Tag: bigg boss telagu

  • ಭಾವಿ ಪತಿಗೆ ಕಾರ್ ಗಿಫ್ಟ್ ಮಾಡಿದ ‘ಅಗ್ನಿಸಾಕ್ಷಿ’ ನಟಿ

    ಭಾವಿ ಪತಿಗೆ ಕಾರ್ ಗಿಫ್ಟ್ ಮಾಡಿದ ‘ಅಗ್ನಿಸಾಕ್ಷಿ’ ನಟಿ

    ನ್ನಡದ ‘ಅಗ್ನಿಸಾಕ್ಷಿ’ (Agnisakshi) ನಟಿ ಶೋಭಾ ಶೆಟ್ಟಿ (Shoba Shetty) ಇದೀಗ ಭಾವಿ ಪತಿ ಯಶ್‌ವಂತ್ ಹುಟ್ಟುಹಬ್ಬಕ್ಕೆ ಕಾರೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ. ಗೆಳೆಯನ ಬರ್ತ್‌ಡೇ ಅದ್ಧೂರಿಯಾಗಿ ನಟಿ ಸೆಲೆಬ್ರೇಟ್ ಮಾಡಿದ್ದಾರೆ.

    ಇದೀಗ ಭಾವಿ ಪತಿಗೆ ಬೀಸ್ಟ್ ಎಕ್ಸ್‌ಯುವಿ 700 ಕಾರ್ ಅನ್ನು ಈ ವರ್ಷ ಯಶ್‌ವಂತ್‌ಗೆ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ಆಗಿ ಕೊಟ್ಟಿದ್ದಾರೆ. ಅಂದಹಾಗೆ, ಮಾರುಕಟ್ಟೆಯಲ್ಲಿ ಈ ಕಾರಿಗೆ 15ರಿಂದ 20 ಲಕ್ಷ ರೂ. ಇದೆ. ಸದ್ಯ ಶೋಭಾ ಕೊಟ್ಟಿರುವ ಲವ್ಲಿ ಗಿಫ್ಟ್ ನೋಡಿ ಯಶ್‌ವಂತ್ ಕೂಡ ಸಂಭ್ರಮಿಸಿದ್ದಾರೆ. ಇದನ್ನೂ ಓದಿ:ಲಾಯರ್ ಆಗಿ ಶಿವಣ್ಣ ಖಡಕ್ ಎಂಟ್ರಿ- ಮೇಕಿಂಗ್ ವಿಡಿಯೋ ಚಿಂದಿ ಎಂದ ಫ್ಯಾನ್ಸ್

    ಇತ್ತೀಚೆಗೆ ನಟಿ ಹೈದರಾಬಾದ್‌ನಲ್ಲಿ ಹೊಸ ಮನೆ ಖರೀದಿಸಿದ್ದಾರೆ. ಗೃಹ ಪ್ರವೇಶ ಕೂಡ ಆಗಿದ್ದು, ಮುಂದಿನ ತಿಂಗಳು ಆ ಮನೆಗೆ ಶಿಫ್ಟ್ ಆಗಲಿದ್ದಾರೆ. ಇದನ್ನೂ ಓದಿ:ದಕ್ಷಿಣದ ಸಿನಿಮಾಗಳ ಮುಂದೆ ‘ಗೌರಿ’ ಸಾಂಗ್ ಸಖತ್ ಟ್ರೆಂಡಿಂಗ್

    ಕಳೆದ ತಿಂಗಳು ಅದ್ಧೂರಿಯಾಗಿ ಈ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿತ್ತು. ಸದ್ಯದಲ್ಲೇ ‘ಬಿಗ್‌ ಬಾಸ್‌’ (Bigg Boss) ಖ್ಯಾತಿಯ ಶೋಭಾ ಮತ್ತು ಯಶ್‌ವಂತ್ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

