Tag: Bigg Boss Season 9

  • ಪ್ರಶಾಂತ್ ಸಂಬರ್ಗಿಗೆ ‘ಕುತಂತ್ರಿ ಕಲಾವಿದ’ ಎಂದ ಸಾನ್ಯ ಅಯ್ಯರ್

    ಪ್ರಶಾಂತ್ ಸಂಬರ್ಗಿಗೆ ‘ಕುತಂತ್ರಿ ಕಲಾವಿದ’ ಎಂದ ಸಾನ್ಯ ಅಯ್ಯರ್

    ಬಿಗ್ ಬಾಸ್ ಓಟಿಟಿಯಲ್ಲಿ ನೋಡುಗರಿಗೆ ಸಖತ್ ಮೋಡಿ ಮಾಡಿದ್ದ ಸಾನ್ಯ ಅಯ್ಯರ್, ಬಿಗ್ ಬಾಸ್ ಸೀಸನ್ 9ರಲ್ಲಿ (Bigg Boss Season 9) ಕೊಂಚ ಡಲ್ ಹೊಡೆದಂತೆ ಕಾಣ್ತಿದ್ದಾರೆ.  ಸದಾ ಲವಲವಿಕೆ, ಜಾಣ್ಮೆಯಿಂದ ಆಟ ಆಡುತ್ತಿದ್ದ,  ರೂಪೇಶ್ ಶೆಟ್ಟಿ ಜೊತೆಲಿ ಯಾವಾಗಲೂ ಅಂಟಿಕೊಂಡೇ ಇರುತ್ತಿದ್ದ ಈ ಪುಟ್ಟ ಗೌರಿ, ಇದೀಗ ಗುಂಪಿನಲ್ಲಿ ಗೋವಿಂದ ಆಗಿದ್ದಾರೆ. ಹೀಗಾಗಿಯೇ ಪ್ರಶಾಂತ್ ಸಂಬರ್ಗಿಗೆ ಸಾನ್ಯ ಕುತಂತ್ರಿ ಕಲೆ ಎನ್ನುವ ಬ್ಯಾಂಡ್ ಕಟ್ಟಿ ನಲಿದಿದ್ದಾರೆ.

    ಬಿಗ್ ಬಾಸ್ ಮನೆ ಒಳಗೆ ಬರುವ ಪ್ರತಿಯೊಬ್ಬರಿಗೂ ಕಿಚ್ಚ ಸುದೀಪ್, ಒಂದೊಂದು ಬ್ಯಾಂಡ್ ಕೊಟ್ಟು ಕಳುಹಿಸಿದ್ದರು. ಆ ಬ್ಯಾಂಡ್ ಮೇಲೆ ಒಂದೊಂದು ಹೆಸರಿತ್ತು. ಅದನ್ನು ಮನೆಯಲ್ಲಿರುವ ತಮ್ಮಿಷ್ಟದ ವ್ಯಕ್ತಿಗೆ ಕಟ್ಟಲು ಸೂಚಿಸಿದ್ದರು. ಆ ಟಾಸ್ಕ್ ಈಗ ನಡೆದಿದೆ. ಸಾನ್ಯಗೆ ಸಿಕ್ಕ ಬ್ಯಾಂಡ್ ನಲ್ಲಿ ‘ಕಲಾವಿದ’ ಎಂದು ಬರೆಯಲಾಗಿತ್ತು. ಕಲಾವಿದ ಪದವನ್ನು ಕುತಂತ್ರಿ ಕಲೆ ಎಂದು ಬದಲಾಯಿಸಿ ಸಾನ್ಯ ಅಯ್ಯರ್ (Sanya Iyer), ಸಂಬರ್ಗಿಗೆ ಕಟ್ಟಿದರು. ಇದರಿಂದ ಸಾಂಬರ್ಗಿ ಶ್ಯಾನೇ ಬೇಜಾರು ಮಾಡಿಕೊಂಡಿದ್ದಾರೆ. ಇದನ್ನೂ ಓದಿ:ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಸಿನಿಮಾದ ಟೈಟಲ್ ಲಾಂಚ್ ಗೆ ಮುಹೂರ್ತ ಫಿಕ್ಸ್

    ಪ್ರಶಾಂತ್ ಸಂಬರ್ಗಿ (Prashant Sambargi) ದೊಡ್ಮನೆಲಿ ಒಂದು ರೀತಿ ಫೈಯರ್ ಬ್ರ್ಯಾಂಡ್. ನೇರವಾಗಿ ಮಾತಾಡೋ ಮೂಲಕ ಹಲವರ ವಿರೋಧ ಕೂಡ ಕಟ್ಟಿಕೊಂಡಿದ್ದಾರೆ. ಹಾಗಾಗಿ ಪ್ರಶಾಂತ್ ಕೈಲಿ ಈಗ ಕುತಂತ್ರಿ ಕಲಾವಿದ ಬ್ಯಾಂಡ್ ರಾರಾಜಿಸುತ್ತಿದೆ. ಇಂಥದೊಂದು ಬ್ಯಾಂಡ್ ಕಟ್ಟಿರೋ ಸಾನ್ಯಗೆ ಮುಂದಿನ ದಿನಗಳಲ್ಲಿ ಪ್ರಶಾಂತ್ ಅದ್ಯಾವ ರೀತಿಯಲ್ಲಿ ನೆಡೆಸ್ಕೋತಾರೋ ಬಿಗ್ ಬಾಸ್ ನೇ ಬಲ್ಲ.

    ಬಿಗ್ ಬಾಸ್ ಮನೆಯಲ್ಲಿ ಪ್ರಶಾಂತ್ ಸಂಬರ್ಗಿ ಎಲ್ಲರ ಗಮನ ತನ್ನತ್ತ ಸೆಳೆಯಲು ಪ್ರಯತ್ನಿಸುತ್ತಿದ್ದರೆ, ಸಾನ್ಯ ಮಾತ್ರ ಆಗಾಗ್ಗೆ ಮೌನಕ್ಕೆ ಜಾರಿ ಬಿಡ್ತಾರೆ. ರೂಪೇಶ್ ಶೆಟ್ಟಿ (Rupesh Shetty) ಕೂಡ ಆಕೆಯಿಂದ  ಅಂತರ ಕಾಪಾಡಿಕೊಳ್ತಿರೊದ್ರಿಂದ ತಾಯಿಯನ್ನು ಕಳೆದುಕೊಂಡ ಕರುವಿನಂತಾಗಿದ್ದಾರೆ ಸಾನ್ಯ. ಆದರೂ, ಒಂದೊಂದು ಸಲ ಚಾರ್ಜ್ ಆಗಿ ಅಚ್ಚರಿ ಮೂಡಿಸುವಷ್ಟು ಚಟುವಟಿಕೆಯಲ್ಲಿ ಇರ್ತಾರೆ ಮುದ್ದು ಮುಖದ ಹುಡುಗಿ. ಮುಂದಿನ ದಿನಗಳಲ್ಲಿ ಸಾನ್ಯ ಅದು ಹೇಗೆ ಆಟ ಆಡ್ತಾರೋ ಕಾದು ನೋಡಬೇಕು.

