರೀಟ – ಬಿಗ್‍ಬಾಸ್ ವಿನ್ನರ್‌ಗೆ ಅದ್ಧೂರಿ ಸ್ವಾಗತ

  • ಇಷ್ಟೊಂದು ದೊಡ್ಡ ಮೊತ್ತವನ್ನು ಜೀವನದಲ್ಲೇ ನೋಡಿಲ್ಲ: ಮಂಜು

    ಇಷ್ಟೊಂದು ದೊಡ್ಡ ಮೊತ್ತವನ್ನು ಜೀವನದಲ್ಲೇ ನೋಡಿಲ್ಲ: ಮಂಜು

    – ತಂದೆ, ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳಬೇಕು

    ಬೆಂಗಳೂರು: ಬಿಗ್ ಬಾಸ್ ಸೀಸನ್ 8ರಲ್ಲಿ ವಿನ್ನರ್ ಆಗಿ ‘ಹಳ್ಳಿ ಹೈದ’ ಮಂಜು ಪಾವಗಡ ಅವರು ಹೊರಹೊಮ್ಮಿದ್ದಾರೆ. ಬಿಗ್‍ಬಾಸ್ ವಿನ್ನರ್ ಪಟ್ಟದ ಜೊತೆಗೆ ಮಂಜು ಅವರಿಗೆ 53 ಲಕ್ಷ ರೂ. ಹಣವನ್ನು ಮಂಜುಗೆ ನೀಡಲಾಗಿದೆ. ಇಷ್ಟೊಂದು ಮೊತ್ತವನ್ನು ನಾನು ನನ್ನ ಜೀವನದಲ್ಲಿಯೇ ನೋಡಿಲ್ಲ ಎಂದು ಮಂಜು ಹೇಳಿದ್ದಾರೆ.

    ಬಿಗ್ ಬಾಸ್ ವಿನ್ನರ್ ಟ್ರೋಫಿಯನ್ನು ತನ್ನ ಮುಡಿಗೇರಿಸಕೊಂಡ ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಫಿನಾಲೆಯಲ್ಲಿ ಸಿಗುವ ದೊಡ್ಡ ಮೊತ್ತದ ಹಣವನ್ನು ಇದುರೆಗೂ ಎಲ್ಲೂ ನೋಡಿಲ್ಲ, ಕೇಳಿದ್ದೀನಿ ಅಷ್ಟೇ ಎಂದು ನಗುತ್ತಲೇ ಉತ್ತರಿಸಿದರು. ಇದನ್ನೂ ಓದಿ: ಕನ್ನಡಿಗರ ಮನಗೆದ್ದು ಗೆಲುವಿನ ನಗೆ ಬೀರಿದ ಮಂಜು

    ಸದ್ಯ ಈ ಹಣವನ್ನು ಏನು ಮಾಡಬೇಕು ಎಂದು ಗೊತ್ತಿಲ್ಲ. ಆದರೆ ಅಪ್ಪ-ಅಮ್ಮನನ್ನು ನಾನು ಸಾಯೋವರೆಗೂ ಚೆನ್ನಾಗಿ ನೋಡಿಕೊಳ್ಳಬೇಕು ಎಂಬ ಮಹದಾಸೆ ಇದೆ. ಅವರಿಗಿಂತ ಮುಖ್ಯ ಯಾರೂ ಇಲ್ಲ. ಯಾಕಂದ್ರೆ ಅವರು ತುಂಬಾನೆ ಕಷ್ಟಪಟ್ಟು ಸಾಕಿ, ಬೆಳೆಸಿದ್ದಾರೆ. ಅವರನ್ನು ಚೆನ್ನಾಗಿ ನೋಡಿಕೊಳ್ಳುವುದೇ ದೊಡ್ಡ ಆಸೆ ಎಂದು ತಿಳಿಸಿದರು. ಇದನ್ನೂ ಓದಿ: ಟಾಸ್ಕ್ ಮಾಸ್ಟರ್, ಪರ್ಫೆಕ್ಷನಿಸ್ಟ್ ಅರವಿಂದ್‍ಗೆ ಎರಡನೇ ಸ್ಥಾನ