  • ಬಿಗ್ ಬಾಸ್ ಪ್ರೋಮೋ ಔಟ್- ದೊಡ್ಮನೆ ಆಟಕ್ಕೆ ಆ್ಯಂಕರ್ ಫಿಕ್ಸ್

    ಬಿಗ್ ಬಾಸ್ ಪ್ರೋಮೋ ಔಟ್- ದೊಡ್ಮನೆ ಆಟಕ್ಕೆ ಆ್ಯಂಕರ್ ಫಿಕ್ಸ್

    ಟಿವಿ ಪ್ರೇಕ್ಷಕರಿಗೆ ಇಲ್ಲಿದೆ ಸಿಹಿಸುದ್ದಿ. ಅಭಿಮಾನಿ ಪ್ರಭುಗಳ ನೆಚ್ಚಿನ ಶೋ ಆಗಿರುವ ಬಿಗ್ ಬಾಸ್‌ಗೆ (Bigg Boss) ಮುಹೂರ್ತ ಫಿಕ್ಸ್ ಆಗಿದೆ. ಬಿಗ್ ಬಾಸ್‌ಗಾಗಿಯೇ ಕಾದು ಕೂರುವ ಫ್ಯಾನ್ಸ್‌ಗೆ ಪ್ರೋಮೋ ರಿವೀಲ್ ಮಾಡುವ ಮೂಲಕ ಅಧಿಕೃತ ಅಪ್‌ಡೇಟ್ ಸಿಕ್ಕಿದೆ. ತೆಲುಗು ಬಿಗ ಬಾಸ್‌ಗೆ ನಾಗಾರ್ಜುನ್ ಅವರೇ ನಿರೂಪಕರಾಗಿ ಫಿಕ್ಸ್ ಆಗಿದ್ದಾರೆ. ಇದನ್ನೂ ಓದಿ:ಟೊಮ್ಯಾಟೋ ವಿಚಾರದಲ್ಲಿ ಕ್ಷಮೆ ಕೇಳಿದ ನಟ ಸುನೀಲ್ ಶೆಟ್ಟಿ

    ತೆಲುಗು ‘ಬಿಗ್ ಬಾಸ್ 6’ ಸಕ್ಸಸ್‌ಫುಲ್ ಸೀಸನ್ ಆಗಿ ಗೆದ್ದಿತ್ತು. ಈಗ ಬಿಗ್ ಬಾಸ್ 7ʼಕ್ಕೆ ತೆರೆಮರೆಯಲ್ಲಿ ತಯಾರಿ ನಡೆಯುತ್ತಿದೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ಶುರುವಾಗಲಿದೆ ಎಂದು ಹೇಳಲಾಗುತ್ತಿದೆ. ಆದರೆ ಸೀಸನ್ 7 ಬರೋದರ ಬಗ್ಗೆ ವಾಹಿನಿ ಅಧಿಕೃತ ಅಪ್‌ಡೇಟ್‌ ಕೊಟ್ಟಿದೆ. ಇದರ ಬೆನ್ನಲ್ಲೇ ಯಾರೆಲ್ಲಾ ಕಲಾವಿದರು ಬರಬಹುದು ಎಂಬ ಚರ್ಚೆ ಶುರುವಾಗಿದೆ. ಕನ್ನಡದ ‘ಅಗ್ನಿಸಾಕ್ಷಿ’ (Agnisakshi) ನಟಿ ಶೋಭಾ ಶೆಟ್ಟಿ (Shobha Shetty) ಬಿಗ್ ಬಾಸ್ ಮನೆಗೆ ಬರುವ ಸಾಧ್ಯತೆ ಇದೆ ಎಂಬ ಸುದ್ದಿಯಿದೆ. ಟಿಕ್‌ ಟಾಕ್‌ ಸ್ಟಾರ್ಸ್‌, ವಿವಾದದಲ್ಲಿ ಸುದ್ದಿಯಾದವರಿಗೆ ದೊಡ್ಮನೆ ಆಟಕ್ಕೆ ಅವಕಾಶ ಸಿಗಲಿದೆ ಎಂದು ಹೇಳಲಾಗುತ್ತಿದೆ.

