Tag: biggboss season 8

  • ನಿಮ್ಮ ಪ್ರತಿ ಮಾತು ನನ್ನನ್ನು ಪ್ರತಿನಿಧಿಸುತ್ತದೆ – ಅಭಿಮಾನಿಗಳಲ್ಲಿ ಅರವಿಂದ್ ಮನವಿ

    ನಿಮ್ಮ ಪ್ರತಿ ಮಾತು ನನ್ನನ್ನು ಪ್ರತಿನಿಧಿಸುತ್ತದೆ – ಅಭಿಮಾನಿಗಳಲ್ಲಿ ಅರವಿಂದ್ ಮನವಿ

    ಬಿಗ್‍ಬಾಸ್ ಸೀಸನ್-8 ಕಾರ್ಯಕ್ರಮ ಮುಗಿದ ನಂತರ ಮೊದಲ ಬಾರಿಗೆ ಕೆ.ಪಿ ಅರವಿಂದ್ ಲೈವ್ ಬಂದಿದ್ದು, ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ನೆಗೆಟಿವಿಟಿಗಳಿಗೆ ತಲೆ ಕೆಡಿಸಿಕೊಳ್ಳಬೇಡಿ. ನಿಮ್ಮ ಪ್ರತಿ ಮಾತು ನನ್ನನ್ನು ಪ್ರತಿನಿಧಿಸುತ್ತದೆ. ಪಾಸಿಟಿವ್ ಆಗಿ ಯೋಚನೆ ಮಾಡೋಣ ಎಂದು ಹೇಳಿದ್ದಾರೆ.

    ಮೊದಲನೇಯದಾಗಿ 75ನೇ ಸ್ವಾತಂತ್ರ್ಯ ದಿನದ ಶುಭಾಶಯಗಳನ್ನು ಎಲ್ಲರಿಗೂ ತಿಳಿಸಿದ ಅವರು, ನಂತರ ಪ್ರತಿದಿನ ನನಗಾಗಿ ಟೈಮ್ ಕೊಟ್ಟು, ಹಗಲು ರಾತ್ರಿ ವೋಟ್ ಮಾಡಿ ಫಿನಾಲೆ ತನಕ ಬರಲು ಸಹಾಯ ಮಾಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳು. ನಾನು ಬಿಗ್‍ಬಾಸ್ ಮನೆಯಲ್ಲಿ ಕೇವಲ 2 ವಾರ ಇರುತ್ತೇನೆ ಎಂದು ಕೊಂಡಿದ್ದೆ. ಆದರೆ ನನ್ನ ನಿರೀಕ್ಷೆಗೂ ಮೀರಿ ನನ್ನನ್ನು ಫಿನಾಲೆ ತನಕ ಕರೆದುಕೊಂಡು ಹೋಗಿದ ನಿಮ್ಮೆಲ್ಲರಿಗೂ ನಾನು ಸದಾ ಚಿರಋಣಿ ಎಂದಿದ್ದಾರೆ.

    ಇಷ್ಟು ದಿನ ನನ್ನ ರೇಸ್‍ಗೆ ಸಂಬಂಧಿಸಿದಂತೆ ಕೆಲವು ಕೆಲಸ ಇತ್ತು, ನನಗಾಗಿ ನನಗೆ ಕೊಂಚ ಸಮಯ ಬೇಕಾಗಿತ್ತು. ಹಾಗಾಗಿ ಲೈವ್ ಬರಲು ಸಾಧ್ಯವಾಗಲಿಲ್ಲ. ಯಾರು ಸಹ ಬೇಸರಗೊಳ್ಳಬೇಡಿ. ಆದರೆ ದಾಖಲೆಯಷ್ಟು ಬಂದಂತಹ ವೋಟ್ ನೋಡಿ ನನಗೆ ಬಹಳ ಸಂತಸವಾಗಿದೆ, ನೀವು ನೀಡಿದ ಸಪೋರ್ಟ್‍ನನ್ನು ನಾನು ಎಂದಿಗೂ ಮರೆಯುವುದಿಲ್ಲ. ಈ ಪ್ರೀತಿ ಸದಾ ಇರಲಿ. ಬಿಗ್‍ಬಾಸ್ ನನ್ನ ಜೀವನದಲ್ಲಿ ಬೆಸ್ಟ್ ಚಾಪ್ಟರ್ ಎಂದು ಹೇಳಿದ್ದಾರೆ.

    ಇದೇ ವೇಳೆ ನಾನು ಇನ್ನೊಂದು ವಿಚಾರ ಹೇಳಲು ಬಯಸುತ್ತೇನೆ. ಸೋಶಿಯಲ್ ಮೀಡಿಯಾದಲ್ಲಿ ಕೆಲವೊಂದು ನೆಗೆಟಿವಿಟಿ ಸುದ್ದಿಗಳು ಹರಿದಾಡುತ್ತಿದೆ. ಅದಕ್ಕೆ ಯಾರು ಕೂಡ ತಲೆ ಕೆಡಿಸಿಕೊಳ್ಳಬೇಡಿ. ನನಗೆ ನಿಮ್ಮೆಲ್ಲರ ಸಪೋರ್ಟ್ ಅಪಾರವಾದದ್ದು ಹಾಗೂ ನಿಮ್ಮೆಲ್ಲರ ಮೇಲೆ ನನಗೆ ನಂಬಿಕೆ ಇದೆ. ನೆಗೆಟಿವಿಟಿಗೆ ಒಳಗಾಗಬೇಡಿ, ಆದಷ್ಟು ಪಾಸಿಟಿವ್ ವಿಚಾರಗಳನ್ನು ಹರಡಿ. ಪಾಸಿಟಿವಿಯಲ್ಲಿ ಶಕ್ತಿ ಇದೆ ಹಾಗೂ ಖುಷಿ ಇದೆ. ನಾನು ಒಬ್ಬ ಪಾಸಿಟಿವ್ ಮನುಷ್ಯ. ಪಾಸಿಟಿವಿಟಿಯನ್ನು ಪಾಲಿಸುತ್ತೇನೆ. ಅದೇ ರೀತಿ ನಿಮ್ಮ ಲೈಫ್‍ನಲ್ಲಿ ಕೂಡ ಪಾಸಿಟಿವಿಯನ್ನು ನೋಡಲು ಬಯಸುತ್ತೇನೆ ಎಂದಿದ್ದಾರೆ.

