Tag: Bihar

  • ವಲ್ಲಭಭಾಯಿ ಪಟೇಲ್‌ಗೆ ಭಾರತ ರತ್ನ ನೀಡಲು ಕಾಂಗ್ರೆಸ್ 41 ವರ್ಷ ವಿಳಂಬ ಮಾಡಿತ್ತು: ಅಮಿತ್ ಶಾ ಕಿಡಿ

    ವಲ್ಲಭಭಾಯಿ ಪಟೇಲ್‌ಗೆ ಭಾರತ ರತ್ನ ನೀಡಲು ಕಾಂಗ್ರೆಸ್ 41 ವರ್ಷ ವಿಳಂಬ ಮಾಡಿತ್ತು: ಅಮಿತ್ ಶಾ ಕಿಡಿ

    ಪಾಟ್ನಾ: ಸರ್ದಾರ್ ವಲ್ಲಭಭಾಯಿ ಪಟೇಲ್‌ರಂತಹ (Sardhar Vallabhi Pattel) ಮಹಾನ್ ವ್ಯಕ್ತಿಗೆ ಭಾರತ ರತ್ನ ನೀಡಲು ಕಾಂಗ್ರೆಸ್ ಪಕ್ಷ 41 ವರ್ಷ ವಿಳಂಬ ಮಾಡಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ವಾಗ್ದಾಳಿ ನಡೆಸಿದ್ದಾರೆ.

    ಭಾರತ ರತ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಸ್ಮರಣಾರ್ಥ ಅಮಿತ್ ಶಾ ಪಾಟ್ನಾದಲ್ಲಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಅವರು ಲಕ್ಷದ್ವೀಪದಲ್ಲಿ ತ್ರಿವರ್ಣ ಧ್ವಜ ಹಾರಿಸಲು ಸರ್ದಾರ್ ಪಟೇಲ್ ಕಾರಣರಾಗಿದ್ದರು. ಆದರೆ ದುರದೃಷ್ಟವಶಾತ್, ಅಂತಹ ಮಹಾನ್ ವ್ಯಕ್ತಿಗೆ ಭಾರತ ರತ್ನ ನೀಡಲು ಕಾಂಗ್ರೆಸ್ (Congress) 41 ವರ್ಷ ಕಾಲ ವಿಳಂಬ ಮಾಡಿತ್ತು ಎಂದು ದೂರಿದ್ದಾರೆ. ಇದನ್ನೂ ಓದಿ: ಚೀನಾ ಮೇಲಿನ ಟ್ಯಾರಿಫ್ ಶೇ. 57ರಿಂದ 47ಕ್ಕೆ ಇಳಿಸಿದ ಟ್ರಂಪ್

    ಪಟೇಲ್ ಅವರ ಮರಣದ ನಂತರ ಕಾಂಗ್ರೆಸ್ಸಿನವರು ಅವರ ಸಮಾಧಿಯಾಗಲಿ, ಸ್ಮಾರಕವಾಗಲಿ ಯಾವುದನ್ನೂ ನಿರ್ಮಿಸಿರಲಿಲ್ಲ. ನರೇಂದ್ರ ಮೋದಿ, ಗುಜರಾತ್ ಸಿಎಂ ಆದಾಗ, ಅವರ ಏಕತಾ ಪ್ರತಿಮೆಯ ನಿರ್ಮಾಣಕ್ಕೆ ಚಾಲನೆ ನೀಡಿದರು. ಇದು ಈಗ ವಿಶ್ವದಾದ್ಯಂತ ಪ್ರಸಿದ್ಧವಾಗಿದೆ ಎಂದಿದ್ದಾರೆ.

    182 ಮೀ. ಎತ್ತರದ ಏಕತಾ ಪ್ರತಿಮೆಯನ್ನು ನಿರ್ಮಿಸಲು ರೈತರಿಂದ ಕಬ್ಬಿಣವನ್ನು ಸಂಗ್ರಹಿಸಲಾಯಿತು. ಇಂದು, ಇದು ಪ್ರಮುಖ ಪ್ರವಾಸಿ ತಾಣವಾಗಿದೆ. ಇದನ್ನು ನೋಡಲು ಭಾರತ ಮತ್ತು ವಿದೇಶಗಳಿಂದ ಕೋಟ್ಯಂತರ ಜನರು ಬರುತ್ತಿದ್ದಾರೆ ಎಂದು ಹೇಳಿದ್ದಾರೆ.

  • ಬಿಹಾರ, ಪಶ್ಚಿಮ ಬಂಗಾಳ ಮತದಾರರ ಪಟ್ಟಿಯಲ್ಲಿ ಹೆಸರು – ಚುನಾವಣಾ ಆಯೋಗದಿಂದ ಪ್ರಶಾಂತ್ ಕಿಶೋರ್‌ಗೆ ನೋಟಿಸ್

    ಬಿಹಾರ, ಪಶ್ಚಿಮ ಬಂಗಾಳ ಮತದಾರರ ಪಟ್ಟಿಯಲ್ಲಿ ಹೆಸರು – ಚುನಾವಣಾ ಆಯೋಗದಿಂದ ಪ್ರಶಾಂತ್ ಕಿಶೋರ್‌ಗೆ ನೋಟಿಸ್

    ಪಾಟ್ನಾ: ಚುನಾವಣಾ ತಂತ್ರಜ್ಞ, ರಾಜಕಾರಣಿ ಪ್ರಶಾಂತ್ ಕಿಶೋರ್ (Prashant Kishor) ಅವರ ಹೆಸರು ಬಿಹಾರ ಹಾಗೂ ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳಲ್ಲಿ ಕಂಡು ಬಂದಿದೆ ಎಂದು ಚುನಾವಣಾ ಅಧಿಕಾರಿಯೊಬ್ಬರು ತಿಳಿಸಿದ್ದು, ಬಿಹಾರ ಚುನಾವಣೆ (Bihar Election) ಹೊತ್ತಲ್ಲೇ ಇದು ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿದೆ.

    ಜನ್ ಸೂರಜ್ ಪಕ್ಷದ ಮೂಲಕ ಈ ಬಾರಿ ಬಿಹಾರ ವಿಧಾನಸಭಾ ಚುನಾವಣೆ ಅಖಾಡದಲ್ಲಿ ಪ್ರಶಾಂತ್ ಕಿಶೋರ್ ಅದೃಷ್ಠ ಪರೀಕ್ಷೆಗೆ ಇಳಿದಿದ್ದಾರೆ. ಭಾರೀ ಪ್ರಚಾರದ ಭರದಲ್ಲಿರುವ ಅವರಿಗೆ ಈ ಸುದ್ದಿ ಆಘಾತ ಮೂಡಿಸಿದೆ.ಇದನ್ನೂ ಓದಿ: ಬಿಹಾರ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ – ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್

    ಅಧಿಕೃತ ದಾಖಲೆಗಳ ಪ್ರಕಾರ, ಪ್ರಶಾಂತ್ ಕಿಶೋರ್ ಅವರ ಹೆಸರು ಪಶ್ಚಿಮ ಬಂಗಾಳದ (West Bengal) ಮತದಾರರ ಪಟ್ಟಿಯಲ್ಲಿದೆ. 121, ಕಾಲಿಘಾಟ್ ರಸ್ತೆ ವಿಳಾಸದಲ್ಲಿ ನೋಂದಣಿಯಾಗಿದ್ದು, ಇದು ತೃಣಮೂಲ ಕಾಂಗ್ರೆಸ್ ಪ್ರಧಾನ ಕಚೇರಿಯ ವಿಳಾಸವಾಗಿದೆ. ಈ ಕ್ಷೇತ್ರವು ಕೋಲ್ಕತ್ತಾದ ಭವಾನಿಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿದ್ದು, ಈ ಕ್ಷೇತ್ರದಿಂದ ಮುಖ್ಯಮಂತ್ರಿ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸ್ಪರ್ಧಿಸುತ್ತಿದ್ದಾರೆ. 2021ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಪ್ರಶಾಂತ್ ಕಿಶೋರ್ ಟಿಎಂಸಿಯ ರಾಜಕೀಯ ಸಲಹೆಗಾರರಾಗಿ ಕೆಲಸ ಮಾಡಿದ್ದರು.