    ಈ ಸೀಸನ್‌ನಲ್ಲೂ ಟಾಲಿವುಡ್ ಸ್ಟಾರ್ ನಟ ನಾಗಾರ್ಜುನ (Nagarjuna) ಅವರೇ ನಿರೂಪಕರಾಗಿ ಬಂದಿರೋದು ಫ್ಯಾನ್ಸ್ಗೆ ಖುಷಿ ಕೊಟ್ಟಿದೆ. 7ನೇ ಸೀಸನ್‌ನ ನೋಡೋಕೆ ಕಾತರದಿಂದ ಬಿಗ್ ಬಾಸ್ ಫ್ಯಾನ್ಸ್ ಕಾಯ್ತಿದ್ದಾರೆ. ಹೊಸ ಸೀಸನ್‌ಗಾಗಿ ಮನೆಯ ವಿನ್ಯಾಸ, ಹೊಸ ನಿಯಮಗಳನ್ನು ತರಲು ಪ್ಲ್ಯಾನ್ ಮಾಡಲಾಗಿದೆ. ಈ ಹಿಂದಿನ ಟಾಸ್ಕ್‌ಗಳ ಬದಲು ಹೊಸ ಬಗೆಯ ಟಾಸ್ಕ್‌ಗಳನ್ನ ಸೀಸನ್ 7ರಲ್ಲಿ ನೋಡಬಹುದು.

    ಬಹುಭಾಷೆಗಳಲ್ಲಿ ಬಿಗ್ ಬಾಸ್ ಮೂಡಿ ಬರುತ್ತಿದೆ. ಈ ವರ್ಷದ ಆರಂಭದಲ್ಲಿ ಕನ್ನಡದ ಬಿಗ್ ಬಾಸ್ ಸೀಸನ್ ಮುಗಿದಿತ್ತು. ಸುದೀಪ್(Sudeep) ನಿರೂಪಣೆಯಲ್ಲಿ ಅದ್ಭುತವಾಗಿ ಮೂಡಿ ಬಂದಿತ್ತು. ಈಗ ಕನ್ನಡದ ಒಟಿಟಿ ಬಿಗ್ ಬಾಸ್‌ಗೆ ಸಕಲ ತಯಾರಿ ನಡೆಯುತ್ತಿದೆ. ಸದ್ಯದಲ್ಲೇ ಈ ಬಗ್ಗೆ ಅಧಿಕೃತ ಮಾಹಿತಿ ಸಿಗಲಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಕಬಾಲಿ’ ನಿರ್ಮಾಪಕ ಅರೆಸ್ಟ್ ಬೆನ್ನಲ್ಲೇ ಡ್ರಗ್ಸ್ ಪ್ರಕರಣದಲ್ಲಿ ನಟಿ ಅಶು ರೆಡ್ಡಿ ಹೆಸರು

    ‘ಕಬಾಲಿ’ ನಿರ್ಮಾಪಕ ಅರೆಸ್ಟ್ ಬೆನ್ನಲ್ಲೇ ಡ್ರಗ್ಸ್ ಪ್ರಕರಣದಲ್ಲಿ ನಟಿ ಅಶು ರೆಡ್ಡಿ ಹೆಸರು

    ಕಾಲಿವುಡ್‌ನ ‘ಕಬಾಲಿ’ (Kabali) ಸಿನಿಮಾದ ನಿರ್ಮಾಪಕ ಕೆ.ಪಿ ಚೌಧರಿ (Kp Chowdary) ಅವರು ಡ್ರಗ್ಸ್ ಕೇಸ್‌ನಲ್ಲಿ ಅರೆಸ್ಟ್ ಆಗಿದ್ದಾರೆ. ಈ ಬೆನ್ನಲ್ಲೇ ವಿಚಾರಣೆ ಸಂದರ್ಭದಲ್ಲಿ ಅನೇಕರ ಹೆಸರನ್ನ ನಿರ್ಮಾಪಕ ಬಾಯ್ಬಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಅದರಲ್ಲಿ ಅಶು ರೆಡ್ಡಿ (Ashu Reddy) ಅವರ ಹೆಸರು ಕೇಳಿ ಬರುತ್ತಿದೆ.