    Live Tv
    [brid partner=56869869 player=32851 video=960834 autoplay=true]

  • ರೂಪೇಶ್ ಶೆಟ್ಟಿ ನನ್ನ ಮಗ ಇದ್ದಂತೆ ಎಂದು ಬಿಗ್ ಬಾಸ್ ಮನೆಯಲ್ಲಿ ಕಣ್ಣೀರಿಟ್ಟ ಗುರೂಜಿ

    ರೂಪೇಶ್ ಶೆಟ್ಟಿ ನನ್ನ ಮಗ ಇದ್ದಂತೆ ಎಂದು ಬಿಗ್ ಬಾಸ್ ಮನೆಯಲ್ಲಿ ಕಣ್ಣೀರಿಟ್ಟ ಗುರೂಜಿ

    ಬಿಗ್ ಬಾಸ್ (Bigg Boss Season 9) ಮನೆ ಒಳಗೆ ಪ್ರವೇಶ ಮಾಡುವಾಗ ಪ್ರತಿ ಸ್ಪರ್ಧಿಗೂ ಸುದೀಪ್ (Sudeep) ಒಂದೊಂದು ಬ್ಯಾಂಡ್ ಕೊಟ್ಟು ಮನೆ ಒಳಗೆ ಕಳುಹಿಸಿದ್ದರು. ಬಿಗ್ ಬಾಸ್ ಆದೇಶ ಮಾಡೋ ತನಕ ಈ ಪಟ್ಟಿ ನಿಮ್ಮ ಬಳಿ ಇರಲಿ ಎಂದು ಎಚ್ಚರಿಕೆಯನ್ನೂ ಕೊಟ್ಟು ಕಳುಹಿಸಿದ್ದರು. ಬಿಗ್ ಬಾಸ್ ಆದೇಶದ ನಂತರ ನಿಮಗೆ ಇಷ್ಟವಾದ ಸದಸ್ಯರಿಗೆ ಈ ಪಟ್ಟಿಯನ್ನು ಕೈಗೆ ಕಟ್ಬೇಕು, ಅದಕ್ಕೆ ಕಾರಣವನ್ನೂ ತಿಳಿಸಬೇಕು ಎಂದು ಹೇಳಲಾಗಿತ್ತು. ಇದೀಗ ಆ ಬ್ಯಾಂಡ್ (Band) ಕಟ್ಟುವ ಸಮಯ ಬಂದಿದೆ.

    ಮನೆಯ ಸದಸ್ಯರು ತಮಗೆ ಸಿಕ್ಕಿರುವ ಬ್ಯಾಂಡ್ ಅನ್ನು ತಮಗಿಷ್ಟದ ವ್ಯಕ್ತಿಗಳಿಗೆ ಕಟ್ಟಿದ್ದಾರೆ. ಅದಕ್ಕೆ ಕಾರಣವನ್ನೂ ಕೊಟ್ಟಿದ್ದಾರೆ. ಆದರೆ, ಆರ್ಯವರ್ಧನ್  (Aryavardhan) ಗುರೂಜಿ ಆಯ್ಕೆ ಮಾಡಿಕೊಂಡ ವ್ಯಕ್ತಿ ಮತ್ತು ಅವರು ಕೊಟ್ಟ ಕಾರಣದಿಂದಾಗಿ ಬಿಗ್ ಬಾಸ್ ಮನೆಯ ಸದಸ್ಯರು ಕೆಲ ನಿಮಿಷಗಳ ಕಾಲ ಭಾವುಕತೆಗೆ ಸಾಕ್ಷಿಯಾದರು. ಸ್ವತಃ ಗುರೂಜಿ (Guruji) ಕಣ್ಣೀರಿಟ್ಟು ಆ ಬ್ಯಾಂಡ್ ಅನ್ನು ವ್ಯಕ್ತಿಗೆ ನೀಡಿದರು. ಇದನ್ನೂ ಓದಿ: ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಆಸ್ಪತ್ರೆ ದಾಖಲು: ಅಭಿಮಾನಿಗಳಿಗೆ ಹೆಚ್ಚಿದೆ ಆತಂಕ

    ನಾನು ಸೋತ ವೇಳೆಯಲ್ಲಿ, ಹತಾಶನಾದ ಟೈಮ್ನಲ್ಲಿ ನನ್ನ ಜೊತೆ ನಿಂತವನು ರೂಪೇಶ್ ಶೆಟ್ಟಿ (Rupesh Shetty), ನಾನು ನನ್ನ ಮಗನನ್ನು ಎಷ್ಟು ಪ್ರೀತಿಸುತ್ತೇನೋ ಅಷ್ಟೇ ಪ್ರೀತಿಯನ್ನು ರೂಪೇಶ್‍ ಗೆ ಕೊಡುವೆ. ಅವನು ನನ್ನ ಮಗನಿದ್ದಂತೆ ಎಂದು ಘೋಷಿಸಿದರು. ಈ ವೇಳೆಯಲ್ಲಿ ಭಾವುಕರೂ ಆದರು. ಭಾವುಕತೆಯ ತೀವ್ರ ಎಷ್ಟಿತ್ತು ಅಂದರೆ, ರೂಪೇಶ್ ಹೆಸರಿನ ಬದಲಾಗಿ ರಾಕೇಶ್ (Rakesh Adiga) ಎಂದು ಹೇಳಿದರು. ಈ ಮಾತು ಕೇಳಿ ರಾಕೇಶ್ ಅಚ್ಚರಿ ವ್ಯಕ್ತ ಪಡಿಸಿದರು. ಕೊನೆಗೆ ರಾಕೇಶ್ ಅಲ್ಲ ರೂಪೇಶ್ ಎಂದು ತಿದ್ದಿಕೊಂಡು ರೂಪೇಶ್ ಗೆ ಬ್ಯಾಂಡ್ ಕಟ್ಟಿದರು ಗುರೂಜಿ.

    ಬಿಗ್ ಬಾಸ್ ಮನೆಯಲ್ಲಿ ರೂಪೇಶ್ ರಕ್ಷಣಾತ್ಮಕವಾಗಿ ಆಟ ಆಡುತ್ತಿದ್ದಾರೆ. ಬಿಗ್ ಬಾಸ್ ಓಟಿಟಿಯಲ್ಲಿಯ ಅನುಭವವನ್ನೂ ಈ ಮನೆಯಲ್ಲೂ ಉಪಯೋಗಿಸ್ತಿದ್ದಾರೆ. ಹಾಗಾಗಿ ರೂಪೇಶ್ ಎಲ್ಲರ ನೆಚ್ಚಿನ ಡಾರ್ಲಿಂಗ್ ಆಗಿದ್ದಾರೆ. ಅದರಲ್ಲೂ ಸದಾ ಗುರೂಜಿಯ ಬೆನ್ನಿಗೆ ನಿಂತ ಕಾರಣದಿಂದಾಗಿ ಪ್ರೀತಿಯ ಬ್ಯಾಂಡ್ ಅನ್ನು ಪಡೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಬಿಗ್ ಬಾಸ್’ ಮನೆಯಲ್ಲಿ ಭಯಾನಕ ಸೌಂಡ್ : ದಿಕ್ಕೆಟ್ಟು ಓಡಿದ ಸ್ಪರ್ಧಿಗಳು

    ‘ಬಿಗ್ ಬಾಸ್’ ಮನೆಯಲ್ಲಿ ಭಯಾನಕ ಸೌಂಡ್ : ದಿಕ್ಕೆಟ್ಟು ಓಡಿದ ಸ್ಪರ್ಧಿಗಳು

    ಬಿಗ್ ಬಾಸ್ (Bigg Boss Season 9) ಮನೆಯ ಅಷ್ಟೂ ಸದಸ್ಯರು ಬೆಚ್ಚಿ ಬಿದ್ದಿದ್ದಾರೆ. ಸವಿ ನಿದ್ರೆಯಲ್ಲಿ ಮೈ ಮರೆತು ಮಲಗಿದ್ದವರು, ಬಿಗ್ ಬಾಸ್ ಮನೆಯಲ್ಲಿ ಕೇಳಿ ಬಂದ ಭಯಾನಕ ಸೌಂಡ್‍ಗೆ ದಿಕ್ಕೆಟ್ಟು ಗಾರ್ಡನ್ ಏರಿಯಾದತ್ತ ಓಡಿದ ಪ್ರಸಂಗ ನಡೆದಿದೆ. ಶಬ್ದ ಕೇಳುತ್ತಿದ್ದಂತೆಯೇ ಜೀವವೇ ಬಾಯಿಗೆ ಬಂದಂತಾಗಿ, ಪ್ರಾಣ ರಕ್ಷಣೆಗಾಗಿ ಅತ್ತಿತ್ತ ಓಡಿದ ಘಟನೆ ನಡೆದಿದೆ. ಭಯಾನಕ ಹಾಗೂ ವಿಚಿತ್ರ ಸೌಂಡ್ ಜೊತೆಗೆ ಮನೆಯ ಲೈಟ್ ಕೂಡ ವಿಚಿತ್ರವಾಗಿ ಕುಣಿದು ಆತಂಕದ ವಾತಾವರಣ ಸೃಷ್ಟಿಯಾಗಿದೆ.