    ಇದೇ ವೇಳೆ ಬಿಗ್ ಬಾಸ್ ವೇದಿಕೆಗೆ ತೆರಳಲು ಸಿಕ್ಕ ಅವಕಾಶದ ಕುರಿತು ಮಾತನಾಡಿದ ಅವರು, ಆಸೆಗಳು ಎಲ್ಲರಿಗೂ ಇದ್ದೇ ಇರುತ್ತದೆ. ಕನ್ನಡ ರಿಯಾಲಿಟಿ ಶೋಗಳಲ್ಲಿ ಬಿಗ್ ಬಾಸ್ ಅನ್ನೋದು ಅತ್ಯಂತ ದೊಡ್ಡ ಶೋ ಆಗಿದೆ. ಇಂತಹ ವೇದಿಕೆಯಲ್ಲಿ ನನಗೆ ಅವಕಾಶ ಸಿಗುತ್ತೆ ಅಂತ ನಾನು ಅಂದುಕೊಂಡಿರಲಿಲ್ಲ ಎಂದರು.

    ಫಿನಾಲೆಯಲ್ಲಿ ಸುದೀಪ್ ಸರ್ ಎಡ ಹಾಗೂ ಬಲ ನಿಲ್ಲೋದು ಒಂದು ದೊಡ್ಡ ಸಾಧನೆಯಾಗಿದೆ. ಆ ಪರಿಸ್ಥಿತಿಯಲ್ಲಿ ತಲೆಯಲ್ಲಿ ಸಾವಿರ ಯೋಚನೆಗಳು ಓಡಾಡುತ್ತಿರುತ್ತವೆ. ಅದನ್ನು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ. ಆದರೆ ಅದನ್ನು ಎದುರಿಸಿ ಮುಂದೆ ಬಂದಿರೋದು ತುಂಬಾ ಸಂತೋಷವಾಗಿದೆ ಎಂದು ಮಂಜು ಹೇಳಿದರು. ಇದನ್ನೂ ಓದಿ: ಮಂಜುಗೆ ಒಲಿದ ದೊಡ್ಮನೆ ಕಿರೀಟ – ಬಿಗ್‍ಬಾಸ್ ವಿನ್ನರ್‌ಗೆ ಅದ್ಧೂರಿ ಸ್ವಾಗತ

    ಸುದೀಪ್ ಸರ್ ನನ್ನ ಕೈ ಮೇಲೆ ಎತ್ತಿದಾಗ ನಿಜವಾಗಲೂ ನಾನೇ ವಿನ್ನರಾ. ಅವರು ತಿರುಗಿಸಿ ನನ್ನ ಫೋಟೋ ತೊರಿಸಿದಾಗಲೂ ನಾನೇನಾ ಎಂದು ಗಲಿಬಿಲಿಗೊಂಡೆ. ಸದ್ಯದ ಪರಿಸ್ಥಿತಿಯಲ್ಲೂ ಹಾಗೆಯೇ ಇದ್ದೀನಿ ಎಂದು ಮಂಜು ನಕ್ಕರು.

    ಬಿಗ್‍ಬಾಸ್ ಫಿನಾಲೆಯಲ್ಲಿ ಟಾಪ್ 5 ನಲ್ಲಿ ಉಳಿದುಕೊಂಡಿದ್ದ ಸ್ಪರ್ಧಿಗಳಲ್ಲಿ ಮಂಜು, ಮತ್ತು ಅರವಿಂದ್ ಮಧ್ಯೆ ಮೊದಲ ಸ್ಥಾನಕ್ಕೆ ಸ್ಪರ್ಧೆ ನಡೆದಿತ್ತು. ಸುದೀಪ್ ಅವರು ಮಂಜು ಕೈ ಮೇಲೆ ಎತ್ತುವ ಮೂಲಕವಾಗಿ ವಿನ್ನರ್ ಯಾರು ಎಂದು ಗ್ಯ್ರಾಂಡ್ ಫಿನಾಲೆಯಲ್ಲಿ ಘೋಷಣೆ ಮಾಡಿದರು. ಬಿಗ್‍ಬಾಸ್ ವಿನ್ನರ್ ಪಟ್ಟದ ಜೊತೆಗೆ ಮಂಜು ಅವರಿಗೆ 53 ಲಕ್ಷ ರೂ. ಹಣವನ್ನು ಮಂಜುಗೆ ನೀಡಲಾಗಿದೆ. ರನ್ನರ್ ಅಪ್ ಅರವಿಂದ್‍ಗೆ 11 ಲಕ್ಷ ರೂಪಾಯಿ ಹಣವನ್ನು ನೀಡಲಾಗಿದೆ. ಇದನ್ನೂ ಓದಿ: ಪುಟ್ಟ ಕಲಾವಿದನನ್ನು ಫಿನಾಲೆವರೆಗೆ ತಲುಪಿಸಿ ವಿನ್ನರ್ ಮಾಡಿದ್ದಕ್ಕೆ ತುಂಬಾ ಥ್ಯಾಂಕ್ಸ್: ಮಂಜು