    ನಟಿ ಅಶು ರೆಡ್ಡಿ ಈಗ ಸುದ್ದಿಯಲ್ಲಿದ್ದಾರೆ. ಇಷ್ಟು ದಿನ ಗ್ಲ್ಯಾಮರಸ್ ಫೋಟೋ ಮೂಲಕ ಗಮನ ಸೆಳೆಯುತ್ತಿದ್ದ ಅವರು ಈಗ ಡ್ರಗ್ ಕೇಸ್ ಮೂಲಕ ಸುದ್ದಿ ಆಗಿದ್ದಾರೆ. ರಜನಿಕಾಂತ್ ನಟನೆಯ ‘ಕಬಾಲಿ’ ಚಿತ್ರದ ನಿರ್ಮಾಪಕ ಕೆಪಿ ಚೌಧರಿ ಅವರು ಡ್ರಗ್ (Drugs) ಕೇಸ್‌ನಲ್ಲಿ ಅಂದರ್ ಆಗಿದ್ದಾರೆ. ಅಶು ರೆಡ್ಡಿ ಜೊತೆ ಅವರು ನೂರಾರು ಬಾರಿ ಫೋನ್ ಮೂಲಕ ಮಾತನಾಡಿದ್ದರು ಎನ್ನುವ ವಿಚಾರ ರಿವೀಲ್ ಆಗಿದೆ. ಡ್ರಗ್ ಮಾರಾಟ ಮಾಡುವ ವ್ಯಕ್ತಿಯ ಜೊತೆ ಇಷ್ಟೊಂದು ದೂರವಾಣಿ ಕರೆ ಏಕೆ ಎನ್ನುವ ಪ್ರಶ್ನೆ ಪೊಲೀಸರಲ್ಲಿ ಮೂಡಿದೆ.

    ಅಶು ರೆಡ್ಡಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿದ್ದಾರೆ. ತೆಲುಗಿನ ಬಿಗ್ ಬಾಸ್‌ನಲ್ಲಿ (Bigg Boss Telagu) ಗಮನ ಸೆಳೆದ ಅಶು ರೆಡ್ಡಿಗೆ ಟಿವಿ ಶೋ ಮೂಲಕ ಜನಪ್ರಿಯತೆ ಪಡೆದರು. ಈಗ ಅವರ ಹೆಸರು ಡ್ರಗ್ಸ್ ಕೇಸ್‌ನಲ್ಲಿ ಅವರ ಹೆಸರು ಕೇಳಿ ಬಂದಿದೆ. ಕಬಾಲಿ ನಿರ್ಮಾಪಕ ಅವರು ನೇರವಾಗಿ ಅಶು ರೆಡ್ಡಿ ಬಗ್ಗೆ ಆರೋಪ ಮಾಡಿಲ್ಲ. ಇವರ ಮಧ್ಯೆ ಲಿಂಕ್ ಇರೋದು ವಿಚಾರಣೆ ವೇಳೆ ಗೊತ್ತಾಗಿದೆ. ಅವರ ಬಳಿ ಇದ್ದ ಮೂರು ಮೊಬೈಲ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಕೆಪಿ ಚೌಧರಿ ಅವರ ಒಂದು ಮೊಬೈಲ್‌ನಿಂದ ಅಶು ರೆಡ್ಡಿಗೆ ನೂರಾರು ಬಾರಿ ಫೋನ್ ಕಾಲ್ ಹೋಗಿದೆ. ಇದು ಏಕೆ ಎಂಬ ಪ್ರಶ್ನೆ ಮೂಡಿದೆ. ಇದನ್ನೂ ಓದಿ:ವಿಜಯ್ ದೇವರಕೊಂಡ- ರಶ್ಮಿಕಾ ಮಂದಣ್ಣ ಸೀಕ್ರೆಟ್ ಡೇಟಿಂಗ್‌ಗೆ ಸಿಕ್ತು ಸಾಕ್ಷಿ

    ಈ ಬಗ್ಗೆ ಅಶು ರೆಡ್ಡಿ ಸಾಮಾಜಿಕ ಜಾಲತಾಣದಲ್ಲಿ ಕಿಡಿ ಕಾರಿದ್ದಾರೆ. ಇದೆಲ್ಲಾ ಸುಳ್ಳು ಸುದ್ದಿ ಎಂದು ಹೇಳಿದ್ದಾರೆ. ಅನಾವಶ್ಯಕವಾಗಿ ಈ ಪ್ರಕರಣದಲ್ಲಿ ತನ್ನ ಹೆಸರನ್ನು ಎಳೆದು ತರಲಾಗುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಪೋಸ್ಟ್ ಶೇರ್ ಮಾಡಿ ಕಾಮೆಂಟ್ ಸೆಕ್ಷನ್ ಆಫ್ ಮಾಡಿದ್ದಾರೆ. ಇದು ಸ್ಪಷ್ಟತೆ ಎಂದು ಅಶು ರೆಡ್ಡಿ ಹೇಳಿದ್ದಾರೆ.