    ಸಿನಿಮಾದಲ್ಲಿ ಚಾನ್ಸ್ ಸಿಕ್ಕಿದರೆ ಖಂಡಿತ ಮಾಡುತ್ತೇನೆ. ಬಿಗ್‍ಬಾಸ್ ಮುಗಿದು ಒಂದು ವಾರ ಆದರೂ ಎಲ್ಲೆಡೆ ನನ್ನ ಫೋಟೋ, ವೀಡಿಯೋಗಳನ್ನು ಪೋಸ್ಟ್ ಮಾಡುತ್ತಿದ್ದೀರಿ. ಇದನ್ನು ನಾನು ಕನಸಿನಲ್ಲಿಯೂ ನಿರೀಕ್ಷಿಸಿರಲಿಲ್ಲ. ಬಹಳ ಖುಷಿಯಾಗುತ್ತಿದೆ. ನಿಮ್ಮ ಸಪೋರ್ಟ್ ಮುಂದೆ ಕೂಡ ಹೀಗೆ ಇರಲಿ. ನಿಮ್ಮ ಪ್ರತಿ ಮಾತು ನನ್ನನ್ನು ಪ್ರತಿನಿಧಿಸುತ್ತದೆ. ಇದು ಸದಾ ನೆನಪಿರಲಿ. ಎಲ್ಲರಿಗೂ ಶುಭವಾಗಲಿ ಎನ್ನುತ್ತಾ ಧನ್ಯವಾದ ತಿಳಿಸಿದ್ದಾರೆ. ಇದನ್ನೂ ಓದಿ:ವೈಷ್ಣವಿಗೆ ದೆವ್ವದ ಕಥೆ ಹೇಳಿದ ಅಕುಲ್ ಬಾಲಾಜಿ

  • ಮಂಜು ಬಗ್ಗೆ ಹೇಳುತ್ತಾ ಭಾವುಕರಾದ ಚಕ್ರವರ್ತಿ ಚಂದ್ರಚೂಡ್

    ಮಂಜು ಬಗ್ಗೆ ಹೇಳುತ್ತಾ ಭಾವುಕರಾದ ಚಕ್ರವರ್ತಿ ಚಂದ್ರಚೂಡ್

    – ಮಂಜು ಕುರಿತು ಹಾಡು ಬರೆದಿದ್ದ ಚಕ್ರವರ್ತಿ
    – 16 ಲಕ್ಷ ಮಂದಿಯಿಂದ ಪದ್ಯ ಶೇರ್

    ಬಿಗ್‍ಬಾಸ್ ಗ್ರ್ಯಾಂಡ್ ಫಿನಾಲೆಯ ಕೊನೆಯ ಟಾಪ್ 2 ಕಂಟೆಸ್ಟೆಂಟ್‍ನನ್ನು ವೇದಿಕೆ ಮೇಲೆ ಸುದಿಪ್ ಕರೆದುಕೊಂಡು ಬರುತ್ತಾರೆ. ನಂತರ ಇಬ್ಬರಲ್ಲಿ ಯಾರು ಗೆಲ್ಲಬಹುದು ಎಂದು ಇತರ ಸ್ಪರ್ಧಿಗಳಿಗೆ ಪ್ರಶ್ನಿಸಿದಾಗ ಬಹುತೇಕ ಮಂದಿ ಮಂಜು ಹೆಸರನ್ನು ಸೂಚಿಸಿದ್ದರು. ಆದರೆ ಈ ವೇಳೆ ಚಕ್ರವರ್ತಿ ಚಂದ್ರಚೂಡ್‍ರವರು ಬಹಳ ಭಾವುಕರಾಗಿ ಉತ್ತರಿಸಿದ್ದಾರೆ.

