Tag: bigg boss tamil 8

  • ಬಿಗ್ ಬಾಸ್‌ನಿಂದ ಒಂದೇ ದಿನಕ್ಕೆ ಎಲಿಮಿನೇಟ್ ಆದ ಸ್ಪರ್ಧಿ

    ಬಿಗ್ ಬಾಸ್‌ನಿಂದ ಒಂದೇ ದಿನಕ್ಕೆ ಎಲಿಮಿನೇಟ್ ಆದ ಸ್ಪರ್ಧಿ

    ಬಿಗ್ ಬಾಸ್ ಕನ್ನಡ 11ಕ್ಕೆ (Bigg Boss Kannada 11) ಅದ್ಧೂರಿ ಚಾಲನೆ ಸಿಕ್ಕಿದೆ. 1 ವಾರ ಪೂರೈಸಿರೋ ಬಿಗ್ ಬಾಸ್ ಮನೆಯಿಂದ ಯಮುನಾ ಶ್ರೀನಿಧಿ (Yamuna Srinidhi) ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಇನ್ನೂ ಕನ್ನಡದಂತೆಯೇ ಪರಭಾಷೆಗಳಲ್ಲಿಯೂ ಕೂಡ ಬಿಗ್ ಬಾಸ್ ಶೋ ಸದ್ದು ಮಾಡುತ್ತಿದೆ. ತಮಿಳಿನ ಬಿಗ್ ಬಾಸ್ ಸೀಸನ್ 8ಕ್ಕೆ ಅ.6ರಂದು ಚಾಲನೆ ನೀಡಲಾಗಿದ್ದು, ಶೋ ಶುರುವಾದ ಒಂದೇ ದಿನಕ್ಕೆ ಸ್ಪರ್ಧಿಯೊಬ್ಬರು ಎಲಿಮಿನೇಟ್ ಆಗಿದ್ದಾರೆ.

    ವಿಜಯ್ ಸೇತುಪತಿ ನಿರೂಪಣೆಯ ಬಿಗ್ ಬಾಸ್ ಸೀಸನ್ 8ಕ್ಕೆ ಮೊದಲ ದಿನ ಬರೋಬ್ಬರಿ 18 ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದರು. ಹೋಗುವಾಗ ಎಲ್ಲರಿಗೂ ಒಂದೊಂದು ಟ್ರೋಫಿಯನ್ನು ವಿಜಯ್ ಕೊಟ್ಟು ಕಳಿಸಿದ್ದರು. ಮೊದಲ ದಿನವೇ ಮನೆಯ ಸದಸ್ಯರಿಗೆ ಕಠಿಣ ಟಾಸ್ಕ್ ಒಂದನ್ನು ನೀಡಲಾಯ್ತು. ಒಂದೇ ದಿನಕ್ಕೆ ಎಲ್ಲರೂ ಸೇರಿ ಒಬ್ಬರನ್ನು ನಾಮಿನೇಟ್ ಮಾಡಿ ಅವರನ್ನು ಮನೆಯಿಂದ ಹೊರಗೆ ಕಳಿಸಬೇಕು ಎಂದಿದ್ದರು.

     

    View this post on Instagram

     

    A post shared by Sachana Namidass (@sachana_official_)

    ಅದರಂತೆ ಮನೆಯ ಕಿರಿಯ ಸ್ಪರ್ಧಿಯಾಗಿದ್ದ ಸಚಾನಾ ನಮಿದಾಸ್ (Sachana Namidass) ಅವರನ್ನು ಮನೆಯ ಇತರೆ ಸ್ಪರ್ಧಿಗಳು ನಾಮಿನೇಟ್ ಮಾಡಿದ್ದರು. ಹಾಗಾಗಿ ಒಂದೇ ದಿನಕ್ಕೆ ಸಚಾನಾ ಬಿಗ್ ಬಾಸ್ ಮನೆಯಿಂದ ಹೊರಬಂದಿದ್ದಾರೆ. ಇದು ಪ್ರೇಕ್ಷಕರಿಗೂ ಶಾಕ್ ಕೊಟ್ಟಿದೆ. ನಟಿಯನ್ನು ಬಿಗ್‌ ಬಾಸ್‌ಗೆ ಬಂದ ಒಂದೇ ದಿನಕ್ಕೆ ಎಲಿಮಿನೇಟ್ ಮಾಡೋದು ಎಷ್ಟು ಸರಿ ಎಂದು ವಾಹಿನಿಯ ವಿರುದ್ಧ ನೆಟ್ಟಿಗರು ಗರಂ ಆಗಿದ್ದಾರೆ. ಇನ್ನೂ ಸಚಾನಾ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಬರಲಿದ್ದಾರೆ ಎನ್ನಲಾಗಿದೆ. ಅಧಿಕೃತ ಮಾಹಿತಿಗೆ ಕಾದುನೋಡಬೇಕಿದೆ.

    ಅಂದಹಾಗೆ, ಸಚಾನಾ ನಮಿದಾಸ್ ಅವರು ತಮಿಳಿನ ಸೂಪರ್ ಹಿಟ್ ಸಿನಿಮಾ ‘ಮಹಾರಾಜ’ (Maharaja) ಚಿತ್ರದಲ್ಲಿ ವಿಜಯ್ ಸೇತುಪತಿ (Vijay Sethupathi) ಮಗಳ ಪಾತ್ರದಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು.

