Tag: Bihar elections

  • ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ., 25 ಲಕ್ಷ ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ: ಬಿಹಾರಿಗಳಿಗೆ ಮಹಾಘಟಬಂಧನ್ ‘ಗ್ಯಾರಂಟಿ’

    ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ., 25 ಲಕ್ಷ ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ: ಬಿಹಾರಿಗಳಿಗೆ ಮಹಾಘಟಬಂಧನ್ ‘ಗ್ಯಾರಂಟಿ’

    – ಭೂರಹಿತ ಕುಟುಂಬಗಳಿಗೆ ಭೂಮಿ; ಪ್ರಣಾಳಿಕೆ ಪ್ರಮುಖ ಭರವಸೆಗಳ ಬಗ್ಗೆ ಕಾಂಗ್ರೆಸ್‌ ನಾಯಕ ಮಾಹಿತಿ

    ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣಾ (Bihar Elections) ಕಣ ರಂಗೇರಿದೆ. ಪ್ರಮುಖ ಪಕ್ಷಗಳ ರಾಜಕೀಯ ಚಟುವಟಿಕೆ ಗರಿಗೆದರಿದೆ. ಕರ್ನಾಟಕ ಮಾದರಿಯ ಗ್ಯಾರಂಟಿಗಳನ್ನು ನೀಡಿ ಬಿಹಾರ ಮತದಾರರನ್ನು ಸೆಳೆಯಲು ಕಾಂಗ್ರೆಸ್‌ ನೇತೃತ್ವದ ಮಹಾಘಟಬಂಧನ್‌ (Mahagathbandhan) ಮುಂದಾಗಿದೆ.

    ಪಾಟ್ನಾದಲ್ಲಿ ಪ್ರಣಾಳಿಕೆ ಬಿಡುಗಡೆಗೆ ಮುನ್ನ, ಕಾಂಗ್ರೆಸ್ ನಾಯಕ ಕೃಷ್ಣ ಅಲ್ಲವರು ಬಿಹಾರ ಜನತೆಗೆ ಮಹಾಘಟಬಂಧನ್‌ನ ಪ್ರಮುಖ ಭರವಸೆಗಳ ಕುರಿತು ಪೋಸ್ಟ್‌ ಹಂಚಿಕೊಂಡಿದ್ದಾರೆ. ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ., 25 ಲಕ್ಷ ರೂ.ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ, ಭೂರಹಿತ ಕುಟುಂಬಗಳಿಗೆ ಭೂಮಿ (3-5 ಡಿಸ್ಮಿಲ್ = 1300-2176 square feet) ನೀಡಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಿಹಾರ ಚುನಾವಣೆ ಎನ್‌ಡಿಎ & ಲಠ್‌ಬಂಧನ್ ನಡುವಿನ ಹೋರಾಟ: ಆರ್‌ಜೆಡಿ, ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ

    ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಸೋಮವಾರ ‘ಪಕ್ಷ ವಿರೋಧಿ ಚಟುವಟಿಕೆ’ ಆರೋಪದ ಮೇಲೆ 27 ನಾಯಕರನ್ನು ಆರು ವರ್ಷಗಳ ಅವಧಿಗೆ ಪಕ್ಷದಿಂದ ಹೊರಹಾಕಿದೆ. ಪಕ್ಷದ ರಾಜ್ಯ ಪ್ರಧಾನ ಕಚೇರಿಯ ಅಧಿಕೃತ ಹೇಳಿಕೆಯ ಪ್ರಕಾರ, ಹಲವಾರು ನಾಯಕರು ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸುವ ಅಥವಾ ವಿವಿಧ ಕ್ಷೇತ್ರಗಳಲ್ಲಿ ಅಧಿಕೃತ ಆರ್‌ಜೆಡಿ ಅಭ್ಯರ್ಥಿಗಳನ್ನು ವಿರೋಧಿಸುತ್ತಿರುವ ವರದಿಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ.

    ಬಿಹಾರ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷ ವಿರೋಧಿ ನಡವಳಿಕೆ, ಚಟುವಟಿಕೆಗಳಿಗೆ ಸಂಬಂಧಿಸಿದಂತೆ ರಾಜ್ಯ ಪ್ರಧಾನ ಕಚೇರಿಗೆ ಅಧಿಕೃತ ಮಾಹಿತಿಯ ಆಧಾರದ ಮೇಲೆ ಕ್ರಮಕೈಗೊಳ್ಳಲಾಗಿದೆ. ಇದನ್ನೂ ಓದಿ: ಪ್ರತಿ ಮನೆಗೆ ಸರ್ಕಾರಿ ಉದ್ಯೋಗ, 125 ಯೂನಿಟ್‌ ಉಚಿತ ವಿದ್ಯುತ್: ಬಿಹಾರಿಗಳಿಗೆ ಭರಪೂರ ಕೊಡುಗೆ

  • ಬಿಹಾರ ಚುನಾವಣೆಗೆ ಹಣ ಕಲೆಕ್ಷನ್‌ ಮಾಡಿರೋದು ಬಿಜೆಪಿ – ಸಿದ್ದರಾಮಯ್ಯ ತಿರುಗೇಟು

    ಬಿಹಾರ ಚುನಾವಣೆಗೆ ಹಣ ಕಲೆಕ್ಷನ್‌ ಮಾಡಿರೋದು ಬಿಜೆಪಿ – ಸಿದ್ದರಾಮಯ್ಯ ತಿರುಗೇಟು

    ಮಂಗಳೂರು: ಬಿಹಾರ ಚುನಾವಣೆಗೆ (Bihar Election 2025) ಹಣ ಕಲೆಕ್ಷನ್‌ ಮಾಡಿರೋದು ಬಿಜೆಪಿ. ಅವರು ಮಾಡುವ ಕೆಲಸವನ್ನು ನಮ್ಮ ಮೇಲೆ ಹೇಳ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು.

    ಪುತ್ತೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಹಾರ ಚುನಾವಣೆಗೆ ಕರ್ನಾಟಕವನ್ನು ಎಟಿಎಂ ಆಗಿ ಬಳಕೆ ಆರೋಪಕ್ಕೆ ಪ್ರತಿಕ್ರಿಯೆ ನೀಡಿದರು. ಚುನಾವಣೆಗೆ ಹಣ ಕಲೆಕ್ಷನ್‌ ಮಾಡಿರೋದು ಬಿಜೆಪಿ, ಅವರು ಮಾಡಿದ್ದನ್ನು ನಮ್ಮ ಮೇಲೆ ಹೇಳ್ತಿದ್ದಾರೆ ಎಂದರು. ಇದನ್ನೂ ಓದಿ: ಬೇಗ ಮದ್ವೆ ಆಗಿ, ನಾವು ಕಾಯ್ತಿದ್ದೇವೆ – ರಾಹುಲ್‌ ಗಾಂಧಿಗೆ ಅಂಗಡಿ ಮಾಲೀಕ ಮನವಿ