    7 ದೇಶಗಳಲ್ಲಿ 8 ಕೋಟಿ 76 ಲಕ್ಷ ಜನ ಕಳೆದ 15 ದಿನಗಳಲ್ಲಿ ಕನ್ನಡ ಬಿಗ್‍ಬಾಸ್ ಕುರಿತಂತೆ ಚರ್ಚೆ ನಡೆಸುತ್ತಿದ್ದಾರೆ. ಎರಡು ವಲಯದಲ್ಲಿ ಎರಡು ದಿಕ್ಕಿನಲ್ಲಿ ಚರ್ಚೆ ನಡೆಯುತ್ತಿದೆ. ಇಬ್ಬರು ನನಗೆ ಒಂದು ರೀತಿ ತಮ್ಮಂದಿರು, ಅದರಲ್ಲಿ ಒಬ್ಬ ಅಂತರಾಷ್ಟ್ರೀಯ ಪ್ರತಿಭೆ, ಮತ್ತೊಬ್ಬ ಕುಡಿಯಲು ನೀರು ಕೂಡ ಇರದ ಊರಿನಿಂದ ಬಂದವನು. ಒಬ್ಬ ಯಶಸ್ಸು ಹಾಗೂ ಸೋಲು ಎರಡನ್ನು ಕಂಡು ಸೋತು ಗೆದ್ದವನು. ಆದರೆ ಒಬ್ಬ ಒಂದೇ ಒಂದು ಯಶಸ್ಸು ಸಿಕ್ಕಿದರೆ ನನ್ನ ಜೀವನ ಉದ್ದಾರ ಮಾಡಿಕೊಳ್ಳುತ್ತೇನೆ. ನೂರಾರು ಜನರಿಗೆ ನಾನು ಮಾದರಿಯಾಗುತ್ತೇನೆ ಎಂದು ನಿಂತಿದ್ದಾನೆ. ಒಬ್ಬನಿಗೆ ಛಲ ಇದ್ದರೆ, ಮತ್ತೊಬ್ಬನಿಗೆ ಅಮಾಯಕತ್ವವಿದೆ. ಒಬ್ಬರಿಗೆ ಗೆಲುವು ಅಗತ್ಯ, ಮತ್ತೊಬ್ಬರಿಗೆ ಗೆಲುವು ಅನಿವಾರ್ಯ. ಇಷ್ಟನ್ನೆಲ್ಲಾ ನೋಡಿದಾಗ ನನ್ನ 66 ದಿನಗಳ ಜರ್ನಿ ನೋಡಿದಾಗ, ಕರ್ನಾಟಕದ ಜನತೆಯ ಆಶೀರ್ವಾದ ನೋಡಿದಾಗ ನನ್ನ ಮತ ಅಂತಃಕರ್ಣಕ್ಕೆ, ಹಳ್ಳಿ ಹಕ್ಕಿ ಪ್ರತಿಭೆಗೆ, ಇಂದು ನಾನು ಮಂಜು ಬಗ್ಗೆ ಬರೆದ ಒಂದು ಪದ್ಯವನ್ನು 16 ಲಕ್ಷ ಜನ ಶೇರ್ ಮಾಡಿದ್ದಾರೆ. ಅಷ್ಟು ಜನ ಮಂಜುರನ್ನು ಬಹಳ ಇಷ್ಟಪಡುತ್ತಿದ್ದಾರೆ ಎಂದು ಚಕ್ರವರ್ತಿ ಹೇಳಿದ್ದಾರೆ.

    ಮನೆಯಲ್ಲಿ ಕರೆಂಟ್ ಇಲ್ಲ, ಬಸ್ ಇಲ್ಲ, ಏನೂ ಇಲ್ಲದ ಒಬ್ಬ ಬಡ ಹುಡುಗ ಇಂತಹ ಒಂದು ದೊಡ್ಡ ಆಟಕ್ಕೆ ಬಂದು ಎಲ್ಲರೊಂದಿಗೆ ಸ್ಪರ್ಧಿಸುತ್ತಾನಲ್ಲ, ಅವನದ್ದು ನಿಜವಾದ ಶಕ್ತಿ, ಅದು ನಿಜವಾದ ತಾಕತ್ತು. ಅಂತಹ ಕೆಲಸ ಮಂಜು ಮಾಡಿದ್ದಾನೆ. ಅರವಿಂದ್ ಕೆಪಿಗೆ ಎಲ್ಲವನ್ನು ಭರಿಸಿಕೊಳ್ಳುವ ಶಕ್ತಿ ಎಲ್ಲ ಮಾರ್ಗಗಳಿದೆ. ಆದರೆ ಮಂಜು ಏನೂ ಇಲ್ಲದೇ ಬಂದಿದ್ದಾನೆ, ನಾನು ಅವನನ್ನು ಎಷ್ಟೋ ಬಾರಿ ಕೆಣಕಿದೆ. ಆದರೆ ಅವನು ಒಂದು ಕ್ಷಣ ಕೂಡ ಕುಗ್ಗಿದ್ದನ್ನು ನಾನು ನೋಡಲೇ ಇಲ್ಲ. ನಾನೇ ಎಷ್ಟೋ ಅಡ್ಡಗಳನ್ನು ಹಾಕಿದೆ. ಆದರೆ ಆ ಅಡ್ಡಗಳನ್ನೆಲ್ಲಾ ದಾಟಿ ನನ್ನ ಮನಸ್ಸನ್ನು ಹಾಗೂ ನನ್ನ ತಾಯಿ ಮನಸ್ಸನ್ನು ಗೆದ್ದಿದ್ದು, ನೂರಾರು ಕೋಟಿ ಜನರ ಆಶೀರ್ವಾದಕ್ಕೆ ಕಾರಣನಾಗಿದ್ದು ಮಂಜು. ಈ ಎಲ್ಲಾ ಕಾರಣಕ್ಕೆ ಬಿಗ್‍ಬಾಸ್ ಗ್ರ್ಯಾಂಡ್ ಫಿನಾಲೆಯ ಸೀಸನ್-8ರ ಗೆಲುವು ಮಂಜು ಪಾವಗಡ ಆಗಬೇಕೆಂದು ಅಭಿಪ್ರಾಯ ವ್ಯಕ್ತಪಡಿಸುವ ಜೊತೆಗೆ ಮಂಜುರನ್ನು ಹಾಡಿ ಹೊಗಳಿದ್ದಾರೆ. ಇದನ್ನೂ ಓದಿ:ಬಿಗ್‍ಬಾಸ್ ಮನೆಯಲ್ಲಿ ಮಂಜು ಕಲಿತಿದ್ದೇನು..?- ಮುಂದಿನ ಯೋಚನೆ, ಯೋಜನೆಗಳ ಬಗ್ಗೆ ವಿನ್ನರ್ ಮಾತು