    ಮತ್ತೊಂದು ಕಡೆ ಬಿಹಾರದ (Bihar) ರೋಹ್ತಾಸ್ ಜಿಲ್ಲೆಯ ಸಸಾರಾಮ್ ಸಂಸದೀಯ ಕ್ಷೇತ್ರದ ಕಾರ್ಗಹರ್ ವಿಧಾನಸಭಾ ಕ್ಷೇತ್ರದಲ್ಲಿ ಕಿಶೋರ್ ಅವರ ಹೆಸರು ನೋಂದಾಯಿಸಲಾಗಿದೆ. ಅಲ್ಲಿ ಅವರ ಮತಗಟ್ಟೆ ಕೋನಾರ್‌ನ ಮಧ್ಯ ವಿದ್ಯಾಲಯದಲ್ಲಿದೆ.

    ಈ ಬಗ್ಗೆ ಮಾತನಾಡಿದ ಚುನಾವಣಾ ಅಧಿಕಾರಿಯೊಬ್ಬರು, 1950ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 17ರ ಅಡಿಯಲ್ಲಿ, ಯಾವುದೇ ವ್ಯಕ್ತಿಯನ್ನು ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ನೋಂದಾಯಿಸಲು ಸಾಧ್ಯವಿಲ್ಲ. ಸೆಕ್ಷನ್ 18ರ ಅಡಿಯಲ್ಲಿ, ಒಂದೇ ಕ್ಷೇತ್ರದಲ್ಲಿ ಒಬ್ಬ ವ್ಯಕ್ತಿಯ ಹೆಸರನ್ನು ಎರಡು ಬಾರಿ ನೋಂದಾಯಿಸುವುದನ್ನು ಸಹ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

    ಮತದಾರರು ತಮ್ಮ ಮನೆಯನ್ನು ಬದಲಾಯಿಸಿದ ನಂತರ ತಮ್ಮ ಹೆಸರುಗಳನ್ನು ವರ್ಗಾಯಿಸಲು ಫಾರ್ಮ್ 8 ಅನ್ನು ಭರ್ತಿ ಮಾಡಬೇಕಾಗುತ್ತದೆ. ಮತದಾರರ ಪಟ್ಟಿಗಳಲ್ಲಿ ನಕಲು ಮಾಡುವುದು ಸಾಮಾನ್ಯ ಸಮಸ್ಯೆ ಎಂದು ಚುನಾವಣಾ ಆಯೋಗ ಒಪ್ಪಿಕೊಂಡಿದೆ. ಇದಕ್ಕಾಗಿಯೇ ಆಯೋಗವು ದೇಶಾದ್ಯಂತ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ ಎಂದು ಹೇಳಿದ್ದಾರೆ.ಇದನ್ನೂ ಓದಿ:ವಿಜಯ್‌ TVK ಕಾರ್ಯಕ್ರಮ| #GetOutModi, #GetOutStalin ಫಲಕಕ್ಕೆ ಸಹಿ ಹಾಕದ ಪ್ರಶಾಂತ್‌ ಕಿಶೋರ್‌

  • Bihar Election | `ಜೀವಿಕಾ ಸಿಎಂ ದೀದಿ’ಗಳಿಗೆ 30,000 ಮಾಸಿಕ ವೇತನದ ಭರವಸೆ – ತೇಜಸ್ವಿ ಯಾದವ್

    Bihar Election | `ಜೀವಿಕಾ ಸಿಎಂ ದೀದಿ’ಗಳಿಗೆ 30,000 ಮಾಸಿಕ ವೇತನದ ಭರವಸೆ – ತೇಜಸ್ವಿ ಯಾದವ್

    – ಎಲ್ಲ ಗುತ್ತಿಗೆ ನೌಕರರನ್ನ ಖಾಯಂಗೊಳಿಸುವ ಭರವಸೆ

    ಪಾಟ್ನಾ: ಬಿಹಾರದಲ್ಲಿ ಆರ್‌ಜೆಡಿ (RJD) ನೇತೃತ್ವದ ಮಹಾಘಟಬಂಧನ್ ಅಧಿಕಾರಕ್ಕೆ ಬಂದರೆ ರಾಜ್ಯದ ಎಲ್ಲಾ `ಜೀವಿಕಾ ಸಿಎಂ ದೀದಿ’ಗಳಿಗೆ 30,000 ರೂ. ಮಾಸಿಕ ವೇತನದೊಂದಿಗೆ ಶಾಶ್ವತ ಸರ್ಕಾರಿ ಉದ್ಯೋಗವನ್ನು ನೀಡಲಾಗುವುದು ಎಂದು ಮಾಜಿ ಡಿಸಿಎಂ, ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ (Tjashwi Yadav) ಘೋಷಿಸಿದ್ದಾರೆ.

    ಪಾಟ್ನಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆ ಎರಡನೇ ಚುನಾವಣಾ ಭರವಸೆಯನ್ನು ಘೋಷಿಸಿದರು. ಜೀವಿಕಾ ಸಿಎಂ (ಸಮುದಾಯ ಸಂಚಾರಿ ಕಾರ್ಯಕರ್ತರು) ದೀದಿಗಳನ್ನು ಖಾಯಂ ಮಾಡಲಾಗುವುದು ಮತ್ತು ಅವರ ಸಂಬಳವನ್ನು ಹೆಚ್ಚಿಸುವುದರ ಜೊತೆಗೆ ಸರ್ಕಾರಿ ನೌಕರರ ಸ್ಥಾನಮಾನವನ್ನು ನೀಡಲಾಗುವುದು. ಇದಲ್ಲದೆ, ರಾಜ್ಯದ ಎಲ್ಲಾ ಗುತ್ತಿಗೆ ನೌಕರರನ್ನು ಶಾಶ್ವತ ಸರ್ಕಾರಿ ಉದ್ಯೋಗಿಗಳಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದರು.ಇದನ್ನೂ ಓದಿ: ದೀಪಾವಳಿಗೆ ಮುದ್ದು ಮಗಳ ಫೇಸ್‌ ರಿವೀಲ್‌ ಮಾಡಿದ ದೀಪಿಕಾ ಪಡುಕೋಣೆ

    ನಿಮಗೆಲ್ಲರಿಗೂ ತಿಳಿದಿರುವ ಹಾಗೇ ಈ ಸರ್ಕಾರದ ಅಡಿಯಲ್ಲಿ ಜೀವಿಕಾ ದೀದಿಗೆ ಅನ್ಯಾಯವಾಗಿದೆ. ನಾವು ಅವರ ಸಂಬಳವನ್ನು ತಿಂಗಳಿಗೆ 30,000 ರೂ.ಗಳಿಗೆ ಹೆಚ್ಚಿಸುವುದಾಗಿ ನಿರ್ಧರಿಸಿದ್ದೇವೆ. ಇದು ಸಾಮಾನ್ಯ ಘೋಷಣೆಯಲ್ಲ, ಇದು ಜೀವಿಕಾ ದೀದಿಯರ ಬೇಡಿಕೆಯಾಗಿದೆ ಎಂದು ಹೇಳಿದರು.