    ಇನ್ನೂ ಸರ್ಕಾರಿ ಜಾಗ, ಸಂಸ್ಥೆಗಳ ಆವರಣದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ಬ್ಯಾನ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಜಗದೀಶ್ ಶೆಟ್ಟರ್ ಅವರು 2013ರಲ್ಲಿ ಈ ಸುತ್ತೋಲೆ ಹೊರಡಿಸಿದ್ದರು. ಶಿಕ್ಷಣ ಇಲಾಖೆ ಮುಖಾಂತರ ಈ ಸುತ್ತೋಲೆ ಹೊರಡಿಸಲಾಗಿತ್ತು. ಯಾಕೆ ಸುತ್ತೋಲೆ ಹೊರಡಿಸಿದ್ದು? ನಾವು ಯಾವುದೇ ಆರ್ಗನೈಸೇಷನ್ ಹೆಸರು ಹೇಳಿಲ್ಲ. ನಾವು ಯಾವ ಆರ್ಗನೈಜೇಷನ್ ಹೆಸರು ಹೇಳಿದ್ದೇವೆ? ನಾವು ಆರ್‌ಎಸ್‌ಎಸ್‌ ಹೆಸರು ಹೇಳಿಲ್ಲ ಅವರು ಹೇಳಿದ್ದನ್ನೇ ನಾವು ರಿಪೀಟ್ ಮಾಡಿದ್ದೇವೆ ಎಂದು ಕುಟುಕಿದರು. ಇದನ್ನೂ ಓದಿ: ಸೈಟ್‌ ಕೊಟ್ರೆ ಮಾತ್ರ ಸಂಸಾರ, ಮಗು ಬೇಕಿದ್ರೆ ಮೈದುನನ ಜೊತೆ ಮಲಗು – ಗಂಡ, ಅತ್ತೆಯ ಟಾರ್ಚರ್‌ಗೆ ಉಪನ್ಯಾಸಕಿ ಆತ್ಮಹತ್ಯೆ

    ಎನಿ ಆರ್ಗನೈಸೇಷನ್ ಅಂತ ಜಗದೀಶ್ ಶೆಟ್ಟರ್ ನಿನ್ನೆ ಹೇಳಿದ್ದಾರೆ ಅದು ಶಿಕ್ಷಣ ಇಲಾಖೆ ಮಾಡಿದ್ದು ಅಂತ. ಹಾಗಾದ್ರೆ ಅವರು ಮುಖ್ಯಮಂತ್ರಿ ಆಗಿರ್ಲಿಲ್ವಾ? ನಾವು ಹೇಳಿರೋದು ಪರ್ಮಿಷನ್ ತಕ್ಕೊಂಡು ಮಾಡ್ಲಿ ಅಂತ. ಆದ್ರೆ ಪರ್ಮಿಷನ್ ಕೊಡಲೇಬೇಕು ಅಂತ ಏನಿಲ್ಲ. ಕಾನೂನು ಸುವ್ಯವಸ್ಥೆ ನೋಡಿ ಅನುಮತಿ ಕೊಡಲಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಮಹಾಘಟಬಂಧನ್ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಬಿಕ್ಕಟ್ಟು – 143 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಆರ್‌ಜೆಡಿ

  • ಬಿಹಾರ ಚುನಾವಣೆಗೆ ಟಿಕೆಟ್‌ ಮಿಸ್‌ – ಬಿಕ್ಕಿಬಿಕ್ಕಿ ಅತ್ತ LJP ನಾಯಕ

    ಬಿಹಾರ ಚುನಾವಣೆಗೆ ಟಿಕೆಟ್‌ ಮಿಸ್‌ – ಬಿಕ್ಕಿಬಿಕ್ಕಿ ಅತ್ತ LJP ನಾಯಕ

    ಪಾಟ್ನಾ: ಬಿಹಾರ ಚುನಾವಣೆಯಲ್ಲಿ (Bihar Elections) ಸ್ಪರ್ಧಿಸಲು ಟಿಕೆಟ್‌ ಕೊಡಲಿಲ್ಲ ಎಂದು ಎಲ್‌ಜೆಪಿ(ಆರ್‌) ನಾಯಕ ಅಭಯ್‌ ಕುಮಾರ್‌ ಸಿಂಗ್‌ ಕ್ಯಾಮೆರಾ ಮುಂದೆ ಕಣ್ಣೀರಿಟ್ಟಿರುವ ಘಟನೆ ನಡೆದಿದೆ.

    ಸಮಷ್ಟಿಪುರ ಜಿಲ್ಲೆಯ ಮೋರ್ವಾ ಕ್ಷೇತ್ರದಿಂದ ಟಿಕೆಟ್ ನಿರಾಕರಿಸಿದ್ದಕ್ಕೆ ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ನಾಯಕ ಅಭಯ್ ಕುಮಾರ್ ಸಿಂಗ್ ಕ್ಯಾಮೆರಾ ಮುಂದೆ ದುಃಖಿಸಿದ್ದಾರೆ. ಈ ದೃಶ್ಯದ ವೀಡಿಯೋ ವೈರಲ್‌ ಆಗಿದೆ. ಇದನ್ನೂ ಓದಿ: ಗುಜರಾತ್‌ ಸಂಪುಟ ಪುನಾರಚನೆ – ಜಡೇಜಾ ಪತ್ನಿ ರಿವಾಬಾಗೆ ಮಿನಿಸ್ಟರ್‌ ಪಟ್ಟ

    ಪಕ್ಷದ ಹಿರಿಯ ನಾಯಕರು ಟಿಕೆಟ್‌ ವಿತರಣೆಯಲ್ಲಿ ಪಕ್ಷಪಾತ ಮತ್ತು ಭ್ರಷ್ಟಾಚಾರ ಮಾಡಿದ್ದಾರೆ. ಯಾರೋ ನನಗಿಂತ ಹೆಚ್ಚು ಹಣ ಕೊಟ್ಟಿದ್ದಾರೆ. ಅದಕ್ಕಾಗಿಯೇ ಅವರಿಗೆ ಟಿಕೆಟ್ ಸಿಕ್ಕಿತು. ನಾನು ಈಗ ರಾಜಕೀಯ ಬಿಡುತ್ತಿದ್ದೇನೆ ಎಂದು ಸಿಂಗ್ ಗಂಭೀರ ಆರೋಪ ಮಾಡಿ ಕಣ್ಣೀರಿಟ್ಟಿದ್ದಾರೆ.

    ನಾನು 25 ವರ್ಷಗಳ ಕಾಲ ಹೋರಾಡಿದೆ. ನಂತರ 30 ವರ್ಷಗಳ ಕಾಲ ಮತ್ತೆ ಚುನಾವಣೆಗಳಲ್ಲಿ ಹೋರಾಡಿದೆ. ಇದು ಇನ್ಮುಂದೆ ನನ್ನ ಸಾಮರ್ಥ್ಯದಲ್ಲಿಲ್ಲ. ಈಗ, ನಾನು ಈ ಹೋರಾಟದಿಂದ ಮುಕ್ತನಾಗಲು ಬಯಸುತ್ತೇನೆ. ಈ ಸಮಯದಲ್ಲಿ ನಾನು ಮಾಡಬಹುದಾದ ಯಾವುದೇ ತಪ್ಪುಗಳಿಗೆ ಎಲ್ಲರೂ ನನ್ನನ್ನು ಕ್ಷಮಿಸಬೇಕು. ಈಗ ನಾನು ನಿಮ್ಮೆಲ್ಲರಿಗೂ ಸೇವೆ ಸಲ್ಲಿಸಲು ಸಮರ್ಥನಲ್ಲ. ಈ ಟಿಕೆಟ್ ವ್ಯವಸ್ಥೆಯಿಂದ ನನಗೆ ತೊಂದರೆಯಾಗಿದೆ. ನಾನು ಎಲ್ಲರನ್ನೂ ನಂಬಿದ್ದೆ ಎಂದು ಬೇಸರ ಹೊರಹಾಕಿದ್ದಾರೆ. ಇದನ್ನೂ ಓದಿ: ಯಶಸ್ವಿಯಾಗಿ ಮೊದಲ ಹಾರಾಟ ನಡೆಸಿದ ತೇಜಸ್ ಎಂಕೆ1ಎ ಯುದ್ಧ ವಿಮಾನ

    ಈ ವೀಡಿಯೊ ಬಿಹಾರದಲ್ಲಿ ರಾಜಕೀಯ ಸಂಚಲನ ಮೂಡಿಸಿದೆ. ಎನ್‌ಡಿಎ ಮೈತ್ರಿಕೂಟದೊಳಗಿನ ಅಭ್ಯರ್ಥಿಗಳ ಆಯ್ಕೆಯಲ್ಲಿನ ಪಾರದರ್ಶಕತೆಯನ್ನು ಅನೇಕರು ಪ್ರಶ್ನಿಸಿದ್ದಾರೆ.