  • ಪುಟ್ಟ ಕಲಾವಿದನನ್ನು ಫಿನಾಲೆವರೆಗೆ ತಲುಪಿಸಿ ವಿನ್ನರ್ ಮಾಡಿದ್ದಕ್ಕೆ ತುಂಬಾ ಥ್ಯಾಂಕ್ಸ್: ಮಂಜು

    ಪುಟ್ಟ ಕಲಾವಿದನನ್ನು ಫಿನಾಲೆವರೆಗೆ ತಲುಪಿಸಿ ವಿನ್ನರ್ ಮಾಡಿದ್ದಕ್ಕೆ ತುಂಬಾ ಥ್ಯಾಂಕ್ಸ್: ಮಂಜು

    ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಅತ್ಯಂತ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಶೋ 8ರ ವಿನ್ನರ್ ಆಗಿ ಮಂಜು ಪಾವಗಡ ಅವರು ಹೊರಹೊಮ್ಮಿದ್ದಾರೆ. ಇದೀಗ ಅವರು ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ಮಾತನಾಡುತ್ತಾ ಕರ್ನಾಟಕದ ಜನತೆಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

    ವಿನ್ನರ್ ಅಂತ ಘೋಷಣೆಯಾಗುತ್ತಿದ್ದಂತೆಯೇ ತುಂಬಾನೇ ಖುಷಿಯಾದೆ. ಟಾಪ್ 5 ಅಂತ ಬಂದಾಗಲೇ ನಾನು ಗೆದ್ದಿದ್ದೀನಿ ಅನ್ನೋ ಖುಷಿ ಇತ್ತು. ಏನೂ ಇಲ್ಲದೆ ಅಂತಹ ದೊಡ್ಡ ಸ್ಟೇಜ್ ಗೆ ಹೋಗಿ ಟಾಪ್ 5 ಬರೋದು ದೊಡ್ಡ ಮಾತು ಎಂದರು.

    ನನಗೆ ತುಂಬಾನೇ ಖುಷಿಯಾಗಿರುವುದು ಅಂದರೆ, 45 ಲಕ್ಷ ವೋಟ್ ಬಂದಿರುವುದು. ಇದು ತಮಾಷೆ ಮಾತೇ ಇಲ್ಲ. ಕರ್ನಾಟಕದ ಎಲ್ಲಾ ಜನತೆಗೆ ತುಂಬಾ ಧನ್ಯವಾದಗಳೂ. ಯಾಕಂದ್ರೆ ಈ ಪುಟ್ಟ ಕಲಾವಿದನನ್ನು ಪ್ರತಿ ವಾರನೂ ಇಷ್ಟಪಟ್ಟು ವೋಟ್ ಮಾಡಿ ಫಿನಾಲೆ ತಲುಪಿಸಿ ವಿನ್ನರ್ ಮಾಡಿದ್ದೀರಿ. ಅದಕ್ಕೆ ನಾನು ಯಾವತ್ತೂ ಚಿರಋಣಿ. ನಾನು ಇರುವವರೆಗೂ ಎಲ್ಲರನ್ನೂ ಮನರಂಜಿಸುತ್ತಾ ನಗಿಸುತ್ತಾ ಇರುತ್ತೇನೆ ಎಂದು ಮಂಜು ಹೇಳಿದ್ದಾರೆ.  ಇದನ್ನೂ ಓದಿ: ಕನ್ನಡಿಗರ ಮನಗೆದ್ದು ಗೆಲುವಿನ ನಗೆ ಬೀರಿದ ಮಂಜು

    ನಾನೊಬ್ಬ ರಂಗಭೂಮಿ ಕಲಾವಿದನಾಗಿದ್ದೆ. ಅಲ್ಲಿಂದ ನಾನು ಜನರನ್ನು ಮನರಂಜಿಸುವತ್ತ ಬಂದೆ. ನಾನು ಕೂಡ ಒಬ್ಬ ಬಿಗ್ ಬಾಸ್ ಶೋ ಅಭಿಮಾನಿ. ಅಂತಹ ಶೋಗೆ ನಾನೇ ಸೆಲೆಕ್ಟ್ ಆದಾಗ ತುಂಬಾ ಖುಷಿಯಾಗಿದ್ದೆ. ಈ ಶೋ 72 ದಿನ ನಡೆದ ಬಳಿಕ ಕೋವಿಡ್ ಅಲೆಯಿಂದ ಕೆಲ ದಿನಗಳ ಕಾಲ ನಿಂತು ಹೋಯಿತು. ಈ ವೇಳೆ ನನಗೆ ತುಂಬಾ ಬೇಜಾರಾಗಿತ್ತು. ಸಾವಿರಾರು ಕನಸು ಕಟ್ಟಿಕೊಂಡು ಬಂದ್ವಿ. ನಮಗೆ ಹಿಂಗೇ ಆಗ್ಬೇಕಾ ಅನ್ನೋ ನೋವು ನನ್ನನ್ನು ಕಾಡಿತ್ತು ಎಂದು ತಿಳಿಸಿದರು.  ಇದನ್ನೂ ಓದಿ: ಟಾಸ್ಕ್ ಮಾಸ್ಟರ್, ಪರ್ಫೆಕ್ಷನಿಸ್ಟ್ ಅರವಿಂದ್‍ಗೆ ಎರಡನೇ ಸ್ಥಾನ