    ಒಬ್ಬರಿಗೊಬ್ಬರು ಕಾಲೆಳೆದುಕೊಂಡು, ಕಚಗುಳಿ ಇಡ್ತಾ, ಆಗೊಮ್ಮೆ ಈಗೊಮ್ಮೆ ರೊಮ್ಯಾಂಟಿಕ್ ಆಗಿ ಮಾತಾಡ್ತಾ, ಸವಿ ನಿದ್ದೆಗೆ ಜಾರೋದು ಬಿಗ್ ಬಾಸ್ ಮನೆಯಲ್ಲಿದ್ದವರ ದಿನಚರಿ. ರಾತ್ರಿ ಹಾಯಾಗಿ ಮಲಗಿ, ಬೆಳಗ್ಗೆ ‘ಎದ್ದೇಳು ಮಂಜುನಾಥ’ ಹಾಡಿಗೆ ಕುಣಿಯುತ್ತಾ ಹೊಸ ದಿನ ಶುರು ಮಾಡೋ ಹೊತ್ತಲ್ಲಿ ಈ ಭಾರೀ ಕೆಲ ಹೊತ್ತು ಆತಂಕ ಸೃಷ್ಟಿ ಮಾಡಿತ್ತು. ಕೆಲವರು ನಿಂತಲ್ಲಿಯೇ ಬೆಚ್ಚಿದರೆ, ಕೆಲವರು ಬಿಗ್ ಬಾಸ್ ಮನೆಯಿಂದ ಓಡಿ ಹೋಗುವ ಪ್ರಯತ್ನ ಮಾಡಿದ್ದಾರೆ. ಇನ್ನೂ ಕೆಲವರು ಗಾರ್ಡನ್ ಏರಿಯಾಗೆ ಬಂದು ಸುಧಾರಿಸಿಕೊಂಡಿದ್ದಾರೆ. ಇದನ್ನೂ ಓದಿ:‘ಸಂಸ್ಕಾರ ಭಾರತ’ದಲ್ಲಿ ಅನಾಮಿಕನ ರೋಚಕ ಸ್ಟೋರಿ

    ಅಷ್ಟಕ್ಕೂ ಆ ಶಬ್ದ ಬಂದಿದ್ದು ಎಲ್ಲಿಂದ ಎನ್ನುವುದೇ ಇಂಟ್ರಸ್ಟಿಂಗ್ ವಿಷ್ಯ. ಸಾಮಾನ್ಯವಾಗಿ ಬೆಳಗ್ಗೆ ಸ್ಪರ್ಧಿಗಳನ್ನು ಎಬ್ಬಿಸೋಕೆ ‘ಎದ್ದೇಳು ಮಂಜುನಾಥ’ ಹಾಡು ಹಾಕಲಾಗತ್ತೆ. ಅದರ ಬಲು ಭಾರೀ ಶಬ್ದ ಮಾಡಿ ಎಬ್ಬಿಸುವ ಪ್ರಯತ್ನ ನೆನ್ನೆ ನಡೆದಿದೆ. ಶಬ್ದ ಕೇಳಿ ಭಯಗೊಂಡು ಗಾರ್ಡನ್ ಏರಿಯಾಗೆ ಬಂದವರಿಗೆ ಅಲ್ಲೊಂದು ಸರ್ ಪ್ರೈಸ್ ಕಾದಿತ್ತು. ಗಾರ್ಡನ್ ಏರಿಯಾದಲ್ಲಿ ಮೆದುಳಿನ ಮಾದರಿಯನ್ನು ಇಡಲಾಗಿತ್ತು. ಈ ಮೆದುಳಿಗೆ ಲೈಟ್ ಕೂಡ ಹಾಕಿ ಡೆಕಾರೇಟ್ ಮಾಡಲಾಗಿದೆ.

    ಬಿಗ್ ಬಾಸ್ ಮನೆಯಲ್ಲಿ ಕೇಳಿ ಬಂದ, ಭಯಾನಕ ಶಬ್ದಕ್ಕೂ ಈ ಮೆದುಳಿನಾಕೃತಿಗೂ ಏನಾದರೂ ಸಂಬಂಧ ಇದೆಯಾ? ಎನ್ನುವ ಪ್ರಶ್ನೆ ಮೂಡುವುದು ಸಹಜ. ಹೌದು, ಈ ವಾರದಲ್ಲಿ ಮೆದುಳಿಗೆ ಸಂಬಂಧಿಸಿದ ಟಾಸ್ಟ್ ಇರಲಿದೆ ಎಂದು ಹೇಳಲಾಗುತ್ತಿದೆ. ಶಕ್ತಿ ಮತ್ತು ಯುಕ್ತಿಗಳ ಸಮ್ಮಿಲನವೇ ಈ ವಾರದ ಟಾಸ್ಕ್ ಎಂದು ಹೇಳಲಾಗುತ್ತಿದೆ. ಅದನ್ನು ತಿಳಿಸುವುದಕ್ಕಾಗಿಯೇ ಬಿಗ್ ಬಾಸ್ ಈ ರೀತಿ ಆಟವಾಡಿದ್ದಾರೆ ಎನ್ನುವುದು ಮನೆ ಒಳಗಿದ್ದವರು ಲೆಕ್ಕಾಚಾರ. ಆದರೆ, ಬಿಗ್ ಬಾಸ್ ಲೆಕ್ಕಾಚಾರ ಅದೇನಿದೆಯೋ, ಅವನೇ ಬಲ್ಲ.

    Live Tv
    [brid partner=56869869 player=32851 video=960834 autoplay=true]

  • ಬಿಗ್ ಬಾಸ್ ಮನೆಯಲ್ಲಿ ಸೋನು ಮರೆತು ಅಮೂಲ್ಯ ಹಿಂದೆ ಬಿದ್ದ ರಾಕೇಶ್ ಅಡಿಗ

    ಬಿಗ್ ಬಾಸ್ ಮನೆಯಲ್ಲಿ ಸೋನು ಮರೆತು ಅಮೂಲ್ಯ ಹಿಂದೆ ಬಿದ್ದ ರಾಕೇಶ್ ಅಡಿಗ

    ಬಿಗ್ ಬಾಸ್ ಓಟಿಟಿ ಮುಗಿಯುತ್ತಿದ್ದಂತೆ ಟಿವಿ‌ ಬಿಗ್ ಬಾಸ್ ನ (Bigg Boss Season 9) ಹವಾ ಜೋರಾಗಿದೆ. ಯಾರೆಲ್ಲಾ ಸ್ಪರ್ಧಿಗಳು ಬರಲಿದ್ದಾರೆ ಎಂಬ ಕೂತೂಹಲಕ್ಕೆ ತೆರೆಗೆ ಬಿದ್ದಿದೆ. ಇದೀಗ ಅಸಲಿ ಆಟ ಕೂಡ ಶುರುವಾಗಿದ್ದು, ನಿಧಾನಕ್ಕೆ ಒಬ್ಬರ ಪರಿಚಯದ ಜತೆ ಸ್ನೇಹ ಕೂಡ ಚಿಗುರುತ್ತಿದೆ‌. ರಾಕೇಶ್ ಮತ್ತು ಅಮೂಲ್ಯ ‌(Amulya Gowda) ನಡುವೆ ಸ್ನೇಹದ ಬೆಸುಗೆ ಶುರುವಾಗಿದ್ದು, ಅಮೂಲ್ಯ ಪಾತ್ರೆ ತೊಳೆಯುವುದನ್ನು ನೋಡಿ, ಗಾಡಿ ತೊಳಿತಿದ್ದೀರಾ ಎಂದು ರಾಕೇಶ್ ಕಾಲೆಳೆದಿದ್ದಾರೆ.