  • ಬಿಹಾರ ಮತದಾರರ ಪಟ್ಟಿಯಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದ್ದ ಐವರು ಅಧಿಕಾರಿಗಳ ಮುಂದೆ ಹಾಜರ್‌!

    ಬಿಹಾರ ಮತದಾರರ ಪಟ್ಟಿಯಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದ್ದ ಐವರು ಅಧಿಕಾರಿಗಳ ಮುಂದೆ ಹಾಜರ್‌!

    ಪಾಟ್ನಾ: ಮತದಾರರ (Voter List) ಪಟ್ಟಿಯಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದ್ದ ಬಿಹಾರದ ಧೋರೈಯಾ ಬ್ಲಾಕ್‌ನ ಬಟ್ಸರ್ ಗ್ರಾಮದ ಐವರು ಮತದಾರರು ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ.

    ಬೂತ್ ಸಂಖ್ಯೆ 216ರ ಐವರು ಗ್ರಾಮಸ್ಥರು ಬಿಡಿಒ ಅರವಿಂದ್ ಕುಮಾರ್ ಅವರನ್ನು ಸಂಪರ್ಕಿಸಿ ʻನಾವು ಜೀವಂತವಾಗಿದ್ದೇವೆʼ ಎಂದು ಮನವಿ ಪತ್ರವನ್ನು ಸಲ್ಲಿಸಿದ್ದಾರೆ. ಬಿಹಾರ ಮೊದಲ ಹಂತದ ಚುನಾವಣೆ (Bihar Election) ಸಮಿಸುತ್ತಿರುವಾಗ ಈ ಬೆಳವಣಿಗೆ ನಡೆದಿದೆ. ಇದನ್ನೂ ಓದಿ: ಬಿಹಾರ ವಿಧಾನಸಭೆ ಚುನಾವಣೆ; ಎನ್‌ಡಿಎ-ಇಂಡಿಯಾ ಒಕ್ಕೂಟದ ನಡುವೆ ಸೀಟು ಹಂಚಿಕೆ ಲೆಕ್ಕಾಚಾರ

    ಮತದಾರರಾದ ಮೋಹನ್ ಸಾ (ಸೀರಿಯಲ್ ಸಂಖ್ಯೆ 2), ಸಂಜಯ್ ಯಾದವ್ (ಸೀರಿಯಲ್ ಸಂಖ್ಯೆ 175), ರಾಮರೂಪ್ ಯಾದವ್ (ಸೀರಿಯಲ್ ಸಂಖ್ಯೆ 211), ನರೇಂದ್ರ ಕುಮಾರ್ ದಾಸ್ (ಸೀರಿಯಲ್ ಸಂಖ್ಯೆ 364), ಮತ್ತು ವಿಶ್ವವರ್ ಪ್ರಸಾದ್ (ಸೀರಿಯಲ್ ಸಂಖ್ಯೆ 380) ಇವರನ್ನು ಮತದಾರರ ಪಟ್ಟಿಯಲ್ಲಿ ಮೃತಪಟ್ಟಿದ್ದಾರೆ ಎಂದು ನಮೋದಿಸಲಾಗಿತ್ತು.

    ಸಾಮಾಜಿಕ ಕಾರ್ಯಕರ್ತ ಇಂದ್ರದೇವ್ ಮಂಡಲ್ ನೇತೃತ್ವದಲ್ಲಿ, ಈ ಐವರು ಮತದಾರರ ಪಟ್ಟಿಯ ದೋಷವನ್ನು ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಈ ದೋಷವು ನಮ್ಮ ಮತ ಚಲಾಯಿಸುವ ಹಕ್ಕನ್ನು ತಡೆಯಬಹುದು ಎಂದು ಗ್ರಾಮಸ್ಥರು ಕಳವಳ ವ್ಯಕ್ತಪಡಿಸಿದ್ದಾರೆ.

    ಬಿಡಿಒ ತಕ್ಷಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿ, ಬಿಎಲ್‌ಒಗೆ ದೋಷ ಸರಿಪಡಿಸುವಂತೆ ಸೂಚಿಸಿದರು. ಇದೇ ವೇಳೆ ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

    ಇದಕ್ಕೂ ಮೊದಲು ಚಂಪಾರಣ್‌ನ ಬಾಗಾಹಿ ಪಂಚಾಯತ್‌ನ ದುಮ್ರಿ ಗ್ರಾಮದ ಮತದಾರರ ಪಟ್ಟಿಯಲ್ಲಿ 15 ಜನ ಮೃತಪಟ್ಟಿದ್ದಾರೆ ಎಂದು ದಾಖಲಾಗಿತ್ತು. ಇನ್ನೂ 2018 ರಲ್ಲಿ ನಿಧನರಾಗಿದ್ದ ಸೋನಿಯಾ ಶರಣ್ ಮತ್ತು ಫೆಬ್ರವರಿ 2025 ರಲ್ಲಿ ನಿಧನರಾದ ಅವರ ಮಗ ಮಣಿತ್ ಮಣಿ ಅವರನ್ನು ಅರ್ಹ ಮತದಾರರೆಂದು ತಪ್ಪಾಗಿ ನಮೋದಿಸಲಾಗಿತ್ತು. ಅಲ್ಲದೇ 2016 ರವರೆಗೆ ನಿಧನರಾದ ಜನರು ಸಹ ಇನ್ನೂ ಮತದಾರರ ಪಟ್ಟಿಯಲ್ಲಿದ್ದಾರೆ.

    ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ನಡೆಯಲಿದೆ. ನವೆಂಬರ್ 14 ರಂದು ಮತ ಎಣಿಕೆ ನಡೆಯಲಿದೆ. ಇದನ್ನೂ ಓದಿ: Bihar Election Dates 2025 | 69 ಲಕ್ಷ ಹೆಸರುಗಳು ಡಿಲೀಟ್‌, 21 ಲಕ್ಷ ಹೊಸ ಮತದಾರರ ಸೇರ್ಪಡೆ

  • ಕೇಂದ್ರ ಚುನಾವಣಾ ಆಯೋಗಕ್ಕೆ ಬಿಗ್ ರಿಲೀಫ್ – ಬಿಹಾರ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ತಡೆಗೆ ‘ಸುಪ್ರೀಂ’ ನಕಾರ

    ಕೇಂದ್ರ ಚುನಾವಣಾ ಆಯೋಗಕ್ಕೆ ಬಿಗ್ ರಿಲೀಫ್ – ಬಿಹಾರ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ತಡೆಗೆ ‘ಸುಪ್ರೀಂ’ ನಕಾರ

    ನವದೆಹಲಿ: ಕೇಂದ್ರ ಚುನಾವಣಾ ಆಯೋಗಕ್ಕೆ (Election Commission) ಬಿಗ್‌ ರಿಲೀಫ್‌ ಸಿಕ್ಕಿದೆ. ಬಿಹಾರ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ತಡೆಗೆ ಸುಪ್ರೀಂ ಕೋರ್ಟ್‌ (Supreme Court) ನಕಾರ ವ್ಯಕ್ತಪಡಿಸಿದೆ.

    ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಪರಿಷ್ಕರಣೆಯನ್ನು ಪ್ರಾರಂಭಿಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು, ಈ ಕ್ರಮವು ಪ್ರಜಾಪ್ರಭುತ್ವದ ಮೂಲ ಮತ್ತು ಮತದಾನದ ಅಧಿಕಾರಕ್ಕೆ ಹೋಗುತ್ತದೆ ಎಂದು ತಿಳಿಸಿತು. ಇದನ್ನೂ ಓದಿ: ಬಿಹಾರ ಚುನಾವಣೆಗೆ ನಿತೀಶ್ ಸಜ್ಜು – ಬಿಹಾರದ ಮಹಿಳೆಯರಿಗೆ ಉದ್ಯೋಗದಲ್ಲಿ 35% ಮೀಸಲಾತಿ ಘೋಷಣೆ

    ಎಸ್‌ಐಆರ್‌ನ ಸಮಯ ಮತ್ತು ವಿಧಾನವನ್ನು ಪ್ರಶ್ನಿಸುವ ಅರ್ಜಿಗಳ ಗುಂಪನ್ನು ಪರಿಶೀಲಿಸಲು ನ್ಯಾಯಾಲಯ ಒಪ್ಪಿಕೊಂಡಿದ್ದು, ಮುಂದಿನ ವಿಚಾರಣೆಯನ್ನು ಜುಲೈ 28 ಕ್ಕೆ ನಿಗದಿಪಡಿಸಲಾಗಿದೆ. ಚುನಾವಣಾ ಆಯೋಗಕ್ಕೆ ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸಲು ಜುಲೈ 21 ರವರೆಗೆ ಸಮಯ ನೀಡಲಾಗಿದೆ. ಇನ್ನೂ ಯಾವುದೇ ಮಧ್ಯಂತರ ಆದೇಶವನ್ನು ಹೊರಡಿಸಲಾಗಿಲ್ಲ.

    ಗುರುವಾರ ಸುಪ್ರೀಂ ಕೋರ್ಟ್, ಬಿಹಾರದಲ್ಲಿ ಭಾರತೀಯ ಚುನಾವಣಾ ಆಯೋಗದ (ECI) ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಬಗ್ಗೆ ತೀಕ್ಷ್ಣವಾದ ಪ್ರಶ್ನೆಗಳನ್ನು ಎತ್ತಿದೆ. ಆಧಾರ್ ಕಾರ್ಡ್, ವೋಟರ್ ಐಡಿ, ರೇಷನ್ ಕಾರ್ಡ್ ಸೂಕ್ತ ದಾಖಲೆ ಎಂದು ಪರಿಗಣಿಸುವಂತೆ ಸುಪ್ರೀಂ ಕೋರ್ಟ್ ಸಲಹೆ ನೀಡಿದೆ. ನವೀಕರಣದ ಟೈಮಿಂಗ್ ಬಗ್ಗೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ, ಚುನಾವಣಾ ಆಯೋಗದ ಕಾರ್ಯವೈಖರಿ ಬಗ್ಗೆ ಅನುಮಾನಗಳಿಲ್ಲ: 1 ವಾರದಲ್ಲಿ ಉತ್ತರಿಸುವಂತೆ ನೋಟಿಸ್ ವಿಚಾರಣೆ ಜು.28ಕ್ಕೆ ಕೋರ್ಟ್‌ ಮುಂದೂಡಿದೆ. ಇದನ್ನೂ ಓದಿ: ರಾಜಕೀಯ ನಿವೃತ್ತಿ ಬಳಿಕ ಕೃಷಿಯಲ್ಲಿ ತೊಡಗಿಕೊಳ್ತೀನಿ: ಅಮಿತ್ ಶಾ‌

    ಬಿಹಾರದಲ್ಲಿ ಮತದಾರರ ಪಟ್ಟಿಯ SIR ಅಡಿಯಲ್ಲಿ ಪೌರತ್ವವನ್ನು ಪರಿಶೀಲಿಸಬೇಕಾದರೆ, ನೀವು ಬೇಗನೆ ಕ್ರಮ ಕೈಗೊಳ್ಳಬೇಕಿತ್ತು. ಇದು ಸ್ವಲ್ಪ ತಡವಾಗಿದೆ. ಚುನಾವಣೆಗಳಿಗೆ ಬಹಳ ಹತ್ತಿರದಲ್ಲಿ ಮತದಾರರ ಪಟ್ಟಿಯನ್ನು ಪರಿಷ್ಕರಿಸುವುದರಿಂದ ಉಂಟಾಗುವ ಸಂಭಾವ್ಯ ಪರಿಣಾಮಗಳು ಉಂಟಾಗಬಹುದು ಎಂದು ಚುನಾವಣಾ ಆಯೋಗಕ್ಕೆ ನ್ಯಾಯಮೂರ್ತಿ ಧುಲಿಯಾ ತಿಳಿಸಿದ್ದಾರೆ.

    ಚುನಾವಣಾ ಆಯೋಗಕ್ಕೆ ಅಂತಹ ಪರಿಷ್ಕರಣೆ ನಡೆಸುವ ಅಧಿಕಾರವಿಲ್ಲ ಎಂಬ ವಿರೋಧ ಪಕ್ಷದ ನಾಯಕರು ಮತ್ತು ನಾಗರಿಕ ಸಮಾಜದ ಗುಂಪುಗಳು ಸೇರಿದಂತೆ ಅರ್ಜಿದಾರರ ವಾದವನ್ನು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಮತದಾರರ ಪಟ್ಟಿಯನ್ನು ಪರಿಷ್ಕರಿಸುವುದು ಚುನಾವಣಾ ಆಯೋಗದ ಸಾಂವಿಧಾನಿಕ ಜವಾಬ್ದಾರಿಯಾಗಿದೆ ಎಂದು ಪೀಠವು ಸ್ಪಷ್ಟಪಡಿಸಿದೆ.

  • ಬಿಹಾರ ಚುನಾವಣೆಗೆ ನಿತೀಶ್ ಸಜ್ಜು – ಬಿಹಾರದ ಮಹಿಳೆಯರಿಗೆ ಉದ್ಯೋಗದಲ್ಲಿ 35% ಮೀಸಲಾತಿ ಘೋಷಣೆ

    ಬಿಹಾರ ಚುನಾವಣೆಗೆ ನಿತೀಶ್ ಸಜ್ಜು – ಬಿಹಾರದ ಮಹಿಳೆಯರಿಗೆ ಉದ್ಯೋಗದಲ್ಲಿ 35% ಮೀಸಲಾತಿ ಘೋಷಣೆ

    ಪಾಟ್ನಾ: ಬಿಹಾರ ಚುನಾವಣೆಗೆ ಸಿಎಂ ನಿತೀಶ್‌ ಕುಮಾರ್‌ (Nitish Kumar) ಸಜ್ಜಾಗಿದ್ದಾರೆ. ಬಿಹಾರ ಮಹಿಳೆಯರಿಗೆ ಉದ್ಯೋಗದಲ್ಲಿ 35% ಮೀಸಲಾತಿ ಘೋಷಣೆ ಮಾಡಿದ್ದಾರೆ.