  • ಹೊಸತನದೊಂದಿಗೆ ಬಿಗ್‍ಬಾಸ್ ಪುನಾರಂಭಕ್ಕೆ ಕಿಚ್ಚನೂ ರೆಡಿ

    ಹೊಸತನದೊಂದಿಗೆ ಬಿಗ್‍ಬಾಸ್ ಪುನಾರಂಭಕ್ಕೆ ಕಿಚ್ಚನೂ ರೆಡಿ

    ಬೆಂಗಳೂರು: ಚೀನಿ ವೈರಸ್ ನಿಂದಾಗಿ ಅರ್ಧಕ್ಕೆ ಮೊಟಕುಗೊಂಡ ಕನ್ನಡದ ಫೇಮಸ್ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 8 ಇದೀಗ ಮತ್ತೆ ಆರಂಭವಾಗುತ್ತಿದೆ. ನಾಳೆಯಿಂದ ಬಿಗ್ ಬಾಸ್ ಆರಂಭವಾಗುತ್ತಿದ್ದು, ಸ್ಪರ್ಧಿಗಳು ಈಗಾಗಲೇ ಪ್ರೇಕ್ಷರಿಗೆ ಮನರಂಜನೆ ನೀಡಲು ರೆಡಿಯಾಗಿದ್ದಾರೆ. ಇತ್ತ ಕಾರ್ಯಕ್ರಮ ನಿರೂಪಕ ಕಿಚ್ಚ ಸುದೀಪ್ ಕೂಡ ಹೊಸತನದೊಂದಿಗೆ ಸಿದ್ಧರಾಗಿದ್ದಾರೆ.

    ಹೌದು. ನಾಳೆಯಿಂದ ಬಿಗ್ ಬಾಸ್ ಆರಂಭವಾಗುತ್ತಿರುವುದಾಗಿ ಈಗಾಗಲೇ ವಾಹಿನಿ ದೃಢಪಡಿಸಿದೆ. ಅಲ್ಲದೆ ಸ್ಪರ್ಧಿಗಳು ರೆಡಿಯಾಗುತ್ತಿರುವ ಪ್ರೋಮೋಗಳನ್ನು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಬಿಟ್ಟಿದೆ. ಇದೀಗ ಈ ಸಂಬಂಧ ಕಿಚ್ಚ ಸುದೀಪ್ ಕೂಡ ತಮ್ಮ ಫೋಟೋದೊಂದಿಗೆ ಬರೆದುಕೊಂಡು ಬಿಗ್ ಬಾಸ್ ಗೆ ಸನ್ನದ್ಧವಾಗಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: 50 ದಿನ ನಡೆಯಲಿದೆ ಬಿಗ್‍ಬಾಸ್ ಸೆಕೆಂಡ್ ಇನ್ನಿಂಗ್ಸ್

     

    View this post on Instagram

     

    A post shared by KicchaSudeepa (@kichchasudeepa)