    ದೊಡ್ಮನೆಯಲ್ಲಿ ಆಟ ಜೋರಾಗಿದ್ದ, ಭಿನ್ನ ರೀತಿಯ 18 ಸ್ಪರ್ಧಿಗಳನ್ನು ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಇನ್ನೂ ಅಮೂಲ್ಯ ಮತ್ತು ರಾಕೇಶ್ (Rakesh Adiga) ನಡುವಿನ ಮಾತುಕತೆ ನೋಡುಗರಿಗೆ ಮನರಂಜನೆ ಕೊಟ್ಟಿದೆ. ರಾಕೇಶ್ ಪಾತ್ರೆ ತೊಳೆಯುತ್ತಾ ಇದ್ದರು. ನೀವು ಕೆಲಸ ಮಾಡುತ್ತೀರಾ ಎಂದು ಅಮೂಲ್ಯ ಗೆ ಕೇಳಿದ್ದಾರೆ. ಆಗ ಹೌದು.. ಫ್ರಿ ಇದ್ದಾಗ ಕೆಲಸ ಮಾಡುತ್ತೀನಿ ಎಂದಿದ್ದಾರೆ. ಹಬ್ಬದ ಸಮಯದಲ್ಲಿ ಕೆಲಸ ಮಾಡುತ್ತೀರಾ ಎಂದು ಮತ್ತೆ ರಾಕಿ ಕೌಂಟರ್ ಕೊಟ್ಟಿದ್ದಾರೆ. ಇದನ್ನೂ ಓದಿ:`ಕಮಲಿ’ ಖ್ಯಾತಿಯ ಅಮೂಲ್ಯಗೌಡರ ಹಾಟ್ ಫೋಟೋ ವೈರಲ್

    ಬಳಿಕ ಅಮೂಲ್ಯ ಪಾತ್ರೆ ತೊಳೆಯುವ ವೈಖರಿ ನೋಡಿ ನೀವು ಗಾಡಿ ತೊಳಿಯುತ್ತಿದ್ದೀರಾ ಎಂದು ರಾಕೇಶ್ ತಮಾಷೆ ಮಾಡಿದ್ದಾರೆ. ಅದಕ್ಕೆ ಅಮೂಲ್ಯ, ರಾಕಿಗೆ ಸ್ಮೈಲ್ ಮಾಡಿದ್ದಾರೆ. ಈ ಹಿಂದಿನ ಓಟಿಟಿಯಲ್ಲಿ ಸೋನು (Sonu Srinivas Gowda) ಜತೆಗಿನ ರಾಕೇಶ್ ಸಂಭಾಷಣೆ ನೋಡುಗರಿಗೆ ಮನರಂಜನೆ ನೀಡಿತ್ತು. ಅದೇ ರೀತಿ ಟಿವಿ ಸೀಸನ್ ನಲ್ಲಿ ರಾಕಿ ಮತ್ತು ಅಮೂಲ್ಯ ಜೋಡಿ ಮೋಡಿ ಮಾಡಬಹುದಾ ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಮೊದಲ ವಾರದಲ್ಲೇ 12 ಜನರನ್ನು ನಾಮಿನೇಟ್ ಮಾಡಿ ಶಾಕ್ ಕೊಟ್ಟ ಬಿಗ್ ಬಾಸ್

    ಮೊದಲ ವಾರದಲ್ಲೇ 12 ಜನರನ್ನು ನಾಮಿನೇಟ್ ಮಾಡಿ ಶಾಕ್ ಕೊಟ್ಟ ಬಿಗ್ ಬಾಸ್

    ದೊಡ್ಮನೆಯ ಕಾಳಗ ಶುರುವಾಗಿದೆ. ಇನ್ನೂ ಬಿಗ್ ಬಾಸ್  (Bigg Boss Season 9) ಮನೆಗೆ ಬಂದ ಮೇಲೆ ಕಡೆಯ ದಿನಗಳವರೆಗೂ ಕಾಣಿಸಿಕೊಳ್ಳಬೇಕು ಎಂಬುದು ಪ್ರತಿ ಸ್ಪರ್ಧಿಯ ಆಸೆಯಾಗಿರುತ್ತದೆ. ಇದೀಗ ಮೊದಲ ವಾರವೇ 12 ಜನರನ್ನು ನಾಮಿನೇಟ್  ಆಗಿ ಡೇಂಜರ್ ಜೋನ್ ನಲ್ಲಿದ್ದಾರೆ‌.

    ಕಿರುತೆರೆ ಲೋಕದ ಬಿಗ್ ಶೋ ಬಿಗ್ ಬಾಸ್ ಸೀಸನ್ 9ನಲ್ಲಿ ಒಟ್ಟು 18 ಜನರಿಗೆ ಅವಕಾಶ ಸಿಕ್ಕಿದೆ. ಪ್ರತಿ ವಾರವೂ ಸದಸ್ಯರ ಸಂಖ್ಯೆ ಕಡಿಮೆ ಆಗುತ್ತದೆ. ಆಟ ಶುರುವಾದ ಮೊದಲ ದಿನವೇ ನಾಮಿನೇಷನ್​  ಪ್ರಕ್ರಿಯೆ ನಡೆದಿದ್ದು, ಅದರಲ್ಲಿ ಆರ್ಯವರ್ಧನ್​, ದರ್ಶ್​, ದಿವ್ಯಾ ಉರುಡುಗ, ಐಶ್ವರ್ಯಾ ಪಿಸೆ, ಪ್ರಶಾಂತ್​ ಸಂಬರ್ಗಿ (Prashant Sambargi) , ವಿನೋದ್​, ಅರುಣ್​ ಸಾಗರ್​, ​ನವಾಜ್​, ಸಾನ್ಯಾ ಅಯ್ಯರ್​ (Sanya Iyer), ಮಯೂರಿ, ರೂಪೇಶ್​ ರಾಜಣ್ಣ (Rupesh Rajanna), ಕ್ಯಾವ್ಯಶ್ರೀ ಅವರು ನಾಮಿನೇಟ್​ ಆಗಿದ್ದಾರೆ. ಇದನ್ನೂ ಓದಿ:ಬೆಳಗ್ಗೆ ಎದ್ದಾಗ್ಲೇ ಬಿಕ್ಕಳಿಕೆ- ಯಾರೋ ಮಿಸ್ ಮಾಡಿಕೊಳ್ತಿದ್ದಾರೆ ಅಂದ್ರು ರಶ್ಮಿಕಾ

    ನಾಮಿನೇಟ್​ ಆದವರು ಪ್ರತಿ ಟಾಸ್ಕ್​ ಕೂಡ ಚೆನ್ನಾಗಿ ಆಡಲೇ ಬೇಕಾಗುತ್ತದೆ. ಮನೆಯ ಸದಸ್ಯರ ಜೊತೆ ಹೇಗೆ ನಡೆದುಕೊಳ್ಳುತ್ತಾರೆ? ವೀಕ್ಷಕರನ್ನು ಎಷ್ಟರಮಟ್ಟಿಗೆ ಮನರಂಜಿಸುತ್ತಾರೆ ಎಂಬುದೆಲ್ಲವೂ ಪರಿಗಣನೆಗೆ ಬರುತ್ತದೆ. ಹಾಗಾಗಿ ಎಚ್ಚರಿಕೆಯಿಂದ ಆಟ ಆಡಲು ಎಲ್ಲರೂ ಸಜ್ಜಾಗಿದ್ದಾರೆ. ಇನ್ನೂ ಅನುಪಮಾ ಗೌಡ, ಅಮೂಲ್ಯ ಗೌಡ, ದೀಪಿಕಾ ದಾಸ್​, ನೇಹಾ ಗೌಡ, ರೂಪೇಶ್​ ಶೆಟ್ಟಿ ಸದ್ಯಕ್ಕೆ ಸೇಫ್​ ಆಗಿದ್ದಾರೆ.