    ರಾಜ್ಯ ಸರ್ಕಾರಿ ಉದ್ಯೋಗಗಳಲ್ಲಿ ಈ ಮೀಸಲಾತಿ ಕಲ್ಪಿಸಲಾಗುವುದು. ಎಲ್ಲಾ ವರ್ಗದ ಮಹಿಳೆಯರಿಗೂ ಸೌಲಭ್ಯ ಸಿಗಲಿದೆ. ಆದರೆ, ಅವರು ಬಿಹಾರದ (Bihar) ಖಾಯಂ ನಿವಾಸಿಗಳಾಗಿರಬೇಕು ಎಂದು ಎಕ್ಸ್‌ ಖಾತೆಯಲ್ಲಿ ಸಿಎಂ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಹತ್ಯೆ – ಪ್ರಮುಖ ಆರೋಪಿ ಎನ್‌ಕೌಂಟರ್‌ಗೆ ಬಲಿ

    ಆಡಳಿತದಲ್ಲಿ ಮಹಿಳೆಯರ ಪ್ರಾತಿನಿಧ್ಯ ಹೆಚ್ಚಾಗಬೇಕು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ. ಪಾಟ್ನಾದಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಈ ಘೋಷಣೆ ಹೊರಬಿದ್ದಿದೆ.

    ಮೀಸಲಾತಿಯ ಜೊತೆಗೆ, ಬಿಹಾರ ಸರ್ಕಾರವು ರಾಜ್ಯದ ಯುವಜನರ ಅಗತ್ಯತೆಗಳು ಮತ್ತು ಆಕಾಂಕ್ಷೆಗಳನ್ನು ಪೂರೈಸುವ ಗುರಿಯನ್ನು ಹೊಂದಿರುವ ಬಿಹಾರ ಯುವ ಆಯೋಗ ಎಂಬ ಹೊಸ ಶಾಸನಬದ್ಧ ಸಂಸ್ಥೆಯ ರಚನೆಗೆ ಅನುಮೋದನೆ ನೀಡಿತು. ಇದನ್ನೂ ಓದಿ: ಬಿಹಾರ ಮತದಾರರ ಪಟ್ಟಿ ನವೀಕರಣ: ಜುಲೈ 10 ರಂದು ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ

    ಬಿಹಾರದ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸಲು, ಅವರಿಗೆ ತರಬೇತಿ ನೀಡಲು ಮತ್ತು ಅವರನ್ನು ಸಬಲೀಕರಣಗೊಳಿಸಲು, ಸಮರ್ಥರನ್ನಾಗಿ ಮಾಡಲು, ಸರ್ಕಾರ ಬಿಹಾರ ಯುವ ಆಯೋಗವನ್ನು ರಚಿಸಲು ನಿರ್ಧರಿಸಿದೆ. ಇಂದು ಇದಕ್ಕೆ ಸಂಪುಟ ಅನುಮೋದನೆ ನೀಡಿದೆ ಎಂದು ನಿತೀಶ್ ಕುಮಾರ್ ತಿಳಿಸಿದ್ದಾರೆ.

    ಆಯೋಗವು ಯುವ ಕಲ್ಯಾಣ, ಶಿಕ್ಷಣ, ಉದ್ಯೋಗ ಮತ್ತು ನೀತಿ ಸುಧಾರಣೆಗಳ ಕುರಿತು ಸರ್ಕಾರಕ್ಕೆ ಸಲಹೆ ನೀಡುತ್ತದೆ. ಕೌಶಲ್ಯ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಮತ್ತು ಬಿಹಾರದೊಳಗೆ ಖಾಸಗಿ ವಲಯದ ಉದ್ಯೋಗಗಳಲ್ಲಿ ಸ್ಥಳೀಯ ಯುವಕರಿಗೆ ಆದ್ಯತೆ ಸಿಗುವಂತೆ ಮೇಲ್ವಿಚಾರಣೆ ಮಾಡಲು ಇದು ಇಲಾಖೆಗಳೊಂದಿಗೆ ಕೆಲಸ ಮಾಡುತ್ತದೆ. ಇದು ಹೊರಗೆ ಅಧ್ಯಯನ ಮಾಡುತ್ತಿರುವ ಅಥವಾ ಉದ್ಯೋಗದಲ್ಲಿರುವ ರಾಜ್ಯದ ವಿದ್ಯಾರ್ಥಿಗಳು ಮತ್ತು ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುತ್ತದೆ.

  • ಬಿಹಾರದಲ್ಲಿ ಸೀತಾ ಮಾತೆಯ ಭವ್ಯ ಮಂದಿರ ನಿರ್ಮಾಣಕ್ಕೆ ಬಿಜೆಪಿ ಪ್ಲ್ಯಾನ್‌

    ಬಿಹಾರದಲ್ಲಿ ಸೀತಾ ಮಾತೆಯ ಭವ್ಯ ಮಂದಿರ ನಿರ್ಮಾಣಕ್ಕೆ ಬಿಜೆಪಿ ಪ್ಲ್ಯಾನ್‌

    – ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಸೀತಾ ಮಂದಿರ ನಿರ್ಮಾಣ ಘೋಷಿಸಿದ ಅಮಿತ್ ಶಾ

    ಪಾಟ್ನಾ: ಅಯೋಧ್ಯೆ ಶ್ರೀರಾಮ ಮಂದಿರ ಮಾದರಿಯಲ್ಲೇ ಬಿಹಾರದಲ್ಲಿ ಸೀತಾ ಮಾತೆಯ ಭವ್ಯ ಮಂದಿರ (Sita Mata Mandir) ನಿರ್ಮಿಸುವುದಾಗಿ ಕೇಂದ್ರ ಸಚಿವ ಅಮಿತ್‌ ಶಾ (Amit Shah) ಘೋಷಸಿದ್ದಾರೆ.

    ಮುಂಬರುವ ಬಿಹಾರ ವಿಧಾನಸಭಾ ಚುನಾವಣೆ (Bihar Elections) ಹಿನ್ನೆಲೆ ಅಮಿತ್‌ ಶಾ ಸೀತಾ ಮಂದಿರ ಘೋಷಿಸಿದ್ದು, ಬಿಜೆಪಿಯ ಈ ನಡೆಯನ್ನು ಜೆಡಿಯು ಮತ್ತು ಎಲ್‌ಜೆಪಿ ಸೇರಿದಂತೆ ಮಿತ್ರಪಕ್ಷಗಳು ಸ್ವಾಗತಿಸಿವೆ. ಇದನ್ನೂ ಓದಿ: ಸರ್ಕಾರಿ ವೈದ್ಯಕೀಯ ಕಾಲೇಜು ವೈದ್ಯರ ಹಾಜರಾತಿಗೆ ಬಯೋ ಮೆಟ್ರಿಕ್ ವ್ಯವಸ್ಥೆ: ಶರಣು ಪ್ರಕಾಶ್ ಪಾಟೀಲ್

    ಗುಜರಾತ್‌ನಲ್ಲಿ ಶಾಶ್ವತ ಮಿಥಿಲಾ ಮಹೋತ್ಸವ 2025 ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅಮಿತ್‌ ಶಾ, ಬಿಹಾರ ಪ್ರದೇಶವು ಪ್ರಾಚೀನ ಕಾಲದಿಂದಲೂ ಪ್ರಜಾಪ್ರಭುತ್ವ ಮತ್ತು ತತ್ವಶಾಸ್ತ್ರವನ್ನು ಸಶಕ್ತಗೊಳಿಸುವ ಐತಿಹಾಸಿಕ ಹಿನ್ನೆಲೆ ಹೊಂದಿದೆ. ಇಲ್ಲಿ ಸೀತಾ ಮಾತೆಯ ಭವ್ಯ ಮಂದಿರ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದರು.

    ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಬಿಹಾರಕ್ಕೆ ಹೋಗಿದ್ದಾಗ ರಾಮ ಮಂದಿರ ನಿರ್ಮಾಣವಾಗಿದೆ ಎಂದು ಹೇಳಿದ್ದೆ. ಈಗ ಸೀತಾ ಮಾತೆಯ ಮಂದಿರ ನಿರ್ಮಾಣ ಮಾಡುವ ಕಾಲ ಬಂದಿದೆ. ಈ ದೇವಾಲಯ ಇಡೀ ಜಗತ್ತಿಗೆ ಸ್ತ್ರೀಶಕ್ತಿಯ ಸಂದೇಶವನ್ನು ನೀಡುತ್ತದೆ ಎಂದು ಒತ್ತಿ ಹೇಳಿದರು. ಇದನ್ನೂ ಓದಿ: ಮಕ್ಕಳಲ್ಲೂ ಕಾಡ್ತಿದೆ ಮಾರಕ ಕ್ಯಾನ್ಸರ್ – ಅಂಕಿ ಅಂಶ ಬಿಚ್ಚಿಟ್ಟ ಶರಣು ಪ್ರಕಾಶ್ ಪಾಟೀಲ್

    ಗುಜರಾತ್‌ನಲ್ಲಿ ನೆಲೆಸಿರುವ ಮಿಥಿಲಾಂಚಲ್ ಬೆಳವಣಿಗೆಗೆ ಬಿಹಾರದ ಜನ ಗಣನೀಯ ಕೊಡುಗೆ ನೀಡಿದ್ದಾರೆ. ಮಿಥಿಲಾ ಭೂಮಿ ರಾಮಾಯಣ ಮತ್ತು ಮಹಾಭಾರತದ ಕಾಲದಿಂದಲೂ ಬುದ್ಧಿಜೀವಿಗಳ ಭೂಮಿಯಾಗಿದೆ. ಅದೇ ರೀತಿ ʻವಿದೇಹʼ ಪ್ರಾಚೀನ ಸಾಮ್ರಾಜ್ಯವು ಪ್ರಜಾಪ್ರಭುತ್ವದ ತಾಯಿಯಾಗಿದೆ ಎಂದರಲ್ಲದೇ ಭಾರತದ ಆರು ಪ್ರಮುಖ ಫಿಲಾಸಫಿಗಳಲ್ಲಿ 4 ಮಿಥಿಲಾಂಚಲ್‌ನಿಂದ ಬಂದಿವೆ ಎಂದು ಶಾ ಶ್ಲಾಘಿಸಿದ್ರು. ಇದನ್ನೂ ಓದಿ: ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ: ಹಿಂದೂ ಚಿಂತಕ ಚಕ್ರವರ್ತಿ ಸೂಲಿಬೆಲೆ ವಿವಾದದ ಮಾತು

  • ಇವಿಎಂ ಬಗ್ಗೆ ಅನುಮಾನವಿದೆ, ಬಿಜೆಪಿಗೆ ಎಷ್ಟು ಬೇಕು ಅಷ್ಟು ಸ್ಥಾನಗಳಿಗೆ ತಂದು ನಿಲ್ಲಿಸಿದ್ರು-  ಸತೀಶ್‌ ಜಾರಕಿಹೊಳಿ

    ಇವಿಎಂ ಬಗ್ಗೆ ಅನುಮಾನವಿದೆ, ಬಿಜೆಪಿಗೆ ಎಷ್ಟು ಬೇಕು ಅಷ್ಟು ಸ್ಥಾನಗಳಿಗೆ ತಂದು ನಿಲ್ಲಿಸಿದ್ರು- ಸತೀಶ್‌ ಜಾರಕಿಹೊಳಿ

    ಚಿಕ್ಕೋಡಿ: ಬಿಹಾರ ಚುನಾವಣಾ ಫಲಿತಾಂಶದಲ್ಲಿ ಇವಿಎಂ ಯಂತ್ರದ ಬಗ್ಗೆ ಅನುಮಾನವಿದೆ. ಇವಿಎಂ ಬಗ್ಗೆ ಹಿಂದೆಯೂ ಅನುಮಾನವಿತ್ತು ಮುಂದೆಯು ಇರುತ್ತದೆ. ಬ್ಯಾಲೆಟ್ ಪೇಪರ್‌ ಬಳಕೆಯಿಂದ ಸತ್ಯಾಂಶ ಹೊರಬರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

    ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೋಟುರ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ ಪಬ್ಲಿಕ್ ಟಿವಿ ಜೊತೆ ಅವರು ಮಾತನಾಡಿದರು.

    ಮುಂದುವರಿದ ರಾಷ್ಟ್ರಗಳು ಈಗಲೂ ಬ್ಯಾಲೆಟ್ ಪೇಪರ್ ಬಳಕೆ ಮಾಡುತ್ತಿವೆ. ಬಿಹಾರ ಚುನಾವಣೆಯಲ್ಲಿ ಬಿಜೆಪಿಗೆ ಎಷ್ಟು ಬೇಕು ಅಷ್ಟು ಸ್ಥಾನಗಳಿಗೆ ತಂದು ನಿಲ್ಲಿಸಿದ್ರು  ಎಂದು ಗಂಭೀರ ಆರೋಪ ಮಾಡಿದರು.

    ಕಾಂಗ್ರೆಸ್ ಇಬ್ಭಾಗವಾಗುತ್ತದೆ ಎಂಬ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿಕೆಗೆ ಟಾಂಗ್ ನೀಡಿದ ಅವರು, ಸವದಿಯವರು ಹೇಳಿದರೆ ನಮ್ಮ ಪಕ್ಷ ಇಬ್ಬಾಗವಾಗುವುದಿಲ್ಲ. ನಮ್ಮ ಪಕ್ಷ ಕಾರ್ಯಕರ್ತರಿಂದ ಕೂಡಿದೆ. ಆರ್ ಆರ್ ನಗರ ಹಾಗೂ ಶಿರಾದಲ್ಲಿ ಬಿಜೆಪಿ ಗೆದ್ದಿದೆ. ಜನರು ಆಡಳಿತ ಪಕ್ಷವನ್ನು ಬೆಂಬಲಿಸುವುದು ಸಾಮಾನ್ಯ. ಅಧಿಕಾರದಲ್ಲಿ ನಾವು ಇದ್ದಾಗ ಜಯಗಳಿಸಿದ್ದೆವು. ಈ ಸೋಲಿನಿಂದ ಕಾಂಗ್ರೆಸ್ ಗೆ ಯಾವುದೇ ಹಿನ್ನಡೆಯಾಗಿಲ್ಲ ಜವಾಬ್ದಾರಿ ಇನ್ನಷ್ಟು ಹೆಚ್ಚಿದೆ . ನಮ್ಮ ಗುರಿ ಮುಂಬರುವ ಮಹಾ ಚುನಾವಣಾ ಮೇಲಿದೆ ಎಂದರು.