    ಕಿಚ್ಚ ಹೇಳಿದ್ದೇನು..?
    ಬಿಗ್ ಬಾಸ್ ಕಾರ್ಯಕ್ರಮಕ್ಕೆ ಅಲ್ಪ ವಿರಾಮ ಬಿದ್ದಿತ್ತು. ಇದರಿಂದ ಸ್ಪರ್ಧಿಗಳಿಗೆ ಬ್ರೇಕ್ ಸಿಕ್ತು. ಹೀಗಾಗಿ ಈಗಾಗಲೇ ಸ್ಪರ್ಧಿಗಳು ವಿರಾಮ ತೆಗೆದುಕೊಳ್ಳಲು ಹೊರ ಹೊರಗಿದ್ದಾರೆ. ಈ ಮೂಲಕ ಅವರ ಸ್ಥಾನ ಮತ್ತು ಜನಪ್ರಿಯತೆಯನ್ನು ತಿಳಿದಿದ್ದಾರೆ. ಅಲ್ಲದೆ ಕೆಲ ಕಂತುಗಳನ್ನು ನೋಡಿದ್ದಾರೆ. ಹೀಗಾಗಿ ಪ್ರತಿ ಸ್ಪರ್ಧಿಗಳು ಏನೇನು ಮಾತನಾಡಿದ್ದಾರೆಂದು ತಿಳಿದಿದೆ. ಈಗ “ಮರು-ಪ್ರವೇಶ”. ಇದು ಹೊಸದು ಮತ್ತು ಇದು ಮಜವಾಗಿದೆ ಎಂದು ಸುದೀಪ್ ತಿಳಿಸಿದ್ದಾರೆ. ಇದನ್ನೂ ಓದಿ:  ನಾಳೆಯಿಂದ ಬಿಗ್ ಬಾಸ್ ಸೆಕೆಂಡ್ ಇನ್ನಿಂಗ್ಸ್- ಸ್ಪರ್ಧಿಗಳ ಎಂಟ್ರಿ ಹೇಗಿರಲಿದೆ?

    ಒಟ್ಟಿನಲ್ಲಿ ನಾಳೆಯಿಂದ ಬಿಗ್ ಬಾಸ್ ವೀಕ್ಷಕರಿಗೆ ಮತ್ತೆ ಮಜನರಂಜನೆ ನೀಡಲು ಸ್ಪರ್ಧಿಗಳು ಸಜ್ಜಾಗಿದ್ದು, ಈ ಬಾರಿ ಅತೀ ಹೆಚ್ಚಿನ ಮಜಾ ಸಿಗಲಿದೆ ಎಂದು ಸುದೀಪ್ ಹೇಳಿದ್ದಾರೆ. ಹೀಗಾಗಿ ವೀಕ್ಷಕರಲ್ಲಿ ಕುತೂಹಲ ಮತ್ತಷ್ಟು ಹೆಚ್ಚಿದೆ.

  • ಬಿಗ್ ಮನೆಯಿಂದ ಹೊರನಡೆದ ಮತ್ತೊಬ್ಬ ಸೆಲೆಬ್ರಿಟಿ

    ಬಿಗ್ ಮನೆಯಿಂದ ಹೊರನಡೆದ ಮತ್ತೊಬ್ಬ ಸೆಲೆಬ್ರಿಟಿ

    – ಕೈ ಹಿಡಿಯದ ಬಿಗ್‍ಮನೆ ಅಭಿಮಾನಿಗಳು

    ಬಿಗ್ ಬಾಸ್ ಮನೆಯಲ್ಲಿ ವಾರಾಂತ್ಯಕ್ಕೆ ಮನೆಯಿಂದ ಒಬ್ಬರು ಹೊರಗೆ ಹೋಗಬೇಕು. ಮೊದಲವಾರ ಧನುಶ್ರೀ ಹೊರ ನಡೆದಿದ್ದರು. 2ನೇ ವಾರ ಯಾರು ಮನೆಯಲ್ಲಿ ತನ್ನ ಆಟವನ್ನು ಮುಗಿಸಿ ಹೊರ ನಡೆಯುತ್ತಾರೆ ಎನ್ನುವ ಪ್ರಶ್ನಗೆ ಉತ್ತರ ಸಿಕ್ಕಿದೆ.

    ಹೌದು. ಈ ಬಾರಿ ನಿರ್ಮಲಾ ಚೆನ್ನಪ್ಪ ಬಿಗ್‍ಬಾಸ್‍ಮನೆಯ ಜರ್ನಿಯನ್ನು ಮುಗಿಸಿದ್ದಾರೆ. ಮನೆಯಲ್ಲಿರುವ ಸದಸ್ಯರುಗಳಲ್ಲಿ ನಿರ್ಮಲಾ ಕೊಂಚ ವಿಭಿನ್ನವಾಗಿಯೇ ಇರುತ್ತಿದ್ದರು. ಒಬ್ಬರೇ ಹೆಚ್ಚಾಗಿ ಇರುತ್ತಿದ್ದರು. ಅವರು ನಡೆದುಕೊಳ್ಳುವ ರೀತಿ, ಹೆಚ್ಚಿನವರಿಗೆ ಇಷ್ಟವಾಗುತ್ತಿರಲಿಲ್ಲ. ಅತೀ ಹೆಚ್ಚು ಚರ್ಚೆಗೊಳಗಾದ ಸದಸ್ಯರುಗಳಲ್ಲಿ ನಿರ್ಮಲಾ ಕೂಡ ಒಬ್ಬರು. ನಾಮಿನೇಷನ್‍ನಲ್ಲಿ ಹೆಚ್ಚು ಮತ ಕೂಡಾ ನಿರ್ಮಲಾ ಅವರಿಗೆ ಬಿದ್ದಿದ್ದವು. ಆದರೂ ಬಿಗ್‍ಬಾಸ್ ವೀಕ್ಷಕರು ನಿರ್ಮಲಾ ಚೆನ್ನಪ್ಪ ಅವರು ಕೈ ಹಿಡಿಯಲಿಲ್ಲ.