    ಬಿಗ್ ಬಾಸ್ ಇತಿಹಾಸದಲ್ಲಿಯೇ 2ನೇ ಇನ್ನಿಂಗ್ಸ್ ಅನ್ನೊದು ಇರಲೇ ಇಲ್ಲ. 11 ಮಂದಿ ಸ್ಪರ್ಧಿಗಳು 43 ದಿನ ಹೊರಗಡೆ ಇದ್ದು, ಮತ್ತೆ ಒಳಗಡೆ ಹೋಗಿ 48 ದಿನ ಆಡೋದು ಅಸಾಧಾರಣ ಮಾತು. ಇಂತಹ ಸ್ಪೆಷಲ್ ಎಪಿಸೋಡ್ ನಲ್ಲಿ ನಾನು ಗೆದ್ದಿರೋದು ಸಿಕ್ಕಾಪಟ್ಟೆ ಖುಷಿಯಾಗಿದೆ. ಅದಕ್ಕೆ ಕಾರಣ ವೀಕ್ಷಕರು ಕೊಟ್ಟಂತಹ ಪ್ರೀತಿ, ವಿಶ್ವಾಸ. ಇದನ್ನು ನಾನು ಸಾಯುವವರೆಗೂ ಉಳಿಸಿಕೊಳ್ಳುತ್ತೇನೆ ಎಂದು ಮಂಜು ಭರವಸೆ ನಿಡಿದರು.  ಇದನ್ನೂ ಓದಿ: ಮಂಜುಗೆ ಒಲಿದ ದೊಡ್ಮನೆ ಕಿರೀಟ – ಬಿಗ್‍ಬಾಸ್ ವಿನ್ನರ್‌ಗೆ ಅದ್ಧೂರಿ ಸ್ವಾಗತ

  • ಮಂಜುಗೆ ಒಲಿದ ದೊಡ್ಮನೆ ಕಿರೀಟ – ಬಿಗ್‍ಬಾಸ್ ವಿನ್ನರ್‌ಗೆ ಅದ್ಧೂರಿ ಸ್ವಾಗತ

    ಮಂಜುಗೆ ಒಲಿದ ದೊಡ್ಮನೆ ಕಿರೀಟ – ಬಿಗ್‍ಬಾಸ್ ವಿನ್ನರ್‌ಗೆ ಅದ್ಧೂರಿ ಸ್ವಾಗತ

    ಬೆಂಗಳೂರು: ಕಾಮಿಡಿಯನ್ ಮಂಜು ಪಾವಗಡ ಅವರು ಈ ಬಾರಿಯ ಬಿಗ್‍ಬಾಸ್ ಸೀನ್ -8ರ ವಿನ್ನರ್ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಗ್ ಬಾಸ್ ಮನೆಯಿಂದ ಹೊರಬರುತ್ತಿದ್ದಂತೆಯೇ ಮಂಜುಗೆ ಭರ್ಜರಿ ಸ್ವಾಗತ ಸಿಕ್ಕಿದೆ.

    ಕುಟುಂಬಸ್ಥರು, ಆತ್ಮೀಯರು, ಸ್ನೇಹಿತರಿಂದ ಅದ್ಧೂರಿ ಸ್ವಾಗತ ದೊರೆತಿದೆ. ಸ್ನೇಹಿತರಂತೂ ಹೆಗಲ ಮೇಲೆ ಹೊತ್ಕೊಂಡು ಮೆರವಣಿಗೆ ಮಾಡಿದರು. ಹಾರ ಹಾಕಿ, ಪಟಾಕಿ ಸಿಡಿಸಿ, ಕೇಕ್ ಕತ್ತರಿಸಿ ಮಂಜು ಸಾಧನೆಯನ್ನು ಸಂಭ್ರಮಿಸಿದ್ದಾರೆ.  ಇದನ್ನೂ ಓದಿ: ಕನ್ನಡಿಗರ ಮನಗೆದ್ದು ಗೆಲುವಿನ ನಗೆ ಬೀರಿದ ಮಂಜು

    ಒಟ್ಟಿನಲ್ಲಿ `ಹಳ್ಳಿ ಹಕ್ಕಿ’ ಮಂಜುಗೆ ದೊಡ್ಮನೆ ಕಿರೀಟ ಒಲಿದಿದ್ದು, ಮಂಜು ಪಾವಗಡ-ಅರವಿಂದ್ ಕೆಪಿ ಮಧ್ಯೆ ಟಫ್ ಫೈಟ್ ಏರ್ಪಟ್ಟಿತ್ತು. ಕೊನೆಗೆ ಸುದೀಪ್ ಅವರು ವಿನ್ನರ್ ಮಂಜು ಪಾವಗಡ ಹೆಸರು ಘೋಷಿಸಿದ್ದಾರೆ. ಮಂಜು ಪಾವಗಡ ವಿನ್ನರ್, ಅರವಿಂದ್ ರನ್ನರ್ ಅಪ್ ಆಗಿದ್ದು, ಮಂಜುಗೆ 53 ಲಕ್ಷ, ಅರವಿಂದ್‍ಗೆ 11 ಲಕ್ಷ ಬಹುಮಾನ ದೊರೆತಿದೆ.  ಇದನ್ನೂ ಓದಿ: ಟಾಸ್ಕ್ ಮಾಸ್ಟರ್, ಪರ್ಫೆಕ್ಷನಿಸ್ಟ್ ಅರವಿಂದ್‍ಗೆ ಎರಡನೇ ಸ್ಥಾನ