  • ಮಹಿಳೆಯರಿಂದ ಬಿಹಾರ ಲೆಕ್ಕಾಚಾರ ಉಲ್ಟಾ – ಮತ್ತೆ ಅಧಿಕಾರಕ್ಕೆ ಎನ್‍ಡಿಎ

    ಮಹಿಳೆಯರಿಂದ ಬಿಹಾರ ಲೆಕ್ಕಾಚಾರ ಉಲ್ಟಾ – ಮತ್ತೆ ಅಧಿಕಾರಕ್ಕೆ ಎನ್‍ಡಿಎ

    – ಮೋದಿ ಸರ್ಕಾರದ ಸಾಧನೆಗೆ ಬಿತ್ತು ವೋಟು
    – ಸೈಲೆಂಟ್ ವೋಟರ್ಸ್ ಕಮಾಲ್, ಕಾಂಗ್ರೆಸ್ ಧೂಳೀಪಟ

    ಪಾಟ್ನಾ: ಬಿಹಾರ ಚುನಾವಣೆಯಲ್ಲಿ ಈ ಬಾರಿ ನಿತೀಶ್ ಕುಮಾರ್ ನೇತೃತ್ವದ ಎನ್‍ಡಿಎ ಮೈತ್ರಿಕೂಟ ಹೀನಾಯವಾಗಿ ಸೋಲುತ್ತದೆ ಎಂದು ಹಲವಾರು ಸಮೀಕ್ಷೆಗಳು ಹೇಳಿತ್ತು. ಆದರೆ ಮತ ಫಲಿತಾಂಶ ಬಂದಾಗ ಸಮೀಕ್ಷೆಗಳು ಉಲ್ಟಾವಾಗಿದೆ. ಎನ್‍ಡಿಎ ಮೈತ್ರಿಕೂಟ 125 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಏರಿದೆ. ಜೆಡಿಯುಗೆ ಹಿನ್ನಡೆಯಾಗಿದ್ದರೂ ಬಿಜೆಪಿ ನೆರವಿನಿಂದ ನಿತೀಶ್ ಕುಮಾರ್ ಮೂರನೇ ಬಾರಿ ಅಧಿಕಾರಕ್ಕೆ ಏರಲು ಕಾರಣವಾಗಿದ್ದು ಮಹಿಳೆಯರ ಮತಗಳು ಎಂಬ ವಿಶ್ಲೇಷಣೆ ಕೇಳಿ ಬಂದಿದೆ.

    ಹೌದು. ಪ್ರತಿಬಾರಿ ಬಿಹಾರ ಚುನಾವಣೆಯಲ್ಲಿ ಮಹಿಳೆಯರು ಹೆಚ್ಚಿನ ಪ್ರಮಾಣದಲ್ಲಿ ಮತ ಹಾಕುತ್ತಿದ್ದದ್ದಾರೆ. ಈ ಮತಗಳು ಬಿಜೆಪಿ, ನಿತೀಶ್ ಪರವಾಗಿ ಬೀಳುತ್ತಿರುವುದರಿಂದ ಎನ್‍ಡಿಎ ಮೈತ್ರಿಕೂಟಕ್ಕೆ ವರವಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

    2010ರಲ್ಲಿ ಮಹಿಳೆಯರು ಶೇ.54.5ರಷ್ಟು ಮತದಾನ ಮಾಡಿದ್ದರೆ ಪುರುಷರು ಶೇ.51.1 ರಷ್ಟು ಮತದಾನ ಮಾಡಿದ್ದರು. 2015ರಲ್ಲಿ ಮಹಿಳೆಯರು ಶೇ.60.5 ರಷ್ಟು ಮತದಾನ ಮಾಡಿದ್ದರೆ ಪುರುಷರು ಶೇ.53.3ರಷ್ಟು ಮತದಾನ ಮಾಡಿದ್ದರು. ಈ ಬಾರಿ ಶೇ.59.4ರಷ್ಟು ಮಹಿಳೆಯರು ಮತದಾನ ಮಾಡಿದ್ದರೆ ಶೇ.54.7ರಷ್ಟು ಪುರುಷರು ಮತದಾನ ಮಾಡಿದ್ದಾರೆ.

    ಒಟ್ಟು ಮೂರು ಹಂತದಲ್ಲಿ ನಡೆದ ಬಿಹಾರ ಚುನಾವಣೆಯಲ್ಲಿ ಶೇ.57.5ರಷ್ಟು ಮತದಾನ ನಡೆದಿದೆ. 2015ರ ಶೇ.56.6ರಷ್ಟು ಮತದಾನ ನಡೆದಿತ್ತು. ಅದರಲ್ಲೂ ವಿಶೇಷವಾಗಿ 11 ವಿಧಾನಸಭಾ ಕ್ಷೇತ್ರದಲ್ಲಿ ಶೇ.70 ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮಹಿಳೆಯರು ಮತದಾನ ಮಾಡಿದ್ದರೆ, 141 ಕ್ಷೇತ್ರದಲ್ಲಿ ಶೇ.60ಕ್ಕೂ ಹೆಚ್ಚು ಪ್ರಮಾಣದಲ್ಲಿ ಮಹಿಳೆಯರು ಮತದಾನ ಮಾಡಿದ್ದರು.

    ಇದನ್ನೇ  ಪುರುಷ ಮತದಾರರಿಗೆ ಹೋಲಿಕೆ ಮಾಡಿದರೆ 37 ಕ್ಷೇತ್ರಗಳಲ್ಲಿ ಶೇ.60 ರಷ್ಟು ಪುರುಷರು ಮತದಾನ ಮಾಡಿದ್ದಾರೆ. ಯಾವುದೇ ಕ್ಷೇತ್ರದಲ್ಲಿ ಶೇ.70ಕ್ಕಿಂತ ಹೆಚ್ಚಿನ ಮತದಾನ ಪುರುಷರಿಂದ ನಡೆದಿಲ್ಲ.

    ಸಾಧಾರಣವಾಗಿ ಲೋಕಸಭಾ ಚುನಾವಣೆ ಬಂದಾಗ ದೇಶದ ವಿಚಾರಗಳು, ಅಂತಾರಾಷ್ಟ್ರೀಯ ವಿಚಾರಗಳು ಜಾಸ್ತಿ ಚರ್ಚೆ ಆಗುತ್ತದೆ. ವಿಧಾನಸಭಾ ಚುನಾವಣೆ ಬಂದಾಗ ರಾಜ್ಯದ ವಿಷಯಗಳೇ ನಾಯಕರ ಪ್ರಚಾರ ಭಾಷಣದಲ್ಲಿ ಇರುತ್ತದೆ. ಆದರೆ ಈ ಬಾರಿ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ಸಾಧನೆಗಿಂತ ಹೆಚ್ಚಾಗಿ ಕೇಂದ್ರ ಸರ್ಕಾರದ ಸಾಧನೆಗಳನ್ನೇ ತಿಳಿಸುತ್ತಾ ಹೋದರು. ಈ ಪ್ರಚಾರ ತಂತ್ರ ಮಹಿಳೆಯರನ್ನು ಸೆಳೆದಿದ್ದು ಬಿಜೆಪಿಗೆ ವೋಟು ಬಿದ್ದಿದೆ. ಪ್ರಧಾನಿ ಮೋದಿ ಮತ್ತು ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಸಾಧನೆಯನ್ನೇ ಜಾಸ್ತಿ ಪ್ರಚಾರ ಮಾಡಿದ್ದರು. ಈ ಕಾರಣದಿಂದಲೇ ಬಿಜೆಪಿ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