    ಇನ್ನೂ ಪ್ರವೀಣರು ಮತ್ತು ನವೀನರು ಎಂಬ ಹೊಸ ಮಾದರಿಯನ್ನು ಈ ಬಾರಿ ಬಿಗ್​ ಬಾಸ್​ನಲ್ಲಿ ಪರಿಚಯಿಸಲಾಗಿದೆ. ಹೊಸಬರನ್ನು ಮತ್ತು ಹಳಬರನ್ನು ಜೋಡಿಯಾಗಿಸಿ ಟಾಸ್ಕ್​ಗಳನ್ನು ಆಡಿಸಲಾಗುತ್ತಿದೆ. ಮೊದಲ ದಿನ ನಡೆದ ಟಾಸ್ಕ್​ನಲ್ಲಿ ಪ್ರಶಾಂ​ತ್ ಸಂಬರ್ಗಿ ಹಾಗೂ ವಿನೋದ್​ ಗೊಬ್ಬರಗಾಲ ಜೋಡಿ ವಿನ್​ ಆಗಿದೆ. ಫಸ್ಟ್​ ಟಾಸ್ಕ್​ ಗೆದ್ದಿದ್ದಕ್ಕಾಗಿ ಏನಾದರೂ ಕೊಡಿ ಎಂದು ಬಿಗ್​​ ಬಾಸ್​ ಬಳಿ ಪ್ರಶಾಂತ್​ ಸಂಬರ್ಗಿ ಮನವಿ ಮಾಡಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ನಾನು ಸೈಲೆಂಟ್ ಅಲ್ಲ ವೈಲೆಂಟ್’ ಎಂದು ಖಡಕ್ ಎಚ್ಚರಿಕೆ ಕೊಟ್ಟ ಆರ್ಯವರ್ಧನ್ ಗುರೂಜಿ

    ‘ನಾನು ಸೈಲೆಂಟ್ ಅಲ್ಲ ವೈಲೆಂಟ್’ ಎಂದು ಖಡಕ್ ಎಚ್ಚರಿಕೆ ಕೊಟ್ಟ ಆರ್ಯವರ್ಧನ್ ಗುರೂಜಿ

    ಬಿಗ್ ಬಾಸ್ 9ನೇ (Bigg Boss Season 9) ಸೀಸನ್ ಶುರುವಾಗಿದೆ. ಪ್ರವೀಣರ ಜೊತೆ ನವೀನರ ಜುಗಲ್ ಬಂದಿ ಕೂಡ ಜೋರಾಗಿದೆ. ಇದೀಗ ದೊಡ್ಮನೆಯಲ್ಲಿ ಮೊದಲ ದಿನವೇ ಜಗಳ ಶುರುವಾಗಿದ್ದು,  ಕೆಣಕಲು ಬಂದ ಪ್ರಶಾಂತ್ ಸಂಬರ್ಗಿಗೆ ಆರ್ಯವಧನ್ ಗುರೂಜಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: 2024ರ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ: ಮೋದಿ, ಹೇಮಾ ಮಾಲಿನಿಗೆ ರಾಖಿ ಸಾವಂತ್ ಥ್ಯಾಂಕ್ಸ್ ಹೇಳಿದ್ದೇಕೆ?

    ದೊಡ್ಮನೆಯಲ್ಲಿ 18 ಜನ ಭಿನ್ನ ವ್ಯಕ್ತಿಗಳಿದ್ದಾರೆ. ಮನೆಯ ರಂಗು ಮತ್ತಷ್ಟು ಜೋರಾಗಿದೆ. ಇನ್ನೂ ಈ ವೇಳೆ ಗುರೂಜಿ ಪ್ರಶಾಂತ್ ಸಂಬರ್ಗಿ (Prashant Sambargi) ಅವರನ್ನು ಸಂಪಂಗಿ ಅಂದಿದ್ದಾರೆ. ಈ ಮಾತು ಜಗಳಕ್ಕೆ ಎಡೆ ಮಾಡಿ ಕೊಟ್ಟಿದೆ. ರೀ ಅದು ಸಂಬರ್ಗಿ ಊರಿನ ಹೆಸರು ಎಂದು ಪ್ರಶಾಂತ್ ಕ್ಲ್ಯಾರಿಟಿ ಕೊಟ್ಟಿದ್ದಾರೆ. ಬಳಿಕ ನೀವು ಆರ್ಯವರ್ಧನ್ ಅಂತಾ ಯಾಕೆ  ಇಟ್ಟುಕೊಂಡ್ರಿ ನಾನು ಹೇಳಲಾ ನಿಮ್ಮ ನಿಜವಾದ ಹೆಸರು ಎಂದು ಪ್ರಶಾಂತ್, ಗುರೂಜಿಗೆ ಟಾಂಗ್ ಕೊಟ್ಟಿದ್ದಾರೆ.

    ಆರ್ಯವರ್ಧನ್ (Aryavardhan Guruji) ಉರುಫ್ ಏನು ಎಂದು ಪ್ರಶಾಂತ್ ಮತ್ತೆ ಕೇಳಿದ್ದಾರೆ. ಈ ಮಾತಿನ ಚಕಮಕಿ ಉರ್ಫಿಯಿಂದ ಉರಿಸೋದರವೆಗೆ ಚರ್ಚೆ ಆಗಿದೆ. ಈ ಜಗಳದ ನಡುವೆ ಇತ್ತ ಅರುಣ್ ಸಾಗರ್ (Arun Sagar) ಉರ್ಫಿಗೆ ಉರವಿದ್ದಾರೆ ಎಂದು ನಗೆಚಟಾಕಿ ಹಾರಿಸಿದ್ದಾರೆ. ಇವರು ಇನ್ಮೇಲೆ ಆರ್ಯವರ್ಧನ್ ಉರಸು ಎಂದು ಅರಣ್ ಸಾಗರ್ ಮನೆ ಮಂದಿ ಮುಂದೆ ಹೇಳಿದ್ದಾರೆ. ಅಷ್ಟಕ್ಕೇ ನಿಲ್ಲದ ಈ ಚರ್ಚೆ ಕಡೆಗೆ ಗುರೂಜಿ ಸಂಬರ್ಗಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

    ನನಗೆ ಏನೇ ಹೇಳಬೇಕಿದ್ದರೂ ನೇರವಾಗಿ ಹೇಳಿ ಎಂದು ನಾನು ಸೈಲೆಂಟ್ (Silent) ಅಲ್ಲ ವೈಲೆಂಟ್.. ಫೈಯರ್ ನಾನು‌ ಎಂದು ಸಂಬರ್ಗಿಗೆ ನೇರವಾಗಿ ಟಾಂಗ್ ಕೊಟ್ಟಿದ್ದಾರೆ. ಉರಿಸಲು ಬಂದ ಪ್ರಶಾಂತ್ ಗೆ ಪಂಚಿಂಗ್ ಡೈಲಾಗ್ ಗಳ ಮೂಲಕ ಗುರೂಜಿ ಬೆವರಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • `ಕಮಲಿ’ ಖ್ಯಾತಿಯ ಅಮೂಲ್ಯಗೌಡರ ಹಾಟ್ ಫೋಟೋ ವೈರಲ್

    `ಕಮಲಿ’ ಖ್ಯಾತಿಯ ಅಮೂಲ್ಯಗೌಡರ ಹಾಟ್ ಫೋಟೋ ವೈರಲ್

    ಜೀ ಕನ್ನಡ (Zee Kannada) ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಧಾರಾವಾಹಿ `ಕಮಲಿ'(Kamali) ಈ ಸೀರಿಯಲ್‌ನಲ್ಲಿ ಕಮಲಿಯಾಗಿ ಅಭಿನಯಿಸಿರೋ ಅಮೂಲ್ಯ ಗೌಡ (Amulya Gowda) ಹೆಸರು ಚಿರಪರಿಚಿತ.

    ಕಿರುತೆರೆಯಲ್ಲಿ ಪಕ್ಕಾ ಹಳ್ಳಿ ಹುಡ್ಗಿಯಾಗಿ (Village Girl) ಕಾಣಿಸಿಕೊಂಡಿರುವ ಅಮೂಲ್ಯ ಗೌಡರ ಹಾಟ್‌ಫೋಟೋಗಳು (Hot Photos) ಇದೀಗ ಸೋಶಿಯಲ್ ಮೀಡಿಯಾದಲ್ಲಿ (Social Media) ಭಾರೀ ಸದ್ದು ಮಾಡ್ತಿವೆ. ಇದನ್ನೂ ಓದಿ: ಬೆಳಗ್ಗೆ ಎದ್ದಾಗ್ಲೇ ಬಿಕ್ಕಳಿಕೆ- ಯಾರೋ ಮಿಸ್ ಮಾಡಿಕೊಳ್ತಿದ್ದಾರೆ ಅಂದ್ರು ರಶ್ಮಿಕಾ