    ಸರ್ಧೆಯ ವಿಜೇತರಾಗಿರುವ ಮಂಜು ಪಾವಗಡ ಮಜಾಭಾರತ ರಿಯಾಲಿಟಿ ಶೋ ಸ್ಪರ್ಧಿ ಯಾಗಿ ಕನ್ನಡಿಗರಿಗೆ ಪರಿಚಿತರಿದ್ದರು. ಆದರೆ ಬಿಗ್ ಬಾಸ್ ಕಾರ್ಯಕ್ರಮ ತಮಗೆ ಕೊಟ್ಟ ಅವಕಾಶವನ್ನ ಜೋಪಾನವಾಗಿ ಕಾಪಾಡಿಕೊಂಡು ಸಂದರ್ಭಕ್ಕೆ ತಕ್ಕಂತೆ ಆಟವಾಡುವುದರಲ್ಲಿ ಯಶಸ್ವಿಯಾಗಿದ್ದರು. ಮನರಂಜಿಸುತ್ತಾ ಬಂದಿದ್ದು, ಟಾಸ್ಕ್ ನಲ್ಲೂ ಉತ್ತಮ ಪರ್ಫಾಮೆನ್ಸ್ ಕೊಟ್ಟಿದ್ದರು. ಕಡು ಬಡತನದಲ್ಲಿರುವ ಮಂಜು ಬಿಗ್ ಬಾಸ್ ಗೆದ್ದ ಹಣದಿಂದ ತಂದೆ ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳೋದಾಗಿ ಈ ಹಿಂದೆ ಹೇಳಿದ್ರು. ಹೀಗಾಗಿ ಕರುನಾಡು ಮಂಜುಗೆ ಹರಸಿದೆ. ಈ ಮೂಲಕ ಮತಗಳ ಮಹಾಪೂರವೇ ಮಂಜುಗೆ ಹರಿದುಬಂದಿತ್ತು. ಇದೇ ಕಾರಣದಿಂದ ಮಂಜು ಗೆಲ್ಲುವ ದಾರಿ ಸುಗಮವಾಯ್ತು.

  • ಅರವಿಂದ್ ವಸ್ತು ಕದಿಯಲು ಕಷ್ಟಪಟ್ಟೆ – ಟಾಸ್ಕ್ ಗೆದ್ದ ವೈಷ್ಣವಿಗೆ ಸಿಕ್ತು ಐಸ್‍ಕ್ರೀಂ

    ಅರವಿಂದ್ ವಸ್ತು ಕದಿಯಲು ಕಷ್ಟಪಟ್ಟೆ – ಟಾಸ್ಕ್ ಗೆದ್ದ ವೈಷ್ಣವಿಗೆ ಸಿಕ್ತು ಐಸ್‍ಕ್ರೀಂ

    ಬಿಗ್‍ಬಾಸ್ ಮನೆಯಲ್ಲಿ ಕೆಲವು ಸ್ಪರ್ಧಿಗಳು ಫಿಸಿಕಲಿ ಸ್ಟ್ರಾಂಗ್ ಆಗಿದ್ದರೆ, ಇನ್ನೂ ಕೆಲವರು ಮೆಂಟಲಿ ಸ್ಟ್ರಾಂಗ್ ಆಗಿದ್ದಾರೆ. ಅದರಲ್ಲಿ ವೈಷ್ಣವಿ ಗೌಡ ಕೂಡ ಒಬ್ಬರು. ಯಾವುದೇ ಟಾಸ್ಕ್ ನೀಡಿದರೂ ನಾನು ಯಾರಿಗೂ ಕಡಿಮೆ ಇಲ್ಲ ಎಂಬಂತೆ ಎಲ್ಲ ಸ್ಪರ್ಧಿಗಳಿಗೂ ಪ್ರತಿಸ್ಪರ್ಧಿಯಾಗಿ ಟಫ್ ಕಾಂಪಿಟೇಷನ್ ಕೊಡುವ ವೈಷ್ಣವಿ ಗೌಡ ಬಿಗ್‍ಬಾಸ್ ನೀಡಿದ್ದ ಸೀಕ್ರೆಟ್ ಟಾಸ್ಕ್‌ನನ್ನು ಸುಲಭವಾಗಿ ನಿಭಾಯಿಸಿ ಗೆದ್ದಿದ್ದಾರೆ.

    ಬಿಗ್‍ಬಾಸ್ ಕರೆ ಮಾಡಿ ವೈಷ್ಣವಿಗೆ ನೀವು ಮನೆಯಲ್ಲಿರುವ 7 ಸದಸ್ಯರ ಒಂದೊಂದು ವಸ್ತುವನ್ನು ಯಾರಿಗೂ ಗೊತ್ತಾಗದಂತೆ ಸ್ಟೋರ್ ರೂಮ್‍ಗೆ ತಂದು ಇಡಬೇಕು. ಇವತ್ತು ರಾತ್ರಿ ಲೈಟ್ಸ್ ಆಫ್ ಆಗುವ ಮುನ್ನ ಈ ಕೆಲಸವನ್ನು ಪೂರ್ಣಗೊಳಿಸಿದರೆ, ನಿಮಗೆ ಐಸ್ ಕ್ರೀಮ್ ಕಳುಹಿಸಿಕೊಡುತ್ತೇನೆ ಎನ್ನುತ್ತಾರೆ. ಒಂದು ವೇಳೆ ಈ ಟಾಸ್ಕ್ ಪೂರ್ಣಗೊಳಿಸದೇ ಇದ್ದರೆ ನಿಮ್ಮ ವಸ್ತುವನ್ನು ಬಿಗ್ ಬಾಸ್‍ಗೆ ನೀಡಬೇಕು ಎಂದು ಹೇಳುತ್ತಾರೆ.