  • ಬಿಗ್ ಬಾಸ್ ಹೋಸ್ಟ್ ಸ್ಥಾನಕ್ಕೆ ವಿದಾಯ ಹೇಳಿದ ನಟ ನಾಗಾರ್ಜುನ್

    ಬಿಗ್ ಬಾಸ್ ಹೋಸ್ಟ್ ಸ್ಥಾನಕ್ಕೆ ವಿದಾಯ ಹೇಳಿದ ನಟ ನಾಗಾರ್ಜುನ್

    ತೆಲುಗು ಬಿಗ್ ಬಾಸ್ (Bigg Boss) ಸೀಸನ್ 6 ಇತ್ತೀಚೆಗಷ್ಟೇ ಅಂತ್ಯವಾಯಿತು. ನಟ ನಾಗಾರ್ಜುನ್ ನಿರೂಪಣೆಯಲ್ಲಿ ಬಿಗ್ ಬಾಸ್ ಅದ್ಭುತವಾಗಿ ಮೂಡಿ ಬಂದಿತ್ತು. ಇದೀಗ ಈ ಬೆನ್ನಲ್ಲೇ ಶಾಕಿಂಗ್ ಸುದ್ದಿಯೊಂದು ಹರಿದಾಡುತ್ತಿದೆ. ಸೀಸನ್ 7ಕ್ಕೆ ಸಿದ್ಧತೆ ನಡೆಯುತ್ತಿರುವ ವೇಳೆಯಲ್ಲಿ ನಾಗಾರ್ಜುನ್ (Nagarjuna) ಬಿಗ್ ಬಾಸ್ ಶೋನಿಂದ ಹಿಂದೆ (Exit) ಸರಿದಿದ್ದಾರೆ ಎನ್ನಲಾಗುತ್ತಿದೆ.

    ತೆಲುಗು ಕಿರುತೆರೆಯ ಜನಪ್ರಿಯ ಶೋ ಬಿಗ್ ಬಾಸ್ ಹೋಸ್ಟ್ ಸ್ಥಾನಕ್ಕೆ ವಿದಾಯ ಹೇಳಿದ್ದಾರೆ. ಆದರೆ ಈ ಸುದ್ದಿಯ ಬಗ್ಗೆ ಪ್ರಾಯೋಜಕರು ಅಥವಾ ನಾಗಾರ್ಜುನ್ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಕೆಲವು ವೈಯಕ್ತಿಕ ಕಾರಣಗಳಿಂದ ಶೋಗೆ ನಾಗಾರ್ಜುನ್ ವಿದಾಯ ಹೇಳಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಸಾನ್ಯ ಎಲಿಮಿನೇಷನ್ ನಂತರ ರೂಪೇಶ್ ಶೆಟ್ಟಿ ಎನರ್ಜಿ ಡಬಲ್ ಆಯ್ತು: ಅನುಪಮಾ

    ಈ ಸುದ್ದಿ ವೈರಲ್ ಆಗುತ್ತಿದ್ದಂತೆ ನಾಗಾರ್ಜುನ್ ಅವರ ಸ್ಥಾನಕ್ಕೆ ಯಾರನ್ನ ಕರೆತರುತ್ತಾರೆ ಎಂಬುದರ ಬಗ್ಗೆ ಸಖತ್ ಚರ್ಚೆ ಆಗುತ್ತಿದೆ. ಮೂಲಗಳ ಪ್ರಕಾರ, ರಾಣಾ ದಗ್ಗುಭಾಟಿ(Rana Daggubati) , ಅಥವಾ ವಿಜಯ್ ದೇವರಕೊಂಡ (Vijay Devarakonda) ಅವರನ್ನ ಕರೆತರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಈ ಹಿಂದೆ ಜ್ಯೂ.ಎನ್‌ಟಿಆರ್ ಮತ್ತು ನಾನಿ ಕೂಡ ಬಿಗ್ ಬಾಸ್ ಶೋನ ನಿರೂಪಣೆ ಮಾಡಿದ್ದರು.

    ಇನ್ನೂ ಬಿಗ್ ಬಾಸ್ ಸೀಸನ್ 6ರಲ್ಲಿ ಎಲ್.ವಿ ರೇವಂತ್ (L.v Revanth) ವಿನ್ನರ್ ಆಗಿ ಹೊರಹೊಮ್ಮಿದ್ದರು.

    Live Tv
    [brid partner=56869869 player=32851 video=960834 autoplay=true]