    `ಕಮಲಿ’ ಸೀರಿಯಲ್ ನಲ್ಲಿ ಲಂಗ ದಾವಣಿ, ಎರಡು ಜಡೆ ಹಾಕಿಕೊಳ್ಳೊ ಅಮೂಲ್ಯ ಗೌಡ ನಿಜ ಜೀವನದಲ್ಲಂತೂ ಅದಕ್ಕೆ ಪಕ್ಕಾ ಆಪೊಸಿಟ್ ಆಗಿದ್ದಾರೆ. ರಿಯಲ್ ಲೈಫ್‌ನಲ್ಲಿ ಅಮೂಲ್ಯ ಗೌಡ ಪಕ್ಕಾ ಮಾಡರ್ನ್ ಹುಡುಗಿ ಎಂಬುದಕ್ಕೆ ಈ ಫೋಟೋಗಳಿಗಿಂತ ಬೇರೆ ಸಾಕ್ಷಿ ಬೇಕಿಲ್ಲ. ಇದನ್ನೂ ಓದಿ: Bigg Boss Special- ಈ ಬಾರಿ ಬಿಗ್ ಬಾಸ್ 9 ಮನೆ ಪ್ರವೇಶ ಮಾಡಿರುವ ಖ್ಯಾತ ಕಿರುತೆರೆ ನಟಿಯರಿವರು

    ಮೂಲತಃ ಮೈಸೂರಿನವರೇ ಆದ ಅಮೂಲ್ಯ ಸ್ವಾತಿ ಮುತ್ತು ಧಾರಾವಾಹಿಯಲ್ಲಿ ನಟಿಸುವ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಜೀ ವಾಹಿನಿಯ ಕಮಲಿ ಧಾರವಾಹಿ ಇವರಿಗೆ ಮತ್ತಷ್ಟು ಜನಪ್ರಿಯತೆ ತಂದುಕೊಟ್ಟಿತು. ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಮತ್ತೆ ಮೂರು ಅಚ್ಚರಿಯ ಹೆಸರುಗಳು

    ಅಷ್ಟೇ ಅಲ್ಲ ಪುನರ್ ವಿವಾಹ, ಅರಮನೆ ಸೇರಿದಂತೆ ಹಲವು ಕನ್ನಡ ಧಾರಾವಾಹಿಗಳಲ್ಲಿ ಇವರು ನಟಿಸಿದ್ದಾರೆ. ತೆಲುಗಿನ ಕಾರ್ತಿಕ ದೀಪಂ ಧಾರಾವಾಹಿಯಲ್ಲೂ ನಟಿಸಿದ್ದಾರೆ. ಇವರ ಪೂರ್ತಿ ಹೆಸರು ಅಮೂಲ್ಯ ಓಂಕಾರ ಗೌಡ. ಇದೀಗ ಅಮೂಲ್ಯ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದು, ಈ ಬೆನ್ನಲ್ಲೇ ಅಮೂಲ್ಯಗೌರಡ ಹಾಟ್‌ ಫೋಟೋಗಳು ವೈರಲ್ ಆಗಿವೆ.

    Live Tv
    [brid partner=56869869 player=32851 video=960834 autoplay=true]

  • ಬಿಗ್ ಬಾಸ್ ಮನೆಯಲ್ಲಿ ಮತ್ತೆ ಮೂರು ಅಚ್ಚರಿಯ ಹೆಸರುಗಳು

    ಬಿಗ್ ಬಾಸ್ ಮನೆಯಲ್ಲಿ ಮತ್ತೆ ಮೂರು ಅಚ್ಚರಿಯ ಹೆಸರುಗಳು

    ಕೆಲವೇ ಕ್ಷಣಗಳಲ್ಲೇ ಬಿಗ್ ಬಾಸ್ ಸೀಸನ್ 9 (Bigg Boss Season 9) ಶುರುವಾಗಲಿದೆ. ಬಿಗ್ ಬಾಸ್ ಮನೆ ಒಳಗೆ ಯಾರೆಲ್ಲ ಹೋಗಲಿದ್ದಾರೆ ಎನ್ನುವ ಯಾದಿ ಕ್ಷಣ ಕ್ಷಣಕ್ಕೂ ಬದಲಾಗುತ್ತಿದೆ. ಅಲ್ಲದೇ ಜೊತೆಯಾಗುತ್ತಲೇ ಹೋಗುತ್ತಿದೆ. ಸದ್ಯ ಮತ್ತಷ್ಟು ಅಚ್ಚರಿಯ ಹೆಸರುಗಳು ಕೇಳಿ ಬರುತ್ತಿದ್ದು, ಆರ್.ಜೆ ಸುನೀಲ್, ನಟಿ ದಿವ್ಯಾ ಉರುಡುಗ ಹಾಗೂ ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಕೂಡ ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ಇರಲಿದ್ದಾರಂತೆ.

    ಖಾಸಗಿ ಎಫ್.ಎಂ ವಾಹಿನಿಯಲ್ಲಿ ಕೆಲಸ ಮಾಡುತ್ತಿರುವ ಸುನೀಲ್ (R.J. Sunil), ಕಲರ್ ಕಲರ್ ಕಾಗೆ ಹಾರಿಸುವುದರಲ್ಲಿ ಫೇಮಸ್. ಅಪರಿಚಿತರಿಗೆ ಕಾಲ್ ಮಾಡಿ ಕ್ವಾಟ್ಲೆ ಕೊಡುವುದೇ ಸುನೀಲ್ ಉದ್ಯೋಗ. ಅದನ್ನು ಹಲವಾರು ವರ್ಷಗಳಿಂದಲೂ ಮಾಡುತ್ತಾ ಬಂದಿದ್ದಾರೆ. ಅದರಲ್ಲೂ ಸ್ಯಾಂಡಲ್ ವುಡ್ ಸಿಲೆಬ್ರಿಟಿಗಳಿಗೆ ಅತೀ ಹೆಚ್ಚು ಕಾಗೆ ಹಾರಿಸಿದ ಕೀರ್ತಿ ಸುನೀಲ್ ಅವರಿಗೆ ಸಲ್ಲುತ್ತದೆ. ಅಲ್ಲದೇ ಸೋಷಿಯಲ್ ಮೀಡಿಯಾದಲ್ಲೂ ಇವರು ಫೇಮಸ್. ಇದನ್ನೂ ಓದಿ:‘ಬಿಗ್ ಬಾಸ್’ ಮನೆಗೆ ಬ್ರಹ್ಮಾಂಡ ಗುರೂಜಿ ಹೋದರೆ ಮಜವಾಗಿರತ್ತೆ ಅಂತಿದ್ದಾರೆ ನೆಟ್ಟಿಗರು

    ಕನ್ನಡದ ಯುವ ನಟಿ ದಿವ್ಯಾ ಉರುಡುಗ (Divya Uruduga) ಹೆಸರು ಕೂಡ ಮತ್ತೆ ಕೇಳಿ ಬಂದಿದೆ. ಈಗಾಗಲೇ ಅವರು ಬಿಗ್ ಬಾಸ್ ಮನೆಯನ್ನು ಪ್ರವೇಶ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದ ಬಾರಿ ಬಿಗ್ ಬಾಸ್ ನಲ್ಲಿ ಇವರಿಗೆ ಮೂರನೇ ಸ್ಥಾನ ಸಿಕ್ಕಿದೆ. ಕೆ.ಪಿ ಅರವಿಂದ್ ಜೊತೆ ದಿವ್ಯಾ ಹೆಸರು ತಳುಕು ಹಾಕಿಕೊಂಡಿತ್ತು. ಇಬ್ಬರೂ ಡೇಟಿಂಗ್ ನಲ್ಲಿ ಇದ್ದಾರೆ ಎನ್ನುವ ಮಾತೂ ಈಗಲೂ ಹರಿದಾಡುತ್ತಲೇ ಇರುತ್ತದೆ. ಬಿಗ್ ಬಾಸ್ ನಿಂದ ಅರವಿಂದ್ ಮತ್ತು ದಿವ್ಯಾ ಆಚೆ ಬಂದ ನಂತರೂ ಆ ಸ್ನೇಹವನ್ನು ಉಳಿಸಿಕೊಂಡಿದ್ದರು.