    ಇದಲ್ಲದೇ ಜೀವಿಕಾ ದೀದಿ ಗುಂಪುಗಳಿಗೆ ಮಹಿಳೆಯರು ಪಡೆದ ಸಾಲಗಳ ಮೇಲಿನ ಬಡ್ಡಿಯನ್ನು ಮನ್ನಾ ಮಾಡಲಾಗುತ್ತದೆ. ಜೊತೆಗೆ ಎರಡು ವರ್ಷಗಳವರೆಗೆ ಬಡ್ಡಿರಹಿತ ಸಾಲ ನೀಡಲಾಗುವುದು. ಜೀವಿಕಾ ಗುಂಪಿನ ಮಹಿಳೆಯರು ಸರ್ಕಾರಕ್ಕೆ ಸಂಬAಧಿಸಿದ ಇತರ ಕೆಲಸಗಳನ್ನು ನಿರ್ವಹಿಸಲು ಮಾಸಿಕ 2,000 ರೂ. ಭತ್ಯೆ ನೀಡಲಾಗುವುದು. ಅದರೊಂದಿಗೆ ಸರ್ಕಾರವು 5,00,000 ರೂ.ಗಳವರೆಗಿನ ವಿಮಾ ರಕ್ಷಣೆಯನ್ನು ಒದಗಿಸುತ್ತದೆ ಎಂದು ತಿಳಿಸಿದರು.

    ಮಗಳು ಮತ್ತು ತಾಯಿ ಯೋಜನೆಗಳ ಅಡಿಯಲ್ಲಿ, ಬಿಯಿಂದ ಇವರೆಗೆ ಪ್ರಯೋಜನಗಳನ್ನು ಒದಗಿಸಲಾಗುತ್ತದೆ. ಬಿ ಎಂದರೆ ಪ್ರಯೋಜನ, ಇ ಎಂದರೆ ಶಿಕ್ಷಣ, ಟಿ ಎಂದರೆ ತರಬೇತಿ ಮತ್ತು ಐ ಎಂದರೆ ಆದಾಯ. ಬಿಹಾರದ ಎಲ್ಲಾ ಗುತ್ತಿಗೆ ನೌಕರರನ್ನು ಖಾಯಂ ಸರ್ಕಾರಿ ನೌಕರರನ್ನಾಗಿ ಮಾಡಲಾಗುವುದು ಎಂದು ವಿವರಿಸಿದರು.

    ಈ ಹಿಂದೆ ಅಧಿಕಾರಕ್ಕೆ ಬಂದ 20 ತಿಂಗಳೊಳಗೆ ರಾಜ್ಯದ ಪ್ರತಿ ಮನೆಗೆ ಒಂದು ಸರ್ಕಾರಿ ಉದ್ಯೋಗ ನೀಡುವುದಾಗಿ ತೇಜಸ್ವಿ ಭರವಸೆ ನೀಡಿದ್ದರು. ಸರ್ಕಾರ ರಚಿಸಿದ 20 ದಿನಗಳಲ್ಲಿ ಉದ್ಯೋಗ ಖಾತರಿಪಡಿಸುವ ಹೊಸ ಕಾನೂನನ್ನು ಪರಿಚಯಿಸಲಾಗುವುದು. ಅಧಿಕಾರ ವಹಿಸಿಕೊಂಡ 20 ತಿಂಗಳೊಳಗೆ ಈ ಯೋಜನೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ಜಾರಿಗೆ ತರಲಾಗುವುದು ಎಂದು ಭರವಸೆ ನೀಡಿದ್ದಾರೆ.ಇದನ್ನೂ ಓದಿ: ಪ್ರಿಯಾಂಕ್‌ಗೆ ಅನಂತ್‌ ಕುಮಾರ್‌ ಪುತ್ರಿ ಐಶ್ವರ್ಯ ಟಕ್ಕರ್‌

  • ಬಿಹಾರ ಮತದಾರರ ಪಟ್ಟಿಯಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದ್ದ ಐವರು ಅಧಿಕಾರಿಗಳ ಮುಂದೆ ಹಾಜರ್‌!

    ಬಿಹಾರ ಮತದಾರರ ಪಟ್ಟಿಯಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದ್ದ ಐವರು ಅಧಿಕಾರಿಗಳ ಮುಂದೆ ಹಾಜರ್‌!

    ಪಾಟ್ನಾ: ಮತದಾರರ (Voter List) ಪಟ್ಟಿಯಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದ್ದ ಬಿಹಾರದ ಧೋರೈಯಾ ಬ್ಲಾಕ್‌ನ ಬಟ್ಸರ್ ಗ್ರಾಮದ ಐವರು ಮತದಾರರು ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ.

    ಬೂತ್ ಸಂಖ್ಯೆ 216ರ ಐವರು ಗ್ರಾಮಸ್ಥರು ಬಿಡಿಒ ಅರವಿಂದ್ ಕುಮಾರ್ ಅವರನ್ನು ಸಂಪರ್ಕಿಸಿ ʻನಾವು ಜೀವಂತವಾಗಿದ್ದೇವೆʼ ಎಂದು ಮನವಿ ಪತ್ರವನ್ನು ಸಲ್ಲಿಸಿದ್ದಾರೆ. ಬಿಹಾರ ಮೊದಲ ಹಂತದ ಚುನಾವಣೆ (Bihar Election) ಸಮಿಸುತ್ತಿರುವಾಗ ಈ ಬೆಳವಣಿಗೆ ನಡೆದಿದೆ. ಇದನ್ನೂ ಓದಿ: ಬಿಹಾರ ವಿಧಾನಸಭೆ ಚುನಾವಣೆ; ಎನ್‌ಡಿಎ-ಇಂಡಿಯಾ ಒಕ್ಕೂಟದ ನಡುವೆ ಸೀಟು ಹಂಚಿಕೆ ಲೆಕ್ಕಾಚಾರ

    ಮತದಾರರಾದ ಮೋಹನ್ ಸಾ (ಸೀರಿಯಲ್ ಸಂಖ್ಯೆ 2), ಸಂಜಯ್ ಯಾದವ್ (ಸೀರಿಯಲ್ ಸಂಖ್ಯೆ 175), ರಾಮರೂಪ್ ಯಾದವ್ (ಸೀರಿಯಲ್ ಸಂಖ್ಯೆ 211), ನರೇಂದ್ರ ಕುಮಾರ್ ದಾಸ್ (ಸೀರಿಯಲ್ ಸಂಖ್ಯೆ 364), ಮತ್ತು ವಿಶ್ವವರ್ ಪ್ರಸಾದ್ (ಸೀರಿಯಲ್ ಸಂಖ್ಯೆ 380) ಇವರನ್ನು ಮತದಾರರ ಪಟ್ಟಿಯಲ್ಲಿ ಮೃತಪಟ್ಟಿದ್ದಾರೆ ಎಂದು ನಮೋದಿಸಲಾಗಿತ್ತು.