    ನಿರ್ಮಲಾ ಮನೆಯಲ್ಲಿ ಇರುವಷ್ಟು ದಿನ ಸಖತ್ ಆ್ಯಕ್ಟಿವ್ ಆಗಿದ್ದರು. ಜಗಳ, ಮಾತು, ಅಡುಗೆ ಮನೆ ವಿಚಾರ ಹೀಗೆ ನಾನಾ ವಿಷಯಗಳ ಕುರಿತಾಗಿ ಧ್ವನಿ ಎತ್ತುವ ಸದಸ್ಯೆಯಾಗಿದ್ದರು. ಆದರೆ ಮನೆಯಲ್ಲಿ ಇವರ ಆಟ ಅಭಿಮಾನಿಗಳಿಗೆ ಇಷ್ಟವಾಗಿಲ್ಲ ಎಂದು ಅನ್ನಿಸುತ್ತದೆ ಮನೆಯಿಂದ ಗೇಟ್‍ಪಾಸ್ ಕೊಟ್ಟಿದ್ದಾರೆ.

    ಒಂದೇ ಬಟ್ಟೆಯಲ್ಲಿ ಒಂದು ವಾರ ಇದ್ದ ನಿರ್ಮಲಾ!
    ಒಂದು ವಾರ ಒಂದೇ ಬಟ್ಟೆಯಲ್ಲಿ ಕಳೆದಿದ್ದರು. ಬಿಗ್‍ಬಾಸ್ ಬಟ್ಟೆ ಕಳಿಸುತ್ತಿದ್ದಂತೆ ಮಧ್ಯರಾತ್ರಿ ಸೀರೆ ಧರಿಸಿ ಮೇಕಪ್ ಹಾಕಿ ಮೂಲೆಯಲ್ಲಿ ಕ್ಯಾಮೆರಾ ಮುಂದೆ ಕುಳಿತು ಒಬ್ಬರೇ ಮಾತನಾಡುತ್ತಿರುವುದು ಮನೆಯವರಿಗೆ ಭಯ ತರಿಸಿತ್ತು. ಈ ವಿಚಾರ ಸಾಕಷ್ಟು ಚರ್ಚೆ ಕೂಡ ಆಗಿತ್ತು.

    ನಿಧಿ ಸುಬ್ಬಯ್ಯ, ಶುಭಾ ಪೂಂಜಾ, ದಿವ್ಯಾ ಸುರೇಶ್, ಪ್ರಶಾಂತ್ ಸಂಬರ್ಗಿ, ಗೀತಾ, ಚಂದ್ರಕಲಾ ಮೋಹನ್, ವಿಶ್ವನಾಥ್, ನಿರ್ಮಲಾ ಮನೆಯಿಂದ ಹೊರ ಹೋಗಲು ನಾಮಿನೇಟ್ ಆಗಿದ್ದರು. ಆದರೆ ಇವರುಗಳ ಪೈಕಿ ನಿರ್ಮಲಾ ತನ್ನ ಆಟವನ್ನು ಮನೆಯಲ್ಲಿ ಮುಗಿಸಿ ಹೊರಬಂದಿದ್ದಾರೆ.

  • ದಿವ್ಯಳನ್ನು ಬಿಗ್‍ ಮನೆಯಿಂದ ಕಳಿಸಿಕೊಡ್ಬೇಕು ಅಂತ ಮಂಜು ಹೇಳಿದ್ಯಾಕೆ..?

    ದಿವ್ಯಳನ್ನು ಬಿಗ್‍ ಮನೆಯಿಂದ ಕಳಿಸಿಕೊಡ್ಬೇಕು ಅಂತ ಮಂಜು ಹೇಳಿದ್ಯಾಕೆ..?