    ಬಿಹಾರ ಚುನಾವಣೆಗೆ ತೆರಳಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ, ಬಿಜೆಪಿಯ ರಾಷ್ಟ್ರೀಯ ಯುವ ಮೋರ್ಚಾದ ಅಧ್ಯಕ್ಷ ತೇಜಸ್ವಿ ಸೂರ್ಯ ಮಹಿಳೆಯರ ಪಾತ್ರದ ಬಗ್ಗೆ ವಿಶೇಷವಾಗಿ ಉಲ್ಲೇಖಿಸಿ ಟ್ವೀಟ್ ಮಾಡಿದ್ದಾರೆ. ಬಿಹಾರ ಚುನಾವಣೆಯ ಸಮಯದಲ್ಲಿ ಸಮಾವೇಶದಲ್ಲಿ ರಸ್ತೆ ಪ್ರಚಾರದ ವೇಳೆ ಮಹಿಳೆಯರು ಮಾಧ್ಯಮಗಳಲ್ಲಿ ಕಾಣಿಸಿರಲಿಲ್ಲ. ಆದರೆ ಈ ಮಹಿಳೆಯರು ಪ್ರಧಾನಿ ನರೇಂದ್ರ ಮೋದಿಯವರ ಅತಿ ದೊಡ್ಡ ಬೆಂಬಲಿಗರು. ಉಚಿತ ಗ್ಯಾಸ್ ಸೌಲಭ್ಯ, ಟ್ಯಾಪ್ ನೀರಿನ ಸೌಲಭ್ಯ, ಮನೆ ನಿರ್ಮಾಣ, ಶೌಚಾಲಯ, 1 ರೂ. ಸ್ಯಾನಿಟರಿ ಪ್ಯಾಡ್.. ಯಾವೊಬ್ಬ ನಾಯಕ ಮಹಿಳೆಯರಿಗೆ ಇಷ್ಟೊಂದು ಕೆಲಸ ಮಾಡಿಲ್ಲ ಎಂದು ಬರೆದುಕೊಂಡಿದ್ದಾರೆ.

    ಮಾಧ್ಯಮ ಸಮೀಕ್ಷೆಗಳಲ್ಲಿ ಸಾಧಾರಣವಾಗಿ ಪುರುಷರೇ ಜಾಸ್ತಿ ಭಾಗಿಯಾಗುತ್ತಾರೆ. ಹೀಗಾಗಿ ಮಹಿಳೆಯರ ಅಭಿಪ್ರಾಯ ಸರಿಯಾಗಿ ಸಂಗ್ರಹವಾಗದಿರುವ ಕಾರಣ ಚುನಾವಣೋತ್ತರ ಸಮೀಕ್ಷೆಗಳು ಹುಸಿಯಾಗಿದೆ. ಬಿಹಾರ ಚುನಾವಣೆಯಲ್ಲಿ ಆರ್‌ಜೆಡಿ 75, ಬಿಜೆಪಿ 74, ಜೆಡಿಯು 43, ಕಾಂಗ್ರೆಸ್ 19, ಸ್ಥಾನಗಳನ್ನು ಗೆದ್ದುಕೊಂಡಿದೆ. ಎನ್‍ಡಿಎ ಮೈತ್ರಿಕೂಟ 125, ಮಹಾಮೈತ್ರಿ 110, ಎಲ್‍ಜೆಪಿ 1, ಇತರರರು 7 ಸ್ಥಾನಗಳನ್ನು ಗೆದ್ದುಕೊಂಡಿದ್ದಾರೆ.

  • ಸಮೀಕ್ಷೆಗಳು ಉಲ್ಟಾ ಆಗುತ್ತಾ? – ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಮುನ್ನಡೆ

    ಸಮೀಕ್ಷೆಗಳು ಉಲ್ಟಾ ಆಗುತ್ತಾ? – ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಮುನ್ನಡೆ

    ಪಾಟ್ನಾ: ಬಿಹಾರದಲ್ಲಿ ಈ ಬಾರಿ ಮಹಾ ಮೈತ್ರಿ ಅಧಿಕಾರಕ್ಕೆ ಏರಲಿದೆ ಎಂದು ಹಲವು ಚುನಾವಣೋತ್ತರ ಸಮೀಕ್ಷೆಗಳು ಹೇಳಿದ್ದವು. ಆದರೆ ಸದ್ಯದ ಟ್ರೆಂಡ್‌ ಗಮನಿಸುವಾಗ ಮತ್ತೆ ನಿತೀಶ್‌ ಕುಮಾರ್‌ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಏರುವ ಸಾಧ್ಯತೆಯಿದೆ.

    ಸದ್ಯದ ಟ್ರೆಂಡ್‌ ಪ್ರಕಾರ ಎನ್‌ಡಿಎ 131, ಮಹಾಮೈತ್ರಿ 95 ಇತರರು 17 ಸ್ಥಾನದಲ್ಲಿ ಮುನ್ನಡೆಯಲ್ಲಿದ್ದಾರೆ.

    15 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಸಿಎಂ ನಿತೀಶ್ ಕುಮಾರ್ ನೇತೃತ್ವದ ಬಿಜೆಪಿ ಮತ್ತು ಜೆಡಿಯು ಮೈತ್ರಿಕೂಟ ಅಧಿಕಾರ ಕಳೆದುಕೊಳ್ಳುವ ನಿರೀಕ್ಷೆ ಇದೆ. ಆರ್‌ಜೆಡಿ, ಜೆಡಿಯು ಮತ್ತು ಎಡಪಕ್ಷಗಳ ಮಹಾಮೈತ್ರಿಕೂಟ ಅಧಿಕಾರಕ್ಕೆ ಬರಲಿದ್ದು, ಲಾಲೂಪ್ರಸಾದ್ ಯಾದವ್ ಪುತ್ರ ತೇಜಸ್ವಿ ಯಾದವ್ ಸಿಎಂ ಆಗಲಿದ್ದಾರೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿತ್ತು. ಅದರಲ್ಲೂ ಇಂಡಿಯಾ ಟುಡೇ-ಆಕ್ಸಿಸ್ ಸರ್ವೆ ಮತ್ತು ಟುಡೇಸ್ ಚಾಣಕ್ಯ ಸರ್ವೆ ಮಹಾಮೈತ್ರಿಕೂಟಕ್ಕೆ ಪ್ರಚಂಡ ಬಹುಮತವನ್ನು ಅಂದಾಜಿಸಿತ್ತು.

    ಆರಂಭದ ಮತ ಎಣಿಕೆಯಲ್ಲಿ ಮಹಾಮೈತ್ರಿ ಮುನ್ನಡೆಯಲ್ಲಿತ್ತು. ಆದರೆ ಬೆಳಗ್ಗೆ 10 ಗಂಟೆಯ ನಂತರ ಟ್ರೆಂಡ್‌ ಬದಲಾಗತೊಡಗಿತು.‌ 2015ರ ಚುನಾವಣೆಯಲ್ಲಿ ಆರ್‌ಜೆಡಿ 80, ಬಿಜೆಪಿ 53, ಜೆಡಿಯು 71, ಕಾಂಗ್ರೆಸ್ 27 ಎಲ್‍ಜೆಪಿ 2, ಇತರರು 10 ಸ್ಥಾನ ಗೆದ್ದಿದ್ದರು. ಒಟ್ಟು 243 ವಿಧಾನಸಭಾ ಕ್ಷೇತ್ರಗಳಿದ್ದು 123 ಮ್ಯಾಜಿಕ್ ಸಂಖ್ಯೆಯಾಗಿದೆ.