    ಸಾಮಾಜಿಕ ಕಾರ್ಯಕರ್ತ ಇಂದ್ರದೇವ್ ಮಂಡಲ್ ನೇತೃತ್ವದಲ್ಲಿ, ಈ ಐವರು ಮತದಾರರ ಪಟ್ಟಿಯ ದೋಷವನ್ನು ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಈ ದೋಷವು ನಮ್ಮ ಮತ ಚಲಾಯಿಸುವ ಹಕ್ಕನ್ನು ತಡೆಯಬಹುದು ಎಂದು ಗ್ರಾಮಸ್ಥರು ಕಳವಳ ವ್ಯಕ್ತಪಡಿಸಿದ್ದಾರೆ.

    ಬಿಡಿಒ ತಕ್ಷಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿ, ಬಿಎಲ್‌ಒಗೆ ದೋಷ ಸರಿಪಡಿಸುವಂತೆ ಸೂಚಿಸಿದರು. ಇದೇ ವೇಳೆ ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

    ಇದಕ್ಕೂ ಮೊದಲು ಚಂಪಾರಣ್‌ನ ಬಾಗಾಹಿ ಪಂಚಾಯತ್‌ನ ದುಮ್ರಿ ಗ್ರಾಮದ ಮತದಾರರ ಪಟ್ಟಿಯಲ್ಲಿ 15 ಜನ ಮೃತಪಟ್ಟಿದ್ದಾರೆ ಎಂದು ದಾಖಲಾಗಿತ್ತು. ಇನ್ನೂ 2018 ರಲ್ಲಿ ನಿಧನರಾಗಿದ್ದ ಸೋನಿಯಾ ಶರಣ್ ಮತ್ತು ಫೆಬ್ರವರಿ 2025 ರಲ್ಲಿ ನಿಧನರಾದ ಅವರ ಮಗ ಮಣಿತ್ ಮಣಿ ಅವರನ್ನು ಅರ್ಹ ಮತದಾರರೆಂದು ತಪ್ಪಾಗಿ ನಮೋದಿಸಲಾಗಿತ್ತು. ಅಲ್ಲದೇ 2016 ರವರೆಗೆ ನಿಧನರಾದ ಜನರು ಸಹ ಇನ್ನೂ ಮತದಾರರ ಪಟ್ಟಿಯಲ್ಲಿದ್ದಾರೆ.

    ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ನಡೆಯಲಿದೆ. ನವೆಂಬರ್ 14 ರಂದು ಮತ ಎಣಿಕೆ ನಡೆಯಲಿದೆ. ಇದನ್ನೂ ಓದಿ: Bihar Election Dates 2025 | 69 ಲಕ್ಷ ಹೆಸರುಗಳು ಡಿಲೀಟ್‌, 21 ಲಕ್ಷ ಹೊಸ ಮತದಾರರ ಸೇರ್ಪಡೆ

  • ಪ್ರತಿ ಮನೆಯ ಒಬ್ಬರಿಗೆ ಸರ್ಕಾರಿ ಉದ್ಯೋಗ, 20 ತಿಂಗಳಲ್ಲಿ ಜಾರಿ: ತೇಜಸ್ವಿ ಯಾದವ್ ಘೋಷಣೆ

    ಪ್ರತಿ ಮನೆಯ ಒಬ್ಬರಿಗೆ ಸರ್ಕಾರಿ ಉದ್ಯೋಗ, 20 ತಿಂಗಳಲ್ಲಿ ಜಾರಿ: ತೇಜಸ್ವಿ ಯಾದವ್ ಘೋಷಣೆ

    – ಚುನಾವಣೆಗೆ ಆರ್‌ಜೆಡಿಯಿಂದ ಭರ್ಜರಿ ಕೊಡುಗೆ
    – ಬಿಹಾರದಲ್ಲಿ ಮುಂದುವರಿದ ಸೀಟು ಹಂಚಿಕೆ ಕಸರತ್ತು

    ಪಾಟ್ನಾ: ಬಿಹಾರ ವಿಧಾನಸಭೆಗೆ (Bihar Assembly Elections) ದಿನಾಂಕ ಘೋಷಣೆಯಾದ ಬೆನ್ನಲ್ಲೇ ಒಂದು ಕಡೆ ಸೀಟು ಹಂಚಿಕೆ ಲೆಕ್ಕಚಾರಗಳು ನಡೆಯುತ್ತಿದ್ದರೆ ಮತ್ತೊಂದು ಕಡೆ ಭರಪೂರ ಕೊಡುಗೆಗಳ ಘೋಷಣೆ ಆರಂಭವಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಮಹಾಘಟಬಂಧನ್ ಅಧಿಕಾರಕ್ಕೆ ಬಂದರೆ, ಬಿಹಾರದ ಪ್ರತಿ ಮನೆಯಿಂದ ಒಬ್ಬ ವ್ಯಕ್ತಿಗೆ ಸರ್ಕಾರಿ ಉದ್ಯೋಗ (Government Job) ನೀಡಲಾಗುವುದು ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ (Tejashwi Yadav) ಭರವಸೆ ನೀಡಿದ್ದಾರೆ.

    ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಂಡಿಯಾ ಮೈತ್ರಿಕೂಟ ಸರ್ಕಾರ ರಚಿಸಿದ 20 ದಿನಗಳಲ್ಲಿ ಉದ್ಯೋಗ ಖಾತರಿಪಡಿಸುವ ಹೊಸ ಕಾನೂನನ್ನು ಪರಿಚಯಿಸಲಾಗುವುದು ಎಂದು ಹೇಳಿದರು. ಅಧಿಕಾರ ವಹಿಸಿಕೊಂಡ 20 ತಿಂಗಳೊಳಗೆ ಈ ಯೋಜನೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ಜಾರಿಗೆ ತರಲಾಗುವುದು. 20 ತಿಂಗಳಲ್ಲಿ ಒಂದೇ ಒಂದು ಮನೆಯೂ ಸರ್ಕಾರಿ ಉದ್ಯೋಗವಿಲ್ಲದೆ ಇರುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಆಸ್ತಿ ಕಲಹ – ಪತಿಯ ಕಾರಿಗೆ ಬೆಂಕಿ ಇಟ್ಟ ಪತ್ನಿ

    ಭರವಸೆಗೆ ದತ್ತಾಂಶ ಬೆಂಬಲವಿದೆ, ಇದು ನನ್ನ ಪ್ರತಿಜ್ಞೆ. ಇದನ್ನು ಮಾಡಲು ಸಾಧ್ಯವಿದೆ. ಇದು ಜುಮ್ಲೆಬಾಜಿ ಅಲ್ಲ. ಬಿಹಾರದ ಜನರು ಈ ಬಾರಿ ಬದಲಾವಣೆಯನ್ನು ಬಯಸುತ್ತಿದ್ದಾರೆ. ಸಾಮಾಜಿಕ ನ್ಯಾಯದ ಜೊತೆಗೆ, ನಾವು ಬಿಹಾರದ ಜನರಿಗೆ ಆರ್ಥಿಕ ನ್ಯಾಯವನ್ನು ಸಹ ಖಚಿತಪಡಿಸುತ್ತೇವೆ. ಇದನ್ನು ಸಾಧಿಸಬಹುದು, ಇದಕ್ಕೆ ದೃಢಸಂಕಲ್ಪ ಮಾತ್ರ ಬೇಕಾಗುತ್ತದೆ. ಎನ್‌ಡಿಎ ನಮ್ಮ ಘೋಷಣೆಗಳನ್ನು ನಕಲಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಟೇಕಾಫ್‌ ಆದ ಕೆಲವೇ ಹೊತ್ತಲ್ಲಿ ಸ್ಕಿಡ್‌ ಆಗಿ ಹುಲ್ಲಿನ ಮೇಲೆ ಬಿದ್ದ ಪ್ರೈವೆಟ್ ಜೆಟ್‌