    ಟಾಸ್ಕ್ ಸಿಕ್ಕಿದ ಹಿನ್ನೆಲೆಯಲ್ಲಿ ವೈಷ್ಣವಿ, ಮೇಕಪ್ ರೂಮ್‍ನಲ್ಲಿದ್ದ ಮನೆಯ ಸ್ಪರ್ಧಿಗಳ ಒಂದೊಂದು ವಸ್ತುವನ್ನು ಹುಡುಕಾಡಿ-ತಡಕಾಡಿ ಬಹಳ ಚಲಾಕಿತನದಿಂದ ಪ್ಲಾಸ್ಟಿಕ್ ಕವರ್‌ನಲ್ಲಿ ಬಟ್ಟೆಗಳನ್ನು ತುಂಬಿಕೊಂಡು, ಯಾರಿಗೂ ತಿಳಿಯದಂತೆ ಸ್ಟೋರ್ ರೂಮ್‍ಗೆ ತೆಗೆದುಕೊಂಡು ಹೋಗಿ ಇಡುತ್ತಾರೆ.

    ಅದರಂತೆ ಟಾಸ್ಕ್‌ನನ್ನು ವಿನ್ ಆದ ವೈಷ್ಣವಿಗೆ ಬಿಗ್‍ಬಾಸ್ ಅಭಿನಂದನೆ ಕೋರುತ್ತಾ ಐಸ್ ಕ್ರೀಮ್ ಕಳುಹಿಸಿಕೊಡುತ್ತಾರೆ. ಆಗ ವೈಷ್ಣವಿ ನನ್ನನ್ನು ಎಲ್ಲರೂ ಕ್ಷಮಿಸಿ, ಬಿಗ್‍ಬಾಸ್ ಸೀಕ್ರೆಟ್ ಟಾಸ್ಕ್‌ವೊಂದನ್ನು ನೀಡಿದ್ದರು. ಹಾಗಾಗಿ ನಿಮ್ಮೆಲ್ಲರಿಂದಲೂ ಒಂದೊಂದು ವಸ್ತುಗಳನ್ನು ಕದ್ದಿದ್ದೀನಿ ಎಂದಾಗ ಎಲ್ಲರೂ ಶಾಕ್ ಆಗುತ್ತಾ, ಏನು ಕದ್ದಿದ್ದೀರಾ ಎಂದು ಕೇಳುತ್ತಾರೆ.

    ಆಗ ವೈಷ್ಣವಿ, ಬ್ರೋ ಗೌಡರವರ ಗ್ರೀನ್ ಕಲರ್ ಟಿ ಶರ್ಟ್, ಅರವಿಂದ್‍ರವರ ಬ್ರಶ್, ಪ್ರಶಾಂತ್‍ರವರದ್ದು ಗ್ರೇ ಮತ್ತು ಯೆಲ್ಲೋ ಟಿ ಶರ್ಟ್, ದಿವ್ಯಾ ಉರುಡುಗ ಅವರ ಒಂದು ಟ್ರ್ಯಾಕ್ ಪ್ಯಾಂಟ್, ಮಂಜುರವರ ಬಿಳಿ ಬಣ್ಣದ ಟಿ ಶರ್ಟ್, ಶುಭಾರವರ ಕ್ಯಾಪ್, ಡಿಎಸ್‍ದು ಏರ್ ಬ್ಯಾಂಡ್ ಕದ್ದಿದ್ದೇನೆ. ಆದರೆ ಅರವಿಂದ್ ಡ್ರಸ್‍ಗಳನ್ನು ಬಹಳ ನೀಟಾಗಿ ಇಟ್ಟಿದ್ದಾರೆ. ಒಂದು ಬಟ್ಟೆ ಎತ್ತಿಕೊಂಡರೂ ಅದು ಬಹಳ ಬೇಗ ಗೊತ್ತಾಗಿ ಬಿಡುತ್ತದೆ. ಬಾತ್‍ರೂನಲ್ಲಿ ಒಂದು ಟಿ ಶರ್ಟ್ ಮತ್ತು ಶಾಟ್ಸ್ ಇತ್ತು. ಅದನ್ನೂ ಎತ್ತಿದರೆ ಬೇಗ ಗೊತ್ತಾಗಿ ಬಿಡುತ್ತದೆ. ಹಾಗಾಗಿ ಅರವಿಂದ್ ಬಟ್ಟೆಯನ್ನು ಮಾತ್ರ ಕದಿಯಲು ಆಗಲಿಲ್ಲ ಬದಲಿಗೆ ಅವರ ಬ್ರಶ್ ಮಾತ್ರ ಕದ್ದೆ ಎನ್ನುತ್ತಾರೆ. ಇದನ್ನೂ ಓದಿ:ದಿವ್ಯಾ ಉರುಡುಗ ಅರವಿಂದ್ ಫುಲ್ ಕಿಲ ಕಿಲ

  • ಶುಭಾ ಜೊತೆ ನಮಗೆ ಇನ್ನೊಂದು ಮದ್ವೆ ಊಟ ಪಕ್ಕಾ ಅಂದ್ರು ಗೀತಾ..!

    ಶುಭಾ ಜೊತೆ ನಮಗೆ ಇನ್ನೊಂದು ಮದ್ವೆ ಊಟ ಪಕ್ಕಾ ಅಂದ್ರು ಗೀತಾ..!