  • Bigg Boss Tamil 8: ದೊಡ್ಮನೆ ಆಟಕ್ಕೆ ವಿಜಯ್ ಸೇತುಪತಿ ಹೋಸ್ಟ್- ಪ್ರೋಮೋ ಔಟ್

    Bigg Boss Tamil 8: ದೊಡ್ಮನೆ ಆಟಕ್ಕೆ ವಿಜಯ್ ಸೇತುಪತಿ ಹೋಸ್ಟ್- ಪ್ರೋಮೋ ಔಟ್

    ತೆಲುಗಿನ ಬಿಗ್ ಬಾಸ್ ಸೀಸನ್ 8ಕ್ಕೆ ಈಗಾಗಲೇ ಅದ್ಧೂರಿಯಾಗಿ ಚಾಲನೆ ಸಿಕ್ಕಿದೆ. ಇತ್ತ ತಮಿಳು ಬಿಗ್ ಬಾಸ್ (Bigg Boss Tamil 8) ಆರಂಭಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಕಮಲ್ ಹಾಸನ್ ಬದಲು ಹೊಸ ನಿರೂಪಕನಾಗಿ ವಿಜಯ್ ಸೇತುಪತಿ (Vijay Sethupathi) ಎಂಟ್ರಿ ಕೊಟ್ಟಿರುವ ಪ್ರೋಮೋ ರಿಲೀಸ್ ಆಗಿದೆ. ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ಪ್ರಣೀತಾ ಸುಭಾಷ್

    ಕಮಲ್ ಹಾಸನ್ (Kamal Haasan) ಬಿಗ್ ಬಾಸ್‌ಗೆ ಗುಡ್ ಬೈ ಹೇಳಿದ ಬಳಿಕ ಯಾರು ನಿರೂಪಕರಾಗುತ್ತಾರೆ ಎಂಬ ಕುತೂಹಲಕ್ಕೆ ತೆರೆಬಿದ್ದಿದೆ. ದುಬಾರಿ ಸಂಭಾವನೆ ಪಡೆದು ವಿಜಯ್ ಸೇತುಪತಿ ಬಿಗ್ ಬಾಸ್‌ಗೆ ನಿರೂಪಕನಾಗಿ ಎಂಟ್ರಿ ಕೊಟ್ಟಿದ್ದಾರೆ. ವಾಹಿನಿ ರಿಲೀಸ್ ಮಾಡಿರುವ ಪ್ರೋಮೋದಲ್ಲಿ ಖಡಕ್ ಆಗಿ ನಟ ಕಾಣಿಸಿಕೊಂಡಿದ್ದಾರೆ. ಈ ಪ್ರೋಮೋ ನೋಡಿರುವ ಫ್ಯಾನ್ಸ್‌ಗೆ ಕಾರ್ಯಕ್ರಮದ ಬಗ್ಗೆ ನಿರೀಕ್ಷೆ ಹೆಚ್ಚಿಸಿದೆ.

    ಇತ್ತೀಚೆಗೆ 7 ವರ್ಷಗಳ ಹಿಂದೆ ಶುರುವಾದ ನನ್ನ ಬಿಗ್ ಬಾಸ್ ಪಯಣಕ್ಕೆ ಬ್ರೇಕ್ ನೀಡಲು ನಿರ್ಧರಿಸಿದ್ದೇನೆ ಎಂದು ಭಾರವಾದ ಹೃದಯದಿಂದ ನಿಮಗೆ ತಿಳಿಸುತ್ತಿದ್ದೇನೆ. ಈ ಮೊದಲೇ ಒಪ್ಪಿಕೊಂಡ ಸಿನಿಮಾಗಳ ಕೆಲಸದ ಕಾರಣದಿಂದ ನನಗೆ ಈ ಬಾರಿಯ ಬಿಗ್ ಬಾಸ್ ಶೋ ನಿರೂಪಣೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಕಮಲ್ ಹಾಸನ್ ಸೋಷಿಯಲ್ ಮೀಡಿಯಾದಲ್ಲಿ ತಿಳಿಸಿದ್ದರು.

    `ಬಿಗ್ ಬಾಸ್’ ಕಾರ್ಯಕ್ರಮದ ಮೂಲಕ ನಿಮ್ಮ ಮನ ಮತ್ತು ಮನೆ ತಲುಪಿದ್ದೇನೆ. ಅಗಾಧ ಪ್ರೀತಿ ಮತ್ತು ಕಾಳಜಿಯನ್ನು ತೋರಿಸಿದ್ದೀರಿ. ನಿಮ್ಮ ಬೆಂಬಲದಿಂದಾಗಿ ಬಿಗ್ ಬಾಸ್ ತಮಿಳು ರಿಯಾಲಿಟಿ ಶೋ ನನ್ನ ಪಾಲಿಗೆ ಬೆಸ್ಟ್ ಆಯಿತು. ಕಲಿಕೆಯ ಅನುಭವ ನೀಡಿದ ಈ ಶೋಗೆ ನಾನು ಋಣಿಯಾಗಿದ್ದೇನೆ. ಸ್ಪರ್ಧಿಗಳಿಂದ ಹಿಡಿದು ಪ್ರತಿಯೊಬ್ಬರಿಗೂ ನನ್ನ ಧನ್ಯವಾದಗಳು ಎಂದು ಕಮಲ್ ಹಾಸನ್ ಭಾವುಕವಾಗಿ ಬರೆದುಕೊಂಡಿದ್ದರು.