    ಈ ನಡುವೆ ಎನ್‌ಡಿಎ ಒಕ್ಕೂಟದಲ್ಲಿ ಸೀಟು ಹಂಚಿಕೆಗೆ ತಿಕ್ಕಾಟ ನಡೆಯುತ್ತಿದೆ. ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ರಾಷ್ಟ್ರೀಯ ಅಧ್ಯಕ್ಷ ಚಿರಾಗ್ ಪಾಸ್ವಾನ್ 40ರಿಂದ 50 ಸ್ಥಾನಗಳಲ್ಲಿ ಸ್ಪರ್ಧಿಸಲು ಬಯಸಿದ್ದು, ಬಿಜೆಪಿ ಅವರಿಗೆ ಸುಮಾರು 20 ಸ್ಥಾನಗಳನ್ನು ನೀಡಲು ನಿರ್ಧರಿಸಿದೆ. ಆದರೆ ಇದಕ್ಕೆ ಚಿರಾಗ್ ಪಾಸ್ವಾನ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾತನಾಡಿರುವ ಚಿರಾಗ್ ಪಾಸ್ವಾನ್, ಮಾತುಕತೆ ನಡೆಯುತ್ತಿವೆ. ಕೇಂದ್ರ ಸಚಿವರಾಗಿ ಉಳಿಯುವವರೆಗೆ ಸಚಿವಾಲಯದ ಜವಾಬ್ದಾರಿಗಳು ನನಗಿರುತ್ತವೆ, ಅದನ್ನು ಮಾಡುತ್ತಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಅನ್ನಭಾಗ್ಯ | 5 ಕೆಜಿ ಅಕ್ಕಿ ಬದಲು ʻಇಂದಿರಾ ಆಹಾರ ಕಿಟ್‌ʼ

    ಸೀಟು ಹಂಚಿಕೆ ಬಿಕ್ಕಟ್ಟನ್ನು ಪರಿಹರಿಸುವ ಪ್ರಯತ್ನದಲ್ಲಿ ಬಿಜೆಪಿ ಪ್ರಯತ್ನ ಮಾಡುತ್ತಿದೆ. ಎಲ್‌ಜೆಪಿ ನಾಯಕ ಚಿರಾಗ್ ಅವರನ್ನು ಕೇಂದ್ರ ಸಚಿವ ನಿತ್ಯಾನಂದ ರೈ ಭೇಟಿಯಾಗಿದ್ದಾರೆ. ಇದಕ್ಕೂ ಮೊದಲು, ಬಿಹಾರ ಚುನಾವಣೆಗೆ ಬಿಜೆಪಿಯ ಉಸ್ತುವಾರಿ ವಹಿಸಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಮಂಗಳವಾರ ಪಾಸ್ವಾನ್ ಅವರನ್ನು ಭೇಟಿಯಾಗಿದ್ದರು. ಅವರೊಂದಿಗೆ ಬಿಹಾರ ಸಚಿವ ಮಂಗಲ್ ಪಾಂಡೆ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಇದ್ದರು. ಇದನ್ನೂ ಓದಿ: ಬಿಗ್ ಬಾಸ್‌ಗೆ ಬೀಗ ಹಾಕಿದ್ದಕ್ಕೂ `ನಟ್ಟು ಬೋಲ್ಟ್’ ಹೇಳಿಕೆಗೂ ಸಂಬಂಧವಿಲ್ಲ: ಶಿವರಾಜ್ ತಂಗಡಗಿ

    ಈ ನಡುವೆ ಕಾಂಗ್ರೆಸ್ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಸಿದ್ದು, 20-30 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದೆ. ಆದರೆ ಇಂಡಿಯಾ, ಎನ್‌ಡಿಎ ಸೀಟು ಹಂಚಿಕೆ ಕಸರತ್ತು ಮುಗಿದ ಬಳಿಕ ಅಭ್ಯರ್ಥಿಗಳ ಹೆಸರು ಘೋಷಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ಛಲವಾದಿ ನಾರಾಯಣಸ್ವಾಮಿ ಕರ್ನಾಟಕದ ಅಪ್ರಬುದ್ಧ ವಿರೋಧ ಪಕ್ಷದ ನಾಯಕ: ಪ್ರದೀಪ್ ಈಶ್ವರ್

  • ಚುನಾವಣೆಗೂ ಮುನ್ನವೇ ಬಿಹಾರ ಯುವಜನಕ್ಕೆ ಮೋದಿ ಭರ್ಜರಿ ಗಿಫ್ಟ್‌

    ಚುನಾವಣೆಗೂ ಮುನ್ನವೇ ಬಿಹಾರ ಯುವಜನಕ್ಕೆ ಮೋದಿ ಭರ್ಜರಿ ಗಿಫ್ಟ್‌

    ಪಾಟ್ನಾ: ಬಿಹಾರದ ಯುವಕರಿಗೆ ಪ್ರಧಾನಿ ಮೋದಿ (Modi) ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ 62 ಸಾವಿರ ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಯೋಜನೆಗಳಿಗೆ ಚಾಲನೆ ಕೊಟ್ಟಿದ್ದಾರೆ. ಇದೇ ವೇಳೆ ಬಿಹಾರ ಸ್ಟೂಡೆಂಟ್ ಕ್ರೆಡಿಟ್ ಕಾರ್ಡ್ ಯೋಜನೆಗೂ (Bihar Student Credit Card Schemes) ಚಾಲನೆ ನೀಡಿದರು. ಇದು 4 ಲಕ್ಷ ರೂ.ಗಳವರೆಗೆ ಸಂಪೂರ್ಣ ಬಡ್ಡಿರಹಿತ ಶಿಕ್ಷಣ ಸಾಲ ಒದಗಿಸುತ್ತದೆ. ಆ ಮೂಲಕ ಉನ್ನತ ಶಿಕ್ಷಣದ ಆರ್ಥಿಕ ಹೊರೆ ಕಡಿಮೆ ಮಾಡಲಿದೆ

    ಹೌದು. ಕೇಂದ್ರ ಸರ್ಕಾರ ಪ್ರಾಯೋಜಕತ್ವದ 62 ಸಾವಿರ ಕೋಟಿ ಹೂಡಿಕೆಯ ‘ಪಿಎಂ-ಸೇತು’ (ಉನ್ನತೀಕರಿಸಿದ ಐಟಿಐಗಳ ಮೂಲಕ ಪ್ರಧಾನ ಮಂತ್ರಿ ಕೌಶಲ ಹಾಗೂ ಉದ್ಯೋಗದ ರೂಪಾಂತರ) ಯೋಜನೆಗೂ ಮೋದಿ ಹಸಿರು ನಿಶಾನೆ ತೋರಿದರು. ಇದೇ ವೇಳೆ ದೇಶದ 34 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿರುವ 400 ನವೋದಯ ವಿದ್ಯಾಲಯ ಹಾಗೂ 200 ಏಕಲವ್ಯ ಮಾದರಿ ವಸತಿಶಾಲೆಗಳಲ್ಲಿ ನಿರ್ಮಿಸಲಾದ 1,200 ವೃತ್ತಿಪರ ಕೌಶಲ ಕೇಂದ್ರಗಳನ್ನು ಮೋದಿ ಉದ್ಘಾಟಿಸಿದರು.