    ಬಿಗ್ ಬಾಸ್ ಮನೆಯಲ್ಲಿ ಅರವಿಂದ್ ಹಾಗೂ ದಿವ್ಯ ಉರುಡುಗ ಜೋಡಿ ಟಾಸ್ಕ್ ಆಡಿ ಗೆದ್ದಿದ್ದರು. ಅದಾದ ಬಳಿಕದಿಂದ ಈ ಜೋಡಿ ಬಗ್ಗೆ ಮನೆಮಂದಿಯೆಲ್ಲಾ ಮಾತನಾಡಿಕೊಳ್ಳಲು ಶುರುಮಾಡಿದ್ದಾರೆ. ಈ ಕುರಿತು ಗೀತಾ ಹಾಗೂ ಪ್ರಶಾಂತ್ ಸಂಬರ್ಗಿ ಕೂಡ ಭಾರೀ ಚರ್ಚೆಯನ್ನೇ ನಡೆಸಿದ್ದಾರೆ.

    ಹೌದು. ಜೋಡಿ ಟಾಸ್ಕ್‍ನಲ್ಲಿ ಆಡಲು ದಿವ್ಯ ಉರುಡುಗ ಅವರು ಅರವಿಂದ್ ಅವರನ್ನು ಆಯ್ಕೆ ಮಾಡಿಕೊಂಡಿದ್ದರು. ಆ ಬಳಿಕದಿಂದ ಇಬ್ಬರೂ ಹೆಚ್ಚು ಜೊತೆಯಾಗಿಯೇ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ದಿವ್ಯ ಹಾಗೂ ಅರವಿಂದ್ ಮಧ್ಯೆ ಏನೋ ನಡೆಯುತ್ತಿದೆ ಅಂತ ಮನೆ ಮಂದಿ ಪಿಸು ಪಿಸು ಮಾತನಾಡಿಕೊಳ್ಳುತ್ತಿದ್ದಾರೆ. ಇನ್ನು ಈ ಹಿಂದೆ ದಿವ್ಯ ಉರುಡುಗ ಅವರು ಪ್ರಶಾಂತ್ ಸಂಬರ್ಗಿ ಜೊತೆ ಚೆನ್ನಾಗಿಯೇ ಇದ್ದರು. ಆದರೆ ಜೋಡಿ ಟಾಸ್ಕ್ ಬಂದ ಬಳಿಕ ದಿವ್ಯ ಉರುಡುಗ ವರ್ತನೆ ಬದಲಾಗಿದೆ ಎಂದು ನಿಧಿ ಸುಬ್ಬಯ್ಯ ಹಾಗೂ ಶುಭಾ ಪೂಂಜಾ ಮಾತನಾಡಿಕೊಂಡಿದ್ದಾರೆ.

    ಇತ್ತ ಗೀತಾ ಹಾಗೂ ಸಂಬರ್ಗಿ ಕೂಡ ದಿವ್ಯ, ಅರವಿಂದ್ ಜೋಡಿ ಬಗ್ಗೆ ರಾತ್ರಿ ಚರ್ಚೆ ನಡೆಸಿದ್ದಾರೆ. ಇವರು ಲವ್ ಮಾಡ್ತಿದ್ದಾರೋ ಹೇಗೆ ಎಂದು ಗೀತಾ ಅವರು ದಿವ್ಯ ಬಳಿಯೇ ಹಲವು ಬಾರಿ ಪ್ರಶ್ನೆ ಮಾಡಿದ್ದರಂತೆ. ಆಗ ದಿವ್ಯ, ಜೋಡಿ ಟಾಸ್ಕ್ ಅಂತ ಒಟ್ಟಾಗಿ ಇದ್ದೇವೆ ಎಂದು ಉತ್ತರಿಸಿರುವುದಾಗಿ ಸಂಬರ್ಗಿ ಬಳಿ ಗೀತಾ ಹೇಳಿದ್ದಾರೆ.

    ಅರವಿಂದ್ ಅವರು ದಿವ್ಯಾರನ್ನು ಲವ್ ಮಾಡುವ ವಿಚಾರದ ಬಗ್ಗೆ ಯೋಚನೆ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ಅವರು ಓಪನ್ ಆಗಿದ್ದಾರೆ ಎಂದು ಸಂಬರ್ಗಿ ಹೇಳಿದ್ದಾರೆ. ಸಂಬರ್ಗಿ ಮಾತಿಗೆ ದನಿಗೂಡಿಸಿದ ಗೀತಾ, ಶುಭಾ ಪೂಂಜಾ ಮದುವೆ ನಂತರದಲ್ಲಿ ಇನ್ನೊಂದು ಮದುವೆ ಊಟ ಸಿಗಬಹುದು ಅಂತ ಹೇಳಿದ್ದಾರೆ. ಅಷ್ಟೇ ಅಲ್ಲದೆ ಜೋಡಿ ಟಾಸ್ಕ್ ಮುಗಿದು 2 ದಿನವಾದರೂ ಇವರಿಬ್ಬರು ಒಟ್ಟಾಗಿದ್ದಾರೆ ಅಂತ ಹೇಳಿಕೊಂಡು ಗೀತಾ, ಪ್ರಶಾಂತ್ ನಕ್ಕಿದ್ದಾರೆ. ಜೊತೆಗೆ ಒಳ್ಳೆಯದಾದರೆ ಆಗಲಿ, ನಾವು ಓವರ್ ಆಗಿ ಯೋಚನೆ ಮಾಡುತ್ತಿದ್ದೆವೆ ಅಂತ ಗೀತಾ ಅವರನ್ನೇ ಅವರು ಪ್ರಶ್ನೆ ಮಾಡಿಕೊಂಡಿದ್ದಾರೆ.