    ಕನ್ನಡ ಪರ ಸಾಕಷ್ಟು ಹೋರಾಟಗಳನ್ನು ಮಾಡಿಕೊಂಡು ಬರುತ್ತಿರುವ ರೂಪೇಶ್ ರಾಜಣ್ಣ (Rupesh Rajanna) ಕೂಡ ಈ ಬಾರಿ ಬಿಗ್ ಬಾಸ್ ಮನೆಗೆ ಹೋಗಿದ್ದಾರೆ ಎನ್ನುವ ಮಾತುಗಳು ದಟ್ಟವಾಗಿವೆ. ಕನ್ನಡ ನಾಡು, ನುಡಿ ಪರವಾಗಿ ಸಾಕಷ್ಟು ಹೋರಾಟ ಮಾಡಿರುವ ರೂಪೇಶ್, ಸೋಷಿಯಲ್ ಮೀಡಿಯಾಗಳಲ್ಲೂ ಸಾಕಷ್ಟು ಸಕ್ರೀಯರಾದವರು. ಅಲ್ಲದೇ, ಕನ್ನಡ ನಟರಿಗೆ ತೊಂದರೆ ಆದಾಗಲೂ ಅವರ ಪರವಾಗಿ ನಿಂತು, ಹೋರಾಟ ಮಾಡಿದವರು.

    Live Tv
    [brid partner=56869869 player=32851 video=960834 autoplay=true]

  • ಕಂಟೆಸ್ಟೆಂಟ್ ನಂಬರ್ 1 ಆಗಿ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ ನಟ ಅರುಣ್ ಸಾಗರ್

    ಕಂಟೆಸ್ಟೆಂಟ್ ನಂಬರ್ 1 ಆಗಿ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ ನಟ ಅರುಣ್ ಸಾಗರ್

    ಲರ್ಸ್ ಕನ್ನಡ ವಾಹಿನಿಯಲ್ಲಿ ಮೂಡಿ ಬರಲಿರುವ ಬಿಗ್ ಬಾಸ್ ಸೀಸನ್ 9 (Bigg Boss Season 9) ಶುರುವಾಗಲೇ ಇನ್ನೊಂದೇ ಗಂಟೆ ಬಾಕಿ ಇದೆ. ಅದಕ್ಕೂ ಮುನ್ನ ವಾಹಿನಿಯು ಪ್ರೋಮೋ ಒಂದನ್ನು ರಿಲೀಸ್ ಮಾಡಿದ್ದು, ದೊಡ್ಮನೆಗೆ ಮೊದಲು ಸ್ಪರ್ಧಿಯಾಗಿ ನಟ, ಕಲಾ ನಿರ್ದೇಶಕ ಅರುಣ್ ಸಾಗರ್ (Arun Sagar) ಕಾಲಿಟ್ಟಿದ್ದಾರೆ. ಅಲ್ಲದೇ, ಸುದೀಪ್ ಅವರ ಜೊತೆ ಹ್ಯೂಮರೆಸ್ ಆಗಿ ಮಾತನಾಡಿ ಮನರಂಜನೆ ನೀಡಿದ್ದಾರೆ. ಸುದೀಪ್ ಮತ್ತು ಅರುಣ್ ಸಾಗರ್ ಆಪ್ತರು ಆಗಿರುವ ಕಾರಣದಿಂದಾಗಿ ಮಾತುಗಳು ಕೂಡ ಅದೇ ಶೈಲಿಯಲ್ಲೇ ಮೂಡಿ ಬಂದಿವೆ.

    ನಟ, ಕಲಾ ನಿರ್ದೇಶಕ, ರಂಗಭೂಮಿ ಪ್ರತಿಭೆ ಅರುಣ್ ಸಾಗರ್ ಕೂಡ ಈಗಾಗಲೇ ಬಿಗ್ ಬಾಸ್ ಮನೆ ಸೇರಿದ್ದಾರೆ. ಬಿಗ್ ಬಾಸ್ ಸೀಸನ್ 1ರಲ್ಲೂ ಅರುಣ್ ಸಾಗರ್ ದೊಡ್ಮನೆ ಪ್ರವೇಶ ಮಾಡಿದವರು. ಎರಡನೇ ಸ್ಥಾನವನ್ನೂ ಪಡೆದವರು. ಈ ಬಾರಿಯೂ ಅವರಿಗೆ ಮತ್ತೊಮ್ಮೆ ಅವಕಾಶ ಸಿಕ್ಕಿದೆ. ನಟನಾಗಿ, ಕಲಾ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಅರುಣ್, ತಮ್ಮ ಮಾತುಗಳ ಮೂಲಕವೇ ಮೋಡಿ ಮಾಡಿದವರು. ಕಿಚ್ಚ ಸುದೀಪ್ (Sudeep) ಅವರಿಗೆ ತೀರಾ ಆಪ್ತರು ಕೂಡ. ಸೀಸನ್ 1ರಲ್ಲಿ ಬಿಗ್ ಬಾಸ್ ಪಟ್ಟ ಇವರಿಗೆ ಒಲಿಯುತ್ತದೆ ಎಂದು ಹೇಳಲಾಗಿತ್ತು. ಆದರೆ, ಅದು ಫಲ ಕೊಡಲಿಲ್ಲ. ಈ ಬಾರಿಯಾದರೂ ಗೆದ್ದು ಬರುತ್ತಾರಾ ಕಾದು ನೋಡಬೇಕು.

    ಅರುಣ್ ಲುಕ್ ತುಂಬಾ ಸ್ಪೆಷಲ್ ಆಗಿದೆ. ಬಿಗ್ ಬಾಸ್ ಮನೆ ಒಳಗೆ ಅವರನ್ನು ಕಳುಹಿಸಿಲು ಪತ್ನಿ, ಪುತ್ರಿ ಹಾಗೂ ಪುತ್ರ ಆಗಮಿಸಿದ್ದರು. ಎರಡನೇ ಬಾರಿಗೆ ಮನೆಯ ಯಜಮಾನನ್ನು ದೊಡ್ಮೆನೆಗೆ ಕಳುಹಿಸಿ, ಈ ಬಾರಿ ಗೆದ್ದು ಬರಲಿ ಎಂದು ಹಾರೈಸಿದ್ದಾರೆ. ತಮ್ಮ ಮಾತು ಮತ್ತು ಅಭಿನಯ ಮೂಲಕವೇ ಬಿಗ್ ಬಾಸ್ ಮನೆಯ ಗಮನ ಸೆಳೆದಿದ್ದರು ಅರುಣ್. ಇವರೇ ಆ ಸೀಸನ್ ನಲ್ಲಿ ಗೆಲುವು ಸಾಧಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ, ಕೊನೆ ಗಳಿಗೆಯ ಆಟವೇ ಬದಲಾಗಿತ್ತು. ಈ ಬಾರಿ ಅವರು ಏನು ಮಾಡುತ್ತಾರೆ ಕಾದು ನೋಡಬೇಕು.

    Live Tv
    [brid partner=56869869 player=32851 video=960834 autoplay=true]

  • Bigg Boss Special- ಈ ಬಾರಿ ಬಿಗ್ ಬಾಸ್ 9 ಮನೆ ಪ್ರವೇಶ ಮಾಡಿರುವ ಖ್ಯಾತ ಕಿರುತೆರೆ ನಟಿಯರಿವರು

    Bigg Boss Special- ಈ ಬಾರಿ ಬಿಗ್ ಬಾಸ್ 9 ಮನೆ ಪ್ರವೇಶ ಮಾಡಿರುವ ಖ್ಯಾತ ಕಿರುತೆರೆ ನಟಿಯರಿವರು

    ಪ್ರತಿ ವರ್ಷವೂ ಬಿಗ್ ಬಾಸ್ (Bigg Boss Season 9) ಮನೆಯಲ್ಲಿರುವ ಸದಸ್ಯರಲ್ಲಿ ಅತೀ ಹೆಚ್ಚು ಕಿರುತೆರೆಯ ಲೋಕದವರೇ ಇರುತ್ತಾರೆ. ಈ ಬಾರಿಯೂ ಅದಕ್ಕೆ ಹೊರತಾಗಿಲ್ಲ. ಕಲರ್ಸ್ ಕನ್ನಡ ವಾಹಿನಿಯಲ್ಲೇ ಪ್ರಸಾರವಾದ ನಾನಾ ಧಾರಾವಾಹಿಗಳ ಫೇಮಸ್ ಕಲಾವಿದರು ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ಇರಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಈ ತಾರೆಯರು ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ ಎಂದೂ ಹೇಳಲಾಗಿತ್ತು. ಯಾರೆಲ್ಲ ಕಲಾವಿದರು ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ಇರಲಿದ್ದಾರೆ ಎನ್ನುವುದು ಇವತ್ತಷ್ಟೇ ಗೊತ್ತಾಗಲಿದೆ. ಅದಕ್ಕೂ ಮುನ್ನ ಕೆಲವು ಹೆಸರುಗಳು ಹರಿದಾಡುತ್ತಿವೆ.