    ‘ಮುಖ್ಯಮಂತ್ರಿ ನಿಶ್ಚಯ್ ಸ್ವಯಂ ಸಹಾಯತಾ ಭತ್ತಾ’ (ಮುಖ್ಯಮಂತ್ರಿ ನಿಶ್ಚಯ ಸ್ವಯಂ ಸಹಾಯತೆ ಭತ್ಯೆ) ಯೋಜನೆಗೆ ಚಾಲನೆ ಬಿಹಾರದ 5 ಲಕ್ಷ ಪದವೀಧರರಿಗೆ ಮಾಸಿಕ 1 ಸಾವಿರ ರೂ. ನೆರವು, ಉಚಿತ ಕೌಶಲ ತರಬೇತಿ ವ್ಯವಸ್ಥೆಗೂ ಅವರು ಚಾಲನೆ ನೀಡಿದರು. ಬಿಹಾರದ ನಾಲ್ಕು ವಿಶ್ವವಿದ್ಯಾಲಯಗಳಲ್ಲಿ ಅಕಾಡೆಮಿಕ್, ಸಂಶೋಧನಾ ಕೇಂದ್ರಗಳ ಸ್ಥಾಪನೆ ಹಾಗೂ ಪಟ್ನಾದಲ್ಲಿ ಹೊಸದಾಗಿ ನಿರ್ಮಿಸಿದ ಎನ್‌ಐಟಿ ಕ್ಯಾಂಪಸ್ ಅನ್ನು ಅವರು ಲೋಕಾರ್ಪಣೆ ಮಾಡಿದರು. ಇದೇ ವೇಳೆ 4 ಸಾವಿರ ಮಂದಿಗೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 450 ಕೋಟಿ ವಿದ್ಯಾರ್ಥಿವೇತನ ವಿತರಣೆ ಮಾಡಿದ್ದಾರೆ.

    ಬಿಹಾರ ವಿದ್ಯಾರ್ಥಿ ಕ್ರೆಡಿಟ್ ಕಾರ್ಡ್ ಯೋಜನೆಯನ್ನೂ ಆರಂಭಿಸಿದ್ದು, 4 ಲಕ್ಷದವರೆಗೆ ಬಡ್ಡಿರಹಿತ ಶಿಕ್ಷಣ ಸಾಲ ಒದಗಿಸುತ್ತದೆ. ಇದು ಉನ್ನತ ಶಿಕ್ಷಣದ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ. ಈ ಯೋಜನೆಯಡಿ 3.92 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈಗಾಗಲೇ 7,880 ಕೋಟಿಗೂ ಹೆಚ್ಚಿನ ಸಾಲ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  • ಬಿಹಾರ | ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿಯಾಗಿ ನಾಲ್ವರು ಸಾವು

    ಬಿಹಾರ | ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿಯಾಗಿ ನಾಲ್ವರು ಸಾವು

    ಪಾಟ್ನಾ: ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಬಿಹಾರದ (Bihar) ಪೂರ್ಣಿಯಾದಲ್ಲಿ (Purnea) ನಡೆದಿದೆ.

    ವಂದೇ ಭಾರತ್ ಎಕ್ಸ್‌ಪ್ರೆಸ್‌ (Vande Bharat Express) ರೈಲು ಶುಕ್ರವಾರ (ಅ.3) ಬೆಳಗ್ಗೆ ಜೋಗಬಾನಿಯಿಂದ (Jogbani) ಪಾಟಲಿಪುತ್ರಕ್ಕೆ (Pataliputra) ಸಂಚರಿಸುತ್ತಿತ್ತು. ಪೂರ್ಣಿಯಾ ಪಟ್ಟಣದ ಬಳಿ ಮೇಳವೊಂದರಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿ ಮರಳುತ್ತಿದ್ದವರಿಗೆ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.ಇದನ್ನೂ ಓದಿ: ಪಾಕ್‌ನ ಪೇಶಾವರದಲ್ಲಿ ಬಾಂಬ್ ಸ್ಫೋಟ – 9 ಮಂದಿ ಸಾವು, ನಾಲ್ವರಿಗೆ ಗಾಯ

    ಸದ್ಯ ಗಾಯಗೊಂಡವರನ್ನು ಜಿಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಈ ಅಪಘಾತಕ್ಕೆ ಸಂಬಂಧಿಸಿದಂತೆ ರೈಲ್ವೆ ಕ್ರಾಸಿಂಗ್ ಸಿಬ್ಬಂದಿಯ ನಿರ್ಲಕ್ಷ್ಯವೋ? ಅಥವಾ ಜನರು ಹೈಸ್ಪೀಡ್ ರೈಲನ್ನು ನಿರ್ಲಕ್ಷಿಸಿ ಕ್ರಾಸಿಂಗ್ ದಾಟಲು ಪ್ರಯತ್ನಿಸಿದ್ದರೋ? ಎಂಬುದರ ಕುರಿತು ಮಾಹಿತಿ ತಿಳಿದುಬರಬೇಕಿದೆ. ಸದ್ಯ ರೈಲ್ವೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

  • ತೆರಿಗೆ ಪಾಲು| ಕರ್ನಾಟಕಕ್ಕೆ 3,705 ಕೋಟಿ, ಬಿಹಾರಕ್ಕೆ ಬಂಪರ್‌- ಯಾವ ರಾಜ್ಯಕ್ಕೆ ಎಷ್ಟು?

    ತೆರಿಗೆ ಪಾಲು| ಕರ್ನಾಟಕಕ್ಕೆ 3,705 ಕೋಟಿ, ಬಿಹಾರಕ್ಕೆ ಬಂಪರ್‌- ಯಾವ ರಾಜ್ಯಕ್ಕೆ ಎಷ್ಟು?

    ನವದೆಹಲಿ: ಕೇಂದ್ರ ಸರ್ಕಾರವು ಕರ್ನಾಟಕ (Karnataka)  ರಾಜ್ಯಕ್ಕೆ ತೆರಿಗೆ ಪಾಲಿನ (Tax Devolution) ಕಂತಿನ ರೂಪದಲ್ಲಿ 3,705 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿದೆ.

    ಮುಂಬರುವ ಹಬ್ಬದ ಋತುವಿನ ದೃಷ್ಟಿಯಿಂದ ಮತ್ತು ರಾಜ್ಯ ಸರ್ಕಾರಗಳಿಗೆ ಅಭಿವೃದ್ಧಿ ಹಾಗೂ ಬಂಡವಾಳ ವೆಚ್ಚಕ್ಕೆ ಹೆಚ್ಚಿನ ಹಣ ತೊಡಗಿಸಲು ಅನುಕೂಲ ಮಾಡಲು ಒಟ್ಟು 1,01,603 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಸರ್ಕಾರ ತಿಳಿಸಿದೆ.