    ಬೆಂಗಳೂರು: ಬಿಗ್‍ಬಾಸ್ ಸೀಸನ್ 8ರ ಮೊದಲ ವೀಕೆಂಡ್ ಎಪಿಸೋಡ್ ಪ್ರಸಾರವಾಗಿದೆ. ‘ವಾರದ ಕಥೆ ಕಿಚ್ಚನ ಜೊತೆ’ಯಲ್ಲಿ ಸುದೀಪ್ ಎಂದಿನಂತೆ ತಮ್ಮ ಮಾತುಗಾರಿಕೆ, ಹಾಸ್ಯದಿಂದ ಮನೆಯ ಸದಸ್ಯರು ತಮ್ಮ ಮಾತಿಗೆ ತಲೆದೂಗುವಂತೆ ಮಾಡಿದರು. ಅಂತೆಯೇ ಸುದೀಪ್ ಅವರು ಎಲ್ಲರ ಬಳಿ ತಮ್ಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವಂತೆ ಹೇಳಿದರು.

    ಹೌದು. ಬಿಗ್ ಮನೆಯಲ್ಲಿ ಅತ್ಯಂತ ಉತ್ಸಾಹದಿಂದ ಮನೆಮಂದಿಯನ್ನು ನಗಿಸುವ ಲ್ಯಾಗ್ ಮಂಜು ಬಳಿ ಮನೆಯ ಸದಸ್ಯರ ಯಾವ ಒಂದು ವಿಚಾರ ಒಳ್ಳೆಯದಿದೆ ಹಾಗೂ ಈ ಒಂದು ವಿಚಾರದಿಂದ ಅವರಿಂದ ದೂರ ಇರಬೇಕು ಎಂಬುದನ್ನು ತಿಳಿಸುವಂತೆ ಹೇಳುತ್ತಾರೆ. ಅಲ್ಲದೆ ಕಿಚ್ಚ ಅವರು ಒಬ್ಬೊಬ್ಬರ ಹೆಸರನ್ನು ಹೇಳುತ್ತಾ ಬಂದರು. ದಿವ್ಯ ಉರುಗುಡ ಹೆಸರು ಹೇಳುತ್ತಿದ್ದಂತೆಯೇ ಮಂಜು ಆಕೆಯಿಂದ ಇದೇ ವಿಚಾರಕ್ಕೆ ಹುಷಾರಾಗಿರಬೇಕು ಎಂದರು.

    ಸ್ಪೋರ್ಟ್, ಟಾಸ್ಕ್ ಅಂತ ಬಂದಾಗ ದಿವ್ಯ ಯಾರನ್ನೂ ಲೆಕ್ಕಕ್ಕೆ ತಗೊಳಲ್ಲ. ರಾಕ್ಷಸಿಯಂತೆ ಒಬ್ಬಳೇ ಸಿಕ್ಕಾಪಟ್ಟೆ ಫೈಟ್ ಮಾಡ್ತಾಳೆ. ಇದು ನನಗೆ ತುಂಬಾ ಒಳ್ಳೆಯ ವಿಚಾರ ಅಂದ್ರು.

    ಇನ್ನು ತುಂಬಾ ಹುಷಾರಾಗಿರಬೇಕಾದ ವಿಚಾರ ಅಂದ್ರೆ ಫಸ್ಟ್ ಅವಳನ್ನು ಇಲ್ಲಿಂದ ಕಳಿಸಬೇಕು ಅನ್ನೋದಾಗಿದೆ ಅಂದ್ರು. ಲ್ಯಾಗ್ ಮಂಜು ಹೀಗೆ ಹೇಳ್ತಿದ್ದಂದೆ ಕಿಚ್ಚ ಸೇರಿದಂತೆ ಮನೆ ಮಂದಿಯೆಲ್ಲಾ ಜೋರಾಗಿ ನಕ್ಕರು. ಇತ್ತ ಮಂಜು ಹೀಗೆ ಹೇಳ್ತಿದ್ದಂತೆ ದಿವ್ಯ ಅವರು ಮಂಜು…… ಅಂತ ನಗುವಿನ ಜೊತೆ ಸಿಟ್ಟು ಹೊರಹಾಕಿದ ಪ್ರಸಂಗವೂ ನಡೆಯಿತು.