    ನೇಹಾ ಗೌಡ (ಲಕ್ಷ್ಮಿ ಬಾರಮ್ಮ)

    ಆರು ವರ್ಷಗಳ ಅಧಿಕ ಕಾಲ ಪ್ರಸಾರವಾದ ಲಕ್ಷ್ಮಿ ಬಾರಮ್ಮ (Lakshmi Baramma) ಧಾರಾವಾಹಿಯಲ್ಲಿ ಗೊಂಬೆ ಅಂತಾನೇ ಫೇಮಸ್ ಆಗಿರುವ ನಟಿ ನೇಹಾ ಗೌಡ (Neha Gowda). ಈ ಬಾರಿ ಅವರು ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಕನ್ನಡದ ಹೆಸರಾಂತ ನಟಿ ಸೋನು ಗೌಡ ಅವರ ಸಹೋದರಿ ಕೂಡ ಇವರಾಗಿದ್ದಾರೆ. ನಾಲ್ಕು ವರ್ಷಗಳ ಹಿಂದೆಯೇ ಮದುವೆ ಆಗಿರುವ ನೇಹಾ ಗೌಡ, ಇದೀಗ ಧಾರಾವಾಹಿ ಲೋಕದಲ್ಲಿ ಅಷ್ಟೇನೂ ಸಕ್ರಿಯರಾಗಿಲ್ಲವಾದರೂ, ಹಲವಾರು ಧಾರಾವಾಹಿಗಳಲ್ಲಿ ನಟಿಸಿದ್ದರಿಂದ, ಅವರ ಅಭಿಮಾನಿಗಳ ಸಂಖ್ಯೆ ಕಡಿಮೆಯೇನೂ ಇಲ್ಲ. ಇದನ್ನೂ ಓದಿ : ಈ ಬಾರಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿರುವ ಎಕ್ಸ್‌ಕ್ಲೂಸಿವ್ ಸೆಲೆಬ್ರಿಟಿಗಳು

    ರಮೋಲಾ (ಕನ್ನಡತಿ)

    ಕಲರ್ಸ್ ಕನ್ನಡದಲ್ಲೇ ಪ್ರಸಾರವಾಗುತ್ತಿರುವ ಕನ್ನಡತಿ (Kannadathi)ಧಾರಾವಾಹಿಯ ಸಾನಿಯಾ ಪಾತ್ರದ ಮೂಲಕ ಫೇಮಸ್ ಆದವರು ರಮೋಲಾ. ಈ ಧಾರಾವಾಹಿಯು ಇವರಿಗೆ ಸಾಕಷ್ಟು ಹೆಸರು ತಂದು ಕೊಟ್ಟಿದೆ. ಅದೊಂದು ನೆಗೆಟಿವ್ ಪಾತ್ರವಾದರೂ, ರಮೋಲಾ (Ramola) ಒಪ್ಪಿಕೊಂಡು ಪಾತ್ರ ನಿರ್ವಹಿಸಿದ ರೀತಿ ಮೆಚ್ಚುವಂಥದ್ದು. ಈಗಾಗಲೇ ಮೂರ್ನಾಲ್ಕು ಸಿನಿಮಾಗಳಲ್ಲಿ ಅವರು ನಟಿಸಿದ್ದರೂ, ಈವರೆಗೂ ಒಂದೂ ಸಿನಿಮಾ ಬಿಡುಗಡೆ ಆಗಿಲ್ಲ. ಮೊನ್ನೆಯಷ್ಟೇ ಕನ್ನಡತಿ ಧಾರಾವಾಹಿಯಿಂದ ಈ ನಟಿ ಹೊರ ನಡೆದಿದ್ದರು. ಇದು ಬಿಗ್ ಬಾಸ್ ಮನೆಗೆ ಹೋಗುವ ಕಾರಣಕ್ಕಾಗಿಯೇ ಆದ ಘಟನೆ ಎಂದು ಹೇಳಲಾಗಿತ್ತು. ಅದೀಗ ನಿಜವಾಗಿದೆ. ಸದ್ಯ ಫ್ಯಾಷನ್ ಡಿಸೈನ್ ಕೋರ್ಸ್ ಕೂಡ ಮಾಡುತ್ತಿದ್ದಾರೆ ರಮೋಲಾ.

    ಕಾವ್ಯಶ್ರೀ ಗೌಡ (ಮಂಗಳಗೌರಿ ಮದುವೆ)

    ಮಂಗಳಗೌರಿ ಮದುವೆ ಧಾರಾವಾಹಿಯಲ್ಲಿ ಮಂಗಳಗೌರಿಯಾಗಿ ನಟಿಸಿದವರು ಕಾವ್ಯಶ್ರೀ ಗೌಡ (Kavyashree Gowda). ಕಥಾನಾಯಕಿಯ ಪಾತ್ರವೇ ಅದಾಗಿದ್ದರಿಂದ ಅತೀ ಬೇಗ ಜನರಿಗೆ ಹತ್ತಿರವಾದರು. ನಿರೂಪಕಿಯಾಗಿಯೂ ಕೆಲಸ ಮಾಡಿರುವ ಕಾವ್ಯಶ್ರೀ, ಮೂಲತಃ ಚನ್ನಪಟ್ಟಣದವರು. ಮನೆಯೇ ಮಂತ್ರಾಲಯ ಧಾರಾವಾಹಿ ಮೂಲಕ ಬಣ್ಣದ ಪ್ರಪಂಚಕ್ಕೆ ಕಾಲಿಟ್ಟ ಕಾವ್ಯಶ್ರೀ, ಇದೀಗ ಬಿಗ್ ಬಾಸ್ ಮನೆಯನ್ನೂ ಪ್ರವೇಶ ಮಾಡಿದ್ದಾರೆ. ಈ ಹಿಂದೆ ಪುನೀತ್ ರಾಜ್ ಕುಮಾರ್ ಜೊತೆ ನಟಿಸುವ ಆಸೆಯನ್ನೂ ಅವರು ವ್ಯಕ್ತಪಡಿಸಿದ್ದರು. ಆದರೆ ಅದು ಕನಸಾಗಿಯೇ ಉಳಿಯಿತು.

    ಅಮೂಲ್ಯ ಗೌಡ (ಕಮಲಿ)

    ಕನ್ನಡ ಮತ್ತು ತೆಲುಗು ಧಾರಾವಾಹಿಯಲ್ಲಿ ಚಿರಪರಿಚಿತ ಹೆಸರು ಅಮೂಲ್ಯ ಗೌಡ (Amulya Gowda) ಅವರದ್ದು. ಕನ್ನಡದ ಪ್ರೇಕ್ಷಕರಿಗೆ ಕಮಲಿ (Kamali) ಆಗಿಯೇ ಪರಿಚಯವಾದವರು. ಅದೊಂದು ಸಾಂಪ್ರದಾಯಿಕ ಹುಡುಗಿಯ ಪಾತ್ರವಾಗಿದ್ದರಿಂದ ನೋಡುಗರಿಗೆ ಬೇಗನೇ ಹತ್ತಿರವಾದ ನಟಿ. ಸ್ವಾತಿ ಮುತ್ತು, ಪುನರ್ ವಿವಾಹ, ಅರಮನೆ ಸೇರಿದಂತೆ ಹಲವು ಕನ್ನಡ ಧಾರಾವಾಹಿಗಳಲ್ಲಿ ಇವರು ನಟಿಸಿದ್ದಾರೆ. ತೆಲುಗಿನ ಕಾರ್ತಿಕ ದೀಪಂ ಧಾರಾವಾಹಿಯಲ್ಲೂ ನಟಿಸಿದ್ದಾರೆ. ಇವರ ಪೂರ್ತಿ ಹೆಸರು ಅಮೂಲ್ಯ ಓಂಕಾರ ಗೌಡ. ಇದೀಗ ಅಮೂಲ್ಯ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]