    ಇದು ಅಕ್ಟೋಬರ್ 10 ರಂದು ಬಿಡುಗಡೆಯಾಗಬೇಕಿದ್ದ ಸಾಮಾನ್ಯ ಮಾಸಿಕ ಹಂಚಿಕೆ 81,735 ಕೋಟಿ ರೂ. ಜೊತೆಗೆ ಹೆಚ್ಚುವರಿಯಾಗಿದೆ ಎಂದು ಹೇಳಿದೆ. ಅತಿ ಹೆಚ್ಚು ಹಣ ಉತ್ತರ ಪ್ರದೇಶಕ್ಕೆ 18,227 ಕೋಟಿ ರೂ., ಚುನಾವಣೆ ನಡೆಯಲಿರುವ ಬಿಹಾರಕ್ಕೆ (Bihar) 10,219 ಕೋಟಿ ರೂ. ಹಂಚಿಕೆಯಾಗಿದೆ.  ಇದನ್ನೂ ಓದಿ:  57 ಹೊಸ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಕೇಂದ್ರ ಅಸ್ತು

    ಯಾವ ರಾಜ್ಯಕ್ಕೆ ಎಷ್ಟು?
    ಬಿಹಾರ: 10,219 ಕೋಟಿ ರೂ.
    ಛತ್ತೀಸ್‌ಗಢ: 3,462 ಕೋಟಿ ರೂ.
    ಗೋವಾ: 392 ಕೋಟಿ ರೂ.
    ಗುಜರಾತ್: 3,534 ಕೋಟಿ ರೂ.
    ಹರಿಯಾಣ: 1,111 ಕೋಟಿ ರೂ.

    ಹಿಮಾಚಲ ಪ್ರದೇಶ: 843 ಕೋಟಿ ರೂ.
    ಜಾರ್ಖಂಡ್: 3,360 ಕೋಟಿ ರೂ.
    ಕರ್ನಾಟಕ: 3,705 ಕೋಟಿ ರೂ.
    ಕೇರಳ: 1,956 ಕೋಟಿ ರೂ.
    ಮಧ್ಯಪ್ರದೇಶ: 7,976 ಕೋಟಿ ರೂ.

    ಮಹಾರಾಷ್ಟ್ರ: 6,418 ಕೋಟಿ ರೂ.
    ಮಣಿಪುರ: 727 ಕೋಟಿ ರೂ.
    ಮೇಘಾಲಯ: 779 ಕೋಟಿ ರೂ.
    ಮಿಜೋರಾಂ: 508 ಕೋಟಿ ರೂ.
    ನಾಗಾಲ್ಯಾಂಡ್: 578 ಕೋಟಿ ರೂ. ಇದನ್ನೂ ಓದಿ:  RSS ಶತಮಾನೋತ್ಸವ – ಭಾರತ ಮಾತೆಯ ಚಿತ್ರವಿರುವ 100 ರೂ. ನಾಣ್ಯ ಬಿಡುಗಡೆ

    ಒಡಿಶಾ: 4,601 ಕೋಟಿ ರೂ.
    ಪಂಜಾಬ್: 1,836 ಕೋಟಿ ರೂ.
    ರಾಜಸ್ಥಾನ: 6,123 ಕೋಟಿ ರೂ.
    ಸಿಕ್ಕಿಂ: 394 ಕೋಟಿ ರೂ.
    ತಮಿಳುನಾಡು: 4,144 ಕೋಟಿ ರೂ.

    ತೆಲಂಗಾಣ: 2,136 ಕೋಟಿ ರೂ.
    ತ್ರಿಪುರ:719 ಕೋಟಿ ರೂ.
    ಉತ್ತರ ಪ್ರದೇಶ: 18,227 ಕೋಟಿ ರೂ.
    ಉತ್ತರಾಖಂಡ: 1,136 ಕೋಟಿ ರೂ.
    ಪಶ್ಚಿಮ ಬಂಗಾಳ: 7,644 ಕೋಟಿ ರೂ.

  • ಬಿಹಾರ ಮತದಾರರ ಪಟ್ಟಿಯಿಂದ 65 ಲಕ್ಷ ಹೆಸರು ಡಿಲೀಟ್ – ಅಂತಿಮ ಪಟ್ಟಿ ರಿಲೀಸ್

    ಬಿಹಾರ ಮತದಾರರ ಪಟ್ಟಿಯಿಂದ 65 ಲಕ್ಷ ಹೆಸರು ಡಿಲೀಟ್ – ಅಂತಿಮ ಪಟ್ಟಿ ರಿಲೀಸ್

    ಪಾಟ್ನಾ: ಬಿಹಾರ (Bihar) ಮತದಾರರ ವಿಶೇಷ ತೀವ್ರ ಪರಿಷ್ಕರಣೆ (Special Intensive Revision) ಪ್ರಕ್ರಿಯೆ ಪೂರ್ಣಗೊಂಡಿದೆ. ಮತದಾರರ ಪಟ್ಟಿಯಿಂದ 68 ಲಕ್ಷ ಮತದಾರರನ್ನು ಡಿಲಿಟ್ ಮಾಡಲಾಗಿದೆ. ಅಲ್ಲದೆ, ಹೊಸದಾಗಿ 21 ಲಕ್ಷ ಮತದಾರ ಸೇರ್ಪಡೆಯಾಗಿದೆ.

    ಕೇಂದ್ರ ಚುನಾವಣಾ ಆಯೋಗ (Election Commission) ಅಂತಿಮ ಮತದಾರರ ಪಟ್ಟಿಯನ್ನು ರಿಲೀಸ್ ಮಾಡಿದ್ದು, ಬಿಹಾರದಲ್ಲಿ ಒಟ್ಟು 7.4 ಕೋಟಿ ಮತದಾರರಿದ್ದಾರೆ. ಎಸ್‌ಐಆರ್ ಪ್ರಕ್ರಿಯೆಯು ಮಾನ್ಯವಾಗಿದೆಯೇ ಎಂಬ ಬಗ್ಗೆ ಅಂತಿಮ ವಿಚಾರಣೆ ಅಕ್ಟೋಬರ್ 7ರಂದು ನಡೆಯಲಿದೆ. ಅಂತಿಮ ಪಟ್ಟಿ ಬಿಡುಗಡೆಯಾದ ನಂತರವೂ, ಯಾವುದೇ ತಪ್ಪು ಕಂಡುಬಂದರೆ ಪ್ರಕ್ರಿಯೆಯನ್ನು ರದ್ದುಗೊಳಿಸಬಹುದು ಎಂದು ಸುಪ್ರೀಂ ಕೋರ್ಟ್ ಹಿಂದಿನ ವಿಚಾರಣೆಯಲ್ಲಿ ಸ್ಪಷ್ಟಪಡಿಸಿತ್ತು. ಇದನ್ನೂ ಓದಿ: ಮುಂಬೈ ಉಗ್ರರ ವಿರುದ್ಧ ಆಪರೇಷನ್‌ಗೆ ಯುಪಿಎ ಅಡ್ಡಿ – ಚಿದಂಬರಂ ಹೇಳಿಕೆ, ಸೋನಿಯ ವಿರುದ್ಧ ಬಿಜೆಪಿ ಕೆಂಡ

    ಬಿಹಾರ ಸಿಇಒ ಕಚೇರಿಯ ಪ್ರಕಾರ, ಮತದಾರರ ಪಟ್ಟಿಯ (Voter List) ಭೌತಿಕ ಪ್ರತಿಗಳನ್ನು ಎಲ್ಲಾ ಜಿಲ್ಲಾ ಚುನಾವಣಾ ಅಧಿಕಾರಿ-ಕಮ್-ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳಿಗೆ ಲಭ್ಯವಾಗುವಂತೆ ಮಾಡಲಾಗುವುದು. ಅಂತಿಮ ಪಟ್ಟಿಯನ್ನು ಎಲ್ಲಾ ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ರಾಜಕೀಯ ಪಕ್ಷಗಳಿಗೂ ಒದಗಿಸಲಾಗುವುದು ಎಂದು ತಿಳಿಸಿದೆ. ಇದನ್ನೂ ಓದಿ: ನಾನು ಜೈಲಿಗೆ ಹೋಗ್ತೀನಿ ಅಂತ ಕುಮಾರಸ್ವಾಮಿ ಹೇಳ್ತಿದಾರೆ, ಇದಕ್ಕೆ ಕೊನೆ ಹಾಡಲೇಬೇಕು: ಡಿಕೆಶಿ

    ಅಕ್ಟೋಬರ್ 6 ಮತ್ತು 7 ರ ನಡುವೆ ಚುನಾವಣಾ ವೇಳಾಪಟ್ಟಿ ಘೋಷಣೆಯಾಗುವ ನಿರೀಕ್ಷೆಯಿದ್ದು, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅಕ್ಟೋಬರ್ 4-5ರಂದು ಬಿಹಾರಕ್ಕೆ ಭೇಟಿ ನೀಡಿ ಚುನಾವಣಾ ವ್ಯವಸ್ಥೆಗಳನ್ನು ಪರಿಶೀಲಿಸಲಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಅಕ್ಟೋಬರ್‌ ಕ್ರಾಂತಿ – ಅಶೋಕ್, ಸುನಿಲ್ ಕುಮಾರ್ ಭವಿಷ್ಯ

  • ಬಿಹಾರ ಚುನಾವಣೆಗೂ ಮುನ್ನವೇ ಭರ್ಜರಿ ಗಿಫ್ಟ್‌ – 75 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ತಲಾ 10,000 ರೂ. ವರ್ಗಾವಣೆ

    ಬಿಹಾರ ಚುನಾವಣೆಗೂ ಮುನ್ನವೇ ಭರ್ಜರಿ ಗಿಫ್ಟ್‌ – 75 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ತಲಾ 10,000 ರೂ. ವರ್ಗಾವಣೆ

    – ʻಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್‌ ಯೋಜನೆʼಗೆ ಪ್ರಧಾನಿ ಮೋದಿ ಚಾಲನೆ

    ಪಾಟ್ನಾ: ವಿಧಾನಸಭೆ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಾಗಲೇ ಬಿಹಾರದ ಮಹಿಳೆಯರಿಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi_ ಅವರಿಂದು ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಗೆ (Mukhyamantri Mahila Rojgar Yojana) ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ.

    ಈ ಯೋಜನೆಯ ಮೂಲಕ ಬಿಹಾರದಾದ್ಯಂತ (Bihar) 75 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ತಲಾ 10,000 ರೂ.ಗಳನ್ನು ನೇರವಾಗಿ ವರ್ಗಾಯಿಸಲಾಗುತ್ತಿದೆ. ಇದಕ್ಕಾಗಿ ಒಟ್ಟು 7,500 ಕೋಟಿ ರೂ.ಗಳನ್ನು ಖರ್ಚು ಮಾಡಲಾಗುತ್ತಿದೆ. ಇದನ್ನೂ ಓದಿ: MiG-21 Retires | 6 ದಶಗಳ ಸೇವೆಗೆ ವಿದಾಯ – ʻಹಾರುವ ಶವಪೆಟ್ಟಿಗೆʼ ಮಿಗ್‌-21ಗೆ ಗುಡ್‌ಬೈ ಹೇಳಿದ ಭಾರತ

    ಪ್ರತಿ ಕುಟುಂಬದ ಒಬ್ಬ ಮಹಿಳೆಗೆ ಅವರ ಆಯ್ಕೆಯ ಜೀವನೋಪಾಯ ಚಟುವಟಿಕೆಗಳಿಗಾಗಿ ಆರ್ಥಿಕ ನೆರವು ನೀಡುವ ಮೂಲಕ ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರ್ಯ ಮತ್ತು ಸಾಮಾಜಿಕ ಸಬಲೀಕರಣವನ್ನು ಉತ್ತೇಜಿಸುವುದು ಯೋಜನೆಯ ಉದ್ದೇಶವಾಗಿದೆ. ಕೃಷಿ, ಪಶುಸಂಗೋಪನೆ, ಕರಕುಶಲ ವಸ್ತುಗಳು, ಟೈಲರಿಂಗ್, ನೇಯ್ಗೆ ಮತ್ತು ಇತರ ಸಣ್ಣ-ಪ್ರಮಾಣದ ಉದ್ಯಮಗಳನ್ನು ಮಹಿಳೆಯರು ನಡೆಸಬಹುದು, ನಂತರದ ಹಂತಗಳಲ್ಲಿ 2 ಲಕ್ಷ ರೂ.ಗಳವರೆಗೆ ಹೆಚ್ಚುವರಿ ಆರ್ಥಿಕ ನೆರವು ದೊರೆಯುವ ಸಾಧ್ಯತೆ ಇದೆ.

    ಯೋಜನೆಯನ್ನು ಉದ್ಘಾಟಿಸಿದ ನಂತರ ಮಾತನಾಡಿದ ಪ್ರಧಾನಿ ಮೋದಿ, ನವರಾತ್ರಿಯ ಈ ಶುಭ ಸಂದರ್ಭದಲ್ಲಿ ಬಿಹಾರದ ಮಹಿಳೆಯರ ಸಂತೋಷದಲ್ಲಿ ಪಾಲ್ಗೊಳ್ಳಲು ನನಗೆ ಹರ್ಷವಾಗುತ್ತಿದೆ. ನಾನು ಪರದೆಯ ಮೇಲೆ ಲಕ್ಷಾಂತರ ಮಹಿಳೆಯರನ್ನ ನೋಡುತ್ತಿದ್ದೇನೆ. ಅವರ ಆಶೀರ್ವಾದ ನಮಗೆಲ್ಲರಿಗೂ ಶಕ್ತಿಯ ಮೂಲವಾಗಿದೆ. ಅವರೆಲ್ಲರಿಗೂ ನನ್ನ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು. ಇದನ್ನೂ ಓದಿ: IAF ಗ್ರೂಪ್ ಕ್ಯಾಪ್ಟನ್ ಕಳಿಸಿದ ಮೇಲ್‌ನಿಂದ ಚೈತನ್ಯಾನಂದನ ಕಾಮಪುರಾಣ ಬಯಲಾಯ್ತು!

    ಬಿಹಾರ ಸಿಎಂ ನಿತೀಶ್ ಕುಮಾರ್ ಮಾತನಾಡಿ, ಪ್ರಧಾನಿ ನಿಮಗಾಗಿ ಬಹಳಷ್ಟು ಕೆಲಸ ಮಾಡ್ತಿದ್ದಾರೆ. ಹಿಂದಿನ ಸರ್ಕಾರ ಮಹಿಳೆಯರ ಪರ ಇರಲಿಲ್ಲ. ಲಾಲು ಪ್ರಸಾದ್‌ ಯಾದವ್ ಪದಚ್ಯುತಗೊಳಿಸಿದಾಗ, ಅವರು ತಮ್ಮ ಪತ್ನಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರು. ಅವರು ತಮ್ಮ ಕುಟುಂಬದ ಬಗ್ಗೆ ಕಾಳಜಿ ವಹಿಸಿದ್ದರು. ಆದ್ರೆ ನಾವು ನಮ್ಮ ಕುಟುಂಬಗಳನ್ನ ನೋಡಿಕೊಳ್ಳುವುದಿಲ್ಲ, ಬದಲಾಗಿ ಇಡೀ ಬಿಹಾರಕ್ಕಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: 1.22 ಲಕ್ಷ ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಚಾಲನೆ